Tag: rcb

  • IPL 2024: ಆರ್‌ಸಿಬಿಗೆ ಕೂಡಿ ಬಾರದ ಗ್ರೀನ್ ಜೆರ್ಸಿ – ಗೆಲುವಿಗಿಂತ ಸೋಲೇ ಹೆಚ್ಚು; ಇಂದಿನ ಲಕ್‌ ಹೇಗಿದೆ?

    IPL 2024: ಆರ್‌ಸಿಬಿಗೆ ಕೂಡಿ ಬಾರದ ಗ್ರೀನ್ ಜೆರ್ಸಿ – ಗೆಲುವಿಗಿಂತ ಸೋಲೇ ಹೆಚ್ಚು; ಇಂದಿನ ಲಕ್‌ ಹೇಗಿದೆ?

    ಕೋಲ್ಕತ್ತಾ: ಫಾಫ್ ಡು ಪ್ಲೆಸಿಸ್ (Faf du Plessis) ನಾಯಕತ್ವದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಇಂದು (ಏ.21) ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ಸೆಣಸಲಿದೆ.

    ಕೋಲ್ಕತ್ತಾದ ಈಡನ್‌ ಗಾರ್ಡನ್‌ (Eden Gardens) ಮೈದಾನದಲ್ಲಿ ಪಂದ್ಯ ನಡೆಯಲಿದ್ದು, ಮಧ್ಯಾಹ್ನ 3:30 ಗಂಟೆಗೆ ಆರಂಭವಾಗಲಿದೆ. ಆರ್​ಸಿಬಿ ಆಟಗಾರರು ತಮ್ಮ ಕೆಂಪು ಮತ್ತು ನೀಲಿ ಮಿಶ್ರಿತ ಜೆರ್ಸಿ ಬದಲಿಗೆ ಹಸಿರು ಜೆರ್ಸಿಯಲ್ಲಿ (Green Jersey) ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮಕ್ಕೆ ರೋಹಿತ್‌ ವಿರೋಧ; ಬಿಸಿಸಿಐ ಹೇಳಿದ್ದೇನು? – ಏನಿದು ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌?

    2011ರ ಐಪಿಎಲ್​ನಿಂದಲೂ ಪ್ರತಿ ಆವೃತ್ತಿಯ ಒಂದು ಪಂದ್ಯದಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ (Green Jersey) ತೊಟ್ಟು ಪಂದ್ಯವನ್ನಾಡಲು ಆರಂಭಿಸಿತು. ಅಂದಿನಿಂದ ಆರ್​ಸಿಬಿ ಪ್ರತಿ ವರ್ಷ ಐಪಿಎಲ್‌ನಲ್ಲಿ (IPL 2023) ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡುತ್ತಿದೆ. ನಮ್ಮ ಸುತ್ತಲಿನ ಹಸಿರು ಪರಿಸರವನ್ನು ಸಂರಕ್ಷಿಸುವಂತೆ ಜಾಗೃತಿಗೊಳಿಸುವ ಉದ್ದೇಶವೂ ಇದ್ದಾಗಿದೆ. ಇದನ್ನೂ ಓದಿ: ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ

    ABD

    ಗೆಲುವಿಗಿಂತ ಸೋಲೇ ಹೆಚ್ಚು:
    2011ರಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ 2012, 2013, 2014ರಲ್ಲಿ ಸೋಲು ಕಂಡಿತು. 2015ರಲ್ಲಿ ಯಾವುದೇ ಫಲಿತಾಂಶವಿಲ್ಲದೇ ಪಂದ್ಯ ರದ್ದಾಯಿತು. 2016ರಲ್ಲಿ ಗೆಲುವು ಸಾಧಿಸಿತ್ತು. ನಂತರ 2017, 2018, 2019, 2020ರಲ್ಲಿ ಸೋತಿತ್ತು. 2021 ನೀಲಿ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರೂ ಸೋಲು ಕಂಡಿತ್ತು. 2023ರಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ತವರು ಕ್ರೀಡಾಂಗಣದಲ್ಲೇ ಗೆಲುವು ಸಾಧಿಸಿತ್ತು. 2024ರ ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: IPL 2024: ರನ್ ಹೊಳೆ, ದಾಖಲೆಗಳ ಸುರಿಮಳೆ – ಐಪಿಎಲ್‌ನಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದ ಸನ್‌ ರೈಸರ್ಸ್‌

    ಪುಟಿದೇಳುತ್ತಾ ಆರ್‌ಸಿಬಿ?
    ಕಳೆದ 7 ಪಂದ್ಯಗಳಲ್ಲಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ ಅಂಕಪಟ್ಟಿಯಲ್ಲಿ ಕೊನೇ ಸ್ಥಾನಕ್ಕೆ ಕುಸಿದಿದೆ. ಇದರಿಂದ ಆರ್‌ಸಿಬಿ ಪ್ಲೇ ಆಫ್‌ ಹಾದಿ ಕಠಿಣವಾಗಿದೆ. ಇನ್ನುಳಿದ ಪಂದ್ಯಗಳಲ್ಲಿ ಆರ್‌ಸಿಬಿ ಉತ್ತಮ ರನ್‌ರೇಟ್‌ನೊಂದಿಗೆ ಗೆಲುವು ಸಾಧಿಸಿದರೆ, ಪ್ಲೇ ಆಫ್‌ ಹಾದಿ ತಲುಪುವ ಸಾಧ್ಯತೆಯಿದೆ. ಹಾಗಾಗಿ ಸತತ ಸೋಲಿನಿಂದ ಕಂಗೆಟ್ಟಿರುವ ಆರ್‌ಸಿಬಿ ಇಂದಾದರೂ ಪುಟಿದೇಳುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

  • ಆರ್‌ಸಿಬಿ ಹಸಿರು ಅಭಿಯಾನ; ಬೆಂಗ್ಳೂರು ಕೆರೆಗಳಿಗೆ ಕಾಯಕಲ್ಪ ನೀಡಲು ಮುಂದಾದ ಫ್ರಾಂಚೈಸಿಗೆ ಭೇಷ್‌ ಎಂದ ಫ್ಯಾನ್ಸ್‌

    ಆರ್‌ಸಿಬಿ ಹಸಿರು ಅಭಿಯಾನ; ಬೆಂಗ್ಳೂರು ಕೆರೆಗಳಿಗೆ ಕಾಯಕಲ್ಪ ನೀಡಲು ಮುಂದಾದ ಫ್ರಾಂಚೈಸಿಗೆ ಭೇಷ್‌ ಎಂದ ಫ್ಯಾನ್ಸ್‌

    – ಹಸಿರು ಜೆರ್ಸಿಯಲ್ಲಿ ಆರ್‌ಸಿಬಿಗೆ ಗೆಲುವಿಗಿಂತ ಸೋಲೇ ಹೆಚ್ಚು

    ಬೆಂಗಳೂರು: ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್‌ ಟೂರ್ನಿಯಲ್ಲಿ ಆರ್‌ಸಿಬಿ (RCB) ತಂಡಕ್ಕೆ ಸಾಕಷ್ಟು ಟ್ರೆಂಡ್‌ ಇದೆ. ಇಲ್ಲಿಯವರೆಗೆ ಒಂದೇ ಒಂದು ಬಾರಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದೇ ಇದ್ದರೂ ಆರ್‌ಸಿಬಿ, ಇತರೆ ಎಲ್ಲಾ ತಂಡಗಳಿಗಿಂತಲೂ ಅತ್ಯಂತ ಹೆಚ್ಚಿನ ಅಭಿಮಾನಿಗಳನ್ನ ಹೊಂದಿದೆ. ಫೇಸ್‌ಬುಕ್‌, ಇನ್ಸ್ಟಾಗ್ರಾಮ್‌, ಟ್ವಿಟರ್ ಸೇರಿದಂತೆ ಸೋಶಿಯಲ್‌ ಮೀಡಿಯಾದಲ್ಲಿ ಕೋಟ್ಯಂತರ ಫಾಲೋವರ್ಸ್ ಇದ್ದಾರೆ. ಪಂದ್ಯ ಗೆದ್ದರೂ, ಸೋತರೂ ಆರ್‌ಸಿಬಿ ತಂಡವನ್ನ ಬೆಂಬಲಿಸುವ ಪ್ರಾಮಾಣಿಕ ಅಭಿಮಾನಿಗಳು (RCB Fans) ಇವರಾಗಿದ್ದಾರೆ.

    ಇಂದಿಗೂ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸಮಾಜ ಸೇವಾ ಕಾರ್ಯಗಳಿಗೂ ಮುಂದಾಗಿದೆ. ಪ್ರತಿ ಬಾರಿ ತನ್ನ ಆವೃತ್ತಿಯಲ್ಲಿ ಹಸಿರು ಜೆರ್ಸಿ ಧರಿಸಿ ಹಸಿರು ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ಆರ್‌ಸಿಬಿ ಕ್ರಿಕೆಟ್ ಫ್ರಾಂಚೈಸಿ, ಈ ಬಾರಿ ಬೆಂಗಳೂರಿನಲ್ಲಿ ಮೂರು ಕೆರೆಗಳನ್ನು (Benglauru Lakes) ಮರು ಅಭಿವೃದ್ಧಿಗೊಳಿಸಲು ಮುಂದಾಗಿದೆ. ತಂಡದ ಹಸಿರು ಅಭಿಯಾನ ಯೋಜನೆಯಡಿ ಈ ಕೆಲಸಕ್ಕೆ ಫ್ರಾಂಚೈಸಿ ಮುಂದಾಗಿದೆ. ಇದನ್ನೂ ಓಧಿ: ಫೇಕ್‌ ನ್ಯೂಸ್‌ ಬಗ್ಗೆ ಹಿಟ್‌ಮ್ಯಾನ್‌ ಸ್ಪಷ್ಟನೆ – ಟಿ20 ವಿಶ್ವಕಪ್‌ಗೆ ಹೀಗಿದೆ ಭಾರತದ ಸಂಭಾವ್ಯ ತಂಡ!

    ಬೆಂಗಳೂರಿನ ಇಟ್ಟಗಾಲಪುರ ಕೆರೆ ಮತ್ತು ಸದೇನಹಳ್ಳಿ ಕೆರೆ (Ittgalpura and Sadenahalli lakes) ಮರು ಅಭಿವೃದ್ಧಿ ಕಾರ್ಯವು ಮುಕ್ತಾಯ ಹಂತ ತಲುಪಿದೆ. ಕಣ್ಣೂರು ಕೆರೆಯಲ್ಲಿ ನಾಗರಿಕರಿಗೆ ಮೂಲ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಆರ್‌ಸಿಬಿಯು ಕಳೆದ ಅಕ್ಟೋಬರ್‌ನಿಂದಲೇ ಇಎಸ್‌ಜಿ ಬದ್ಧತೆಯಡಿಯಲ್ಲಿ ಕೆರೆ ಸುಧಾರಣೆ ಕಾರ್ಯ ಯೋಜನೆಯನ್ನು ಆರಂಭಿಸಿದೆ. ಕಾವೇರಿ ನೀರಿನಿಂದ ವಂಚಿತವಾಗಿರುವ ಹಾಗೂ ಅಂತರ್ಜಲ ಮತ್ತು ಮಳೆ ನೀರಿನ ಮೂಲದ ಮೇಲೆಯೇ ಅವಲಂಬಿತವಾಗಿರುವ ಪ್ರದೇಶಗಳ ಜಲಮೂಲಗಳನ್ನು ಅಭಿವೃದ್ಧಿಪಡಿಸುವ ಗುರಿಯೂ ಇದಾಗಿದೆ.

    ಇಟ್ಟಗಾಲಪುರ ಮತ್ತು ಸದೇನಹಳ್ಳಿ ಕೆರೆಗಳಿಂದ ಇದುವರೆಗೆ 1.20 ಲಕ್ಷ ಟನ್ ಹೂಳು (Silt) ಮತ್ತು ಮರಳನ್ನು ಹೊರತೆಗೆಯಲಾಗಿದೆ. ಅದೇ ಮಣ್ಣನ್ನು ಕೆರೆಗಳಿಗೆ ಒಡ್ಡು ಕಟ್ಟಲು ಮತ್ತು ಕಾಲುಹಾದಿ ನಿರ್ಮಿಸಲು ಬಳಸಲಾಗಿದೆ. ಅಲ್ಲದೇ ಸುತ್ತಮುತ್ತಲಿಗೆ 52 ರೈತರು ತಮ್ಮ ಹೊಲ. ಗದ್ದೆಗಳಿಗಾಗಿ ಈ ಮಣ್ಣು ತೆಗೆದುಕೊಂಡೂ ಹೋಗಿದ್ದಾರೆ ಎಂದು ಆರ್‌ಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.

    ಸ್ಥಳೀಯ ಸಮುದಾಯಗಳ ಕಲ್ಯಾಣ ನಮ್ಮ ಗುರಿಯಾಗಿದೆ. ಬೆಂಗಳೂರಿನ ಪ್ರಮುಖ ಕೆರೆಗಳನ್ನು ಮರಳಿ ಅಭಿವೃದ್ಧಿಪಡಿಸುವುದರಿಂದ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕಾರಣವಾಗಲಿದೆ. ಅಲ್ಲದೇ ಅಕ್ಕಪಕ್ಕದ ಗ್ರಾಮಗಳಿಗೆ ಕೃಷಿ ಮತ್ತಿತರ ಕಾರ್ಯಗಳಿಗೂ ನೀರಿನ ಸೌಲಭ್ಯ ಒದಗಿಸಲಿದೆ ಎಂದು ಆರ್‌ಸಿಬಿ ಮುಖ್ಯಸ್ಥ ರಾಜೇಶ್ ಮೆನನ್ ಹೇಳಿದ್ದಾರೆ. ಇದನ್ನೂ ಓಧಿ: ಕೊನೇ ಓವರ್‌ನಲ್ಲಿ 26 ರನ್‌ ಚಚ್ಚಿಸಿಕೊಂಡ ಪಾಂಡ್ಯ – ಹಾರ್ದಿಕ್‌ ಕಳಪೆ ಬೌಲಿಂಗ್‌ಗೆ ಫುಲ್‌ ಕ್ಲಾಸ್‌

    ಹಸಿರು ಬಣ್ಣದ ಜೆರ್ಸಿಯಲ್ಲಿ ಗೆಲುವಿಗಿಂತ ಸೋಲೆ ಹೆಚ್ಚು:
    2011ರ ಐಪಿಎಲ್‌ ಆವೃತ್ತಿಯಿಂದ ಆರ್‌ಸಿಬಿ ಋತುವಿನ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ಧರಿಸಿ ಆಡಲು ಆರಂಭಿಸಿತು. ಹಸಿರು ಪರಿಸರವನ್ನು ಸಂರಕ್ಷಿಸುವಂತೆ ಜಾಗೃತಿಗೊಳಿಸುವ ಉದ್ದೇಶವೂ ಇದ್ದಾಗಿತ್ತು. 2011ರಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ 2012, 2013, 2014ರಲ್ಲಿ ಸೋಲು ಕಂಡಿತು. 2015ರಲ್ಲಿ ಯಾವುದೇ ಫಲಿತಾಂಶವಿಲ್ಲದೇ ಪಂದ್ಯ ರದ್ದಾಯಿತು. 2016ರಲ್ಲಿ ಗೆಲುವು ಸಾಧಿಸಿತ್ತು. ನಂತರ 2017, 2018, 2019, 2020ರಲ್ಲಿ ಸೋತಿತ್ತು. 2021 ನೀಲಿ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರೂ ಸೋಲು ಕಂಡಿತ್ತು. 2023ರಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ತವರು ಕ್ರೀಡಾಂಗಣದಲ್ಲೇ ಗೆಲುವು ಸಾಧಿಸಿತ್ತು. 2024ರ ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓಧಿ: RCBಗೆ ‘ಹೆಡ್ಡೇಕ್’- ತನ್ನದೇ ದಾಖಲೆ ಮುರಿದು IPLನಲ್ಲಿ ಮತ್ತೆ ಇತಿಹಾಸ ನಿರ್ಮಿಸಿದ ಹೈದರಾಬಾದ್

  • ತವರಲ್ಲಿ RCBಗೆ ಹೀನಾಯ ಸೋಲು – SRHಗೆ 25 ರನ್‌ಗಳ ಗೆಲುವು

    ತವರಲ್ಲಿ RCBಗೆ ಹೀನಾಯ ಸೋಲು – SRHಗೆ 25 ರನ್‌ಗಳ ಗೆಲುವು

    – ಕೆಕೆಆರ್‌ ದಾಖಲೆ ಉಡೀಸ್‌ ಮಾಡಿದ ಹೈದರಾಬಾದ್ ತಂಡ

    ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಹಾಗೂ ಎಸ್​​ಆರ್​ಹೆಚ್ (SRH) ತಂಡಗಳ ನಡುವಿನ ಐಪಿಎಲ್‌ (IPL 2024) ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 25 ರನ್‌ಗಳ ಗೆಲುವು ಸಾಧಿಸಿದೆ.

    ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್‌ ಬೀಸಿದ ಎಸ್​​ಆರ್​ಹೆಚ್ ತಂಡ ನಿಗದಿತ 20 ಓವರ್‌ಗಳಲ್ಲಿ ಮೂರು ವಿಕೆಟ್‌ ನಷ್ಟಕ್ಕೆ 287 ರನ್‌ ಗಳಿಸಿತು.   ಈ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 262 ರನ್‌ಗಳನ್ನು ಮಾತ್ರ ಕಲೆ ಹಾಕಿತು. ಇದನ್ನೂ ಓದಿ: RCBಗೆ ‘ಹೆಡ್ಡೇಕ್’- ತನ್ನದೇ ದಾಖಲೆ ಮುರಿದು IPLನಲ್ಲಿ ಮತ್ತೆ ಇತಿಹಾಸ ನಿರ್ಮಿಸಿದ ಹೈದರಾಬಾದ್

    ಆರ್‌ಸಿಬಿ ಪರ ಬ್ಯಾಟ್‌ ಬೀಸಿದ ಕೊಹ್ಲಿ 20 ಎಸೆತಗಳಲ್ಲಿ 42 ರನ್‌ ಗಳಿಸಿ ಔಟಾದರು. 4 ಎಸೆತಗಳಲ್ಲಿ 7 ರನ್‌ ಗಳಿಸಿದ ವಿಲ್‌ ಜಾಕ್ವೆಸ್ ಮತ್ತೊಂದು ರನ್‌ ಗಳಿಸುವ ಯತ್ನದಲ್ಲಿ ರನ್‌ ಔಟ್‌ ಆದರು. . ರಜತ್ ಪಾಟಿದಾರ್ 5 ಎಸೆತಗಳಲ್ಲಿ 9 ರನ್‌ ಕಲೆ ಹಾಕಿ ಪೆವಿಲಿಯನ್‌ಗೆ ಮರಳಿದರು. ನಾಯಕ ಫಾಫ್ ಡುಪ್ಲೆಸಿಸ್ 28 ಎಸೆತಗಳಲ್ಲಿ 7 ಬೌಂಡರಿ 4 ಸಿಕ್ಸ್‌ ಸಿಡಿಸಿ 62 ರನ್‌ಗಳನ್ನು ಕಲೆ ಹಾಕಿ ವಿಕೆಟ್‌ ಒಪ್ಪಿಸಿದರು. ಮಹಿಪಾಲ್ ಲೊಮ್ರೋರ್ 11 ಎಸೆತಗಳಿಗೆ 19 ರನ್‌ ಗಳಿಸಿ ಔಟಾದರು. 35 ಎಸೆತಗಳಲ್ಲಿ 7 ಸಿಕ್ಸ್‌ ಹಾಗೂ 5 ಬೌಂಡರಿ ಸಿಡಿಸಿದ ದಿನೇಶ್‌ ಕಾರ್ತಿಕ್‌ 83 ರನ್‌ ಗಳಿಸಿ ಶತಕ ವಂಚಿತರಾದರು. ಅರ್ಜುನ್‌ ರಾವತ್‌ 14 ಎಸೆತಗಳಲ್ಲಿ 25 ಹಾಗೂ ವಿಜಯಕುಮಾರ್‌ ವೈಶಾಕ್‌ 2 ಎಸೆತಗಳಲ್ಲಿ ಒಂದು ರನ್‌ ಕಲೆಹಾಕಿದರು.

    ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಆರಂಭಿಕ ಆಟಗಾರ ಅಭಿಷೇಕ್ 22 ಎಸೆತಗಳಲ್ಲಿ ತಲಾ 2 ಬೌಂಡರಿ ಹಾಗೂ ಸಿಕ್ಸ್‌ ನೆರವಿನಿಂದ 34 ರನ್ ಗಳಿಸಿ ಔಟಾದರು. ಟ್ರಾವಿಸ್ ಹೆಡ್ 39 ಎಸೆತಗಳಲ್ಲಿ ಶತಕ ಸಿಡಿಸಿದರು. ಇದು ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ವೇಗದ ಶತಕವಾಗಿದೆ. ಅಂತಿಮವಾಗಿ ಟ್ರಾವಿಸ್ 41 ಎಸೆತಗಳಲ್ಲಿ 9 ಬೌಂಡರಿ ಹಾಗೂ 8 ಸಿಕ್ಸ್‌ ನೆರವಿನಿಂದ 102 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಮತ್ತೋರ್ವ ಆಟಗಾರ ಹೆನ್ರಿಚ್ ಕ್ಲಾಸೆನ್, 31 ಎಸೆತಗಳಲ್ಲಿ 67 ರನ್ ಗಳಿಸಿ ವೇಗಿ ಫರ್ಗುಸನ್ ಎಸೆತದಲ್ಲಿ ಕ್ಯಾಚಿತ್ತು ಪೆವಿಲಿಯನ್​ಗೆ ಮರಳಿದರು. ಅಬ್ದುಲ್ ಸಮದ್ 10 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸ್‌ ಸಿಡಿಸಿ 37 ರನ್‌ ಕಲೆ ಹಾಕಿದರು. ಏಡೆನ್ ಮಾರ್ಕ್‌ರಾಮ್ 17 ಎಸೆತಗಳಲ್ಲಿ ತಲಾ 2 ಬೌಂಡರಿ ಹಾಗೂ ಸಿಕ್ಸ್‌ ಸಿಡಿಸಿ 32 ರನ್‌ ಗಳಿಸಿದರು. ಇದನ್ನೂ ಓದಿ: ಕೊನೇ ಓವರ್‌ನಲ್ಲಿ 26 ರನ್‌ ಚಚ್ಚಿಸಿಕೊಂಡ ಪಾಂಡ್ಯ – ಹಾರ್ದಿಕ್‌ ಕಳಪೆ ಬೌಲಿಂಗ್‌ಗೆ ಫುಲ್‌ ಕ್ಲಾಸ್‌

  • ಡೆಲ್ಲಿಗೆ 6 ವಿಕೆಟ್‌ಗಳ ಭರ್ಜರಿ ಜಯ – ಕೊನೆಯ ಸ್ಥಾನಕ್ಕೆ ಜಾರಿದ ಆರ್‌ಸಿಬಿ

    ಡೆಲ್ಲಿಗೆ 6 ವಿಕೆಟ್‌ಗಳ ಭರ್ಜರಿ ಜಯ – ಕೊನೆಯ ಸ್ಥಾನಕ್ಕೆ ಜಾರಿದ ಆರ್‌ಸಿಬಿ

    ಲಕ್ನೋ: ಬ್ಯಾಟಿಂಗ್‌, ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಗೆಲ್ಲಲು 168 ರನ್‌ಗಳ ಸವಾಲು ಪಡೆದ ಡೆಲ್ಲಿ ಇನ್ನೂ 11 ಎಸೆತ ಬಾಕಿ ಇರುವಂತೆಯೇ 4 ವಿಕೆಟ್‌ ನಷ್ಟಕ್ಕೆ 170 ರನ್‌ ಹೊಡೆದು ಟೂರ್ನಿಯಲ್ಲಿ ಎರಡನೇ ಜಯ ಸಾಧಿಸಿತು. ಈ ಮೂಲಕ ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಜಿಗಿದಿದೆ.

    ಡೇವಿಡ್‌ ವಾರ್ನರ್‌ (David Warner) ಬೇಗನೇ ಔಟಾದರೂ ಪೃಥ್ವಿ ಶಾ 32 ರನ್‌ (22 ಎಸೆತ, 4 ಬೌಂಡರಿ), ಜೇಕ್ ಫ್ರೇಸರ್ 55 ರನ್(35‌ ಎಸೆತ, 2 ಬೌಂಡರಿ, 5 ಸಿಕ್ಸರ್‌), ರಿಷಭ್‌ ಪಂತ್‌ (Rishab Pant) 41 ರನ್‌(24 ಎಸೆತ, 4 ಬೌಂಡರಿ, 2 ಸಿಕ್ಸ್‌) ಸಿಡಿಸಿದ ಪರಿಣಾಮ ಡೆಲ್ಲಿ ಜಯಗಳಿಸಿತು.

    ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಲಕ್ನೋಗೆ ಕ್ವಿಂಟನ್‌ ಡಿ ಕಾಕ್‌ 19 ರನ್‌, ನಾಯಕ ಕೆಎಲ್‌ ರಾಹುಲ್‌ (KL Rahul) 39 ರನ್‌(22 ಎಸೆತ, 5 ಬೌಂಡರಿ, 1 ಸಿಕ್ಸರ್‌), ಕೊನೆಯಲ್ಲಿ ಆಯುಷ್ ಬದೋನಿ ಅವರ ಸ್ಫೋಟಕ ಔಟಾಗದೇ 55 ರನ್‌(35 ಎಸೆತ, 5 ಬೌಂಡರಿ, 1 ಸಿಕ್ಸರ್‌) ನೆರವಿನಿಂದ ಲಕ್ನೋ 7 ವಿಕೆಟ್‌ ನಷ್ಟಕ್ಕೆ 167 ರನ್‌ ಹೊಡೆಯಿತು.  ಕುಲದೀಪ್‌ ಯಾದವ್‌ 20 ರನ್‌ ನೀಡಿ 3 ವಿಕೆಟ್‌ ಕಿತ್ತರು.

    ಕೊನೆಯಲ್ಲಿ ಆರ್‌ಸಿಬಿ:
    ಇಂದಿನ ಪಂದ್ಯವನ್ನು ಡೆಲ್ಲಿ ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಏರಿದರೆ ಆರ್‌ಸಿಬಿ (RCB) ಕೊನೆಯ ಸ್ಥಾನಕ್ಕೆ ಜಾರಿದೆ. ಡೆಲ್ಲಿ 6 ಪಂದ್ಯಗಳ ಪೈಕಿ 2 ರಲ್ಲಿ ಜಯ ಸಾಧಿಸಿದ್ದರೆ ಆರ್‌ಸಿಬಿ 6 ಪಂದ್ಯಗಳ ಪೈಕಿ 5 ರಲ್ಲಿ ಸೋಲುವ ಮೂಲಕ 2 ಅಂಕ ಸಂಪಾದಿಸಿ 10ನೇ ಸ್ಥಾನಕ್ಕೆ ಕುಸಿದಿದೆ.

  • ಕಳಪೆ ಬೌಲಿಂಗ್‌, ಫೀಲ್ಡಿಂಗ್‌ – ಬುಮ್ರಾ, ಕಿಶನ್‌, ಸೂರ್ಯ ಆಟಕ್ಕೆ ಆರ್‌ಸಿಬಿ ಬರ್ನ್‌

    ಕಳಪೆ ಬೌಲಿಂಗ್‌, ಫೀಲ್ಡಿಂಗ್‌ – ಬುಮ್ರಾ, ಕಿಶನ್‌, ಸೂರ್ಯ ಆಟಕ್ಕೆ ಆರ್‌ಸಿಬಿ ಬರ್ನ್‌

    ಮುಂಬೈ: ಕಳಪೆ ಬೌಲಿಂಗ್‌ಗೆ, ಕಳಪೆ ಫೀಲ್ಡಿಂಗ್‌ಗೆ ಮತ್ತೆ ಆರ್‌ಸಿಬಿ (RCB) ಬೆಲೆ ತೆತ್ತಿದೆ. ಆರಂಭಿಕ ಆಟಗಾರ ಇಶನ್‌ ಕಿಶನ್‌, ನಂತರ ಸೂರ್ಯಕುಮಾರ್‌ ಯಾದವ್‌ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಮುಂಬೈ ಇಂಡಿಯನ್ಸ್‌ (Mumbai Indians) 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಗೆಲ್ಲಲು 197 ರನ್‌ಗಳ ಗುರಿಯನ್ನು ಪಡೆದ ಮುಂಬೈ 15.3 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 199 ರನ್‌ ಹೊಡೆಯಿತು. ಈ ಮೂಲಕ ಮೂರು ಸೋಲಿನಿಂದ ಕಂಗೆಟ್ಟಿದ್ದ ಮುಂಬೈ ಎರಡನೇ ಜಯ ಸಾಧಿಸಿತು. 6 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಆರ್‌ಸಿಬಿ ಸೋತಿದ್ದು ಡೆಲ್ಲಿ 2 ಅಂಕ ಗಳಿಸಿ ಕೊನೆಯ ಸ್ಥಾನದಲ್ಲಿದೆ.

    ಈಶನ್‌ ಕಿಶನ್‌ (Ishan Kishan) ಮತ್ತು ರೋಹಿತ್‌ ಶರ್ಮಾ (Rohit Sharma) ಸ್ಫೋಟಕ ಆರಂಭ ನೀಡಿದರು. ಇವರಿಬ್ಬರು ಮೊದಲ ವಿಕೆಟಿಗೆ 101 ರನ್‌ ಜೊತೆಯಾಟವಾಡಿದರು. ಇಶನ್‌ ಕಿಶನ್‌ 69 ರನ್‌(34 ಎಸೆತ, 7 ಬೌಂಡರಿ, 5 ಸಿಕ್ಸ್‌), ರೋಹಿತ್‌ ಶರ್ಮಾ 38 ರನ್‌(24 ಎಸೆತ, 3 ಬೌಂಡರಿ, 3 ಸಿಕ್ಸರ್‌) ಹೊಡೆದು ಔಟಾದರು.

     

    ಗಾಯಗೊಂಡು ತಂಡದಿಂದ ಹೊರಗೆ ಇದ್ದ ಸೂರ್ಯಕುಮಾರ್‌ ಯಾದವ್‌ (Surya Kumar Yadav) ತಮ್ಮ ಎಂದಿನ ಲಯದಲ್ಲಿ ಬ್ಯಾಟ್‌ ಬೀಸಿದರು. ಪರಿಣಾಮ ಕೇವಲ 19 ಎಸೆತದಲ್ಲಿ 52 ರನ್‌ (5 ಬೌಂಡರಿ, 4 ಸಿಕ್ಸರ್‌) ಸಿಡಿಸಿ ವಿಕೆಟ್‌ ಒಪ್ಪಿಸಿದರು. ಕೊನೆಯಲ್ಲಿ ನಾಯಕ ಹಾರ್ದಿಕ್‌ ಪಾಂಡ್ಯ ಔಟಾಗದೇ 21 ರನ್‌(6 ಎಸೆತ, 3 ಬೌಂಡರಿ) ತಿಲಕ್‌ ವರ್ಮಾ ಔಟಾಗದೇ 16 ರನ್‌ ಹೊಡೆದರು.

    ಟಾಸ್‌ ಸೋತು ಬ್ಯಾಟಿಂಗ್‌ ಇಳಿದ ಆರ್‌ಸಿಬಿ ಪರ ಮೂವರು ಆಟಗಾರರು ಮಾತ್ರ ಎರಡಂಕಿ ದಾಟಿದ್ದರು. ನಾಯಕ ಫಾ ಡುಪ್ಲೆಸಿಸ್‌ 61 ರನ್‌(40 ಎಸೆತ, 4 ಬೌಂಡರಿ, 3 ಸಿಕ್ಸರ್‌), ರಜತ್‌ ಪಟೀದಾರ್‌ 50 ರನ್‌ (26 ಎಸೆತ, 3 ಬೌಂಡರಿ, 4 ಸಿಕ್ಸರ್‌), ಕೊನೆಯಲ್ಲಿ ದಿನೇಶ್‌ ಕಾರ್ತಿಕ್‌ (Dinesh Karthik) ಸ್ಫೋಟಕ 53 ರನ್‌(23 ಎಸೆತ, 5 ಬೌಂಡರಿ, 4 ಸಿಕ್ಸರ್‌) ಆಟದಿಂದ 8 ವಿಕೆಟ್‌ ನಷ್ಟಕ್ಕೆ 196 ರನ್‌ ಹೊಡೆಯಿತು.

    ಜಸ್‌ಪ್ರೀತ್‌ ಬುಮ್ರಾ 21 ರನ್‌ ನೀಡಿ 5 ವಿಕೆಟ್‌ ಕೀಳುವ ಮೂಲಕ ಆರ್‌ಸಿಬಿ ಬೆನ್ನೆಲುಬನ್ನು ಮುರಿದರು. 4 ಎಸೆತ ಎದುರಿಸಿದ ಮ್ಯಾಕ್ಸ್‌ ವೆಲ್‌ ಶೂನ್ಯ ಸುತ್ತಿ ಮತ್ತೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.

  • ಫಿಫ್ಟಿ ಬಳಿಕ ಕೊಹ್ಲಿ ಸ್ಟ್ರೈಕ್‌ರೇಟ್‌ ಹೆಚ್ಚಾಗ್ಬೇಕಿತ್ತು – ಮ್ಯಾಕ್ಸಿ ತರ ಆದ್ರೆ ಏನ್‌ ಮಾಡೋಕಾಗುತ್ತೆ: ಸೆಹ್ವಾಗ್‌

    ಫಿಫ್ಟಿ ಬಳಿಕ ಕೊಹ್ಲಿ ಸ್ಟ್ರೈಕ್‌ರೇಟ್‌ ಹೆಚ್ಚಾಗ್ಬೇಕಿತ್ತು – ಮ್ಯಾಕ್ಸಿ ತರ ಆದ್ರೆ ಏನ್‌ ಮಾಡೋಕಾಗುತ್ತೆ: ಸೆಹ್ವಾಗ್‌

    – ಒಬ್ಬರಾದ್ರೂ ವಿಕೆಟ್‌ ತೆಗೆಯೋರಿಲ್ಲ – ಆರ್‌ಸಿಬಿ ಹೇಗೆ ತಾನೆ ಗೆಲ್ಲುತ್ತೆ? – ಇರ್ಫಾನ್‌ ಪಠಾಣ್‌ ಗರಂ

    ಜೈಪುರ: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RR vs RCB) ತಂಡದ ಸೋಲು ಕ್ರಿಕೆಟ್‌ ಲೋಕದಲ್ಲಿ ಭಾರೀ ಸದ್ದು ಮಾಡುತ್ತಿದೆ. ತಂಡದಲ್ಲಿ ನಿಧಾನಗತಿಯ ಬ್ಯಾಟಿಂಗ್‌ ನಡೆಸಿದ ವಿರಾಟ್‌ ಕೊಹ್ಲಿ (Virat Kohli), ಪ್ರಮುಖ ವಿಕೆಟ್‌ ಕೀಳುವಲ್ಲಿ ವಿಫಲರಾದ ಬೌಲರ್‌ಗಳು ಹಾಗೂ ಕೈಗೊಟ್ಟ ಗ್ಲೆನ್‌ ಮಾಕ್ಸ್‌ವೆಲ್‌ ವಿರುದ್ಧ ಹಿರಿಯ ಕ್ರಿಕೆಟಿಗರು ಹರಿಹಾಯ್ದಿದ್ದಾರೆ.

    ಆರ್‌ಸಿಬಿ ಸೋಲಿನ ಕುರಿತು ಮಾತನಾಡಿರುವ ಮಾಜಿ ಕ್ರಿಕೆಟಿಗ ವಿರಾಟ್‌ ಕೊಹ್ಲಿ, ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಇನ್ನೂ 20 ರನ್‌ ಹೆಚ್ಚುವರಿ ಗಳಿಸಬೇಕಿತ್ತು. ವಿರಾಟ್‌ ಕೊಹ್ಲಿ ಇನ್ನಿಂಗ್ಸ್‌ ಚೆನ್ನಾಗಿತ್ತು. ಆದ್ರೆ ಅವರೊಂದಿಗೆ ಸಾಥ್‌ ನೀಡಬೇಕಿದ್ದ ಮ್ಯಾಕ್ಸ್‌ವೆಲ್‌, ಕ್ಯಾಮರೂನ್‌ ಗ್ರೀನ್‌ ಸರಿಯಾಗಿ ಬ್ಯಾಟಿಂಗ್‌ ಮಾಡಲಿಲ್ಲ. ಮಹಿಪಾಲ್‌ ಲೊಮ್ರೋರ್‌ ಸಹ ತಂಡದಲ್ಲಿ ಇಲ್ಲದೇ ಇದ್ದದ್ದು ದೊಡ್ಡ ನಷ್ಟವಾಯಿತು. ವಿರಾಟ್‌ ಕೊಹ್ಲಿ 39 ಬಾಲ್‌ಗೆ 50 ರನ್‌ ಗಳಿಸಿದಾಗ, ಅವರ ಸ್ಟ್ರೈಕ್‌ ರೇಟ್‌ 200ರ ಗಡಿ ದಾಟಬೇಕಿತ್ತು. ಆದ್ರೆ ಇತರ ಬ್ಯಾಟರ್‌ಗಳು ಸಾಥ್‌ ನೀಡದ ಪರಿಣಾಮ ಸಂಪೂರ್ಣ ಒತ್ತಡ ಕೊಹ್ಲಿ ಮೇಲೆ ಇತ್ತು ಎಂದು ಹೇಳಿದ್ದಾರೆ.

    ಕೊಹ್ಲಿ ಒಳ್ಳೆ ಫಾರ್ಮ್‌ನಲ್ಲಿದ್ದಾರೆ, ಕೊನೇವರೆಗೂ ಕ್ರೀಸ್‌ನಲ್ಲಿ ಉಳಿಯೋದು ಅವರ ಪಾತ್ರ. ಆದ್ರೆ ಅಷ್ಟೊಂದು ಹಣಕ್ಕೆ ಆಯ್ಕೆಯಾದ ಇತರ ಬ್ಯಾಟರ್‌ಗಳು ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಬೇಕು. ಮ್ಯಾಕ್ಸ್‌ವೆಲ್‌ (Glenn maxwell) ತರ ಆದ್ರೆ ಯಾರು ಏನ್‌ ಮಾಡೋದಕ್ಕೆ ಆಗುತ್ತೆ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಬಟ್ಲರ್‌ ಬೊಂಬಾಟ್‌ ಶತಕ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ; ಆರ್‌ಸಿಬಿಗೆ ಹೀನಾಯ ಸೋಲು!

    ಆರ್‌ಸಿಬಿ ವಿರುದ್ಧ ಪಠಾಣ್‌ ಗರಂ:
    ಇಬ್ಬರು ಬ್ಯಾಟರ್‌ಗಳು (ಸಂಜು ಸ್ಯಾಮ್ಸನ್‌, ಜೋಸ್‌ ಬಟ್ಲರ್‌) 170+ ಸ್ಟ್ರೈಕ್ ರೇಟ್‌ನೊಂದಿಗೆ ಆಡುತ್ತಿದ್ದಾರೆ. ಇನ್ನೊಂದು ತುದಿಯಲ್ಲಿ ಒಬ್ಬನೇ ಒಬ್ಬ ವಿಕೆಟ್ ಪಡೆಯುವ ಬೌಲರ್‌ ಇಲ್ಲ. ಆರ್‌ಸಿಬಿ ಬೌಲರ್‌ಗಳ ಮೊರೆ ಹೋಗಲಿಲ್ಲ. ಹೀಗಿರುವಾಗ ನೀವು ಹೇಗೆ ಗೆಲ್ಲುತ್ತೀರಿ? ಎಂದು ತಿವಿದಿದ್ದಾರೆ. ಇದನ್ನೂ ಓದಿ: ಟಿ20 ವಿಶ್ವಕಪ್‌ಗೆ ಭರ್ಜರಿ ತಯಾರಿ – ಪಾಕಿಸ್ತಾನ ತಂಡಕ್ಕೆ ಸೇನೆಯಿಂದ ತರಬೇತಿ!

    ಮಹಿಪಾಲ್‌ ಲೋಮ್ರೋರ್‌ ದೇಶೀಯ ಕ್ರಿಕೆಟ್‌ನಲ್ಲಿ ಈ ಪಿಚ್‌ನಲ್ಲಿ ಆಡುತ್ತಾರೆ. ಆರ್‌ಸಿಬಿ ತಂಡದಲ್ಲಿ ತಮ್ಮ ಫಾರ್ಮ್‌ ಸಾಬೀತು ಮಾಡಿದ್ದಾರೆ. ಆದ್ರೆ ಅವರು ಪ್ಲೇಯಿಂಗ್‌-11 ಭಾಗವಾಗಿರಲಿಲ್ಲ. ಆದ್ದರಿಂದ ಫ್ರಾಂಚೈಸಿಯಲ್ಲಿ ಭಾರತೀಯ ಕೋಚ್‌ಗಳು ಇದ್ದರೆ, ಇಂತಹ ಮೂಲಭೂತ ತಪ್ಪುಗಳು ಆಗುವುದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಜೋಸ್‌ ಬಟ್ಲರ್‌ ಅವರ ಶತಕವನ್ನು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಶ್ರೀಕೃಷ್ಣನ ಮೇಲಿನ ನಂಬಿಕೆಯಿಂದ ಮಾಂಸಾಹಾರ ತ್ಯಜಿಸಿದ್ರಾ ವೇಗಿ? – ಮಯಾಂಕ್‌ ತಾಯಿ ಹೇಳಿದ್ದೇನು?

    ಶನಿವಾರ ಸವಾಯ್‌ ಮಾನ್ಸಿಂಗ್‌ ಕ್ರೀಡಾಂಗಣದಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 10 ಓವರ್‌ಗಳಲ್ಲಿ 183 ರನ್‌ ಗಳಿಸಿತ್ತು. ರಾಜಸ್ಥಾನ್‌ ರಾಯಲ್ಸ್‌ 19.1 ಓವರ್‌ಗಳಲ್ಲೇ 189 ರನ್‌ ಗಳಿಸಿ ಗೆಲುವು ಸಾಧಿಸಿತ್ತು. ಹೌದು. ಆರ್‌ಸಿಬಿ ಪರ ಏಕಾಂಗಿ ಹೋರಾಟ ನಡೆಸಿದ್ದ ವಿರಾಟ್ ಕೊಹ್ಲಿ 67 ಎಸೆತಗಳಲ್ಲಿ ಶತಕ ಸಿಡಿಸಿದರೆ, ಒಟ್ಟಾರೆ 72 ಎಸೆತಗಳಿಂದ 12 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 113 ರನ್ ದಾಖಲಿಸಿದರು.

    ಐಪಿಎಲ್‌ನಲ್ಲಿ ನಿಧಾನಗತಿಯ ಶತಕ ಸಿಡಿಸಿದ ಪ್ಲೇಯರ್ಸ್‌:
    * ವಿರಾಟ್ ಕೊಹ್ಲಿ: 67 ಎಸೆತಗಳು Vs ರಾಜಸ್ಥಾನ್ ರಾಯಲ್ಸ್, 2024
    * ಮನೀಶ್ ಪಾಂಡೆ: 67 ಎಸೆತಗಳು Vs ಡೆಕ್ಕನ್ ಚಾರ್ಜರ್ಸ್, 2009
    * ಸಚಿನ್ ತೆಂಡೂಲ್ಕರ್: 66 ಎಸೆತಗಳು Vs ವಿರುದ್ಧ ಕೊಚ್ಚಿ ಟಸ್ಕರ್ಸ್ ಕೇರಳ, 2011
    * ಡೇವಿಡ್ ವಾರ್ನರ್: 66 ಎಸೆತಗಳು Vs ಕೆಕೆಆರ್‌, 2010
    * ಜೋಸ್ ಬಟ್ಲರ್: 66 ಎಸೆತಗಳು Vs ಮುಂಬೈ ಇಂಡಿಯನ್ಸ್‌, 2022
    * ಕೆವಿನ್ ಪೀಟರ್ಸನ್: 64 ಎಸೆತಗಳು Vs ಡೆಕ್ಕನ್ ಚಾರ್ಜರ್ಸ್, 2012

  • ಐಪಿಎಲ್‌ ಇತಿಹಾಸದಲ್ಲೇ ನಿಧಾನಗತಿ ಶತಕ – ಆರ್‌ಸಿಬಿಗೆ ಕೊಹ್ಲಿನೇ ವಿಲನ್‌ ಆದ್ರಾ?

    ಐಪಿಎಲ್‌ ಇತಿಹಾಸದಲ್ಲೇ ನಿಧಾನಗತಿ ಶತಕ – ಆರ್‌ಸಿಬಿಗೆ ಕೊಹ್ಲಿನೇ ವಿಲನ್‌ ಆದ್ರಾ?

    ಜೈಪುರ: 2024ರ ಐಪಿಎಲ್ ಟೂರ್ನಿಯ ರಾಜಸ್ಥಾನ್ ರಾಯಲ್ಸ್ (Rajasthan Royals) ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಜೆಂಜರ್ಸ್‌ ಬೆಂಗಳೂರು ತಂಡದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ (Virat Kohli) ಅವರು ದಾಖಲೆಯ 8ನೇ ಶತಕ ಸಿಡಿಸಿದರು. ಅಲ್ಲದೇ ಐಪಿಎಲ್‌ನಲ್ಲಿ 7,500 ರನ್‌ ಪೂರೈಸಿದ ಮೊದಲ ಆಟಗಾರ ಮೈಲುಗಲ್ಲನ್ನೂ ಸ್ಥಾಪಿಸಿದರು. ಆದ್ರೆ ಈಗ ಆರ್‌ಸಿಬಿ ತಂಡದ ಸೋಲಿಗೆ ಕೊಹ್ಲಿ ಅವರನ್ನು ಹೊಣೆ ಮಾಡಲಾಗಿದೆ.

    ಶನಿವಾರ ಸವಾಯ್‌ ಮಾನ್ಸಿಂಗ್‌ ಕ್ರೀಂಡಾಗಣದಲ್ಲಿ ನಡೆದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅವರು ಗಳಿಸಿದ ನಿಧಾನಗತಿಯ ಶತಕವೇ ಆರ್‌ಸಿಬಿ (RCB) ತಂಡದ ಸೋಲಿಗೆ ಕಾರಣ ಎಂದು ನೆಟ್ಟಿಗರು ದೂಷಿಸಿದ್ದಾರೆ.

    ಹೌದು. ಆರ್‌ಸಿಬಿ ಪರ ಅಂತಿಮ ಎಸೆತದವರೆಗೂ ಏಕಾಂಗಿ ಹೋರಾಟ ನಡೆಸಿದ್ದ ವಿರಾಟ್ ಕೊಹ್ಲಿ 67 ಎಸೆತಗಳಲ್ಲಿ ಶತಕ ಸಿಡಿಸಿದರೆ, ಒಟ್ಟಾರೆ 72 ಎಸೆತಗಳಿಂದ 12 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 113 ರನ್ ದಾಖಲಿಸಿದರು. ಆದ್ರೆ ಕೊಹ್ಲಿ ಅವರ ಈ ಶತಕವು ಐಪಿಎಲ್ ಇತಿಹಾಸದಲ್ಲೇ ಅತ್ಯಂತ ನಿಧಾನಗತಿಯ ಶತಕವಾಗಿತ್ತು. ಅಲ್ಲದೇ 20 ಓವರ್‌ಗಳ ಇನ್ನಿಂಗ್ಸ್‌ನಲ್ಲಿ ಬರೋಬ್ಬರಿ 12 ಓವರ್‌ಗಳನ್ನು ಒಬ್ಬರೇ ಎದುರಿಸಿದರು. ಹಿಂದಿನ ಕೆಕೆಆರ್‌ ವಿರುದ್ಧ ನಡೆದ ಪಂದ್ಯದಲ್ಲೂ ಕೊಹ್ಲಿ 59 ಎಸೆತಗಳನ್ನ ಎದುರಿಸಿ ಕೇವಲ 83 ರನ್‌ (4 ಬೌಂಡರಿ, 4 ಸಿಕ್ಸರ್‌) ಕಲೆಹಾಕಿದ್ದರು. ಕೊಹ್ಲಿ ಅವರ ನಿಧಾನಗತಿಯ ಬ್ಯಾಟಿಂಗ್‌ನಿಂದಲೇ ತಂಡ ಸೋಲಿಗೆ ತುತ್ತಾಯಿತು ಎಂದು ನೆಟ್ಟಿಗರು ಅಸಮಾಧಾನ ಹೊರಹಾಕಿದ್ದಾರೆ.

    ಆರ್‌ಸಿಬಿ ಮೊದಲ ವಿಕೆಟ್‌ಗೆ 14 ಓವರ್‌ಗಳಲ್ಲಿ 125 ರನ್‌ ಗಳಿಸಿತ್ತು. ದಿನೇಶ್‌ ಕಾರ್ತಿಕ್‌, ಮಹಿಪಾಲ್‌ ಲೊಮ್ರೋರ್‌, ಅನೂಜ್‌ ರಾವತ್‌ ನಂತಹ ಸ್ಪೋಟಕ ಆಟಗಾರರ ವಿಕೆಟ್‌ಗಳಿದ್ದವು. ಆದ್ರೆ ಕ್ರೀಸ್‌ ಬಿಟ್ಟುಕೊಡದ ಕೊಹ್ಲಿ ನಿಧಾನಗತಿಯ ಬ್ಯಾಟಿಂಗ್‌ ಅನ್ನೇ ಮುಂದುವರಿಸಿದರು. ಇದು ತಂಡದ ಬೃಹತ್‌ ಮೊತ್ತದ ಮೇಲೆ ಭಾರೀ ಪರಿಣಾಮ ಬೀರಿತು. ಇದರಿಂದಾಗಿ ಕೊಹ್ಲಿ ಅವರ ನಿಧಾನಗತಿಯ ಬ್ಯಾಟಿಂಗ್‌ ಸೋಲಿಗೆ ಕಾರಣ ಎಂದು ನೆಟ್ಟಿಗರು ದೂಷಿಸಿದ್ದಾರೆ. ಆದ್ರೆ ನಾಯಕ ಡುಪ್ಲೆಸಿಸ್‌ ಹೊರತುಪಡಿಸಿ ಉಳಿದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಕೊಹ್ಲಿ ಅವರೇ ಏಕಾಂಗಿ ಹೋರಾಟ ನಡೆಸಿದ್ದಾರೆ ಎಂದು ಕೊಹ್ಲಿಯನ್ನ ಕೆಲವರು ಬೆಂಬಲಿಸಿದ್ದಾರೆ.

    ಐಪಿಎಲ್‌ನಲ್ಲಿ ನಿಧಾನಗತಿಯ ಶತಕ ಸಿಡಿಸಿದ ಪ್ಲೇಯರ್ಸ್‌:
    * ವಿರಾಟ್ ಕೊಹ್ಲಿ: 67 ಎಸೆತಗಳು Vs ರಾಜಸ್ಥಾನ್ ರಾಯಲ್ಸ್, 2024
    * ಮನೀಶ್ ಪಾಂಡೆ: 67 ಎಸೆತಗಳು Vs ಡೆಕ್ಕನ್ ಚಾರ್ಜರ್ಸ್, 2009
    * ಸಚಿನ್ ತೆಂಡೂಲ್ಕರ್: 66 ಎಸೆತಗಳು Vs ವಿರುದ್ಧ ಕೊಚ್ಚಿ ಟಸ್ಕರ್ಸ್ ಕೇರಳ, 2011
    * ಡೇವಿಡ್ ವಾರ್ನರ್: 66 ಎಸೆತಗಳು Vs ಕೆಕೆಆರ್‌, 2010
    * ಜೋಸ್ ಬಟ್ಲರ್: 66 ಎಸೆತಗಳು Vs ಮುಂಬೈ ಇಂಡಿಯನ್ಸ್‌, 2022
    * ಕೆವಿನ್ ಪೀಟರ್ಸನ್: 64 ಎಸೆತಗಳು Vs ಡೆಕ್ಕನ್ ಚಾರ್ಜರ್ಸ್, 2012

    ಐಪಿಎಲ್‌ನಲ್ಲಿ ಹೆಚ್ಚು ಶತಕ ಸಿಡಿಸಿದ ಟಾಪ್‌-5 ಪ್ಲೇಯರ್ಸ್‌
    * ವಿರಾಟ್‌ ಕೊಹ್ಲಿ – 8
    * ಕ್ರಿಸ್‌ ಗೇಲ್‌ – 6
    * ಜೋಸ್‌ ಬಟ್ಲರ್‌ – 6
    * ಕೆ.ಎಲ್‌ ರಾಹುಲ್‌ – 4
    * ಶೇನ್‌ ವಾಟ್ಸನ್‌ – 4

  • ಬಟ್ಲರ್‌ ಬೊಂಬಾಟ್‌ ಶತಕ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ; ಆರ್‌ಸಿಬಿಗೆ ಹೀನಾಯ ಸೋಲು!

    ಬಟ್ಲರ್‌ ಬೊಂಬಾಟ್‌ ಶತಕ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ; ಆರ್‌ಸಿಬಿಗೆ ಹೀನಾಯ ಸೋಲು!

    – ಕೊಹ್ಲಿ-ಡುಪ್ಲೆಸಿಸ್‌ ಶತಕದ ಜೊತೆಯಾಟ ವ್ಯರ್ಥ
    – ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ರಾಜಸ್ಥಾನ್‌ ರಾಯಲ್ಸ್‌

    ಜೈಪುರ: ಜೋಸ್‌ ಬಟ್ಲರ್‌ (Jos Buttler) ಬೊಂಬಾಟ್‌ ಶತಕ ಹಾಗೂ ಸಂಜು ಸ್ಯಾಮ್ಸನ್‌ ಅರ್ಧಶತಕದ ಬ್ಯಾಟಿಂಗ್‌ ನೆರವಿನಿಂದ ರಾಜಸ್ಥಾನ್‌ ರಾಯಲ್ಸ್‌ (Rajasthan Royals) ತಂಡವು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ.

    ಇಲ್ಲಿನ ಸವಾಯ್‌ ಮಾನ್ಸಿಂಗ್‌ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ (RCB) 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 183 ರನ್‌ ಗಳಿಸಿತ್ತು. 184 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ರಾಜಸ್ಥಾನ್‌ ರಾಯಲ್ಸ್‌ 19.1 ಓವರ್‌ಗಳಲ್ಲೇ 189 ರನ್‌ ಚಚ್ಚಿ ಗೆಲುವು ಸಾಧಿಸಿದೆ. ಇದರೊಂದಿಗೆ ಅಂಕಪಟ್ಟಿಯಲ್ಲೂ ಅಗ್ರಸ್ಥಾನಕ್ಕೇರಿದೆ.

    ಚೇಸಿಂಗ್‌ ಆರಂಭಿಸಿದ ರಾಜಸ್ಥಾನ್‌ ರಾಯಲ್ಸ್‌ ತಂಡ ಮೊದಲ ಓವರ್‌ನ 2ನೇ ಎಸೆತದಲ್ಲೇ ಯಶಸ್ವಿ ಜೈಸ್ವಾಲ್‌ ಅವರ ಪ್ರಮುಖ ವಿಕೆಟ್‌ ಕಳೆದುಕೊಂಡಿತು. ಈ ವೇಳೆ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ಜೋಸ್‌ ಬಟ್ಲರ್‌ ಹಾಗೂ ನಾಯಕ ಸಂಜು ಸ್ಯಾಮ್ಸನ್‌ (Sanju Samson) ಆರ್‌ಸಿಬಿ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ಚೆಂಡಾಡಿದರು. 86 ಎಸೆತಗಳಲ್ಲಿ ಈ ಜೋಡಿ 148 ರನ್‌ಗಳ ಜೊತೆಯಾಟ ನೀಡಿತು. ಈ ವೇಳೆ ಸಂಜು ಸ್ಯಾಮ್ಸನ್‌ ಔಟಾದರೂ ಬಟ್ಲರ್‌ ತಮ್ಮ ಅಬ್ಬರ ಮುಂದುವರಿಸಿದರು.

    ರಾಜಸ್ಥಾನ್‌ ಪರ ಜೋಸ್‌ ಬಟ್ಲರ್‌ 58 ಎಸೆತಗಳಲ್ಲಿ 100 ರನ್‌ (4 ಸಿಕ್ಸರ್‌, 9 ಬೌಂಡರಿ), ಸಂಜು ಸ್ಯಾಮ್ಸನ್‌ 69 ರನ್‌ (42 ಎಸೆತ, 2 ಸಿಕ್ಸರ್‌, 8 ಬೌಂಡರಿ), ರಿಯಾನ್‌ ಪರಾಗ್‌ 4 ರನ್‌, ಧ್ರುವ್‌ ಜುರೆಲ್‌ 2 ರನ್‌, ಶಿಮ್ರಾನ್‌ ಹೆಟ್ಮೇಯರ್‌ 11 ರನ್‌ ಬಾರಿಸಿದರು. ಆರ್‌ಸಿಬಿ ಪರ ರೇಸಿ ಟಾಪ್ಲಿ 2 ವಿಕೆಟ್‌ ಕಿತ್ತರೆ, ಯಶ್‌ ದಯಾಳ್‌, ಮೊಹಮ್ಮದ್‌ ಸಿರಾಜ್‌ ತಲಾ ಒಂದೊಂದು ವಿಕೆಟ್‌ ಕಿತ್ತರು

    ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಪರ ನಾಯಕ ಫಾಫ್‌ ಡು ಪ್ಲೆಸಿಸ್‌ (Faf du Plessis) ಹಾಗೂ ವಿರಾಟ್‌ ಕೊಹ್ಲಿ ಪವರ್‌ ಪ್ಲೇನಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ನಿಧಾನಗತಿಯ ಬ್ಯಾಟಿಂಗ್‌ ನಡೆಸಿದರು. ಇದು ರನ್‌ ವೇಗದ ಗತಿಯನ್ನೂ ಕಳೆದುಕೊಂಡಿತು. ‌

    20 ಓವರ್‌ ಪಂದ್ಯದಲ್ಲಿ ಆರಂಭಿಕ ಆಟಗಾರ ವಿರಾಟ್‌ ಕೊಹ್ಲಿ (Virat Kohli) ಒಬ್ಬರೇ 12 ಓವರ್‌ ಎದುರಿಸಿದರೂ ಕೇವಲ 113 ರನ್‌ (6 ಸಿಕ್ಸರ್‌, 12 ಬೌಂಡರಿ) ಮಾತ್ರವೇ ಗಳಿಸಿದರು. ಇದರೊಂದಿಗೆ ಫಾಫ್‌ ಡು ಪ್ಲೆಸಿಸ್‌ 44 ರನ್‌ಗಳಿಸಿದರೆ, ಉಳಿದ ಯಾವೊಬ್ಬ ಆಟಗಾರನೂ ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಸ್ಪೋಟಕ ಬ್ಯಾಟ್ಸ್‌ಮನ್‌ ಗ್ಲೆನ್‌ ಮ್ಯಾಕ್ಸ್‌ವೆಲ್‌ 1 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರೆ, ಸೌರವ್‌ ಚೌಹಾಣ್‌ 9 ರನ್‌, ಕ್ಯಾಮರೂನ್‌ ಗ್ರೀನ್‌ 5 ರನ್‌ ಗಳಿಸಿದರು.

    ರಾಯಸ್ಥಾನ್‌ ರಾಯಲ್ಸ್‌ ಪರ ಯಜುವೇಂದ್ರ ಚಾಹಲ್‌ 2 ವಿಕೆಟ್‌ ಕಿತ್ತರೆ, ನಾಂದ್ರೆ ಬರ್ಗರ್ ಒಂದು ವಿಕೆಟ್‌ ಪಡೆದರು.

  • 17ನೇ ಆವೃತ್ತಿ ಐಪಿಎಲ್‌ನ ಚೊಚ್ಚಲ ಶತಕ – ರನ್‌ ಮಿಷಿನ್‌ ಕೊಹ್ಲಿಯ ಹೊಸ ಮೈಲುಗಲ್ಲು!

    17ನೇ ಆವೃತ್ತಿ ಐಪಿಎಲ್‌ನ ಚೊಚ್ಚಲ ಶತಕ – ರನ್‌ ಮಿಷಿನ್‌ ಕೊಹ್ಲಿಯ ಹೊಸ ಮೈಲುಗಲ್ಲು!

    ಜೈಪುರ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ (Virat Kohli) ಅಮೋಘ ಶತಕ ಸಿಡಿಸುವ ಮೂಲಕ ಐಪಿಎಲ್‌ನಲ್ಲಿ (IPL 2024) ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ.

    ಇಲ್ಲಿನ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್‌ ರಾಯಲ್ಸ್‌ (Rajasthan Royals) ವಿರುದ್ಧ ನಡೆದ ಪಂದ್ಯದಲ್ಲಿ ಕೊಹ್ಲಿ, ಐಪಿಎಲ್‌ನಲ್ಲಿ ತಮ್ಮ 8ನೇ ಶತಕ ಸಿಡಿಸಿದ್ದಾರೆ. ಅಲ್ಲದೇ 17ನೇ ಆವೃತ್ತಿಯಲ್ಲಿ ದಾಖಲಾದ ಚೊಚ್ಚಲ ಶತಕವೂ ಇದಾಗಿದೆ. ಪ್ರಸ್ತುತ ಟೂರ್ನಿಯ ಆರೆಂಜ್‌ ಕ್ಯಾಪ್‌ ರೇಸ್‌ನಲ್ಲಿ ಮೊದಲ ಸ್ಥಾನದಲ್ಲಿರುವ ಕೊಹ್ಲಿ, ಐಪಿಎಲ್‌ನಲ್ಲಿ ಒಟ್ಟು 7579 ರನ್‌ ಪೂರೈಸಿದ್ದಾರೆ. ಈ ಮೂಲಕ ಇಡೀ ಐಪಿಎಲ್‌ ಆವೃತ್ತಿಯಲ್ಲೇ ಅತಿಹೆಚ್ಚು ರನ್‌ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

    ಆರೆಂಜೆ ಕ್ಯಾಪ್‌ ರೇಸ್‌ನಲ್ಲಿರುವ ಟಾಪ್‌-5 ಆಟಗಾರರು:
    * ವಿರಾಟ್‌ ಕೊಹ್ಲಿ – 316 ರನ್‌ – 5 ಪಂದ್ಯ
    * ರಿಯಾನ್‌ ಪರಾಗ್‌ – 181 ರನ್‌ – 4 ಪಂದ್ಯ
    * ಹೆನ್ರಿಕ್‌ ಕ್ಲಾಸೆನ್‌ – 177 ರನ್‌ – 4 ಪಂದ್ಯ
    * ಶುಭಮನ್‌ ಗಿಲ್‌ – 164 ರನ್‌ – 4 ಪಂದ್ಯ
    * ಅಭಿಷೇಕ್‌ ಶರ್ಮಾ – 161 ರನ್‌ – 4 ಪಂದ್ಯ

    ಐಪಿಎಲ್‌ನಲ್ಲಿ ಹೆಚ್ಚು ಶತಕ ಸಿಡಿಸಿದ ಟಾಪ್‌-5 ಪ್ಲೇಯರ್ಸ್‌
    * ವಿರಾಟ್‌ ಕೊಹ್ಲಿ – 8
    * ಕ್ರಿಸ್‌ ಗೇಲ್‌ – 6
    * ಜೋಸ್‌ ಬಟ್ಲರ್‌ – 5
    * ಕೆ.ಎಲ್‌ ರಾಹುಲ್‌ – 4
    * ಶೇನ್‌ ವಾಟ್ಸನ್‌ – 4

    ಐಪಿಎಲ್‌ನ ಟಾಪ್‌-5 ಸ್ಕೋರರ್‌
    * ವಿರಾಟ್‌ ಕೊಹ್ಲಿ – 7,579 ರನ್‌
    * ಶಿಖರ್‌ ಧವನ್‌ – 6,755 ರನ್‌
    * ಡೇವಿಡ್‌ ವಾರ್ನರ್‌ – 6,545 ರನ್‌
    * ರೋಹಿತ್‌ ಶರ್ಮಾ – 6,280 ರನ್‌
    * ಸುರೇಶ್‌ ರೈನಾ – 5,528 ರನ್‌

  • ಮಹಿಳಾ ಸಬಲೀಕರಣಕ್ಕೆ ʻಪಿಂಕ್‌ ಪ್ರಾಮಿಸ್‌ʼ – ಇಂದಿನ ಪಂದ್ಯದ ಪ್ರತಿ ಸಿಕ್ಸರ್‌ನಿಂದ ಸಿಗಲಿದೆ 6 ಮನೆಗಳಿಗೆ ಸೌರಶಕ್ತಿ

    ಮಹಿಳಾ ಸಬಲೀಕರಣಕ್ಕೆ ʻಪಿಂಕ್‌ ಪ್ರಾಮಿಸ್‌ʼ – ಇಂದಿನ ಪಂದ್ಯದ ಪ್ರತಿ ಸಿಕ್ಸರ್‌ನಿಂದ ಸಿಗಲಿದೆ 6 ಮನೆಗಳಿಗೆ ಸೌರಶಕ್ತಿ

    ಜೈಪುರ: ರಾಜಸ್ಥಾನ್‌ ರಾಯಲ್ಸ್ (Rajasthan Royals) ತಂಡವು ಶನಿವಾರ (ಇಂದು) ಆರ್‌ಸಿಬಿ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಪಿಂಕ್‌ ಬಣ್ಣದ ವಿಶೇಷ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ರಾಜಸ್ಥಾನದ ಮಹಿಳೆಯರ (Rajasthan Women) ಸಬಲೀಕರಣಕ್ಕೆ ನೆರವಾಗುವ ಉದ್ದೇಶವೂ ಇದಾಗಿದೆ.

    ರಾಜಸ್ಥಾನ್‌ ರಾಯಲ್ಸ್‌ ಮತ್ತು ಆರ್‌ಸಿಬಿ (RR vs RCB) ನಡುವಿನ ಪಂದ್ಯ ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದೆ. ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಮಹಿಳೆಯರಿಗೆ ನೆರವಾಗುವ ಉದ್ದೇಶದಿಂದ #PinkPromise ಅಭಿಯಾನ ಆರಂಭಿಸಿದೆ.

    ಏನಿದು ʻಪಿಂಕ್‌ ಪ್ರಾಮಿಸ್‌ʼಅಭಿಯಾನ?
    ರಾಜಸ್ಥಾನ್‌ ರಾಯಲ್ಸ್‌ ತಂಡವು ಮಹಿಳಾ ಸಬಲೀಕರಣ ಉದ್ದೇಶದಿಂದ ಈ ಅಭಿಮಾನ ಆರಂಭಿಸಿದೆ. ಅದಕ್ಕಾಗಿ ವಿಶೇಷ ಪಿಂಕ್‌ ಜೆರ್ಸಿ ಧರಿಸಿ ಆರ್‌ಸಿಬಿ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯದ ಪ್ರತಿ ಟಿಕೆಟ್‌ ಬೆಲೆಯಲ್ಲಿ 100 ರೂ.ಗಳನ್ನ ಮಹಿಳಾ ಸಬಲೀಕರಣ ಕಾರ್ಯಕ್ಕೆ ಸಮರ್ಪಿಸಲಿದೆ. ಜೊತೆಗೆ ʻಆಲ್ ಪಿಂಕ್ ರಾಯಲ್ಸ್ʼ ಜೆರ್ಸಿ ಮಾರಾಟದ ಮೊತ್ತವನ್ನೂ ಇದಕ್ಕೆ ವಿನಿಯೋಗಿಸಲಿದೆ. ಅಷ್ಟೇ ಅಲ್ಲದೇ ರಾಜಸ್ಥಾನ-ಆರ್‌ಸಿಬಿ ತಂಡಗಳು ಈ ಪಂದ್ಯದಲ್ಲಿ ಸಿಡಿಸುವ ಪ್ರತಿ ಸಿಕ್ಸರ್‌ಗೆ ಜೈಪುರ ಜಿಲ್ಲೆಯ ಸಂಭರ್ ಗ್ರಾಮದ ಪ್ರತಿ 6 ಮನೆಗಳಿಗೆ ಸೌರಶಕ್ತಿಯನ್ನು ಫ್ರಾಂಚೈಸಿ ವತಿಯಿಂದ ಒದಗಿಸಲಾಗುತ್ತದೆ.

    ಐಪಿಎಲ್‌ನಲ್ಲಿ ಕಂಡ ವಿಶೇಷ ಅಭಿಯಾನಗಳು?
    ಬಿಸಿಸಿಐ ಸೇರಿದಂತೆ ಹಲವು ಫ್ರಾಂಚೈಸಿಗಳು ಐಪಿಎಲ್‌ ಟೂರ್ನಿಯನ್ನ ಕೇವಲ ಹಣದ ಉದ್ದೇಶಕ್ಕಾಗಿ ನಡೆಸದೇ ವಿಶಿಷ್ಟ ಜಾಗೃತಿ ಅಭಿಯಾನಗಳನ್ನೂ ಹಮ್ಮಿಕೊಳ್ಳಲಾಗುತ್ತದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಪ್ರತಿ ಆವೃತ್ತಿಯ ಒಂದು ಪಂದ್ಯದಲ್ಲಿ ಹಸಿರು ಪರಿಸರ ಜಾಗೃತಿ ದೃಷ್ಟಿಯಿಂದ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತದೆ. ಕಳೆದ ವರ್ಷ ಗುಜರಾತ್‌ ಟೈಟಾನ್ಸ್‌ ತಂಡವು ಅನ್ನನಾಳದ ಕ್ಯಾನ್ಸರ್‌ ಕುರಿತು ಜಾಗೃತಿಗಾಗಿ ಲ್ಯಾವೆಂಡರ್ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿತ್ತು. ಅಲ್ಲದೇ 2023ರ ಐಪಿಎಲ್‌ ಆವೃತ್ತಿಯ ಪ್ಲೇಆಫ್‌ ಮತ್ತು ಫೈನಲ್ ‌ಪಂದ್ಯಗಳಲ್ಲಿ ಪ್ರತಿ ಡಾಟ್‌ ಬಾಲ್‌ಗೆ 500 ಗಿಡಗಳನ್ನು ನೆಡುವ ಅಭಿಯಾನವನ್ನೂ ಹಮ್ಮಿಕೊಂಡಿತ್ತು.