Tag: Release Date

  • ಶೈನ್ ಶೆಟ್ಟಿಯ ಜಸ್ಟ್ ಮ್ಯಾರೀಡ್‌ಗೆ ಡೇಟ್ ಫಿಕ್ಸ್

    ಶೈನ್ ಶೆಟ್ಟಿಯ ಜಸ್ಟ್ ಮ್ಯಾರೀಡ್‌ಗೆ ಡೇಟ್ ಫಿಕ್ಸ್

    ಕನ್ನಡದ ಸೂಪರ್ ಹಿಟ್ ಚಿತ್ರಗಳ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್.ಬಾಬಿ ಅವರು abbs studios ಲಾಂಛನದಲ್ಲಿ “ಜಸ್ಟ್ ಮಾರೀಡ್” ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸಿ.ಆರ್ ಬಾಬಿ ಅವರೆ ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದ್ದು, ಆಗಸ್ಟ್ 22ರಂದು ಬಹು ನಿರೀಕ್ಷಿತ ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

    ಈಗಾಗಲೇ ಟೀಸರ್, ಪೋಸ್ಟರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರವನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.ಇದನ್ನೂ ಓದಿ: ಕರ್ಮ ಯಾರ ಮನೆ ಬಾಗಿಲನ್ನು ಬಿಡಲ್ಲ, ನಂದೇನಾದ್ರೂ ತಪ್ಪಿದ್ರೆ ದೇವ್ರು ನೋಡಿಕೊಳ್ಳಲಿ – ರಕ್ಷಕ್ ಬುಲೆಟ್

    ಪ್ರೇಮ ಕಥೆಯೊಂದಿಗೆ, ಕೌಟುಂಬಿಕ ಕಥಾಹಂದರವನ್ನೂ ಹೊಂದಿರುವ ಈ ಚಿತ್ರದ ನಾಯಕನಾಗಿ “ಬಿಗ್ ಬಾಸ್” ಖ್ಯಾತಿಯ ಶೈನ್ ಶೆಟ್ಟಿ ಹಾಗೂ ನಾಯಕಿಯಾಗಿ ಅಂಕಿತ ಅಮರ್ ಅಭಿನಯಿಸಿದ್ದಾರೆ. ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ, ಅನಿಲ್, ವೇದಿಕಾ ಕಾರ್ಕಳ್ ಮುಂತಾದ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

    ಆರು ಸುಮಧುರ ಹಾಡುಗಳಿರುವ “ಜಸ್ಟ್ ಮ್ಯಾರೀಡ್” ಗೆ ಅಜನೀಶ್ ಲೋಕನಾಥ್ ಅವರೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿ.ಆರ್ ಬಾಬಿ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಅಡಿಷನಲ್ ಸ್ಕ್ರೀನ್ ಪ್ಲೇ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು.

    ಪಿ ಜಿ ಛಾಯಾಗ್ರಹಣ, ಶ್ರೀಕಾಂತ್ ಮತ್ತು ಪ್ರತೀಕ್ ಶೆಟ್ಟಿ ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ “ಜಸ್ಟ್ ಮ್ಯಾರೀಡ್” ಚಿತ್ರದ ಹಾಡುಗಳನ್ನು ಕೆ.ಕಲ್ಯಾಣ್, ಡಾ.ವಿ.ನಾಗೇಂದ್ರಪ್ರಸಾದ್, ಪ್ರಮೋದ್ ಮರವಂತೆ, ಧನಂಜಯ್ ರಂಜನ್ ಮತ್ತು ಶಶಿ ಕಾವೂರ್ ಬರೆದಿದ್ದಾರೆ.ಇದನ್ನೂ ಓದಿ: ಏಯ್‌.. ಗೂಂಡಾಗಿರಿ ಬಿಟ್ಟುಬಿಡಿ, ಬಾಸಿಸಂ ನಡೆಯಲ್ಲ – ದರ್ಶನ್‌ ಫ್ಯಾನ್ಸ್‌ಗೆ ಒಳ್ಳೆ ಹುಡ್ಗ ಪ್ರಥಮ್‌ ವಾರ್ನಿಂಗ್‌

  • ‘ಗೌರಿ’ ರಿಲೀಸ್ ಡೇಟ್ ಅನೌನ್ಸ್: ವಿಶೇಷ ದಿನದಂದು ತೆರೆಗೆ ಬರುತ್ತಿದೆ ಸಿನಿಮಾ

    ‘ಗೌರಿ’ ರಿಲೀಸ್ ಡೇಟ್ ಅನೌನ್ಸ್: ವಿಶೇಷ ದಿನದಂದು ತೆರೆಗೆ ಬರುತ್ತಿದೆ ಸಿನಿಮಾ

    ಕೊನೆಗೂ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ ಗೌರಿ.  ಸ್ವಾತಂತ್ರ್ಯಾ ದಿನಾಚರಣೆಗೆ ತೆರೆಗೆ ಬರುತ್ತಿದೆ ಸಮರ್ಜಿತ್ ಲಂಕೇಶ್ ಮೊದಲ ಸಿನಿಮಾ. ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಇವಾಗಲೇ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂದು ಚಿತ್ರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಅದರೀಗ ಆ ಕುತುಹಲಕ್ಕೆ ತೆರೆ ಬಿದ್ದಿದೆ. ಇಂದ್ರಜಿತ್ ಲಂಕೇಶ್ ನಿರ್ದೇಶನದ ಅವರ ಪುತ್ರ ಸಮರ್ಜಿತ್ ಮತ್ತು ನಟಿ ಸಾನಿಯಾ ಅಭಿನಯದ ಮೊದಲ ಸಿನಿಮಾವಿದು. ಇಂದಿ ಸಿನಿಮಾ ತಂಡ  ಮಾಧ್ಯಮದ ಮುಂದೆ ಹಾಜರಾಗುವ ಮೂಲಕ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಗೌರಿ ಸಿನಿಮಾ ವಿಶೇಷ ದಿನದಂದು ತೆರೆಗೆ ಬರಲಿದೆ ಎಂದು ಹೇಳಿದರು.

    ಹೌದು ‘ಗೌರಿ’ (Gowri) ಸಿನಿಮಾ ಆಗಸ್ಟ್ 15 ಸ್ವಾತಂತ್ರ್ಯಾ ದಿನಾಚರಣೆಗೆ ಅದ್ದೂರಿಯಾಗಿ ರಿಲೀಸ್ ಆಗುತ್ತಿದೆ. ಗೌರಿ ತಂಡ ಇಂದು ಕಾಲೇಜಿನಲ್ಲಿ ಕಾರ್ಯಕ್ರಮ ಮಾಡುವ‌ ಮೂಲಕ ಅದ್ದೂರಿಯಾಗಿ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಬೆಂಗಳೂರಿನ MES ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿನಿಮಾತಂಡ ‘ಗೌರಿ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಕಾಲೇಜಿನ ವಿದ್ಯಾರ್ಥಿಗಳ ಜೊತೆ ಕುಣಿದು ಕುಪ್ಪಳಿಸಿದ್ದ ಸಿನಿಮಾ ತಂಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್ ‘ಕನ್ನಡದ ಯುವ ಪ್ರತಿಭೆಗಳನ್ನು ಬೆಳಸಿ. ಆಗಸ್ಟ್ 15 ಒಳ್ಳೆಯ ದಿನ ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಕ್ಕೆ ಕರೆತರುವ ಪ್ರಯತ್ನ ಇದು. ಎಲ್ಲಾ ಸಿನಿಮಾಗಳು ಕನ್ನಡ ಸಿನಿಮಾಗಳೇ ಪ್ರೋತ್ಸಾಹಿಸಬೇಕು’ಎಂದರು. ಕನಸು ನನಸಾದ ಸಮಯಚಿದು. ನನ್ನ ಮೊದಲ ಸಿನಿಮಾವನ್ನು ಎಲ್ಲರೂ ನೋಡಿ ಎಂದರು.

    ಈಗಾಗಲೇ ಸಿನಿಮಾದಿಂದ ವೈರಲ್ ಆಗಿರುವ ‘ಟೈಮ್ ಬರುತ್ತೆ…’ ಮತ್ತು ಧೂಳ್ ಎಬ್ಬಿಸಾವ…ಹಾಡಿಗೆ ವಿದ್ಯಾರ್ಥಿಗಳ ಜೊತೆ ಸಮರ್ಥಿಜ್ ಲಂಕೇಶ್ ಮತ್ತು ನಾಯಕಿ ಸಾನ್ಯಾ ಅಯ್ಯರ್ ಡಾನ್ಸ್ ಮಾಡಿ ಸಂಭ್ರಮಿಸಿದರು.  ನಿಮ್ಮ ತಂಡದ ಖುಷಿಗೆ ಮತ್ತಷ್ಟು ಜೊಷ್ ತುಂಬಿದರು ವಿದ್ಯಾರ್ಥಿಗಳು.

  • ‘ಸಲಾರ್’ ರಿಲೀಸ್ ಯಾವಾಗ? ಗೊಂದಲದಲ್ಲಿ ಪ್ರಭಾಸ್ ಫ್ಯಾನ್ಸ್

    ‘ಸಲಾರ್’ ರಿಲೀಸ್ ಯಾವಾಗ? ಗೊಂದಲದಲ್ಲಿ ಪ್ರಭಾಸ್ ಫ್ಯಾನ್ಸ್

    ಪ್ರಭಾಸ್ (Prabhas) ಮತ್ತು ಪ್ರಶಾಂತ್ ನೀಲ್ (Prashant Neel) ಕಾಂಬಿನೇಷನ್ ನ ‘ಸಲಾರ್’ (Salaar) ಸಿನಿಮಾ ಸೆಪ್ಟೆಂಬರ್ 28ರಂದು ರಿಲೀಸ್ ಆಗಲಿದೆ ಎಂದು ಸ್ವತಃ ಚಿತ್ರತಂಡವೇ ಹೇಳಿಕೊಂಡಿತ್ತು. ಬಿಡುಗಡೆಯ ದಿನಾಂಕವನ್ನು (Release Date) ನಿಗದಿ ಮಾಡಿಕೊಂಡು ಕೆಲಸ ಆರಂಭಿಸಿತ್ತು. ಆದರೆ, ಇದೀಗ ಬಿಡುಗಡೆ ಕುರಿತು ನಾನಾ ಸುದ್ದಿಗಳೂ ಹೊರ ಬೀಳುತ್ತಿವೆ. ಅಂದುಕೊಂಡ ದಿನಾಂಕದಂದು ಸಲಾರ್ ರಿಲೀಸ್ ಆಗುತ್ತಿಲ್ಲ ಎನ್ನುವ ಮಾತುಗಳು ಹರಿದಾಡುತ್ತಿವೆ.

    ಪ್ರಭಾಸ್ ಅನಾರೋಗ್ಯದ ಕಾರಣದಿಂದಾಗಿ ಶೂಟಿಂಗ್ ವಿಳಂಬವಾಗಿದೆ ಎಂದು ಹೇಳಲಾಗುತ್ತಿದ್ದು, ನಿಗದಿತ ಹಂತಗಳಲ್ಲಿ ಚಿತ್ರೀಕರಣ ಆಗಿಲ್ಲವಂತೆ. ಹಾಗಾಗಿ ಅಂದುಕೊಂಡ ದಿನಾಂಕದಂದು ಚಿತ್ರ ಬಿಡುಗಡೆ ಆಗುತ್ತಿಲ್ಲ ಎನ್ನುವುದು ಒಂದು ವಾದ. ಬಾಲಿವುಡ್ ನ ಜವಾನ್ ಸಿನಿಮಾ ಸೆಪ್ಟೆಂಬರ್ 7 ರಂದು ಜಗತ್ತಿನಾದ್ಯಂತ ರಿಲೀಸ್ ಆಗುತ್ತಿರುವುದರಿಂದ ಮತ್ತು ಆ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿರುವುದರಿಂದ ಸಲಾರ್ ಚಿತ್ರದ ದಿನಾಂಕವನ್ನು ಮುಂದೂಡಲಾಗಿದೆ ಎನ್ನುವುದು ಮತ್ತೊಂದು ವಾದ.  ಇದನ್ನೂ ಓದಿ:ನಟ ವಿಜಯ ರಾಘವೇಂದ್ರ ಮನೆಗೆ ಸುದೀಪ್ ದಂಪತಿ ಭೇಟಿ

    ಸಲಾರ್ ಬಿಡುಗಡೆಯ ದಿನಾಂಕದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಪ್ರಭಾಸ್ ಅಭಿಮಾನಿಗಳು ಈ ಕುರಿತಂತೆ ಗೊಂದಲದಲ್ಲಿದ್ದಾರೆ. ಆದರೂ, ಈವರೆಗೂ ಚಿತ್ರತಂಡ ಇದರ ಕುರಿತು ಯಾವುದೇ ಪ್ರತಿಕ್ರಿಯೆನ್ನು ನೀಡಿಲ್ಲ. ಪ್ರತಿಕ್ರಿಯೆ ನೀಡದೇ ಇರುವ ಕಾರಣಕ್ಕಾಗಿ ಬಹುಶಃ ದಿನಾಂಕ ಮುಂದೆ ಹೋಗಿರಬಹುದು ಎಂದು ಅಂದಾಜಿಸಲಾಗುತ್ತಿದೆ.

     

    ಸಲಾರ್ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಕೆಜಿಎಫ್ ಸಿನಿಮಾ ಯಶಸ್ಸಿನ ನಂತರ ಪ್ರಶಾಂತ್ ನೀಲ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಸಲಾರ್ ಕೂಡ ಮತ್ತೊಂದು ಹಂತದ ಚಿತ್ರವೆಂದು ಬಣ್ಣಿಸಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಕ್ಷಿತ್ ಶೆಟ್ಟಿ  ‘777 ಚಾರ್ಲಿ’ ಸಿನಿಮಾ ಏನಾಯ್ತು? ಗುಡ್ ನ್ಯೂಸ್ ಕೊಡುತ್ತಂತೆ ಚಿತ್ರತಂಡ

    ರಕ್ಷಿತ್ ಶೆಟ್ಟಿ ‘777 ಚಾರ್ಲಿ’ ಸಿನಿಮಾ ಏನಾಯ್ತು? ಗುಡ್ ನ್ಯೂಸ್ ಕೊಡುತ್ತಂತೆ ಚಿತ್ರತಂಡ

    ಅಂದುಕೊಂಡಂತೆ ಎಲ್ಲವೂ ನಡೆದಿದ್ದರೆ ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ಥಿಯೇಟರ್ ಗೆ ಬಂದು, ಅದರ ಫಲಿತಾಂಶ ಇಷ್ಟೊತ್ತಿಗೆ ಹೊರ ಬಿದ್ದಿರುತ್ತಿತ್ತು. ಕೊರೊನಾ ಕಾರಣದಿಂದಾಗಿ ಬಿಡುಗಡೆ ದಿನಾಂಕ ಘೋಷಣೆ ಮುಂದೂಡುತ್ತಲೇ ಸಾಗಿತು. ಶುರುವಿನಿಂದ ಈವರೆಗೂ ಒಂದಿಲ್ಲೊಂದು ಬದಲಾವಣೆ ಕಾಣುತ್ತಲೇ ಬಂದಿರುವ ಈ ಸಿನಿಮಾ, ಬಿಡುಗಡೆ ವಿಷಯದಲ್ಲೂ ಅದನ್ನೇ ಪಾಲಿಸಿಕೊಂಡು ಬಂತು. ಇದೀಗ ಸಿನಿಮಾ ರಿಲೀಸ್ ಆಗುವುದು ಪಕ್ಕಾ ಎನ್ನುವ ಮಾಹಿತಿ ಚಿತ್ರತಂಡದಿಂದ ಬಂದಿದೆ. ಚಾರ್ಲಿ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವುದನ್ನು ಸದ್ಯದಲ್ಲೇ ತಿಳಿಸುತ್ತಾರಂತೆ ನಿರ್ದೇಶಕ ಕಿರಣ್ ರಾಜ್. ಇದನ್ನೂ ಓದಿ : ಜೊತೆ ಜೊತೆಯಲಿ ಅನಿರುದ್ಧಅವರ ಮೊದಲ ಪತ್ನಿ ನಟಿ ಸೋನು ಗೌಡ

    ಮಾ.17ಕ್ಕೆ ಪುನೀತ್ ಅವರ ಹುಟ್ಟು ಹಬ್ಬ. ಅಂದೇ ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸುವುದಾಗಿ ಹೇಳಿದ್ದಾರೆ ನಿರ್ದೇಶಕರು. ಕನ್ನಡವಷ್ಟೇ ಅಲ್ಲದೇ ಹಿಂದಿಯಲ್ಲೂ ಈ ಸಿನಿಮಾ ರೆಡಿಯಾಗಿದ್ದು, ಏಕಕಾಲಕ್ಕೆ ಹಲವು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಇದನ್ನೂ ಓದಿ : ದೂರದರ್ಶನದಲ್ಲಿ ಸಿಗ್ತಾರೆ ದಿಯಾ ಹೀರೋ

    ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆ ಆಗುವ ಸಿನಿಮಾದಲ್ಲಿ ನಾಯಿ ಮತ್ತು ಮನುಷ್ಯನ ಸಂಬಂಧವನ್ನು ಹೇಳುವ ಪ್ರಯತ್ನ ಮಾಡಲಾಗಿದೆಯಂತೆ. ಹಾಗಾಗಿ ಮಕ್ಕಳಿಂದ ದೊಡ್ಡವರ ತನಕ ಈ ಸಿನಿಮಾವನ್ನು ವೀಕ್ಷಿಸಬಹುದಂತೆ.  ದಿನಾಂಕ ಘೋಷಣೆ ಆದ ತಕ್ಷಣವೇ, ಪೋಸ್ಟರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡುವ ಪ್ಲ್ಯಾನ್ ಮಾಡಿಕೊಂಡಿದೆ ಚಿತ್ರತಂಡ.

  • ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಬಿಡುಗಡೆ ಮುಂದೂಡಿಕೆ!

    ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಬಿಡುಗಡೆ ಮುಂದೂಡಿಕೆ!

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಭಾರೀ ನಿರೀಕ್ಷೆಯನ್ನು ಹುಟ್ಟಿಸಿರುವ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಿದೆ. ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಕಾರಣದಿಂದ ಚಿತ್ರತಂಡ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡುವುದಾಗಿ ಘೋಷಿಸಿದೆ.

    ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಸಿನಿಮಾ ಫೆಬ್ರವರಿ 24ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಭೀತಿಯಿಂದಾಗಿ ಸಿನಿಮಾ ಸೇರಿದಂತೆ ಎಲ್ಲಾ ವಾಣಿಜ್ಯ ಉದ್ಯಮಗಳು ಆತಂಕಕ್ಕೆ ಒಳಗಾಗಿವೆ. ಹೀಗಾಗಿ ಸಿನಿಮಾವನ್ನು ಮುಂದೂಡುವುದಾಗಿ ಚಿತ್ರ ತಂಡ ಘೋಷಿಸಿದೆ. ಇದನ್ನೂ ಓದಿ: ಚಿರು ಸ್ನೇಹಿತನ ಮಗನಿಗೆ ಹೇರ್ ಸ್ಟೈಲಿಸ್ಟ್ ಆದ ರಾಯನ್- ಫೋಟೋ ವೈರಲ್

    ‘ನಮ್ಮ ಕನಸು ಫೆಬ್ರವರಿ 24ರಂದು ನಿಮ್ಮ ಮುಂದೆ ತರಲು ನಾವು ಉತ್ಸುಕರಾಗಿದ್ದರೂ, ಪ್ರಸ್ತುತ ಕೋವಿಡ್ ಪರಿಸ್ಥಿತಿ ಹಾಗೂ ಅದಕ್ಕೆ ಸಂಬಂಧಿಸಿದ ನಿಯಮಾವಳಿಗಳು, ಪ್ರಪಂಚದಾದ್ಯಂತ ನಮ್ಮ ಸಿನಿಮಾವನ್ನು ತಲುಪಿಸಲು ಅನುಕೂಲಕರವಾಗಿಲ್ಲ. ನಿಮ್ಮ ಪ್ರೀತಿ ಹಾಗೂ ತಾಳ್ಮೆಗೆ ನಾವು ಆಭಾರಿ. ಅದಕ್ಕೆ ಪ್ರತಿಯಾಗಿ, ನೀವು ಮನಸಾರೆ ಸ್ವೀಕರಿಸುವಂತಹ ಚಿತ್ರ ನಿಮ್ಮ ಮುಂದೆ ತರುತ್ತೇವೆ ಎಂಬ ಭರವಸೆ ನಮಗಿದೆ. ಭಾರತದ ಮೊದಲ ಅಡ್ವೆಂಚರ್ ಹೀರೋನನ್ನು ಪ್ರಪಂಚಕ್ಕೆ ಪರಿಚಯಿಸುವ ಹೊಸ ದಿನಾಂಕವನ್ನು ಶೀಘ್ರದಲ್ಲೇ ನಿಮಗೆ ತಿಳಿಸುತ್ತೇವೆ ಎಂದು ನಿರ್ದೇಶಕ ಅನೂಪ್ ಭಂಡಾರಿ ಇನ್‍ಸ್ಟಾಗ್ರಾಮ್ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ನಿದ್ದೆಗಳಿಲ್ಲದ ರಾತ್ರಿ ಕಳೆಯಲು ಸಿದ್ಧರಾಗಿ – ಪ್ರಿಯಾಂಕಾಗೆ ಅನುಷ್ಕಾ ಶರ್ಮಾ ವಿಶ್

     

    View this post on Instagram

     

    A post shared by Manjunathgowda (@jack_manjunath_)

    ಬಹು ನಿರೀಕ್ಷಿತ ಸ್ಯಾಂಡಲ್‍ವುಡ್ ಸಿನಿಮಾದಲ್ಲಿ ಕಿಚ್ಚ ಸುದೀಪ್, ನಿರೂಪ್ ಭಂಡಾರಿ, ಜಾಕ್ವೆಲಿನ್ ಫರ್ನಾಂಡಿಸ್ ಮುಂತಾದವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಒಟಿಟಿ ಮುಖಾಂತರ ಸಿನಿಮಾವನ್ನು ಬಿಡುಗಡೆ ಮಾಡಲು ಒಪ್ಪದ ಚಿತ್ರತಂಡ ನೇರವಾಗಿ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲು ಸರಿಯಾದ ಸಮಯಕ್ಕೆ ನಿರೀಕ್ಷಿಸುತ್ತಿದೆ.

  • ಓಮಿಕ್ರಾನ್ ಭೀತಿ – ಮತ್ತೆ RRR ಚಿತ್ರ ಬಿಡುಗಡೆ ಮುಂದೂಡಿಕೆ?

    ಓಮಿಕ್ರಾನ್ ಭೀತಿ – ಮತ್ತೆ RRR ಚಿತ್ರ ಬಿಡುಗಡೆ ಮುಂದೂಡಿಕೆ?

    ಹೈದರಾಬಾದ್: ಟಾಲಿವುಡ್ ನಟ ಜ್ಯೂನಿಯರ್ ಎನ್‍ಟಿಆರ್ ಹಾಗೂ ನಟ ರಾಮ್ ಚರಣ್ ತೇಜ ಅಭಿನಯದ ಬಹುನಿರೀಕ್ಷಿತ ಆರ್‌ಆರ್‌ಆರ್‌ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.

    ನಿರ್ದೇಶಕ ರಾಜಮೌಳಿ ಸಾರಥ್ಯದಲ್ಲಿ ಬಹು ಕೋಟಿ ವೆಚ್ಚದಲ್ಲಿ ತಯಾರಾಗಿರುವ ಆರ್‌ಆರ್‌ಆರ್‌ ಸಿನಿಮಾ 2022ರ ಜನವರಿ 7ರಂದು ಐದು ಭಾಷೆಗಳಲ್ಲಿ ತೆರೆ ಕಾಣಬೇಕಾಗಿತ್ತು. ಆದರೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಇದೀಗ ಆರ್‌ಆರ್‌ಆರ್‌ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎನ್ನಲಾಗುತ್ತಿದೆ.

    ತಮಿಳುನಾಡು, ದೆಹಲಿ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ನಿರ್ಬಂಧ ವಿಧಿಸಲಾಗಿದ್ದು, ಬೆಂಗಳೂರಿನಲ್ಲಿಯೂ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಪಕರು ಚಿತ್ರ ಬಿಡುಗಡೆಗೊಳಿಸದಿರಲು ತೀರ್ಮಾನಿಸಿದ್ದಾರೆ. ಈಗಾಗಲೇ ಆರ್‌ಆರ್‌ಆರ್‌ ಚಿತ್ರತಂಡ ಸಿನಿಮಾ ಕುರಿತಂತೆ ಭರ್ಜರಿಯಾಗಿ ಪ್ರಮೋಷನ್ ನಡೆಸಿದ್ದು, ಚಿತ್ರ ನೋಡಲು ಅಭಿಮಾನಿಗಳು ಸಾಕಷ್ಟು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡುವುದನ್ನು ಬಿಟ್ಟು ನಿರ್ಮಾಪಕರಿಗೆ ಬೇರೆ ದಾರಿ ಇಲ್ಲದಂತಾಗಿದೆ. ಇದನ್ನೂ ಓದಿ: ಹೊಸ ವರ್ಷವನ್ನು ಅದ್ದೂರಿಯಾಗಿ ಆಚರಿಸಿದ ದಕ್ಷಿಣ ಭಾರತದ ಸಿನಿ ತಾರೆಯರು

    ಬೆಂಗಳೂರಿನಲ್ಲಿ ಆರ್‌ಆರ್‌ಆರ್‌ ಚಿತ್ರದ ಪ್ರಿರಿಲೀಸ್ ಇವೆಂಟ್ ಜನವರಿ 2ಕ್ಕೆ ನಿಗದಿಯಾಗಿತ್ತು. ಆದರೆ ಬೆಂಗಳೂರಿನಲ್ಲಿಯೂ ಕೊರೊನಾ ಹೆಚ್ಚಾಗುತ್ತಿರುವ ಕಾರಣ ಪ್ರಮೋಷನ್ ಕಾರ್ಯಕ್ರಮವನ್ನು ಚಿತ್ರತಂಡ ಮೊಟಕುಗೊಳಿಸಿದೆ. ಕೊರೊನಾ ಏರಿಕೆಯ ಪರಿಸ್ಥಿತಿ ನೋಡಿಕೊಂಡು ಆರ್‌ಆರ್‌ಆರ್‌ ರಿಲೀಸ್ ದಿನಾಂಕ ಘೋಷಿಸುವ ಸಾಧ್ಯತೆ ಇದೆ. ಸದ್ಯ ಆರ್‌ಆರ್‌ಆರ್‌ ಬಿಡುಗಡೆ ದಿನಾಂಕವನ್ನು ಎರಡು ತಿಂಗಳು ಮುಂದೂಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

    ಈ ತಿಂಗಳು ಆರ್‌ಆರ್‌ಆರ್‌ ಹಾಗೂ ರಾಧೆಶ್ಯಾಮ್ ಸೇರಿದಂತೆ ಅನೇಕ ಚಿತ್ರಗಳು ರಿಲೀಸ್ ಆಗಬೇಕಿತ್ತು. ಆದರೆ ಈಗ ಸಿನಿಮಾ ಬಿಡುಗಡೆಯಾಗದ ಹಿನ್ನೆಲೆ ಮಾರ್ಚ್ ಹಾಗೂ ಏಪ್ರಿಲ್‍ನಲ್ಲಿ ಬಿಗ್ ಸ್ಟಾರ್ ಸಿನಿಮಾಗಳು ಕ್ಲ್ಯಾಶ್ ಆಗುವುದು ಪಕ್ಕಾ ಎಂದೇ ಹೇಳಬಹುದು. ಇದನ್ನೂ ಓದಿ: ಬೋಲ್ಡ್ ಲುಕ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ ದಿಶಾ ಪಟಾನಿ

  • ರಾಧೆ ಶ್ಯಾಮ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ – ಪ್ರಭಾಸ್ ಅಭಿಮಾನಿಗಳಿಗೆ ನಿರಾಸೆ

    ರಾಧೆ ಶ್ಯಾಮ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ – ಪ್ರಭಾಸ್ ಅಭಿಮಾನಿಗಳಿಗೆ ನಿರಾಸೆ

    ಹೈದರಾಬಾದ್: ಟಾಲಿವುಡ್ ಬಾಹುಬಲಿ ನಟ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ರಾಧೆ ಶ್ಯಾಮ್ ಸಿನಿಮಾದ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ. ಆದರೆ ಈ ವಿಚಾರ ಅಭಿಮಾನಿಗಳಿಗೆ ಬೇಸರ ತರಿಸಿದೆ.

    ಕಳೆದ ಒಂದು ವರ್ಷದಿಂದ ಪ್ರಭಾಸ್‍ರನ್ನು ಬೆಳ್ಳಿ ಪರದೆ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಬೇಕಿದ್ದ ರಾಧೆ ಶ್ಯಾಮ ಸಿನಿಮಾ ಕೊರೊನಾ 2ನೇ ಅಲೆಯಿಂದಾಗಿ ಮುಂದೂಡಲಾಗಿತ್ತು. ಆದರೆ ಇದೀಗ ಚಿತ್ರತಂಡ ಸಿನಿಮಾವನ್ನು ಮುಂದಿನ ವರ್ಷ ಜನವರಿ 14ರಂದು ಅಂದರೆ ಸಂಕ್ರಾಂತಿ ಹಬ್ಬದಂದು ಬಿಡುಗಡೆಗೊಳಿಸುವುದಾಗಿ ಅಧಿಕೃತವಾಗಿ ಘೋಷಿಸಿದೆ.

    ಈ ಕುರಿತಂತೆ ಚಿತ್ರತಂತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟರ್‍ವೊಂದನ್ನು ಹಂಚಿಕೊಂಡಿದ್ದು, ಹೊಸ ವರ್ಷ, ಹೊಸ ಆರಂಭ ಮತ್ತು ಹೊಸ ಬಿಡುಗಡೆ ದಿನಾಂಕ. ರಾಧೆ ಶ್ಯಾಮ 2022ರ ಜನವರಿ 14ರಂದು ಮಕರ ಸಂಕ್ರಾಂತಿ ಹಬ್ಬದಂದು ತೆರೆ ಮೇಲೆ ಬರಲು ಸಿದ್ಧವಾಗಿದೆ ಎಂದು ಬರೆಯಲಾಗಿದೆ.

    ಒಟ್ಟಾರೆ ಈ ವರ್ಷವಾದರೂ ಪ್ರಭಾಸ್‍ರನ್ನು ತೆರೆ ಮೇಲೆ ನೋಡಬಹುದು ಅಂದುಕೊಂಡಿದ್ದ ಅಭಿಮಾನಿಗಳಿಗೆ ಮುಂದಿನ ವರ್ಷದವರೆಗೂ ಕಾಯಬೇಕಾಲ್ಲ ಎಂದು ನಿರಾಸೆ ಮೂಡಿದೆ. ರಾಧೆ ಶ್ಯಾಮ ಸಿನಿಮಾದಲ್ಲಿ ಪ್ರಭಾಸ್‍ಗೆ ಜೋಡಿಯಾಗಿ ಪೂಜಾ ಹೆಗ್ಡೆ ಜೋಡಿಯಾಗಿದ್ದು, ಈ ಸಿನಿಮಾಕ್ಕೆ ನಿರ್ದೇಶಕ ರಾಧಾ ಕೃಷ್ಣ ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ತೆಲುಗು, ತಮಿಳು, ಮಲಯಾಳಂ, ಕನ್ನಡ ಹಾಗೂ ಹಿಂದಿಯಲ್ಲಿ ರಾಧೆ ಶ್ಯಾಮ ಸಿನಿಮಾ ತೆರೆಕಾಣಿಲಿದೆ. ಸದ್ಯ ಸಲಾರ್, ಆದಿಪುರುಷ್ ಇನ್ನೂ ಹೆಸರಿಡದ ಎರಡು ಸಿನಿಮಾ ಹೀಗೆ ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳು ಪ್ರಭಾಸ್ ಕೈನಲ್ಲಿದ್ದು, ಇವು ಇನ್ನೂ ಚಿತ್ರೀಕರಣದ ಹಂತದಲ್ಲಿದೆ. ಇದನ್ನೂ ಓದಿ:ಪತಿ ಜೊತೆಗಿನ ಲಿಪ್‍ಲಾಕ್ ಫೋಟೋ ಶೇರ್ ಮಾಡಿದ ಸೋನಂ ಕಪೂರ್

  • ಲೈಗರ್ ಸಿನಿಮಾದ ಡೇಟ್ ಫಿಕ್ಸ್ – ಹೊಸ ಪೋಸ್ಟರ್ ಔಟ್

    ಲೈಗರ್ ಸಿನಿಮಾದ ಡೇಟ್ ಫಿಕ್ಸ್ – ಹೊಸ ಪೋಸ್ಟರ್ ಔಟ್

    ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ ಅಭಿನಯದ ಲೈಗರ್ ಸಿನಿಮಾ ಇದೇ ಸೆಪ್ಟೆಂಬರ್ 9ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈ ಸಿನಿಮಾ ತಮಿಳು, ತೆಲಗು, ಹಿಂದಿ, ಮಲಯಾಳಂ ಮತ್ತು ಕನ್ನಡದಲ್ಲಿ ಬಿಡುಗಡೆಯಾಗಲಿದೆ.

    ವಿಶೇಷವೆಂದರೆ ಸಿನಿಮಾ ತಯಾರಕರು ಲೈಗರ್ ಸಿನಿಮಾದ ಹೊಸ ಪೋಸ್ಟರ್‍ನನ್ನು ಬಿಡುಗಡೆಗೊಳಿಸುವ ಮೂಲಕ ಸಿನಿಮಾ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ದಾರೆ. ಈ ಪೋಸ್ಟರ್‍ನಲ್ಲಿ ವಿಜಯ್ ಕೈನಲ್ಲಿ ಕೋಲು ಹಿಡಿದು ಜೋರಾಗಿ ಕಿರುಚುತ್ತಿರುವುದನ್ನು ಕಾಣಬಹುದು.

    ಸಿನಿಮಾ ಆಪ್‍ಡೇಟ್ಸ್ ಕುರಿತಂತೆ ವಿಜಯ್ ದೇವರಕೊಂಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟರ್ ಶೇರ್ ಮಾಡಿಕೊಂಡಿದ್ದು, ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 9ಕ್ಕೆ ನಾವು ಬರುತ್ತಿದ್ದೇವೆ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ. ಬಿಡುಗಡೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಲೈಗರ್ ಸಿನಿಮಾದ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.

    ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಕರಣ್ ಜೋಹರ್, ಜಗತ್ತಿನಾದ್ಯಂತ ಪಂಚ್ ಪ್ಯಾಕ್ ನೀಡಲು ಸಿನಿಮಾ ಸಿದ್ಧವಾಗಿದೆ. ಲೈಗರ್ ಸೆಪ್ಟೆಂಬರ್ 9 ರಂದು ಜಗತ್ತಿನಾದ್ಯಂತ 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಹಿಂದಿ, ತೆಲಗು, ತಮಿಳ್, ಕನ್ನಡ ಮತ್ತು ಮಲೆಯಾಳಂ ಎಂದು ಕ್ಯಾಪ್ಷನ್ ಹಾಕಿಕೊಳ್ಳುವುದರ ಮೂಲಕ ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    https://twitter.com/karanjohar/status/1359694753198088192

    ಕೊರೊನಾ ಸಾಂಕ್ರಮಿಕ ರೋಗದಿಂದ ಮಾರ್ಚ್ 2020ರಲ್ಲಿ ಸ್ಥಗಿತಗೊಂಡಿದ್ದ ಲೈಗರ್ ಸಿನಿಮಾದ ಚಿತ್ರೀಕರಣ 11 ತಿಂಗಳ ಬಳಿಕ ಇಂದಿನಿಂದ ಮುಂಬೈನಲ್ಲಿ ಚಿತ್ರೀಕರಣ ಆರಂಭಗೊಂಡಿದೆ.

    ನಿನ್ನೆ ಮುಂಬೈನಲ್ಲಿ ಅನನ್ಯಾ ಪಾಂಡೆ ಮತ್ತು ಅವರ ಕುಟುಂಬವನ್ನು ಪೂರಿಜಗನ್ನಾಥ್ ಹಾಗೂ ಚಾರ್ಮ್ ಎಂದು ಚಾರ್ಮ್ ಭೇಟಿಯಾಗಿದ್ದರು. ಈ ವೇಳೆ ಕ್ಲಿಕ್ಕಿಸಿದ ಕೆಲವು ಫೋಟೋವನ್ನು ಚಾರ್ಮಿ ಕೌರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ಲೈಗರ್ ಸಿನಿಮಾದ ಲೀಡಿಂಗ್ ರೋಲ್‍ನಲ್ಲಿ ನಟ ವಿಜಯ್ ದೇವರಕೊಂಡ ಅಭಿನಯಿಸಿದ್ದು, ವಿಜಯ್ ಜೊತೆ ಅನನ್ಯಪಾಂಡೆ ಡ್ಯೂಯೆಟ್ ಹಾಡಲಿದ್ದಾರೆ. ಇನ್ನೂ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ರಮ್ಯಾ ಕೃಷ್ಣನ್, ರೋನಿತ್ ರಾಯ್, ಅಲಿ, ಮಕರಂದ್ ದೇಶಪಾಂಡೆ ಮತ್ತು ಗೆಟಪ್ ಶ್ರೀನು ಅಭಿನಯಿಸಿದ್ದಾರೆ. ಲೈಗರ್ ಸಿನಿಮಾ ಬಾಕ್ಸಿಂಗ್ ಕಥೆ ಆಧಾರಿತ ಸಿನಿಮಾವಾಗಿದ್ದು, ನಿರ್ದೇಶಕ ಪೂರಿ ಜಗನ್ನಾಥ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ಪೂರಿ ಜಗನ್ನಾಥ್, ಚಾರ್ಮ್ ಕೌರ್, ಕರಣ್ ಜೋಹರ್ ಬಂಡವಾಳ ಹೂಡಿದ್ದಾರೆ.

  • ಮುಂದಿನ ತಿಂಗಳು ತೆರೆ ಕಾಣಲಿದ್ದಾನೆ ಮಿಸ್ಸಿಂಗ್ ಬಾಯ್!

    ಮುಂದಿನ ತಿಂಗಳು ತೆರೆ ಕಾಣಲಿದ್ದಾನೆ ಮಿಸ್ಸಿಂಗ್ ಬಾಯ್!

    ಬೆಂಗಳೂರು: ತೊಂಭತ್ತರ ದಶಕದಲ್ಲಿ ನಡೆದಿದ್ದ ಮನಮಿಡಿಯುವ ಸತ್ಯಘಟನೆಯಾಧಾರಿತ ಚಿತ್ರ ಮಿಸ್ಸಿಂಗ್ ಬಾಯ್. ಕೊಲ್ಲ ಪ್ರವೀಣ್ ನಿರ್ಮಾಣ ಮಾಡಿರೋ ಈ ಸಿನಿಮಾವನ್ನು ರಘುರಾಮ್ ನಿರ್ದೇಶನ ಮಾಡಿದ್ದಾರೆ. ಎಲ್ಲರೂ ಕಾತರದಿಂದ ಕಾಯುತ್ತಿರೋ ಮಿಸ್ಸಿಂಗ್ ಬಾಯ್ ಬಿಡುಗಡೆಯ ದಿನಾಂಕವೀಗ ಪಕ್ಕಾ ಡಿಫರೆಂಟಾಗಿಯೇ ಜಾಹೀರಾಗಿದೆ.

    ಮಿಸ್ಸಿಂಗ್ ಬಾಯ್ ಚಿತ್ರೀಕರಣ ಶುರುವಾದಂದಿನಿಂದಲೂ ಅದನ್ನು ಪ್ರೇಕ್ಷಕರ ಕುತೂಹಲದ ಕೇಂದ್ರದಿಂದ ಕದಲದಿರುವಂತೆ ನೋಡಿಕೊಂಡು ಬಂದವರು ರಘುರಾಮ್. ಇದೀಗ ಅವರು ಸಿದ್ಧಸೂತ್ರಗಳನ್ನು ಮೀರಿಕೊಂಡು ತಮ್ಮ ಸಿನಿಮಾದ ಬಿಡುಗಡೆ ದಿನಾಂಕವನ್ನು ಜಾಹೀರು ಮಾಡಿದ್ದಾರೆ.

    ಪ್ರೆಸ್ ಮೀಟ್ ಮಾಡಿ ಅಥವಾ ಸಾಮಾಜಿಕ ಜಾಲತಾಣಗಳ ಮೂಲಕ ಚಿತ್ರಗಳ ರಿಲೀಸ್ ಡೇಟ್ ಅನೌನ್ಸ್ ಮಾಡೋದು ಮಾಮೂಲಿ. ಆದರೆ ರಘುರಾಮ್ ಅವರು ಕರ್ನಾಟಕವೂ ಸೇರಿದಂತೆ ವಿದೇಶಗಳಲ್ಲಿಯೂ ಇರುವ ಶ್ರೀಸಾಮಾನ್ಯರಿಂದಲೇ ಮಿಸ್ಸಿಂಗ್ ಬಾಯ್ ಬಿಡುಗಡೆ ದಿನಾಂಕ ಘೋಷಿಸಿರುವ ವೀಡಿಯೋವೊಂದನ್ನು ಅನಾವರಣಗೊಳಿಸಿದ್ದಾರೆ.

    ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಮಂಗಳೂರು, ಬೆಳಗಾವಿ ಸೇರಿದಂತೆ, ದುಬೈ, ಜರ್ಮನಿ ಮುಂತಾದ ಪ್ರದೇಶಗಳಿಂಣದ ಮಾತಾಡಿರೋ ಜನಸಾಮಾನ್ಯರು ಮಿಸ್ಸಿಂಗ್ ಬಾಯ್ ಚಿತ್ರಕ್ಕೆ ಶುಭ ಕೋರಿ ಬಿಡುಗಡೆ ದಿನಾಂಕ ಅನಾವರಣಗೊಳಿಸಿದ್ದಾರೆ. ಈ ಕೆಲಸ ನಿಜಕ್ಕೂ ಕನ್ನಡ ಚಿತ್ರರಂಗದ ಮಟ್ಟಿಗೆ ತೀರಾ ಹೊಸತಾಗಿದೆ.

    ಜನಸಾಮಾನ್ಯರೇ ಘೋಷಣೆ ಮಾಡಿರೋ ಪ್ರಕಾರ ಹೇಳೋದಾದರೆ ಇದೇ ಮಾರ್ಚ್ 22ರಂದು ಕೊಲ್ಲ ಪ್ರವೀಣ್ ನಿರ್ಮಾಣದ ಮಿಸ್ಸಿಂಗ್ ಬಾಯ್ ತೆರೆ ಕಾಣಲಿದೆ. ಮನ ಮಿಡಿಯುವ ಸತ್ಯ ಘಟನೆಯಾಧಾರಿತವಾದ ಈ ಚಿತ್ರ ನೋಡಲು ಎಲ್ಲ ವರ್ಗದ ಪ್ರೇಕ್ಷಕರೂ ಕಾತರರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv