Tag: RCB vs KKR

  • ಮೈದಾನಕ್ಕೆ ನುಗ್ಗಿ ಕೊಹ್ಲಿಯನ್ನು ಹಗ್ ಮಾಡ್ತೀನಿ – ಪೋಸ್ಟ್ ಹಾಕಿ ಪೊಲೀಸರ ಅತಿಥಿಯಾದ ಯುವಕ

    ಮೈದಾನಕ್ಕೆ ನುಗ್ಗಿ ಕೊಹ್ಲಿಯನ್ನು ಹಗ್ ಮಾಡ್ತೀನಿ – ಪೋಸ್ಟ್ ಹಾಕಿ ಪೊಲೀಸರ ಅತಿಥಿಯಾದ ಯುವಕ

    – ಲೈಕ್ಸ್, ವೀವ್ಸ್‌ಗಾಗಿ ಹುಚ್ಚಾಟ, ಮ್ಯಾಚ್ ನೋಡೋ ಭಾಗ್ಯ ಕಳಕೊಂಡ ಯುವಕ

    ಬೆಂಗಳೂರು: ಶನಿವಾರ ಬೆಂಗಳೂರಿನ(Bengaluru) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(Chinnaswamy Stadium) ಆರ್‌ಸಿಬಿ ಮತ್ತು ಕೆಕೆಆರ್ ತಂಡಗಳ ನಡುವೆ ಐಪಿಎಲ್ ಪಂದ್ಯ ನಡೆಯಲಿದ್ದು, ಇಲ್ಲೊಬ್ಬ ಯುವಕ ಮ್ಯಾಚ್ ವೇಳೆ ಸ್ಟೇಡಿಯಂ ನುಗ್ತೀನಿ ಎಂದು ಪೋಸ್ಟ್ ಹಾಕಿ ಪೊಲೀಸರ ಅತಿಥಿಯಾಗಿದ್ದಾನೆ.

    ಇಂದು ಬೆಂಗಳೂರಿನಲ್ಲಿ ನಡೆಯುವ ಆರ್‌ಸಿಬಿ ವರ್ಸಸ್ ಕೆಕೆಆರ್ ಪಂದ್ಯದಲ್ಲಿ ಗ್ರೌಂಡ್‌ಗೆ ನುಗ್ತೀನಿ ಎಂದು ಕಬ್ಜ ಶರಣ್ ಎಂಬ ಇನ್ಸ್ಟಾಗ್ರಾಂ ಅಕೌಂಟ್‌ನಲ್ಲಿ ಶರಣ್ ವೀಡಿಯೋ ಪೋಸ್ಟ್ ಹಾಕಿದ್ದ. ಅಲ್ಲದೇ ಗ್ರೌಂಡ್ ಒಳಗೆ ಹೋಗಿ ವಿರಾಟ್ ಕೊಹ್ಲಿನ(Virat Kohli) ಹಗ್ ಮಾಡ್ತೀನಿ ಅಂತಾನೂ ಚಾಲೆಂಜ್ ಹಾಕಿದ್ದ. ಇದನ್ನೂ ಓದಿ: ಕೊತ್ತೂರು ಮಂಜುನಾಥ್ ಅನುಮಾನ ಸೇನೆ ಬಗ್ಗೆ ಅಲ್ಲ, ಬಿಜೆಪಿ ನಾಯಕರ ಬಗ್ಗೆ: ರಾಮಲಿಂಗಾ ರೆಡ್ಡಿ

    ಶರಣ್ ವಿಡಿಯೋ ವೈರಲ್ ಆಗ್ತಿದ್ದಂತೆ ಕಬ್ಬನ್ ಪಾರ್ಕ್ ಪೊಲೀಸರು(Cubbon Park Police) ಠಾಣೆಗೆ ಕರೆಸಿ ವೀಡಿಯೋ ಡಿಲೀಟ್ ಮಾಡಿಸಿದ್ದರು. ಇಂದು ಮ್ಯಾಚ್ ಇರೋ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಶರಣ್‌ನನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಪಾಕ್‌ ಏಜೆಂಟರ ರೀತಿ ಕಾಂಗ್ರೆಸ್ ನಾಯಕರು ಮಾತಾಡ್ತಿದ್ದಾರೆ: ರವಿಕುಮಾರ್ ಕಿಡಿ

    ಇನ್ಸ್ಟಾಗ್ರಾಂ ಲೈಕ್ಸ್ ಹಾಗೂ ವೀವ್ಸ್‌ಗಾಗಿ ಹುಚ್ಚಾಟ ಮಾಡಿದ್ದ ಯುವಕನಿಗೆ ಪೊಲೀಸರ ತಕ್ಕ ಪಾಠ ಕಲಿಸಿದ್ದು, ಸ್ಟೇಡಿಯಂ ನುಗ್ತೀನಿ ಅಂದವನಿಗೆ ಮ್ಯಾಚ್ ನೋಡೋ ಭಾಗ್ಯವೂ ಇಲ್ಲವಾಗಿದೆ. ಇದೀಗ ತಪ್ಪಾಯ್ತು ಎಂದು ವೀಡಿಯೋ ಮಾಡಿರುವ ಶರಣ್, ಇವತ್ತು ಮ್ಯಾಚ್ ಮುಗಿಯುವರೆಗೆ ಠಾಣೆಯಲ್ಲಿ ಇರ್ತಿನಿ ಅಂತಾ ಸ್ಟೋರಿ ಹಾಕಿದ್ದಾನೆ. ಇದನ್ನೂ ಓದಿ: ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು

    ಇನ್ಸ್ಟಾಗ್ರಾಂನಲ್ಲಿ 1 ಲಕ್ಷ ಫಾಲೋವರ್ಸ್‌ಗಾಗಿ ಹುಚ್ಚಾಟದ ವೀಡಿಯೋ ಮಾಡಿ ಪೋಸ್ಟ್ ಮಾಡಿದ್ದ ಯುವಕ, ಇಂದು ನಡೆಯುವ ಆರ್‌ಸಿಬಿ(RCB) ಪಂದ್ಯ ನೋಡಲಾಗದೇ ಪರಿತಪಿಸುತ್ತಿದ್ದಾನೆ.

  • ಆ 2 ರನ್‌ ಗೆಲುವು ತಂದುಕೊಡ್ತಿತ್ತು; ಆರ್‌ಸಿಬಿ ವಿರೋಚಿತ ಸೋಲಿಗೆ ಇದೇ ಕಾರಣ ಅಂದ್ರು ಫ್ಯಾನ್ಸ್‌!

    ಆ 2 ರನ್‌ ಗೆಲುವು ತಂದುಕೊಡ್ತಿತ್ತು; ಆರ್‌ಸಿಬಿ ವಿರೋಚಿತ ಸೋಲಿಗೆ ಇದೇ ಕಾರಣ ಅಂದ್ರು ಫ್ಯಾನ್ಸ್‌!

    – ನಿಯಮದ ಪ್ರಕಾರ ಕೊಹ್ಲಿ ಔಟ್ – ಅಂಪೈರ್‌ ಪರ ಬ್ಯಾಟ್‌ ಬೀಸಿದ ಡುಪ್ಲೆಸಿಸ್‌
    – ಅಂಪೈರ್‌ ವಿರುದ್ಧ ಫ್ಯಾನ್ಸ್‌ ಫುಲ್‌ ಗರಂ

    ಕೋಲ್ಕತ್ತಾ: ಈಡನ್‌ ಗಾರ್ಡನ್‌ ಮೈದಾನದಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ಆರ್‌ಸಿಬಿ (RCB) ಕಂಡ ವಿರೋಚಿತ ಸೋಲು ಅಭಿಮಾನಿಗಳ (RCB Fans) ವಲಯದಲ್ಲಿ ಇನ್ನೂ ಬಿಸಿ-ಬಿಸಿ ಚರ್ಚೆಯಾಗುತ್ತಲೇ ಇದೆ. ಆ 2 ರನ್‌ ಇದ್ದಿದ್ದರೇ ಆರ್‌ಸಿಬಿ, ಗೆದ್ದೇ ಗೆಲ್ಲುತ್ತಿತ್ತು, ಪ್ಲೇ ಆಫ್‌ ಕನಸು ಜೀವಂತವಾಗಿರುತ್ತಿತ್ತು ಎಂದು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ವೀಡಿಯೋ ಸಾಕ್ಷಿಯೊಂದನ್ನೂ ಅಭಿಮಾನಿಗಳು ಹಂಚಿಕೊಂಡಿದ್ದಾರೆ.

    223 ರನ್‌ಗಳ ಬೃಹತ್‌ ಮೊತ್ತ ಚೇಸಿಂಗ್‌ ಆರಂಭಿಸಿದ್ದ ಆರ್‌ಸಿಬಿ ಗೆಲುವಿನ ಹಾದಿಯಲ್ಲಿ ನಡೆಯುತ್ತಿತ್ತು. ಆದ್ರೆ 17ನೇ ಓವರ್‌ನ 5ನೇ ಎಸೆತದಲ್ಲಿ ವರುಣ್‌ ಚಕ್ರವರ್ತಿ ಅವರ ಬೌಲಿಂಗ್‌ಗೆ ಸುಯೇಶ್‌ ಪ್ರಭುದೇಸಾಯಿ (Suyash Prabhudesai) ಸಿಕ್ಸರ್‌ ಬಾರಿಸಿದರು. ಆದ್ರೆ ಆನ್‌ಫೀಲ್ಡ್‌ ಅಂಪೈರ್‌ (umpires) ಯಾವುದೇ ನಿರ್ಧಾರ ಪ್ರಕಟಿಸದೇ 3ನೇ ಅಂಪೈರ್‌ ಮೊರೆ ಹೋದರು. ವೀಡಿಯೋನಲ್ಲಿ ಬಾಲ್‌ ಗ್ರೌಂಡ್‌ಗೆ ತಾಕುವ ಮುನ್ನ ಬೌಂಡರಿ ಲೈನ್‌ಗೆ ಬಡಿದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಆದಾಗ್ಯೂ ಟಿವಿ ಅಂಪೈರ್‌ ಸಿಕ್ಸರ್‌ ಅನ್ನು ಬೌಂಡರಿ ಎಂದು ತೀರ್ಪು ನೀಡಿದರು. ಈ ವೀಡಿಯೋ ಹಂಚಿಕೊಂಡಿರುವ ಆರ್‌ಸಿಬಿ ಅಭಿಮಾನಿಗಳು, 2 ರನ್‌ ಹೆಚ್ಚುವರಿ ಸೇರಿದ್ದರೆ ಆರ್‌ಸಿಬಿ ಗೆದ್ದೇ ಗೆಲ್ಲುತ್ತಿತ್ತು ಎಂದು ಹೇಳಿಕೊಂಡಿದ್ದಾರೆ.

    ರೂಲ್ಸ್‌ ಪ್ರಕಾರ ಕೊಹ್ಲಿ ಔಟ್:
    ವೇಗದ ಬೌಲರ್‌ ಹರ್ಷಿತ್‌ ರಾಣಾ ಎಸೆದ ಸ್ಲೋ ಫುಲ್‌ ಟಾಸ್‌ ಎಸೆತವನ್ನು ರಕ್ಷಣಾತ್ಮಕ ಆಟವಾಡುವ ಪ್ರಯತ್ನದಲ್ಲಿ ಕೊಹ್ಲಿ ವಿಫಲರಾದರು. ಅಷ್ಟೇ ಅಲ್ಲದೇ ಆನ್‌ಫೀಲ್ಡ್‌ ಅಂಪೈರ್‌ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಡಿಆರ್‌ಎಸ್‌ (DRS) ತೆಗೆದುಕೊಂಡರು. ಕೊಹ್ಲಿ ಕ್ರೀಸ್‌ ಒಳಗೆ ನಿಂತು ಚೆಂಡನ್ನು ಎದುರಿಸಿದ್ದರೆ, ಆಗ ಅದು ಸೊಂಟದ ಮೇಲ್ಭಾಗಕ್ಕೆ ಬಿದ್ದ ಫುಲ್‌ ಟಾಸ್‌ ನೋಬಾಲ್‌ ಆಗಿರುತ್ತಿತ್ತು. ಆದರೆ ಕೊಹ್ಲಿ ಕ್ರೀಸ್‌ನಿಂದ ಮುಂದಿದ್ದರು. ಇದನ್ನೂ ಓದಿ: ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮಕ್ಕೆ ರೋಹಿತ್‌ ವಿರೋಧ; ಬಿಸಿಸಿಐ ಹೇಳಿದ್ದೇನು? – ಏನಿದು ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌?

    ಅಲ್ಲದೇ ಹಾಕ್‌ ಐನಲ್ಲಿ (ಚೆಂಡು ಬೀಳುವ ಕ್ರಮವನ್ನು ಸ್ಕ್ರೀನ್‌ನಲ್ಲಿ ಅಂದಾಜಿಸುವ ಚಿತ್ರಣ) ಚೆಂಡು ವಿಕೆಟ್‌ ನೇರವಾಗಿ ಇರುವು ಕಂಡುಬಂದಿತು. ಆದ್ದರಿಂದ ಕೊಹ್ಲಿ ಅವರ ಕ್ಯಾಚ್‌ ಅನ್ನು ಔಟ್‌ ಎಂದು ತೀರ್ಪು ನೀಡಲಾಯಿತು. ಬಳಿಕ ಅಂಪೈರ್‌ ತೀರ್ಪಿನ ವಿರುದ್ಧವೂ ಆನ್‌ಫೀಲ್ಡ್‌ನಲ್ಲೇ ಅಸಮಾಧಾನ ಹೊರಹಾಕಿದ ಕೊಹ್ಲಿ, ಅಂಪೈರ್‌ಗಳ ಬಳಿ ತೆರಳಿ ವಾದಕ್ಕೆ ಇಳಿದಿದ್ದರು. ಬಳಿಕ ಡ್ರೆಸಿಂಗ್‌ ರೂಮ್‌ನಲ್ಲೂ ಸಹ ಆಟಗಾರರ ಜೊತೆಗೆ ತಮ್ಮ ವಾದ ಮುಂದುವರಿಸಿದರು.

    ನಾಯಕ ಡುಪ್ಲೆಸಿಸ್‌ ಹೇಳಿದ್ದೇನು?
    ಈ ಬಗ್ಗೆ ಪಂದ್ಯದ ಬಳಿಕ ಮಾತನಾಡಿದ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್‌, ಆನ್‌ಫೀಲ್ಡ್‌ ಅಂಪೈರ್‌ಗಳ ಪರ ಬ್ಯಾಟ್‌ ಬೀಸಿದರು. ನಿಯಮಗಳ ಪ್ರಕಾರ ವಿರಾಟ್‌ ಕೊಹ್ಲಿ ಔಟ್‌ ಆಗಿದ್ದಾರೆ. ಅಂಪೈರ್‌ಗಳು ತೆಗೆದುಕೊಂಡ ನಿರ್ಧಾರದಲ್ಲಿ ಯಾವುದೇ ತಪ್ಪಿಲ್ಲ. ಶತಾಯ ಗತಾಯ ನಾವು ಪಂದ್ಯ ಗೆಲ್ಲಲೇ ಬೇಕಿತ್ತು. ಟೂರ್ನಿಯಲ್ಲಿ ಪ್ಲೇ ಆಫ್‌ ರೇಸ್‌ನಲ್ಲಿ ಉಳಿಯಲು ಈ ಗೆಲುವು ಅಗತ್ಯವಿತ್ತು. ಆದ್ರೆ ನಾವು ನಮ್ಮ ಅಭಿಮಾನಿಗಳಿಗೂ ನಿರಾಸೆ ಮೂಡಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: IPL 2024: ಹೆಚ್ಚುವರಿ 20 ರನ್‌ ಕೊಟ್ಟಿದ್ದೇ ಆರ್‌ಸಿಬಿಗೆ ಮುಳುವಾಯ್ತಾ? – ಗ್ರೀನ್‌ ಬಾಯ್ಸ್‌ ಎಡವಿದ್ದೆಲ್ಲಿ?

    ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಫೀಲ್ಡಿಂಗ್‌ಗೆ ಇಳಿದ ಆರ್‌ಸಿಬಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಕೋಲ್ಕತ್ತಾ ನೈಟ್‌ರೈಡರ್ಸ್‌ಗೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 222 ರನ್ ಬಾರಿಸಿತ್ತು. 223 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 221 ರನ್‌ ಗಳಿಸಿ ವಿರೋಚಿತ ಸೋಲನುಭವಿಸಿತು. ಇದನ್ನೂ ಓದಿ: ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ

  • IPL 2024: ಹೆಚ್ಚುವರಿ 20 ರನ್‌ ಕೊಟ್ಟಿದ್ದೇ ಆರ್‌ಸಿಬಿಗೆ ಮುಳುವಾಯ್ತಾ? – ಗ್ರೀನ್‌ ಬಾಯ್ಸ್‌ ಎಡವಿದ್ದೆಲ್ಲಿ?

    IPL 2024: ಹೆಚ್ಚುವರಿ 20 ರನ್‌ ಕೊಟ್ಟಿದ್ದೇ ಆರ್‌ಸಿಬಿಗೆ ಮುಳುವಾಯ್ತಾ? – ಗ್ರೀನ್‌ ಬಾಯ್ಸ್‌ ಎಡವಿದ್ದೆಲ್ಲಿ?

    – ಸೋಲಿನ ಬಳಿಕ ನಾಯಕ ಫಾಫ್‌ ಡು ಪ್ಲೆಸಿಸ್‌ ಹೇಳಿದ್ದೇನು?

    ಕೋಲ್ಕತ್ತಾ: ಇಲ್ಲಿನ ಈಡನ್‌ ಗಾರ್ಡನ್‌ನಲ್ಲಿ ಕೆಕೆಆರ್‌ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 1 ರನ್‌ ವಿರೋಚಿತ ಸೋಲಿಗೆ ತುತ್ತಾಯಿತು. ಆದ್ರೆ ಈ ಪಂದ್ಯದಲ್ಲಿ ಆರ್‌ಸಿಬಿ ತಂಡ 20 ರನ್‌ ಹೆಚ್ಚುವರಿಯಾಗಿ ಬಿಟ್ಟುಕೊಟ್ಟಿದ್ದೇ ಸೋಲಿಗೆ ಕಾರಣವಾಯ್ತಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಅಲ್ಲದೇ ಇಂದಿನ ಸೋಲಿಗೆ ಕಾರಣಗಳೇನು ಎಂಬುದನ್ನು ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

    ಕೆಕೆಆರ್‌ಗೆ 20 ರನ್‌ ಎಕ್ಸ್‌ಟ್ರಾ ಲಾಭವಾಯ್ತಾ?
    ಹೌದು. ಆರಂಭದಲ್ಲಿ ರನ್‌ ಚಚ್ಚಿಸಿಕೊಂಡರೂ ಬಳಿಕ ಬಿಗಿ ಹಿಡಿತ ಸಾಧಿಸಲು ಮುಂದಾಗಿದ್ದ ಆರ್‌ಸಿಬಿ ಬೌಲರ್‌ಗಳು ಬಳಿಕ ವೈಡ್‌, ನೋಬಾಲ್‌, ಲೆಗ್‌ ಬೈಸ್‌ಗಳ ಮೂಲಕ ರನ್‌ ಬಿಟ್ಟುಕೊಟ್ಟರು. ಬೈಸ್‌, ಲೆಗ್‌ಬೈಸ್‌, ನೋಬಾಲ್‌ ಹಾಗೂ ವೈಡ್‌ ಮೂಲಕ ಕ್ರಮವಾಗಿ 4,7,2,7 ರನ್‌ಗಳನ್ನು ಬಿಟ್ಟುಕೊಟ್ಟರು. ಪರಿಣಾಮ ಕೆಕೆಆರ್‌ 220 ರನ್‌ಗಳ ಗಡಿ ದಾಟಲು ಸಾಧ್ಯವಾಯಿತು. ಇದನ್ನೂ ಓದಿ: ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮಕ್ಕೆ ರೋಹಿತ್‌ ವಿರೋಧ; ಬಿಸಿಸಿಐ ಹೇಳಿದ್ದೇನು? – ಏನಿದು ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌?

    2 ಓವರ್‌ನಲ್ಲಿ 38 ರನ್‌ ಕೊಟ್ಟ ಯಶ್‌ ದಯಾಳ್‌:
    200 ರನ್‌ಗಳ ಒಳಗೆ ಕೆಕೆಆರ್‌ ತಂಡವನ್ನು ಕಟ್ಟಿಹಾಕುವ ಪ್ರಯತ್ನದಲ್ಲಿದ್ದ ಆರ್‌ಸಿಬಿಗೆ ಯಶ್‌ ದಯಾಳ್‌ ದುಬಾರಿಯಾದರು. 16 ಓವರ್‌ ಮುಕ್ತಾಯಕ್ಕೆ ಕೆಕೆಆರ್‌‌ 5 ವಿಕೆಟ್‌ಗೆ 155 ರನ್‌ ಗಳಿಸಿತ್ತು. ಆದ್ರೆ 17ನೇ ಓವರ್‌ನಲ್ಲೇ ಯಶ್‌ ದಯಾಳ್‌, 2 ವೈಡ್‌, ನೋಬಾಲ್‌, ಬೈಸ್‌ ಮಾತ್ರವಲ್ಲದೇ ಸಿಕ್ಸರ್-ಬೌಂಡರಿ ಚಚ್ಚಿಸಿಕೊಂಡು 22 ರನ್‌ ಬಿಟ್ಟುಕೊಟ್ಟರು. ಅಲ್ಲದೇ 19ನೇ ಓವರ್‌ನಲ್ಲಿ ಮೊಹಮ್ಮದ್‌ ಸಿರಾಜ್‌ ಸಿಕ್ಸರ್‌-ಬೌಂಡರಿ, ವೈಡ್‌ ಮೂಲಕ 20 ರನ್‌ ಬಿಟ್ಟುಕೊಟ್ಟರು. ಬಳಿಕ ಕೊನೇ ಓವರ್‌ನಲ್ಲೇ ಯಶ್‌ ದಯಾಳ್‌ ಮತ್ತೆ 16 ರನ್‌ ಚಚ್ಚಿಸಿಕೊಂಡರು. ಇದು ಆರ್‌ಸಿಬಿ ತಂಡಕ್ಕೆ ದುಬಾರಿಯಾಯಿತು. ಇದನ್ನೂ ಓದಿ: ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ

    2023ರ ಐಪಿಎಲ್‌ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದಲ್ಲಿದ್ದ ಯಶ್‌ ದಯಾಳ್‌ ಇದೇ ರೀತಿ ತಂಡದ ಸೋಲಿಗೆ ಕಾರಣವಾಗಿದ್ದರು. ಕೊನೇ ಓವರ್‌ನಲ್ಲಿ 29 ರನ್‌ ಬೇಕಿದ್ದಾಗ ರಿಂಕು ಸಿಂಗ್‌ ಅವರಿಂದ ಸತತ 5 ಸಿಕ್ಸರ್‌ ಚಚ್ಚಿಸಿಕೊಂಡಿದ್ದರು. ಇದನ್ನೂ ಓದಿ: ಕೊನೇ ಓವರ್‌ನಲ್ಲಿ 6,6,6; ಹೋರಾಡಿ ಸೋತ ಆರ್‌ಸಿಬಿ – ಕೆಕೆಆರ್‌ಗೆ 1 ರನ್‌ ರೋಚಕ ಜಯ

    ಅಬ್ಬರಿಸದ ಡಿಕೆ, ಕೈಕೊಟ್ಟ ಗ್ರೀನ್:‌
    ಹಿಂದಿನ ಪಂದ್ಯದಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 35 ಎಸೆತಗಳಲ್ಲಿ ಸ್ಫೋಟಕ 85 ರನ್‌ ಚಚ್ಚಿದ್ದ ದಿನೇಶ್‌ ಕಾರ್ತಿಕ್‌ ಕೆಕೆಆರ್‌ ಪರ ಅಬ್ಬರಿಸುವಲ್ಲಿ ವಿಫಲರಾದರು. 18 ಎಸೆತಗಳಲ್ಲಿ 25 ರನ್‌ ಗಳಿಸಿ ಔಟಾದರು. ಅಲ್ಲದೇ ದುಬಾರಿ ಬೆಲೆಗೆ ಆರ್‌ಸಿಬಿ ತಂಡಕ್ಕೆ ಬಿಕರಿಯಾದ ಕ್ಯಾಮರೂನ್‌ ಗ್ರೀನ್‌ ಕೇವಲ 6 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಇದು ತಂಡದ ಸೋಲಿಗೆ ಕಾರಣವಾಯಿತು.

    ಪಂದ್ಯದ ಸೋಲಿನ ಬಳಿಕ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ನಾಯಕ ಫಾಫ್ ಡು ಪ್ಲೆಸಿಸ್, ನಾವು ಗೆಲುವಿನ ಹಾದಿಗೆ ಮರಳಲು ಹತಾಶರಾಗಿದ್ದೇವೆ. ನಮಗೆ ನಂಬಲಸಾಧ್ಯವಾದ ಅಭಿಮಾನಿ ಬಳಗವಿದೆ. ಪ್ರತಿ ಪಂದ್ಯದಲ್ಲೂ ಗೆದ್ದರೂ ಸೋತರೂ ‌ʻಆರ್‌ಸಿಬಿ, ಆರ್‌ಸಿಬಿ ಘೋಷಣೆ ಮೊಳಗುತ್ತಲೇ ಇರುತ್ತದೆ. ಆದರೀಗ ನಮ್ಮ ಅಭಿಮಾನಿಗಳು ಹೆಮ್ಮೆಪಡುವಂತೆ ಮಾಡುದರಲ್ಲೂ ನಾವು ವಿಫಲರಾಗಿದ್ದೇವೆ ಎಂದು ಬೇಸರ ಹೊರಹಾಕಿದ್ದಾರೆ.

    ಟಾಸ್ ಸೋತು ಮೊದಲು ಫೀಲ್ಡಿಂಗ್‌ಗೆ ಇಳಿದ ಆರ್‌ಸಿಬಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಕೋಲ್ಕತ್ತಾ ನೈಟ್‌ರೈಡರ್ಸ್‌ಗೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 222 ರನ್ ಬಾರಿಸಿತ್ತು. 223 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 221 ರನ್‌ ಗಳಿಸಿ ವಿರೋಚಿತ ಸೋಲನುಭವಿಸಿತು.

    ಕೊನೇ ಓವರ್‌ ಥ್ರಿಲ್ಲರ್‌:
    223 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ ಗೆಲುವಿಗೆ ಕೊನೇ ಓವರ್‌ನಲ್ಲಿ 21 ರನ್‌ ಅಗತ್ಯವಿತ್ತು. ಮಿಚೆಲ್‌ ಸ್ಟಾರ್ಕ್‌ ಬೌಲಿಂಗ್‌ನಲ್ಲಿದ್ದರು. ಈ ವೇಳೆ ಕ್ರೀಸ್‌ನಲ್ಲಿದ್ದ ಕರ್ಣ್‌ ಶರ್ಮಾ (Karn Sharma) ಮೊದಲ ಎಸೆತದಲ್ಲೇ ಸಿಕ್ಸರ್‌ ಬಾರಿಸಿದ್ರು. 2ನೇ ಎಸೆತದಲ್ಲಿ ರನ್‌ ಗಳಿಸುವಲ್ಲಿ ವಿಫಲರಾದರೂ 3-4ನೇ ಎಸೆತಗಳನ್ನು ಸತತವಾಗಿ ಸಿಕ್ಸರ್‌ಗೆ ಅಟ್ಟಿದರು. ಈ ವೇಳೆ ಪಂದ್ಯ ರೋಚಕ ಹಂತಕ್ಕೆ ತಿರುಗಿತ್ತು. ಡಗೌಟ್‌ನಲ್ಲಿದ್ದ ಆಟಗಾರರು ಮಾತ್ರವಲ್ಲದೇ ಅಭಿಮಾನಿಗಳಲ್ಲೂ ಹೃದಯ ಬಡಿತ ಹೆಚ್ಚಾಗಿತ್ತು. ಮೈ ರೋಮಾಂಚನಗೊಳಿಸುವಂತಿತ್ತು. ಆದ್ರೆ ಕೊನೇ 2 ಎಸೆತಗಳಲ್ಲಿ ಮೂರು ರನ್‌ಗಳ ಬೇಕಿದ್ದಾಗಲೇ ಕರ್ಣ್‌ ಶರ್ಮಾ 1 ರನ್‌ ಕದಿಯಲು ಯತ್ನಿಸಿ ಸ್ಟಾರ್ಕ್‌ಗೆ (Mitchell Starc) ಕ್ಯಾಚ್‌ ನೀಡಿ ಔಟಾದರು. ಕೊನೇ ಎಸೆತದಲ್ಲಿ ಸ್ಟ್ರೈಕ್‌ ಮಾಡಿದ ಲಾಕಿ ಫರ್ಗೂಸನ್‌ 2 ರನ್‌ ಕದಿಯಲು ಯತ್ನಿಸಿ ರನೌಟ್‌ಗೆ ತುತ್ತಾದರು. ಇದರಿಂದ ಆರ್‌ಸಿಬಿ 1 ರನ್‌ನಿಂದ ವಿರೋಚಿತ ಸೋಲಿಗೆ ತುತ್ತಾಯಿತು.

  • ಕೊನೇ ಓವರ್‌ನಲ್ಲಿ 6,6,6; ಹೋರಾಡಿ ಸೋತ ಆರ್‌ಸಿಬಿ – ಕೆಕೆಆರ್‌ಗೆ 1 ರನ್‌ ರೋಚಕ ಜಯ

    ಕೊನೇ ಓವರ್‌ನಲ್ಲಿ 6,6,6; ಹೋರಾಡಿ ಸೋತ ಆರ್‌ಸಿಬಿ – ಕೆಕೆಆರ್‌ಗೆ 1 ರನ್‌ ರೋಚಕ ಜಯ

    – ಬೆಂಗಳೂರಿಗೆ ಸತತ 6ನೇ ಸೋಲು

    ಕೋಲ್ಕತ್ತಾ: ಕೊನೇ ಓವರ್‌ನಲ್ಲಿ ಮೂರು ಸಿಕ್ಸರ್‌ ಸಿಡಿಸಿದ ಹೊರತಾಗಿಯೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಕೆಕೆಆರ್‌ (KKR) ವಿರುದ್ಧ 1 ರನ್‌ಗಳ ವಿರೋಚಿತ ಸೋಲಿಗೆ ತುತ್ತಾಯಿತು.

    ಕೊನೇ ಓವರ್‌ ಥ್ರಿಲ್ಲರ್‌:
    223 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ ಗೆಲುವಿಗೆ ಕೊನೇ ಓವರ್‌ನಲ್ಲಿ 21 ರನ್‌ ಅಗತ್ಯವಿತ್ತು. ಮಿಚೆಲ್‌ ಸ್ಟಾರ್ಕ್‌ ಬೌಲಿಂಗ್‌ನಲ್ಲಿದ್ದರು. ಈ ವೇಳೆ ಕ್ರೀಸ್‌ನಲ್ಲಿದ್ದ ಕರ್ಣ್‌ ಶರ್ಮಾ (Karn Sharma) ಮೊದಲ ಎಸೆತದಲ್ಲೇ ಸಿಕ್ಸರ್‌ ಬಾರಿಸಿದ್ರು. 2ನೇ ಎಸೆತದಲ್ಲಿ ರನ್‌ ಗಳಿಸುವಲ್ಲಿ ವಿಫಲರಾದರೂ 3-4ನೇ ಎಸೆತಗಳನ್ನು ಸತತವಾಗಿ ಸಿಕ್ಸರ್‌ಗೆ ಅಟ್ಟಿದರು. ಈ ವೇಳೆ ಪಂದ್ಯ ರೋಚಕ ಹಂತಕ್ಕೆ ತಿರುಗಿತ್ತು. ಡಗೌಟ್‌ನಲ್ಲಿದ್ದ ಆಟಗಾರರು ಮಾತ್ರವಲ್ಲದೇ ಅಭಿಮಾನಿಗಳಲ್ಲೂ ಹೃದಯ ಬಡಿತ ಹೆಚ್ಚಾಗಿತ್ತು. ಮೈ ರೋಮಾಂಚನಗೊಳಿಸುವಂತಿತ್ತು. ಆದ್ರೆ ಕೊನೇ 2 ಎಸೆತಗಳಲ್ಲಿ ಮೂರು ರನ್‌ಗಳ ಬೇಕಿದ್ದಾಗಲೇ ಕರ್ಣ್‌ ಶರ್ಮಾ 1 ರನ್‌ ಕದಿಯಲು ಯತ್ನಿಸಿ ಸ್ಟಾರ್ಕ್‌ಗೆ  (Mitchell Starc) ಕ್ಯಾಚ್‌ ನೀಡಿ ಔಟಾದರು. ಕೊನೇ ಎಸೆತದಲ್ಲಿ ಸ್ಟ್ರೈಕ್‌ ಮಾಡಿದ ಲಾಕಿ ಫರ್ಗೂಸನ್‌ 2 ರನ್‌ ಕದಿಯಲು ಯತ್ನಿಸಿ ರನೌಟ್‌ಗೆ ತುತ್ತಾದರು. ಇದರಿಂದ ಆರ್‌ಸಿಬಿ 1 ರನ್‌ನಿಂದ ವಿರೋಚಿತ ಸೋಲಿಗೆ ತುತ್ತಾಯಿತು.

    ಟಾಸ್ ಸೋತು ಮೊದಲು ಫೀಲ್ಡಿಂಗ್‌ಗೆ ಇಳಿದ ಆರ್‌ಸಿಬಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಕೋಲ್ಕತ್ತಾ ನೈಟ್‌ರೈಡರ್ಸ್‌ಗೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 222 ರನ್ ಬಾರಿಸಿತ್ತು. 223 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 221 ರನ್‌ ಗಳಿಸಿ ವಿರೋಚಿತ ಸೋಲನುಭವಿಸಿತು.

    ಚೇಸಿಂಗ್ ವೇಳೆ ಸ್ಫೋಟಕ ಆರಂಭ ಪಡೆಯಲು ಮುಂದಾಗಿದ್ದ ಆರ್‌ಸಿಬಿ 2.1 ಓವರ್‌ಗಳಿದ್ದಾಗ 27 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. 7 ಎಸೆತಗಳಲ್ಲಿ 18 ರನ್ ಗಳಿಸಿದ್ದ ವಿರಾಟ್ ಕೊಹ್ಲಿ ಔಟಾಗುತ್ತಿದ್ದಂತೆ, ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) ಸಹ ಸುಲಭ ಕ್ಯಾಚ್‌ಗೆ ತುತ್ತಾದರು. ಇದು ಆರ್‌ಸಿಬಿಗೆ ಭಾರೀ ಆಘಾತವುಂಟುಮಾಡಿತ್ತು.

    ವಿಲ್-ಪಾಟಿದಾರ್ ಶತಕದ ಜೊತೆಯಾಟ:
    3.1 ಓವರ್‌ಗಳಲ್ಲಿ 35 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದ ಆರ್‌ಸಿಬಿಗೆ ವಿಲ್ ಜಾಕ್ಸ್ (Will Jacks) ಹಾಗೂ ರಜತ್‌ ಪಾಟೀದಾರ್ (Rajat Patidar) ಬಲ ತುಂಬಿದರು. 3ನೇ ವಿಕೆಟ್‌ಗೆ ಈ ಜೋಡಿ 48 ಎಸೆತಗಳಲ್ಲಿ ಭರ್ಜರಿ 102 ರನ್‌ಗಳ ಜೊತೆಯಾಟ ನೀಡಿತ್ತು. ಇದರಿಂದ ತಂಡದಲ್ಲಿ ಗೆಲುವಿನ ಆಸೆ ಚಿಗುರಿತ್ತು. ಆದ್ರೆ ಮಧ್ಯಮ ಕ್ರಮಾಂಕದ ಬ್ಯಾಟರ್ಸ್‌ಗಳು ಕೈಕೊಟ್ಟ ಪರಿಣಾಮ ಆರ್‌ಸಿಬಿ ಸೋಲಿಗೆ ತುತ್ತಾಯಿತು.

    ಆರ್‌ಸಿಬಿ ಪರ ವಿಲ್ ಜಾಕ್ಸ್ 55 ರನ್ (32 ರನ್, 5 ಸಿಕ್ಸರ್, 4 ಬೌಂಡರಿ), ರಜತ್ ಪಾಟೀದಾರ್ 52 ರನ್ (23 ಎಸೆತ, 5 ಸಿಕ್ಸರ್, 3 ಬೌಂಡರಿ), ವಿರಾಟ್ ಕೊಹ್ಲಿ 18 ರನ್, ಫಾಫ್ ಡು ಪ್ಲೆಸಿಸ್ 7 ರನ್, ಕ್ಯಾಮರೂನ್ ಗ್ರೀನ್ 6 ರನ್, ಮಹಿಪಾಲ್ ಲೋಮ್ರೋರ್ 4 ರನ್, ಸುಯೇಶ್‌ ಪ್ರಭುದೇಸಾಯಿ 24 ರನ್‌, ದಿನೇಶ್‌ ಕಾರ್ತಿಕ್‌ 25 ರನ್‌, ಕರ್ಣ್‌ ಶರ್ಮಾ ಸ್ಫೋಟಕ 20 ರನ್‌ (7 ಎಸೆ, 3 ಸಿಕ್ಸರ್‌), ಲಾಕಿ ಫರ್ಗೂಸನ್‌ 1 ರನ್‌ ಗಳಿಸಿದರು.

    ಕೆಕೆಆರ್‌ ಪರ ಆಲ್‌ರೌಂಡರ್‌ ಪ್ರದರ್ಶನ ನೀಡಿದ ಆಂಡ್ರೆ ರಸೆಲ್‌ 3 ಓವರ್‌ಗಳಲ್ಲಿ 3 ವಿಕೆಟ್‌ ಕಿತ್ತರೆ, ಹರ್ಷಿತ್‌ ರಾಣಾ ಮತ್ತು ಸುನೀಲ್‌ ನರೇನ್‌ ತಲಾ 2 ವಿಕೆಟ್‌ ಹಾಗೂ ಮಿಚೆಲ್‌ ಸ್ಟಾರ್ಕ್‌ ಮತ್ತು ವರುಣ್‌ ಚಕ್ರವರ್ತಿ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ ಆರಂಭದಿಂದ ಅಬ್ಬರಿಸಲು ಶುರು ಮಾಡಿತು. ಆರಂಭಿಕರಾದ ಸುನೀಲ್ ನರೇನ್ ಮತ್ತು ಪಿಲ್ ಸಾಲ್ಟ್ ಜೋಡಿ ಮೊದಲ ವಿಕೆಟ್‌ಗೆ 26 ಎಸೆತಗಳಲ್ಲಿ ಸ್ಫೋಟೊ 56 ರನ್‌ಗಳ ಜೊತೆಯಾಟ ನೀಡಿತ್ತು. ಬಳಿಕ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡ ಕೆಕೆಆರ್ ತಂಡ ಮತ್ತೊಂದೆಡೆ ರನ್ ಕಲೆಹಾಕುತ್ತಾ ಸಾಗಿತು.

    ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ (Shreyas Iyer) ಮತ್ತು ರಿಂಕು ಸಿಂಗ್ ಜೋಡಿ 40 ರನ್, ರಸ್ಸೆಲ್ ಮತ್ತು ಅಯ್ಯರ್ 42 ರನ್ ಹಾಗೂ ರಸ್ಸೆಲ್ ಮತ್ತು ರಮಣದೀಪ್ ಸಿಂಗ್ ಜೋಡಿ ನೀಡಿದ 43 ರನ್‌ಗಳ ಜೊತೆಯಾಟದಿಂದ ಕೆಕೆಆರ್ ತಂಡ 222 ರನ್‌ಗಳ ಬೃಹತ್ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು.

    ಶ್ರೇಯಸ್ ಅಯ್ಯರ್ 50 ರನ್ (36 ಎಸೆತ, 1 ಸಿಕ್ಸರ್, 7 ಬೌಂಡರಿ), ಪಿಲ್ ಸಾಲ್ಟ್ (Phil Salt) ಸ್ಫೋಟಕ 48 ರನ್ (14 ಎಸೆತ, 3 ಸಿಕ್ಸರ್, 7 ಬೌಂಡರಿ), ಸುನೀಲ್ ನರೇನ್ 10 ರನ್, ರಘುವಂಶಿ 3 ರನ್, ವೆಂಕಟೇಶ್ ಅಯ್ಯರ್ 16 ರನ್, ರಿಂಕು ಸಿಂಗ್ 24 ರನ್, ಆಂಡ್ರೆ ರಸ್ಸೆಲ್ 27 ರನ್, ರಮಣದೀಪ್ ಸಿಂಗ್ 24 ರನ್ ಬಾರಿಸಿದ್ರೆ ವೈಡ್, ನೋಬಾಲ್ ಬೈಸ್‌ನಿಂದಲೇ ಹೆಚ್ಚುವರಿ 20 ರನ್ ತಂಡಕ್ಕೆ ಸೇರ್ಪಡೆಯಾಯಿತು.

    ಆರ್‌ಸಿಬಿ ಪರ ಯಶ್ ದಯಾಳ್ 4 ಓವರ್‌ಗಳಲ್ಲಿ 56 ರನ್ ಬಿಟ್ಟುಕೊಟ್ಟು ಮತ್ತು ಕ್ಯಾಮರೂನ್ ಗ್ರೀನ್ 4 ಓವರ್‌ಗಳಲ್ಲಿ 35 ರನ್ ಬಿಟ್ಟುಕೊಟ್ಟು ತಲಾ 2 ವಿಕೆಟ್ ಕಿತ್ತರೆ, ಮೊಹಮ್ಮದ್ ಸಿರಾಜ್ ಹಾಗೂ ಕರ್ಣ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.