Tag: Ravindra Srikantayya

  • ಎಲ್ಲೆಲ್ಲಿ ಯಾರ್ಯಾರಿಗೆ ಕರೆಂಟ್ ಹೊಡೆದಿದ್ಯೋ ಗೊತ್ತಿಲ್ಲ: ಜೆಡಿಎಸ್ ಶಾಸಕ ರವಿಂದ್ರ ಶ್ರೀಕಂಠಯ್ಯ

    ಎಲ್ಲೆಲ್ಲಿ ಯಾರ್ಯಾರಿಗೆ ಕರೆಂಟ್ ಹೊಡೆದಿದ್ಯೋ ಗೊತ್ತಿಲ್ಲ: ಜೆಡಿಎಸ್ ಶಾಸಕ ರವಿಂದ್ರ ಶ್ರೀಕಂಠಯ್ಯ

    – ಹೊಸದಾಗಿ ಸಿಡಿ ಬಿಟ್ರೆ ನೋಡ್ತೀನಿ

    ಮಂಡ್ಯ: ಎಲ್ಲೆಲ್ಲಿ ಯಾರ್ಯಾರಿಗೆ ಕರೆಂಟ್ ಹೊಡೆದಿದೆಯೋ ಗೊತ್ತಿಲ್ಲ. ಯಾಕೆ ಪಾಪ ಈ ರೀತಿ ತಪ್ಪು ಮಾಡಿಕೊಳ್ತಾರೋ ಎಂದು ಜೆಡಿಎಸ್ ಶಾಸಕ ರವಿಂದ್ರ ಶ್ರೀಕಂಠಯ್ಯ ಹೇಳಿದ್ದಾರೆ.

    ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಾಹದೇವಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬೆಗೆ ಹೋಗಿದ್ದವರೆಲ್ಲ ಕೋರ್ಟ್ ಮೊರೆ ಹೋಗಿದ್ದಾರೆ. ಮಾಧ್ಯಮದಲ್ಲಿ ಪ್ರಸಾರ ಮಾಡದಂತೆ ಕೊರ್ಟ್ ತಡೆ ಹೋಗಿರುವುದು ಬಹಳ ಹಾಸ್ಯ ಕಾಣ್ತಿದೆ ಎಂದರು.

    ಸಿಡಿ ನೀವು ನೋಡಿದಾಗೇ ನಾನು ನೋಡಿದ್ದೀನಿ. ಅದಕ್ಕಿಂತ ಜಾಸ್ತಿ ಏನೂ ನನಗೆ ಗೊತ್ತಿಲ್ಲ. ಎಲ್ಲಿ ಯಾರ್ಯಾರಿಗೆ ಕರೆಂಟ್ ಹೊಡೆದಿದ್ಯೋ ನನಗೆ ಗೊತ್ತಿಲ್ಲ. ಯಾಕೇ ಪಾಪ ಈ ತರ ತಪ್ಪು ಮಾಡ್ಕೋಳ್ತಾರೋ. ನಾವು ಬಂದಿರುವುದು ಸಮಾಜ ಸೇವೆ ಮಾಡುವುದಕ್ಕೆ. ದೇವರು ಕೊಟ್ಟ ಅವಕಾಶದಲ್ಲಿ ಜನಗಳ ಸೇವೆ ಮಾಡಬೇಕು. ಜನ ಪ್ರತಿನಿಧಿಗಳು ಕೋರ್ಟ್ ಗೆ ಹೋಗಿ ತಡೆ ತರುವಂತ ಪರಿಸ್ಥಿತಿಯನ್ನ ಮಾಡ್ಕೋಳ್ಳಬಾರದು. ಇದು ರಾಜಕೀಯ ಕ್ಷೇತ್ರದಲ್ಲಿ ತಲೆ ತಗ್ಗಿಸುವಂತ ವಿಚಾರ ಇದು. ನೀವು ನೋಡಿರುವಾಗೆ ನಾನು ನೋಡಿದ್ದು, ಅಷ್ಟೇ ಹೊಸದಾಗಿ ಬಿಟ್ಟರೆ ನೋಡ್ತೇನೆ ಎಂದು ಹೇಳಿದರು.

    ಮಾಜಿ ಸಚಿವ ಸೆಕ್ಸ್ ಸಿಡಿ ಹೊರ ಬಂದು ರಾಜಕೀಯ ವಲಯದಲ್ಲಿ ಅಲ್ಲೋಲಕಲ್ಲೋಲ ಆಗುತ್ತಿದ್ದಂತೆಯೇ ಇತ್ತ 6 ಮಮದಿ ಸಚಿವರು ಕೋರ್ಟ್ ಮೊರೆ ಹೊಗಿದ್ದಾರೆ. ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡಬಾರದು ಎಂದು ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಕೆ.ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

    ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದಾರೆ. ಆರು ಸಚಿವರಿಗೆ ಭೀತಿ ಹುಟ್ಟಿರುವುದು ಏಕೆ? ಇದ್ದಕ್ಕಿಂದ್ದಂತೆ ಯಾಕೆ ಕೋರ್ಟ್ ಮೊರೆ ಹೋಗಿದ್ದಾರೆ ಎಂಬುದು ಮತ್ತಷ್ಟು ಕುತೂಹಲ ಹುಟ್ಟಿಸಿದೆ.

  • ರವೀಂದ್ರ ಶ್ರೀಕಂಠಯ್ಯ ಸವಾಲು ಸ್ವೀಕರಿಸಿದ ಸುಮಲತಾ

    ರವೀಂದ್ರ ಶ್ರೀಕಂಠಯ್ಯ ಸವಾಲು ಸ್ವೀಕರಿಸಿದ ಸುಮಲತಾ

    – ಬಿಜೆಪಿಗೆ ಬಾಹ್ಯಬೆಂಬಲ ಸಾಧ್ಯತೆ!

    ಬೆಂಗಳೂರು: ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಕಿರುವ ಸವಾಲನ್ನು ಮಂಡ್ಯ ಕ್ಷೇತ್ರದ ನೂತನ ಸಂಸದೆ ಸುಮಲತಾ ಅಂಬರೀಶ್ ಸ್ವೀಕರಿಸಿದ್ದಾರೆ.

    ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ ಅಂಬರೀಶ್, ಕೆಲಸದ ವಿಚಾರದಲ್ಲಿ ಮಂಡ್ಯ ಜಿಲ್ಲೆಯ ರೈತರಿಗೆ ನಾನು ಮೊದಲು ಆದ್ಯತೆ ನೀಡುತ್ತೇನೆಂದು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ. ನಾಲೆಗಳಿಗೆ ನೀರು ಬಿಡುವ ಕುರಿತಾಗಿ ಎಲ್ಲರ ಮಾರ್ಗದರ್ಶನ ಪಡೆದುಕೊಂಡು ಕೆಲಸ ಮಾಡುತ್ತೇನೆ. ರೈತರ ಬೆಳೆಗಳಿಗೆ ಸರಿಯಾದ ಸಮಯದಲ್ಲಿ ನೀರು ಹರಿಸೋದು ನನ್ನ ಮೊದಲ ಕರ್ತವ್ಯವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ:  ನೂತನ ಸಂಸದೆ ಸುಮಲತಾಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಸವಾಲು

    ಇದೇ ವೇಳೆ ಬಿಜೆಪಿ ಸೇರ್ಪಡೆಯ ಕುರಿತು ಮಾತನಾಡಿದ ಸುಮಲತಾ ಅಂಬರೀಶ್, ಚುನಾವಣೆಯಲ್ಲಿ ಎಲ್ಲ ಪಕ್ಷದವರು ನನಗೆ ಬೆಂಬಲ ನೀಡಿದ್ದರು. ಹಾಗೆಯೇ ಬಿಜೆಪಿ ಬೇಷರತ್ ಬೆಂಬಲ ನೀಡುವ ಮೂಲಕ ತಮ್ಮ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಹಾಗಾಗಿ ಬೆಂಬಲ ನೀಡಿದ ನಾಯಕರಿಗೆ ಧನ್ಯವಾದ ಸಲ್ಲಿಸಲು ಬಂದಿದ್ದೇನೆ. ಗೆಲುವು ಸಾಧಿಸಿದ ಪಕ್ಷೇತರ ಅಭ್ಯರ್ಥಿ ಪಕ್ಷ ಸೇರುವ ಅವಕಾಶ ಸಂವಿಧಾನವಿಲ್ಲ. ಕೇವಲ ಬಾಹ್ಯ ಬೆಂಬಲ ನೀಡಲು ಮಾತ್ರ ಸಾಧ್ಯ. ಹಾಗಾಗಿ ಮಂಡ್ಯ ಅಭಿವೃದ್ಧಿಗೆ ಯಾವುದು ಒಳಿತು ಎಂಬುದನ್ನು ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು.

    ಮುಂದಿನ ದಿನಗಳಲ್ಲಿ ಮಂಡ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ಪ್ರವಾಸಕೈಗೊಂಡು ನನ್ನ ಮುಂದಿನ ನಡೆಯ ಬಗ್ಗೆ ಎಲ್ಲ ಕಾರ್ಯಕರ್ತರೊಂದಿಗೆ ಚರ್ಚಿಸುತ್ತೇನೆ ಎಂದು ತಿಳಿಸಿದರು. ಬಿ.ಎಸ್.ಯಡಿಯೂರಪ್ಪವರ ನಿವಾಸದಿಂದ ನೇರವಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿವಾಸಕ್ಕೆ ತೆರಳಿದರು.

    ಸುಮಲತಾ ಅಂಬರೀಶ್ ಬರೋದಕ್ಕಿಂತ ಮೊದಲೇ ಎಸ್.ಎಂ.ಕೃಷ್ಣ ನಿವಾಸದಲ್ಲಿ ಕಾಂಗ್ರೆಸ್ ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಸುಧಾಕರ್ ಇದ್ದಾರೆಂಬ ಮಾಹಿತಿಗಳು ಲಭ್ಯವಾಗಿದೆ. ಕೃಷ್ಣ ಅವರ ನಿವಾಸದಲ್ಲಿಯೇ ಮೈತ್ರಿ ಸರ್ಕಾರದ ಅಳಿವು-ಉಳಿವಿನ ಬಗ್ಗೆ ಚರ್ಚೆ ನಡೆಸುತ್ತಾರೆ ಎನ್ನಲಾಗುತ್ತಿದೆ.