Tag: recruitment

  • 34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ

    34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ

    ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು (Government Posts) ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೂಚನೆ ನೀಡಿದ್ದಾರೆ.

    ಸಿಎಂ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿಂದು ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ (KDP Meeting) ನಡೆಸಿದರು. ಸಚಿವರಾದ ಜಿ.ಪರಮೇಶ್ವರ್‌, ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್, ಡಾ.ಶರಣ ಪ್ರಕಾಶ ಪಾಟೀಲ್, ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಸೇರಿ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Government Department Posts) ಭರ್ತಿಗೆ ಸೂಚನೆ ನೀಡಲಾಯಿತು.

    ಈ ವೇಳೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು. 371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು. ಇದನ್ನೂ ಓದಿ: 2026ರ ವೇಳೆಗೆ ಸಂಪೂರ್ಣ ನಕ್ಸಲಿಸಂ ಮಟ್ಟ ಹಾಕಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು: ಅಮಿತ್‌ ಶಾ

    ಅಲ್ಲದೇ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು. ಯುಪಿಎಸ್‌ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ಸಿ ಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮೂಲಕ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ. ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಾಕೀತು ಮಾಡಿದರು. ಇದನ್ನೂ ಓದಿ: 8ನೇ ಬಾರಿ ಆರೋಪಿ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮಿ- ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಕೊಳ್ಳಿ: ಪತಿಗೆ ಕಿವಿಮಾತು

    ನೇಮಕಾತಿ ಕುರಿತಾಗಿ ವಾರ್ಷಿಕ ಕ್ಯಾಲೆಂಡರ್‌ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಬೇಕು. ಕಾಲಮಿತಿಯೊಳಗಾಗಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಾಗಿ ಏಕರೀತಿಯ ಕ್ಯಾಲೆಂಡರ್‌ ಸಿದ್ಧಪಡಿಸಬೇಕು. ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಬೇಕು ಎಂದು ಸಂಬಂಧಪಟ್ಟ ಇಲಾಖಾ ಸಚಿವರಿಗೆ ಸೂಚಿಸಿದರು.

    ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್‌ ಆರ್‌ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್‌ ಆರ್‌ ಸಿದ್ಧಪಡಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಕಾಂತರಾಜು ಸಮಿತಿ ವರದಿಗೆ ಆಗ್ರಹ – ಅ.18ರ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ

  • ಯಾವುದೇ ಅಕ್ರಮ, ಗೊಂದಲವಿಲ್ಲದೆ ಪಿಎಸ್‌ಐ ಪರೀಕ್ಷೆ ನಡೆಸಿದ ಕೆಇಎ

    ಯಾವುದೇ ಅಕ್ರಮ, ಗೊಂದಲವಿಲ್ಲದೆ ಪಿಎಸ್‌ಐ ಪರೀಕ್ಷೆ ನಡೆಸಿದ ಕೆಇಎ

    ಬೆಂಗಳೂರು: ಕಳೆದ ಮೂರು ವರ್ಷಗಳಿಂದ ಹಳ್ಳ ಹಿಡಿದಿದ್ದ ಪೊಲೀಸ್ ಸಬ್‌ಇನ್ಸ್ಪೆಕ್ಟರ್ (Police Sub Inspector) ಪರೀಕ್ಷೆ (Exam) ಕೊನೆಗೂ ಮಂಗಳವಾರ ಸಾಂಗವಾಗಿ ನಡೆದಿದೆ.

    ಕೊನೆಯ ಬಾರಿ 2020ರಲ್ಲಿ 545 ಪಿಎಸ್‌ಐ ಹುದ್ದೆಗಳ ಪರೀಕ್ಷೆ ನಡೆದು ಅಕ್ರಮವಾದ ಹಿನ್ನೆಲೆ ಸಿಐಡಿ ತನಿಖೆ ನಡೆದು ನೇಮಕಾತಿ (Recruitment) ಎಡಿಜಿಪಿ ಸೇರಿ ನೂರಾರು ಜನ ಜೈಲು ಪಾಲಾಗಿದ್ದರು. ನ್ಯಾಯಬದ್ಧವಾಗಿ ಪರೀಕ್ಷೆ ಎದುರಿಸಿದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಕೆಲ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಪೊಲೀಸ್ ನೇಮಕಾತಿ ಬೋರ್ಡ್ ಹೊರತುಪಡಿಸಿ ಬೇರೆ ಯಾವುದಾದರು ಪರೀಕ್ಷಾ ಪ್ರಾಧಿಕಾರದಿಂದ ಮರುಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು. ಇದನ್ನೂ ಓದಿ: ಶ್ರೀರಾಮ ಅವರಪ್ಪನ ಮನೆ ಆಸ್ತಿನಾ? – ಬಿಜೆಪಿ ವಿರುದ್ಧ ರೊಚ್ಚಿಗೆದ್ದ ಡಿಕೆಶಿ

    117 ಸೆಂಟರ್‌ಗಳಲ್ಲಿ 4,4000 ಅಭ್ಯರ್ಥಿಗಳು ಇಂದು (ಮಂಗಳವಾರ) ಪರೀಕ್ಷೆ ಬರೆದಿದ್ದಾರೆ. ಎಕ್ಸಾಮ್ ಸೆಂಟರ್‌ಗೆ ಫುಲ್ ಶರ್ಟ್ ಧರಿಸಿ ಬಂದ ಅಭ್ಯರ್ಥಿಗಳ ಶರ್ಟ್ ಕಟ್ ಮಾಡಿ ಒಳಗೆ ಬಿಡಲಾಗಿದೆ. ಬೆಲ್ಟ್ ಶೂ ಧರಿಸಿ ಬಂದವರನ್ನೂ ಕೂಡ ಒಳಗೆ ಬಿಟ್ಟಿಲ್ಲ. ಬಳೆ ಧರಿಸಿ ಬಂದ ಮಹಿಳಾ ಅಭ್ಯರ್ಥಿಗಳಿಂದ ಬಳೆ ತೆಗೆಸಲಾಗಿದೆ. ಯಾವುದೇ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಸಹ ಒಳಗೆ ಬಿಟ್ಟಿಲ್ಲ. ಇದನ್ನೂ ಓದಿ: 11 ದಿನಗಳ ಕಾಲ ಮೋದಿ ಉಪವಾಸ ಮಾಡಿದ್ದೇ ಅನುಮಾನ: ವೀರಪ್ಪ ಮೊಯ್ಲಿ

    ಪರೀಕ್ಷೆ ನಡೆಯುವ ಸೆಂಟರ್‌ನ 200 ಮೀಟರ್‌ವರೆಗೆ 144 ಸೆಕ್ಷನ್ ಜಾರಿ ಮಾಡಿ ಝೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗಿತ್ತು. 9:30ಕ್ಕೆ ಅಭ್ಯರ್ಥಿಗಳನ್ನು ಎಕ್ಸಾಮ್ ಹಾಲ್‌ಗೆ ಬಿಟ್ಟು ಎರಡೂ ಪತ್ರಿಕೆಗಳು ಮುಗಿದ ಬಳಿಕ ಮಧ್ಯಾಹ್ನ 2:30ಕ್ಕೆ ಹೊರಗೆ ಬಿಡಲಾಗಿದೆ. ಈ ಮೂಲಕ ಈ ಬಾರಿ ಯಾವುದೇ ಅಕ್ರಮ, ಅನುಮಾನ ಗೊಂದಲಗಳಿಗೆ ಅವಕಾಶ ನೀಡದಂತೆ ಕೆಇಎ (KEA) ಪರೀಕ್ಷೆ ನಡೆಸಿದೆ. ಇದನ್ನೂ ಓದಿ: ಬಿಜೆಪಿಯವರು ಬೀದಿ ಬೀದಿಯಲ್ಲಿ ರಾಮನನ್ನು ಆಟ ಆಡಿಸಿದ್ದಾರೆ: ಮಧು ಬಂಗಾರಪ್ಪ

  • ಸಿಆರ್‌ಪಿಎಫ್ ನೇಮಕಾತಿ ಪರೀಕ್ಷೆ ಕನ್ನಡದಲ್ಲಿಯೂ ನಡೆಸುವಂತೆ ಸಿದ್ದರಾಮಯ್ಯ ಒತ್ತಾಯ

    ಸಿಆರ್‌ಪಿಎಫ್ ನೇಮಕಾತಿ ಪರೀಕ್ಷೆ ಕನ್ನಡದಲ್ಲಿಯೂ ನಡೆಸುವಂತೆ ಸಿದ್ದರಾಮಯ್ಯ ಒತ್ತಾಯ

    ಬೆಂಗಳೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ನೇಮಕಾತಿ (Recruitment) ಪರೀಕ್ಷೆಯನ್ನು ಕನ್ನಡದಲ್ಲಿ (Kannada) ನಡೆಸದೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ನಡೆಸುವ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೋಮವಾರ ವಿರೋಧಿಸಿದ್ದಾರೆ.

    ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್‌ನಲ್ಲಿ ನಡೆಸುತ್ತಿದ್ದು, ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕುರಿತು ತಮ್ಮ ಟ್ವಿಟ್ಟರ್ (Twitter) ಖಾತೆಯಲ್ಲಿ ಸರಣಿ ಟ್ವೀಟ್ (Tweet) ಮಾಡಿದ್ದಾರೆ. ಇದನ್ನೂ ಓದಿ: ಆಪ್‌ಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿದ ಚುನಾವಣಾ ಆಯೋಗ 

    ಇದರಿಂದಾಗಿ ಕರ್ನಾಟಕದಂತಹ (Karnataka) ಹಿಂದಿಯೇತರ ರಾಜ್ಯಗಳ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಬಿಜೆಪಿಯ (BJP) ಡಬಲ್ ಎಂಜಿನ್ ಸರ್ಕಾರವು ರಾಜ್ಯದ ಆಕಾಂಕ್ಷಿಗಳನ್ನು ವಿಫಲಗೊಳಿಸಿದೆ ಎಂದು ಹೇಳಿದರು. ಸಿಆರ್‌ಪಿಎಫ್ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಕೂಡಲೇ ಅವಕಾಶ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಒತ್ತಾಯಿಸುತ್ತೇನೆ. ಹಿಂದಿಯೇತರ ರಾಜ್ಯಗಳ ಅಭ್ಯರ್ಥಿಗಳಿಗೆ ಸಹಾಯ ಮಾಡಲು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯುವ ನಿಯಮವನ್ನು ಸಡಿಲಗೊಳಿಸುವುದು ಮುಖ್ಯ ಎಂದು ಟ್ವಿಟ್ಟರ್ ಮೂಲಕ ಮೋದಿಯವರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮೋದಿ ನಮಗೆ ಹಣ ಕೊಟ್ಟಿಲ್ಲ, ಸ್ಟಾಲಿನ್ 1 ಲಕ್ಷ ಚೆಕ್ ಕೊಟ್ಟಿದ್ದಾರೆ: ಬೊಮ್ಮನ್ 

    ಭಾಷೆ ಜ್ಞಾನವನ್ನು ಪ್ರತಿಬಿಂಬಿಸುವುದಿಲ್ಲ ಮತ್ತು ಅದು ಕೇವಲ ಸಂವಹನ ಮಾಧ್ಯಮವಾಗಿದೆ. ಕನ್ನಡ ಮಾಧ್ಯಮದಲ್ಲಿ ಓದಿದ ಅಭ್ಯರ್ಥಿಗಳು ಬುದ್ಧಿವಂತರಾಗಿದ್ದರೂ, ಭಾಷೆಯ ಅಡಚಣೆಯಿಂದ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗುತ್ತಿಲ್ಲ. ಇದರಿಂದ ನಮ್ಮ ಯುವಕರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನೂರು ಕೋಟಿ ಕ್ಲಬ್ ಸೇರಿದ ಚುನಾವಣೆ ಅಕ್ರಮ- ಹಣಕ್ಕಿಂತ ಕುಕ್ಕರ್, ತವಾಗಳದ್ದೇ ಮೇಲುಗೈ 

    ರಾಜ್ಯ ಬಿಜೆಪಿ ಸರ್ಕಾರದ ಶೇ.40ರಷ್ಟು ಭ್ರಷ್ಟಾಚಾರ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದ ನಮ್ಮ ಯುವಕರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ನಿರುದ್ಯೋಗ (Unemployment) ಪ್ರಮಾಣ ಹೆಚ್ಚಿದ್ದು, ಯುವಕರ ಭವಿಷ್ಯ ನಾಶವಾಗಿದೆ. ಡಬಲ್ ಎಂಜಿನ್ ಸರ್ಕಾರ ನಮ್ಮ ಅಭ್ಯರ್ಥಿಗಳನ್ನು ವಿಫಲಗೊಳಿಸಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: Twitter ನಲ್ಲಿ ಮೋದಿ ಫಾಲೋ ಮಾಡ್ತಿರುವ ಮಸ್ಕ್‌ – ಭಾರತಕ್ಕೆ ಬರುತ್ತೆ ಟೆಸ್ಲಾ ಎಂದ ನೆಟ್ಟಿಗರು! 

    ಸಿಆರ್‌ಪಿಎಫ್ ನೇಮಕಾತಿ ಕಂಪ್ಯೂಟರ್ ಪರೀಕ್ಷೆಯಲ್ಲಿ ತಮಿಳು (Tamil) ಭಾಷೆಯನ್ನು ಸೇರಿಸದಿರುವುದನ್ನು ವಿರೋಧಿಸಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (M.K.Stalin) ಕೂಡ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ನಂದಿನಿ ಬೇಕು; ಅಮುಲ್ ಬೇಡ- ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ

  • ಉಕ್ರೇನ್ ವಿರುದ್ಧ ಯುದ್ಧಕ್ಕೆ ರಷ್ಯಾದಲ್ಲಿ ಮತ್ತೆ 4 ಲಕ್ಷ ಸೈನಿಕರ ನೇಮಕ?

    ಉಕ್ರೇನ್ ವಿರುದ್ಧ ಯುದ್ಧಕ್ಕೆ ರಷ್ಯಾದಲ್ಲಿ ಮತ್ತೆ 4 ಲಕ್ಷ ಸೈನಿಕರ ನೇಮಕ?

    ಮಾಸ್ಕೋ: ಉಕ್ರೇನ್ (Ukrain) ದೇಶದೊಂದಿಗೆ ಸುದೀರ್ಘ ಹೋರಾಟವನ್ನು ನಡೆಸುವ ಸಲುವಾಗಿ ರಷ್ಯಾ (Russia) ದೇಶವು ಈ ವರ್ಷ 4 ಲಕ್ಷ ಗುತ್ತಿಗೆ ಸೈನಿಕರನ್ನು ನೇಮಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

    ಉಕ್ರೇನ್ ಮುಂಬರುವ ತಿಂಗಳುಗಳಲ್ಲಿ ಯುರೋಪ್ (Europe) ಮತ್ತು ಯುಎಸ್‌ನಲ್ಲಿ (US) ತರಬೇತಿಯಿಂದ ಹೊಸ ಪಡೆಗಳೊಂದಿಗೆ ಮತ್ತು ಹೊಸದಾಗಿ ಸರಬರಾಜು ಮಾಡಿದ ಟ್ಯಾಂಕ್‌ಗಳು, ಶಸ್ತ್ರಸಜ್ಜಿತ ವಾಹನಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಪ್ರತಿದಾಳಿಯನ್ನು ಪ್ರಾರಂಭಿಸಲು ಯೋಜಿಸುತ್ತಿದೆ. ಇದನ್ನೂ ಓದಿ: ಅದಾನಿ ಬಳಿಕ ಡಾರ್ಸೆ ಕಂಪನಿ ವಿರುದ್ಧ ರಿಪೋರ್ಟ್‌ ಔಟ್‌ – ಷೇರು ಮೌಲ್ಯ ಭಾರೀ ಕುಸಿತ 

    ತನ್ನ ಶ್ರೇಣಿಯನ್ನು ತುಂಬಿಸಲು ಮತ್ತು ವಿಸ್ತರಿಸಲು, ರಷ್ಯಾ ಈಗಾಗಲೇ ಗುತ್ತಿಗೆ ಸೈನಿಕರಿಗೆ ನೇಮಿಸುವ ಅಭಿಯಾನವನ್ನು ಪ್ರಾರಂಭಿಸಿದೆ. ಇದರಲ್ಲಿ ಸೈನಿಕರು ವೇತನಕ್ಕಾಗಿ ಹಲವಾರು ವರ್ಷಗಳವರೆಗೆ ಸೇವೆ ಸಲ್ಲಿಸುತ್ತಾರೆ. ಪ್ರಾದೇಶಿಕ ಅಧಿಕಾರಿಗಳಿಗೆ ನೇಮಕಾತಿಗಾಗಿ ಕೋಟಾಗಳನ್ನು ನೀಡಲಾಗಿದ್ದು, ಡ್ರಾಫ್ಟ್ ಬೋರ್ಡ್‌ಗಳಿಗೆ ಬರಲು ಸಂಭಾವ್ಯ ಸ್ವಯಂಸೇವಕರಿಗೆ ಸಮನ್ಸ್ ನೀಡುತ್ತಿದ್ದಾರೆ. ಆರಂಭದಲ್ಲಿ ಅಧಿಕಾರಿಗಳು, ಅನುಭವಿಗಳು ಮತ್ತು ಗ್ರಾಮೀಣ ನಿವಾಸಿಗಳನ್ನು ಗುರಿಯಾಗಿಸಿಕೊಂಡು ನೇಮಕಾತಿಯನ್ನು ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆ – CBIನಿಂದ 3ನೇ ಚಾರ್ಜ್‌ಶೀಟ್‌ ಸಲ್ಲಿಕೆ

    ಆದರೆ ಈ ವರ್ಷ 4 ಲಕ್ಷ ಗುತ್ತಿಗೆ ಸೈನಿಕರನ್ನು ಆಕರ್ಷಿಸುವ ಗುರಿಯು ಅವಾಸ್ತವಿಕವಾಗಿದೆ. 2022ರ ಫೆಬ್ರವರಿ 24 ರಂದು ಆಕ್ರಮಣವನ್ನು ಪ್ರಾರಂಭಿಸುವ ಮೊದಲು ರಷ್ಯಾ ಹೊಂದಿದ್ದ ವೃತ್ತಿಪರ ಪಡೆಗಳ ಒಟ್ಟು ಸಂಖ್ಯೆಗೆ ಇದು ಸರಿಸುಮಾರು ಸಮಾನವಾಗಿದೆ ಎಂದು ಕೆಲವು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: PublicTV Explainer: ನಿತ್ಯಾನಂದನ ಕೈಲಾಸದಲ್ಲಿರಲು ಈ ರೂಲ್ಸ್ ಫಾಲೋ ಮಾಡ್ಲೇಬೇಕಂತೆ 

    ರಕ್ಷಣಾ ಸಚಿವ (Defence Minister) ಸೆರ್ಗೆಯ್ ಶೋಯಿಗು (Sergei Shoigu) ಡಿಸೆಂಬರ್‌ನಲ್ಲಿ ರಷ್ಯಾ ಒಪ್ಪಂದದ ಸೈನಿಕರ ಸಂಖ್ಯೆಯನ್ನು 2023ರ ಅಂತ್ಯದ ವೇಳೆಗೆ 5,21,000 ಕ್ಕೆ ಹೆಚ್ಚಿಸುವುದಾಗಿ ಹೇಳಿದರು. ಇದು ಆಕ್ರಮಣದ ಮೊದಲು 4,05,000 ಆಗಿತ್ತು. ಈ ಪಡೆಗಳು ವಿಶಿಷ್ಟವಾಗಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸುತ್ತವೆ. ಇದನ್ನೂ ಓದಿ: ಶಾಲೆಯಲ್ಲಿ ಬ್ರೆಡ್‌ ಮಾರಾಟ ಮಾಡಿ iPhone-14 ಖರೀದಿಸಿದ 12ರ ಬಾಲಕಿ

    ಕಳೆದ ವರ್ಷದ ಕೊನೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ರಷ್ಯಾದ ಮಿಲಿಟರಿಯ (Military) ಗಾತ್ರವನ್ನು ಪ್ರಸ್ತುತ 1.15 ಮಿಲಿಯನ್‌ನಿಂದ 1.5 ಮಿಲಿಯನ್‌ಗೆ ಹೆಚ್ಚಿಸುವ ಯೋಜನೆಯನ್ನು ಅನುಮೋದಿಸಿದರು. ಈ ಯೋಜನೆಯು 2026ರ ವೇಳೆಗೆ ಜಾರಿಗೆ ಬರುವ ನಿರೀಕ್ಷೆಯಿದೆ. ಇದನ್ನೂ ಓದಿ: ಉಕ್ರೇನ್‌ ಶಾಲೆ ಮೇಲೆ ರಷ್ಯಾ ಡ್ರೋನ್‌ ದಾಳಿ – 3 ಸಾವು

  • ಉದ್ಯೋಗಿಗಳಿಗೆ ಈಗ ಬೋನಸ್ ಇಲ್ಲ, ಹೊಸ ನೇಮಕಾತಿ ಸ್ಥಗಿತಗೊಳಿಸಿದ ಆ್ಯಪಲ್

    ಉದ್ಯೋಗಿಗಳಿಗೆ ಈಗ ಬೋನಸ್ ಇಲ್ಲ, ಹೊಸ ನೇಮಕಾತಿ ಸ್ಥಗಿತಗೊಳಿಸಿದ ಆ್ಯಪಲ್

    ನವದೆಹಲಿ: ಆ್ಯಪಲ್ ಕಂಪನಿಯು (Apple Company) ವೆಚ್ಚವನ್ನು ಕಡಿತಗೊಳಿಸುವ ಸಲುವಾಗಿ ತನ್ನ ಕಂಪನಿಯ ಕಾರ್ಪೊರೇಟ್ ವಿಭಾಗದ ಉದ್ಯೋಗಿಗಳ ಬೋನಸ್‌ಗಳನ್ನು (Bonus) ವಿಳಂಬಗೊಳಿಸಲು ನಿರ್ಧರಿಸಿದೆ ಹಾಗೂ ಹಲವು ಉದ್ಯೋಗಿಗಳ ಬೋನಸ್ ಕೂಡಾ ಕಡಿಮೆಗೊಳಿಸುತ್ತದೆ ಎಂದು ವರದಿಗಳು ತಿಳಿಸಿವೆ.

    ಈ ವರದಿಗಳು ನಿಜವಾದಲ್ಲಿ ಉದ್ಯೋಗಿಗಳ ಒಂದು ವರ್ಗಕ್ಕೆ ಮುಂದಿನ ತಿಂಗಳು ಬಡ್ತಿ (Promtion) ದೊರೆಯುವುದಿಲ್ಲ. ಉದ್ಯೋಗಿಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ಕಂಪನಿಯು ವರ್ಷಕ್ಕೆ ಎರಡು ಬಾರಿ (ಎಪ್ರಿಲ್ ಮತ್ತು ಅಕ್ಟೋಬರ್) ತನ್ನ ಉದ್ಯೋಗಿಗಳಿಗೆ ಬೋನಸ್ ನೀಡುತ್ತದೆ. ಬಡ್ತಿ ಹಾಗು ಬೋನಸ್ ಹೊರತಾಗಿ ಆ್ಯಪಲ್ ಕಂಪನಿಯು ನೇಮಕಾತಿಯನ್ನು (Recruitment) ಸ್ಥಗಿತಗೊಳಿಸುವ ನಿರೀಕ್ಷೆಯಿದೆ. ಇದಕ್ಕೂ ಮೊದಲು 2020ರಲ್ಲಿ ಗೂಗಲ್, ಮೆಟಾ ಹಾಗು ಇನ್ನಿತರೆ ಟೆಕ್ ಕಂಪನಿಗಳು ಲೆಕ್ಕಕ್ಕಿಂತ ಜಾಸ್ತಿ ಉದ್ಯೋಗಿಗಳ ನೇಮಕಾತಿಯನ್ನು ಮಾಡಿಕೊಂಡು ಪ್ರಸ್ತುತ ಸಾವಿರಾರು ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿದೆ. ಇದನ್ನೂ ಓದಿ: Infosys ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜೀನಾಮೆ 

    ಆ್ಯಪಲ್ ಕಂಪನಿಯ ಹೆಚ್‌ಆರ್ ತಂಡವು ಉದ್ಯೋಗಿಗಳ ಹಾಜರಾತಿಯನ್ನು ಸೂಕ್ಷ್ಮರೀತಿಯಲ್ಲಿ ಗಮನಿಸುತ್ತಿದೆ. ಈ ಕಂಪನಿಯು ಮನೆಯಿಂದ ಕೆಲಸ ಮಾಡುವುದನ್ನು ಕೊನೆಗೊಳಿಸಿ ಉದ್ಯೋಗಿಗಳು ವಾರಕ್ಕೆ ಮೂರು ಸಲ ಕಚೇರಿಗೆ ಬಂದು ಕೆಲಸ ಮಾಡುವಂತೆ ಹೇಳಿದೆ. ಇದನ್ನೂ ಓದಿ: ಕೋವಿಡ್‌ ಬಳಿಕ ಏರಿಕೆಯಾಗಿದ್ದ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಬೆಲೆ ಭಾರೀ ಇಳಿಕೆ

    ಕಂಪನಿಯು ಕಳೆದ ಎರಡು ವರ್ಷಗಳಿಂದ ಇತರೆ ಕಂಪನಿಗಳ ತರಹ ಅಧಿಕ ನೇಮಕಾತಿಯನ್ನು ಮಾಡಿಕೊಳ್ಳದೆ ಎಚ್ಚರಿಕೆಯಿಂದ ನೇಮಕ ಮಾಡಿಕೊಳ್ಳುವ ಮೂಲಕ ಸಾಮೂಹಿಕ ವಜಾಗೊಳಿಸುವಿಕೆಯನ್ನು (Mass Layoff) ತಪ್ಪಿಸಿದೆ. ಈ ಕಂಪನಿಯು 2020 ಮತ್ತು 2021ರ ನಡುವೆ ಕೇವಲ 7,000 ಸಾವಿರ ಉದ್ಯೋಗಿಗಳನ್ನು ಮಾತ್ರ ನೇಮಕ ಮಾಡಿಕೊಂಡಿದೆ. ವರದಿಗಳ ಪ್ರಕಾರ ಅದೇ ಕಂಪನಿಯು 2022ನೇ ವರ್ಷದ ಸೆಪ್ಟೆಂಬರ್ ತಿಂಗಳ ಒಳಗಾಗಿ 1,64,000 ಉದ್ಯೋಗಿಗಳನ್ನು ನೇಮಿಸಿಕೊಂಡಿದೆ. ಇದು 2021ನೇ ವರ್ಷದ ನೇಮಕಾತಿಯಿಂದ ಶೇ.6.5ರಷ್ಟು ಹೆಚ್ಚಳವಾಗಿದೆ. ಇದನ್ನೂ ಓದಿ: ಮತ್ತೆ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಮೆಟಾ 

    ಆ್ಯಪಲ್ ಕಂಪನಿಯ ಷೇರುದಾರರ ಸಭೆಯ ಸಂದರ್ಭದಲ್ಲಿ ಕಂಪನಿಯ ಕಾರ್ಯ ನಿರ್ವಾಹಕ (CEO) ಟಿಮ್ ಕುಕ್ (Tim Cook) ಅವರು, ಹಣದ ವಿಷಯದಲ್ಲಿ ಕಂಪನಿಯು ವಿಶೇಷವಾದ ಜಾಗರೂಕತೆಯನ್ನು ಮುಂದುವರೆಸಿದೆ. ನಾವು ಹಣಖರ್ಚು ವಿಷಯದಲ್ಲಿ ಬಹಳ ವಿವೇಕವಾಗಿ ಹಾಗೂ ಚಿಂತನಾಶೀಲರಾಗಿದ್ದೇವೆ ಮತ್ತು ನೇಮಕಾತಿ ಮಾಡಿಕೊಳ್ಳುವುದರಲ್ಲಿ ಉದ್ದೇಶಪೂರ್ವಕವಾಗಿ ಮುಂದುವರೆಯುತ್ತೇವೆ ಎಂದು ಷೇರುದಾರರಿಗೆ ಮಾಹಿತಿಯನ್ನು ತಿಳಿಸಿದರು. ಇದನ್ನೂ ಓದಿ: ಚೀನಾದಿಂದ ಬೆಂಗಳೂರಿಗೆ ಶಿಫ್ಟ್ – ಸ್ಥಾಪನೆಯಾಗಲಿದೆ ಐಫೋನ್ ತಯಾರಿಕಾ ಘಟಕ, 1 ಲಕ್ಷ ಮಂದಿಗೆ ಉದ್ಯೋಗ

  • ನಿಗಮ ಮಂಡಳಿ, ಪ್ರಾಧಿಕಾರದ ಅಧ್ಯಕ್ಷರ ನೇಮಕಾತಿ ವಾಪಸ್

    ನಿಗಮ ಮಂಡಳಿ, ಪ್ರಾಧಿಕಾರದ ಅಧ್ಯಕ್ಷರ ನೇಮಕಾತಿ ವಾಪಸ್

    ಬೆಂಗಳೂರು: ರಾಜ್ಯ ಸರ್ಕಾರ 46 ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ ಪಡೆದಿದೆ. ಶಾಸಕರು, ಮಾಜಿ ಶಾಸಕರು, ಅಧ್ಯಕ್ಷರು ಇರುವ ನಿಗಮ ಮಂಡಳಿ ಬಿಟ್ಟು ಉಳಿದ 46 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಹಿಂಪಡೆದಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಈ ಹಿಂದಿನ ನೇಮಕಾತಿಯಲ್ಲಿದ್ದ ಸದಸ್ಯರೇ ಮುಂದುವರಿಯಲಿದ್ದಾರೆ. ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ ಎಲ್.ಆರ್.ಮಹದೇವಸ್ವಾಮಿ, ರವಿ ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಗೆ ರವಿ ಕುಶಾಲಪ್ಪ, ಕರ್ನಾಟಕ ಗೇರು ಅಭಿವೃದ್ಧಿ ನಿಗಮಕ್ಕೆ ಮಣಿರಾಜ ಶೆಟ್ಟಿ, ಕರ್ನಾಟಕ ಜೀವ ವೈವಿದ್ಯ ಮಂಡಳಿಗೆ ಅನಂತ ಹೆಗಡೆ ಆಶೀಸರ್ ಮೊದಲಾದವರು ಅಧ್ಯಕ್ಷರಾಗಿದ್ದಾರೆ.

    ಉಪಾಧ್ಯಕ್ಷರಾಗಿ ಕರ್ನಾಟಕದಲ್ಲಿ ಅರಣ್ಯ ಅಭಿವೃದ್ಧಿ ನಿಗಮಕ್ಕೆ ಕೆ.ರೇವಣ್ಣಪ್ಪ ಕೋಳಗಿ, ಕರ್ನಾಟಕ ಕ್ರೀಡಾ ಪ್ರಾಧಿಕಾರಕ್ಕೆ ಕೆ.ಪಿ.ಪುರುಷೋತ್ತಮ್, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ (ವಿದ್ಯುತ್ ಮಗ್ಗಗಳ) ಅಭಿವೃದ್ಧಿ ನಿಗಮಕ್ಕೆ ನೀಲಕಂಠ ಬಿ.ಮಾಸ್ತರಮರಡಿ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮಕ್ಕೆ ಎಸ್.ದತ್ತಾತ್ರಿ ಬಿನ್ ಸೂರ್ಯ ನಾರಾಯಣರಾವ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಎಸ್.ಎನ್.ಈಶ್ವರಪ್ಪ ಹಾಗೂ ಬೆಂಗಳೂರು ಸಾರಿಗೆ ಸಂಸ್ಥೆಗೆ ಎಂ.ಆರ್.ವೆಂಕಟೇಶ್ ಅವರೇ ನಾಮ ನಿರ್ದೇಶಿತರಾಗಿ ಮುಂದುವರಿಯಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ

    ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ

    ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ.

    2022-23ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಸೂಚಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮಳೆ ಅಬ್ಬರ – ಕೊಡಗು, ಉಡುಪಿ, ಚಿಕ್ಕಮಗಳೂರು ಸೇರಿ 5 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

    VIDHAN SHOUDHA

    3708 ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕಕ್ಕೆ ಸೂಚನೆ ನೀಡಿದೆ.

    ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆ-3,271 ಮತ್ತು ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳ ಸಂಖ್ಯೆ-100. ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರ ಸಂಖ್ಯೆ 337 ಇದೆ. ಇದನ್ನೂ ಓದಿ: ಒಟ್ಟಿಗೆ ಫೈಟರ್ ಜೆಟ್ ಹಾರಿಸಿ ಇತಿಹಾಸ ಸೃಷ್ಟಿದ ತಂದೆ- ಮಗಳು

    Live Tv
    [brid partner=56869869 player=32851 video=960834 autoplay=true]

  • ಅಗ್ನಿಪಥ್ ಯೋಜನೆ – ಇಲ್ಲಿಯವರೆಗೆ 1.83 ಲಕ್ಷ ನೋಂದಣಿ

    ಅಗ್ನಿಪಥ್ ಯೋಜನೆ – ಇಲ್ಲಿಯವರೆಗೆ 1.83 ಲಕ್ಷ ನೋಂದಣಿ

    ನವದೆಹಲಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆ(ಐಎಎಫ್) ನೇಮಕಾತಿಗೆ 1.83 ಕ್ಕೂ ಹೆಚ್ಚು ಆಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ತಿಳಿಸಿದೆ.

    ಜೂನ್ 14ರಂದು ಅಗ್ನಿಪಥ್ ಯೋಜನೆಯನ್ನು ಕೇಂದ್ರ ಅನಾವರಣಗೊಳಿಸಿತ್ತು. ಇಲ್ಲಿಯವರೆಗೆ 1.83 ಲಕ್ಷಕ್ಕೂ ಅಧಿಕ ಅಗ್ನಿವೀರ್ ಆಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದಾರೆ. ನೇಮಕಾತಿಗೆ ಅರ್ಜಿ ಸಲ್ಲಿಸಲು ಜುಲೈ 5 ಕೊನೆಯ ದಿನಾಂಕವಾಗಿರುತ್ತದೆ ಎಂದು ಕೇಂದ್ರ ತಿಳಿಸಿದೆ. ಇದನ್ನೂ ಓದಿ: ಕನ್ನಯ್ಯಲಾಲ್ ಹತ್ಯೆ ಘೋರ, ಖಂಡನೀಯ: ಬಿ.ಕೆ.ಹರಿಪ್ರಸಾದ್

    ಭಾರತೀಯ ಸೇನೆಗೆ ಸೇರುವ ಯುವ ಆಕಾಂಕ್ಷಿಗಳಿಗೆ ಅಗ್ನಿಪಥ್ ಯೋಜನೆಯನ್ನು ಕೇಂದ್ರ ಘೋಷಿಸಿದ್ದಾಗ ಇದರ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿದ್ದವು. ವಿರೋಧ ಪಕ್ಷಗಳು ಯೋಜನೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದವು. ಇದನ್ನೂ ಓದಿ: 24 ಗಂಟೆ ಹೋಟೆಲ್ ತೆರೆಯೋಕೆ ಅನುಮತಿ ಕೊಡೋದು ಕಷ್ಟ: ಆರಗ ಜ್ಞಾನೇಂದ್ರ

    ಯೋಜನೆಯನ್ನು ವಿರೋಧಿಸಿದ್ದ ಪ್ರತಿಭಟನಾಕಾರರು ರೈಲು, ಬಸ್ಸು ಸೇರಿದಂತೆ ಸಾರ್ವಜನಿಕ ಆಸ್ತಿಗಳನ್ನು ಧ್ವಂಸಗೊಳಿಸಿದ್ದರು. ಪ್ರತಿಭಟನೆಯಿಂದ ಸುಮಾರು 1,000 ಕೋಟಿ ರೂ. ನಷ್ಟವಾಗಿದೆ ಎಂದು ವರದಿಗಳು ತಿಳಿಸಿವೆ.

    Live Tv

  • ರಾಜ್ಯವನ್ನೇ ಹುಡುಕಿದರೂ ಸಿಗದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಅರೆಸ್ಟ್ ಆದ ಕಥೆಯೇ ರೋಚಕ

    ರಾಜ್ಯವನ್ನೇ ಹುಡುಕಿದರೂ ಸಿಗದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಅರೆಸ್ಟ್ ಆದ ಕಥೆಯೇ ರೋಚಕ

    ಬೆಂಗಳೂರು/ಕಲಬುರಗಿ: ರಾಜ್ಯಾದ್ಯಂತ ಹುಡುಕಾಡಿದರೂ ಸಿಗದ ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದ ಕಿಂಗ್‌ಪಿನ್ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಬೋನಿಗೆ ಬಿದ್ದದೆ ರೋಚಕ.

    ದಿನಕ್ಕೊಂದು ರಹಸ್ಯಗಳನ್ನು ಬಯಲು ಮಾಡುತ್ತಿದ್ದ ಈ ಪ್ರಕರಣದಲ್ಲಿ ವಿಶೇಷ ತಂಡಗಳನ್ನು ರಚಿಸಿ ಫುಲ್ ಆಕ್ಟೀವ್ ಆಗಿ ಕೆಲಸ ಮಾಡುತ್ತಿದ್ದ ಸಿಐಡಿ ಅಧಿಕಾರಿಗಳು, ಹೊಂಚುಹಾಕಿ ಸಿನಿಮೀಯ ರೀತಿಯಲ್ಲಿ ಆಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಜಮೀರ್‌ಗೆ ಬಿಜೆಪಿ `ಮಹಾನಾಯಕ’ನ ಬೆಂಬಲವಿದೆ, ನಮ್ಮವರೇ ಸುಲಿಗೆ ಮಾಡುತ್ತಿದ್ದಾರೆ: ಯತ್ನಾಳ್

    Divya hagaragi (2)

    ದಿವ್ಯಾ ಎಸ್ಕೇಪ್ ಆಗಿದ್ದು ಹೇಗೆ?: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ವಿಚಾರ ಕೇಳಿಬರುತ್ತಿದ್ದಂತೆ ದಿವ್ಯಾ ಹಾಗರಗಿ, ಕಾರುಚಾಲಕ ಸದ್ದಾಂ ಹುಸೇನ್‌ನ ಸಹಾಯದಿಂದ ತನ್ನ ಇನ್ನೋವಾ ಕಾರಿನಲ್ಲಿ ಅರ್ಚನಾ, ಸುನೀತಾಳನ್ನ ಕೂರಿಸಿಕೊಂಡು ಎಸ್ಕೇಪ್ ಆಗಿದ್ದಾಳೆ. ಅಷ್ಟರಲ್ಲಾಗಲೇ ಫುಲ್ ಆಕ್ಟೀವ್ ಆಗಿದ್ದ ಸಿಐಡಿಯ ಸೈಬರ್ ಕ್ರೈಂ ತಂಡವು ದಿವ್ಯಾ ಎಲ್ಲೆಲ್ಲಿ ಹೋಗ್ತಿದ್ದಾಳೆ? ಎಂಬ ಮಾಹಿತಿಯನ್ನು ಕಲೆಹಾಕತೊಡಗಿತ್ತು. ಇದಕ್ಕಾಗಿ ಸಿಐಡಿಯು 6 ವಿಶೇಷ ತಂಡಗಳನ್ನು ರಚಿಸಿಕೊಂಡಿತ್ತು. ಎಸ್ಪಿ ನಾಗೇಶ್ ಅವರ ಟೀಂ ನಿಂದ ಟೆಕ್ನಿಕಲ್ ಸಹಕಾರ ನೀಡಿತ್ತು. ಇದನ್ನೂ ಓದಿ: ತಾಕತ್ತಿದ್ದರೆ ನನ್ನ ವಿರುದ್ಧ ರೇವಣ್ಣ ನಿಲ್ಲಲಿ: ಪ್ರೀತಂ ಸವಾಲು

    divya hagaragi

    ಎಸ್ಕೇಪ್ ಆಗಿ ಸೊಲ್ಲಾಪುರಕ್ಕೆ ತೆರಳಿದ್ದ ದಿವ್ಯಾ ಅಲ್ಲಿ ಟೆಲಿಕಾಂ ಬ್ಯುಸಿನಸ್ ಮಾಡ್ತಿದ್ದ ಸುರೇಶ್ ಕಾಟ್ಗಾಂವ್ ನನ್ನ ಭೇಟಿಯಾಗಿದ್ದಳು. ನಂತರ ಆತನ ಬಳಿ ಆಶ್ರಯ ನೀಡುವಂತೆ ದುಂಬಾಲುಬಿದ್ದಿದ್ದಳು. ಈ ಹಿಂದೆ ಕಲಬುರಗಿಯ ಅಫ್ಜಲ್ ಪುರದಲ್ಲಿ ಸ್ಯಾಂಡ್ ಬ್ಯುಸಿನೆಸ್ ಮಾಡಿಕೊಂಡಿದ್ದಾಗ ಸುರೇಶ್‌ನ ಪರಿಚಯವಾಗಿತ್ತು. ದಿವ್ಯಾ ಸುರೇಶ್‌ಗೆ ಹಣಕಾಸಿನ ಸಹಾಯ ಮಾಡುತ್ತಿದ್ದಳು. ಆ ಋಣವನ್ನ ತೀರಿಸೋಕೆ ಸುರೇಶ್ ದಿವ್ಯಾ ಸಹಾಯಕ್ಕಾಗಿ ನಿಂತಿದ್ದನು.

    kalaburagi - divya

    ಅಕ್ರಮ ನೇಮಕಾತಿ ವಿಚಾರ ಬಯಲಾಗುತ್ತಿದ್ದಂತೆ ಅಫ್ಜಲ್‌ಪುರ ತಲುಪುವ ಮುನ್ನವೇ ದಿವ್ಯಾ ಮೊಬೈಲ್ ಸ್ವಿಚ್‌ಆಫ್ ಮಾಡಿಕೊಂಡಿದ್ದಾಳೆ. ನಂತರ ದಿವ್ಯಾ ಅಂಡ್ ಟೀಂ ಮೊಬೈಲ್ ಬಳಸದೇ ಮಹಾರಾಷ್ಟ್ರದ ಪುಣೆ ತಲುಪಿದೆ. ಇದಕ್ಕೂ ಮುನ್ನವೇ ಗುಜರಾತ್-ಮಹಾರಾಷ್ಟ್ರ ಭಾಗಗಳಲ್ಲಿ ಕಾರಿನಲ್ಲಿ ಓಡಾಟ ನಡೆಸಿದ್ದರು. ದಿವ್ಯಾಳ ಮೊಬೈಲ್ ಸ್ವಿಚ್ ಆಫ್ ಆಗೋಕು ಮುನ್ನ ಸುರೇಶನಿಗೆ ಕಾಲ್ ಮಾಡಿದ್ದಳು. ಈ ಆಧಾರದ ಮೇಲೆಯೇ ಸುರೇಶ್ ಚಲನವಲನದ ಬಗ್ಗೆ ಗಮನಹರಿಸಿದ್ದ ಸಿಐಡಿ ಟೀಂ ಸುರೇಶನ ಬೆಂಬಿದ್ದಿದೆ. ನಂತರ ಸುರೇಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದಿವ್ಯಾಳ ಬಗ್ಗೆ ಸತ್ಯ ಬಾಯ್ಬಿಟ್ಟಿದ್ದಾನೆ. ಪುಣೆಗೆ ಹೋಗ್ತೀನಿ ಅಂದಿದ್ರು ಆದರೆ, ಎಲ್ಲಿ ಅಂತ ಗೊತ್ತಿಲ್ಲ ಎಂದು ಬಾಯ್ಬಿಟ್ಟಿದ್ದಾನೆ. ಇದನ್ನೂ ಓದಿ: ಮನೆಯಿಂದ ಹೋಗಬೇಕಾದ್ರೆ ರಾಜಕುಮಾರಿ ತರ ಹೋದ್ಳು, ಆದರೆ ಈಗ….: ಆ್ಯಸಿಡ್ ಸಂತ್ರಸ್ತೆ ತಾಯಿ ಅಳಲು 

    DIVYA - POLICE - KALBURAGI (3)

    ನಂತರ ಸಿಐಡಿ ಅಧಿಕಾರಿಗಳು ಸುರೇಶ್‌ನನ್ನು ಪುಣೆಗೆ ಕರೆದೊಯ್ದು ದಿವ್ಯಾಳಿಗೆ ಫೋನ್ ಮಾಡಿಸಿದ್ದಾರೆ. ಲಾಡ್ಜ್ ಒಂದರ ಮಾಹಿತಿಯನ್ನ ನೀಡಿದ್ದ ದಿವ್ಯಾ. ಆ ಲಾಡ್ಜ್ ನಲ್ಲಿ ಅಡುಗೆಭಟ್ಟ ಕಾಳಿದಾಸನಿಂದ ಬಗೆಬಗೆಯ ಅಡುಗೆ ಮಾಡಿಸಿಕೊಂಡು ತಿನ್ನುತ್ತಿದ್ದರು. ಕಾಳಿದಾಸನ ಮೊಬೈಲ್ ನಿಂದಲೇ ವಾಟ್ಸಪ್ ಕಾಲ್ ಮಾಡ್ತಿದ್ರು. ಇದರಿಂದ ಆಕೆ ಲಾಡ್ಜ್ನಲ್ಲಿ ಇರುವುದು ಕನ್ಫರ್ಮ್ ಆಗಿದೆ. ಲಾಡ್ಜ್ ಅನ್ನು ಸುತ್ತುವರಿದ ಪೊಲೀಸರು ದಿವ್ಯಾ, ಅರ್ಚನಾ, ಸುನೀತಾ, ಕಾರು ಚಾಲಕ ಸದ್ದಾಂನನ್ನು ಅರೆಸ್ಟ್ ಮಾಡಿದ್ದಾರೆ. ಉಳಿದಂತೆ ಎಂಎಸ್ ಬಿಲ್ಡಿಂಗ್‌ನ ಡಿಪಿಆರ್ ಸೆಕ್ಷನ್‌ನಲ್ಲಿದ್ದ ಜ್ಯೋತಿ ಸಹ ತಗಲ್ಲಾಕ್ಕೊಂಡಿದ್ದಾಳೆ.

    ಜ್ಯೋತಿ, ಶಾಂತಾಭಾಯಿ ಎಂಬಾಕೆಯನ್ನು ಪಿಎಸ್‌ಐ ಅಕ್ರಮ ನೇಮಕಾತಿ ಮಾಡಿಸಿದ್ದಳು. 15 ಉತ್ತರವನ್ನಷ್ಟೇ ಶಾಂತಾಭಾಯಿ ಉತ್ತರಿಸಿದ್ದಳು. ಆದರೆ, ಓಎಂಆರ್ ಶೀಟ್ ನಲ್ಲಿ 130 ಅಂಕ ಪಡೆಯುವಂತೆ ಮಾಡಲಾಗಿದೆ. ಒಟ್ಟಿನಲ್ಲಿ ಶಾಂತಾಭಾಯಿ ಎಸ್ಕೇಪ್ ಆಗಿದ್ದು ಆಕೆಯ ಹುಡುಕಾಟದಲ್ಲಿ ಸಿಐಡಿ ಬ್ಯುಸಿಯಾಗಿದೆ.

  • ಪಿಎಸ್‍ಐ ನೇಮಕಾತಿ ಅಕ್ರಮ ವಿಚಾರ – 7ನೇ ರ‍್ಯಾಂಕ್ ಪಡೆದಿದ್ದ ಕಲಬುರಗಿ ಅಭ್ಯರ್ಥಿ ಸಿಐಡಿ ವಶಕ್ಕೆ

    ಪಿಎಸ್‍ಐ ನೇಮಕಾತಿ ಅಕ್ರಮ ವಿಚಾರ – 7ನೇ ರ‍್ಯಾಂಕ್ ಪಡೆದಿದ್ದ ಕಲಬುರಗಿ ಅಭ್ಯರ್ಥಿ ಸಿಐಡಿ ವಶಕ್ಕೆ

    ಕಲಬುರಗಿ: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‍ಐ) ನೇಮಕಾತಿಯಲ್ಲಿ ಭಾರೀ ಅಕ್ರಮದ ಹಿನ್ನೆಲೆ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು, ಸೇಡಂ ಪಟ್ಟಣದ ಅಭ್ಯರ್ಥಿಯೊಬ್ಬನನ್ನು ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    545 ಪಿಎಸ್‍ಐ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದ ಹಿನ್ನೆಲೆ ಸಿಐಡಿ ತನಿಖೆ ನಡೆದಿದೆ. ಜಿಲ್ಲೆಯ ಠಾಣೆಯೊಂದರ ಎಎಸ್‍ಐ ಪುತ್ರ ವೀರೇಶ್ ಎಂಬಾತನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಮೂರು ಬಾರಿ ಪಿಎಸ್‍ಐ ಎಕ್ಸಾಂ ಬರೆದಿದ್ದ ವಿರೇಶ್, ಮೂರು ಬಾರಿಯೂ ಅರ್ಹತೆ ಪಡೆಯುವಲ್ಲಿ ವಿಫಲನಾಗಿದ್ದ. ವಯಸ್ಸು ಮೀರಿ ಹೋಗುತ್ತೆ ಅನ್ನೋದಕ್ಕೆ ಅಕ್ರಮವಾಗಿ ನೇಮಕಾತಿ ಪಡೆಯಲು ವಿರೇಶ್ ಮುಂದಾಗಿದ್ದ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿಯವರು ಗೊಂದಲ ಮೂಡಿಸುವ ಕೆಲಸ ಮಾಡಬಾರದು: ಬಿಎಸ್‍ವೈ

    ಕಳೆದ ವರ್ಷ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ವಿರೇಶ್, ಕೇವಲ 20 ಪ್ರಶ್ನೆಗಳಿಗೆ ಉತ್ತರ ಬರೆದಿದ್ದ, ನಂತರ ಅಕ್ರಮದಿಂದ ಓಎಮ್‍ಆರ್ (ಆಪ್ಟಿಕಲ್ ಮಾರ್ಕ್ಸ್‌ ರೆಕಗ್ನಿಷನ್) ಸೀಟ್ ತರಸಿಕೊಂಡು ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿ 121 ಮಾರ್ಕ್ ಪಡೆಯುವ ಮೂಲಕ ಕಲ್ಯಾಣ ಕರ್ನಾಟಕ ಮಿಸಲು ಅನ್ವಯ 7 ನೇ ರ‍್ಯಾಂಕ್ ಪಡೆದು ತೇರ್ಗಡೆ ಹೊಂದಿದ್ದ ಎನ್ನಲಾಗಿದೆ. ಅನುಮಾನಗೊಂಡ ಸಿಐಡಿ ಬೆಂಗಳೂರಿನಿಂದ ನೇರವಾಗಿ ಬಂದು ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವಿರೇಶ‌ನನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಶಾಸ್ತ್ರದ ಪ್ರಕಾರ ವಿಶ್ವಕರ್ಮ ಜನಾಂಗದವರೇ ದೇವರ ಪ್ರತಿಮೆ ಕೆತ್ತಬೇಕು: ಡಾ. ಜ್ಞಾನನಂದ

    ವಿರೇಶ್ ಜೊತೆಗೆ ಇನ್ನೂ ಹಲವು ವಿದ್ಯಾರ್ಥಿಗಳು ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆ ಇದೆ. ಸಿಐಡಿ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ಶೋಧ ಕಾರ್ಯ ಆರಂಭಿಸಿದ್ದಾರೆ. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆ ಇದೆ. ಅಕ್ರಮ ನೇಮಕಾತಿಯಲ್ಲಿ ಹಲವು ಪೊಲೀಸ್ ಅಧಿಕಾರಿಗಳು, ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಸೇರಿದಂತೆ ಹಲವರು ಭಾಗಿಯಾಗಿರುವ ಶಂಕೆ ಕೂಡಾ ಇದೆ.