Tag: Ravindra Jadeja

  • Record Break: ಭಾರತ-ಕಿವೀಸ್‌ ರೋಚಕ ಪಂದ್ಯಕ್ಕೆ ಗ್ರೌಂಡ್‌ ಹೊರಗಿನ ದಾಖಲೆಗಳೂ ಉಡೀಸ್‌

    Record Break: ಭಾರತ-ಕಿವೀಸ್‌ ರೋಚಕ ಪಂದ್ಯಕ್ಕೆ ಗ್ರೌಂಡ್‌ ಹೊರಗಿನ ದಾಖಲೆಗಳೂ ಉಡೀಸ್‌

    ಧರ್ಮಶಾಲಾ: ಭಾರತ ಮತ್ತು ನ್ಯೂಜಿಲೆಂಡ್‌ (India vs New Zealand) ನಡುವಿನ ರೋಚಕ ವಿಶ್ವಕಪ್‌ (World Cup 2023) ಪಂದ್ಯದಲ್ಲಿ ಡಿಸ್ನಿಪ್ಲಸ್‌ ಹಾಟ್‌ಸ್ಟಾರ್‌ (Disney+ Hotstar) ಏಕಕಾಲಕ್ಕೆ 4.3 ಕೋಟಿ ಜನರಿಂದ ವೀಕ್ಷಣೆ ಕಂಡಿದ್ದು, ಹಿಂದಿನ ಎಲ್ಲಾ ದಾಖಲೆಗಳನ್ನು ಉಡೀಸ್‌ ಮಾಡಿದೆ.

    ಸೂಪರ್‌ ಸಂಡೇನಲ್ಲಿ ಧರ್ಮಶಾಲಾದ HPCA ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಕಿವೀಸ್‌ ಪಂದ್ಯವು ಕೊನೇ ಕ್ಷಣದವರೆಗೂ ರೋಚತೆಯಿಂದ ಕೂಡಿತ್ತು. ಡೆತ್‌ ಓವರ್‌ ಶುರುವಾಗುತ್ತಿದ್ದಂತೆ, ಕೊಹ್ಲಿ (Virat Kohli) ವಿಶ್ವದಾಖಲೆಯ ಶತಕದ ವೈಭವ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಆನ್‌ಲೈನ್‌ ವೇದಿಕೆಯಲ್ಲಿ ದಾಂಗುಡಿಯಿಡುತ್ತಿದ್ದರು, ಕೊಹ್ಲಿ ಎದುರಿಸುವ ಪ್ರತಿ ಎಸೆತವನ್ನು ಸಿಕ್ಸರ್‌ ಸಿಡಿಸುತ್ತಾರೋ, ಬೌಂಡರಿ ಸಿಡಿಸುತ್ತಾರೋ ಎಂದು ಅಭಿಮಾನಿಗಳು ಉಸಿರು ಬಿಗಿಹಿಡಿದು ನೋಡುತ್ತಿದ್ದರು, ಪ್ರತಿ ಎಸೆತ ಚಚ್ಚಿದಾಗಲೂ ಕೊಹ್ಲಿ ಕೊಹ್ಲಿ ಎಂದು ಕೂಗುತ್ತಾ ಹುರಿದುಂಬಿಸುತ್ತಿದ್ದರು.

    ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿದ್ದ ಭಾರತ ತಂಡ, ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಎದುರಾಳಿ ನ್ಯೂಜಿಲೆಂಡ್‌ ತಂಡಕ್ಕೆ ಬಿಟ್ಟುಕೊಟ್ಟಿತ್ತು. ಮೊಹಮ್ಮದ್‌ ಶಮಿ, ಮೊಹಮ್ಮದ್‌ ಸಿರಾಜ್‌, ಜಸ್ಪ್ರೀತ್‌ ಬುಮ್ರಾ ಬೆಂಕಿ ಬೌಲಿಂಗ್‌ ದಾಳಿಯಿಂದ 273 ರನ್‌ಗಳಿಗೆ ಕಿವೀಸ್‌ ತಂಡವನ್ನು ಕಟ್ಟಿಹಾಕಿದ್ದ ಭಾರತ ಬ್ಯಾಟಿಂಗ್‌ನಲ್ಲೂ ಉತ್ತಮ ಪ್ರದರ್ಶನ ನೀಡಿತು. ನಾಯಕ ರೋಹಿತ್‌ ಶರ್ಮಾ, ಶುಭಮನ್‌ ಗಿಲ್‌ ಸ್ಫೋಟಕ ಬ್ಯಾಟಿಂಗ್‌ನಿಂದ ಉತ್ತಮ ಆರಂಭ ಪಡೆದರೂ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಸಂಕಷ್ಟಕ್ಕೆ ಸಿಲುಕಿತ್ತು. ಶ್ರೇಯಸ್‌ ಅಯ್ಯರ್‌ 33 ರನ್‌, ಕೆ.ಎಲ್‌ ರಾಹುಲ್‌ 27 ರನ್‌ ಗಳಿಸಿ ಔಟಾಗುತ್ತಿದ್ದಂತೆ‌ ಪಂದ್ಯ ಗೆಲ್ಲಿಸುವ ಜವಾಬ್ದಾರಿ ಕೊಹ್ಲಿ ಹೆಗಲ ಮೇಲೆ ಬಿದ್ದಿತ್ತು. ಇದಕ್ಕೆ ರವೀಂದ್ರ ಜಡೇಜಾ ಕೂಡ ಸಾಥ್‌ ನೀಡಿದರು.

    ಕೊಹ್ಲಿ 42.5ನೇ ಓವ್‌ನಲ್ಲಿ ಬ್ಯಾಟಿಂಗ್‌ ಮಾಡುವಾಗ 3.6 ಕೋಟಿಯಿದ್ದ ವೀಕ್ಷಕರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಾ ಸಾಗಿತು. 44ನೇ ಓವರ್‌ನಲ್ಲಿ 3.7 ಕೋಟಿ, 46.3ನೇ ಓವರ್‌ನಲ್ಲಿ 4 ಕೋಟಿ, 47ನೇ ಓವರ್‌ನಲ್ಲಿ 4.1 ಕೋಟಿ, ಅದೇ ಕ್ಷಣ 4.2 ಕೋಟಿ ಇದ್ದ ವೀಕ್ಷಕರ ಸಂಖ್ಯೆ 4.3 ಕೋಟಿಗೆ ಏರಿಕೆಯಾಗಿತ್ತು. ಆದ್ರೆ ಕೊಹ್ಲಿ ಶತಕವನ್ನ ಕಣ್ತುಂಬಿಕೊಳ್ಳಲು ಬಂದ ಅಭಿಮಾನಿಗಳಿಗೆ ನಿರಾಸೆಯಾಯಿತು. ಇದು ಈ ಹಿಂದಿನ ಎಲ್ಲ ದಾಖಲೆಗಳನ್ನ ಉಡೀಸ್‌ ಮಾಡಿದೆ. ಇದನ್ನೂ ಓದಿ: ಇಶಾನ್‌ಗೆ ಜೇನುಹುಳು ಕಂಟಕ, ಸೂರ್ಯನಿಗೆ ಮೊಣಕೈ ಗಾಯ – ಪಂದ್ಯ ಆರಂಭಕ್ಕೂ ಮುನ್ನವೇ ಭಾರತಕ್ಕೆ ತ್ರಿಬಲ್‌ ಶಾಕ್‌

    ಭಾರತ ಮತ್ತು ಪಾಕ್‌ ಪಂದ್ಯದ ವೇಳೆ ರೋಹಿತ್‌ ಶರ್ಮಾ (Rohit Sharma) ಬ್ಯಾಟಿಂಗ್‌ ನೋಡಲು 3.5 ಕೋಟಿ ಜನರು ವೀಕ್ಷಣೆ ಮಾಡಿದ್ದು, ಈವರೆಗಿನ ದಾಖಲೆಯಾಗಿತ್ತು. ಈ ಹಿಂದೇ ಇದೇ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ 2023ರ ಐಪಿಎಲ್‌ ಫೈನಲ್‌ ಪಂದ್ಯವನ್ನು ಜಿಯೋಸಿನಿಮಾದಲ್ಲಿ‌ ಏಕಕಾಲಕ್ಕೆ 3.2 ಕೋಟಿ ಜನರಿಂದ ವೀಕ್ಷಣೆ ಕಂಡಿದ್ದು ಈ ವರೆಗಿನ ದಾಖಲೆಯಾಗಿತ್ತು. ಇದನ್ನೂ ಓದಿ: ಶಮಿ ಹೊಸ ದಾಖಲೆ – ODI ವಿಶ್ವಕಪ್‌ ಇತಿಹಾಸದಲ್ಲೇ 2 ಬಾರಿ ಐದು ವಿಕೆಟ್‌ ಕಬಳಿಸಿದ ಮೊದಲ ಭಾರತೀಯ

    2023ರ ಐಪಿಎಲ್‌ ಆವೃತ್ತಿಯಲ್ಲಿ ಜಿಯೋಸಿನಿಮಾ ಸತತ 4ನೇ ಬಾರಿಗೆ ತನ್ನದೇ ವೀಕ್ಷಕರ ದಾಖಲೆ ಮುರಿದಿತ್ತು. ಜೊತೆಗೆ 2019ರ ಐಸಿಸಿ ಏಕದಿನ ವಿಶ್ವಕಪ್ ವೇಳೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ವೇಳೆ ನಿರ್ಮಿಸಲ್ಪಟ್ಟಿದ್ದ ವಿಶ್ವದಾಖಲೆಗಳೆಲ್ಲವನ್ನೂ ನುಚ್ಚುನೂರು ಮಾಡಿತ್ತು. 2013ರ ವಿಶ್ವಕಪ್‌ ಪಂದ್ಯವನ್ನು 2.53 ಕೋಟಿ ಮಂದಿ ವೀಕ್ಷಣೆ ಮಾಡಿದ್ದರು. ಇದನ್ನೂ ಓದಿ: ಎಲ್ಲಿ ಹೋಯ್ತು ಬಾಬರ್‌ನ ಬೆಂಕಿ ಬ್ಯಾಟಿಂಗ್? – ಮತ್ತೆ ಗಂಭೀರ್ ಕೆಣಕಿದ ಕೊಹ್ಲಿ ಫ್ಯಾನ್ಸ್

    ಏಪ್ರಿಲ್ 17ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಪಂದ್ಯದ ವೇಳೆ ಎಂ.ಎಸ್ ಧೋನಿ ಅವರ ಆಟ ವೀಕ್ಷಿಸಲು 2.4 ಕೋಟಿ ವೀಕ್ಷಕರು ಜಿಯೋಸಿನಿಮಾದಲ್ಲಿ ಒಟ್ಟಾಗಿ ಸೇರಿದ್ದು ಹಿಂದಿನ ದಾಖಲೆ ಎನಿಸಿತ್ತು. ಅದಕ್ಕೂ ಮುನ್ನ ಏಪ್ರಿಲ್ 12ರಂದು ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ಗತವೈಭವ ನೆನಪಿಸುವಂಥ ಬ್ಯಾಟಿಂಗ್ ಪ್ರದರ್ಶಿಸಿದಾಗ ಗರಿಷ್ಠ 2.2 ಕೋಟಿ ವೀಕ್ಷಕರ ದಾಖಲೆ ಕಂಡಿತ್ತು.

    ಭಾನುವಾರ ನಡೆದ ವಿಶ್ವಕಪ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ತಂಡ 42.5 ಓವರ್‌ಗಳಲ್ಲಿ 191 ರನ್‌ಗಳಿಗೆ ಆಲೌಟ್‌ ಆಯಿತು. ಗುರಿ ಬೆನ್ನತ್ತಿದ್ದ ಭಾರತ ತಂಡ 30.3 ಓವರ್‌ಗಳಲ್ಲೇ 192 ರನ್‌ ಗಳಿಸಿ ಭರ್ಜರಿ ಜಯ ಸಾಧಿಸಿತು. ಇದನ್ನೂ ಓದಿ: ಪಾಕಿಸ್ತಾನ್‌ ಜಿಂದಾಬಾದ್‌ ಅನ್ನದೇ ಇನ್ನೇನು ಹೇಳ್ಬೇಕು? – ಪೊಲೀಸ್‌ ಅಧಿಕಾರಿ ಜೊತೆ ಪಾಕ್‌ ಅಭಿಮಾನಿ ವಾಗ್ವಾದ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023: ರಾಹುಲ್‌, ವಿರಾಟ ಶತಕದ ಹೋರಾಟ – ಭಾರತಕ್ಕೆ 6 ವಿಕೆಟ್‌ಗಳ ಅಮೋಘ ಜಯ

    World Cup 2023: ರಾಹುಲ್‌, ವಿರಾಟ ಶತಕದ ಹೋರಾಟ – ಭಾರತಕ್ಕೆ 6 ವಿಕೆಟ್‌ಗಳ ಅಮೋಘ ಜಯ

    ಚೆನ್ನೈ: ಟೀಂ ಇಂಡಿಯಾ ಸ್ಟಾರ್‌ ಆಟಗಾರರಾದ ವಿರಾಟ್‌ ಕೊಹ್ಲಿ (Virat kohli) ಮತ್ತು ಕೆ.ಎಲ್‌ ರಾಹುಲ್‌ (KL Rahul) ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ಪ್ರದರ್ಶನದಿಂದ ಟೀಂ ಇಂಡಿಯಾ (Team India), ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳ‌ ಅಮೋಘ ಜಯ ಸಾಧಿಸಿದೆ. ಈ ಮೂಲಕ ವಿಶ್ವಕಪ್‌ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ.

    ಆಸೀಸ್‌ ನೀಡಿದ 200 ರನ್‌ಗಳ ಗುರಿ ಬೆನ್ನತ್ತಿದ್ದ ಭಾರತ 41.2 ಓವರ್‌ನಲ್ಲೇ 4 ವಿಕೆಟ್‌ ನಷ್ಟಕ್ಕೆ 201 ರನ್‌ ಬಾರಿಸಿ ಗೆಲುವು ಸಾಧಿಸಿದೆ. ಇದನ್ನೂ ಓದಿ: World Cup 2023: ಕೆ.ಎಲ್‌ ರಾಹುಲ್‌, ಕೊಹ್ಲಿ ಶತಕದ ಜೊತೆಯಾಟ – ಭಾರತಕ್ಕೆ 6 ವಿಕೆಟ್‌ಗಳ ಅಮೋಘ ಜಯ

    ಚೇಸಿಂಗ್‌ ಆರಂಭಿಸಿದ ಭಾರತ 2ನೇ ಓವರ್‌ನಲ್ಲೇ ಕೇವಲ 2 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡು ತೀವ್ರ ಸಂಕಷ್ಟ ಅನುಭವಿಸಿತ್ತು. ಇದರಿಂದ 4ನೇ ವಿಕೆಟ್‌ಗೆ ಜೊತೆಯಾದ ವಿರಾಟ್‌ ಕೊಹ್ಲಿ, ಕೆ.ಎಲ್‌ ರಾಹುಲ್‌ ಜೋಡಿ ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿತ್ತು. 15 ಓವರ್‌ ಪೂರ್ಣಗೊಂಡರೂ ಭಾರತ 49 ರನ್‌ ಗಳಿಸಿದ್ದರಿಂದ ಗೆಲವು ಅಸಾಧ್ಯವೆಂದೇ ಭಾವಿಸಲಾಗಿತ್ತು. ಬಳಿಕ ಸಮಯೋಚಿತ ಬ್ಯಾಟಿಂಗ್‌ ನಿಂದ ಒಂದೊಂದೇ ಬೌಂಡರಿಗಳನ್ನ ಸಿಡಿಸುತ್ತಾ ತಂಡವನ್ನು ಗೆಲುವಿನ ಹಾದಿಯತ್ತ  ಮುನ್ನಡೆಸಿದರು. ಇದನ್ನೂ ಓದಿ: World Cup 2023: ಸ್ಪಿನ್‌ ಪಿಚ್‌ನಲ್ಲಿ ತಿಣುಕಾಡಿದ ಆಸೀಸ್‌ – ಭಾರತಕ್ಕೆ 200 ರನ್‌ಗಳ ಗುರಿ

    ಇವರಿಬ್ಬರ ಜೊತೆಯಾಟದಿಂದ ಭಾರತ 35 ಓವರ್‌ಗಳಲ್ಲಿ 151 ರನ್‌ ಬಾರಿಸಿತ್ತು. 4ನೇ ವಿಕೆಟ್‌ಗೆ ಕೆ.ಎಲ್‌ ರಾಹುಲ್‌ ಹಾಗೂ ಕೊಹ್ಲಿ 215 ಎಸೆತಗಳಲ್ಲಿ 165 ರನ್‌ಗಳ ಜೊತೆಯಾಟ ನೀಡಿ ತಂಡವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾದರು. ಕೊಹ್ಲಿ 116 ಎಸೆತಗಳಲ್ಲಿ 6 ಬೌಂಡರಿಯೊಂದಿಗೆ 85 ರನ್‌ ಚಚ್ಚಿ ಶತಕ ವಂಚಿರಾದರು. ಇನ್ನೂ ಕೊನೆಯವರೆಗೂ ಹೋರಾಡಿದ ಕೆ.ಎಲ್‌ ರಾಹುಲ್‌ 115 ಎಸೆತಗಳಲ್ಲಿ 97 ರನ್‌ (8 ಬೌಂಡರಿ, 2 ಸಿಕ್ಸರ್) ಚಚ್ಚಿ ಅಜೇರಾಗುಳಿದರು. ಕೊನೆಯಲ್ಲಿ ಹಾರ್ದಿಕ್‌ ಪಾಂಡ್ಯ 11 ರನ್‌ ಕೊಡುಗೆ ನೀಡಿದರು.

    ಆಸೀಸ್‌ ಪರ ಆರಂಭದಲ್ಲಿ ಮಾರಕ ದಾಳಿ ನಡೆಸಿದ ಜೋಶ್ ಹ್ಯಾಜಲ್‌ವುಡ್‌ 3 ವಿಕೆಟ್‌ ಕಿತ್ತರೆ, ಮಿಚೆಲ್‌ ಸ್ಟಾರ್ಕ್‌ 1 ವಿಕೆಟ್‌ ಪಡೆದರು. ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಆಸೀಸ್‌ 49.3 ಓವರ್‌ಗಳಲ್ಲಿ 199ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಇದನ್ನೂ ಓದಿ: Asian Games 2023: ಏಷ್ಯನ್‌ ಗೇಮ್ಸ್‌ನಲ್ಲೂ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಸಾತ್ವಿಕ್‌ಸಾಯಿರಾಜ್, ಚಿರಾಗ್‌ ಜೋಡಿ  

    ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್‌ ವಾರ್ನರ್‌ ಹಾಗೂ ಮಚೆಲ್‌ ಮಾರ್ಷ್‌ ಜೋಡಿ ಉತ್ತಮ ಆರಂಭ ನೀಡುವಲ್ಲಿ ವಿಫಲವಾಯಿತು. 2.2 ಓವರ್‌ನಲ್ಲೇ 5 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡ ಆಸೀಸ್‌ ಸಂಕಷ್ಟಕ್ಕೀಡಾಯಿತು. ಈ ವೇಳೆ 2ನೇ ವಿಕೆಟ್‌ಗೆ ಡೇವಿಡ್‌ ವಾರ್ನರ್‌ ಮತ್ತು ಸ್ಟೀವ್‌ ಸ್ಮಿತ್‌ ಜೋಡಿ, 85 ಎಸೆತಗಳಲ್ಲಿ 69 ರನ್‌ ಹಾಗೂ ಸ್ಟೀವ್‌ ಸ್ಮಿತ್‌ ಮತ್ತು ಮಾರ್ನಸ್‌ ಲಾಬುಶೇನ್‌ ಜೋಡಿ 64 ಎಸೆತಗಳಲ್ಲಿ 36 ರನ್‌ಗಳ ಜೊತೆಯಾಟ ನೀಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿತ್ತು. ಈ ವೇಳೆ ಟೀಂ ಇಂಡಿಯಾ ಸ್ಪಿನ್ನರ್‌ಗಳು ಆಸೀಸ್‌ ಅಗ್ರ ಕ್ರಮಾಂಕದ ಬ್ಯಾಟರ್‌ಗಳನ್ನ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ಆಸೀಸ್‌ 49.3 ಓವರ್‌ಗಳಲ್ಲಿ 199ರನ್‌ಗಳಿಗೆ ಸರ್ವಪತನ ಕಂಡಿತು.

    ಆಸೀಸ್‌ ಪರ ಡೇವಿಡ್‌ ವಾರ್ನರ್‌ 41 ರನ್‌ (52 ಎಸೆತ, 6 ಬೌಂಡರಿ), ಸ್ಟೀವ್‌ ಸ್ಮಿತ್‌ 46 ರನ್‌ (71 ಎಸೆತ 5 ಬೌಂಡರಿ), ಮಾರ್ನಸ್‌ ಲಾಬುಶೇನ್‌ 27 ರನ್‌, ಗ್ಲೇನ್‌ ಮ್ಯಾಕ್ಸ್‌ವೆಲ್‌ 15 ರನ್‌, ಕ್ಯಾಮರೂನ್‌ ಗ್ರೀನ್‌ 8 ರನ್‌, ಪ್ಯಾಟ್‌ ಕಮ್ಮಿನ್ಸ್‌ 15 ರನ್‌, ಮಿಚೆಲ್‌ ಸ್ಟಾರ್ಕ್‌ 28 ರನ್‌, ಆಡಂ ಝಂಪಾ 6 ರನ್‌, ಜೋಶ್ ಹ್ಯಾಜಲ್‌ವುಡ್‌ 1 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರೆ, ಮಿಚೆಲ್‌ ಮಾರ್ಷ್‌ ಹಾಗೂ ಅಲೆಕ್ಸ್‌ ಕ್ಯಾರಿ ಶೂನ್ಯಕ್ಕೆ ನಿರ್ಗಮಿಸಿದರು.

    ಜಡೇಜಾ ಸ್ಪಿನ್‌ ಜಾದು: ಟೀಂ ಇಂಡಿಯಾ ಪರ ಬೌಲಿಂಗ್‌ನಲ್ಲಿ ಮೋಡಿ ಮಾಡಿದ ರವೀಂದ್ರ ಜಡೇಜಾ 10 ಓವರ್‌ಗಳಲ್ಲಿ 28 ರನ್‌ ನೀಡಿ 3 ವಿಕೆಟ್‌ ಕಿತ್ತರೆ, ಜಸ್ಪ್ರೀತ್‌ ಬುಮ್ರಾ ಹಾಗೂ ಕುಲ್ದೀಪ್‌ ಯಾದವ್‌ ತಲಾ 2 ವಿಕೆಟ್‌, ಹಾರ್ದಿಕ್‌ ಪಾಂಡ್ಯ, ರವಿಚಂದ್ರನ್‌ ಅಶ್ವಿನ್‌ ಹಾಗೂ ಮೊಹಮ್ಮದ್‌ ಸಿರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023: ಸ್ಪಿನ್‌ ಪಿಚ್‌ನಲ್ಲಿ ತಿಣುಕಾಡಿದ ಆಸೀಸ್‌ – ಭಾರತಕ್ಕೆ 200 ರನ್‌ಗಳ ಗುರಿ

    World Cup 2023: ಸ್ಪಿನ್‌ ಪಿಚ್‌ನಲ್ಲಿ ತಿಣುಕಾಡಿದ ಆಸೀಸ್‌ – ಭಾರತಕ್ಕೆ 200 ರನ್‌ಗಳ ಗುರಿ

    ಚೆನ್ಹೈ: ಚೆಪಾಕ್‌ನ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತದ (India) ವಿರುದ್ಧ ನಡೆಯುತ್ತಿರುವ ವಿಶ್ವಕಪ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು (Australia) 49.3 ಓವರ್‌ಗಳಲ್ಲಿ 199 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಭಾರತಕ್ಕೆ 200 ರನ್‌ಗಳ ಗುರಿ ನೀಡಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಆಸೀಸ್‌ ಸ್ಪಿನ್‌ ಪಿಚ್‌ನಲ್ಲಿ ರನ್‌ ಕದಿಯಲು ತಿಣುಕಾಡಿತು. ಭಾರತದ ಸ್ಪಿನ್‌ ಮಾಂತ್ರಿಕರ ದಾಳಿ ಹೊರತಾಗಿಯೂ 199 ರನ್‌ ಗಳಿಸಿ, ಟೀಂ ಇಂಡಿಯಾಕ್ಕೆ (Team India) 200 ರನ್‌ಗಳ ಗುರಿ ನೀಡಿತು. ಇದನ್ನೂ ಓದಿ: ಪ್ರಧಾನಿ ಮೋದಿ ಹತ್ಯೆ, ಮೋದಿ ಸ್ಟೇಡಿಯಂ ಸ್ಫೋಟ ಬೆದರಿಕೆ – ಮುಂಬೈ ಪೊಲೀಸರಿಗೆ ಸಂದೇಶ

    ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್‌ ವಾರ್ನರ್‌ ಹಾಗೂ ಮಚೆಲ್‌ ಮಾರ್ಷ್‌ ಜೋಡಿ ಉತ್ತಮ ಆರಂಭ ನೀಡುವಲ್ಲಿ ವಿಫಲವಾಯಿತು. 2.2 ಓವರ್‌ನಲ್ಲೇ 5 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡ ಆಸೀಸ್‌ ಸಂಕಷ್ಟಕ್ಕೀಡಾಯಿತು. ಈ ವೇಳೆ 2ನೇ ವಿಕೆಟ್‌ಗೆ ಡೇವಿಡ್‌ ವಾರ್ನರ್‌ ಮತ್ತು ಸ್ಟೀವ್‌ ಸ್ಮಿತ್‌ (Steve Smith) ಜೋಡಿ, 85 ಎಸೆತಗಳಲ್ಲಿ 69 ರನ್‌ ಹಾಗೂ ಸ್ಟೀವ್‌ ಸ್ಮಿತ್‌ ಮತ್ತು ಮಾರ್ನಸ್‌ ಲಾಬುಶೇನ್‌ ಜೋಡಿ 64 ಎಸೆತಗಳಲ್ಲಿ 36 ರನ್‌ಗಳ ಜೊತೆಯಾಟ ನೀಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿತ್ತು. ಈ ವೇಳೆ ಟೀಂ ಇಂಡಿಯಾ ಸ್ಪಿನ್ನರ್‌ಗಳು ಆಸೀಸ್‌ ಅಗ್ರ ಕ್ರಮಾಂಕದ ಬ್ಯಾಟರ್‌ಗಳನ್ನ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ಆಸೀಸ್‌ 49.3 ಓವರ್‌ಗಳಲ್ಲಿ 199 ರನ್‌ಗಳಿಗೆ ಸರ್ವಪತನ ಕಂಡಿತು.

    ಆಸೀಸ್‌ ಪರ ಡೇವಿಡ್‌ ವಾರ್ನರ್‌ 41 ರನ್‌ (52 ಎಸೆತ, 6 ಬೌಂಡರಿ), ಸ್ಟೀವ್‌ ಸ್ಮಿತ್‌ 46 ರನ್‌ (71 ಎಸೆತ 5 ಬೌಂಡರಿ), ಮಾರ್ನಸ್‌ ಲಾಬುಶೇನ್‌ 27 ರನ್‌, ಗ್ಲೇನ್‌ ಮ್ಯಾಕ್ಸ್‌ವೆಲ್‌ 15 ರನ್‌, ಕ್ಯಾಮರೂನ್‌ ಗ್ರೀನ್‌ 8 ರನ್‌, ಪ್ಯಾಟ್‌ ಕಮ್ಮಿನ್ಸ್‌ (Pat Cummins) 15 ರನ್‌, ಮಿಚೆಲ್‌ ಸ್ಟಾರ್ಕ್‌ 28 ರನ್‌, ಆಡಂ ಝಂಪಾ 6 ರನ್‌, ಜೋಶ್ ಹ್ಯಾಜಲ್‌ವುಡ್‌ 1 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರೆ, ಮಿಚೆಲ್‌ ಮಾರ್ಷ್‌ ಹಾಗೂ ಅಲೆಕ್ಸ್‌ ಕ್ಯಾರಿ ಶೂನ್ಯಕ್ಕೆ ನಿರ್ಗಮಿಸಿದರು. ಇದನ್ನೂ ಓದಿ: Asian Games 2023: ಏಷ್ಯನ್‌ ಗೇಮ್ಸ್‌ನಲ್ಲೂ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಸಾತ್ವಿಕ್‌ಸಾಯಿರಾಜ್, ಚಿರಾಗ್‌ ಜೋಡಿ

    ಜಡೇಜಾ ಸ್ಪಿನ್‌ ಜಾದು: ಟೀಂ ಇಂಡಿಯಾ ಪರ ಬೌಲಿಂಗ್‌ನಲ್ಲಿ ಮೋಡಿ ಮಾಡಿದ ರವೀಂದ್ರ ಜಡೇಜಾ 10 ಓವರ್‌ಗಳಲ್ಲಿ 28 ರನ್‌ ನೀಡಿ 3 ವಿಕೆಟ್‌ ಕಿತ್ತರೆ, ಜಸ್ಪ್ರೀತ್‌ ಬುಮ್ರಾ ಹಾಗೂ ಕುಲ್ದೀಪ್‌ ಯಾದವ್‌ ತಲಾ 2 ವಿಕೆಟ್‌, ಹಾರ್ದಿಕ್‌ ಪಾಂಡ್ಯ, ರವಿಚಂದ್ರನ್‌ ಅಶ್ವಿನ್‌ ಹಾಗೂ ಮೊಹಮ್ಮದ್‌ ಸಿರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶುಕ್ರವಾರದಿಂದ ಭಾರತ-ಆಸೀಸ್‌ ಏಕದಿನ ಸರಣಿ ಆರಂಭ; ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

    ಶುಕ್ರವಾರದಿಂದ ಭಾರತ-ಆಸೀಸ್‌ ಏಕದಿನ ಸರಣಿ ಆರಂಭ; ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

    – ಎರಡು ಪಂದ್ಯಗಳಿಗೆ ಕೆ.ಎಲ್ ರಾಹುಲ್ ನಾಯಕ, ಜಡೇಜಾ ಉಪನಾಯಕ

    ಮುಂಬೈ: 2023ರ ಏಕದಿನ ಏಷ್ಯಾಕಪ್  (Asia Cup 2023) ಮುಡಿಗೇರಿಸಿಕೊಂಡ ಭಾರತ ತಂಡ ಇದೀಗ ವಿಶ್ವಕಪ್‌ಗೂ (WorldCup) ಮುನ್ನ ಆಸ್ಟ್ರೇಲಿಯಾ (Australia) ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕಾದಾಟ ನಡೆಸಲಿದೆ.

    ಸೆಪ್ಟೆಂಬರ್ 22ರಂದು ಮೊದಲ ಪಂದ್ಯ ಮೊಹಾಲಿಯಲ್ಲಿ, ಸೆಪ್ಟೆಂಬರ್ 24ರಂದು 2ನೇ ಪಂದ್ಯ ಇಂದೋರ್‌ನಲ್ಲಿ ಹಾಗೂ ಸೆಪ್ಟೆಂಬರ್ 27ರಂದು ಅಂತಿಮ ಪಂದ್ಯ ರಾಜ್‌ಕೋಟ್‌ನಲ್ಲಿ ನಡೆಯಲಿದೆ. ಪ್ರತಿ ಪಂದ್ಯವು ಮಧ್ಯಾಹ್ನ 1:30 ಗಂಟೆಗೆ ಆರಂಭವಾಗಲಿದೆ. ಇದನ್ನೂ ಓದಿ: ಏಷ್ಯನ್ ಗೇಮ್ಸ್: ಭಾರತ-ಮಲೇಷ್ಯಾ ಪಂದ್ಯ ರದ್ದು, ಕ್ವಾರ್ಟರ್ ಫೈನಲ್‍ಗೆ ಜಿಗಿದ ಟೀಂ ಇಂಡಿಯಾ

    ಈ ಸರಣಿಯ ನಿಮಿತ್ತ ಅಜಿತ್ ಅಗರ್ಕರ್ ಸಾರಥ್ಯದ ಬಿಸಿಸಿಐ (BCCI) ಅಯ್ಕೆ ಸಮಿತಿಯು ಬಲಿಷ್ಠ ತಂಡವನ್ನ ಆಯ್ಕೆ ಮಾಡಿದ್ದು, ಮೊದಲೆರಡು ಪಂದ್ಯಗಳಿಗೆ ಕೆ.ಎಲ್ ರಾಹುಲ್‌ಗೆ (KL Rahul) ನಾಯಕತ್ವ ನೀಡಲಾಗಿದೆ. ರವೀಂದ್ರ ಜಡೇಜಾ ಉಪನಾಯಕನಾಗಿ ಕಣಕ್ಕಿಳಿಯಲಿದ್ದಾರೆ.

    ಅಲ್ಲದೇ ಮೊದಲ ಎರಡು ಪಂದ್ಯಗಳಿಗೆ ಯುವ ಬ್ಯಾಟರ್ ಋತುರಾಜ್ ಗಾಯಕ್ವಾಡ್‌ಗೂ ಅವಕಾಶ ನೀಡಲಾಗಿದೆ. ಜೊತೆಗೆ ಏಕದಿನ ಕ್ರಿಕೆಟ್‌ನಲ್ಲಿ ಸತತ ಫ್ಲಾಪ್ ಪ್ರದರ್ಶನ ಮುಂದುವರಿಸಿರುವ ಸೂರ್ಯಕುಮಾರ್ ಯಾದವ್‌ಗೂ (Suryakumar Yadav) ಅವಕಾಶ ನೀಡಲಾಗಿದೆ. ಆರಂಭಿಕ ಎರಡು ಪಂದ್ಯಗಳಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ತಂಡವನ್ನ ಕೆ.ಎಲ್ ರಾಹುಲ್ ಮುನ್ನಡೆಸಲಿದ್ದಾರೆ.

    ಸೆಪ್ಟಂಬರ್ 22 ರಂದು ಉಭಯ ತಂಡಗಳ ನಡುವಣ ಏಕದಿನ ಸರಣಿ ಆರಂಭವಾಗಲಿದೆ. ಅಕ್ಟೋಬರ್ 5 ರಂದು ಆರಂಭವಾಗುವ 2023ರ ಏಕದಿನ ವಿಶ್ವಕಪ್ ಟೂರ್ನಿಗೆ ತಯಾರಿ ನಡೆಸಲು ಈ ಸರಣಿ ಈ ಎರಡೂ ತಂಡಗಳಿಗೆ ಕೊನೆಯ ಅವಕಾಶವಾಗಿದೆ. ಭಾರತದಲ್ಲಿಯೇ 50 ಓವರ್‌ಗಳ ವಿಶ್ವಕಪ್ ನಡೆಯುವ ಕಾರಣ ಆಸ್ಟ್ರೇಲಿಯಾ ತಂಡಕ್ಕೆ ಈ ಸರಣಿ ಅತ್ಯಂತ ಮಹತ್ವವನ್ನ ಪಡೆದುಕೊಂಡಿದೆ. ಇದನ್ನೂ ಓದಿ: ಏಕದಿನ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ನಂ.1 – ಅಗ್ರಸ್ಥಾನಕ್ಕೇರಲು ಭಾರತಕ್ಕಿದೆಯಾ ಚಾನ್ಸ್‌?

    ಅಯ್ಯರ್, ಅಕ್ಷರ್ ಪಟೇಲ್‌ಗೆ ಸ್ಥಾನ
    ಏಷ್ಯಾ ಕಪ್ ಟೂರ್ನಿಯ ವೇಳೆ ಮತ್ತೆ ಗಾಯಕ್ಕೆ ತುತ್ತಾಗಿದ್ದ ಶ್ರೇಯಸ್ ಅಯ್ಯರ್ ಅವರು ಆಸ್ಟ್ರೇಲಿಯಾ ತವರು ಏಕದಿನ ಸರಣಿಯ ಭಾರತ ತಂಡಕ್ಕೆ ಮರಳಿದ್ದಾರೆ. ಇನ್ನು ಬಾಂಗ್ಲಾದೇಶ ವಿರುದ್ಧ ಏಷ್ಯಾ ಕಪ್ ಸೂಪರ್-4ರ ಕೊನೆಯ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಅಕ್ಷರ್ ಪಟೇಲ್ ಅವರು 3ನೇ ಹಾಗೂ ಅಂತಿಮ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಆದ್ರೆ ಅವರ ಫಿಟ್ ಪರಿಣಾಮದ ಮೇಲೆ ಕಣಕ್ಕಿಳಿಯುವುದು ನಿರ್ಧಾರವಾಗುತ್ತದೆ.

    1 ಮತ್ತು 2ನೇ ಏಕದಿನ ಪಂದ್ಯಕ್ಕೆ ಭಾರತ ತಂಡ:
    ಕೆ.ಎಲ್ ರಾಹುಲ್ (ನಾಯಕ ಹಾಗೂ ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದುಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್.ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ.

    3ನೇ ODIಗೆ ಭಾರತ ತಂಡ:
    ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್‌ದೀಪ್ ಯಾದವ್, ಆರ್. ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

    ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ:
    ಪ್ಯಾಟ್ ಕಮ್ಮಿನ್ಸ್ (ನಾಯಕ), ಶೇನ್ ಅಬಾಟ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಜಾಶ್ ಹೇಝಲ್‌ವುಡ್, ಜಾಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಗ್ಲೇನ್ ಮ್ಯಾಕ್ಸ್ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್ ಹಾಗೂ ಆಡಮ್ ಝಂಪಾ.

    ಏಕದಿನ ಸರಣಿ ಎಲ್ಲಿ – ಯಾವಾಗ?
    1ನೇ ಪಂದ್ಯ: ಸೆ.22, 2023- ಮಧ್ಯಾಹ್ನ: 01:30ಕ್ಕೆ (ಮೊಹಾಲಿ)
    2ನೇ ಪಂದ್ಯ: ಸೆ.24, 2023- ಮಧ್ಯಾಹ್ನ: 01:30ಕ್ಕೆ (ಇಂದೋರ್)
    3ನೇ ಏಕದಿನ ಪಂದ್ಯ: ಸೆ.27- ಮಧ್ಯಾಹ್ನ: 01:30ಕ್ಕೆ (ರಾಜ್‌ಕೋಟ್)

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ – ಕೆ.ಎಲ್‌ ರಾಹುಲ್‌ಗೆ ನಾಯಕತ್ವ, ಸೂರ್ಯನಿಗೂ ಚಾನ್ಸ್‌

    ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ – ಕೆ.ಎಲ್‌ ರಾಹುಲ್‌ಗೆ ನಾಯಕತ್ವ, ಸೂರ್ಯನಿಗೂ ಚಾನ್ಸ್‌

    ಮುಂಬೈ: 2023ರ ಏಕದಿನ ಏಷ್ಯಾಕಪ್‌ (Asia Cup 2023) ಮುಡಿಗೇರಿಸಿಕೊಂಡ ಭಾರತ ತಂಡ ಇದೀಗ ವಿಶ್ವಕಪ್‌ಗೂ (W0rld Cup) ಮುನ್ನ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕಾದಾಟ ನಡೆಸಲಿದೆ.

    ಈ ಸರಣಿಯ ನಿಮಿತ್ತ ಅಜಿತ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ (BCCI) ಅಯ್ಕೆ ಸಮಿತಿಯು ಭಾರತ ತಂಡವನ್ನು ಸೋಮವಾರ ಪ್ರಕಟಿಸಿದೆ. ಹಿರಿಯ ಆಫ್‌ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ಗೆ ಅವಕಾಶ ನೀಡಿದೆ. ವಿಶೇಷವೆಂದರೆ ಇದರಲ್ಲಿ ಮೊದಲೆರಡು ಪಂದ್ಯಗಳಿಗೆ ಕೆ.ಎಲ್‌ ರಾಹುಲ್‌ಗೆ (KL Rahul) ನಾಯಕತ್ವ ನೀಡಲಾಗಿದ್ದು, ರವೀಂದ್ರ ಜಡೇಜಾ (Ravindra Jadeja) ಉಪನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಇದನ್ನೂ ಓದಿ: ಏಕದಿನ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ನಂ.1 – ಅಗ್ರಸ್ಥಾನಕ್ಕೇರಲು ಭಾರತಕ್ಕಿದೆಯಾ ಚಾನ್ಸ್‌?

    ಅಲ್ಲದೇ ಮೊದಲ ಎರಡು ಪಂದ್ಯಗಳಿಗೆ ಯುವ ಬ್ಯಾಟರ್‌ ಋತುರಾಜ್‌ ಗಾಯಕ್ವಾಡ್‌ ಹಾಗೂ ಸೂರ್ಯಕುಮಾರ್‌ ಯಾದವ್‌ಗೂ ಅವಕಾಶ ನೀಡಲಾಗಿದೆ. ಆರಂಭಿಕ ಎರಡು ಪಂದ್ಯಗಳಿಗೆ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಹಾರ್ದಿಕ್‌ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆರಂಭಿಕ ಎರಡು ಪಂದ್ಯಗಳಲ್ಲಿ ತಂಡವನ್ನು ಕೆ.ಎಲ್‌ ರಾಹುಲ್‌ ಮುನ್ನಡೆಸಲಿದ್ದಾರೆ. ಇದನ್ನೂ ಓದಿ: ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು – ಜೈಹೋ ಟೀಂ ಇಂಡಿಯಾ ಎಂದ ಡಿಕೆಶಿ

    ಸೆಪ್ಟಂಬರ್‌ 22 ರಂದು ಉಭಯ ತಂಡಗಳ ನಡುವಣ ಏಕದಿನ ಸರಣಿ ಆರಂಭವಾಗಲಿದೆ. ಅಕ್ಟೋಬರ್ 5 ರಂದು ಆರಂಭವಾಗುವ 2023ರ ಏಕದಿನ ವಿಶ್ವಕಪ್‌ ಟೂರ್ನಿಗೆ ತಯಾರಿ ನಡೆಸಲು ಈ ಸರಣಿ ಈ ಎರಡೂ ತಂಡಗಳಿಗೆ ಕೊನೆಯ ಅವಕಾಶವಾಗಿದೆ. ಭಾರತದಲ್ಲಿಯೇ 50 ಓವರ್‌ಗಳ ವಿಶ್ವಕಪ್‌ ನಡೆಯುವ ಕಾರಣ ಆಸ್ಟ್ರೇಲಿಯಾ ತಂಡಕ್ಕೆ ಈ ಸರಣಿ ಅತ್ಯಂತ ಮಹತ್ವವನ್ನ ಪಡೆದುಕೊಂಡಿದೆ.

    ಅಯ್ಯರ್‌, ಅಕ್ಷರ್‌ ಪಟೇಲ್‌ಗೆ ಸ್ಥಾನ


    ಏಷ್ಯಾ ಕಪ್‌ ಟೂರ್ನಿಯ ವೇಳೆ ಮತ್ತೆ ಗಾಯಕ್ಕೆ ತುತ್ತಾಗಿದ್ದ ಶ್ರೇಯಸ್‌ ಅಯ್ಯರ್‌ ಅವರು ಆಸ್ಟ್ರೇಲಿಯಾ ತವರು ಏಕದಿನ ಸರಣಿಯ ಭಾರತ ತಂಡಕ್ಕೆ ಮರಳಿದ್ದಾರೆ. ಇನ್ನು ಬಾಂಗ್ಲಾದೇಶ ವಿರುದ್ಧ ಏಷ್ಯಾ ಕಪ್‌ ಸೂಪರ್‌-4ರ ಕೊನೆಯ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಅಕ್ಷರ್‌ ಪಟೇಲ್‌ ಅವರು 3ನೇ ಹಾಗೂ ಅಂತಿಮ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಆದ್ರೆ ಅವರ ಫಿಟ್‌ ಪರಿಣಾಮದ ಮೇಲೆ ಕಣಕ್ಕಿಳಿಯುವುದು ನಿರ್ಧಾರವಾಗುತ್ತದೆ.

    1 ಮತ್ತು 2ನೇ ಏಕದಿನ ಪಂದ್ಯಕ್ಕೆ ಭಾರತ ತಂಡ:
    ಕೆ.ಎಲ್ ರಾಹುಲ್ (ನಾಯಕ ಹಾಗೂ ವಿಕೆಟ್‌ ಕೀಪರ್‌), ರವೀಂದ್ರ ಜಡೇಜಾ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದುಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್.ಅಶ್ವಿನ್, ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿಧ್‌ ಕೃಷ್ಣ.

    3ನೇ ಒಡಿಐಗೆ ಭಾರತ ತಂಡ:
    ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್‌ದೀಪ್ ಯಾದವ್, ಆರ್. ಅಶ್ವಿನ್, ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

    ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ:
    ಪ್ಯಾಟ್ ಕಮ್ಮಿನ್ಸ್ (ನಾಯಕ), ಶೇನ್‌ ಅಬಾಟ್, ಅಲೆಕ್ಸ್ ಕ್ಯಾರಿ, ನಾಥನ್‌ ಎಲ್ಲಿಸ್, ಕ್ಯಾಮರೂನ್‌ ಗ್ರೀನ್, ಜಾಶ್ ಹೇಝಲ್‌ವುಡ್, ಜಾಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್‌, ಮಿಚೆಲ್ ಮಾರ್ಷ್, ಗ್ಲೇನ್‌ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್ ಹಾಗೂ ಆಡಮ್ ಝಂಪಾ.

    ಏಕದಿನ ಸರಣಿ ಎಲ್ಲಿ – ಯಾವಾಗ?
    1ನೇ ಪಂದ್ಯ: ಸೆ.22, 2023- ಮಧ್ಯಾಹ್ನ: 01:30ಕ್ಕೆ (ಮೊಹಾಲಿ)
    2ನೇ ಪಂದ್ಯ: ಸೆ.24, 2023- ಮಧ್ಯಾಹ್ನ: 01:30ಕ್ಕೆ (ಇಂದೋರ್‌)
    3ನೇ ಏಕದಿನ ಪಂದ್ಯ: ಸೆ.27- ಮಧ್ಯಾಹ್ನ: 01:30ಕ್ಕೆ (ರಾಜ್‌ಕೋಟ್‌)

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • WTC Final: ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರವೀಂದ್ರ ಜಡೇಜಾ

    WTC Final: ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರವೀಂದ್ರ ಜಡೇಜಾ

    ಲಂಡನ್‌: ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ (WTC Final) ಪಂದ್ಯದ 4ನೇ ದಿನದಾಟ ಆರಂಭಗೊಂಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 469 ರನ್‌ ಗಳಿಸಿದ್ದ ಆಸ್ಟ್ರೇಲಿಯಾ (Australia) 2ನೇ ಇನ್ನಿಂಗ್ಸ್‌ನಲ್ಲಿ ಭಾರತದ ಬೌಲರ್‌ಗಳ ದಾಳಿಗೆ ತುತ್ತಾದರೂ, 370ಕ್ಕೂ ಅಧಿಕ ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಪ್ರಮುಖ ಬ್ಯಾಟರ್‌ಗಳ ವಿಕೆಟ್‌ ಪಡೆದ ಟೀಂ ಇಂಡಿಯಾ (Team India) ಸ್ಪಿನ್ನರ್‌ ರವೀಂದ್ರ ಜಡೇಜಾ (Ravindra Jadeja) ಹೊಸ ದಾಖಲೆಯೊಂದನ್ನ ಹೆಗಲಿಗೇರಿಸಿಕೊಂಡಿದ್ದಾರೆ.

    65 ಟೆಸ್ಟ್‌ ಪಂದ್ಯವನ್ನಾಡಿರುವ ಜಡೇಜಾ 24.25 ಸರಾಸರಿ ಹಾಗೂ 2.44ರ ಎಕಾನಮಿ ರೇಟ್‌ನಲ್ಲಿ 268 ವಿಕೆಟ್‌ ಪಡೆಯುವ ಮೂಲಕ ಬಿಶನ್ ಸಿಂಗ್ ಬೇಡಿ (Bishan Singh Bedi) ಅವರ ದಾಖಲೆಯನ್ನ ಮುರಿದಿದ್ದಾರೆ. ಬಿಶನ್‌ ಸಿಂಗ್‌ 67 ಪಂದ್ಯಗಳಲ್ಲಿ 266 ವಿಕೆಟ್‌ ಪಡೆಯುವ ಮೂಲಕ ಸಾಧನೆ ಮಾಡಿದ್ದರು. ಆದ್ರೆ ಜಡೇಜಾ 65 ಪಂದ್ಯಗಳಲ್ಲೇ ಈ ಸಾಧನೆ ಮಾಡಿರುವುದು ವಿಶೇಷ. ಜೊತೆಗೆ ಟೆಸ್ಟ್‌ ಕ್ರಿಕೆಟ್‌ನಲ್ಲಿ 4ನೇ ಯಶಸ್ವಿ ಎಡಗೈ ಸ್ಪಿನ್ನರ್‌ ಎನಿಸಿಕೊಂಡಿದ್ದಾರೆ.

    ಶ್ರೀಲಂಕಾದ ರಂಗನಾ ಹೆರಾತ್ 93 ಪಂದ್ಯಗಳಲ್ಲಿ 433 ವಿಕೆಟ್‌, ಡೇನಿಯಲ್ ವೆಟ್ಟೋರಿ 113 ಪಂದ್ಯಗಳಲ್ಲಿ 362 ವಿಕೆಟ್‌ ಮತ್ತು ಇಂಗ್ಲೆಂಡ್‌ನ ಡೆರೆಕ್ ಅಂಡರ್‌ವುಡ್ 86 ಪಂದ್ಯಗಳಲ್ಲಿ 297 ವಿಕೆಟ್ ಪಡೆದಿದ್ದರೆ ಜಡೇಜಾ 65 ಪಂದ್ಯಗಳಲ್ಲಿ 268 ವಿಕೆಟ್‌ ಪಡೆದು 4ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: WTC Final: 3ನೇ ದಿನದಲ್ಲಿ ಜಡೇಜಾ ಜಾದು – ಆಸ್ಟ್ರೇಲಿಯಾಕ್ಕೆ 296 ರನ್‌ಗಳ ಮುನ್ನಡೆ

    ಆಸ್ಟ್ರೇಲಿಯಾ ವಿರುದ್ಧದ ವಿಶ್ವಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಏಕದಿನ ಕ್ರಿಕೆಟ್‌ ಶೈಲಿಯಲ್ಲಿ ಬ್ಯಾಟಿಂಗ್‌ ಮಾಡಿ 48 ರನ್‌ (51 ಎಸೆತ, 7 ಬೌಂಡರಿ, 1 ಸಿಕ್ಸ್‌) ಗಳಿಸಿದ್ದಾರೆ. ಅಲ್ಲದೇ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ ಒಂದು ವಿಕೆಟ್‌ ಪಡೆದಿದ್ದ ಜಡೇಜಾ 2ನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಟಾಪ್‌ ಬ್ಯಾಟರ್ಸ್‌ಗಳನ್ನ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

    ಸ್ಟೀವ್‌ ಸ್ಮಿತ್‌ (34 ರನ್‌), ಟ್ರಾವಿಸ್‌ ಹೆಡ್‌ (18 ರನ್‌) ಹಾಗೂ ಕ್ಯಾಮರೂನ್‌ ಗ್ರೀನ್‌ (25 ರನ್‌) ವಿಕೆಟ್‌ ಕಬಳಿಸುವ ಮೂಲಕ ಜಡೇಜಾ ಹೊಸ ದಾಖಲೆ ಮಾಡಿದ್ದಾರೆ. ಇದನ್ನೂ ಓದಿ: ಮೊಬೈಲ್ ಆ್ಯಪ್ ಬಳಕೆದಾರರಿಗೆ ಗುಡ್‌ನ್ಯೂಸ್ ಕೊಟ್ಟ Hotstar – ವಿಶ್ವಕಪ್, ಏಷ್ಯಾಕಪ್ ಟೂರ್ನಿ ವೀಕ್ಷಣೆ ಫ್ರೀ 

  • ಕೊನೆಯಲ್ಲಿ ಜಡೇಜಾ ಸಿಕ್ಸರ್‌, ಬೌಂಡರಿ – ಆ ರಾತ್ರಿ ನನಗೆ ನಿದ್ರೆಯೇ ಬರಲಿಲ್ಲ: ಮೋಹಿತ್‌ ಶರ್ಮಾ

    ಕೊನೆಯಲ್ಲಿ ಜಡೇಜಾ ಸಿಕ್ಸರ್‌, ಬೌಂಡರಿ – ಆ ರಾತ್ರಿ ನನಗೆ ನಿದ್ರೆಯೇ ಬರಲಿಲ್ಲ: ಮೋಹಿತ್‌ ಶರ್ಮಾ

    ಅಹಮದಾಬಾದ್‌: 16ನೇ ಆವೃತ್ತಿಯ ಐಪಿಎಲ್‌ (IPL 2023) ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಚೆನ್ನೈ ಸೂಪರ್‌ ಕಿಂಗ್ಸ್‌ (CSK) 5ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಚೊಚ್ಚಲ ಆವೃತ್ತಿಯಲ್ಲಿ ಚಾಂಪಿಯನ್‌ ಆಗಿದ್ದ ಗುಜರಾತ್‌ ಟೈಟಾನ್ಸ್‌ (GT) 2ನೇ ಆವೃತ್ತಿಯಲ್ಲಿ ರನ್ನರ್‌ ಅಪ್‌ ಪ್ರಶಸ್ತಿ ಪಡೆದುಕೊಂಡಿದೆ. ಐಪಿಎಲ್‌ ಮುಗಿದು 3 ದಿನ ಕಳೆದರೂ ಕೊನೇ ಕ್ಷಣದಲ್ಲಿ ತಂಡದಲ್ಲಿ ಆದ ಕೆಲವೊಂದು ಬದಲಾವಣೆಗಳು ಇನ್ನೂ ಚರ್ಚೆಯಲ್ಲಿವೆ. ದಿನಕ್ಕೊಂದು ಹೊಸ ಹೇಳಿಕೆಗಳು ಕೇಳಿಬರುತ್ತಿವೆ.

    ಹೌದು.. ಮಳೆಕಾಟದಿಂದಾಗಿ ಡಕ್ವರ್ತ್‌ ಲೂಯಿಸ್‌ (DSL) ನಿಯಮದನ್ವಯ ಸಿಎಸ್‌ಕೆ ಫೈನಲ್‌ ಪಂದ್ಯದಲ್ಲಿ ಟೈಟಾನ್ಸ್‌ ವಿರುದ್ಧ 15 ಓವರ್‌ಗಳಲ್ಲಿ 171 ರನ್‌ ಟಾರ್ಗೆಟ್‌ ಪಡೆಯಿತು. ಕೊನೆಯ ಓವರ್‌ನಲ್ಲಿ ಚೆನ್ನೈ ಗೆಲುವಿಗೆ 13 ರನ್‌ಗಳ ಅಗತ್ಯವಿತ್ತು. ಬೌಲಿಂಗ್‌ನಲ್ಲಿದ್ದ ಮೋಹಿತ್‌ ಶರ್ಮಾ ಮೊದಲ 4 ಎಸೆತಗಳಲ್ಲಿ ಕೇವಲ 3 ರನ್‌ ನೀಡಿದ್ದರು. ಆದ್ರೆ ಕೊನೆಯ 2 ಎಸೆತಗಳಲ್ಲಿ ರವೀಂದ್ರ ಜಡೇಜಾ ಅವರಿಂದ ಸಿಕ್ಸರ್‌, ಬೌಂಡರಿ ಚಚ್ಚಿಸಿಕೊಂಡರು. ಇದರಿಂದಾಗಿ ಗುಜರಾತ್‌ ಟೈಟಾನ್ಸ್‌ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

    ಸಿಎಸ್‌ಕೆ ವಿರುದ್ಧ ಫೈನಲ್​​​​ ಓವರ್​​ನಲ್ಲಿ ತಾನು ಹಾಕಿಕೊಂಡಿದ್ದ ಗೇಮ್​ ಪ್ಲ್ಯಾನ್‌ ಬಗ್ಗೆ ಗುಜರಾತ್‌ ಟೈಟಾನ್ಸ್‌ ಆಟಗಾರ ಮೋಹಿತ್‌ ಶರ್ಮಾ ಮಾತನಾಡಿದ್ದು, ಆ ದಿನ ಇಡೀ ರಾತ್ರಿ ನಾನು ಏನ್‌ ಮಾಡ್ಬೇಕು ಅಂತಾ ಯೋಚಿಸುತ್ತಲೇ ಇದ್ದೆ, ನಿದ್ರೆ ಮಾಡೋಕೆ ಆಗ್ತಿಲ್ಲಾ ಅಂತಾ ಹೇಳಿದ್ದಾರೆ. ಇದನ್ನೂ ಓದಿ: IPL Champions 2023: ಕೊನೆಯಲ್ಲಿ ಜಡೇಜಾ ಜಾದು, 5ನೇ ಬಾರಿಗೆ ಚೆನ್ನೈಗೆ ಚಾಂಪಿಯನ್‌ ಕಿರೀಟ

    ಅಂತಿಮ ಓವರ್​ನಲ್ಲಿ ಏನು ಮಾಡಬೇಕು ಎಂಬುದರ ಬಗ್ಗೆ ನನಗೆ ಗೊಂದಲ ಇರಲಿಲ್ಲ. ನೆಟ್ಸ್​​​ನಲ್ಲೂ ಲೆಕ್ಕಾಚಾರ ಹಾಕಿಕೊಂಡು ಅಭ್ಯಾಸ ಮಾಡಿದ್ದೆ. ಈ ಹಿಂದೆಯೂ ಇಂತಹ ಒತ್ತಡಗಳಲ್ಲಿ ಬೌಲಿಂಗ್​ ಮಾಡಿದ ಅನುಭವ ನನಗಿತ್ತು. ನಾಯಕ ಹಾರ್ದಿಕ್​ ಪಾಂಡ್ಯಗೆ ಓವರ್​​​ನ ಎಲ್ಲಾ ಬಾಲ್​​ಗಳನ್ನೂ ಯಾರ್ಕರ್ ಹಾಕುತ್ತೇನೆ ಎಂದು ಹೇಳಿದ್ದೆ. ನನ್ನ ಬಲವಾದ ನಂಬಿಕೆಯಿಂದ ಬೌಲಿಂಗ್‌ ಮಾಡಿದ್ದೆ. ಆದರೂ ನನ್ನಿಂದ ಸೋಲಾಗಿದ್ದು, ಬೇಸರ ಉಂಟು ಮಾಡಿತು ಎಂದು ಹೇಳಿದ್ದಾರೆ.

    ಸೋತ ನಂತರ ನನಗೆ ಆ ರಾತ್ರಿ ನಿದ್ದೆ ಬರಲಿಲ್ಲ. ಸೋತಿದ್ದನ್ನೇ ಹೆಚ್ಚು ಯೋಚಿಸುತ್ತಿದ್ದೆ. ಕೊನೆಯಲ್ಲಿ ಆ ಎಸೆತ ಎಸೆದಿದ್ದರೆ ನಾವು ಗೆಲ್ಲುತ್ತಿದ್ದೆವಾ? ಹೀಗೆ ಮಾಡಿದ್ದರೆ, ಗೆಲ್ಲುತ್ತಿದ್ದೆವಾ? ಎಂಬುದನ್ನೇ ಹೆಚ್ಚು ಯೋಚಿಸುತ್ತಿದ್ದೆ. ಇದು ನಿಜವಾಗಿಯೂ ಒಳ್ಳೆಯ ಭಾವನೆ ಅಲ್ಲ. ಆದ್ರೆ ಎಲ್ಲೋ ಒಂದು ಕಡೆ ನನ್ನಿಂದಲೇ ಸೋತಿದ್ದು, ಎನಿಸುತ್ತಿದೆ. ಸದ್ಯ ಅದರಿಂದ ಹೊರ ಬರಲು ಪ್ರಯತ್ನಿಸುತ್ತಿದ್ದೇನೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: Record… Record… Record: ಫೈನಲ್‌ ಮ್ಯಾಚ್‌ನಲ್ಲಿ ಎಲ್ಲಾ ದಾಖಲೆ ಉಡೀಸ್‌ – ಜಿಯೋಸಿನಿಮಾದಲ್ಲಿ ಏಕಕಾಲಕ್ಕೆ 3.2 ಕೋಟಿ ಜನ ವೀಕ್ಷಣೆ

    ಐಪಿಎಲ್​​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಮೋಹಿತ್​ ಶರ್ಮಾ ಪರ್ಪಲ್​ ಕ್ಯಾಪ್​ ರೇಸ್​ನಲ್ಲಿದ್ದರು. 14 ಪಂದ್ಯಗಳಲ್ಲಿ 27 ವಿಕೆಟ್​ ಪಡೆದಿದ್ದರು. ಇದರೊಂದಿಗೆ 1 ವಿಕೆಟ್​ ಅಂತರದಿಂದ ಪರ್ಪಲ್​ ಕ್ಯಾಪ್​ನಿಂದ ವಂಚಿತರಾದರು. ಫೈನಲ್​ ಪಂದ್ಯದಲ್ಲೂ ಪ್ರಮುಖ 3 ವಿಕೆಟ್​ ಉರುಳಿಸಿ ಗಮನ ಸೆಳೆದಿದ್ದರು.

  • ಬಿಜೆಪಿ Vs ಡಿಎಂಕೆ – ಬಿಜೆಪಿ ಕಾರ್ಯಕರ್ತ ಜಡೇಜಾ ಆಟದಿಂದ ಚೆನ್ನೈಗೆ ಜಯ ಎಂದ ಅಣ್ಣಾಮಲೈ

    ಬಿಜೆಪಿ Vs ಡಿಎಂಕೆ – ಬಿಜೆಪಿ ಕಾರ್ಯಕರ್ತ ಜಡೇಜಾ ಆಟದಿಂದ ಚೆನ್ನೈಗೆ ಜಯ ಎಂದ ಅಣ್ಣಾಮಲೈ

    ಚೆನ್ನೈ: ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ಗೆದ್ದು ಐಪಿಎಲ್‌ ಚಾಂಪಿಯನ್‌ (IPL Champion) ಪಟ್ಟ ಅಲಂಕರಿಸಿದ ಬೆನ್ನಲ್ಲೇ ಈಗ ತಮಿಳುನಾಡು (Tamil Nadu) ರಾಜಕೀಯ ನಾಯಕರು ಇದರಲ್ಲೂ ರಾಜಕೀಯ ಮಾಡಿದ್ದಾರೆ.

    ಸಿಎಸ್‌ಕೆ ಜಯಗಳಿಸಿದ ಬೆನ್ನಲ್ಲೇ ಡಿಎಂಕೆ “ಗುಜರಾತ್ ಮಾದರಿಯ ಮೇಲೆ ದ್ರಾವಿಡ ಮಾದರಿಯ ವಿಜಯ” ಎಂದು ಡಿಎಂಕೆ (DMK) ಸಂದೇಶ ಪ್ರಕಟಿಸಿದೆ. ಇದನ್ನೂ ಓದಿ: IPLನಲ್ಲಿ ದುಡ್ಡೋ ದುಡ್ಡು; ಚಾಂಪಿಯನ್ಸ್‌ ತಂಡಕ್ಕೆ 20 ಕೋಟಿ, ಲಕ್ಷ ಲಕ್ಷ ಬಾಚಿಕೊಂಡ ಗಿಲ್‌ – ಯಾರಿಗೆ ಎಷ್ಟೆಷ್ಟು ಲಕ್ಷ?

    ಈ ಸಂದೇಶಕ್ಕೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ (K Annamalai), ಜಡೇಜಾ ಬಿಜೆಪಿ ಕಾರ್ಯಕರ್ತ ಮತ್ತು ಅವರು ಗುಜರಾತ್ ಮೂಲದವರು. ಅವರ ಪತ್ನಿ ಬಿಜೆಪಿ ಶಾಸಕಿ. ತಮಿಳಿಗನಾಗಿ ನನಗೂ ಹೆಮ್ಮೆ ಇದೆ. ಸಿಎಸ್‌ಕೆಗಿಂತ ಜಿಟಿಯಲ್ಲಿ ಹೆಚ್ಚು ತಮಿಳು ಆಟಗಾರರಿದ್ದರು ಎಂದು ಹೇಳಿದ್ದಾರೆ.

    ರವೀಂದ್ರ ಜಡೇಜಾ (Ravindra Jadeja) ಎಲ್ಲಿಯೂ ಬಿಜೆಪಿಗೆ ಬಹಿರಂಗವಾಗಿಯೇ ಬೆಂಬಲ ಸೂಚಿಸಿಲ್ಲ. ಆದರೆ ಅವರ ಪತ್ನಿ 2019ರಲ್ಲಿ ಬಿಜೆಪಿ ಸೇರ್ಪಡೆಯಾಗಿ 2022ರ ಚುನಾವಣೆಯಲ್ಲಿ ಜಾಮ್‌ನಗರ ಕ್ಷೇತ್ರದಿಂದ ಸ್ಪರ್ಧಿಸಿ 80 ಸಾವಿರ ಮತಗಳಿಂದ ಜಯಗಳಿಸಿದ್ದರು.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ್ದ ಗುಜರಾತ್‌ 4 ವಿಕೆಟ್‌ ನಷ್ಟಕ್ಕೆ 214 ರನ್‌ ಗಳಿಸಿತ್ತು. ಚೆನ್ನೈ ಬ್ಯಾಟಿಂಗ್‌ ವೇಳೆ ಭಾರೀ ಮಳೆ ಸುರಿದ ಪರಿಣಾಮ ಚೆನ್ನೈಗೆ ಗೆಲುವಿಗೆ 15 ಓವರ್‌ಗಳಲ್ಲಿ 171 ರನ್‌ಗಳ ಟಾರ್ಗೆಟ್‌ ನೀಡಲಾಗಿತ್ತು.

    ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ 15 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ ಗುರಿಯನ್ನು ತಲುಪಿತು. ಕೊನೆಯ ಎರಡು ಎಸೆತಗಳಲ್ಲಿ 10 ರನ್‌ ಬೇಕಿತ್ತು. ಮೋಹಿತ್‌ ಶರ್ಮಾ ಎಸೆದ 15ನೇ ಓವರಿನ 5ನೇ ಎಸೆತದಲ್ಲಿ ಜಡೇಜಾ ಸಿಕ್ಸ್‌ ಸಿಡಿಸಿದರೆ ಕೊನೆಯ ಎಸೆತವನ್ನು ಬೌಂಡರಿಗೆ ಅಟ್ಟುವ ಮೂಲಕ ಚೆನ್ನೈ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.

  • IPLನಲ್ಲಿ ದುಡ್ಡೋ ದುಡ್ಡು; ಚಾಂಪಿಯನ್ಸ್‌ ತಂಡಕ್ಕೆ 20 ಕೋಟಿ, ಲಕ್ಷ ಲಕ್ಷ ಬಾಚಿಕೊಂಡ ಗಿಲ್‌ – ಯಾರಿಗೆ ಎಷ್ಟೆಷ್ಟು ಲಕ್ಷ?

    IPLನಲ್ಲಿ ದುಡ್ಡೋ ದುಡ್ಡು; ಚಾಂಪಿಯನ್ಸ್‌ ತಂಡಕ್ಕೆ 20 ಕೋಟಿ, ಲಕ್ಷ ಲಕ್ಷ ಬಾಚಿಕೊಂಡ ಗಿಲ್‌ – ಯಾರಿಗೆ ಎಷ್ಟೆಷ್ಟು ಲಕ್ಷ?

    ಅಹಮದಾಬಾದ್‌: 16ನೇ ಐಪಿಎಲ್‌ ಆವೃತ್ತಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈ ಐಪಿಎಲ್‌ (IPL) ಆವೃತ್ತಿಯಲ್ಲಿ ಉದಯೋನ್ಮುಖ ಪ್ರತಿಭೆಗಳು ಬೆಳಕಿಗೆ ಬಂದಿದ್ದಾರೆ. ಆಟಗಾರರ ಅತ್ಯದ್ಭುತ ಪ್ರದರ್ಶನದಿಂದ ಅತಿಹೆಚ್ಚು ಬಾರಿ 200ಕ್ಕೂ ಹೆಚ್ಚು ರನ್‌ ದಾಖಲಾಗಿದೆ. ಅದಕ್ಕಾಗಿ ಲಕ್ಷ ಲಕ್ಷ ಹಣವನ್ನ ಬಾಚಿಕೊಂಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

    ಈ ಬಾರಿ ಐಪಿಎಲ್‌ ಆವೃತ್ತಿಯಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ (LSG) ತಂಡ 257 ರನ್‌ ಗಳಿಸಿದ್ದು ಈ ಬಾರಿ ಅತಿಹೆಚ್ಚಿನ ರನ್‌ ಹಾಗೂ ಐಪಿಎಲ್‌ ಇತಿಹಾಸದಲ್ಲೇ 2ನೇ ದೊಡ್ಡಮೊತ್ತ ಎನಿಸಿಕೊಂಡರೆ ಈ ಸೀಸನ್‌ನಲ್ಲಿ ಆರ್‌ಸಿಬಿ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ (RR) 59 ರನ್‌ಗಳಿಗೆ ಆಲೌಟ್‌ ಆಗಿದ್ದು, ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪಂದ್ಯವಾಗಿತ್ತು.

    2023ರ ಐಪಿಎಲ್‌ ಪ್ರಶಸ್ತಿ ವಿಜೇತರ ಪಟ್ಟಿ:

    ಚಾಂಪಿಯನ್ಸ್‌: ಸಿಎಸ್‌ಕೆ-20 ಕೋಟಿ ರೂ.
    ರನ್ನರ್‌ ಅಪ್: ಗುಜರಾತ್ ಟೈಟಾನ್ಸ್-12.5 ಕೋಟಿ ರೂ.

    ಆರೆಂಜ್ ಕ್ಯಾಪ್: ಶುಭಮನ್ ಗಿಲ್- 890 ರನ್ -10 ಲಕ್ಷ ರೂ.
    ಪರ್ಪಲ್ ಕ್ಯಾಪ್: ಮೊಹಮ್ಮದ್ ಶಮಿ- 28 ವಿಕೆಟ್- 10 ಲಕ್ಷ ರೂ.

    ಸೀಸನ್‌ನ ಉದಯೋನ್ಮುಖ ಆಟಗಾರ: ಯಶಸ್ವಿ ಜೈಸ್ವಾಲ್- ಆರ್‌ಆರ್-10 ಲಕ್ಷ ರೂ.
    ಸೂಪರ್ ಸ್ಟ್ರೆಕರ್- ಗ್ಲೆನ್ ಮ್ಯಾಕ್ಸ್‌ವೆಲ್: ಆರ್‌ಸಿಬಿ-183.48 ಸ್ಟ್ರೈಕ್‌ರೇಟ್‌ -10 ಲಕ್ಷ ರೂ.

    ಮೋಸ್ಟ್‌ ವ್ಯಾಲ್ಯುಯೆಬಲ್ ಪ್ಲೇಯರ್‌: ಶುಭಮನ್ ಗಿಲ್ – 10 ಲಕ್ಷ ರೂ.
    ಗೇಮ್ ಚೇಂಜರ್- ಶುಭಮನ್ ಗಿಲ್- 10 ಲಕ್ಷ ರೂ.

    ಅತಿ ಹೆಚ್ಚು ಬೌಂಡರಿ: ಶುಭಮನ್ ಗಿಲ್- 85- 10 ಲಕ್ಷ ರೂ.
    ಅತಿ ಉದ್ದದ ಸಿಕ್ಸರ್- ಫಾಫ್ ಡು ಪ್ಲೆಸಿಸ್: ಆರ್‌ಸಿಬಿ- 115 ಮೀಟರ್-10 ಲಕ್ಷ ರೂ.
    ಸೀಸನ್‌ನ ಅದ್ಭುತ ಕ್ಯಾಚ್: ರಶೀದ್ ಖಾನ್- ಗುಜರಾತ್ ಟೈಟಾನ್ಸ್- 10 ಲಕ್ಷ ರೂ.
    ಮನರಂಜಿಸಿದ ತಂಡ- ಡೆಲ್ಲಿ ಕ್ಯಾಪಿಟಲ್ಸ್

    ಫೈನಲ್ ಪಂದ್ಯದ ಪ್ರಶಸ್ತಿಗಳ ವಿವರ:

    ಸೂಪರ್‌ ಸ್ಟ್ರೆಕರ್: ಅಜಿಂಕ್ಯ ರಹಾನೆ- 1 ಲಕ್ಷ ರೂ.
    ಗೇಮ್ ಚೇಂಜರ್: ಸಾಯಿ ಸುದರ್ಶನ್- 1 ಲಕ್ಷ ರೂ.
    ವ್ಯಾಲ್ಯುಯೆಬಲ್ ಪ್ಲೇಯರ್‌: ಸಾಯಿ ಸುದರ್ಶನ್- 1 ಲಕ್ಷ ರೂ.

    ಅತಿ ಉದ್ದದ ಸಿಕ್ಸರ್: ಸಾಯಿ ಸುದರ್ಶನ್- 1 ಲಕ್ಷ ರೂ.
    ಅದ್ಭುತ ಕ್ಯಾಚ್: ಎಂ.ಎಸ್ ಧೋನಿ- 1 ಲಕ್ಷ ರೂ.
    ಪಂದ್ಯ ಶ್ರೇಷ್ಠ: ಡೆವೋನ್ ಕಾನ್ವೇ – 1 ಲಕ್ಷ ರೂ

  • Record… Record… Record: ಫೈನಲ್‌ ಮ್ಯಾಚ್‌ನಲ್ಲಿ ಎಲ್ಲಾ ದಾಖಲೆ ಉಡೀಸ್‌ – ಜಿಯೋಸಿನಿಮಾದಲ್ಲಿ ಏಕಕಾಲಕ್ಕೆ 3.2 ಕೋಟಿ ಜನ ವೀಕ್ಷಣೆ

    Record… Record… Record: ಫೈನಲ್‌ ಮ್ಯಾಚ್‌ನಲ್ಲಿ ಎಲ್ಲಾ ದಾಖಲೆ ಉಡೀಸ್‌ – ಜಿಯೋಸಿನಿಮಾದಲ್ಲಿ ಏಕಕಾಲಕ್ಕೆ 3.2 ಕೋಟಿ ಜನ ವೀಕ್ಷಣೆ

    ಮುಂಬೈ: ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಟಾಟಾ ಐಪಿಎಲ್ 2023ರ ಫೈನಲ್‌ ಪಂದ್ಯ ಜಿಯೋಸಿನಿಮಾದಲ್ಲಿ‌ ಏಕಕಾಲಕ್ಕೆ 3.2 ಕೋಟಿ ಜನರಿಂದ ವೀಕ್ಷಣೆ ಕಂಡಿದ್ದು, ಹಿಂದಿನ ಎಲ್ಲಾ ದಾಖಲೆಗಳನ್ನ ಪುಡಿಪುಡಿ ಮಾಡಿದೆ.

    ಸೋಮವಾರ ನರೇಂದ್ರಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್‌ ಟೈಟಾನ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಪಂದ್ಯವು ರೋಚಕತೆಯಿಂದ ಕೂಡಿತ್ತು. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಗುಜರಾತ್‌ ಟೈಟಾನ್ಸ್‌ ಭರ್ಜರಿ ಪ್ರದರ್ಶನ ನೀಡಿತು. ಸಾಯಿ ಸುದರ್ಶನ್‌ 18.3ನೇ ಓವರ್‌ನಲ್ಲಿ ಬ್ಯಾಟಿಂಗ್‌ ಮಾಡುತ್ತಿದ್ದ ವೇಳೆ ಪಂದ್ಯದ ವೀಕ್ಷಕರ ಸಂಖ್ಯೆ 3 ಕೋಟಿಗೆ ತಲುಪಿತ್ತು. 19.1ನೇ ಓವರ್‌ನಲ್ಲಿದ್ದಾಗ 3.1 ಕೋಟಿ ಇದ್ದ ವೀಕ್ಷಕರ ಸಂಖ್ಯೆ ಕೊನೆಯ 3 ಎಸೆತಗಳು ಬಾಕಿಯಿರುವಂತೆ 3.2 ಕೋಟಿಗೆ ತಲುಪಿತ್ತು. ಇದು ಈ ಹಿಂದಿನ ಎಲ್ಲ ದಾಖಲೆಗಳನ್ನ ಉಡೀಸ್‌ ಮಾಡಿದೆ.

    ಜಿಯೋಸಿನಿಮಾ ಹಾಲಿ ಐಪಿಎಲ್ ಆವೃತ್ತಿಯಲ್ಲಿ ಸತತ 4ನೇ ಬಾರಿಗೆ ತನ್ನದೇ ವೀಕ್ಷಕರ ದಾಖಲೆಯನ್ನ ಮುರಿದಿದೆ. ಜೊತೆಗೆ 2019ರ ಐಸಿಸಿ ಏಕದಿನ ವಿಶ್ವಕಪ್ ವೇಳೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ವೇಳೆ ನಿರ್ಮಿಸಲ್ಪಟ್ಟಿದ್ದ ವಿಶ್ವದಾಖಲೆಗಳೆಲ್ಲವನ್ನೂ ನುಚ್ಚುನೂರು ಮಾಡಿದೆ. 2013ರ ವಿಶ್ವಕಪ್‌ ಪಂದ್ಯವನ್ನು 2.53 ಕೋಟಿ ಮಂದಿ ವೀಕ್ಷಣೆ ಮಾಡಿದ್ದರು. ಇದನ್ನೂ ಓದಿ: IPL Champions 2023: ಕೊನೆಯಲ್ಲಿ ಜಡೇಜಾ ಜಾದು, 5ನೇ ಬಾರಿಗೆ ಚೆನ್ನೈಗೆ ಚಾಂಪಿಯನ್‌ ಕಿರೀಟ

    ಏಪ್ರಿಲ್ 17ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಪಂದ್ಯದ ವೇಳೆ ಎಂ.ಎಸ್ ಧೋನಿ ಅವರ ಆಟ ವೀಕ್ಷಿಸಲು 2.4 ಕೋಟಿ ವೀಕ್ಷಕರು ಜಿಯೋಸಿನಿಮಾದಲ್ಲಿ ಒಟ್ಟಾಗಿ ಸೇರಿದ್ದು ಹಿಂದಿನ ದಾಖಲೆ ಎನಿಸಿತ್ತು. ಅದಕ್ಕೂ ಮುನ್ನ ಏಪ್ರಿಲ್ 12ರಂದು ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ಗತವೈಭವ ನೆನಪಿಸುವಂಥ ಬ್ಯಾಟಿಂಗ್ ಪ್ರದರ್ಶಿಸಿದಾಗ ಗರಿಷ್ಠ 2.2 ಕೋಟಿ ವೀಕ್ಷಕರ ದಾಖಲೆ ಕಂಡಿತ್ತು. ಇದನ್ನೂ ಓದಿ: IPL 2023 Finals: ಜೋರಾಯ್ತು ಮ್ಯಾಚ್‌ ಫಿಕ್ಸಿಂಗ್‌ ಸದ್ದು, ಪಂದ್ಯ ಆರಂಭಕ್ಕೂ ಮುನ್ನವೇ ರಿಸಲ್ಟ್ – CSK ರನ್ನರ್ ಅಪ್?

    ಟಾಟಾ ಐಪಿಎಲ್ 2023ರ ಪಂದ್ಯಗಳನ್ನು ವೀಕ್ಷಿಸಲು ಜಿಯೋಸಿನಿಮಾ, ಕ್ರಿಕೆಟ್ ಅಭಿಮಾನಿಗಳ ಪ್ರಮುಖ ಆದ್ಯತೆ ಆಗಿದೆ ಎಂಬುದಕ್ಕೆ ಈ ದಾಖಲೆಗಳು ಸಾಕ್ಷಿಯಾಗಿವೆ. ರೋಚಕ ಪಂದ್ಯಗಳನ್ನು ವೀಕ್ಷಿಸುವ ವೇಳೆ ಜಿಯೋಸಿನಿಮಾದಲ್ಲಿ ಅಭಿಮಾನಿ ಕೇಂದ್ರಿತವಾದ ಹಲವಾರು ಕೊಡುಗೆಗಳನ್ನು ನೀಡಲಾಗುತ್ತಿತ್ತು. ಉದಾಹರಣೆಗೆ ಎಲ್ಲಾ ನೆಟ್ವರ್ಕ್ ಚಂದಾದಾರರಿಗೆ ಉಚಿತ ಸ್ಟ್ರೀಮಿಂಗ್ ನೀಡಲಾಗಿತ್ತು. 4K ಸ್ಟ್ರೀಮಿಂಗ್ ಜೊತೆಗೆ 12 ಭಾಷೆಗಳಲ್ಲಿ ವೀಕ್ಷಕ ವಿವರಣೆ ನೀಡಲಾಗುತ್ತಿದೆ. ಜೀತೋ ಧನ್ ಧನಾ ಧನ್ ಸ್ಪರ್ಧೆಯ ಮೂಲಕ ಪ್ರತೀ ಪಂದ್ಯದ ವೀಕ್ಷಣೆಯ ವೇಳೆ ಕಾರು ಗೆಲ್ಲುವ ಜೊತೆ ಅತ್ಯಾಕರ್ಷಕ ಬಹುಮಾನಗಳನ್ನೂ ವಿತರಿಸಲಾಗುತ್ತಿತ್ತು.

    ಟಾಟಾ ಐಪಿಎಲ್ 2023ರ ಡಿಜಿಟಲ್ ಸ್ಟ್ರೀಮಿಂಗ್‌ಗಾಗಿ ಜಿಯೋಸಿನಿಮಾ 26 ಅಗ್ರ ಬ್ರ್ಯಾಂಡ್‌ಗಳ ಜೊತೆ ಒಪ್ಪಂದ ಮಾಡಿಕೊಂಡಿತ್ತು. ಅವುಗಳಲ್ಲಿ (ಸಹ-ಪ್ರಸ್ತುತ ಪ್ರಾಯೋಜಕ) ಡ್ರೀಮ್11, (ಕೋ-ಪವರ್ಡ್) ಜಿಯೋಮಾರ್ಟ್, ಫೋನ್‌ಪೇ, ಟಿಯಾಗೋ ಇವಿ, ಜಿಯೋ (ಸಹ ಪ್ರಾಯೋಜಕ) ಆ್ಯಪ್ಪಿ ಫಿಜ್, ಇಟಿಮನೀ, ಕ್ಯಾಸ್ಟ್ರಾಲ್, ಟಿವಿಎಸ್, ಓರಿಯೊ, ಬಿಂಗೋ, ಸ್ಟಿಂಗ್, ಅಜಿಯೋ, ಹೈಯರ್, ರುಪೇ, ಲೂಯಿಸ್ ಜೀನ್ಸ್, ಅಮೆಜಾನ್, ರಾಪಿಡೊ, ಅಲ್ಟ್ರಾ ಟೆಕ್ ಸಿಮೆಂಟ್, ಪೂಮಾ, ಕಮಲಾ ಪಸಂದ್, ಕಿಂಗ್‌ಫಿಶರ್ ಪವರ್ ಸೋಡಾ, ಜಿಂದಾಲ್ ಪ್ಯಾಂಥರ್ ಟಿಎಂಟಿ ರೆಬಾರ್, ಸೌದಿ ಪ್ರವಾಸೋದ್ಯಮ, ಸ್ಪಾಟಿಫೈ ಮತ್ತು ಎಎಂಎಫ್ಐ ಸೇರಿವೆ.