Tag: rebel MLA

  • ಉದ್ಧವ್‌ ಠಾಕ್ರೆ ರಾಜೀನಾಮೆ ನಮಗೆ ಬೇಸರ ತರಿಸಿದೆ: ಶಿವಸೇನಾ ಬಂಡಾಯ ಶಾಸಕ

    ಉದ್ಧವ್‌ ಠಾಕ್ರೆ ರಾಜೀನಾಮೆ ನಮಗೆ ಬೇಸರ ತರಿಸಿದೆ: ಶಿವಸೇನಾ ಬಂಡಾಯ ಶಾಸಕ

    ಮುಂಬೈ: ಮಹಾರಾಷ್ಟ್ರ ಮೈತ್ರಿಕೂಟದ ಸರ್ಕಾರಕ್ಕೆ ಉದ್ಧವ್‌ ಠಾಕ್ರೆ ರಾಜೀನಾಮೆ ನೀಡಿರುವುದಕ್ಕೆ ಶಿವಸೇನಾ ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಏಕನಾಥ್‌ ಶಿಂಧೆ ಬಣದ ಶಾಸಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

    ಉದ್ಧವ್‌ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ನಮಗೆ ಸಂತೋಷದ ವಿಷಯವಲ್ಲ ಎಂದು ಶಿವಸೇನಾ ಬಂಡಾಯ ಶಾಸಕ ಅಭಿಪ್ರಾಯಪಟ್ಟಿದ್ದಾರೆ. ಆದರೆ ಶಾಸಕನ ಹೆಸರು ಬಹಿರಂಗಪಡಿಸಿಲ್ಲ. ಇದನ್ನೂ ಓದಿ: ನಾಳೆ ಬಿಜೆಪಿ-ಶಿಂಧೆ ಸರ್ಕಾರ ರಚನೆ ಸಾಧ್ಯತೆ- ಹೊಸ ಸರ್ಕಾರ ರಚನೆ ಉಸ್ತುವಾರಿ ಹೊತ್ತ ಸಿ.ಟಿ ರವಿ

    ನಾವು ಸೂಚಿಸಿದ ವಿಷಯಗಳನ್ನು ಉದ್ಧವ್ ಠಾಕ್ರೆ ಗಮನಿಸಲಿಲ್ಲ ಎಂದು ಬಂಡಾಯ ಶಾಸಕರ ಬಣದ ವಕ್ತಾರ ದೀಪಕ್ ಕೇಸರ್ಕರ್ ಹೇಳಿದ್ದಾರೆ. ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜೊತೆಗಿನ ಮೈತ್ರಿ ವಿರುದ್ಧ ಹೋರಾಡುವಾಗ ನಮ್ಮ ನಾಯಕನ (ಉದ್ಧವ್‌ ಠಾಕ್ರೆ) ನಡೆಯ ಬಗ್ಗೆಯೂ ಬೇಸರವಾಯಿತು ಎಂದು ಅವರು ತಿಳಿಸಿದ್ದಾರೆ.

    ಇದಕ್ಕೆಲ್ಲ ಕಾರಣ ಎನ್‌ಸಿಪಿ ಮತ್ತು ಸಂಜಯ್‌ ರಾವತ್‌. ಕೇಂದ್ರ ಸರ್ಕಾರದ ವಿರುದ್ಧ ನಿತ್ಯ ಹೇಳಿಕೆಗಳನ್ನು ನೀಡುವುದು, ಕೇಂದ್ರ ಮತ್ತು ರಾಜ್ಯದ ನಡುವೆ ನಕಾರಾತ್ಮಕ ಅಭಿಪ್ರಾಯ ಮೂಡಿಸುವುದು ಅವರ ಕೆಲಸವಾಗಿತ್ತು ಎಂದಿದ್ದಾರೆ. ಇದನ್ನೂ ಓದಿ: ಶಿಂಧೆ ಬಣದ ಹೊಡೆತಕ್ಕೆ ಅಘಾಡಿ ಸರ್ಕಾರ ಪತನ – ಉದ್ಧವ್‌ ಠಾಕ್ರೆ ರಾಜೀನಾಮೆ

    ಮಹಾರಾಷ್ಟ್ರದ ಮೈತ್ರಿಕೂಟ ಸರ್ಕಾರದ ವಿರುದ್ಧ 50 ಶಾಸಕರು ಬಂಡಾಯ ಎದ್ದಿದ್ದಾರೆ. ಅವರಲ್ಲಿ 40 ಶಾಸಕರು ಶಿವಸೇನಾದವರಾಗಿದ್ದಾರೆ. ಬಂಡಾಯ ಶಾಸಕರ ಬಣದ ನೇತೃತ್ವವನ್ನು ಏಕನಾಥ್‌ ಶಿಂಧೆ ವಹಿಸಿದ್ದಾರೆ.

    Live Tv

  • 2.5 ವರ್ಷಗಳಿಂದ ನಿಮ್ಮ ಮನೆಗೆ ನಮಗೆ ಪ್ರವೇಶವೇ ಇರಲಿಲ್ಲ, ಗೇಟ್‌ ಬಳಿ ಕಾಯಬೇಕಿತ್ತು: ಠಾಕ್ರೆಗೆ ಬಂಡಾಯ ಶಾಸಕನ ಪತ್ರ

    2.5 ವರ್ಷಗಳಿಂದ ನಿಮ್ಮ ಮನೆಗೆ ನಮಗೆ ಪ್ರವೇಶವೇ ಇರಲಿಲ್ಲ, ಗೇಟ್‌ ಬಳಿ ಕಾಯಬೇಕಿತ್ತು: ಠಾಕ್ರೆಗೆ ಬಂಡಾಯ ಶಾಸಕನ ಪತ್ರ

    ಮುಂಬೈ: ಕಳೆದ ಎರಡೂವರೆ ವರ್ಷಗಳಿಂದ ನಿಮ್ಮ ಮನೆಗೆ ನಮಗೆ ಪ್ರವೇಶವೇ ಇರಲಿಲ್ಲ ಎಂದು ಉದ್ಧವ್‌ ಠಾಕ್ರೆಗೆ ಬಂಡಾಯ ಶಾಸಕರೊಬ್ಬರು ಪತ್ರ ಬರೆದು ಕಿಡಿಕಾರಿದ್ದಾರೆ.

    ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದ ನಂತರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಪಕ್ಷದ ಶಾಸಕರನ್ನುದ್ದೇಶಿಸಿ ಭಾವನಾತ್ಮಕವಾಗಿ ಮಾತನಾಡಿದ್ದರು. ನಮ್ಮ ಶಾಸಕರು ಬಯಸಿದರೆ ರಾಜೀನಾಮೆ ಕೊಡಲು ಸಿದ್ಧ. ಏನೇ ಇದ್ದರೂ ನನ್ನ ಎದುರಿಗೆ ಬಂದು ಹೇಳಲಿ ಕೇಳುತ್ತೇನೆ ಠಾಕ್ರೆ ಮಾತನಾಡಿದ್ದರು. ಇದನ್ನೂ ಓದಿ: ಶಾಸಕರು ಆಯ್ತು ಈಗ ಶಿವಸೇನೆ ಸಂಸದರಿಂದಲೂ ಬಂಡಾಯ

    ಇದಕ್ಕೆ ಬಂಡಾಯ ಶಾಸಕ ಸಂಜಯ್‌ ಶಿರ್ಸಾತ್‌, ನಿನ್ನೆ ʻವರ್ಷಾʼದಲ್ಲಿ (ಸಿಎಂ ಅಧಿಕೃತ ನಿವಾಸ) ಜನರನ್ನು ನೋಡಿ ಸಂತೋಷಪಟ್ಟೆವು. ಎರಡೂವರೆ ವರ್ಷಗಳಿಂದ ನಮಗೆ ಮುಖ್ಯಮಂತ್ರಿ ಮನೆಗೆ ಪ್ರವೇಶ ನಿರಾಕರಿಸಲಾಗಿತ್ತು. ನಾವು ಅವರ ಗೇಟ್‌ಗಳ ಹೊರಗೆ ಗಂಟೆಗಟ್ಟಲೆ ಕಾಯುವಂತೆ ಮಾಡಲಾಗಿತ್ತು ಎಂದು ಪತ್ರದಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

    ಏಕನಾಥ್‌ ಶಿಂಧೆ ಅವರ ಮನೆ ಬಾಗಿಲು ನಮಗಾಗಿ ಯಾವಾಗಲೂ ತೆರೆದಿರುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಕೇಸ್ ದಾಖಲು

    ಕಷ್ಟದ ಸಂದರ್ಭದಲ್ಲೂ ಸದಾ ತೆರೆದಿರುವ ಶಿಂಧೆಯ ಮನೆ ಹಾಗೆಯೇ ಇರುತ್ತದೆ ಎಂಬ ನಂಬಿಕೆಯೊಂದಿಗೆ ಇಂದು ನಾವಿದ್ದೇವೆ. ನಿನ್ನೆ ನೀವು ಹೇಳಿದ ಮಾತುಗಳು ನಮ್ಮನ್ನು ಭಾವುಕರನ್ನಾಗಿಸಿದೆ. ಆದರೆ ಮೂಲಭೂತ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ. ನನ್ನ ಭಾವನೆಗಳನ್ನು ನಿಮಗೆ ತಿಳಿಸಲು ನಾನು ಈ ಭಾವನಾತ್ಮಕ ಪತ್ರವನ್ನು ಬರೆಯಬೇಕಾಯಿತು ಎಂದು ಶಿರ್ಸಾತ್‌ ಹೇಳಿದ್ದಾರೆ.

    Live Tv

  • ಕೊರೊನಾ ಬಗ್ಗೆ ಗಮನ ಕೊಡಿ, ಬಾಕಿ ವಿಚಾರ ನಮಗೆ ಬಿಡಿ- ಬಿಎಸ್‍ವೈಗೆ ಅಮಿತ್ ಶಾ ಭರವಸೆ

    ಕೊರೊನಾ ಬಗ್ಗೆ ಗಮನ ಕೊಡಿ, ಬಾಕಿ ವಿಚಾರ ನಮಗೆ ಬಿಡಿ- ಬಿಎಸ್‍ವೈಗೆ ಅಮಿತ್ ಶಾ ಭರವಸೆ

    ಬೆಂಗಳೂರು: ಕೊರೊನಾ ಬಗ್ಗೆ ಗಮನ ಕೊಡಿ, ಬಾಕಿ ವಿಚಾರ ನಮಗೆ ಬಿಡಿ ಎಂದು ಸಿಎಂ ಯಡಿಯೂರಪ್ಪನವರಿಗೆ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹೇಳಿದ್ದಾರೆ.

    ಸದ್ಯ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಮಾತು ಜೋರಾಗಿ ಕೇಳಿ ಬರುತ್ತಿದೆ. ಆದರೆ ನೇರವಾಗಿ ಇದನ್ನು ಯಾರೂ ಒಪ್ಪಿಕೊಳ್ಳದಿದ್ದರೂ ಪರೋಕ್ಷವಾಗಿ ಬಂಡಾಯದ ಮಾತುಗಳನ್ನು ಆಡುತ್ತಿದ್ದಾರೆ. ಈ ವಿಚಾರವಾಗಿ ಅಮಿತ್ ಶಾ ಅವರು ಯಡಿಯೂರಪ್ಪನವಿಗೆ ಕರೆ ಮಾಡಿ ಮಾತನಾಡಿದ್ದು, ಈ ವಿಚಾರವನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

    ಈ ಸಂಬಂಧ ಶುಕ್ರವಾರ ರಾತ್ರಿ ಗಂಟೆಗೆ ಅಮಿತ್ ಶಾ ಬಿಎಸ್‍ವೈಗೆ ಕರೆ ಮಾಡಿದ್ದು, ಕೊರೊನಾ ನಿಯಂತ್ರಣ ಬಗ್ಗೆ ಮಾತ್ರ ಗಮನ ಕೊಡಿ. ಬೇರೆ ವಿಚಾರಗಳ ಬಗ್ಗೆ ನಮಗೆ ಬಿಟ್ಟುಬಿಡಿ. ಬಾಕಿ ಎಲ್ಲ ನಾವು ನೋಡಿಕೊಳ್ಳುತ್ತೇವೆ. ಕರ್ನಾಟಕದಲ್ಲಿ ಏನಾಗ್ತಿದೆ ಎಂದು ನಮಗೆ ಗೊತ್ತಿದೆ. ಈ ಯಾವುದೇ ವಿಷಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಅಮಿತ್ ಶಾ ಯಡಿಯೂರಪ್ಪನವರಿಗೆ ಕರೆ ಮಾಡಿ ಹೇಳಿದ್ದಾರೆ ಎಂದು ಮೂಲಕಗಳಿಂದ ಮಾಹಿತಿ ಲಭಿಸಿದೆ.

  • ನನ್ನ ನಂಬಿ 20 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ, ಅವರಿಗಾಗಿ ಹೋರಾಡುತ್ತೇನೆ: ರಮೇಶ್ ಜಾರಕಿಹೊಳಿ

    ನನ್ನ ನಂಬಿ 20 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ, ಅವರಿಗಾಗಿ ಹೋರಾಡುತ್ತೇನೆ: ರಮೇಶ್ ಜಾರಕಿಹೊಳಿ

    -ಇನ್ನೂ 10 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ

    ಬೆಳಗಾವಿ: ನನ್ನ ನಂಬಿ 20 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಅವರ ಪರವಾಗಿ ಕಾನೂನು ಹೋರಾಟ ಮಾಡಲು ನಾನು ದಿಲ್ಲಿಗೆ ಹೋಗಿದ್ದೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

    ಇಂದು ನಡೆದ ಸಮಾವೇಷದಲ್ಲಿ ಮಾತನಾಡಿದ ಅವರು, ನಾನು ಪ್ರವಾಹ ಪಿಡಿತ ಪ್ರದೇಶಗಳಿಗೆ ಹೋಗಿ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತೇನೆ. ಮೈತ್ರಿ ಸರ್ಕಾರದಲ್ಲಿ ಇದ್ದಂತಹ ವ್ಯವಸ್ಥೆ ನೋಡಿ ನನಗೆ ಅಲ್ಲಿ ಇರಲಿಕ್ಕೆ ಮನಸ್ಸು ಆಗಲಿಲ್ಲ. ಗೋಕಾಕ್ ಮತಕ್ಷೇತ್ರಕ್ಕೆ ಮೈತ್ರಿ ಸರ್ಕಾರದಲ್ಲಿ ಸ್ಪಂದನೆ ಸಿಗಲಿಲ್ಲ. ಮೈತ್ರಿ ಸರ್ಕಾರದಲ್ಲಿರಲು ನನಗೆ ಒಂದು ಕ್ಷಣನೂ ಮನಸ್ಸು ಇರಲಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ಚಮಚಾಗಿರಿ ಜನರ ಮಾತುಗಳನ್ನು ಕೇಳಿದ್ದಾರೆ. ನನ್ನ ಜೊತೆ ಸದ್ಯ 20 ಶಾಸಕರು ಇದ್ದಾರೆ, ಜೊತೆಗೆ ಕೋರ್ಟ್ ನಲ್ಲಿ ನ್ಯಾಯ ಸಿಕ್ಕ ಮೆಲೆ ನಮ್ಮ ಹೋರಾಟದ ರೂಪುರೇಷಗಳು ಬೇರೆ ಇರುತ್ತೆ ಎಂದು ಹೇಳಿದರು.

    ಇನ್ನೂ 10 ಶಾಸಕರು ನನ್ನ ಜೊತೆ ಸಂಪರ್ಕದಲ್ಲಿ ಇದ್ದಾರೆ. ಇವತ್ತೆ ಚುನಾವಣೆ ಆದರೂ ನಾನು ಗೋಕಾಕ್ ನಲ್ಲಿ ಸ್ಪರ್ಧೆ ಮಾಡಬಹುದು. ಈ ಅಪರೇಷನ್ ಆಗಬೇಕೆಂದರೆ ಸತೀಶ್ ಜಾರಕಿಹೊಳಿ, ಮತ್ತು ಎಂ.ಬಿ.ಪಾಟೀಲ್ ಕಾರಣ. ನಾನು ಲಕ್ಷ್ಮಿ ದೇವರ ಮುಟ್ಟಿ ಹೇಳುತ್ತೇನೆ ಸತೀಶ್ ಮೋಸಗಾರ, ಆತನಿಂದಲೇ ಅಪರೇಷನ್ ನಡೆದಿದೆ. ಲಖನ್ ಜಾರಕಿಹೊಳಿ ಮತ್ತು ನನ್ನ ಮಧ್ಯೆ ಜಗಳ ಹಚ್ಚುವ ಕೆಲಸ ಸತೀಶ್ ಮಾಡುತ್ತಿದ್ದಾನೆ. ಮುಂದಿನ ದಿನದಲ್ಲಿ ಸತೀಶ್‍ಗೆ ಯಮಕನಮರಡಿ ಜನ ಒದ್ದು ಓಡಿಸುತ್ತಾರೆ. ನಮ್ಮ ಕುಟುಂಬದಲ್ಲಿ ಸತೀಶ್ ಸತ್ಯಹರಿಶ್ಚಂದ್ರ ಅಲ್ಲ ಎಂದು ಗುಡುಗಿದರು.

    ಡಿಕೆಶಿ ಕಾನೂನು ಹೋರಾಟ ಮಾಡಿ ಹೊರಬರಲಿ. ಆತ ನನ್ನ ಆತ್ಮೀಯ ಗೆಳೆಯ ಎಂದ ರಮೇಶ್ ಜಾರಕಿಹೊಳಿ, ಗೋಕಾಕ್‍ನಲ್ಲಿ ಏನೇ ಕುತಂತ್ರ ಮಾಡಿದರೂ ಸತೀಶನದ್ದು ನಡೆಯಲ್ಲ. ಕಾನೂನಿನ ಹೋರಾಟದ ಬಳಿಕ ನಾನು ಮುಂದಿನ ರಾಜಕೀಯ ನಿರ್ಧಾರದ ಬಗ್ಗೆ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

  • ನನ್ನ ಕೆಣಕಿದ್ರೆ ಹುತ್ತದಲ್ಲಿರೋ ನಾಗರಹಾವನ್ನು ಕೆಣಕಿದಂತೆ – ಎಂಟಿಬಿ ಗುಡುಗು

    ನನ್ನ ಕೆಣಕಿದ್ರೆ ಹುತ್ತದಲ್ಲಿರೋ ನಾಗರಹಾವನ್ನು ಕೆಣಕಿದಂತೆ – ಎಂಟಿಬಿ ಗುಡುಗು

    ಬೆಂಗಳೂರು: ನನ್ನ ಕೆಣಕಿದರೆ ಹುತ್ತದಲ್ಲಿರೋ ನಾಗರಹಾವನ್ನು ಕೆಣಕಿದಂತೆ. ಮಲಗಿರೋ ಹಾವನ್ನು ಕೆಣಕಿದರೆ ಕಚ್ಚೋದು ಗ್ಯಾರಂಟಿ ಎಂದು ಹೊಸಕೋಟೆಯಲ್ಲಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಗುಡುಗಿದ್ದಾರೆ.

    ತನ್ನ ಜನ್ಮದಿನ ಪ್ರಯುಕ್ತ ಮಹಿಳೆಯರಿಗೆ ಸೀರೆ ಹಂಚುತ್ತಿರುವ ಎಂಟಿಬಿ ನಾಗರಾಜ್ ಕಾರ್ಯಕ್ರಮದಲ್ಲಿ ಮಾತನಾಡಿ, ನಾನು ಯಾರಿಗೂ ಭಯ ಬೀಳಲ್ಲ, ದೇವರಿಗೆ ಮತ್ತು ಮತದಾರರಿಗೆ ಮಾತ್ರ ಭಯ ಬೀಳುತ್ತೇನೆ ಎಂದು ಹೇಳಿದರು.

    5 ರಿಂದ 10 ಬಾರಿ ಮಂತ್ರಿ ಆಗಿ ಲೂಟಿ ಹೊಡೆದಿರುವ ದಾಖಲೆ ನನ್ನ ಹತ್ತಿರ ಇದೆ. ಅಧಿಕಾರವಿದ್ದಾಗ ಎಷ್ಟು ಆಸ್ತಿ ಮಾಡಿದ್ದೀರಿ ಎಂಬ ದಾಖಲೆ ಕೂಡ ಇದೆ. ನನ್ನ ಬಗ್ಗೆ ದಾಖಲೆ ಇದ್ದರೆ ಮಾಧ್ಯಮಗಳ ಮುಂದೆ ತಗೊಂಡು ಬನ್ನಿ. ಐಟಿ ಅಧಿಕಾರಿಗಳಿಗೆ ಮತ್ತು ಮೀಡಿಯಾಗೆ ಭಯ ಬಿದ್ದು ಎಂಟಿಬಿ ರಾಜೀನಾಮೆ ಕೊಟ್ಟ ಎನ್ನುತ್ತಾರೆ. ಆದರೆ ನಾನು ಯಾರಿಗೂ ಭಯ ಬೀಳಲ್ಲ, ದೇವರು ಮತ್ತು ಮತದಾರರಿಗೆ ಮಾತ್ರ ಭಯ ಬೀಳುತ್ತೇನೆ ಎಂದು ತಿಳಿಸಿದರು.

    30 ಕೋಟಿ ತಗೊಂಡು ಬಿಜೆಪಿಗೆ ಹೋದ, ಮಗನ ಉದ್ಧಾರ ಮಾಡೋಕೆ ಹೋದ ಎಂದು ದೊಡ್ಡ ದೊಡ್ಡ ನಾಯಕರು ಹೇಳುತ್ತಾರೆ. ಆದರೆ ನಾನು ಆ ದೊಡ್ಡ ನಾಯಕರ ಕಥೆ ತೆಗೆದರೆ ಅವರ ಕಥೆ ಮುಗಿಯುತ್ತೆ. ನಾನು ಯಾವ ಪುರುಷಾರ್ಥಕ್ಕೆ ಸುಳ್ಳು ಹೇಳಬೇಕು. ನನಗೆ ರಾಜಕೀಯದಿಂದ ಬೇಸರ ಆಗಿದೆ. ಕಳಪೆ, ಕಲ್ಮಶ ಮತ್ತು ಸುಳ್ಳು ರಾಜಕೀಯದಿಂದ ಬೇಸತ್ತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.

  • ಕೆಲ ಅನರ್ಹ ಶಾಸಕರಿಂದ ಉತ್ತರಾಧಿಕಾರಿಗಳನ್ನು ಅಖಾಡಕ್ಕಿಳಿಸಲು ಸಿದ್ಧತೆ

    ಕೆಲ ಅನರ್ಹ ಶಾಸಕರಿಂದ ಉತ್ತರಾಧಿಕಾರಿಗಳನ್ನು ಅಖಾಡಕ್ಕಿಳಿಸಲು ಸಿದ್ಧತೆ

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಹಾರಿಸಿ ಸರ್ಕಾರ ಉರುಳಿದವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಇದೀಗ ಎಲ್ಲರನ್ನೂ ಕಾಡುತ್ತಿದೆ.

    ಕೋರ್ಟಿನಲ್ಲಿ ತಮ್ಮ ರಾಜಕೀಯ ಭವಿಷ್ಯದ ತೀರ್ಪು ಪ್ರಕಟವಾಗಬೇಕಾದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ತಮ್ಮದೇ ಆದ ಸಿದ್ಧತೆ ಮಾಡಿಕೊಳ್ಳತೊಡಗಿದ್ದಾರೆ. ಒಂದು ವೇಳೆ ಕೋರ್ಟಿನಲ್ಲಿ ಹಿನ್ನಡೆಯಾದರೆ ಕೆಲವು ಶಾಸಕರು ತಮ್ಮ ಉತ್ತರಾಧಿಕಾರಿಗಳನ್ನು ಅಖಾಡಕ್ಕೆ ಇಳಿಸುವ ಸಿದ್ಧತೆ ಮಾಡಿಕೊಳ್ಳತೊಡಗಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಕೆಲವರು ಚುನಾವಣಾ ರಾಜಕಾರಣದ ಸಹವಾಸವೇ ಬೇಡ ಎಂದು ನಿವೃತ್ತಿಯ ಚಿಂತನೆ ನಡೆಸಿದ್ದಾರೆ. ಮತ್ತೆ ಕೆಲವರು ನ್ಯಾಯಾಲಯದ ತೀರ್ಪು ನೋಡಿ ಮುಂದಿನ ತೀರ್ಮಾನ ಮಾಡೋಣ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

    ಕೆಲವು ಅನರ್ಹ ಶಾಸಕರುಗಳು ಅನಿವಾರ್ಯ ಪರಿಸ್ಥಿತಿ ಎದುರಾದರೆ ತಮ್ಮ ಉತ್ತರಾಧಿಕಾರಿಗಳನ್ನ ಅಖಾಡಕ್ಕೆ ಇಳಿಸಲು ಸಿದ್ಧತೆ ನಡೆಸಿದ್ದಾರೆ. ತಮ್ಮ ಉತ್ತರಾಧಿಕಾರಿ ಮುಂದೆ ಕೂಡ ತಮ್ಮ ಮಾತು ಕೇಳಬೇಕು. ಇಲ್ಲ ತಾವು ಬಯಸಿದಾಗ ತಮಗೆ ಅವಕಾಶ ಮಾಡಿಕೊಡಬೇಕು ಅಂತವರನ್ನೇ ಉತ್ತರಾಧಿಕಾರಿಯಾಗಿ ಚುನಾವಣಾ ಅಖಾಡಕ್ಕೆ ಇಳಿಸಲು ಮುಂದಾಗಿದ್ದಾರೆ.

    17 ಅನರ್ಹ ಶಾಸಕರ ಪೈಕಿ 13 ಜನ ತಮ್ಮ ಉತ್ತಾರಧಿಕಾರಿಗಳನ್ನ ಈಗಾಗಲೇ ಗುರುತಿಸಿದ್ದಾರೆ. ನ್ಯಾಯಾಲಯದ ತೀರ್ಪು ವ್ಯತಿರಿಕ್ತವಾಗಿ ಬಂದರೆ ತಮ್ಮ ಪರವಾಗಿ ತಮ್ಮ ಉತ್ತರಾಧಿಕಾರಿಗಳನ್ನ ಚುನಾವಣಾ ಅಖಾಡಕ್ಕೆ ಇಳಿಸೋದು ಅವರ ಪ್ಲಾನ್ ಆಗಿದೆ. ಅದರಲ್ಲಿ ಮೂವರು ಶಾಸಕರು ತಮ್ಮ ಪತ್ನಿಯರನ್ನೇ ತಮ್ಮ ಉತ್ತರಾಧಿಕಾರಿಗಳಾಗಿ ಅಖಾಡಕ್ಕೆ ಇಳಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

    ಅಥಣಿ ಶಾಸಕ ಮಹೇಶ್ ಕುಮುಟಳ್ಳಿ ತಮ್ಮ ಸಹೋದರನನ್ನ ಅಖಾಡಕ್ಕೆ ಇಳಿಸಿದರೆ, ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ತಮ್ಮ ತಂದೆಯನ್ನೇ ಅಖಾಡಕ್ಕೆ ಇಳಿಸೋದು ಪಕ್ಕಾ ಆಗಿದೆ. 6 ಜನ ಅನರ್ಹ ಶಾಸಕರು ತಮ್ಮ ಮಕ್ಕಳನ್ನ ಉತ್ತರಾಧಿಕಾರಿಯಾಗಿ ಸಿದ್ಧಪಡಿಸಿದ್ದು, 5 ಶಾಸಕರ ಗಂಡು ಮಕ್ಕಳು ಹಾಗೂ ಬಿ.ಸಿ.ಪಾಟೀಲ್ ಮಗಳನ್ನ ಉತ್ತರಾಧಿಕಾರಿಯಾಗಿ ಅಖಾಡಕ್ಕೆ ಇಳಿಸಲು ಸಜ್ಜಾಗಿದ್ದಾರೆ.

    ರೆಬೆಲ್ ನಾಯಕ ರಮೇಶ್ ಜಾರಕಿಹೋಳಿ ಅಳಿಯನನ್ನ ಉತ್ತರಾಧಿಕಾರಿ ಮಾಡಲು ಮುಂದಾದರೆ, ಆನಂದ್ ಸಿಂಗ್ ಮಗ ಅಥವಾ ಅಳಿಯ ಇಬ್ಬರಲ್ಲಿ ಒಬ್ಬರನ್ನು ಅಖಾಡಕ್ಕೆ ಇಳಿಸಲು ರೆಡಿಯಾಗಿದ್ದಾರೆ. 17 ರಲ್ಲಿ 13 ಜನ ಅನರ್ಹ ಶಾಸಕರು ಉತ್ತರಾಧಿಕಾರಿಗಳನ್ನ ಸಿದ್ಧಪಡಿಸಿಕೊಂಡಿದ್ದಾರೆ. ಉಳಿದ ನಾಲ್ವರಲ್ಲಿ ಇಬ್ಬರು ಚುನಾವಣಾ ಅಖಾಡದಿಂದಲೆ ಹಿಂದಕ್ಕೆ ಸರಿಯಲು ನಿರ್ಧರಿಸಿದ್ದಾರೆ.ಉಳಿದ ಇಬ್ಬರು ಯತ್ತರಾಧಿಕಾರಿ ಆಯ್ಕೆ ಮಾಡದೆ ನ್ಯಾಯಾಲಯದ ತೀರ್ಪಿಗಾಗಿ ಕಾಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

    17 ಅನರ್ಹ ಶಾಸಕರ ಪೈಕಿ ಎಚ್ ವಿಶ್ವನಾಥ್ ಹಾಗೂ ನಾರಾಯಣ ಗೌಡ ರಾಜಕಾರದಿಂದಲೇ ನಿವೃತ್ತರಾಗಲು ತೀರ್ಮಾನಿಸಿದ್ರೆ, ಮುನಿರತ್ನ ಹಾಗೂ ಆರ್ ಶಂಕರ್ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಆದರೆ ಉಳಿದ 13 ಜನ ಅನರ್ಹರು ಮಾತ್ರ ತಮ್ಮ ಉತ್ತರಾಧಿಕಾರಿಗಳನ್ನ ಈಗಾಗಲೇ ಸಿದ್ಧಪಡಿಸಿಕೊಂಡಿದ್ದು ಅಖಾಡಕ್ಕೆ ಧುಮುಕಲು ರೆಡಿಯಾಗಿದ್ದಾರೆ.

  • ಅನರ್ಹ ಶಾಸಕ ಮಹೇಶ್ ಕುಮಟಳ್ಳಿಯನ್ನು ತರಾಟೆಗೆ ತೆಗೆದುಕೊಂಡ ಸಂತ್ರಸ್ತರು

    ಅನರ್ಹ ಶಾಸಕ ಮಹೇಶ್ ಕುಮಟಳ್ಳಿಯನ್ನು ತರಾಟೆಗೆ ತೆಗೆದುಕೊಂಡ ಸಂತ್ರಸ್ತರು

    ಬೆಳಗಾವಿ: ಅನರ್ಹ ಶಾಸಕ ಮಹೇಶ್ ಕುಮಟಳ್ಳಿಯನ್ನು ಪ್ರವಾಹ ಪೀಡಿತ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಜನತೆ ತರಾಟೆಗೆ ತೆಗೆದುಕೊಂಡಿದ್ದಾರೆ.

    ತಮ್ಮ ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ಹೋಟೆಲ್‍ನಲ್ಲಿ ತಿಂಗಳುಕಾಲ ತಂಗಿದ್ದ ಅನರ್ಹ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಪ್ರವಾಹ ಪೀಡಿತ ಗ್ರಾಮಸ್ಥರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

    ನಾವು ಮತ ಹಾಕಿದ್ದು ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿ ಎಂದು. ನೀವು ರಾಜೀನಾಮೆ ನೀಡಿ ಮುಂಬೈಗೆ ಹಾರಲು ಅಲ್ಲ. ಶಾಸಕರಾಗಿ ಹದಿನಾಲ್ಕು ತಿಂಗಳಾಯಿತು ಈಗ ನೆನಪಾಯಿತೇ ಎಂದು ಪ್ರಶ್ನಿಸಿ ಮಹೇಶ್ ಕುಮಠಳ್ಳಿ ಹಾಗೂ ದರೂರ ಜಿಲ್ಲಾ ಪಂಚಾಯತ್ ಸದಸ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

  • ಮಾಜಿ  ಸ್ಪೀಕರ್​ಗೆ  ಮಾನ ಮರ್ಯಾದೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲಿ: ಸುಧಾಕರ್

    ಮಾಜಿ  ಸ್ಪೀಕರ್​ಗೆ  ಮಾನ ಮರ್ಯಾದೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲಿ: ಸುಧಾಕರ್

    ಚಿಕ್ಕಬಳ್ಳಾಪುರ: ನಿಮಗೆ ಮಾನ ಮರ್ಯಾದೆ ಇದ್ದರೆ ಮೊದಲು ನೀವು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿ, ನಿಮ್ಮನ್ನು ಕಾಂಗ್ರೆಸ್ ಪಕ್ಷದಿಂದ ವಜಾ ಮಾಡಬೇಕು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅನರ್ಹ ಶಾಸಕ ಡಾ.ಕೆ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.

    ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ನಾನು ದೋಸ್ತಿ ಸರ್ಕಾರದ ಆಡಳಿತದ ವಿರುದ್ಧ ಹಾಗೂ ನನ್ನ ಜಿಲ್ಲೆ ಹಾಗೂ ಕ್ಷೇತ್ರದ ಅಭಿವೃದ್ಧಿ ಆಗಿಲ್ಲ ಎಂದು ಮನನೊಂದು ರಾಜೀನಾಮೆ ಕೊಟ್ಟಿದ್ದೇನೆ ಎಂದು ಹೇಳಿದರು.

    ಈ ಕ್ಷಣದವರೆಗೂ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ನಾನು ಮಾತನಾಡಿಲ್ಲ. ಆದರೆ ಕಾಂಗ್ರೆಸ್ ಪಕ್ಷದವರೇ ನನ್ನನ್ನು ವಜಾ ಮಾಡಿ ಅನರ್ಹ ಮಾಡಿದ್ದಾರೆ. ಬಸವಣ್ಣನವರು, ಅಂಬೇಡ್ಕರ್ ಆದ ಮೇಲೆ ನಾನು ಇದ್ದೀನಿ ಎಂದು ಈ ರಾಜ್ಯಕ್ಕೆ ಹೇಳಿಕೊಂಡು ತಿರುಗುತ್ತಿರುವ ಇವರ ಬಗ್ಗೆ ಸುಪ್ರೀಂ ಕೋರ್ಟ್ ಹೇಳುತ್ತೆ. ಮುಂದಿನ ದಿನಗಳಲ್ಲಿ ಈ ಜನರ ಆಶೀರ್ವಾದದಿಂದ ಮತ್ತೆ ನಾನು ಶಾಸಕನಾಗಿ ಸದನಕ್ಕೆ ಹೋಗುತ್ತೇನೆ. ಸದನದಲ್ಲಿ ಯಾವ ರೀತಿ ನಮ್ಮ ಮನಸ್ಸುಗಳನ್ನು ನೋಯಿಸಿದ್ದರು. ಅದೇ ರೀತಿ ನಿಮ್ಮ ವ್ಯಕ್ತಿತ್ವದ ಚರಿತ್ರೆಯನ್ನು ರಾಜ್ಯದ ಜನರ ಮುಂದಿಡುವ ಕೆಲಸ ಮಾಡುವೆ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು.

    ಇದೇ ವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಹರಿಹಾಯ್ದ ಸುಧಾಕರ್, ಯಾವ ಕಾರಣಕ್ಕೆ ನನ್ನನ್ನ ಅನರ್ಹ ಮಾಡಿದ್ದೀರಿ? ಯಾವುದೇ ವಿಚಾರಣೆ ತನಿಖೆ ಆಗದೆ ಹೇಗೆ ಅನರ್ಹ ಮಾಡಿದ್ರೀ? ಕಾಂಗ್ರೆಸ್ ಪಕ್ಷದ ವಿರುದ್ಧ ನಾನು ಏನು ಮಾಡಿದ್ದೀನಿ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಮೌಲ್ಯಗಳು ಇದ್ರೆ ಮೊದಲು ರಮೇಶ್ ಕುಮಾರ್ ಅವರನ್ನು ವಜಾ ಮಾಡಲಿ ಎಂದು ವಾಗ್ದಾಳಿ ನಡೆಸಿದರು.

    ಇದೇ ವೇಳೆ ಮಾಜಿ ಸಚಿವ ಹಾಗೂ ಹಾಲಿ ಗೌರಿಬಿದನೂರು ಶಾಸಕ ಶಿವಶಂಕರರೆಡ್ಡಿ ವಿರುದ್ಧವೂ ಕಿಡಿಕಾರಿದ ಸುಧಾಕರ್, ಎಂಎಲ್‍ಸಿ ಚುನಾವಣೆಯಲ್ಲಿ ಜೆಡಿಎಸ್ ಪರ ಶಿವಶಂಕರರೆಡ್ಡಿ ಕೆಲಸ ಮಾಡಲಿಲ್ವಾ? ಪಕ್ಕದ ಕ್ಷೇತ್ರದ ಕಾಂಗ್ರೆಸ್ ಶಾಸಕನಾದ ನನ್ನನ್ನ ರಾಜಕೀಯವಾಗಿ ಮುಗಿಸುವಂತಹ ಕೆಲಸ ಮಾಡಲಿಲ್ವಾ? ಹೀಗಾಗಿ ಮೊದಲು ಅವರನ್ನು ಪಕ್ಷದಿಂದ ವಜಾ ಮಾಡಿ. ನಿಮ್ಮ ನೈತಿಕತೆ ನನಗೆ ಹೇಳಿ ಕೊಡ್ತೀರಾ. ನಿಮಗೆ ನೈತಿಕತೆ ಇದೆಯಾ ಜನ ನೋಡ್ತಾ ಇದ್ದಾರೆ ನಾನು ಒಬ್ಬ ವ್ಯಕ್ತಿ (ಸಿದ್ದರಾಮಯ್ಯ) ಯಿಂದ ಇಷ್ಟೆಲ್ಲಾ ನೋವು ತಡೆದುಕೊಂಡಿದ್ದೆ ಎಂದು ತಿಳಿಸಿದರು.

  • ಅತೃಪ್ತ ಶಾಸಕರು ಗಂಡಸರು ಆಗಿದ್ದರೆ ಸದನಕ್ಕೆ ಬರಬೇಕಿತ್ತು – ಆನಂದ್ ಅಸ್ನೋಟಿಕರ್

    ಅತೃಪ್ತ ಶಾಸಕರು ಗಂಡಸರು ಆಗಿದ್ದರೆ ಸದನಕ್ಕೆ ಬರಬೇಕಿತ್ತು – ಆನಂದ್ ಅಸ್ನೋಟಿಕರ್

    ಕಾರವಾರ: ಅತೃಪ್ತ ಶಾಸಕರಿಗೆ ಗಂಡಸ್ತನ ಇದ್ದಿದ್ದರೆ ಸದನಕ್ಕೆ ಬಂದು ನಮ್ಮ ವಿರುದ್ಧ ಮತ ಹಾಕಬೇಕಿತ್ತು. ಚಕ್ಕಾಗಳ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಿಡಿ ಕಾರಿದ್ದಾರೆ.

    ಕಾರವಾರದಲ್ಲಿ ಮಾತನಾಡಿದ ಅವರು ಸುಪ್ರೀಂಕೋರ್ಟಿನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನು ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದವು. ಆಗ ನೊಟೀಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಒಂದು ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು ಎಂದು ತಿಳಿಸಿದರು.

    20 ದಿನಗಳ ಕಾಲ ಅನರ್ಹ ಶಾಸಕರ ರಾಜಕೀಯವನ್ನು ರಾಜ್ಯದ ಜನತೆ ನೋಡಿದ್ದಾರೆ. ಸುಪ್ರೀಂಕೋರ್ಟ್ ಶಾಸಕರ ಅನರ್ಹತೆಯನ್ನು ಎತ್ತಿ ಹಿಡಿಯಲಿದೆ. ಯಡಿಯೂರಪ್ಪನವರ ಸರ್ಕಾರ ಉಪ ಚುನಾವಣೆ ಆಗುವ ವರೆಗೆ ಮಾತ್ರ ಉಳಿಯುತ್ತದೆ. ಎಲ್ಲರಿಗೂ ಸಚಿವನಾಗುವ ಆಸೆಯಿದೆ ಅವರಲ್ಲೇ ಗಲಾಟೆಗಳಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಬೀಳಲಿದೆ ಎಂದು ಭವಿಷ್ಯ ನುಡಿದರು.

  • ವಿಶ್ವಾಸಮತದಲ್ಲೂ ಬಿಎಸ್‍ವೈಗೆ ಗೆಲುವು ನಿಶ್ಚಿತ

    ವಿಶ್ವಾಸಮತದಲ್ಲೂ ಬಿಎಸ್‍ವೈಗೆ ಗೆಲುವು ನಿಶ್ಚಿತ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೋಮವಾರ ಬಹುಮತ ಗೆಲ್ಲುವುದು ಬಹುತೇತ ಖಚಿತವಾಗಿದೆ. ಯಾಕಂದರೆ ಬಹುಮತ ಸಾಬೀತು ವೇಳೆ ನಾವೂ ಬರಲ್ಲ ಎಂದು ಅತೃಪ್ತರು ಮುಂಬೈನಲ್ಲೇ ಪಟ್ಟು ಹಿಡಿದು ಕುಳಿತಿದ್ದಾರೆ.

    ಹೌದು. ಸ್ಪೀಕರ್ ಅವರು ಇನ್ನೂ ಕೂಡ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗದಿರಲು ನಿರ್ಧರಿಸಿದ್ದು, ಅತೃಪ್ತ ಶಾಸಕರೆಲ್ಲರೂ ಗೈರು ಹಾಜರಾದರೆ ಬಿಎಸ್‍ವೈ ಬಹುಮತ ಗೆಲ್ಲುವುದು ಪಕ್ಕಾ ಆಗಿದೆ.

    ಮುಂಬೈನಲ್ಲೆ ಉಳಿದುಕೊಂಡರೆ ಸದನಕ್ಕೆ ತಮ್ಮ ಗೈರಿನಿಂದ ದೋಸ್ತಿಗಳ ಸಂಖ್ಯೆ ಕಡಿಮೆಯಾಗುವುದಲ್ಲದೇ ಬಿಜೆಪಿ ಬಹುಮತ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಅಲ್ಲದೆ ಬಿಎಸ್‍ವೈ ಬಹುಮತ ಸಾಬೀತು ಮಾಡುವವರೆಗೂ ಅತೃಪ್ತರು ಯಾರನ್ನೂ ಭೇಟಿಯಾಗದಿರಲು ನಿರ್ಧರಿಸಿದ್ದಾರೆ. ಬಿಎಸ್‍ವೈ ಬಹುಮತ ಗೆದ್ದ ನಂತರವಷ್ಟೇ ಅಂದರೆ ಸೋಮವಾರ ಇಲ್ಲವೇ ಮಂಗಳವಾರ ಅತೃಪ್ತರು ರಾಜ್ಯಕ್ಕೆ ಮರಳಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಶುಕ್ರವಾರ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರಲ್ಲಿ ಯಾವ ರೀತಿ ಮಂದಹಾಸ ಮೂಡಿದೆಯೋ ಅದೇ ರೀತಿ ಅತೃಪ್ತ ಶಾಸಕರಲ್ಲೂ ಮೂಡಿದ್ದು, ನಾವು ಗೆದ್ದೆವು ಎಂದು ಸಂತಸ ಪಟ್ಟಿದ್ದರು.

    ಮುಂಬೈನಲ್ಲಿರುವ ಅತೃಪ್ತ ಶಾಸಕರು ಸಂಜೆ ಕೊಲ್ಲಾಪುರದ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿ ದೇವಾಲಯದಲ್ಲಿ ವಿಜಯದ ಸಂಕೇತವಾಗಿ ಕುಂಕುಮವನ್ನು ಧರಿಸಿ ಪರಸ್ಪರ ಸಂತಸ ಹಂಚಿಕೊಂಡಿದ್ದರು. ನಾವು ಅಂದುಕೊಂಡಂತೆ ಎಲ್ಲ ನಡೆದಿದ್ದು, ಯಾವುದೂ ಹುಸಿಯಾಗಿಲ್ಲ ನಾವು ಗೆದ್ದಿದ್ದೇವೆ ಎಂದು ಸಂಭ್ರಮಿಸಿದ್ದರು.