Tag: re exam

  • ನೀಟ್ ಪರೀಕ್ಷೆ: ಒಳಉಡುಪು ಕಳಚಿಡುವಂತೆ ಒತ್ತಾಯಿಸಿದ್ದ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆಗೆ ಅನುಮತಿ

    ನೀಟ್ ಪರೀಕ್ಷೆ: ಒಳಉಡುಪು ಕಳಚಿಡುವಂತೆ ಒತ್ತಾಯಿಸಿದ್ದ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆಗೆ ಅನುಮತಿ

    ತಿರುವನಂತಪುರಂ: ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್) ವೇಳೆ ತಮ್ಮ ಒಳ ಉಡುಪುಗಳನ್ನು ಕಳಚಿಟ್ಟು ಬರುವಂತೆ ಹೇಳಲಾಗಿದ್ದ ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆಯನ್ನು ಪುನಃ ನಡೆಸಲಾವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‍ಟಿಎ) ತಿಳಿಸಿದೆ.

    ವಿದ್ಯಾರ್ಥಿನಿಯರು ಸೆಪ್ಟೆಂಬರ್ 4 ರಂದು ಪರೀಕ್ಷೆಯನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಮಾಡಬಹುದು. ಈ ಬಗ್ಗೆ ವಿದ್ಯಾರ್ಥಿನಿಯರಿಗೆ ಎನ್‍ಟಿಎ ಇಮೇಲ್ ಅನ್ನು ಕಳುಹಿಸಿದೆ ಎಂದು ಹೇಳಿದೆ. ಇದನ್ನೂ ಓದಿ: ಪಠ್ಯ, ಪುಸ್ತಕ ಪರಿಷ್ಕರಣೆಗೆ ಮುಂದುವರಿದ ವಿರೋಧ- ತಮ್ಮ ಕವಿತೆಯನ್ನು ಬಳಸಬೇಡಿ: ರೂಪಾ ಹಾಸನ

    ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನೀಟ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಮುನ್ನ ತಮ್ಮ ಒಳಉಡುಪುಗಳನ್ನು ಕಳಚಿಡುವಂತೆ ಹೇಳಲಾಗಿತ್ತು. ಈ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಜುಲೈನಲ್ಲಿ ವ್ಯಕ್ತಿಯೊಬ್ಬರು ಕೊಟ್ಟಾರಕರ ಪೊಲೀಸರಿಗೆ ದೂರು ನೀಡಿದ್ದರು ಮತ್ತು ಚಾತಮಂಗಲಂನಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮುನ್ನ ತಮ್ಮ ಮಗಳು ಸೇರಿದಂತೆ ಮಹಿಳಾ ನೀಟ್ ಆಕಾಂಕ್ಷಿಗಳು ತಮ್ಮ ಬ್ರಾಗಳನ್ನು ತೆಗೆಯುವಂತೆ ಹೇಳಿದ್ದಾರೆ ಎಂದು ಆರೋಪಿಸಿದ್ದರು.

    EXAM

     

    ಪರೀಕ್ಷಾ ಕೇಂದ್ರದೊಳಗೆ ಲೋಹದ ವಸ್ತು ತೆಗೆದುಕೊಂಡು ಹೋಗುವಂತಿಲ್ಲ ಎನ್ನುವ ನಿಯಮವಿದೆ. ಹಲವು ವಿದ್ಯಾರ್ಥಿನಿಯರು ತೊಟ್ಟಿದ್ದ ಬ್ರಾದಲ್ಲಿ ಅಂಡರ್‌ವೈರಿಂಗ್ ಇದ್ದು, ಅದು ಮೆಟಲ್ ಡಿಟೆಕ್ಟರ್‌ನಲ್ಲಿ ಡಿಟೆಕ್ಟ್ ಆಗಿದೆ. ಆ ಹಿನ್ನೆಲೆ ಸುಮಾರು 100 ವಿದ್ಯಾರ್ಥಿನಿಯರಿಗೆ ಬ್ರಾ ತೆಗೆದಿಟ್ಟು ಪರೀಕ್ಷೆ ಬರೆಸಲಾಗಿದೆ ಎಂದು ವಿದ್ಯಾರ್ಥಿನಿಯರು ದೂರಿದ್ದರು. ಈ ವಿಚಾರವಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ವಿದ್ಯಾರ್ಥಿಗಳನ್ನು ಪರಿಶೀಲನೆ ಮಾಡುವ ಕೆಲಸವನ್ನು ಬೇರೊಂದು ಏಜೆನ್ಸಿಗೆ ವಹಿಸಲಾಗಿತ್ತು ಎಂದು ಪರೀಕ್ಷಾ ಕೇಂದ್ರ ಹೇಳಿತ್ತು.

    ನಂತರ ಕುರಿತಂತೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಹೆಂಗಸಿನ ಮಾನಭಂಗ ಮಾಡುವ ಉದ್ದೇಶದಿಂದ ಅವಳ ಮೇಲೆ ಹಲ್ಲೆ ಅಥವಾ ಆಪರಾಧಿಕ ಬಲಪ್ರಯೋಗ ಮಾಡುವುದು) ಮತ್ತು 509 (ಒಬ್ಬ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಉದ್ದೇಶವಿರುವ ಶಬ್ದ, ಸಂಜ್ಞೆ ಅಥವಾ ಕೃತ್ಯ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿತ್ತು. ಇದನ್ನೂ ಓದಿ: NEET ಪರೀಕ್ಷಾರ್ಥಿಗಳಿಗೆ ಒಳಉಡುಪು ತೆಗೆಯಲು ಒತ್ತಾಯ- ತನಿಖೆ ಆರಂಭಿಸಿದ ಪೊಲೀಸರು

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದರು. ಬಂಧಿತರಲ್ಲಿ ನೀಟ್ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದ ಇಬ್ಬರು ಕಾಲೇಜು ಸಿಬ್ಬಂದಿ ಮತ್ತು ಕೇಂದ್ರದ ಭದ್ರತೆಯನ್ನು ವಹಿಸಿಕೊಂಡಿದ್ದ ಏಜೆನ್ಸಿಯ ಮೂವರು ಸೇರಿದ್ದಾರೆ. ಕೊನೆಗೆ ಎಲ್ಲಾ ಆರೋಪಿಗಳಿಗೂ ಜಾಮೀನು ಸಿಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ – ಮರುಪರೀಕ್ಷೆಗೆ ಸರ್ಕಾರ ತೀರ್ಮಾನ

    ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ – ಮರುಪರೀಕ್ಷೆಗೆ ಸರ್ಕಾರ ತೀರ್ಮಾನ

    ಬೆಂಗಳೂರು: 545 ಪಿಎಸ್‌ಐ ಹುದ್ದೆಗಳ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದ್ದು, ಈ ಸಂಬಂಧ ನಡೆಸಲಾಗಿದ್ದ ಪರೀಕ್ಷೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ, ಈ ಹಿಂದೆ ಪರೀಕ್ಷೆ ಬರೆದಿದ್ದ ಎಲ್ಲಾ 54,289 ಪರೀಕ್ಷಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಪಡೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಉತ್ತರ ಪತ್ರಿಕೆ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

    ಇದೇ ವೇಳೆ, ಸಿಐಡಿಯಿಂದ ಬಂಧಿತರಾದ ಅಭ್ಯರ್ಥಿಗಳನ್ನು ಮರು ಪರೀಕ್ಷೆಯಿಂದ ಹೊರಗಿಡಲಾಗುವುದು. ಮರು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ನಿಗದಿಗೊಳಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

    ಮರು ಪರೀಕ್ಷೆ ನಿರ್ಧಾರದಿಂದ, ಅಕ್ರಮವಾಗಿ ನೇಮಕಾತಿ ಪಡೆದವರ ಜಾಗಕ್ಕೆ ಪ್ರತಿಭಾವಂತ ಹಾಗೂ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅವಕಾಶ ದೊರಕಲಿದೆ. ಪರೀಕ್ಷಾ ಅಕ್ರಮಗಳು ಒಂದಕ್ಕಿಂತ ಹೆಚ್ಚು ಕೇಂದ್ರಗಳಲ್ಲಿ ನಡೆದಿದೆ ಎಂಬ ಬಗ್ಗೆಯೂ ಅನುಮಾನಗಳಿದ್ದು, ಮರು ಪರೀಕ್ಷೆ ನಡೆಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಮಿತ್ ಶಾ, ಬೊಮ್ಮಾಯಿ ಜೊತೆ ಸಂಪುಟ ಪುನಾರಚನೆ, ಸಮಾಲೋಚನೆ

    ಮುಂದಿನ ದಿನಗಳಲ್ಲಿ ಇಂಥಹ ಅಕ್ರಮಗಳು ನಡೆಯದಂತೆ ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೆ ತರುವ ಬಗ್ಗೆಯೂ ಅಲೋಚಿಸಲಾಗುವುದು ಎಂದಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಉಪಸ್ಥಿತರಿದ್ದರು.

    ಆದರೆ ಸರ್ಕಾರದ ಈ ಕ್ರಮಕ್ಕೆ ಕೆಲ ಅಭ್ಯರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಾನು ಪ್ರಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದೇವೆ. ಪರೀಕ್ಷೆಗಾಗಿ ತುಂಬಾ ಶ್ರಮವಹಿಸಿದ್ದೇವೆ. ಯಾರೋ ಮಾಡಿದ ತಪ್ಪಿಗೆ ನಾವೂ ಶಿಕ್ಷೆ ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.