Tag: renovation

  • ಅಗ್ನಿ ಅವಘಡದಿಂದ ಕುಸಿದ ಮಸೀದಿಯ ಗುಮ್ಮಟ- ವೀಡಿಯೋ ವೈರಲ್

    ಅಗ್ನಿ ಅವಘಡದಿಂದ ಕುಸಿದ ಮಸೀದಿಯ ಗುಮ್ಮಟ- ವೀಡಿಯೋ ವೈರಲ್

    ಜಕಾರ್ತ: ಅಗ್ನಿ ಅವಘಡದಿಂದಾಗಿ ಇಂಡೋನೇಷ್ಯಾದ ಜಕಾರ್ತಾ ಇಸ್ಲಾಮಿಕ್ ಸೆಂಟರ್ ಗ್ರ್ಯಾಂಡ್ ಮಸೀದಿಯ ದೈತ್ಯ ಗುಮ್ಮಟ (ಮಿನಾರ್) (Indonesia Mosque) ಕುಸಿದಿದೆ.

    ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಗುಮ್ಮಟವು ಕುಸಿದು ಬೀಳುತ್ತಿರುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಘಟನೆಯಿಂದ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ ಎಂಬುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

    https://twitter.com/NguyenK68421403/status/1582744382012559360

    ಮಸೀದಿಯನ್ನು ನವೀಕರಣಗೊಳಿಸಲಾಗುತ್ತಿತ್ತು. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ರವಾನಿಸಲಾಯಿತು. ತಕ್ಷಣವೇ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ. ಇದನ್ನೂ ಓದಿ: ಮುಸ್ಲಿಮರು ಲಕ್ಷ್ಮಿಯನ್ನು ಪೂಜಿಸಲ್ಲ, ಆದರೆ ಅವರಲ್ಲಿ ಶ್ರೀಮಂತರಿಲ್ಲವೇ?- ಬಿಜೆಪಿ ಶಾಸಕ

    ಗುಮ್ಮಟ ಉರುಳುವ ಮುನ್ನ ಬೆಂಕಿಯ ಕೆನ್ನಾಲಿಗೆ ಹಾಗೂ ದಟ್ಟವಾದ ಹೊಗೆಯನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವರದಿಗಳ ಪ್ರಕಾರ, ಘಟನೆ ನಡೆದ ಸಂದರ್ಭದಲ್ಲಿ ಮಸೀದಿಯಲ್ಲಿ ನವೀಕರಣದ ಕೆಲಸ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

    ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ. ಯಾವ ಕಾರಣದಿಂದ ಬೆಂಕಿ ಕಾಣಿಸಿಕೊಂಡಿದೆ ಎಂಬುದೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಸುಮಾರು 20 ವರ್ಷಗಳ ಹಿಂದೆ ನವೀಕರಣದ ಸಮಯದಲ್ಲಿ ಮಸೀದಿಯ ಗುಮ್ಮಟದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಅಕ್ಟೋಬರ್ 2002ರ ಬೆಂಕಿ ನಂದಿಸಲು ಐದು ಗಂಟೆಗಳನ್ನು ತೆಗೆದುಕೊಂಡಿತು ಎಂದು ವರದಿ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಕೋಲಾರ: ಚೋಳರ ಕಾಲದ ಸುಮಾರು 900 ವರ್ಷಗಳ ಪುರಾತನ ಶ್ರೀಕಾಶಿ ವಿಶ್ವನಾಥಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ಮಹಾಕುಂಭಾಭಿಷೇಕ ಕಾರ್ಯಕ್ರಮ ನಡೆಯುತ್ತಿದ್ದು, ಗಣ್ಯಾತಿಗಣ್ಯರು ಭಾಗವಹಿಸುತ್ತಿದ್ದಾರೆ.

    ಇಂದಿನಿಂದ ಮೂರು ದಿನಗಳ ಕಾಲ ಕೋಲಾರ ತಾಲೂಕು ಕೋರಗೊಂಡಹಳ್ಳಿ ಕೋನೆಪುರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪುರಾತನ ದೇವಾಲಯದ ಉದ್ಘಾಟನೆ ನಡೆಯಲಿದ್ದು, ಗಣ್ಯರು ಭಾಗವಹಿಸುತ್ತಿದ್ದಾರೆ. ಚೋಳರ ಕಾಲದ ಸುಮಾರು 900 ವರ್ಷಗಳಷ್ಟು ಪುರಾತನ ಶ್ರೀಕಾಶಿ ವಿಶ್ವನಾಥಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ಮಹಾಕುಂಭಾಭಿಷೇಕವನ್ನು ಇಂದಿನಿಂದ ಹಮ್ಮಿಕೊಳ್ಳಲಾಗಿದೆ.

    ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿದೆ. ಚೋಳರ ಕಾಲದ ಅತ್ಯಂತ ಪುರಾತನ ದೇವಾಲಯ ಇದಾಗಿದ್ದು, 2013 ರಲ್ಲಿ ಕೆಡವಿ ಸುಮಾರು 8 ವರ್ಷಗಳ ಕಾಲ ಅನೇಕ ದಾನಿಗಳ ಸಹಾಯದಿಂದ ದೇವಾಲಯವನ್ನು ಜೀರ್ಣೋದ್ಧಾರ ಮಾಡಲಾಗಿದೆ. ಇದಕ್ಕೆ ಹಲವು ಸ್ನೇಹಿತರು ಹಾಗೂ ಗ್ರಾಮದ ಎಲ್ಲರೂ ಸಹಾಯ ಮಾಡಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ಸಿನಿಮಾ ನಟರು ಹಾಗೂ ರಾಜಕಾರಣಿಗಳ ದಂಡು ಆಗಮಿಸುತ್ತಿದೆ. ಮೂರು ದಿನಗಳ ಕಾಲ ನಡೆಯುವ ಅದ್ಧೂರಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

    ಭಾನುವಾರ ಹಾಗೂ ಸೋಮವಾರ ಕೋಲಾರಕ್ಕೆ ಪವರ್ ಸ್ಟಾರ್ ಪುನಿತ್ ರಾಜ್‍ಕುಮಾರ್, ಕಿಚ್ಚ ಸುದೀಪ್ ಸೇರಿದಂತೆ ಖ್ಯಾತ ಸಿನಿಮಾ ನಟರು ಹಾಗೂ ರಾಜಕಾರಣಿಗಳು ಆಗಮಿಸಲಿದ್ದಾರೆ. ಭಾನುವಾರ ಸಂಜೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಹ ಆಗಮಿಸಲಿದ್ದಾರೆ.

    ಸಂಗೀತ ನಿರ್ದೇಶಕ ಗುರುಕಿರಣ್ ಹಾಗೂ ಗಾಯಕ ವಿಜಯ್ ಪ್ರಕಾಶ್ ಸಾರಥ್ಯದಲ್ಲಿ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಲಿದೆ. ಮಾ-8 ರಂದು ಬೆಳಗ್ಗೆ ನಡೆಯುವ ಮಹಾಕುಂಭಾಭಿಷೇಕ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಶಾಖಾ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಹಾಗೂ ನಟ ಕಿಚ್ಚ ಸುದೀಪ್, ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಸೇರಿದಂತೆ ಅನೇಕ ಸಚಿವರು, ಶಾಸಕರು, ಗಣ್ಯರು ಆಗಮಿಸಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮಕ್ಕೆ ಸುಮಾರು 5 ಸಾವಿರ ಮಂದಿ ಭಾಗವಹಿಸಲಿದ್ದಾರೆ. ಬೆಂಗಳೂರು ದಕ್ಷಿಣ ಡಿಸಿಪಿ ದೇವರಾಜ್ ಅವರು ಹುಟ್ಟೂರು ಇದಾಗಿದ್ದು, ಅವರ ನೇತೃತ್ವದಲ್ಲೇ ದೇವಸ್ಥಾನ ಜೀರ್ಣೋದ್ಧಾರವಾಗಿದೆ.

  • ಬಹ್ರೇನ್‍ನ 200 ವರ್ಷ ಪುರಾತನ ಶ್ರೀ ಕೃಷ್ಣ ದೇವಾಲಯ ಜೀರ್ಣೋದ್ಧಾರಕ್ಕೆ ಮೋದಿ ಅಸ್ತು

    ಬಹ್ರೇನ್‍ನ 200 ವರ್ಷ ಪುರಾತನ ಶ್ರೀ ಕೃಷ್ಣ ದೇವಾಲಯ ಜೀರ್ಣೋದ್ಧಾರಕ್ಕೆ ಮೋದಿ ಅಸ್ತು

    ಮನಮಾ: ಪ್ರಧಾನಿ ನರೇಂದ್ರ ಮೋದಿ ಅವರು ಬಹ್ರೇನ್ ಪ್ರವಾಸದಲ್ಲಿದ್ದು, ಈ ವೇಳೆ ಅಲ್ಲಿನ ರಾಜಧಾನಿ ಮನಮಾದಲ್ಲಿರುವ 200 ವರ್ಷಕ್ಕೂ ಹಳೆಯದಾದ ಶ್ರೀ ಕೃಷ್ಣ ದೇವಸ್ಥಾನವನ್ನು ಜೀರ್ಣೋದ್ಧಾರಗೊಳಿಸುವ ಯೋಜನೆಗೆ 4.2 ಮಿಲಿಯನ್ ಯುಎಸ್ ಡಾಲರ್(30.03 ಕೋಟಿ ರೂ.) ನೀಡುವುದಾಗಿ ಘೋಷಿಸಿದ್ದಾರೆ.

    ಇಂದು ಬಹ್ರೇನ್ ಪ್ರವಾಸದಲ್ಲಿರುವ ನರೇಂದ್ರ ಮೋದಿ 200 ವರ್ಷಕ್ಕೂ ಹಳೆಯದಾದ ಶ್ರೀನಾಥ್ ಜೀ(ಶ್ರೀ ಕೃಷ್ಣ) ದೇವಸ್ಥಾನದಲ್ಲಿ ಬಹ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿ ಮಾಡಿದರು. ಇದೇ ವೇಳೆ ಶ್ರೀನಾಥ್ ಜೀ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 4.2 ಮಿಲಿಯನ್ ಯುಎಸ್ ಡಾಲರ್ ಘೋಷಿಸಿದ್ದಾರೆ.

    ಗಲ್ಫ್‍ನ ಪ್ರಮುಖ ರಾಷ್ಟ್ರ ಬಹ್ರೇನ್‍ಗೆ ಭಾರತದ ಪ್ರಧಾನಿಯ ಮೊದಲ ಭೇಟಿ ಇದಾಗಿದೆ. ಮನಮಾದಲ್ಲಿರುವ ಶ್ರೀನಾಥ್ ಜೀ ದೇವಸ್ಥಾನಕ್ಕೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರು ಪೂಜೆ ಸಲ್ಲಿಸಿದ್ದು, ಪೂಜೆ ನಂತರ ಯುಎಇಯಲ್ಲಿ ಶನಿವಾರ ಬಿಡುಗಡೆ ಮಾಡಿದ ರೂಪೇ ಕಾರ್ಡ್ ಮೂಲಕವೇ ಪ್ರಸಾದವನ್ನು ಖರೀದಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ದೇವಸ್ಥಾನದ ಫಲಕವನ್ನು ಇಂದು ಅನಾವರಣಗೊಳಿಸಿದ್ದು, ಸಾಂಪ್ರದಾಯಿಕ ದೇವಸ್ಥಾನದ ಜೀರ್ಣೋದ್ಧಾರದ ಯೋಜನೆಯನ್ನು ಇದೇ ವೇಳೆ ಘೋಷಿಸಿದರು.

    ಪ್ರೀತಿ ಹಾಗೂ ವಾತ್ಸಲ್ಯವನ್ನು ತೋರಿದ ಬಹ್ರೇನ್‍ಗೆ ಧನ್ಯವಾದ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಈ ಪ್ರದೇಶದ ಅತ್ಯಂತ ಹಳೆಯ ದೇವಸ್ಥಾನ, 200 ವರ್ಷದ ಇತಿಹಾಸವಿರುವ ಶ್ರೀನಾಥ್ ಜೀ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ವಿಡಿಯೋವನ್ನು ಸಹ ಹಂಚಿಕೊಂಡಿದ್ದಾರೆ. ಈ ದೇವಾಲಯವು ಬಹ್ರೇನ್ ಸಮಾಜದ ಬಹುತ್ವವನ್ನು ಪ್ರತಿಬಿಂಬಿಸುತ್ತದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

    ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಈಗಾಗಲೇ ಸ್ಥಳದ ಅಳತೆ ಮಾಡಲಾಗಿದ್ದು, 16,500 ಚದರ ಅಡಿ ಭೂಮಿಯಲ್ಲಿ ನವೀಕರಣವಾಗಲಿದೆ. 45 ಸಾವಿರ ಚದರ ಅಡಿ ವಿಸ್ತೀರ್ಣದ ನಾಲ್ಕು ಅಂತಸ್ತಿನ ಹೊಸ ಕಟ್ಟಡ ನಿರ್ಮಾಣ ಮಾಡಲು ಚಿಂತಿಸಲಾಗಿದೆ. 30 ಮೀ. ಎತ್ತರದಲ್ಲಿ ದೇವಸ್ಥಾನ ನಿರ್ಮಾಣವಾಗಲಿದೆ. ದೇವಸ್ಥಾನದ 200 ವರ್ಷದ ಪರಂಪರೆಯನ್ನು ಜೀರ್ಣೋದ್ಧಾರ ಮಾಡಲಾಗುವ ಕಟ್ಟಡದಲ್ಲಿ ಪ್ರತಿಬಿಂಬಿಸುವಂತೆ ಮಾಡಲಾಗುವುದು. ಗರ್ಭಗುಡಿ, ಪ್ರಾರ್ಥನಾ ಮಂದಿರ, ಸಾಂಪ್ರದಾಯಿಕ ಹಿಂದೂ ವಿವಾಹ ಹಾಗೂ ಇತರೆ ಸಮಾರಂಭಗಳನ್ನು ಮಾಡಲು ಸಭಾಂಗಣದ ವ್ಯವಸ್ಥೆಯನ್ನೂ ಈ ದೇವಸ್ಥಾನದಲ್ಲಿ ಮಾಡಲಾಗುತ್ತಿದೆ. ಈ ಮೂಲಕ ಬಹ್ರೇನ್‍ನ್ನು ವಿವಾಹದ ತಾಣವಾಗಿ ಉತ್ತೇಜಿಸುವುದು, ಪ್ರವಾಸೋದ್ಯಮವನ್ನು ಹೆಚ್ಚಿಸಲಾಗುತ್ತಿದೆ.

  • ಪುಲ್ವಾಮಾದಲ್ಲಿ ಮುಸ್ಲಿಂರಿಂದ ಶಿವನ ದೇಗುಲ ಜೀರ್ಣೋದ್ಧಾರ!

    ಪುಲ್ವಾಮಾದಲ್ಲಿ ಮುಸ್ಲಿಂರಿಂದ ಶಿವನ ದೇಗುಲ ಜೀರ್ಣೋದ್ಧಾರ!

    ಪುಲ್ವಾಮಾ: ಭಾರತೀಯ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದ ಪುಲ್ವಾಮಾ ಸಮೀಪದ ಬರೇಲಿಯಲ್ಲಿ, ಸುಮಾರು 80 ವರ್ಷ ಹಳೆಯ ಶಿವ ದೇಗುಲವೊಂದನ್ನು ನವೀಕರಿಸಲು ಮುಸ್ಲಿಂರು ಹಿಂದೂಗಳ ಜೊತೆ ಕೈ ಜೋಡಿಸಿದ್ದಾರೆ.

    ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಯೋಧರ ಹುತಾತ್ಮರಾಗಿದ್ದರು. ಆಗಿನಿಂದ ಪುಲ್ವಾಮಾ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥತಿ ನಿರ್ಮಾಣವಾಗಿದೆ. ಅಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಮೇಲಿಂದ ಮೇಲೆ ನಡೆಯುತ್ತಲೇ ಇದೆ. ಆದ್ರೆ ಈ ನಡುವೆಯೂ ಮುಸ್ಲಿಂ ಬಾಂಧವರು ಹಿಂದೂಗಳ ಜೊತೆಗೂಡಿ ಪುರಾತನ ಶಿವ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ ಏಕತೆಯನ್ನು ಮೆರೆದಿದ್ದಾರೆ.

    ಪುಲ್ವಾಮಾದಿಂದ ಕೇವಲ 15 ಕಿ.ಮೀ ದೂರದಲ್ಲಿರುವ ಬರೇಲಿಯಲ್ಲಿ 80 ವರ್ಷಗಳ ಹಳೆಯ ಹಿಂದೂ ದೇವಸ್ಥಾನವಿದೆ. ಇಲ್ಲಿರುವ ಕಾಶ್ಮೀರಿ ಪಂಡಿತ್ ಕುಟುಂಬಸ್ಥರ ಜೊತೆ ಸೇರಿ ಮುಸ್ಲಿಂ ಕುಟುಂಬವೊಂದು ದೇಗುಲದ ಮರು ನವೀಕರಣ ಕಾರ್ಯಕ್ಕೆ ಕೈಜೋಡಿಸಿದೆ. ಪುಲ್ವಾಮಾ ದಾಳಿ ಬಳಿಕ ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಆದರಿಂದ ಈ ದೇಗುಲದ ನವೀಕರಣ ಕೆಲಸವನ್ನು ನಿಲ್ಲಿಸಲಾಗಿತ್ತು. ಆದ್ರೆ ಮಹಾಶಿವರಾತ್ರಿ ಮುಗಿದ ಮೇಲೆ ಮತ್ತೆ ದೇವಸ್ಥಾನದ ಕೆಲಸವನ್ನು ಆರಂಭಿಸಲಾಗಿದೆ.

    30 ವರ್ಷಗಳ ಹಿಂದೆ ಬರೇಲಿ ಪ್ರದೇಶದಲ್ಲಿ ಉಗ್ರರ ಹಾವಳಿ ಹೆಚ್ಚಾದ ಕಾರಣಕ್ಕೆ ಅನೇಕ ಹಿಂದೂ ಕುಟುಂಬಗಳು ಇಲ್ಲಿಂದ ಬೇರೆಡೆ ಸ್ಥಳಾಂತರಗೊಂಡಿದ್ದವು. ಆದರೆ ಕೆಲ ಹಿಂದೂ ಕಾಶ್ಮೀರಿ ಪಂಡಿತರು ಇಲ್ಲಿ ವಾಸವಾಗಿದ್ದಾರೆ. ಈ ಪ್ರದೇಶದಲ್ಲಿರುವ ಶಿವ ದೇವಾಲಯ ಪಾಳುಬಿದ್ದು ಹಾಳಾಗಿ ಹೋಗಿತ್ತು. ಆದರಿಂದ ಹಿಂದೂಗಳು ಈ ದೇವಾಲಯವನ್ನು ನವೀಕರಿಸಲು ನಿರ್ಧರಿಸಿದ್ದರು. ಆದ್ರೆ ಈ ಪ್ರದೇಶದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆ ಇರುವ ಕಾರಣಕ್ಕೆ ಅವರು ಮುಸ್ಲಿಂ ಭಾಂದವರ ಸಹಾಯ ಕೇಳಿದ್ದಾರೆ. ದೇಗುಲದ ಪಕ್ಕದಲ್ಲೇ ಮಸೀದಿ ಇರುವ ಕಾರಣಕ್ಕೆ ಮುಸ್ಲಿಂ ಭಾಂದವರು ಕೂಡ ದೇವಾಲಯದ ನವೀಕರಣ ಕಾರ್ಯಕ್ಕೆ ಸಹಾಯ ಮಾಡುತ್ತಿದ್ದಾರೆ.

    ಈ ಕುರಿತು ಸ್ಥಳೀಯ ಮುಸಿಂ ಭಾಂದವರು ಮಾತನಾಡಿ, ಇಲ್ಲಿ ನಾವೆಲ್ಲರು ಸಹೋದರರಂತೆ ವಾಸಿಸುತ್ತಿದ್ದೇವೆ. ನಮ್ಮ ಮಧ್ಯೆ ಧರ್ಮದ ಬೇಧವಿಲ್ಲ. ನಾವು ನಮ್ಮ ದೇಗುಲಗಳನ್ನು ಹೇಗೆ ಗೌರವಿಸುತ್ತೇವೆ ಹಾಗೆಯೇ ಹಿಂದೂ ದೇಗುಲಗಳನ್ನು ಗೌರವದಿಂದ ಕಾಣುತ್ತೇವೆ. ಆದರಿಂದ ನಮ್ಮ ಹಿಂದೂ ಭಾಂದವರ ಜೊತೆಗೂಡಿ ಶಿವ ದೇವಾಲಯದ ನವೀಕರಣ ಕಾರ್ಯದಲ್ಲಿ ಸಹಾಯ ಮಾಡುತ್ತಿದ್ದೇವೆ. ಈ ಹಿಂದೆ ಯಾವ ರೀತಿ ದೇವಾಲಯದಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿದ್ದವೋ ಅದೇ ರೀತಿ ಮುಂದಿನ ದಿನಗಳಲ್ಲೂ ನಡೆಯಬೇಕು ಎಂಬ ಉದ್ದೇಶದಿಂದ ಈ ಶಿವನ ದೇವಾಲಯ ಮರು ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ದೊಡ್ಡ ಹಗರಣ – ಆಸ್ಪತ್ರೆಯೇ ಕಟ್ಟಬಹುದಾದ ಹಣದಲ್ಲಿ ರಿಪೇರಿ ಕೆಲಸದ ಲೆಕ್ಕ

    ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ದೊಡ್ಡ ಹಗರಣ – ಆಸ್ಪತ್ರೆಯೇ ಕಟ್ಟಬಹುದಾದ ಹಣದಲ್ಲಿ ರಿಪೇರಿ ಕೆಲಸದ ಲೆಕ್ಕ

    ಬೆಂಗಳೂರು: ಒಂದೇ ಆಸ್ಪತ್ರೆ ನಿರ್ವಹಣೆ ಮತ್ತು ರಿಪೇರಿಗೆ ಕೋಟಿ ಕೋಟಿ ಹಣ ಖರ್ಚು ಮಾಡಲಾಗಿದೆ. ಆಸ್ಪತ್ರೆಯೇ ಕಟ್ಟಬಹುದಾದ ಹಣದಲ್ಲಿ ರಿಪೇರಿ ಕೆಲಸದ ಲೆಕ್ಕ ತೋರಿಸಲಾಗಿದೆ. ಕೆಲಸ ಆಗದಿದ್ರೂ ಬಿಲ್ ಮಾತ್ರ ರಿಲೀಸ್ ಆಗಿದೆ. ಆರೋಗ್ಯ ಇಲಾಖೆಯ ಕರ್ಮಕಾಂಡದ ಸ್ಟೋರಿ ಇದು.

    ಹೌದು. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಇಂತಹದ್ದೊಂದು ದೊಡ್ಡ ಹಗರಣ ನಡೆದಿದೆ. ಆಸ್ಪತ್ರೆಯ ರಿಪೇರಿ ಹಾಗೂ ವಿವಿಧ ಕಾಮಗಾರಿಗೆ ಖರ್ಚಾಗಿರೋದು ಬರೋಬ್ಬರಿ 4.50 ಕೋಟಿ ರೂ. ಅಲ್ಲದೆ ನಿಯಮಗಳೆಲ್ಲ ಗಾಳಿಗೆ ತೂರಿ ಬೇಕಾದವರಿಗೆ ಟೆಂಡರ್ ನೀಡಲಾಗಿದೆ.

    ಬಣ್ಣ ಬಳಿಯೋಕೆ 35 ಲಕ್ಷ ರೂ., ಸ್ಟೀಲ್ ಕಂಬಿಗಳ ಅಳವಡಿಕೆಗೆ 25 ಲಕ್ಷ ರೂ., ಮೇಚ್ಛಾವಣಿ ರಿಪೇರಿಗೆ ಲಕ್ಷ ಲಕ್ಷ ಹಣ ಖರ್ಚಾಗಿದೆ. ಗೋಡೆ ಕಿತ್ತು ಹೋಗಿದ್ರು ಅದಕ್ಕೆ ಲಕ್ಷ ಲಕ್ಷ ದುಡ್ಡು ಖರ್ಚು ಮಾಡಿ ರಿಪೇರಿ ಮಾಡಿದ್ದಾಗಿ ಲೆಕ್ಕ ನೀಡಿದ್ದಾರೆ. ವಾರ್ಡ್‍ಗಳು ಹಾಗೇ ಇದ್ರು ವಾರ್ಡ್ ರಿಪೇರಿ ಹೆಸರಲ್ಲಿ 50 ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಲಾಗಿದೆ. ಕೆಲಸವೇ ಆಗಿಲ್ಲವಾದ್ರೂ ದುಡ್ಡು ಮಾತ್ರ ರಿಲೀಸ್ ಆಗಿದೆ. ಹೀಗೆ ಕೆಸಿ ಜನರಲ್ ಆಸ್ಪತ್ರೆ ರಿಪೇರಿ ಖರ್ಚಿಗೆ ಆಗಿರೋದು ನಾಲ್ಕೂವರೆ ಕೋಟಿ ರೂ. RTI ನಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯ ಈ ಕರ್ಮಕಾಂಡ ಬಯಲಾಗಿದೆ.

    ಅತೀ ತುರ್ತು ಕೆಲಸ ಅಂತ ಟೆಂಡರ್ ಕರೆಯದೇ ಕಾಮಗಾರಿ ನೀಡಲಾಗಿದೆ. ಬೇಕಾದವರಿಗೆ ಕೆಲಸ ಕೊಟ್ಟು ಕೋಟಿ ಕೋಟಿ ಹಣ ಗುಳುಂ ಮಾಡಿರೋ ಆರೋಪ ಕೇಳಿಬಂದಿದೆ.

  • ವಿಧಾನಸಭೆ ಸಭಾಂಗಣ ನವೀಕರಣದಲ್ಲೂ ಅಕ್ರಮ?

    ವಿಧಾನಸಭೆ ಸಭಾಂಗಣ ನವೀಕರಣದಲ್ಲೂ ಅಕ್ರಮ?

    ಬೆಂಗಳೂರು: ವಿಧಾನಸಭೆಯ ಸಭಾಂಗಣ ನವೀಕರಣಕ್ಕೆ ಕೋಟಿ ಕೋಟಿ ಹಣ ಖರ್ಚು ಮಾಡಿದ್ದಾರೆ ಅನ್ನೋದು ಹಳೇ ಸುದ್ದಿ. ಆದ್ರೆ ಈಗ ಸಭಾಂಗಣಕ್ಕೆ ಖರ್ಚು ಮಾಡಿರೋ ಕೋಟಿ ಕೋಟಿ ಹಣದಲ್ಲೂ ಅಕ್ರಮ ಆಗಿದೆ ಅನ್ನೋ ಅನುಮಾನ ಮೂಡಿದೆ.

    2011-12ನೇ ಸಾಲಿನಲ್ಲಿ ವಿಧಾನಸಭೆಯ ಸಭಾಂಗಣದ 1 ಹಾಗೂ 2ನೇ ಮಹಡಿಯ ನವೀಕರಣಕ್ಕೆ ಸರ್ಕಾರ ಸುಮಾರು 15 ಕೋಟಿ ರೂ. ಹಣ ಖರ್ಚು ಮಾಡಲಾಗಿದೆ. ಆದ್ರೆ, ಕಾಮಗಾರಿ ನಡೆದು 4 ವರ್ಷದ ನಂತರ ಅಕ್ರಮದ ನಡೆದಿರೋ ಬಗ್ಗೆ ಅನುಮಾನ ಹುಟ್ಟಿದೆ. ಲೋಕೋಪಯೋಗಿ ಇಲಾಖೆಯ ದಾಖಲಾತಿಗಳು ಇದರ ಇಂಚಿಂಚು ಮಾಹಿತಿಯನ್ನ ಬಿಚ್ಚಿಟ್ಟಿದೆ.

    ಕಾಮಗಾರಿಗೆ ವಿರೋಧಿಸಿದ್ದವರೇ ಗ್ರೀನ್ ಸಿಗ್ನಲ್ ಕೊಟ್ರು!: ಅಂದಿನ ಸ್ಪೀಕರ್ ಕೆ.ಜಿ ಬೋಪಯ್ಯ ಕಾಮಗಾರಿಯ ಮೊತ್ತಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ್ರು. ಆದಾಗ್ಯೂ ನಿಗದಿಪಡಿಸಿದ್ದಕ್ಕಿಂತ ಹೆಚ್ಚುವರಿ 2 ಕೋಟಿ ಹಣದ ಜೊತೆ ಕಾಮಗಾರಿ ಪಾಸ್ ಆಗಿರೋದೇ ಈ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

    ಶಾಸಕರ ಕುರ್ಚಿ, ಲೆದರ್ ಸೋಫಾ ಸೆಟ್, ಟೇಬಲ್ ಟೀಪಾಯಿ, ಎಲ್‍ಇಡಿ ಡಿಸ್ಪ್ಲೇ, ಧ್ವನಿವರ್ಧಕ, ಲೈಂಟಿಂಗ್ಸ್ ಸೇರಿದಂತೆ ವಿವಿಧ ಕಾಮಗಾರಿ ನಡೆಸಲು 2010ರಲ್ಲಿ ಅಂದಿನ ಸ್ಪೀಕರ್ ನಿರ್ಧಾರ ಮಾಡಿದ್ರು. ಕಾಮಗಾರಿಗಾಗಿ ಲೋಕೋಪಯೋಗಿ ಇಲಾಖೆ ಹಾಗೂ ಸರ್ಕಾರದ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಿ ರಿಪೋರ್ಟ್ ರೆಡಿ ಮಾಡಿಸಿದ್ರು. ಮೊದಲ ರಿಪೋರ್ಟ್‍ನಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಿವಿಲ್ ವರ್ಕ್‍ಗಾಗಿ 3 ಕೋಟಿ ರೂ., ವಿದ್ಯುತ್ ಕಾಮಗಾರಿಗೆ 8 ಕೋಟಿ ರೂ. ಅಂದಾಜು ನೀಡಿದ್ರು. ಸಮಿತಿಯ ಸಭೆ ಸೇರುವ ಹೊತ್ತಿಗೆ ಈ ಮೊತ್ತವನ್ನ 5.90 ಕೋಟಿ ಹಾಗೂ 9.18 ಕೋಟಿಗೆ ಹೆಚ್ಚಳ ಮಾಡಲಾಗಿತ್ತು. ಸಭೆಯಲ್ಲಿ ಸ್ವತಃ ಸ್ಪೀಕರ್ ಇದಕ್ಕೆ ವಿರೋಧ ವ್ಯಕ್ತಪಡಿಸಿ ಮತ್ತೆ ಎಸ್ಟಿಮೇಟ್ ಮಾಡಲು ತಿಳಿಸಿದ್ರು. ಅಧಿಕಾರಿಗಳು ಸಿವಿಲ್ ಕಾಮಗಾರಿಯಲ್ಲಿ 1 ಕೋಟಿ ರೂ. ಕಡಿಮೆ ಮಾಡಿ ವಿದ್ಯುತ್ ಕಾಮಗಾರಿಯಲ್ಲಿ 2 ಕೋಟಿ ರೂ. ಹೆಚ್ಚಳ ಮಾಡಿ ಒಟ್ಟಾರೆ 15 ಕೋಟಿ ರೂ.ಗೆ ಎಸ್ಟಿಮೇಟ್ ಕೊಟ್ರು. ಮೊದಲ ಸಭೆಯಲ್ಲಿ ವಿರೋಧಿಸಿದ್ದ ಸ್ಪೀಕರ್ ಎರಡನೇ ಸಭೆಯಲ್ಲಿ ಮರು ಮಾತಾಡದೆ ಇದಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅಂದ್ರೆ ಬರೋಬ್ಬರಿ 3 ಕೋಟಿ ರೂ. ಹೆಚ್ಚುವರಿ ಎಸ್ಟಿಮೇಟ್ ನೀಡಿದ್ದಾರೆ. ಹೆಚ್ಚಳಕ್ಕೆ ಕಾರಣ ಡಾಲರ್ ಬೆಲೆ ಹೆಚ್ಚಳ ಅನ್ನೋದು ಅಧಿಕಾರಿಗಳ ಮಾತು.

    ಟೆಂಡರ್ ಕಾಮಗಾರಿಯಲ್ಲೂ ಅವ್ಯವಹಾರ?: ಕಾಮಗಾರಿ ಮೊತ್ತ ಹೆಚ್ಚಿಸಿದ್ದು ಒಂದು ಕಡೆಯಾದ್ರೆ ಟೆಂಡರ್ ಪ್ರಕ್ರಿಯೆಯೇ ಅಕ್ರಮವಾಗಿ ನಡೆದಿದೆ ಅನ್ನೋ ಅನುಮಾನ ಕೂಡಾ ವ್ಯಕ್ತವಾಗಿದೆ. ಯಾರು ಟೆಂಡರ್ ಪ್ರಕ್ರಿಯಲ್ಲಿ ಭಾಗವಹಿಸಿದ್ರು? ಪ್ರಕ್ರಿಯೆ ನಡೆದಿದ್ದು ಹೇಗೆ ಅನ್ನೋ ಮಾಹಿತಿಯನ್ನ ಆರ್‍ಟಿಐನಲ್ಲಿ ಕೇಳಿದ್ರೆ ಲೋಕೋಪಯೋಗಿ ಇಲಾಖೆ ಮಾಹಿತಿ ನೀಡಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಮರಿಲಿಂಗೇಗೌಡ ಮಾಲೀ ಪಾಟೀಲ್ ಹೇಳಿದ್ದಾರೆ.

    ಅಗ್ರಿಮೆಂಟ್ ಪ್ರಕಾರ ವಿದೇಶದಿಂದ ತರಿಸಿದ ಮೆಟೀರಿಯಲ್‍ಗಳನ್ನ ಹಾಕಬೇಕಿತ್ತು. ಆದ್ರೆ ವಿದೇಶಿ ವಸ್ತುಗಳನ್ನ ಬಳಸಿಲ್ಲ ಅನ್ನೋ ಆರೋಪಗಳು ಕೇಳಿ ಬರುತ್ತಿದೆ. ಪತ್ರಕರ್ತರ ಗ್ಯಾಲರಿಯಲ್ಲಿ ಹೈ ಟೆಕ್ನಾಲಜಿಯ ಎಲ್‍ಸಿಡಿ ಬೋರ್ಡ್, ದೊಡ್ಡ ಎಲ್‍ಸಿಡಿ ಪರದೆ ಅಳವಡಿಕೆಯಾಗಿಲ್ಲ. ಹೀಗಾಗಿ 15 ಕೋಟಿ ರೂ. ಕಾಮಗಾರಿಯಲ್ಲಿ ಅಕ್ರಮಗಳು ನಡೆದಿರೋ ಬಗ್ಗೆ ಸಾಕಷ್ಟು ಅನುಮಾನ ಮೂಡಿಸಿದೆ.