Tag: rcb

  • ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್

    ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್

    ಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫೈನಲ್‌ಗೆ ತಲುಪಿದ್ದು, ಟ್ರೋಫಿ ಗೆಲ್ಲಲು ಒಂದೇ ಹೆಜ್ಜೆ ಬಾಕಿ ಇದೆ. ಇದರ ಬೆನ್ನಲ್ಲೇ ಸ್ಯಾಂಡಲ್‌ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ಈ ಬಾರಿ ಕಪ್ ನಮ್ಮದೇ ಎಂದಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಸದ್ಯ ಐಪಿಎಲ್ 18ನೇ ಆವೃತ್ತಿ ನಡೆಯುತ್ತಿದೆ. ಅಲ್ಲದೇ ವಿರಾಟ್ ಕೊಹ್ಲಿ (Virat Kohli) ಅವರ ಜರ್ಸಿ ನಂಬರ್ ಕೂಡಾ 18 ಆಗಿದೆ. ಹದಿನೆಂಟರ ಜೊತೆ ನಮಗೆಲ್ಲಾ ವಿಶೇಷ ನಂಟಿದೆ. ಹೀಗಾಗಿ ಈ ಬಾರಿ ಕಪ್ ನಮ್ದೇ ಆಗುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್

    ಕಮಲ್ ಹಾಸನ್ (Kamal Haasan) ವಿಚಾರವಾಗಿ ಪ್ರತಿಕ್ರಿಯಿಸಿ, ಕಮಲ್ ಹಾಸನ್ ಖಂಡಿತ ಕ್ಷಮೆ ಕೇಳಬೇಕು. ನಾನು ಏನು ಹೇಳಬೇಕು ಎಂದುಕೊಂಡಿದ್ದೆ ಅದನ್ನು ಹೇಳಿದ್ದೇನೆ. ನನ್ನ ಪ್ರೀತಿ ನನ್ನ ಭಾಷೆಯಾಗಿದೆ. ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ. ಆದರೆ ನನ್ನ ಮೊದಲ ಗೌರವ ಕನ್ನಡ ಭಾಷೆಗೆ. ಇಲ್ಲಿ ಯಾರಿಂದ ಯಾರೂ ಬಂದಿಲ್ಲ. ಯಾರಿಂದ ಯಾರೂ ಎಂದು ದೇವರಿಗೆ ಗೊತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ

    ಇಂದು ಹಿಸ್ಟರಿ ತೆಗೆದು ಏನು ಸಾಬೀತು ಮಾಡಬೇಕೋ ಮಾಡುತ್ತಿದ್ದೇವೆ. ನಾನು ಹಾಕಿರೋ ವೀಡಿಯೋ ನನಗೂ ಅನ್ವಯವಾಗುತ್ತದೆ. ಯಾರೂ ತಮ್ಮ ಮಾತೃಭಾಷೆಯನ್ನು ಮರೆಯಬಾರದು. ನಮ್ಮ ಭಾಷೆ ಅವರಿಗೆ ಹೇಳಿಕೊಡೋಣ, ಅವರ ಭಾಷೆ ಕಲಿಯೋಣ. ಚಿತ್ರ ಬ್ಯಾನ್ ಬಗ್ಗೆ ದೊಡ್ಡವರು, ವಾಣಿಜ್ಯ ಮಂಡಳಿಯವರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: 100ಕ್ಕೂ ಹೆಚ್ಚು ಆತ್ಮಾಹುತಿ ಡ್ರೋನ್ ಸಾಗಿಸಬಲ್ಲ `ಬಾಹುಬಲಿ’ ಡ್ರೋನ್ ಸಿದ್ಧಪಡಿಸಿದ ಚೀನಾ!

    ಕಮಲ್ ಹಾಸನ್ ಅವರ ಮಾತಿನಿಂದ ನಮಗೆ ನೋವಾಗಿದೆ. ಅವರು ಖಂಡಿತ ಕ್ಷಮೆ ಕೇಳಬೇಕು. ಸಿನಿಮಾ ಕ್ಷೇತ್ರಕ್ಕೆ ಅವರ ಕೊಡುಗೆ ದೊಡ್ಡದಿದೆ. ನಮ್ಮ ಭಾಷೆ ಬಗ್ಗೆ ಮಾತನಾಡಿದ್ರೆ, ನಾವು ಯಾಕೆ ಸುಮ್ಮನಿರಬೇಕು? ಕಮಲ್ ಹಾಸನ್ ಕಲೆ ಬಗ್ಗೆ, ಅವರು ಸಿನಿಮಾ ರಂಗಕ್ಕೆ ಕೊಟ್ಟ ಕೊಡುಗೆ ಬಗ್ಗೆ ಮಾತನಾಡಲು ನಾನು ಚಿಕ್ಕವಳು. ಆದರೆ ಭಾಷೆ ವಿಚಾರ ಬಂದಾಗ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

  • ಇಂದು ಪಂಜಾಬ್‌-ಮುಂಬೈ ನಡ್ವೆ ಕ್ವಾಲಿಫೈಯರ್‌-2 ಕದನ – ಗೆದ್ದವರೊಂದಿಗೆ ಪ್ರಶಸ್ತಿಗಾಗಿ ಆರ್‌ಸಿಬಿ ಗುದ್ದಾಟ!

    ಇಂದು ಪಂಜಾಬ್‌-ಮುಂಬೈ ನಡ್ವೆ ಕ್ವಾಲಿಫೈಯರ್‌-2 ಕದನ – ಗೆದ್ದವರೊಂದಿಗೆ ಪ್ರಶಸ್ತಿಗಾಗಿ ಆರ್‌ಸಿಬಿ ಗುದ್ದಾಟ!

    ಅಹಮದಾಬಾದ್‌: ಪಂಜಾಬ್‌ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ (Mumbai Indians) ನಡುವೆ ಇಂದು ಕ್ವಾಲಿಫೈಯರ್‌-2 ಕದನ ನಡೆಯಲಿದೆ. ಗೆದ್ದ ತಂಡ ಜೂನ್‌ 3ರಂದು ಆರ್‌ಸಿಬಿ (RCB) ವಿರುದ್ಧ ಟ್ರೋಫಿಗಾಗಿ ಗುದ್ದಾಡಲಿದೆ.

    ಇಂದು ಅಹಮದಾಬಾದ್‌ನಲ್ಲಿ 2ನೇ ಕ್ವಾಲಿಫೈಯರ್ (Qualifier 2 IPL) ಪಂದ್ಯ ನಡೆಯಲಿದ್ದು, ರಾತ್ರಿ 7:30ಕ್ಕೆ ಪಂದ್ಯ ಶುರುವಾಗಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ನಲ್ಲಿ ಆರ್‌ಸಿಬಿ ವಿರುದ್ಧ ಪ್ರಶಸ್ತಿ ಸುತ್ತಿನ ಕಾದಾಟ ನಡೆಸಲಿದೆ. ಈ ನಡುವೆ ಟ್ರೋಫಿ ಗೆಲ್ಲುವ ಲೆಕ್ಕಾಚಾರವೂ ಶುರುವಾಗಿದೆ. ಇದನ್ನೂ ಓದಿ: ರೋ’ಹಿಟ್‌’ ಆಟಕ್ಕೆ ಗಿಲ್‌ ಪಡೆ ಡಲ್‌; ಮುಂಬೈಗೆ 20 ರನ್‌ಗಳ ಜಯ – ಫೈನಲ್‌ ಸ್ಥಾನಕ್ಕೆ ಪಂಜಾಬ್‌ ವಿರುದ್ಧ ಫೈಟ್‌

    ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರು ಇದ್ದು ಪಂದ್ಯದ ಚಿತ್ರಣವನ್ನೇ ಬುಡಮೇಲು ಮಾಡುವ ಸಾಮರ್ಥ್ಯ ಹೊಂದಿವೆ. ಪಂಜಾಬ್‌ ಹಾಗೂ ಮುಂಬೈ ಒಟ್ಟಾರೆ ಐಪಿಎಲ್‌ನಲ್ಲಿ 33 ಬಾರಿ ಮುಖಾಮುಖಿ ಆಗಿವೆ. ಈ ವೇಳೆ ಮುಂಬೈ 17 ಪಂದ್ಯಗಳನ್ನು ಗೆದ್ದಿದೆ. ಪಂಜಾಬ್‌ 16 ಬಾರಿ ಗೆಲುವು ಸಾಧಿಸಿದೆ. ಆದ್ರೆ 11 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಪ್ಲೇ ಆಫ್‌ ಪ್ರವೇಶಿಸಿರುವ ಪಂಜಾಬ್‌ ಕಿಂಗ್ಸ್‌ ಬಲಿಷ್ಠ ಪಡೆಯನ್ನ ಹೊಂದಿದ್ದು, ಪ್ರಶಸ್ತಿಗೆ ಮುತ್ತಿಡುವ ಕನಸು ಕಂಡಿದೆ.

    ಇತ್ತ ಆರಂಭಿಕ 5 ಪಂದ್ಯಗಳಲ್ಲಿ ಸೋಲು ಕಂಡಿದ್ದ ಮುಂಬೈ ಇಂಡಿಯನ್ಸ್‌ ನಿರೀಕ್ಷೆಗೂ ಮೀರಿದ ಪ್ರದರ್ಶನದೊಂದಿಗೆ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ. ಎಲಿಮಿನೇಟರ್‌-1ನಲ್ಲಿ ಗುಜರಾತ್‌ ಟೈಟನ್ಸ್‌ ತಂಡವನ್ನ ಹೊರದಬ್ಬಿ, ಕ್ವಾಲಿಫೈಯರ್‌-2ಗೆ ಲಗ್ಗೆಯಿಟ್ಟಿದೆ. ಇದನ್ನೂ ಓದಿ: ಈ ಸಲ ಆರ್‌ಸಿಬಿ ಕಪ್‌ ಗೆಲ್ಲದಿದ್ರೆ ಪತಿಗೆ ಡಿವೋರ್ಸ್‌ – ವೈರಲ್‌ ಆಯ್ತು ಅಭಿಮಾನಿಯ ಪೋಸ್ಟರ್‌

    ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಈಗಾಗಲೇ 42 ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಈ ವೇಳೆ ಮೊದಲು ಹಾಗೂ ಎರಡನೇ ಬಾರಿಗೆ ಬ್ಯಾಟ್ ಮಾಡಿದ ತಂಡಗಳು ತಲಾ 21 ಬಾರಿ ಗೆದ್ದಿವೆ. ಈ ಮೈದಾನದಲ್ಲಿ 243 ರನ್‌ ಗರಿಷ್ಠ ಸ್ಕೋರ್ ಆಗಿದೆ. ಇನ್ನು ಈ ಅಂಗಳದಲ್ಲಿ 204 ರನ್‌ವರೆಗೆ ಚೇಸಿಂಗ್‌ ಆಗಿದೆ. ಈ ಆವೃತ್ತಿಯಲ್ಲಿ ಈಗಾಗಲೇ ಈ ಮೈದಾನದಲ್ಲಿ 7 ಪಂದ್ಯಗಳು ನಡೆದಿದ್ದು, ಬ್ಯಾಟಿಂಗ್ ಮೊದಲ ಬಾರಿಗೆ ತಂಡ 6 ಪಂದ್ಯಗಳನ್ನು ಗೆದ್ದಿದೆ.

    2023ರ ಆವೃತ್ತಿಯಲ್ಲಿ ಇದೇ ಪಿಚ್‌ನಲ್ಲಿ ಚೆನ್ನೈ 15 ಓವರ್‌ಗಳಲ್ಲಿ 170 ರನ್‌ ಚೇಸ್‌ ಮಾಡಿ 5ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಇದನ್ನೂ ಓದಿ: RCB ಟ್ರೋಫಿ ಗೆದ್ದರೆ ಆ ದಿನವನ್ನ ʻಆರ್‌ಸಿಬಿ ಫ್ಯಾನ್ಸ್‌ ಹಬ್ಬʼದ ದಿನವನ್ನಾಗಿ ಘೋಷಿಸಿ – ಸಿಎಂಗೆ ವಿಶೇಷ ಪತ್ರ!

    ಸ್ಟಾರ್‌ ಬ್ಯಾಟರ್‌ಗಳೇ ಬಲ:
    ಮುಂಬೈ ಇಂಡಿಯನ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ರೋಹಿತ್ ಶರ್ಮಾ, ಜಾನಿ ಬೇರ್‌ಸ್ಟೋ ಇನಿಂಗ್ಸ್ ಆರಂಭಿಸಲಿದ್ದು, ದೊಡ್ಡ ಮೊತ್ತಕ್ಕೆ ಈ ಜೋಡ ಭದ್ರ ಅಡಿಪಾಯ ಒಡ್ಡುವ ಸಾಧ್ಯತೆಗಳಿವೆ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ ಈ ಬಾರಿ ಫಾರ್ಮ್‌ ಸಾಬೀತು ಮಾಡಿದ್ದಾರೆ. ಮೊದಲು ಬ್ಯಾಟ್‌ ಮಾಡುವ ತಂಡ ದೊಡ್ಡ ಮೊತ್ತ ಕಲೆಹಾಕಿದ್ರೆ ಗೆಲುವು ಸಾಧ್ಯತೆಯಿದೆ. ಜಸ್ಪ್ರಿತ್ ಬುಮ್ರಾ, ಟ್ರೆಂಟ್‌ ಬೌಲ್ಟ್‌, ಅಶ್ವನಿ ಕುಮಾರ್‌ ವೇಗದ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಲಿದ್ದು, ಮಿಚೆಲ್‌ ಸ್ಯಾಂಟ್ನರ್ ಸ್ಪಿನ್ ಜಾದು ಸಹ ವರ್ಕೌಟ್‌ ಆಗಲಿದೆ ಎಂದು ವಿಶ್ಲೇಷಕರು ಅಂದಾಜಿಸಿದ್ದಾರೆ. ಇನ್ನೂ ಪಂಜಾಬ್‌ನಲ್ಲೂ ಶ್ರೇಯಸ್‌ ಅಯ್ಯರ್‌, ಪ್ರಿಯಾಂಶ್‌ ಆರ್ಯ, ಸ್ಟೋಯಿನಿಸ್‌, ಶಶಾಂಕ್‌ ಸಿಂಗ್‌ ಅವರಂತಹ ಬ್ಯಾಟಿಂಗ್‌ ಪಡೆಯೇ ಇದೆ.

    ಮುಂಬೈ ಸಂಭಾವ್ಯ ಪ್ಲೇಯಿಂಗ್‌-11
    ರೋಹಿತ್ ಶರ್ಮಾ, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ರಾಜ್ ಬಾವಾ, ರಿಚರ್ಡ್ ಗ್ಲೀಸನ್/ರೀಸ್ ಟಾಪ್ಲೆ, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಅಶ್ವನಿ ಕುಮಾರ್. ಇದನ್ನೂ ಓದಿ: IPL: ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ – ಕೆಕೆಆರ್‌ ರೆಕಾರ್ಡ್‌ ಉಡೀಸ್‌

    ಪಂಜಾವ್‌ ಸಂಭಾವ್ಯ ಪ್ಲೇಯಿಂಗ್‌-11
    ಪ್ರಭ್‌ಸಿಮ್ರನ್‌ ಸಿಂಗ್, ಪ್ರಿಯಾಂಶ್ ಆರ್ಯ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನೆಹಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಅಜ್ಮತುಲ್ಲಾ ಒಮರ್ಜಾಯ್, ಹರ್ಪ್ರೀತ್ ಬ್ರಾರ್, ಕೈಲ್ ಜೈಮಿಸನ್, ಯುಜುವೇಂದ್ರ ಚಾಹಲ್, ವಿಜಯಕುಮಾರ್ ವೈಶಾಖ್.

  • ಈ ಸಲ ಆರ್‌ಸಿಬಿ ಕಪ್‌ ಗೆಲ್ಲದಿದ್ರೆ ಪತಿಗೆ ಡಿವೋರ್ಸ್‌ – ವೈರಲ್‌ ಆಯ್ತು ಅಭಿಮಾನಿಯ ಪೋಸ್ಟರ್‌

    ಈ ಸಲ ಆರ್‌ಸಿಬಿ ಕಪ್‌ ಗೆಲ್ಲದಿದ್ರೆ ಪತಿಗೆ ಡಿವೋರ್ಸ್‌ – ವೈರಲ್‌ ಆಯ್ತು ಅಭಿಮಾನಿಯ ಪೋಸ್ಟರ್‌

    ಚಂಡೀಗಢ: ಪಂಜಾಬ್‌ ಕಿಂಗ್ಸ್‌ (Punjab Kings) ವಿರುದ್ಧ ನಡೆದ 18ನೇ ಆವೃತ್ತಿಯ ಕ್ವಾಲಿಫೈಯರ್‌-1 ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಭರ್ಜರಿ ಗೆಲುವು ಕಂಡಿದೆ. ಆರಂಭದಿಂದಲೇ ಸಿಕ್ಸರ್‌, ಬೌಂಡರಿ ಬಾರಿಸುತ್ತಾ ರನ್‌ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದ ಆರ್‌ಸಿಬಿ ಇನ್ನೂ 10 ಓವರ್‌ಗಳು ಬಾಕಿಯಿರುವಾಗಲೇ ಗೆದ್ದು, ಫೈನಲ್‌ ತಲುಪಿತು.

    ಈ ನಡುವೆ ಮಹಿಳಾ ಅಭಿಮಾನಿಯೊಬ್ಬರು (RCB Women Fan) ವಿಚ್ಛೇದನದ ಕುರಿತು ವಿಶೇಷ ಭಿತ್ತಿಪತ್ರ ಪ್ರದರ್ಶಿಸಿರುವುದು ಗಮನಸೆಳೆದಿದೆ. ಹೌದು. 17 ಆವೃತ್ತಿ ಕಳೆದರೂ ಒಮ್ಮೆಯೂ ಪ್ರಶಸ್ತಿ ಗೆಲ್ಲದ ಆರ್‌ಸಿಬಿಗೆ ಅಭಿಮಾನಿಗಳ ಕೊರತೆಯಂತೂ ಆಗಿಲ್ಲ. ಆದರೀಗ ತಂಡ ಫೈನಲ್‌ಗೆ ತಲುಪಿದ್ದು, ಈ ಸಲವೂ ಟ್ರೋಫಿ ಗೆಲ್ಲದಿದ್ದರೆ ಪತಿಗೆ ವಿಚ್ಛೇದನ (Devorce) ನೀಡುವುದಾಗಿ ಮಹಿಳೆಯೊಬ್ಬರು ಸ್ಟೇಡಿಯಂನಲ್ಲಿ ಭಿತ್ತಿಪತ್ರ ಪ್ರದರ್ಶನ ಮಾಡಿರುವುದು ಕಂಡುಬಂದಿದೆ. ಇದು ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ವೈಭವ್ ಸೂರ್ಯವಂಶಿ

    ಇತ್ತೀಚೆಗೆ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ನಡೆದ ಪಂದ್ಯದ ವೇಳೆಯೂ ಅಭಿಮಾನಿಯೊಬ್ಬರು ನಾನು, ಆರ್‌ಸಿಬಿ ಕಪ್‌ ಗೆಲ್ಲುವವರೆಗೆ ಮದುವೆಯಾಗೋದಿಲ್ಲ ಅಂತ ಪೋಸ್ಟರ್‌ ಹಿಡಿದುಕೊಂಡಿದ್ದರು. ಇದಕ್ಕೂ ಮುನ್ನ 2022 ಐಪಿಎಲ್‌ ಟೂರ್ನಿ ವೇಳೆಯೂ ಮಹಿಳಾ ಅಭಿಮಾನಿಯೊಬ್ಬರು ಆರ್‌ಸಿಬಿ ಕಪ್‌ ಗೆಲ್ಲೋವರೆಗೆ ನಾನು ಮದುವೆಯಾಗಲ್ಲ ಅಂತ ಪೋಸ್ಟರ್‌ ಹಿಡುಕೊಂಡಿದ್ದರು. ಆಗ ಇದು ಭಾರೀ ಟ್ರೆಂಡ್‌ ಕ್ರೆಯೆಟ್‌ ಮಾಡಿತ್ತು. ಇದನ್ನೂ ಓದಿ: RCB ಟ್ರೋಫಿ ಗೆದ್ದರೆ ಆ ದಿನವನ್ನ ʻಆರ್‌ಸಿಬಿ ಫ್ಯಾನ್ಸ್‌ ಹಬ್ಬʼದ ದಿನವನ್ನಾಗಿ ಘೋಷಿಸಿ – ಸಿಎಂಗೆ ವಿಶೇಷ ಪತ್ರ!

    ಚಂಡೀಗಢದ ಮುಲ್ಲನಪುರದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತ ಪಂಜಾಬ್‌ ಮೊದಲು ಕ್ರೀಸ್‌ಗಿಳಿದು 101 ರನ್‌ಗಳಿಗೆ ಆಲೌಟ್‌ ಆಯಿತು. 102 ರನ್‌ಗಳ ಸುಲಭಗುರಿ ಬೆನ್ನಟ್ಟಿದ ಆರ್‌ಸಿಬಿ 10 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 106 ರನ್‌ ಬಾರಿಸಿ ಫೈನಲ್‌ಗೆ ಲಗ್ಗೆಯಿಟ್ಟಿತು. ಇದನ್ನೂ ಓದಿ: IPL: ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ – ಕೆಕೆಆರ್‌ ರೆಕಾರ್ಡ್‌ ಉಡೀಸ್‌

  • RCB ಟ್ರೋಫಿ ಗೆದ್ದರೆ ಆ ದಿನವನ್ನ ʻಆರ್‌ಸಿಬಿ ಫ್ಯಾನ್ಸ್‌ ಹಬ್ಬʼದ ದಿನವನ್ನಾಗಿ ಘೋಷಿಸಿ – ಸಿಎಂಗೆ ವಿಶೇಷ ಪತ್ರ!

    RCB ಟ್ರೋಫಿ ಗೆದ್ದರೆ ಆ ದಿನವನ್ನ ʻಆರ್‌ಸಿಬಿ ಫ್ಯಾನ್ಸ್‌ ಹಬ್ಬʼದ ದಿನವನ್ನಾಗಿ ಘೋಷಿಸಿ – ಸಿಎಂಗೆ ವಿಶೇಷ ಪತ್ರ!

    ಬೆಳಗಾವಿ: ಪಂಜಾಬ್‌ ಕಿಂಗ್ಸ್‌ ವಿರುದ್ಧ ಕ್ವಾಲಿಫೈಯರ್‌-1ನಲ್ಲಿ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ 4ನೇ ಬಾರಿ ಫೈನಲ್‌ಗೆ ಲಗ್ಗೆಯಿಟ್ಟಿದೆ. 2009, 2011, 2016ರ ಬಳಿಕ ನಾಲ್ಕನೇ ಬಾರಿ ಐಪಿಎಲ್‌ ಫೈನಲ್‌ ತಲುಪಿದ್ದು, ಟ್ರೋಫಿ ಗೆಲ್ಲುವ ನಿರೀಕ್ಷೆ ಮೂಡಿಸಿದೆ. ಹೀಗಾಗಿ ಆರ್‌ಸಿಬಿ ಫ್ಯಾನ್ಸ್‌ ವತಿಯಿಂದ ರಾಜ್ಯದ ಮುಖ್ಯಮಂತ್ರಿಗಳಿಗೆ (Chief Minister) ವಿಶೇಷ ಪತ್ರ ಬರೆಯಲಾಗಿದೆ.

    ಆರ್‌ಸಿಬಿ ಕಪ್‌ ಗೆದ್ದರೆ ಆದ ದಿನವನ್ನ ʻಆರ್‌ಸಿಬಿ ಫ್ಯಾನ್ಸ್‌ ಹಬ್ಬʼದ (RCB Fans Festival) ದಿನನ್ನಾಗಿ ಘೋಷಿಸಿ. ಜೊತೆಗೆ ಒಂದು ದಿನ ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಸಿಎಂಗೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಇದನ್ನೂ ಓದಿ: IPL: ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ – ಕೆಕೆಆರ್‌ ರೆಕಾರ್ಡ್‌ ಉಡೀಸ್‌

    ಗೋಕಾಕ ಮೂಲದ ಯುವಕ ಶಿವಾನಂದ ಮಲ್ಲನ್ನವರ್ ಎಂಬ ಯುವಕ ಸಿಎಂಗೆ ಪತ್ರ ಬರೆದಿದ್ದು ರಾಜ್ಯೋತ್ಸವದ ರೀತಿಯಲ್ಲಿ ಆರ್‌ಸಿಬಿ ಫ್ಯಾನ್ಸ್ ಹಬ್ಬದ ರೀತಿಯಲ್ಲಿ ಆಚರಣೆಗೆ ಅವಕಾಶ ನೀಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಪತ್ರ ಸೋಷಿಯಲ್‌ ಮೀಡಿಯಾದಲ್ಲೂ ವೈರಲ್‌ ಆಗಿದೆ. ಇದನ್ನೂ ಓದಿ: ಕಪ್‌ ಗೆಲ್ಲೋಕೆ ಇನ್ನೊಂದೇ ಹೆಜ್ಜೆ – ಅನುಷ್ಕಾ ಕಡೆ ತಿರುಗಿ ಸನ್ನೆ ಮಾಡಿದ ಕೊಹ್ಲಿ

    ಕಳೆದ 7 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್:
    ಇನ್ನೂ 2009, 2011, 2016ರ ಬಳಿಕ 4ನೇ ಬಾರಿಗೆ ಫೈನಲ್‌ಗೆ ಲಗ್ಗೆಯಿಟ್ಟಿರುವ ಆರ್‌ಸಿಬಿ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆ ಎಂದು ಕ್ರಿಕೆಟ್ ತಜ್ಞರು ಭವಿಷ್ಯ ನುಡಿದಿದ್ದಾರೆ. ಏಕೆಂದರೆ ಕಳೆದ 7 ವರ್ಷಗಳಲ್ಲಿ ನಡೆದ ಐಪಿಎಲ್ ಆವೃತ್ತಿಗಳಲ್ಲಿ ಐಪಿಎಲ್ ಕ್ವಾಲಿಫೈರ್-1 ನಲ್ಲಿ ಗೆದ್ದ ತಂಡಗಳೇ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ: ‘ಇದು ಅಭಿಮಾನಿ ದೇವ್ರುಗಳಿಗೆ’: ಅಣ್ಣಾವ್ರ ಸ್ಟೈಲಲ್ಲಿ ಕೈಮುಗಿದ ಕೊಹ್ಲಿ – ಆರ್‌ಸಿಬಿ ಫ್ಯಾನ್ಸ್‌ ಥ್ರಿಲ್‌

    ಯಾವ ವರ್ಷ – ಯಾವ ತಂಡ?
    2018 – CSK.
    2019 – MI.
    2020 – MI.
    2021 – CSK.
    2022 – GT.
    2023 – CSK.
    2024 – KKR
    2025 – ….?

    2018ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್, 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್, 2021ರಲ್ಲಿ ಸಿಎಸ್‌ಕೆ, 2022ರಲ್ಲಿ ಗುಜರಾತ್ ಟೈಟಾನ್ಸ್, 2023ರಲ್ಲಿ ಸಿಎಸ್‌ಕೆ, 2024ರಲ್ಲಿ ಕೆಕೆಆರ್ ತಂಡಗಳು ಕ್ವಾಲಿಫೈಯರ್-1ನಲ್ಲಿ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿವೆ. ಇದೀಗ 18ನೇ ಆವೃತ್ತಿಯ ಕ್ವಾಲಿಫೈಯರ್-1 ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿರುವ ಆರ್‌ಸಿಬಿ ಚಾಂಪಿಯನ್ ಪಟ್ಟಕ್ಕೆ ಕೊರಳೊಡ್ಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

  • IPL: ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ – ಕೆಕೆಆರ್‌ ರೆಕಾರ್ಡ್‌ ಉಡೀಸ್‌

    IPL: ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ – ಕೆಕೆಆರ್‌ ರೆಕಾರ್ಡ್‌ ಉಡೀಸ್‌

    ಚಂಡೀಗಢ: ಐಪಿಎಲ್ ಪ್ಲೇಆಫ್ ಪಂದ್ಯದಲ್ಲಿ ಕೆಕೆಆರ್‌ನ ಅತಿ ದೊಡ್ಡ ಗೆಲುವಿನ ಅಂತರದ ದಾಖಲೆಯನ್ನು ಆರ್‌ಸಿಬಿ ಬ್ರೇಕ್‌ ಮಾಡಿದೆ. ಆ ಮೂಲಕ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದೆ.

    ಕ್ವಾಲಿಫೈಯರ್‌ 1 ಪಂದ್ಯದಲ್ಲಿ ಪಂಜಾಬ್‌ ವಿರುದ್ಧ ಆರ್‌ಸಿಬಿ ಭರ್ಜರಿ ಜಯ ದಾಖಲಿಸಿತು. ಪಿಬಿಕೆಎಸ್‌ ನೀಡಿದ 102 ರನ್‌ಗಳ ಸಾಧಾರಣ ಗುರಿಯನ್ನು ಆರ್‌ಸಿಬಿ 10 ಓವರ್‌ನಲ್ಲೇ ತಲುಪಿತು. ಇನ್ನೂ 60 ಎಸೆತಗಳು ಬಾಕಿ ಇರುವಾಗಲೇ ಗುರಿ ಮುಟ್ಟಿ ಆರ್‌ಸಿಬಿ ಗೆದ್ದು ಬೀಗಿತು.

    60 ಎಸೆತಗಳ ಭಾರಿ ಅಂತರದ ಗೆಲುವು, ಐಪಿಎಲ್ ಪ್ಲೇಆಫ್/ನಾಕೌಟ್ ಪಂದ್ಯಗಳಲ್ಲಿ ಬೆನ್ನಟ್ಟುವಾಗ ಸಾಧಿಸಿದ ಅತಿದೊಡ್ಡ ಜಯ ಅಂತರವಾಗಿದೆ. 2024 ರ ಐಪಿಎಲ್ ಫೈನಲ್‌ನಲ್ಲಿ ಎಸ್‌ಆರ್‌ಹೆಚ್ ವಿರುದ್ಧ ಕೆಕೆಆರ್ 57 ಎಸೆತಗಳ ಅಂತರದಲ್ಲಿ ಗುರಿ ಮುಟ್ಟಿ ಗೆದ್ದಿತ್ತು. ಆ ದಾಖಲೆಯನ್ನು ಆರ್‌ಸಿಬಿ ಮುರಿದಿದೆ.

    ಐಪಿಎಲ್ 2025 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್‌ ಕಿಂಗ್ಸ್‌ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಸ್ಥಾನ ಪಡೆದುಕೊಂಡಿದೆ. ಗುರುವಾರ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ರಜತ್ ಪಾಟಿದಾರ್ ಟಾಸ್ ಗೆದ್ದು ಪಂಜಾಬ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ನಂತರ ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು 14.1 ಓವರ್‌ಗಳಲ್ಲಿ ಒಟ್ಟು 101 ರನ್‌ಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಯಿತು.

    ನಂತರ ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 10 ಓವರ್‌ಗಳಿಗೆ 2 ವಿಕೆಟ್‌ ನಷ್ಟಕ್ಕೆ 106 ರನ್‌ ಗಳಿಸಿ ಗೆದ್ದು ಬೀಗಿತು. ಆ ಮೂಲಕ ಫೈನಲ್‌ಗೆ ಎಂಟ್ರಿ ಕೊಟ್ಟಿತು.

    ಐಪಿಎಲ್ ಪ್ಲೇಆಫ್ ಪಂದ್ಯದಲ್ಲಿ ಅತಿ ಹೆಚ್ಚು‌ ಬಾಲ್‌ಗಳ ಅಂತರದ ಗೆಲುವು
    60 ಎಸೆತಗಳು – ಮುಲ್ಲನ್‌ಪುರದಲ್ಲಿ ಆರ್‌ಸಿಬಿ vs ಪಿಬಿಕೆಎಸ್ (2025)
    57 ಎಸೆತಗಳು – ಚೆನ್ನೈನಲ್ಲಿ ಕೆಕೆಆರ್ vs ಎಸ್‌ಆರ್‌ಹೆಚ್ (2024)
    38 ಎಸೆತಗಳು – ಅಹಮದಾಬಾದ್‌ನಲ್ಲಿ ಕೆಕೆಆರ್ vs ಎಸ್‌ಆರ್‌ಹೆಚ್ (2024)
    33 ಎಸೆತಗಳು – ಬೆಂಗಳೂರಿನಲ್ಲಿ ಎಂಐ vs ಕೆಕೆಆರ್ (2017)
    31 ಎಸೆತಗಳು – ಮುಂಬೈನಲ್ಲಿ ಸಿಎಸ್‌ಕೆ vs ಪಿಬಿಕೆಎಸ್ (2008)

    ಐಪಿಎಲ್‌ನಲ್ಲಿ ವೇಗವಾಗಿ 100 ಕ್ಕೂ ಹೆಚ್ಚು ರನ್‌ ಗುರಿ ಬೆನ್ನಟ್ಟಿದ ಪಂದ್ಯಗಳು
    9.4 ಓವರ್‌ಗಳು – ಆರ್‌ಸಿಬಿ vs ಕೆಕೆಆರ್, ಬೆಂಗಳೂರು, 2015 (112 ರನ್)
    9.4 ಓವರ್‌ಗಳು – ಎಸ್‌ಆರ್‌ಹೆಚ್ vs ಎಲ್‌ಎಸ್‌ಜಿ, ಹೈದರಾಬಾದ್, 2024 (166)
    10.0 ಓವರ್‌ಗಳು – ಆರ್‌ಸಿಬಿ vs ಪಿಬಿಕೆಎಸ್, ಮುಲ್ಲನ್‌ಪುರ, 2025 (102)
    10.1 ಓವರ್‌ಗಳು – ಕೆಕೆಆರ್ vs ಸಿಎಸ್‌ಕೆ, ಚೆನ್ನೈ, 2025 (104)

  • ಕಪ್‌ ಗೆಲ್ಲೋಕೆ ಇನ್ನೊಂದೇ ಹೆಜ್ಜೆ – ಅನುಷ್ಕಾ ಕಡೆ ತಿರುಗಿ ಸನ್ನೆ ಮಾಡಿದ ಕೊಹ್ಲಿ

    ಕಪ್‌ ಗೆಲ್ಲೋಕೆ ಇನ್ನೊಂದೇ ಹೆಜ್ಜೆ – ಅನುಷ್ಕಾ ಕಡೆ ತಿರುಗಿ ಸನ್ನೆ ಮಾಡಿದ ಕೊಹ್ಲಿ

    ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಐಪಿಎಲ್ 2025 ಫೈನಲ್‌ಗೆ ಪ್ರವೇಶಿದೆ. ಇದೇ ಸಂಭ್ರಮದಲ್ಲಿ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಕಡೆ ತಿರುಗಿ ಕಪ್‌ ಗೆಲ್ಲೋಕೆ ಇನ್ನೊಂದೇ ಹೆಜ್ಜೆ ಎಂದು ಸನ್ನೆ ಮಾಡಿದ್ದಾರೆ. ಕೊಹ್ಲಿಯ ಈ ಸಂಭ್ರಮ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಗೂ ಫೋಟೋಗಳು ವೈರಲ್‌ ಆಗಿವೆ.

    ಐಪಿಎಲ್‌ (IPL 2025) ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಆರ್‌ಸಿಬಿ (RCB) ಫೈನಲ್‌ಗೆ ಲಗ್ಗೆ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 14.1 ಓವರ್‌ಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಕೇವಲ 101 ರನ್‌ ಗಳಿಸಿತು. ಆರ್‌ಸಿಬಿ 10 ಓವರ್‌ಗೆ ಗುರಿ ತಲುಪಿ ಗೆದ್ದು ಬೀಗಿತು.

    ಆರ್‌ಸಿಬಿ ಗೆಲುವಿಗೆ ಸಂಭ್ರಮಾಚರಣೆ ಮಾಡುವ ಹಲವಾರು ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಆರ್‌ಸಿಬಿ ಗೆಲುವಿನ ನಂತರ, ಅನುಷ್ಕಾ ಸಹ ಎದ್ದು ನಿಂತು ಸುಮಾರು 10 ನಿಮಿಷಗಳ ಕಾಲ ಚಪ್ಪಾಳೆ ತಟ್ಟಿದರು. ಈ ವೇಳೆ, ಕೊಹ್ಲಿ ಸನ್ನೆ ಮಾಡಿದ್ದಾರೆ. ಇದಕ್ಕೆ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬ, ಕೊಹ್ಲಿ ಕಪ್‌ ಗೆಲ್ಲೋಕೆ ಒಂದೆ ಸ್ಟೆಪ್‌ ಎಂದು ಅನುಷ್ಕಾಗೆ ಹೇಳುತ್ತಿದ್ದಾರೆ ಎಂದು ಕಾಮೆಂಟ್‌ ಮಾಡಿದ್ದಾನೆ.

  • ‘ಇದು ಅಭಿಮಾನಿ ದೇವ್ರುಗಳಿಗೆ’: ಅಣ್ಣಾವ್ರ ಸ್ಟೈಲಲ್ಲಿ ಕೈಮುಗಿದ ಕೊಹ್ಲಿ – ಆರ್‌ಸಿಬಿ ಫ್ಯಾನ್ಸ್‌ ಥ್ರಿಲ್‌

    ‘ಇದು ಅಭಿಮಾನಿ ದೇವ್ರುಗಳಿಗೆ’: ಅಣ್ಣಾವ್ರ ಸ್ಟೈಲಲ್ಲಿ ಕೈಮುಗಿದ ಕೊಹ್ಲಿ – ಆರ್‌ಸಿಬಿ ಫ್ಯಾನ್ಸ್‌ ಥ್ರಿಲ್‌

    ಚಂಡೀಗಢ: ಐಪಿಎಲ್‌ (IPL 2025) ಟೂರ್ನಿಯ ಪಂಜಾಬ್‌ ವಿರುದ್ಧದ ಮೊದಲ ಕ್ವಾಲಿಫೈಯರ್‌ ಗೆಲುವನ್ನು ಆರ್‌ಸಿಬಿ (RCB) ಅಭಿಮಾನಿಗಳಿಗೆ ಅರ್ಪಿಸಿದೆ. ‘ಇದು ಅಭಿಮಾನಿ ದೇವ್ರುಗಳಿಗೆ’ ಎಂದು ಆರ್‌ಸಿಬಿ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.

    ಆರ್‌ಸಿಬಿ ಭರ್ಜರಿ ಗೆಲುವು ದಾಖಲಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಸಂದರ್ಭದಲ್ಲಿ ವಿರಾಟ್‌ ಕೊಹ್ಲಿ (Virat Kohli) ಖುಷಿಯಿಂದ ಸ್ಟೇಡಿಯಂನಲ್ಲಿ ಅಭಿಮಾನಿಗಳತ್ತ ಕೈಮುಗಿಯುತ್ತಿರುವ ಫೋಟೊವನ್ನು ಆರ್‌ಸಿಬಿ ಹಂಚಿಕೊಂಡಿದೆ. ಇದರೊಂದಿಗೆ, ‘ಇದು ಅಭಿಮಾನಿ ದೇವ್ರುಗಳಿಗೆ’ ಎಂದು ಕ್ಯಾಪ್ಷನ್‌ ಕೂಡ ಕೊಟ್ಟಿದೆ. ಇದನ್ನೂ ಓದಿ: IPL – ಆರ್‌ಸಿಬಿ ಫೈನಲ್‌ ಪಂದ್ಯಗಳ ಹಾದಿ ಹೇಗಿತ್ತು?

    ನಟಸಾರ್ವಭೌಮ ಡಾ. ರಾಜ್‌ಕುಮಾರ್‌ ಅವರ ಸ್ಟೈಲ್‌ನಲ್ಲಿ ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಕೈ ಮುಗಿದಿದ್ದಾರೆ. ಅಣ್ಣಾವ್ರ ಶೈಲಿಯಲ್ಲೇ ‘ಅಭಿಮಾನಿ ದೇವ್ರುಗಳಿಗೆ’ ಗೆಲುವನ್ನು ಆರ್‌ಸಿಬಿ ಅರ್ಪಿಸಿದೆ. ಈ ಸನ್ನಿವೇಶ ಫ್ಯಾನ್ಸ್‌ಗೆ ಖುಷಿಕೊಟ್ಟಿದೆ.

    ಐಪಿಎಲ್‌ ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಆರ್‌ಸಿಬಿ ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಆರ್‌ಸಿಬಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 14.1 ಓವರ್‌ಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಕೇವಲ 101 ರನ್‌ ಗಳಿಸಿತು. ಆರ್‌ಸಿಬಿ 10 ಓವರ್‌ಗೆ ಗುರಿ ತಲುಪಿ ಗೆದ್ದು ಬೀಗಿತು. ಇದನ್ನೂ ಓದಿ: ಐಪಿಎಲ್ ಫೈನಲ್‌ಗೆ ಎಂಟ್ರಿ – ‘ಹಾಕ್ರೊ ಸ್ಟೆಪ್ಪು’ ಅಂತ ಫ್ಯಾನ್ಸ್‌ಗೆ ಹುರಿದುಂಬಿಸಿದ ಆರ್‌ಸಿಬಿ

  • ಪಂಜಾಬ್‌ ವಿರುದ್ಧ ಗೆದ್ದು ಫೈನಲ್‌ ಪ್ರವೇಶಿಸಿದ ಆರ್‌ಸಿಬಿಗೆ ವಿಜಯ್‌ ಮಲ್ಯ ವಿಶ್

    ಪಂಜಾಬ್‌ ವಿರುದ್ಧ ಗೆದ್ದು ಫೈನಲ್‌ ಪ್ರವೇಶಿಸಿದ ಆರ್‌ಸಿಬಿಗೆ ವಿಜಯ್‌ ಮಲ್ಯ ವಿಶ್

    ಪಂಜಾಬ್‌ ವಿರುದ್ಧ ಭರ್ಜರಿ ಗೆಲವು ಸಾಧಿಸಿ ಫೈನಲ್‌ ಪ್ರವೇಶಿಸಿದ ಆರ್‌ಸಿಬಿ ತಂಡಕ್ಕೆ ಉದ್ಯಮಿ ವಿಜಯ್ ಮಲ್ಯ ಅಭಿನಂದನೆ ಸಲ್ಲಿಸಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ಆರ್‌ಸಿಬಿ ಅತ್ಯುತ್ತಮ ಆಲ್-ರೌಂಡ್ ಪ್ರದರ್ಶನ ನೀಡಿದೆ. ಧೈರ್ಯದಿಂದ ಆಟವಾಡಿ, ಕಪ್‌ ಗೆಲ್ಲಿ ಎಂದು ಶುಭ ಹಾರೈಸಿದ್ದಾರೆ.

    ಐಪಿಎಲ್‌ (IPL 2025) ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಆರ್‌ಸಿಬಿ (RCB) ಫೈನಲ್‌ಗೆ ಲಗ್ಗೆ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 14.1 ಓವರ್‌ಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಕೇವಲ 101 ರನ್‌ ಗಳಿಸಿತು. ಆರ್‌ಸಿಬಿ 10 ಓವರ್‌ಗೆ ಗುರಿ ತಲುಪಿ ಗೆದ್ದು ಬೀಗಿತು.

    ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಫಿಲ್‌ ಸಾಲ್ಟ್‌ ಸ್ಫೋಟಕ ಅರ್ಧಶತಕದೊಂದಿಗೆ ತಂಡಕ್ಕೆ ಗೆಲುವು ತಂದುಕೊಟ್ಟರು. 27 ಬಾಲ್‌ಗಳಿಗೆ 6 ಫೋರ್‌, 3 ಸಿಕ್ಸರ್‌ನೊಂದಿಗೆ 56 ರನ್‌ (ಔಟಾಗದೇ) ಗಳಿಸಿ ಮಿಂಚಿದರು. ವಿರಾಟ್‌ ಕೊಹ್ಲಿ 12, ಮಯಂಕ್‌ ಅಗರ್ವಾಲ್‌ 19, ರಜತ್‌ ಪಾಟೀದಾರ್‌ 15 ರನ್‌ (ಔಟಾಗದೇ) ಗಳಿಸಿದರು. ಅಂತಿಮವಾಗಿ ಆರ್‌ಸಿಬಿ 10 ಓವರ್‌ಗೆ 2 ವಿಕೆಟ್‌ ನಷ್ಟಕ್ಕೆ 106 ರನ್‌ ಗಳಿಸಿ ಜಯ ಸಾಧಿಸಿತು.

    ಪ್ರಿಯಾಂಶ್ ಆರ್ಯ 7, ಜೋಶ್‌ ಇಂಗ್ಲಿಸ್‌ 4, ಕ್ಯಾಪ್ಟನ್‌ ಶ್ರೇಯಸ್‌ ಅಯ್ಯರ್‌ 2, ನೆಹಾಲ್ ವಧೇರಾ 8 ರನ್‌ನ ಒಂದಂಕಿ ಆಟದಿಂದ ನಿರಾಸೆ ಮೂಡಿಸಿದರು. ಪ್ರಭಸಿಮ್ರನ್ ಸಿಂಗ್ 18, ಮಾರ್ಕಸ್ ಸ್ಟೊಯಿನಿಸ್ 26, ಅಜ್ಮತುಲ್ಲಾ ಒಮರ್ಜೈ 18 ರನ್‌ಗಳಿಸಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲುವಲ್ಲಿ ವಿಫಲರಾದರು. ಕೊನೆಗೆ ಪಂಜಾಬ್‌ 14.1 ಓವರ್‌ಗೆ 101 ರನ್‌ ಗಳಿಸಿ ಆಲೌಟ್‌ ಆಯಿತು.

    2018ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌, 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್‌, 2021ರಲ್ಲಿ ಸಿಎಸ್‌ಕೆ, 2022ರಲ್ಲಿ ಗುಜರಾತ್‌ ಟೈಟಾನ್ಸ್‌, 2023ರಲ್ಲಿ ಸಿಎಸ್‌ಕೆ, 2024ರಲ್ಲಿ ಕೆಕೆಆರ್‌ ತಂಡಗಳು ಕ್ವಾಲಿಫೈಯರ್‌-1ನಲ್ಲಿ ಗೆಲುವು ಸಾಧಿಸಿ ಚಾಂಪಿಯನ್‌ ಪಟ್ಟವನ್ನು ತಮ್ಮದಾಗಿಸಿಕೊಂಡಿವೆ. ಇದೀಗ 18ನೇ ಆವೃತ್ತಿಯ ಕ್ವಾಲಿಫೈಯರ್‌-1 ನಲ್ಲಿ ಗೆದ್ದು ಫೈನಲ್‌ ಪ್ರವೇಶಿಸಿರುವ ಆರ್‌ಸಿಬಿ ಚಾಂಪಿಯನ್‌ ಪಟ್ಟಕ್ಕೆ ಕೊರಳೊಡ್ಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

  • ಐಪಿಎಲ್ ಫೈನಲ್‌ಗೆ ಎಂಟ್ರಿ – ‘ಹಾಕ್ರೊ ಸ್ಟೆಪ್ಪು’ ಅಂತ ಫ್ಯಾನ್ಸ್‌ಗೆ ಹುರಿದುಂಬಿಸಿದ ಆರ್‌ಸಿಬಿ

    ಐಪಿಎಲ್ ಫೈನಲ್‌ಗೆ ಎಂಟ್ರಿ – ‘ಹಾಕ್ರೊ ಸ್ಟೆಪ್ಪು’ ಅಂತ ಫ್ಯಾನ್ಸ್‌ಗೆ ಹುರಿದುಂಬಿಸಿದ ಆರ್‌ಸಿಬಿ

    ಚಂಡೀಗಢ: ಐಪಿಎಲ್ ಕ್ವಾಲಿಫೈಯರ್ 1 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ (RCB) ತಂಡ ಫೈನಲ್‌ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು, ‘ಹಾಕ್ರೊ ಸ್ಟೆಪ್ಪು’ ಎಂದು ಅಭಿಮಾನಿಗಳನ್ನು ಹುರಿದುಂಬಿಸಿದೆ.

    ಮಲ್ಲನ್‌ಪುರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್‌ಸಿಬಿ ಕೇವಲ 10 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಫೈನಲ್‌ಗೆ ಎಂಟ್ರಿ ಕೊಟ್ಟಿದೆ.

    ಈ ಬೆನ್ನಲ್ಲೇ ಆರ್‌ಸಿಬಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಕ್ಸ್ ಖಾತೆಯಲ್ಲಿ ‘ಹಾಕ್ರೊ ಸ್ಟೆಪ್ಪು’ ಎಂದು ಬರೆದು ಬೆಂಕಿಯ ಇಮೋಜಿ ಹಾಕಿ ಹರ್ಷ ವ್ಯಕ್ತಪಡಿಸಿದೆ. ಈ ಪೋಸ್ಟ್‌ಗೆ ಆರ್‌ಸಿಬಿ ಅಭಿಮಾನಿಗಳು ಕೂಡ ಫುಲ್ ಖುಷಿಯಾಗಿ ಲೈಕ್ಸ್, ಕಾಮೆಂಟ್ಸ್ ಮಾಡುತ್ತಿದ್ದಾರೆ.

    2018ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್, 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್, 2021ರಲ್ಲಿ ಸಿಎಸ್‌ಕೆ, 2022ರಲ್ಲಿ ಗುಜರಾತ್ ಟೈಟಾನ್ಸ್, 2023ರಲ್ಲಿ ಸಿಎಸ್‌ಕೆ, 2024ರಲ್ಲಿ ಕೆಕೆಆರ್ ತಂಡಗಳು ಕ್ವಾಲಿಫೈಯರ್-1ನಲ್ಲಿ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿವೆ. ಇದೀಗ 18ನೇ ಆವೃತ್ತಿಯ ಕ್ವಾಲಿಫೈಯರ್-1 ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿರುವ ಆರ್‌ಸಿಬಿ ಚಾಂಪಿಯನ್ ಪಟ್ಟಕ್ಕೆ ಕೊರಳೊಡ್ಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

  • IPL 2025 ಫೈನಲ್‍ಗೆ ಆರ್‌ಸಿಬಿ ಗ್ರ್ಯಾಂಡ್ ಎಂಟ್ರಿ – ಬೆಂಗ್ಳೂರಲ್ಲಿ ಫ್ಯಾನ್ಸ್ ಸೆಲಬ್ರೇಷನ್

    IPL 2025 ಫೈನಲ್‍ಗೆ ಆರ್‌ಸಿಬಿ ಗ್ರ್ಯಾಂಡ್ ಎಂಟ್ರಿ – ಬೆಂಗ್ಳೂರಲ್ಲಿ ಫ್ಯಾನ್ಸ್ ಸೆಲಬ್ರೇಷನ್

    ಬೆಂಗಳೂರು: ಮಲ್ಲನ್‌ಪುರ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ ಕ್ವಾಲಿಫೈಯರ್‌ 1 ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ತಂಡ ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆರ್‌ಸಿಬಿ ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದೆ. ಈ ಗೆಲುವನ್ನು‌ ಆರ್‌ಸಿಬಿ ಫ್ಯಾನ್ಸ್ ನಗರದ ಹಲವೆಡೆ ಸಂಭ್ರಮಿಸುತ್ತಿದ್ದಾರೆ. ಓರಿಯಾನ್ ಮಾಲ್‌ನಲ್ಲಿ ಅಭಿಮಾನಿಗಳು ಆರ್‌ಸಿಬಿಗೆ ಜಯಘೋಷ ಕೂಗಿದ್ದಾರೆ. ಅಲ್ಲದೇ ಕುಣಿದು ಕುಪ್ಪಳಿಸಿದ್ದಾರೆ.

    ವಿಜಯನಗರದಲ್ಲಿ RCB ಅಭಿಮಾನಿಗಳು ರಸ್ತೆ ತಡೆದು ಸಂಭ್ರಮಾಚರಣೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದಿದ್ದು ರಸ್ತೆ ಕ್ಲಿಯರ್ ಮಾಡಿಸುತ್ತಿದ್ದಾರೆ.

    ಪಂಜಾಬ್‌ ನೀಡಿದ 102 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ಆರ್‌ಸಿಬಿ 10 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 106 ರನ್‌ ಸಿಡಿಸಿ ಗೆಲುವು ಸಾಧಿಸಿತು. ಈ ಮೂಲಕ 4ನೇ ಬಾರಿಗೆ ಫೈನಲ್‌ಗೆ ಎಂಟ್ರಿಕೊಟ್ಟಿದೆ.

    2009, 2011, 2016ರ ಬಳಿಕ 4ನೇ ಬಾರಿಗೆ ಫೈನಲ್‌ಗೆ ಲಗ್ಗೆಯಿಟ್ಟಿರುವ ಆರ್‌ಸಿಬಿ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆ ಎಂದು ಕ್ರಿಕೆಟ್‌ ತಜ್ಞರು ಭವಿಷ್ಯ ನುಡಿದಿದ್ದಾರೆ. ಏಕೆಂದರೆ ಕಳೆದ 7 ವರ್ಷಗಳಲ್ಲಿ ನಡೆದ ಐಪಿಎಲ್‌ ಆವೃತ್ತಿಗಳಲ್ಲಿ ಐಪಿಎಲ್‌ ಕ್ವಾಲಿಫೈರ್‌-1 ನಲ್ಲಿ ಗೆದ್ದ ತಂಡಗಳೇ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ.

    2018ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌, 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್‌, 2021ರಲ್ಲಿ ಸಿಎಸ್‌ಕೆ, 2022ರಲ್ಲಿ ಗುಜರಾತ್‌ ಟೈಟಾನ್ಸ್‌, 2023ರಲ್ಲಿ ಸಿಎಸ್‌ಕೆ, 2024ರಲ್ಲಿ ಕೆಕೆಆರ್‌ ತಂಡಗಳು ಕ್ವಾಲಿಫೈಯರ್‌-1ನಲ್ಲಿ ಗೆಲುವು ಸಾಧಿಸಿ ಚಾಂಪಿಯನ್‌ ಪಟ್ಟವನ್ನು ತಮ್ಮದಾಗಿಸಿಕೊಂಡಿವೆ. ಇದೀಗ 18ನೇ ಆವೃತ್ತಿಯ ಕ್ವಾಲಿಫೈಯರ್‌-1 ನಲ್ಲಿ ಗೆದ್ದು ಫೈನಲ್‌ ಪ್ರವೇಶಿಸಿರುವ ಆರ್‌ಸಿಬಿ ಚಾಂಪಿಯನ್‌ ಪಟ್ಟಕ್ಕೆ ಕೊರಳೊಡ್ಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.