Tag: Ravindra Jadeja

  • ಕ್ರಿಕೆಟ್‍ನಲ್ಲಿ ಈ ರೀತಿ ಆಗಿದ್ದನ್ನು ನಾನು ನೋಡಿರಲಿಲ್ಲ: ವಿರಾಟ್ ಕೊಹ್ಲಿ

    ಕ್ರಿಕೆಟ್‍ನಲ್ಲಿ ಈ ರೀತಿ ಆಗಿದ್ದನ್ನು ನಾನು ನೋಡಿರಲಿಲ್ಲ: ವಿರಾಟ್ ಕೊಹ್ಲಿ

    ಚೆನ್ನೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಭಾನುವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅಂಪೈರ್ ಕೈಗೊಂಡ ತೀರ್ಮಾನದ ವಿರುದ್ಧ ಕಿಡಿಕಾರಿದ್ದಾರೆ. ಹಿಂದೆಂದೂ ಕ್ರಿಕೆಟ್‍ನಲ್ಲಿ ಈ ರೀತಿ ಆಗಿರುವುದನ್ನು ನಾನು ನೋಡಿಲ್ಲ ಎಂದು ಹೇಳಿದ್ದಾರೆ.

    ಪಂದ್ಯದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ಅವರಿಗೆ ರವೀಂದ್ರ ಜಡೇಜಾರ ರನೌಟ್ ಕುರಿತು ನಿರೂಪಕರು ಪ್ರಶ್ನೆ ಮಾಡಿದ್ದರು. ಈ ಪ್ರಶ್ನೆಗೆ ತಮ್ಮ ಬಳಿ ಯಾವುದೇ ಮಾತುಗಳಿಲ್ಲ ಎಂದು ಸನ್ನೆ ಮಾಡಿದ ಕೊಹ್ಲಿ, ಆನ್ ಫೀಲ್ಡ್ ಅಂಪೈರ್ ಶಾನ್ ಜಾರ್ಜ್ ನಡೆಯ ಕುರಿತು ಬೇಸರ ವ್ಯಕ್ತಪಡಿಸಿದರು.

    ಈ ಘಟನೆ ಬಹಳ ಸರಳವಾಗಿತ್ತು. ಫೀಲ್ಡರ್ ಔಟ್ ಎಂದು ಮನವಿ ಮಾಡಿದ ಸಮಯದಲ್ಲಿ ಅಂಪೈರ್ ನಾಟೌಟ್ ಎಂದು ಹೇಳಿದ್ದರು. ಅಲ್ಲಿಗೆ ಅದು ಅಂತ್ಯವಾಗಿತ್ತು. ಆದರೆ ಟಿವಿ ಎದುರು ಕುಳಿತ ವ್ಯಕ್ತಿಗಳು ಆಟಗಾರರಿಗೆ ಮತ್ತೆ ರಿವ್ಯೂ ಮಾಡುವಂತೆ ಅಂಪೈರ್ ಗೆ ಮನವಿ ಮಾಡಲು ಹೇಳುವಂತಿಲ್ಲ. ಈ ಹಿಂದೆ ಇಂತಹ ಘಟನೆಗಳು ನಡೆದಿರುವುದನ್ನು ನಾನು ಎಂದು ನೋಡಿಲ್ಲ.

    ಇಂತಹ ಸಂದರ್ಭದಲ್ಲಿ ಅಂಪೈರ್ ಹಾಗೂ ಪಂದ್ಯದ ರೆಫ್ರಿ ನಿರ್ಧಾರವನ್ನು ಮಾಡಬೇಕು. ಆದರೆ ಹೊರಗೆ ಕುಳಿತವರು ಫೀಲ್ಡ್ ನಲ್ಲಿ ಏನು ನಡೆಯುತ್ತಿದೆ ಎಂದು ನಿರ್ದೇಶನ ಮಾಡುವಂತಿಲ್ಲ. ಇಂತಹ ನಿಯಮಗಳು ಎಲ್ಲಿದೆ ಎಂಬುವುದು ನನಗೆ ತಿಳಿದಿಲ್ಲ ಎಂದು ಅಂಪೈರ್ ತೀರ್ಮಾನ ಕುರಿತು ಕೊಹ್ಲಿ ಪ್ರತಿಕ್ರಿಯೆ ನೀಡಿದರು.

    https://twitter.com/NaaginDance2/status/1206190475746533380

    ನಡೆದಿದ್ದೇನು?
    ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾ, ವಿಂಡೀಸ್ ಶಿಸ್ತು ಬದ್ಧ ಬೌಲಿಂಗ್ ದಾಳಿಗೆ ತಿಣುಕಾಡುತ್ತ ರನ್ ಗಳಿಸುತ್ತಿತ್ತು. ಪಂದ್ಯದ 48ನೇ ಓವರಿನಲ್ಲಿ ತಂಡದ ಆಲ್‍ರೌಂಡರ್ ರವೀಂದ್ರ ಜಡೇಜಾ ಒಂಟಿ ರನ್ ಕದಿಯುವ ಯತ್ನದಲ್ಲಿ ರನ್ ಔಟ್ ಆದ್ರು. ಆದರೆ ಮೊದಲು ವಿಂಡೀಸ್‍ನ ರಾಸ್ಟನ್ ಚೇಸ್‍ರ ಡೈರೆಕ್ಟ್ ಹಿಟ್ ಮನವಿಯನ್ನು ನಿರಾಕರಿಸಿದ್ದ ಅಂಪೈರ್ ನಾಟ್ ಔಟ್ ತೀರ್ಪು ನೀಡಿದ್ದರು.

    ಅಂಪೈರ್ ತೀರ್ಪನ್ನು ಮರು ಪರಿಶೀಲನೆ ನಡೆಸಲು ವಿಂಡೀಸ್ ನಾಯಕ ಕೂಡ ಮನವಿ ಸಲ್ಲಿಸಿಲ್ಲ. ಆದರೆ ನಿರ್ಧಾರ ಪ್ರಕಟವಾಗಿ ಚೆಂಡು ಡೆಡ್ ಆದ ಬಳಿಕ ರಿಪ್ಲೇ ಕಂಡ ಆಟಗಾರರು ಮತ್ತೆ ಅಂಪೈರ್ ಗೆ ಮನವಿ ಮಾಡಿದರು. ಈ ವೇಳೆ ಮತ್ತೆ ತಮ್ಮ ನಿರ್ಧಾರವನ್ನು ಬದಲಿಸಿಕೊಂಡ ಫೀಲ್ಡ್ ಅಂಪೈರ್ ಮೂರನೇ ಅಂಪೈರ್ ಮೊರೆ ಹೋದರು. ಆ ವೇಳೆ ಜಡೇಜಾ ಕ್ರಿಸ್‍ಗೆ ಬರುವ ಮುನ್ನವೇ ಚೆಂಡು ವಿಕೆಟ್‍ಗೆ ತಾಗಿರುವುದನ್ನು ಗಮನಿಸಿದ ಅಂಪೈರ್ ಔಟ್ ಎಂದು ತೀರ್ಪು ನೀಡಿದರು. ಇದರಿಂದ ಅಸಮಾಧಾನಗೊಂಡ ಕೊಹ್ಲಿ, ಪೆವಿಲಿಯನ್ ನಿಂದ ಫೀಲ್ಡ್ ಬೌಂಡರಿ ಗೆರೆ ಬಳಿ ಬಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಆದರೆ ಕೊಹ್ಲಿ ಫೀಲ್ಡ್ ಒಳಗೆ ಪ್ರವೇಶ ಮಾಡಲಿಲ್ಲ. ಪ್ರಮುಖ ಹಂತದಲ್ಲಿ ತಂಡಕ್ಕೆ ಆಸರೆಯಾಗಿದ್ದ ಜಡೇಜಾ 21 ರನ್ ಗಳಿಸಿ ಔಟಾಗಿದ್ದರು.

  • ಸಿಕ್ಸರ್ ಮೇಲೆ ಸಿಕ್ಸರ್ – ಸಚಿನ್ ದಾಖಲೆ ಸರಿಗಟ್ಟಿದ ಉಮೇಶ್ ಯಾದವ್

    ಸಿಕ್ಸರ್ ಮೇಲೆ ಸಿಕ್ಸರ್ – ಸಚಿನ್ ದಾಖಲೆ ಸರಿಗಟ್ಟಿದ ಉಮೇಶ್ ಯಾದವ್

    ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ, 3ನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅರ್ಧ ಶತಕ ಗಳಿಸಿದರು. 118 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ ಜಡೇಜಾ 51 ರನ್ ಗಳಿಸಿದರು. ಇತ್ತ ಅಂತಿಮ ಹಂತದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಉಮೇಶ್ ಯಾದವ್ 5 ಭರ್ಜರಿ ಸಿಕ್ಸರ್ ನೊಂದಿಗೆ 31 ರನ್ ಗಳಿಸಿ ಔಟಾದರು.

    ಟೀಂ ಇಂಡಿಯಾ ಪರ ರೋಹಿತ್ 212 ರನ್, ರಹಾನೆ 115 ರನ್ ಹಾಗೂ ಜಡೇಜಾರ ಅರ್ಧ ಶತಕ ನೆರವನಿಂದ ತಂಡ ಪಂದ್ಯದಲ್ಲಿ ಮೇಲುಗೈ ಸಾಧಿಸಿತ್ತು. ಜಡೇಜಾ ಔಟಾಗುತ್ತಿದಂತೆ ಆಗಮಿಸಿದ ಉಮೇಶ್ ಯಾದವ್ ಬಿರುಸಿನ ಭರ್ಜರಿ ಬ್ಯಾಟಿಂಗ್ ನಡೆಸಿದರು. 112 ಓವರಿನಲ್ಲಿ ತಾನು ಎದುರಿಸಿದ ಮೊದಲ ಎರಡು ಎಸೆತವನ್ನು ಸಿಕ್ಸರ್ ಗಟ್ಟಿದ ಯಾದವ್, ಆ ಬಳಿಕ 116ನೇ ಓವರಿನ 1, 3, 5ನೇ ಎಸೆತಗಳಲ್ಲಿ ಸಿಕ್ಸರ್ ಸಿಡಿಸಿದರು. ಇದೇ ಓವರಿನ 6ನೇ ಎಸೆತವನ್ನು ಸಿಕ್ಸರ್ ಗಟ್ಟುವ ಯತ್ನದಲ್ಲಿ ಕ್ಯಾಚ್ ನೀಡಿ ಔಟಾದರು.

    ಕೇವಲ 10 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿ 310 ಸ್ಟ್ರೈಕ್ ನೊಂದಿಗೆ 31 ರನ್ ಗಳಿಸಿ ಔಟಾದರು. ಅಲ್ಲದೇ ಟೆಸ್ಟ್ ಪಂದ್ಯವೊಂದರಲ್ಲಿ ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್ ಗಟ್ಟಿದ ಭಾರತದ 4ನೇ ಆಟಗಾರ ಎನಿಸಿಕೊಂಡರು. ಈ ಹಿಂದೆ ಸಚಿನ್, ಧೋನಿ, ಜಹೀರ್ ಖಾನ್ ಈ ಸಾಧನೆ ಮಾಡಿದ್ದರು. ವಿಶೇಷ ಎಂದರೆ ಉಮೇಶ್ ಮೊದಲ ಎಸೆತ ಮಾತ್ರವಲ್ಲದೇ 2ನೇ ಎಸೆತದಲ್ಲೂ ಸಿಕ್ಸರ್ ಸಿಡಿಸಿದ್ದು, ಟೆಸ್ಟ್ ಕ್ರಿಕೆಟ್‍ನಲ್ಲಿ ಈ ಸಾಧನೆ ಮಾಡಿದ 3ನೇ ಆಟಗಾರ ಎನಿಸಿಕೊಂಡರು. ಈ ಹಿಂದೆ 2013 ರಲ್ಲಿ ಸಚಿನ್ ಹಾಗೂ 1948 ರಲ್ಲಿ ಇಂಗ್ಲೆಂಡ್ ಆಟಗಾರ ಫೋಫಿ ವಿಲಿಯಮ್ಸ್ ಈ ಸಾಧನೆ ಮಾಡಿದ್ದರು.

    ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್ ನಷ್ಟಕ್ಕೆ 497 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿತು. ಆ ಬಳಿಕ ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ 9 ರನ್ ಗಳಿಗೆ ಆರಂಭಿಕ ಆಟಗಾರರಾದ ಡಿಕಾಕ್ ಹಾಗೂ ಎಲ್ಗರ್ ವಿಕೆಟ್ ಕಳೆದು ಸಂಕಷ್ಟಕ್ಕೆ ಸಿಲುಕಿದೆ. ಟೀಂ ಇಂಡಿಯಾ ಪರ ಉಮೇಶ್ ಯಾದವ್ ಮತ್ತು ಶಮಿ ತಲಾ 1 ವಿಕೆಟ್ ಪಡೆದರೆ, ದಕ್ಷಿಣ ಆಫ್ರಿಕಾ ಪರ ಡುಪ್ಲೆಸಿಸ್ 1 ರನ್, ಜುಬೇರ್ ಹಮ್ಜಾ ಶೂನ್ಯ ರನ್ ಗಳಿಸಿ 3ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

  • ಅಭಿಮಾನಿಯ ಟ್ವೀಟ್ ರಿಟ್ವೀಟ್ ಮಾಡಿ ಸೆಹ್ವಾಗ್ ಕಾಲೆಳೆದ ಜಡೇಜಾ

    ಅಭಿಮಾನಿಯ ಟ್ವೀಟ್ ರಿಟ್ವೀಟ್ ಮಾಡಿ ಸೆಹ್ವಾಗ್ ಕಾಲೆಳೆದ ಜಡೇಜಾ

    ಬೆಂಗಳೂರು: ಅಭಿಮಾನಿಯೊಬ್ಬರು ಟ್ವಿಟ್ಟರ್ ನಲ್ಲಿ ತನ್ನ ಬಗ್ಗೆ ವಿರೇಂದ್ರ ಸೆಹ್ವಾಗ್ ಬಳಿ ಕೇಳಿಕೊಂಡ ಪ್ರಶ್ನೆಯನ್ನು ಟೀಂ ಇಂಡಿಯಾದ ಆಲ್‍ರೌಂಡರ್ ರವೀಂದ್ರ ಜಡೇಜಾ ರಿಟ್ವೀಟ್ ಮಾಡಿದ್ದಾರೆ.

    ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 203 ರನ್ ಗಳಿಂದ ಪಂದ್ಯವನ್ನು ಗೆದ್ದ ಹಿನ್ನೆಲೆಯಲ್ಲಿ ಸೆಹ್ವಾಗ್ ಟೀಂ ಇಂಡಿಯಾವನ್ನು ಟ್ವಿಟ್ಟರ್ ನಲ್ಲಿ ಅಭಿನಂದಿಸಿದ್ದರು.

    ರೋಹಿತ್ ಶರ್ಮಾ ಉತ್ತಮವಾಗಿ ಆಡಿದ್ದೀರಿ. ಮಯಾಂಕ್, ಶಮಿ, ಅಶ್ವಿನ್, ಪುಜಾರಾ ಅವರ ಸಂಘಟಿತ ಆಟದಿಂದ ಭಾರತ ಜಯಗಳಿಸಿದೆ ಎಂದು ಬರೆದು ಟ್ವೀಟ್ ಮಾಡಿದ್ದರು.

    ಈ ಟ್ವೀಟ್ ಗಮನಿಸಿದ ಬಿನೀತ್ ಪಟೇಲ್ ಎಂಬವರು ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ನಲ್ಲಿ ಜಡೇಜಾ ಉತ್ತಮ ಪ್ರದರ್ಶನ ನೀಡಿದ್ದರೂ ಯಾಕೆ ಅವರ ಹೆಸರನ್ನು ಉಲ್ಲೇಖ ಮಾಡಿಲ್ಲ ಎಂದು ಪ್ರಶ್ನಿಸಿದ್ದರು.

    ಬಿನೀತ್ ಪಟೇಲ್ ಟ್ವೀಟ್ ನಲ್ಲಿ ಟ್ಯಾಗ್ ಆಗಿದ್ದ ಕಾರಣ ರವೀಂದ್ರ ಜಡೇಜಾ ಅವರು ಈ ಟ್ವೀಟ್ ರಿಟ್ವೀಟ್ ಮಾಡಿ ಸೆಹ್ವಾಗ್ ಕಾಲೆಳೆದಿದ್ದಾರೆ. ಈ ಟ್ವೀಟ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಔಟಾಗದೇ 30 ರನ್ (46 ಎಸೆತ, 1 ಸಿಕ್ಸರ್) ಹೊಡೆದಿದ್ದ ಜಡೇಜಾ ಎರಡನೇ ಇನ್ನಿಂಗ್ಸ್ ನಲ್ಲಿ 40 ರನ್(32 ಎಸೆತ, 3 ಸಿಕ್ಸರ್) ಹೊಡೆದಿದ್ದರು.

    ಮೊದಲ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ಕಿತ್ತಿದ್ದ ಜಡೇಜಾ ಎರಡನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆದಿದ್ದರು.

  • ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಆಫ್ರಿಕಾ – ತವರಿನಲ್ಲಿ ಸತತ 10ನೇ ಟೆಸ್ಟ್ ಗೆಲುವು

    ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಆಫ್ರಿಕಾ – ತವರಿನಲ್ಲಿ ಸತತ 10ನೇ ಟೆಸ್ಟ್ ಗೆಲುವು

    ವಿಶಾಖಪಟ್ಟಣಂ: ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್ ಗಳು ತತ್ತರಿಸಿದ್ದು, ಟೀ ಇಂಡಿಯಾ 203 ರನ್ ಅಂತರದ ಗೆಲುವು ಪಡೆದುಕೊಂಡಿದೆ. ಆ ಮೂಲಕ ತವರಿನಲ್ಲಿ ಸತತ 10ನೇ ಟೆಸ್ಟ್ ಪಂದ್ಯ ಗೆದ್ದ ಸಾಧನೆ ಮಾಡಿದೆ.

    395 ರನ್ ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಪಡೆಯನ್ನು ಟೀಂ ಇಂಡಿಯಾ ಬೌಲರ್ ಗಳು 191 ರನ್ ಗಳಿಗೆ ಅಲೌಟ್ ಮಾಡಿದರು. ಭಾನುವಾರ ಅಂತಿಮ ದಿನದ ಆಟದಲ್ಲಿ ಬೌಲರ್ ಗಳ ಒಗ್ಗಟ್ಟಿನ ಪ್ರದರ್ಶನದಿಂದ ಟೀಂ ಇಂಡಿಯಾ ಗೆಲುವು ಪಡೆಯಿತು. 2017ರ ಬಳಿಕ ತವರಿನಲ್ಲಿ ಟೀಂ ಇಂಡಿಯಾ ಪಡೆದ 10ನೇ ಗೆಲುವು ಇದಾಗಿದೆ. ಅಲ್ಲದೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‍ನಲ್ಲಿ ಟೀಂ ಇಂಡಿಯಾ 160 ಅಂಕಗಳೊಂದಿಗೆ ನಂ.1 ಸ್ಥಾನದಲ್ಲಿದೆ.

    ಪಂದ್ಯದಲ್ಲಿ ವೇಗಿ ಮೊಹಮ್ಮದ್ ಶಮಿ, ಸ್ಪಿನ್ನರ್ ರವೀಂದ್ರ ಜಡೇಜಾ ನಡೆಸಿದ ಮ್ಯಾಜಿಕಲ್ ಬೌಲಿಂಗ್ ದಾಳಿಯನ್ನು ಎದುರಿಸಲು ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್‍ಗಳು ವಿಫಲರಾದರು. ಅಂತಿಮ ದಿನದಾಟವನ್ನು 1 ವಿಕೆಟ್ ಕಳೆದುಕೊಂಡು 11 ರನ್ ಗಳಿಂದ ಆರಂಭಿಸಿದ ದಕ್ಷಿಣ ಅಫ್ರಿಕಾ ತಂಡ ಟೀಂ ಇಂಡಿಯಾ ಬೌಲರ್ ಜಡೇಜಾರ ದಾಳಿಗೆ ಸಿಲುಕಿ ತತ್ತರಿಸಿತು. ಆದರೆ ಮಧ್ಯಾಹ್ನದ ಭೋಜನ ವಿರಾಮ ವೇಳೆಗೆ ಟೀಂ ಇಂಡಿಯಾ ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದರು. ಆದರೆ ದಕ್ಷಿಣ ಆಫ್ರಿಕಾ ಪರ ಪೈಡಿಟ್- ಮುತ್ತುಸಾಮಿ ಅಂತಿಮ ಹಂತದಲ್ಲಿ ನಡೆಸಿದ ಹೋರಾಟ ವಿಫಲವಾಯಿತು. ಪೈಡಿಟ್ 56 ರನ್ ಗಳಿಸಿ ಔಟಾದರೆ, ಮುತ್ತುಸಾಮಿ 49 ರನ್ ಗಳಿಸಿ ಅಜೇಯರಾಗಿ ಉಳಿದರು. ಇಬ್ಬರು 9ನೇ ವಿಕೆಟ್‍ಗೆ 91 ರನ್ ಜೊತೆಯಾಟ ನೀಡಿದರು. ಅಂತಿಮವಾಗಿ ರಬಡಾ (18 ರನ್) ವಿಕೆಟ್ ಕಬಳಿಸಿದ ಶಮಿ ತಂಡಕ್ಕೆ ಗೆಲುವಿನ ಸಿಹಿ ನೀಡಿದರು. ಟೀಂ ಇಂಡಿಯಾ ಪರ ಜಡೇಜಾ 2ನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆದರೆ ಶಮಿ 5 ವಿಕೆಟ್ ಪಡೆದು ಮಿಂಚಿದರು.

    ಸಂಕ್ಷಿಪ್ತ ಸ್ಕೋರ್:
    ಟೀಂ ಇಂಡಿಯಾ: ಮೊದಲ ಇನ್ನಿಂಗ್ಸ್ – 502/7 ಡಿಕ್ಲೇರ್
    2ನೇ ಇನ್ನಿಂಗ್ಸ್ – 323/4 ಡಿಕ್ಲೇರ್

    ದಕ್ಷಿಣ ಆಫ್ರಿಕಾ: ಮೊದಲ ಇನ್ನಿಂಗ್ಸ್ – 431 ಅಲೌಟ್
    2ನೇ ಇನ್ನಿಂಗ್ಸ್ – 191 ಅಲೌಟ್

  • ದಿಗ್ಗಜ ಆಟಗಾರರ ದಾಖಲೆ ಬ್ರೇಕ್ ಮಾಡಿದ ಜಡೇಜಾ

    ದಿಗ್ಗಜ ಆಟಗಾರರ ದಾಖಲೆ ಬ್ರೇಕ್ ಮಾಡಿದ ಜಡೇಜಾ

    ವಿಶಾಖಪಟ್ಟಣಂ: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಅನುಭವಿ ಸ್ಪಿನ್ ಬೌಲರ್ ರವೀಂದ್ರ ಜಡೇಜಾ 200ನೇ ವಿಕೆಟ್ ಪಡೆದಿದ್ದು, ಆ ಮೂಲಕ ವೇಗವಾಗಿ ಈ ಸಾಧನೆ ಮಾಡಿದ ಎಡಗೈ ಬೌಲರ್ ಎಂಬ ದಾಖಲೆಯನ್ನು ಬರೆದರು.

    ರವೀಂದ್ರ ಜಡೇಜಾ 44ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದು, ಈ ಮುನ್ನ ಶ್ರೀಲಂಕಾ ಆಟಗಾರ ರಂಗನಾ ಹೆರಾತ್ 47 ಪಂದ್ಯಗಳಿಂದ 200 ವಿಕೆಟ್ ಪಡೆದಿದ್ದರು. ಈ ಪಟ್ಟಿಯಲ್ಲಿ ನಂತರದ ಸ್ಥಾನವನ್ನು ಆಸೀಸ್‍ನ ಮಿಚೇಲ್ ಜಾನ್ಸನ್ ಪಡೆದಿದ್ದು, 49 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಆ ಬಳಿಕ 49 ಪಂದ್ಯಗಳಲ್ಲಿ ಮಿಚೇಲ್ ಸ್ಟಾರ್ಕ್, 51 ಪಂದ್ಯಗಳಿಂದ ಭಾರತ ಬಿಷನ್ ಬೇಡಿ ಹಾಗೂ ಪಾಕ್‍ನ ವಾಸೀಂ ಅಕ್ರಂ 200 ವಿಕೆಟ್ ಪಡೆದ ಸಾಧನೆ ಮಾಡಿದ್ದರು.

    ಪಂದ್ಯದ ಮೂರನೇ ದಿನದಾಟದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾ ತಂಡ 8 ವಿಕೆಟ್ ಕಳೆದುಕೊಂಡು 385 ರನ್ ಗಳಿಸಿದ್ದು, ಭಾರತ ಪರ ಆರ್.ಅಶ್ವಿನ್ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಉಳಿದಂತೆ ರವೀಂದ್ರ ಜಡೇಜಾ 2 ವಿಕೆಟ್ ಹಾಗೂ ಇಶಾಂತ್ ಶರ್ಮಾ 1 ವಿಕೆಟ್ ಕಬಳಿಸಿದ್ದಾರೆ.

    ರೋಹಿತ್ ಬೌಲಿಂಗ್: ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕೆ ಇಳಿದು ಶತಕ ಸಿಡಿಸಿದ್ದ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ತಂಡದ ಬ್ಯಾಟಿಂಗ್ ವೇಳೆ ಬೌಲಿಂಗ್ ಮಾಡುವ ಅವಕಾಶವನ್ನು ಪಡೆದರು. 2 ಓವರ್ ಬೌಲಿಂಗ್ ಮಾಡಿದ ರೋಹಿತ್, 1 ಓವರ್ ಮೇಡನ್ ಮಾಡಿ 3.50 ಎಕಾನಮಿಯಲ್ಲಿ 7 ರನ್ ಬಿಟ್ಟುಕೊಟ್ಟರು. 12 ವರ್ಷಗಳ ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕೆ ಇಳಿದಿದ್ದು ವಿಶೇಷವಾಗಿತ್ತು.

    https://twitter.com/InswingingY/status/1180081028825616385

    ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಟೂರ್ನಿಗೆ ರೋಹಿತ್ ಆಯ್ಕೆಯಾಗಿದ್ದರೂ ಕೂಡ ಆಡುವ ಅವಕಾಶ ಪಡೆದಿರಲಿಲ್ಲ. ಈ ವೇಳೆ ಬೌಲಿಂಗ್ ಹಾಗೂ ಬ್ಯಾಟಿಂಗ್ ಮಾಡುವ ಆಟಗಾರ ಹನುಮ ವಿಹಾರಿಗೆ ಅವಕಾಶ ನೀಡಿದ್ದ ಕೊಹ್ಲಿ, ರೋಹಿತ್‍ರನ್ನು ಆಡುವ 11ರ ಬಳಗದಿಂದ ದೂರವಿಟ್ಟಿದ್ದರು. ಸದ್ಯ ರೋಹಿತ್ ಶರ್ಮಾಗೂ ಬೌಲ್ ಮಾಡುವ ಅವಕಾಶ ನೀಡುವ ಮೂಲಕ ಕೊಹ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

  • ಜಡೇಜಾಗೆ ಸಾಂತ್ವನ ಹೇಳಲು ನಮ್ಮಿಂದಾಗುತ್ತಿಲ್ಲ: ರಿವಾಬಾ ಜಡೇಜಾ

    ಜಡೇಜಾಗೆ ಸಾಂತ್ವನ ಹೇಳಲು ನಮ್ಮಿಂದಾಗುತ್ತಿಲ್ಲ: ರಿವಾಬಾ ಜಡೇಜಾ

    ನವದೆಹಲಿ: ವಿಶ್ವಕಪ್ ಟೂರ್ನಿಯಲ್ಲಿ ಸೆಮಿಪೈನಲ್‍ನಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ವಿರೋಚಿತ ಹೋರಾಟದ ಹೊರತಾಗಿಯೂ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲನುಭವಿಸಿತು. ಈ ಸೋಲಿನ ಆಘಾತದಿಂದ ಪತಿ ಹೊರ ಬಂದಿಲ್ಲ ಎಂದು ಜಡೇಜಾ ಪತ್ನಿ ರಿವಾಬಾ ಹೇಳಿದ್ದಾರೆ.

    ಸೋಲಿನ ವಿಚಾರವಾಗಿ ಮಾತನಾಡಿದ ರವೀಂದ್ರ ಜಡೇಜಾ, ನಾನು ವಿಕೆಟ್ ಒಪ್ಪಿಸಿ ಮೈದಾನದಿಂದ ಹೊರಬರದಿದ್ದರೆ ಗೆಲುವು ಸಾಧಿಸುತ್ತಿದ್ದೇವು. ಇನ್ನೇನು ಗೆಲುವು ಸಾಧಿಸುತ್ತೇವೆ ಎನ್ನುವ ಹಂತದಲ್ಲಿಯೇ ಸೋಲನುಭವಿಸಿದೇವು ಎಂದು ಹೇಳುತ್ತಲೇ ಇದ್ದರು. ಈ ಆಘಾತದಿಂದ ಅವರು ಇನ್ನೂ ಹೊರ ಬಂದಿಲ್ಲ. ಹೀಗಾಗಿ ಅವರಿಗೆ ಸಾಂತ್ವನ ಹೇಳಲು ನಮ್ಮಿಂದಾಗುತ್ತಿಲ್ಲ ಎಂದು ರಿವಾಬಾ ಜಡೇಜಾ ತಿಳಿಸಿದ್ದಾರೆ.

    ಪತಿ ಯಾವಾಗಲೂ ಸ್ಫೂರ್ತಿಯಿಂದ ಆಟವಾಗುತ್ತಾರೆ. ನೀವು ಅದನ್ನು ನೋಡಿರಬಹುದು. ಪಂದ್ಯಗಳಲ್ಲಿ ಆಲ್ ರೌಂಡರ್ ಆಗಿ ಮಿಂಚುತ್ತಾರೆ. 2013ರಲ್ಲಿ ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆಲುವು ಸಾಧಿಸಿದಾಗ ಫೈನಲ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು ಎಂದು ರಿಬಾವಾ ಜಡೇಜಾ ನೆನೆದರು.

    ಈ ಹಿಂದೆ ಭಾವನತ್ಮಾಕವಾಗಿ ಟ್ವೀಟ್ ಮಾಡಿದ್ದ ರವೀಂದ್ರ ಜಡೇಜಾ, “ಪ್ರತಿ ಸೋಲಿನ ನಂತರ ಗೆಲ್ಲುವುದನ್ನು ನನಗೆ ಕ್ರಿಕೆಟ್ ಕಲಿಸಿಕೊಟ್ಟಿದೆ. ಅದನ್ನು ನಾನು ಎಂದಿಗೂ ಬಿಡುವುದಿಲ್ಲ. ನನ್ನ ಪ್ರೀತಿಯ ಮೂಲವಾದ ನನ್ನ ಅಭಿಮಾನಿಗಳಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ನನಗೆ ಸದಾ ಸ್ಫೂರ್ತಿದಾಯಕವಾಗಿರಿ ಮತ್ತು ನನ್ನ ಕೊನೆಯ ಉಸಿರಿರುವವರೆಗೂ ನನ್ನ ಕೈಯಲ್ಲಿ ಅದಷ್ಟೂ ಅತ್ಯುತ್ತಮ ಆಟ ಆಡುತ್ತೇನೆ” ಎಂದು ಬರೆದುಕೊಂಡಿದ್ದರೆ.

    ಸೆಮಿಫೈನಲ್ ಪಂದ್ಯದಲ್ಲಿ ಉತ್ತಮವಾಗಿ ಆಟವಾಡಿ ರವೀಂದ್ರ ಜಡೇಜಾ ತಂಡವನ್ನು ಗೆಲುವಿನ ದಡದತ್ತ ತಂದಿದ್ದರು. ಆರಂಭದಲ್ಲಿ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು 92 ರನ್‍ಗಳಿಗೆ 6 ವಿಕೆಟ್ ಉರುಳಿದಾಗ ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುವ ಸಾಧ್ಯತೆ ಇತ್ತು. ಈ ಸಂದರ್ಭದಲ್ಲಿ ಭಾರತಕ್ಕೆ 117 ಎಸೆತಗಳಲ್ಲಿ 148 ರನ್ ಗಳಿಸುವ ಅಗತ್ಯವಿತ್ತು. ಆದರೆ ಜಡೇಜಾ ಮತ್ತು ಧೋನಿ 7ನೇ ವಿಕೆಟಿಗೆ 116 ರನ್ ಜೊತೆಯಾಟವಾಡಿ ಭಾರತವನ್ನು ಗೆಲುವಿನ ಹತ್ತಿರ ತಂದಿಟ್ಟಿದ್ದರು. ಜಡೇಜಾ 39 ಎಸೆತಗಳಲ್ಲಿ 3 ಬೌಂಡರಿ, 3 ಸಿಕ್ಸರ್ ಗಳಿಂದ ಅರ್ಧ ಶತಕ ಪೂರ್ಣಗೊಳಿಸಿದರು. ಈ ಮೂಲಕ ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ ನಲ್ಲಿ ನಂ.8ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದು ಅರ್ಧ ಶತಕ ಬ್ಯಾಟ್ಸ್ ಮನ್ ಸಿಡಿಸಿದ ಸಾಧನೆ ಮಾಡಿದರು. 5 ವರ್ಷಗಳ ಬಳಿಕ ಜಡೇಜಾ ಗಳಿಸಿದ ಏಕದಿನ ಅರ್ಧ ಶತಕ ಇದಾಗಿತ್ತು. ಅಂತಿಮ ಹಂತದಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ ಜಡೇಜಾ 59 ಎಸೆತಗಳಲ್ಲಿ 77 ರನ್(4 ಬೌಂಡರಿ, 4 ಸಿಕ್ಸರ್) ಗಳಿಸಿ ಬೋಲ್ಟ್‍ಗೆ ವಿಕೆಟ್ ಒಪ್ಪಿಸಿದ್ದರು.

  • ಜಡೇಜಾ ಬಳಿ ಕ್ಷಮೆ ಕೋರಿದ ಸಂಜಯ್ ಮಂಜ್ರೇಕರ್

    ಜಡೇಜಾ ಬಳಿ ಕ್ಷಮೆ ಕೋರಿದ ಸಂಜಯ್ ಮಂಜ್ರೇಕರ್

    ಲಂಡನ್: ಟೀಂ ಇಂಡಿಯಾ ಆಲ್‍ರೌಂಡರ್ ರವೀಂದ್ರ ಜಡೇಜಾ ಪರಿಪೂರ್ಣ ಆಟಗಾರನಲ್ಲ ಎಂದು ಟೀಕೆ ಮಾಡಿದ್ದ ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಕರ್ ಅವರು ವಿಶ್ವಕಪ್ ಸೆಮಿಫೈನಲ್ ಬಳಿಕ ಕ್ಷಮೆ ಕೋರಿದ್ದಾರೆ.

    ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯದ ಬಳಿಕ ಐಸಿಸಿ ಸಂದರ್ಶನದಲ್ಲಿ ಮಾತನಾಡಿದ ಸಂಜಯ್ ಮಂಜ್ರೇಕರ್, ನನ್ನ ಎಲ್ಲಾ ದೃಷ್ಟಿಕೋನಗಳನ್ನು ಜಡೇಜಾ ಇಂದಿನ ಪಂದ್ಯದಲ್ಲಿ ಚೂರು ಚೂರು ಮಾಡಿದ್ದು, ನನ್ನ ಅಭಿಪ್ರಾಯ ತಪ್ಪು ಎಂದು ಸಾಬೀತು ಪಡಿಸಿದ್ದಾರೆ. ಪಂದ್ಯದಲ್ಲಿ ಅವರ ಬೌಲಿಂಗ್ ಎಕಾನಮಿ, ಬ್ಯಾಟಿಂಗ್ ನಲ್ಲಿ ಅವರ ಪ್ರದರ್ಶನ ಅತ್ಯುತ್ತಮವಾಗಿತ್ತು. ಅವರು ಪಂದ್ಯದಲ್ಲಿ ಸಂಭ್ರಮಿಸಿದ ವೇಳೆ ನನಗಾಗಿ ಹುಡುಕಾಟ ನಡೆಸಿದ್ದರು ಎನಿಸುತ್ತದೆ. ಆದರೆ ನಾನು ಅವರ ಬಳಿ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.

    ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಪಂದ್ಯದ ವೇಳೆ ವೀಕ್ಷಕ ವಿವರಣೆ ನೀಡಿದ್ದ ಮಂಜ್ರೇಕರ್ ಅವರು, ನಾನು ಸಣ್ಣಪುಟ್ಟ ಆಟಗಾರರ ಅಭಿಮಾನಿಯಲ್ಲ. ಟೆಸ್ಟ್ ಪಂದ್ಯದಲ್ಲಿ ಜಡೇಜಾ ನಿಜವಾಗಿಯೂ ಬೌಲರ್. ಆದರೆ 50 ಓವರ್‍ಗಳ ಪಂದ್ಯದಲ್ಲಿ ಆ ಕಡೆ ಬ್ಯಾಟ್ಸ್ ಮನ್ ಅಲ್ಲ, ಈ ಕಡೆ ಸ್ಪಿನ್ ಬೌಲರ್ ಅಲ್ಲ ಹೇಳಿ ಮೂದಲಿಸಿದ್ದರು.

    ಚರ್ಚೆ ಜೋರು ಆಗುತ್ತಿದ್ದಂತೆ ಜಡೇಜಾ, ನೀವು ಆಡಿರುವ ಪಂದ್ಯಗಳಿಗಿಂತ ಎರಡು ಪಟ್ಟು ಪಂದ್ಯವಾಡಿದ್ದೇನೆ. ಈಗಲೂ ಆಡುತ್ತಿದ್ದೇನೆ. ಸಾಧನೆ ಮಾಡಿದವರನ್ನು ಗೌರವಿಸಲು ಕಲಿತುಕೊಳ್ಳಿ. ನಿಮ್ಮ ಬೇಧಿ ಮಾತುಗಳನ್ನು ಸಾಕಷ್ಟು ಕೇಳಿದ್ದೇನೆ ಎಂದು ಖಾರವಾಗಿ ಬರೆದು ಮಂಜ್ರೇಕರ್ ಅವರಿಗೆ ಟ್ಯಾಗ್ ಮಾಡಿ ತಿರುಗೇಟು ನೀಡಿದ್ದರು. ಸಾಮಾಜಿಕ ಜಾಲತಾಣದಲ್ಲೂ ಮಂಜ್ರೇಕರ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

    ಸೆಮಿ ಫೈನಲ್ ಪಂದ್ಯದಲ್ಲಿ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್‍ನಲ್ಲಿ ಜಡೇಜಾ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಪಂದ್ಯದಲ್ಲಿ 10 ಓವರ್ ಎಸೆದು 3.40 ಎಕಾನಮಿಯಲ್ಲಿ 34 ರನ್ ನೀಡಿ 1 ವಿಕೆಟ್ ಪಡೆದಿದ್ದು ಮಾತ್ರ ಅಲ್ಲದೇ ರೋಸ್ ಟೈಲರ್ ಅವರನ್ನು ರನೌಟ್ ಮಾಡಿದ್ದರು. ಬ್ಯಾಟಿಂಗ್‍ನಲ್ಲಿ ಸೋಲಿನತ್ತ ಮುಖಮಾಡಿದ್ದ ಭಾರತವನ್ನು ಗೆಲುವಿನತ್ತ ತಂದಿದ್ದೆ ಜಡೇಜಾ. 30.3 ಓವರ್ ಗಳಲ್ಲಿ 92 ರನ್ ಗಳಿಗೆ 6 ವಿಕೆಟ್ ಕಳೆದು ಸಂಕಷ್ಟದಲ್ಲಿದ್ದಾಗ ಕ್ರೀಸ್ ಬಂದ ಜಡೇಜಾ 59 ಎಸೆತಗಳಲ್ಲಿ 4 ಬೌಂಡರಿ, 4 ಸಿಕ್ಸರ್ ಸಿಡಿಸಿ 77 ರನ್ ಗಳಿಸಿದ್ದರು. ಅಲ್ಲದೇ ಧೋನಿ ಅವರೊಂದಿಗೆ 7ನೇ ವಿಕೆಟ್‍ಗೆ 116 ರನ್ ಜೊತೆಯಾಟ ನೀಡಿದ್ದರು. ಆದರೆ ಅಂತಿಮ ಹಂತದಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ ಜಡೇಜಾ 59 ಎಸೆತಗಳಲ್ಲಿ 77 ರನ್(4 ಬೌಂಡರಿ, 4 ಸಿಕ್ಸರ್) ಗಳಿಸಿ ಬೋಲ್ಟ್‍ಗೆ ವಿಕೆಟ್ ಒಪ್ಪಿಸಿದ್ದರು.

  • ಪ್ರತಿ ಸೋಲಿನ ನಂತರ ಗೆಲ್ಲುವುದನ್ನು ನನಗೆ ಕ್ರಿಕೆಟ್ ಕಲಿಸಿಕೊಟ್ಟಿದೆ – ರವೀಂದ್ರ ಜಡೇಜಾ

    ಪ್ರತಿ ಸೋಲಿನ ನಂತರ ಗೆಲ್ಲುವುದನ್ನು ನನಗೆ ಕ್ರಿಕೆಟ್ ಕಲಿಸಿಕೊಟ್ಟಿದೆ – ರವೀಂದ್ರ ಜಡೇಜಾ

    ಲಂಡನ್: ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್‍ನಲ್ಲಿ ಸೋತ ಭಾರತ ವಿಶ್ವಕಪ್‍ನಿಂದ ಹೊರಬಿದ್ದಿದೆ. ಸೆಮಿಫೈನಲ್‍ನಲ್ಲಿ ಭಾರತದ ಪರ ಉತ್ತಮ ಬ್ಯಾಟಿಂಗ್ ಮಾಡಿದ ಆಲ್‍ರೌಂಡರ್ ರವೀಂದ್ರ ಜಡೇಜಾ ಪ್ರತಿ ಸೋಲಿನ ನಂತರ ಗೆಲ್ಲುವುದನ್ನು ನನಗೆ ಕ್ರಿಕೆಟ್ ಕಲಿಸಿಕೊಟ್ಟಿದೆ ಎಂದು ಹೇಳಿದ್ದಾರೆ.

    ಮಂಗಳವಾರ ಮಳೆ ಬಂದ ಕಾರಣ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯವನ್ನು ಬುಧವಾರಕ್ಕೆ ಮುಂದೂಡಲಾಗಿತ್ತು. ಅದರಂತೆ ಬುಧವಾರ ನಡೆದ ಪಂದ್ಯದಲ್ಲಿ ಭಾರತ 18 ರನ್ ಅಂತರದಲ್ಲಿ ಸೋತು ವಿಶ್ವಕಪ್‍ನಿಂದ ಹೊರ ಬಿತ್ತು. ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ಈ ಪಂದ್ಯದ ಕುರಿತು ಟ್ವೀಟ್ ಮಾಡಿದ್ದು, ನನ್ನ ಕೊನೆಯ ಉಸಿರಿರುವವರೆಗೂ ನನ್ನ ಕೈಯಲ್ಲಿ ಅದಷ್ಟೂ ಅತ್ಯುತ್ತಮ ಆಟ ಆಡುತ್ತೇನೆ ಎಂದಿದ್ದಾರೆ.

    ಭಾವನತ್ಮಾಕವಾಗಿ ಟ್ವೀಟ್ ಮಾಡಿರುವ ಜಡೇಜಾ, “ಪ್ರತಿ ಸೋಲಿನ ನಂತರ ಗೆಲ್ಲುವುದನ್ನು ನನಗೆ ಕ್ರಿಕೆಟ್ ಕಲಿಸಿಕೊಟ್ಟಿದೆ. ಅದನ್ನು ನಾನು ಎಂದಿಗೂ ಬಿಡುವುದಿಲ್ಲ. ನನ್ನ ಪ್ರೀತಿಯ ಮೂಲವಾದ ನನ್ನ ಅಭಿಮಾನಿಗಳಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ನನಗೆ ಸದಾ ಸ್ಫೂರ್ತಿದಾಯಕವಾಗಿರಿ ಮತ್ತು ನನ್ನ ಕೊನೆಯ ಉಸಿರಿರುವವರೆಗೂ ನನ್ನ ಕೈಯಲ್ಲಿ ಅದಷ್ಟೂ ಅತ್ಯುತ್ತಮ ಆಟ ಆಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

    ಸೆಮಿಫೈನಲ್ ಪಂದ್ಯದಲ್ಲಿ ಉತ್ತಮವಾಗಿ ಆಟವಾಡಿ ರವೀಂದ್ರ ಜಡೇಜಾ ತಂಡವನ್ನು ಗೆಲುವಿನ ದಡದತ್ತ ತಂದಿದ್ದರು. ಆರಂಭದಲ್ಲಿ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು 92 ರನ್‍ಗಳಿಗೆ 6 ವಿಕೆಟ್ ಉರುಳಿದಾಗ ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುವ ಸಾಧ್ಯತೆ ಇತ್ತು. ಈ ಸಂದರ್ಭದಲ್ಲಿ ಭಾರತಕ್ಕೆ 117 ಎಸೆತಗಳಲ್ಲಿ 148 ರನ್ ಗಳಿಸುವ ಅಗತ್ಯವಿತ್ತು. ಆದರೆ ಜಡೇಜಾ ಮತ್ತು ಧೋನಿ 7ನೇ ವಿಕೆಟಿಗೆ 116 ರನ್ ಜೊತೆಯಾಟವಾಡಿ ಭಾರತವನ್ನು ಗೆಲುವಿನ ಹತ್ತಿರ ತಂದಿಟ್ಟಿದ್ದರು. ಜಡೇಜಾ 39 ಎಸೆತಗಳಲ್ಲಿ 3 ಬೌಂಡರಿ, 3 ಸಿಕ್ಸರ್ ಗಳಿಂದ ಅರ್ಧ ಶತಕ ಪೂರ್ಣಗೊಳಿಸಿದರು. ಈ ಮೂಲಕ ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ ನಲ್ಲಿ ನಂ.8ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದು ಅರ್ಧ ಶತಕ ಬ್ಯಾಟ್ಸ್ ಮನ್ ಸಿಡಿಸಿದ ಸಾಧನೆ ಮಾಡಿದರು. 5 ವರ್ಷಗಳ ಬಳಿಕ ಜಡೇಜಾ ಗಳಿಸಿದ ಏಕದಿನ ಅರ್ಧ ಶತಕ ಇದಾಗಿತ್ತು.

    5 ಓವರ್ ಗಳಲ್ಲಿ 52 ರನ್ ಗಳಿಸುವ ಒತ್ತಡದಲ್ಲಿ ಸಿಲುಕಿದ್ದಾಗ ಜಡೇಜಾ ತಂಡವನ್ನು ಗೆಲುವಿನ ಸನಿಹ ಕೊಂಡ್ಯೊಯುವ ಪ್ರಯತ್ನ ನಡೆಸಿದರು. 46ನೇ ಓವರಿನಲ್ಲಿ ಬೌಂಡರಿ ಸಮೇತ 10 ರನ್ ಗಳಿಸಿದ ಈ ಜೋಡಿ 7ನೇ ವಿಕೆಟ್‍ಗೆ ಶತಕದ ಜೊತೆಯಾಟ ನೀಡಿತ್ತು. 122 ಎಸೆತಗಳಲ್ಲಿ ಈ ಜೋಡಿ 116 ಗಳಿಸಿತು. ಆದರೆ ಅಂತಿಮ ಹಂತದಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ ಜಡೇಜಾ 59 ಎಸೆತಗಳಲ್ಲಿ 77 ರನ್(4 ಬೌಂಡರಿ, 4 ಸಿಕ್ಸರ್) ಗಳಿಸಿ ಬೋಲ್ಟ್‍ಗೆ ವಿಕೆಟ್ ಒಪ್ಪಿಸಿದರು. ಇತ್ತ ಜಡೇಜಾ ನಿರ್ಗಮನದೊಂದಿಗೆ ತಂಡದ ಗೆಲುವಿನ ಆಸೆಯಾಗಿದ್ದ ಧೋನಿ 50 ರನ್(72 ಎಸೆತ, 1 ಬೌಂಡರಿ, 1ಸಿಕ್ಸರ್) ಸಿಡಿಸಿ ರನೌಟ್ ಆದರು.

    ರವೀಂದ್ರ ಜಡೇಜಾ ಅವರ ಈ ಪ್ರದರ್ಶನಕ್ಕೆ ಮಾಜಿ ಆಟಗಾರರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಲಿಟಲ್ ಮಾಸ್ಟರ್ ಸಚಿನ್ ಅವರು ಜಡೇಜಾ ಅವರ ವಿಶೇಷ ಆಟವನ್ನು ಶ್ಲಾಘಿಸಿದ್ದಾರೆ. ಈ ಉತ್ತಮ ಜೊತೆಯಾಟದ ಹಿಂದೆ ಧೋನಿ ಅವರ ಮಾರ್ಗದರ್ಶನವಿದೆ ಎಂದು ಹೇಳಿದ್ದಾರೆ.

  • ಜಡೇಜಾ ಭರ್ಜರಿ ಬ್ಯಾಟಿಂಗ್ – ಭಾರತದ ವಿಶ್ವಕಪ್ ಕನಸು ಭಗ್ನ

    ಜಡೇಜಾ ಭರ್ಜರಿ ಬ್ಯಾಟಿಂಗ್ – ಭಾರತದ ವಿಶ್ವಕಪ್ ಕನಸು ಭಗ್ನ

    ಮ್ಯಾಂಚೆಸ್ಟರ್: ಮಳೆಯಿದ್ದ ಸ್ಥಗಿತಗೊಂಡಿದ್ದ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತವನ್ನು 18 ರನ್‍ಗಳಿಂದ ಸೋಲಿಸಿ  ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ.

    ಗೆಲ್ಲಲು 240 ರನ್ ಗಳ ಗುರಿಯನ್ನು ಪಡೆದ ಭಾರತ 49.3 ಓವರ್ ಗಳಲ್ಲಿ 221 ರನ್ ಗಳಿಗೆ ಆಲೌಟ್ ಆಗಿ ಸೋಲನ್ನು ಒಪ್ಪಿಕೊಂಡಿತು. ಆರಂಭದಲ್ಲಿ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು 92 ರನ್‍ಗಳಿಗೆ 6 ವಿಕೆಟ್ ಉರುಳಿದಾಗ ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುವ ಸಾಧ್ಯತೆ ಇತ್ತು. ಆದರೆ ಜಡೇಜಾ ಮತ್ತು ಧೋನಿ 7ನೇ ವಿಕೆಟಿಗೆ 116 ರನ್ ಜೊತೆಯಾಟವಾಡಿ ಭಾರತವನ್ನು ಗೆಲುವಿನ ಹತ್ತಿರ ತಂದಿಟ್ಟಿದ್ದರು.

    ಕಿವೀಸ್ ಇನ್ನಿಂಗ್ಸ್ ಬಳಿಕ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ತಂಡದ ಪರ ಆರಂಭಿಕರಾದ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗೂ ನಾಯಕ ವಿರಾಟ್ ಕೊಹ್ಲಿ ತಲಾ 1 ರನ್ ಗಳಿಸಿ ನಿರ್ಗಮಿಸಿದ್ದರು. ಇದರ ಬೆನ್ನಲ್ಲೇ ರಕ್ಷಣಾತ್ಮಕ ಆಟಕ್ಕೆ ಮುಂದಾದ ದಿನೇಶ್ ಕಾರ್ತಿಕ್ 25 ಎಸೆತಗಳಲ್ಲಿ 6 ರನ್ ಗಳಿಸಿ ಹೆನ್ರಿ ಅವರಿಗೆ 3ನೇ ಬಲಿಯಾಗಿ ನಿರ್ಗಮಿಸಿದರು.

    ಆರಂಭಿಕ ವೈಫಲ್ಯ: ಕೊಹ್ಲಿ ಪಡೆಗೆ ಅಘಾತ ನೀಡಿದ ಕಿವೀಸ್ ಬೌಲರ್ ಲ್ಯಾಥಮ್ ಹೆನ್ರಿ, ರೋಹಿತ್, ರಾಹುಲ್ ವಿಕೆಟ್ ಪಡೆದು ಅಘಾತ ನೀಡಿದರು. ಇತ್ತ ಬೋಲ್ಟ್ ನಾಯಕ ಕೊಹ್ಲಿ ಅವರನ್ನು ಎಲ್‍ಬಿ ಡಬ್ಲೂ ಬಲೆಗೆ ಕೆಡವಿದರು. ಪರಿಣಾಮ ಟೀಂ ಇಂಡಿಯಾ 3.1 ಓವರ್ ಗಳಲ್ಲಿ ಕೇವಲ 3 ರನ್ ಗಳಿಗೆ 5 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ತಂಡವೊಂದರ ಟಾಪ್ 3 ಆಟಗಾರರು ತಲಾ 1 ರನ್ ಗಳಿಸಿ ಔಟಾಗಿದ್ದು ಇದೇ ಮೊದಲ ಬಾರಿಗೆ ಆಗಿದೆ.

    ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ವಿಶ್ವಕಪ್ ಟೂರ್ನಿಯ 3 ಸೆಮಿಫೈನಲ್ ಪಂದ್ಯದಲ್ಲಿ ಎಡಗೈ ವೇಗಿ ಬೌಲರ್ ಗಳಿಗೆ ಔಟಾಗಿದ್ದಾರೆ. ಅಲ್ಲದೇ ಮೂರು ಪಂದ್ಯಗಳಲ್ಲಿ ಕೇವಲ 11 ರನ್ ಗಳಿಸಿದ್ದಾರೆ. 2011ರ ವಿಶ್ವಕಪ್ ಸೆಮಿ ಫೈನಲ್‍ನಲ್ಲೂ ಪಾಕಿಸ್ತಾನ ಎಡಗೈ ವೇಗಿ ವಯಾಬ್ ರಿಯಾಜ್ ಅವರಿಗೆ ವಿಕೆಟ್ ಒಪ್ಪಿಸಿದ್ದರು. 2015ರ ವಿಶ್ವಕಪ್ ಸೆಮಿ ಫೈನಲ್ ನಲ್ಲಿ ಆಸೀಸ್ ತಂಡದ ವಿರುದ್ಧ ಮಿಚೆಲ್ ಜಾನ್ಸನ್ ಅವರ ಬೌಲಿಂಗ್‍ನಲ್ಲಿ ಔಟಾಗಿದ್ದರು.

    ಇನ್ನಿಂಗ್ಸ್ ನ 10 ಓವರ್ ಗಳ ಅಂತ್ಯದ ವೇಳೆ 4 ವಿಕೆಟ್ ಕಳೆದುಕೊಂಡು 24 ರನ್ ಗಳಿಸಿದ್ದ ಟೀಂ ಇಂಡಿಯಾ 2019 ವಿಶ್ವಕಪ್ ಟೂರ್ನಿಯಲ್ಲಿ ಪಂದ್ಯವೊಂದರ ಪವರ್ ಪ್ಲೇನಲ್ಲಿ ಗಳಿಸಿದ ಅತಿ ಕಡಿಮೆ ಮೊತ್ತ ಇದಾಗಿದೆ. ಈ ಸಂದರ್ಭದಲ್ಲಿ ತಂಡಕ್ಕೆ ಚೇತರಿಕೆ ನೀಡಲು ಯತ್ನಿಸಿದ ಯುವ ಆಟಗಾರ ರಿಷಬ್ ಪಂತ್ ಅನಗತ್ಯ ಹೊಡೆತಕ್ಕೆ ಕೈ ಹಾಕಿ 56 ಎಸೆತಗಳಲ್ಲಿ 4 ಬೌಂಡರಿ ನೆರವಿನಿಂದ 32 ರನ್ ಗಳಿಸಿ ಸ್ಯಾಂಟನರ್ ಗೆ ವಿಕೆಟ್ ಒಪ್ಪಿಸಿದರು.  ಪಾಂಡ್ಯ- ರಿಷಬ್ ಪಂತ್ ಜೋಡಿ 5ನೇ ವಿಕೆಟ್‍ಗೆ 47 ರನ್ ಜೊತೆಯಾಟ ನೀಡಿತ್ತು. ಈ ಹಂತದಲ್ಲಿ ಮತ್ತೆ ದಾಳಿಗಿಳಿದ ಸ್ಯಾಂಟನರ್ 62 ಎಸೆತಗಳಲ್ಲಿ 2 ಬೌಂಡರಿ ಸಹಿತ 32 ರನ್ ಗಳಿಸಿದ್ದ ಪಾಂಡ್ಯ ವಿಕೆಟ್ ಪಡೆದರು.

    ಧೋನಿ-ಜಡೇಜಾ ಜೊತೆಯಾಟ: ಟೀಂ ಇಂಡಿಯಾ 30.3 ಓವರ್ ಗಳಲ್ಲಿ 92 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದ ಸಂದರ್ಭದಲ್ಲಿ ಒಂದಾದ ಮಾಜಿ ನಾಯಕ ಧೋನಿ ಹಾಗೂ ಜಡೇಜಾ ತಂಡವನ್ನು ಗೆಲುವಿನತ್ತ ಕರೆತರಲು ಪ್ರಯತ್ನ ನಡೆಸಿದರು. ಈ ಸಂದರ್ಭದಲ್ಲಿ ಭಾರತಕ್ಕೆ 117 ಎಸೆತಗಳಲ್ಲಿ 148 ರನ್ ಗಳಿಸುವ ಅಗತ್ಯವಿತ್ತು.

    ಜಡೇಜಾ ಮಿಂಚು: ಟೂರ್ನಿಯಲ್ಲಿ ಫೀಲ್ಡಿಂಗ್ ಮೂಲಕ ಗಮನ ಸೆಳೆದಿದ್ದ ಜಡೇಜಾ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದರು. 39 ಎಸೆತಗಳಲ್ಲಿ 3 ಬೌಂಡರಿ, 3 ಸಿಕ್ಸರ್ ಗಳಿಂದ ಅರ್ಧ ಶತಕ ಪೂರ್ಣಗೊಳಿಸಿದರು. ಆ ಮೂಲಕ ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ ನಲ್ಲಿ ನಂ.8ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದು ಅರ್ಧ ಶತಕ ಬ್ಯಾಟ್ಸ್ ಮನ್ ಸಿಡಿಸಿದ ಸಾಧನೆ ಮಾಡಿದರು. 5 ವರ್ಷಗಳ ಬಳಿಕ ಜಡೇಜಾ ಗಳಿಸಿದ ಏಕದಿನ ಅರ್ಧ ಶತಕ ಇದಾಗಿದೆ.

    5 ಓವರ್ ಗಳಲ್ಲಿ 52 ರನ್ ಗಳಿಸುವ ಒತ್ತಡದಲ್ಲಿ ಸಿಲುಕಿದ್ದ ಸಂದರ್ಭದಲ್ಲಿ ಜಡೇಜಾ ತಂಡವನ್ನು ಗೆಲುವಿನ ಸನಿಹ ಕೊಂಡ್ಯೊಯುವ ಪ್ರಯತ್ನ ನಡೆಸಿದರು. 46ನೇ ಓವರಿನಲ್ಲಿ ಬೌಂಡರಿ ಸಮೇತ 10 ರನ್ ಗಳಿಸಿದ ಈ ಜೋಡಿ 7ನೇ ವಿಕೆಟ್‍ಗೆ ಶತಕದ ಜೊತೆಯಾಟ ನೀಡಿದರು. 122 ಎಸೆತಗಳಲ್ಲಿ ಈ ಜೋಡಿ 116 ಗಳಿಸಿತು. ಆದರೆ ಅಂತಿಮ ಹಂತದಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ ಜಡೇಜಾ 59 ಎಸೆತಗಳಲ್ಲಿ 77 ರನ್(4 ಬೌಂಡರಿ, 4 ಸಿಕ್ಸರ್) ಗಳಿಸಿ ಬೋಲ್ಟ್ ಗೆ ವಿಕೆಟ್ ಒಪ್ಪಿಸಿದರು. ಇತ್ತ ಜಡೇಜಾ ನಿರ್ಗಮನದೊಂದಿಗೆ ತಂಡದ ಗೆಲುವಿನ ಆಸೆಯಾಗಿದ್ದ ಧೋನಿ 50 ರನ್(72 ಎಸೆತ, 1 ಬೌಂಡರಿ, 1ಸಿಕ್ಸರ್) ಸಿಡಿಸಿ ರನೌಟ್ ಆದರು. ಈ ಹಂತದಲ್ಲಿ ಟೀಂ ಇಂಡಿಯಾ ತಂಡದ ಗೆಲುವಿಗೆ 24 ರನ್ ಗಳ ಅಗತ್ಯವಿತ್ತು. ನ್ಯೂಜಿಲೆಂಡ್ ಪರ ಬೋಲ್ಟ್ 2 ವಿಕೆಟ್ ಪಡೆದರೆ, ಹೆನ್ರಿ 3 ವಿಕೆಟ್, ಸ್ಟಾನ್ನರ್ 2 ವಿಕೆಟ್ , ಫಾರ್ಗೂಸನ್ 1 ವಿಕೆಟ್ ಪಡೆದರು.

    ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಮುಗ್ಗರಿಸಿದ್ದ ಟೀಂ ಇಂಡಿಯಾ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲೂ  ನಿರಾಸ ಪ್ರದರ್ಶನ ನೀಡಿದೆ. ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ನಡೆಸಿ 179 ರನ್ ಗಳಿಗೆ ಅಲೌಟ್ ಆಗಿತ್ತು. ಗುರಿ ಬೆನ್ನತ್ತಿದ್ದ ಕಿವೀಸ್ ಪಡೆ 4 ವಿಕೆಟ್ ಕಳೆದುಕೊಂಡು 180 ರನ್ ಗಳಿಸಿ ಜಯ ಪಡೆದಿತ್ತು.

    2015ರ ವಿಶ್ವಕಪ್ ಫೈನಲ್‍ನಲ್ಲಿ ಆಸ್ಟ್ರೇಲಿಯಾ ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್‍ಗಳಿಂದ ಜಯಗಳಿಸಿ ಟ್ರೋಫಿ ಗೆದ್ದುಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 45 ಓವರ್ ಗಳಲ್ಲಿ 183 ರನ್ ಗಳಿಗೆ ಆಲೌಟ್ ಆಗಿದ್ದರೆ ಆಸ್ಟ್ರೇಲಿಯಾ 33.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತ್ತು.

  • 2 ಪಂದ್ಯವಾಡಿದ್ರೂ ವಿಶೇಷ ಸಾಧನೆಗೈದ ಜಡೇಜಾ

    2 ಪಂದ್ಯವಾಡಿದ್ರೂ ವಿಶೇಷ ಸಾಧನೆಗೈದ ಜಡೇಜಾ

    ಲಂಡನ್: ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಆಡಲು ಅವಕಾಶ ಪಡೆದ ರವೀಂದ್ರ ಜಡೇಜಾ ಟೂರ್ನಿಯಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ.

    ನ್ಯೂಜಿಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯ 2 ಪಂದ್ಯಗಳನ್ನು ಆಡಿರುವ ಜಡೇಜಾ ಒಟ್ಟು 41 ರನ್ ಗಳನ್ನು ಸೇವ್ ಮಾಡುವ ಮೂಲಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಆಟಗಾರರು ಗಾಯಗೊಂಡಾಗ, ಬೌಲರ್ ವಿಶ್ರಾಂತಿ ಪಡೆದಾಗ ಕ್ಷೇತ್ರ ರಕ್ಷಣೆಯಲ್ಲಿ ಮೋಡಿ ಮಾಡಿರುವ ಜಡೇಜಾ ಇನ್ನರ್ ರಿಂಗ್ ನಲ್ಲಿ 24 ರನ್ ಗಳನ್ನು ತಡೆದಿದ್ದರೆ, ಔಟ್‍ಫೀಲ್ಡ್‍ನಲ್ಲಿ 17 ರನ್ ಗಳನ್ನು ಸೇವ್ ಮಾಡಿದ್ದಾರೆ. 2 ಪಂದ್ಯಗಳಲ್ಲಿ ಜಡೇಜಾ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ.

    ಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿರುವ ಮಾರ್ಟಿನ್ ಗುಪ್ಟಿಲ್ 9 ಪಂದ್ಯಗಳಿಂದ 34 ರನ್, ಗ್ಲೇನ್ ಮ್ಯಾಕ್ಸ್ ವೇಲ್ 9 ಪಂದ್ಯಗಳಿಂದ 32 ರನ್, 4ನೇ ಸ್ಥಾನದಲ್ಲಿ ಇರುವ ಸ್ಟೋಯಿನ್ಸ್ 7 ಪಂದ್ಯಗಳಿಂದ 27 ರನ್‍ಗಳನ್ನು ಸೇವ್ ಮಾಡಿದ್ದಾರೆ.

    ಶ್ರೀಲಂಕಾ ವಿರುದ್ಧ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡಿದ್ದ ಜಡೇಜಾ – ಧೋನಿ ವಿರೋಧಿ ತಂಡ ಒಟ್ಟು 29 ಬ್ಯಾಟ್ಸ್ ಮನ್ ಗಳನ್ನು ಬಲಿ ಪಡೆದ ಸಾಧನೆ ಮಾಡಿದರು. ಇದಕ್ಕೂ ಮುನ್ನ ಭಾರತ ಪರ ನಯನ್ ಮೋಗಿಯಾ ಹಾಗೂ ವೆಂಕಟೇಶ್ ಪ್ರಸಾದ್ ಜೋಡಿ 28 ಬ್ಯಾಟ್ಸ್ ಮನ್ ಗಳನ್ನು ಬಲಿ ಪಡೆದಿತ್ತು. ಉಳಿದಂತೆ ಈ ಪಟ್ಟಿಯಲ್ಲಿ 25 ಬ್ಯಾಟ್ಸ್ ಮನ್ ಗಳನ್ನು ಬಲಿ ಪಡೆದ ಧೋನಿ – ಹರ್ಭಜನ್ ಜೋಡಿ 3ನೇ ಸ್ಥಾನದಲ್ಲಿದೆ.

    https://twitter.com/mohankrish_mk48/status/1148902745845272576