Tag: rcb

  • ಸಿಎಸ್‌ಕೆಗೆ ಗುಡ್‌ನ್ಯೂಸ್‌, ಆರ್‌ಸಿಬಿಗೆ ಬ್ಯಾಡ್‌ ನ್ಯೂಸ್‌ – ಮುಂದಿನ 5 ದಿನ ಬೆಂಗ್ಳೂರಿನಲ್ಲಿ ಮಳೆ ವಾತಾವರಣ ಹೇಗಿದೆ?

    ಸಿಎಸ್‌ಕೆಗೆ ಗುಡ್‌ನ್ಯೂಸ್‌, ಆರ್‌ಸಿಬಿಗೆ ಬ್ಯಾಡ್‌ ನ್ಯೂಸ್‌ – ಮುಂದಿನ 5 ದಿನ ಬೆಂಗ್ಳೂರಿನಲ್ಲಿ ಮಳೆ ವಾತಾವರಣ ಹೇಗಿದೆ?

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಮಹಾಕಾಳಗ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 18) ನಡೆಯಲಿದೆ. ಈ ಹೈವೋಲ್ಟೇಜ್‌ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕಾದುಕುಳಿತಿರುವ ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳಿಗೆ (RCB Fans) ಮಳೆ ನಿರಾಸೆ ಮೂಡಿಸಲಿದೆಯೇ ಎಂಬ ಆತಂಕ ಶುರುವಾಗಿದೆ.

    ಹೌದು. ಬೆಂಗಳೂರಿನಲ್ಲಿ (Bengaluru) ಮುಂದಿನ 5 ದಿನಗಳ ಕಾಲವೂ ಭಾರೀ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಶನಿವಾರ ನಡೆಯಲಿರುವ ಆರ್‌ಸಿಬಿ VS ಚೆನ್ನೈ (RCB vs CSK) ನಡುವಿನ ನಾಕೌಟ್‌ ಪಂದ್ಯಕ್ಕೆ ಅಡ್ಡಿ ಉಂಟಾಗಲಿದೆ ಎಂದು ಹೇಳಲಾಗಿದೆ.

    5 ದಿನಗಳ ವಾತಾವರಣ ಹೇಗಿರಲಿದೆ?
    ಬೆಂಗಳೂರಿನಲ್ಲಿ ಶುಕ್ರವಾರ ಗರಿಷ್ಠ 27° ಕನಿಷ್ಠ 21° ಸೆಲ್ಸಿಯಸ್‌ ತಾಪಮಾನ ಇರಲಿದೆ. ಹಾಗೆಯೇ ಶನಿವಾರ ಗರಿಷ್ಠ 28° – ಕನಿಷ್ಠ 22°, ಭಾನುವಾರ ಗರಿಷ್ಠ 28° – ಕನಿಷ್ಠ 22°, ಸೋಮವಾರ ಗರಿಷ್ಠ 28° – ಕನಿಷ್ಠ 21°, ಮಂಗಳವಾರ ಗರಿಷ್ಠ 29° – ಕನಿಷ್ಠ 21° ಸೆಲ್ಸಿಯಸ್‌ ತಾಪಮಾನ ಇರಲಿದ್ದು, ಐದು ದಿನವೂ ಭಾರೀ ಮಳೆಯಾಗಲಿದೆ (Heavy Rain). ಶನಿವಾರ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಾಗಿಯೇ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆರ್‌ಸಿಬಿಗೆ ಈ ಪಂದ್ಯ ನಿರ್ಣಾಯಕವಾಗಿರುವುದರಿಂದ ರಾತ್ರಿ 8 ರಿಂದ 12 ಗಂಟೆವರೆಗೆ ಮಳೆ ಬಿಡುವುಕೊಟ್ಟರೆ ಪೂರ್ಣ ಪಂದ್ಯ ನಡೆಯಲಿದೆ.

    ಪಂದ್ಯವಾಡದೆಯೇ ಪ್ಲೇ ಆಫ್‌ ತಲುಪುತ್ತಾ ಸಿಎಸ್‌ಕೆ?
    13 ಪಂದ್ಯಗಳಲ್ಲಿ 7 ರಲ್ಲಿ ಗೆಲುವು ಸಾಧಿಸಿರುವ ಸಿಎಸ್‌ಕೆ ಉತ್ತಮ ನೆಟ್‌ ರನ್‌ರೇಟ್‌ನೊಂದಿಗೆ 3ನೇ ಸ್ಥಾನದಲ್ಲಿದೆ. ಒಂದು ವೇಳೆ ಮುಂದಿನ ಪಂದ್ಯ ಮಳೆಯಿಂದ ರದ್ದಾದರೂ ಸಿಎಸ್‌ಕೆ ಒಂದು ಅಂಕ ಪಡೆದು ಪ್ಲೇ ಆಫ್‌ ತಲುಪಲಿದೆ. ಆದ್ರೆ 13 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ 6ನೇ ಸ್ಥಾನದಲ್ಲಿದೆ. ಒಂದು ವೇಳೆ ಆರ್‌ಸಿಬಿ ರನ್‌ ಚೇಸ್‌ ಮಾಡಿದರೆ 18.1 ಓವರ್‌ಗಳ ಒಳಗೆ ಗೆಲ್ಲಬೇಕು. ಮೊದಲು ಬ್ಯಾಟ್‌ ಮಾಡಿದರೆ ಕನಿಷ್ಠ 18 ರನ್‌ಗಳಿಂದ ಗೆಲ್ಲಬೇಕು. ಆಗಷ್ಟೇ ಆರ್‌ಸಿಬಿಗೆ ಗೆಲ್ಲುವ ಅವಕಾಶವಿದೆ ಎಂದು ಕ್ರಿಕೆಟ್‌ ತಜ್ಞರು ಅಂದಾಜಿಸಿದ್ದಾರೆ. ಮಳೆಯಿಂದ ಪಂದ್ಯ ರದ್ದಾದರೆ ಒಂದು ಅಂಕದೊಂದಿಗೆ ಪ್ಲೇ ಆಫ್‌ ನಿಂದ ಹೊರಗುಳಿಯಲಿದೆ.

    ʻಸಬ್‌ ಏರ್‌ ಸಿಸ್ಟಮ್‌ʼ ಕೈ ಹಿಡಿಯುತ್ತಾ?
    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ ಮಳೆಯಾದರೂ, ಮಳೆ ನಿಂತ ನಂತರ ಕೆಲವೇ ನಿಮಿಷಗಳಲ್ಲಿ ಪಂದ್ಯಗಳು ಆರಂಭಿಸಬಹುದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರೀ ಮಳೆ ಸುರಿದರೆ ಕೇವಲ 7 ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು. ಕ್ರೀಡಾಂಗಣದಲ್ಲಿ ಸಬ್ ಏರ್ ಸಿಸ್ಟಂ ಅಳವಡಿಕೆಯಾಗಿದ್ದು ಕೂಡಲೇ ನೀರನ್ನು ಹೊರ ಹಾಕಲಾಗುತ್ತದೆ. ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನ ಒಣಗಿಸುವ ವ್ಯವಸ್ಥೆಯಿದೆ. 4.5 ಕೋಟಿ ರೂ. ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಆದ್ದರಿಂದ ಮಳೆಯು 9 ಗಂಟೆ ವೇಳೆಗೆ ಬಿಡುವು ಕೊಟ್ಟರು ಕನಿಷ್ಠ ಓವರ್‌ಗಳ ಮಿತಿಯಲ್ಲಿ 9:30 ರಿಂದ ಪಂದ್ಯ ಆರಂಭಿಸಬಹುದಾಗಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ.

  • ಈ ಸಾಧನೆ ಮಾಡಿಲ್ಲ ಅಂತ ನಾಳೆದಿನ ಚಿಂತಿಸಬಾರದು – ನಿವೃತ್ತಿ ಬಗ್ಗೆ ಸುಳಿವು ಕೊಟ್ರಾ ಕಿಂಗ್‌ ಕೊಹ್ಲಿ?

    ಈ ಸಾಧನೆ ಮಾಡಿಲ್ಲ ಅಂತ ನಾಳೆದಿನ ಚಿಂತಿಸಬಾರದು – ನಿವೃತ್ತಿ ಬಗ್ಗೆ ಸುಳಿವು ಕೊಟ್ರಾ ಕಿಂಗ್‌ ಕೊಹ್ಲಿ?

    ಬೆಂಗಳೂರು: ರನ್‌ ಮಿಷಿನ್‌, ಕ್ರಿಕೆಟ್‌ ಲೋಕದ ಕಿಂಗ್‌ ಎಂದೇ ಗುರುತಿಸಿಕೊಂಡಿರುವ ಆರ್‌ಸಿಬಿ (RCB) ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ (Virat Kohli) ಅವರು ನೀಡಿದ ಹೇಳಿಕೆಯೊಂದು ಭಾರೀ ಸಂಚಲನ ಸೃಷ್ಟಿಸಿದೆ.

    ಹೌದು.. ವಿಶೇಷ ಸಂದರ್ಶನವೊಂದರಲ್ಲಿ ಕೊಹ್ಲಿ ಮಾತನಾಡುತ್ತಾ, ಒಬ್ಬ ಕ್ರೀಡಾಪಟುವಾದ ಮೇಲೆ ಇಂದಲ್ಲ ನಾಳೆ, ತಮ್ಮ ವೃತ್ತಿಜೀವನದ ಅಂತಿಮ ದಿನವನ್ನು ನೋಡಲೇಬೇಕು ಎಂದು ತಮ್ಮ ನಿವೃತ್ತಿಯ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ. ಇದು ಕೋಟ್ಯಂತರ ಕೊಹ್ಲಿ ಅಭಿಮಾನಿಗಳನ್ನು (Kohli Fans) ಆತಂಕಕ್ಕೆ ದೂಡಿದೆ.

    ಸಂದರ್ಶನದಲ್ಲಿ ಕೊಹ್ಲಿ ಹೇಳಿದ್ದೇನು?
    ಏಕೆ ಇಷ್ಟೊಂದು ಹಸಿವಿನಿಂದ ಓಡುತ್ತಿದ್ದೀರಿ ಎಂದು ಸಂದರ್ಶಕರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, ಒಬ್ಬ ಕ್ರೀಡಾಪಟು ಇಂದಲ್ಲ ನಾಳೆ ತಮ್ಮ ವೃತ್ತಿಜೀವನದ ಅಂತಿಮ ದಿನಾಂಕ ನೋಡಲೇಬೇಕು. ಆದ್ದರಿಂದಲೇ ನಾನು ಈ ರೀತಿ ಹೆಚ್ಚು ಶ್ರಮವಹಿಸಿ ಕೆಲಸ ಮಾಡುತ್ತಿದ್ದೇನೆ. ನೀವೃತ್ತಿಯ ಬಳಿಕ ನಾನು ಸಾಧನೆ ಮಾಡದರ ಕುರಿತು ಚಿಂತಿಸಬಾರದು. ಅಂತಹ ಪರಿಸ್ಥಿತಿ ನನಗೆ ಬರಲೇಬಾರದು. ಅದಕ್ಕಾಗಿ ನಾನು ಇಂದು ಅದ್ಭುತ ಆಟ ಆಡಲೇಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೈವೋಲ್ಟೇಜ್ ಕದನ ವಾಷ್‌ಔಟ್‌ ಆಗುವ ಸಾಧ್ಯತೆ – ಆರ್‌ಸಿಬಿ ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ!

    ಮುಂದುವರಿದು, ನನ್ನ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಬಳಿಕ ಯಾವುದೇ ವಿಷಾದ ನನ್ನನ್ನು ಕಾಡಬಾರದು. ಖಂಡಿತವಾಗಿ ಆ ರೀತಿ ನಾನು ಮಾಡಿಕೊಳ್ಳುವುದಿಲ್ಲ ಎಂದು ನನಗೆ ಖಾತ್ರಿಯಿದೆ. ಒಮ್ಮೆ ನಾನು ಕ್ರಿಕೆಟ್​ನಿಂದ ದೂರ ಸರಿದರೆ ಖಂಡಿತ ಮತ್ತೆ ನೀವು ನನ್ನನ್ನು ನೋಡೋದಿಲ್ಲ. ನಾನು ಆಡುವ ಕೊನೆವರೆಗೂ ನನ್ನಲ್ಲಿರುವ ಬೆಸ್ಟ್​ ಅನ್ನು ನೀಡಲು ಬಯಸುತ್ತೇನೆ. ಅದೊಂದೇ ನನ್ನನ್ನು ಮುಂದಕ್ಕೆ ಕೊಂಡೊಯ್ಯಲು ಸಾಧ್ಯ ಎಂದು ಹೇಳಿದ್ದಾರೆ.

    2022ರ ಟಿ20 ವಿಶ್ವಕಪ್‌ ಬಳಿಕ ಟಿ20ಗೆ ಹಾಗೂ 2023ರ ಏಕದಿನ ವಿಶ್ವಕಪ್‌ ಬಳಿಕ ಏಕದಿನ ಕ್ರಿಕೆಟ್‌ಗೆ ಕೊಹ್ಲಿ ವಿದಾಯ ಹೇಳುತ್ತಾರೆ ಎಂಬ ಮಾತುಗಳು ಕ್ರಿಕೆಟ್‌ ತಜ್ಞರಿಂದ ಕೇಳಿಬಂದಿತ್ತು. ಆದ್ರೆ ಈಗ ಕೊಹ್ಲಿ ಅವರ ಈ ಹೇಳಿಕೆ ಅಭಿಮಾನಿಗಳಲ್ಲಿ ಆತಂಕ ಹುಟ್ಟಿಸಿದೆ.

    ಸದ್ಯ‌ 2024ರ ಐಪಿಎಲ್‌ ಆವೃತ್ತಿಯಲ್ಲಿ ಕೊಹ್ಲಿ ಆರೆಂಜ್‌ ಕ್ಯಾಪ್‌ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕಳೆದ 13 ಪಂದ್ಯಗಳಲ್ಲಿ 66.10 ಸರಾಸರಿ, 155.16 ಸ್ಟ್ರೈಕ್‌ರೇಟ್‌ನೊಂದಿಗೆ 661 ರನ್‌ ಗಳಿಸಿದ್ದಾರೆ. ಇದರಲ್ಲಿ 1 ಶತಕ ಹಾಗೂ 5 ಅರ್ಧಶತಕಗಳೂ ಸೇರಿವೆ. ಇದನ್ನೂ ಓದಿ: ಟಿ20 ವಿಶ್ವಕಪ್‌: ಸ್ಕಾಟ್ಲೆಂಟ್‌ ತಂಡದ ಜೆರ್ಸಿಯಲ್ಲಿ ಕರ್ನಾಟಕದ ‘ನಂದಿನಿ’ ಬ್ರ್ಯಾಂಡ್‌ ಲೋಗೋ 

  • ಹೈವೋಲ್ಟೇಜ್ ಕದನ ವಾಷ್‌ಔಟ್‌ ಆಗುವ ಸಾಧ್ಯತೆ – ಆರ್‌ಸಿಬಿ ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ!

    ಹೈವೋಲ್ಟೇಜ್ ಕದನ ವಾಷ್‌ಔಟ್‌ ಆಗುವ ಸಾಧ್ಯತೆ – ಆರ್‌ಸಿಬಿ ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ!

    – ಬೆಂಗಳೂರಿನಲ್ಲಿ ಮಳೆಯ ವಾತಾವರಣ ಹೇಗಿದೆ?
    – ʻಸಬ್ ಏರ್ ಸಿಸ್ಟಂʼ ಒಂದೇ ಆಧಾರ

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 18) ನಡೆಯಲಿರುವ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಹೆಚ್ಚಾಗಿದೆ.

    ಕಳೆದ ಒಂದು ವಾರದಿಂದಲೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಶನಿವಾರವೂ ಗರಿಷ್ಠ 28°, ಕನಿಷ್ಠ 21° ಸೆಲ್ಸಿಯಸ್‌ ತಾಪಮಾನ ಇರಲಿದೆ. ಒಂದು ವೇಳೆ ಶನಿವಾರವೂ ನಗರದಲ್ಲಿ ಮಳೆಯಾದರೆ, ಪಂದ್ಯ ರದ್ದಾಗಲಿದ್ದು, ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ಸಿಗಲಿದೆ. ಇದರಿಂದ ಹಾಲಿ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಪ್ಲೇ ಆಫ್‌ ಪ್ರವೇಶಿಸಲಿದೆ. ಹಾಗಾಗಿ ಮೇ 18 ರಂದು ಯಾವುದೇ ಕಾರಣಕ್ಕೂ ಮಳೆಯಾಗದಿರಲಿ ಎಂದು ಆರ್‌ಸಿಬಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನ- ಅರ್ಹತೆಗಳೇನು?

    ಆರ್‌ಸಿಬಿ ತಂಡ ಈವರೆಗೆ ಆಡಿದ 13 ಪಂದ್ಯಗಳಿಂದ 12 ಅಂಕಗಳನ್ನು ಕಲೆಹಾಕಿ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಉತ್ತಮ ನೆಟ್‌ ರನ್‌ರೇಟ್‌ ಆರ್‌ಸಿಬಿ ಕೈ ಹಿಡಿದಿದ್ದು, ಪ್ಲೇ ಆಫ್ಸ್‌ ಪ್ರವೇಶಿಸಲು ಎದುರು ನೋಡುತ್ತಿದೆ. ಆದ್ರೆ ಆರ್‌ಸಿಬಿಗೆ ಮ್ಯಾಜಿಕ್‌ ನಂಬರ್‌ 14 ಅಂಕಗಳನ್ನು ಸಂಪಾದಿಸಲು ಡಿಫೆಂಡಿಂಗ್‌ ಚಾಂಪಿಯನ್ಸ್‌ ಸಿಎಸ್‌ಕೆ ಎದುರು ಜಯಗಳಿಸಲೇಬೇಕಿದೆ. ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ಪಾದ ಮುಟ್ಟಿ ನಮಸ್ಕರಿಸಿದ ಅಭಿಮಾನಿ; ಹೃದಯ ಶ್ರೀಮಂತಿಕೆ ಮೆರೆದ ಧೋನಿ – ವೀಡಿಯೋ ವೈರಲ್‌!

    ಒಂದು ವೇಳೆ ಆರ್‌ಸಿಬಿ ರನ್‌ ಚೇಸ್‌ ಮಾಡಿದರೆ 18.1 ಓವರ್‌ಗಳ ಒಳಗೆ ಗೆಲ್ಲಬೇಕು. ಮೊದಲು ಬ್ಯಾಟ್‌ ಮಾಡಿದರೆ ಕನಿಷ್ಠ 18 ರನ್‌ಗಳಿಂದ ಗೆಲ್ಲಬೇಕು. ಈ ಸುಲಭ ಲೆಕ್ಕಾಚಾರದ ಗೆಲುವು ಕೂಡ ಆರ್‌ಸಿಬಿಗೆ ಅಗತ್ಯವಿದೆ. ಆದರೆ, ಆರ್‌ಸಿಬಿ ತಂಡದ ಎಲ್ಲಾ ಲೆಕ್ಕಾಚಾರಗಳಿಗೆ ಮಳೆ ತಣ್ಣೀರೆರಚುವ ಸಾಧ್ಯತೆ ಇದೆ. ಹವಾಮಾನ ವರದಿ ಪ್ರಕಾರ ಶನಿವಾರ ಸಂಜೆ 5-11ರ ವರೆಗೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಪಂದ್ಯ ಮಳೆಗೆ ಬಲಿಯಾದ್ರೆ ಸಿಎಸ್‌ಕೆ 15 ಅಂಕಗಳೊಂದಿಗೆ ಪ್ಲೇ ಆಫ್‌ ಪ್ರವೇಶಿಸಲಿದೆ.

    ʻಸಬ್‌ ಏರ್‌ ಸಿಸ್ಟಮ್‌ʼ ಒಂದೇ ಆಧಾರ:
    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ ಮಳೆಯಾದರೂ, ಮಳೆ ನಿಂತ ನಂತರ ಕೆಲವೇ ನಿಮಿಷಗಳಲ್ಲಿ ಪಂದ್ಯಗಳು ಆರಂಭಿಸಬಹುದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರೀ ಮಳೆ ಸುರಿದರೆ ಕೇವಲ 7 ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು. ಕ್ರೀಡಾಂಗಣದಲ್ಲಿ ಸಬ್ ಏರ್ ಸಿಸ್ಟಂ ಅಳವಡಿಕೆಯಾಗಿದ್ದು ಕೂಡಲೇ ನೀರನ್ನು ಹೊರ ಹಾಕಲಾಗುತ್ತದೆ. ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನ ಒಣಗಿಸುವ ವ್ಯವಸ್ಥೆಯಿದೆ. 4.5 ಕೋಟಿ ರೂ. ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಆದ್ದರಿಂದ ಮಳೆಯು 9 ಗಂಟೆ ವೇಳೆಗೆ ಬಿಡುವು ಕೊಟ್ಟರು ಕನಿಷ್ಠ ಓವರ್‌ಗಳ ಮಿತಿಯಲ್ಲಿ 9:30 ರಿಂದ ಪಂದ್ಯ ಆರಂಭಿಸಬಹುದಾಗಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ವಿಚಿತ್ರ ಕಾರಣಕ್ಕೆ ಔಟಾದ ಜಡೇಜಾ – ಏನಿದು ರೂಲ್ಸ್ 37.1.4? 

  • ನಾವಿಕನಿಲ್ಲದ ದೋಣಿಯಲ್ಲಿ ಮುಳುಗಿದ ಡೆಲ್ಲಿ – ಆರ್‌ಸಿಬಿಗೆ 47 ರನ್‌ಗಳ ಜಯ; ಪ್ಲೇ ಆಫ್‌ ಕನಸು ಜೀವಂತ!

    ನಾವಿಕನಿಲ್ಲದ ದೋಣಿಯಲ್ಲಿ ಮುಳುಗಿದ ಡೆಲ್ಲಿ – ಆರ್‌ಸಿಬಿಗೆ 47 ರನ್‌ಗಳ ಜಯ; ಪ್ಲೇ ಆಫ್‌ ಕನಸು ಜೀವಂತ!

    ಬೆಂಗಳೂರು: ರಿಷಭ್‌ ಪಂತ್‌ ಅವರ ಅನುಪಸ್ಥಿತಿಯಲ್ಲಿ ಆರ್‌ಸಿಬಿ ವಿರುದ್ಧ ಅಖಾಡಕ್ಕಿಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಹೀನಾಯ ಸೋಲಿಗೆ ತುತ್ತಾಗಿದೆ. ಆದ್ರೆ ತವರಿನಲ್ಲೇ 47 ರನ್‌ಗಳ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ಪ್ಲೇ ಆಫ್‌ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

    ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 9 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತ್ತು. ಹೊಸ ನಾಯಕನ ನೇತೃತ್ವದಲ್ಲಿ ಸ್ಪರ್ಧಾತ್ಮಕ ರನ್‌ಗಳ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 19.1 ಓವರ್‌ಗಳಲ್ಲಿ 140 ರನ್‌ಗಳಿಗೆ ಸರ್ವಪತನ ಕಂಡಿತು.

    188 ರನ್‌ಗಳ ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಆರಂಭದಲ್ಲೇ ಆಘಾತ ಎದುರಿಸಿತು. ಸ್ಫೋಟಕ ಪ್ರದರ್ಶನ ನೀಡಲು ಮುಂದಾದ ಆರಂಭಿಕ ಆಟಗಾರ ಡೇವಿಡ್‌ ವಾರ್ನರ್‌ 1 ರನ್‌ಗಳಿಗೆ ಔಟಾದರು. ಈ ಬೆನ್ನಲ್ಲೇ ಅಭಿಷೇಕ್‌ ಪೋರೆಲ್‌ 2 ರನ್‌ಗಳಿಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಇನ್ನೂ 8 ಎಸೆತಗಳಲ್ಲಿ 21 ರನ್‌ (2 ಸಿಕ್ಸರ್‌, 2 ಬೌಂಡರಿ) ಬಾರಿಸಿದ್ದ ಫ್ರೆಸರ್‌ ಮೆಕ್‌ಗಾರ್ಕ್‌ ಸಹ ವಿಕೆಟ್‌ ಒಪ್ಪಿಸಿದರು. ಮೊದಲ 6 ಓವರ್‌ಗಳಲ್ಲಿ 54 ರನ್‌ ಗಳಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

    ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ಡೆಲ್ಲಿ ತಂಡಕ್ಕೆ ಟ್ರಿಸ್ಟಾನ್ಸ್‌ ಸ್ಟಬ್ಸ್‌ ಬೂಸ್ಟ್‌ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿ ತಂಡ ಇತ್ತು. ಆದ್ರೆ ಅನಗತ್ಯವಾಗಿ ಒಂದು ರನ್‌ ಕದಿಯಲು ಯತ್ನಿಸಿ ರನೌಟ್‌ಗೆ ತುತ್ತಾದರು. ಇದು ಡೆಲ್ಲಿ ತಂಡಕ್ಕೆ ತುಂಬಲಾರದ ನಷ್ಟವಾಯಿತು. ಅಲ್ಲದೇ ಮಧ್ಯಮ ಕ್ರಮಾಂಕದಲ್ಲಿ ನಾಯಕ ರಿಷಭ್‌ ಪಂತ್‌ ಅವರ ಅನುಪಸ್ಥಿತಿ ಸಹ ಡೆಲ್ಲಿ ತಂಡವನ್ನು ಕಾಡಿತು.

    ಇನ್ನೂ ಏಕಾಂಗಿ ಹೋರಾಟ ನಡೆಸಿದ ನಾಯಕ ಅಕ್ಷರ್‌ ಪಟೇಲ್‌ 39 ಎಸೆತಗಳಲ್ಲಿ 57 ರನ್‌ (3 ಸಿಕ್ಸರ್‌, 5 ಬೌಂಡರಿ) ಗಳಿಸಿದ್ದು ಬಿಟ್ಟರೆ ಉಳಿದ ಯಾರೊಬ್ಬರು ಕ್ರೀಸ್‌ನಲ್ಲಿ ಉಳಿಯದ ಕಾರಣ ಆರ್‌ಸಿಬಿ ಸುಲಭ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಇನ್ನುಳಿದಂತೆ ಶಾಯ್‌ ಹೋಪ್‌ 29 ರನ್‌, ಕುಮಾರ್‌ ಕುಮಾರ್‌ ಕುಶಾರ್ಗ 2 ರನ್‌, ಸ್ಟಬ್ಸ್‌ 3 ರನ್‌, ರಸಿಕ್‌ ಸಲಾಮ್‌ 10 ರನ್‌, ಮುಕೇಶ್‌ ಕುಮಾರ್‌ 3 ರನ್‌, ಕುಲ್ದೀಪ್‌ ಯಾದವ್‌ 3 ರನ್‌ ಗಳಿಸಿ ಔಟಾದರು.

    ಇದಕ್ಕೂ ಮುನ್ನ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಆರ್‌ಸಿಬಿ ಆಟಗಾರರು 200 ರನ್‌ಗಳನ್ನು ತಲುಪುವಲ್ಲಿ ವಿಫಲರಾದರು. ರಜತ್ ಪಾಟೀದಾರ್ ಸ್ಫೋಟಕ ಅರ್ಧಶತಕ, ವಿಲ್ ಜ್ಯಾಕ್ಸ್, ವಿರಾಟ್ ಕೊಹ್ಲಿ ಸ್ಫೋಟಲ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 9 ವಿಕೆಟ್ ಕಳೆದುಕೊಂಡು 187 ರನ್ ಬಾರಿಸಿತ್ತು. ಈ ಮೂಲಕ ಡೆಲ್ಲಿ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿತ್ತು.

    ಮೊದಲಿಗೆ ಆರ್‌ಸಿಬಿ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ನಾಯಕ ಫಾಫ್ ಡು ಪ್ಲೆಸಿಸ್ ಕೇವಲ 6 ರನ್ ಗಳಿಸಿ ಮುಕೇಶ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಕೇವಲ 13 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 27 ರನ್ ಸಿಡಿಸಿದ ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು.

    ಅಬ್ಬರಿಸಿದ ಪಾಟೀದಾರ್-ಜ್ಯಾಕ್ಸ್:
    ಕೇವಲ 36 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಆರ್‌ಸಿಬಿ ತಂಡಕ್ಕೆ 3ನೇ ವಿಕೆಟ್‌ಗೆ ರಜತ್ ಪಾಟೀದಾರ್ ಹಾಗೂ ವಿಲ್ ಜ್ಯಾಕ್ಸ್ ಕೇವಲ 53 ಎಸೆತಗಳಲ್ಲಿ 88 ರನ್‌ಗಳ ಜೊತೆಯಾಟ ನೀಡುವ ಮೂಲಕ ಬಲ ತುಂಬಿದರು. ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಪಾಟೀದಾರ್ ಕೇವಲ 29 ಎಸೆತಗಳಲ್ಲೇ 5ನೇ ಅರ್ಧಶತಕ ಸಿಡಿಸಿದರು. ಅಂತಿಮವಾಗಿ ಪಾಟೀದಾರ್ 32 ಎಸೆತಗಳಲ್ಲಿ 52 ರನ್ (3 ಸಿಕ್ಸರ್‌, 3 ಬೌಂಡರಿ) ಚಚ್ಚಿ ಔಟಾದರು. ಈ ಬೆನ್ನಲ್ಲೇ ವಿಲ್ ಜ್ಯಾಕ್ಸ್‌ 41 ರನ್ (29 ಎಸೆತ, 3 ಬೌಂಡರಿ, 2 ಸಿಕ್ಸರ್) ಬಾರಿಸಿ ಪೆವಿಲಿಯನ್‌ ಹಾದಿ ಹಿಡಿದರು. ಬಳಿಕ ಕ್ರೀಸ್‌ಗಿಳಿದ ಕ್ಯಾಮರೂನ್‌ ಗ್ರೀನ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. 24 ಎಸೆತ ಎದುರಿಸಿದ ಗ್ರೀನ್‌ ಅಜೇಯ 32 ರನ್ (1 ಬೌಂಡರಿ, 2 ಸಿಕ್ಸರ್) ಬಾರಿಸಿದರು.

    ಇನ್ನು ಮಧ್ಯಮ ಕ್ರಮಾಂಕದಲ್ಲಿ ಆರ್‌ಸಿಬಿ ಭರ್ಜರಿಯಾಗಿ ರನ್ ಗಳಿಸಿತಾದರೂ ಉತ್ತಮವಾಗಿ ಫಿನೀಶ್ ಮಾಡಲು ಸಾಧ್ಯವಾಗಲಿಲ್ಲ. ಮಹಿಪಾಲ್ ಲೋಮ್ರಾರ್ ಕೇವಲ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಿರ್ಣಾಯಕ ಘಟ್ಟದಲ್ಲಿ ದಿನೇಶ್ ಕಾರ್ತಿಕ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು. ಇದು ಆರ್‌ಸಿಬಿ ರನ್ ವೇಗಕ್ಕೆ ಕಡಿವಾಣ ಬೀಳುವಂತೆ ಮಾಡಿತು.

    ಡೆಲ್ಲಿ ಕ್ಯಾಪಿಟಲ್ಸ್‌ ಪರ ಖಲೀಲ್‌ ಅಹ್ಮದ್‌, ರಸಿಕ್‌ ಸಲಾಮ್‌ ತಲಾ 2 ವಿಕೆಟ್‌ ಕಿತ್ತರೆ, ಇಶಾಂತ್‌ ಶರ್ಮಾ, ಮುಕೇಶ್‌ ಕುಮಾರ್‌, ಕುಲ್ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • ಕದನದೊಳ್‌ ಕೊಹ್ಲಿ ಕೆಣಕಿ ಉಳಿದವರುಂಟೇ – ಐಪಿಎಲ್‌ನಲ್ಲಿ ಗನ್‌ಶೂಟ್‌ ಕದನ – ಕಲಾಶ್‌ ನಿಕಾವೋಗೆ ಹೋಲಿಸಿ ಟ್ರೆಂಡ್‌!

    ಕದನದೊಳ್‌ ಕೊಹ್ಲಿ ಕೆಣಕಿ ಉಳಿದವರುಂಟೇ – ಐಪಿಎಲ್‌ನಲ್ಲಿ ಗನ್‌ಶೂಟ್‌ ಕದನ – ಕಲಾಶ್‌ ನಿಕಾವೋಗೆ ಹೋಲಿಸಿ ಟ್ರೆಂಡ್‌!

    ಧರ್ಮಶಾಲಾ: ಕ್ರಿಕೆಟ್‌ ಲೋಕದ ಕಿಂಗ್‌ ಎಂದೇ ಕರೆಸಿಕೊಂಡಿರುವ ವಿರಾಟ್‌ ಕೊಹ್ಲಿ (Virat Kohli) ಮೈದಾನದಲ್ಲಿ ತಮ್ಮನ್ನಾಗಲಿ, ತಮ್ಮ ತಂಡದವರನ್ನಾಗಲಿ ಕೆಣಕಿದವರಿಗೆ ಸುಮ್ಮನೇ ಬಿಟ್ಟಿದ್ದೇ ಇಲ್ಲ. ಖಡಕ್‌ ರಿಯಾಕ್ಷನ್‌ಗಳ ಮೂಲಕ ಏಟಿಗೆ-ಎದುರೇಟು ಕೊಟ್ಟೇ ತೀರುತ್ತಾರೆ.

    ಪ್ರತಿಯೊಬ್ಬ ಅಭಿಮಾನಿಯನ್ನು (Kohli Fans) ನಕ್ಕುನಲಿಸುವ ಕೊಹ್ಲಿ, ಗೌತಮ್‌ ಗಂಭೀರ್‌, ಅವೇಶ್‌ ಖಾನ್‌, ನವೀನ್‌ ಹುಲ್‌ ಹಕ್‌ ಅವರಿಗೆ ಅವರದ್ದೇ ಶೈಲಿಯಲ್ಲಿ ತಿರುಗೇಟು ನೀಡಿದ್ದರು. ಇತ್ತೀಚೆಗೆ ತಮ್ಮ ಸ್ಟ್ರೇಕ್‌ರೇಟ್‌ ಕುರಿತು ಮಾತನಾಡುತ್ತಿದ್ದ ಸುನೀಲ್‌ ಗವಾಸ್ಕರ್‌ ಅವರಿಗೂ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟ ಕಿಂಗ್‌ ಕೊಹ್ಲಿ, ಮೈದಾನದಲ್ಲಿ ಪಂಜಾಬ್‌ ಕಿಂಗ್ಸ್‌ (PBKS) ಆಟಗಾರ ರೀಲಿ ರುಸ್ಸೊ ಅವರಿಗೆ ಅವರದ್ದೇ ಶೈಲಿಯಲ್ಲಿ ತಿರುಗೇಟು ಕೊಟ್ಟಿದ್ದಾರೆ.

    ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ:
    ಆರ್‌ಸಿಬಿ ನೀಡಿದ 242 ರನ್‌ಗಳ ಬೃಹತ್‌ ಮೊತ್ತ ಬೆನ್ನಟ್ಟಿದ್ದ ಕಿಂಗ್ಸ್‌ ಪಂಜಾಬ್‌ ಪರ ಎಡಗೈ ಆಟಗಾರ ರೀಲಿ ರುಸ್ಸೊ (Rilee Rossouw) ಸ್ಫೋಟಕ ಅರ್ಧಶತಕ ಬಾರಿಸಿದರು. ಅರ್ಧಶತಕ ಬಾರಿಸಿದ ಬಳಿಕ ಅವರು ಗನ್‌ ಶಾಟ್‌ ರೀತಿಯ ಭಂಗಿ ಮೂಲಕ ಸಂಭ್ರಮಿಸಿದ್ದರು. ಆದರೆ, ಅರ್ಧಶತಕದ ಬಳಿಕ ಕರಣ್‌ ಶರ್ಮಾ ಎಸೆತದಲ್ಲಿ ವಿಲ್‌ ಜಾಕ್ಸ್‌ಗೆ ಕ್ಯಾಚಿತ್ತು ರುಸ್ಸೊ ಔಟಾದರು. ರುಸ್ಸೊ ಔಟಾಗುತ್ತಲೇ ವಿರಾಟ್‌ ಕೊಹ್ಲಿ ಅವರೂ ಗನ್‌ನಿಂದ ಶೂಟ್‌ ಮಾಡುವ ರೀತಿ ಕುಟುಕಿದರು. ಈ ವೀಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೊಹ್ಲಿ ಅಭಿಮಾನಿಗಳಂತೂ ಈ ವೀಡಿಯೋ ನೋಡಿ ಖುಷಿಪಟ್ಟಿದ್ದಾರೆ. ಇನ್ನೂ ಕೆಲವರು ಕೆಜಿಎಫ್‌-2 ಚಿತ್ರದಲ್ಲಿ ಯಶ್‌ ಅವರು ಹಿಡಿಯುವ ಕಲಾಶ್‌ನಿಕಾವೊ ಗನ್‌ಗೆ ಹೋಲಿಸಿ ಸಂಭ್ರಮಿಸಿದ್ದಾರೆ.

    ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್​​ಗಳಲ್ಲಿ 7 ವಿಕೆಟ್​ಗೆ 241 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಂಜಾಬ್ ಬಳಗ 17 ಓವರ್​ಗಳಲ್ಲಿ 181 ರನ್​ಗಳಿಗೆ ಆಲ್​ಔಟ್ ಆಯಿತು. ಇದರೊಂದಿಗೆ ಆರ್‌ಸಿಬಿಯು ಸತತ 4ನೇ ಜಯ ದಾಖಲಿಸಿತು.

  • IPL 2024: ಕೊಹ್ಲಿ ಸ್ಫೋಟಕ ಬ್ಯಾಟಿಂಗ್; ಆರ್​ಸಿಬಿಗೆ 60 ರನ್‌ಗಳ ಭರ್ಜರಿ ಜಯ

    IPL 2024: ಕೊಹ್ಲಿ ಸ್ಫೋಟಕ ಬ್ಯಾಟಿಂಗ್; ಆರ್​ಸಿಬಿಗೆ 60 ರನ್‌ಗಳ ಭರ್ಜರಿ ಜಯ

    ಧರ್ಮಶಾಲಾ: ಇಲ್ಲಿನ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳ ನಡುವೆ ನಡೆದ ಐಪಿಎಲ್‌ (IPL 2024) ಪಂದ್ಯದಲ್ಲಿ ಆರ್​ಸಿಬಿ ತಂಡ 60 ರನ್‌ಗಳ ಭರ್ಜರಿ ಜಯಗಳಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ನಿಗದಿತ ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 241 ರನ್‌ಗಳನ್ನು ಕಲೆ ಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 17 ಓವರ್‌ಗಳಲ್ಲಿ 181 ರನ್‌ ಗಳಿಸಿ ಆಲೌಟ್‌ ಆಯಿತು.

    ತಂಡದ ಪರ ರಿಲೀ ರೋಸೌವ್ 27 ಎಸೆತಗಳಲ್ಲಿ 3 ಸಿಕ್ಸರ್‌ 9 ಬೌಂಡರಿ ನೆರವಿನಿಂದ 61 ರನ್‌ ಕಲೆ ಹಾಕಿದರು. ಜಾನಿ ಬೈರ್‌ಸ್ಟೋವ್ 16 ಎಸೆತಗಳಲ್ಲಿ 27 ರನ್‌ ಕಲೆ ಹಾಕಿದರು. ಶಶಾಂಕ್‌ ಸಿಂಗ್‌ 19 ಎಸೆತಗಳಲ್ಲಿ 37 ರನ್‌ ಗಳಿಸಿರದು.

    ಆರ್‌ಸಿಬಿ ಪರ ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್ ತಲಾ 2 ಮೊಹಮ್ಮದ್ ಸಿರಾಜ್ 3 ವಿಕೆಟ್‌ ಕಿತ್ತರು.

    ಆರ್‌ಸಿಬಿ ಪರ ವಿರಾಟ್‌ ಕೊಹ್ಲಿ (Virat Kohli) 47 ಎಸೆತಗಳಲ್ಲಿ 7 ಬೌಂಡರಿ, 6 ಸಿಕ್ಸರ್‌ಗಳ ನೆರವಿನಿಂದ 92 ರನ್ ಗಳಿಸಿ ಶತಕ ವಂಚಿತರಾದರು. ರಜತ್ ಪಾಟಿದಾರ್ 23 ಎಸೆತಗಳಲ್ಲಿ 6 ಸಿಕ್ಸರ್‌ 3 ಬೌಂಡರಿ ಸಿಡಿಸಿ 55 ರನ್‌ಗಳನ್ನು ಕಲೆ ಹಾಕಿದರು. ಕ್ಯಾಮೆರಾನ್ ಗ್ರೀನ್ 27 ಎಸೆತಗಳಲ್ಲಿ ತಂಡಕ್ಕೆ 46 ರನ್‌ಗಳ ಕೊಡುಗೆ ನೀಡಿದರು.

    ಪಂಜಾಬ್ ಪರ ಹರ್ಷಲ್ ಪಟೇಲ್ 3, ವಿದ್ವತ್ ಕಾವೇರಪ್ಪ 2, ಸ್ಯಾಮ್ ಕರನ್ ಹಾಗೂ ಅರ್ಷ್‌ದೀಪ್ ಸಿಂಗ್ ವಿಕೆಟ್‌ ಕಿತ್ತರು.

  • ಚಿನ್ನಸ್ವಾಮಿ ಅಂಗಳದಲ್ಲಿಂದು ಆರ್‌ಸಿಬಿಗೆ ಟೈಟಾನ್ಸ್‌ ಸವಾಲು – ಹೈವೋಲ್ಟೇಜ್‌ ಕದನಕ್ಕೆ ಮಳೆ ಅಡ್ಡಿ ಆತಂಕ!

    ಚಿನ್ನಸ್ವಾಮಿ ಅಂಗಳದಲ್ಲಿಂದು ಆರ್‌ಸಿಬಿಗೆ ಟೈಟಾನ್ಸ್‌ ಸವಾಲು – ಹೈವೋಲ್ಟೇಜ್‌ ಕದನಕ್ಕೆ ಮಳೆ ಅಡ್ಡಿ ಆತಂಕ!

    ಬೆಂಗಳೂರು: ಐಪಿಎಲ್‌ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿರುವ ಆರ್‌ಸಿಬಿ (IPL 2024) ಮುಂದಿನ ತನ್ನೆಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಇಂದು (ಏ.4) ತವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟಾನ್ಸ್‌ (Gujarat Taitans) ಎದುರು ಸೆಣಸಲು ಸಜ್ಜಾಗಿದ್ದು, ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ.

    2024ರ ಐಪಿಎಲ್‌ ಟೂರ್ನಿಯಲ್ಲಿ ಅಸ್ಥಿರ ಪ್ರದರ್ಶನ ನೀಡಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಕಳೆದ 2 ಪಂದ್ಯಗಳಲ್ಲಿ ಭರ್ಜರಿ ಜಯ ದಾಖಲಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಅದರಲ್ಲೂ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟಾನ್ಸ್‌ ಎದುರು 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಇದೀಗ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಅಂಥದ್ದೇ ಪ್ರದರ್ಶನ ನೀಡಿ ನಾಕ್‌ಔಟ್‌ ಹಂತಕ್ಕೆ ಮತ್ತಷ್ಟು ಹತ್ತಿರವಾಗಲು ಆರ್‌ಸಿಬಿ ಎದುರು ನೋಡುತ್ತಿದೆ. ಇದನ್ನೂ ಓದಿ: ಟಿ20 ವಿಶ್ವಕಪ್‌ ತಂಡದಿಂದ ರಾಹುಲ್‌ ಬಿಟ್ಟಿದ್ದೇಕೆ? ಕೊಹ್ಲಿ ಸ್ಟ್ರೈಕ್‌ರೇಟ್‌ ಬಗ್ಗೆ ರೋಹಿತ್‌ ಹೇಳಿದ್ದೇನು?

    ಅತ್ತ ಹೊಸ ನಾಯಕ ಶುಭಮನ್ ಗಿಲ್‌ ಸಾರಥ್ಯದಲ್ಲಿ ಆರಂಭಿಕ ಪಂದ್ಯಗಳನ್ನು ಗೆದ್ದು ಉತ್ತಮ ಪ್ರದರ್ಶನ ನೀಡಿದ್ದ ಗುಜರಾತ್‌ ಟೈಟಾನ್ಸ್‌ ತಂಡ ಬಳಿಕ ಸತತ ವೈಫಲ್ಯಗಳೊಂದಿಗೆ ನಿರಾಸೆ ಅನುಭವಿಸಿದೆ. ಕಳೆದ 5 ಪಂದ್ಯಗಳಲ್ಲಿ ಟೈಟಾನ್ಸ್‌ 3 ಸೋಲು ಕಂಡಿದೆ. ಈವರೆಗೆ ಆಡಿರುವ 10 ಪಂದ್ಯಗಳಲ್ಲಿ 4 ಜಯ ಮತ್ತು 6 ಸೋಲಿನೊಂದಿಗೆ 8 ಅಂಕಗಳನ್ನು ಕಲೆಹಾಕಿದ್ದು 8ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಉಳಿದ 4 ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದು ಸುಲಭವಾಗಿ ಪ್ಲೇ-ಆಫ್ಸ್‌ ತಲುಪಲು ಗಿಲ್‌ ಪಡೆ ಎದುರು ನೋಡುತ್ತಿದೆ. ಇತ್ತಂಡಗಳು ಒಟ್ಟು 4 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಉಭಯ ತಂಡಗಳು ತಲಾ ಎರಡರಲ್ಲಿ ಗೆಲುವು ಸಾಧಿಸಿದೆ.

    ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್-11
    ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್‌ ಗ್ರೀನ್‌, ದಿನೇಶ್ ಕಾರ್ತಿಕ್, ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್. ಇದನ್ನೂ ಓದಿ: ಮುಂಬೈ ವಿರುದ್ಧ 24 ರನ್‌ಗಳ ಜಯ – ಎರಡನೇ ಸ್ಥಾನಕ್ಕೆ ಜಿಗಿದ ಕೋಲ್ಕತ್ತಾ

    ಮಳೆ ಅಡ್ಡಿಯಾಗುತ್ತಾ?
    ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶುಕ್ರವಾರವೂ ಬೆಂಗಳೂರಿನ ಕೆಲವೆಡೆ ಮಳೆಯಾಗಿದ್ದು, ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

  • ಆ 2 ರನ್‌ ಗೆಲುವು ತಂದುಕೊಡ್ತಿತ್ತು; ಆರ್‌ಸಿಬಿ ವಿರೋಚಿತ ಸೋಲಿಗೆ ಇದೇ ಕಾರಣ ಅಂದ್ರು ಫ್ಯಾನ್ಸ್‌!

    ಆ 2 ರನ್‌ ಗೆಲುವು ತಂದುಕೊಡ್ತಿತ್ತು; ಆರ್‌ಸಿಬಿ ವಿರೋಚಿತ ಸೋಲಿಗೆ ಇದೇ ಕಾರಣ ಅಂದ್ರು ಫ್ಯಾನ್ಸ್‌!

    – ನಿಯಮದ ಪ್ರಕಾರ ಕೊಹ್ಲಿ ಔಟ್ – ಅಂಪೈರ್‌ ಪರ ಬ್ಯಾಟ್‌ ಬೀಸಿದ ಡುಪ್ಲೆಸಿಸ್‌
    – ಅಂಪೈರ್‌ ವಿರುದ್ಧ ಫ್ಯಾನ್ಸ್‌ ಫುಲ್‌ ಗರಂ

    ಕೋಲ್ಕತ್ತಾ: ಈಡನ್‌ ಗಾರ್ಡನ್‌ ಮೈದಾನದಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ಆರ್‌ಸಿಬಿ (RCB) ಕಂಡ ವಿರೋಚಿತ ಸೋಲು ಅಭಿಮಾನಿಗಳ (RCB Fans) ವಲಯದಲ್ಲಿ ಇನ್ನೂ ಬಿಸಿ-ಬಿಸಿ ಚರ್ಚೆಯಾಗುತ್ತಲೇ ಇದೆ. ಆ 2 ರನ್‌ ಇದ್ದಿದ್ದರೇ ಆರ್‌ಸಿಬಿ, ಗೆದ್ದೇ ಗೆಲ್ಲುತ್ತಿತ್ತು, ಪ್ಲೇ ಆಫ್‌ ಕನಸು ಜೀವಂತವಾಗಿರುತ್ತಿತ್ತು ಎಂದು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ವೀಡಿಯೋ ಸಾಕ್ಷಿಯೊಂದನ್ನೂ ಅಭಿಮಾನಿಗಳು ಹಂಚಿಕೊಂಡಿದ್ದಾರೆ.

    223 ರನ್‌ಗಳ ಬೃಹತ್‌ ಮೊತ್ತ ಚೇಸಿಂಗ್‌ ಆರಂಭಿಸಿದ್ದ ಆರ್‌ಸಿಬಿ ಗೆಲುವಿನ ಹಾದಿಯಲ್ಲಿ ನಡೆಯುತ್ತಿತ್ತು. ಆದ್ರೆ 17ನೇ ಓವರ್‌ನ 5ನೇ ಎಸೆತದಲ್ಲಿ ವರುಣ್‌ ಚಕ್ರವರ್ತಿ ಅವರ ಬೌಲಿಂಗ್‌ಗೆ ಸುಯೇಶ್‌ ಪ್ರಭುದೇಸಾಯಿ (Suyash Prabhudesai) ಸಿಕ್ಸರ್‌ ಬಾರಿಸಿದರು. ಆದ್ರೆ ಆನ್‌ಫೀಲ್ಡ್‌ ಅಂಪೈರ್‌ (umpires) ಯಾವುದೇ ನಿರ್ಧಾರ ಪ್ರಕಟಿಸದೇ 3ನೇ ಅಂಪೈರ್‌ ಮೊರೆ ಹೋದರು. ವೀಡಿಯೋನಲ್ಲಿ ಬಾಲ್‌ ಗ್ರೌಂಡ್‌ಗೆ ತಾಕುವ ಮುನ್ನ ಬೌಂಡರಿ ಲೈನ್‌ಗೆ ಬಡಿದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಆದಾಗ್ಯೂ ಟಿವಿ ಅಂಪೈರ್‌ ಸಿಕ್ಸರ್‌ ಅನ್ನು ಬೌಂಡರಿ ಎಂದು ತೀರ್ಪು ನೀಡಿದರು. ಈ ವೀಡಿಯೋ ಹಂಚಿಕೊಂಡಿರುವ ಆರ್‌ಸಿಬಿ ಅಭಿಮಾನಿಗಳು, 2 ರನ್‌ ಹೆಚ್ಚುವರಿ ಸೇರಿದ್ದರೆ ಆರ್‌ಸಿಬಿ ಗೆದ್ದೇ ಗೆಲ್ಲುತ್ತಿತ್ತು ಎಂದು ಹೇಳಿಕೊಂಡಿದ್ದಾರೆ.

    ರೂಲ್ಸ್‌ ಪ್ರಕಾರ ಕೊಹ್ಲಿ ಔಟ್:
    ವೇಗದ ಬೌಲರ್‌ ಹರ್ಷಿತ್‌ ರಾಣಾ ಎಸೆದ ಸ್ಲೋ ಫುಲ್‌ ಟಾಸ್‌ ಎಸೆತವನ್ನು ರಕ್ಷಣಾತ್ಮಕ ಆಟವಾಡುವ ಪ್ರಯತ್ನದಲ್ಲಿ ಕೊಹ್ಲಿ ವಿಫಲರಾದರು. ಅಷ್ಟೇ ಅಲ್ಲದೇ ಆನ್‌ಫೀಲ್ಡ್‌ ಅಂಪೈರ್‌ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಡಿಆರ್‌ಎಸ್‌ (DRS) ತೆಗೆದುಕೊಂಡರು. ಕೊಹ್ಲಿ ಕ್ರೀಸ್‌ ಒಳಗೆ ನಿಂತು ಚೆಂಡನ್ನು ಎದುರಿಸಿದ್ದರೆ, ಆಗ ಅದು ಸೊಂಟದ ಮೇಲ್ಭಾಗಕ್ಕೆ ಬಿದ್ದ ಫುಲ್‌ ಟಾಸ್‌ ನೋಬಾಲ್‌ ಆಗಿರುತ್ತಿತ್ತು. ಆದರೆ ಕೊಹ್ಲಿ ಕ್ರೀಸ್‌ನಿಂದ ಮುಂದಿದ್ದರು. ಇದನ್ನೂ ಓದಿ: ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮಕ್ಕೆ ರೋಹಿತ್‌ ವಿರೋಧ; ಬಿಸಿಸಿಐ ಹೇಳಿದ್ದೇನು? – ಏನಿದು ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌?

    ಅಲ್ಲದೇ ಹಾಕ್‌ ಐನಲ್ಲಿ (ಚೆಂಡು ಬೀಳುವ ಕ್ರಮವನ್ನು ಸ್ಕ್ರೀನ್‌ನಲ್ಲಿ ಅಂದಾಜಿಸುವ ಚಿತ್ರಣ) ಚೆಂಡು ವಿಕೆಟ್‌ ನೇರವಾಗಿ ಇರುವು ಕಂಡುಬಂದಿತು. ಆದ್ದರಿಂದ ಕೊಹ್ಲಿ ಅವರ ಕ್ಯಾಚ್‌ ಅನ್ನು ಔಟ್‌ ಎಂದು ತೀರ್ಪು ನೀಡಲಾಯಿತು. ಬಳಿಕ ಅಂಪೈರ್‌ ತೀರ್ಪಿನ ವಿರುದ್ಧವೂ ಆನ್‌ಫೀಲ್ಡ್‌ನಲ್ಲೇ ಅಸಮಾಧಾನ ಹೊರಹಾಕಿದ ಕೊಹ್ಲಿ, ಅಂಪೈರ್‌ಗಳ ಬಳಿ ತೆರಳಿ ವಾದಕ್ಕೆ ಇಳಿದಿದ್ದರು. ಬಳಿಕ ಡ್ರೆಸಿಂಗ್‌ ರೂಮ್‌ನಲ್ಲೂ ಸಹ ಆಟಗಾರರ ಜೊತೆಗೆ ತಮ್ಮ ವಾದ ಮುಂದುವರಿಸಿದರು.

    ನಾಯಕ ಡುಪ್ಲೆಸಿಸ್‌ ಹೇಳಿದ್ದೇನು?
    ಈ ಬಗ್ಗೆ ಪಂದ್ಯದ ಬಳಿಕ ಮಾತನಾಡಿದ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್‌, ಆನ್‌ಫೀಲ್ಡ್‌ ಅಂಪೈರ್‌ಗಳ ಪರ ಬ್ಯಾಟ್‌ ಬೀಸಿದರು. ನಿಯಮಗಳ ಪ್ರಕಾರ ವಿರಾಟ್‌ ಕೊಹ್ಲಿ ಔಟ್‌ ಆಗಿದ್ದಾರೆ. ಅಂಪೈರ್‌ಗಳು ತೆಗೆದುಕೊಂಡ ನಿರ್ಧಾರದಲ್ಲಿ ಯಾವುದೇ ತಪ್ಪಿಲ್ಲ. ಶತಾಯ ಗತಾಯ ನಾವು ಪಂದ್ಯ ಗೆಲ್ಲಲೇ ಬೇಕಿತ್ತು. ಟೂರ್ನಿಯಲ್ಲಿ ಪ್ಲೇ ಆಫ್‌ ರೇಸ್‌ನಲ್ಲಿ ಉಳಿಯಲು ಈ ಗೆಲುವು ಅಗತ್ಯವಿತ್ತು. ಆದ್ರೆ ನಾವು ನಮ್ಮ ಅಭಿಮಾನಿಗಳಿಗೂ ನಿರಾಸೆ ಮೂಡಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: IPL 2024: ಹೆಚ್ಚುವರಿ 20 ರನ್‌ ಕೊಟ್ಟಿದ್ದೇ ಆರ್‌ಸಿಬಿಗೆ ಮುಳುವಾಯ್ತಾ? – ಗ್ರೀನ್‌ ಬಾಯ್ಸ್‌ ಎಡವಿದ್ದೆಲ್ಲಿ?

    ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಫೀಲ್ಡಿಂಗ್‌ಗೆ ಇಳಿದ ಆರ್‌ಸಿಬಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಕೋಲ್ಕತ್ತಾ ನೈಟ್‌ರೈಡರ್ಸ್‌ಗೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 222 ರನ್ ಬಾರಿಸಿತ್ತು. 223 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 221 ರನ್‌ ಗಳಿಸಿ ವಿರೋಚಿತ ಸೋಲನುಭವಿಸಿತು. ಇದನ್ನೂ ಓದಿ: ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ

  • IPL 2024: ಹೆಚ್ಚುವರಿ 20 ರನ್‌ ಕೊಟ್ಟಿದ್ದೇ ಆರ್‌ಸಿಬಿಗೆ ಮುಳುವಾಯ್ತಾ? – ಗ್ರೀನ್‌ ಬಾಯ್ಸ್‌ ಎಡವಿದ್ದೆಲ್ಲಿ?

    IPL 2024: ಹೆಚ್ಚುವರಿ 20 ರನ್‌ ಕೊಟ್ಟಿದ್ದೇ ಆರ್‌ಸಿಬಿಗೆ ಮುಳುವಾಯ್ತಾ? – ಗ್ರೀನ್‌ ಬಾಯ್ಸ್‌ ಎಡವಿದ್ದೆಲ್ಲಿ?

    – ಸೋಲಿನ ಬಳಿಕ ನಾಯಕ ಫಾಫ್‌ ಡು ಪ್ಲೆಸಿಸ್‌ ಹೇಳಿದ್ದೇನು?

    ಕೋಲ್ಕತ್ತಾ: ಇಲ್ಲಿನ ಈಡನ್‌ ಗಾರ್ಡನ್‌ನಲ್ಲಿ ಕೆಕೆಆರ್‌ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 1 ರನ್‌ ವಿರೋಚಿತ ಸೋಲಿಗೆ ತುತ್ತಾಯಿತು. ಆದ್ರೆ ಈ ಪಂದ್ಯದಲ್ಲಿ ಆರ್‌ಸಿಬಿ ತಂಡ 20 ರನ್‌ ಹೆಚ್ಚುವರಿಯಾಗಿ ಬಿಟ್ಟುಕೊಟ್ಟಿದ್ದೇ ಸೋಲಿಗೆ ಕಾರಣವಾಯ್ತಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಅಲ್ಲದೇ ಇಂದಿನ ಸೋಲಿಗೆ ಕಾರಣಗಳೇನು ಎಂಬುದನ್ನು ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

    ಕೆಕೆಆರ್‌ಗೆ 20 ರನ್‌ ಎಕ್ಸ್‌ಟ್ರಾ ಲಾಭವಾಯ್ತಾ?
    ಹೌದು. ಆರಂಭದಲ್ಲಿ ರನ್‌ ಚಚ್ಚಿಸಿಕೊಂಡರೂ ಬಳಿಕ ಬಿಗಿ ಹಿಡಿತ ಸಾಧಿಸಲು ಮುಂದಾಗಿದ್ದ ಆರ್‌ಸಿಬಿ ಬೌಲರ್‌ಗಳು ಬಳಿಕ ವೈಡ್‌, ನೋಬಾಲ್‌, ಲೆಗ್‌ ಬೈಸ್‌ಗಳ ಮೂಲಕ ರನ್‌ ಬಿಟ್ಟುಕೊಟ್ಟರು. ಬೈಸ್‌, ಲೆಗ್‌ಬೈಸ್‌, ನೋಬಾಲ್‌ ಹಾಗೂ ವೈಡ್‌ ಮೂಲಕ ಕ್ರಮವಾಗಿ 4,7,2,7 ರನ್‌ಗಳನ್ನು ಬಿಟ್ಟುಕೊಟ್ಟರು. ಪರಿಣಾಮ ಕೆಕೆಆರ್‌ 220 ರನ್‌ಗಳ ಗಡಿ ದಾಟಲು ಸಾಧ್ಯವಾಯಿತು. ಇದನ್ನೂ ಓದಿ: ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮಕ್ಕೆ ರೋಹಿತ್‌ ವಿರೋಧ; ಬಿಸಿಸಿಐ ಹೇಳಿದ್ದೇನು? – ಏನಿದು ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌?

    2 ಓವರ್‌ನಲ್ಲಿ 38 ರನ್‌ ಕೊಟ್ಟ ಯಶ್‌ ದಯಾಳ್‌:
    200 ರನ್‌ಗಳ ಒಳಗೆ ಕೆಕೆಆರ್‌ ತಂಡವನ್ನು ಕಟ್ಟಿಹಾಕುವ ಪ್ರಯತ್ನದಲ್ಲಿದ್ದ ಆರ್‌ಸಿಬಿಗೆ ಯಶ್‌ ದಯಾಳ್‌ ದುಬಾರಿಯಾದರು. 16 ಓವರ್‌ ಮುಕ್ತಾಯಕ್ಕೆ ಕೆಕೆಆರ್‌‌ 5 ವಿಕೆಟ್‌ಗೆ 155 ರನ್‌ ಗಳಿಸಿತ್ತು. ಆದ್ರೆ 17ನೇ ಓವರ್‌ನಲ್ಲೇ ಯಶ್‌ ದಯಾಳ್‌, 2 ವೈಡ್‌, ನೋಬಾಲ್‌, ಬೈಸ್‌ ಮಾತ್ರವಲ್ಲದೇ ಸಿಕ್ಸರ್-ಬೌಂಡರಿ ಚಚ್ಚಿಸಿಕೊಂಡು 22 ರನ್‌ ಬಿಟ್ಟುಕೊಟ್ಟರು. ಅಲ್ಲದೇ 19ನೇ ಓವರ್‌ನಲ್ಲಿ ಮೊಹಮ್ಮದ್‌ ಸಿರಾಜ್‌ ಸಿಕ್ಸರ್‌-ಬೌಂಡರಿ, ವೈಡ್‌ ಮೂಲಕ 20 ರನ್‌ ಬಿಟ್ಟುಕೊಟ್ಟರು. ಬಳಿಕ ಕೊನೇ ಓವರ್‌ನಲ್ಲೇ ಯಶ್‌ ದಯಾಳ್‌ ಮತ್ತೆ 16 ರನ್‌ ಚಚ್ಚಿಸಿಕೊಂಡರು. ಇದು ಆರ್‌ಸಿಬಿ ತಂಡಕ್ಕೆ ದುಬಾರಿಯಾಯಿತು. ಇದನ್ನೂ ಓದಿ: ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ

    2023ರ ಐಪಿಎಲ್‌ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದಲ್ಲಿದ್ದ ಯಶ್‌ ದಯಾಳ್‌ ಇದೇ ರೀತಿ ತಂಡದ ಸೋಲಿಗೆ ಕಾರಣವಾಗಿದ್ದರು. ಕೊನೇ ಓವರ್‌ನಲ್ಲಿ 29 ರನ್‌ ಬೇಕಿದ್ದಾಗ ರಿಂಕು ಸಿಂಗ್‌ ಅವರಿಂದ ಸತತ 5 ಸಿಕ್ಸರ್‌ ಚಚ್ಚಿಸಿಕೊಂಡಿದ್ದರು. ಇದನ್ನೂ ಓದಿ: ಕೊನೇ ಓವರ್‌ನಲ್ಲಿ 6,6,6; ಹೋರಾಡಿ ಸೋತ ಆರ್‌ಸಿಬಿ – ಕೆಕೆಆರ್‌ಗೆ 1 ರನ್‌ ರೋಚಕ ಜಯ

    ಅಬ್ಬರಿಸದ ಡಿಕೆ, ಕೈಕೊಟ್ಟ ಗ್ರೀನ್:‌
    ಹಿಂದಿನ ಪಂದ್ಯದಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 35 ಎಸೆತಗಳಲ್ಲಿ ಸ್ಫೋಟಕ 85 ರನ್‌ ಚಚ್ಚಿದ್ದ ದಿನೇಶ್‌ ಕಾರ್ತಿಕ್‌ ಕೆಕೆಆರ್‌ ಪರ ಅಬ್ಬರಿಸುವಲ್ಲಿ ವಿಫಲರಾದರು. 18 ಎಸೆತಗಳಲ್ಲಿ 25 ರನ್‌ ಗಳಿಸಿ ಔಟಾದರು. ಅಲ್ಲದೇ ದುಬಾರಿ ಬೆಲೆಗೆ ಆರ್‌ಸಿಬಿ ತಂಡಕ್ಕೆ ಬಿಕರಿಯಾದ ಕ್ಯಾಮರೂನ್‌ ಗ್ರೀನ್‌ ಕೇವಲ 6 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಇದು ತಂಡದ ಸೋಲಿಗೆ ಕಾರಣವಾಯಿತು.

    ಪಂದ್ಯದ ಸೋಲಿನ ಬಳಿಕ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ನಾಯಕ ಫಾಫ್ ಡು ಪ್ಲೆಸಿಸ್, ನಾವು ಗೆಲುವಿನ ಹಾದಿಗೆ ಮರಳಲು ಹತಾಶರಾಗಿದ್ದೇವೆ. ನಮಗೆ ನಂಬಲಸಾಧ್ಯವಾದ ಅಭಿಮಾನಿ ಬಳಗವಿದೆ. ಪ್ರತಿ ಪಂದ್ಯದಲ್ಲೂ ಗೆದ್ದರೂ ಸೋತರೂ ‌ʻಆರ್‌ಸಿಬಿ, ಆರ್‌ಸಿಬಿ ಘೋಷಣೆ ಮೊಳಗುತ್ತಲೇ ಇರುತ್ತದೆ. ಆದರೀಗ ನಮ್ಮ ಅಭಿಮಾನಿಗಳು ಹೆಮ್ಮೆಪಡುವಂತೆ ಮಾಡುದರಲ್ಲೂ ನಾವು ವಿಫಲರಾಗಿದ್ದೇವೆ ಎಂದು ಬೇಸರ ಹೊರಹಾಕಿದ್ದಾರೆ.

    ಟಾಸ್ ಸೋತು ಮೊದಲು ಫೀಲ್ಡಿಂಗ್‌ಗೆ ಇಳಿದ ಆರ್‌ಸಿಬಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಕೋಲ್ಕತ್ತಾ ನೈಟ್‌ರೈಡರ್ಸ್‌ಗೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 222 ರನ್ ಬಾರಿಸಿತ್ತು. 223 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 221 ರನ್‌ ಗಳಿಸಿ ವಿರೋಚಿತ ಸೋಲನುಭವಿಸಿತು.

    ಕೊನೇ ಓವರ್‌ ಥ್ರಿಲ್ಲರ್‌:
    223 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ ಗೆಲುವಿಗೆ ಕೊನೇ ಓವರ್‌ನಲ್ಲಿ 21 ರನ್‌ ಅಗತ್ಯವಿತ್ತು. ಮಿಚೆಲ್‌ ಸ್ಟಾರ್ಕ್‌ ಬೌಲಿಂಗ್‌ನಲ್ಲಿದ್ದರು. ಈ ವೇಳೆ ಕ್ರೀಸ್‌ನಲ್ಲಿದ್ದ ಕರ್ಣ್‌ ಶರ್ಮಾ (Karn Sharma) ಮೊದಲ ಎಸೆತದಲ್ಲೇ ಸಿಕ್ಸರ್‌ ಬಾರಿಸಿದ್ರು. 2ನೇ ಎಸೆತದಲ್ಲಿ ರನ್‌ ಗಳಿಸುವಲ್ಲಿ ವಿಫಲರಾದರೂ 3-4ನೇ ಎಸೆತಗಳನ್ನು ಸತತವಾಗಿ ಸಿಕ್ಸರ್‌ಗೆ ಅಟ್ಟಿದರು. ಈ ವೇಳೆ ಪಂದ್ಯ ರೋಚಕ ಹಂತಕ್ಕೆ ತಿರುಗಿತ್ತು. ಡಗೌಟ್‌ನಲ್ಲಿದ್ದ ಆಟಗಾರರು ಮಾತ್ರವಲ್ಲದೇ ಅಭಿಮಾನಿಗಳಲ್ಲೂ ಹೃದಯ ಬಡಿತ ಹೆಚ್ಚಾಗಿತ್ತು. ಮೈ ರೋಮಾಂಚನಗೊಳಿಸುವಂತಿತ್ತು. ಆದ್ರೆ ಕೊನೇ 2 ಎಸೆತಗಳಲ್ಲಿ ಮೂರು ರನ್‌ಗಳ ಬೇಕಿದ್ದಾಗಲೇ ಕರ್ಣ್‌ ಶರ್ಮಾ 1 ರನ್‌ ಕದಿಯಲು ಯತ್ನಿಸಿ ಸ್ಟಾರ್ಕ್‌ಗೆ (Mitchell Starc) ಕ್ಯಾಚ್‌ ನೀಡಿ ಔಟಾದರು. ಕೊನೇ ಎಸೆತದಲ್ಲಿ ಸ್ಟ್ರೈಕ್‌ ಮಾಡಿದ ಲಾಕಿ ಫರ್ಗೂಸನ್‌ 2 ರನ್‌ ಕದಿಯಲು ಯತ್ನಿಸಿ ರನೌಟ್‌ಗೆ ತುತ್ತಾದರು. ಇದರಿಂದ ಆರ್‌ಸಿಬಿ 1 ರನ್‌ನಿಂದ ವಿರೋಚಿತ ಸೋಲಿಗೆ ತುತ್ತಾಯಿತು.

  • ಕೊನೇ ಓವರ್‌ನಲ್ಲಿ 6,6,6; ಹೋರಾಡಿ ಸೋತ ಆರ್‌ಸಿಬಿ – ಕೆಕೆಆರ್‌ಗೆ 1 ರನ್‌ ರೋಚಕ ಜಯ

    ಕೊನೇ ಓವರ್‌ನಲ್ಲಿ 6,6,6; ಹೋರಾಡಿ ಸೋತ ಆರ್‌ಸಿಬಿ – ಕೆಕೆಆರ್‌ಗೆ 1 ರನ್‌ ರೋಚಕ ಜಯ

    – ಬೆಂಗಳೂರಿಗೆ ಸತತ 6ನೇ ಸೋಲು

    ಕೋಲ್ಕತ್ತಾ: ಕೊನೇ ಓವರ್‌ನಲ್ಲಿ ಮೂರು ಸಿಕ್ಸರ್‌ ಸಿಡಿಸಿದ ಹೊರತಾಗಿಯೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಕೆಕೆಆರ್‌ (KKR) ವಿರುದ್ಧ 1 ರನ್‌ಗಳ ವಿರೋಚಿತ ಸೋಲಿಗೆ ತುತ್ತಾಯಿತು.

    ಕೊನೇ ಓವರ್‌ ಥ್ರಿಲ್ಲರ್‌:
    223 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ ಗೆಲುವಿಗೆ ಕೊನೇ ಓವರ್‌ನಲ್ಲಿ 21 ರನ್‌ ಅಗತ್ಯವಿತ್ತು. ಮಿಚೆಲ್‌ ಸ್ಟಾರ್ಕ್‌ ಬೌಲಿಂಗ್‌ನಲ್ಲಿದ್ದರು. ಈ ವೇಳೆ ಕ್ರೀಸ್‌ನಲ್ಲಿದ್ದ ಕರ್ಣ್‌ ಶರ್ಮಾ (Karn Sharma) ಮೊದಲ ಎಸೆತದಲ್ಲೇ ಸಿಕ್ಸರ್‌ ಬಾರಿಸಿದ್ರು. 2ನೇ ಎಸೆತದಲ್ಲಿ ರನ್‌ ಗಳಿಸುವಲ್ಲಿ ವಿಫಲರಾದರೂ 3-4ನೇ ಎಸೆತಗಳನ್ನು ಸತತವಾಗಿ ಸಿಕ್ಸರ್‌ಗೆ ಅಟ್ಟಿದರು. ಈ ವೇಳೆ ಪಂದ್ಯ ರೋಚಕ ಹಂತಕ್ಕೆ ತಿರುಗಿತ್ತು. ಡಗೌಟ್‌ನಲ್ಲಿದ್ದ ಆಟಗಾರರು ಮಾತ್ರವಲ್ಲದೇ ಅಭಿಮಾನಿಗಳಲ್ಲೂ ಹೃದಯ ಬಡಿತ ಹೆಚ್ಚಾಗಿತ್ತು. ಮೈ ರೋಮಾಂಚನಗೊಳಿಸುವಂತಿತ್ತು. ಆದ್ರೆ ಕೊನೇ 2 ಎಸೆತಗಳಲ್ಲಿ ಮೂರು ರನ್‌ಗಳ ಬೇಕಿದ್ದಾಗಲೇ ಕರ್ಣ್‌ ಶರ್ಮಾ 1 ರನ್‌ ಕದಿಯಲು ಯತ್ನಿಸಿ ಸ್ಟಾರ್ಕ್‌ಗೆ  (Mitchell Starc) ಕ್ಯಾಚ್‌ ನೀಡಿ ಔಟಾದರು. ಕೊನೇ ಎಸೆತದಲ್ಲಿ ಸ್ಟ್ರೈಕ್‌ ಮಾಡಿದ ಲಾಕಿ ಫರ್ಗೂಸನ್‌ 2 ರನ್‌ ಕದಿಯಲು ಯತ್ನಿಸಿ ರನೌಟ್‌ಗೆ ತುತ್ತಾದರು. ಇದರಿಂದ ಆರ್‌ಸಿಬಿ 1 ರನ್‌ನಿಂದ ವಿರೋಚಿತ ಸೋಲಿಗೆ ತುತ್ತಾಯಿತು.

    ಟಾಸ್ ಸೋತು ಮೊದಲು ಫೀಲ್ಡಿಂಗ್‌ಗೆ ಇಳಿದ ಆರ್‌ಸಿಬಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಕೋಲ್ಕತ್ತಾ ನೈಟ್‌ರೈಡರ್ಸ್‌ಗೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 222 ರನ್ ಬಾರಿಸಿತ್ತು. 223 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 221 ರನ್‌ ಗಳಿಸಿ ವಿರೋಚಿತ ಸೋಲನುಭವಿಸಿತು.

    ಚೇಸಿಂಗ್ ವೇಳೆ ಸ್ಫೋಟಕ ಆರಂಭ ಪಡೆಯಲು ಮುಂದಾಗಿದ್ದ ಆರ್‌ಸಿಬಿ 2.1 ಓವರ್‌ಗಳಿದ್ದಾಗ 27 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. 7 ಎಸೆತಗಳಲ್ಲಿ 18 ರನ್ ಗಳಿಸಿದ್ದ ವಿರಾಟ್ ಕೊಹ್ಲಿ ಔಟಾಗುತ್ತಿದ್ದಂತೆ, ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) ಸಹ ಸುಲಭ ಕ್ಯಾಚ್‌ಗೆ ತುತ್ತಾದರು. ಇದು ಆರ್‌ಸಿಬಿಗೆ ಭಾರೀ ಆಘಾತವುಂಟುಮಾಡಿತ್ತು.

    ವಿಲ್-ಪಾಟಿದಾರ್ ಶತಕದ ಜೊತೆಯಾಟ:
    3.1 ಓವರ್‌ಗಳಲ್ಲಿ 35 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದ ಆರ್‌ಸಿಬಿಗೆ ವಿಲ್ ಜಾಕ್ಸ್ (Will Jacks) ಹಾಗೂ ರಜತ್‌ ಪಾಟೀದಾರ್ (Rajat Patidar) ಬಲ ತುಂಬಿದರು. 3ನೇ ವಿಕೆಟ್‌ಗೆ ಈ ಜೋಡಿ 48 ಎಸೆತಗಳಲ್ಲಿ ಭರ್ಜರಿ 102 ರನ್‌ಗಳ ಜೊತೆಯಾಟ ನೀಡಿತ್ತು. ಇದರಿಂದ ತಂಡದಲ್ಲಿ ಗೆಲುವಿನ ಆಸೆ ಚಿಗುರಿತ್ತು. ಆದ್ರೆ ಮಧ್ಯಮ ಕ್ರಮಾಂಕದ ಬ್ಯಾಟರ್ಸ್‌ಗಳು ಕೈಕೊಟ್ಟ ಪರಿಣಾಮ ಆರ್‌ಸಿಬಿ ಸೋಲಿಗೆ ತುತ್ತಾಯಿತು.

    ಆರ್‌ಸಿಬಿ ಪರ ವಿಲ್ ಜಾಕ್ಸ್ 55 ರನ್ (32 ರನ್, 5 ಸಿಕ್ಸರ್, 4 ಬೌಂಡರಿ), ರಜತ್ ಪಾಟೀದಾರ್ 52 ರನ್ (23 ಎಸೆತ, 5 ಸಿಕ್ಸರ್, 3 ಬೌಂಡರಿ), ವಿರಾಟ್ ಕೊಹ್ಲಿ 18 ರನ್, ಫಾಫ್ ಡು ಪ್ಲೆಸಿಸ್ 7 ರನ್, ಕ್ಯಾಮರೂನ್ ಗ್ರೀನ್ 6 ರನ್, ಮಹಿಪಾಲ್ ಲೋಮ್ರೋರ್ 4 ರನ್, ಸುಯೇಶ್‌ ಪ್ರಭುದೇಸಾಯಿ 24 ರನ್‌, ದಿನೇಶ್‌ ಕಾರ್ತಿಕ್‌ 25 ರನ್‌, ಕರ್ಣ್‌ ಶರ್ಮಾ ಸ್ಫೋಟಕ 20 ರನ್‌ (7 ಎಸೆ, 3 ಸಿಕ್ಸರ್‌), ಲಾಕಿ ಫರ್ಗೂಸನ್‌ 1 ರನ್‌ ಗಳಿಸಿದರು.

    ಕೆಕೆಆರ್‌ ಪರ ಆಲ್‌ರೌಂಡರ್‌ ಪ್ರದರ್ಶನ ನೀಡಿದ ಆಂಡ್ರೆ ರಸೆಲ್‌ 3 ಓವರ್‌ಗಳಲ್ಲಿ 3 ವಿಕೆಟ್‌ ಕಿತ್ತರೆ, ಹರ್ಷಿತ್‌ ರಾಣಾ ಮತ್ತು ಸುನೀಲ್‌ ನರೇನ್‌ ತಲಾ 2 ವಿಕೆಟ್‌ ಹಾಗೂ ಮಿಚೆಲ್‌ ಸ್ಟಾರ್ಕ್‌ ಮತ್ತು ವರುಣ್‌ ಚಕ್ರವರ್ತಿ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ ಆರಂಭದಿಂದ ಅಬ್ಬರಿಸಲು ಶುರು ಮಾಡಿತು. ಆರಂಭಿಕರಾದ ಸುನೀಲ್ ನರೇನ್ ಮತ್ತು ಪಿಲ್ ಸಾಲ್ಟ್ ಜೋಡಿ ಮೊದಲ ವಿಕೆಟ್‌ಗೆ 26 ಎಸೆತಗಳಲ್ಲಿ ಸ್ಫೋಟೊ 56 ರನ್‌ಗಳ ಜೊತೆಯಾಟ ನೀಡಿತ್ತು. ಬಳಿಕ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡ ಕೆಕೆಆರ್ ತಂಡ ಮತ್ತೊಂದೆಡೆ ರನ್ ಕಲೆಹಾಕುತ್ತಾ ಸಾಗಿತು.

    ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ (Shreyas Iyer) ಮತ್ತು ರಿಂಕು ಸಿಂಗ್ ಜೋಡಿ 40 ರನ್, ರಸ್ಸೆಲ್ ಮತ್ತು ಅಯ್ಯರ್ 42 ರನ್ ಹಾಗೂ ರಸ್ಸೆಲ್ ಮತ್ತು ರಮಣದೀಪ್ ಸಿಂಗ್ ಜೋಡಿ ನೀಡಿದ 43 ರನ್‌ಗಳ ಜೊತೆಯಾಟದಿಂದ ಕೆಕೆಆರ್ ತಂಡ 222 ರನ್‌ಗಳ ಬೃಹತ್ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು.

    ಶ್ರೇಯಸ್ ಅಯ್ಯರ್ 50 ರನ್ (36 ಎಸೆತ, 1 ಸಿಕ್ಸರ್, 7 ಬೌಂಡರಿ), ಪಿಲ್ ಸಾಲ್ಟ್ (Phil Salt) ಸ್ಫೋಟಕ 48 ರನ್ (14 ಎಸೆತ, 3 ಸಿಕ್ಸರ್, 7 ಬೌಂಡರಿ), ಸುನೀಲ್ ನರೇನ್ 10 ರನ್, ರಘುವಂಶಿ 3 ರನ್, ವೆಂಕಟೇಶ್ ಅಯ್ಯರ್ 16 ರನ್, ರಿಂಕು ಸಿಂಗ್ 24 ರನ್, ಆಂಡ್ರೆ ರಸ್ಸೆಲ್ 27 ರನ್, ರಮಣದೀಪ್ ಸಿಂಗ್ 24 ರನ್ ಬಾರಿಸಿದ್ರೆ ವೈಡ್, ನೋಬಾಲ್ ಬೈಸ್‌ನಿಂದಲೇ ಹೆಚ್ಚುವರಿ 20 ರನ್ ತಂಡಕ್ಕೆ ಸೇರ್ಪಡೆಯಾಯಿತು.

    ಆರ್‌ಸಿಬಿ ಪರ ಯಶ್ ದಯಾಳ್ 4 ಓವರ್‌ಗಳಲ್ಲಿ 56 ರನ್ ಬಿಟ್ಟುಕೊಟ್ಟು ಮತ್ತು ಕ್ಯಾಮರೂನ್ ಗ್ರೀನ್ 4 ಓವರ್‌ಗಳಲ್ಲಿ 35 ರನ್ ಬಿಟ್ಟುಕೊಟ್ಟು ತಲಾ 2 ವಿಕೆಟ್ ಕಿತ್ತರೆ, ಮೊಹಮ್ಮದ್ ಸಿರಾಜ್ ಹಾಗೂ ಕರ್ಣ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.