Tag: rent

  • ಸಂಬಂಧಿಗಳ ಕಣ್ಣೆದುರೇ ಸಮಾಧಿಯಿಂದ ಶವಗಳನ್ನ ಹೊರ ಹಾಕ್ತಾರೆ!

    ಸಂಬಂಧಿಗಳ ಕಣ್ಣೆದುರೇ ಸಮಾಧಿಯಿಂದ ಶವಗಳನ್ನ ಹೊರ ಹಾಕ್ತಾರೆ!

    ವಾಷಿಂಗ್ಟನ್: ನಮ್ಮವರನ್ನು ಕಳೆದುಕೊಂಡಾಗ ಆಗುವ ದುಃಖ ಪದಗಳಿಂದ ಹೇಳಲಾಗದು. ಅಂತಹ ದುಃಖದಲ್ಲಿ ಹೂತಿರುವ ಶವಗಳನ್ನು ಸಮಾಧಿಯಿಂದ ಹೊರತೆಗೆದು ಎಸೆಯುವುದು ಎಂತಹವರ ಕಣ್ಣಲ್ಲಿ ನೀರು ತರಿಸುತ್ತದೆ. ಆದರೆ ಅಮೆರಿಕದಲ್ಲಿ ಒಂದು ಕಡೆ ಪ್ರತಿನಿತ್ಯ ಸಮಾಧಿಯಿಂದ ತೆಗೆಯಲಾಗುತ್ತದೆ.

    ಹೌದು, ಗ್ವಾಟೆಮಾಲಾ ಎಂಬಲ್ಲಿ ಶವಗಳನ್ನು ಸಮಾಧಿಯಿಂದ ತೆಗೆಯಲಾಗುತ್ತದೆ. ಸುಂದರವಾದ ಸಮಾಧಿಗಳಲ್ಲಿ ನಮ್ಮ ಆತ್ಮೀಯರ ಶವಗಳು ಇರಬೇಕಾದ್ರೆ ಇಲ್ಲಿ ಪ್ರತಿವರ್ಷ ಹೂತಿರುವ ಸ್ಥಳಕ್ಕೆ ನಿರ್ಧಿಷ್ಟ ಹಣವನ್ನು ಪಾವತಿ ಮಾಡಬೇಕಾಗುತ್ತದೆ.

    ಒಪ್ಪಂದವಾಗಿರುತ್ತೆ: ಶವ ಹೂತಿರುವ ಮತ್ತು ಸಮಾಧಿ ಮಾಲೀಕರ ನಡುವೆ ಅಂತ್ಯ ಸಂಸ್ಕಾರದ ದಿನದಂದು ಒಪ್ಪಂದವಾಗಿರುತ್ತದೆ. ಇಲ್ಲಿ ಶವ ಹೂತ ಮೇಲೆ ಮೊದಲಿನ 6 ವರ್ಷ ಯಾವುದೇ ಬಾಡಿಗೆ ಇರುವುದಿಲ್ಲ. 6 ವರ್ಷಗಳ ನಂತರ ಪ್ರತಿ ವರ್ಷ ಆ ಶವದ ಸಂಬಂಧಿ ಅಥವಾ ಮಾಲೀಕ 24 ಡಾಲರ್ (1549 ರೂ.) ಹಣವನ್ನು ಪಾವತಿಸಬೇಕಾಗುತ್ತದೆ. ಇದು ಶವವನ್ನು ಹೂಳಿದ್ದ ದಿನದಿಂದ ಈ ಒಪ್ಪಂದ ಜಾರಿಯಲ್ಲಿರುತ್ತದೆ.

    ಶವ ಹೂತ ನಂತರ ಮೊದಲ ಉಚಿತ ಆರು ವರ್ಷ ಪೂರ್ಣವಾಗುತ್ತಲೇ ಅದಕ್ಕೆ ಸಂಬಂಧಪಟ್ಟವರು ಹಣವನ್ನು ಪಾವತಿ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ ಸ್ಮಶಾನದ ಸಿಬ್ಬಂದಿ ಹೂತಿರುವ ಶವಗಳನ್ನು ಹೊರ ತೆಗೀತಾರೆ. ಖಾಲಿಯಾದ ಸ್ಥಳದಲ್ಲಿ ಮತ್ತೊಮ್ಮೆ ಶವದ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ. ಈ ಹಣ ಕೆಳವರ್ಗದ ಜನರಿಗೆ ದುಬಾರಿಯಾಗಿದೆ.

    ಶವಗಳನ್ನ ಪ್ಲಾಸ್ಟಿಕ್ ಹಾಳೆಯಲ್ಲಿ ಇಡ್ತಾರೆ: ಇನ್ನು ಹಣ ಪಾವತಿಯಾಗದ ಶವಗಳನ್ನು ಅವುಗಳ ಬಟ್ಟೆ ಸಹಿತ ಹೊರ ತೆಗೆದು ಪ್ಲಾಸ್ಟಿಕ್ ಕವರ್‍ಗಳಲ್ಲಿ ಸುತ್ತಿಡ್ತಾರೆ. ಶವಗಳನ್ನು ಸುತ್ತಿದ ಬಳಿಕ ಅವುಗಳನ್ನು ಸಾರ್ವಜನಿಕ ಸ್ಥಳವೊಂದರಲ್ಲಿ ಸಾಮೂಹಿಕವಾಗಿ ಹೂಳ್ತಾರೆ. ಹೀಗೆ ಸಾಮುಹಿಕವಾಗಿ ಹೂಳುವುದ್ರಿಂದ ಸತ್ತವರ ಆತ್ಮಗಳು ಅಳುತ್ತವೆ ಎಂಬುವುದು ಇಲ್ಲಿನ ಜನರ ನಂಬಿಕೆಯಾಗಿದೆ.

    ಇನ್ನು ಕೆಲ ಬಡವರ್ಗದ ಜನರು ಆರು ವರ್ಷ ಕಾಲಾವಧಿ ಮುಗಿದ ಬಳಿಕ ಸಮಾಧಿ ಆಗಮಿಸಿ ತಮ್ಮವರ ಶವದ ಅವಶೇಷಗಳನ್ನು ತೆಗೆದುಕೊಂಡು ಹೋಗಿ ಪ್ಲಾಸ್ಟಿಕ್ ನಲ್ಲಿ ಸುತ್ತಿ ಹೂಳುತ್ತಾರೆ.

    ಇದನ್ನೂ ಓದಿ: ಮೂರು ವರ್ಷಗಳ ನಂತರ ಸಮಾಧಿಯಿಂದ ಹೊರಬಂದು ನಡೆದಾಡಿದ ಮಹಿಳೆ!

     

     

  • ಕೊಪ್ಪಳದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ- ದಲಿತರಿಗೆ ಮನೆ ಬಾಡಿಗೆಗೆ ಕೊಡದೆ ಹೊರಹಾಕಿದ್ರು

    ಕೊಪ್ಪಳದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ- ದಲಿತರಿಗೆ ಮನೆ ಬಾಡಿಗೆಗೆ ಕೊಡದೆ ಹೊರಹಾಕಿದ್ರು

    ಕೊಪ್ಪಳ: ದೇಶದ 70 ನೇ ಸ್ವ್ಯಾತಂತ್ರ್ಯೋತ್ಸವದ ಹೊಸ್ತಿಲಲ್ಲೂ ಕೊಪ್ಪಳ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಆಚರಣೆ ಮಾತ್ರ ಜೀವಂತವಾಗಿದೆ. ದಲಿತ ಕುಟುಂಬವೊಂದನ್ನು ಬಾಡಿಗೆ ಮನೆಯಿಂದ ಹೊರ ಹಾಕುವ ಮೂಲಕ, ಅಸ್ಪೃಶ್ಯತೆ ಮಾಡಿದ್ದಲ್ಲದೇ ಅಮಾನವೀಯವಾಗಿ ವರ್ತಿಸಿರುವ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕುಕನೂರು ಗ್ರಾಮದಲ್ಲಿ ಸೋಮವಾರದಂದು ನಡೆದಿದೆ.

    ಕುಕನೂರು ಪಟ್ಟಣದ ಮುತ್ತಣ್ಣ ಛಲವಾದಿ ಕುಟುಂಬವನ್ನು ಮನೆ ಮಾಲೀಕ ಮನೆಯಿಂದ ಹೊರ ಹಾಕುವ ಮೂಲಕ ಅಸ್ಪೃಶ್ಯತೆ ಆಚರಿಸುವ ಜೊತೆಗೆ ಅಮಾನವೀಯವಾಗಿ ವರ್ತಿಸಿದ್ದಾರೆ.

    ಮುತ್ತಣ ನಾಲ್ಕು ದಿನದ ಹಿಂದೆ ಕುಕನೂರಿನ ಸಂಜಯ ನಗರದಲ್ಲಿನ ಹುಚ್ಚಪ್ಪ ಎಂಬುವರ ಮನೆ ಬಾಡಿಗೆ ಪಡೆದಿದ್ರು. ಸೋಮವಾರ ಬೆಳಗ್ಗೆ ತಮ್ಮ ದಿನಬಳಕೆ ವಸ್ತು ಮತ್ತು ಕುಟುಂಬ ಸಹಿತ ಬಾಡಿಗೆ ಮನೆ ಪ್ರವೇಶ ಮಾಡಿದ್ದಾರೆ. ಈ ವೇಳೆ ಹುಚ್ಚಪ್ಪರ ಮನೆಯ ನೆಲ ಮಹಡಿಯಲ್ಲಿ ಬಾಡಿಗೆಗೆ ಇರುವ ಮಹೇಶ ಉಳ್ಳಾಗಡ್ಡಿ ಎಂಬಾತ ಮುತ್ತಣ್ಣ ಛಲವಾದಿ ಮನೆ ಪ್ರವೇಶ ಮಾಡುವುದನ್ನು ಆಕ್ಷೇಪಿಸಿದ್ದಾನೆ. ಒಂದಮ್ಮೆ ಅವರಿಗೆ ಮನೆ ಬಾಡಿಗೆ ನೀಡಿದರೆ ತಾವು ಮನೆ ಖಾಲಿ ಮಾಡುವುದಾಗಿ ಬೆದರಿಸಿದ್ದಾನೆ. ಇಷ್ಟಕ್ಕೆ ಸುಮ್ಮನಾಗದೇ ಮುತ್ತಣ ಮನೆಗೆ ತಂದಿದ್ದ ವಸ್ತುಗಳನ್ನು ಹೊರಹಾಕಿದ್ದಾನೆ. ಇದಕ್ಕೆ ಆಕ್ಷೇಪಿಸಿರುವ ದಲಿತ ಕುಟುಂಬ ಬೆಳಗ್ಗೆಯಿಂದ ರಾತ್ರಿಯವರೆಗೂ ತಮ್ಮ ವಸ್ತುಗಳ ಜೊತೆಗೆ ಮನೆ ಮುಂದೆ ಕುಳಿತಿದೆ. ಆದ್ರೂ, ಮನೆ ಮಾಲೀಕರ ಮತ್ತು ಸುತ್ತಲಿನ ಸವರ್ಣಿಯರ ಮನಸ್ಸು ಕರಗಿಲ್ಲ.

    ವಿಷಯ ತಿಳಿದು ಸ್ಥಳೀಯ ಪಿಎಸ್‍ಐ ಮತ್ತು ಸಮಾಜ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿಗಳು ಸ್ಥಳಕ್ಕೆ ನೆಪ ಮಾತ್ರಕ್ಕೆ ಭೇಟಿ ನೀಡಿದರು. ರಾತ್ರಿವರೆಗೆ ಮನೆ ಮುಂದೆ ಕುಳಿತಿದ್ದ ಆ ಕುಟುಂಬ ತಮಗೆ ನ್ಯಾಯ ಸಿಗುವುದಿಲ್ಲ ಎಂದು ತಿಳಿದು ರಾತ್ರಿ ವೇಳೆಗೆ ದಲಿತ ಕೇರಿಯ ಖಾಲಿ ಜಾಗದಲ್ಲಿ ತಾತ್ಕಾಲಿಕ ಶೆಡ್ ಹಾಕಿಕೊಂಡ್ರು. ಇದರಿಂದ ಮನನೊಂದ ಮುತ್ತಣ್ಣನ ಪತ್ನಿ ಸತಿದೇವಿ ದಲಿತರಾಗಿ ಹುಟ್ಟಿರೋದು ತಪ್ಪಾ ಅಂತ ಮಾಧ್ಯಮಗಳ ಮುಂದೆ ನೋವು ತೋಡಿಕೊಂಡ್ರು.