Tag: ravishankar guruji

  • ಆರ್ಟ್ ಆಫ್ ಲಿವಿಂಗ್‌ನಲ್ಲಿ ಸಾವಿರಾರು ದೀಪಗಳನ್ನು ಬೆಳಗಿಸಿ ಕಾರ್ತಿಕ ದೀಪೋತ್ಸವ

    ಆರ್ಟ್ ಆಫ್ ಲಿವಿಂಗ್‌ನಲ್ಲಿ ಸಾವಿರಾರು ದೀಪಗಳನ್ನು ಬೆಳಗಿಸಿ ಕಾರ್ತಿಕ ದೀಪೋತ್ಸವ

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್ (The Art of Living) ಆಶ್ರಮದಲ್ಲಿ ದೀಪೋತ್ಸವದೊಡನೆ (Deepotsava) ಕೂಡಿದ ಭಕ್ತಿಯ ಮೆರಗಿನಿಂದ ವೈಭವಯುತವಾಗಿ ಕಾರ್ತಿಕ ದೀಪೋತ್ಸವವನ್ನು (kartika deepotsav) ಆಚರಿಸಲಾಯಿತು.

    ಕಾರ್ತಿಕ ದೀಪವು ತಮಿಳುನಾಡಿನ (Tamil Nadu) ಅತೀ ಪವಿತ್ರವಾದ ಹಬ್ಬಗಳಲ್ಲಿ ಒಂದಾಗಿದ್ದು, ಕತ್ತಲಿನ ಮೇಲೆ ದೀಪದ ವಿಜಯವನ್ನು ಮತ್ತು ದೈವೀಶಕ್ತಿಯ ಅನಂತ ಅಸ್ತಿತ್ವವನ್ನು ಸಂಭ್ರಮಿಸುವ ಹಬ್ಬವಾಗಿದೆ.

    ಭಗವಾನ್ ಶಿವ ಮತ್ತು ಭಗವಾನ್ ಮುರುಗನ ಪೌರಾಣಿಕ ಕಥಗಳ ಆಧಾರವನ್ನು ಹೊಂದಿರುವ ಈ ಹಬ್ಬವನ್ನು, ಆಂತರ್ಯದ ಜಾಗೃತಿಯ ಸೂಚಕವಾದ ದೀಪಗಳನ್ನು ಬೆಳಗಿಸಿ ಆಚರಿಸಲಾಗುತ್ತದೆ. ಜಗನ್ಮಾತೆ ಪಾರ್ವತಿಯ ಪುತ್ರನಾದ ಕಾರ್ತಿಕೆಯನ ದೈವೀ ಬೆಳಕನ್ನು, ಬೆಳಗಿಸಲಾಗುವ ದೀಪಗಳು ಸೂಚಿಸುತ್ತವೆ. ಈ ದೈವೀ ಬೆಳಕು ಭಕ್ತರನ್ನು ಜ್ಞಾನ, ಸಾಮರಸ್ಯ ಮತ್ತು ಆಧ್ಯಾತ್ಮಿಕ ಜಾಗೃತಿಯತ್ತ ಕರೆದೊಯ್ಯುತ್ತದೆ ಎಂಬ ನಂಬಿಕೆಯಿದೆ. ಈ ಶುಭ ಸಂದರ್ಭದಲ್ಲಿ ತಮಿಳುನಾಡಿನ ಭಕ್ತರು ಎಲ್ಲಾ ಮುರುಗನ ದೇವಸ್ಥಾನಗಳಲ್ಲೂ ವಿಶೇಷ ಪೂಜೆಗಳನ್ನು ಸಲ್ಲಿಸುತ್ತಾರೆ.  ಇದನ್ನೂ ಓದಿ: ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ – ಆಯ್ದ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ

    ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಶ್ರೀ ರವಿಶಂಕರ್ ಗುರೂಜಿ ಮುರುಗನನ್ನು ವರ್ಣಿಸುತ್ತಾ, “ಉರುವೈ ಅರುವಾಯ್ ಉಳಧಯೈ ಇಳಧಾಯ್–ಓ ಮುರುಗ, ನೀನು ರೂಪವನ್ನುಳ್ಳವನು ಮತ್ತು ಅರೂಪನೂ ಹೌದು. ಎಲ್ಲವನ್ನೂ ನಿನ್ನಲ್ಲಿ ಹೊಂದಿರುವವನು, ಅದೇ ಸಮಯದಲ್ಲಿ ನೀನು ಪೂರ್ಣವಾಗಿ ಖಾಲಿಯಾಗಿರುವವನು. ಅತೀ ಸಣ್ಣದ್ದರಲ್ಲೂ ಇರುವವನು ನೀನು. ಮರುವೈ ಮಲರಾಯ್ ಮಣಿಯೈ ಒಲಿಯಾಯ್— ಹೂವಿನಲ್ಲಿ, ಗಂಟೆಯ ನಾದದಲ್ಲಿ, ಬೆಳಕಾಗಿ ಇರುವೆ. ಕರುವೈ ಉಯಿರಾಯ್ ಗತಿಯಾಯ್ ವಿಧಿಯಾಯ್– ಗರ್ಭದಲ್ಲಿರುವವನೂ ನೀನೇ, ಜೀವವೂ ನೀನೇ. ಜೀವನದ ಗತಿಯೂ ನೀನೇ, ಅದಕ್ಕೆ ವಿಧಿಯನ್ನು ಕೊಡುವವನೂ ನೀನೇ. ಗುರುವಾಯ್ ವರುವಾಯ್ ಅರಳ್ ವಾಯ್ ಗುಹನೆ–ಗುರುವಾಗಿ ಬಂದು ನಿನ್ನ ಆಶೀರ್ವಾದವನ್ನು ನಮಗೆಲ್ಲರಿಗೂ ನೀಡು” ಎಂದು ಒಂದು ಪ್ರಾಚೀನ ತಮಿಳಿನ ಬರಹವನ್ನು ವಿವರಿಸಿದರು.

    ಭಗವಾನ್ ಕಾರ್ತಿಕೇಯನು ಅಂತಿಮ ಸೌಂದರ್ಯ. ಅವನಲ್ಲಿ ಎಷ್ಟು ಸೌಂದರ್ಯವಿದೆಯೆಂದರೆ, ಅದನ್ನು ಯಾರಿಂದಲೂ ತಳ್ಳಿ ಹಾಕಲು ಸಾಧ್ಯವಿಲ್ಲ. ಅವನು ಶೂರನೂ ಹೌದು, ಅಪ್ರತಿಮನಾದ ಜ್ಞಾನವೂ ಅವನು. ಆದ್ದರಿಂದಲೇ ತನ್ನ ತಂದೆಯಾದ ಭಗವಾನ್ ಶಿವನಿಗ ಗುರುವಾದ ಮತ್ತು ಅವನು ತುಂಟನೂ ಹೌದು ಎಂದರು.

     

  • ಶ್ರೀ ಶ್ರೀ ರವಿಶಂಕರ್ ಗುರೂಜಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ

    ಶ್ರೀ ಶ್ರೀ ರವಿಶಂಕರ್ ಗುರೂಜಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ

    ಬೆಂಗಳೂರು: ಆಧ್ಯಾತ್ಮಿಕ ಗುರುಗಳಾದ ಶ್ರೀ ಶ್ರೀ ರವಿಶಂಕರ್‌ ಗುರೂಜಿ (Ravishankar Guruji) ಅವರಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ (ಹಾನರರಿ ಆಫಿಸರ್ ಆಫ್ ದಿ ಆರ್ಡರ್ ಆಫ್ ಫೀಜಿ) (Fiji Civilian Award) ನೀಡಿ ಗೌರವಿಸಲಾಯಿತು.

    ಮಾನವ ಸ್ಫೂರ್ತಿ ಹಾಗೂ ಶಾಂತಿ ಮತ್ತು ಸಾಮರಸ್ಯದ ಮೂಲಕ ವಿವಿಧ ಸಮುದಾಯಗಳನ್ನು ಒಂದುಗೂಡಿಸುವ ಅವರ ಕಾರ್ಯವನ್ನು ಶ್ಲಾಘಿಸಿ ಫಿಜಿ ರವಿಶಂಕರ್‌ ಗುರೂಜಿ ಅವರಿಗೆ ಪ್ರಶಸ್ತಿ ನೀಡಿ, ಸನ್ಮಾನಿಸಲಾಯಿತು. ಫಿಜಿ ರೀಪಬ್ಲಿಕ್‌ನ ಅಧ್ಯಕ್ಷ ಹೆಚ್.ಇ ರಟು ವಿಲ್ಲಿಯಮೆ ಎಂ. ಕಟೋನಿವೆರಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ರವಿಶಂಕರ್‌ ಗುರೂಜಿ ಅವರಿಗೆ ವಿವಿಧ ದೇಶಗಳ 6ನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಇದಾಗಿದೆ.

    ರವಿಶಂಕರ್‌ ಗುರೂಜಿ ಅವರು ತಮ್ಮ ಆರ್ಟ್‌ ಆಫ್‌ ಲಿವಿಂಗ್‌ (Art Of living) ಮೂಲಕ ಕಳೆದ 43 ವರ್ಷಗಳಿಂದ ಜನ ಸಮೂಹಕ್ಕೆ ಸಂತೋಷ, ಸಾಮರಸ್ಯ ಹರಡುತ್ತಿದ್ದಾರೆ. ಇದರೊಂದಿಗೆ ಮಾನಸಿಕ ಆರೋಗ್ಯ, ಶಿಕ್ಷಣ, ಪರಿಸರ ಜಾಗೃತಿ, ಮಹಿಳಾ ಹಾಗೂ ಯುವ ಸಬಲೀಕರಣಕ್ಕೆ ಒತ್ತು, ಒತ್ತಡ ನಿವಾರಣೆ, ಧ್ಯಾನದ ಕಾರ್ಯಮಗಳು ಹೀಗೆ ಅನೇಕ ಸಮಾಜ ಸೇವಾ ಕಾರ್ಯಗಳನ್ನು ನಡೆಸಿಕೊಡುತ್ತಿದ್ದಾರೆ. ಗುರೂಜಿ ಅವರ ಸಮಾಜದೇವಾ ಕಾರ್ಯಕ್ಕೆ ಮೆಚ್ಚಿ ಫಿಜಿ ತನ್ನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಸನ್ಮಾನಿಸಿದೆ.

    ರವಿಶಂಕರ್‌ ಗುರೂಜಿ ಅವರು ಫಿಜಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಫಿಜಿಯ ಉಪಪ್ರಧಾನಿ ವಿಲಿಯಮೆ ಗಾವೋಕ, ಫಿಜಿಯ ಸಂಯುಕ್ತ ರಾಷ್ಟ್ರಗಳ ವಸತಿ ಸಂಯೋಜಕರಾದ ಡಿರ್ಕ್ ವಾಗೆನರ್ ಅವರೊಂದಿಗೆ ಸಂವಾದ ನಡೆಸಿದರು. ಈ ದ್ವೀಪ ರಾಷ್ಟ್ರದಲ್ಲಿ ಯುವಕ ಸಬಲೀಕರಣ, ಸ್ಥಳೀಯ ಸಮುದಾಯಗಳ ಮಾನಸಿಕ ಆರೋಗ್ಯದ ಸುಧಾರಣೆ, ಕಾಲಾತೀತ ಜ್ಞಾನವಾದ ಆಯುರ್ವೇದದ ಜ್ಞಾನದ ಪರಿಚಯದ ಮೂಲಕ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಫಿಜಿಯ ಸಮಗ್ರ ಬೆಳವಣಿಗೆಗೆ ಹೇಗೆ ಕೊಡುಗೆ ನೀಡಬಹುದು ಎನ್ನುವ ಬಗ್ಗೆ ಗಣ್ಯರೊಂದಿಗೆ ಚರ್ಚಿಸಿದರು.

  • ವಿಶ್ವ ಸಾಂಸ್ಕೃತಿಕ ಉತ್ಸವ; ಉಕ್ರೇನ್‌ ಶಾಂತಿಗಾಗಿ ಪ್ರಾರ್ಥಿಸಿದ 180 ದೇಶಗಳ ಜನ

    ವಿಶ್ವ ಸಾಂಸ್ಕೃತಿಕ ಉತ್ಸವ; ಉಕ್ರೇನ್‌ ಶಾಂತಿಗಾಗಿ ಪ್ರಾರ್ಥಿಸಿದ 180 ದೇಶಗಳ ಜನ

    – ಉತ್ಸವದಲ್ಲಿ ಯೋಗ ಕಾರ್ಯಕ್ರಮ ನಡೆಸಿಕೊಟ್ಟ ಶ್ರೀ ಶ್ರೀ ರವಿಶಂಕರ್ ಗುರೂಜಿ

    ಬೆಂಗಳೂರು: ಅಮೆರಿಕದ ವಾಷಿಂಗ್ಟನ್‌ (Washington DC) ಡಿಸಿಯ ನ್ಯಾಷನಲ್‌ ಮಾಲ್‌ನಲ್ಲಿ ಆಯೋಜಿಸಿರುವ ‘ವಿಶ್ವ ಸಾಂಸ್ಕೃತಿಕ ಉತ್ಸವ’ (World Culture Festival) 2ನೇ ದಿನವೂ ಅದ್ಧೂರಿಯಾಗಿ ಜರುಗಿತು. ಉತ್ಸವಕ್ಕೆ 180 ದೇಶಗಳಿಂದ ಆಗಮಿಸಿದ್ದ ಜನರು, ಉಕ್ರೇನ್‌ನಲ್ಲಿ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದರು.

    ಉತ್ಸವದಲ್ಲಿ ಎರಡನೆಯ ದಿನವು ಕೂಡ ನೂರಾರು ಬಾವುಟಗಳು ಹಾರಾಡಿದವು. ಮತ್ತೊಮ್ಮೆ ಏಕತೆಯ ಭಾವವು ಎಲ್ಲೆಡೆ ರಾರಾಜಿಸಿತು. 180 ದೇಶಗಳಿಂದ ಬಂದಿದ್ದ ಜನರು ಒಬ್ಬರನ್ನೊಬ್ಬರು ಕಲೆತು, ನೃತ್ಯ, ಸಂಗೀತ ಮತ್ತು ಆಹಾರದೊಡನೆ ಜಗತ್ತಿನ ವಿವಿಧ ಸಂಸ್ಕೃತಿಗಳನ್ನು ಸಂಭ್ರಮಿಸಿದರು.

    ಬೃಹತ್ ಪ್ರಮಾಣದಲ್ಲಿ ನಡೆದ ಈ ಉತ್ಸವವು ವಿಶ್ವವನ್ನು ಒಗ್ಗೂಡಿಸಲು ಹೊರಟಿರುವ ಭಾರತದ ಸಂಕಲ್ಪ ಶಕ್ತಿಯನ್ನು ಪ್ರತಿಬಿಂಬಿಸಿತು. ವಾಷಿಂಗ್ಟನ್ ಡಿಸಿ ನ್ಯಾಷನಲ್ ಮಾಲಿನ ಐತಿಹಾಸಿಕ ಲಿಂಕನ್ ಸ್ಮಾರಕದ ಎದುರು ಸಾವಿರಾರು ಜನ ತಮ್ಮ ತಮ್ಮ ಮ್ಯಾಟ್ ಹಾಸಿ ಯೋಗ ಮಾಡುವುದರೊಂದಿಗೆ 2ನೇ ದಿನದ ಉತ್ಸವಕ್ಕೆ ಚಾಲನೆ ಕೊಟ್ಟರು. ಅಲ್ಲಿ ನೆರೆದಿದ್ದ ಎಲ್ಲರಿಗೂ ಗುರುದೇವ ಶ್ರೀ ಶ್ರೀ ರವಿಶಂಕರ್ ಗುರೂಜಿ (Ravishankar Guruji) ಅವರು ಒಂದು ಅನುಪಮವಾದ ಉಸಿರಾಟ, ಯೋಗ ಮತ್ತು ಧ್ಯಾನದ ಪ್ರಕ್ರಿಯೆಗಳನ್ನು ಹೇಳಿಕೊಟ್ಟರು. ಸಂಜೆಯ ವೇಳೆಗೆ ಮನಸೂರೆಗೊಳ್ಳುವಂತಹ ಪ್ರದರ್ಶನಗಳು ಜರುಗಿದವು. ಇದನ್ನೂ ಓದಿ: ನಾವೆಲ್ಲರೂ ವಿಶ್ವ ಕುಟುಂಬಕ್ಕೆ ಸೇರಿದವರು: ಶ್ರೀ ಶ್ರೀ ರವಿಶಂಕರ್‌ ಗುರೂಜಿ

    ಗಣ್ಯರ ಸ್ಫೂರ್ತಿದಾಯಕ ಭಾಷಣಗಳು ಮನುಷ್ಯರ ಬಾಂಧವ್ಯಗಳನ್ನು ಇನ್ನಷ್ಟು ಬೆಸೆಯುವಂತಿತ್ತು. ಭಾರತದ ಮಾಜಿ ರಾಷ್ಟ್ರಪತಿಗಳಾದ ರಾಮ್‌ನಾಥ್ ಕೋವಿಂದ್ ಮಾತನಾಡಿ, ಪರ್ವತ ಶ್ರೇಣಿಗಳು, ಕರಾವಳಿ ಬಯಲು, ನದಿಯ ತೀರ, ಮರುಭೂಮಿ ಪ್ರದೇಶ ಹೀಗೆ ಪ್ರಪಂಚದ ಮೂಲೆ ಮೂಲೆಗಳಿಂದ ಬಂದು ಜನರು ಇಲ್ಲಿ ಸೇರಿದ್ದಾರೆ. ಗುರುದೇವರು ಇಲ್ಲಿ ಒಂದು ಪುಟ್ಟ ಪ್ರಪಂಚವನ್ನೇ ನಿರ್ಮಿಸಿದ್ದಾರೆ ಎಂದು ಬಣ್ಣಿಸಿದರು.

    ಅನೇಕ ಕಲಾರೂಪಗಳ ಪ್ರದರ್ಶನಗಳು ನಡೆದವು. ಅವುಗಳಲ್ಲಿ ಪಾರಂಪರಿಕ ಉಕ್ರೇನ್‌ನ ಹಾಡಿನ ಪ್ರದರ್ಶನ ಕೂಡ ಒಂದು. ಇದನ್ನು ಉಕ್ರೇನ್ ಖ್ಯಾತ ಸಂಗೀತಗಾರರಾದ ಒಲೇನ ಅಸ್ತಶೇವ‌ ಅವರು ನಡೆಸಿಕೊಟ್ಟರು. ಯುದ್ಧದ ಕಾರಣದಿಂದಾಗಿ ಇವರು ತಮ್ಮ ಮಾತೃಭೂಮಿಯನ್ನು ತೊರೆದಿದ್ದರು. ಮನಕುಲಕುವ ಈ ಹಾಡಿನ ಪ್ರದರ್ಶನದ ನಂತರ ಜನರೆಲ್ಲರೂ ಸೇರಿ ಉಕ್ರೇನ್ ಶಾಂತಿಗಾಗಿ ಗುರುದೇವರ ಸಮ್ಮುಖದಲ್ಲಿ ಪ್ರಾರ್ಥಿಸಿದರು. ಇದನ್ನೂ ಓದಿ: ಬೆಂಗಳೂರಿನ BSF ಯೋಧರಿಂದ ಸ್ವಚ್ಛತಾ ಅಭಿಯಾನ

    ಎಲ್ಲರನ್ನೂ ಎಚ್ಚರಿಸುವಂತೆ ಬಿರುಸಿನ ಭಾಷಣ ಮಾಡಿದ ರೆವರೆಂಡ್ ಜೆರಾಲ್ಡ್ ದುರ್ಲೆ, ಆರ್ಟ್ ಆಫ್ ಲಿವಿಂಗ್‌ನ ಹೆಸರನ್ನು ಆರ್ಟ್ ಆಫ್ ಪ್ರೂಫ್ ಎಂದು ಬದಲಿಸಬೇಕು. ಏಕೆಂದರೆ ನಾವು ಎಲ್ಲರನ್ನೂ ಪ್ರೀತಿಸಬಹುದು. ನಾವು ಎಲ್ಲರೊಂದಿಗೆ ಹಂಚಿಕೊಳ್ಳಬಹುದು ಎಂದು ಗುರುದೇವರು ಪ್ರೂವ್ ಮಾಡಿದ್ದಾರೆ ಎಂದರು.

    ಅಮೆರಿಕದ ವೆಂಚರ್ ಕ್ಯಾಪಿಟಲ್ ಹೂಡಿಕೆದಾರರಾದ ಟಿಮ್ ಡ್ರೇಪರ್ ಮಾತನಾಡಿ, ಅಮೆರಿಕನ್ನರಾದ ನಾವು ಇತರ ಜನರನ್ನು ಅನ್ಯಲೋಕದವರಂತೆ ಕಂಡಿದ್ದೇವೆ. ಅದು ಒಳ್ಳೆಯ ಬೆಳವಣಿಗೆ ಆಗಿರಲಿಲ್ಲ. ಆದರೆ ಈಗ ಬದಲಾವಣೆ ಆರಂಭವಾಗಿದೆ. ಗುರುದೇವರ ನಾಯಕತ್ವದಲ್ಲಿ ಜನರನ್ನು ಒಂದಾಗಿ ತರುತ್ತಿದ್ದೇವೆ. ಈಗ ಭೂಮಿಯ ಮೇಲಿರುವ ಯಾರು ಕೂಡ ಏಲಿಯನ್ನರಲ್ಲ (ಅನ್ಯಗ್ರಹ ಜೀವಿಗಳು). ಆದರೆ ಈ ಭೂಮಿಯ ಮೇಲೆ ಯಾರಾದರೂ ಏಲಿಯನ್ನರು ಇದ್ದು, ನಿಮ್ಮ ನಾಯಕರ ಬಳಿಗೆ ಕರೆದೊಯ್ಯಿರಿ ಎಂದರೆ ನಾನು ಅವರನ್ನು ಗುರುದೇವ್ ಶ್ರೀ ಶ್ರೀ ರವಿಶಂಕರರ ಬಳಿಗೆ ಕರೆದೊಯ್ಯುತ್ತೇನೆ ಎಂದರು.

    ಮಾರಿಷಿಯಸ್‌ನ ಅಧ್ಯಕ್ಷರಾದ ಪೃಥ್ವಿರಾಜ್‌ ಸಿಂಗ್ ರೂಪನ್, ಜಪಾನಿನ ಮಾಜಿ ಪ್ರಧಾನ ಮಂತ್ರಿ ದಿವಂಗತ ಶಿಂಜೊ ಅಬೆಯವರ ಪತ್ನಿ ಅಕೀ ಅಬೆ, ಯುಎಸ್‌ನ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ ಇನ್ನಿತರ ಗಣ್ಯರು ಎರಡನೇ ದಿನ ಉಪಸ್ಥಿತರಾಗಿದ್ದರು. ಇದನ್ನೂ ಓದಿ: BJP-JDS ಮೈತ್ರಿಗೆ ಜೆಡಿಎಸ್ ಶಾಸಕರಿಂದ ಸರ್ವಾನುಮತದ ಒಪ್ಪಿಗೆ

    ಸಾಂಸ್ಕೃತಿಕ ಕಾರ್ಯಕ್ರಮ
    ಎರಡನೆಯ ದಿನ ಸಾಂಸ್ಕೃತಿಕ ಮಹೋತ್ಸವದಲ್ಲಿ, 10,000 ಜನರಿಂದ ಗರ್ಭ ನೃತ್ಯ ನಡೆಯಿತು. ಅವರೊಡನೆ ಗ್ರಾಮಿ ಪ್ರಶಸ್ತಿ ವಿಜೇತರಾದ ಭಾರತೀಯ ಅಮೆರಿಕನ್ನರೂ ಆದ ಫಾಲು ಶಾ ಅವರು ಗಾಯನ ಮಾಡಿದರು. 200 ಜನರನ್ನೊಳಗೊಂಡ ಭಾಂಗ್ರ ನೃತ್ಯ, ಐರಿಶ್‌ನ ಸ್ಟೆಪ್ ನೃತ್ಯ, ಆಫ್ಗಾನಿನ ಸುಮಧುರ ಸಂಗೀತ, 1000 ಚೀನಿ ಅಮೆರಿಕನ್ನರಿಂದ ವೈಭವಯುತವಾದ ನೃತ್ಯ ಹಾಗೂ ಗಾಯನ ಜರುಗಿತು. ಇದರೊಡನೆ ಕುಂಗ್ ಫೂ ಪ್ರದರ್ಶನವೂ ನಡೆಯಿತು.

    ಭವ್ಯವಾದ ಡ್ರಾಗನ್ ಮತ್ತು ಸಿಂಹಗಳು ಕಲಾತ್ಮಕ ಕಲ್ಪನೆಯನ್ನು ಜೀವಂತವಾಗಿಸಿದವು. ಇಂಡೊನೇಷಿಯಾ, ಬ್ರೆಜಿಲ್, ಬೊಲಿವಿಯ ಮತ್ತು ಲ್ಯಾಟಿನ್ ಅಮೆರಿಕದ ದೇಶಗಳು ಅವಿಸ್ಮರಣೀಯವಾದ ನೃತ್ಯಗಳನ್ನು ನಡೆಸಿದವು. ಖ್ಯಾತ ಕುರ್ಟಿಸ್ ಬ್ಲೋ ಅವರ ನೇತೃತ್ವದಲ್ಲಿ ಹಿಪ್ ಹಾಪ್ ಮತ್ತು ಬ್ರೇಕ್ ಡಾನ್ಸ್‌ನ ಪ್ರದರ್ಶನ ನಡೆಯಿತು. 1,200 ಹಾಡುಗಾರರ ಗಾಸ್ಪೆಲ್ ಕಾಯರ್, ಪಾಕಿಸ್ತಾನದ ಮನಮೋಹಕ ಪ್ರದರ್ಶನವು ನಡೆಯಿತು.

    ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ ಮಾತನಾಡಿ, ಇಂದಿನ ವಿಶ್ವ ಸಾಂಸ್ಕೃತಿಕ ಉತ್ಸವದಂತಹ ಉತ್ಸವಗಳು ಬಹಳ ಮುಖ್ಯ. ನಾವೆಲ್ಲರೂ ಪರಸ್ಪರ ಹೊಂದಿರುವ ಸಂಬಂಧವು ಎಷ್ಟು ಅವಶ್ಯಕವಾದದ್ದು ಎಂಬುದನ್ನು ಇದು ತೋರಿಸುತ್ತದೆ. ಇಂದಿನ ದಿನಗಳಲ್ಲಿ ಏಕಾಂಗಿತನ ಹಾಗೂ ಪ್ರತ್ಯೇಕತೆಯು ಹೆಚ್ಚಾಗಿದೆ. ಎಲ್ಲರೂ ಒಂದಾಗಿರುವ ಸಂಬಂಧಗಳನ್ನು ನೆನಪಿಸಿಕೊಳ್ಳುವುದು ಅವಶ್ಯಕವಾಗಿದೆ. ಏಕಾಂಗಿತನ, ಪ್ರತ್ಯೇಕತೆಯಿಂದ ದೈಹಿಕ ಕಾಯಿಲೆ, ಹೃದ್ರೋಗಗಳು ಹೆಚ್ಚುತ್ತಿವೆ. ಇವು ನಮ್ಮ ಸಮುದಾಯಗಳ ಒಳಿತನ್ನೇ ನಾಶಮಾಡುತ್ತಿವೆ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾವೆಲ್ಲರೂ ವಿಶ್ವ ಕುಟುಂಬಕ್ಕೆ ಸೇರಿದವರು: ಶ್ರೀ ಶ್ರೀ ರವಿಶಂಕರ್‌ ಗುರೂಜಿ

    ನಾವೆಲ್ಲರೂ ವಿಶ್ವ ಕುಟುಂಬಕ್ಕೆ ಸೇರಿದವರು: ಶ್ರೀ ಶ್ರೀ ರವಿಶಂಕರ್‌ ಗುರೂಜಿ

    – ‘ವಿಶ್ವ ಸಾಂಸ್ಕೃತಿಕ ಉತ್ಸವ’ದ ಮೊದಲ ದಿನದ ಕಾರ್ಯಕ್ರಮದಲ್ಲಿ 10 ಲಕ್ಷ ಮಂದಿ ಭಾಗಿ

    ಬೆಂಗಳೂರು: ಅಮೆರಿಕದ ವಾಷಿಂಗ್ಟನ್‌ ಡಿಸಿಯಲ್ಲಿ ಆರ್ಟ್‌ ಆಫ್‌ ಲಿವಿಂಗ್‌ (The Art Of Living) ಸಂಸ್ಥೆ ಆಯೋಜಿಸಿರುವ 4ನೇ ವಿಶ್ವ ಸಾಂಸ್ಕೃತಿಕ ಉತ್ಸವದಲ್ಲಿ (World Culture Festival 2023) 10 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. 180 ದೇಶಗಳ ಲಕ್ಷಾಂತರ ಜನರು ಜಗತ್ತಿನ ಮಾನವೀಯತೆ, ಶಾಂತಿ ಮತ್ತು ಸಂಸ್ಕೃತಿಗಳ ಸಂಗಮದ ಹಬ್ಬವಾದ ‘ವಿಶ್ವ ಸಾಂಸ್ಕೃತಿ ಉತ್ಸವ’ದಲ್ಲಿ ಭಾಗಿಯಾಗಿ ಅದ್ಭುತಕ್ಕೆ ಸಾಕ್ಷಿಯಾದರು.

    ಈ ಸಮಾರಂಭದಲ್ಲಿ ಜಾಗತಿಕ ಗಣ್ಯರಾದ ವಿಶ್ವಸಂಸ್ಥೆಯ 8ನೇ ಪ್ರಧಾನ ಕಾರ್ಯದರ್ಶಿ ಹೆಚ್.ಇ. ಬಾನ್ ಕಿ-ಮೂನ್, ವಾಷಿಂಗ್ಟನ್‌ ಡಿ.ಸಿಯ ಮೇಯರ್ ಮುರಿಯಲ್ ಬೌಸರ್, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಬಿಷಪ್ ಎಮೆರಿಟ್ಸ್‌ ಮಾರ್ಸೆಲೊ ಸ್ಯಾಂಚೆಜ್ ಸೊರೊಂಡೋ, ಪಾಂಟಿಫಿಕಲ್ ಅಕಾಡೆಮಿ ಆಫ್ ಸೈನ್ಸಸ್‌ನ ಚಾನ್ಸೆಲರ್ ಎಮೆರಿಟಸ್ ಪಾಲ್ಗೊಂಡಿದ್ದರು. ವಸುದೈವ ಕುಟುಂಬಕಂ (ಇಡೀ ವಿಶ್ವವೇ ಒಂದು ಕುಟುಂಬ) ಎಂಬ ಧ್ಯೇಯವಾಕ್ಯದೊಂದಿಗೆ ಆರ್ಟ್ ಆಫ್ ಲಿವಿಂಗ್‌ನ ‘ವಿಶ್ವ ಸಾಂಸ್ಕೃತಿಕ ಉತ್ಸವವು ಸಂಗೀತ, ನೃತ್ಯಗಳ ಮೂಲಕ ಏಕತೆ, ಸಾಮರಸ್ಯದ ಜಾಗತಿಕ ಸಂದೇಶ ಸಾರಿತು.

    ಜಾಗತಿಕ ಗಣ್ಯರು, ರೋಮಾಂಚನಗೊಳಿಸುವ ಸಂಗೀತ ಮತ್ತು ವರ್ಣರಂಜಿತ ನೃತ್ಯ ಪ್ರದರ್ಶನ ಕಲಾವಿದರು, ಗ್ರ್ಯಾಮಿ ಪ್ರಶಸ್ತಿ ವಿಜೇತರು, ಇತರೆ ಹೆಸರಾಂತ ಕಲಾವಿದರು ಬೃಹತ್‌ ಕಾರ್ಯಕ್ರಮದಲ್ಲಿ ಒಟ್ಟಾಗಿ ಪಾಲ್ಗೊಂಡಿದ್ದರು.

    ಜಾಗತಿಕ ಮಾನವತಾವಾದಿ ಮತ್ತು ಶಾಂತಿದೂತರಾದ, ದಿ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಗುರುದೇವ ಶ್ರೀ ಶ್ರೀ ರವಿಶಂಕರ್ (Ravishankar Guruji) ಅವರು ಮಾತನಾಡಿ, ನಮ್ಮ ವೈವಿಧ್ಯತೆಯನ್ನು ಆಚರಿಸಲು ಇದು ಒಂದು ಸುಂದರ ಸಂದರ್ಭವಾಗಿದೆ. ನಮ್ಮ ಜಗತ್ತು ತುಂಬಾ ವೈವಿಧ್ಯಮಯವಾಗಿದೆ. ಆದರೂ ನಮ್ಮ ಮಾನವೀಯ ಮೌಲ್ಯಗಳಲ್ಲಿ ಏಕತೆ ಇದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಹೆಚ್ಚಿನ ಸಂತೋಷವನ್ನು ತರಲು ನಾವು ಬದ್ಧರಾಗೋಣ. ಎಲ್ಲರ ಮುಖದಲ್ಲೂ ನಗು ಮೂಡಿಸೋಣ. ಅದೇ ಮಾನವೀಯತೆ. ಅದರಿಂದಲೇ ನಾವೆಲ್ಲರೂ ಮಾಡಲ್ಪಟ್ಟಿರುವುದು. ಜ್ಞಾನದ ಬೆಂಬಲವಿಲ್ಲದಿದ್ದರೆ ಯಾವುದೇ ಆಚರಣೆಯು ಸತ್ವವನ್ನು ಹೊಂದಿರುವುದಿಲ್ಲ. ಆ ಜ್ಞಾನವು ನಮ್ಮೆಲ್ಲರೊಳಗಿದೆ. ನಾವು ವಿಭಿನ್ನವಾಗಿದ್ದರೂ, ನಾವೆಲ್ಲರೂ ಒಂದೇ ಎಂದು ಗುರುತಿಸುವುದು ಜಾಣ್ಮೆಯಾಗಿದೆ. ನಾವೆಲ್ಲರೂ ಪರಸ್ಪರ ಒಬ್ಬರಿಗೊಬ್ಬರು ಸೇರಿದವರು. ನಾವೆಲ್ಲರೂ ವಿಶ್ವ ಕುಟುಂಬಕ್ಕೆ ಸೇರಿದವರು. ನಮ್ಮ ಜೀವನವನ್ನು ಸಂಭ್ರಮಿಸೋಣ. ಸವಾಲುಗಳನ್ನು ದಿಟ್ಟತನದಂದ ಸ್ವೀಕರಿಸಿ ಎದುರಿಸೋಣ. ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಕನಸನ್ನು ಕಾಣೋಣ ಎಂದು ಸಂದೇಶ ನೀಡಿದರು.

    ಭಾರತದ ವಿದೇಶಾಂಗ ಸಚಿವ ಡಾ. ಎಸ್.ಜೈಶಂಕರ್ ಮಾತನಾಡಿ, ನಾವೆಲ್ಲರೂ ಸಮೃದ್ಧಿಯನ್ನು ಹೆಚ್ಚಿಸಲು ಮತ್ತು ನಮ್ಮ ಭೂಮಿಯ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಸವಾಲುಗಳನ್ನು ಎದುರಿಸುವುದು ಸಹಜ. ನೈಸರ್ಗಿಕ ವಿಕೋಪಗಳಾಗಲಿ, ಮಾನವ ನಿರ್ಮಿತವಾದವುಗಳಾಗಲಿ, ಘರ್ಷಣೆಗಳಾಗಲಿ ಅಥವಾ ಅಡೆತಡೆಗಳಾಗಲಿ ಪರಸ್ಪರ ಅವಲಂಬಿತ ಜಗತ್ತಿನಲ್ಲಿ ನಾವು ಯಾವಾಗಲೂ ಒಬ್ಬರಿಗೊಬ್ಬರು ಇರುತ್ತೇವೆ ಎಂಬುದು ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆರ್ಟ್ ಆಫ್ ಲಿವಿಂಗ್ ಒಂದು ಸ್ಪೂರ್ತಿದಾಯಕ ಉದಾಹರಣೆಯಾಗಿದೆ. ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಅವರು ಇತ್ತೀಚೆಗೆ ಬೀರಿದ ಪ್ರಭಾವವನ್ನು ನಾನು ವೈಯಕ್ತಿಕವಾಗಿ ನೋಡಿದ್ದೇನೆ. ಇಂದು ಅವರ ಸಂದೇಶ, ನಿಮ್ಮ ಸಂದೇಶ, ನಮ್ಮ ಸಂದೇಶವು ಕಾಳಜಿ, ಹಂಚಿಕೊಳ್ಳುವಿಕೆ, ಔದಾರ್ಯ, ತಿಳುವಳಿಕೆಯ ಸದ್ಭಾವನೆ ಮತ್ತು ಸಹಕಾರವಾಗಿರಬೇಕು. ಇದುವೇ ನಮ್ಮೆಲ್ಲರನ್ನೂ ಇಲ್ಲಿ ಒಟ್ಟುಗೂಡಿಸಿರುವುದು ಎಂದು ಹೇಳಿದರು.

    ವಿಶ್ವ ಸಾಂಸ್ಕೃತಿಕ ಉತ್ಸವದ ಮೊದಲ ದಿನದಂದು ವಿಶ್ವಸಂಸ್ಥೆಯ 8ನೇ ಪ್ರಧಾನ ಕಾರ್ಯದರ್ಶಿ ಹೆಚ್.ಇ. ಬಾನ್ ಕಿ-ಮೂನ್, ವಾಷಿಂಗ್ಟನ್‌ ಡಿ.ಸಿಯ ಮೇಯರ್ ಮುರಿಯಲ್ ಬೌಸರ್, ಮಿಚಿಗನ್ ಕಾಂಗ್ರೆಸಿಗ ಥಾನೆದರ್, ಜಪಾನಿನ ಶಿಕ್ಷಣ, ಸಂಸ್ಕೃತಿ, ಕ್ರೀಡೆ, ವಿಜ್ಞಾನ ಹಾಗೂ ತಂತ್ರಜ್ಞಾನದ ಮಾಜಿ ಸಚಿವ, ಸಂಸದ ಹಕುಬುನ್ ಶಿಮೊಮುರಾ, ಯುಎನ್‌ಇಪಿಯ ಮಾಜಿ ಉಪ ಪ್ರಧಾನ ಕಾರ್ಯದರ್ಶಿ ಮತ್ತು ಯುಎನ್‌ಇಪಿಯ ಕಾರ್ಯನಿರ್ವಾಹಕ ನಿರ್ದೇಶಕ ಎರಿಕ್ ಸೋಲ್‌ಹೈಮ್, ಮಾಜಿ ಅಂತಾರಾಷ್ಟ್ರೀಯ ಅಭಿವೃದ್ಧಿ ನಾರ್ವೆ ಸಚಿವರು ಮತ್ತು ಇತರ ಜಾಗತಿಕ ಗಣ್ಯರು, ಅನೇಕ ಜಾಗತಿಕ ಸವಾಲುಗಳನ್ನು ಎದುರಿಸುತ್ತಿರುವ ಸಂಘರ್ಷದ ಜಗತ್ತಿನಲ್ಲಿ ಏಕತೆ, ಶಾಂತಿ ಮತ್ತು ಸಾಮರಸ್ಯದ ಸಹಬಾಳ್ವೆ ಕುರಿತು ಮಾತನಾಡಿದರು.

    ದಿ ರೆವರೆಂಡ್ ಬಿಷಪ್ ಎಮೆರಿಟ್ಸ್‌ ಮಾರ್ಸೆಲೊ ಸ್ಯಾಂಚೆಜ್ ಸೊರೊಂಡೋ ಅವರು, ವಿಶ್ವ ಶಾಂತಿ ಸಾಧಿಸಲು ನಮ್ಮಲ್ಲಿ ಆಂತರಿಕ ಶಾಂತಿಯಿರಬೇಕು. ಶಾಂತಿಯನ್ನು ಸಂವಹನ ಮಾಡಲು, ನಾವು ಶಾಂತಿಯಿಂದ ಬದುಕಬೇಕು. ಶಾಂತಿಯಿಂದ ಬದುಕಲು ನಮಗೆ ಆರ್ಟ್ ಆಫ್ ಲಿವಿಂಗ್ ಅಗತ್ಯವಿದೆ. ಶಾಂತಿಯಿಂದ ಬದುಕುವ ಕಲೆಯನ್ನು ಹೊಂದಲು ನಾವು ದೇವರೊಂದಿಗೆ ಸಂವಹನ ಸಾಧಿಸಬೇಕು. ದೇವರು ಮಾನವನಿಗೆ ಶತ್ರುವಲ್ಲ. ದೇವರು ಒಬ್ಬ ಸ್ನೇಹಿತ. ದೇವರು ಅಂದರೆ ಪ್ರೀತಿ. ದೇವರನ್ನು ಹೊಂದಲು ನಾವು ಧ್ಯಾನಕ್ಕೆ, ಪ್ರಾರ್ಥನೆಗೆ ಹಿಂತಿರುಗಬೇಕಾಗಿದೆ. ನಾವು ನಮ್ಮ ಮೂಲಕ್ಕೆ ಹಿಂತಿರುಗಬೇಕಾಗಿದೆ. ಆದ್ದರಿಂದ ಈ ಸೂಕ್ಷ್ಮ ಕ್ಷಣದಲ್ಲಿ ನಾವು ದೇವರನ್ನು ಪ್ರಾರ್ಥಿಸಬೇಕಾಗಿದೆ. ಪೋಪ್ ಫ್ರಾನ್ಸಿಸ್ ಅವರ ಹೆಸರಿನಲ್ಲಿ ನಾವು ಎಲ್ಲಾ ಮಾನವರ ಭ್ರಾತೃತ್ವದಲ್ಲಿ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ. ನಾನು ಈ ದೊಡ್ಡ ಸಭೆಯನ್ನು ಆಶೀರ್ವದಿಸುತ್ತೇನೆ. ಈ ಜೀವನ ಕ್ರಮವು ನಿಜವಾಗಿಯೂ ನಮ್ಮ ಮಾನವೀಯತೆಯ ಭವಿಷ್ಯವಾಗಿರಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

    ಗುರುದೇವ್ ಶ್ರೀ ಶ್ರೀ ರವಿಶಂಕರ್ ಅವರಿಂದ ಪ್ರೇರಿತರಾಗಿ ಮತ್ತು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಆಯೋಜಿಸಿದ ವಿಶ್ವ ಸಾಂಸ್ಕೃತಿಕ ಉತ್ಸವವು ಗಡಿಗಳನ್ನು ಮೀರಿದ್ದು, ಮಾನವೀಯತೆ ಮತ್ತು ಸಹೋದರತ್ವದ ಎಳೆಯಲ್ಲಿ ಒಟ್ಟಿಗೆ ಕಟ್ಟಿದ ಸಂಸ್ಕೃತಿಗಳ ಶ್ರೀಮಂತಿಕೆಯನ್ನು ಆಚರಿಸಿತು. ಸಂಗೀತ ಮತ್ತು ನೃತ್ಯದ ಮೂಲಕ ಸ್ಥಳೀಯ ಸಂಪ್ರದಾಯಗಳ ಸಂರಕ್ಷಣೆಗಾಗಿ ವಿಶ್ವ ಸಾಂಸ್ಕೃತಿಕ ಉತ್ಸವವು ವೇದಿಕೆ ಒದಗಿಸುತ್ತದೆ. ಹಾಗೆಯೇ ಪ್ರತಿಯೊಬ್ಬರೂ ಆನಂದಿಸಲು ಅವಕಾಶವನ್ನು ಒದಗಿಸುತ್ತದೆ. ಇದು ಪ್ರೀತಿ, ಸಹಾನುಭೂತಿ ಮತ್ತು ಸೌಹಾರ್ದತೆಯಂತಹ ಸಾರ್ವತ್ರಿಕ ಮಾನವೀಯ ಮೌಲ್ಯಗಳ ಪುನರುಜ್ಜೀವನದ ಆಂದೋಲನವಾಗಿದೆ ಎಂದು ಹೇಳಿಲಾಯಿತು.

    ವಿಶ್ವಸಂಸ್ಥೆಯ 8ನೇ ಪ್ರಧಾನ ಕಾರ್ಯದರ್ಶಿ ಮಹಾಮಹಿಮರಾದ ಬಾನ್ ಕಿ-ಮೂನ್, ಸಂಸ್ಕೃತಿ ಸೇತುವೆಗಳನ್ನು ನಿರ್ಮಿಸುತ್ತದೆ, ಗೋಡೆಗಳನ್ನು ಒಡೆಯುತ್ತದೆ. ಮಾತುಕತೆ ಮತ್ತು ಪರಸ್ಪರ ತಿಳಿವಳಿಕೆಯ ಮೂಲಕ ಜಗತ್ತನ್ನು ಒಟ್ಟುಗೂಡಿಸುತ್ತದೆ. ಜನರು ಮತ್ತು ರಾಷ್ಟ್ರಗಳ ನಡುವೆ ಏಕತೆ ಮತ್ತು ಸಾಮರಸ್ಯವನ್ನು ಹೆಚ್ಚಿಸುತ್ತದೆ. ಸಂಸ್ಕೃತಿಯು ಎಲ್ಲಾ ಜಾಗತಿಕ ನಾಗರಿಕರ ನಡುವೆ ಪ್ರಬಲ ವಿನಿಮಯವನ್ನು ರಚಿಸಬಹುದು. ಇಂದು ಪ್ರಪಂಚದ ಎಲ್ಲಾ ಸಾಂಸ್ಕೃತಿಕ ಶ್ರೀಮಂತಿಕೆಯು ಯುನೈಟೆಡ್ ಸ್ಟೇಟ್ಸ್‌ನ ನ್ಯಾಷನಲ್ ಮಾಲ್‌ನಲ್ಲಿ ಒಟ್ಟುಗೂಡಿದೆ. ಗುರುದೇವ್ ಶ್ರೀ ಶ್ರೀ ರವಿಶಂಕರ್ ಅವರ ಏಕತೆ ಮತ್ತು ವೈವಿಧ್ಯತೆಯ ಸ್ಪೂರ್ತಿದಾಯಕ ದೃಷ್ಟಿಕೋನವನ್ನು ನಾನು ಪ್ರಶಂಸಿಸುತ್ತೇನೆ. ನಮಗೆ ಇಂತಹ ಹೆಚ್ಚು ಹೆಚ್ಚು ಆಚರಣೆಗಳು, ಹೆಚ್ಚು ಒಗ್ಗೂಡುವಿಕೆ, ಹೆಚ್ಚು ಶಾಂತಿ ಮತ್ತು ಹೆಚ್ಚಿನ ಸಹಕಾರ, ಐಕ್ಯಭಾವ ಮತ್ತು ಪಾಲುದಾರಿಕೆಯ ಅಗತ್ಯವಿದೆ. ನಾವು ಈಗ ಎದುರಿಸುತ್ತಿರುವ ದೊಡ್ಡ ಸವಾಲುಗಳ ಮೇಲೆ ನಾವು ಹೀಗೆಯೇ ಮುನ್ನುಗ್ಗಿ ಮುಂದುವರಿಯುತ್ತೇವೆ. ಇದೇ ರೀತಿ ನಾವು ಶಾಂತಿಯನ್ನು ನಿರ್ಮಿಸುತ್ತೇವೆ. ಸಂಘರ್ಷಗಳನ್ನು ಪರಿಹರಿಸುತ್ತೇವೆ. ಹಸಿವನ್ನು ಕೊನೆಗೊಳಿಸುತ್ತೇವೆ. ಆರೋಗ್ಯಕರ ಜೀವನವನ್ನು ಖಚಿತಪಡಿಸಿಕೊಳ್ಳುತ್ತೇವೆ. ಗುಣಮಟ್ಟದ ಶಿಕ್ಷಣವನ್ನು ಮುನ್ನಡೆಸುತ್ತೇವೆ. ಮಹಿಳೆಯರು ಮತ್ತು ಬಾಲಕಿಯರನ್ನು ಸಬಲೀಕರಣಗೊಳಿಸುತ್ತೇವೆ. ಹೀಗೆಯೇ ನಾವು ಯಾರೂ ಹಿಂದುಳಿಯದಂತೆ ಮುನ್ನಡೆಯಲಿರುವುದು ಎಂದು ತಿಳಿಸಿದರು.

    ಸಾವಿರಾರು ರಾಷ್ಟ್ರಧ್ವಜಗಳು ಏಕತೆಯ ಉತ್ಸಾಹದಲ್ಲಿ ಗಾಳಿಯಲ್ಲಿ ಹಾರಾಡಿದವು. ಉತ್ಸವದಲ್ಲಿ ನೆರೆದಿದ್ದ ಜನರ ಉತ್ಸಾಹ ಮತ್ತು ಸಂತೋಷ ಇಮ್ಮಡಿಗೊಂಡಿತ್ತು. ಕಲಾವಿದರಲ್ಲಿ ಶಕ್ತಿಯ ಸಂಚಲನ ಮೂಡಿದಂತಿತ್ತು.

    ಉತ್ಸವದ ಮಹತ್ವ ಕುರಿತು ಮಾತನಾಡಿದ ಮೋಹಿನಿಯಾಟ್ಟಂ ಪ್ರದರ್ಶನದ ನೃತ್ಯ ಸಂಯೋಜಕಿ ಬೀನಾ ಮೋಹನ್, ಈ ಪ್ರದರ್ಶನದ ಭಾಗವಾಗುವುದು ಒಂದು ಕನಸು. ಈ ಕಾರ್ಯವನ್ನು ಸಂಯೋಜಿಸುವುದು ನನಗೆ ಮತ್ತು ನನ್ನ ವಿದ್ಯಾರ್ಥಿಗಳಿಗೆ ನಂಬಲಾಗದ ಒಂದು ಅನುಭವವಾಗಿತ್ತು. ಪ್ರದರ್ಶನದ ನಂತರ ಇದು ನಮಗೆ ತರುವ ಆತ್ಮವಿಶ್ವಾಸ, ಸಂತೋಷ ಎಲ್ಲವೂ ಒಂದು ವಿಭಿನ್ನ ಭಾವನೆಯಾಗಿರಲಿದೆ ಎಂದು ಅವರು ಹೇಳಿದರು.

    ವಿಶ್ವ ಸಾಂಸ್ಕೃತಿಕ ಉತ್ಸವದ ತಮ್ಮ ಭಾಷಣದಲ್ಲಿ ಮಿಚಿಗನ್ ಕಾಂಗ್ರೆಸಿಗರಾದ ಥಾನೇದಾರ್ ಮಾತನಾಡಿ, ಕರ್ನಾಟಕ ರಾಜ್ಯದೊಂದಿಗಿನ ತಮ್ಮ ಸಂಬಂಧದ ಬಗ್ಗೆ ಅನಿಸಿಕೆ ಹಂಚಿಕೊಂಡರು. ಎಂತಹ ಸುಂದರವಾದ ಸಂಜೆ. ಎಂತಹ ಸುಂದರ ಪ್ರದರ್ಶನಗಳು. ನಾವು ಸ್ವಲ್ಪ ಮಳೆಯನ್ನು ನೋಡಿದ್ದೇವೆ. ಅದು ವಿಶ್ವ ಶಾಂತಿ ಮತ್ತು ಹೊಸ ಆರಂಭವನ್ನು ತರುತ್ತದೆ. ಕರ್ನಾಟಕದ ಬೆಳಗಾವಿಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಮನೆಯಲ್ಲಿ ಬೆಳೆದು, ಆ ರಾಜ್ಯವನ್ನು ಗುರುದೇವರೊಂದಿಗೆ ಹಂಚಿಕೊಂಡಿದ್ದ ನನಗೆ ಇತ್ತೀಚೆಗೆ ಗುರುದೇವರೊಂದಿಗೆ ಕನ್ನಡದಲ್ಲಿ ಮಾತನಾಡಲು ಸಾಧ್ಯವಾಗಿದ್ದಕ್ಕೆ ತುಂಬಾ ಸಂತೋಷವಾಯಿತು ಎಂದರು.

    ಗ್ರ್ಯಾಮಿ ಪ್ರಶಸ್ತಿ ವಿಜೇತೆ ಚಂದ್ರಿಕಾ ಟಂಡನ್ ಮತ್ತು 200 ಕಲಾವಿದರು ‘ಅಮೆರಿಕಾ ದಿ ಬ್ಯೂಟಿಫುಲ್ ಮತ್ತು ವಂದೇ ಮಾತರಂ’ ಗಾಯನ ಮಾಡಿದರು. 1,000 ಕಲಾವಿದರನ್ನು ಒಳಗೊಂಡ ಭಾರತೀಯ ಶಾಸ್ತ್ರೀಯ ನೃತ್ಯ ಮತ್ತು ಶಾಸ್ತ್ರೀಯ ಕಛೇರಿಯು ಪಂಚಭೂತಂ ಎಂಬ ಪ್ರದರ್ಶನ ನಡೆಸಿತು. ಗ್ರ್ಯಾಮಿ ಪ್ರಶಸ್ತಿ ವಿಜೇತ ಮಿಕ್ಕಿ ಫ್ರೀ ಅವರ ನೇತೃತ್ವದಲ್ಲಿ 1,000 ಗಿಟಾರ್‌ಗಳ ವಾದನವೂ ನಡೆಯಿತು. ಆಫ್ರಿಕಾ, ಜಪಾನ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ಅನೇಕ ಪ್ರದರ್ಶನಗಳು ನಡೆದವು. ಅಂತಿಮವಾಗಿ ‘ಒನ್ ಲವ್’ ಆಚರಣೆಯೊಂದಿಗೆ ಸ್ಕಿಪ್ ಮಾರ್ಲೆಯವರ ರೆಗ್ಗೀ ರಿದಮ್ಸ್ ಪ್ರದರ್ಶನದೊಂದಿಗೆ ಮೊದಲ ದಿನದ ಕಾರ್ಯಕ್ರಮವು ಮುಕ್ತಾಯಗೊಂಡಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆ.29 ರಿಂದ ವಾಷಿಂಗ್ಟನ್‌ನಲ್ಲಿ ವಿಶ್ವ ಸಾಂಸ್ಕೃತಿಕ ಉತ್ಸವ

    ಸೆ.29 ರಿಂದ ವಾಷಿಂಗ್ಟನ್‌ನಲ್ಲಿ ವಿಶ್ವ ಸಾಂಸ್ಕೃತಿಕ ಉತ್ಸವ

    – ಶ್ರೀ ಶ್ರೀ ರವಿಶಂಕರ್‌ ಗುರೂಜಿ ನೇತೃತ್ವದಲ್ಲಿ ‘ಸಾಂಸ್ಕೃತಿಕ ಒಲಿಂಪಿಕ್ಸ್‌’

    ಬೆಂಗಳೂರು: ಅಮೆರಿಕದ ವಾಷಿಂಗ್ಟನ್‌ ಡಿ ಸಿಯ (Washington DC) ನ್ಯಾಷನಲ್‌ ಮಾಲ್‌ನಲ್ಲಿ ಸೆ.29 ರಿಂದ ಅ.1 ರ ವರೆಗೆ ‘ವಿಶ್ವ ಸಾಂಸ್ಕೃತಿಕ ಉತ್ಸವ’ವನ್ನು (World Culture Festival 2023) ಆರ್ಟ್‌ ಆಫ್‌ ಲಿವಿಂಗ್‌ (Art Of Living) ಸಂಸ್ಥೆಯು ಆಯೋಜಿಸಿದೆ.

    ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್‌ ಗುರೂಜಿ (Ravishankar Guruji) ಅವರ ಮುಂದಾಳತ್ವದಲ್ಲಿ ಈ ಉತ್ಸವ ಜರುಗಲಿದೆ. 17,000 ಕಲಾವಿದರು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌, ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಡಾ.ವಿವೇಕ್‌ ಮೂರ್ತಿ, ಅಮೆರಿಕದ ಸಂಸದರಾದ ರಿಕ್ ಸ್ಕಾಟ್, ಭಾಷಣಕಾರರಾಗಿ ನಾನ್ಸಿ ಪೆಲೋಸಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಎಲ್ಲಾ ಸರ್ಕಾರಗಳು ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿವೆ: ಸತೀಶ್ ಜಾರಕಿಹೊಳಿ

    ಈ ದಿನಗಳಂದು ಇಡೀ ಜಗತ್ತಿನ ಕಣ್ಣು, ಅಮೆರಿಕದ ರಾಜಧಾನಿ ಮೇಲೆ ನೆಟ್ಟಿರುತ್ತದೆ. ಅವಿಸ್ಮರಣೇಯವಾದ ವೈವಿಧ್ಯತೆ ಹಾಗೂ ಏಕತೆಯ ಉತ್ಸವಕ್ಕೆ ಆತಿಥ್ಯವನ್ನು ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆ ವಹಿಸಲಿದೆ. ಇದು ಸಂಸ್ಥೆಯ ವಿಶ್ವ ಸಾಂಸ್ಕೃತಿಕ ಉತ್ಸವದ ನಾಲ್ಕನೆಯ ಆವೃತ್ತಿಯಾಗಿದೆ.

    ವಿಶ್ವ ಸಾಂಸ್ಕೃತಿಕ ಉತ್ಸವದಲ್ಲಿ 17,000 ಕಲಾವಿದರು, ಅನೇಕ ರಾಜ್ಯಗಳ ಮುಖ್ಯಸ್ಥರು, 100 ಕ್ಕಿಂತಲೂ ಹೆಚ್ಚು ದೇಶಗಳ ಚಿಂತಕರು ಭಾಗವಹಿಸಲಿದ್ದಾರೆ. 5 ಲಕ್ಷಕ್ಕೂ ಹೆಚ್ಚು ಜನರು ಈ ಉತ್ಸವದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ ಇದು ಜಾಗತಿಕವಾಗಿ ಮಹತ್ವದ ಉತ್ಸವವಾಗಲಿದೆ. ಈ ಉತ್ಸವದಲ್ಲಿ 50 ಪ್ರದರ್ಶನಗಳು ನಡೆಯಲಿವೆ. ಪಾರಂಪರಿಕ ಚೀನಾದ ಸಾಂಸ್ಕೃತಿಕ ಪ್ರದರ್ಶನವೂ ಇರಲಿದೆ. ಇದರಲ್ಲಿ 1,000 ಹಾಡುಗಾರರು ಮತ್ತು ನರ್ತಕರು ಭಾಗವಹಿಸಲಿದ್ದಾರೆ.

    7,000 ನರ್ತಕರನ್ನೊಳಗೊಂಡ ಗರ್ಭನೃತ್ಯ ವೈಭವ, ನೇರ ಸ್ವರಮೇಳದ ಸಹಿತ 700 ಭಾರತೀಯ ಶಾಸ್ತ್ರೀಯ ನರ್ತಕರು, ಹಿಪ್ ಹಾಪ್‌ನ 50ನೇ ವರ್ಷದ ಸಂಭ್ರಮ, ಕುರ್ಟಿಸ್ ಬ್ಲೋ, ಎಸ್‌ಹೆಚ್‌ಎ-ರಾಕ್, ಸೀಕ್ವೆನ್ಸ್ ಗರ್ಲ್ಸ್, ಡಿಜೆಕೂಲ್ ಹಾಗೂ ಕಿಂಗ್ ಚಾರ್ಲ್ಸ್ ಹಾಗೂ ಕೆಲ್ಲಿ ಫಾರ್ಮನ್ ಅವರಿಂದ ಸಂಯೋಜಿಸಲ್ಪಟ್ಟ ನೃತ್ಯ ಸಂಯೋಜನೆಯಲ್ಲಿ 100 ಬ್ರೇಕ್ ಡಾನ್ಸ್‌ನ ನರ್ತಕರು ತಮ್ಮ ಚೊಚ್ಚಲ ಪ್ರದರ್ಶನವನ್ನು ನೀಡಲಿದ್ದಾರೆ. ತಮ್ಮ ಪಾರಂಪರಿಕ ನೃತ್ಯವಾದ ಹೋಪಾಕ್ ನೃತ್ಯ ಪ್ರದರ್ಶನವನ್ನು ನೀಡಲಿರುವ 1,000 ಉಕ್ರೇನ್‌ ನರ್ತಕರು, ಗ್ರಾಮಿ ಪ್ರಶಸ್ತಿ ವಿಜೇತರಾದ ಮಿಕ್ಕಿ ಫ್ರೀ ಅವರ ನೇತೃತ್ವದಲ್ಲಿ 1,000 ಗಿಟಾರ್ ವಾದ್ಯ ಕಾರ್ಯಕ್ರಮ ನಡೆಯಲಿದೆ. ಬಾಬ್ ಮಾರ್ಲೆಯವರ ಖ್ಯಾತ “ಒನ್ ಲವ್” ಮರುಸೃಷ್ಟಿ ಕಾರ್ಯಕ್ರಮವನ್ನು ಅವರ ಮೊಮ್ಮಗ ಸ್ಕಿಪ್ ಮಾರ್ಲಿನ್ ನಡೆಸಿಕೊಡಲಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್‌ – ವಿಜಯನಗರ ವಿವಿ ಪರೀಕ್ಷೆ ಮುಂದೂಡಿಕೆ

    ನ್ಯಾಷನಲ್ ಮಾಲ್‌ನಲ್ಲಿ 1963 ರಲ್ಲಿ ಮಾರ್ಟಿನ್ ಲೂಥರ್ ಕಿಂಗ್ “ಐ ಹ್ಯಾವ್ ಎ ಡ್ರೀಮ್” ಅತ್ಯದ್ಭುತ ಭಾಷಣವನ್ನು ನೀಡಿದ್ದರು. ಆ ಮೂಲಕ ಜಗತ್ತಿಗೆ ಸಮನ್ವಯತೆ, ಏಕತೆಯ ಸಂದೇಶವನ್ನು ಸಾರಿದ್ದರು. ಅದಕ್ಕಿಂತಲೂ ನೂರು ವರ್ಷಗಳ ಹಿಂದೆ ಚಿಕಾಗೋನಲ್ಲಿ ನಡೆದ ಪ್ರಥಮ ವಿಶ್ವ ಧಾರ್ಮಿಕ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು ಅವಿಸ್ಮರಣೀಯ ಭಾಷಣ ಮಾಡಿ, ಸಭಿಕರನ್ನು ಮಂತ್ರಮುಗ್ಧರನ್ನಾಗಿಸಿದ್ದರು. ಧಾರ್ಮಿಕ ಪ್ರತಿನಿಧಿಗಳನ್ನು ಸಹೋದರ, ಸಹೋದರಿಯರೆ ಎಂದು ಸಂಬೋಧಿಸಿ ವಿವೇಕಾನಂದರು ಗಮನ ಸೆಳೆದಿದ್ದರು. ಧಾರ್ಮಿಕ ದ್ವಂದ್ವತೆ, ಅಸಹಿಷ್ಣುತೆ ಕೊನೆಗಾಣಿಸಬೇಕು ಎಂದು ಕರೆ ನೀಡಿದ್ದರು.

    ಇಂತಹ ಐತಿಹಾಸಿಕ ಸ್ಮರಣೀಯ ಸನ್ನಿವೇಶಗಳಿಗೆ ಸಾಕ್ಷಿಯಾಗಿದ್ದ ನ್ಯಾಷನಲ್‌ ಮಾಲ್‌ನಲ್ಲಿ ಇದೇ ಸೆ.29 ರಂದು ಗುರುದೇವ್ ಶ್ರೀ ಶ್ರೀ ರವಿಶಂಕರ ಗುರೂಜಿ ಅವರು, “ವಸುದೈವ ಕುಟುಂಬಕಂ” ಎಂಬ ಧ್ಯೇಯವಾಕ್ಯದೊಂದಿಗೆ 180 ದೇಶಗಳ ಗಡಿಗಳ ಜನ, ಧರ್ಮ, ಪಂಥಗಳನ್ನು ಒಂದುಗೂಡಿಸಲು ಸೇತುವೆಯಾಗಲಿದ್ದಾರೆ. ಈ ಉತ್ಸವದಲ್ಲಿ ಜಗತ್ತಿನ ಎಲ್ಲೆಡೆಯ ಆಹಾರಗಳ ಮೇಳವೂ ನಡೆಯಲಿದೆ. ಈ ಉತ್ಸವದ ವಿಶೇಷತೆಯೆಂದರೆ, ಉದಯೋನ್ಮುಖ ಕಲಾವಿದರು ಮತ್ತು ಪ್ರದರ್ಶಕರಿಗೆ ತಮ್ಮ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆಯಾಗುವುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಲಿಮೆಂಟ್ಸ್  ಆ್ಯಪ್‌ನ ಕನ್ನಡ ಆವರ್ತನ ಲೋಕಾರ್ಪಣೆ ಮಾಡಿದ ಬೊಮ್ಮಾಯಿ

    ಎಲಿಮೆಂಟ್ಸ್ ಆ್ಯಪ್‌ನ ಕನ್ನಡ ಆವರ್ತನ ಲೋಕಾರ್ಪಣೆ ಮಾಡಿದ ಬೊಮ್ಮಾಯಿ

    ಬೆಂಗಳೂರು: ಭಾರತೀಯ ಬಳಕೆದಾರರು ಖಾಸಗಿತನದ ಬಗ್ಗೆ, ಡೇಟ ಸುರಕ್ಷತೆಯ ಬಗ್ಗೆ ಚರ್ಚಿಸುತ್ತಲಿರುವಾಗ ಹಾಗೂ ಇವುಗಳಿಗೆ ಸ್ವದೇಶದಲ್ಲೇ ಪರ್ಯಾಯವನ್ನು ಅರಸುತ್ತಿರುವ ಸಂದರ್ಭದಲ್ಲಿ, ಸಿಎಂ ಬಸವರಾಜ ಬೊಮ್ಮಾಯಿಯವರು (Basavaraj Bommai) ಜಾಗತಿಕ ಆಧ್ಯಾತ್ಮಿಕ ನಾಯಕರಾದ ಆರ್ಟ್ ಆಫ್ ಲಿವಿಂಗ್‌ನ ಸಂಸ್ಥಾಪಕ ರವಿಶಂಕರ್ ಗುರೂಜಿ (Ravishankar Guruji) ಅವರ ಉಪಸ್ಥಿತಿಯಲ್ಲಿ ಪ್ರಸಿದ್ಧ ಸಾಮಾಜಿಕ ಮಾಧ್ಯಮದ ಆ್ಯಪ್ ಎಲಿಮೆಂಟ್ಸ್‌ನ (Elements App) ಕನ್ನಡದ ಆವರ್ತನವನ್ನು ಬಿಡುಗಡೆ ಮಾಡಿದರು.

    ಎಲಿಮೆಂಟ್ಸ್ ಆ್ಯಪ್‌ನ ಕನ್ನಡದ ಆವರ್ತನ ಬಿಡುಗಡೆಯೊಂದಿದೆ ರಾಷ್ಟ್ರೀಯ ಮಟ್ಟದ ಮಾನಸಿಕ ಆರೋಗ್ಯದ ಯೋಜನೆಯನ್ನೂ ಸಹ ಉದ್ಘಾಟಿಸಲಾಯಿತು. ನಗರದ ಹಾಗೂ ಪಟ್ಟಣಗಳಲ್ಲಿ ವಾಸ ಮಾಡುತ್ತಿರುವ ಯುವಕರಿಗೆ ಮಾನಸಿಕ ಆರೋಗ್ಯದ ಮಹತ್ವವನ್ನು ತಿಳಿಸಿ, ಅವರ ಉತ್ತಮ ಆರೋಗ್ಯಕ್ಕಾಗಿ ಧ್ಯಾನವನ್ನು ಒಂದು ಸಾಧನವಾಗಿ ಅವರನ್ನು ಸಬಲೀಕರಣಗೊಳಿಸುವುದೇ ಈ ಯೋಜನೆಯ ಗುರಿಯಾಗಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, ನಮ್ಮ ಬಳಿಯಿರುವುದು ನಾಗರಿಕತೆ ಮತ್ತು ನಾವೇನು ಆಗಿರುವೆವೋ ಅದು ಸಂಸ್ಕೃತಿ. ಸಾಮಾನ್ಯವಾಗಿ ನಾವೆಲ್ಲರೂ ಯಾಂತ್ರಿಕವಾಗಿ ಜೀವಿಸುವುದಕ್ಕೆ ಒಗ್ಗಿ ಹೋಗಿದ್ದೇವೆ. ರವಿಶಂಕರ್ ಅವರು ಆರ್ಟ್ ಆಫ್ ಲಿವಿಂಗ್‌ನ ಮೂಲಕ ಜೀವನದ ಮೂಲಭೂತ ತತ್ವಗಳನ್ನು ಬೋಧಿಸುತ್ತಿದ್ದಾರೆ. ಮುಗ್ಧರಾದ ಇವರು, ಜಗತ್ತಿನ 154 ದೇಶಗಳಲ್ಲೂ ಭಕ್ತರನ್ನು ಹೊಂದಿದ್ದಾರೆ. ಇದಕ್ಕೆ ಕಾರಣ, ಆರ್ಟ್ ಆಫ್ ಲಿವಿಂಗ್‌ನ ಭಾಷೆ ವೈಶ್ವಿಕವಾದದ್ದು, ನಿಯಮರಹಿತ ಪ್ರೇಮದ ಭಾಷೆಯಾಗಿರುವುದು ಎಂದರು. ಇದನ್ನೂ ಓದಿ: ಎಷ್ಟು ದಿನ ಪ್ರಧಾನಿ ಹುದ್ದೆಯಲ್ಲಿರ್ತಾರೆ? – ಸುನಾಕ್ ಬಗ್ಗೆ ಬ್ರಿಟನ್‌ ಪತ್ರಿಕೆಗಳ ಅಸಮಾಧಾನ

    ನಿಜವಾದ ಭಕ್ತರು ಸುಲಭವಾಗಿ ಆರ್ಟ್ ಆಫ್ ಲಿವಿಂಗ್ ಅನ್ನು ಅರ್ಥಮಾಡಿಕೊಳ್ಳಬಹುದು. ಮಾನವರು ತಮ್ಮ ಎಲ್ಲಾ ಗುರುತುಗಳನ್ನೂ, ಪದವಿಗಳ ಬಯಕೆಯನ್ನೂ ತ್ಯಜಿಸಿ, ದೈವದೊಡನೆ ಮಿಳಿತವಾಗುವ ಬದಲಿಗೆ, ಇನ್ನೂ ಹೆಚ್ಚು ಗುರುತುಗಳನ್ನು, ಪಟ್ಟಿಗಳನ್ನು ಪಡೆದುಕೊಳ್ಳುವ ಸಲುವಾಗಿ ಓಡುತ್ತಿದ್ದಾರೆ ಎಂದರು.

    ಈ ವೇಳೆ ಉಪಸ್ಥಿತರಾಗಿದ್ದ ರಾಕ್ ಲೈನ್ ವೆಂಕಟೇಶ್ ಅವರು, ಭಾರತದಲ್ಲೇ ತಯಾರಾದ ಸಾಮಾಜಿಕ ಮಾಧ್ಯಮದ ಎಲಿಮೆಂಟ್ಸ್ ಆ್ಯಪ್ ಬಹಳ ಹೆಮ್ಮೆಯ ವಿಷಯ. ಎಲಿಮೆಂಟ್ಸ್ ಚಾಟ್ ಹಾಗೂ ಕರೆಗಳಿಗಾಗಿ ಮಾಡಲಾದ ಆ್ಯಪ್. ಜಗತ್ತಿಗಾಗಿ ಭಾರತದಲ್ಲಿ ಮಾಡಲಾಗಿದೆ. ಇದರ ಅತೀ ಉತ್ತಮವಾದ ಅಂಶವೆಂದರೆ, ನಿಮ್ಮ ಡೇಟಾ ಭಾರತದಲ್ಲೇ ಉಳಿಯುತ್ತದೆ ಮತ್ತು ಅದನ್ನು ದುರುಪಯೋಗ ಪಡಿಸಿಕೊಳ್ಳಲು ಸಾಧ್ಯವಿಲ್ಲ. ಇದೀಗ ಮೊಟ್ಟಮೊದಲ ಬಾರಿಗೆ ಇದು ಕನ್ನಡದಲ್ಲಿ ಲಭ್ಯವಾಗಿದೆ. ಕನ್ನಡದ ಬಳಕೆದಾರರಿಗಾಗಿಯೇ ಸಂಪೂರ್ಣವಾಗಿ ಆಪ್ಟಿಮೈಸ್ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೆಂಪೇಗೌಡ ಕಂಚಿನ ಪ್ರತಿಮೆಗೆ ಪವಿತ್ರ ಮಣ್ಣು ಸಂಗ್ರಹ – ಅಭಿಯಾನಕ್ಕೆ ಮಂಗಳೂರಿನಲ್ಲಿ ಚಾಲನೆ

    ಸ್ನೇಹಿತರೊಂದಿಗೆ ಹಾಗೂ ಕುಟುಂಬದವರೊಂದಿಗೆ ಸುರಕ್ಷಿತವಾಗಿ ಚಾಟ್ ಮಾಡಬಹುದು. 300 ಜನರನ್ನು ಒಳಗೊಂಡ ಚಾಟ್ ಗುಂಪುಗಳನ್ನು ಮಾಡಬಹುದು. ಹೆಚ್‌ಡಿ ಗುಣಮಟ್ಟದ ಆಡಿಯೋ/ವೀಡಿಯೊ ಕರೆಗಳು, ವಾಯ್ಸ್ ನೋಟ್ಸ್, ಜಿಫ್‌ಗಳನ್ನು ಮತ್ತು ಇತರ ಮೀಡಿಯಾ ಫೈಲ್ಸ್‌ಗಳನ್ನು ನಿಮ್ಮ ಆಪ್ತರೊಂದಿಗೆ ಹಂಚಿಕೊಳ್ಳಬಹುದು. ಈ  ಆ್ಯಪ್ ಅನ್ನು ಸುಮಾರು 1,000 ಜನ ಐಟಿ ತಜ್ಞರು ಬೆಳೆಸಿದ್ದಾರೆ. ಭಾರತದ ಮಾಲೀಕತ್ವವನ್ನೇ ಹೊಂದಿ, ಭಾರತದಲ್ಲೇ ನಡೆಸಲಾಗುವ ಉದ್ದೇಶವನ್ನು ಹೊಂದಿದ್ದಾರೆ. ದೇಶದ ನುರಿತ ತಜ್ಞರು ಈ ಆ್ಯಪ್‌ನ ವಿನ್ಯಾಸಕರಿಗೆ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಹೇಳಿದರು.

    ಎಲಿಮೆಂಟ್ಸ್ ಆ್ಯಪ್ ಯೋಜನೆಯ ಮುಖ್ಯಸ್ಥ ರಾಜೇಶ್ ಕೃಷ್ಣಮೂರ್ತಿ ಮಾತನಾಡಿ, ಭಾರತೀಯ ಸೈಬರ್ ಸ್ಪೇಸ್‌ನ ಸಾರ್ವಭೌಮತ್ವ ಅತೀ ಮುಖ್ಯ. ಬಳಕೆದಾರರ ಖಾಸಗಿತನವು ಬಹಳ ಮುಖ್ಯ ಎಂದು ಪರಿಗಣಿಸಲಾಗುತ್ತಿರುವ ಈ ಸಮಯದಲ್ಲಿ, ಎಲ್ಲಾ ಡೇಟಾ ಭಾರತದಲ್ಲೇ ಉಳಿಯುವಂತೆ ಮಾಡಿದ್ದೇವೆ ಎಂದರು.

    ರವಿಶಂಕರ್ ಗುರೂಜಿ ಅವರು ಹರ್ ಘರ್ ಧ್ಯಾನ್ ಯೋಜನೆಯನ್ನೂ ಉದ್ಘಾಟಿಸಿದರು. ಇದೊಂದು ಮಾನಸಿಕ ಆರೋಗ್ಯದ ಯೋಜನೆಯಾಗಿದ್ದು, ಆರ್ಟ್ ಆಫ್ ಲಿವಿಂಗ್‌ನ ಶಿಕ್ಷಕರು ಧ್ಯಾನದ ಮಾರ್ಗದರ್ಶಕರಾಗಿ, ಸಂಸ್ಥೆಗಳ ಪ್ರತಿನಿಧಿಗಳಾಗಿ ಆಸಕ್ತ ಸಾರ್ವಜನಿಕ ವ್ಯಕ್ತಿಗಳಾಗಿ, ನಗರದ ಜನತೆಯ ಬಳಿ, ವಿಶೇಷವಾಗಿ ಯುವಕರ ಬಳಿಗ ಧ್ಯಾನದ ದೂತರಾಗಿ ತಲುಪಲಿದ್ದಾರೆ. ಇದು ಜನ್ ಭಾಗೀಧಾರೀ ಮಾದರಿಯ ಭಾಗವಾಗಿದ್ದು, ಈ ಯೋಜನೆಯು ನಗರದ ಯುವಕರಿಗೆ ಉತ್ತಮ ಆರೋಗ್ಯ ದೊರಕುವಂತೆ ಅವರನ್ನು ಸಬಲೀಕರಿಸುತ್ತದೆ. ರಾಷ್ಟ್ರದ ಸುಭದ್ರ ಭವಿಷ್ಯವನ್ನೂ ಸೃಷ್ಟಿಸುತ್ತದೆ. ಈ ಯೋಜನೆಯನ್ನು ಅನೇಕ ಹಂತಗಳಲ್ಲಿ ಜಾರಿಗೆ ತರಲಾಗುತ್ತದೆ ಮತ್ತು ದೇಶದ ರಾಜಧಾನಿಯಿಂದ ಆರಂಭವಾಗಲಿದೆ. ಈ ಯೋಜನೆಯನ್ನು ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯವು ಬೆಂಬಲಿಸುತ್ತಿದೆ ಮತ್ತು 2023ರ ಸ್ವಾತಂತ್ರ‍್ಯ ದಿನೋತ್ಸವದಂದು ಕೊನೆಗೊಳ್ಳಲಿದೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಸಮಾಜಕ್ಕೆ ತುಡಿಯುವ, ಮಿಡಿಯುವ ಹೃದಯವಂತ ಸೋಮಶೇಖರ್ – ಶಿವಮೂರ್ತಿ ಮುರುಘಾ ಶರಣರಿಂದ ಶ್ಲಾಘನೆ

    ಸಮಾಜಕ್ಕೆ ತುಡಿಯುವ, ಮಿಡಿಯುವ ಹೃದಯವಂತ ಸೋಮಶೇಖರ್ – ಶಿವಮೂರ್ತಿ ಮುರುಘಾ ಶರಣರಿಂದ ಶ್ಲಾಘನೆ

    – ಕೊರೊನಾವನ್ನು ಮುಚ್ಚಿಡಬೇಡಿ; ಸಚಿವ ಸೋಮಶೇಖರ್ ಕಿವಿಮಾತು
    – ಕೋವಿಡ್ ಮಾಹಿತಿಗೆ ಟ್ರಯಾಜ್ ಸೆಂಟರ್: ಎಸ್ ಟಿ ಎಸ್
    – ನಾವು.. ನಾವು ಎಂಬ ಎಸ್ ಟಿ ಎಸ್ ಸೇವೆ ಶ್ಲಾಘನೀಯ: ಶ್ರೀ ಶ್ರೀ ರವಿಶಂಕರ್ ಗುರೂಜಿ

    ಬೆಂಗಳೂರು: ಇಂದು ಸಹಾಯಪಡೆದುಕೊಳ್ಳುವವರ ಸಂಖ್ಯೆ ಹೆಚ್ಚಿದ್ದು, ಸಹಾಯ ಮಾಡುವವರ ಸಂಖ್ಯೆ ಕಡಿಮೆ ಇದೆ. ಇದು ಕೊರೋನಾ ಸಂದಿಗ್ದ ಕಾಲವಾಗಿದ್ದು, ಸ್ಪಂದನೆಯನ್ನು ನೀಡುವಂತಹ ಕಾಲವಾಗಿದೆ. ಇಂಥ ಸಂದರ್ಭದಲ್ಲಿ ತಮ್ಮ ಕ್ಷೇತ್ರದಲ್ಲಿ ಮೃತಪಟ್ಟ ಕುಟುಂಬದವರಿಗೆ 1 ಲಕ್ಷ ರೂಪಾಯಿ ವೈಯಕ್ತಿಕ ನೆರವು ನೀಡುತ್ತಿರುವ ಕ್ರಮ ಮಾದರಿಯಾಗಿದೆ ಎಂದು ಚಿತ್ರದುರ್ಗದ ಮುರುಘಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ಶಿವಮೂರ್ತಿ ಮುರುಘಾ ಶರಣರು ಸ್ವಾಮೀಜಿ ರವರು ಹೇಳಿದರು.

    ಯಶವಂತಪುರ ವಿಧಾನಸಭಾ ಕ್ಷೇತ್ರದ ಉಲ್ಲಾಳು ವಾರ್ಡ್‍ನಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಹಕಾರ ಸಚಿವರಾದ ಶ್ರೀ ಎಸ್.ಟಿ. ಸೋಮಶೇಖರ್ ಅವರು ಕೋವಿಡ್ 19ರಿಂದ ಮೃತಪಟ್ಟವರ 27 ಕುಟುಂಬದವರಿಗೆ ವೈಯಕ್ತಿಕವಾಗಿ ಕೊಡಮಾಡುವ 1 ಲಕ್ಷ ರೂಪಾಯಿ ಸಹಾಯಧನ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸ್ವಾಮೀಜಿಯವರು ಮಾತನಾಡಿ, ಸಚಿವರಾದ ಸೋಮಶೇಖರ್ ಅವರದ್ದು, ಸಮಾಜಕ್ಕೆ ತುಡಿಯುವಂತಹ ಹಾಗೂ ಮಿಡಿಯುವಂತಹ ಹೃದಯ ಎಂದು ಬಣ್ಣಿಸಿದರು.

    ಸೋಮಶೇಖರ್ ಅವರು ಸಚಿವರಾಗುವ ಮೊದಲಿನಿಂದಲೇ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹತ್ತು ವರ್ಷಗಳ ಹಿಂದಿನಿಂದಲೂ ಸಾಮೂಹಿಕ ವಿವಾಹಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ತಮ್ಮನ್ನು ಚಾಲನೆಗೆ ಕರೆಸಿಕೊಳ್ಳುತ್ತಿದ್ದರು. ಇಂತಹ ಸಮಾಜಮುಖಿ ಗುಣ ಇರುವ ಅವರದ್ದು ಸೇವಾ ಮನೋಭಾವ ಎಂದು ಸ್ವಾಮೀಜಿಗಳು ಶ್ಲಾಘನೆ ವ್ಯಕ್ತಪಡಿಸಿದರು.

    ಯಾರೂ ಸಹ ಖಿನ್ನತೆಗೊಳಗಾಬಾರದು. ಆದರೆ, ಇಂದು ಕೊರೋನಾ ರೋಗಕ್ಕಿಂತ ಭಯಕ್ಕೆ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಭಯವನ್ನು ಇಟ್ಟುಕೊಂಡವರು ಬದುಕನ್ನು ಕಳೆದುಕೊಳ್ಳುತ್ತಾರೆ. ಎಲ್ಲರೂ ತಮ್ಮಲ್ಲಿರುವ ಶಿಕ್ಷಣ, ಹಣ, ಅಂತಸ್ತು ಸೇರಿದಂತೆ ಯಾವುದೇ ಇದ್ದರೂ ಸರಿ, ಅವುಗಳಲ್ಲಿ ಒಂದನ್ನು ಬಳಸಿಕೊಂಡು ಪ್ರಾಣವನ್ನು ಉಳಿಸಿಕೊಂಡರೆ ಸಾಕು. ಮಾನವ ಎಲ್ಲವನ್ನೂ ಸಂಪಾದಿಸಿಕೊಳ್ಳಬಹುದು. ಆದರೆ, ನಮ್ಮ ಪ್ರಾಣವಿದ್ದರೆ ಮಾತ್ರ. ನಮ್ಮ ಪ್ರಾಣವನ್ನು ನಾವೇ ಉಳಿಸಿಕೊಂಡು ಬೇರೆಯವರ ಪ್ರಾಣವನ್ನು ಉಳಿಸುವ ಕೆಲಸ ಮಾಡಬೇಕು ಎಂದು ಸ್ವಾಮೀಜಿಗಳು ತಿಳಿಸಿದರು.

    ಮೊದಲನೇ ಅಲೆಗಿಂತ ಎರಡನೇ ಅಲೆ ಭೀಕರವಾಗಿದೆ. ಇದಕ್ಕಾಗಿ ಜನತೆ ಜಾಗ್ರತೆ ವಹಿಸಬೇಕು. ಅಲ್ಲದೆ, ಕೇಂದ್ರ ಸರ್ಕಾರದ ಮುಂದಾಳತ್ವದಲ್ಲಿ ಕಂಡುಹಿಡಿಯಲಾದ ಕೊರೋನಾ ಲಸಿಕೆಯನ್ನು ಎಲ್ಲರೂ ಪಡೆದುಕೊಳ್ಳುವ ಮುಖಾಂತರ ಕೊರೋನಾವನ್ನು ಜಯಿಸಬೇಕು. ಲಸಿಕೆಯನ್ನು ಹಾಕಿಸಿಕೊಂಡರೆ ಏನಾಗುತ್ತದೆ ಎಂಬ ಭಯ ಬೇಡ. ಹೀಗೆ ಮಾಡುವವರಿಗೆ ಹೆಚ್ಚಾಗಿ ಸೋಂಕು ತಗುಲುತ್ತಿದೆ. ಹೀಗಾಗಿ ಎಲ್ಲರೂ ಎಚ್ಚರಿಕೆ ವಹಿಸಬೇಕಿದೆ. ಈ ನಿಟ್ಟಿನಲ್ಲಿ ತಾವು ಸಹ ಲಸಿಕೆಯನ್ನು ಹಾಕಿಸಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ಹಾಕಿಸಿಕೊಳ್ಳುವ ಮುಂಚೆಯೇ ಹಾಕಿಸಿಕೊಂಡಿದ್ದಾಗಿ ಸ್ವಾಮೀಜಿಗಳು ತಿಳಿಸಿದರು.

    ಮುಕ್ತ ಶಿಕ್ಷಣ :
    ಚಿತ್ರದುರ್ಗದಲ್ಲಿ ಶ್ರೀಮಠದ ಆಸ್ಪತ್ರೆಯಲ್ಲಿ ಕೊರೋನಾ ರೋಗಿಗಳಿಗಾಗಿಯೇ 200 ಬೆಡ್ ಗಳನ್ನು ಬಿಟ್ಟುಕೊಟ್ಟಿದ್ದೇವೆ. ಅನಾಥಾಶ್ರಮ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ನಮ್ಮ ಚಿತ್ರದುರ್ಗ ಮಠ ಹಮ್ಮಿಕೊಳ್ಳುತ್ತಿದ್ದು, ಕೋವಿಡ್ ನಿಂದ ಮೃತಪಟ್ಟವರ ಕುಟುಂಬದ ಮಕ್ಕಳಿಗೆ ಸಹ ಮುಕ್ತವಾಗಿ ಶಿಕ್ಷಣವನ್ನು ಶ್ರೀಮಠ ಕೊಡಲಿದೆ ಎಂದು ಸ್ವಾಮೀಜಿಯವರು ತಿಳಿಸಿದರು.

    ಕೊರೋನಾವನ್ನು ಮುಚ್ಚಿಡಬೇಡಿ:
    ಕೊರೋನಾ ಬಂದರೆ ಹೇಳಿಕೊಳ್ಳಲು ನಾಚಿಕೆ ಪಡುವ ಸನ್ನಿವೇಶಗಳು ಬಂದಿದೆ. ಜನರು ಭಯಪಡುತ್ತಿದ್ದು, ಮುಚ್ಚಿಡುತ್ತಿದ್ದಾರೆ. ನಾವು ಆಹಾರ ಕಿಟ್ ಗಳನ್ನು ಕೊಡಲು ಹೋದಂತಹ ಸಂದರ್ಭದಲ್ಲಿ ಇಂತಹ ಪ್ರಕರಣಗಳು ಬೆಳಕಿಗೆ ಬಂದಿದೆ. ಅಕ್ಕಪಕ್ಕದವರಿಗೆ ಗೊತ್ತಾದರೆ ಎಂಬ ಆತಂಕವನ್ನು ಹೊಂದಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಆ ಆತಂಕ ಬೇಡ. ಕೊರೋನಾ ಇಡೀ ವಿಶ್ವಕ್ಕೇ ಆವರಿಸಿದೆ. ಹೀಗಾಗಿ ಧೈರ್ಯದಿಂದ ಚಿಕಿತ್ಸೆ ಪಡೆದು ಗುಣಮುಖರಾಗಿ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಹಕಾರ ಸಚಿವರಾದ ಶ್ರೀ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದರು.

    ಟ್ರಯಾಜ್ ಸೆಂಟರ್:
    ಚೆನ್ನೇನಹಳ್ಳಿಯಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡಿ ಸುಮಾರು 100 ಬೆಡ್ ಗಳ ವ್ಯವಸ್ಥೆ ಮಾಡಿದ್ದೇವೆ. ಜ್ಞಾನಭಾರತಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಸುಮಾರು 370 ಬೆಡ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ 45 ಆಕ್ಸಿಜನ್ ಕಾನ್ಸಂಟ್ರೇಟರ್ ಗಳಿವೆ. ಕೆಂಗೇರಿ ಮತ್ತು ಹೇರೋಹಳ್ಳಿಯಲ್ಲಿ ಟ್ರಯಾಜ್ ಸೆಂಟರ್ ಗಳನ್ನು ತೆರೆಯಲಾಗಿದೆ. ಇಲ್ಲಿ ಪಾಸಿಟಿವ್ ಬಂದವರು ತಕ್ಷಣ ಭೇಟಿ ಕೊಟ್ಟರೆ, ಯಾವ ಪ್ರಮಾಣದಲ್ಲಿ ಸೋಂಕಿದೆ, ಚಿಕಿತ್ಸೆಯನ್ನು ಮನೆಯಲ್ಲಿ ತೆಗೆದುಕೊಳ್ಳಬೇಕಾ? ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಬೇಕಾ? ಇಲ್ಲವೇ ಆಸ್ಪತ್ರೆಗೆ ದಾಖಲಿಸಬೇಕಾ ಎಂಬ ಬಗ್ಗೆ ತಿಳಿಸಿಕೊಡುತ್ತಾರೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

    ನೀವಿದ್ದಲ್ಲಿಗೆ ಸೌಲಭ್ಯ:
    ಪಾಸಿಟಿವ್ ಬಂದವರು ಕೋವಿಡ್ ಕೇರ್ ಸೆಂಟರ್ ಗೆ ಮುಕ್ತವಾಗಿ ಪ್ರವೇಶ ಪಡೆಯಬಹುದಾಗಿದ್ದು, ಯಾವುದೇ ಪ್ರಭಾವವನ್ನು ಬಳಸುವುದ ಸಹ ಬೇಡ. ಅಲ್ಲಿಗೆ ನೇರವಾಗಿ ಹೋಗಿ ದಾಖಲಾದರೆ, 10 ದಿನಗಳ ಕಾಲ ಅಗತ್ಯ ಔಷೋಧಪಾರಗಳು ಲಭ್ಯವಾಗಿ ಗುಣಮುಖರಾಗಿ ಹಿಂದಿರುಗಬಹುದು. ಇನ್ನು ಹೋಂ ಐಸೋಲೇಶನ್ ನಲ್ಲಿರುವವರು, ಆಸ್ಪತ್ರೆಗಳಿಗೆ ದಾಖಲಿದ್ದರೆ ತಮಗೆ ಮಾಹಿತಿ ನೀಡಿದರೆ ಮನೆಗೆ ಆಹಾರ ಕಿಟ್ ಗಳನ್ನು ತಂದುಕೊಡಲಾಗುವುದು. ಆಸ್ಪತ್ರೆಗಳಿಗೆ ಅಗತ್ಯತೆಗಳನ್ನು ಪೂರೈಸಲಾಗುವುದು ಎಂದು ಸಚಿವರಾದ ಎಸ್ ಟಿ ಎಸ್ ತಿಳಿಸಿದರು.

    ಯಾರೂ ಭಯ ಪಡಬೇಡಿ:
    ತಾವು ನಮ್ಮ ಕ್ಷೇತ್ರಕ್ಕೆ ಬಂದು ಜನತೆಗೆ ಸಂದೇಶವನ್ನು ಕೊಡಬೇಕು. ಆ ಮೂಲಕ ಕೊರೋನಾ ಬಗ್ಗೆ ಧೈರ್ಯವನ್ನು ಹೇಳಬೇಕು ಎಂಬ ನಿಟ್ಟಿನಲ್ಲಿ ಕೋರಿಕೊಂಡಿದ್ದೆ. ಈ ಹಿನ್ನೆಲೆಯಲ್ಲಿ ಅವರು ಇಲ್ಲಿಗೆ ಆಗಮಿಸಿ ಜನತೆಗೆ ಆತ್ಮಸ್ಥೈರ್ಯವನ್ನು ತುಂಬುವ ಕೆಲಸವನ್ನು ಮಾಡಿದ್ದಾರೆ. ಹೀಗಾಗಿ ಯಾರೂ ಸಹ ಭಯಗೊಳ್ಳಬೇಡಿ ಎಂದು ಸಚಿವರು ತಿಳಿಸಿದರು.

    ಜೊತೆಗಿದ್ದವರೇ ಇರುತ್ತಿಲ್ಲ:
    ನನ್ನ ಜೊತೆಗೆ 10-20 ವರ್ಷಗಳಿಂದ ಕೆಲಸ ಮಾಡಿದ ಅನೇಕ ಆಪ್ತರು ಕೋವಿಡ್ ಗೆ ಬಲಿಯಾಗುತ್ತಿದ್ದಾರೆ. ಹಿಂದಿನ ದಿನ ರಾತ್ರಿ ಕರೆ ಮಾಡಿ ಗುಣಮುಖನಾಗಿದ್ದೇನೆ. ಅನ್ನುವವರು ಮರುದಿನ ಇರುವುದಿಲ್ಲ. ಇದು ನನ್ನನ್ನು ಆತಂಕಕ್ಕೆ ದೂಡಿದೆ. ಹೀಗಾಗಿ ನನ್ನ ಕ್ಷೇತ್ರದ ಜನರಿಗೆ ಕೈಲಾದಷ್ಟು ಸಹಾಯವನ್ನು ಮಾಡುವ ಮೂಲಕ ಅವರಿಗೆ ಸ್ಪಂದಿಸುವ ಕೆಲಸವನ್ನು ನಾನು ಮಾಡುತ್ತಿದ್ದೇನೆ ಎಂದು ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದರು.

    ಎಸ್‍ಟಿಎಸ್ ಸೇವೆ ಶ್ಲಾಘನೀಯ: ರವಿಶಂಕರ್ ಗುರೂಜಿ
    ನಾನು.. ನಾನು ಎಂದು ಕುಳಿತುಕೊಳ್ಳದೆ, ನಾವು.. ನಾವು ಎಂದು ನಾವುಗಳು ಬದುಕಬೇಕಿದೆ. ಈ ನಿಟ್ಟಿನಲ್ಲಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ನಿರ್ವಹಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಆರ್ಟ್ ಆಫ್ ಲಿವಿಂಗ್‍ನ ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ತಿಳಿಸಿದರು.

    ಕಗ್ಗಲೀಪುರ ಗ್ರಾಮ ಪಂಚಾಯಿತಿ ಮತ್ತು ಅಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕರು ಹಾಗೂ ಸಹಕಾರ ಸಚಿವರಾದ ಶ್ರೀ ಎಸ್.ಟಿ. ಸೋಮಶೇಖರ್ ಅವರು ಕೋವಿಡ್ 19ರಿಂದ ಮೃತಪಟ್ಟವರ 20 ಕುಟುಂಬದವರಿಗೆ ವೈಯಕ್ತಿಕವಾಗಿ ನೀಡಲಿರುವ 1 ಲಕ್ಷ ರೂಪಾಯಿ ಸಹಾಯಧನ ವಿತರಣಾ ಕಾರ್ಯಕ್ರಮಕ್ಕೆ ಶ್ರೀ ರವಿಶಂಕರ್ ಗುರೂಜಿ ಅವರು ಚಾಲನೆ ನೀಡಿ ಮಾತನಾಡಿದರು.

    ನಮ್ಮ ದೇಶಕ್ಕೆ ಎಷ್ಟೋ ಕಷ್ಟಗಳು ಎದುರಾಗಿವೆ. ಈಗ ಬಂದಿರುವ ಕಷ್ಟ ನಮ್ಮ ದೇಶಕ್ಕೆ ಮಾತ್ರವಲ್ಲಿ ಇಡೀ ಪ್ರಪಂಚಕ್ಕೆ ಎದುರಾಗಿದೆ. ಶರೀರವನ್ನು ಸ್ವಸ್ಥವಾಗಿಟ್ಟುಕೊಳ್ಳಬೇಕಿದ್ದು, ಮನೋಬಲವನ್ನು ಕಳೆದುಕೊಳ್ಳಬಾರದು. ಇದು ಸ್ವಾರ್ಥಕ್ಕೆ ಸಮಯವಲ್ಲ. ನಮ್ಮಿಂದ ಇನ್ನೊಬ್ಬರಿಗೆ ಎಷ್ಟು ಸಹಾಯ ಮಾಡಲು ಸಾಧ್ಯ ಎಂಬುದನ್ನು ನಾವು ನೋಡಬೇಕಿದೆ. ಹೀಗಾಗಿ ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದು ಶ್ರೀ ರವಿಶಂಕರ್ ಗುರೂಜಿ ಅವರು ತಿಳಿಸಿದರು.

    ನಾವು ಎಲ್ಲದಕ್ಕೂ ಸರ್ಕಾರವನ್ನು ಬೈಯುವುದಲ್ಲ. ನಾವು ನಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸೋಣ. ನಾಡಿನ ಜನತೆ ಮುಂಜಾಗ್ರತೆಯನ್ನು ಪಡೆದುಕೊಂಡು, ಪಾಸಿಟಿವ್ ಬಂದ ತಕ್ಷಣ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕಿದೆ ಎಂದು ಶ್ರೀ ರವಿಶಂಕರ್ ಗುರೂಜಿಯವರು ಕಿವಿಮಾತು ಹೇಳಿದರು.

  • ಉಡುಪಿ ಪೇಜಾವರ ಶ್ರೀಯನ್ನು ಭೇಟಿಯಾದ ರವಿಶಂಕರ್ ಗುರೂಜಿ

    ಉಡುಪಿ ಪೇಜಾವರ ಶ್ರೀಯನ್ನು ಭೇಟಿಯಾದ ರವಿಶಂಕರ್ ಗುರೂಜಿ

    ಉಡುಪಿ: ಬಾಬ್ರಿ ಮಸೀದಿ ಧ್ವಂಸವಾಗಿ 25 ವರ್ಷ ತುಂಬಿದ ದಿನದಂದೇ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ಶ್ರೀ ರವಿಶಂಕರ್ ಗುರೂಜಿ ಪೇಜಾವರ ಸ್ವಾಮೀಜಿಯನ್ನು ಭೇಟಿಯಾಗಿದ್ದಾರೆ.

    ಆರ್‍ಎಸ್‍ಎಸ್ ಮತ್ತು ವಿಶ್ವಹಿಂದೂ ಪರಿಷದ್ ನ ರಾಮ ಮಂದಿರ ನಿರ್ಮಾಣ ಕುರಿತಾದ ಏಕಪಕ್ಷೀಯ ನಿರ್ಣಯದಿಂದ ರವಿಶಂಕರ್ ಗುರೂಜಿಗೆ ಮುಖಭಂಗವಾಗಿತ್ತು. ಧರ್ಮ ಸಂಸದ್ ಮುಗಿದ ನಂತರ ಬುಧವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ರವಿಶಂಕರ ಗುರೂಜಿ ಶ್ರೀಕೃಷ್ಣನ ದರ್ಶನ ಮಾಡಿ ಚಂದ್ರಶಾಲೆಯಲ್ಲಿ ಕುಳಿತಿದ್ದರು.

    ಬೆಳಗ್ಗೆಯ ಪೂಜೆಯಲ್ಲಿದ್ದ ಪೇಜಾವರ ಶ್ರೀಗಳು ರವಿಶಂಕರ್ ಗುರೂಜಿಯನ್ನು ಕಂಡು ಪೂಜೆ ಮುಗಿಸಿ ಬರುವುದಾಗಿ ಹೇಳಿ ಕೃಷ್ಣಪೂಜೆಯಲ್ಲಿ ತೊಡಗಿದರು. ನಂತರ ಮಠದ ಬಡಗು ಮಾಳಿಗೆಯಲ್ಲಿ ಸುಮಾರು ಅರ್ಧಗಂಟೆಗಳ ಕಾಲ ಪೇಜಾವರ ಶ್ರೀ ಮತ್ತು ರವಿಶಂಕರ್ ಗುರೂಜಿ ಗೌಪ್ಯ ಮಾತುಕತೆ ಮಾಡಿದರು. ಪೇಜಾವರ ಶ್ರೀಗಳು ಧರ್ಮ ಸಂಸದ್ ನಲ್ಲಿ ನಡೆದ ಗೋಷ್ಟಿಗಳ ಬಗ್ಗೆ ಪೇಜಾವರ ಮಾಹಿತಿ ನೀಡಿದ್ದಾರೆ. ರವಿಶಂಕರ್ ಗುರೂಜಿ ತನ್ನ ಮಧ್ಯಸ್ಥಿಕೆಯ ಬೆಳವಣಿಗೆ ಬಗ್ಗೆ ಮಾತುಕತೆ ಮಾಡಿದ್ದಾರೆ.

    ಗೌಪ್ಯ ಮಾತುಕತೆ ನಂತರ ಹೊರಬಂದ ಶ್ರೀರವಿಶಂಕರ್ ಗುರೂಜಿ, ಪ್ರತಿಯೊಬ್ಬರಿಗೂ ಅವರದ್ದೇ ಆದ ಅಭಿಪ್ರಾಯ ಇದೆ. ಸೌಹಾರ್ದ ಪ್ರಯತ್ನ ಮುಂದುವರೆಸುತ್ತೇನೆ. ನ್ಯಾಯಾಲಯದ ಹೊರಗೆ ರಾಮಜನ್ಮಭೂಮಿ ವಿವಾದ ಬಗೆಹರಿಸಲು ನಮ್ಮ ಪರ ಯತ್ನ ಮುಂದುವರೆಯುತ್ತದೆ. ನಾನು ಭೇಟಿಯಾದ ಎಲ್ಲರೂ ಮಂದಿರ ನಿರ್ಮಾಣದ ಪರವಾಗಿದ್ದಾರೆ. ಮುಸ್ಲಿಮರೂ ಸಹಮತ ವ್ಯಕ್ತಪಡಿಸಿದ್ದಾರೆ. ಆರ್‍ಎಸ್‍ಎಸ್ ತನ್ನದೇ ಅಭಿಪ್ರಾಯ ಹೊಂದಲು ಸ್ವತಂತ್ರ ಎಂದರು.

    ಪೇಜಾವರಶ್ರೀ ಮಾತನಾಡಿ, ಗೌಪ್ಯ ಮಾತುಕತೆಯ ವಿವರಣೆಗಳನ್ನು ಹೇಳಲ್ಲ. ಧರ್ಮಸಂಸದ್‍ನಲ್ಲಿ ಗುರೂಜಿಗೆ ವಿರೋಧವಿತ್ತು ಎಂದು ಹೇಳಲಾರೆ. ನ್ಯಾಯಾಲಯದ ಹೊರಗೆ ತೀರ್ಮಾನವಾಗಬೇಕು ಎಂಬುದು ನಮ್ಮ ಅಪೇಕ್ಷೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು ಅನ್ನೋದು ಎಲ್ಲರ ಅಭಿಪ್ರಾಯ ಎಂದರು.

    ಅಯೋಧ್ಯೆಯ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳ ಜೊತೆ ಸಂಧಾನಕ್ಕೆ ಯತ್ನಿಸದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಧರ್ಮ ಸಂಸದ್ ಕಾರ್ಯಕ್ರಮಕ್ಕೆ ಶ್ರೀ ಶ್ರೀ ರವಿಶಂಕರ್ ಗುರೂಜಿ ಗೈರು ಹಾಜರಿ ಹಾಕಿದ್ದರು ಎಂದು ಹೇಳಲಾಗುತ್ತಿದೆ.