Tag: Relief Center

  • ಧ್ವಜಾರೋಹಣ ಮಾಡಬೇಕಿದೆ, ಶಾಲೆ ಖಾಲಿ ಮಾಡಿ- ನಿರಾಶ್ರಿತರಿಗೆ ಪಿಡಿಒ ಅವಾಜ್

    ಧ್ವಜಾರೋಹಣ ಮಾಡಬೇಕಿದೆ, ಶಾಲೆ ಖಾಲಿ ಮಾಡಿ- ನಿರಾಶ್ರಿತರಿಗೆ ಪಿಡಿಒ ಅವಾಜ್

    ಬೆಳಗಾವಿ: ಪರಿಹಾರ ಕೇಂದ್ರದಲ್ಲಿದ್ದ ನಿರಾಶ್ರಿತರಿಗೆ ಶಾಲೆ ಖಾಲಿ ಮಾಡಿ ಎಂದು ಧಮ್ಕಿ ಹಾಕಿರುವ ಆರೋಪವೊಂದು ಪಿಡಿಒ, ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಪೊಲೀಸರ ವಿರುದ್ಧ ಕೇಳಿಬಂದಿದೆ.

    ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಿರೇಹಟ್ಟಿಹೋಳಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ನೂರಕ್ಕೂ ಅಧಿಕ ನಿರಾಶ್ರಿತರಿದ್ದು, ಈಗ ಅಗಸ್ಟ್ 15 ರಂದು ಧ್ವಜಾರೋಹಣ ಮಾಡಬೇಕಿದೆ ಇಂದು ಶಾಲೆ ಬಿಡುವಂತೆ ಅಧಿಕಾರಿಗಳು ಅವಾಜ್ ಹಾಕಿದ್ದಾರೆ ಎನ್ನಲಾಗಿದೆ.

    ಅಧಿಕಾರಿಗಳ ಧಮ್ಕಿಯಿಂದ ಮನೆ ಕಳೆದುಕೊಂಡವರು ಕಂಗಾಲಾಗಿದ್ದು, ಎಲ್ಲಿಗೆ ಹೋಗಬೇಕು ಎಂದು ದಿಕ್ಕೆ ತೋಚದಂತಾಗಿ ಕಣ್ಣೀರಿಡುತ್ತಿದ್ದಾರೆ. ಸರ್ಕಾರದಿಂದ 3,800 ಚೆಕ್ ಕೊಟ್ಟು ಈಗ ಜಾಗ ಖಾಲಿ ಮಾಡಿಸುತ್ತಿರುವ ಪಿಡಿಒ ಮತ್ತು ಪೊಲೀಸರ ವಿರುದ್ಧ ನಿರಾಶ್ರಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ನಮ್ಗೆ ಅನ್ನ ಬೇಡ, ನಮ್ಮ ಜಾನುವಾರುಗಳಿಗೆ ಕೊಡಿ: ಗೋಕಾಕ್ ರೈತರ ಕಣ್ಣೀರು

    ನಮ್ಗೆ ಅನ್ನ ಬೇಡ, ನಮ್ಮ ಜಾನುವಾರುಗಳಿಗೆ ಕೊಡಿ: ಗೋಕಾಕ್ ರೈತರ ಕಣ್ಣೀರು

    ಬೆಳಗಾವಿ: ನಮಗೆ ಅನ್ನ ಬೇಡ, ನಮ್ಮ ಜಾನುವಾರುಗಳಿಗೆ ಕೊಡಿ ಎಂದು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಗೋಕಾಕ್ ರೈತರು ಕಣ್ಣೀರು ಹಾಕಿದ್ದಾರೆ.

    ಗೋಕಾಕ್‍ನಲ್ಲಿ ಮನೆ ಮಠ ಕಳೆದುಕೊಂಡ ಜನರು ತಮ್ಮ ಜಾನುವಾರಗಳನ್ನು ಕರೆ ತಂದು ಅದರ ಜೊತೆಯೇ ಎಪಿಎಂಸಿಯಲ್ಲಿ ಬದುಕುತ್ತಿದ್ದಾರೆ. ಈ ವೇಳೆ ಸಂತ್ರಸ್ತರು ಪರಿಹಾರ ಕೇಂದ್ರಕ್ಕೆ ಹೋಗದೆ ತಾವು ಸಾಕಿದ ಎಮ್ಮೆ, ಹಸು, ಕರು ಆಡುಗಳ ಜೊತೆ ಬದುಕುತ್ತಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರೈತರು, ನಮಗೆ ಗಂಜಿ ಬೇಡ, ನಮ್ಮ ಜಾನುವಾರುಗಳಿಗೆ ಮೇವು ಕೊಡಿ. ಜಾನುವಾರುಗಳಿಗೆ ಮೇವು ಕೊಡಲು ನಿಮಗೆ ಸಾಧ್ಯವಾಗದೇ ಇದ್ದರೆ ಇದನ್ನು ಯಾರು ಬೇಕಾದ್ರೂ ಕರೆದುಕೊಂಡು ಹೋಗಿ ಎಂದು ರೈತರು ಕಣ್ಣೀರು ಹಾಕಿದ್ದಾರೆ.

    ನೀರಿನಲ್ಲೇ ನಮ್ಮ ಜಾನುವಾರುಗಳನ್ನು ಕರೆದುಕೊಂಡು ಬಂದಿದ್ದೇವೆ. ನಾವು ಚಿನ್ನ, ಹಣವನ್ನು ಮನೆಯಲ್ಲಿಯೇ ಬಿಟ್ಟು ಜೀವ ಕೈಯಲ್ಲಿ ಹಿಡಿದುಕೊಂಡು ಇಲ್ಲಿಗೆ ಬಂದಿದ್ದೇವೆ. ಆದರೆ ಮನೆಯಲ್ಲಿ ಕೂಡಿಟ್ಟ ಚಿನ್ನವನ್ನು, ಹಣವನ್ನು ಕಳ್ಳರು ಕದಿಯುತ್ತಿದ್ದಾರೆ ಎಂದು ಮತ್ತೊಬ್ಬ ರೈತ ನೋವು ತೋಡಿಕೊಂಡಿದ್ದಾರೆ.

    ನಮಗೆ ಊಟ ಮಾಡಲು ಇಲ್ಲಿ ಅನ್ನ, ನೀರು ಇದೆ. ಅಲ್ಲದೆ ಜನರು ಬಟ್ಟೆ ಸೇರಿ ಅಗತ್ಯ ವಸ್ತುಗಳನ್ನು ನೀಡುತ್ತಿದ್ದಾರೆ. ನಮಗೆ ಯಾವುದಕ್ಕೂ ಇಲ್ಲಿ ಕೊರತೆ ಇಲ್ಲ. ಆದರೆ ಜಾನುವಾರುಗಳಿಗೆ ಒಂದು ದಿನಕ್ಕೆ ಮಾತ್ರ ಮೇವು ಇದೆ. ಆದರೆ ನಾಳೆಯಿಂದ ಜಾನುವಾರುಗಳಿಗೆ ಮೇವು ಸಿಗುತ್ತಾ ಇಲ್ಲವಾ ಗೊತ್ತಿಲ್ಲ ಎಂದು ರೈತರು ಕಣ್ಣೀರು ಹಾಕಿದ್ದಾರೆ.

  • ಕುಶಾಲನಗರದ ಪರಿಹಾರ ಕೇಂದ್ರದಲ್ಲಿ ನಿರಾಶ್ರಿತರ ಪರದಾಟ

    ಕುಶಾಲನಗರದ ಪರಿಹಾರ ಕೇಂದ್ರದಲ್ಲಿ ನಿರಾಶ್ರಿತರ ಪರದಾಟ

    ಮಡಿಕೇರಿ: ಮಹಾಮಳೆಗೆ ತತ್ತರಿಸಿ ಹೋಗಿದ್ದ ಜನಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳು ಇಲ್ಲ ಎಂದು ಅರೋಪಿಸಿ ದಿಢೀರ್ ಅಗಿ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದ ವಾಲ್ಮೀಕಿ ಭವನದಲ್ಲಿ ನಡೆದಿದೆ.

    ಬುಧವಾರ ಮಧ್ಯಾಹ್ನದ ಊಟವನ್ನು ಸಂಜೆ 4 ಗಂಟೆಗೆ ನೀಡಿದ್ದಾರೆ. ಅದರೆ ಊಟ ಅರ್ಧ ಬೆಂದಿರುವ ಅನ್ನ ನೀಡಿದ್ದಾರೆ. ಅಲ್ಲದೇ ಮುನ್ನೂರು ಜನಕ್ಕೆ ಕೇವಲ ಮೂರು ಶೌಚಾಲಯಗಳು ಇದೆ. ವಿದ್ಯುತ್ ವ್ಯವಸ್ಥೆ ಇಲ್ಲದೆ ಕತ್ತಲೆಯಲ್ಲೆ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನಿರಾಶ್ರಿತರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

    ಇಷ್ಟು ದಿನ ಮಡಿಕೇರಿ ಸೇವಾ ಭಾರತೀಯವರು ತಮ್ಮನ್ನು ಮಕ್ಕಳಂತೆ ನೋಡಿಕೋಳುತ್ತಿದ್ದರು. ಅದರೆ ಇಲ್ಲಿ ಅಧಿಕಾರಿಗಳು ತಮ್ಮನೆ ಭಿಕ್ಷುಕರಂತೆ ನೋಡುತ್ತಿದ್ದಾರೆ. ಅವ್ಯವಸ್ಥೆಯನ್ನು ಪ್ರಶ್ನೆ ಮಾಡಿದ್ದಾರೆ ಪೊಲೀಸರನ್ನು ಕರೆಸಿ ಧಮ್ಕಿ ಹಾಕುತ್ತಾರೆ ಎಂದು ಆರೋಪಿಸುತ್ತಿದ್ದಾರೆ. ಸದ್ಯಕ್ಕೆ ಪರಿಸ್ಥಿತಿಯನ್ನು ಪೊಲೀಸರು ತಿಳಿಗೊಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪರಿಹಾರ ಸಾಮಗ್ರಿಗಳನ್ನು ಭುಜದ ಮೇಲೆ ಹೊತ್ತು ಸಾಗಿದ ಸಚಿವ- ಇತ್ತ ಬಿಸ್ಕೆಟ್ ಎಸೆದ ರೇವಣ್ಣ!

    ಪರಿಹಾರ ಸಾಮಗ್ರಿಗಳನ್ನು ಭುಜದ ಮೇಲೆ ಹೊತ್ತು ಸಾಗಿದ ಸಚಿವ- ಇತ್ತ ಬಿಸ್ಕೆಟ್ ಎಸೆದ ರೇವಣ್ಣ!

    ತಿರುವನಂತಪುರ: ಕೇರಳದ ಶಿಕ್ಷಣ ಸಚಿವರಾದ ರವೀಂದ್ರನಾಥ್‍ರವರು ಪರಿಹಾರ ಸಾಮಗ್ರಿಗಳನ್ನು ಸ್ವತಃ ಹೆಗಲ ಮೇಲೆ ಹೊತ್ತುಕೊಂಡು ನಿರಾಶ್ರಿತ ಕೇಂದ್ರಗಳಿಗೆ ಸಾಗಿಸಿದ್ದಾರೆ.

    ತುರ್ತು ಪರಿಸ್ಥಿತಿ ಅಥವಾ ಪ್ರವಾಹ ಪರಿಸ್ಥಿತಿ ಸಂದರ್ಭಗಳಲ್ಲಿ ಅಧಿಕಾರಿಗಳು ಹಾಗೂ ಸಚಿವರು ಯಾವ ರೀತಿ ಜನರ ಕಷ್ಟಕ್ಕೆ ಸ್ಪಂದಿಸುತ್ತಾರೆ ಎನ್ನುವುದು ಮುಖ್ಯ. ಇದೇ ರೀತಿ ಪ್ರಕೃತಿ ವಿಕೋಪ ಸಂಭವಿಸಿದ ಸಂದರ್ಭಗಳಲ್ಲಿ ಆಳುವ ಮಂದಿ ಹೇಗೆ ನಡ್ಕೋತಾರೆ ಅನ್ನೋದಕ್ಕೆ ಎರಡು ಉದಾಹರಣೆಗಳು ನಮ್ಮ ಮುಂದಿವೆ.

    ಕೇರಳದ ತ್ರಿಶೂರ್ ಜಿಲ್ಲೆಯ ನಿರಾಶ್ರಿತ ಕೇಂದ್ರದಲ್ಲಿ ನೆಲೆಸಿದ್ದ ನಿರಾಶ್ರಿತರಿಗೆ ಪರಿಹಾರ ಸಾಮಗ್ರಿಗಳು ಸಿಗದೇ ಜನ ನರಕ ಯಾತನೇ ಅನುಭವಿಸುತ್ತಿದ್ದರು. ಇದರ ಮಾಹಿತಿ ಪಡೆದ ರವೀಂದ್ರನಾಥ್‍ರವರು ಖುದ್ದು ಸ್ಥಳಕ್ಕೆ ಪರಿಹಾರ ಸಾಮಗ್ರಿಗಳ ಸಮೇತ ಭೇಟಿ ನೀಡಿದ್ದರು. ಈ ವೇಳೆ ಆಹಾರ ಸಾಮಾಗ್ರಿಗಳನ್ನು ತಮ್ಮ ಹೆಗಲ ಮೇಲೆಯೇ ಇಟ್ಟುಕೊಂಡು ನಿರಾಶ್ರಿತ ಕೇಂದ್ರಕ್ಕೆ ತಲುಪಿಸುವ ಕೆಲಸ ಮಾಡಿದ್ದಾರೆ. ಜನರ ಕಷ್ಟಕ್ಕೆ ಸಚಿವರು ಹೆಗಲು ಕೊಟ್ಟಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ಸಚಿವರನ್ನು ಜನ ಬಾಹುಬಲಿಯಂದೇ ಕರೆಯುತ್ತಿದ್ದಾರೆ.

    ಆದರೆ ಇದಕ್ಕೆ ಭಿನ್ನವಾದ ಘಟನೆ ನಮ್ಮ ರಾಜ್ಯದಲ್ಲಿ ನಡೆದಿದ್ದು ದುರಾದೃಷ್ಟವೇ ಸರಿ, ಕಳೆದ ವಾರ ಲೋಕೋಪಯೋಗಿ ಸಚಿವರಾದ ಎಚ್.ಡಿ.ರೇವಣ್ಣನವರು ಹಾಸನ ಜಿಲ್ಲೆಯ ರಾಮನಾಥಪುರ ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿದ್ದಾಗ, ನಿರಾಶ್ರಿತರಿಗೆ ಪ್ರಾಣಿಗಳಿಗೆ ಎಸೆಯುವ ರೀತಿ ಬಿಸ್ಕೆಟ್ ಪ್ಯಾಕ್‍ಗಳನ್ನು ಎಸೆಯುವ ಮೂಲಕ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಎಂತಹುದೇ ಅನಿವಾರ್ಯ ಪರಿಸ್ಥಿತಿಯಲ್ಲಿದ್ದರು, ಆ ರೀತಿ ನಡೆದುಕೊಳ್ಳಬಾರದಿತ್ತೆಂದು ಸಾರ್ವಜನಿಕರು ಸಚಿವರ ನಡೆಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು.  ಇದನ್ನೂ ಓದಿ: ಅಧಿಕಾರದ ಮದದಲ್ಲಿ ಅಮಾನವೀಯ ಕೆಲಸ- ಕೊಡಗು ಸಂತ್ರಸ್ತರಿಗೆ ಬಿಸ್ಕೆಟ್ ಎಸೆದ ಸೂಪರ್ ಸಿಎಂ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕನಸಿನ ಮನೆಗಳನ್ನು ಬಿಟ್ಟು ಗ್ರಾಮಗಳನ್ನೇ ತೊರೆದ ಗ್ರಾಮಸ್ಥರು

    ಕನಸಿನ ಮನೆಗಳನ್ನು ಬಿಟ್ಟು ಗ್ರಾಮಗಳನ್ನೇ ತೊರೆದ ಗ್ರಾಮಸ್ಥರು

    ಮಡಿಕೇರಿ: ಜೀವ ಉಳಿಸಿಕೊಳ್ಳಲು ಕನಸಿನ ಮನೆಗಳನ್ನು ತೊರೆದು ಜನರು ಗ್ರಾಮಗಳನ್ನು ಖಾಲಿ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹದ ಪರಿಣಾಮ ಮಾದಪುರ ಸಮೀಪದ ಗ್ರಾಮಗಳಲ್ಲಿ ಜನರೇ ಇಲ್ಲದೇ ಖಾಲಿಯಾಗುತ್ತಿವೆ.

    ಮಾದಪುರ ಸಮೀಪದ ಹೆಮ್ಮಿಯಾಲ, ಹಟ್ಟಿಹೊಳೆ, ಮುಕ್ಕೋಡ್ಲು ಗ್ರಾಮಗಳಲ್ಲಿ ಜನರೇ ಇಲ್ಲ. ಗ್ರಾಮದ ಎಲ್ಲ ಮನೆಗಳಿಗೆ ಬೀಗ ಹಾಕಲಾಗಿದೆ. ಮೂರು ಗ್ರಾಮಗಳಲ್ಲಿ ಮನೆಗಳು ಬಹುತೇಕ ಕುಸಿತವಾಗಿದ್ದು, ಕೆಲಕಡೆ ನೀರು ಸಹ ನುಗ್ಗಿದೆ. ಅಬ್ಬರಿಸಿ ಬೊಬ್ಬಿರಿದು ರೌದ್ರ ನರ್ತನ ತೋರಿದ್ದ ಹಟ್ಟಿಹೊಳೆ ಈಗ ಸ್ವಲ್ಪ ಶಾಂತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    ಹಟ್ಟಿಹೊಳೆಯಬ ರೌದ್ರ ನರ್ತನದಿಂದಾಗಿ ಮುಕ್ಕೋಡ್ಲು ಗ್ರಾಮದ ಜನರು ಅಪಾಯಕ್ಕೆ ಸಿಲುಕಿದ್ದರು. ಸದ್ಯ ಹಟ್ಟಿಹೊಳೆ ಆರ್ಭಟ ತಗ್ಗಿದ್ದು, ಮುಕ್ಕೋಡ್ಲು ರಸ್ತೆಯಿಂದ ನೀರು ಬಿಟ್ಟಿದೆ. ರಸ್ತೆಯನ್ನ ತಕ್ಕಮಟ್ಟಿಗೆ ದುರಸ್ತಿ ಮಾಡುವ ಕಾರ್ಯಕೂಡ ನಡೆಯುತ್ತಿದೆ. ಮಳೆಯ ಅವಾಂತರಕ್ಕೆ ಮಡಿಕೇರಿಯ ಮಕಂದೂರಿನಲ್ಲಿ ಇಡೀ ಗುಡ್ಡವೇ ಕುಸಿದುಬಿದ್ದಿದ್ದು ಸುಮಾರು 40ಕ್ಕೂ ಹೆಚ್ಚು ಮನೆಗಳು ನೆಲಸಮವಾಗಿವೆ. ಸರ್ಕಾರ ನಮ್ಮೆಲ್ಲಾ ಮನೆಗಳನ್ನು ನಿರ್ಮಾಣ ಮಾಡಿಕೊಡಲಿ ಅಂತ ಅಲ್ಲಿಯ ಸ್ಥಳಿಯರು ಮನವಿ ಮಾಡಿಕೊಳ್ಳುತ್ತಿದ್ದಾರೆ.

    https://youtu.be/cOn-LBN3Qr4

     

  • ಕೊಡಗಿನ ಜಲಪ್ರಳಯಕ್ಕೆ 9 ಮಂದಿ ಸಾವು – 845ಕ್ಕೂ ಹೆಚ್ಚು ಮನೆಗಳು ನೀರುಪಾಲು

    ಕೊಡಗಿನ ಜಲಪ್ರಳಯಕ್ಕೆ 9 ಮಂದಿ ಸಾವು – 845ಕ್ಕೂ ಹೆಚ್ಚು ಮನೆಗಳು ನೀರುಪಾಲು

    ಕೊಡಗು: ಮಹಾಮಳೆಗೆ ಮಂಜಿನ ನಗರಿ ಜನ ಅಕ್ಷರಶಃ ತತ್ತರಿಸಿದ್ದಾರೆ. ಮರಣ ಮಳೆಗೆ ಈವರೆಗೆ 9 ಮಂದಿ ಸಾವನ್ನಪ್ಪಿದ್ದು, ಹಲವರು ಕಣ್ಮರೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಹಲವೆಡೆ ಗ್ರಾಮಕ್ಕೆ ಗ್ರಾಮವೇ ಕಣ್ಮರೆಯಾಗಿದೆ. ಮುಕ್ಕೊಡ್ಲುವಿನ 70ಕ್ಕೂ ಜನರು ತಮ್ಮ ಜೀವ ರಕ್ಷಣೆಗಾಗಿ ಬೆಟ್ಟ ಹತ್ತಿ ಕೂತಿದ್ದಾರೆ. ಹಲವೆಡೆ ಜನ ಬೆಟ್ಟ ಹತ್ತುತ್ತಿದ್ದು, ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಲಾಗುತ್ತಿದೆ. ಮುಕ್ಕೋಡ್ಲುವಿನಲ್ಲಿ 200ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಒಂದು ಕಡೆ ಮತ್ತೆ ಮಳೆ ಆರ್ಭಟ, ಇನ್ನೊಂದು ಕಡೆ ಗುಡ್ಡ ಕುಸಿತ ಭೀತಿಯಿಂದ ಜೀವವನ್ನು ಕೈಯಲ್ಲಿ ಹಿಡಿದು ಕುಳಿತಿದ್ದಾರೆ.

    ರಕ್ಕಸ ಮಳೆ ಕೊಡವರ ನಾಡನ್ನು ಇಂಚಿಂಚಾಗಿ ನುಂಗುತ್ತಿದೆ. ನೋಡನೋಡುತ್ತಿದ್ದಂತೆ ಗುಡ್ಡಗಳು ಕುಸಿಯುತ್ತಿದೆ. ಬೆಟ್ಟದಿಂದ ಕುಸಿದ ಮಣ್ಣು ನದಿಯಂತೆ ಹರಿಯುತ್ತಿದೆ. ಗುಡ್ಡದೊಂದಿಗೆ ರಸ್ತೆಗಳು ಸಹ ಧರಾಶಾಹಿಯಾಗಿದೆ. ಮಹಾಮಳೆಗೆ ಹಟ್ಟಿಹೊಳೆ ಎಂಬ ಊರು ರಾತ್ರೋರಾತ್ರಿ ನಾಪತ್ತೆಯಾಗಿದೆ. ಹಕ್ಕಿ ಹೊಳೆ ಗ್ರಾಮ ಜಲಾವೃತಗೊಂಡಿದ್ದು, ಜನರೆಲ್ಲಾ ಊರು ಬಿಟ್ಟಿದ್ದಾರೆ. ಇತ್ತ 900ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಬರೋಬ್ಬರಿ 123 ಕಿಲೋಮೀಟರ್ ರಸ್ತೆಗಳೇ ನಾಪತ್ತೆಯಾಗಿದೆ. ಇತ್ತ ಬರೋಬ್ಬರಿ 58 ಸೇತುವೆಗಳು ನಾಶಗೊಂಡಿವೆ ಎಂಬ ಅಂಕಿ ಅಂಶಗಳು ಲಭ್ಯವಾಗಿದೆ.

    3,800 ಲೈಟ್ ಕಂಬಗಳು ಹಾಳಾಗಿದ್ದು, 278 ಸರ್ಕಾರಿ ಕಟ್ಟಡಗಳು ಕುಸಿದುಬಿದ್ದಿವೆ. 3601 ಜನರ ರಕ್ಷಣೆ ಮಾಡಲಾಗಿದ್ದು, ಕೊಡಗಿನ 36 ಕ್ಯಾಂಪ್‍ಗಳಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ 9 ರಕ್ಷಣಾ ಕೇಂದ್ರದಲ್ಲಿ ಒಟ್ಟು 802 ಮಂದಿ ಆಶ್ರಯ ಪಡೆದಿರುವ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

    ಮಡಿಕೇರಿ ಸೇರಿ 10ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳಲ್ಲಿ ಜನ ಆಶ್ರಯ ಪಡೆದಿದ್ದಾರೆ. ಮನೆಯನ್ನು ಕಳೆದುಕೊಂಡವರು ಕಣ್ಣೀರಿಡುತ್ತಾ ಕಾಲಕಳೆಯುತ್ತಿದ್ದಾರೆ. ಒಂದು ಮನೆ ಕೊಡಿ ಎಂದು ನಿರಾಶ್ರಿತರು ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಕೊಡಗಿನಿಂದ ಸಕಲೇಶಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಬಿರುಕು ಬಿಟ್ಟು ಕಂದಕ ಸೃಷ್ಟಿಯಾಗಿದೆ. ಪರಿಣಾಮ ಈ ಮಾರ್ಗದ ಸಂಚಾರ ಸಂಪರ್ಕ ಕಡಿತಗೊಂಡಿದ್ದು, ರಕ್ಷಣಾ ಕಾರ್ಯ ವಿಳಂಬವಾಗುತ್ತಿದೆ ಎಂದು ತಿಳಿದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv