Tag: relations

  • ನವಜೋಡಿ ಸೇರಿ ಐವರು ಸಂಬಂಧಿಗಳನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ

    ನವಜೋಡಿ ಸೇರಿ ಐವರು ಸಂಬಂಧಿಗಳನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ

    ಲಕ್ನೋ: ಕೊಡಲಿ (Axe) ಬಳಸಿ ವ್ಯಕ್ತಿಯೋರ್ವ ತನ್ನ ಐವರು ಸಂಬಂಧಿಗಳನ್ನು ಕೊಂದು ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ (Uttar Prdesh) ಮೈನ್‌ಪುರಿ (Mainpuri) ಜಿಲ್ಲೆಯಲ್ಲಿ ನಡೆದಿದೆ.

    ಗೋಕುಲಪುರ (Gokulpur) ಅರ್ಸರಾ ಹಳ್ಳಿಯಲ್ಲಿ ಮುಂಜಾನೆ ಸುಮಾರು 4:30ಯಿಂದ 5 ಗಂಟೆಯ ಒಳಗಾಗಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶಿವವೀರ್ ಯಾದವ್ (30) ಎಂಬಾತ ತನ್ನ ಇಬ್ಬರು ತಮ್ಮಂದಿರಾದ ಬುಲ್ಲನ್ ಯಾದವ್ (25) ಮತ್ತು ಸೋನು ಯಾದವ್ (21) ಎಂಬವರನ್ನು ಕೊಡಲಿಯಿಂದ ಹತ್ಯೆ ಮಾಡಿದ್ದಾನೆ. ಅಲ್ಲದೇ ಸೋನು ಯಾದವ್‌ನ ಹೆಂಡತಿ ಸೋನಿಯನ್ನೂ (20) ಕೊಲೆ ಮಾಡಿದ್ದು, ಬಳಿಕ ಬಾಮೈದುನ ಸೌರಭ್ (23) ಮತ್ತು ಆತನ ಸ್ನೇಹಿತ ದೀಪಕ್ (20) ಎಂಬವರನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ವೈದ್ಯ ಲೋಕಕ್ಕೇ ಶಾಕ್ – 36 ವರ್ಷಗಳ ಕಾಲ ಪ್ರೆಗ್ನೆಂಟ್ ಆಗಿದ್ದ ಈ ವ್ಯಕ್ತಿ!

    ಇಷ್ಟು ಮಾತ್ರವಲ್ಲದೇ ಆರೋಪಿ ತನ್ನ ಹೆಂಡತಿ ಡಾಲಿ (24) ಮತ್ತು ಭರ್ತನ ಜಿಲ್ಲೆಯ ನಾಗ್ಲ ರಾಮ್‌ಲಾಲ್ ಪೊಲೀಸ್ ಠಾಣೆಯ ಇಟವಾದಲ್ಲಿ ವಾಸಿಸುತ್ತಿದ್ದ ತಾಯಿಯ ಸಂಬಂಧಿಯಾದ ಸುಷ್ಮಾ (35) ಎಂಬವರನ್ನು ಗಾಯಗೊಳಿಸಿದ್ದಾನೆ. ಬಳಿಕ ದೇಶೀಯವಾಗಿ ತಯಾರಿಸಿದ ಪಿಸ್ತೂಲ್ (Pistol) ಒಂದರ ಸಹಾಯದಿಂದ ತನ್ನನ್ನು ತಾನು ಶೂಟ್ (Shoot) ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಕೋವಿನ್ ಪೋರ್ಟಲ್ ಡೇಟಾ ಲೀಕ್ ಪ್ರಕರಣ – ಅಪ್ರಾಪ್ತ ಸೇರಿ ಇಬ್ಬರ ಬಂಧನ

    ಗೋಕುಲಪುರ ಹಳ್ಳಿಯಲ್ಲಿ ಘಟನೆ ನಡೆದಿದ್ದು, ಆರೋಪಿಯ ಸಹೋದರ ಸೋನು ಯಾದವ್ ಮತ್ತು ಆತನ ಹೆಂಡತಿ ಸೋನಿ ಘಟನೆಯ ಹಿಂದಿನ ದಿನವಷ್ಟೇ ಮದುವೆಯಾಗಿದ್ದರು. ವಿವಾಹದ (Marriage) ನಂತರ ನವಜೋಡಿ ತಮ್ಮ ಮನೆಗೆ ಬಂದ ಬಳಿಕ ಹತ್ಯೆ ಮಾಡಲಾಗಿದೆ. ನವಜೋಡಿಗಳ ಕೊಲೆಯ ಬಳಿಕ ಬಾಮೈದುನ ಮತ್ತು ಆತನ ಸ್ನೇಹಿತನನ್ನು ಹತ್ಯೆ ಮಾಡಲಾಗಿದೆ ಎಂದು ಮೈನ್‌ಪುರಿ ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಲಿಂಗ ಬದಲಾವಣೆ ನೆಪದಲ್ಲಿ ತಂತ್ರಿಯಿಂದ ಸಲಿಂಗಕಾಮಿ ಮಹಿಳೆ ಹತ್ಯೆ

    ಆರೋಪಿಯ ಈ ಕೃತ್ಯಕ್ಕೆ ಯಾವುದೇ ನಿಖರ ಕಾರಣಗಳು ತಿಳಿದುಬಂದಿಲ್ಲ. ಘಟನೆಯಲ್ಲಿ ಹತ್ಯೆಯಾದ ಸಂಬಂಧಿಗಳ ಮೃತದೇಹವನ್ನು ಮೈನ್‌ಪುರಿ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆಂದು ಕಳುಹಿಸಲಾಗಿದೆ. ಅಲ್ಲದೇ ಘಟನೆಯಲ್ಲಿ ಗಾಯಗೊಂಡ ಆರೋಪಿಯ ಹೆಂಡತಿ ಡಾಲಿ ಮತ್ತು ಸಂಬಂಧಿ ಸುಷ್ಮಾ ಅವರು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅನಾಥ ಬಾಲಕಿ ಮೇಲೆ ಆಶ್ರಮದಲ್ಲೇ ತಿಂಗಳುಗಳಿಂದ ಅತ್ಯಾಚಾರ – ಆಂಧ್ರದ ಸ್ವಾಮೀಜಿ ಅರೆಸ್ಟ್

  • ಆರೋಗ್ಯ ಸಿಬ್ಬಂದಿ ಕರೆದರೂ ಸೋಂಕಿತರ ಶವ ಸಂಸ್ಕಾರಕ್ಕೆ ಬಾರದ ಸಂಬಂಧಿಕರು

    ಆರೋಗ್ಯ ಸಿಬ್ಬಂದಿ ಕರೆದರೂ ಸೋಂಕಿತರ ಶವ ಸಂಸ್ಕಾರಕ್ಕೆ ಬಾರದ ಸಂಬಂಧಿಕರು

    – ಇಬ್ಬರು ಮೃತರಿಗೆ ಆರೋಗ್ಯ ಸಿಬ್ಬಂದಿಯಿಂದಲೇ ಅಂತ್ಯ ಸಂಸ್ಕಾರ

    ಹಾವೇರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಆಗಮಿಸುವಂತೆ ಪಿಪಿಇ ಕಿಟ್ ತಯಾರು ಮಾಡಿಕೊಂಡು ಆರೋಗ್ಯ ಇಲಾಖೆ ಸಿಬ್ಬಂದಿ ಕಾದು ಕುಳಿತರೂ ಯಾರು ಬಂದಿಲ್ಲ. ಹೀಗಾಗಿ ಆರೋಗ್ಯ ಇಲಾಖೆಯ ಸಿಬ್ಬದಿಯೇ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

    ಮಂಗಳವಾರ ಬೆಳಗ್ಗೆ 6-30ಕ್ಕೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ಜಿಲ್ಲೆಯ ಶಿಗ್ಗಾವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿ 75 ವರ್ಷದ ವೃದ್ಧೆ ಮತ್ತು ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ನಿವಾಸಿ 60 ವರ್ಷದ ವೃದ್ಧೆಯರ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಯಿತು. ಹೆತ್ತ ಮಕ್ಕಳು, ಸಂಬಂಧಿಕರನ್ನು ಕರೆದರೂ, ಬಾರದ ಹಿನ್ನೆಲೆ ಆರೋಗ್ಯ ಇಲಾಖೆಯ ಹಾಗೂ ಜಿಲ್ಲಾಡಳಿತ ಸಿಬ್ಬಂದಿಯೇ ಅಂತ್ಯಕ್ರಿಯೆ ನಡೆಸಿದರು.

    ಇಬ್ಬರು ಮೃತರ ಮಕ್ಕಳಿಗೆ ಹಾಗೂ ಸಂಬಂಧಿಕರಿಗೆ ಬೆಳಗ್ಗೆಯೇ ಜಿಲ್ಲಾಸ್ಪತ್ರೆ ವೈದ್ಯರು ಮಾಹಿತಿ ನೀಡಿ, ಮೃತರ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಿಕೊಳ್ಳಿ, ಸಾಧ್ಯವಾಗದಿದ್ದರೆ ಶವ ಸಂಸ್ಕಾರದಲ್ಲಾದರೂ ಭಾಗವಹಿಸಿ ಎಂದು ತಿಳಿಸಿದ್ದರು. ಆದರೆ ಯಾವ ಸಂಬಂಧಿಕರೂ ಆಸ್ಪತ್ರೆ ಬಳಿ ಸುಳಿಯಲಿಲ್ಲ.

    ಮೃತರ ಸಂಬಂಧಿಕರ ಐದು ಜನರಿಗೆ ಪಿಪಿಇ ಕಿಟ್ ಸೇರಿದಂತೆ ರಕ್ಷಣಾ ಸಾಮಗ್ರಿ ಒದಗಿಸುವುದಾಗಿ ಜಿಲ್ಲಾಡಳಿತ ಹಾಗೂ ಆಸ್ಪತ್ರೆಯ ಸಿಬ್ಬಂದಿ ಭರವಸೆ ನೀಡಿದ್ದರು. ಆದರೂ ಯಾರೂ ಅಂತ್ಯ ಕ್ರಿಯೆಗೆ ಬಾರದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಇಬ್ಬರು ಮೃತರ ಅಂತ್ಯಕ್ರಿಯೆ ನಡೆಸಿದರು. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗಿತ್ತಿವೆ. ಈ ವರೆಗೆ 118 ಪ್ರಕರಣಗಳು ಧೃಡಪಟ್ಟಿವೆ.

  • ವಿಡಿಯೋ: ನಡುರಸ್ತೆಯಲ್ಲೇ ಮಹಿಳೆಗೆ 10ಕ್ಕೂ ಹೆಚ್ಚು ಮಂದಿಯಿಂದ ಥಳಿತ!

    ವಿಡಿಯೋ: ನಡುರಸ್ತೆಯಲ್ಲೇ ಮಹಿಳೆಗೆ 10ಕ್ಕೂ ಹೆಚ್ಚು ಮಂದಿಯಿಂದ ಥಳಿತ!

    – ಥಳಿತದಿಂದ ಕುಸಿದ ಮಹಿಳೆಯ ಕೂದಲನ್ನೇ ಹಿಡಿದು ಎಳೆದಾಡಿದ್ರು

    ಬೆಳಗಾವಿ: ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ಸಂಬಂಧಿಕರು ಚಿಕ್ಕೋಡಿ ಪಟ್ಟಣದ ಬಸವೇಶ್ವರ ಸರ್ಕಲ್ ನಲ್ಲಿ ಮಾರಾಮಾರಿ ನಡೆಸಿದ ಘಟನೆ ಇಂದು ನಡೆದಿದೆ.

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ನಗರ ಮಂಗಳ ನಾಯಕ್ ಎಂಬವರೇ ಸಂಬಂಧಿಕರಿಂದ ಥಳಿತಕ್ಕೊಳಕ್ಕಾದ ಮಹಿಳೆ.

    ಏನಿದು ಪ್ರಕರಣ?: ಮಂಗಳ ನಾಯಕ್ ತಮ್ಮ ಅಕ್ಕನ ಮಗ ಭರತ್ ಜೊತೆ ಚಿಕ್ಕೋಡಿ ಪಟ್ಟಣದ ತಹಶೀಲ್ದಾರ್ ಕೋರ್ಟ್ ನಲ್ಲಿ ಪ್ರಕರಣವೊಂದರ ವಿಚಾರಣೆಗೆ ಬಂದಿದ್ದು, ವಾಪಾಸ್ಸು ಮನೆಗೆ ಹೋಗುತ್ತಿದ್ದರು. ಈ ವೇಳೆ 10ಕ್ಕೂ ಹೆಚ್ಚು ಜನರ ತಂಡದಿಂದ ಮಂಗಳ ಮತ್ತು ಭರತ ಮೇಲೆ ಚಿಕ್ಕೋಡಿ ಪಟ್ಟಣದ ಬಸವೇಶ್ವರ ಸರ್ಕಲ್ ನಲ್ಲಿ ಹಲ್ಲೆ ನಡೆದಿದೆ. ಅಲ್ಲದೇ ಸಂಬಂಧಿಕರು ಮಂಗಳ ನಾಯಕ ಅವರ ಕೂದಲನ್ನು ಹಿಡಿದು ಎಳೆದಾಡಿದ್ದಾರೆ. ಬಳಿಕ ಚಪ್ಪಲಿಯಿಂದ ಹೊಡೆದಾಡಿದ್ದಾರೆ.

    ಮಾಹಿತಿ ಪಡೆದ ಪೊಲಿಸರು ಸ್ಥಳಕ್ಕೆ ದೌಡಾಯಿಸುತ್ತಿದ್ದಂತೆಯೇ ಹಲ್ಲೆ ಮಾಡಿದ ತಂಡ ಸ್ಥಳದಿಂದ ಕಾಲ್ಕಿತ್ತಿದೆ. ಹಲ್ಲೆ ನಡೆಸಿದವರು ಕೂಡ ನಿಪ್ಪಾಣಿ ನಗರದವರು ಎಂದು ಹೇಳಲಾಗುತ್ತಿದೆ. ಹೊಡೆದಾಟದ ವೇಳೆ ಮೂರ್ಛೆ ಹೋಗಿದ್ದ ಮಂಗಳಗೆ ಸ್ಥಳೀಯರು ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    https://www.youtube.com/watch?v=vJSPrfa-Lyk