Tag: Real Estate Entrepreneur

  • Bengaluru | ಮದುವೆ ಸಂಭ್ರಮದಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ

    Bengaluru | ಮದುವೆ ಸಂಭ್ರಮದಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ

    ಬೆಂಗಳೂರು: ಮದುವೆ ಸಂಭ್ರಮದಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿಗೆ (Real Estate Entrepreneur) ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ಬಿಜಿಎಸ್ ಲೇಔಟ್‌ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.

    ಮಾಗಡಿ ಶಾಸಕರ ಆಪ್ತ ಲೋಕನಾಥ್ ಸಿಂಗ್ (37) ಹತ್ಯೆಯಾದ ಉದ್ಯಮಿ. ಲೋಕನಾಥ್ ಸಿಂಗ್‌ಗೆ ಇದೇ ತಿಂಗಳು ಮದುವೆ ನಿಶ್ವಯವಾಗಿತ್ತು. ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಉದ್ಯಮಿಯನ್ನು ಕೊಲೆ ಮಾಡಲಾಗಿದೆ. ಘಟನೆಯಲ್ಲಿ ಲೋಕನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು | 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

    ಘಟನೆ ಬಳಿಕ ಲೋಕನಾಥ್ ಗನ್‌ಮ್ಯಾನ್ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ತಲಾಷ್ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸೋಲದೇವನಹಳ್ಳಿ (Soladevanahalli) ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಿಸಿಲಿನಿಂದ ಬರಿದಾದ ವೇದಾವತಿ ನದಿ ಒಡಲು – ತೀರದಲ್ಲೇ ಬೋರ್ ಕೊರೆಸಲು ರೈತರ ಸಾಹಸ

  • ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಟ್ರಾಫಿಕ್ ಇನ್ಸ್ ಪೆಕ್ಟರ್

    ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಟ್ರಾಫಿಕ್ ಇನ್ಸ್ ಪೆಕ್ಟರ್

    ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಬಳಿ 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಟ್ರಾಫಿಕ್ ಇನ್ಸ್ ಪೆಕ್ಟರ್ ಒಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.

    ಕೆಂಗೇರಿ ಟ್ರಾಫಿಕ್ ಇನ್ಸ್ ಪೆಕ್ಟರ್ ಶಬರೀಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, 7 ಲಕ್ಷ ರೂ. ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ. ಶಬರೀಶ್ ಅವರು ಈ ಹಿಂದೆ ಮಾಗಡಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಕಾರ್ಯ ನಿರ್ವಹಿಸಿದ್ದರು.

    ಏನಿದು ಪ್ರಕರಣ: ಮಾಗಡಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಶಬರೀಶ್ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರ ವಿರುದ್ಧ ನಿವೇಶನದಾರರಿಗೆ ಅಕ್ರಮ ಎಸಗಿದ ದೂರು ಬಂದಿತ್ತು. ಈ ದೂರಿನ ಅನ್ವಯ ಇನ್ಸ್‍ಪೆಕ್ಟರ್ ಉದ್ಯಮಿ ವಿರುದ್ಧ ಪ್ರಕರಣ ದಾಖಲು ಮಾಡುವ ಬೆದರಿಕೆ ಹಾಕಿ 15 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು.

    ಇನ್ಸ್‍ಪೆಕ್ಟರ್ ಅವರ ಬೆದರಿಕೆ ಹಾಕುವ ವಿಚಾರವನ್ನು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದ ಉದ್ಯಮಿ ಇಂದು ಹಣ ನೀಡುವುದಾಗಿ ತಿಳಿಸಿ ಶಬರೀಶ್ ಅವರಿಗೆ ಕರೆದಿದ್ದರು. ಉದ್ಯಮಿಯಿಂದ ಹಣ ಪಡೆಯತ್ತಿದ್ದ ವೇಳೆ ದಾಳಿ ನಡೆಸಿದ ಅಧಿಕಾರಿಗಳು ಶಬರೀಶ್‍ರನ್ನ ಬಲೆಗೆ ಕೆಡವಿದ್ದಾರೆ. ಅಲ್ಲದೇ ಇನ್ಸ್ ಪೆಕ್ಟರ್ ಅವರೊಂದಿಗೆ ಇದ್ದ ಹುಲ್ಲೂರಯ್ಯ ಎಂಬ ಖಾಸಗಿ ವ್ಯಕ್ತಿಯನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.