Tag: rcb

  • ಆರ್‌ಸಿಬಿಗೆ ʻಜೋಶ್‌ʼ – ಟಾಸ್‌ ಗೆದ್ದ ಬೆಂಗಳೂರು ಫೀಲ್ಡಿಂಗ್‌ ಆಯ್ಕೆ

    ಆರ್‌ಸಿಬಿಗೆ ʻಜೋಶ್‌ʼ – ಟಾಸ್‌ ಗೆದ್ದ ಬೆಂಗಳೂರು ಫೀಲ್ಡಿಂಗ್‌ ಆಯ್ಕೆ

    ಚಂಡೀಗಢ: 18ನೇ ಆವೃತ್ತಿ ಐಪಿಎಲ್‌ ಟೂರ್ನಿಯ ಕ್ವಾಲಿಫೈಯರ್‌-1 (IPL Qualifier 1) ಪಂದ್ಯ ಇಂದು ನಡೆಯುತ್ತಿದ್ದು, ಆರ್‌ಸಿಬಿ-ಪಂಜಾಬ್‌ ಕಿಂಗ್ಸ್‌ ತಂಡಗಳು ಕಾದಾಟ ನಡೆಸಲಿವೆ. ಟಾಸ್‌ ಗೆದ್ದ ಆರ್‌ಸಿಬಿ (RCB) ಫೀಲ್ಡಿಂಗ್‌ ಆಯ್ದುಕೊಂಡಿದ್ದು, ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಪಂಜಾಬ್‌ಗೆ ಬಿಟ್ಟುಕೊಟ್ಟಿದೆ.

    ಚಂಡೀಗಢದ ಮಲ್ಲನ್‌ಪುರ ಕ್ರಿಕೆಟ್‌ ಅಂಗಳದಲ್ಲಿ ಸರಿಯಾಗಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಗೆದ್ದ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಇನ್ನೂ ಸೋತ ತಂಡ ಕ್ವಾಲಿಫೈಯರ್‌ 2ನಲ್ಲಿ ಎಲಿಮಿನೇಟರ್‌ನಲ್ಲಿ ಗೆದ್ದ ತಂಡದೊಂದಿಗೆ ಸೆಣಸಲಿದೆ. ಗಾಯದ ಸಮಸ್ಯೆ ಎದುರಿಸುತ್ತಿದ್ದ ಜೋಶ್‌ ಹೇಜಲ್ವುಡ್‌ ಮತ್ತೆ ಆರ್‌ಸಿಬಿಗೆ ಕಂಬ್ಯಾಕ್‌ ಮಾಡಿದ್ದಾರೆ. ಇನ್ನೂ ಬೆರಳು ಗಾಯದ ಸಮಸ್ಯೆಯಿಂದ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಣಕ್ಕಿಳಿಯುತ್ತಿದ್ದ ರಜತ್‌ ಪಾಟಿದಾರ್‌ ಮತ್ತೆ ನಾಯಕತ್ವ ವಹಿಸಿಕೊಂಡಿದ್ದಾರೆ. ಹೀಗಾಗಿ ಇಂದಿನ ಆರ್‌ಸಿಬಿ ಫಲಿತಾಂಶದಲ್ಲಿ ಬದಲಾವಣೆ ತರಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

    ಪಂಜಾಬ್‌ ಕಿಂಗ್ಸ್‌ ಪ್ಲೇಯಿಂಗ್‌-11
    ಪ್ರಿಯಾಂಶ್‌ ಆರ್ಯ, ಪ್ರಭ್‌ಸಿಮ್ರನ್‌ ಸಿಂಗ್‌, ಜೋಶ್‌ ಇಂಗ್ಲಿಷ್‌, ಶ್ರೇಯಸ್‌ ಅಯ್ಯರ್‌ (ನಾಯಕ), ನೇಹಾಲ್‌ ವಧೇರಾ, ಶಶಾಂಕ್‌ ಸಿಂಗ್‌, ಮಾರ್ಕಸ್‌ ಸ್ಟೋಯ್ನಿಸ್‌, ಅಝ್ಮತುಲ್ಲಾ ಒಮರ್ಝೈ, ಹರ್ಪ್ರೀತ್‌ ಬ್ರಾರ್‌, ಕೈಲ್‌ ಜೇಮಿಸನ್‌, ಅರ್ಷ್‌ದೀಪ್‌ ಸಿಂಗ್‌.

    ಆರ್‌ಸಿಬಿ ಪ್ಲೇಯಿಂಗ್‌-11
    ವಿರಾಟ್‌ ಕೊಹ್ಲಿ, ಫಿಲ್‌ ಸಾಲ್ಟ್‌, ರಜತ್‌ ಪಾಟಿದಾರ್‌ (ನಾಯಕ), ಲಿಯಾಮ್‌ ಲಿವಿಂಗ್‌ಸ್ಟೋನ್‌, ಜಿತೇಶ್‌ ಶರ್ಮಾ, ರೊಮಾರಿಯೊ ಶೆಫರ್ಡ್‌, ಕೃನಾಲ್‌ ಪಾಂಡ್ಯ, ಭುವನೇಶ್ವರ್‌ ಕುಮಾರ್‌, ಜೋಶ್‌ ಹೇಜಲ್ವುಡ್‌, ಸೂಯಶ್‌ ಶರ್ಮಾ, ಯಶ್‌ ದಯಾಳ್‌.

  • RCBಗೆ ಮೂರು ಬಾರಿಯೂ ಫೈನಲ್‌ನಲ್ಲಿ ವಿರೋಚಿತ ಸೋಲು – ಹೇಗಿದೆ ರೋಚಕ ಇತಿಹಾಸ?

    RCBಗೆ ಮೂರು ಬಾರಿಯೂ ಫೈನಲ್‌ನಲ್ಲಿ ವಿರೋಚಿತ ಸೋಲು – ಹೇಗಿದೆ ರೋಚಕ ಇತಿಹಾಸ?

    ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್‌ (IPL 2025) ಇನ್ನೇನು ಕೊನೆಯ ಹಂತ ತಲುಪಿದೆ. ಲೀಗ್‌ ಸುತ್ತಿನ ಎಲ್ಲಾ ಪಂದ್ಯಗಳು ಮುಕ್ತಾಯಗೊಂಡಿದ್ದು,‌ ಇಂದು ಮೊದಲ ಕ್ವಾಲಿಫೈಯರ್‌ನಲ್ಲಿ ಪಂಜಾಬ್‌ ಕಿಂಗ್ಸ್‌ (Punjab Kings) ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಸೆಣಸಲು ಸಜ್ಜಾಗಿವೆ.

    11 ವರ್ಷಗಳ ಬಳಿಕ ಪ್ಲೇ ಆಫ್‌ ಪ್ರವೇಶಿಸಿರುವ ಪಂಜಾಬ್‌ ಕಿಂಗ್ಸ್‌ ಈ ಬಾರಿ ಶ್ರೇಯಸ್‌ ಅಯ್ಯರ್‌ (Shreyas Iyer) ನಾಯಕತ್ವದಲ್ಲಿ ಟ್ರೋಫಿ ಎತ್ತಿ ಹಿಡಿಯುವ ತವಕದಲ್ಲಿದೆ. 2011ರಲ್ಲಿ ಮೊದಲ ಬಾರಿಗೆ ಜಾರ್ಜ್ ಬೈಲಿ ನಾಯಕತ್ವದಲ್ಲಿ ಫೈನಲ್‌ ಪ್ರವೇಶಿಸಿದ್ದ ಪಂಜಾಬ್‌ ತಂಡ ಕೆಕೆಆರ್‌ ವಿರುದ್ಧ 3 ವಿಕೆಟ್‌ಗಳ ವಿರೋಚಿತ ಸೋಲು ಕಂಡಿತ್ತು. ಇನ್ನೂ ಐಪಿಎಲ್‌ನ ಜನಪ್ರಿಯ ತಂಡವಾಗಿ ಗುರುತಿಸಿಕೊಂಡಿರುವ ಆರ್‌ಸಿಬಿ ಮೂರು ಬಾರಿ ಫೈನಲ್‌ ಪ್ರವೇಶಿಸಿಯೂ ಸೋಲು ಕಂಡಿತ್ತು. ಈ ಸಲ 10ನೇ ಬಾರಿಗೆ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದ್ದು, 18ನೇ ಆವೃತ್ತಿಯಲ್ಲಾದರೂ ಟ್ರೋಫಿ ಗೆಲ್ಲುವ ಕನಸು ನನಸು ಮಾಡಿಕೊಳ್ಳುತ್ತಾ ಅನ್ನೋದನ್ನು ಕಾದುನೋಡಬೇಕಿದೆ. ಹಾಗಾದ್ರೆ ಮೂರು ಬಾರಿ ಫೈನಲ್‌ನಲ್ಲಿ ಆರ್‌ಸಿಬಿ ಹೋರಾಟ ಹೇಗಿತ್ತು ಅನ್ನೋದನ್ನ ತಿಳಿಯಬೇಕಿದ್ರೆ ಮುಂದೆ ಓದಿ… ಇದನ್ನೂ ಓದಿ: RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್‌ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ

    ಫೈನಲ್‌ನಲ್ಲಿ ವಿರೋಚಿತ ಸೋಲು
    2009ರ ಆವೃತ್ತಿಯಲ್ಲೂ 8 ತಂಡಗಳು ಭಾಗವಹಿಸಿದ್ದವು. 2ನೇ ಆವೃತ್ತಿಯಲ್ಲಿ ಆರ್‌ಸಿಬಿ ಪುಟಿದೆದ್ದಿತ್ತು. 14 ಪಂದ್ಯಗಳಲ್ಲಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿ 16 ಅಂಕ ಗಳಿಸಿ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿತ್ತು. ಆಗ ಎಲಿಮಿನೇಟರ್ ಪಂದ್ಯ ಇರಲಿಲ್ಲ, 2 ಸೆಮಿಫೈನಲ್ ಪಂದ್ಯಗಳು ಮಾತ್ರ ಇದ್ದವು. ಮೊದಲ ಸೆಮಿಫೈನಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ (ಇಂದಿನ ಡೆಲ್ಲಿ ಕ್ಯಾಪಿಟಲ್ಸ್), ಹೈದರಾಬಾದ್ ಡೆಕ್ಕನ್ ಚಾರ್ಜಸ್ ಕಾದಾಟ ನಡೆಸಿದ್ರೆ, 2ನೇ ಸೆಮಿಸ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಸೆಣಸಾಡಿತ್ತು. ಈ ವೇಳೆ ಸೆಮಿಸ್‌ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿದ್ದ ಆರ್‌ಸಿಬಿ ಫೈನಲ್‌ನಲ್ಲಿ ಡೆಕ್ಕನ್ ಚಾರ್ಜಸ್ ವಿರುದ್ಧ 6 ರನ್‌ಗಳ ಅಂತರದಿಂದ ಸೋಲು ಕಂಡಿತ್ತು. ಟ್ರೋಫಿ ಗೆಲ್ಲುವ ಕನಸೂ ಕಮರಿತ್ತು. ಇದನ್ನೂ ಓದಿ: ಆರ್‌ಸಿಬಿ ಕ್ವಾಲಿಫೈಯರ್‌ 1 ಎಂಟ್ರಿಗೆ ಕೊಡುಗೆ ನೀಡಿದ ಕೊಹ್ಲಿಗೆ ದಿನೇಶ್‌ ಕಾರ್ತಿಕ್‌ ವಿಶೇಷ ಗೌರವ

    ಚೆನ್ನೈ ವಿರುದ್ಧ ಎರಡೆರಡುಬಾರಿ ಸೋಲು
    2011ರ ಆವೃತ್ತಿ ಆರ್‌ಸಿಬಿ ಪಾಲಿಗೆ ಅತ್ಯಂತ ರೋಚಕ ಘಟ್ಟ. ಲೀಗ್ ಸುತ್ತಿನಲ್ಲಿ 14ರಲ್ಲಿ 9 ಪಂದ್ಯ ಗೆದ್ದು ಪ್ಲೇ ಆಫ್ ಪ್ರವೇಶಿಸಿತ್ತು. ಈ ವೇಳೆಗೆ ಪ್ಲೇ ಆಫ್ ಸ್ವರೂಪ ಸಂಪೂರ್ಣ ಬದಲಾಗಿತ್ತು. ಮೊದಲ ಸೆಮಿಫೈನಲ್‌ನಲ್ಲಿ ಚೆನ್ನೈ ವಿರುದ್ಧ 6 ವಿಕೆಟ್‌ಗಳ ಹೀನಾಯ ಸೋಲು ಕಂಡಿದ್ದ ಆರ್‌ಸಿಬಿಗೆ ಮತ್ತೊಂದು ಅವಕಾಶ ಸಿಕ್ಕಿತ್ತು. ಆಗ 2ನೇ ಕಾಲಿಫೈಯರ್ ಪಂದ್ಯದಲ್ಲಿ ಮುಂಬೈ ವಿರುದ್ಧ ಭರ್ಜರಿ ಗೆಲುವು ಕಂಡಿದ್ದ ಆರ್‌ಸಿಬಿ ಪುನಃ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 58 ರನ್‌ಗಳಿಂದ ಸೋಲು ಕಂಡಿತ್ತು. ಆಗ ಚೆನ್ನೈ ಸೂಪರ್ ಕಿಂಗ್ಸ್ ಸತತ 2ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಇದನ್ನೂ ಓದಿ: 9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

    8 ರನ್‌ಗಳಿಂದ ಕೈತಪ್ಪಿದ ಟ್ರೋಫಿ 
    2016 ಐಪಿಎಲ್ ಆವೃತ್ತಿ ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಹಬ್ಬವಾಗಿತ್ತು. ಅಂಕಪಟ್ಟಿಯಲ್ಲಿ ಟಾಪ್-2 ಸ್ಥಾನದೊಂದಿಗೆ ಪ್ಲೇ ಆಫ್ ಪ್ರವೇಶಿಸಿದ್ದ ಆರ್‌ಸಿಬಿ ಮೊದಲ ಕ್ವಾಲಿಫೈಯರ್‌ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಫೈನಲ್ ತಲುಪಿತ್ತು. ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ನಷ್ಟಕ್ಕೆ 208 ರನ್ ಸಿಡಿಸಿತ್ತು. ಆದ್ರೆ ಚೇಸಿಂಗ್ ಮಾಡಿದ್ದ ಆರ್‌ಸಿಬಿ ಕ್ರಿಸ್‌ಗೇಲ್ ಮತ್ತು ಕಿಂಗ್ ಕೊಹ್ಲಿ ಆರ್ಭಟದ ಹೊರತಾಗಿ 8 ರನ್‌ಗಳ ವಿರೋಚಿತ ಸೋಲು ಅನುಭವಿಸಿತು. ಆಗ ಸನ್ ರೈಸರ್ಸ್ ಡೇವಿಡ್ ವಾರ್ನರ್ ನಾಯಕತ್ವದಲ್ಲಿ ಟ್ರೋಫಿ ಎತ್ತಿ ಹಿಡಿದಿತ್ತು.

    18ನೇ ಆವೃತ್ತಿಯಲ್ಲಿ ರಜತ್ ಪಾಟಿದಾರ್ ನಾಯಕತ್ವದಲ್ಲಿ 9 ಪಂದ್ಯ ಗೆದ್ದಿರುವ ಆರ್‌ಸಿಬಿ ಟ್ರೋಫಿ ಎತ್ತಿ ಹಿಡಿಯಲೇಬೇಕೆಂದು ಪಣ ತೊಟ್ಟಿದೆ. ಇದನ್ನೂ ಓದಿ: ಆರ್‌ಸಿಬಿಯಲ್ಲಿರುವ ಅಣ್ಣ ಹುರಿದುಂಬಿಸಿದ್ರು, ನಾನು ನನ್ನ ಆಟವಾಡಿದೆ: ಜಿತೇಶ್‌ ಶರ್ಮಾ

  • ಪಂಜಾಬ್‌ ಜೊತೆ ಫೈನಲ್‌ ಫೈಟ್‌ – ಆರ್‌ಸಿಬಿಗೆ ಗಾಯದ ಚಿಂತೆ

    ಪಂಜಾಬ್‌ ಜೊತೆ ಫೈನಲ್‌ ಫೈಟ್‌ – ಆರ್‌ಸಿಬಿಗೆ ಗಾಯದ ಚಿಂತೆ

    ಮುಲ್ಲಾನ್‌ಪುರ: ಐಪಿಎಲ್‌ (IPL 2025) ಲೀಗ್‌ ಹಂತದ ಎಲ್ಲಾ ಪಂದ್ಯಗಳು ಕೊನೆಗೊಂಡಿದ್ದು ಇಂದು ಚಂಡೀಗಢದ ಮುಲ್ಲಾನ್‌ಪುರದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮತ್ತು ಪಂಜಾಬ್‌ ಕಿಂಗ್ಸ್‌ (PBKS) ಮಧ್ಯೆ ಮೊದಲ ಕ್ವಾಲಿಫೈಯರ್‌ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಜಯಗಳಿಸಿದವರು ನೇರವಾಗಿ ಫೈನಲ್‌ ಪ್ರವೇಶಿಸಿದರೆ ಸೋತವರು ಭಾನುವಾರ ನಡೆಯಲಿರುವ ಎರಡನೇ ಕ್ವಾಲಿಫೈಯರ್‌ ಪಂದ್ಯವನ್ನು ಆಡಬೇಕಾಗುತ್ತದೆ.

    ಆರ್‌ಸಿಬಿ ಈ ಬಾರಿ ಲೀಗ್‌ 14 ಪಂದ್ಯಗಳ ಪೈಕಿ 9 ರಲ್ಲಿ ಗೆದ್ದಿದೆ. ಮಳೆಯಿಂದ ಬೆಂಗಳೂರಿನ ಪಂದ್ಯ ರದ್ದಾಗಿದ್ದರಿಂದ ಒಟ್ಟು 19 ಅಂಕ ಸಂಪಾದಿಸಿ 2ನೇ ಸ್ಥಾನ ಪಡೆದಿದೆ. ಪಂಜಾಬ್‌ ಸಮಾನ 19 ಅಂಕ ಪಡೆದರೂ ನೆಟ್‌ ರನ್‌ರೇಟ್‌ ಆಧಾರದಲ್ಲಿ ಮೊದಲ ಸ್ಥಾನ ಪಡೆದಿದೆ. ಈ ಬಾರಿ ಮೂರನೇ ಬಾರಿ ಇತ್ತಂಡಗಳು ಮುಖಾಮುಖಿಯಾಗುತ್ತಿವೆ. ಲೀಗ್‌ ಮುಖಾಮುಖಿಯಲ್ಲಿ ಎರಡು ತಂಡಗಳು ಒಂದೊಂದು ಪಂದ್ಯವನ್ನು ಗೆದ್ದಿವೆ.  ಇದನ್ನೂ ಓದಿ: IPL 2025 | ಪಂದ್ಯ ಸೋತು ಹೃದಯ ಗೆದ್ದ ಪಂತ್‌

    ಆರ್‌ಸಿಬಿಗೆ ಗಾಯದ ಚಿಂತೆ:
    ಐಪಿಎಲ್ ಪುನಾರಂಭದ ಬಳಿಕ ಆರ್‌ಸಿಬಿಯಲ್ಲಿ ಗಾಯದ ಸಮಸ್ಯೆ ಹೆಚ್ಚಾಗಿದೆ. ವೇಗಿ ಜೋಶ್ ಹೇಜಲ್‌ವುಡ್ ಫಿಟ್ ಆಗಿದ್ದು, ಈ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ. ಟಿಮ್ ಡೇವಿಡ್ ಗಾಯದಿಂದ ಚೇತರಿಸಿಕೊಳ್ಳದ ಕಾರಣ ಗೈರಾಗಲಿದ್ದಾರೆ ಎನ್ನಲಾಗುತ್ತಿದೆ. ನಾಯಕ ರಜತ್ ಪಾಟೀದಾರ್ ಗಾಯದ ಸಮಸ್ಯೆ ಜೊತೆಗೆ ಲಯದ ಸಮಸ್ಯೆ ಎದುರಿಸುತ್ತಿದ್ದಾರೆ.

    ಕಳೆದ ಬಾರಿ ಶ್ರೇಯಸ್‌ ಅಯ್ಯರ್‌ ನೇತೃತ್ವದಲ್ಲಿ ಕೋಲ್ಕತ್ತಾ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಈ ಬಾರಿಯೂ ಶ್ರೇಯಸ್‌ ಅಯ್ಯರ್‌ ತಂಡವನ್ನು ಪ್ಲೇ ಆಫ್‌ವರೆಗೆ ತಲುಪಿಸಿದ್ದಾರೆ. ತಂಡ ಎಲ್ಲಾ ವಿಭಾಗದಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದು ತವರಿನಲ್ಲಿ ಆರ್‌ಸಿಬಿಯನ್ನು ಮಣಿಸುವ ಲೆಕ್ಕಾಚಾರದಲ್ಲಿದೆ. ಇದನ್ನೂ ಓದಿ: ಆರ್‌ಸಿಬಿಯಲ್ಲಿರುವ ಅಣ್ಣ ಹುರಿದುಂಬಿಸಿದ್ರು, ನಾನು ನನ್ನ ಆಟವಾಡಿದೆ: ಜಿತೇಶ್‌ ಶರ್ಮಾ

    ಈ ಬಾರಿಯ ಐಪಿಎಲ್‌ನಲ್ಲಿ ವಿರಾಟ್‌ ಕೊಹ್ಲಿ (Virat Kohli) ಒಟ್ಟು 602 ರನ್‌ ಹೊಡೆದು ಅತಿ ಹೆಚ್ಚು ರನ್‌ ಹೊಡೆದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದರೆ 514 ರನ್‌ ಹೊಡೆದಿರುವ ಶ್ರೇಯಸ್‌ ಅಯ್ಯರ್‌ (Shreyas Iyer) 10ನೇ ಸ್ಥಾನ ಪಡೆದಿದ್ದಾರೆ. 499 ರನ್‌ ಹೊಡೆದಿರುವ ಪ್ರಭುಸಿಮ್ರಾನ್‌ ಸಿಂಗ್‌ 11ನೇ ಸ್ಥಾನ ಪಡೆದಿದ್ದಾರೆ.

    ಬೌಲಿಂಗ್‌ನಲ್ಲಿ 10 ಪಂದ್ಯಗಳಿಂದ 18 ವಿಕೆಟ್‌ ಪಡೆದ ಜೋಶ್ ಹೇಜಲ್‌ವುಡ್ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದರೆ ಪಂಜಾಬ್‌ ಕಿಂಗ್ಸ್‌ನ ಅರ್ಶ್‌ದೀಪ್‌ ಸಿಂಗ್‌ 14 ಪಂದ್ಯಗಳಿಂದ 18 ವಿಕೆಟ್‌ ಪಡೆದು 5ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್‌ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ

    ಟ್ರೋಫಿ ಸಿಕ್ಕಿಲ್ಲ
    ಆರ್‌ಸಿಬಿ ಮತ್ತು ಪಂಜಾಬ್‌ ಇಲ್ಲಿಯವರೆಗೆ ಟ್ರೋಫಿಯನ್ನು ಗೆದ್ದಿಲ್ಲ. ಆದರೆ ಇಲ್ಲಿಯವರೆಗೆ ಎರಡೂ ತಂಡಗಳು ಫೈನಲ್‌ ಪ್ರವೇಶಿಸಿವೆ. ಆರ್‌ಸಿಬಿ 2009, 2011, 2016 ರಲ್ಲಿ ಫೈನಲ್‌ ಪ್ರವೇಶಿಸಿದರೆ ಪಂಜಾಬ್‌ 2014 ರಲ್ಲಿ ಫೈನಲ್‌ ಪ್ರವೇಶಿಸಿತ್ತು.

  • RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್‌ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ

    RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್‌ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ

    – ನಿಧಾನಗತಿಯ ಓವರ್‌ ಕಾಯ್ದುಕೊಂಡಿದ್ದಕ್ಕೆ ರಿಷಭ್‌ ಪಂತ್‌ಗೆ 30 ಲಕ್ಷ ಫೈನ್‌

    ಲಕ್ನೋ: ಐಪಿಎಲ್‌ ಟೂರ್ನಿಯ ಆರ್‌ಸಿಬಿ (RCB) ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಿಷಭ್ ಪಂತ್ (Rishabh Pant) ಸೇರಿ ಎಲ್‌ಎಸ್‌ಜಿ (LSG) ತಂಡಕ್ಕೆ ಬಿಸಿಸಿಐ ದಂಡ ವಿಧಿಸಿದೆ.

    ಮಂಗಳವಾರ ನಡೆದ ಲೀಗ್‌ ಹಂತದ ಕೊನೆ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ನಿಧಾನಗತಿಯ ಓವರ್ ದರ ಕಾಯ್ದುಕೊಂಡಿದ್ದಕ್ಕಾಗಿ ಎಲ್‌ಎಸ್‌ಜಿ ನಾಯಕ ರಿಷಭ್ ಪಂತ್ ಅವರಿಗೆ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಮಾಧ್ಯಮ ಸಲಹಾ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಆರ್‌ಸಿಬಿ ಕ್ವಾಲಿಫೈಯರ್‌ 1 ಎಂಟ್ರಿಗೆ ಕೊಡುಗೆ ನೀಡಿದ ಕೊಹ್ಲಿಗೆ ದಿನೇಶ್‌ ಕಾರ್ತಿಕ್‌ ವಿಶೇಷ ಗೌರವ

    ಐಪಿಎಲ್‌ನ ಕನಿಷ್ಠ ಓವರ್ ದರ ಅಪರಾಧಗಳಿಗೆ ಸಂಬಂಧಿಸಿದಂತೆ ನೀತಿ ಸಂಹಿತೆಯ ಅಡಿಯಲ್ಲಿ ಮೂರನೇ ಬಾರಿಗೆ ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ, ರಿಷಭ್ ಪಂತ್‌ಗೆ 30 ಲಕ್ಷ ದಂಡ ವಿಧಿಸಲಾಗಿದೆ. ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಪ್ಲೇಯಿಂಗ್ XI ನ ಉಳಿದ ಸದಸ್ಯರಿಗೆ ತಲಾ 12 ಲಕ್ಷ ಅಥವಾ ಅವರ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಲಾಗಿದೆ.

    ಮಂಗಳವಾರ ನಡೆದ ರೋಚಕ ಪಂದ್ಯದಲ್ಲಿ ಲಕ್ನೋ ವಿರುದ್ಧ ಆರ್‌ಸಿಬಿ ವಿಕೆಟ್‌ಗಳ ಸೋಲನುಭವಿಸಿತು. ಲಕ್ನೋ ತಂಡದ ಐಪಿಎಲ್ 2025 ಅಭಿಯಾನವು ಅವರ ತವರು ನೆಲದಲ್ಲಿ ಕಹಿ ಅನುಭವದೊಂದಿಗೆ ಕೊನೆಗೊಂಡಿತು. ಇದನ್ನೂ ಓದಿ: ಆರ್‌ಸಿಬಿಯಲ್ಲಿರುವ ಅಣ್ಣ ಹುರಿದುಂಬಿಸಿದ್ರು, ನಾನು ನನ್ನ ಆಟವಾಡಿದೆ: ಜಿತೇಶ್‌ ಶರ್ಮಾ

    ಪಂಜಾಬ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿಯೇ ಮುಂದುವರಿದಿದ್ದು, ಆರ್‌ಸಿಬಿ ಎರಡು ಹೆಚ್ಚುವರಿ ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಏರಿದೆ. ಆರ್‌ಸಿಬಿ ಗುರುವಾರ ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯವನ್ನು ಆಡಲಿದೆ. ಇತ್ತ ಮೂರನೇ ಸ್ಥಾನಕ್ಕೆ ಕುಸಿದ ಗುಜರಾತ್ ಟೈಟಾನ್ಸ್ ಶುಕ್ರವಾರ ಎಲಿಮಿನೇಟರ್‌ನಲ್ಲಿ ಮುಂಬೈ ಇಂಡಿಯನ್ಸ್ ಅನ್ನು ಎದುರಿಸಲಿದೆ.

  • ಆರ್‌ಸಿಬಿಯಲ್ಲಿರುವ ಅಣ್ಣ ಹುರಿದುಂಬಿಸಿದ್ರು, ನಾನು ನನ್ನ ಆಟವಾಡಿದೆ: ಜಿತೇಶ್‌ ಶರ್ಮಾ

    ಆರ್‌ಸಿಬಿಯಲ್ಲಿರುವ ಅಣ್ಣ ಹುರಿದುಂಬಿಸಿದ್ರು, ನಾನು ನನ್ನ ಆಟವಾಡಿದೆ: ಜಿತೇಶ್‌ ಶರ್ಮಾ

    ಲಕ್ನೋ: ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿ ತಂಡವನ್ನು ಕ್ವಾಲಿಫೈಯರ್‌ಗೆ ತೆಗೆದುಕೊಂಡ ಹೋದ ನಾಯಕ ಜಿತೇಶ್‌ ಶರ್ಮಾ (Jitesh Sharma) ಆರ್‌ಸಿಬಿಯಲ್ಲಿರುವ (RCB) ಅಣ್ಣನ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

    ಆರ್‌ಸಿಬಿಯಲ್ಲಿರುವ ಅಣ್ಣ ಯಾರೂ ಅಲ್ಲ. ದಿನೇಶ್‌ ಕಾರ್ತಿಕ್‌ (Dinesh Karthik) ಅವರನ್ನೇ ಜಿತೇಶ್‌ ಶರ್ಮಾ ಅಣ್ಣ ಎಂದು ಸಂಬೋಧಿಸಿ ಗೌರವ ನೀಡಿದ್ದಾರೆ.

    ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದ ಜಿತೇಶ್‌ ಶರ್ಮಾ ಅವರನ್ನು ಮುರಳಿ ಕಾರ್ತಿಕ್‌ ಮಾತನಾಡಿಸಿದರು. ಈ ವೇಳೆ, ವಿರಾಟ್ ಕೊಹ್ಲಿ ಔಟಾದಾಗ ನಾನು ಈ ಬಾರಿ ಆಟ ಆಡಲೇಬೇಕು ಎಂದು ನಿರ್ಧರಿಸಿದೆ. ನನ್ನ ಬಳಿ ಪಂದ್ಯವನ್ನು ಗೆಲ್ಲಿಸುವ ಸಾಮರ್ಥ್ಯ ಇದೆ ಎಂದು ನನ್ನ ಗುರು, ಮಾರ್ಗದರ್ಶಕ ಡಿಕೆ ಅಣ್ಣ ಹೇಳಿ ಹುರಿದುಂಬಿಸಿದರು. ಅದರಂತೆ ನಾನು ನನ್ನ ಆಟವಾಡಿದೆ ಎಂದು ತಿಳಿಸಿದರು. ಇದನ್ನೂ ಓದಿ: IPL 2025 | ಪಂದ್ಯ ಸೋತು ಹೃದಯ ಗೆದ್ದ ಪಂತ್‌

     

     

    ನನಗೆ ಅನಿಸಿಕೆಗಳನ್ನು ವ್ಯಕ್ತಪಡಿಸಲು ಪದಗಳೇ ಸಿಗುತ್ತಿಲ್ಲ. ನಾನು ಆ ರೀತಿಯ ಆಡಿ ಪಂದ್ಯವನ್ನು ಗೆಲ್ಲಿಸಿದ್ದೇನೆ ಎಂದು ನನಗೆ ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಹರ್ಷ ವ್ಯಕ್ತಪಡಿಸಿದರು. ಇದನ್ನೂ ಓದಿ: 9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

    ಎಲ್ಲಾ ಹೊರೆ ನನ್ನ ಮೇಲಿರುವುದರಿಂದ ನನಗೆ ಒತ್ತಡ ಇತ್ತು. ಆದರೆ ನನ್ನೊಂದಿಗೆ ವಿರಾಟ್, ಕೃನಾಲ್, ಭುವಿ ಇದ್ದಾರೆ.  ನಾವು ಚೆನ್ನಾಗಿ ಆಡಲು ಪ್ರಯತ್ನಿಸುತ್ತೇವೆ. ಮುಂದಿನ ಪಂದ್ಯದಲ್ಲೂ ಇದೇ ರೀತಿಯ ಪ್ರದರ್ಶನ ನೀಡಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.

    ಲಕ್ನೋ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 11.2 ಓವರ್‌ಗಳಲ್ಲಿ 123 ರನ್‌ಗಳಿಸಿದ್ದಾಗ 54 ರನ್‌(30 ಎಸೆತ, 10 ಬೌಂಡರಿ) ಹೊಡೆದಿದ್ದ ಕೊಹ್ಲಿ ಔಟಾಗಿದ್ದರು.  ನಂತರ ಮುರಿಯದ 5ನೇ ವಿಕೆಟಿಗೆ ಮಯಾಂಕ್‌ ಅಗರ್‌ವಾಲ್‌ ಮತ್ತು ಜಿತೇಶ್‌ ಶರ್ಮಾ 45 ಎಸೆತಗಳಲ್ಲಿ 107 ರನ್‌ ಜೊತೆಯಾಟವಾಡಿ ಪಂದ್ಯವನ್ನು ಗೆಲ್ಲಿಸಿದ್ದಾರೆ.

    107 ರನ್‌ಗಳ ಜೊತೆಯಾಟದಲ್ಲಿ ಮಯಾಂಕ್‌ 12 ಎಸೆತಗಳಲ್ಲಿ 20 ರನ್‌ ಹೊಡೆದರೆ ಜಿತೇಶ್‌ ಶರ್ಮಾ 85(33 ಎಸೆತ, 8 ಬೌಂಡರಿ, 6 ಸಿಕ್ಸ್‌) ಹೊಡೆಯುವ ಮೂಲಕ ಗೆಲುವಿನ ದಡ ಸೇರಿಸಿದರು.

  • 9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

    9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

    ಲಕ್ನೋ: 9 ವರ್ಷಗಳ ಬಳಿಕ ಆರ್‌ಸಿಬಿ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಕ್ವಾಲಿಫೈಯರ್‌ 1ನಲ್ಲಿ ಕಾಣಿಸಿಕೊಂಡಿದೆ.

    2016ರ ಆವೃತ್ತಿಯಲ್ಲಿ ಆರ್‌ಸಿಬಿ ಕ್ವಾಲಿಫೈಯರ್‌ 1ಗೆ ಎಂಟ್ರಿ ಕೊಟ್ಟಿತ್ತು. ಆಗ ಗುಜರಾತ್‌ ಲಯನ್ಸ್‌ (ಆಗ ಜಿಎಲ್‌) ಜೊತೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಕ್ವಾಲಿಫೈಯರ್‌ 1 ರಲ್ಲಿ ಸೆಣಸಿತ್ತು.

    2016ರಲ್ಲಿ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟಿದ್ದ ಆರ್‌ಸಿಬಿ ಗುಜರಾತ್‌ ಲಯನ್ಸ್‌ ವಿರುದ್ಧ ಗೆದ್ದು ಫೈನಲ್‌ ತಲುಪಿತ್ತು. ಈ ಆವೃತ್ತಿಯಲ್ಲಿ ಫೈನಲ್‌ನಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 8 ರನ್‌ಗಳಿಂದ ಸೋತು ನಿರಾಸೆ ಅನುಭವಿಸಿತ್ತು.

    ಅದಾದ ಬಳಿಕ ಈಗ ಮತ್ತೆ (2025) ಆರ್‌ಸಿಬಿ ಕ್ವಾಲಿಫೈಯರ್‌ 1 ಗೆ ಲಗ್ಗೆ ಇಟ್ಟಿದೆ. ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಮಂಗಳವಾರ ನಡೆದ ನಡೆದ ರೋಚಕ ಪಂದ್ಯದಲ್ಲಿ ಆರ್‌ಸಿಬಿ ಗೆದ್ದು ಬೀಗಿ ಪಾಯಿಂಟ್‌ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.

  • 9,000 ರನ್‌; ಆರ್‌ಸಿಬಿ ಪರ ಐತಿಹಾಸಿಕ ದಾಖಲೆ ಬರೆದ ಕಿಂಗ್ ಕೊಹ್ಲಿ

    9,000 ರನ್‌; ಆರ್‌ಸಿಬಿ ಪರ ಐತಿಹಾಸಿಕ ದಾಖಲೆ ಬರೆದ ಕಿಂಗ್ ಕೊಹ್ಲಿ

    ಲಕ್ನೋ: ಆರ್‌ಸಿಬಿ ಸೂಪರ್‌ಸ್ಟಾರ್‌ ವಿರಾಟ್‌ ಕೊಹ್ಲಿ (Virat Kohli) ಟಿ20ಯಲ್ಲಿ ಒಂದೇ ತಂಡಕ್ಕೆ 9,000 ರನ್‌ ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಐಪಿಎಲ್ 2025 ರ ಕೊನೆಯ ಲೀಗ್ ಹಂತದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಏಕಾನಾ ಕ್ರೀಡಾಂಗಣದಲ್ಲಿ ಬ್ಯಾಟಿಂಗ್ ಮಾಡುವಾಗ ಅವರು ಈ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: 7 ವರ್ಷಗಳ ಬಳಿಕ ಶತಕ ಸಿಡಿಸಿ ಪಲ್ಟಿ ಹೊಡೆದ ಪಂತ್‌

    2008 ರ ಐಪಿಎಲ್ ಉದ್ಘಾಟನಾ ಋತುವಿನಿಂದಲೂ ಕೊಹ್ಲಿ ಆರ್‌ಸಿಬಿ ಪರ ಆಟ ಆಡುತ್ತಿದ್ದಾರೆ. ಐಪಿಎಲ್‌ನಲ್ಲಿ ಫ್ರಾಂಚೈಸಿಗಾಗಿ 8,579 ರನ್‌ಗಳನ್ನು ಗಳಿಸಿದ್ದಾರೆ. ಈಗ ಸ್ಥಗಿತಗೊಂಡಿರುವ ಚಾಂಪಿಯನ್ಸ್ ಲೀಗ್ ಟಿ20 ಯಲ್ಲಿ 424 ರನ್‌ಗಳನ್ನು ಗಳಿಸಿದ್ದಾರೆ. ಎರಡೂ ಸೇರಿದರೆ 9000 ರನ್‌ ಪೂರೈಸಿದಂತಾಗುತ್ತದೆ.

    ಆರ್‌ಸಿಬಿ ಮತ್ತು ವಿರಾಟ್‌ ಕೊಹ್ಲಿಗೂ ಬಿಡಿಸಲಾರದ ನಂಟು. ಕ್ರಿಕೆಟ್ ಆಡುವವರೆಗೂ ತಾನು ಆರ್‌ಸಿಬಿ ಆಟಗಾರನಾಗಿರುತ್ತೇನೆ ಎಂದು ಕೊಹ್ಲಿ ಹಲವಾರು ಬಾರಿ ಘೋಷಿಸಿದ್ದಾರೆ. ಇದನ್ನೂ ಓದಿ: LSG vs RCB: ಜೋಶ್ ಹ್ಯಾಜಲ್‌ವುಡ್ ಇಂದು ಪಂದ್ಯಕ್ಕೆ ಮಿಸ್‌ ಆಗಿದ್ಯಾಕೆ?

    ಪಂದ್ಯವನ್ನು ಗೆದ್ದು ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆಯುವ ಆಶಯದೊಂದಿಗೆ ಆರ್‌ಸಿಬಿ 228 ರನ್‌ಗಳ ಬೃಹತ್ ಸ್ಕೋರ್ ಅನ್ನು ಬೆನ್ನಟ್ಟಿದೆ.

    ತಂಡವೊಂದರ ಪರ ಅತಿ ಹೆಚ್ಚು ರನ್‌ ಸಾಧನೆ ಮಾಡಿದ ಆಟಗಾರರು
    9004* – ಆರ್‌ಸಿಬಿ ಪರ ವಿರಾಟ್ ಕೊಹ್ಲಿ
    6060 – ಎಂಐ ಪರ ರೋಹಿತ್ ಶರ್ಮಾ
    5934 – ಹ್ಯಾಂಪ್‌ಶೈರ್ ಪರ ಜೇಮ್ಸ್ ವಿನ್ಸ್
    5528 – ಸಿಎಸ್‌ಕೆ ಪರ ಸುರೇಶ್ ರೈನಾ
    5314 – ಸಿಎಸ್‌ಕೆ ಪರ ಎಂಎಸ್ ಧೋನಿ

  • ಟಾಪ್‌-2ಗೆ ಫೈಟ್‌ | ಮಳೆಯಿಂದ ರದ್ದಾದ್ರೆ ಕ್ವಾಲಿಫೈಯರ್-1 ಆರ್‌ಸಿಬಿ ಎಂಟ್ರಿ!

    ಟಾಪ್‌-2ಗೆ ಫೈಟ್‌ | ಮಳೆಯಿಂದ ರದ್ದಾದ್ರೆ ಕ್ವಾಲಿಫೈಯರ್-1 ಆರ್‌ಸಿಬಿ ಎಂಟ್ರಿ!

    ಲಕ್ನೋ: ಇಂದು ಲಕ್ನೋ (Lucknow Super Giants) ವಿರುದ್ಧದ ಪಂದ್ಯ ಗೆದ್ದರೆ ಆರ್‌ಸಿಬಿ (RCB) ಕ್ವಾಲಿಫೈಯರ್-1ಕ್ಕೆ ಅರ್ಹತೆ ಪಡೆಯಲಿದೆ. ಒಂದು ವೇಳೆ ಮಳೆಯಿಂದ ರದ್ದಾದರೆ ಆರ್‌ಸಿಬಿ ರನ್‌ ರೇಟ್‌ ಆಧಾರದದಲ್ಲಿ ಅಗ್ರ-2 ರಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದೆ.

    ಹೌದು. ಈಗಾಗಲೇ ಪ್ಲೇ ಆಫ್‌ಗೆ 4 ತಂಡಗಳು ಪ್ರವೇಶ ಪಡೆದರೂ ಅಗ್ರ-2 ಸ್ಥಾನಕ್ಕೆ ನಡೆಯುತ್ತಿರುವ ಪೈಪೋಟಿ ಇನ್ನೂ ಕಡಿಮೆಯಾಗಿಲ್ಲ. 14 ಪಂದ್ಯಗಳಿಂದ 19 ಅಂಕ ಪಡೆದಿರುವ ಪಂಜಾಬ್‌ (Punjab Kings) ಈಗಾಗಲೇ ಕ್ವಾಲಿಫೈಯರ್‌-1ಗೆ ಅರ್ಹತೆ ಪಡೆದಿದೆ.

    ಕ್ವಾಲಿಫೈಯರ್‌ ಅರ್ಹತೆ ಪಡೆಯುವ ಎರಡನೇ ತಂಡಕ್ಕೆ ಆರ್‌ಸಿಬಿ ಮತ್ತು ಗುಜರಾತ್‌ ಮಧ್ಯೆ ಪ್ರಬಲ ಸ್ಪರ್ಧೆ ನಡೆಯುತ್ತಿದೆ. ಗುಜರಾತ್‌ (Gujarat Giants) ಸತತ 2 ಪಂದ್ಯಗಳನ್ನು ಸೋತರೆ ಆರ್‌ಸಿಬಿ ಹೈದರಾಬಾದ್‌ ವಿರುದ್ಧ ಸೋತಿದೆ. ಇದನ್ನೂ ಓದಿ: ಟೆಸ್ಟ್‌ ನಿವೃತ್ತಿ ಬಳಿಕ ಟೆಂಪಲ್‌ ರನ್‌; ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ವಿರುಷ್ಕಾ ದಂಪತಿ ಭೇಟಿ

    ಅಂಕಪಟ್ಟಿಯಲ್ಲಿ ಗುಜರಾತ್‌ 18 ಅಂಕ ಪಡೆದರೆ ಆರ್‌ಸಿಬಿ 17 ಅಂಕದೊಂದಿಗೆ ಮೂರನೇ ಸ್ಥಾನದಲ್ಲಿದೆ. ಅಗ್ರಸ್ಥಾನದಲ್ಲಿದ್ದ ಗುಜರಾತ್ ಟೈಟಾನ್ಸ್‌ನ ಸತತ 2 ಪಂದ್ಯಗಳನ್ನು ಸೋತ ಕಾರಣ ಆರ್‌ಸಿಬಿಗೆ ಅಗ್ರ-2 ಸ್ಥಾನಕ್ಕೇರುವ ಸುವರ್ಣಾವಕಾಶ ಒದಗಿಬಂದಿದೆ. ಒಂದು ವೇಳೆ ಲಕ್ನೋ ವಿರುದ್ಧ ಆರ್‌ಸಿಬಿ ಸೋತರೆ ಮುಂಬೈ ವಿರುದ್ಧ ಎಲಿಮಿನೇಟರ್‌ ಪಂದ್ಯವನ್ನು ಆಡಬೇಕಾಗುತ್ತದೆ.

    ರದ್ದಾದ್ದರೂ ಟಾಪ್‌-2
    ಆರ್‌ಸಿಬಿ ಉತ್ತಮ ರನ್‌ರೇಟ್‌ನಿಂದ ಗೆದ್ದರೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಬಹುದು. ಒಂದು ವೇಳೆ ಪಂದ್ಯ ಮಳೆಯಿಂದ ರದ್ದಾದರೂ, ಆರ್‌ಸಿಬಿಗೆ ನೆಟ್ ರನ್‌ರೇಟ್ ಆಧಾರದಲ್ಲಿ ಅಗ್ರ-2ರಲ್ಲಿ ಸ್ಥಾನ ಪಡೆಯಲಿದೆ.

    ಗುಜರಾತ್‌ 18 ಅಂಕದ ಜೊತೆಗೆ 0.254 ನೆಟ್ ರನ್‌ರೇಟ್ ಇದೆ. ಆರ್‌ಸಿಬಿ ಈಗ 17 ಅಂಕದ ಜೊತೆಗೆ 0.255 ರನ್‌ ರೇಟ್‌ ಹೊಂದಿದೆ. ಒಂದು ವೇಳೆ ಮಳೆ ಬಂದು ಪಂದ್ಯ ರದ್ದಾದರೆ 1 ಅಂಕ ಲಭಿಸಿದಾಗ ಆರ್‌ಸಿಬಿ ಅಂಕ 18 ಆಗುತ್ತದೆ. ಗುಜರಾತ್‌ಗೆ ಹೋಲಿಸಿದಾಗ 0.001 ರನ್‌ರೇಟ್‌ ಹೆಚ್ಚಿದೆ. ಅಂಕಗಳು ಸಮನಾದರೆ ನೆಟ್ ರನ್‌ರೇಟ್‌ನಲ್ಲಿ ಆರ್‌ಸಿಬಿ ಅಗ್ರ -2 ಸ್ಥಾನ ಪಡೆಯಲಿದೆ.

  • IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

    IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

    ಲಕ್ನೋ: 18ನೇ ಆವೃತ್ತಿಯ ಐಪಿಎಲ್‌ (IPL 2025) ಆವೃತ್ತಿ ಇನ್ನೇನು ಮುಕ್ತಾಯ ಘಟಕ್ಕೆ ತಲುಪುತ್ತಿದೆ. ಲೀಗ್‌ ಸುತ್ತಿನಲ್ಲಿ ಉತ್ತಮ ಪ್ರದರ್ಶನ ಕಾಯ್ದುಕೊಂಡಿದ್ದ ಆರ್‌ಸಿಬಿಗೆ (RCB) ಕೊನೆಕೊನೆಯಲ್ಲಿ ಮರ್ಮಾಘಾತ ಆಗಿದೆ.

    ಸನ್‌ ರೈಸರ್ಸ್‌ ಹೈದರಾಬಾದ್‌ (SRH) ವಿರುದ್ಧದ ಸೋಲಿನಿಂದ ಇದೀಗ ಲೀಗ್‌ ಸುತ್ತಿನಲ್ಲಿ 2ನೇ ಸ್ಥಾನವನ್ನೂ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಇದರಿಂದ ಟ್ರೋಫಿ ಗೆಲ್ಲುವ ಕನಸು ಕಂಡಿರುವ ಆರ್‌ಸಿಬಿಗೆ ದೊಡ್ಡ ನಷ್ಟ ಉಂಟಾಗುವ ಸಾಧ್ಯತೆ ಇದೆ. ಅದು ಹೇಗೆ ಅನ್ನೋದನ್ನ ತಿಳಿಯಬೇಕಿದ್ದರೆ ಮುಂದೆ ಓದಿ…

    18ನೇ ಆವೃತ್ತಿಯ ಐಪಿಎಲ್‌ ಪ್ಲೇ ಆಫ್‌ಗೆ ಗುಜರಾತ್‌, ಪಂಜಾಬ್‌, ಆರ್‌ಸಿಬಿ, ಮುಂಬೈ ತಂಡಗಳು ಈಗಾಗಲೇ ಲಗ್ಗೆಯಿಟ್ಟಿವೆ. ಈ ನಾಲ್ಕು ತಂಡಗಳಲ್ಲಿ ಈಗ ನಂ.1, ನಂ.2 ಪಟ್ಟಕ್ಕೆ ಹಣಾಹಣಿ ನಡೆಯುತ್ತಿದೆ. ಗುಜರಾತ್‌, ಆರ್‌ಸಿಬಿ, ಮುಂಬೈ ತಲಾ 13 ಪಂದ್ಯಗಳನ್ನಾಡಿದ್ದರೆ, ಪಂಜಾಬ್‌ ಕಿಂಗ್ಸ್‌ಗೆ ಮಾತ್ರ ಇನ್ನೂ 2 ಪಂದ್ಯಗಳು ಬಾಕಿಯಿವೆ.

    ನಂ.2 ಸ್ಥಾನವೂ ಕಳೆದುಕೊಳ್ಳುತ್ತಾ ಆರ್‌ಸಿಬಿ?
    ಸದ್ಯ ಸನ್‌ ರೈಸರ್ಸ್‌ ವಿರುದ್ಧದ ಸೋಲಿನಿಂದ 3ನೇ ಸ್ಥಾನಕ್ಕೆ ಕುಸಿದಿರುವ ಆರ್‌ಸಿಬಿಗೆ ಮತ್ತೆ 1 ಅಥವಾ 2ನೇ ಸ್ಥಾನಕ್ಕೇರುವ ಅವಕಾಶವಿದೆ. ಮುಂದಿನ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌, ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಸೋತು, ಮುಂಬೈ ವಿರುದ್ಧ ಕಡಿಮೆ ರನ್‌ ಅಂತರದಿಂದ ಗೆಲ್ಲಬೇಕು. ಗುಜರಾತ್‌ ಟೈಟಾನ್ಸ್‌ ಸಿಎಸ್‌ಕೆ ವಿರುದ್ಧ ಸೋಲಬೇಕು. ಇದೇ ವೇಳೆ ಮುಂಬೈ ಪಂಜಾಬ್‌ ವಿರುದ್ಧ ಕಡಿಮೆ ರನ್‌ ಅಂತರದಿಂದ ಸೋತು. ಆರ್‌ಸಿಬಿ ಲಕ್ನೋ ವಿರುದ್ಧ ಉತ್ತಮ ರನ್‌ ರೇಟ್‌ನಿಂದ ಗೆದ್ದರೆ, ಆಗ ಆರ್‌ಸಿಬಿ ಮೊದಲ ಅಥವಾ ಅಗ್ರಸ್ಥಾನಕ್ಕೇರುವ ಸಾಧ್ಯತೆಗಳಿವೆ. ಏಕೆಂದರೆ ನೆಟ್ ರನ್‌ರೇಟ್‌ನಲ್ಲಿ ಮುಂಬೈ ಇಂಡಿಯನ್ಸ್‌ ಎಲ್ಲರಿಗಿಂತ ಮುಂದಿದೆ. ಮುಂಬೈ +1.292 ನೆಟ್‌ರನ್‌ ರೇಟ್‌ ಹೊಂದಿದ್ದರೆ, ಗುಜರಾತ್‌ +0.602, ಪಂಜಾಬ್‌ +0.389, ಆರ್‌ಸಿಬಿ +0.255 ನೆಟ್‌ ರನ್‌ರೇಟ್‌ ಹೊಂದಿದೆ.

    ಮೊದಲೆರಡು ಸ್ಥಾನ ಕಸಿದರೆ ಆರ್‌ಸಿಬಿಗೆ ಆಗುವ ನಷ್ಟ ಏನು?
    ಸಾಮಾನ್ಯವಾಗಿ ಐಪಿಎಲ್‌ನಲ್ಲಿ ಮೊದಲ 2 ಸ್ಥಾನಗಳಲ್ಲಿರುವ ತಂಡಗಳಿಗೆ ಹೆಚ್ಚು ಲಾಭ. ಏಕೆಂದರೆ ಮೊದಲ ಕ್ವಾಲಿಫೈಯರ್‌ 1ನಲ್ಲಿ ಸೆಣಸಿದಾಗ ಗೆದ್ದ ತಂಡ ನೇರವಾಗಿ ಫೈನಲ್‌ ಪ್ರವೇಶಿಸಿದ್ರೆ, ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗಲಿದೆ. ಆದ್ರೆ 3 ಮತ್ತು 4ನೇ‌ ಸ್ಥಾನ ಪಡೆಯುವ ತಂಡಗಳಿಗೆ ಒಂದೊಂದೇ ಅವಕಾಶ ಇರುತ್ತದೆ. ಎಲಿಮಿನೇಟರ್‌ 1ನಲ್ಲಿ ಮೂರು ಮತ್ತು 4ನೇ ಸ್ಥಾನ ಪಡೆದ ತಂಡಗಳು ಸೆಣಸಲಿದ್ದು, ಸೋತ ತಂಡ ಮನೆಗೆ ಹೋಗಬೇಕಾಗುತ್ತದೆ. ಗೆದ್ದ ತಂಡ ಕ್ವಾಲಿಫೈಯರ್‌ 1ನಲ್ಲಿ ಸೋತ ತಂಡದ ಜೊತೆಗೆ ಕ್ವಾಲಿಫೈಯರ್‌-2ನಲ್ಲಿ ಸೆಣಸಬೇಕಾಗುತ್ತದೆ. ಕ್ವಾಲಿಫೈಯರ್‌ 2ನಲ್ಲಿ ಗೆದ್ದ ತಂಡ ಫೈನಲ್‌ ಪ್ರವೇಶಿಸಲಿದೆ. ಹೀಗಾಗಿ ಆರ್‌ಸಿಬಿಗೆ ಮೊದಲ 2 ಸ್ಥಾನಗಳಲ್ಲಿ ಕಾಯ್ದುಕೊಳ್ಳುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

    ಆರ್‌ಸಿಬಿಗೆ ಹೀನಾಯ ಸೋಲು:
    ಇನ್ನೂ ಶುಕ್ರವಾರ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ 42 ರನ್‌ಗಳ ಅಂತರದಿಂದ ಸೋಲು ಕಂಡಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದಿದೆ.

    .

  • ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

    ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

    – RCB ಅಭಿಮಾನಿ ಅಂದ್ರೆ ನೀನು ಎಂದ ನೆಟ್ಟಿಗರು

    ಲಕ್ನೋ: ಐಪಿಎಲ್‌ನಲ್ಲಿ ಆರ್‌ಸಿಬಿಗೆ (RCB) ಫ್ಯಾನ್ಸ್‌ ಕ್ರೇಜ್‌ ಜಾಸ್ತಿ. ಒಂದಲ್ಲ ಒಂದು ರೀತಿಯಲ್ಲಿ ತಮ್ಮ ಅಭಿಮಾನ ಪ್ರದರ್ಶಿಸಿ ಗಮನ ಸೆಳೆಯುವವರೇ ಹೆಚ್ಚು. ಅಂಥದ್ದೊಂದು ಪ್ರಸಂಗ ಲಕ್ನೋದಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್‌ ಪಂದ್ಯದ ವೇಳೆ ನಡೆದಿದೆ.

    ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಅಭಿಮಾನಿಯೊಬ್ಬ ಪ್ರದರ್ಶಿಸಿದ ಪ್ಲೆಕಾರ್ಡ್‌ ಗಮನ ಸೆಳೆದಿದೆ. ‘ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲುವವರೆಗೂ ನಾನು ಮದುವೆಯಾಗಲ್ಲ’ ಎಂದು ಪ್ಲೆಕಾರ್ಡ್‌ನ್ನು ಅಭಿಮಾನಿಯೊಬ್ಬ ಪ್ರದರ್ಶಿಸಿದ್ದಾನೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಿಸ್‌.. ಕೊಹ್ಲಿಗೆ ಲಕ್ನೋದಲ್ಲಿ ಸಿಕ್ತು ಆರ್‌ಸಿಬಿ ಅಭಿಮಾನಿಗಳಿಂದ ‘ಟೆಸ್ಟ್‌ ಫೇರ್‌ವೆಲ್‌’

    ಈತನ ಅಭಿಮಾನಕ್ಕೆ ಇತರೆ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿಜವಾದ ಆರ್‌ಸಿಬಿ ಅಭಿಮಾನಿ ನೀನು ಎಂದು ನೆಟ್ಟಿಗರು ಕಾಮೆಂಟ್‌ ಮಾಡುತ್ತಿದ್ದಾರೆ.

    ಈ ರೀತಿಯ ಪ್ರಸಂಗಗಳು ನಡೆಯುತ್ತಿರುವುದು ಇದೇ ಮೊದಲಲ್ಲ. 2022ರ ಸಂದರ್ಭದಲ್ಲೂ ಇಂತಹದ್ದೊಂದು ಸನ್ನಿವೇಶ ನಡೆದಿತ್ತು. ಆರ್‌ಸಿಬಿ ಟ್ರೋಪಿ ಗೆಲ್ಲೋವರೆಗೂ ಮದುವೆಯಾಗಲ್ಲ ಅಂತ ಮಹಿಳೆಯೊಬ್ಬರು ಪ್ಲೆಕಾರ್ಡ್‌ ಪ್ರದರ್ಶಿಸಿದ್ದರು.

    2025ರ ಐಪಿಎಲ್‌ ಟೂರ್ನಿಯಲ್ಲಿ ಆರ್‌ಸಿಬಿ ಉತ್ತಮ ಪ್ರದರ್ಶನ ತೋರಿ ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟಿದೆ. ಪಾಯಿಂಟ್‌ ಪಟ್ಟಿಯಲ್ಲಿ ಈಗ ಮೂರನೇ ಸ್ಥಾನದಲ್ಲಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಆರ್‌ಸಿಬಿ 42 ರನ್‌ಗಳ ಸೋಲು ಕಂಡಿತು. ಪ್ಲೇ-ಆಫ್‌ ಪ್ರವೇಶಿಸಿರುವ ಆರ್‌ಸಿಬಿ ಈ ಬಾರಿಯಾದ್ರೂ ಕಪ್‌ ಗೆಲ್ಲುತ್ತಾ ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ. ಇದನ್ನೂ ಓದಿ: ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು