Tag: Ravindra Jadeja

  • IPL Champions 2023: ಕೊನೆಯಲ್ಲಿ ಜಡೇಜಾ ಜಾದು, 5ನೇ ಬಾರಿಗೆ ಚೆನ್ನೈಗೆ ಚಾಂಪಿಯನ್‌ ಕಿರೀಟ

    IPL Champions 2023: ಕೊನೆಯಲ್ಲಿ ಜಡೇಜಾ ಜಾದು, 5ನೇ ಬಾರಿಗೆ ಚೆನ್ನೈಗೆ ಚಾಂಪಿಯನ್‌ ಕಿರೀಟ

    ಅಹಮದಾಬಾದ್‌: ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾ (Ravindra Jadeja) ಸಿಡಿಸಿದ ಭರ್ಜರಿ ಸಿಕ್ಸರ್‌, ಬೌಂಡರಿ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ರೋಚಕ ಜಯ ಸಾಧಿಸಿ 2023ರ ಟಾಟಾ ಐಪಿಎಲ್‌ (TaTa IPL) ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿದೆ.

    ಐಪಿಎಲ್‌ ಆವೃತ್ತಿಯಲ್ಲಿ 4 ಬಾರಿ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿದ್ದ ಎಂ.ಎಸ್‌. ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ಬಲಿಷ್ಠ ಗುಜರಾತ್‌ ಟೈಟಾನ್ಸ್‌ಗೆ (GT) ಮಣ್ಣುಮುಕ್ಕಿಸಿ 5ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಇದರೊಂದಿಗೆ 5 ಬಾರಿ ಐಪಿಎಲ್‌ ಕಪ್‌ ಗೆದ್ದ ಮುಂಬೈ ಇಂಡಿಯನ್ಸ್‌ ದಾಖಲೆಯನ್ನ ಸರಿಗಟ್ಟಿದೆ. ಗುಜರಾತ್‌ ಟೈಟಾನ್ಸ್‌ ತಾನು ಆಡಿದ 2ನೇ ಆವೃತ್ತಿಯಲ್ಲಿ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ. ವಿಶೇಷವೆಂದರೆ ಚೆನ್ನೈ ತಂಡದಲ್ಲಿ ಸ್ಟಾರ್‌ ಆಟಗಾರನಾಗಿ ಮಿಂಚಿದ್ದ ಅಂಬಾಟಿ ರಾಯುಡು (Ambati Rayudu) ಗೆಲುವಿನೊಂದಿಗೆ ಐಪಿಎಲ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. 250 ಪಂದ್ಯವನ್ನಾಡಿದ ಸಾಧನೆ ಮಾಡಿದ ಎಂ.ಎಸ್‌ ಧೋನಿ ಸಹ ಇದೇ ಗೆಲುವಿನೊಂದಿಗೆ ವಿದಾಯ ಹೇಳುವ ಸಾಧ್ಯತೆಗಳಿವೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟಾನ್ಸ್‌ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 214 ರನ್‌ ಗಳಿಸಿತ್ತು. ಚೇಸಿಂಗ್‌ ಆರಂಭಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ಮೂರು ಎಸೆತಗಳನ್ನು ಎದುರಿಸುತ್ತಿದ್ದಂತೆ ಮಳೆ ಒಕ್ಕರಿಸಿತು. ಇದರಿಂದ ಸಿಎಸ್‌ಕೆ ಇನ್ನಿಂಗ್ಸ್‌ ಆರಂಭಗೊಳ್ಳುವುದು 1:30 ಗಂಟೆಗೂ ಅಧಿಕ ಕಾಲ ತಡವಾಯಿತು. 10:30ರ ವೇಳೆಗೆಲ್ಲಾ ಮಳೆ ಬಿಡುವುಕೊಟ್ಟರೂ ಮೈದಾನ ಹದಗೊಳಿಸುವುದಕ್ಕೆ 1 ಗಂಟೆಗೂ ಅಧಿಕ ಸಮಯ ತೆಗೆದುಕೊಳ್ಳಲಾಯಿತು. ಹಾಗಾಗಿ ತಡವಾಗಿದ್ದರಿಂದ ಡಕ್ವರ್ತ್‌ ಲೂಯಿಸ್ ನಿಯಮ ಅನ್ವಯಿಸಿ, ಓವರ್‌ಗಳನ್ನ ಕಡಿತಗೊಳಿಸಲಾಯಿತು. ಡಕ್ವರ್ತ್‌ ಲೂಯಿಸ್‌ (DSL) ನಿಯಮದ ಪ್ರಕಾರ 15 ಓವರ್‌ಗಳಲ್ಲಿ 171 ರನ್‌ ಟಾರ್ಗೆಟ್‌ ಪಡೆದು ಇನ್ನಿಂಗ್ಸ್‌ ಆರಂಭಿಸಿದ ಸಿಎಸ್‌ಕೆ 15 ಓವರ್‌ಗಳಲ್ಲಿ 171 ರನ್‌ ಚಚ್ಚುವ ಮೂಲಕ ಗೆಲುವು ಸಾಧಿಸಿತು.

    ಕೊನೆಯ 20 ಎಸೆತಗಳಲ್ಲಿ 50 ರನ್‌ಗಳ ಅಗತ್ಯವಿತ್ತು. ಈ ವೇಳೆ ರಶೀದ್‌ ಖಾನ್‌ ಬೌಲಿಂಗ್‌ನ ಕೊನೆಯ ಎರಡು ಎಸೆತಗಳನ್ನು ಶಿವಂ ದುಬೆ (Shivam Dube) ಭರ್ಜರಿ ಸಿಕ್ಸರ್‌ ಬಾರಿಸಿದರು. ಇನ್ನೂ ಕೊನೆಯ 18 ಎಸೆತಗಳಲ್ಲಿ 38 ರನ್‌ಗಳು ಬೇಕಾಗಿದ್ದಾಗ ಕೊನೆಯ ಐಪಿಎಲ್‌ ಪಂದ್ಯವಾಡಿದ ಅಂಬಾಟಿ ರಾಯುಡು, ಮೋಹಿತ್‌ ಶರ್ಮಾ ಬೌಲಿಂಗ್‌ನ ಮೊದಲ ಮೂರು ಎಸೆತಗಳಲ್ಲಿ 2 ಸಿಕ್ಸರ್‌, 1 ಬೌಂಡರಿ ಬಾರಿಸಿದರು. ಇದರಿಂದ ಕಠಿಣ ಪರಿಸ್ಥಿತಿಯಲ್ಲಿದ್ದ ಚೆನ್ನೈಗೆ ಸಂಜೀವಿನಿ ಸಿಕ್ಕಂತಾಯಿತು. ಕೊನೆಯ 6 ಎಸೆತಗಳಲ್ಲಿ 13 ರನ್‌ ಅಗತ್ಯವಿದ್ದಾಗ ಮತ್ತೆ ಮೋಹಿತ್‌ ಶರ್ಮಾ ಬೌಲಿಂಗ್‌ನಲ್ಲಿದ್ದರು. ಮೊದಲ 4 ಎಸೆತಗಳಲ್ಲಿ ಕೇವಲ 3 ರನ್‌ ಸೇರ್ಪಡೆಯಾಯಿತು. 5ನೇ ಎಸೆತದಲ್ಲಿ ಸಿಕ್ಸ್‌ ಬಾರಿಸಿದ ಜಡೇಜಾ 6ನೇ ಎಸೆತದಲ್ಲಿ ಬೌಂಡರಿ ಚಚ್ಚುವ ಮೂಲ ಗೆಲುವು ತಂದುಕೊಟ್ಟರು.

    ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್‌ ಗಾಯಕ್ವಾಡ್‌ ಹಾಗೂ ಡಿವೋನ್‌ ಕಾನ್ವೆ ಆರಂಭದಿಂದಲೇ ಗುಜರಾತ್‌ ಬೌಲರ್‌ಗಳನ್ನ ಬೆಂಡೆತ್ತಲು ಶುರು ಮಾಡಿತು. ಮೊದಲ ವಿಕೆಟ್‌ಕೆ ಈ ಜೋಡಿ 6.3 ಓವರ್‌ಗಳಲ್ಲಿ ಭರ್ಜರಿ 74 ರನ್‌ ಸಿಡಿಸಿತ್ತು. ಈ ವೇಳೆ ಋತುರಾಜ್‌ ಗಾಯಕ್ವಾಡ್‌ ದೊಡ್ಡ ಹೊಡೆತ ಹೊಡೆಯಲು ಯತ್ನಿಸಿ ಕ್ಯಾಚ್‌ ನೀಡಿ ಔಟಾದರು. ಋತುರಾಜ್‌ 16 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್‌ನೊಂದಿಗೆ 26 ರನ್‌ ಗಳಿಸಿ ಪೆವಿಲಿಯನ್‌ ಸೇರುತ್ತಿದ್ದಂತೆ ಡಿವೋನ್‌ ಕಾನ್ವೆ ಸಹ 47 ರನ್‌ (25 ಎಸೆತ, 4 ಬೌಂಡರಿ, 2 ಸಿಕ್ಸರ್‌) ಗಳಿಸಿ ಔಟಾದರು. ನಂತರದಲ್ಲಿ ಕಣಕ್ಕಿಳಿದ ಅಜಿಂಕ್ಯಾ ರಹಾನೆ 13 ಎಸೆತಗಳಲ್ಲಿ ಸ್ಫೋಟಕ 27 ರನ್‌ (2 ಸಿಕ್ಸರ್‌, 2 ಬೌಂಡರಿ) ಚಚ್ಚಿ ಔಟಾದರು. ಅಂಬಾಟಿ ರಾಯುಡು 19 ರನ್‌ (8 ಎಸೆತ, 2 ಸಿಕ್ಸರ್‌, 1 ಬೌಂಡರಿ) ಚಚ್ಚಿದರು.‌ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಿವಂ ದುಬೆ ಅಜೇಯ 32 ರನ್‌ (21 ಎಸೆತ, 2 ಸಿಕ್ಸ್‌), ರವೀಂದ್ರ ಜಡೇಜಾ 15 ರನ್‌ (6‌ ಎಸೆತ, 1 ಸಿಕ್ಸ್‌, 1 ಬೌಂಡರಿ) ಗಳಿಸಿ ಕ್ರೀಸ್‌ನಲ್ಲಿ ಉಳಿದರು.

    ಆರಂಭಿಕರಾಗಿ ಕಣಕ್ಕಿಳಿದ ಶುಭಮನ್‌ ಗಿಲ್‌ ಹಾಗೂ ವೃದ್ಧಿಮಾನ್‌ ಸಾಹಾ ಜೋಡಿ ಉತ್ತಮ ಆರಂಭ ನೀಡಿತ್ತು. ಮೊದಲ ವಿಕೆಟ್‌ ಜೊತೆಯಾಟಕ್ಕೆ 42 ಎಸೆತಗಳಲ್ಲಿ 67 ರನ್‌ ಗಳಿಸಿತ್ತು. 2ನೇ ಓವರ್‌ನಲ್ಲೇ ಕ್ಯಾಚ್‌ ನಿಂದ ತಪ್ಪಿಸಿಕೊಂಡಿದ್ದ ಗಿಲ್‌ ಧೋನಿ ಮ್ಯಾಜಿಕ್‌ ಸ್ಟಂಪ್‌ಗೆ ವಿಕೆಟ್‌ ಒಪ್ಪಿಸಲೇಬೇಕಾಯಿತು. ನಂತರ ಕಣಕ್ಕಿಳಿದ ಆಟಗಾರರು ಚೆನ್ನೈ ಬೌಲರ್‌ಗಳನ್ನ ಹಿಗ್ಗಾಮುಗ್ಗಾ ಚೆಂಡಾಡಿದರು.

    ಬಳಿಕ ಸಾಹಿ ಸುದರ್ಶನ್‌ ಹಾಗೂ ವೃದ್ಧಿಮಾನ್‌ ಸಾಹಾ ಜೋಡಿ 42 ಎಸೆತಗಳಲ್ಲಿ 64 ರನ್‌ ಜೊತೆಯಾಟ ನೀಡಿದರೆ, ಸುದರ್ಶನ್‌ ಹಾಗೂ ಹಾರ್ದಿಕ್‌ ಪಾಂಡ್ಯ ಜೋಡಿ 33 ಎಸೆತಗಳಲ್ಲೇ ಸ್ಫೋಟಕ 81 ರನ್‌ ಚಚ್ಚಿತ್ತು. ಇದರ ಪರಿಣಾಮ ಮೊದಲ 10 ಓವರ್‌ನಲ್ಲಿ ಒಂದು ವಿಕೆಟ್‌ ಕಳೆದುಕೊಂಡು ಕೇವಲ 86 ರನ್‌ ಕಲೆಹಾಕಿದ್ದ ಟೈಟಾನ್ಸ್‌ ಮುಂದಿನ 10 ಓವರ್‌ಗಳಲ್ಲಿ 128 ರನ್‌ ಗಳಿಸುವ ಮೂಲಕ ತಂಡದ ಮೊತ್ತ 200ರ ಗಡಿ ದಾಟಿಸುವಲ್ಲಿ ಯಶಸ್ವಿಯಾಯಿತು. ಸಾಯಿ ಸುದರ್ಶನ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಕೊನೆಯ ೫ ಓವರ್‌ಗಳಲ್ಲಿ 71 ರನ್‌ ಸೇರ್ಪಡೆಯಾಯಿತು.

    ಗುಜರಾತ್‌ ಟೈಟಾನ್ಸ್‌ ಪರ ವೃದ್ಧಿಮಾನ್‌ ಸಾಹಾ 54 ರನ್‌ (39 ಎಸೆತ, 5 ಬೌಂಡರಿ, 1 ಸಿಕ್ಸರ್‌), ಶುಭಮನ್‌ ಗಿಲ್‌ 39 ರನ್‌ (20 ಎಸೆತ, 7 ಬೌಂಡರಿ), ಹಾರ್ದಿಕ್‌ ಪಾಂಡ್ಯ 21 ರನ್‌ ಗಳಿಸಿದರು. ಇನ್ನೂ 204.25 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಸಾಯಿ ಸುದರ್ಶನ್‌ 47 ಎಸೆತಗಳಲ್ಲಿ 96 ರನ್‌ (6 ಸಿಕ್ಸರ್‌, 8 ಬೌಂಡರಿ) ಸಿಡಿಸಿ ಶತಕ ವಂಚಿತರಾದರು.

    ಸಿಎಸ್‌ಕೆ ಪರ ಮಹೇಶ್‌ ಪತಿರಣ 2 ವಿಕೆಟ್‌ ಪಡೆದರೆ, ರವೀಂದ್ರ ಜಡೇಜಾ ಹಾಗೂ ದೀಪಕ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • IPL 2023 Final: ಗುಜರಾತ್‌ಗೆ ಗುನ್ನ ಕೊಟ್ಟ ಚೆನ್ನೈ – 10ನೇ ಬಾರಿಗೆ ಫೈನಲ್‌ಗೆ CSK ಎಂಟ್ರಿ

    IPL 2023 Final: ಗುಜರಾತ್‌ಗೆ ಗುನ್ನ ಕೊಟ್ಟ ಚೆನ್ನೈ – 10ನೇ ಬಾರಿಗೆ ಫೈನಲ್‌ಗೆ CSK ಎಂಟ್ರಿ

    – ಟೈಟಾನ್ಸ್‌ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ಗೆ 15 ರನ್‌ಗಳ ಭರ್ಜರಿ ಜಯ

    ಚೆನ್ನೈ: ಸಂಘಟಿತ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಪ್ರದರ್ಶನದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings), ಹಾಲಿ ಚಾಂಪಿಯನ್ಸ್‌ ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ 15 ರನ್‌ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 10ನೇ ಬಾರಿಗೆ ಐಪಿಎಲ್‌ ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದೆ.

    ಈವರೆಗೆ ಐಪಿಎಲ್‌ನಲ್ಲಿ (IPL 2023) 4 ಬಾರಿ ಚಾಂಪಿಯನ್ಸ್‌ ಕಿರೀಟ ಧರಿಸಿರುವ ಚೆನ್ನೈ 10ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ. ಇನ್ನೂ ಮೊದಲ ಆವೃತ್ತಿಯಲ್ಲೇ ಚಾಂಪಿಯನ್‌ ಆದ ಹಾರ್ದಿಕ್‌ ಪಾಂಡ್ಯ ನಾಯಕತ್ವದ ಗುಜರಾತ್‌ ಟೈಟಾನ್ಸ್‌ ಸೋತು 2ನೇ ಎಲಿಮಿನೇಟರ್‌ ಹಂತ ತಲುಪಿದೆ.

    ಮೇ 24 ರಂದು ಮುಂಬೈ ಇಂಡಿಯನ್ಸ್‌ (Mumbai Indians) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ (LSG) ವಿರುದ್ಧ ಮೊದಲ ಎಲಿಮಿನೇಟರ್‌ ಪಂದ್ಯ ನಡೆಯಲಿದ್ದು, ಗೆದ್ದ ತಂಡದೊಂದಿಗೆ 2ನೇ ಎಲಿಮಿನೇಟರ್‌ ಪಂದ್ಯದಲ್ಲಿ ಟೈಟಾನ್ಸ್‌ ಸೆಣಸಲಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 172 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಹಾಲಿ ಚಾಂಪಿಯನ್ಸ್‌ ಗುಜರಾತ್‌ ಟೈಟಾನ್ಸ್‌ 20 ಓವರ್‌ಗಳಲ್ಲಿ 157 ರನ್‌ಗಳಿಗೆ ಸರ್ವಪತನಕಂಡಿತು.

    ಚೇಸಿಂಗ್‌ ಆರಂಭಿಸಿದ ಟೈಟಾನ್ಸ್‌ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. 22 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡಿತು. ಬಳಿಕ ನಿಧಾನಗತಿ ಬ್ಯಾಟಿಂಗ್‌ನೊಂದಿಗೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು. ಮಹಿ ಮ್ಯಾಜಿಕ್‌ ನೊಂದಿಗೆ ಬೌಲಿಂಗ್‌ನಲ್ಲಿ ಉತ್ತಮ ಹಿಡಿತ ಸಾಧಿಸಿದ ಚೆನ್ನೈ ತಂಡ ಗುಜರಾತ್‌ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳನ್ನ ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.

    ಗುಜರಾತ್‌ ಟೈಟಾನ್ಸ್‌ ಪರ ಶುಭಮನ್‌ ಗಿಲ್‌ (Shubman Gill) 42 ರನ್‌ (38 ರನ್‌, 4 ಬೌಂಡರಿ, 1 ಸಿಕ್ಸ್‌), ವೃದ್ಧಿಮಾನ್‌ ಸಾಹಾ 12 ರನ್‌, ದಸುನ್‌ ಶನಾಕ 17 ರನ್‌, ವಿಜಯ್‌ ಶಂಕರ್‌ 14 ರನ್‌ ಗಳಿಸಿದ್ರೆ, ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್‌ ನಡೆಸಿದ ರಶೀದ್‌ ಖಾನ್‌ 16 ಎಸೆತಗಳಲ್ಲಿ ಬರೋಬ್ಬರಿ 30 ರನ್‌ ಚಚ್ಚಿ ವಿಕೆಟ್‌ ಕೈಚೆಲ್ಲಿದರು. ಬಳಿಕ ತಂಡ ಸೋಲುವುದು ಖಚಿತವಾಯಿತು.

    ಸಿಎಸ್‌ಕೆ ಪರ ದೀಪಕ್‌ ಚಹಾರ್‌, ಮಹೀಶ್‌ ತೀಕ್ಷಣ ಹಾಗೂ ರವೀಂದ್ರ ಜಡೇಜಾ, ಮಥೀಶ ಪತಿರಣ ತಲಾ 2 ವಿಕೆಟ್‌ ಕಿತ್ತರೆ ತುಷಾರ್‌ ದೇಶ್‌ಪಾಂಡೆ ಒಂದು ವಿಕೆಟ್‌ ಪಡೆದು ಮಿಂಚಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್‌ಕೆ ಋತುರಾಜ್‌ ಗಾಯಕ್ವಾಡ್‌ (Ruturaj Gaikwad) ಹಾಗೂ ಡಿವೋನ್‌ ಕಾನ್ವೆ (Devon Conway) ಜೋಡಿ ಉತ್ತಮ ಆರಂಭ ನೀಡಿತು. ಮೊದಲ ವಿಕೆಟ್‌ಗೆ ಈ ಜೋಡಿ 10.3 ಓವರ್‌ಗಳಲ್ಲಿ 87 ರನ್‌ ಗಳಿಸಿತ್ತು. ಋತುರಾಜ್‌ 44 ಎಸೆತಗಳಲ್ಲಿ ಭರ್ಜರಿ 66 ರನ್‌ (7 ಬೌಂಡರಿ, 1 ಸಿಕ್ಸರ್)‌ ಔಟಾದರು. ಈ ಬೆನ್ನಲ್ಲೇ 40 ರನ್‌ (34 ಎಸೆತ, 4 ಬೌಂಡರಿ) ಗಳಿಸಿ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು.

    ಇನ್ನೂ ಮಧ್ಯಮ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ 17 ರನ್‌, ಅಂಬಟಿ ರಾಯುಡು 17 ರನ್‌ ಹಾಗೂ ರವೀಂದ್ರ ಜಡೇಜಾ 22 ರನ್‌, ಮೊಯಿನ್‌ ಅಲಿ 9 ರನ್‌ ಗಳಿಸಿ ತಂಡ ಮೊತ್ತ 170ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಆರಂಭದಿಂದಲೂ ಸಾಧಾರಣ ಬ್ಯಾಟಿಂಗ್‌ ನಡೆಸಿದ ಸಿಎಸ್‌ಕೆ ಕೊನೆಯ 3 ಓವರ್‌ಗಳಲ್ಲಿ ಸ್ಫೋಟಕ 35 ರನ್‌ ಬಾರಿಸಿ ತಂಡದ ಮೊತ್ತ ಹೆಚ್ಚಿಸಿಕೊಂಡಿತು.

    ಗುಜರಾತ್‌ ಟೈಟಾನ್ಸ್‌ ಪರ ಮೊಹಮ್ಮದ್‌ ಶಮಿ ಹಾಗೂ ಮೋಹಿತ್‌ ಶರ್ಮಾ ತಲಾ 2 ವಿಕೆಟ್‌ ಕಿತ್ತರೆ, ದರ್ಶನ್‌ ನಾಲ್ಕಂಡೆ, ರಶೀದ್‌ ಖಾನ್‌ ಹಾಗೂ ನೂರ್‌ ಅಹ್ಮದ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ಜಡೇಜಾ ಜಾದು, ಕಾನ್ವೆ ಕಿಕ್‌ – ತವರಿನಲ್ಲಿ ತಿಣುಕಾಡಿ ಗೆದ್ದ ಚೆನ್ನೈ; ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ

    ಜಡೇಜಾ ಜಾದು, ಕಾನ್ವೆ ಕಿಕ್‌ – ತವರಿನಲ್ಲಿ ತಿಣುಕಾಡಿ ಗೆದ್ದ ಚೆನ್ನೈ; ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ

    ಚೆನ್ನೈ: ಡಿವೋನ್‌ ಕಾನ್ವೆ ಸ್ಫೋಟಕ ಬ್ಯಾಟಿಂಗ್‌ ಹಾಗೂ ರವೀಂದ್ರ ಜಡೇಜಾ ಸ್ಪಿನ್‌ ಜಾದು ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ತವರಿನಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ. ಆರಂಭದಲ್ಲಿ ಅಬ್ಬರಿಸಿದರೂ ಮಧ್ಯಮ ಕ್ರಮಾಂಕದಲ್ಲಿ ಹೈದರಾಬಾದ್‌ ಬೌಲರ್‌ಗಳ ಬಿಗಿ ಹಿಡಿತಕ್ಕೆ ಸಿಕ್ಕಿದ ಚೆನ್ನೈ 19ನೇ ಓವರ್‌ನಲ್ಲಿ ಗೆಲುವಿನ ಮೊತ್ತ ದಾಖಲಿಸಿದೆ.

    ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ ರೈಸರ್ಸ್‌ ಹೈದರಾಬಾದ್‌ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 134 ರನ್‌ ಗಳಿಸಿತು. 135 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ 18.4 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 138 ರನ್‌ ಗಳಿಸಿ ಗೆಲುವು ಸಾಧಿಸಿತು.

    ಚೇಸಿಂಗ್‌ ಆರಂಭಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ಉತ್ತಮ ಆರಂಭ ಪಡೆದುಕೊಂಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ಡಿವೋನ್‌ ಕಾನ್ವೆ ಹಾಗೂ ಋತುರಾಜ್‌ ಗಾಯಕ್ವಾಡ್‌ ಭರ್ಜರಿ ಸಿಕ್ಸರ್‌, ಬೌಂಡರಿಯ ಆಟವಾಡಿದ್ದರು. ಮೊದಲ ವಿಕೆಟ್‌ ಪತನಕ್ಕೆ ಈ ಜೋಡಿ 66 ಎಸೆತಗಳಲ್ಲಿ 87 ರನ್‌ ಗಳಿಸಿತ್ತು. ಈ ವೇಳೆ ಋತುರಾಜ್‌ ಗಾಯಕ್ವಾಡ್‌ 35 ರನ್‌ (30 ಎಸೆತ, 2 ಬೌಂಡರಿ) ರನ್‌ ಗಳಿಸಿ ವಿಕೆಟ್‌ ಕಳೆದುಕೊಳ್ಳುತ್ತಿದ್ದಂತೆ ರನ್‌ ವೇಗ ಕಡಿಮೆಯಾಯಿತು.

    ಮಧ್ಯಮ ಕ್ರಮಾಂಕದಲ್ಲಿ ಬಿಗಿ ಬೌಲಿಂಗ್‌ ಹಿಡಿತ ಸಾಧಿಸಿದ ಹೈದರಾಬಾದ್‌ ತಂಡ ಚೆನ್ನೈ ಅಗ್ರಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳಾದ ಅಜಿಂಕ್ಯಾ ರಹಾನೆ ಹಾಗೂ ಅಂಬಟಿ ರಾಯುಡು ಅವರನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿತ್ತು. ಆದ್ರೆ ಡಿವೋನ್‌ ಕಾನ್ವೆ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಕೊನೆಯವರೆಗೂ ಹೋರಾಡಿದ ಡಿವೋನ್‌ ಕಾನ್ವೆ 57 ಎಸೆತಗಳಲ್ಲಿ 77 ರನ್‌ (12 ಬೌಂಡರಿ, 1 ಸಿಕ್ಸರ್) ಚಚ್ಚಿದರೆ, ಕೊನೆಯಲ್ಲಿ ಮೊಯಿನ್‌ ಅಲಿ 6 ರನ್‌ ಗಳಿಸಿ ಅಜೇಯರಾಗುಳಿದರು. ಅಜಿಂಕ್ಯಾ ರಹಾನೆ ಹಾಗೂ ಅಂಬಟಿ ರಾಯುಡು ತಲಾ 9 ರನ್‌ ಗಳಿಸಿ ಔಟಾದರು.

    ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದ ಹೈದರಾಬಾದ್‌ ತಂಡ ರವೀಂದ್ರ ಜಡೇಜಾ ಸೇರಿದಂತೆ ಚೆನ್ನೈ ಬೌಲರ್‌ಗಳ ದಾಳಿಗೆ ತತ್ತರಿಸಿತು. ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್‌ ಶರ್ಮಾ ಹಾಗೂ ಹ್ಯಾರಿ ಬ್ರೂಕ್‌ ಉತ್ತಮ ಆರಂಭ ಪಡೆಯುವಲ್ಲಿ ವಿಫಲರಾದರು. ಆರಂಭದಲ್ಲೇ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಮುಂದಾದಾ ಬ್ರೂಕ್‌ 13 ಎಸೆತಗಲ್ಲಿ 18 ರನ್‌ ಗಳಿಸಿ ಔಟಾದರು. ಮತ್ತೋರ್ವ ಆರಂಭಿಕನಾಗಿ ಕಣಕ್ಕಿಳಿದಿದ್ದ ಅಭಿಷೇಕ್‌ ಶರ್ಮಾ 26 ಎಸೆತಗಳಲ್ಲಿ 34 ರನ್‌ (3 ಬೌಂಡರಿ, 1 ಸಿಕ್ಸರ್‌) ಗಳಿಸಿದರು. ನಂತರದಲ್ಲಿ ಕಣಕ್ಕಿಳಿದ ಯಾರೊಬ್ಬರೂ ಉತ್ತಮ ಜೊತೆಯಾಟ ನೀಡದ ಕಾರಣ ಹೈದರಾಬಾದ್‌ ತಂಡ ಅಲ್ಪ ಮೊತ್ತಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

    ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಣಕ್ಕಿಳಿದವರಲ್ಲಿ ರಾಹುಲ್‌ ತ್ರಿಪಾಠಿ 21 ರನ್‌ ಗಳಿಸಿ ತಂಡಕ್ಕೆ ಸ್ವಲ್ಪ ಚೇತರಿಕೆ ನೀಡಿದರೆ, ನಾಯಕ ಏಡನ್‌ ಮಾರ್ಕ್ರಮ್‌ 12 ರನ್‌, ಹೆನ್ರಿಕ್ ಕ್ಲಾಸೆನ್ 17 ರನ್‌, ಮಯಾಂಕ್‌ ಅಗರ್ವಾಲ್‌ ಕೇವಲ 2 ರನ್‌, ವಾಷಿಂಗ್ಟನ್‌ ಸುಂದರ್‌ 9 ರನ್‌ ಹಾಗೂ ಮಾರ್ಕೊ ಜಾನ್ಸೆನ್‌ 17 ರನ್‌ ಗಳಿಸಿದರು.

    ಜಡೇಜಾ ಜಾದು: ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಸ್ಪಿನ್‌ ಜಾದು ನಡೆಸಿದ ರವೀಂದ್ರ ಜಡೇಜಾ 4 ಓವರ್‌ಗಳಲ್ಲಿ ಕೇವಲ 22 ರನ್‌ ನೀಡಿ ಪ್ರಮುಖ 3 ವಿಕೆಟ್‌ ಕಬಳಿಸಿದರು. ಇನ್ನೂ ಇಂಪ್ಯಾಕ್ಟ್‌ ಪ್ಲೇಯರ್‌ ಆಕಾಶ್‌ ಸಿಂಗ್‌, ಮಹೇಶ್‌ ತೀಕ್ಷಣ ಹಾಗೂ ಮತೀಶ ಪತಿರಾನ ತಲಾ ಒಂದೊಂದು ವಿಕೆಟ್‌ ಪಡೆದರು.

  • ಖೂಷ್ಬೂ ಸುಂದರ್ ಅತ್ತೆಯನ್ನು ಭೇಟಿಯಾದ ಧೋನಿ

    ಖೂಷ್ಬೂ ಸುಂದರ್ ಅತ್ತೆಯನ್ನು ಭೇಟಿಯಾದ ಧೋನಿ

    ಮುಂಬೈ: ಎಂಎಸ್ ಧೋನಿ (Dhoni) ಇತ್ತೀಚೆಗೆ ಬಿಜೆಪಿ (BJP) ನಾಯಕಿ ಖುಷ್ಬೂ ಸುಂದರ್ (Khushbu Sundar) ಅವರ ಅತ್ತೆಯವರನ್ನು ಭೇಟಿಯಾಗಿದ್ದಾರೆ.

    ದೇಶದಲ್ಲಿ, ಒಂಬತ್ತರಿಂದ ತೊಂಬತ್ತು ವರ್ಷ ವಯಸ್ಸಿನವರೆಗಿನ ಎಲ್ಲರೂ ಧೋನಿಯನ್ನು ಮೆಚ್ಚುತ್ತಾರೆ. ಯಾಕೆಂದರೆ ಧೋನಿ ಭಾರತದ ಕ್ರಿಕೆಟ್ ಅಭಿಮಾನಿಗಳ ಹೃದಯಸ್ಪರ್ಶಿಯಾಗಿದ್ದಾರೆ. ಆದರಲ್ಲೂ ಚೆನ್ನೈನಲ್ಲಿ (Chennai) ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕನಿಗೆ ಇನ್ನೂ ಹೆಚ್ಚಿನ ವಿಶೇಷ ಸ್ಥಾನಮಾನ ನೀಡಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್‌ನ (CSK) ನಾಯಕತ್ವ ವಹಿಸಿದ್ದಾಗಿನಿಂದ ಧೋನಿ ಚೆನ್ನೈನೊಂದಿಗಿನ ಪ್ರೀತಿಯ ಸಂಬಂಧವು ಗಾಢವಾಗಿ ಬೆಳೆದಿದೆ.

    ಖುಷ್ಬೂ ಸುಂದರ್ ಅವರ ಅತ್ತೆಯನ್ನು ಭೇಟಿಯಾಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ನಾಯಕಿ ಹಂಚಿಕೊಂಡಿದ್ದಾರೆ. ಅಲ್ಲದೆ ಹೀರೋಗಳನ್ನು ಸೃಷ್ಟಿಸಲಾಗುವುದಿಲ್ಲ, ಅವರು ಹುಟ್ಟುತ್ತಲೇ ಹೀರೋಗಳಾಗಿರುತ್ತಾರೆ. ಧೋನಿ ಅದನ್ನು ಸಾಬೀತು ಪಡಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ. 88ರ ನನ್ನ ಅತ್ತೆಯನ್ನು ಭೇಟಿಯಾಗಿ ನೀವು ಅವರ ಜೀವನಕ್ಕೆ ಅನೇಕ ವರ್ಷಗಳ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಸೇರಿಸಿದ್ದೀರಿ. ಇದಕ್ಕಾಗಿ ನಿಮಗೆ ಧನ್ಯವಾದಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಯಾವ ತಂಡದ ಕೋಚ್ ಆಗ್ತೀರಿ – ಅಭಿಮಾನಿಯ ಪ್ರಶ್ನೆಗೆ ಜಾಣ್ಮೆಯ ಉತ್ತರ ಕೊಟ್ಟ ರವಿ ಶಾಸ್ತ್ರಿ

    ಈ ನಡುವೆ ಧೋನಿಯ ಕೊನೆಯ ಐಪಿಎಲ್ ಎಂಬ ಮಾತುಗಳು ಕೇಳಿ ಬರುತ್ತಿವೆ. ಧೋನಿ ನಂತರ ಋತುರಾಜ್ ಗಾಯಕ್ವಾಡ್ ಸಿಎಸ್‍ಕೆ ನಾಯಕರಾಗಬಹುದು. ರವೀಂದ್ರ ಜಡೇಜಾ (Ravindra Jadeja) ಜೊತೆಗೆ ಬೆನ್ ಸ್ಟೋಕ್ಸ್ ಹೆಸರು ಪಟ್ಟಿಯಲ್ಲಿದೆ. ಇದನ್ನೂ ಓದಿ: ಕೊನೆಯವರೆಗೂ ಹೋರಾಡಿದ ರಿಂಕು – ಹೈದರಾಬಾದ್‌ಗೆ 23 ರನ್‌ಗಳ ಜಯ

  • IPL 2023: ಕೊನೆಯವರೆಗೂ ಹೋರಾಡಿ ಸೋತ ಚೆನ್ನೈ – ರಾಜಸ್ಥಾನ್‌ ರಾಯಲ್ಸ್‌ಗೆ 3 ರನ್‌ಗಳ ರೋಚಕ ಜಯ

    IPL 2023: ಕೊನೆಯವರೆಗೂ ಹೋರಾಡಿ ಸೋತ ಚೆನ್ನೈ – ರಾಜಸ್ಥಾನ್‌ ರಾಯಲ್ಸ್‌ಗೆ 3 ರನ್‌ಗಳ ರೋಚಕ ಜಯ

    ಚೆನ್ನೈ: ಕೊನೆಯಲ್ಲಿ ಸಿಎಸ್‌ಕೆ ನಾಯಕ ಎಂ.ಎಸ್‌ ಧೋನಿ (MS Dhoni), ರವೀಂದ್ರ ಜಡೇಜಾ (Ravindra Jadeja) ಸಿಕ್ಸರ್‌ ಬೌಂಡರಿಗಳ ಬ್ಯಾಟಿಂಗ್‌ ಹೋರಾಟದ ಹೊರತಾಗಿಯೂ ರಾಜಸ್ಥಾನ್‌ ರಾಯಲ್ಸ್‌ (Rajasthan Royals) 3 ರನ್‌ಗಳ ರೋಚಕ ಜಯ ಸಾಧಿಸಿತು.

    ಕೊನೆಯ ಓವರ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ಗೆ (Chennai Super Kings) 21 ರನ್‌ಗಳ ಅಗತ್ಯವಿತ್ತು. ಈ ವೇಳೆ ಬೌಲಿಂಗ್‌ಗೆ ಬಂದ ಸಂದೀಪ್‌ ಶರ್ಮಾ ಸತತ 2 ವೈಡ್‌ ನೀಡಿ ಆತಂಕ ಹೆಚ್ಚಿಸಿದ್ದರು. ನಂತರ ಕ್ರೀಸ್‌ನಲ್ಲಿ ಉಳಿದುಕೊಂಡಿದ್ದ ಧೋನಿ ಮೊದಲ ಎಸೆತದಲ್ಲಿ ರನ್‌ ಕದಿಯುವಲ್ಲಿ ವಿಫಲರಾದರು. ಆದರೆ 2-3ನೇ ಎಸೆತಗಳಲ್ಲಿ ಭರ್ಜರಿ ಸಿಕ್ಸರ್‌ ಬಾರಿಸಿ, 4ನೇ ಎಸೆತದಲ್ಲಿ 1 ರನ್‌ ಕದ್ದರು. ಇನ್ನೂ 2 ಎಸೆತಗಳಲ್ಲಿ 6 ರನ್‌ಗಳ ಅಗತ್ಯವಿತ್ತು, ಈ ವೇಳೆ ಕ್ರೀಸ್‌ಗೆ ಬಂದ ಜಡೇಜಾ 5ನೇ ಎಸೆತದಲ್ಲಿ 1 ರನ್‌ ತೆಗೆದುಕೊಂಡರು. ಕೊನೆಯ ಎಸೆತದಲ್ಲಿ ಮಹಿ ಸಿಕ್ಸರ್‌ ಬಾರಿಸಲು ಪ್ರಯತ್ನಿಸಿ ಕೇವಲ 1 ರನ್‌ ಕದ್ದರು. ಪರಿಣಾಮ ಸಿಎಸ್‌ಕೆ 3 ರನ್‌ಗಳಿಂದ ವಿರೋಚಿತ ಸೋಲನುಭವಿಸಿತು.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಂಜು ಸ್ಯಾಮ್ಸನ್‌ ನಾಯಕತ್ವದ ರಾಜಸ್ಥಾನ್‌ ರಾಯಲ್ಸ್‌ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 175 ರನ್‌ ಗಳಿಸಿತು. 176 ರನ್‌ಗಳ ಗುರಿ ಬೆನ್ನತ್ತಿದ್ದ ಸಿಎಸ್‌ಕೆ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 172 ರನ್‌ ಗಳಿಸಿ ವಿರೋಚಿತ ಸೋಲನುಭವಿಸಿತು.

    ಚೇಸಿಂಗ್‌ ಆರಂಭಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಕಳೆದ ಮೂರು ಪಂದ್ಯಗಳಲ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿದ್ದ ಋತುರಾಜ್‌ ಗಾಯಕ್ವಾಡ್‌ 8 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಈ ವೇಳೆ 2ನೇ ವಿಕೆಟ್‌ಗೆ ಜೊತೆಯಾದ ಅಜಿಂಕ್ಯ ರಹಾನೆ, ಡಿವೋನ್‌ ಕಾನ್ವೆ ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಯಶಸ್ವಿಯಾದರು. 19 ಎಸೆತಗಳಲ್ಲಿ 31 ರನ್‌ (2 ಬೌಂಡರಿ, 1‌ ಸಿಕ್ಸರ್) ಸ್ಫೋಟಕ ಬ್ಯಾಟಿಂಗ್‌ ಮಾಡುತ್ತಿದ್ದ ರಹಾನೆ ಅಶ್ವಿನ್‌ ಬೌಲಿಂಗ್‌ನಲ್ಲಿ ಔಟಾಗಿ ಹೊರನಡೆದರು. ಬಳಿಕ ಜವಾಬ್ದಾರಿಯುತ ಬ್ಯಾಟಿಂಗ್‌ ನಡೆಸುತ್ತಿದ್ದ ಡಿವೋನ್ವೆ 50 ರನ್‌ (38 ಎಸೆತ, 6 ಬೌಂಡರಿ) ಕ್ಯಾಚ್‌ ನೀಡಿ ಔಟಾದರು.

    ನಂತರ ಕಣಕ್ಕಿಳಿದ ನಾಯಕ ಎಂ.ಎಸ್‌ ಧೋನಿ, ರವೀಂದ್ರ ಜಡೇಜಾ ಸಿಕ್ಸರ್‌, ಬೌಂಡರಿ ಅಬ್ಬರಿಸಲು ಶುರು ಮಾಡಿದರು. 30 ಎಸೆತಗಳಲ್ಲಿ ಈ ಜೋಡಿ ಮುರಿಯದ 7ನೇ ವಿಕೆಟ್‌ಗೆ 59 ರನ್‌ ಬಾರಿಸಿತ್ತು. ಧೋನಿ 17 ಎಸೆತಗಳಲ್ಲಿ 32 ರನ್‌ (3 ಸಿಕ್ಸರ್‌, 1 ಬೌಂಡರಿ) ಬಾರಿಸಿದರೆ, ಜಡೇಜಾ 15 ಎಸೆತಗಳಲ್ಲಿ 25 ರನ್‌ (2 ಸಿಕ್ಸರ್‌, 1 ಬೌಂಡರಿ) ಗಳಿಸಿದರು. ಶಿವಂ ದುಬೆ 8 ರನ್‌, ಮೊಯಿನ್‌ ಅಲಿ 7 ರನ್‌, ಅಂಬಟಿ ರಾಯುಡು 1 ರನ್‌ ಗಳಿಸಿದರು.

    ರಾಜಸ್ಥಾನ್‌ ರಾಯಲ್ಸ್‌ ಪರ ರವಿಚಂದ್ರನ್‌ ಅಶ್ಚಿನ್‌ (Ravichandran Ashwin) 4 ಓವರ್‌ಗಳಲ್ಲಿ 25 ರನ್‌ ನೀಡಿ 2 ವಿಕೆಟ್‌ ಕಿತ್ತರೆ, ಯಜುವೇಂದ್ರ ಚಾಹಲ್‌ 4 ಓವರ್‌ಗಳಲ್ಲಿ 27 ರನ್‌ ನೀಡಿ 2 ವಿಕೆಟ್‌ ಪಡೆದುಕೊಂಡರು ಇನ್ನೂ ಆಡಂ ಜಂಪಾ, ಸಂದೀಪ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಟಾಸ್ ಸೋತು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್ (CKS) ಆರಂಭದಲ್ಲೇ ವಿಕೆಟ್ ಪಡೆಯುವ ಮೂಲಕ ಉತ್ತಮ ಆರಂಭ ಮಾಡಿದರು. ರಾಜಸ್ಥಾನ್‌ ರಾಯಲ್ಸ್‌ ತಂಡದ ಆರಂಭಿಕ ಯಶಸ್ವಿ ಜೈಸ್ವಾಲ್ 8 ಎಸೆತಗಳಲ್ಲಿ 10 ರನ್ ಗಳಿಸಿ ಔಟಾದರು. 2ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ಮತ್ತು ಜೋಸ್ ಬಟ್ಲರ್ ಉತ್ತಮ ಜೊತೆಯಾಟದ ಮೂಲಕ ತಂಡಕ್ಕೆ ಆಸರೆಯಾದರು.

    ಈ ಜೋಡಿ 2ನೇ ವಿಕೆಟ್‌ಗೆ 41 ಎಸೆತಗಳಲ್ಲಿ 77 ರನ್‌ಗಳ ಜೊತೆಯಾಟ ಆಡಿತು. ದೇವದತ್ ಪಡಿಕ್ಕಲ್ (Devdutt Padikkal) 26 ಎಸೆತಗಳಲ್ಲಿ 5 ಬೌಂಡರಿ ಸಹಿತ 38 ರನ್ ಗಳಿಸಿ ಪೆವಿಲಿಯನ್‌ ಸೇರಿದರು. ನಂತರ ಕ್ರೀಸ್‌ಗೆ ಬಂದ ನಾಯಕ ಸಂಜು ಸ್ಯಾಮ್ಸನ್ ಎರಡೇ ಎಸೆತಗಳಲ್ಲಿ ರನ್ ಗಳಿಸದೇ ಔಟಾದರು. ಇನ್ನೂ ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದ ರವಿಚಂದ್ರನ್ ಅಶ್ವಿನ್ ಜವಾಬ್ದಾರಿಯುತ ಆಟವಾಡಿದರು. 22 ಎಸೆತಗಳಲ್ಲಿ 30 ರನ್ (1 ಬೌಂಡರಿ, 2 ಸಿಕ್ಸರ್) ಗಳಿಸಿದರು. ಎಂದಿನಂತೆ ಉತ್ತಮ ಫಾರ್ಮ್‌ನಲ್ಲಿ ಬ್ಯಾಟಿಂಗ್‌ ಮುಂದುವರಿಸಿದ ಜೋಸ್‌ ಬಟ್ಲರ್‌ (Jos Buttler) ಬೊಂಬಾಟ್‌ ಬ್ಯಾಟಿಂಗ್‌ ಮಾಡಿದರು.

    36 ಎಸೆತಗಳಲ್ಲಿ 52 ರನ್ (1 ಬೌಂಡರಿ, 3 ಸಿಕ್ಸರ್) ಗಳಿಸಿ ಮೊಯೀನ್ ಅಲಿ ಸ್ಪಿನ್‌ ದಾಳಿಗೆ ಕ್ಲೀನ್ ಬೌಲ್ಡ್ ಆದರು. ಧ್ರುವ್ ಜುರೆಲ್ 6 ಎಸೆತಗಳಲ್ಲಿ 4 ರನ್ ಗಳಿಸಿ ಔಟಾದರೇ, ಜೇಸನ್ ಹೋಲ್ಡರ್ ರನ್ ಖಾತೆ ತೆರೆಯದೇ ಔಟ್ ಆದರು. ಕೊನೆಯಲ್ಲಿ ಶಿಮ್ರಾನ್ ಹೆಟ್ಮೆಯರ್‌ ಸಿಕ್ಸರ್‌, ಬೌಂಡರಿಗಳ ಸ್ಫೋಟಕ ಬ್ಯಾಟಿಂಗ್‌ ನಡೆಸಿ, 18 ಎಸೆತಗಳಲ್ಲಿ 30 ರನ್ (2 ಬೌಂಡರಿ, 2 ಸಿಕ್ಸರ್‌) ಗಳಿಸಿ ಅಜೇಯರಾಗುಳಿದರು.

    ಜಡೇಜಾ ಜಾದು: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಸ್ಪಿನ್‌ ಜಾದು ಮಾಡಿದ ರವೀಂದ್ರ ಜಡೇಜಾ ಆಕ್ರಮಣಕಾರಿ ಬ್ಯಾಟಿಂಗ್‌ ಮಾಡುತ್ತಿದ್ದ ದೇವದತ್ ಪಡಿಕ್ಕಲ್‌ರನ್ನ ಔಟ್ ಮಾಡಿದರು. ಅದೇ ಓವರ್ ನಲ್ಲಿ ನಾಯಕ ಸಂಜು ಸ್ಯಾಮ್ಸನ್‌ರನ್ನ ಕ್ಲೀನ್‌ ಬೌಲ್ಡ್ ಮಾಡಿದರು. 4 ಓವರ್ ಗಳಲ್ಲಿ 21 ರನ್ ನೀಡಿ 2 ವಿಕೆಟ್ ಪಡೆದುಕೊಂಡರು. ಆಕಾಶ್ ಸಿಂಗ್ ಮತ್ತು ತುಷಾರ್ ದೇಶಪಾಂಡೆ ಕೂಡ ತಲಾ 2 ವಿಕೆಟ್ ಪಡೆದು ಮಿಂಚಿದರೆ, ಮೊಯಿನ್‌ ಅಲಿ 1 ವಿಕೆಟ್‌ ಕಿತ್ತರು.

  • IPl 2023: ರಂಗೇರಿಸಿದ ರಹಾನೆ ಬ್ಯಾಟಿಂಗ್‌, ಜಡೇಜಾ ಸ್ಪಿನ್‌ ಜಾದು- ಚೆನ್ನೈಗೆ 7 ವಿಕೆಟ್‌ಗಳ ಭರ್ಜರಿ ಜಯ

    IPl 2023: ರಂಗೇರಿಸಿದ ರಹಾನೆ ಬ್ಯಾಟಿಂಗ್‌, ಜಡೇಜಾ ಸ್ಪಿನ್‌ ಜಾದು- ಚೆನ್ನೈಗೆ 7 ವಿಕೆಟ್‌ಗಳ ಭರ್ಜರಿ ಜಯ

    ಮುಂಬೈ: ಅಜಿಂಕ್ಯ ರಹಾನೆ (Ajinkya Rahane) ಸ್ಫೋಟಕ ಬ್ಯಾಟಿಂಗ್‌, ರವೀಂದ್ರ ಜಡೇಜಾ (Ravindra Jadeja) ಸ್ಪಿನ್‌ ಜಾದು ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (CSK), ಮುಂಬೈ ಇಂಡಿಯನ್ಸ್‌ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ 16ನೇ ಐಪಿಎಲ್‌ ಆವೃತ್ತಿಯಲ್ಲಿ ಸತತ 2ನೇ ಗೆಲುವು ದಾಖಲಿಸಿತು, ತವರಿನಲ್ಲಿ ಸೋತು ಮುಂಬೈ ಮುಖಭಂಗ ಅನುಭವಿಸಿತು.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ (Mumbai Indians) ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ 18.1 ಓವರ್‌ಗಳಲ್ಲೇ 3 ವಿಕೆಟ್‌ ನಷ್ಟಕ್ಕೆ 159 ರನ್‌ ಗಳಿಸಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಇದನ್ನೂ ಓದಿ: IPL 2023: ಯಶಸ್ವಿ, ಬಟ್ಲರ್‌ ಬೊಂಬಾಟ್‌ ಬ್ಯಾಟಿಂಗ್‌ – ರಾಜಸ್ಥಾನ್‌ಗೆ 57 ರನ್‌ಗಳ ಭರ್ಜರಿ ಜಯ

    ಚೇಸಿಂಗ್‌ ಆರಂಭಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಮೊದಲ ಓವರ್‌ನಲ್ಲೇ ಆಘಾತ ಎದುರಾಗಿತ್ತು. ಆರಂಭಿಕ ಆಟಗಾರ ಡಿವೋನ್‌ ಕಾನ್ವೆ 4 ಎಸೆತಗಳಲ್ಲಿ ಯಾವುದೇ ರನ್‌ ಗಳಿಸದೇ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು. 2ನೇ ವಿಕೆಟ್‌ಗೆ ಕಣಕ್ಕಿಳಿದ ರಹಾನೆ ಸಿಕ್ಸರ್‌, ಬೌಂಡರಿ ಮಳೆ ಸುರಿಸುತ್ತಾ ಮುಂಬೈ ಬೌಲರ್‌ಗಳನ್ನು ಬೆಂಡೆತ್ತಿದರು. 2ನೇ ವಿಕೆಟ್‌ ಜೊತೆಯಾಟಕ್ಕೆ ರಹಾನೆ, ಋತುರಾಜ್‌ ಗಾಯಕ್ವಾಡ್‌ (Ruturaj Gaikwad) ಜೋಡಿ 44 ಎಸೆತಗಳಲ್ಲಿ ಭರ್ಜರಿ 82 ರನ್‌ ಗಳಿಸಿತ್ತು. ಕೇವಲ 19 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿದ್ದ ರಹಾನೆ 27 ಎಸೆತಗಳಲ್ಲಿ 61 ರನ್‌ (7 ಬೌಂಡರಿ, 3 ಸಿಕ್ಸರ್) ಚಚ್ಚಿ ಔಟಾದರು. ನಂತರ ಬಂದ ಶಿವಂ ದುಬೆ 26 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್‌ ನೆರವಿನಿಂದ 28 ರನ್‌ ಗಳಿಸಿದರು.

    ಇನ್ನೂ ಜವಾಬ್ದಾರಿಯುತ ಬ್ಯಾಟಿಂಗ್‌ ನಡೆಸಿದ ಮತ್ತೋರ್ವ ಆರಂಭಿಕ ಋತುರಾಜ್‌ ಗಾಯಕ್ವಾಡ್‌ ಕೊನೆಯವರೆಗೂ ಹೋರಾಡಿ 36 ಎಸೆತಗಳಲ್ಲಿ 40 ರನ್‌ (1 ಸಿಕ್ಸರ್‌, 2 ಬೌಂಡರಿ) ಗಳಿಸಿದರು. ಕೊನೆಯಲ್ಲಿ ಕಣಕ್ಕಿಳಿದ ಅಂಬಟಿ ರಾಯುಡು (Ambati Rayudu) 16 ಎಸೆತಗಳಲ್ಲಿ 3 ಬೌಂಡರಿಗಳೊಂದಿಗೆ 20 ರನ್‌ ಚಚ್ಚಿ ಗೆಲುವಿನ ನಗೆ ಬೀರಿದರು.

    ಮುಂಬೈ ಪರ ಜೇಸನ್ ಬೆಹ್ರೆನ್ಡಾರ್ಫ್, ಪಿಯೂಷ್‌ ಚಾವ್ಲಾ ಹಾಗೂ ಕುಮಾರ್‌ ಕಾರ್ತಿಕೇಯ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: IPL 2023: ವೇಗದ ಅರ್ಧಶತಕ ಸಿಡಿಸಿ ಧೂಳೆಬ್ಬಿಸಿದ ರಹಾನೆ

    ಮುಂಬೈ ಇಂಡಿಯನ್ಸ್ ಪರ ಬ್ಯಾಟಿಂಗ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಇಶಾನ್ ಕಿಶನ್ (Ishan Kishan) ಉತ್ತಮ ಆರಂಭ ನೀಡಿದರು. ಈ ಜೋಡಿ 4 ಓವರ್‌ಗಳಲ್ಲಿ ಮೊದಲ ವಿಕೆಟ್‌ಗೆ 38 ರನ್ ಜೊತೆಯಾಟ ನೀಡಿತ್ತು. ನಾಯಕ ರೋಹಿತ್ ಶರ್ಮಾ 13 ಎಸೆತಗಳಲ್ಲಿ 21 ರನ್ (3 ಬೌಂಡರಿ, 1 ಸಿಕ್ಸರ್) ಗಳಿಸಿ ಔಟಾದರು. ನಂತರ ಬಂದ ಕ್ಯಾಮೆರೂನ್‌ ಗ್ರೀನ್ 12 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನೂ ಸೂರ್ಯಕುಮಾರ್ ಯಾದವ್ ಕೇವಲ 1 ರನ್ ಗಳಿಸಿ ಮತ್ತೊಮ್ಮೆ ಬ್ಯಾಟಿಂಗ್‌ನಲ್ಲಿ ವಿಫಲರಾದರು.

    ಕಳೆದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ತಿಲಕ್ ವರ್ಮಾ 18 ಎಸೆತಗಳಲ್ಲಿ 22 ರನ್ (2 ಬೌಂಡರಿ, 1 ಸಿಕ್ಸರ್) ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಅರ್ಷದ್ ಖಾನ್ 2 ರನ್ ಗಳಿಸಿ ಪೆವಿಲಿಯನ್ ಸೇರಿದರು. ಇದರಿಂದ ಮುಂಬೈಗೆ ಆಘಾತ ಎದುರಾಗಿತ್ತು. ಈ ನಡುವೆ ಟಿಮ್ ಡೇವಿಡ್ 22 ಎಸೆತಗಳಲ್ಲಿ 31 ರನ್ ಬಾರಿಸಿ ತಂಡಕ್ಕೆ ನೆರವಾದರು. ಕೊನೆಯಲ್ಲಿ ಟ್ರಿಸ್ಟಾನ್ ಸ್ಟಬ್ಸ್ 5 ರನ್, ಹೃತಿಕ್ ಶೋಕೆನ್ 13 ಎಸೆತಗಳಲ್ಲಿ 3 ಬೌಂಡರಿ ಸಮೇತ 18 ರನ್ ಗಳಿಸಿ ತಂಡದ ಮೊತ್ತ 150ರ ಗಡಿ ದಾಟಲು ನೆರವಾದರು.

    ಜಡೇಜಾ ಸ್ಪಿನ್‌ ಜಾದು: ಬೌಲಿಂಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ರವೀಂದ್ರ ಜಡೇಜಾ 4 ಓವರ್‌ಗಳಲ್ಲಿ 20 ರನ್ ನೀಡಿ 3 ವಿಕೆಟ್ ಪಡೆದರೆ, ಮಿಚೆಲ್ ಸ್ಯಾಂಟ್ನರ್ 4 ಓವರ್‌ಗಳಲ್ಲಿ 28 ರನ್ ನೀಡಿ 2 ವಿಕೆಟ್ ಕಿತ್ತರು. ತುಷಾರ್ ದೇಶಪಾಂಡೆ 3 ಓವರ್‌ಗಳಲ್ಲಿ 31 ರನ್ ನೀಡಿ 2 ವಿಕೆಟ್ ಪಡೆದರೆ, ಸಿಸಾಂಡ ಮಗಲ 4 ಓವರ್‌ಗಳಲ್ಲಿ 37 ರನ್ ನೀಡಿ 1 ವಿಕೆಟ್‌ ಪಡೆದು ಮಿಂಚಿದರು.

  • IPL 2023: ಧೋನಿಗೆ ಮೊಣಕಾಲು ಗಾಯ – ಆರಂಭಿಕ ಪಂದ್ಯ ಆಡುವುದು ಡೌಟ್‌

    IPL 2023: ಧೋನಿಗೆ ಮೊಣಕಾಲು ಗಾಯ – ಆರಂಭಿಕ ಪಂದ್ಯ ಆಡುವುದು ಡೌಟ್‌

    ಅಹಮದಾಬಾದ್‌: ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಅವರ ಎಡಗಾಲಿನ ಮೊಣಕಾಲಿಗೆ ಗಾಯವಾಗಿದ್ದು, ಶುಕ್ರವಾರ ಗುಜರಾತ್ ಟೈಟಾನ್ಸ್ (GT) ವಿರುದ್ಧ ನಡೆಯಲಿರುವ ಐಪಿಎಲ್ ಆರಂಭಿಕ ಪಂದ್ಯದಲ್ಲಿ ಆಡುತ್ತಾರೆಯೇ ಎನ್ನುವ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.

    ಗುಜರಾತ್‌ ಟೈಟಾನ್ಸ್‌ ವಿರುದ್ಧ ನಡೆಯಲಿರುವ 2023ರ ಐಪಿಎಲ್‌ನ ಮೊದಲ ಪಂದ್ಯ ಆರಂಭಕ್ಕೂ ಮುನ್ನವೇ ಧೋನಿ ಕಾಲಿಗೆ ಪೆಟ್ಟಾಗಿಸಿಕೊಂಡಿದ್ದಾರೆ. ಇದರಿಂದ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಈ ಬಾರಿ ಐಪಿಎಲ್‌ ಆವೃತ್ತಿ ಮಾಹಿ ವೃತ್ತಿ ಬದುಕಿನ ಕೊನೆಯ ಟೂರ್ನಿಯಾಗಿದ್ದು, ಸಿಎಸ್‌ಕೆ ಕಪ್‌ ಗೆಲ್ಲಲೇಬೇಕೆಂಬ ಪಣ ತೊಟ್ಟಿದೆ. ಇದನ್ನೂ ಓದಿ: IPL ಉದ್ಘಾಟನಾ ಸಮಾರಂಭದಲ್ಲಿ ಸೊಂಟ ಬಳುಕಿಸಲಿದ್ದಾರೆ ರಶ್ಮಿಕಾ ಮಂದಣ್ಣ, ಮಿಲ್ಕಿ ಬ್ಯೂಟಿ ತಮನ್ನಾ

    41 ವರ್ಷದ ಟೀಂ ಇಂಡಿಯಾ ಮಾಜಿ ನಾಯಕ ಚೆನ್ನೈನಲ್ಲಿ ತರಬೇತಿ ವೇಳೆ ಎಡ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ ಗುರುವಾರ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಅಭ್ಯಾಸದಲ್ಲೂ ಅವರು ಪಾಲ್ಗೊಂಡಿಲ್ಲ. ಒಂದು ವೇಳೆ ಮೊದಲ ಪಂದ್ಯಕ್ಕೆ ಧೋನಿ ಗೈರಾದರೆ, ಯಾರ ಹೆಗಲಿಗೆ ನಾಯಕತ್ವ ಬೀಳಲಿದೆ ಅನ್ನೋದು ಕುತೂಹಲವಾಗಿದೆ. ಇದನ್ನೂ ಓದಿ: ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ಮಾ.31 ರಿಂದ IPL ಧಮಾಕ – ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

    ಈಗಾಗಲೇ ಇಂಗ್ಲೆಂಡ್‌ ತಂಡದಲ್ಲಿ ಯಶಸ್ವಿ ಆಟಗಾರನಾಗಿ ಗುರುತಿಸಿಕೊಂಡಿರುವ ಆಲ್‌ರೌಂಡರ್‌ ಬೆನ್‌ಸ್ಟೋಕ್ಸ್‌ (Ben Stokes), ಟೀಂ ಇಂಡಿಯಾ ಆಲ್‌ರೌಂಡರ್‌ ರವೀಂದ್ರ ಜಡೇಜಾ (Ravindra Jadeja) ಹಾಗೂ ಸಿಎಸ್‌ಕೆ ತಂಡದ ಆರಂಭಿಕ ಆಟಗಾರ ಋತುರಾಜ್‌ ಗಾಯಕ್ವಾಡ್‌ ನಡುವೆ ಪೈಪೋಟಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

    ಇನ್ನೂ ಡಿವೊನ್ ಕಾನ್ವೇ ಅಥವಾ ಅಂಬಟಿ ರಾಯುಡು ಅವರಲ್ಲಿ ಒಬ್ಬರು ವಿಕೆಟ್ ಕೀಪರ್‌ ಆಗಬಹುದು ಎನ್ನಲಾಗಿದೆ. ಆದರೆ, ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್‌, ನನ್ನ ಪ್ರಕಾರ ಧೋನಿ ಆಡುವುದು ಶೇ 100 ರಷ್ಟು ಖಚಿತ. ಬೇರೆ ಯಾವುದೇ ಬೆಳವಣಿಗೆಯ ಬಗ್ಗೆ ನನಗೆ ತಿಳಿದಿಲ್ಲ’ ಎಂದಿದ್ದಾರೆ.

  • ಬೌಲರ್‌ಗಳ ಭರ್ಜರಿ ಬೇಟೆ, ಕೆ.ಎಲ್‌ ರಾಹುಲ್‌ ಫಿಫ್ಟಿ – ಆಸೀಸ್‌ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ಜಯ

    ಬೌಲರ್‌ಗಳ ಭರ್ಜರಿ ಬೇಟೆ, ಕೆ.ಎಲ್‌ ರಾಹುಲ್‌ ಫಿಫ್ಟಿ – ಆಸೀಸ್‌ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ಜಯ

    – ಭಾರತಕ್ಕೆ 5 ವಿಕೆಟ್‌ಗಳ ಭರ್ಜರಿ ಜಯ

    ಮುಂಬೈ: ಕೆ.ಎಲ್‌ ರಾಹುಲ್‌ (KL Rahul) ಜವಾಬ್ದಾರಿಯುತ ಅರ್ಧಶತಕ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಆಸ್ಟ್ರೇಲಿಯಾ (Australia) ವಿರುದ್ಧ ಭಾರತ 5 ವಿಕೆಟ್‌ಗಳ ಜಯ ಸಾಧಿಸಿದೆ.

    ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತದ (Team India) ಬೌಲರ್‌ಗಳ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ 35.4 ಓವರ್‌ಗಳಲ್ಲೇ 188 ರನ್‌ಗಳಿಗೆ ಸರ್ವಪತನಕಂಡಿತು. 189 ರನ್‌ಗಳ ಗುರಿ ಬೆನ್ನತ್ತಿದ ಭಾರತ ನಿಧಾನಗತಿಯ ಬ್ಯಾಟಿಂಗ್‌ನಿಂದ 39.5 ಓವರ್‌ಗಳಲ್ಲಿ 191 ರನ್‌ ಗಳಿಸಿ 5 ವಿಕೆಟ್‌ಗಳ ಜಯ ಸಾಧಿಸಿತು. ಇದನ್ನೂ ಓದಿ: ಸ್ವಿಮ್ಮಿಂಗ್ ಪೂಲ್‌ನಲ್ಲಿ ವಾಕ್ ಮಾಡಿದ ಪಂತ್ – ಬೇಗ ಗುಣಮುಖರಾಗಿ ಅಂದ್ರು ಫ್ಯಾನ್ಸ್

    ಆಸ್ಟ್ರೇಲಿಯಾ ಅಲ್ಪಮೊತ್ತದ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಕ್ಕೂ ಆರಂಭದಲ್ಲಿ ತೀವ್ರ ಆಘಾತ ಎದುರಾಗಿತ್ತು. ಅಗ್ರಕ್ರಮಾಂಕದ ಬ್ಯಾಟರ್‌ಗಳ ಕಳಪೆ ಬ್ಯಾಟಿಂಗ್‌ ಪ್ರದರ್ಶನದಿಂದ ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಕೆ.ಎಲ್‌. ರಾಹುಲ್‌, ರವೀಂದ್ರ ಜಡೇಜಾ ಹಾಗೂ ನಾಯಕ ಹಾರ್ದಿಕ್‌ ಪಾಂಡ್ಯ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ಭಾರತ ಗೆಲುವು ಸಾಧಿಸಿತು.

    ಆರಂಭಿಕರಾದ ಇಶಾನ್‌ ಕಿಶನ್‌ 3 ರನ್‌, ಶುಭಮನ್‌ ಗಿಲ್‌ 20 ರನ್‌ ಹಾಗೂ ಕೊಹ್ಲಿ 4 ರನ್‌ ಗಳಿಸಿದರೆ ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಸೂರ್ಯಕುಮಾರ್‌ ಯಾದವ್‌ (Suryakumar Yadav) ಶೂನ್ಯಕ್ಕೆ ನಿರ್ಗಮಿಸಿ ನಿರಾಸೆ ಮೂಡಿಸಿದರು. ಇದರಿಂದ ಭಾರತಕ್ಕೆ ಸೋಲಿನ ಆತಂಕ ಎದುರಾಗಿತ್ತು.

    ರಾಹುಲ್‌ – ಜಡೇಜಾ ಶತಕದ ಜೊತೆಯಾಟ:
    ಮಧ್ಯಂತರದಲ್ಲಿ ಕೆ.ಎಲ್‌ ರಾಹುಲ್‌ ಹಾಗೂ ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಯಶಸ್ವಿಯಾದರು. ಇವರಿಬ್ಬರ ಜೊತೆಯಾಟದಿಂದ ತಂಡಕ್ಕೆ 55 ಎಸೆತಗಳಲ್ಲಿ 44 ರನ್‌ ಸೇರ್ಪಡೆಯಾಯಿತು. ಅಷ್ಟರಲ್ಲೇ ನಾಯಕ ಹಾರ್ದಿಕ್‌ ಪಾಂಡ್ಯ ಔಟಾಗಿ ಪೆವಿಲಿಯನ್‌ ಸೇರಿಕೊಂಡರು. ನಂತರ ಕಣಕ್ಕಿಳಿದ ಆಲ್‌ರೌಂಡರ್‌ ರವೀಂದ್ರ ಜಡೇಜಾ, ರಾಹುಲ್‌ ಜೊತೆಗೂಡಿ ಭರ್ಜರಿ ಬ್ಯಾಟಿಂಗ್‌ ಮಾಡಿದರು. ಮುರಿಯದ 6ನೇ ವಿಕೆಟ್‌ಗೆ ಈ ಜೋಡಿ 123 ಎಸೆತಗಳಲ್ಲಿ 108 ರನ್‌ ಕಲೆಹಾಕಿತು. ರಾಹುಲ್‌ 91 ಎಸೆತಗಳಲ್ಲಿ 75 ರನ್‌ (7 ಬೌಂಡರಿ, 1 ಸಿಕ್ಸರ್‌) ಗಳಿಸಿದರೆ, ಜಡೇಜಾ 69 ಎಸೆತಗಳಲ್ಲಿ 5 ಬೌಂಡರಿಯೊಂದಿಗೆ 45 ರನ್‌ ಬಾರಿಸಿ ಅಜೇಯರಾಗುಳಿದರು.

    ಆಸ್ಟ್ರೇಲಿಯಾ ಪರ ಮಿಚೆಲ್‌ ಸ್ಟಾರ್ಕ್‌ 3 ವಿಕೆಟ್‌ ಪಡೆದರೆ, ಮಾರ್ಕ್ಸಸ್‌ ಸ್ಟೋನಿಸ್‌ 2 ವಿಕೆಟ್‌ ಕಿತ್ತರು. ಇದನ್ನೂ ಓದಿ: `ನಾಟು ನಾಟು’ ಹಾಡಿಗೆ ಸ್ಟೆಪ್ ಹಾಕಿದ ಕಿಂಗ್ ಕೊಹ್ಲಿ – ವಿರಾಟ್ ಡಾನ್ಸ್‌ಗೆ ಅಭಿಮಾನಿಗಳು ಫಿದಾ

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡವನ್ನು 36 ಓವರ್‌ಗಳ ಒಳಗೆ ಆಲ್‌ಔಟ್‌ ಮಾಡುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಯಿತು.

    ಡೇವಿಡ್‌ ವಾರ್ನರ್‌ ಅನುಪಸ್ಥಿತಿಯಲ್ಲಿ ಇನಿಂಗ್ಸ್‌ ಆರಂಭಿಸಿದ್ದ ಮಿಚೆಲ್‌ ಮಾರ್ಷ್‌ ಸ್ಫೋಟಕ ಬ್ಯಾಟಿಂಗ್‌ ನಡೆಸಿ 65 ಎಸೆತಗಳಲ್ಲಿ 81 ರನ್‌ ಬಾರಿಸುವ ಮೂಲಕ ಕಾಂಗರೂ ಪಡೆಗೆ ಭರ್ಜರಿ ಆರಂಭ ಒದಗಿಸಿದ್ದರು. ಇದರಿಂದ ಆಸ್ಟ್ರೇಲಿಯಾ ತಂಡ 300 ರನ್‌ ಗಡಿ ದಾಟುವ ಸಾಧ್ಯತೆಯಿತ್ತು. ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ ಒಂದೊಂದೆ ವಿಕೆಟ್‌ ಕಳೆದುಕೊಂಡಿತು. ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಭಾರತ ತಂಡ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ಕಡಿಮೆ ಓವರ್‌ಗಳಲ್ಲಿ ಆಲ್‌ಔಟ್‌ ಮಾಡಿದ ಇತಿಹಾಸ ನಿರ್ಮಿಸಿತು.

    ಇನಿಂಗ್ಸ್‌ ಆರಂಭಿಸಿದ ಟ್ರಾವಿಸ್‌ ಹೆಡ್‌ 5 ರನ್‌ಗಳಿಸಿ ಮೊಹಮ್ಮದ್‌ ಸಿರಾಜ್‌ ಆಕ್ರಮಣಕಾರಿ ಬೌಲಿಂಗ್‌ಗೆ ಕ್ಲೀನ್‌ ಬೌಲ್ಡ್‌ ಆದರು. ನಂತರ ಮಿಚೆಲ್‌ ಮಾರ್ಷ್‌ ಮತ್ತು ಸ್ಟೀವ್‌ ಸ್ಮಿತ್‌ (Steve Smith) 72 ರನ್‌ಗಳ ಜೊತೆಯಾಟವಾಡಿ ಸ್ವಲ್ಪ ಚೇತರಿಕೆ ತಂದಿದ್ದರು. ಎಚ್ಚರಿಕೆಯಿಂದ ಇನಿಂಗ್ಸ್ ಕಟ್ಟುತ್ತಿದ್ದ ಸ್ಟೀವ್‌ ಸ್ಮಿತ್‌ ಅವರ ಆಟಕ್ಕೆ ನಾಯಕ ಹಾರ್ದಿಕ್‌ ಪಾಂಡ್ಯ ಬ್ರೇಕ್‌ ಹಾಕಿ ಪೆವಿಲಿಯನ್‌ಗೆ ದಾರಿ ತೋರಿಸಿದರು. ಕೀಪರ್‌ ಕೆ.ಎಲ್‌ ರಾಹುಲ್‌ ತೆಗೆದುಕೊಂಡ ಡೈವಿಂಗ್‌ ಕ್ಯಾಚ್‌ ಪರಿಣಾಮ 30 ಎಸೆತಗಳಲ್ಲಿ 22 ರನ್‌ ಗಳಿಸಿದ್ದ ಸ್ಮಿತ್‌ ಪೆವಿಲಿಯನ್‌ ಸೇರಬೇಕಾಯಿತು.

    ಬಳಿಕ ಕೆಲಕಾಲ ಉತ್ತಮ ಬ್ಯಾಟಿಂಗ್‌ ಮಾಡುತ್ತಿದ್ದ ಮಿಚೆಲ್‌ ಮಾರ್ಷ್‌ 61 ಎಸೆತಗಳಲ್ಲಿ 81 ರನ್‌ (10 ಬೌಂಡರಿ, 5 ಸಿಕ್ಸರ್‌) ಚಚ್ಚಿ ರವೀಂದ್ರ ಜಡೇಜಾ ಸ್ಪಿನ್‌ ಬೌಲಿಂಗ್‌ ದಾಳಿಗೆ ತುತ್ತಾದರು. ನಂತರದಲ್ಲಿ ಬಂದ ಬ್ಯಾಟರ್‌ಗಳ ಕಳಪೆ ಪ್ರದರ್ಶನದಿಂದಾಗಿ ಒಂದೊಂದೆ ವಿಕೆಟ್‌ ಪತನಗೊಂಡಿತು. ಅಂತಿಮವಾಗಿ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್‌ ಆಯಿತು. ಜಾಶ್‌ ಇಂಗ್ಲಿಸ್‌ 26 ರನ್‌, ಕ್ಯಾಮರೂನ್‌ ಗ್ರೀನ್‌ 12 ರನ್‌ ಗಳಿಸಿದರು.

    ಏಕದಿನ ಸರಣಿಯ ಮೊದಲ ಪಂದ್ಯದಲ್ಲೇ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡದ ಬೌಲರ್‌ಗಳು ಭರ್ಜರಿ ಬೇಟೆಯಾಡಿದರು. ವೇಗಿಗಳಾದ ಮೊಹಮ್ಮದ್‌ ಶಮಿ 6 ಓವರ್‌ಗಳಲ್ಲಿ 17 ರನ್‌ ನೀಡಿ 3 ವಿಕೆಟ್‌ ಪಡೆದರೆ, ಮೊಹಮ್ಮದ್‌ ಸಿರಾಜ್‌ 5.4 ಓವರ್‌ಗಳಲ್ಲಿ 29 ರನ್‌ ನೀಡಿ 3 ವಿಕೆಟ್‌ ಕಿತ್ತರು. ರವೀಂದ್ರ ಜಡೇಜಾ ಸ್ಪಿನ್‌ ಜಾದುವಿನಿಂದ 2 ವಿಕೆಟ್‌ ಪಡೆದರೆ, ಹಾರ್ದಿಕ್‌ ಪಾಂಡ್ಯ, ಕುಲ್‌ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದು ತೃಪ್ತಿಪಟ್ಟುಕೊಂಡರು.

    ಆಸ್ಟ್ರೇಲಿಯಾಗೆ ಗಾಯದ ಮೇಲೆ ಬರೆ: ಡೇವಿಡ್‌ ವಾರ್ನರ್‌ ಅನುಪಸ್ಥಿತಿಯಲ್ಲಿ ಇನ್ನಿಂಗ್ಸ್‌ ಆರಂಭಿಸಿದ ಸ್ಟೀವ್‌ ಸ್ಮಿತ್‌ ಸಾರಥ್ಯದ ಆಸ್ಟ್ರೇಲಿಯಾ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತೆ ಮತ್ತೊಂದು ಸಮಸ್ಯೆ ಎದುರಾಗಿತ್ತು. ವಿಕೆಟ್‌ಕೀಪರ್‌ ಬ್ಯಾಟ್ಸ್‌ ಮ್ಯಾನ್‌ ಅಲೆಕ್ಸ್‌ ಕೇರಿ ಅನಾರೋಗ್ಯದ ಕಾರಣ ಕ್ರೀಡಾಂಗಣಕ್ಕೂ ಬಾರದೇ ಹೋಟೆಲ್‌ನಲ್ಲೇ ಉಳಿದುಕೊಂಡರು. ಇದು ತಂಡಕ್ಕೆ ಮತ್ತಷ್ಟು ಸಮಸ್ಯೆ ತಂದೊಡ್ಡಿತ್ತು.

  • ಎರಡನೇ ದಿನ 16 ವಿಕೆಟ್ ಪತನ – ಆಸೀಸ್ ಗೆಲುವಿಗೆ ಬೇಕು 76 ರನ್

    ಎರಡನೇ ದಿನ 16 ವಿಕೆಟ್ ಪತನ – ಆಸೀಸ್ ಗೆಲುವಿಗೆ ಬೇಕು 76 ರನ್

    ಇಂದೋರ್: 2ನೇ ದಿನದಾಟದಲ್ಲಿ ನಥನ್ ಲಿಯಾನ್ (Nathan Lyon) ಸ್ಪಿನ್ ಬೌಲಿಂಗ್ ದಾಳಿಗೆ ಪಲ್ಟಿ ಹೊಡೆದ ಭಾರತ (Team India) 163 ರನ್‌ಗಳಿಗೆ ಸರ್ವಪತನ ಕಂಡಿದ್ದು ಆಸ್ಟ್ರೇಲಿಯಾಗೆ (Australia) 76 ರನ್ ಗುರಿಯನ್ನು ನೀಡಿದೆ.

    ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗಾವಾಸ್ಕಾರ್ ಟ್ರೋಫಿ 3ನೇ ಪಂದ್ಯದಲ್ಲಿ 2ನೇ ದಿನ 16 ವಿಕೆಟ್ ಪತನಗೊಂಡಿದೆ. ಎರಡು ದಿನದಲ್ಲಿ 30 ವಿಕೆಟ್ ಉರುಳಿದೆ. ಇದನ್ನೂ ಓದಿ: ಮೊದಲ ದಿನವೇ 14 ವಿಕೆಟ್‌ ಪತನ – ಪಿಚ್‌ ವಿರುದ್ಧ ಭಾರೀ ಟೀಕೆ

    ಮೊದಲ ದಿನದ ಅಂತ್ಯಕ್ಕೆ 54 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿದ್ದ ಆಸ್ಟ್ರೇಲಿಯಾ ತಂಡ 2ನೇ ದಿನದಲ್ಲಿ ಕೇವಲ ಹೆಚ್ಚುವರಿ 41 ರನ್‌ಗಳಿಸಲಷ್ಟೇ ಸಾಧ್ಯವಾಯಿತು. ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ಕೊನೆಯ 11 ರನ್ ಗಳಿಸುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿತ್ತು. ಪರಿಣಾಮ 197 ರನ್‌ಗಳಿಗೆ ಆಲೌಟ್ ಆಯಿತು. ಇದನ್ನೂ ಓದಿ: ಭಾರತದ ಪರ ವಿಶೇಷ ಸಾಧನೆಗೈದ ಜಡೇಜಾ

    ನಂತರ ತನ್ನ ಸರದಿ ಆರಂಭಿಸಿದ ರೋಹಿತ್ ಪಡೆ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿತು. ಆರಂಭಿಕರಾದ ರೋಹಿತ್ ಶರ್ಮಾ (Rohit Sharma), ಶುಭಮನ್ ಗಿಲ್ ಜೋಡಿ ಉತ್ತಮ ಶುಭಾರಂಭ ನೀಡುವಲ್ಲಿ ವಿಫಲವಾಯಿತು. ರೋಹಿತ್ 12 ರನ್‌ಗಳಿಸಿದ್ರೆ, ಗಿಲ್ 5 ರನ್‌ಗಳಿಗೆ ವಿಕೆಟ್ ಒಪ್ಪಿಸಿದ್ರು. ಈ ವೇಳೆ ತಂಡಕ್ಕೆ ನೆರವಾದ ಚೇತೇಶ್ವರ್ ಪೂಜಾರ 142 ಎಸೆತಗಳಲ್ಲಿ 59 ರನ್ ಬಾರಿಸಿ ಭಾರತ 150 ರನ್‌ಗಳ ಗಡಿ ದಾಟಲು ನೆರವಾದರು. ಶ್ರೇಯಸ್ ಅಯ್ಯರ್ 26 ರನ್ ಗಳಿಸಿದರು. ನಂತರ ಭಾರತ ಒಂದೊಂದೆ ವಿಕೆಟ್‌ಗಳನ್ನು ಕಳೆದುಕೊಂಡಿತು. ಎರಡೂ ದಿನಗಳಲ್ಲೂ ಅಕ್ಷರ್ ಪಟೇಲ್ ಕ್ರಮವಾಗಿ 12, 15 ರನ್ ಗಳಿಸಿ ಅಜೇಯರಾಗುಳಿದರು. ಅಂತಿಮವಾಗಿ 2ನೇ ದಿನದ ಅಂತ್ಯಕ್ಕೆ 60.3 ಓವರ್‌ಗಳಲ್ಲಿ 163 ರನ್‌ಗಳಿಗೆ ಭಾರತ ಸರ್ವಪತನ ಕಂಡಿತು.

    ಟೀಂ ಇಂಡಿಯಾ ಪರ ಆರ್.ಅಶ್ವಿನ್ (Ravichandran Ashwin) 3 ವಿಕೆಟ್ ಪಡೆದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು 689 ವಿಕೆಟ್ ಪಡೆಯುವ ಮೂಲಕ 687 ವಿಕೆಟ್ ಪಡೆದ ಟೀಂ ಇಂಡಿಯಾ ಲೆಜೆಂಡರಿ ಕಪಿಲ್ ದೇವ್ ಅವರ ದಾಖಲೆ ಮುರಿದರು. ರವೀಂದ್ರ ಜಡೇಜಾ (Ravindra Jadeja) 4 ವಿಕೆಟ್ ಪಡೆದರೆ, ಉಮೇಶ್ ಯಾದವ್ ಮೂರು ವಿಕೆಟ್ ಕಬಳಿಸಿದರು.

    ಮೂರನೇ ಟೆಸ್ಟ್ ಪಂದ್ಯದಲ್ಲೂ ಮಿಂಚಿದ ಆಸ್ಟ್ರೇಲಿಯಾ ಕ್ರಿಕೆಟಿಗ ನಥನ್ ಲಿಯಾನ್ ಸ್ಪಿನ್ ದಾಳಿಯ ಮೂಲಕ ಟೀಂ ಇಂಡಿಯಾ ಬ್ಯಾಟರ್‌ಗಳನ್ನ ಪೆವಿಲಿಯನ್‌ಗಟ್ಟುವಲ್ಲಿ ಯಶಸ್ವಿಯಾದರು. 23.1 ಓವರ್‌ಗಳಲ್ಲಿ 64 ರನ್ ನೀಡಿ, ಶುಭಮನ್ ಗಿಲ್, ರೋಹಿತ್, ಜಜೇಡಾ, ಭರತ್, ಅಶ್ವಿನ್, ಪೂಜಾರ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್ ವಿಕೆಟ್ ಉರುಳಿಸುವ ಮೂಲಕ ಟೀಂ ಇಂಡಿಯಾವನ್ನು 163 ರನ್‌ಗಳಿಗೆ ಕಟ್ಟಿಹಾಕಿದರು. ಮ್ಯಾಥಿವ್ ಕುಹ್ನೆಮನ್, ಮಿಚೆಲ್ ಸ್ಟಾರ್ಕ್ ತಲಾ ಒಂದೊಂದು ವಿಕೆಟ್ ಪಡೆದರು.

  • ಭಾರತದ ಪರ ವಿಶೇಷ ಸಾಧನೆಗೈದ ಜಡೇಜಾ

    ಭಾರತದ ಪರ ವಿಶೇಷ ಸಾಧನೆಗೈದ ಜಡೇಜಾ

    ಇಂದೋರ್: ಭಾರತ ಕ್ರಿಕೆಟ್ (Cricket) ತಂಡದ ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (International Cricket) ಸಾಧನೆ ಮಾಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 500 ವಿಕೆಟ್ ಪಡೆದ ಹಾಗೂ 5,000 ರನ್ ಗಳಿಸಿದ ಭಾರತದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ.

    ಇಂದೋರ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ (IND vs AUS) ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ (Test Cricket) ಅವರು ಈ ಸಾಧನೆ ಮಾಡಿದ್ದಾರೆ. ಆಸೀಸ್ ಓಪನರ್ ಟ್ರಾವಿಸ್ ಹೆಡ್ ಅವರನ್ನು ಔಟ್ ಮಾಡುವ ಮೂಲಕ ಜಡೇಜಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500ನೇ ವಿಕೆಟ್ ಪಡೆದರು. ಇದನ್ನೂ ಓದಿ: ಮೊದಲ ದಿನವೇ 14 ವಿಕೆಟ್‌ ಪತನ – ಪಿಚ್‌ ವಿರುದ್ಧ ಭಾರೀ ಟೀಕೆ

    ಜಡೇಜಾ ಒಟ್ಟು 298 ಪಂದ್ಯಗಳಲ್ಲಿ ಒಟ್ಟು 503 ವಿಕೆಟ್ ಪಡೆದಿದ್ದಾರೆ. ಅಷ್ಟೇ ಅಲ್ಲ ಜಡೇಜಾ 298 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 241 ಇನ್ನಿಂಗ್ಸ್‌ಗಳಲ್ಲಿ ಒಟ್ಟು 5,527 ರನ್ ಗಳಿಸಿದ್ದಾರೆ. ಒಟ್ಟು ಮೂರು ಶತಕಗಳು ಮತ್ತು 31 ಅರ್ಧ ಶತಕಗಳನ್ನು ಗಳಿಸಿದ್ದಾರೆ.

    ಲೆಜೆಂಡರಿ ಆಲ್‌ರೌಂಡರ್ ಮತ್ತು ಭಾರತದ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ (Kapil Dev) ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500 ವಿಕೆಟ್ ಮತ್ತು 5,000 ರನ್ ಗಳಿಸಿದ ಭಾರತದ 2ನೇ ಆಟಗಾರ ಎನಿಸಿಕೊಂಡಿದ್ದಾರೆ. ಕಪಿಲ್ ದೇವ್ 356 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 687 ವಿಕೆಟ್ ಕಬಳಿಸಿದ್ದಾರೆ. 356 ಪಂದ್ಯಗಳನ್ನಾಡಿ ಒಟ್ಟು 9,031 ರನ್ ಗಳಿಸಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ 9 ಶತಕ ಮತ್ತು 41 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಇದನ್ನೂ ಓದಿ: ಫಾಲೋ ಆನ್‌ಗೆ ತುತ್ತಾದ್ರೂ 1 ರನ್ ರೋಚಕ ಜಯ – 22 ವರ್ಷದ ಬಳಿಕ ನ್ಯೂಜಿಲೆಂಡ್ ಸಾಧನೆ

    ಜಡೇಜಾ ಮತ್ತು ಕಪಿಲ್ ದೇವ್ ಅವರಲ್ಲದೆ, ಈ ಸಾಧನೆ ಪಟ್ಟಿಯಲ್ಲಿ ಪಾಕಿಸ್ತಾನದ ವಾಸಿಂ ಅಕ್ರಮ್, ಇಮ್ರಾನ್ ಖಾನ್ ಮತ್ತು ಶಾಹಿದ್ ಅಫ್ರಿದಿ, ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ನ್ಯೂಜಿಲೆಂಡ್‌ನ ಡೇನಿಯಲ್ ವೆಟ್ಟೋರಿ, ಇಂಗ್ಲೆಂಡ್‌ನ ಇಯಾನ್ ಬೋಥಮ್, ದಕ್ಷಿಣ ಆಫ್ರಿಕಾದ ಶಾನ್ ಪೊಲಾಕ್ ಮತ್ತು ಜ್ಯಾಕ್ ಕಾಲಿಸ್ ಮತ್ತು ಶ್ರೀಲಂಕಾದ ಚಮಿಂಡಾ ವಾಸ್ ಕೂಡ ಇದ್ದಾರೆ.

    ಇಂದು ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 33.2 ಓವರ್‌ಗಳಲ್ಲಿ 109 ರನ್‌ಗಳಿಗೆ ಆಲೌಟ್ ಆಗಿದೆ. ನಂತರ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 54 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 156 ರನ್‌ಗಳಿಸಿದೆ. ಭಾರತದ ಪರವಾಗಿ ಎಲ್ಲಾ 4 ವಿಕೆಟ್‌ಗಳನ್ನು ರವೀದ್ರ ಜಡೇಜಾ ಪಡೆದಿರುವುದು ವಿಶೇಷ.