Tag: Recruitment Scam

  • ಕೋಮುಲ್‌ನಲ್ಲಿ ನೇಮಕಾತಿ ಹಗರಣ – ಶಾಸಕ ನಂಜೇಗೌಡ ಸೇರಿ ಪ್ರಭಾವಿ ನಾಯಕರ ವಿರುದ್ಧ ತನಿಖೆಗೆ ಪತ್ರ

    ಕೋಮುಲ್‌ನಲ್ಲಿ ನೇಮಕಾತಿ ಹಗರಣ – ಶಾಸಕ ನಂಜೇಗೌಡ ಸೇರಿ ಪ್ರಭಾವಿ ನಾಯಕರ ವಿರುದ್ಧ ತನಿಖೆಗೆ ಪತ್ರ

    ಬೆಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ (KOMUL) ನೇಮಕಾತಿ ಹಗರಣ (Recruitment Scam) ನಡೆದಿದ್ದು, 75ಕ್ಕೆ 75 ನೇಮಕಾತಿಯಲ್ಲೂ ಮೋಸ ಮಾಡಿರುವುದು ಸಾಬೀತಾಗಿದೆ.

    ಕಾಂಗ್ರೆಸ್ ಶಾಸಕ ನಂಜೇಗೌಡ ವಿರುದ್ಧ ಆರೋಪ ಇದ್ದ ಹಿನ್ನೆಲೆ ತನಿಖೆ ಮಾಡಿದ ಇ.ಡಿ (ED) ಅಧಿಕಾರಿಗಳು ಲೋಕಾಯುಕ್ತಕ್ಕೆ (Lokayukta) ವರದಿ ರವಾನಿಸಿದ್ದಾರೆ. ಇ.ಡಿ ಅಧಿಕಾರಿಗಳು 75 ಅಭ್ಯರ್ಥಿಗಳ ಹೇಳಿಕೆ ದಾಖಲಿಸಿಕೊಂಡಿದ್ದು, ನೇಮಕಾತಿಗಾಗಿ ಹಣ ನೀಡಿರುವ ಬಗ್ಗೆ ಅಭ್ಯರ್ಥಿಗಳು ತಪ್ಪೊಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಇ.ಡಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ತನಿಖೆ ಮಾಡುವಂತೆ ಲೋಕಾಯುಕ್ತಕ್ಕೆ ಪತ್ರ ಬರೆದಿದೆ. ಇದನ್ನೂಓದಿ: ಇಂದು ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ – ಮಾಜಿ ಮಂತ್ರಿಗೆ ಜೈಲಾ.. ಬೇಲಾ?

    ಶಾಸಕ ನಂಜೇಗೌಡ ಸೇರಿ ಪ್ರಭಾವಿ ನಾಯಕರ ವಿರುದ್ಧ ತನಿಖೆಗೆ ಪತ್ರ ಬರೆಯಲಾಗಿದೆ. ನೇಮಕಾತಿ ಪರೀಕ್ಷೆಯನ್ನು ಮಂಗಳೂರು ವಿವಿಯ ಅಧಿಕಾರಿಗಳು ನಡೆಸಿದ್ದರು. ಶಿಫಾರಾಸು ಪತ್ರ ಬರೆದಿದ್ದ ಪ್ರಭಾವಿ ನಾಯಕರ ವಿರುದ್ಧ ತನಿಖೆ ಮಾಡಲು ಇ.ಡಿ ಪತ್ರ ಬರೆದ ಆಧಾರದ ಮೇಲೆ ಲೋಕಾಯುಕ್ತ ಸರ್ಕಾರಕ್ಕೆ ಪತ್ರ ಬರೆದಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ ಡಿಜಿ ಪ್ರಶಾಂತ್ ಠಾಕೂರ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದನ್ನೂಓದಿ: ಕರ್ನಾಟಕದಲ್ಲಿ 70.03% ಮತದಾನ – ಯಾವ ಕ್ಷೇತ್ರಗಳಲ್ಲಿ ಎಷ್ಟು ವೋಟಿಂಗ್ ಆಗಿದೆ?

  • ಪಶ್ಚಿಮ ಬಂಗಾಳ ಸಚಿವನ ಮನೆ ಮೇಲೆ ಇಡಿ ದಾಳಿ

    ಪಶ್ಚಿಮ ಬಂಗಾಳ ಸಚಿವನ ಮನೆ ಮೇಲೆ ಇಡಿ ದಾಳಿ

    ಕೋಲ್ಕತ್ತಾ: ಅಕ್ರಮ ನೇಮಕಾತಿ (Recruitment Scam) ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ (West Bengal) ಆಹಾರ ಮತ್ತು ಸರಬರಾಜು ಸಚಿವ ರಥಿನ್ ಘೋಷ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದೆ.

    ಅವರಿಗೆ ಸೇರಿದ ಹಲವು ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ರಾಜ್ಯದ ನಾಗರಿಕ ಸಂಸ್ಥೆಗಳ ನೇಮಕಾತಿಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಿತ್ತಳೆ ಬಣ್ಣದ ವಂದೇ ಭಾರತ್ ರೈಲಿನ ಹಿಂದಿದೆ ವೈಜ್ಞಾನಿಕ ಚಿಂತನೆ – ರಾಜಕೀಯ ಅಲ್ಲ: ಅಶ್ವಿನಿ ವೈಷ್ಣವ್

    ಭದ್ರತಾ ಪಡೆಗಳ ತುಕಡಿಯೊಂದಿಗೆ ತನಿಖಾಧಿಕಾರಿಗಳು ಘೋಷ್ ಅವರ ಮನೆ ಮೇಲೆ ಬೆಳಿಗ್ಗೆ 6:10 ರ ಸುಮಾರಿಗೆ ದಾಳಿ ನಡೆಸಿದ್ದಾರೆ. ತನಿಖಾಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ 12 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಈ ವೇಳೆ ಘೋಷ್ ಅವರು ಮನೆಯಲ್ಲಿದ್ದರೆ ಎಂಬುದು ತಿಳಿದು ಬಂದಿಲ್ಲ.

    ಮಧ್ಯಮಗ್ರಾಮದ ಟಿಎಂಸಿ (TMC) ಶಾಸಕ ಘೋಷ್ ಅವರು ಈ ಹಿಂದೆ ಅಲ್ಲಿನ ಪುರಸಭೆಯ ಪದಾಧಿಕಾರಿಯಾಗಿದ್ದರು. 2014 ಮತ್ತು 2018ರ ನಡುವೆ ರಾಜ್ಯದ ವಿವಿಧ ನಾಗರಿಕ ಸಂಸ್ಥೆಗಳ ನಿಯಮದ ವಿರುದ್ಧವಾಗಿ ಸುಮಾರು 1,500 ಜನರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ಇದನ್ನೂ ಓದಿ: ಸಿಕ್ಕಿಂ ಪ್ರವಾಹ – 102 ಜನ ನಾಪತ್ತೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]