Tag: Rekha

  • ರಿಚಾ ಚಡ್ಡಾ ‘ಬೇಬಿ ಬಂಪ್‍’ಗೆ ಮುತ್ತಿಕ್ಕಿ ಟ್ರೋಲ್ ಆದ ನಟಿ ರೇಖಾ

    ರಿಚಾ ಚಡ್ಡಾ ‘ಬೇಬಿ ಬಂಪ್‍’ಗೆ ಮುತ್ತಿಕ್ಕಿ ಟ್ರೋಲ್ ಆದ ನಟಿ ರೇಖಾ

    ಇಂದ್ರಜಿತ್ ಲಂಕೇಶ್ ನಿರ್ದೇಶನದ ಶಕೀಲಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೂ ಕಾಲಿಟ್ಟಿದ್ದ ರಿಚಾ ಚಡ್ಡಾ (Richa Chadda) ಅವರ ಬೇಬಿ ಬಂಪ್ (Baby Bump) ಗೆ ಮುತ್ತಿಕ್ಕುವ ಮೂಲಕ ಟ್ರೋಲ್ ಆಗಿದ್ದಾರೆ ಹಿರಿಯ ನಟಿ ರೇಖಾ ಚಡ್ಡಾ. ರಿಚಾ ನಟನೆಯ ಹೀರಾಮಂಡಿ ಚಿತ್ರದ ಪ್ರೀಮಿಯರ್ ಶೋಗೆ ಆಗಮಿಸಿದ್ದ ರೇಖಾ (Rekha) ಅವರು, ರಿಚಾ ನಟನೆ ಕಂಡು ತಬ್ಬಿಕೊಂಡರು. ನಂತರ ರಿಚಾರ ಬೇಬಿ ಬಂಪ್ ಗೆ ಕಿಸ್ ಮಾಡಿದ್ದಾರೆ.

    ಈ ಹಿಂದೆ ರಿಚಾ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದರು. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ತಾಯಿಯ ಮಹತ್ವವನ್ನೂ ತಿಳಿಸಿದ್ದರು.

    ‘1 + 1= 3’ ಎಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ ರಿಚಾ ಚಡ್ಡಾ ಮತ್ತು ಅಲಿ ಫಜಲ್ ದಂಪತಿ ಪೋಷಕರಾಗುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ‘ಒಂದು ಚಿಕ್ಕ ಹಾರ್ಟ್‌ಬೀಟ್  ನಮ್ಮ ಜಗತ್ತಿನಲ್ಲಿ ಅತಿದೊಡ್ಡ ಶಬ್ದ’ ಎಂದು ಈ ಜೋಡಿ ತಮ್ಮ ಚಿತ್ರಗಳಿಗೆ ಶೀರ್ಷಿಕೆ ನೀಡಿ ಪ್ರೆಗ್ನೆನ್ಸಿ ನ್ಯೂಸ್ ಹಂಚಿಕೊಂಡಿದ್ದರು. ರಿಚಾ ದಂಪತಿಗೆ ಕನ್ನಡದ ‘ಗೂಗ್ಲಿ’ ನಟಿ ಕೃತಿ ಕರಬಂಧ ಸೇರಿದಂತೆ ಅನೇಕರು ಶುಭಹಾರೈಸಿದ್ದರು.

     

    ಸೆಪ್ಟೆಂಬರ್ 23ರಂದು ರಿಚಾ ಮತ್ತು ಅಲಿ ಫಜಲ್ (Ali Fazal) ಅದ್ಧೂರಿಯಾಗಿ ಮದುವೆಯಾದರು. ಬಳಿಕ ಮುಂಬೈ, ದೆಹಲಿ ಮತ್ತು ಲಕ್ನೋದಲ್ಲಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದರು. ಅಂದಹಾಗೆ, ಸಿನಿಮಾ ಸೆಟ್‌ವೊಂದರಲ್ಲಿ ರಿಚಾ ಮತ್ತು ಅಲಿ ಅವರಿಗೆ ಪರಿಚಯವಾಗಿ ಆ ಸ್ನೇಹ ಪ್ರೇಮಕ್ಕೆ ತಿರುಗಿತ್ತು. 10 ವರ್ಷಗಳ ಡೇಟಿಂಗ್ ನಂತರ 2022ರಲ್ಲಿ ಈ ಜೋಡಿ ಮದುವೆಯಾದರು.

  • ನಟಿ ರೇಖಾ ಬಯೋಗ್ರಫಿ: ಲೇಡಿ ಸೆಕ್ರೆಟರಿ ಜೊತೆ ಲಿವ್ ಇನ್ ಸಂಬಂಧ ಬಯಲು

    ನಟಿ ರೇಖಾ ಬಯೋಗ್ರಫಿ: ಲೇಡಿ ಸೆಕ್ರೆಟರಿ ಜೊತೆ ಲಿವ್ ಇನ್ ಸಂಬಂಧ ಬಯಲು

    ಬಾಲಿವುಡ್ (Bollywood) ನ ಖ್ಯಾತ ನಟಿ ರೇಖಾ (Rekha) ಅವರ ಬಯೋಗ್ರಫಿ (Biography) ಸಿದ್ದವಾಗಿದೆ. ‘ರೇಖಾ- ದಿ ಅನ್ಟೋಲ್ಡ್ ಸ್ಟೋರಿ’ ಹೆಸರಿನಲ್ಲಿ ಸಿದ್ಧವಾಗಿರುವ ಈ ಪುಸ್ತಕದಲ್ಲಿ ಭಯಾನಕ ಸತ್ಯವೊಂದನ್ನು ಅನಾವರಣಗೊಳಿಸಿದ್ದಾರೆ ಲೇಖಕರು. ಸ್ವತಃ ತನ್ನ ಕಾರ್ಯದರ್ಶಿ ಜೊತೆಯೇ ರೇಖಾ ಲಿವ್ ಇನ್ ರಿಲೇಷನ್ ಶಿಪ್ (Live in Relationship) ಹೊಂದಿದ್ದರು ಎಂದು ಲೇಖಕರು ಉಲ್ಲೇಖಿಸಿದ್ದಾರೆ. ರೇಖಾ ಪತಿಯ ಸಾವಿಗೆ ಇದು ಕೂಡ ಕಾರಣವಾಗಿತ್ತು ಎಂದು ಬರೆದಿದ್ದಾರೆ.

    ಯಾಸರ್ ಉಸ್ಮಾನ್ ಬರೆದ ಈ ಪುಸ್ತಕದಲ್ಲಿ ರೇಖಾ ಬಗೆಗಿನ ಸಾಕಷ್ಟು ಸಂಗತಿಗಳನ್ನು ಹೇಳಲಾಗಿದೆಯಂತೆ. ಅದರಲ್ಲೂ ತನ್ನ ಸೆಕ್ರೆಟರಿಯಾಗಿದ್ದ ಫರ್ಹಜಾನ್ (Farhajan) ಜೊತೆಗಿನ ಸಂಬಂಧ ಮತ್ತು ರೇಖಾ ಅವರನ್ನು ನಿಯಂತ್ರಿಸುವ ಶಕ್ತಿ ಈಕೆಗೆ ಮಾತ್ರ ಗೊತ್ತಿತ್ತು ಎಂದು ಪುಸ್ತಕದಲ್ಲಿ ಬರೆಯಲಾಗಿದೆ.

    ಬಾಲಿವುಡ್ ನ ಅನಭಿಷಿಕ್ತ ರಾಣಿಯಾಗಿ ಮೆರೆದವರು ರೇಖಾ. ಆ ಕಾಲದಲ್ಲೇ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ನಟಿ ಕೂಡ ಅವರಾಗಿದ್ದರು. ಸೌಂದರ್ಯದ ಕಣಿಯೇ ಆಗಿದ್ದ ರೇಖಾಗೂ ಮತ್ತು ಅಮಿತಾಭ್ ಬಚ್ಚನ್ ನಡುವೆ ಪ್ರೇಮಾಂಕುರ ಆಗಿತ್ತು ಎನ್ನುವುದು ಗುಟ್ಟಿನ ಸಂಗತಿಯೇನಲ್ಲ. ಇಬ್ಬರ ಸಂಬಂಧ ಮುರಿದು ಬೀಳುತ್ತಿದ್ದಂತೆಯೇ ಉದ್ಯಮಿಯೊಬ್ಬರನ್ನು ರೇಖಾ ಮದುವೆಯಾದರು. ಆದರೆ, ಆ ಉದ್ಯಮಿ ಮದುವೆಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ.

    ರೇಖಾ ಅವರ ಜೀವನ ಚರಿತ್ರೆಯಲ್ಲಿ ಹೇಳಿದಂತೆ, ರೇಖಾ ಅವರ ಬೆಡ್ ರೂಮ್ ಒಳಗೆ ಅಷ್ಟು ಸಲೀಸಾಗಿ ಯಾರೂ ಹೋಗುವಂತೆ ಇರಲಿಲ್ಲ. ಕೇವಲ ಸೆಕ್ರೆಟರಿ ಮಾತ್ರ ಅಲ್ಲಿಗೆ ಹೋಗುತ್ತಿದ್ದರು. ಅಲ್ಲದೇ, ರೇಖಾ ಅವರ ಫೋನ್ ಕರೆಗಳನ್ನೂ ಆಕೆಯೇ ಸ್ವೀಕರಿಸುತ್ತಿದ್ದರು. ಅಷ್ಟರ ಮಟ್ಟಿಗೆ ರೇಖಾ ಅವರನ್ನು ಸೆಕ್ರೆಟರಿ ಹಿಡಿತದಲ್ಲಿ ಇಟ್ಟುಕೊಂಡಿದ್ದರು ಎಂದು ಪುಸ್ತಕದಲ್ಲಿ ದಾಖಲಾಗಿದೆಯಂತೆ.

     

    ರೇಖಾ ಅವರ ಪುಸ್ತಕ ಇನ್ನೂ ಬಿಡುಗಡೆ ಆಗಿಲ್ಲ. ಆದರೆ, ಆಗಲೇ ಬಾಲಿವುಡ್ ನಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಈ ಪುಸ್ತಕವನ್ನು ಖರೀದಿಸಲು ರೇಖಾ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಇನ್ನೆಷ್ಟು ಸತ್ಯಗಳು ಆಚೆ ಬರಲಿವೆ ಎನ್ನುವುದನ್ನು ಕಾಯುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹೇಶ್ ಬಾಬು ಸಿನಿಮಾಗೆ ಖ್ಯಾತ ನಟಿ ರೇಖಾ ಎಂಟ್ರಿ

    ಮಹೇಶ್ ಬಾಬು ಸಿನಿಮಾಗೆ ಖ್ಯಾತ ನಟಿ ರೇಖಾ ಎಂಟ್ರಿ

    ಟಾಲಿವುಡ್ (Tollywood) ನಟ ಮಹೇಶ್ ಬಾಬು (Mahesh Babu) ಇದೀಗ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಜೊತೆಗಿನ ತಮ್ಮ 28ನೇ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ದಿನದಿಂದ ದಿನಕ್ಕೆ ಚಿತ್ರತಂಡ ಪಾತ್ರವರ್ಗ ಹಿರಿದಾಗುತ್ತಿದೆ. ಈಗ ಮಹೇಶ್ ಬಾಬು ಚಿತ್ರಕ್ಕೆ ಬಾಲಿವುಡ್ ಖ್ಯಾತ ನಟಿ ರೇಖಾ ಆಗಮನವಾಗಿದೆ.

    `ಸರ್ಕಾರು ವಾರಿ ಪಾಟ’ ಚಿತ್ರದ ಗೆಲುವಿನ ನಂತರ ನಿರ್ದೇಶಕ ತ್ರಿವಿಕ್ರಮ್ ಜೊತೆ ಪ್ರಿನ್ಸ್ ಮಹೇಶ್ ಬಾಬು ಕೈಜೋಡಿಸಿದ್ದಾರೆ. ಹೊಸ ಬಗೆಯ ಪಾತ್ರದಲ್ಲಿ ಬರಲು ನಟ ರೆಡಿಯಾಗಿದ್ದಾರೆ. ಸದ್ಯ ಮಹೇಶ್ ಬಾಬು ಚಿತ್ರಕ್ಕೆ ಸಾಥ್ ನೀಡಲು ನಟಿ ರೇಖಾ ಎಂಟ್ರಿಯಾಗಿದೆ.

    ಚಿತ್ರದಲ್ಲಿ ಬಹುಮುಖ್ಯ ಪಾತ್ರದಲ್ಲಿ ನಟಿ ರೇಖಾ ನಟಿಸುತ್ತಿದ್ದಾರೆ. ರೇಖಾ ಪಾತ್ರ ಈ ಸಿನಿಮಾದಲ್ಲಿ ಮೇಜರ್ ರೋಲ್ ಪ್ಲೇ ಮಾಡ್ತಿದ್ದು, ಕಥೆ ಕೇಳ್ತಿದ್ದಂತೆ ಖುಷಿಯಿಂದ ಸೌತ್ ಸಿನಿಮಾದಲ್ಲಿ ನಟಿಸಲು ನಟಿ ಓಕೆ ಎಂದಿದ್ದಾರೆ. ಇದನ್ನೂ ಓದಿ: `ಶಾಕುಂತಲಂ’ ರಿಲೀಸ್‌ಗೂ ಮುನ್ನವೇ ಮತ್ತೊಂದು ಮಹಿಳಾ ಪ್ರಧಾನ ಚಿತ್ರದಲ್ಲಿ ಸಮಂತಾ

    ಇನ್ನೂ ಮಹೇಶ್ ಬಾಬು ನಾಯಕಿಯರಾಗಿ ಕರಾವಳಿ ಬ್ಯೂಟಿ ಪೂಜಾ ಹೆಗ್ಡೆ ಮತ್ತು `ಗಾಳಿಪಟ 2′ ನಾಯಕಿ ಸಂಯುಕ್ತಾ ಮೆನನ್ ಕಾಣಿಸಿಕೊಳ್ಳಲಿದ್ದಾರೆ. ಎಸ್. ರಾಧಾಕೃಷ್ಣ ಈ ಚಿತ್ರವನ್ನ ಅದ್ದೂರಿಯಾಗಿ ನಿರ್ಮಾಣ ಮಾಡ್ತಿದ್ದಾರೆ.

  • ಬೆಂಗಳೂರು ಚಿತ್ರೋತ್ಸವಕ್ಕೆ ರೂ. 4.49 ಕೋಟಿ ಮೀಸಲು : ಆರ್.ಅಶೋಕ್

    ಬೆಂಗಳೂರು ಚಿತ್ರೋತ್ಸವಕ್ಕೆ ರೂ. 4.49 ಕೋಟಿ ಮೀಸಲು : ಆರ್.ಅಶೋಕ್

    ಮಾರ್ಚ್ 23 ರಿಂದ ಬೆಂಗಳೂರು (Bangalore) ಅಂತಾರಾಷ್ಟ್ರೀಯ ಚಿತ್ರೋತ್ಸವ (film festival) ನಡೆಯಲಿದ್ದು, ಈ ಚಿತ್ರೋತ್ಸವಕ್ಕೆ ಸರಕಾರ 4.49 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಇನ್ನೂ ಹೆಚ್ಚಿನ ಹಣವನ್ನು ಚಿತ್ರೋತ್ಸವಕ್ಕಾಗಿ ಮೀಸಲಿಟ್ಟಿರುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. 14ನೇ ಚಿತ್ರೋತ್ಸವ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಹಲವು ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ.

    ಮಾರ್ಚ್ ನಲ್ಲಿ ನಡೆಯಲಿರುವ ಈ ಚಿತ್ರೋತ್ಸವದಲ್ಲಿ ಇಡೀ ಚಿತ್ರೋದ್ಯಮ ಪಾಲ್ಗೊಳ್ಳುತ್ತಿದ್ದು, ಅತಿಥಿಗಳನ್ನಾಗಿ ಬಾಲಿವುಡ್ ನಟ ನಟಿಯರಿಗೆ ಆಹ್ವಾನ ನೀಡಲಾಗಿದೆ. ರೇಖಾ ಸೇರಿದಂತೆ ಹಲವು ಕಲಾವಿದರು ಫಿಲ್ಮೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ 300ಕ್ಕೂ ಹೆಚ್ಚು ಸಿನಿಮಾಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ ಎಂದು ಅಶೋಕ್ ತಿಳಿಸಿದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ -ಕಿಯಾರಾ ಜೋಡಿ

    ಚಿತ್ರೋತ್ಸವದ ಸ್ಪರ್ಧಿಯಲ್ಲಿ ಭಾಗಿಯಾಗುವ ಸಿನಿಮಾಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಪ್ರತಿ ವರ್ಷವೂ ಮೂರುಲಕ್ಷ ರೂಪಾಯಿ ಪ್ರಶಸ್ತಿ ನೀಡಲಾಗುತ್ತಿತ್ತು. ಈ ಬಾರಿ ಅದನ್ನು ಐದು ಲಕ್ಷಕ್ಕೆ ಏರಿಸಲು ಅಶೋಕ್ ಸಲಹೆ ನೀಡಿದ್ದಾರಂತೆ. ಅಲ್ಲದೇ, ಹೆಚ್ಚು ಕನ್ನಡ ಚಿತ್ರಗಳು ಪ್ರದರ್ಶನಗೊಳ್ಳಲಿ ಎನ್ನುವ ಮತ್ತೊಂದು ಸಲಹೆ ಕೂಡ ನೀಡಿದ್ದಾರಂತೆ. ಇತ್ತೀಚೆಗಷ್ಟೇ ಅಗಲಿರುವ ಖ್ಯಾತ ನಿರ್ದೇಶಕ ಕೆ.ವಿಶ್ವನಾಥ್ ಹಾಗೂ ಗಾಯಕಿ ವಾಣಿ ಜಯರಾಮ್ ಅವರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Exclusive- ಬೆಂಗಳೂರು ಚಿತ್ರೋತ್ಸವಕ್ಕೆ ಬಾಲಿವುಡ್ ನಟಿ ರೇಖಾ ಅತಿಥಿ

    Exclusive- ಬೆಂಗಳೂರು ಚಿತ್ರೋತ್ಸವಕ್ಕೆ ಬಾಲಿವುಡ್ ನಟಿ ರೇಖಾ ಅತಿಥಿ

    ರ್ನಾಟಕ ಚಲನಚಿತ್ರ ಅಕಾಡೆಮಿ (Academy) ನಡೆಸುವ ಬೆಂಗಳೂರು (Bangalore) ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (Film Festival) ಈ ಬಾರಿ ಬಾಲಿವುಡ್ ನಟಿ ರೇಖಾ (Rekha) ಅತಿಥಿಯಾಗಿ (Guest) ಭಾಗಿಯಾಗಲಿದ್ದಾರೆ. ಈ ಕುರಿತು ಸ್ವತಃ ಕಂದಾಯ ಸಚಿವ ಆರ್.ಅಶೋಕ್ ಅವರೇ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.  ಮಾರ್ಚ್ ನಲ್ಲಿ ಚಿತ್ರೋತ್ಸವ ನಡೆಯಲಿದ್ದು, ನಾಳೆ ಫಿಲ್ಮ್ ಫೆಸ್ಟಿವಲ್ ಲೋಗೋವನ್ನು ಲಾಂಚ್ ಮಾಡಲಾಗುತ್ತಿದೆ ಎನ್ನುವ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದಾರೆ.

    ಅಂದುಕೊಂಡಂತೆ ಆಗಿದ್ದರೆ ಫೆಬ್ರವರಿಯಲ್ಲೇ ಚಿತ್ರೋತ್ಸವ ನಡೆಯಬೇಕಿತ್ತು. ಆದರೆ, ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಸರಕಾರದಿಂದ ಈವರೆಗೂ ಯಾವುದೇ ಅನುದಾನ ಬಾರದೇ ಇರುವ ಕಾರಣದಿಂದಾಗಿ ಈ ತಿಂಗಳು ನಡೆಸಲಿಕ್ಕೆ ಆಗಲಿಲ್ಲ. ಚಿತ್ರೋತ್ಸವ ನಡೆಯುವುದಕ್ಕೆ ಬರೋಬ್ಬರಿ ಮೂರು ತಿಂಗಳ ಕಾಲ ಸಿದ್ಧತೆ ಬೇಕು ಎನ್ನುವುದು ಅಕಾಡೆಮಿಯಲ್ಲಿ ಕೆಲಸ ಮಾಡಿರುವವರ ಹೇಳಿಕೆ. ಆದರೆ, ಕಂದಾಯ ಸಚಿವರು ಮಾರ್ಚ್ ನಲ್ಲಿ ಚಿತ್ರೋತ್ಸವ ನಡೆಸುವುದಾಗಿ ಹೇಳಿದ್ದಾರೆ. ಈ ಕುರಿತು ನಾಳೆ ಅವರು ವಿವರಣೆ ನೀಡುತ್ತಾರೆ ಎನ್ನುವುದು ನಿರೀಕ್ಷೆ. ಇದನ್ನೂ ಓದಿ: ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ನಿಧನ

    ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿಸಂಹಿತೆ ಜಾರಿ ಆಗುವ ಮುನ್ನವೇ ಚಿತ್ರೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾಡಬೇಕು ಎನ್ನುವುದು ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಲಾಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ.  ನಾಲ್ಕು ವರ್ಷಗಳಿಂದ ಚಲನಚಿತ್ರ ಪ್ರಶಸ್ತಿಗಳನ್ನೂ ನೀಡಿಲ್ಲ. ಕನಿಷ್ಠ ಎರಡು ವರ್ಷಗಳ ಪ್ರಶಸ್ತಿ ಪ್ರದಾನ ಸಮಾರಂಭ ಮಾಡುವ ತರಾತುರಿ ಕೂಡ ನಡೆದಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಮಾರ್ಚ್ ನಲ್ಲಿ ಅಂದುಕೊಂಡಿರುವ ಕಾರ್ಯಕ್ರಮಗಳು ನಡೆಯುತ್ತಿವೆಯಾ ಎಂದು ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಬೆನ್ನಿಗೆ ನಿಂತ ಉಪೇಂದ್ರ : ಸ್ನೇಹಿತ್ ಒಳ್ಳೆಯ ಹುಡುಗ

    ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಬೆನ್ನಿಗೆ ನಿಂತ ಉಪೇಂದ್ರ : ಸ್ನೇಹಿತ್ ಒಳ್ಳೆಯ ಹುಡುಗ

    ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಸಲ್ಲದ ಕಾರಣಕ್ಕಾಗಿ ಸುದ್ದಿ ಆಗುತ್ತಿದ್ದಾರೆ. ಅಪ್ಪು ಪಪ್ಪು ಸಿನಿಮಾದ ಮೂಲಕ ಬಾಲ ನಟನಾಗಿ ಸಿನಿಮಾ ರಂಗ ಪ್ರವೇಶಿಸಿದ ಸ್ನೇಹಿತ್, ಆನಂತರ ವಿದ್ಯಾಭ್ಯಾಸದ ಕಾರಣಕ್ಕಾಗಿ ಸಿನಿಮಾ ರಂಗದಿಂದ ದೂರವಿದ್ದಾರೆ. ಸದ್ಯ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಮತ್ತೆ ಸಿನಿಮಾ ರಂಗಕ್ಕೆ ಬರುವುದಕ್ಕಾಗಿ ತಯಾರಿ ಕೂಡ ಮಾಡಿಕೊಳ್ಳುತ್ತಿದ್ದಾರೆ. ಈ ಹೊತ್ತಿನಲ್ಲಿ ಅವರ ಮೇಲೆ ಆರೋಪಗಳು ಬರುತ್ತಿವೆ.

    ತಮ್ಮ ಮನೆಯ ಎದುರಿನ ಮಹಿಳೆ ಮತ್ತು ಆಕೆಯ ಪತಿಯ ಜೊತೆ ಗಲಾಟೆ ಮಾಡಿದರು, ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎನ್ನುವ ಕಾರಣಕ್ಕಾಗಿ ದೂರು ದಾಖಲಾಗಿದೆ. ವರ್ಷದ ಹಿಂದೆಯೇ ಇಂಥದ್ದೇ ಮತ್ತೊಂದು ಕಾರಣಕ್ಕಾಗಿಯೂ ದೂರು ದಾಖಲಾಗಿತ್ತು. ನಂತರ ದೂರುದಾರರೇ ಸ್ನೇಹಿತ್ ಪಾತ್ರವಿಲ್ಲ ಎಂದು ಹೇಳಿದ್ದರು. ಈ ಬಾರಿಯೂ ಸ್ನೇಹಿತ್ ಮೇಲೆ ಎಫ್.ಐ.ಆರ್ ದಾಖಲಾಗಿದ್ದು, ಮತ್ತೆ ಸ್ನೇಹಿತ್ ಸುದ್ದಿಯಲ್ಲಿದ್ದಾರೆ. ಇದನ್ನೂ ಓದಿ:ಐಶ್ವರ್ಯ ಪಿಸ್ಸೆ ನಂತರ ದೀಪಿಕಾ ದಾಸ್ ಅಂದ್ರೆ ನನಗಿಷ್ಟ ಎಂದ ಸೈಕ್ ನವಾಜ್

    ನಿನ್ನೆಯಷ್ಟೇ ಸೌಂದರ್ಯ ಜಗದೀಶ್ ಮತ್ತು ಪತ್ನಿ ರೇಖಾ ಅವರು ಮಾಧ್ಯಮ ಗೋಷ್ಠಿ ಕರೆದು, ಮಗನ ಬಗ್ಗೆ ಮಾತನಾಡಿದ್ದರು. ಅವನು ಆ ರೀತಿಯ ಹುಡುಗನಲ್ಲ, ಅಂತಹ ಮಕ್ಕಳನ್ನು ಪಡೆಯುವುದಕ್ಕಾಗಿ ನಾವು ಪುಣ್ಯ ಮಾಡಿದ್ದೆವು ಎಂದು ಹೇಳಿದ್ದರು. ಮಗನ ಮೇಲೆ ಯಾಕೆ ಇಂತಹ ಆರೋಪ ಮಾಡುತ್ತಿದ್ದಾರೆ ಎಂದು ಗೊತ್ತಾಗುತ್ತಿಲ್ಲ ಎಂದೂ ಹೇಳಿದ್ದರು. ಇದೀಗ ಸ್ನೇಹಿತ್ ಪರ ರಿಯಲ್ ಸ್ಟಾರ್ ಉಪೇಂದ್ರ ಕೂಡ ಬ್ಯಾಟ್ ಮಾಡಿದ್ದಾರೆ. ಸ್ನೇಹಿತ್ ನ ಒಳ್ಳೆತನವನ್ನು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ‘ಸೌಂದರ್ಯ ಜಗದೀಶ್ ಹಾಗೂ ನನ್ನ ಪರಿಚಯ, ಸ್ನೇಹ ಸುಮಾರು 25 ವರ್ಷಗಳಷ್ಟು ಹಳೆಯದು. ಅಂದಿನಿಂದ ಇಂದಿನವರೆಗೂ ನಾನು ಕಂಡಂತೆ ಜಗದೀಶ್ ತುಂಬಾ ಮೃಧು ಸ್ವಭಾವದವರು, ಸ್ನೇಹ ಜೀವಿ ಅವರ ಶ್ರೀಮತಿ ರೇಖಾ ಮತ್ತು ಮಗ ಸ್ನೇಹಿತ್ ಹಾಗೂ ಮಗಳು ಸೌಂದರ್ಯ ಕೂಡಾ ನಮ್ಮ ಕುಟುಂಬಕ್ಕೆ ಪರಿಚಯ. ಇತ್ತೀಚೆಗೆ ಸ್ನೇಹಿತ್ ಬಗ್ಗೆ ಕೇಳಿಬರುತ್ತಿರುವ ಆರೋಪಗಳನ್ನು ಕೇಳಿ ದಿಗ್ಭ್ರಮೆ ಆಯಿತು. ನಾನು ಕಂಡಂತೆ ಈತ ತುಂಬಾ ವಿನಯವಂತ, ಬೆಳೆಯುತ್ತಿರುವ ಹುಡುಗ, ಏಕೆ ಈ ರೀತಿ ಆರೋಪ ಮಾಡಿದ್ದಾರೆ ಎಂದು ನನಗೆ ತಿಳಿಯದು. ಏನಾದರೂ ಭಿನ್ನಾಭಿಪ್ರಾಯಗಳಿದ್ದರೆ ಸಮಾಧಾನದಿಂದ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಒಂದಂತೂ ಎಲ್ಲರಿಗೂ ಅನ್ವಯಿಸುವ ಸತ್ಯ. ಅಜ್ಞಾನದ ಫಲ ಅಹಂಕಾರ, ಅಹಂಕಾರದ ಫಲ ದ್ವೇಷ, ದ್ವೇಷದ ಫಲ ಸರ್ವನಾಶ ಎಂದು ಉಪೇಂದ್ರ ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • Breaking: ಕನ್ನಡ ಬಿಗ್ ಬಾಸ್ ಒಟಿಟಿ ಮನೆಗೆ ಈ ಸೆಲೆಬ್ರೆಟಿಗಳು ಪಕ್ಕಾ

    Breaking: ಕನ್ನಡ ಬಿಗ್ ಬಾಸ್ ಒಟಿಟಿ ಮನೆಗೆ ಈ ಸೆಲೆಬ್ರೆಟಿಗಳು ಪಕ್ಕಾ

    ಕಿರುತೆರೆ ಲೋಕದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಇದೀಗ ಒಟಿಟಿನಲ್ಲಿ ಪ್ರಸಾರವಾಗಲಿದೆ. ಯಾರೆಲ್ಲಾ ಬಿಗ್ ಬಾಸ್ ಒಟಿಟಿ ಸೀಸನ್ 1ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನ ನೋಡಲು ಇಡೀ ಕರ್ನಾಟಕವೇ ಕಾಯುತ್ತಿದೆ. ಹೀಗಿರುವಾಗ ಬಿಗ್ ಬಾಸ್ ಒಟಿಟಿಯಲ್ಲಿ ಈ ಬಾರಿ ಕನ್ನಡದ ಈ ಎಲ್ಲಾ ಪ್ರತಿಭೆಗಳು ಕಾಣಿಸಿಕೊಳ್ಳಲಿದ್ದಾರೆ ನೋಡಿ.

    ಬಿಗ್ ಬಾಸ್ ಶೋಗೆ ಎಲ್ಲಾ ಭಾಷೆಯಲ್ಲೂ ಅಪಾರ ಅಭಿಮಾನಿಗಳಿದ್ದಾರೆ. ಪ್ರತಿ ಸಲ ಹೊಸತನವನ್ನೇ ಹೊತ್ತು ತರುವ ಬಿಗ್ ಬಾಸ್ ಈ ಸಲ ಒಟಿಟಿನಲ್ಲಿ ಪ್ರಸಾರವಾಗಲಿದೆ. ಆಗಸ್ಟ್ 6ರಂದು ಈ ಶೋಗೆ ಅದ್ದೂರಿ ಚಾಲನೆ ಸಿಗಲಿದೆ. ಈ ಬಾರಿ ಯಾರೆಲ್ಲಾ ಸ್ಪರ್ಧಿಸಲಿದ್ದಾರೆ ಎಂಬ ಕೌತಕ ಮೂಡಿಸಿದೆ. ಯಾರೆಲ್ಲಾ ಭಾಗವಹಿಸಲಿದ್ದಾರೆ ಎಂಬ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ.

    `ಪುಟ್ಟ ಗೌರಿ ಮದುವೆ’ ಧಾರಾವಾಹಿ ಮೂಲಕ ಪುಟ್ಟಗೌರಿ ಆಗಿ ಮನಗೆದ್ದ ನಟಿ ಸಾನ್ಯ ಅಯ್ಯರ್, ಒಂದಿಷ್ಟು ಶಾರ್ಟ್ ಮೂವಿ, ಆಲ್ಬಂ ಸಾಂಗ್, ಡ್ಯಾನ್ಸ್ ರಿಯಾಲಿಟಿ ಶೋ ಜನಪ್ರಿಯಯತೆ ಗಿಟ್ಟಿಸಿಕೊಂಡಿದ್ದ ಯುವ ನಟಿ ಇದೀಗ ಬಿಗ್ ಬಾಸ್ ಒಟಿಟಿ ಮೂಲಕ ರಂಜಿಸಲಿದ್ದಾರೆ.

    ಸಮಾಜಿಕ ಕಾರ್ಯಗಳ ಮೂಲಕ ಮನೆಮಾತಾಗಿರುವ ಕೆಚ್ಚೆದೆಯ ಕನ್ನಡತಿ ಅಕ್ಕ ಅನು ಎಂದೇ ಫೇಮಸ್ ಆಗಿರುವ ಯುವ ಸಮಾಜಮುಖಿ ಕಾರ್ಯಕರ್ತೆ ಅನು ಕೂಡ ಕಿರಿತೆರೆಯ ದೊಡ್ಮನೆಯಲ್ಲಿ ನೋಡಬಹುದಾಗಿದೆ.

    ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಅದ್ಭುತ ಹಾಡುಗಾರ್ತಿಯಾಗಿ ಗುರುತಿಸಿಕೊಂಡಿರುವ ಆಶಾ ಭಟ್‌ಗೆ ಅಪಾರ ಅಭಿಮಾನಿಗಳಿದ್ದಾರೆ. ಇವರು ಸ್ಪರ್ಧಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

    ಸ್ಯಾಂಡಲ್‌ವುಡ್‌ನಲ್ಲಿ ತಮ್ಮ ಮನೋಜ್ಞ ನಟನೆಯ ಮತ್ತು ವಿಭಿನ್ನ ಸಿನಿಮಾಗಳ ಮೂಲಕ ಸೈ ಎನಿಸಿಕೊಂಡಿದ್ದ ರೇಖಾ ವೇದವ್ಯಾಸ ಮತ್ತು ತರುಣ್ ಚಂದ್ರ, ನವೀನ್ ಕೃಷ್ಣ ಕೂಡ ಶೋನಲ್ಲಿ ಸಾಥ್ ನೀಡಲಿದ್ದಾರೆ. ಇದನ್ನೂ ಓದಿ:ಮತ್ತೆ ಟಾಪ್‌ಲೆಸ್ ಅವತಾರದಲ್ಲಿ ಬಂದ ಉರ್ಫಿ ಜಾವೇದ್: ನೆಟ್ಟಿಗರಿಂದ ನಟಿಗೆ ಕ್ಲಾಸ್

    ರೀಲ್ಸ್ ಮೂಲಕ ಪಡ್ಡೆಹುಡುಗರ ಗಮನ ಸೆಳೆದಿರುವ ಸೋಷಿಯಲ್ ಮೀಡಿಯಾವ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಮತ್ತು ಭೂಮಿಕಾ ಬಸವರಾಜ್ ಕೂಡ ಬಿಗ್ ಬಾಸ್ ಒಟಿಟಿಯಲ್ಲಿ ಕಾಣಿಸಿಕೊಳ್ತಿದ್ದಾರೆ.

    ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ, ನಿರ್ದೇಶನ ಮಾಡಿ ಸೈ ಎನಿಸಿಕೊಂಡಿರುವ ರವಿ ಶ್ರೀವಾಸ್ತವ್ ಕೂಡ ಭಾಗಿಯಾಗಲಿದ್ದಾರೆ.

    ಬರ್ತಡೇ ಸಾಂಗ್ ಹೇಳುವ ಮೂಲಕ ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ ಸೌಂಡ್ ಮಾಡ್ತಿರುವ ಕಾಫಿನಾಡು ಕೂಡ ಈ ಶೋನಲ್ಲಿ ಭಾಗವಹಿಸಲಿದ್ದಾರೆ.

    ಸೋಷಿಯಲ್ ಮೀಡಿಯಾ, ಪತ್ರಿಕೋದ್ಯಮ, ಸಿನಿಮಾ, ಕಿರುತೆರೆ, ರೇಡಿಯೋ ಹೀಗೆ ಮುಂತಾದ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭೆಗಳಿಗೆ ಬಿಗ್ ಬಾಸ್ ಒಟಿಟಿನಲ್ಲಿ ಅವಕಾಶ ನೀಡಲಾಗಿದೆ. ಈ ಸ್ಪರ್ಧಿಗಳಲ್ಲಿ ಕೆಲವರು ಬಿಗ್‌ ಬಾಸ್‌ ಒಟಿಟಿ ನಂತರ ಬಿಗ್‌ ಬಾಸ್‌ ಸೀಸನ್‌ 9 ಶೋನಲ್ಲಿ ಕೂಡ ಭಾಗವಹಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಕೇಸ್ – 2 ಬಾರಿ ಅಬಾರ್ಷನ್ ಮಾಡಿಸಿದ್ದ ರೇಖಾ

    ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಕೇಸ್ – 2 ಬಾರಿ ಅಬಾರ್ಷನ್ ಮಾಡಿಸಿದ್ದ ರೇಖಾ

    ಬೆಂಗಳೂರು: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣ ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿಂತೆ ಸುಮಾ-ರೇಖಾ ನಡುವಿನ ಸಂಭಾಷಣೆಯ ಮತ್ತೊಂದು ಆಡಿಯೋ ವೈರಲ್ ಆಗುತ್ತಿದೆ.

    ಹೌದು, ಇಷ್ಟು ದಿನ ಸುಮಾ-ರೇಖಾ ಹಲವಾರು ವಿಚಾರಗಳಿಗೆ ಜಗಳ ಆಡಿದ್ದ ಆಡಿಯೋ ವೈರಲ್ ಆಗಿತ್ತು. ಆದರೆ ಇದೀಗ ರೇಖಾ ಅಬಾರ್ಷನ್ ಮಾಡಿಸಿಕೊಂಡಿರುವ ವಿಚಾರವಾಗಿ ಇಬ್ಬರು ಮಾತನಾಡಿರುವ ಆಡಿಯೋ ರಿವೀಲ್ ಆಗಿದೆ. ಇದನ್ನೂ ಓದಿ: ಅನಂತ ರಾಜು ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್- ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ ರೇಖಾ..?

    ಅನಂತ ರಾಜು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದೇ ಸತ್ಯ ಹೊರಬರುತ್ತಿದೆ. ರೇಖಾ ತಾಯಿಯಾಗಿರುವುದರ ಬಗ್ಗೆ ಸುಮಾ-ರೇಖಾ ಮಾತನಾಡಿದ್ದಾರೆ. ಆಡಿಯೋದಲ್ಲಿ ಎರಡು ಬಾರಿ ಅಬಾರ್ಷನ್ ಮಾಡಿಕೊಂಡಿರುವುದಾಗಿ ರೇಖಾ ಹೇಳಿದ್ದಾರೆ. ಇದನ್ನೂ ಓದಿ: ಚಂದ್ರಶೇಖರ ಕಂಬಾರರ ಹೆಸರಿನಲ್ಲಿ ವಂಚನೆಗೆ ಯತ್ನ: ದೂರು ದಾಖಲು

    ತಾಯಿಯಾಗಿರುವ ವಿಚಾರ ಅನಂತುಗೆ ಹೇಳಿದ್ಯಾ ಇಲ್ಲವಾ ಅಂತಾ ರೇಖಾಗೆ ಸುಮಾ ಕೇಳಿದಾಗ, ವಾಟ್ಸಪ್‍ನಲ್ಲಿ ಅನಂತುಗೆ ಹೇಳಿದ್ದೆ ಅಂತ ರೇಖಾ ಕಣ್ಣೀರು ಹಾಕಿದ್ದಾರೆ. ಅದರಲ್ಲೂ ಎರಡು ಬಾರಿ ತಾಯಿಯಾಗಿದ್ದು, ಎರಡು ಬಾರಿಯೂ ಅಬಾರ್ಷನ್ ಮಾಡಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ

    ನನಗೆ ಈಗಾಗಲೇ ಎರಡು ಮಗು ಇದೆ. ಮತ್ತೊಂದು ಮಗು ಇದ್ದರೆ ಸಾಕುವುದಕ್ಕೆ ಕಷ್ಟ ಆಗುತ್ತದೆ. ನಾಳೆ ವಿನೋದ್‍ಗೆ ಗೊತ್ತಾದರೆ ತೊಂದರೆಯಾಗುತ್ತದೆ. ನನ್ನನ್ನು ನಂಬುವುದಾದರೆ ಮಗು ತೆಗೆಸು ಅಂತ ಅನಂತರಾಜು ಅಂದಿದ್ದರು. ಹೀಗಾಗಿ ಮಗು ಅಬಾರ್ಷನ್ ಮಾಡಿಸಿದ್ದೆ. ಎರಡು ಬಾರಿ ಅಬಾರ್ಷನ್ ಮಾಡಿಸಿದ್ದು ಅನಂತುಗೆ ಗೊತ್ತಿತ್ತು ಅಂತ ರೇಖಾ, ಸುಮಾಗೆ ತಿಳಿಸಿದ್ದಾರೆ.

  • 2 ವರ್ಷ, 100 ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾ.ರೇಖಾ

    2 ವರ್ಷ, 100 ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾ.ರೇಖಾ

    ಕೋಲಾರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪಿಗೆ ಜೀವಾವಧಿ ಶಿಕ್ಷೆ, ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪಿಗೆ 10 ವರ್ಷ ಜೈಲು, 1 ಲಕ್ಷ ರೂ. ದಂಡ ಹೀಗೆ ಒಂದಲ್ಲ ಎರಡಲ್ಲ ಕೇವಲ ಎರಡು ವರ್ಷಗಳಲ್ಲಿ ಬರೋಬ್ಬರಿ 100 ಪ್ರಕರಣಗಳಲ್ಲಿ ಅತ್ಯಾಚಾರ ಆರೋಪಿಗಳಿಗೆ ಶಿಕ್ಷೆ ವಿಧಿಸಿರುವ ಹೆಗ್ಗಳಿಕೆ ಕೋಲಾರ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಸಲ್ಲುತ್ತದೆ.

    ರಾಜ್ಯದಲ್ಲಿ ಹಾಗೂ ದೇಶದಲ್ಲೇ ಅತಿ ಕಡಿಮೆ ಅವಧಿಯಲ್ಲಿ ಅತೀ ಹೆಚ್ಚು ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆ ವಿಧಿಸಿರುವ ಕೋಲಾರ 2ನೇ ಜಿಲ್ಲಾ ಸತ್ರನ್ಯಾಯಾಲಯದ ನ್ಯಾಯಾಧೀಶೆ ಬಿ.ಎಸ್.ರೇಖಾ ಅವರು ಕಳೆದ ಎರಡು ವರ್ಷಗಳಲ್ಲಿ 100 ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದಾರೆ.

    2017 ರಿಂದ 2019ರವರೆಗೆ ನೂರು ಪ್ರಕರಣಗಳಲ್ಲಿ 74 ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕಣಗಳಾದರೆ, 26 ಜಾತಿನಿಂದನೆ ಹಾಗೂ ಕೊಲೆ ಪ್ರಕರಣಗಳಾಗಿವೆ. ಈ 100 ಪ್ರಕರಣಗಳಲ್ಲಿ ನ್ಯಾಯಾಧೀಶೆ ಬಿ.ಎಸ್ ರೇಖಾರವರು ನೀಡಿರುವ ಶಿಕ್ಷೆ ಪ್ರಮಾಣಗಳನ್ನು ನೋಡೋದಾದರೆ, 3 ಪ್ರಕರಣಗಳಲ್ಲಿ ಮರಣ ದಂಡನೆ ಶಿಕ್ಷೆ, 11 ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ, 26 ಪ್ರಕರಣಗಳಲ್ಲಿ 10 ವರ್ಷ ಜೈಲು ಶಿಕ್ಷೆ ಮತ್ತು 39 ಪ್ರಕರಣಗಳಲ್ಲಿ 7 ವರ್ಷ ಜೈಲು ಶಿಕ್ಷೆ, 21 ಪ್ರಕರಣಗಳಲ್ಲಿ 5 ವರ್ಷಕ್ಕಿಂತ ಕಡಿಮೆ ಶಿಕ್ಷೆ ನೀಡಲಾಗಿದೆ ಎಂದು ಸರ್ಕಾರಿ ವಕೀಲ ಮುನಿಸ್ವಾಮಿ ಗೌಡ ಹೇಳಿದ್ದಾರೆ.

    ಇದರ ಜೊತೆಗೆ ವಿಶೇಷವಾಗಿ ಆಗಸ್ಟ್ 1 2018 ರಂದು ಮಾಲೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಿಶೇಷ ಕಾಳಜಿ ವಹಿಸಿದ ನ್ಯಾಯಾಲಯ ಕೇವಲ 45 ದಿನಗಳಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಇತಿಹಾಸ ಕೂಡ ಇದೆ. ಈ ನ್ಯಾಯಾಲಯದಲ್ಲಿ ಅತ್ಯಾಚಾರಿಗಳಿಗೆ ನಿರ್ದಾಕ್ಷಿಣ್ಯವಾಗಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರಾದ ರೇಖಾ ಅವರು ತಮ್ಮ 100ನೇ ಪ್ರಕರಣದಲ್ಲಿ ಮಂಗಳವಾರ ಶಿಕ್ಷೆ ವಿಧಿಸಿದ್ದು, ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಸಹಕರಿಸಿದ ಒಂದಿಡೀ ಕುಟುಂಬಕ್ಕೆ ಜೈಲು ಶಿಕ್ಷೆ ವಿಧಿಸಿದ್ದಾರೆ.

    ಕೋಲಾರದ ಎರಡನೇ ಜಿಲ್ಲಾಸತ್ರ ನ್ಯಾಯಾಲಯದ ತೀರ್ಪು, ಜಿಲ್ಲೆಯಲ್ಲಿ ಕಾಮುಕರಿಗೆ ಸಿಂಹಸ್ವಪ್ನವಾಗಿದ್ದು ಇಂತಹ ತೀರ್ಪುಗಳಿಂದ ಜಾಗೃತರಾಗಿರುವ ಕಾಮುಕರು ಅಪರಾಧ ಕೃತ್ಯ ಎಸಗಲು ಹೆದರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಅತ್ಯಾಚಾರ, ಕೊಲೆ ಹಾಗೂ ಜಾತಿನಿಂದನೆ ಪ್ರಕರಣಗಳು ಕ್ರಮೇಣ ಕಡಿಮೆಯಾಗಿದೆ. ನ್ಯಾಯ ದೇವತೆಗೆ ಹಾಗೂ ನ್ಯಾಯಾಧೀಶರ ತೀರ್ಪಿಗೆ ಜಿಲ್ಲಾಡಳಿತ ಕೂಡ ಶ್ಲಾಘನೆ ವ್ಯಕ್ತಪಡಿಸಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ.

  • ಬಿಗ್-ಬಿ ಫೋಟೋ ನೋಡಿ ನಿಂತ ಜಾಗ ಖಾಲಿ ಮಾಡಿದ ರೇಖಾ- ವಿಡಿಯೋ ವೈರಲ್

    ಬಿಗ್-ಬಿ ಫೋಟೋ ನೋಡಿ ನಿಂತ ಜಾಗ ಖಾಲಿ ಮಾಡಿದ ರೇಖಾ- ವಿಡಿಯೋ ವೈರಲ್

    ಮುಂಬೈ: ಬಾಲಿವುಡ್ ಹಿರಿಯ ನಟಿ ರೇಖಾ ಕಾರ್ಯಕ್ರಮವೊಂದರಲ್ಲಿ ಫೋಟೋಗೆ ಪೋಸ್ ನೀಡುವಾಗ ತನ್ನ ಹಿಂದೆ ಇದ್ದ ಬಿಗ್-ಬಿ ಅಮಿತಾಬ್ ಬಚ್ಚನ್ ಫೋಟೋ ನೋಡಿ ನಿಂತ ಜಾಗವನ್ನು ಖಾಲಿ ಮಾಡಿದ್ದಾರೆ.

    ಸೆಲೆಬ್ರಿಟಿ ಫೋಟೋಗ್ರಾಫರ್ ದಾಬೂ ರತ್ನಾನಿ ಇತ್ತೀಚೆಗೆ ಕ್ಯಾಲೆಂಡರ್ ಲಾಂಚ್ ಪಾರ್ಟಿಯನ್ನು ಆಯೋಜಿಸಿದ್ದರು. ಈ ಪಾರ್ಟಿಯಲ್ಲಿ ರೇಖಾ ಅವರು ಕಾಂಚಿಪುರಂ ರೇಷ್ಮೆ ಸೀರೆ ಬದಲು ಕಪ್ಪು ಬಣ್ಣದ ಔಟ್‍ಫಿಟ್‍ನಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

    ರೇಖಾ ಅವರು ಕಾರ್ಯಕ್ರಮಕ್ಕೆ ಬಂದು ಅಲ್ಲಿ ಫೋಟೋಗ್ರಾಫರ್ ಗಳಿಗೆ ಪೋಸ್ ನೀಡುತ್ತಿದ್ದರು. ಫೋಟೋಗೆ ಪೋಸ್ ನೀಡುವಾಗ ರೇಖಾ ತಮ್ಮ ಹಿಂದೆ ಇದ್ದ ಗೋಡೆಯನ್ನು ತಿರುಗಿನೋಡಿದ್ದಾರೆ. ಈ ವೇಳೆ ಅಲ್ಲಿ ಅಮಿತಾಬ್ ಬಚ್ಚನ್ ಫೋಟೋ ಇರುವುದನ್ನು ನೋಡಿ ಅಲ್ಲಿಂದ ಜಾಗ ಖಾಲಿ ಮಾಡಿ ಬೇರೆ ಕಡೆ ನಿಂತಿದ್ದಾರೆ.

    ರೇಖಾ ಅವರು ಬಿಗ್-ಬಿ ಫೋಟೋ ನೋಡಿ ಓಡಿ ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಕಾರ್ಯಾಕ್ರಮದಲ್ಲಿ ನಟ ಟೈಗರ್ ಶ್ರಾಫ್, ಕಾರ್ತಿಕ್ ಆರ್ಯನ್, ನಟಿಯರಾದ ವಿದ್ಯಾ ಬಾಲನ್, ಟ್ವಿಂಕಲ್ ಖನ್ನಾ, ಕೃತಿ ಸನೋನ್, ಕೈರಾ ಅಡ್ವಾನಿ, ಸನ್ನಿ ಲಿಯೋನ್ ಹಾಗೂ ಅಂಕಿತಾ ಲೋಕಂಡೆ ಹಲವರು ಭಾಗಿಯಾಗಿದ್ದರು.

    https://twitter.com/Ranveerianworld/status/1090231729720180736?ref_src=twsrc%5Etfw%7Ctwcamp%5Etweetembed%7Ctwterm%5E1090231729720180736&ref_url=https%3A%2F%2Fzeenews.india.com%2Fpeople%2Frekha-accidentally-poses-in-front-of-amitabh-bachchans-photo-and-her-reaction-is-hilarious-watch-2175357.html

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv