Tag: Relocation

  • ರಾಷ್ಟ್ರೀಯ ಹೆದ್ದಾರಿಗಾಗಿ ಹನುಮಾನ್ ದೇವಾಲಯ ಸ್ಥಳಾಂತರ – ಹಿಂದೂ ಸಂಘಟನೆಗಳ ವಿರೋಧ

    ರಾಷ್ಟ್ರೀಯ ಹೆದ್ದಾರಿಗಾಗಿ ಹನುಮಾನ್ ದೇವಾಲಯ ಸ್ಥಳಾಂತರ – ಹಿಂದೂ ಸಂಘಟನೆಗಳ ವಿರೋಧ

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಶಹಜಹಾನ್‌ಪುರದಲ್ಲಿರುವ (Shahjahanpur) ಹನುಮಾನ್ ದೇವಾಲಯವನ್ನು (Hanuman Temple) ರಾಷ್ಟ್ರೀಯ ಹೆದ್ದಾರಿ (National Highway) ನಿರ್ಮಾಣಕ್ಕಾಗಿ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಆದರೆ ಇದನ್ನು ವಿರೋಧಿಸಿ ಹಿಂದೂ ಸಂಘಟನೆ ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

    ನಿರ್ಮಾಣ ಹಂತದಲ್ಲಿರುವ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾದು ಹೋಗುವ ದೇವಾಲಯವನ್ನು ಸ್ಥಳಾಂತರಿಸಲು ಅಡ್ಡಿಪಡಿಸುತ್ತಿರುವ ದೇವಾಲಯದ ಅರ್ಚಕರು, ಗ್ರಾಮಸ್ಥರು ಸೇರಿದಂತೆ 32 ಜನರ ವಿರುದ್ಧ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ದೇವಾಲಯದ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಲ್ಹಾರ್ ಪೊಲೀಸ್ ಠಾಣೆ ಪ್ರಭಾರಿ ವೀರೇಂದ್ರ ಸಿಂಗ್ ತಿಳಿಸಿದ್ದಾರೆ.

    ದೇವಾಲಯವನ್ನು ಪ್ರಸ್ತುತ ಸ್ಥಳದಿಂದ 80 ಮೀ. ದೂರಕ್ಕೆ ಸ್ಥಳಾಂತರಿಸಲಾಗುತ್ತಿದೆ. ಇದರ ಕೆಲಸ ಸೆಪ್ಟೆಂಬರ್ 17 ರಿಂದ ಪ್ರಾರಂಭಿಸಲಾಗಿದೆ. ಆದರೆ ಬಳಿಕ ಹಿಂದೂ ಸಂಘಟನೆಯ ಸದಸ್ಯರು ಇದನ್ನು ವಿರೋಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇರಾನ್‌ನಲ್ಲಿ ಹಿಜಬ್ ಹೋರಾಟ- ವಾಟ್ಸಪ್, ಇನ್‌ಸ್ಟಾಗ್ರಾಮ್ ಬಳಕೆ ಸ್ಥಗಿತ

    ಈ ದೇವಾಲಯ ಸುಮಾರು 1 ಶತಮಾನದಷ್ಟು ಹಳೆಯದಾಗಿದೆ. ಇದೀಗ ಹೆದ್ದಾರಿ ವಿಸ್ತರಣೆಗೆ ದೇವಾಲಯ ಅಡ್ಡಿಯಾಗುತ್ತಿದೆಯೆಂದು ಸ್ಥಳಾಂತರಿಸುತ್ತಿದ್ದಾರೆ. ಕಳೆದ 2 ವರ್ಷದ ಹಿಂದೆಯೇ ದೇವಾಲಯವನ್ನು ಸ್ಥಳಾಂತರಿಸಲು ಪ್ರಯತ್ನಿಸಲಾಗಿತ್ತು. ಆದರೆ ಅದಕ್ಕಾಗಿ ತರಲಾಗಿದ್ದ ಕ್ರೇನ್ ಹಾನಿಗೊಳಗಾಗಿತ್ತು. ಬಳಿಕ ನಮಗೆ ದೇವಾಲಯದ ಮೇಲೆ ನಂಬಿಕೆ ಹೆಚ್ಚಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಪುರುಷ ED, CBI ನನ್ನನ್ನು ಮುಟ್ಟುವಂತಿಲ್ಲ – ಸುವೇಂದು ಅಧಿಕಾರಿಗೆ ಇದ್ರಿಸ್ ಅಲಿ ಟಾಂಗ್

    ಈ ಕಾಮಗಾರಿಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಹೆಚ್‌ಎಐ) ಅಡಿಯಲ್ಲಿ ಮಾಡಲಾಗುತ್ತಿದ್ದು, ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕವೇ ಹನುಮಾನ್ ದೇವಾಲಯವನ್ನು ಸ್ಥಳಾಂತರಿಸಲಾಗುತ್ತಿದೆ. ದೇವಾಲಯವನ್ನು ಸಂಪೂರ್ಣ ಗೌರವದಿಂದಲೇ ವರ್ಗಾವಣೆ ಮಾಡುತ್ತಿದ್ದೇವೆ ಎಂದು ಎಂದು ತಿಲ್ಹಾರ್ ಎಸ್‌ಡಿಎಂ ರಾಶಿ ಕೃಷ್ಣ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 100 ವರ್ಷ ಹಳೆಯ, 3,800 ಟನ್ ತೂಕದ ಕಟ್ಟಡ ಸ್ಥಳಾಂತರ – ಹೇಗೆ ನೋಡಿ

    100 ವರ್ಷ ಹಳೆಯ, 3,800 ಟನ್ ತೂಕದ ಕಟ್ಟಡ ಸ್ಥಳಾಂತರ – ಹೇಗೆ ನೋಡಿ

    ಬೀಜಿಂಗ್: ಇತ್ತೀಚೆಗೆ ಚೀನಾದ ಶಾಂಘೈನಲ್ಲಿ ಶತಮಾನದಷ್ಟು ಹಳೆಯದಾದ, ಸುಮಾರು 3,800 ಟನ್ ತೂಗುವ ಕಟ್ಟಡವನ್ನು ಅದರ ಮೂಲ ಸ್ಥಾನಕ್ಕೆ ಸ್ಥಳಾಂತರಿಸಲಾಯಿತು. ಈ ಕುತೂಹಲಕಾರಿ ದೃಶ್ಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ ಹಾಗೂ ನಡೆದಾಡುವ ಕಟ್ಟಡ ಎನ್ನಲಾಗುತ್ತಿದೆ.

    ನಿಖರವಾದ ಅಳತೆ, ಲೆಕ್ಕಾಚಾರದ ಬಳಿಕ ಶಾಂಘೈನಲ್ಲಿ 3,800 ಟನ್ ತೂಗುವ ಕಟ್ಟಡವನ್ನು ಅದರ ಮೂಲ ಸ್ಥಾನಕ್ಕೆ ಸ್ಥಳಾಂತರಿಸಲಾಗಿದೆ. ಕಟ್ಟಡವನ್ನು ಅದರ ಮೂಲ ಸ್ಥಾನಕ್ಕೆ ತಳ್ಳಲು ಸ್ಲೈಡಿಂಗ್ ಹಳಿಯನ್ನು ಬಳಸಲಾಗಿದೆ. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧ ಸರಣಿ ಗೆದ್ದ ಭಾರತ – ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‍ನಲ್ಲಿ ಕಾಣಿಸಿಕೊಂಡ ಧೋನಿ

    ವಾಕಿಂಗ್ ಮಷಿನ್ ಎಂದು ಕರೆಯಲಾಗುವ ತಂತ್ರಜ್ಞಾನದಿಂದ ಕಟ್ಟಡವನ್ನು ಮೇಲೆತ್ತಿ, ಸ್ಥಳಾಂತರಿಸಲಾಗಿದೆ. ಕಟ್ಟಡವನ್ನು ಸ್ಥಳಾಂತರಿಸುತ್ತಿರುವ ವೀಡಿಯೋದಲ್ಲಿ ಅದು ಚಲಿಸಿದಂತೆ ತೋರುತ್ತದೆ. ಇದಕ್ಕಾಗಿ ಕಟ್ಟಡವನ್ನು ಚಲಿಸುವ ಕಟ್ಟಡ ಎಂದು ಕರೆಯಲಾಗುತ್ತಿದೆ. ಈ ಕಟ್ಟಡ ನಗರದಲ್ಲೇ ಅತ್ಯಂತ ದೊಡ್ಡ ಹಾಗೂ ಭಾರವಾದ ಕಲ್ಲಿನ ರಚನೆಯಾಗಿದೆ. ಕುತೂಹಲ ಕೆರಳಿಸುವ ಇನ್ನೊಂದು ವಿಚಾರವೆಂದರೆ, ಕಟ್ಟಡವನ್ನು ಸ್ಥಳಾಂತರಿಸುವ ಸಂದರ್ಭ ಅದನ್ನು ಎಲ್ಲಿಯೂ ಭಾಗ ಮಾಡಲಾಗಿಲ್ಲ. ಸಂಪೂರ್ಣ ಒಂದೇ ತುಂಡನ್ನು ಸ್ಥಳಾಂತರಿಸಲಾಗಿದೆ.

    ಬೃಹತ್ ಕಟ್ಟಡಗಳನ್ನು ಒಂದೆಡೆಯಿಂದ ಇನ್ನೊಂದೆಡೆಗೆ ಸ್ಥಳಾಂತರಿಸುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಎಂಜಿನಿಯರ್‌ಗಳು ಸ್ಮಾರಕಗಳನ್ನು ಸಂರಕ್ಷಿಸಲು ಅಥವಾ ಇತರ ಯೋಜನೆಗಳಿಗೆ ಜಾಗ ಮಾಡಲು ಕಟ್ಟಡಗಳನ್ನು ಸ್ಥಳಾಂತರಿಸುವ ತಂತ್ರಜ್ಞಾನವನ್ನು ಬಳಸಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಹಲವು ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿವೆ. ಇದನ್ನೂ ಓದಿ: ಬಾಯಿಯಿಂದ ನೀರು ಉಗುಳಿ ಬಟ್ಟೆ ಇಸ್ತ್ರಿ – ವೃದ್ಧನ ವೀಡಿಯೋ ವೈರಲ್

    https://twitter.com/splattne/status/1373698826880614402?ref_src=twsrc%5Etfw%7Ctwcamp%5Etweetembed%7Ctwterm%5E1373698826880614402%7Ctwgr%5E%7Ctwcon%5Es1_&ref_url=https%3A%2F%2Fwww.indiatoday.in%2Fworld%2Fstory%2Fcentury-old-building-shanghai-walks-to-its-new-location-1973911-2022-07-10

    ಸ್ಟ್ರಕ್ಚರಲ್ ಮೂವಿಂಗ್ ಎನ್ನುವುದು ಸಂಪುರ್ಣ ಕಟ್ಟಡವನ್ನು ಅಡಿಪಾಯದಿಂದಲೇ ಮೇಲಕ್ಕೆತ್ತಿ, ಬೇರೆಡೆಗೆ ಸ್ಥಳಾಂತರಿಸುವ ಪ್ರಕ್ರಿಯೆ. ಇದು ಐತಿಹಾಸಿಕ ಕಟ್ಟಡಗಳನ್ನು ಸಂರಕ್ಷಿಸಲು ಉಪಯೋಗವಾಗುವ ಸಾಮಾನ್ಯ ಮಾರ್ಗ. ಪ್ರವಾಹದ ಅಪಾಯದಲ್ಲೂ ಕಟ್ಟಡಗಳನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ಇದೊಂದು ಉತ್ತಮ ಮಾರ್ಗವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಷ್ಯಾದಿಂದ ಹೊರನಡೆದ ಇನ್ಫೋಸಿಸ್

    ರಷ್ಯಾದಿಂದ ಹೊರನಡೆದ ಇನ್ಫೋಸಿಸ್

    ಮಾಸ್ಕೋ: ಉಕ್ರೇನ್‌ನೊಂದಿಗಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ ಇನ್ಫೋಸಿಸ್ ಲಿಮಿಟೆಡ್ ಕಂಪನಿ ರಷ್ಯಾದಿಂದ ಹೊರನಡೆದಿದೆ. ಯುದ್ಧದ ಕಾರಣದಿಂದ ಇನ್ಫೋಸಿಸ್ ರಷ್ಯಾದಲ್ಲಿದ್ದ ತನ್ನ ವ್ಯವಹಾರಗಳನ್ನು ಸ್ಥಳಾಂತರಿಸುತ್ತಿದ್ದು, ಪರ್ಯಾಯ ಆಯ್ಕೆಯನ್ನು ಹುಡುಕುತ್ತಿದೆ ಎಂದು ತಿಳಿಸಿದೆ.

    ಒರಾಕಲ್ ಹಾಗೂ ಸ್ಯಾಪ್ ಸೇರಿದಂತೆ ಹಲವಾರು ಇತರ ಐಟಿ ಹಾಗೂ ಸಾಫ್ಟ್‌ವೇರ್ ಕಂಪನಿಗಳು ರಷ್ಯಾದಲ್ಲಿ ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಿವೆ. ಇದೀಗ ಭಾರತದ ಇನ್ಫೋಸಿಸ್ ರಷ್ಯಾವನ್ನು ತೊರೆಯಲು ನಿರ್ಧರಿಸಿದೆ. ಇದನ್ನೂ ಓದಿ: ಎಲೋನ್ ಮಸ್ಕ್ ಟ್ವಿಟ್ಟರ್ ಮಂಡಳಿಯ ಭಾಗವಲ್ಲ: ಪರಾಗ್ ಅಗರ್ವಾಲ್

    ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಪರಿಣಾಮದ ಕುರಿತು ಪ್ರಶ್ನೆಗೆ ಉತ್ತರಿಸಿದ ಇನ್ಫೋಸಿಸ್ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಲೀಲ್ ಪರೇಖ್, ಪರಿಸ್ಥಿತಿಯನ್ನು ನೋಡಿದಾಗ ನಾವು ನಮ್ಮ ವ್ಯವಹಾರಗಳನ್ನು ರಷ್ಯಾದಿಂದ ಬೇರೆಡೆಗೆ ಬದಲಾಯಿಸಲು ಪ್ರಾರಂಭಿಸಿದ್ದೇವೆ ಎಂದರು.

    ರಷ್ಯಾದಲ್ಲಿ ನಮಗೆ ಗ್ರಾಹಕರು ಇಲ್ಲ. ನಾವೀಗ ರಷ್ಯಾದಲ್ಲಿ ಮಾಡುತ್ತಿರುವ ಕೆಲಸಗಳನ್ನು ಜಾಗತಿಕವಾಗಿ ವಿಸ್ತರಿಸಲು ಮುಂದಾಗಿದ್ದೇವೆ. ರಷ್ಯಾ-ಉಕ್ರೇನ್‌ನ ಸಂಘರ್ಷದ ಬಗ್ಗೆ ನಮಗೆ ಚಿಂತೆ ಇದೆ. ಹೀಗಾಗಿ ನಮ್ಮ ಉದ್ಯೋಗಿಗಳನ್ನು ರಷ್ಯಾದಿಂದ ಇತರ ದೇಶಗಳಿಗೆ, ವಿಶೇಷವಾಗಿ ಪೂರ್ವ ಯುರೋಪ್‌ಗೆ ಸ್ಥಳಾಂತರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಳಕೆದಾರರ ಡೇಟಾ ಸಂಗ್ರಹಿಸ್ತಿದ್ದ ಆ್ಯಪ್‌ಗಳನ್ನು ಬ್ಯಾನ್ ಮಾಡಿದ ಗೂಗಲ್

    ಈ ಹಿಂದೆ ಮಾರ್ಚ್ನಲ್ಲಿ ತ್ರೈಮಾಸಿಕ ಹಣಕಾಸು ಫಲಿತಾಂಶಗಳನ್ನು ಪ್ರಕಟಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪರೇಖ್, ಇನ್ಫೋಸಿಸ್ ರಷ್ಯಾದಲ್ಲಿ ೧೦೦ಕ್ಕಿಂತಲೂ ಕಡಿಮೆ ಉದ್ಯೋಗಿಗಳನ್ನು ಹೊಂದಿದೆ ಎಂದು ತಿಳಿಸಿದ್ದರು.

  • ಮತ್ತೆ ಬೆಟ್ಟ ಕುಸಿಯುವ ಭೀತಿ- ಏಳು ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್

    ಮತ್ತೆ ಬೆಟ್ಟ ಕುಸಿಯುವ ಭೀತಿ- ಏಳು ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್

    ಮಡಿಕೇರಿ: ಪ್ರಕೃತಿಯ ತವರು ಕೊಡಗಿನಲ್ಲಿ ಮಳೆಗಾಲ ಬಂದರೆ ಇಲ್ಲಿನ ಜನರಿಗೆ ಅತಂಕ ಶುರುವಾಗುತ್ತದೆ. ಅದರಲ್ಲೂ ಗುಡ್ಡಗಾಡು, ನದಿ ಪಾತ್ರದ ಜನ ಭಯದಿಂದ ದಿನ ದೂಡುವ ಪರಿಸ್ಥಿತಿ ನಿರ್ಮಾಣ ಅಗುತ್ತೆ. ಕೊಡಗಿನಲ್ಲಿ ಕಳೆದ 10 ದಿನಗಳಿಂದ ಮಳೆಯ ಅರ್ಭಟ ಮುಂದುವರೆದಿದೆ. ಹೀಗಾಗಿ ಮಡಿಕೇರಿ ತಾಲೂಕಿನ ಮಕ್ಕಂದೂರು ಗ್ರಾಮದ ಜನರಲ್ಲಿ ಮತ್ತೆ ಆತಂಕ ಮೂಡಿದೆ. ಅಲ್ಲದೆ ಸ್ಥಳಾಂತರಗೊಳ್ಳುವಂತೆ 7 ಕುಟುಂಬಗಳಿಗೆ ಗ್ರಾಮ ಪಂಚಾಯಿತಿ ನೋಟಿಸ್ ಸಹ ನೀಡಿದೆ.

    2018ರಲ್ಲಿ ಮಾದಾಪುರ-ಮಡಿಕೇರಿ ನಡುವಿನ ಮಕ್ಕಂದೂರುವಿನ ಬಾಲಾಜಿ ತೋಟದ ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದ ಪರಿಣಾಮ ಮನೆಗಳು ಸಂಪೂರ್ಣ ನೆಲಕಚ್ಚಿ, ಪ್ರಾಣಿಗಳು ಸಾವನ್ನಪ್ಪಿದ್ದವು. ಇದೀಗ ಅಂದು ಗುಡ್ಡ ಕುಸಿದ ಸ್ಥಳದಲ್ಲಿಯೇ ಮತ್ತೊಮ್ಮೆ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯುತ್ತಿದ್ದು, ಆತಂಕ ಸೃಷ್ಟಿಸಿದೆ. ಅಷ್ಟೇ ಅಲ್ಲದೆ ಮಕ್ಕಂದೂರು ಸುತ್ತಲಿನ ಪ್ರದೇಶವಾದ ಉದಯಗಿರಿ, ಮೇಘಾತಾಳು, ತಂತಿಪಾಲ ಹಾಗೂ ಹುಲಿತಾಳ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿ ಸಾಕಷ್ಟು ನಷ್ಟ ಅನುಭವಿಸಿದ ಜನರಿಗೆ ಮತ್ತೆ ಇಲ್ಲಿನ ಉದಯಗಿರಿ ಬೆಟ್ಟ ಕುಸಿಯುವ ಅತಂಕ ಮನೆ ಮಾಡಿದೆ. ವಾರದಿಂದ ಅಗುತ್ತಿರುವ ಮಳೆಯಿಂದ ಈಗಾಗಲೇ ಬೆಟ್ಟ ಪ್ರದೇಶಗಳಲ್ಲಿ ಸಣ್ಣ ಪುಟ್ಟ ಪ್ರಮಾಣದಲ್ಲಿ ಗುಡ್ಡ ಕುಸಿಯಲು ಅರಂಭವಾಗಿದೆ. ಹೀಗಾಗಿ ಈ ಬೆಟ್ಟದ ಕೆಳಭಾಗದಲ್ಲಿ ವಾಸ ಮಾಡುವ 7 ಕುಟುಂಬಗಳ ಮನೆಗೆಗಳಲ್ಲಿ ಆತಂಕ ಮನೆ ಮಾಡಿದೆ.

    ಈ ಪ್ರದೇಶದಲ್ಲಿ ವಾಸ ಮಾಡುವ ಜನರು ತಮ್ಮನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಆಗ್ರಹ ಮಾಡುತ್ತಿದ್ದಾರೆ. ಸುತ್ತಲೂ ಬೆಟ್ಟ ಇರುವ ಹಿನ್ನಲೆಯಲ್ಲಿ 2018 ರಲ್ಲೂ ಪಕ್ಕದ ಬೆಟ್ಟ ಕುಸಿದಿದ್ದು, ಬಾಬು ಎಂಬುವರು ಇದೇ ಬೆಟ್ಟಸ ಕೆಳಗೆ ಸಿಲುಕಿ ಸಾವನ್ನಪ್ಪಿದ್ದರು. 2018ರಲ್ಲಿ ಬೆಟ್ಟ ಕುಸಿದು ಈ ಭಾಗದ ಮನೆಗಳ ಬಳಿ ಕೃತಕವಾಗಿ ಕೆರೆ ನಿರ್ಮಾಣವಾಗಿದೆ. ಹೀಗಾಗಿ ಬೆಟ್ಟದಲ್ಲಿ ತೇವಾಂಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗೆ ಮಳೆ ಮುಂದುವರಿದಲ್ಲಿ ಬೆಟ್ಟ ಕುಸಿಯುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಇಲ್ಲಿನ ನಿವಾಸಿಗಳು ತಕ್ಷಣ ಸ್ಥಳಾಂತರಿಸುವಂತೆ ಮನವಿ ಮಾಡುತ್ತಿದ್ದಾರೆ. ಈ ಸೂಕ್ಷ್ಮತೆಗಳನ್ನು ಪರಿಶೀಲನೆ ಮಾಡಿದ ಮಕ್ಕಂದೂರು ಗ್ರಾಮ ಪಂಚಾಯತಿ ಈಗಾಗಲೇ ಏಳು ಕುಟುಂಬಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮಾನವಿ ಮಾಡಿದ್ದಾರೆ.

    ಈ ಜನರ ಸಮಸ್ಯೆಗಳನ್ನು ಅಲಿಸಲು ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿಕುಶಾಲಪ್ಪ ಅವರು ಸ್ಥಳಕ್ಕೆ ಅಗಮಿಸಿ ಬೆಟ್ಟ ಪ್ರದೇಶದ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಬೃಹತ್ ಪ್ರಮಾಣದಲ್ಲಿ ಬೆಟ್ಟ ಕುಸಿಯುವ ಸೂಚನೆ ಇದ್ದು, ಈಗಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಜನರನ್ನು ಸ್ಥಳಾಂತರ ಮಾಡದಿದ್ದರೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾದ್ಯತೆ ಇದೆ.