Tag: Red Zone

  • ಓಮಿಕ್ರಾನ್‌ ಸ್ಫೋಟ – ಬೆಂಗಳೂರಿನಲ್ಲಿ ಲಾಕ್‌ಡೌನ್‌ ಸುಳಿವು ನೀಡಿದ ಸಚಿವ ಆರ್‌.ಅಶೋಕ್‌

    ಓಮಿಕ್ರಾನ್‌ ಸ್ಫೋಟ – ಬೆಂಗಳೂರಿನಲ್ಲಿ ಲಾಕ್‌ಡೌನ್‌ ಸುಳಿವು ನೀಡಿದ ಸಚಿವ ಆರ್‌.ಅಶೋಕ್‌

    – ಯಾವುದೇ ರ‍್ಯಾಲಿ, ಸಭೆ ವಿಚಾರ ತಲೆಯಲ್ಲಿಲ್ಲ
    -ರಾಜ್ಯದ ಆರುವರೆ ಕೋಟಿ ಜನರ ಜೀವ ಕಾಪಾಡೋದು ಮುಖ್ಯವಾಗಿದೆ

    ಬೆಂಗಳೂರು: ಮೂರನೇ ಅಲೆ ಬರೋದು ನಿಶ್ಚಿತ ಅನ್ನುವ ವಾತಾವರಣ ಇದೆ. ಬೆಂಗಳೂರು ರೆಡ್ ಝೋನ್ ಅಂತ ಕೇಂದ್ರ ಗುರುತಿಸಿದೆ. ರಾಜ್ಯದಲ್ಲಿ ಆರೂವರೆ ಕೋಟಿ ಜನರ ಜೀವ ಕಾಪಾಡೋದು ಮುಖ್ಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

    ಸಿಎಂ ಸಭೆ ಬಳಿಕ ಸಚಿವ ಆರ್.ಅಶೋಕ್ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೋವಿಡ್, ಓಮಿಕ್ರಾನ್ ಕೇಸ್‍ಗಳ ಹೆಚ್ಚಳ ಹಿನ್ನೆಲೆ ಕೋವಿಡ್ ಮೂರನೇ ಅಲೆ ಬಗ್ಗೆ ಪ್ರತ್ಯೇಕ ಸಭೆ ಮಾಡೋದಾಗಿ ಸಿಎಂ ಹೇಳಿದ್ದಾರೆ. ಮೂರನೇ ಅಲೆ ಬರೋದು ನಿಶ್ಚಿತ ಅನ್ನುವ ವಾತಾವರಣ ಇದೆ. ಬೆಂಗಳೂರು ರೆಡ್ ಝೋನ್ ಅಂತ ಕೇಂದ್ರ ಗುರುತಿಸಿದೆ. ಜನವರಿ 7 ಕ್ಕೂ ಮುನ್ನ ಒಂದು ಸಭೆ ಮಾಡುತ್ತೇವೆ. ಆ ಸಭೆಯಲ್ಲಿ ಹೊಸ ಟಫ್ ರೂಲ್ಸ್ ತರುತ್ತೇವೆ. ತಜ್ಞರು ಮಾಡುವ ಶಿಫಾರಸುಗಳನ್ನು ಯಥಾವತ್ ಜಾರಿ ಮಾಡಲಾಗುತ್ತದೆ. ಪಶ್ಚಿಮ ಬಂಗಾಳ, ಮುಂಬೈ ಮಾದರಿಯಲ್ಲಿ ಬೆಂಗಳೂರಿನಲ್ಲೂ ಲಾಕ್‍ಡೌನ್ ಮಾಡಬೇಕಾಗುತ್ತದೆ ಎಂದು ಕೊರೊನಾ ಮಾರ್ಗಸೂಚಿ ತರುವ ಕುರಿತಾಗಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ವಸಿಷ್ಠರೂ ಅಲ್ಲ, ವಿಶ್ವಾಮಿತ್ರನೂ ಅಲ್ಲ: ಸಿ.ಟಿ.ರವಿ

    ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಸೇರುವ ಜನರಿಗೆ ಸರ್ಕಾರದಿಂದ ಕಡಿವಾಣ ಹಾಕುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್, ಜೆಡಿಎಸ್ ನವರು ಏನು ಮಾಡುತ್ತಾರೆ. ಅನ್ನೋದು ನಮಗೆ ಮುಖ್ಯವಲ್ಲ. ರಾಜ್ಯದ ಆರೂವರೆ ಕೋಟಿ ಜನರ ಜೀವ ಕಾಪಾಡೋದು ಮುಖ್ಯವಾಗಿದೆ. ಯಾವುದೇ ರ‍್ಯಾಲಿ, ಸಭೆ ವಿಚಾರ ನಮ್ಮ ತಲೆಯಲ್ಲಿ ಇಲ್ಲ. ಹೀಗಾಗಿ ಜನವರಿ 4 ಅಥವಾ 5 ರಂದು ಸಭೆ ಮಾಡಿ ಬಿಗಿ ಕ್ರಮ ಜಾರಿ ಮಾಡುತ್ತೇವೆ. ಕೊವೀಡ್ ತಡೆಗೆ ಬಿಗಿ ಟಫ್ ರೂಲ್ಸ್ ಜಾರಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  8 ಲಕ್ಷಕ್ಕೆ ಹೆಣ್ಣು ಮಕ್ಕಳನ್ನು ಮಾರಾಟ ಮಾಡಿದ ತಂದೆ ಅರೆಸ್ಟ್

     

  • ಕೋಲಾರಕ್ಕೆ ಕೊರೊನಾ ಭಯ!- ಕೆಜಿಎಫ್‍ಗೆ ಹೊಂದಿಕೊಂಡಿರುವ ವಿ.ಕೋಟಾದಲ್ಲಿ 5 ಪ್ರಕರಣ

    ಕೋಲಾರಕ್ಕೆ ಕೊರೊನಾ ಭಯ!- ಕೆಜಿಎಫ್‍ಗೆ ಹೊಂದಿಕೊಂಡಿರುವ ವಿ.ಕೋಟಾದಲ್ಲಿ 5 ಪ್ರಕರಣ

    ಕೋಲಾರ: ಲಾಕ್‍ಡೌನ್ ಸಡಿಲಿಕೆ ಹಾಗೂ ಗಡಿ ರಾಜ್ಯಗಳಲ್ಲಿ ಪತ್ತೆಯಾಗಿರುವ ಕೊರೊನಾ ಪ್ರರಕಣಗಳ ಸಂಖ್ಯೆಯಿಂದ ಜಿಲ್ಲೆಯ ಜನರದಲ್ಲಿ ಆತಂಕ ಮೂಡಿದ್ದು, ಗ್ರೀನ್ ಝೋನ್‍ನಲ್ಲಿರುವ ಜಿಲ್ಲೆ ತನ್ನ ಬಣ್ಣ ಬದಲಿಸುವ ಭಯ ಶುರುವಾಗಿದೆ.

    ರಾಜ್ಯದಲ್ಲಿ ಗ್ರೀನ್ ಝೋನ್‍ನಲ್ಲಿರುವ ಜಿಲ್ಲೆಗಳ ಪೈಕಿ ಕೋಲಾರವೂ ಒಂದು. ಆದರೆ ಕೋಲಾರ ಗ್ರೀನ್ ಝೋನ್‍ನಲ್ಲಿದ್ದರು ಡೇಂಜರ್ ಝೋನ್‍ನಲ್ಲಿರುವ ಜಿಲ್ಲೆಗಳೊಂದಿಗೆ ಗಡಿ ಹಂಚಿಕೊಂಡಿದೆ. ಜಿಲ್ಲೆಯ ನೆರೆಯ ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಸುತ್ತಲೂ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಆಂಧ್ರದ ಗಡಿ ಭಾಗವಾದ ಚಿತ್ತೂರು ಜಿಲ್ಲೆಯ ವಿ.ಕೋಟೆ ಬಳಿ ಐದು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ನಮ್ಮ ರಾಜ್ಯದ ಗಡಿಗೆ ಕೇವಲ ಒಂದು ಕಿ.ಮೀ. ದೂರದ ಪ್ರದೇಶದಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

    ಸೋಂಕಿತ ವ್ಯಕ್ತಿ ಕೋಲಾರ ಜಿಲ್ಲೆಯ ಗಡಿಯ ಮೂರು ಹೋಬಳಿ ಕೇಂದ್ರದಲ್ಲಿ ಓಡಾಡಿರುವ ಟ್ರಾವಲ್ ಹಿಸ್ಟರಿ ಭಯ ಸೃಷ್ಠಿಸಿದೆ. ತರಕಾರಿ ಮಾರಾಟ ಮಾಡುವ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈತ ಚೆನ್ನೈನ ಮಾರುಕಟ್ಟೆಗೆ ಹೋದಾಗ ಸೋಂಕು ತಗುಲಿರಬಹುದೆಂದು ಹೇಳಲಾಗುತ್ತಿದೆ. ಕೋಲಾರ ಜಿಲ್ಲೆಯ ಮೂರು ಹೋಬಳಿಗಳ ರೈತರಿಂದ ತರಕಾರಿ ಖರೀದಿ ಮಾಡಿ, ನಂತರ ಅವರಿಗೆ ಹಣ ಕೊಡಲು ಸೋಂಕಿತ ವ್ಯಕ್ತಿ ಬಂದು ಹೋಗಿರುವುದಾಗಿ ತಿಳಿದು ಬಂದಿದೆ. ಇದರ ಜೊತೆಗೆ ಆಂಧ್ರದ ವಿ.ಕೋಟ ಪ್ರದೇಶವನ್ನು ಕಂಟೈನ್ಮೆಂಟ್ ಪ್ರದೇಶ ಎಂದು ಗುರುತಿಸಲು ಸಿದ್ಧತೆ ಮಾಡುಕೊಂಡಿದ್ದು, ಆ ವ್ಯಾಪ್ತಿಗೆ ನಮ್ಮ ಜಿಲ್ಲೆಯ ಕೆಲವು ಗ್ರಾಮಗಳು ಒಳಪಡುವ ಸಾಧ್ಯತೆ ಹೆಚ್ಚಾಗಿದೆ.

    ಮಾಲೂರು ಮೂಲದ ವ್ಯಕ್ತಿ ಗುಜರಾತ್‍ನ ಗೋದ್ರಾದಿಂದ ಕೋಲಾರಕ್ಕೆ ಬರುತ್ತಿದ್ದ 15 ಜನರ ಪೈಕಿ ಒಬ್ಬರಲ್ಲಿ ಕೊರೊನಾ ಸೋಂಕು ಖಚಿತವಾಗಿದೆ. ಸೋಂಕಿತನಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಆತನ ಪ್ರಥಮ ಸಂಪರ್ಕದಲ್ಲಿದ್ದವರನ್ನು ಬೆಂಗಳೂರಿನಲ್ಲೇ ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲೆಯ ಕೃಷ್ಣಗಿರಿ ಜಿಲ್ಲೆಗೆ ಹೊಂದಿಕೊಂಡಂತೆ ಸೂಳಿಗೆರೆ, ಬೇರಿಕೆ ಪ್ರದೇಶಗಳಲ್ಲೂ ಸೋಂಕಿತ ವ್ಯಕ್ತಿಗಳಿದ್ದು, ಅವರು ಕೂಡಾ ನಮ್ಮ ಜಿಲ್ಲೆಯ ಗಡಿಗೆ ಸಮೀಪವಿರುವ ಕಾರಣ ಈ ಭಾಗದಿಂದಲೂ ಸೋಂಕು ಜಿಲ್ಲೆಗೆ ಹರಡುವ ಆತಂಕ ಹೆಚ್ಚಾಗಿದೆ.

    ಇದು ಅಂತರರಾಜ್ಯ ಗಡಿಗಳ ವಿಚಾರವಾದರೆ, ರೆಡ್‍ಝೋನ್ ನಲ್ಲಿರುವ ಅಂತರ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳನ್ನು ಒಂದು ವಲಯವನ್ನಾಗಿ ಮಾಡಿ ಜನರ ಓಡಾಟಕ್ಕೆ ವಿನಾಯಿತಿ ನೀಡಿರುವುದು ಮತ್ತೊಂದು ರೀತಿಯ ಆತಂಕಕ್ಕೆ ಕಾರಣವಾಗಿದೆ. ಸೋಂಕಿತ ವ್ಯಕ್ತಿಗಳು ಗ್ರೀನ್ ಝೋನ್ ಪ್ರದೇಶದಲ್ಲಿ ಸೋಂಕು ಹರಡುವ ಭೀತಿ ಎಲ್ಲರಲ್ಲೂ ಹೆಚ್ಚಾಗಿದೆ. ಹಾಗಾಗಿ ಗಡಿಯಲ್ಲಿ ಮತ್ತಷ್ಟು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಗಡಿಯಲ್ಲಿರುವ ಗ್ರಾಮ ಪಂಚಾಯತಿಗಳಲ್ಲಿ ಡಂಗುರ ಹಾಕಿಸಿ ಜಾಗೃತಿ ಮೂಡಿಸುವುದು. ಗಡಿ ಸಂಪರ್ಕ ಸೀಲ್ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದ್ದು, ಕೋಲಾರ ಉಪ ವಿಭಾಗಾಧಿಕಾರಿ ಸೋಮಶೇಖರ್ ವರದಿ ಆಧರಿಸಿ ಮುಂದಿನ ಕ್ರಮವಹಿಸುವುದಾಗಿ ಕೋಲಾರ ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದ್ದಾರೆ.

  • ದಾವಣಗೆರೆ ಸಂಪೂರ್ಣ ಲಾಕ್‍ಡೌನ್- 21 ಕೊರೊನಾ ಸೋಂಕಿತರ ಮಾಹಿತಿ ಇಲ್ಲಿದೆ

    ದಾವಣಗೆರೆ ಸಂಪೂರ್ಣ ಲಾಕ್‍ಡೌನ್- 21 ಕೊರೊನಾ ಸೋಂಕಿತರ ಮಾಹಿತಿ ಇಲ್ಲಿದೆ

    – 293 ಜನರ ವರದಿಗಾಗಿ ಕಾಯ್ತಿರೋ ಜಿಲ್ಲಾಡಳಿತ

    ದಾವಣಗೆರೆ: ಆರೆಂಜ್ ಝೋನ್‍ನಲ್ಲಿದ್ದ ದಾವಣಗೆರೆಯಲ್ಲಿ ಒಮ್ಮಿಂದೊಮ್ಮಲೆ ಕೊರಾನಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜಿಲ್ಲೆಯ ಜನರನ್ನು ತೀವ್ರ ಆತಂಕಕ್ಕೀಡು ಮಾಡಿದೆ. ಇಂದು ಒಂದೇ ದಿನ 21 ಪ್ರಕರಣಗಳು ಹೆಚ್ಚಾಗುವ ಮೂಲಕ ರೆಡ್ ಝೋನ್‍ಗೆ ತಿರುಗುವ ಸಾಧ್ಯತೆ ಹೆಚ್ಚಾಗಿದೆ.

    ಒಟ್ಟು 330 ಸ್ಯಾಂಪಲ್ ಗಳ ಪೈಕಿ 37ರ ವರದಿ ಬಂದಿದ್ದು, ಇದರಲ್ಲಿ ಬರೋಬ್ಬರಿ 21 ಮಂದಿಗೆ ಕೊರೊನಾ ತಗುಲಿರೋದು ದೃಢಪಟ್ಟಿದೆ. ಇನ್ನೂ 293 ಜನರ ವರದಿ ಬರುವುದು ಬಾಕಿ ಇದೆ. ಇವರ ವರದಿ ಏನಾಗುತ್ತದೋ ಎಂದು ಜಿಲ್ಲೆಯ ಜನ ಭಯಭೀತರಾಗಿದ್ದಾರೆ.

    ರೋಗಿ ನಂಬರ್ 556 ಮತ್ತು 533 ಸಂಪರ್ಕದಿಂದ ಈ ಪ್ರಕರಣಗಳು ಬಂದಿವೆ ಎಂಬ ಮಾಹಿತಿ ಲಭ್ಯವಾಗಿದ್ದು, ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕದಿಂದ ಇಷ್ಟು ಜನರಿಗೆ ಸೋಂಕು ಹಬ್ಬಿದೆ. ಶನಿವಾರ ದಾವಣಗೆರೆಯಲ್ಲಿ 10 ಪ್ರಕರಣಗಳಿದ್ದವು. ಇಂದು 21 ಪ್ರಕರಣಗಳು ಪತ್ತೆಯಾಗಿದ್ದು, ದಾವಣಗೆರೆಯಲ್ಲಿ ಇದೀಗ ಒಟ್ಟು 31 ಸಕ್ರಿಯ ಪ್ರಕರಣಗಳಿವೆ. ಇದು ಜಿಲ್ಲಾಡಳಿತ ಹಾಗೂ ಜಿಲ್ಲೆಯ ಜನರಿಗೆ ಆಘಾತವನ್ನುಂಟು ಮಾಡಿದೆ.

    ಎರಡು ದಿನಗಳ ಹಿಂದೆ 94, ನಿನ್ನೆ 72, ಇಂದು 164 ಸ್ಯಾಂಪಲ್ ಕಳುಹಿಸಲಾಗಿತ್ತು. 21 ಪಾಸಿಟಿವ್ ಪ್ರಕರಣ ಬಂದ ಹಿನ್ನೆಲೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್, ಡಿಸಿ ಮಹಾಂತೇಶ್ ಆರ್. ಬೀಳಗಿ, ಎಸ್ಪಿ ಹನುಮಂತರಾಯ ಸೇರಿದಂತೆ ವಿವಿಧ ಅಧಿಕಾರಿಗಳು ತುರ್ತು ಸಭೆ ನಡೆಸಿದರು.

    ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ, ದಾವಣಗೆರೆ ಸಂಪೂರ್ಣ ಲಾಕ್‍ಡೌನ್ ಆಗಲಿದ್ದು, ಯಾವುದೇ ಅಂಗಡಿ ತೆರೆಯುವಂತಿಲ್ಲ. ದಾವಣಗೆರೆ ರೆಡ್ ಝೋನ್‍ಗೆ ಬರಲಿದೆ. 21 ಪಾಸಿಟಿವ್ ಬಂದಿರುವುದರಿಂದ ಕಂಟೈನ್‍ಮೆಂಟ್ ಝೋನ್ ಆಗಲಿದೆ. ಕಂಟೈನ್‍ಮೆಂಟ್ ಝೋನ್ ನಲ್ಲಿ ದವಸ, ಧಾನ್ಯ ಸಿಗುವುದಿಲ್ಲ, ಆನ್ ಲೈನ್ ವ್ಯವಸ್ಥೆ ಮಾಡಿಕೊಳ್ಳಬಹದಾಗಿದೆ. ಬಾರ್ ಗಳನ್ನು ಕೂಡ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಎಲ್ಲೆಲ್ಲಿ ಎಷ್ಟು, ಯಾರ್ಯಾರಿಗೆ ಸೋಂಕು?
    ಜಾಲಿನಗರ 12, ಇಮಾಮ್ ನಗರ 6, ಕೆಟಿಜೆ ನಗರ 1, ಬೇತೂರು ರಸ್ತೆ 1, ಯಲ್ಲಮ್ಮನ ದೇವಸ್ಥಾನದ ಬಳಿ 1 ಪ್ರಕರಣ ಪತ್ತೆಯಾಗಿದ್ದು, 9 ಜನ ಪುರುಷರು, ಮೂವರು ಬಾಲಕರು, ಒಬ್ಬ ಬಾಲಕಿ, 8 ಮಹಿಳೆಯರಿಗೆ ಸೋಂಕು ತಗುಲಿದೆ.

    ಸೋಂಕಿತರ ವಿವರ
    1. 30 ವರ್ಷದ, ಪುರುಷ, ಜಾಲಿನಗರ
    2. 52 ವರ್ಷದ ಮಹಿಳೆ, ಇಮಾಮ್ ನಗರ
    3. 38 ವರ್ಷದ ಪುರುಷ, ಜಾಲಿನಗರ
    4. 32 ವರ್ಷದ ಮಹಿಳೆ ಇಮಾಮ್ ನಗರ
    5. 35 ವರ್ಷದ ಪುರುಷ, ಇಮಾಮ್ ನಗರ
    6. 32 ವರ್ಷದ ಮಹಿಳೆ, ಇಮಾಮ್ ನಗರ
    7. 12 ವರ್ಷದ ಬಾಲಕಿ, ಇಮಾಮ್ ನಗರ
    8. 7 ವರ್ಷದ ಬಾಲಕ, ಇಮಾಮ್ ನಗರ
    9. 38 ವರ್ಷದ ಪುರುಷ, ಬೇತೂರು ರಸ್ತೆ
    10. 49 ವರ್ಷದ ಮಹಿಳೆ, ಕೆಟಿಜೆ ನಗರ
    11. 27 ವರ್ಷದ ಪುರುಷ, ಮೂರನೇ ತಿರುವು, ಜಾಲಿನಗರ
    12. 25 ಪುರುಷ, ಜಾಲಿನಗರ
    13. 33 ವರ್ಷ ಪುರುಷ, ಯಲ್ಲಮ್ಮನ ಟೆಂಪಲ್, ಮೂರನೇ ತಿರುವು
    14. 62 ವರ್ಷದ ಮಹಿಳೆ, ಜಾಲಿನಗರ
    15. 34 ವರ್ಷದ ಮಹಿಳೆ, ಜಾಲಿನಗರ
    16. 20 ವರ್ಷದ ಮಹಿಳೆ, ಜಾಲಿನಗರ
    17. 22 ವರ್ಷದ ಮಹಿಳೆ, ಜಾಲಿನಗರ
    18. 6 ವರ್ಷದ ಬಾಲಕ, ಜಾಲಿನಗರ
    19. 70 ವರ್ಷದ ಪುರುಷ, ಜಾಲಿನಗರ
    20. 42 ವರ್ಷದ ಪುರುಷ, ಜಾಲಿನಗರ
    21. 11 ವರ್ಷದ ಬಾಲಕ, ಜಾಲಿನಗರ

  • ಲಾಕ್‍ಡೌನ್ ಹೊಸ ಗೈಡ್‍ಲೈನ್ಸ್- ಐಟಿ, ಬಿಟಿಯವರು ಪಾಸ್ ಪಡೆಯುವುದು ಕಡ್ಡಾಯ

    ಲಾಕ್‍ಡೌನ್ ಹೊಸ ಗೈಡ್‍ಲೈನ್ಸ್- ಐಟಿ, ಬಿಟಿಯವರು ಪಾಸ್ ಪಡೆಯುವುದು ಕಡ್ಡಾಯ

    – ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ ಸಂಚರಿಸಲು ಮಾತ್ರ ಅವಕಾಶ
    – ನೌಕರರು/ಕಾರ್ಮಿಕರಿಗೆ ಮಾತ್ರ

    ಬೆಂಗಳೂರು: ರಾಜ್ಯ ಸರ್ಕಾರ ಲಾಕ್‍ಡೌನ್ ನಿಯಮಗಳನ್ನು ಪರಿಷ್ಕರಿಸಿದ್ದು, ಹತ್ತು ಹಲವು ಮಾರ್ಪಾಡುಗಳನ್ನು ಮಾಡಿದೆ. ಐಟಿ, ಬಿಟಿ ಕಂಪನಿ ಉದ್ಯೋಗಿಗಳಿಗೆ ಪಾಸ್, ಸಾರ್ವಜನಿಕರ ಸಂಚಾರದ ಸಮಯ ಸೇರಿದಂತೆ ವಿವಿಧ ಬದಲಾವಣೆಗಳನ್ನು ಮಾಡಿದೆ.

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರವನ್ನು ಒಂದೇ ಯೂನಿಟ್ ಎಂದು ಪರಿಗಣಿಸಿದ್ದು, ಈ ಎಲ್ಲ ಜಿಲ್ಲೆಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ಮಾತ್ರ ಸಾರ್ವಜನಿಕರಿಗೆ ಸಂಚಾರಕ್ಕೆ ಕಲ್ಪಿಸಿದೆ. ರಾತ್ರಿ ಆಫೀಸ್‍ಗೆ ಹೋಗುವವರು ಕಚೇರಿಯಿಂದ ಲೆಟರ್ ಹೆಡ್ ಹಾಗೂ ಐಡಿ ಕಾರ್ಡ್‍ಗಳನ್ನು ಹೊಂದುವುದು ಕಡ್ಡಾಯವಾಗಿದೆ. ಈ ಜಿಲ್ಲೆಗಳ ನಡುವೆ ಓಡಾಡುವವರಿಗೆ ಅಂತರ್‍ಜಿಲ್ಲೆ ಪಾಸ್‍ಗಳ ಅಗತ್ಯವಿಲ್ಲ. ಇತರೆ ಜಿಲ್ಲೆಗಳಿಗೆ ತೆರಳುವವರು ಪಾಸ್‍ಗಳನ್ನು ಪಡೆಯಬೇಕು. ರಾತ್ರಿ 7ರಿಂದ ಬೆಳಗ್ಗೆ 7 ಗಂಟೆಯವರೆಗೆ ಕಫ್ರ್ಯೂ ಜಾರಿಯಲ್ಲಿರಲಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

    ರಾತ್ರಿ ವೇಳೆ ಸಂಚರಿಸುವ ಐಟಿ, ಬಿಟಿ ವಲಯದವರು ಆಯಾ ಡಿಸಿಪಿಗಳಿಂದ ಪಾಸ್ ಪಡೆಯಬಹುದು. ಇಲಾಖೆಗಳ ಕಾರ್ಯದರ್ಶಿಗಳ ಶಿಫಾರಸ್ಸಿನ ಮೇರೆಗೆ ಕಮಿಷನರೇಟ್ ನಲ್ಲಿ ಸಂಬಧಪಟ್ಟ ಡಿಸಿಪಿಗಳು, ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಪಾಸ್ ನೀಡುತ್ತಾರೆ.

    ಬೆಂಗಳೂರಿಗೆ ಬಿಗ್ ರಿಲೀಫ್
    ಈ ಎಲ್ಲ ನಿಯಮಗಳ ಮಧ್ಯೆ ಸಿಲಿಕಾನ್ ಸಿಟಿ ಜನರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಇನ್ನಿತರ ವಲಯಗಳಲ್ಲಿ ಸೀಮಿತ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರು ಸೇರಿದಂತೆ ರೆಡ್ ಝೋನ್ ನಲ್ಲಿರುವ ಐಟಿ, ಬಿಟಿ ಕೈಗಾರಿಕೆಗಳು ಷರತ್ತಿನೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರೆಡ್ ಝೋನ್ ಗೆ ಅನ್ವಯವಾಗುವ ಎಲ್ಲ ನಿಯಮಗಳು ಅನ್ವಯವಾಗಲಿವೆ. ಆದರೆ ಬೆಂಗಳೂರು ನಗರ, ಬೆಂ.ಗ್ರಾ. ರಾಮನಗರ, ಚಿಕ್ಕಬಳ್ಳಾಪುರ, ಕೊಲಾರ ಜಿಲ್ಲೆಗಳಿಗೆ ಓಡಾಲು ಅಂತರ್ ಜಿಲ್ಲೆ ಪಾಸ್ ಅಗತ್ಯ ವಿಲ್ಲ ಎಂದು ತಿಳಿಸಿದೆ. ಆರ್ಥಿಕ ಚಟುವಟಿಕೆ ನಿಟ್ಟಿನಲ್ಲಿ ಇಷ್ಟು ಜಿಲ್ಲೆಗಳನ್ನು ಒಂದು ಯೂನಿಟ್ ನಂತೆ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಉಳಿದಂತೆ ರೆಡ್ ಝೋನ್‍ನ ಎಲ್ಲ ನಿಯಮವಾಳಿಗಳು ಬೆಂಗಳೂರಿಗೂ ಅನ್ವಯವಾಗುತ್ತವೆ.

  • ಕರ್ನಾಟಕದ ರೆಡ್ ಝೋನ್ ಜಿಲ್ಲೆಗಳ ಸಂಖ್ಯೆ ಇಳಿಮುಖ

    ಕರ್ನಾಟಕದ ರೆಡ್ ಝೋನ್ ಜಿಲ್ಲೆಗಳ ಸಂಖ್ಯೆ ಇಳಿಮುಖ

    – ಲಾಕ್‍ಡೌನ್ ಬಳಿಕವೂ ಕೆಂಪು ವಲಯದಲ್ಲೇ ಬೆಂಗ್ಳೂರು

    ನವದೆಹಲಿ: ಕೋವಿಡ್-19 ಕೆಂಪು, ಕಿತ್ತಳೆ, ಹಸಿರು ವಲಯಗಳ ಪರಷ್ಕೃತ ಪಟ್ಟಿಯನ್ನು ಕೇಂದ್ರ ಸರ್ಕಾರ ಇಂದು ಬಿಡುಗಡೆ ಮಾಡಿದ್ದು, ಕರ್ನಾಟಕದ ರೆಡ್ ಝೋನ್ ಜಿಲ್ಲೆಗಳ ಸಂಖ್ಯೆ 6ರಿಂದ 3ಕ್ಕೆ ಇಳಿಕೆ ಕಂಡಿದೆ.

    ಕಳೆದ ವಾರದ ಕೊರೊನಾ ಸಂಖ್ಯೆ ಆಧರಿಸಿ ಈ ಪರಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಕೆಂಪು ಪಟ್ಟಿಯಲ್ಲಿದ್ದ ಕಲಬುರಗಿ, ಬೆಳಗಾವಿ, ಚಿಕ್ಕಬಳ್ಳಾಪುರವನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ. ಹೀಗಾಗಿ ಕೆಂಪು ಪಟ್ಟಿಯಲ್ಲಿರುವ ಜಿಲ್ಲೆಗಳಲ್ಲಿ ಅಷ್ಟೇ ಲಾಕ್‍ಡೌನ್ ಮುಂದುವರಿಯುತ್ತಾ ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ.

    ದೇಶದ ಮಹಾನಗರಗಳು ಮತ್ತು ಅದರ ಉಪನಗರಗಳನ್ನು ರೆಡ್ ಝೋನ್‍ನಲ್ಲಿ ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ. ಪರಷ್ಕೃತ ಪಟ್ಟಿಯ ಪ್ರಕಾರ ದೇಶಾದ್ಯಂತ 130 ಜಿಲ್ಲೆಗಳು ರೆಡ್ ಝೋನ್, 284 ಜಿಲ್ಲೆಗಳು ಆರೆಂಜ್ ಹಾಗೂ 319 ಜಿಲ್ಲೆಗಳು ಗ್ರೀನ್ ಝೋನ್‍ಗಳನ್ನು ಗುರುತಿಸಲಾಗಿದೆ. ರಾಜ್ಯದಲ್ಲಿ 3 ಜಿಲ್ಲೆಗಳು ಕೆಂಪು ವಲಯ, 13 ಕಿತ್ತಳೆ ವಲಯ ಹಾಗೂ 14 ಜಿಲ್ಲೆಗಳು ಹಸಿರು ವಲಯದಲ್ಲಿವೆ.

    ಕೆಂಪು ವಲಯ:
    ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು ಮಾತ್ರ ರೆಡ್ ಝೋನ್‍ನಲ್ಲಿವೆ. ಈ ಹಿಂದೆ ಕೆಂಪು ಪಟ್ಟಿಯಲ್ಲಿದ್ದ ಕಲಬುರಗಿ, ಬೆಳಗಾವಿ, ಚಿಕ್ಕಬಳ್ಳಾಪುರವನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ. ಅತಿ ಹೆಚ್ಚು ಕೊರೊನಾ ಪ್ರಕರಣಗಳು ಬೆಳಕಿಗೆ ಬರದ ಹಿನ್ನೆಲೆ ಈ ಪಟ್ಟಿಯಿಂದ ಮೂರು ಜಿಲ್ಲೆಗಳನ್ನು ಕೈಬಿಡಲಾಗಿದೆ.

    ಕಿತ್ತಳೆ ವಲಯ:
    ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಮಂಡ್ಯ, ಬಳ್ಳಾರಿ, ಧಾರವಾಡ, ದಕ್ಷಿಣ ಕನ್ನಡ, ಬೀದರ್, ಚಿಕ್ಕಬಳ್ಳಾಪುರ, ಗದಗ, ಉತ್ತರ ಕನ್ನಡ, ತುಮಕೂರು.

    ಹಸಿರು ವಲಯ:
    ದಾವಣಗೆರೆ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ಹಾಸನ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ಯಾದಗಿರಿ.

    ನಗರ ಪ್ರದೇಶದಲ್ಲಿ ವಸತಿ ಪ್ರದೇಶ, ಪೊಲೀಸ್ ಠಾಣೆ ವ್ಯಾಪ್ತಿ, ಮೊಹಲ್ಲಾಗಳ, ಪಟ್ಟಣಗಳ ಆಧಾರದ ಮೇಲೆ ಝೋನ್‍ಗಳನ್ನು ಗುರುತಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯತಿ, ಪುರಸಭೆ, ನಗರಸಭೆ ಆಧಾರದ ಮೇಲೆ ಗುರುತಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

    ದೊಡ್ಡ ಜಿಲ್ಲಾ ಪ್ರದೇಶಗಳಲ್ಲಿ ಹಲವು ವಿಭಾಗಳಾಗಿ ವಿಂಗಡಿಸಿಕೊಳ್ಳಬಹುದು. ಝೋನ್‍ಗಳಿಗೆ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ಸೂಚಿಸಬೇಕು. ಅಲ್ಲದೇ ಅವಶ್ಯಕತೆ ವಸ್ತುಗಳ ಪೂರೈಕೆ ಹೊರತುಪಡಿಸಿ ರೆಡ್ ಝೋನ್‍ನಲ್ಲಿ ಪ್ರತಿ ಮನೆಯ ಮೇಲೂ ಸ್ಥಳೀಯ ಆಡಳಿತ ಕಣ್ಣಿಟ್ಟರಬೇಕು. ಈ ಹಿಂದೆ ನಿಗದಿಪಡಿಸಿದ್ದ 28 ದಿನಗಳ ಬದಲು 21 ದಿನಗಳ ಕಾಲ ಸೋಂಕು ಕಾಣಿಸಿಕೊಳ್ಳದಿದ್ದರೇ ಗ್ರೀನ್ ಝೋನ್ ಅಂತ ಘೋಷಿಸಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆಯು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

  • ರೆಡ್‍ಝೋನ್ ಮಂಗಳೂರಿನಲ್ಲಿ ಮತ್ತೆ ಆತಂಕ- ಮಹಿಳೆಗೆ ಕೊರೊನಾ ಸೋಂಕು

    ರೆಡ್‍ಝೋನ್ ಮಂಗಳೂರಿನಲ್ಲಿ ಮತ್ತೆ ಆತಂಕ- ಮಹಿಳೆಗೆ ಕೊರೊನಾ ಸೋಂಕು

    ಮಂಗಳೂರು: ಮಂಗಳೂರಿನ ಮಹಿಳೆಗೆ ಕೊರೊನಾ ಸೋಂಕು ತಗುಲಿರೋದು ಇಂದು ದೃಢಪಟ್ಟಿದೆ. ಪಾಶ್ರ್ವವಾಯು ಪೀಡಿತರಾಗಿ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೋಳೂರಿನ ಮಹಿಳೆಗೆ ಸೋಂಕು ತಗಲಿದೆ.

    ಏಪ್ರಿಲ್ 20ರಂದೇ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದರೂ, ಅದೇ ಆಸ್ಪತ್ರೆಯಲ್ಲಿ ಸ್ವೀಪರ್ ಆಗಿದ್ದ ಮಹಿಳೆಗೆ ಎರಡು ದಿನಗಳ ಹಿಂದೆ ಸೋಂಕು ತಗುಲಿತ್ತು. ಆಕೆಯ ಸಂಪರ್ಕದಿಂದ ಈಗ ಬೋಳೂರಿನ ಮಹಿಳೆಗೂ ಸೋಂಕು ತಗಲಿದೆ. ಹೀಗಾಗಿ ಮಂಗಳೂರು ನಗರದ ಬೋಳೂರಿನಲ್ಲಿ ಸೋಂಕಿತೆಯ ಮನೆ ಇರುವ 200 ಮೀಟರ್ ಆಸುಪಾಸಿನಲ್ಲಿ ಸಂಪೂರ್ಣವಾಗಿ ಸೀಲ್‍ಡೌನ್ ಮಾಡಲಾಗಿದೆ.

    ಈ ಪರಿಸರದಲ್ಲಿ 135 ಮನೆಗಳಿದ್ದು ಸುಮಾರು 650 ಮಂದಿ ಮನೆಯಿಂದ ಹೊರಬರದಂತೆ ನಿರ್ಬಂಧಿಸಲಾಗಿದೆ. ಇದಲ್ಲದೆ ಮಹಿಳೆಯ ಮನೆಯಲ್ಲಿದ್ದ ಐದು ಮಂದಿಯನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಇದೇ ವೇಳೆ ಬೋಳೂರಿನಿಂದ ಐದು ಕಿಮೀ ವ್ಯಾಪ್ತಿಯಲ್ಲಿ ಬಫರ್ ಝೋನ್ ಎಂದು ಘೋಷಿಸಲಾಗಿದ್ದು, ಪೊಲೀಸರು ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸದಂತೆ ನಿರ್ಬಂಧಿಸಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 22ಕ್ಕೇರಿದ್ದು ಜಿಲ್ಲೆಯನ್ನು ರೆಡ್ ಝೋನ್ ಎಂದು ಗುರುತಿಸಲಾಗಿದೆ.

  • ಹಸಿರು ವಲಯದಲ್ಲಿದ್ದ ದಾವಣಗೆರೆ ಕೆಂಪು ವಲಯದತ್ತ ಹೆಜ್ಜೆ..!

    ಹಸಿರು ವಲಯದಲ್ಲಿದ್ದ ದಾವಣಗೆರೆ ಕೆಂಪು ವಲಯದತ್ತ ಹೆಜ್ಜೆ..!

    ದಾವಣಗೆರೆ: ಕಳೆದ ಮೂವತ್ತು ದಿನಗಳಿಂದ ಒಂದೇ ಒಂದು ಪಾಸಿಟಿವ್ ಪ್ರಕರಣಗಳು ಇಲ್ಲದ ದಾವಣಗೆರೆಯನ್ನು ಹಸಿರು ವಲಯಕ್ಕೆ ಸೇರಿಸಲಾಗಿತ್ತು. ಆದರೆ ಈಗ ಹಸಿರು ಝೋನ್ ನಲ್ಲಿದ್ದ ದಾವಣಗೆರೆ ಜಿಲ್ಲೆಯಲ್ಲಿ ನಿನ್ನೆ ಹಾಗೂ ಇಂದು ಕೋವಿಡ್-19 ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ದಾವಣಗೆರೆ ಡೇಂಜರ್ ಝೋನ್‍ಗೆ ಒಳಪಟ್ಟಿದೆ. ಕಳೆದ 30 ದಿನಗಳಿಂದಲೂ ಯಾವುದೇ ಸೋಂಕಿತರು ಪತ್ತೆಯಾಗದ ಕಾರಣ ದಾವಣಗೆರೆ ಹಸಿರುವಲಯಕ್ಕೆ ಸೇರ್ಪಟ್ಟಿತ್ತು. ಆದರೆ ನಿನ್ನೆ ಹಾಗೂ ಇಂದು 2 ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಹಳದಿ ವಲಯಕ್ಕೆ ಸೇರ್ಪಡೆಯಾಗಿದೆ.

    ನಿನ್ನೆ ನಗರದ ಭಾಷಾನಗರದಲ್ಲಿ ಓರ್ವ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿತ್ತು. ಭಾಷಾನಗರ ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರನ್ನು ಈಗಾಗಲೇ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿದೆ. ಅಲ್ಲದೇ ಮಹಿಳೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ 25 ಜನರನ್ನು ಪ್ರತೇಯಕ ಹೋಟೆಲ್ ಒಂದರಲ್ಲಿ ಐಸೋಲೇಷನ್‍ನಲ್ಲಿ ಮಾಡಲಾಗಿದೆ. 2ನೇ ಹಂತದ ಸಂಪರ್ಕದಲ್ಲಿದ್ದ 45 ಜನರನ್ನು ಪತ್ತೆ ಮಾಡಲಾಗಿದ್ದು, ಈಗಾಗಲೇ ಒಟ್ಟು 56 ಜನರ ಗಂಟಲು ದ್ರವ ಮಾದರಿಯನ್ನು ಇಂದು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಇವರು ಕೆಲಸ ಮಾಡುತ್ತಿದ್ದ ನಗರ ಆರೋಗ್ಯ ಕೇಂದ್ರವನ್ನು ಬಂದ್ ಮಾಡಲಾಗಿದೆ.

    ಇಂದು ಬೆಳಗ್ಗೆ ದಾವಣಗೆರೆಯ ಜಾಲಿನಗರದ ನಿವಾಸಿಯೊಬ್ಬರಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. 68 ವರ್ಷದ ವ್ಯಕ್ತಿ ಅನಾರೋಗ್ಯದಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಏಪ್ರೀಲ್ 27 ರಂದು ದಾಖಲಾಗಿದ್ದರು. ಕೋವಿಡ್ ವಾರ್ಡ್‍ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಅವರ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಶಿವಮೊಗ್ಗ ಲ್ಯಾಬ್ ಗೆ ರವಾನೆ ಮಾಡಲಾಗಿತ್ತು. ಇಂದು ವರದಿ ಲಭ್ಯವಾಗಿದ್ದು ವೃದ್ಧನಿಗೆ ಸೋಂಕು ಇರುವುದು ಖಚಿತವಾಗಿದೆ. ವೃದ್ಧನ ಟ್ರಾವಲ್ ಹಿಸ್ಟರಿಗಾಗಿ ಜಿಲ್ಲಾಡಳಿತ ಶೋಧ ನಡೆಸಿದೆ. ವೃದ್ಧನ ಸಂಪರ್ಕದಲ್ಲಿದ್ದ ಕುಟುಂಬದ ಒಂದೂವರೆ ವರ್ಷದ ಒಂದು ಮಗು ಹಾಗೂ ಮೂರು ವರ್ಷದ ಇನ್ನೊಂದು ಮಗು ಸೇರಿ ಒಂಬತ್ತು ಜನರನ್ನ  ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅವರ ಮಾದರಿ ಸಂಗ್ರಹಿಸಿ ಶಿವಮೊಗ್ಗ ಲ್ಯಾಬ್‍ಗೆ ರವಾನೆ ಮಾಡಲಾಗಿದೆ.

    ದಾವಣಗೆರೆ ಜಿಲ್ಲೆಯಲ್ಲಿ ನಿನ್ನೆ ಹಾಗೂ ಇಂದು 2 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಕಂಡುಬಂದಿದೆ. ಸೋಂಕಿತರಿಬ್ಬರ ಮಾಹಿತಿ ಪಡೆಯಲಾಗಿದ್ದು ಬಾಷಾನಗರ ಹಾಗೂ ಜಾಲಿನಗರ ಎರಡನ್ನು ಸೀಲ್ ಡೌನ್ ಮಾಡಲಾಗಿದೆ. ನಿನ್ನೆ ಸೋಂಕು ಪತ್ತೆಯಾದ ಸ್ಟಾಫ್ ನರ್ಸ್ ಪ್ರಕರಣಕ್ಕೂ ಈಗ ಪತ್ತೆಯಾದ ವೃದ್ಧನ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಇಬ್ಬರ ಟ್ರಾವೆಲ್ ಹಿಸ್ಟರಿ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ಇಬ್ಬರ ಟ್ರಾವೆಲ್ ಹಿಸ್ಟರಿ ಕಲೆ ಹಾಕುವುದು ಸಾಕಷ್ಟು ಸವಾಲಾಗಿರುವ ಹಿನ್ನೆಲೆ ಯಾರಿಂದ ಇವರಿಗೆ ಸೋಂಕು ತಗಲಿದೆ ಎನ್ನುವುದನ್ನು ಪತ್ತೆ ಮಾಡಬೇಕಿದೆ.

  • ರೆಡ್‍ಝೋನ್ ಪಟ್ಟಿಯಲ್ಲಿ 14 ಜಿಲ್ಲೆಗಳ 29 ತಾಲೂಕುಗಳು

    ರೆಡ್‍ಝೋನ್ ಪಟ್ಟಿಯಲ್ಲಿ 14 ಜಿಲ್ಲೆಗಳ 29 ತಾಲೂಕುಗಳು

    ಬೆಂಗಳೂರು: ಕೊರೊನಾ ಪೀಡಿತ ಭಾಗಗಳಿಗೆ ಹೊಸ ಮಾನದಂಡವನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ವಲಯಗಳ ವಿಂಗಡಣೆ ಮಾಡಲಾಗಿದೆ. ಹೊಸ ಪಟ್ಟಿಯಲ್ಲಿ ರೆಡ್ ಝೋನ್‍ಗಳ ಸಂಖ್ಯೆ 8 ರಿಂದ 14ಕ್ಕೆ ಏರಿಕೆಯಾಗಿದೆ.

    ರಾಜ್ಯದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬಳ್ಳಾರಿ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳು ರಾಜ್ಯದ ರೆಡ್ ಝೋನ್‍ಗಳಾಗಿವೆ. ಒಟ್ಟಾರೆ ರಾಜ್ಯದ 14 ಜಿಲ್ಲೆಗಳ 29 ತಾಲೂಕುಗಳು ರೆಡ್‍ಝೋನ್‍ನಲ್ಲಿದೆ.

    ಕೊರೊನಾ ಸೋಂಕಿನ ತೀವ್ರತೆ ಆಧಾರದ ಮೇಲೆ ರಾಜ್ಯದಲ್ಲಿ ಕೆಂಪು ವಲಯಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಕೊರೊನಾ ವಲಯಗಳ ವಿಂಗಡಣೆಗೆ ರಾಜ್ಯ ಸರ್ಕಾರ ಹೊಸ ಮಾನದಂಡ ಬಳಸಿದೆ. ನಾಲ್ಕು ವಲಯಗಳ ಬದಲು ಮತ್ತೆ ಮೂರು ವಲಯಗಳ ಸೂತ್ರಕ್ಕೆ ಜೋತುಬಿದ್ದಿದೆ. ಹಳದಿ ವಲಯವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. 28 ದಿನಗಳ ಅವಧಿಯಲ್ಲಿ ಕೊರೊನಾ ಸೋಂಕು ಕಾಣಿಸದಿದ್ದರೆ ಆ ತಾಲೂಕನ್ನು ಗ್ರೀನ್ ಝೋನ್ ಎಂದು ಪರಿಗಣಿಸಲಾಗುತ್ತದೆ. 14 ದಿನದಲ್ಲಿ ಒಂದೇ ಒಂದು ಹೊಸ ಕೇಸ್ ಕಂಡು ಬರದೇ ಇದ್ದರೆ ಅದನ್ನು ಆರೆಂಜ್ ಝೋನ್ ಎಂದು ಪರಿಗಣಿಸಲಾಗುತ್ತದೆ. 14 ದಿನಗಳ ಅವಧಿಯಲ್ಲಿ ಒಂದು ಕೇಸ್ ಕಂಡು ಬಂದರೂ ಅದನ್ನು ರೆಡ್ ಝೋನ್ ಎಂದು ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಅನ್ವಯ ಇದೀಗ 14 ಜಿಲ್ಲೆಗಳ 29 ತಾಲೂಕುಗಳು ರೆಡ್‍ಝೋನ್ ವ್ಯಾಪ್ತಿಗೆ ಬರುತ್ತವೆ. ಈ ಪಟ್ಟಿಯಲ್ಲಿ ನಿನ್ನೆ ತಾಲೂಕುಗಳ ಸಂಖ್ಯೆ 14 ಇತ್ತು.

    ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರ, ಗದಗ ತಾಲೂಕು, ಬಳ್ಳಾರಿ ಜಿಲ್ಲೆಯ ಹೊಸಪೇಟೆ, ಸಿರಗುಪ್ಪ, ಬಳ್ಳಾರಿ ತಾಲೂಕು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಚಿಕ್ಕಬಳ್ಳಾಪುರ ತಾಲೂಕು, ತುಮಕೂರು ತಾಲೂಕು, ಮೈಸೂರು ತಾಲೂಕು, ನಂಜನಗೂಡು, ಮಂಡ್ಯ ಜಿಲ್ಲೆಯ ಮಳವಳ್ಳಿ, ನಾಗಮಂಗಲ, ಮಂಡ್ಯ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತೂರು, ಬಂಟ್ವಾಳ ತಾಲೂಕುಗಳು, ಬೀದರ್ ತಾಲೂಕು, ಕಲಬುರಗಿ ತಾಲೂಕು, ಶಹಾಬಾದ್ ತಾಲೂಕು, ವಿಜಯಪುರ ತಾಲೂಕು, ಬಾಗಲಕೋಟೆ ಜಿಲ್ಲೆಯ ಮುಧೋಳ, ಜಮಖಂಡಿ, ಬಾಗಲಕೋಟೆ ತಾಲೂಕು, ಬೆಳಗಾವಿ ಜಿಲ್ಲೆಯ ರಾಯಭಾಗ, ಹುಕ್ಕೇರಿ, ಬೆಳಗಾವಿ ತಾಲೂಕು, ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ ಪ್ರದೇಶಗಳು ಪಟ್ಟಿಯಲ್ಲಿದೆ.

    ಉಳಿದಂತೆ ಕೊರೊನಾ ಸೋಂಕಿಲ್ಲದ 14 ಜಿಲ್ಲೆಗಳ ಪೈಕಿ ರಾಮನಗರ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಇಂದಿನಿಂದ ಲಾಕ್‍ಡೌನ್ ಸಡಿಲಿಕೆ ಆಗಿದೆ. ಬೆಳಗ್ಗೆಯಿಂದ್ಲೇ ವ್ಯಾಪಾರ ವಹಿವಾಟು, ಗ್ರಾಮೀಣ ಪ್ರದೇಶಗಳಲ್ಲಿ ಕೈಗಾರಿಕೆಗಳು ಆರಂಭವಾಗಿವೆ. ರಾಯಚೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಹಾವೇರಿ, ಕೋಲಾರ, ಕೊಪ್ಪಳ, ಶಿವಮೊಗ್ಗ, ಯಾದಗಿರಿಯಲ್ಲಿ ಅಂಗಡಿ ಮುಂಗಟ್ಟು ಓಪನ್ ಆಗಿವೆ. ಪೊಲೀಸರು ಸಾಮಾಜಿಕ ಅಂತರ ಪಾಲಿಸುವಂತೆ, ಮಾಸ್ಕ್ ಧರಿಸುವಂತೆ ಎಲ್ಲಾ ಕಡೆ ಮೈಕ್‍ಗಳ ಮೂಲಕ ಜಾಗೃತಿ ಮೂಡಿವ ಕಾರ್ಯ ಮಾಡಿದರು.