Tag: Release

  • ದರ್ಶನ್ ನಟನೆಯ ‘ಕಾಟೇರ’ ವಿದೇಶದಲ್ಲಿ ರಿಲೀಸ್ ಯಾವಾಗ?

    ದರ್ಶನ್ ನಟನೆಯ ‘ಕಾಟೇರ’ ವಿದೇಶದಲ್ಲಿ ರಿಲೀಸ್ ಯಾವಾಗ?

    ದೇ ಡಿಸೆಂಬರ್ 29 ರಂದು ರಾಜ್ಯಾದ್ಯಂತ ಕಾಟೇರ (Katera) ಸಿನಿಮಾ ಬಿಡುಗಡೆ ಆಗುತ್ತಿದೆ. ಈಗಾಗಲೇ ಸಿನಿಮಾವನ್ನು ಬರ ಮಾಡಿಕೊಳ್ಳಲು ದರ್ಶನ್ (Darshan) ಅಭಿಮಾನಿಗಳು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಈ ಮಧ್ಯ ವಿದೇಶದಲ್ಲೂ ಸಿನಿಮಾವನ್ನು ಬಿಡುಗಡೆ (Release) ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಕೆನಡಾ ಸೇರಿದಂತೆ ಹಲವು ಕಡೆ ಜನವರಿ 5 ರಿಂದ ಕಾಟೇರ ಸಿನಿಮಾ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.

    ರಾಜ್ಯದಲ್ಲಿ ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಈಗಾಗಲೇ ಬುಕ್ ಮೈ ಶೋನಲ್ಲಿ ಮುಂಗಡ ಟಿಕೆಟ್ ಅನ್ನು ಖರೀದಿಸಬಹುದಾಗಿದೆ. ಟಿಕೆಟ್ ಬುಕ್ಕಿಂಗ್ ಶುರುವಾಗಿ ಕೇವಲ 72 ಗಂಟೆಗಳಲ್ಲಿ ಬರೋಬ್ಬರಿ 50 ಸಾವಿರ ಟಿಕೆಟ್ ಸೇಲ್ ಆಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಶುರುವಾಗಿ 48 ಗಂಟೆಗಳಲ್ಲಿ ಒಂದು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

    ಒಂದು ಕಡೆ ಕಲೆಕ್ಷನ್ ನಿಂದಾಗಿ ಸಿನಿಮಾ ಸುದ್ದಿ ಮಾಡುತ್ತಿದ್ದರೆ, ಮತ್ತೊಂದು ಕಡೆ ಆಯ್ಕೆ ಮಾಡಿಕೊಂಡ ಕಥೆಯ ಕಾರಣದಿಂದಾಗಿ ಸಿನಿಮಾ ಕುತೂಹಲ ಮೂಡಿಸಿದೆ. ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ನಟ ದರ್ಶನ್ ಸಿನಿಮಾ ಕುರಿತಾದ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ನೈಜ ಘಟನೆಯನ್ನು ಆಧರಿಸಿದ್ದು, ಅದು ಇಂದಿರಾ ಗಾಂಧಿ (Indira Gandhi) ಕಾಲದ ಕಥೆಯಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.

    ಅದು 1974ರ ಕಾಲ. ಉಳುವವನೆ ಭೂಮಿಯ ಒಡೆಯ ಕಾನೂನು ಬಂದಾಗ ನಡೆದಿರುವ ಘಟನೆ. ಆವಾಗ ಬಾವಿಯೊಂದರಲ್ಲಿ ತುಂಬಾ ಜನರ ಮೂಳೆಗಳು ಸಿಕ್ಕಿದ್ದವು. ಆ ಮೂಳೆಗಳು ಯಾರವು ಅಂತ ಯಾರಿಗೂ ಗೊತ್ತಿಲ್ಲ. ಆ ಕಹಿ ಘಟನೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ ಎಂದಿದ್ದಾರೆ ದರ್ಶನ್.

     

    ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ, ತರುಣ್ ಸುದೀರ್ ನಿರ್ದೇಶನದ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರ ಭಾರೀ ಹೈಪ್ ಕ್ರಿಯೆಟ್ ಮಾಡಿದೆ. ಬಹಳ ದಿನಗಳ ಬಳಿಕ ಡಿ ಬಾಸ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಸಾಂಗ್ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಕ್ರಿಯೇಟ್‌ ಮಾಡಿದೆ. ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ವಾಣಿಜ್ಯ ನಗರಿಯಲ್ಲಿ ಅದ್ಧೂರಿಯಾಗಿ ಟ್ರೈಲರ್ ಬಿಡುಗಡೆಗೊಳಿಸಲಾಗಿದೆ.

  • ಬಿಡುಗಡೆಗೂ ಮುನ್ನ ‘ಕಾಟೇರ’ ದಾಖಲೆ: 72 ಗಂಟೆಯಲ್ಲಿ 50 ಸಾವಿರ ಟಿಕೆಟ್ ಮಾರಾಟ

    ಬಿಡುಗಡೆಗೂ ಮುನ್ನ ‘ಕಾಟೇರ’ ದಾಖಲೆ: 72 ಗಂಟೆಯಲ್ಲಿ 50 ಸಾವಿರ ಟಿಕೆಟ್ ಮಾರಾಟ

    ರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾದ ಬಿಡುಗಡೆಗೆ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೇ ಡಿ.29ರಂದು ರಾಜ್ಯದಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದ್ದು, ಈಗಾಗಲೇ ಬುಕ್ ಮೈ ಶೋನಲ್ಲಿ ಮುಂಗಡ ಟಿಕೆಟ್ ಅನ್ನು ಖರೀದಿಸಬಹುದಾಗಿದೆ. ಟಿಕೆಟ್ ಬುಕ್ಕಿಂಗ್ ಶುರುವಾಗಿ ಕೇವಲ 72 ಗಂಟೆಗಳಲ್ಲಿ ಬರೋಬ್ಬರಿ 50 ಸಾವಿರ ಟಿಕೆಟ್ ಸೇಲ್ ಆಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಶುರುವಾಗಿ 48 ಗಂಟೆಗಳಲ್ಲಿ ಒಂದು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

    ಒಂದು ಕಡೆ ಕಲೆಕ್ಷನ್ ನಿಂದಾಗಿ ಸಿನಿಮಾ ಸುದ್ದಿ ಮಾಡುತ್ತಿದ್ದರೆ, ಮತ್ತೊಂದು ಕಡೆ ಆಯ್ಕೆ ಮಾಡಿಕೊಂಡ ಕಥೆಯ ಕಾರಣದಿಂದಾಗಿ ಸಿನಿಮಾ ಕುತೂಹಲ ಮೂಡಿಸಿದೆ. ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ನಟ ದರ್ಶನ್ ಸಿನಿಮಾ ಕುರಿತಾದ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ನೈಜ ಘಟನೆಯನ್ನು ಆಧರಿಸಿದ್ದು, ಅದು ಇಂದಿರಾ ಗಾಂಧಿ (Indira Gandhi) ಕಾಲದ ಕಥೆಯಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.

    ಅದು 1974ರ ಕಾಲ. ಉಳುವವನೆ ಭೂಮಿಯ ಒಡೆಯ ಕಾನೂನು ಬಂದಾಗ ನಡೆದಿರುವ ಘಟನೆ. ಆವಾಗ ಬಾವಿಯೊಂದರಲ್ಲಿ ತುಂಬಾ ಜನರ ಮೂಳೆಗಳು ಸಿಕ್ಕಿದ್ದವು. ಆ ಮೂಳೆಗಳು ಯಾರವು ಅಂತ ಯಾರಿಗೂ ಗೊತ್ತಿಲ್ಲ. ಆ ಕಹಿ ಘಟನೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ ಎಂದಿದ್ದಾರೆ ದರ್ಶನ್.

     

    ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ, ತರುಣ್ ಸುದೀರ್ ನಿರ್ದೇಶನದ ಕಾಟೇರ ಚಿತ್ರ ಇದೇ ತಿಂಗಳು 29ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ನಟ ದರ್ಶನರ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರ ಭಾರೀ ಹೈಪ್ ಕ್ರಿಯೆಟ್ ಮಾಡಿದೆ. ಬಹಳ ದಿನಗಳ ಬಳಿಕ ಡಿ ಬಾಸ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಸಾಂಗ್ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಕ್ರಿಯೇಟ್‌ ಮಾಡಿದೆ. ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ವಾಣಿಜ್ಯ ನಗರಿಯಲ್ಲಿ ಅದ್ಧೂರಿಯಾಗಿ ಟ್ರೈಲರ್ ಬಿಡುಗಡೆಗೊಳಿಸಲಾಗಿದೆ.

  • ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ರಿಲೀಸ್ ಡೇಟ್ ಫಿಕ್ಸ್

    ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ರಿಲೀಸ್ ಡೇಟ್ ಫಿಕ್ಸ್

    ಕ್ಷಿತ್ ಶೆಟ್ಟಿ (Rakshit Shetty) ನಿರ್ಮಾಣದಲ್ಲಿ ಮೂಡಿ ಬಂದಿರುವ ಬ್ಯಾಚುಲರ್ ಪಾರ್ಟಿ (Bachelor Party) ಸಿನಿಮಾದ ಬಿಡುಗಡೆ (Release) ದಿನಾಂಕ ಘೋಷಣೆಯಾಗಿದೆ. ಜನವರಿ 26ರಂದು ರಾಜ್ಯಾದ್ಯಂತ ಸಿನಿಮಾ ಮಾಡುವುದಾಗಿ ನಿರ್ಮಾಣ ಸಂಸ್ಥೆ ಘೋಷಣೆ ಮಾಡಿದೆ. ರಕ್ಷಿತ್ ಅಂಡ್ ಟೀಮ್  ಕಿರಿಕ್ ಪಾರ್ಟಿ ನಂತರ ಯೂತ್ ಕಾಮಿಡಿ ಸ್ಟೋರಿ ಹೊಂದಿರುವ ಸಿನಿಮಾವನ್ನು ಕೊಡಲು ಸಜ್ಜಾಗಿದ್ದಾರೆ.

    ಹೌದು. ‘ಕಿರಿಕ್ ಪಾರ್ಟಿ’ಯ ಬರಹಗಾರ ಅಭಿಜಿತ್ ಮಹೇಶ್, ಈಗಾಗಲೇ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಸೇರಿದಂತೆ ಅನೇಕರ ಸಿನಿಮಾಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ನಿರ್ದೇಶಕರಾಗಿ ಬಡ್ತಿ ಪಡೆದಿದ್ದು, ‘ಬ್ಯಾಚುಲರ್ ಪಾರ್ಟಿ’ಗೆ ಆಕ್ಷನ್ ಕಟ್ ಹೇಳಿದ್ದಾರೆ. ಕಚಗುಳಿಯಿಡುವ ಸಂಭಾಷಣೆಗೆ ಖ್ಯಾತರಾಗಿರುವ ಅಭಿ, ತಮ್ಮ ಮೊದಲ ಸಿನಿಮಾದಲ್ಲಿ ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂಬುದಕ್ಕೆ ಸಿನಿಮಾ ಬಿಡುಗಡೆಯವರೆಗೂ ಕಾಯಬೇಕು. ಅದಕ್ಕೂ ಮುನ್ನ ‘ಬ್ಯಾಚುಲರ್ ಪಾರ್ಟಿ’ಯ ಮೊದಲ ಝಲಕ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

    ದಿಗಂತ್ (Diganth), ಲೂಸ್ ಮಾದ ಯೋಗಿ (Loose Mada Yogi) ಹಾಗೂ ಅಚ್ಯುತ್ ಕುಮಾರ್ (Achyut Kumar) ಪೋಸ್ಟರ್‌ನಲ್ಲಿದ್ದಾರೆ. ಅದರ ಹಿನ್ನೆಲೆಯಲ್ಲಿ ಬ್ಯಾಂಕಾಕ್‌ನ ಕೆಲವು ಸ್ಥಳಗಳನ್ನೂ ಕಾಣಬಹುದು. ವೀಲ್‌ಚೇರ್‌ನಲ್ಲಿ ಅಚ್ಯುತ್ ಕುಳಿತುಕೊಂಡಿದ್ದರೆ, ಅವರ ಹಿಂದೆ ಯೋಗಿ, ದಿಗಂತ್ ಓಡಿ ಬರುತ್ತಿರುವ ದೃಶ್ಯ ಸದ್ಯ ಗಮನ ಸೆಳೆಯುತ್ತಿದೆ. ಪೋಸ್ಟರ್‌ನಲ್ಲಿ ಇನ್ನೂ ಗಮನಾರ್ಹ ಅಂಶಗಳಿದ್ದು, ಅವೆಲ್ಲವೂ ಸಿನಿಮಾದ ಕಥೆಗೆ ಪೂರಕವಾಗಿದೆಯಾ ಎಂಬುದಕ್ಕೆ ಚಿತ್ರತಂಡ ಉತ್ತರಿಸಬೇಕಿದೆ. ವಿಶೇಷವೆಂದರೆ ಈ ಪೋಸ್ಟರ್‌ನ್ನು ಹ್ಯಾಂಡ್ ಸ್ಕೆಚ್ ಮೂಲಕ ಡಿಸೈನ್ ಮಾಡಲಾಗಿದೆ.

    ಬರೀ ಪೋಸ್ಟರ್ ಹರಿಬಿಡದೇ ಅದಕ್ಕೊಂದು ಸಣ್ಣ ವೀಡಿಯೋವೊಂದನ್ನು ರಿಲೀಸ್ ಮಾಡಿದೆ. ಅದರಲ್ಲೂ ಕೆಲವು ಅಂಶಗಳು ಗಮನ ಸೆಳೆಯುವಂತಿದ್ದು, ಹಿನ್ನೆಲೆ ಸಂಗೀತವೂ ಅಡಕವಾಗಿದೆ. ಇವೆಲ್ಲವೂ ರೀಲ್ಸ್‌ನಲ್ಲಿ ರಿಲೀಸ್ ಮಾಡಿರುವುದು ಮತ್ತೊಂದು ವಿಶೇಷ. ಕಣ್ಮನ ಸೆಳೆಯುವ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಿರುವ ಚಿತ್ರತಂಡ, ಥಿಯೇಟರ್‌ನಲ್ಲಿ ಇದರ ಅನುಭವ ಪಡೆಯಬೇಕು ಮತ್ತು ಚಿತ್ರಮಂದಿರಗಳಲ್ಲಿ ಕುಳಿತು ನಗೆಗಡಲಲ್ಲಿ ತೇಲುವ ಸಿನಿಮಾ ಇದಾಗಿದೆ ಎಂಬುದು ಚಿತ್ರತಂಡದ ಅನಿಸಿಕೆ.

     

    ಪರಂವಃ ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಹಾಗೂ ಅಮಿತ್ ಗುಪ್ತ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅರವಿಂದ್ ಛಾಯಾಗ್ರಹಣ, ಅರ್ಜುನ್ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ಅಂದುಕೊಂಡ ದಿನದಂದು ರಜನಿ ‘ಲಾಲ್ ಸಲಾಂ’ ರಿಲೀಸ್ ಆಗಲ್ಲವಾ?

    ಅಂದುಕೊಂಡ ದಿನದಂದು ರಜನಿ ‘ಲಾಲ್ ಸಲಾಂ’ ರಿಲೀಸ್ ಆಗಲ್ಲವಾ?

    ಜನಿಕಾಂತ್ ವಿಶಿಷ್ಟ ಪಾತ್ರದಲ್ಲಿ ನಟಿಸಿರುವ ಲಾಲ್ ಸಲಾಂ (Lal Salaam) ಸಿನಿಮಾ ಜನವರಿ 14ರ ಸಂಕ್ರಾಂತಿಗೆ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಸಿನಿಮಾ ದಿನಾಂಕವನ್ನು ಮುಂದೂಡಲು ಚಿತ್ರತಂಡ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಅಂದು ಅನೇಕ ಚಿತ್ರಗಳು ಬಿಡುಗಡೆ ಆಗುತ್ತಿರುವುದರಿಂದ ಇಂಥದ್ದೊಂದು ತೀರ್ಮಾನ ತಗೆದುಕೊಳ್ಳಲಾಗುತ್ತಿದೆ ಎನ್ನುವುದು ಸದ್ಯಕ್ಕಿರುವ ಮಾಹಿತಿ. ಆದರೆ, ಅಧಿಕೃತವಾಗಿ ಈವರೆಗೂ ಈ ಕುರಿತು ಚಿತ್ರತಂಡ ಹೇಳಿಕೊಂಡಿಲ್ಲ.

    ಲಾಲ್ ಸಲಾಂ ರಜನಿಕಾಂತ್ ಮಗಳು ಐಶ್ವರ್ಯ ನಿರ್ದೇಶನದ ಸಿನಿಮಾ. ಈ ಚಿತ್ರದಲ್ಲಿ ಭಿನ್ನ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡ್ತಿದ್ದಾರೆ ರಜನಿಕಾಂತ್. ಸಿನಿಮಾದಲ್ಲಿನ ತಲೈವಾ ಲುಕ್ ರಿವೀಲ್ ಕೂಡ ಆಗಿದ್ದು, ಅಚ್ಚರಿ ಎನ್ನುವಂತೆ ಅವರು ಕಾಣಿಸಿಕೊಂಡಿದ್ದಾರೆ.

    ಲೈಕಾ ಪ್ರೋಡಕ್ಷನ್ಸ್ ಅಡಿಯಲ್ಲಿ ‘ಲಾಲ್ ಸಲಾಂ’ ಸಿನಿಮಾವನ್ನ ಐಶ್ವರ್ಯ ರಜಿನಿಕಾಂತ್ ನಿರ್ದೇಶನ ಮಾಡಿದ್ದಾರೆ. ತಲೈವಾ ಅವರು ಕೀ ರೋಲ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ಚಿತ್ರದಲ್ಲಿ ಮೊಹಿದ್ದೀನ್ ಭಾಯ್ ಪಾತ್ರಕ್ಕೆ ತಲೈವಾ ಜೀವತುಂಬಿದ್ದಾರೆ. ಗಲಭೆ ಹಿನ್ನೆಲೆ, ಶೆರ್ವಾನಿಯಲ್ಲಿ ಸನ್ ಗ್ಲ್ಯಾಸ್ ಧರಿಸಿ ನಡೆದು ಬರುತ್ತಿರುವ ತಲೈವಾ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ಭರ್ಜರಿಯಾಗಿ ನಡೆಯುತ್ತಿದೆ. ಸದ್ಯ ಸಿನಿಮಾದ ಪೋಸ್ಟರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

     

    1995ರಲ್ಲಿ ಬಂದಿದ್ದ ‘ಬಾಷಾ’ ಚಿತ್ರದಲ್ಲಿ ಜನಸ್ನೇಹಿ ಡಾನ್ ಆಗಿ ರಜನಿಕಾಂತ್ ಅಬ್ಬರಿಸಿದ್ದರು. ಅದೇ ಚಿತ್ರದ ಪಾತ್ರವನ್ನು ‘ಲಾಲ್ ಸಲಾಂ’ ಮೊಹಿದ್ದೀನ್ ಭಾಯ್ ನೆನಪಿಸುತ್ತಿರುವುದು ಸುಳ್ಳಲ್ಲ. ‘ಲಾಲ್ ಸಲಾಂ’ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಆಗಿದ್ದು ಕ್ರಿಕೆಟ್ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಲೀಡ್ ರೋಲ್‌ಗಳಲ್ಲಿ ನಟಿಸುತ್ತಿದ್ದಾರೆ. ಜೀವಿತಾ ರಾಜಶೇಖರ್ ನಾಯಕಿಯಾಗಿ ಮಿಂಚಲಿದ್ದಾರೆ. ವಿಷ್ಣು ರಂಗಸ್ವಾಮಿ ಛಾಯಾಗ್ರಹಣ- ಎಆರ್ ರೆಹಮಾನ್ ಸಂಗೀತ ಈ ಚಿತ್ರಕ್ಕಿದೆ. ರಜನಿಕಾಂತ್ ಕಾರಣಕ್ಕೆ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ.

  • ಸಲಾರ್: ತಡರಾತ್ರಿ ಫ್ಯಾನ್ಸ್ ಶೋ ಹೌಸ್ ಫುಲ್

    ಸಲಾರ್: ತಡರಾತ್ರಿ ಫ್ಯಾನ್ಸ್ ಶೋ ಹೌಸ್ ಫುಲ್

    ಪ್ರಭಾಸ್ (Prabhas) ನಟನೆಯ ಸಲಾರ್ ಸಿನಿಮಾ ಇಂದಿನಿಂದ ವಿಶ್ವದ್ಯಾದ್ಯಂತ ರಿಲೀಸ್ ಆಗಿದೆ. ನಿನ್ನೆ ತಡರಾತ್ರಿಯಿಂದಲೇ ಅಭಿಮಾನಿಗಳ ಅಬ್ಬರ ಶುರುವಾಗಿದೆ. ಬೆಂಗಳೂರಿನ ಮಡಿವಾಳದ ಸಂಧ್ಯಾ ಚಿತ್ರಮಂದಿರದಲ್ಲಿ ಫ್ಯಾನ್ಸ್ ಗಾಗಿ ಫ್ಯಾನ್ಸ್ ಶೋ (Fans Show) ಆಯೋಜನೆ ಮಾಡಲಾಗಿದೆ. ಅಭಿಮಾನಿಗಳು ಮುಗಿಬಿದ್ದು ಚಿತ್ರ ವೀಕ್ಷಿಸಿದ್ದಾರೆ. ತಡರಾತ್ರಿ 12.20ಕ್ಕೆ ಶೋ ಇದ್ದರೂ, ಅದಕ್ಕೂ ಮುನ್ನ ಗಂಟೆಗಟ್ಟಲೆ ಟಿಕೆಟ್ ಗಾಗಿ ಕಾದಿದ್ದಾರೆ. ಕೆಲವರಿಗೆ ಟಿಕೆಟ್ ಸಿಗದೇ ನಿರಾಸೆಯನ್ನೂ ವ್ಯಕ್ತ ಪಡಿಸಿದ್ದಾರೆ. ಥಿಯೇಟರ್ ಮುಂಭಾಗ ಪಟಾಕಿ ಸಿಡಿಸಿ ಅಭಿಮಾನಿಗ ಸಂಭ್ರಮಿಸಿದ್ದಾರೆ.

    ಲಾರ್ (Salaar) ಸಿನಿಮಾದಲ್ಲಿ ಯಶ್ (Yash) ನಟಿಸಿದ್ದಾರೆ ಎಂದೆಲ್ಲ ಸುದ್ದಿ ಹರಿಬಿಡಲಾಗಿತ್ತು. ಕೆಜಿಎಫ್ ಸಿನಿಮಾದ ಪಾತ್ರವೊಂದು ಸಲಾರ್ ನಲ್ಲಿ ಎಂಟ್ರಿ ಕೊಡಲಾಗಿದೆ. ಅದು ಯಶ್ ಪಾತ್ರವಾಗಿದೆ ಎಂದು ಹೇಳಲಾಗಿತ್ತು. ಅದಕ್ಕೀಗ ಸ್ಪಷ್ಟನೆ ನೀಡಿದ್ದಾರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ (Prashant Neel). ಸಲಾರ್ ಸಿನಿಮಾದಲ್ಲಿ ಯಶ್ ಇದ್ದಾರೆ ಅಂತ ಹೇಳೋಕೆ ನನಗೇಕೆ ಅಳುಕು. ಅವರು ಇದ್ದಾರೆ ಅಂದಿದ್ದರೆ, ಅದನ್ನೂ ಪ್ರಚಾರ ಮಾಡುತ್ತಿದ್ದೆವು. ಪ್ರಚಾರಕ್ಕೆ ಅದು ಪ್ಲಸ್ ಆಗಿರೋದು. ಆದರೆ, ಈ ಸಿನಿಮಾದಲ್ಲಿ ಅವರು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಸಲಾರ್ ಸಿನಿಮಾದ ಕುರಿತಾಗಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಯಶ್ ಬಗ್ಗೆಯೂ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಜೀವನ ಪರ್ಯಂತ ಯಶ್ ನನ್ನ ಜೊತೆಯಾಗಿಯೇ ಇರುತ್ತಾರೆ ಎಂದು ಹೇಳುವ ಮೂಲಕ, ಯಶ್ ಮತ್ತು ಪ್ರಶಾಂತ್ ನೀಲ್ ಮಧ್ಯ ಯಾವುದೂ ಸರಿ ಇಲ್ಲ ಎನ್ನುವುದಕ್ಕೂ ಅವರು ಉತ್ತರ ನೀಡಿದ್ದಾರೆ.

    ಇಂದು ವಿಶ್ವದಾದ್ಯಂತ ಸಲಾರ್ ಸಿನಿಮಾ ರಿಲೀಸ್ ಆಗಿದೆ. ಸಿನಿಮಾ ಬಿಡುಗಡೆ ಆಗುವ ಒಂದು ದಿನ ಮುನ್ನ ಚಿತ್ರದ ಮತ್ತೊಂದು ಹಾಡು ಬಿಡುಗಡೆ ಮಾಡಿದ ಹೊಂಬಾಳೆ ಫಿಲ್ಮ್ಸ್. ಪ್ರತಿಕಥೆಯ ಹೆಸರಿನಲ್ಲಿ ರಿಲೀಸ್ ಆಗಿರುವ ಹಾಡಿನಲ್ಲಿ ಶಾಂತಿಯ ಮಂತ್ರವನ್ನು ಹೇಳುವ ಪ್ರಯತ್ನ ಮಾಡಲಾಗಿದೆ. ನಾಯಕನ ತಾಯಿಯು ಟೀಚರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮಗನಿಗೆ ಕ್ಷಮೆಯಿಂದ ಗೆಲ್ಲುವ ಮಾತುಗಳನ್ನು ಹೇಳಲಿಸಲಾಗಿದೆ.

     

    ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಪೃಥ್ವಿರಾಜ್‍ ಸುಕುಮಾರನ್‍, ಶ್ರುತಿ ಹಾಸನ್‍, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಪ್ರಶಾಂತ್ ನೀಲ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್‍ನಡಿ ವಿಜಯ್‍ ಕಿರಗಂದೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

  • ಇಂದಿನಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ‘ಸಲಾರ್’ ಅಬ್ಬರ

    ಇಂದಿನಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ‘ಸಲಾರ್’ ಅಬ್ಬರ

    ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾ ಇಂದಿನಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ (release) ಕಾಣುತ್ತಿದೆ. ಬೆಳಗ್ಗೆಯಿಂದಲೇ ಸಲಾರ್ ಅಭಿಮಾನಿಗಳು ಚಿತ್ರವನ್ನು ನೋಡಲು ಸಾಲುಗಟ್ಟಿ ನಿಂತಿದ್ದಾರೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಸಲಾರ್ ಸಿನಿಮಾ ರಿಲೀಸ್ ಆಗಿದೆ.

    ಲಾರ್ (Salaar) ಸಿನಿಮಾದಲ್ಲಿ ಯಶ್ (Yash) ನಟಿಸಿದ್ದಾರೆ ಎಂದೆಲ್ಲ ಸುದ್ದಿ ಹರಿಬಿಡಲಾಗಿತ್ತು. ಕೆಜಿಎಫ್ ಸಿನಿಮಾದ ಪಾತ್ರವೊಂದು ಸಲಾರ್ ನಲ್ಲಿ ಎಂಟ್ರಿ ಕೊಡಲಾಗಿದೆ. ಅದು ಯಶ್ ಪಾತ್ರವಾಗಿದೆ ಎಂದು ಹೇಳಲಾಗಿತ್ತು. ಅದಕ್ಕೀಗ ಸ್ಪಷ್ಟನೆ ನೀಡಿದ್ದಾರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ (Prashant Neel). ಸಲಾರ್ ಸಿನಿಮಾದಲ್ಲಿ ಯಶ್ ಇದ್ದಾರೆ ಅಂತ ಹೇಳೋಕೆ ನನಗೇಕೆ ಅಳುಕು. ಅವರು ಇದ್ದಾರೆ ಅಂದಿದ್ದರೆ, ಅದನ್ನೂ ಪ್ರಚಾರ ಮಾಡುತ್ತಿದ್ದೆವು. ಪ್ರಚಾರಕ್ಕೆ ಅದು ಪ್ಲಸ್ ಆಗಿರೋದು. ಆದರೆ, ಈ ಸಿನಿಮಾದಲ್ಲಿ ಅವರು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಸಲಾರ್ ಸಿನಿಮಾದ ಕುರಿತಾಗಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಯಶ್ ಬಗ್ಗೆಯೂ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಜೀವನ ಪರ್ಯಂತ ಯಶ್ ನನ್ನ ಜೊತೆಯಾಗಿಯೇ ಇರುತ್ತಾರೆ ಎಂದು ಹೇಳುವ ಮೂಲಕ, ಯಶ್ ಮತ್ತು ಪ್ರಶಾಂತ್ ನೀಲ್ ಮಧ್ಯ ಯಾವುದೂ ಸರಿ ಇಲ್ಲ ಎನ್ನುವುದಕ್ಕೂ ಅವರು ಉತ್ತರ ನೀಡಿದ್ದಾರೆ.

    ಇಂದು ವಿಶ್ವದಾದ್ಯಂತ ಸಲಾರ್ ಸಿನಿಮಾ ರಿಲೀಸ್ ಆಗಿದೆ. ಸಿನಿಮಾ ಬಿಡುಗಡೆ ಆಗುವ ಒಂದು ದಿನ ಮುನ್ನ ಚಿತ್ರದ ಮತ್ತೊಂದು ಹಾಡು ಬಿಡುಗಡೆ ಮಾಡಿದ ಹೊಂಬಾಳೆ ಫಿಲ್ಮ್ಸ್. ಪ್ರತಿಕಥೆಯ ಹೆಸರಿನಲ್ಲಿ ರಿಲೀಸ್ ಆಗಿರುವ ಹಾಡಿನಲ್ಲಿ ಶಾಂತಿಯ ಮಂತ್ರವನ್ನು ಹೇಳುವ ಪ್ರಯತ್ನ ಮಾಡಲಾಗಿದೆ. ನಾಯಕನ ತಾಯಿಯು ಟೀಚರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮಗನಿಗೆ ಕ್ಷಮೆಯಿಂದ ಗೆಲ್ಲುವ ಮಾತುಗಳನ್ನು ಹೇಳಲಿಸಲಾಗಿದೆ.

     

    ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಪೃಥ್ವಿರಾಜ್‍ ಸುಕುಮಾರನ್‍, ಶ್ರುತಿ ಹಾಸನ್‍, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಪ್ರಶಾಂತ್ ನೀಲ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್‍ನಡಿ ವಿಜಯ್‍ ಕಿರಗಂದೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

  • 3ನೇ ಬ್ಯಾಚ್ ಒತ್ತೆಯಾಳುಗಳನ್ನು ಇಂದು ಬಿಡುಗಡೆ ಮಾಡಲಿದೆ ಹಮಾಸ್

    3ನೇ ಬ್ಯಾಚ್ ಒತ್ತೆಯಾಳುಗಳನ್ನು ಇಂದು ಬಿಡುಗಡೆ ಮಾಡಲಿದೆ ಹಮಾಸ್

    ಟೆಲ್ ಅವಿವ್: ಇಸ್ರೇಲ್ (Israel) ಹಾಗೂ ಹಮಾಸ್ (Hamas) ನಡುವಿನ ಕದನಕ್ಕೆ ವಿರಾಮ ನೀಡಿದ ಬಳಿಕ ಇದೀಗ ಹಮಾಸ್ 3ನೇ ಬ್ಯಾಚ್ ಒತ್ತೆಯಾಳುಗಳನ್ನು (Hostages) ಬಿಡುಗಡೆ ಮಾಡಲು ಮುಂದಾಗಿದೆ.

    ಹಮಾಸ್ ಭಾನುವಾರ ಬಿಡುಗಡೆ ಮಾಡಲಿರುವ ಒತ್ತೆಯಾಳುಗಳ ಪಟ್ಟಿಯನ್ನು ಇಸ್ರೇಲ್ ಸ್ವೀಕರಿಸಿದೆ ಎಂದು ವರದಿಯಾಗಿದೆ. ಇಸ್ರೇಲ್ ಮತ್ತು ಹಮಾಸ್ ನಡುವೆ ಮಧ್ಯವರ್ತಿಯಾಗಿ ಕತಾರ್ ನಿರ್ವಹಿಸುತ್ತಿದ್ದು, ಒತ್ತೆಯಾಳುಗಳ ಪಟ್ಟಿಯನ್ನು ಇಸ್ರೇಲ್‌ಗೆ ನೀಡಿದೆ.

    ಇಸ್ರೇಲ್ ಹಾಗೂ ಹಮಾಸ್ ನಡುವೆ 4 ದಿನಗಳ ಕದನ ವಿರಾಮ ಘೋಷಿಸಿ ಇಂದಿಗೆ 3 ದಿನವಾಗಿದೆ. ಕದನ ವಿರಾಮವನ್ನು ಇನ್ನಷ್ಟು ವಿಸ್ತರಿಸಿದ್ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಕತಾರ್ ತಿಳಿಸಿದೆ. ಇದನ್ನೂ ಓದಿ: ಕಡ್ಲೆಕಾಯಿ ಪರಿಷೆಯ ತುತ್ತೂರಿ ವಿರುದ್ಧ ಬಸವನಗುಡಿ ನಿವಾಸಿಗಳು ಗರಂ!

    ಹಮಾಸ್ ಶನಿವಾರ ರಾತ್ರಿ ಒತ್ತೆಯಾಳುಗಳ 2ನೇ ಬ್ಯಾಚ್‌ನಲ್ಲಿ 17 ಜನರನ್ನು ಬಿಡುಗಡೆ ಮಾಡಿತು. ಇವರಲ್ಲಿ 13 ಇಸ್ರೇಲಿಗಳು ಮತ್ತು 4 ಥಾಯ್ ಪ್ರಜೆಗಳು ಸೇರಿದ್ದಾರೆ. 4 ದಿನಗಳ ಅವಧಿಯಲ್ಲಿ ಒಟ್ಟು 50 ಒತ್ತೆಯಾಳುಗಳನ್ನು 150 ಪ್ಯಾಲೇಸ್ತೀನಿಯನ್ ಕೈದಿಗಳೊಂದಿಗೆ ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ಒತ್ತೆಯಾಳುಗಳ ವಿನಿಮಯವಾಗಿ ಇಸ್ರೇಲ್ 39 ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಮಡಿಕೇರಿಯ ಈ ಗ್ರಾಮದ 30 ಯುವಕರಿಗಿಲ್ಲ ಕಂಕಣ ಭಾಗ್ಯ

  • ನ.24ಕ್ಕೆ ಕನ್ನಡದಲ್ಲಿ ಮತ್ತೆ 5 ಸಿನಿಮಾಗಳು ರಿಲೀಸ್

    ನ.24ಕ್ಕೆ ಕನ್ನಡದಲ್ಲಿ ಮತ್ತೆ 5 ಸಿನಿಮಾಗಳು ರಿಲೀಸ್

    ನ್ನಡ ಚಿತ್ರೋದ್ಯಮಕ್ಕೆ ಮತ್ತೊಂದು ಶುಕ್ರವಾರ ಬಂದಿದೆ. ವಾರ ವಾರ ಕನ್ನಡದ ಐದಾರು ಸಿನಿಮಾಗಳು ರಿಲೀಸ್ (Release) ಆಗುವ ಮೂಲಕ ಒಂದು ರೀತಿಯಲ್ಲಿ ಸಂಭ್ರಮ ಮತ್ತೊಂದು ರೀತಿಯಲ್ಲಿ ಆತಂಕ ಸೃಷ್ಟಿ ಮಾಡುತ್ತಿವೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ವಾರಕ್ಕೆ 20ಕ್ಕೂ ಹೆಚ್ಚು ಚಿತ್ರಗಳು ರಿಲೀಸ್ ಆಗುವುದರಿಂದ ಯಾವ ಸಿನಿಮಾವನ್ನು ನೋಡಬೇಕು ಎನ್ನುವ ಗೊಂದಲಕ್ಕೆ ಬಿದ್ದಿದ್ದಾನೆ ಪ್ರೇಕ್ಷಕ.

    ಈ ವಾರವೂ ಕನ್ನಡದ ಐದು ಚಿತ್ರಗಳು ಬಿಡುಗಡೆ ಆಗುತ್ತಿವೆ. ಸೂರಿ ಮತ್ತು ಅಭಿಷೇಕ್ ಅಂಬರೀಶ್ (Abhishek Ambarish) ಕಾಂಬಿನೇಷನ್ ನ ‘ಬ್ಯಾಡ್ ಮ್ಯಾನರ್ಸ್’, ಡಾರ್ಲಿಂಗ್ ಕೃಷ್ಣ ನಟನೆಯ ಶುಗರ್ ಫ್ಯಾಕ್ಟರಿ, ರಾಜ್ ಬಿ ಶೆಟ್ಟಿ (Raj B Shetty) ನಿರ್ದೇಶಿಸಿ, ನಟಿಸಿರುವ ಹಾಗೂ ರಮ್ಯಾ (Ramya) ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ ಸೇರಿದಂತೆ ಈ ವಾರ ಐದು ಚಿತ್ರಗಳು ಬಿಡುಗಡೆ ಆಗುತ್ತಿವೆ.

     

    ಈಗಾಗಲೇ ಬ್ಯಾಡ್ ಮ್ಯಾನರ್ಸ್ ಮತ್ತು ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಕುತೂಹಲ ಮೂಡಿಸಿವೆ. ಬ್ಯಾಡ್ ಮ್ಯಾನರ್ಸ್ ಚಿತ್ರದ ಪ್ರಚಾರಕ್ಕಾಗಿ ಸ್ವತಃ ದರ್ಶನ್ ಅವರೇ ಅಖಾಡಕ್ಕೆ ಇಳಿದಿದ್ದಾರೆ. ನಾಳೆ ಇನ್ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ. ನಾಳೆ ಯಾರಿಗೆ ಗೆಲುವು ಸಿಗುತ್ತೆ ಕಾದು ನೋಡಬೇಕು.

  • ಸಿನಿ ಸುನಾಮಿ: ನಾಳೆ ಬರೋಬ್ಬರಿ 31 ಸಿನಿಮಾಗಳು ರಿಲೀಸ್

    ಸಿನಿ ಸುನಾಮಿ: ನಾಳೆ ಬರೋಬ್ಬರಿ 31 ಸಿನಿಮಾಗಳು ರಿಲೀಸ್

    ಸಾಮಾನ್ಯವಾಗಿ ಹಬ್ಬಗಳ ದಿನದಂದು ಹೆಚ್ಚೆಚ್ಚು ಸಿನಿಮಾಗಳು (Movie) ಬಿಡುಗಡೆ (Release) ಆಗುವುದು ವಾಡಿಕೆ. ಆದರೆ, ಹಬ್ಬ ಮುಗಿದ ನಂತರವೂ ಅಚ್ಚರಿ ಎನ್ನುವಂತೆ ನಾಳೆಗೆ 31 ಚಿತ್ರಗಳು ರಿಲೀಸ್ ಆಗುತ್ತಿವೆ. ಈ ನಡೆಯನ್ನು ಸಂಭ್ರಮಿಸಬೇಕೋ ಅಥವಾ ಆತಂಕ ಪಡಬೇಕು ಗೊತ್ತಿಲ್ಲ ಎನ್ನುತ್ತಾರೆ ಸಿನಿ ಪ್ರೇಮಿಗಳು.

    ರಿಲೀಸ್ ಆಗುತ್ತಿರುವ 31 ಚಿತ್ರಗಳೂ ಕನ್ನಡದಲ್ಲ. ತಮಿಳು, ತೆಲುಗು (Telugu), ಮಲಯಾಳಂ, ಕನ್ನಡ (Kannada), ಹಿಂದಿ ಹೀಗೆ ವಿವಿಧ ಭಾಷೆಯ ಸಿನಿಮಾಗಳು ಅವಾಗಿವೆ. ಇವುಗಳಲ್ಲಿ ಕನ್ನಡದ್ದೇ ಎಂಟು ಚಿತ್ರಗಳಿವೆ. ರಕ್ಷಿತ್ ಶೆಟ್ಟಿ ನಟನೆಯ ಸಪ್ತಸಾಗರದಾಚೆ ಎಲ್ಲೋ ಸಿನಿಮಾ ಕೂಡ ಸೇರಿಕೊಂಡಿದೆ.

     

    ತೆಲುಗಿನ 9 ಚಿತ್ರಗಳು, ತಮಿಳಿನ 4 (Tamil) ಹಾಗೂ ಮಲಯಾಳಂನ 9 (Malayalam) ಚಿತ್ರಗಳು ನಾಳೆ ತೆರೆಗೆ ಅಪ್ಪಳಿಸುತ್ತಿವೆ. ಈ ಪ್ರಮಾಣದಲ್ಲಿ ಸಿನಿಮಾ ಬಿಡುಗಡೆ ಆಗುತ್ತಿರುವುದರಿಂದ ಯಾರಿಗೆ ಚಿತ್ರಮಂದಿರ ಸಿಗುತ್ತೋ, ಯಾರಿಗೆ ಸಿಗುವುದಿಲ್ಲವೋ ಕಾದು ನೋಡಬೇಕು. ಒಟ್ಟಿನಲ್ಲಿ ಸಿನಿ ಪ್ರಿಯರಿಗೆ ನಾಳೆ ಸಿನಿಮೋತ್ಸವ ನಡೆಯೋದು ಗ್ಯಾರಂಟಿ.

  • ಸಂಕ್ರಾಂತಿ ಹಬ್ಬಕ್ಕೆ ಧನುಷ್ ನಟನೆಯ ಕ್ಯಾಪ್ಟನ್ ಮಿಲ್ಲರ್

    ಸಂಕ್ರಾಂತಿ ಹಬ್ಬಕ್ಕೆ ಧನುಷ್ ನಟನೆಯ ಕ್ಯಾಪ್ಟನ್ ಮಿಲ್ಲರ್

    ಹೆಸರಾಂತ ನಟ ಧನುಷ್ (Dhanush) ಮತ್ತು ಕನ್ನಡದ ಸೆಂಚ್ಯೂರಿ ಸ್ಟಾರ್ ಶಿವರಾಜ್ ಕುಮಾರ್ (Shivraj Kumar) ಕಾಂಬಿನೇಷನ್ ನ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಸಂಕ್ರಾಂತಿ (ಪೊಂಗಲ್) (Sankranti) ಹಬ್ಬಕ್ಕೆ ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಇತ್ತೀಚೆಗಷ್ಟೇ ಸಿನಿಮಾದ ಪೋಸ್ಟರ್ (Poster) ರಿಲೀಸ್ ಆಗಿತ್ತು, ವಿವಿಧ ಬಗೆಯ ಬಂದೂಕು ಹಿಡಿದುಕೊಂಡಿರುವ ಇಬ್ಬರು ಸ್ಟಾರ್ ನಟರು ತೆರೆಯ ಮೇಲೆ ಕಾಳಗ ಮಾಡಲಿದ್ದಾರೆ ಎನ್ನುವ ಕುತೂಹಲವನ್ನು ಉಂಟು ಮಾಡಿತ್ತು.

    ಧನುಷ್ ಕೈಯಲ್ಲಿ ಒಂದು ಬಗೆಯ ಬಂದೂಕು ಇದ್ದರೆ, ಶಿವರಾಜ್ ಕುಮಾರ್ ಮತ್ತೊಂದು ಬಗೆಯ ಬಂದೂಕು ಹಿಡಿದಿದ್ದಾರೆ. ಇಬ್ಬರ ಲುಕ್ ಕೂಡ ಸಖತ್ ಕ್ಯಾಚಿ ಆಗಿದೆ. ಹೀಗಾಗಿ ತೆರೆಯ ಮೇಲೆ ಇಬ್ಬರೂ ಯಾವ ರೀತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಇರುವ ಕಾತರ.

    ಆಕಸ್ಮಿಕ ಎನ್ನುವಂತೆ ಧನುಷ್ ಜೊತೆ ಮಾಡುತ್ತಿದ್ದ ಕ್ಯಾಪ್ಟನ್ ಮಿಲ್ಲರ್ (Captain Miller) ಸಿನಿಮಾದ ಕೆಲವು ವಿಷಯಗಳು ಸೋರಿಕೆಯಾಗಿವೆ. ಅಂದರೆ, ಶಿವರಾಜ್ ಕುಮಾರ್ ಅವರಿಗೆ ಕೇಶವಿನ್ಯಾಸ ಮಾಡುತ್ತಿರುವ ರಾಜು ಎನ್ನುವವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪಾತ್ರ ಮತ್ತು ಸಿನಿಮಾದ ಕಥೆಯನ್ನೂ ಅವರು ಬಿಟ್ಟುಕೊಟ್ಟಿದ್ದಾರೆ.

     

    ಕಾಡು ಜನರು ಮತ್ತು ಬ್ರಿಟಿಷ್ ರ ನಡುವಿನ ಹೋರಾಟದ ಕಥೆಯನ್ನು ಕ್ಯಾಪ್ಟನ್ ಮಿಲ್ಲರ್ ನಲ್ಲಿ ಹೇಳುತ್ತಿದ್ದಾರಂತೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಾಡು ಜನರ ಪಾತ್ರದಲ್ಲಿ ಶಿವಣ್ಣ ಮತ್ತು ಧನುಷ್ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಧನುಷ್ ಅಣ್ಣನ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ.