Tag: Red Fort

  • ದೇಶಾದ್ಯಂತ 74ನೇ ಸ್ವಾತಂತ್ರ್ಯೋತ್ಸವ ಸಂಭ್ರಮ – ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

    ದೇಶಾದ್ಯಂತ 74ನೇ ಸ್ವಾತಂತ್ರ್ಯೋತ್ಸವ ಸಂಭ್ರಮ – ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

    ನವದೆಹಲಿ: ಇಂದು 74 ಸ್ವಾತಂತ್ರ್ಯ ದಿನಾಚರಣೆ. ಕೊರೊನಾ ಭೀತಿ ನಡುವೆ ಮುನ್ನೆಚ್ಚರಿಕೆ ವಹಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಅವರು ಧ್ವಜಾರೋಹಣ ಮಾಡಿದ್ದಾರೆ.

    ಈ ಬಾರಿ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಕೆಂಪುಕೋಟೆಯನ್ನು ಮದುವಣಗಿತ್ತಿಯಂತೆ ಶೃಂಗಾರ ಮಾಡಲಾಗಿದೆ. ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಮಹಾತ್ಮ ಗಾಂಧಿ ಸಮಾಧಿ ರಾಜ್‍ಘಾಟ್‍ಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ನಂತರ ಕೆಂಪು ಕೋಟೆಯ ಮುಖ್ಯ ದ್ವಾರಕ್ಕೆ ಆಗಮಿಸುತ್ತಿದ್ದಂತೆ ಮೂರು ಸೇನೆಯಿಂದ ಮೋದಿ ಅವರಿಗೆ ಗೌರವ ಸಲ್ಲಿಸಿದ್ದಾರೆ. ನಂತರ ಮೋದಿ ಧ್ವಜಾರೋಹಣ ಮಾಡಿದರು.

    ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಸಾಕಷ್ಟು ಬಿಗಿ ಭದ್ರತೆ ವಹಿಸಲಾಗಿತ್ತು. ಎನ್‍ಎಸ್‍ಜಿ, ಎಸ್ಪಿಜಿ, ಸಿಆರ್‌ಪಿಎಫ್, ಬಿಎಸ್‍ಎಫ್, ದೆಹಲಿ ಪೊಲಿಸ್ ಸೇರಿದಂತೆ 4,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

    ಅಲ್ಲದೇ 30ಕ್ಕೂ ಅಧಿಕ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಬಾರಿ ಸಾರ್ವಜನಿಕರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಇಲ್ಲ. ಕೇವಲ ಮುಖ್ಯ ಅಥಿತಿಗಳಿಗೆ ಕುಟುಂಬಸ್ಥರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ಸಾಮಾಜಿಕ ಅಂತರದಡಿ ಆಸನಗಳ ವ್ಯವಸ್ಥೆ ಮಾಡಲಾಗಿದೆ.

  • 74ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗ್ತಿದೆ ಇಡೀ ದೇಶ

    74ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗ್ತಿದೆ ಇಡೀ ದೇಶ

    – ರಾಜ್ಯದಲ್ಲೂ ಸ್ವಾತಂತ್ರ್ಯ ದಿನಾಚರಣೆ ವಿಭಿನ್ನ

    ನವದೆಹಲಿ: ಆಗಸ್ಟ್ 15 ಅಂದರೆ ನಾಳಿನ 74ನೇ ಸ್ವಾತಂತ್ರೋತ್ಸವಕ್ಕೆ ಇಡೀ ದೇಶವೇ ಸಜ್ಜಾಗುತ್ತಿದೆ. ದೇಶಾದ್ಯಂತ ಭಾರೀ ಬಿಗಿ ಭದ್ರತೆ ಕೈಕೊಳ್ಳಲಾಗಿದೆ.

    ದೆಹಲಿಯ ಕೆಂಪು ಕೋಟೆ ಪ್ರದೇಶದಲ್ಲಿ 300 ಕ್ಯಾಮೆರಾಗಳು, 4 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದಕ್ಕಿಂತ ಮುಖ್ಯವಾಗಿ ಕೊರೊನಾ ಹೆಮ್ಮಾರಿ ಇರುವ ಕಾರಣ ಮತ್ತಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೆಂಪುಕೋಟೆಯಲ್ಲಿ ಪ್ರತಿಬಾರಿ ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿಲ್ಲ. ಭದ್ರತೆಗೆ ನಿಯೋಜನೆಗೊಂಡಿರುವ ಸಿಬ್ಬಂದಿಯನ್ನು ಕ್ವಾರಂಟೈನ್‍ನಲ್ಲಿ ಇಡಲಾಗಿದೆ. ಗುರುವಾರವೂ ಕವಾಯತು ಪಡೆಗಳು ಮಾಸ್ಕ್ ಧರಿಸಿಯೇ ಪೂರ್ವ ತಾಲೀಮು ಮಾಡಿದವು.

    ಸೇನಾ ಪಡೆಗಳು ಗಾಳಿಯಲ್ಲಿ 21 ಸುತ್ತು ಗುಂಡು ಹಾರಿಸಿ, ಪ್ರಧಾನಿ ಮೋದಿ ಅವರಿಗೆ ಗಾರ್ಡ್ ಆಫ್ ಹಾನರ್ ಗೌರವ ಸಲ್ಲಿಸಲಿವೆ. ಬಳಿಕ ಪ್ರಧಾನಿ ಮೋದಿ ಅವರು ಧ್ವಜಾರೋಹಣ ಮಾಡಲಿದ್ದು, ರಾಷ್ಟ್ರಗೀತೆ ಹಾಡಲಿದ್ದಾರೆ. ಬಳಿಕವಷ್ಟೇ ದೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಬಾರಿ ಕೊರೊನಾ ಇರೋ ಕಾರಣ ಕೊರೊನಾ, ಸ್ವಚ್ಛತೆ, ಸೇನಾಪಡೆಗಳ ಬಲವರ್ಧನೆ, ರಾಮಮಂದಿರ ಕುರಿತಂತೆಯೇ ಹೆಚ್ಚಿನ ಮಾತು ಇರಲಿದೆ ಎನ್ನಲಾಗುತ್ತಿದೆ.

    ರೆಡ್‍ ಫೋರ್ಟ್ ಆವರಣವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆಯ್ದ ಕೆಲವರಿಗಷ್ಟೇ ಆಹ್ವಾನ ನೀಡಲಾಗಿದೆ. ಕೇವಲ ಕೊರೊನಾ ವಾರಿಯರ್ಸ್‌ಗಳಾದ ಡಾಕ್ಟರ್, ನರ್ಸ್ ಹಾಗೂ ಕೊರೊನಾ ಗೆದ್ದ ಕೆಲವರಿಗೆ ಆಹ್ವಾನ ನೀಡಲಾಗುತ್ತಿದೆ. ಇವರೆಲ್ಲರೂ ಪಿಪಿಇ ಕಿಟ್ ಧರಿಸಿರಲಿದ್ದಾರೆ. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಲಾಗಿದೆ. ರೆಡ್‍ ಫೋರ್ಟ್‌ನ 2 ಕಡೆಯ ಮೈದಾನಗಳು ಮುಚ್ಚಲ್ಪಟ್ಟಿರುತ್ತವೆ. ಕೇವಲ ಎನ್‍ಸಿಸಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಸಿಗಬಹುದು. ಇವರೆಲ್ಲರಿಗೂ ಮಾಸ್ಕ್ ಧರಿಸೋದು ಕಡ್ಡಾಯಗೊಳಿಸಲಾಗಿದೆ.

    ರಾಜ್ಯದಲ್ಲೂ ವಿಭಿನ್ನವಾಗಿರಲಿದೆ ಸ್ವಾತಂತ್ರ್ಯ ದಿನಾಚರಣೆ
    ರಾಜ್ಯದಲ್ಲೂ ಕೂಡ ಕೊರೊನಾ ಮಾರ್ಗಸೂಚಿ ಅನುಸಾರವೇ ಸ್ವಾತಂತ್ಯ ದಿನಾಚರಣೆ ನಡೆಯಲಿದೆ. ಕೇಂದ್ರ ಸರ್ಕಾರದ ಆದೇಶದಂತೆ ಹೆಚ್ಚು ಜನ ಒಂದೆಡೆ ಸೇರಲು ಅವಕಾವಿಲ್ಲ. ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಸಾರ್ವಜನಿಕ ಪ್ರವೇಶವಿರುವುದಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಡಿಸಿಪಿ ಸಿ.ಆರ್. ಗಿರೀಶ್ ಪರೇಡ್ ನೇತೃತ್ವ ವಹಿಸಲಿದ್ದಾರೆ. ಪರೇಡ್ ನಲ್ಲಿ ಟ್ರಾಫಿಕ್ ಪೊಲೀಸ್, ಕೆಎಸ್‌ಆರ್‌ಪಿ, ಬಿ.ಎಸ್.ಎಫ್, ಸಿಎಆರ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್ ಸೇರಿದಂತೆ 16 ತುಕಡಿಗಳಲ್ಲಿ 350 ಮಂದಿ ಭಾಗವಹಿಸುತ್ತಾರೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಹೇಳಿದ್ದಾರೆ.

    9 ಜನ ಡಿಸಿಪಿ ಸೇರಿದಂತೆ 680 ಜನ ಭದ್ರತಾ ಕೆಲಸದಲ್ಲಿ ಹಾಜರಿರುತ್ತಾರೆ. ಸ್ವಾತಂತ್ರ್ಯ ದಿನಾಚರಣೆ ವೀಕ್ಷಿಸಲು 500 ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಿವಿಧ ಇಲಾಖೆಯ ಕೋವಿಡ್ ವಾರಿಯರ್ಸ್ 100 ಸಿಬ್ಬಂದಿ, ಕೋವಿಡ್ ನಿಂದ ಗುಣಮುಖರಾದ ಎಲ್ಲಾ ವಯೋಮಾನದ 25 ಜನರನ್ನ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮ ನೇರ ಪ್ರಸಾರವನ್ನು ದೂರದರ್ಶನ ಮೂಲಕ ಪ್ರಸಾರ ಮಾಡಲಾಗುತ್ತಿದೆ.

  • 2022ರೊಳಗೆ ಭಾರತದ 15 ಪ್ರವಾಸಿ ಸ್ಥಳಗಳಿಗೆ ಭೇಟಿ ಕೊಡಿ: ಮೋದಿ ಮನವಿ

    2022ರೊಳಗೆ ಭಾರತದ 15 ಪ್ರವಾಸಿ ಸ್ಥಳಗಳಿಗೆ ಭೇಟಿ ಕೊಡಿ: ಮೋದಿ ಮನವಿ

    ನವದೆಹಲಿ: 2022 ರೊಳಗೆ ಭಾರತದ 15 ಪ್ರವಾಸಿ ಸ್ಥಳಗಳಿಗೆ ಭೇಟಿ ಕೊಡುವ ಸಂಕಲ್ಪ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.

    73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ರವಾಸೋದ್ಯಮದಿಂದ ಸರ್ಕಾರಕ್ಕೆ ಹೆಚ್ಚಿನ ಹಣ ಹರಿದು ಬರುತ್ತಿದೆ. ಆದರೆ ದೇಶದ ಜನರು ರಜಾ ದಿನಗಳಲ್ಲಿ ಹೆಚ್ಚಾಗಿ ವಿದೇಶಿ ಪ್ರವಾಸ ಕೈಗೊಳ್ಳುತ್ತಾರೆ. ನಮ್ಮ ದೇಶದ ಪ್ರವಾಸಿ ತಾಣಗಳಿಗೆ ಭೇಟಿ ಕೊಡುವುದು ತುಂಬಾ ಅಪರೂಪ ಎಂಬಂತಾಗಿದೆ ಎಂದು ಹೇಳಿದರು.

    ದೇಶದ ಜನರು 2022ರ ಒಳಗೆ ಭಾರತದ 15 ಪ್ರವಾಸಿ ಸ್ಥಳಗಳಿಗೆ ಭೇಟಿ ಕೊಡುವ ಸಂಕಲ್ಪ ಮಾಡಬೇಕಿದೆ. ಎಲ್ಲಿ ನೀವು ಪ್ರವಾಸಕ್ಕೆ ಹೋಗುತ್ತಿರೋ ಅಲ್ಲಿ ಹೊಸ ಜಗತ್ತು ನಿರ್ಮಿಸಬಹುದು. ಭಾರತೀಯರು ಹೋಗುವ ಸ್ಥಳಗಳಿಗೆ ವಿದೇಶಿಯರು ಕೂಡ ಬರುತ್ತಾರೆ. ಈ ಮೂಲಕ ನಮ್ಮ ದೇಶದ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತದೆ ಎಂದು ಮನವಿ ಮಾಡಿಕೊಂಡರು.

    ರೈತರಲ್ಲಿ ನನ್ನದೊಂದು ಮನವಿ ಇಡುತ್ತೇನೆ. ನಾವು ಈ ದೇಶವನ್ನು ತಾಯಿ ಎಂದುಕೊಳ್ಳುವವರು. ಆದರೆ ಭೂತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಹೊರತಾಗಿ ಹಾಳು ಮಾಡುತ್ತಿದ್ದೇವೆ. ಭಾರೀ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳನ್ನು ಭೂಮಿಗೆ ಸುರಿಯುತ್ತಿದ್ದೇವೆ. ಹಂತ ಹಂತವಾಗಿ ರಾಸಾಯನಿಕಗಳಿಂದ ಮುಕ್ತಿ ಹೊಂದುವ ನಿಟ್ಟಿನಲ್ಲಿ ಸಾಗಬೇಕಿದೆ ಎಂದು ಕೇಳಿಕೊಂಡರು.

    ದೇಶವು ಬಾಹ್ಯಾಕಾಶದಲ್ಲಿ ಹೊಸ ಮೈಲುಗಲ್ಲು ಇಟ್ಟಿದೆ. ಚಂದ್ರಯಾನ-2 ಯಶಸ್ವಿಯಾಗಿ ಉಡಾವಣೆಯಾಗಿದ್ದು, ಶೀಘ್ರದಲ್ಲೇ ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದೆ. ಇದು ನಮಗೆ ಹೆಮ್ಮೆ ತರುವ ವಿಚಾರವಾಗಿದೆ ಎಂದು ತಿಳಿಸಿದರು.

    https://www.youtube.com/watch?v=XWI-1Nqwnxc

  • ಪ್ಲಾಸ್ಟಿಕ್ ಎಂಬ ರಾಕ್ಷಸನಿಂದ ಬಚಾವಾಗಲು ಅಭಿಯಾನ: ಮೋದಿ

    ಪ್ಲಾಸ್ಟಿಕ್ ಎಂಬ ರಾಕ್ಷಸನಿಂದ ಬಚಾವಾಗಲು ಅಭಿಯಾನ: ಮೋದಿ

    – ಚೀಫ್ ಆಫ್ ಡಿಫೆನ್ಸ್ ನೇಮಕ: ಐತಿಹಾಸಿಕ ಘೋಷಣೆ
    – ಸೇನೆ ಬಗ್ಗೆ ಪ್ರಧಾನಿ ಮೆಚ್ಚುಗೆ

    ನವದೆಹಲಿ: ಪ್ಲಾಸ್ಟಿಕ್ ಎಂಬ ರಾಕ್ಷಸನಿಂದ ಬಚಾವ್ ಆಗಲು ಅಭಿಯಾನ ಆರಂಭವಾಗಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ಚೀಲವನ್ನು ನಮ್ಮಿಂದ ನಿರೀಕ್ಷಿಸಬೇಡಿ ಎಂಬ ಬೋರ್ಡ್ ಪ್ರತಿ ಅಂಗಡಿಯಲ್ಲೂ ಇರಲಿ. ಪ್ಲಾಸ್ಟಿಕ್ ಬ್ಯಾಗ್ ಬದಲು ಬಟ್ಟೆಯಿಂದ ತಯಾರಿಸಿದ ಬ್ಯಾಗ್‍ಗಳನ್ನು ಬಳಕೆ ಮಾಡಬೇಕಿದೆ ಎಂದು ಜಾಗೃತಿ ಮೂಡಿಸಿದರು. ಇದನ್ನೂ ಓದಿ: ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರು ಪೂರೈಕೆ: ಪ್ರಧಾನಿ ಮೋದಿ

    ಸ್ವದೇಶಿಯ ಉತ್ಪನ್ನಗಳನ್ನೇ ಹೆಚ್ಚಾಗಿ ಬಳಕೆ ಮಾಡಿ. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಅಭಿವೃದ್ಧಿ ಸಾಧಿಸೋಣ. ದೇಶದಲ್ಲಿರುವ ಬಲಿಷ್ಠ ಸರ್ಕಾರವನ್ನು ಪ್ರಪಂಚವೇ ಗುರುತಿಸಿದೆ. ವಿದೇಶದಕ್ಕೆ ಪ್ರತಿ ಜಿಲ್ಲೆಯಿಂದಲೂ ಒಂದಲ್ಲ ಒಂದು ರೀತಿಯ ಉತ್ಪನ್ನಗಳು ರಫ್ತು ಮಾಡಬೇಕು ಎಂದು ತಿಳಿಸಿದರು.

    ದೇಶದ ಅಭಿವೃದ್ಧಿಗೆ ಶಾಂತಿ ಹಾಗೂ ಸುರಕ್ಷತೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಶ್ರಮಿಸಿದ ಸೈನಿಕರಿಗೆ, ಭದ್ರತಾ ಪಡೆಗೆ ನಾನು ನಮಿಸುತ್ತೇನೆ. ನಮ್ಮ ನೆರೆಯ ದೇಶಗಳು ಭಯೋತ್ಪಾದನೆಗೆ ತತ್ತರಿಸಿ ಹೋಗಿವೆ. ಭಾರತೀಯ ರಕ್ಷಣಾ ಪಡೆಯು ದೇಶದ ಸಂರಕ್ಷಣೆಗಾಗಿ ಪ್ರಶಂಸನೀಯ ಕೆಲಸ ಮಾಡಿವೆ ಎಂದರು.

    ಭೂ, ವಾಯು ಹಾಗೂ ನೌಕಾ ಪಡೆಗಳ ಮಧ್ಯೆ ಸಮನ್ವಯತೆ ತರುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚೀಫ್ ಆಫ್ ಡಿಫೆನ್ಸ್ ನೇಮಕ ಮಾಡಲಾಗುತ್ತದೆ ಎಂದು ಪ್ರಧಾನಿ ಮೋದಿ ಅವರು ಐತಿಹಾಸಿದ ಘೋಷಣೆ ಮಾಡಿದ್ದಾರೆ.

    ದೇಶವು ಬಾಹ್ಯಾಕಾಶದಲ್ಲಿ ಹೊಸ ಮೈಲುಗಲ್ಲು ಇಟ್ಟಿದೆ. ಚಂದ್ರಯಾನ-2 ಯಶಸ್ವಿಯಾಗಿ ಉಡಾವಣೆಯಾಗಿದ್ದು, ಕೆಲವೇ ದಿನಗಳಲ್ಲಿ ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

    https://www.youtube.com/watch?v=XWI-1Nqwnxc

  • ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರು ಪೂರೈಕೆ: ಪ್ರಧಾನಿ ಮೋದಿ

    ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರು ಪೂರೈಕೆ: ಪ್ರಧಾನಿ ಮೋದಿ

    – ಮಗು ಹುಟ್ಟಿಸುವ ಮುನ್ನ ಯೋಚನೆ ಮಾಡಿ
    – ನನಗಾಗಿ ಏನನ್ನೂ ಮಾಡಿಕೊಳ್ಳಲು ಅಧಿಕಾರಕ್ಕೆ ಬಂದಿಲ್ಲ
    – ಮೂಲ ಸೌಕರ್ಯಕ್ಕೆ 100 ಲಕ್ಷ ಕೋಟಿ ರೂ. ಮೀಸಲು

    ನವದೆಹಲಿ: ಜಲ ಜೀವನ್ ಮಿಷನ್ ಯೋಜನೆಯಿಂದಾಗಿ ದೇಶದ ಪ್ರತಿ ಮನೆ ಮನೆಗೂ ನಲ್ಲಿಯ ಮೂಲಕ ನೀರು ಪೂರೈಕೆ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಇಂದು 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ದೇಶದಲ್ಲಿರುವ ಬಡತನವನ್ನು ಹಾಗೂ ಬಡವರ ಸಂಖ್ಯೆಯನ್ನು ಕಡಿಮೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವತಿಯಿಂದ 2022ರ ವೇಳೆಗೆ ಪ್ರತಿ ಬಡವರಿಗೂ ಶಾಶ್ವತ ಮನೆ ನೀಡಲಾಗುತ್ತದೆ. 100 ಲಕ್ಷ ಕೋಟಿ ರೂ.ವನ್ನು ಮೂಲ ಸೌಕರ್ಯಕ್ಕೆ ಹಾಗೂ ಜಲ ಜೀವನ್ ಮೀಷನ್ ಯೋಜನೆಗೆ 3.5 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದರು.

    ನನಗಾಗಿ ಏನನ್ನೂ ಮಾಡಿಕೊಳ್ಳಲು ಅಧಿಕಾರಕ್ಕೆ ಬಂದಿಲ್ಲ. ನಾವು ಸಮಸ್ಯೆಗಳನ್ನು ಸಾಕಲ್ಲ, ದೂರ ತಳ್ಳುವುದೂ ಇಲ್ಲ. ಬದಲಾಗಿ ಅವುಗಳನ್ನು ಬಗೆಹರಿಸುತ್ತೇವೆ. ನಮ್ಮ ದೇಶವು ಬದಲಾವಣೆ ಕಾಣುತ್ತಿದೆ ಹಾಗೂ ಅಭಿವೃದ್ಧಿಯಾಗುತ್ತಿದೆ ಎಂದು ದೇಶದ ಸಾಮಾನ್ಯ ವ್ಯಕ್ತಿಯೂ ಹೇಳುತ್ತಿದ್ದಾರೆ. 130 ಕೋಟಿ ಜನರ ಮುಖದ ಮೇಲಿನ ಉತ್ಸಾಹ ನನಗೆ ಹೊಸ ಶಕ್ತಿ ತುಂಬಿದೆ ಎಂದು ಹೇಳಿದರು.

    ಸ್ವಾತಂತ್ರ್ಯ ಸಂದರ್ಭದ ನಡುವೆ ದೇಶದ ಹಲವು ಭಾಗಗಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಮಳೆ ಹಾಗೂ ಪ್ರವಾಹದಿಂದ ಭಾರೀ  ನಷ್ಟ ಉಂಟಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೇರಿ ಸಂತ್ರಸ್ತರ ಅಭಿವೃದ್ಧಿಗೆ ಶ್ರಮಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ನೀಡಿದ್ದ 370ನೇ ಹಾಗೂ 35 (ಎ) ವಿಧಿಗಳನ್ನು ರದ್ದು ಮಾಡಿದ್ದೇವೆ. ಮುಸ್ಲಿಂ ಸಹೋದರಿಯರು ಹಾಗೂ ತಾಯಂದಿರಿಗಾಗಿ ತ್ರಿವಳಿ ತಲಾಖ್ ರದ್ದು ಮಾಡಲಾಗಿದೆ. ರೈತರಿಗಾಗಿ ಪ್ರಧಾನಿ ಮಂತ್ರಿ ಕಿಸಾನ್ ಯೋಜನೆ, ಸಣ್ಣ ವ್ಯಾಪಾರಿಗಳಿಗೆ ಪಿಂಚಣಿ ಜಾರಿಗೆ ತಂದಿದ್ದೇವೆ. ವೈದ್ಯಕೀಯ ಶಿಕ್ಷಣವನ್ನು ಪಾರದರ್ಶಕತೆ ಮಾಡಲಾಗಿದೆ. ಜಲ ಸಮಸ್ಯೆ ನಿವಾರಣೆಗಾಗಿ ಜಲಶಕ್ತಿ ಮಂತ್ರಾಲಯ ಆರಂಭಿಸಿದ್ದೇವೆ. ಈ ಮೂಲಕ ದೇಶದ ಅಭಿವೃದ್ಧಿಗೆ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಎನ್‍ಡಿಎ ನೇತೃತ್ವದ ಸರ್ಕಾರವು ಜಾರಿಗೆ ತಂದಿದೆ ಎಂದರು.

    ಅತ್ಯಾಚಾರಿಗಳಿಗೆ ಕಠಿಣ ನೀಡುವ ಕಾನೂನು ಜಾರಿಗೆ ತಂದಿದ್ದೇವೆ. ದೇಶದ ಪ್ರತಿಯೊಬ್ಬರ ಏಳಿಗಾಗಿ ಶ್ರಮಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ನಿಮ್ಮ ಸೇವೆ ಮಾಡಲು ಅವಕಾಶ ನೀಡಿದ್ದೀರಿ. ಹಂತ ಹಂತವಾಗಿ ಭಾರತವು ಅಭಿವೃದ್ಧಿ ಹೊಂದುತ್ತಿದೆ ಎಂದು ದೇಶದ ಜನರಿಗೆ ತಿಳಿಸಿದರು.

    ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕರು ತಮ್ಮ ಜೀವನನ್ನೇ ತ್ಯಾಗ ಮಾಡಿದ್ದಾರೆ. ಅವರಿಗೆ ನನ್ನ ನಮನಗಳು. ಕೆಲ ನಾಯಕರು ತಮ್ಮ ಯೌವನವನ್ನು ಜೈಲಿನಲ್ಲಿ ಕಳೆದರು. ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ನನ್ನ ನಮನಗಳು ಎಂದರು.

    ನಮ್ಮ ಮುಸ್ಲಿಂ ಹೆಣ್ಣು ಮಕ್ಕಳ ತಲೆಯ ಮೇಲೆ ತ್ರಿವಳಿ ತಲಾಖ್ ತೂಗುಗತ್ತಿ ಇತ್ತು. ಹೀಗಾಗಿ ಅವರು ಭಯದಲ್ಲಿಯೇ ಜೀವನ ನಡೆಸುತ್ತಿದ್ದರು. ಈ ನಿಟ್ಟಿನಲ್ಲಿ ತ್ರಿವಳಿ ತಲಾಖ್, ಬಾಲ್ಯವಿವಾಹ, ಅತ್ಯಾಚಾರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಕಠಿಣ ಕಾನೂನು ಅವಶ್ಯಕವಾಗಿತ್ತು. ಅದನ್ನು ನಮ್ಮ ಸರ್ಕಾರ ಈಡೇರಿಸಿದೆ ಎಂದರು.

    ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಜನರ ಆಸೆ ಹಾಗೂ ಆಕಾಂಕ್ಷೆಯನ್ನು ಪೂರ್ಣಗೊಳಿಸುವುದು ನಮ್ಮ ಜವಾಬ್ದಾರಿ. ಸಂವಿಧಾನದ ವಿಧಿ 370 ರದ್ದು ಮಾಡಿದ್ದನ್ನು ರಾಜಕೀಯವಾಗಿ ಬಳಕೆ ಮಾಡುವುದು ಸರಿಯಲ್ಲ. ಒಂದು ವೇಳೆ 370ನೇ ವಿಧಿ ಅಷ್ಟು ಮುಖ್ಯ ಎನ್ನುವುದೇ ಆಗಿದ್ದರೆ ಅದನ್ನು ತಾತ್ಕಾಲಿಕವಾಗಿ ಏಕೆ ಇಟ್ಟಿರಿ? ನಿಮಗೆ ಅಷ್ಟೊಂದು ಬಹುಮತ ಇದ್ದಾಗಲೂ 370ನೇ ವಿಧಿಯನ್ನು ಶಾಶ್ವತವಾಗಿ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ಜನಸಂಖ್ಯಾ ನಿಯಂತ್ರಣಕ್ಕೆ ಮನವಿ:
    ಜನಸಂಖ್ಯಾ ಸ್ಫೋಟ ಮಿತಿ ಮೀರಿ ಹೋಗುತ್ತಿದೆ. ಮುಂದಿನ ಪೀಳಿಗೆಗೆ ಇದು ದೊಡ್ಡ ಸವಾಲು ಒಡ್ಡಲಿದೆ. ಮಗುವಿಗೆ ಜನ್ಮ ನೀಡುವ ಮುನ್ನ ಯೋಚಿಸಿ, ಮುಗುವಿನ ಎಲ್ಲ ಅವಶ್ಯಕತೆ ಪೂರೈಸಬಹುದೇ ಎಂಬುದನ್ನು ಯೋಚಿಸಿ ನಿರ್ಣಯ ಕೈಗೊಳ್ಳಿ ಎಂದು ಇದೇ ವೇಳೆ ಪ್ರಧಾನಿಯವರು ದೇಶದ ಜನರಲ್ಲಿ ಮನವಿ ಮಾಡಿಕೊಂಡರು.

  • ಬೆಣ್ಣೆಯಿಂದ ಶಿಲ್ಪ ತಯಾರಿಸಲ್ಲ, ಶಿಲೆಯಿಂದ ಶಿಲ್ಪ ಮಾಡೋರು ನಾವು-ಕೆಂಪುಕೋಟೆಯಲ್ಲಿ ಪ್ರಧಾನಿ ಭಾಷಣ

    ಬೆಣ್ಣೆಯಿಂದ ಶಿಲ್ಪ ತಯಾರಿಸಲ್ಲ, ಶಿಲೆಯಿಂದ ಶಿಲ್ಪ ಮಾಡೋರು ನಾವು-ಕೆಂಪುಕೋಟೆಯಲ್ಲಿ ಪ್ರಧಾನಿ ಭಾಷಣ

    -ಪ್ರಧಾನಮಂತ್ರಿ ಜನ್ ಆರೋಗ್ಯ ಅಭಿಯಾನ ಆರಂಭ

    ನವದೆಹಲಿ: 72ನೇ ಸ್ವತಂತ್ರ್ಯದಿನಾಚರಣೆ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನರನ್ನು ಕುರಿತು ಮಾತನಾಡಿದ್ರು.

    ಮೊದಲಿಗೆ ಎಲ್ಲ ಭಾರತೀಯರಿಗೂ ಸ್ವತಂತ್ರ್ಯ ದಿನಾಚರಣೆಯ ಶುಭಾಶಯ ತಿಳಿಸಿದ ಪ್ರಧಾನಿ, ದೇಶ ಆತ್ಮ ವಿಶ್ವಾಸದಲ್ಲಿದ್ದು, ಹೊಸ ಕನಸು, ಉತ್ಸಾಹದೊಂದಿಗೆ ಮುನ್ನಡೆಯುತ್ತಿದೆ. ತೆಲಂಗಾಣ ಆಂಧ್ರದ ಹೆಣ್ಣು ಮಕ್ಕಳು ಸಪ್ತ ಸಮುದ್ರ ದಾಟಿ ಬಂದಿದ್ದಾರೆ. ಈ ವರ್ಷ ಕಲಾಪಗಳು ಸುಗಮವಾಗಿ ನಡೆದು ಬಂದಿದ್ದು, ವಿಶ್ವದ 6 ಅತಿ ದೊಡ್ಡ ಆರ್ಥಿಕ ವ್ಯವಸ್ಥೆ ರಾಷ್ಟ್ರಗಳಲ್ಲಿ ಭಾರತ ಸಹ ಒಂದಾಗಿದೆ. ಹಿಂದುಳಿದ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡಲಾಗಿದೆ. ದೇಶದ ಹಲವು ರಾಜ್ಯಗಳಲ್ಲಿ ನಿರಂತರವಾಗಿ ಉತ್ತಮ ಮಳೆಯಾಗ್ತಿದ್ದು, ಪ್ರವಾಹ ಪೀಡಿತ ರಾಜ್ಯಗಳೊಂದಿಗೆ ಇಡೀ ದೇಶವೇ ಇದೆ ಎಂದು ಹೇಳಿದ್ರು.

    ಆಯುಷ್ಮಾನ್ ಯೋಜನೆ ಅಡಿಯಲ್ಲಿ ಪ್ರಧಾನಮಂತ್ರಿ ಜನ್ ಆರೋಗ್ಯ ಅಭಿಯಾನ ಆರಂಭಿಸಲಾಗುವುದು. ಈ ಯೋಜನೆಯಿಂದ 10 ಕೋಟಿ ಕುಟುಂಬಗಳಿಗೆ 50 ಕೋಟಿ ಜನರಿಗೆ ಪ್ರಯೋಜನವಾಗಲಿದೆ. ಗಂಭೀರ ರೋಗಗಳಿಗೆ ದೊಡ್ಡ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯಲಿದ್ದು, ಟ್ರೀಟಮೆಂಟ್ ಗಾಗಿ ಹಣ ಹೊಂದಿಸಲು ಕಷ್ಟಪಡೋದು ತಪ್ಪಲಿದೆ. 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ. ಸೆಪ್ಟೆಂಬರ್ 25ರಿಂದ ದೇಶದ 70ರಿಂದ 75 ಜಿಲ್ಲೆಗಳಲ್ಲಿಶ ಆಯುಷ್ಮಾನ್ ಯೋಜನೆ ಆರಂಭವಾಗಲಿದೆ ಎಂದು ತಿಳಿಸಿದ್ರು.

    ಜಲಿಯನ್ ವಾಲಾಬಾಗ್ ಹತ್ಯಾಕಾಂಡ ನಡೆದು 100 ವರ್ಷಗಳು ಕಳೆದಿವೆ. ನಮ್ಮ ವೀರರ ಬಲಿದಾನವನ್ನು ನಾವೆಲ್ಲರು ಸ್ಮರಿಸಬೇಕಿದೆ. 2014ರಲ್ಲಿ ಜನರು ಕೇವಲ ಸರ್ಕಾರ ರಚಿಸಿ ಸುಮ್ಮನೆ ಕುಳಿತಿರಲಿಲ್ಲ. ದೇಶದ ರಚನೆಗಾಗಿ ಸರ್ಕಾರದ ಜೊತೆ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದ್ದು, ಮುಂದಿನ ದಿನಗಳಲ್ಲಿ ಇದು ಹೇಗೆ ಮುಂದುವರೆಯುತ್ತದೆ. ಇದು ನಮ್ಮ ದೇಶದ ಸುಂದರತೆ. ಕಳೆದ 4 ವರ್ಷಗಳಲ್ಲಿ ನಡೆದಿರುವ ಪ್ರಗತಿ ಕೆಲಸಗಳನ್ನು ನೋಡಿದ್ರೆ ದೇಶದ ಅಭಿವೃದ್ಧಿ ಹೇಗೆ ನಡೆಯುತ್ತಿದೆ ಎಂಬುವುದ ನಿಮಗೆ ತಿಳಿಯಲಿದೆ.

    2013ರಲ್ಲಿದ್ದು ಸರ್ಕಾರದ ರೀತಿಯ ವೇಗದಲ್ಲಿ ನಾವು ಕೆಲಸಗಳನ್ನು ಮಾಡಿದ್ರೆ ಇಂದು ಆಗಿರುವ ಸಾಧನೆಗೆ ದಶಕಗಳೇ ಬೇಕಾಗಿತ್ತು. 2013ರಲ್ಲಿ ಇದ್ದ ದೇಶದ ಸ್ಥಿತಿ ಇಂದಿಲ್ಲ. ದೇಶದ ನಗರಗಳಲ್ಲಿ ಸ್ಟಾರ್ಟ್ ಅಪ್ ಆರಂಭವಾಗಿದೆ. ದೇಶದ ಆಧುನಿಕತೆ ವಿಜ್ಞಾನದತ್ತ ಸಾಗುತ್ತಿದ್ದು, ಗ್ರಾಮ ಗ್ರಾಮಗಳು ಡಿಜಿಟಲೀಕರಣಕ್ಕೆ ಒಳಪಡುತ್ತೀವೆ. ಏಕ ಶ್ರೇಣಿ, ಏಕ ವೇತನ ಮೂಲದ ನಿವೃತ್ತ ಯೋಧರ ಬೇಡಿಕೆಗಳನ್ನು ಈಡೇರಿಸಿದ್ದೇವೆ. ಜಿಎಸ್‍ಟಿ ಜಾರಿ ಮೂಲಕ ಏಕರೂಪದ ತೆರಿಗೆಯನ್ನು ಜಾರಿಗೆ ತರಲಾಗಿದೆ. ಬೇನಾಮಿ ಆಸ್ತಿಗಾಗಿ ಹೊಸ ಹೊಸ ತಂತ್ರಗಳನ್ನು ರಚಿಸಿದೆ. ಈ ಮೊದಲು ಪತ್ರಿಕೆಗಳಲ್ಲಿ ಭಾರತ ಆರ್ಥಿಕ ಸಂಕಷ್ಟದಲ್ಲಿದೆ ಎಂದು ವರದಿಯಾಗುತ್ತಿದೆ.

    ಭಾರತ ಮಲ್ಟಿ ಬಿಲಿಯನ್ ಡಾಲರ್ ಹೂಡಿಕೆ ಸ್ಥಳವಾಗಿದೆ. ಮಲಗಿದ್ದ ಆನೆ ಇಂದು ಎಚ್ಚರಗೊಂಡು ಓಡುತ್ತಿದೆ ಎಂದು ವಿಶ್ವದ ಆರ್ಥಿಕ ತಜ್ಞರು ಹೇಳುತ್ತಿದೆ. ವಿಶ್ವದ ಉನ್ನತ ಸಂಸ್ಥೆಗಳು ಭಾರತದ ಬಗ್ಗೆ ಧನಾತ್ಮಕವಾಗಿ ಮಾತನಾಡುವಂತೆ ದೇಶದ ಆರ್ಥಿಕ ವ್ಯವಸ್ಥೆ ಬದಲಾಗಿದೆ. ಜಾಗತಿಕವಾಗಿ ಭಾರತವನ್ನು ನೋಡುವ ದೃಷ್ಟಿಕೋನ ಬದಲಾಗಿದೆ. 2022ರಲ್ಲಿ ಸ್ವತಂತ್ರದ 75ನೇ ವರ್ಷಾಚರಣೆಯಲ್ಲಿ ದೇಶದ ಮಹಿಳೆ, ಮಕ್ಕಳು ಎಲ್ಲರು ಭಾರತದ ಧ್ವಜ ಹಿಡಿದು ಅಂತರಿಕ್ಷೆಗೆ ಹೋಗುವಂತೆ ಮಾಡಲಾಗುವುದು. 2022ರಲ್ಲಿ ದೇಶದ ರೈತರ ಆದಾಯವನ್ನು ದ್ವಿಗುಣ ಆಗುವಂತೆ ಕೆಲಸ ಮಾಡಲಾಗುವುದು ಎಂದು ಹೇಳಿದರು.

    ಬಲತ್ಕಾರ ಮಾಡುವ ರಾಕ್ಷಸ ಮನೋವೃತ್ತಿಗೆ ಅಂತ್ಯ ಹಾಡಬೇಕಿದೆ. ಅತ್ಯಾಚಾರ ಪ್ರಕರಣಗಳಲ್ಲಿ ಗಲ್ಲು ಶಿಕ್ಷೆಗೆ ಒಳಾಗದವರ ಬಗ್ಗೆ ಪ್ರಚಾರಗೊಳಿಸಬೇಕಿದೆ. ರಾಕ್ಷಸ ಮನೋವೃತ್ತಿಯ ಅಂತ್ಯಗೊಳಿಸಲು ನಾವೆಲ್ಲರೂ ಪಣ ತೊಡಬೇಕಿದೆ. ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ವಿಶೇಷ ಕಾನೂನು ತಂದು ತರಲು ಸತತ ಪ್ರಯತ್ನ ಮಾಡುತ್ತಿದ್ದೇನೆ. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ನಾನು ಸತತವಾಗಿ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದಾಲ್ಮಿಯಾ ಗ್ರೂಪ್ ತೆಕ್ಕೆಗೆ ಐತಿಹಾಸಿಕ ಕೆಂಪು ಕೋಟೆ – ಏನಿದು ನೋ ಪ್ರಾಫಿಟ್ ಯೋಜನೆ

    ದಾಲ್ಮಿಯಾ ಗ್ರೂಪ್ ತೆಕ್ಕೆಗೆ ಐತಿಹಾಸಿಕ ಕೆಂಪು ಕೋಟೆ – ಏನಿದು ನೋ ಪ್ರಾಫಿಟ್ ಯೋಜನೆ

    ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆಯನ್ನು ದಾಲ್ಮಿಯಾ ಭಾರತ್ ಗ್ರೂಪ್ 5 ವರ್ಷಗಳ ಕಾಲ ನಿರ್ವಹಣೆಯ ದತ್ತು ಪಡೆದುಕೊಂಡಿದೆ.

    ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಮತ್ತು ಪುರಾತತ್ವ ಇಲಾಖೆಯ ಪ್ರಾಚೀನ ಸ್ಮಾರಕಗಳ ದತ್ತು ಯೋಜನೆಯಡಿ 25 ಕೋಟಿ ರೂ. ನೀಡಿ ದಾಲ್ಮಿಯಾ ಗ್ರೂಪ್ ತನ್ನದಾಗಿಸಿಕೊಂಡಿದೆ.

    ಕಾಂಗ್ರೆಸ್ ಟೀಕೆ: ಸದ್ಯ ಕೇಂದ್ರ ಸರ್ಕಾರದ ಈ ನಡೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಭಾರತ ಸಾಂಸ್ಕೃತಿಕ ಸ್ಮಾರಕಗಳ ನಿರ್ವಹಣೆಯನ್ನು ಖಾಸಗಿ ಕಂಪೆನಿಗೆ ವಹಿಸಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಈ ಕುರಿತು ಟ್ವಿಟ್ಟರ್ ನಲ್ಲಿ ಪ್ರಶ್ನೆಯೊಂದನ್ನು ಜನರ ಮುಂದಿಟ್ಟಿದ್ದು, ಬಿಜೆಪಿ ಎಲ್ಲವನ್ನೂ ಖಾಸಗೀಕರಣಕ್ಕೆ ಒಳಪಡಿಸಲಿದೆ ಎಂದು ಆರೋಪಿಸಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಮಹೇಶ್ ಶರ್ಮಾ, 2017ರ ವಿಶ್ವ ಪ್ರವಾಸೋದ್ಯಮದ ಭಾಗವಾಗಿ ನೋ ಪ್ರಾಫಿಟ್ ಯೋಜನೆ ರೂಪಿಸಿದ್ದು, ಸ್ವಯಂ ಆಗಿ ಐತಿಹಾಸಿಕ ಸ್ಥಳಗನ್ನು ನಿರ್ವಹಣೆ ಮಾಡಲು ಅವಕಾಶ ನೀಡಲಾಗಿದೆ. ಈ ಯೋಜನೆಯ ಅಂಗವಾಗಿ ಕೆಂಪು ಕೋಟೆ ನಿರ್ವಹಣೆ ಮಾಡುವ ಹೊಣೆ ದಾಲ್ಮಿಯಾ ಸಂಸ್ಥೆ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

    ನಿರ್ವಹಣೆ ಹೇಗೆ? ಪ್ರಾಚೀನ ಸ್ಮಾರಕ ದತ್ತು ಯೋಜನೆ ಪ್ರಕಾರ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಇದರ ಅನ್ವಯ ದಾಲ್ಮಿಯಾ ಸಂಸ್ಥೆ ಕೆಂಪುಕೋಟೆಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಿದೆ. ಅಲ್ಲದೇ ಈ ಸೌಲಭ್ಯ ಕಲ್ಪಿಸಲು ಶುಲ್ಕ ಪಡೆಯುವ ಹಕ್ಕನ್ನು ಸಂಸ್ಥೆ ಹೊಂದಿರುತ್ತದೆ. ಅದ್ರೆ ಈ ರೀತಿ ಸಂಗ್ರಹಿಸಿದ ಹಣವನ್ನು ಸ್ಮಾರಕ ನಿರ್ವಹಣೆಗಾಗಿಯೇ ಬಳಸಬೇಕು ಎಂಬ ಷರತ್ತು ಈ ಒಪ್ಪಂದದಲ್ಲಿ ವಿಧಿಸಲಾಗಿದೆ. ಇದರಿಂದ ಸಂಸ್ಥೆಗೆ ಯಾವುದೇ ಆರ್ಥಿಕ ಲಾಭ ಉಂಟಾಗುವುದಿಲ್ಲ. ಇದನ್ನೇ ನೋ ಪ್ರಾಫಿಟ್ ಯೋಜನೆ ಎಂದು ಕರೆಯಲಾಗಿದೆ.

    ಸ್ಮಾರಕಗಳನ್ನು ನೋಡಲು ಭೇಟಿ ನೀಡುವ ಪ್ರವಾಸಿಗರಿಗೆ ಬೇಕಾದ ಕುಡಿಯುವ ನೀರಿನ ಸೌಲಭ್ಯ, ಆಸನ ವ್ಯವಸ್ಥೆ, ಸ್ಮಾರಕ ಜಿರ್ಣೋದ್ಧಾರ, ಶೌಚಾಲಯ ಹಾಗೂ ಅವುಗಳ ನಿರ್ವಹಣೆ, ರಾತ್ರಿ ವೇಳೆ ವೀಕ್ಷಣೆಗಾಗಿ ವರ್ಣ ರಂಜಿತ ವಿದ್ಯುತ್ ಸೌಲಭ್ಯ, ದಾರಿಗಳ ನಿರ್ಮಾಣ, ಹೋಟೆಲ್ ಇತ್ಯಾದಿ ಸೌಲಭ್ಯಗಳನ್ನು ಸಂಸ್ಥೆ ನಿರ್ವಹಿಸುವ ಜವಾಬ್ದಾರಿ ಹೊಂದಿರುತ್ತದೆ.