Tag: Religions

  • ಹಿಂದೂಗಳಿಗೂ ಇಲ್ಲಿ ನನ್ನಷ್ಟೇ ಹಕ್ಕಿದೆ – ಬಾಂಗ್ಲಾದೇಶ ಪ್ರಧಾನಿ ಹೇಳಿಕೆ

    ಹಿಂದೂಗಳಿಗೂ ಇಲ್ಲಿ ನನ್ನಷ್ಟೇ ಹಕ್ಕಿದೆ – ಬಾಂಗ್ಲಾದೇಶ ಪ್ರಧಾನಿ ಹೇಳಿಕೆ

    ಢಾಕಾ: ಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಇಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅಲ್ಲಿನ ಹಿಂದೂ ಸಮುದಾಯದ ಜನರೊಂದಿಗೆ ಸಂವಾದ ನಡೆಸಿದ್ದಾರೆ.

    ಈ ವೇಳೆ ಮಾತನಾಡಿದ ಅವರು, ಈ ದೇಶದಲ್ಲಿರುವ ಹಿಂದೂ ಸಮಯದಾಯಕ್ಕೆ ನನ್ನಷ್ಟೇ ಹಕ್ಕುಗಳಿವೆ. ನೀವು ಈ ದೇಶದ ಪ್ರಜೆಗಳೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಲಗಿದ್ದಾಗ ಐಟಿಬಿಪಿ ಶಿಬಿರದಿಂದ ಯೋಧರ ಎರಡು AK-47 ರೈಫಲ್ ಕಳವು – ವಿಶೇಷ ತಂಡದಿಂದ ತಲಾಶ್

    ಹಿಂದೂ ಸಮುದಾಯದ ಮಂದಿ ಅಲ್ಪಸಂಖ್ಯಾತರೆಂದು ಭಾವಿಸಬಾರದು. ಇಲ್ಲಿ ಎಲ್ಲಾ ಧರ್ಮದ ಜನರು ಸಮಾನ ಹಕ್ಕುಗಳೊಂದಿಗೆ ಬದುಕಬೇಕೆಂದು ನಾವು ಬಯಸುತ್ತೇವೆ. ನೀವೂ ಈ ದೇಶದ ಪ್ರಜೆಗಳು, ಇಲ್ಲಿ ನನ್ನಂತೆಯೇ ನಿಮಗೂ ಸಮಾನ ಹಕ್ಕುಗಳಿವೆ. ನೀವು ಯಾವಾಗಲೂ ಈ ದೇಶದ ಪ್ರಜೆಗಳೆಂದು ಭಾವಿಸುವುದರಿಂದ ನೀವೂ ಸಮಾನ ಹಕ್ಕುಗಳನ್ನು ಅನುಭವಿಸುತ್ತೀರಿ. ನಾವು ಕೂಡ ನಿಮ್ಮನ್ನು ಆ ರೀತಿಯಲ್ಲಿ ನೋಡಲು ಬಯಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೊಟ್ಟೆಯ ವಿಭಿನ್ನ ಬಳಕೆ: ಕಾಂಗ್ರೆಸ್-ದಾಸೋಹ, ಬಿಜೆಪಿ-ಜನದ್ರೋಹ – ʼಕೈʼ ಟೀಕೆ

    ದೇಶದಲ್ಲಿ ಅಹಿತಕರ ಘಟನೆ ನಡೆದಾಗ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯಕ್ಕೆ ಯಾವುದೇ ಹಕ್ಕು ಇಲ್ಲ ಎಂಬಂತೆ ಬಣ್ಣ ಕಟ್ಟಲಾಗಿದೆ. ಹಿಂದೂಗಳ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದಾಗ ಸ್ಥಳೀಯ ಸರ್ಕಾರಗಳೂ ಗಮನ ಕೊಡುತ್ತಿಲ್ಲ ಎನ್ನುವುದೂ ಇದಕ್ಕೆ ಕಾರಣವಾಗಿದೆ. ಇನ್ನು ಮುಂದೆ ಅದು ಆಗಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅವನು ದಡ್ಡನಲ್ಲ, ಕಿಲಾಡಿ – ಜಮೀರ್‌ನನ್ನು ಹಾಡಿಹೊಗಳಿದ ಸೋಮಣ್ಣ

    ಅವನು ದಡ್ಡನಲ್ಲ, ಕಿಲಾಡಿ – ಜಮೀರ್‌ನನ್ನು ಹಾಡಿಹೊಗಳಿದ ಸೋಮಣ್ಣ

    – ಎಲ್ಲ ಮುಸ್ಲಿಮರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ

    ಬೆಂಗಳೂರು: ಎಲ್ಲ ಮುಸ್ಲಿಮರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

    ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ವಾರ್ಡ್‍ನಲ್ಲಿ ಈದ್ಗಾ ಮೈದಾನ ಕಾಂಪೌಂಡ್ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಸೋಮಣ್ಣ, ಈ ಕಾಂಪೌಂಡ್ ಅನ್ನು ಆರು ತಿಂಗಳಿನಲ್ಲಿ ಕಟ್ಟಿಕೊಡುತ್ತೇನೆ. ಎಲ್ಲ ಜಾತಿ ಧರ್ಮಗಳಲ್ಲೂ ಒಳ್ಳೆಯವರು ಇರುತ್ತಾರೆ, ಕೆಟ್ಟವರು ಇರುತ್ತಾರೆ. ದೇವರು ಇದ್ದಾನೆ ಅಂದರೆ ಅಲ್ಲಿ ದೆವ್ವ-ಸೈತಾನ್‍ಗಳು ಇದ್ದೇ ಇರುತ್ತವೆ ಎಂದು ತಿಳಿಸಿದ್ದಾರೆ.

    ಇದೇ ವೇಳೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರನ್ನು ಹಾಡಿಹೊಗಳಿದ ಸೋಮಣ್ಣ, ಈ ಕಾರ್ಯಕ್ರಮಕ್ಕೆ ನಾನು ಜಮೀರ್ ನನ್ನು ಕರೆದುಕೊಂಡು ಬರಬೇಕು ಎಂದುಕೊಂಡಿದ್ದೆ. ಆದರೆ ಅವನು ಬರಲಿಲ್ಲ. ಅವನು ನನ್ನ ಆತ್ಮೀಯ, ಅವನು ದಡ್ಡ ಅಲ್ಲ, ಕಿಲಾಡಿ ಎಂದು ಹಾಡಿ ಹೊಗಳಿದರು. ಜಮೀರ್ ಕೇವಲ ಮುಸಲ್ಮಾರ ಎಂಎಲ್‍ಎ ಅಲ್ಲ, ಎಲ್ಲಾ ವರ್ಗದವರ ಎಂಎಲ್‍ಎ ಎಂದು ಹೇಳಿದರು.

    ನನಗೆ ಜಮೀರ್ ಸಿಗಲಿಲ್ಲ. ಅವನನ್ನು ಹಿಡಿದುಕೊಂಡು ಬರೋಣ ಅಂದುಕೊಂಡೆ. ಇಲ್ಲಿ ಬಂದು ನಮ್ಮ ಕೆಲಸದ ಬಗ್ಗೆ ಮಾತಾಡು, ಏನೇನೋ ಹೇಳಿಬಿಟ್ಟು ಬೆಂಕಿ ಇಟ್ಟು ಓಡಿ ಹೋಗಬೇಡ ಎಂದು ಅವನಿಗೆ ಹೇಳೋಣ ಅಂದುಕೊಂಡಿದ್ದೆ ಎಂದು ಸೋಮಣ್ಣ ಹಾಸ್ಯ ಚಟಾಕಿ ಹಾಕಿದರು.

  • ಕ್ರಿಶ್ಚಿಯನ್ ಮತ ಪ್ರಚಾರದಲ್ಲಿ ತೊಡಗಿದ್ದ 15 ಯುವಕರು ಪೊಲೀಸರ ವಶಕ್ಕೆ

    ಕ್ರಿಶ್ಚಿಯನ್ ಮತ ಪ್ರಚಾರದಲ್ಲಿ ತೊಡಗಿದ್ದ 15 ಯುವಕರು ಪೊಲೀಸರ ವಶಕ್ಕೆ

    ಕಾರವಾರ: ಹಿಂದೂಗಳನ್ನೂ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಪ್ರಚಾರ ಮಾಡುತ್ತಿದ್ದ ಸುಮಾರು 15 ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಬೇರೆ ರಾಜ್ಯಗಳಿಂದ ಬಂದ ಯುವಕರು ಮತ ಪ್ರಚಾರದ ಪುಸ್ತಕಗಳನ್ನು ವಿತರಿಸುತ್ತಾ ಮತಾಂತರವಾಗುವಂತೆ ಜನರಿಗೆ ಪ್ರೇರಣೆ ನೀಡುತ್ತಿದ್ದರು. ಇದನ್ನು ತಿಳಿದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

    ಗೋವಾ, ಅಸ್ಸಾಂ, ಉತ್ತರ ಕರ್ನಾಟಕ ಮೂಲದ ಯುವಕರು ಜಿಲ್ಲೆಯ ಸುಭಾಶ್ ವೃತ್ತದಲ್ಲಿ ನಿಂತುಕೊಂಡು ಹಿಂದು ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದರು. ಕ್ರಿಶ್ಚಿಯನ್ ಧರ್ಮಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನು ಜನರಿಗೆ ವಿತರಿಸುತ್ತಿದ್ದರು ಎಂದು ಆರೋಪಿಸಿ ಸ್ಥಳೀಯರು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಈ ಸಂಬಂಧ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.