ಬೆಂಗಳೂರು: ಸರ್ಕಾರಿ ನೌಕರರು (Karnataka Government Employees) ಇನ್ನು ಮುಂದೆ ಕೆಂಪು-ಹಳದಿ (Red-Yelow) ಬಣ್ಣದ ಐಡಿ ಕಾರ್ಡ್ ಟ್ಯಾಗ್ ಹಾಕುವಂತೆ ಸರ್ಕಾರ ಆದೇಶಿಸಿದೆ.
ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಟ್ಯಾಗ್ ಹಾಕಿಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ವಿಭಾಗದ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ ಆದೇಶಿಸಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಗ್ಯಾರಂಟಿಗಳ ಪರಿಷ್ಕರಣೆ ಆಗಲ್ಲ: ಬಸವರಾಜ ರಾಯರೆಡ್ಡಿ
ಸಾಂದರ್ಭಿಕ ಚಿತ್ರ
ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಹೆಸರು ಇಟ್ಟು 50 ವರ್ಷಗಳಾದ ಹಿನ್ನಲೆಯಲ್ಲಿ ಸರ್ಕಾರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕರ್ನಾಟಕ ಅಭಿಯಾನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಐಡಿ ಕಾರ್ಡ್ ಟ್ಯಾಗ್ ಅನ್ನು ಕೆಂಪು-ಹಳದಿ ಟ್ಯಾಗ್ ಬಳಸುವಂತೆ ಆದೇಶ ಹೊರಡಿಸಲಾಗಿದೆ.
ಸರ್ಕಾರದ ಎಲ್ಲಾ ನೌಕರರು, ನಿಗಮ,ಮಂಡಳಿಗಳ, ನಿರ್ದೇಶಾನಲಯ, ಅರೆ ಸರ್ಕಾರಿ ನೌಕರರು ತಮ್ಮ ಇಲಾಖೆ ಐಡಿ ಕಾರ್ಡ್ಗೆ ಹೊಂದುವಂತೆ ಟ್ಯಾಗ್ ನೀಡಲು ಸಂಬಂಧಿಸಿದ ಇಲಾಖೆಗಳು ಕ್ರಮವಹಿಸುವಂತೆ ಸೂಚಿಸಲಾಗಿದೆ.
ನವದೆಹಲಿ: ಕೇಂದ್ರ ಸರ್ಕಾರ ಕೊರೊನಾ ಪೀಡಿತ ಜಿಲ್ಲೆಗಳ ವಲಯವಾರು ಪಟ್ಟಿಯನ್ನು ಪರಿಷ್ಕರಿಸಿದೆ. ಕಿತ್ತಳೆ ವಲಯದಲ್ಲಿದ್ದ ಜಿಲ್ಲೆಗಳನ್ನು ಹಸಿರು ವಲಯಕ್ಕೂ, ಕೆಂಪು ವಲಯದಲ್ಲಿದ್ದ ಜಿಲ್ಲೆಗಳು ಕಿತ್ತಾಳೆ ವಲಯದಲ್ಲಿ ಸ್ಥಾನ ಪಡೆದಿದೆ.
ಈ ಮೊದಲು ಕೊರೊನಾ ಪ್ರಕರಣ ದಾಖಲಾಗದ ಜಿಲ್ಲೆಗಳು ಹಸಿರು ವಲಯದಲ್ಲೂ, ಕಡಿಮೆ ಪ್ರಕರಣ ದಾಖಲಾದ ಜಿಲ್ಲೆಗಳು ಕಿತ್ತಳೆ ವಲಯಕ್ಕೂ, ಅತಿ ಹೆಚ್ಚು ಪ್ರಕರಣ ದಾಖಲಾದ ಜಿಲ್ಲೆಗಳು ಕೆಂಪು ವಲಯದಲ್ಲಿ ಸ್ಥಾನ ಪಡೆಯುತ್ತಿತ್ತು.
14 ದಿನಗಳಿಂದ ಯಾವುದೇ ಪ್ರಕರಣ ಬೆಳಕಿಗೆ ಬಾರದೇ ಇದ್ದಲ್ಲಿ ಕಿತ್ತಾಳೆ ವಲಯದಲ್ಲಿದ್ದ ಜಿಲ್ಲೆ ಹಸಿರು ಜಿಲ್ಲೆಯಾಗುತ್ತಿತ್ತು. ಕೆಂಪು ವಲಯಲ್ಲಿದ್ದ ಜಿಲ್ಲೆಯಲ್ಲಿ 14 ದಿನಗಳ ಕಾಲ ಕೊರೊನಾ ಬಾರದೇ ಇದ್ದಲ್ಲಿ ಕಿತ್ತಳೆ ವಲಯದಲ್ಲಿ, ಬಳಿಕ 14 ದಿನಗಳ ಕಾಲ ಯಾವುದೇ ಪ್ರಕರಣ ಬಾರದೇ ಇದ್ದಲ್ಲಿ ಹಸಿರು ವಲಯದಲ್ಲಿ ಸ್ಥಾನ ಪಡೆಯುತ್ತಿತ್ತು.
ಹೊಸ ಮಾನದಂಡ ಏನು?
ಈ ಮೊದಲು ಪ್ರಕರಣಗಳು ದ್ವಿಗುಣವಾಗುವುದರ ಮೇಲೆ ಕೆಂಪು, ಕಿತ್ತಳೆ, ಹಸಿರು ವಲಯಗಳನ್ನು ಪ್ರಕಟಿಸಲಾಗುತ್ತಿತ್ತು. ಈಗ ಗುಣಮುಖರಾಗುತ್ತಿರುವ ಸೋಂಕಿತರ ಸಂಖ್ಯೆ ಹಿನ್ನೆಲೆಯಲ್ಲಿ ಪರಿಷ್ಕರಣೆಗೊಳಿಸಲಾಗಿದೆ. ಹೊಸದಾಗಿ ಎಷ್ಟು ಪ್ರಕರಣಗಳು ದಾಖಲಾಗುತ್ತಿದೆ? ಎಷ್ಟು ದಿನಕ್ಕೆ ಪ್ರಕರಣ ದ್ವಿಗುಣವಾಗುತ್ತಿದೆ? ಎಷ್ಟು ರೋಗಿಗಳು ಗುಣಮುಖರಾಗುತ್ತಿದ್ದಾರೆ? ಎಷ್ಟು ಪರೀಕ್ಷೆ ನಡೆಯುತ್ತಿದೆ? ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕೆ ಕೈಗೊಂಡ ಕ್ರಮ ಹೇಗಿದೆ? ಈ ಮಾನದಂಡಗಳನ್ನು ಆಧಾರಿಸಿ ಪರಿಷ್ಕೃತ ಜಿಲ್ಲೆಗಳ ವಲಯವಾರು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಪ್ರೀತಿ ಸುದನ್ ಎಲ್ಲ ರಾಜ್ಯಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದು ತಿಳಿಸಿದ್ದಾರೆ.
ಪ್ರತಿ ವಾರಕ್ಕೊಮ್ಮೆ ಈ ಪಟ್ಟಿ ಬದಲಾಗುತ್ತದೆ. ಪ್ರಸ್ತುತ ದೇಶದಲ್ಲಿ 130 ಕೆಂಪು ವಲಯ, 284 ಕಿತ್ತಳೆ, 319 ಜಿಲ್ಲೆಗಳು ಹಸಿರು ವಲಯದಲ್ಲಿ ಸ್ಥಾನ ಪಡೆದಿದೆ. ಪರಿಷ್ಕರಣೆಯಿಂದಾಗಿ ಕರ್ನಾಟಕದಲ್ಲಿ 3 ಜಿಲ್ಲೆಗಳು ಕೆಂಪು ವಲಯದಲ್ಲಿ, 13 ಜಿಲ್ಲೆಗಳು ಕಿತ್ತಳೆ ವಲಯದಲ್ಲಿ, 14 ಜಿಲ್ಲೆಗಳು ಹಸಿರು ವಲಯದಲ್ಲಿ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ, ಬೆಳಗಾವಿ, ಕಲಬುರಗಿ, ಚಿಕ್ಕಬಳ್ಳಾಪುರವನ್ನು ಕೆಂಪು ವಲಯದಿಂದ ಕೈಬಿಟ್ಟಿದೆ.
ಯಾವ ಜಿಲ್ಲೆ ಯಾವ ವಲಯದಲ್ಲಿದೆ? ಕೆಂಪು ವಲಯ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು
ಕಿತ್ತಳೆ ವಲಯ: ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಮಂಡ್ಯ, ಬಳ್ಳಾರಿ, ಧಾರವಾಡ, ದಕ್ಷಿಣ ಕನ್ನಡ, ಬೀದರ್, ಚಿಕ್ಕಬಳ್ಳಾಪುರ, ಗದಗ್, ಉತ್ತರ ಕನ್ನಡ, ತುಮಕೂರು.
ನವದೆಹಲಿ: ಕೋವಿಡ್ 19 ಕೆಂಪು, ಕಿತ್ತಳೆ, ಹಸಿರು ವಲಯಗಳ ಪರಷ್ಕೃತ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕರ್ನಾಟಕದ 8 ಜಿಲ್ಲೆಗಳು ಕೆಂಪು ವಲಯದಲ್ಲಿ ಸ್ಥಾನ ಪಡೆದಿದೆ.
ರಾಮನಗರ ಸೇರಿದಂತೆ 12 ಜಿಲ್ಲೆಗಳು ಹಸಿರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, 10 ಜಿಲ್ಲೆಗಳು ಕಿತ್ತಾಳೆ ವಲಯದಲ್ಲಿ ಸ್ಥಾನ ಪಡೆದಿದೆ.
ಯಾವ ಜಿಲ್ಲೆ ಯಾವ ವಲಯದಲ್ಲಿದೆ? ಕೆಂಪು ವಲಯ: ಬಾಗಲಕೋಟೆ, ಬೆಂಗಳೂರು ನಗರ, ಬೆಳಗಾವಿ, ಬೀದರ್, ದಕ್ಷಿಣ ಕನ್ನಡ, ಧಾರವಾಡ, ಕಲಬುರಗಿ ಗ್ರಾಮೀಣ, ಮೈಸೂರು. ಅತಿ ಹೆಚ್ಚು ಕೊರೊನಾ ಪ್ರಕರಣಗಳು ಬೆಳಕಿಗೆ ಬಂದ ಜಿಲ್ಲೆಗಳನ್ನು ಈ ಪಟ್ಟಿಗೆ ಸೇರಿಸಲಾಗುತ್ತದೆ.
ಕಿತ್ತಾಳೆ ವಲಯ: ಬಳ್ಳಾರಿ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ್, ಮಂಡ್ಯ, ತುಮಕೂರು ನಗರ, ಉಡುಪಿ, ಉತ್ತರ ಕನ್ನಡ, ವಿಜಯಪುರ. ಕಳೆದ 14 ದಿನಗಳಿಂದ ಯಾವುದೇ ಪ್ರಕರಣ ಬಾರದೇ ಇದ್ದರೆ ಅಥವಾ ಕಡಿಮೆ ಪಾಸಿಟಿವ್ ಪ್ರಕರಣ ಬಂದಿದ್ದರೆ ಈ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತದೆ.
ಹಸಿರು ವಲಯ: ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ಹಾಸನ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ಯಾದಗಿರಿ. ಯಾವುದೇ ಕೊರೊನಾ ಪ್ರಕರಣಗಳು ಪತ್ತೆಯಾಗದ ಜಿಲ್ಲೆಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತದೆ.
ರೆಡ್ ಝೋನ್ ಗ್ರೀನ್ ಆಗಬೇಕಾದರೆ ಮಾನದಂಡ ಏನು?
28 ದಿನಗಳ ಕಾಲ ಯಾವುದೇ ಪ್ರಕರಣ ಬೆಳಕಿಗೆ ಬಾರದೇ ಇದ್ದಲ್ಲಿ ರೆಡ್ ಝೋನ್ ಹಸಿರು ವಲಯಕ್ಕೆ ಹೋಗುತ್ತದೆ. 14 ದಿನ ಯಾವುದೇ ಪಾಸಿಟಿವ್ ಪ್ರಕರಣ ದಾಖಲಾಗದೇ ಇದ್ದಲ್ಲಿ ಕಿತ್ತಳೆ ವಲಯದಲ್ಲಿರುವ ಜಿಲ್ಲೆ ಹಸಿರು ವಲಯದ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತದೆ.
ರಾಮನಗರ: ಅರ್ಧ ಸಿಹಿ ಅರ್ಧ ಹುಳಿ ರುಚಿ ಇರುವ ಕೆಂಪುಬಣ್ಣದ ಹುಣಸೇಹಣ್ಣು ಕಂಡ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಎನ್.ಆರ್ ಕಾಲೋನಿ ಗ್ರಾಮದ ಜನ ಅಶ್ಚರ್ಯಗೊಂಡಿದ್ದಾರೆ.
ಕಳೆದ ಐದು ವರ್ಷದಿಂದ ಗ್ರಾಮದ ಕಂಬದ ಮಾರಮ್ಮನ ವಾಸಸ್ಥಳದಲ್ಲಿರುವ ಈ ಹುಣಸೇಹಣ್ಣಿನ ಮರದಲ್ಲಿ ಈ ರೀತಿ ಹುಣಸೇಹಣ್ಣು ಬೆಳೆಯುತ್ತಿದೆ. ಈ ಮರದ ತುಂಬ ರಕ್ತದ ರೀತಿ ಕೆಂಪು ಬಣ್ಣ ಕಲೆ ಇದೆ. ಈ ಮರದಲ್ಲಿ ಬಿಡುವ ಹುಣಸೇಹಣ್ಣನ್ನು ಕಿತ್ತು ಅದನ್ನು ಹಿಡಿದು ಉಜ್ಜಿದರೆ ಕೈಯೆಲ್ಲ ಕೆಂಪು ಬಣ್ಣಕ್ಕೆ ತಿರುಗುತ್ತದೆ.
ಈ ಮರದ ಹುಣಸೇಹಣ್ಣಿನ ಇನ್ನೊಂದು ವಿಶೇಷವೆಂದರೆ ಇದನ್ನು ತಿಂದರೆ ಅರ್ಧ ಸಿಹಿ ಹಾಗೂ ಅರ್ಧ ಹುಳಿ ರುಚಿಯನ್ನು ಕೊಡುತ್ತದೆ. ಇದರ ಜೊತೆಗೆ ಈ ಹುಣಸೇಹಣ್ಣನ್ನು ಬಳಸಿ ಸಂಬಾರ್ ಮಾಡಿದರೆ ಸಾಂಬಾರ್ ಎಲ್ಲವೂ ಕೆಂಪು ಬಣ್ಣ ಆಗುತ್ತಿದೆ. ಈ ವಿಚಿತ್ರ ಹುಣಸೇಹಣ್ಣನ್ನು ನೋಡಿದ ಜನರ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಸಂಸ್ಥಾನಗಳು ವಿಲೀನಗೊಂಡ ಬಳಿಕ ಮೈಸೂರು ರಾಜ್ಯವು 1956ರ ನವೆಂಬರ್ 1ರಂದು ಕರ್ನಾಟಕ ರಾಜ್ಯವಾಗಿ ಉದಯವಾದ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತದೆ. ಮೈಸೂರು ರಾಜ್ಯಕ್ಕೆ ಕರ್ನಾಟಕ ಹೆಸರು ಬಂದ ಮೇಲೆ ತನ್ನದೇ ಆದ ಬಾವುಟದ ಅವಶ್ಯಕತೆ ಇದೆ ಎಂದು ಮನಗಂಡು ಕನ್ನಡದ ಹೋರಾಟಗಾರರಾದ ಎಂ.ರಾಮಮೂರ್ತಿ ಅವರು 1965 ರಲ್ಲಿ ಹಳದಿ ಹಾಗೂ ಕೆಂಪು ಬಣ್ಣ ಬಳಸಿ ಬಾವುಟವನ್ನು ಸಿದ್ಧಪಡಿಸಿದ್ದರು.
ಧ್ವಜದ ಹಳದಿ ಬಣ್ಣವು ಅರಿಶಿಣ ಮತ್ತು ಕೆಂಪು ಬಣ್ಣವು ಕುಂಕುಮದ ಸಂಕೇತವಾಗಿದೆ. ಇವೆರಡು ವಸ್ತುಗಳು ಭಾರತದ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದ ವಿವಿಧ ಕಾರಣಗಳಿಗೆ ಬಳಸುತ್ತಾರೆ. ಕೆಂಪು ಬಣ್ಣ ಅಭಿವೃದ್ಧಿಯ ಸಂಕೇತ, ಅರಿಶಿಣ ಬಣ್ಣ ಆರೋಗ್ಯಕರ ಸಮಾಜದ ಸಂಕೇತವಾಗಿದೆ. ಇವೆರಡು ಮಂಗಳವನ್ನು ಮತ್ತು ಯೋಗಕ್ಷೇಮವನ್ನು ಸೂಚಿಸುತ್ತದೆ.
ಅಷ್ಟೇ ಅಲ್ಲದೇ ಹಳದಿ ಬಣ್ಣವು ಶಾಂತಿ, ಸೌಹಾರ್ದತೆ ಸೂಚಿಸಿದರೆ, ಕೆಂಪು ಬಣ್ಣ ಕ್ರಾಂತಿಯ ಸಂದೇಶ ನೀಡುತ್ತದೆ. ಕನ್ನಡಿಗರೂ ಶಾಂತಿಗೆ ಬದ್ಧ, ಯುದ್ಧಕ್ಕೂ ಸಿದ್ಧ ಎಂಬ ಸಂದೇಶವನ್ನು ಕೂಡ ನೀಡುತ್ತದೆ. ಕರ್ನಾಟಕದ ಬಾವುಟ ಸಿದ್ಧಗೊಂಡಾಗ ಬಾವುಟದ ಮಧ್ಯೆ ಕರ್ನಾಟಕದ ಭೂಪಟ ಮತ್ತು ಅದರ ನಡುವೆ ಏಳು ಕವಲುಗಳುಳ್ಳ ತೆನೆಯ ಚಿತ್ರವಿತ್ತು. ಇದರಿಂದ ಮುದ್ರಿಸಲು ಕಷ್ಟವಾಗುತ್ತಿದ್ದರಿಂದ ಅದನ್ನು ತೆಗೆದು ಕೇವಲ ಹಳದಿ ಮತ್ತು ಕೆಂಪು ಬಣ್ಣವನ್ನು ಮಾತ್ರ ಉಳಿಸಿಕೊಳ್ಳಲಾಗಿದೆ.
ಕನ್ನಡ ರಾಜ್ಯೋತ್ಸವವನ್ನು ಕರ್ನಾಟಕದಲ್ಲಿ ಸರ್ವಧರ್ಮದವರು ಆಚರಿಸುತ್ತಾರೆ. ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟದೊಂದಿಗೆ ಅಲಂಕರಿಸಲಾಗಿರುತ್ತವೆ. ಅಷ್ಟೇ ಅಲ್ಲದೇ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ
ಕರ್ನಾಟಕ ಬಾವುಟ ವಿವಾದ:
ಮಾಜಿ ಸಿಎಂ ಸಿದ್ದರಾಮಯ್ಯನವರು ಚುನಾವಣೆಯ ಸಮಯದಲ್ಲಿ ಪ್ರತ್ಯೇಕ ರಾಜ್ಯಧ್ವಜ ರೂಪಿಸುವ ಸಂಬಂಧ 2017ರ ಜುಲೈನಲ್ಲಿ 9 ಮಂದಿಯ ಸಮಿತಿಯನ್ನು ರಚಿಸಿದ್ದರು. ಈ ಸಮಿತಿ ರಚಿಸಿದ ಬೆನ್ನಲ್ಲೇ ರಾಜಕೀಯ ಆರೋಪ, ಪ್ರತ್ಯಾರೋಪ ನಡೆದಿತ್ತು. ಕನ್ನಡ ಸಂಘಟನೆಗಳು ಈಗ ನಾವು ಬಳಸುವ ಧ್ವಜವನ್ನೇ ರಾಜ್ಯಧ್ವಜವನ್ನಾಗಿ ಅಂಗೀಕರಿಸಿ ಎಂದು ಬೇಡಿಕೆಯನ್ನು ಇಟ್ಟಿತ್ತು.
ಕಾನೂನು ಏನು ಹೇಳುತ್ತೆ?
ಪ್ರಸ್ತುತ ಭಾರತದಲ್ಲಿ ಜಮ್ಮು ಕಾಶ್ಮೀರ ಹೊರತುಪಡಿಸಿ ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಧ್ವಜವಿಲ್ಲ. ಡಿ.ವಿ.ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 2012ರಲ್ಲಿ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸಂಸ್ಥೆಗಳ ಮೇಲೆ ಕನ್ನಡ ಬಾವುಟ ಹಾರಿಸುವಂತೆ ಬಜೆಟ್ ಮಂಡಿಸುವ ವೇಳೆ ಸುತ್ತೋಲೆ ಹೊರಡಿಸಿದ್ದರು. ಈ ಮಧ್ಯೆ ವಕೀಲ ಪ್ರಕಾಶ್ ಶೆಟ್ಟಿ ಎಂಬುವರು ಕನ್ನಡ ಧ್ವಜವನ್ನು ದುರ್ಬಳಕೆ ಆಗುತ್ತಿರುವ ಬಗ್ಗೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ಕನ್ನಡ ನಾಡಿಗೆ ಅಧಿಕೃತವಾದ ಧ್ವಜ ಇಲ್ಲ ಜಗದೀಶ್ ಶೆಟ್ಟರ್ ನೇತೃತ್ವದ ಸರ್ಕಾರ ಪ್ರಮಾಣ ಪತ್ರ ಸಲ್ಲಿಸಿತ್ತು. ಅಷ್ಟೇ ಅಲ್ಲದೇ ಕನ್ನಡ ನಾಡಿಗೆಂದು ಅಧಿಕೃತ ಧ್ವಜ ಇಲ್ಲ. ಖಾಸಗಿಯವರು ಭಾವನಾತ್ಮಕವಾಗಿ ಧ್ವಜವನ್ನು ಹಾರಿಸುತ್ತಿದ್ದಾರೆ ಎಂದು ಸರ್ಕಾರದ ಪರ ವಕೀಲರು ತಿಳಿಸಿದ್ದರು.
ಕಾನೂನು ಪಂಡಿತರು ಏನು ಹೇಳ್ತಾರೆ?
ರಾಜ್ಯಕ್ಕೆಂದೇ ಪ್ರತ್ಯೇಕ ಧ್ವಜವನ್ನು ರೂಪಿಸುವ ಬಗ್ಗೆ ಸಂವಿಧಾನದಲ್ಲಿ ವಿಶೇಷವಾಗಿ ಉಲ್ಲೇಖವಾಗಿಲ್ಲ. ಆದರೆ ರಾಷ್ಟ್ರಧ್ವಜಕ್ಕಿಂತ ಕಡಿಮೆ ಎತ್ತರದಲ್ಲಿ ರಾಜ್ಯಧ್ವಜ ಹಾರಿಸಬೇಕಾಗುತ್ತದೆ. ರಾಜ್ಯಧ್ವಜ ಕಡಿಮೆ ಎತ್ತರದಲ್ಲಿ ಹಾರಿಸಿದರೆ ರಾಷ್ಟ್ರಧ್ವಜಕ್ಕೆ ಅವಮಾನ ಆಗುವುದಿಲ್ಲ ಎಂದು ಹೇಳಿದ್ದಾರೆ.
ಸಿಎಂ ಎಚ್ಡಿಕೆ ಹೇಳಿದ್ದು ಏನು?
ದೇಶದ ಸಂವಿಧಾನದಲ್ಲಿ ಪ್ರತ್ಯೇಕ ರಾಜ್ಯಧ್ವಜ ತಯಾರಿಸಲು ಅವಕಾಶವಿಲ್ಲ. ರಾಷ್ಟ್ರಧ್ವಜವನ್ನು ನಾವು ಬಳಸುತ್ತಿರುವಾಗ ರಾಜ್ಯ ಧ್ವಜದ ಅಗತ್ಯ ಏನಿದೆ? ಸುಮ್ಮನೆ ಸರ್ಕಾರ ಗೊಂದಲ ಸೃಷ್ಟಿಸಲು ಈ ನಡೆ ಕೈಗೊಂಡಿದೆ ಎಂದು ಅಂದು ಕುಮಾರಸ್ವಾಮಿ ಟೀಕಿಸಿದ್ದರು.