ಬೆಂಗಳೂರು: ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಮಕ್ಮಲ್ ಟೋಪಿ ಹಾಕಿದೆ. ಒಂದು ಗುಂಡಿ ಮುಚ್ಚೋ ಯೋಗ್ಯತೆಯೂ ಈ ಸರ್ಕಾರಕ್ಕೆ ಇಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಆಂತರಿಕ ಕಿತ್ತಾಟದ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಜನರಿಗೆ ಮಕ್ಮಲ್ ಟೋಪಿ ಹಾಕಿ ಅಧಿಕಾರಕ್ಕೆ ಬಂದ ಸರ್ಕಾರ ಐಸಿಯುನಲ್ಲಿದೆ. ಸಿದ್ದರಾಮಯ್ಯ ನಾನೇ ಸಿಎಂ ಎನ್ನುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಎಲ್ಲಾ ದೇವರ ಮೊರೆ ಹೋಗುತ್ತಿದ್ದಾರೆ. ಇವರಿಬ್ಬರ ಜಗಳದಲ್ಲಿ ಕೂಸು ಬಡವಾದಂತಾಗಿದೆ ರಾಜ್ಯದ ಸ್ಥಿತಿ. ಗುಂಡಿ ಮುಚ್ಚಲೂ ಇವರ ಬಳಿ ಯೋಗ್ಯತೆ ಇಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಾದಕ ವಸ್ತು, ಶಸ್ತ್ರಾಸ್ತ್ರ ಕೇಸ್ಲ್ಲಿ ಕರ್ನಾಟಕದ ಇಬ್ಬರು ಸೇರಿ 9 ಜನ ಅರೆಸ್ಟ್
ರೈತರ ಸಮಸ್ಯೆಗಳಿಗೋಸ್ಕರ ಶುಕ್ರವಾರ ಸಿಎಂ, ಡಿಸಿಎಂ ಅವರನ್ನು ಭೇಟಿ ಮಾಡಿದ್ದೆವು. 21ರಂದು ದಾವಣೆಗೆರೆಯಲ್ಲಿ ಪ್ರತಿಭಟನೆ ಮಾಡಿದಾಗ 1,000 ಪೊಲೀಸರನ್ನು ನಿಯೋಜಿಸಿ ನಮ್ಮನ್ನು ಬಂಧಿಸಿದ್ದರು. ಪೊಲೀಸರು ಸರ್ಕಾರದ ಏಜೆಂಟರಾಗಿ ಕೆಲಸ ಮಾಡಿದ್ದರು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಕೆಶಿ
ಭದ್ರ ಬಲದಂಡೆ ನಾಲೆ ಸೀಳಿ ನೀರು ತೆಗೆದುಕೊಂಡು ಹೋಗಲು ಯಡಿಯೂರಪ್ಪ ಆದೇಶ ಮಾಡಿಲ್ಲ ಎಂದು ಕಾಂಗ್ರೆಸ್ನವರು ಈಗ ಅಪಪ್ರಚಾರ ಮಾಡುತ್ತಿದ್ದಾರೆ. ಈ ಬಗ್ಗೆ ಇಂದು ಯಡಿಯೂರಪ್ಪನವರ ಗಮನಕ್ಕೆ ಕೂಡಾ ತಂದಿದ್ದೇವೆ. ದೊಡ್ಡ ದೊಡ್ಡ ನೀರಾವರಿ ಯೋಜನೆಗಳನ್ನು ಕೊಟ್ಟಿದ್ದು ಬಿಜೆಪಿ ಸರ್ಕಾರ ಎಂದಿದ್ದಾರೆ.
ಸಿಎಂ, ಡಿಸಿಎಂ ಭೇಟಿ ಮಾಡಿ ಎಲ್ಲಾ ವಿಚಾರ ಗಮನಕ್ಕೆ ತಂದಿದ್ದೇವೆ. ಇಂದು ಸಂಜೆ ನಾವು ದಾವಣಗೆರೆಯಲ್ಲಿ ಸಭೆ ಸೇರುತ್ತೇವೆ. ಬುಧವಾರ ದೊಡ್ಡ ಮಟ್ಟದಲ್ಲಿ ಟ್ರ್ಯಾಕ್ಟರ್ ರ್ಯಾಲಿ ಮಾಡುತ್ತಿದ್ದೇವೆ. ಡಿ.ಕೆ.ಶಿವಕುಮಾರ್ ಸ್ಥಳಕ್ಕೆ ಭೇಟಿ ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಬೈ ಮಿಸ್ ಆಗಿ ಹೇಳಿರಬೇಕು, ಕ್ಷಮಿಸಿಬಿಡೋಣ: ನಟಿ ಹರ್ಷಿಕಾ ಪೂಣಚ್ಚ
ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಸಭೆ ವಿಚಾರವಾಗಿ ಮಾತನಾಡಿದ ಅವರು, ಸಂಘಟನೆ ದೃಷ್ಟಿಯಿಂದ ನಮಗೆ ನಿನ್ನೆ ಮಾರ್ಗದರ್ಶನ ಮಾಡಿದ್ದಾರೆ. ಮುಂದಿನ ಚುನಾವಣೆಗಳಿಗೆ ಕಾರ್ಯಕರ್ತರ ನೈತಿಕ ಸ್ಥೈರ್ಯ ಹೆಚ್ಚಿಸಲು ಸೂಚನೆ ಕೊಟ್ಟಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಏನು ಹೇಳಬೇಕೋ ಹೇಳಿದ್ದೇವೆ. ಜೆ.ಹೆಚ್.ಪಟೇಲರು ಹೇಳಿದಂತೆ ಹೋರಿ ಹೋಗುತ್ತಿತ್ತು, ತೋಳ ಕಾದು ಕೂತಿತ್ತು ಎನ್ನುವ ರೀತಿ ಕಥೆ ಆಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಬಿಜೆಪಿ ಪಕ್ಷದೊಳಗಿನ ಭಿನ್ನಮತ ಶಮನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಕಸರತ್ತು ಮುಂದುವರೆಸಿದ್ದಾರೆ. ನಾಳೆ ಪ್ರಹ್ಲಾದ್ ಜೋಶಿ ಅವರು ಬಿಜೆಪಿ ಕಚೇರಿಯಲ್ಲಿ ದಾವಣಗೆರೆ (Davanagere) ಬಿಜೆಪಿ ನಾಯಕರ ಸಂಘರ್ಷ ಬಗೆಹರಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ದಾವಣಗೆರೆ ಬಿಜೆಪಿ ಗೊಂದಲ ಬಗ್ಗೆ ಶುಕ್ರವಾರ ಪ್ರಹ್ಲಾದ್ ಜೋಶಿ ಅವರು ಮಾಜಿ ಸಚಿವ ರೇಣುಕಾಚಾರ್ಯ (Renukacharya) ಮತ್ತು ತಂಡದ ಜೊತೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ರೇಣುಕಾಚಾರ್ಯ ಮತ್ತು ತಂಡಕ್ಕೆ ನಾಳೆಯ ಸಭೆಗೆ ಈಗಾಗಲೇ ಪ್ರಹ್ಲಾದ್ ಜೋಶಿ ಬುಲಾವ್ ನೀಡಿದ್ದಾರೆ. ಇದನ್ನೂ ಓದಿ: ಸಿಎಸ್ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ – ನಾಳೆ ಜೋಷಿಗೆ ಸ್ಪಷ್ಟನೆ
ಇತ್ತೀಚೆಗಷ್ಟೇ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿದ್ದ ಮಾಜಿ ಸಂಸದ ಸಿದ್ದೇಶ್ವರ್ ಹಾಗೂ ಶಾಸಕ ಬಿ.ಪಿ ಹರೀಶ್, ದಾವಣಗೆರೆ ಲೋಕಸಭೆ ಸೋಲಿಗೆ ರೇಣುಕಾಚಾರ್ಯ ಮತ್ತು ತಂಡದ ಅಡ್ಜಸ್ಟ್ಮೆಂಟ್ ಕಾರಣ ಎಂದು ದೂರು ಕೊಟ್ಟಿದ್ದರು. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್
ಕಳೆದೊಂದು ವರ್ಷದಿಂದಲೂ ನಡೆಯುತ್ತಿರುವ ಜಟಾಪಟಿಗೆ ಈಗ ಹೈಕಮಾಂಡ್ ಸೂಚನೆ ಮೇರೆಗೆ ಪ್ರಹ್ಲಾದ್ ಜೋಶಿ ಅವರು ಮದ್ದು ಅರೆಯಲು ಮುಂದಾಗಿದ್ದಾರೆ. ಹೀಗಾಗಿ ನಾಳೆ ರೇಣುಕಾಚಾರ್ಯ ಜೊತೆ ಪ್ರಹ್ಲಾದ್ ಜೋಶಿ ಅವರು ಚರ್ಚಿಸಿ ಬುದ್ಧಿ ಮಾತು ಹೇಳಿ ಎಚ್ಚರಿಕೆ ನೀಡಲಿದ್ದಾರೆ.
ಬೆಂಗಳೂರು: ನಾನು ಬಿಜೆಪಿ (BJP) ಶಿಸ್ತಿನ ಸಿಪಾಯಿಯಾಗಿದ್ದು ಕೇಂದ್ರೀಯ ಶಿಸ್ತು ಸಮಿತಿ ನೀಡಿದ ನೋಟಿಸ್ಗೆ (Notice) ಉತ್ತರ ನೀಡಿದ್ದೇನೆ ಎಂದು ಮಾಜಿ ಶಾಸಕ ರೇಣುಕಾಚಾರ್ಯ (Renukacharya) ಹೇಳಿದ್ದಾರೆ.
ನಾನು ರಾಷ್ಟ್ರೀಯ ನಾಯಕರ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಯಡಿಯೂರಪ್ಪ, ರಾಜ್ಯಾಧ್ಯಕ್ಷರ ಬಗ್ಗೆ ಮಾತನಾಡಿದ್ದಕ್ಕೆ ನಾನು ಮಾತನಾಡಿದ್ದೇನೆ ಅಷ್ಟೇ. ಯಡಿಯೂರಪ್ಪ ವಿರುದ್ಧ ಸದನದ ಒಳಗೆ, ಹೊರಗೆ ಮಾತನಾಡಿ ಅಪಮಾನ ಮಾಡಿದ್ದರು. ಅದು ರಾಷ್ಟ್ರೀಯ ನಾಯಕರ ಬಗ್ಗೆ ಮಾತನಾಡಿದಂತೆ ಎಂದರು. ಇದನ್ನೂ ಓದಿ: ಯತ್ನಾಳ್ ಉಚ್ಚಾಟನೆ ಖಂಡಿಸಿ ಪಂಚಮಸಾಲಿ, ಹಿಂದೂ ಸಂಘಟನೆಗಳ ಪ್ರತಿಭಟನೆ
ಇದೇ ವೇಳೆ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಠಾಧೀಶರು, ಖಾವಿ ಬಗ್ಗೆ ನನಗೆ ಅಪಾರ ಗೌರವ ಭಕ್ತಿ ಇದೆ. ಸ್ವಾಮೀಜಿ ಅವರು ಕೈಗೊಂಡ ಎಲ್ಲಾ ಹೋರಾಟಗಳಲ್ಲೂ ನಾನು ಭಾಗಿಯಾಗಿದ್ದೇನೆ. ನೀವು ಒಬ್ಬ ವ್ಯಕ್ತಿ ಪರವಾಗಿ ಧ್ವನಿ ಎತ್ತುವುದು ಬೇಡ. ಭಕ್ತರು ತಪ್ಪು ಮಾಡಿದಾಗ ತಿದ್ದಬೇಕು. ನಾನು ಟೀಕೆ ಮಾಡುತ್ತಿಲ್ಲ, ಮನವಿ ಮಾಡುತ್ತೇನೆ. ನನಗೆ ಶ್ರೀಗಳ ಬಗ್ಗೆ ಅಪಾರ ಗೌರವ ಇದೆ ಎಂದು ಹೇಳಿದರು.
ಬೆಂಗಳೂರು: ನಮ್ಮ ಒಳಜಗಳದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ವಿಜಯೇಂದ್ರರನ್ನ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿಗೆ 10 ಸೀಟೂ ಬರಲ್ಲ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ (MP Renukacharya) ಗುಡುಗಿದರು.
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿನ ಬೆಳವಣಿಗೆ ನೋಡಿ ಜನ ಉಗೀತಿದ್ದಾರೆ, ಕಾರ್ಯಕರ್ತರಿಗೆ ನೋವಾಗಿದೆ. ನಾವು ಸೈಲೆಂಟ್ ಇದ್ವಿ, ಯಡಿಯೂರಪ್ಪ, ವಿಜಯೇಂದ್ರ ಮಾತಾಡಬೇಡಿ ಅಂದಿದ್ರು. ಆದ್ರೆ ನಮಗೆ ನೋವಾಗಿದೆ. ಹೀಗಾಗಿ ಇಂದು ತುರ್ತು ಸಭೆ ನಡೆಸಬೇಕಾಯಿತು ಅಂತ ಹೇಳಿದ್ದಾರೆ.
ಕಳೆದ 3-4 ತಿಂಗಳಿಂದ ಜೆ.ಪಿ ನಡ್ಡಾ (JP Nadda), ಅಮಿತ್ ಶಾ ಭೇಟಿ ಮಾಡಲಾಗ್ತಿಲ್ಲ, ಯತ್ನಾಳ್ ತಂಡ ಭೇಟಿ ಮಾಡಿದ್ದೀವಿ ಅಂತ ಸುಳ್ಳು ಹೇಳಿಕೊಂಡು ಸ್ಟೋರಿಗಳನ್ನು ಪ್ಲಾಂಟ್ ಮಾಡಿಸ್ತಿದ್ದಾರೆ. ಭೇಟಿಯಾದ ಫೋಟೋ ಕೊಡಿ ಅಂದ್ರೆ ಇಲ್ಲ ತೆಗೀಬೇಡಿ ಅಂದಿದ್ದಾರೆ ಅಂತ ಹೇಳ್ತೀರಿ ಎಂದು ಅಸಮಾಧಾನ ಹೊರಹಾಕಿದ್ದರೆ.
ವಿಜಯೇಂದ್ರರನ್ನ ನೀವು ಕುಗ್ಗಿಸಲು ಆಗಲ್ಲ. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿ ಪಕ್ಷ ಕಟ್ಟಿದ್ರು. ಅದೇ ರೀತಿ ವಿಜಯೇಂದ್ರ ನಾಡಿನ ಯುವಕರ ಕಣ್ಮಣಿ ಆಗಿದ್ದಾರೆ. ಅಂಥವರ ಬಗ್ಗೆ ಮಾತಾಡ್ತೀರ? ಮುಂದಿನ ವಾರ ನಾವು ಮತ್ತೆ ಸಭೆ ಮಾಡ್ತೀವಿ. 100ಕ್ಕೂ ಹೆಚ್ಚು ಜನ ಸೇರಿ ದೊಡ್ಡ ಸಭೆ ಮಾಡ್ತೀವಿ. ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ. ವಿಜಯೇಂದ್ರರನ್ನ ಟೀಕೆ ಮಾಡೋದು ಮೋದಿ, ಅಮಿತ್ ಶಾ ನಡ್ಡಾರನ್ನ ಟೀಕೆ ಮಾಡಿದಂತೆ ಎಂದು ನುಡಿದಿದ್ದಾರೆ.
ನಮ್ಮ ಒಳಜಗಳದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈಗ ವಿಜಯೇಂದ್ರರನ್ನು ಕೆಳಗಿಳಿಸಿದರೆ ಬಿಜೆಪಿಗೆ ಹತ್ತು ಸೀಟೂ ಬರಲ್ಲ. ಹೈಕಮಾಂಡ್ ವಿಜಯೇಂದ್ರರನ್ನ ಕೆಳಗಿಳಿಸಲ್ಲ, ಅವರೇ ಮುಂದುವರೀತಾರೆ ಅನ್ನೋ ವಿಶ್ವಾಸ ಇದೆ. ಇದೇ ಗುಡ್ ನ್ಯೂಸ್ ಎಂದು ಹೇಳಿದ್ದಾರೆ.
ಬಾಗಲಕೋಟೆ: ಯಡಿಯೂರಪ್ಪ (Yediyurappa) ಹೆಸರಲ್ಲಿ ನಡೆಯುವ ಉತ್ಸವ ಶಕ್ತಿ ಪ್ರದರ್ಶನವಲ್ಲ, ಗುಂಪುಗಾರಿಕೆ ಪ್ರದರ್ಶನ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಘಟನೆ ಉಳಿಯತ್ತದೆ ಮತ್ತೆ ಬಿಜೆಪಿ (BJP) ಮತ್ತಷ್ಟು ಗಟ್ಟಿಯಾಗುತ್ತದೆ. ಪ್ರತಿ ವರ್ಷವೂ ಯಡಿಯೂರಪ್ಪನವರ ಹುಟ್ಟು ಹಬ್ಬ ಆಚರಣೆಗೆ ಮಾಡದ ಸಮಾವೇಶ ಈಗ ಯಾಕೆ ಎಂದು ಪ್ರಶ್ನಿಸಿದರು. ಹೀಗೆ ಗುಂಪುಗಾರಿಕೆ ನಡೆಯುವ ಕೆಲಸವನ್ನು ಯಡಿಯೂರಪ್ಪ ನಿಲ್ಲಿಸಬೇಕು ಎಂದರು.
ಬಿಜೆಪಿಯಲ್ಲಿ (BJP) ಇರುವ ಗುಂಪುಗಾರಿಕೆ ಮುಂದೆ ಸರಿ ಹೋಗುತ್ತದೆ. ಈಗ ಯಾರ್ಯಾರು ಏನು ಬೇಕಾದ್ರೂ ಹಾರಾಡಬಹುದು. ಬಿಜೆಪಿ ಪಕ್ಷಕ್ಕಾಗಿ ತಪಸ್ಸು ಮಾಡಿ ಕಟ್ಟಿದವರಿಗೆ ಬೆಲೆ ಇದೆ. ಬಿಜೆಪಿಯಲ್ಲಿ ಗುಂಪುಗಾರಿಕೆ ನಡೆಯುವುದಿಲ್ಲ. ವರಿಷ್ಠರು ಅದನ್ನು ಸರಿಯಾಗಿ ಚಿವುಟಿ ಹಾಕುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದ ಬಳಸಿ ನಿಂದಿಸಿದ್ರಾ?
ರೇಣುಕಾಚಾರ್ಯ (Renukcharya) ಬಣದ ಗುಂಪು ಸಮಾವೇಶ ಮಾಡುತ್ತಿದೆ. ಅದಕ್ಕೆ ಬಿಎಸ್ವೈ ಅವರ ಒಪ್ಪಿಗೆ ಇದೆ ಇಲ್ವೋ ಗೊತ್ತಿಲ್ಲ. ಆದರೆ ಗುಂಪುಗಾರಿಕೆ ಆಗುವುದಕ್ಕೆ ಬಿಎಸ್ವೈ ಒಪ್ಪಿಗೆ ಕೊಡುತ್ತಾರೆ ಎನ್ನುವುದು ನನಗೇನು ಅನಿಸುವುದಿಲ್ಲ ಎಂದರು.
ಕಾಂಗ್ರೆಸ್ನಲ್ಲಿ (Congress) ಒಳ ಒಳಗೆ ಬಡಿದಾಟವಿದೆ. ಯಾವಾಗ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಅಂತಾ ಕಾಯ್ತಿದ್ದಾರೆ. ನಾಯಕರು ಸುಮ್ಮನೆ ಸಿದ್ದರಾಮಯ್ಯ ಬೆನ್ನಿಗೆ ನಾವಿದ್ದೇವೆ ಎನ್ನುತ್ತಾರೆ. ಸಿಎಂ ಬೆಂಬಲಕ್ಕೆ ಯಾರೆಲ್ಲ ನಿಂತಿದ್ದಾರೋ ಅವರೆಲ್ಲ ಸಿಎಂ ಖುರ್ಚಿ ಮೇಲೆ ಸಿಎಂ ಆಗಲು ಟವೆಲ್ ಹಾಕಿದ್ದಾರೆ. ರಥಸಪ್ತಮಿ ದಿನದಿಂದ ರಾಜ್ಯದಲ್ಲಿ ಏನೇನು ರಾಜಕೀಯ ಬದಲಾವಣೆ ಆಗುತ್ತದೆ ಕಾದು ನೋಡಬೇಕು ಎಂದು ಮಾರ್ಮಿಕವಾಗಿ ನುಡಿದರು.
ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅಂಬೇಡ್ಕರ್ ಜೀವಂತವಾಗಿದ್ದಾಗ ಕಾಂಗ್ರೆಸ್ ಪೂರ್ಣ ಪ್ರಮಾಣದಲ್ಲಿ ಅಪಮಾನ ಮಾಡಿತ್ತು. ಅಂಬೇಡ್ಕರ್ ಅವರು ಚುನಾವಣೆಗೆ ನಿಂತಾಗ ಕಾಂಗ್ರೆಸ್ ಅವರನ್ನು ಸೋಲಿಸಿತ್ತು. ಅವರು ಸಾವನ್ನಪ್ಪಿದಾಗ ದೆಹಲಿಯಲ್ಲಿ ಜಾಗವನ್ನು ಕಾಂಗ್ರೆಸ್ ಕೊಡಲಿಲ್ಲ. ಕೇಂದ್ರ ಮಂತ್ರಿಮಂಡಲದಲ್ಲಿ ಅವರು ರಾಜೀನಾಮೆ ನೀಡಲು ಮುಂದಾದಾಗ ಕೊಟ್ಟರೆ ಕೊಡಲಿ ಎಂದು ಹೇಳಿ ಸುಮ್ಮನಾಗಿದ್ದರು ಎಂದರು.
ಮೈಸೂರಿನಲ್ಲಿಂದು (Mysuru) ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಬಣದಿಂದ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿ.ಸಿ ಪಾಟೀಲ್, ಹಾಲಪ್ಪ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು. ಗೋಷ್ಠಿ ನಡುವೆ ʻಯತ್ನಾಳ್ ಉಚ್ಚಾಟಿಸಿ. ಬರೀ ಸುದ್ದಿಗೋಷ್ಠಿ ಮಾಡಿ ಏನೂ ಪ್ರಯೋಜನವಿಲ್ಲʼ ಎಂದು ಕಾರ್ಯಕರ್ತರು ಗದ್ದಲ ಎಬ್ಬಿಸಿದ್ದಾರೆ. ಯತ್ನಾಳ್ ವಿರುದ್ಧ ಧಿಕ್ಕಾರ ಕೂಗುತ್ತಾ, ಮೊದಲು ಅವನನ್ನ ಪಕ್ಷದಿಂದ ಕಿತ್ತೊಗೆಯಿರಿ ಎಂದು ಎಂದು ಆಕ್ರೋಶ ಹೊರಹಾಕಿದ್ದಾರೆ.
ಸದ್ಯ ವಕ್ಫ್ ವಿರೋಧಿ ಹೋರಾಟದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಕ್ಕಾಗಿ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ಡಿ.3ರಂದು ಕೋರ್ ಕಮಿಟಿ ಸಭೆ ನಿಗದಿ ಮಾಡಿದೆ. ಅಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ತರುಣ್ ಚುಗ್ ರಾಜ್ಯಕ್ಕೆ ಬರಲಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಬಣ ಹಾಗೂ ವಕ್ಫ್ ಅಭಿಯಾನ ಕೈಗೊಂಡಿರುವ ಯತ್ನಾಳ್ ಬಣದಿಂದ ಮಾಹಿತಿ ಸಂಗ್ರಹಿಸಲಿದ್ದಾರೆ. ತರುಣ್ ಚುಗ್ ವರದಿ ಆಧರಿಸಿ ದೆಹಲಿ ನಾಯಕರು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಹೈಕಮಾಂಡ್ ಹೇಳಿದೆ.
ಇತ್ತೀಚೆಗೆ ವಿಜಯಪುರ ಸೇರಿದಂತೆ 5 ಜಿಲ್ಲೆಗಳಲ್ಲಿ ವಕ್ಫ್ ವಿರುದ್ಧ ಹೋರಾಟ ಹಮ್ಮಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ಹಿರಿಯ ನಾಯಕ ಡಿ.ವಿ ಸದಾನಂದಗೌಡ ಸೇರಿದಂತೆ ಹೈಕಮಾಂಡ್ ವಿರುದ್ಧ ಸರಣಿ ವಾಗ್ದಾಳಿ ನಡೆಸುತ್ತಿದ್ದಾರೆ. ಈ ಮಧ್ಯೆ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಎಂಟ್ರಿಯಾಗಿದ್ದು, ವಿಜಯೇಂದ್ರ ಪರ ಬ್ಯಾಟಿಂಗ್ ಮಾಡುತ್ತಾ, ಯತ್ನಾಳ್ರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅದರಂತೆ ಯತ್ನಾಳ್ ವಿಚಾರವಾಗಿ ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸುವ ವೇಳೆ ಕಾರ್ಯಕರ್ತರು ಪಕ್ಷದಿಂದ ಉಚ್ಚಾಟಿಸುವಂತೆ ಒತ್ತಾಯಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಏಜೆಂಟ್ ರೀತಿ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ಮತನಾಡಿದ್ದು ಬಿಜೆಪಿ ಸೋಲಿಗೆ ಕಾರಣಯಿತು. ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಮಾಜಿ ಶಾಸಕ ರೇಣುಕಾಚಾರ್ಯ (Renukacharya) ಒತ್ತಾಯಿಸಿದರು.
3 ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಇದು ಮುಂದಿನ ಚುನಾವಣೆಗೆ ಜನಾದೇಶವಲ್ಲ. ಹಣ ಬಲ, ಅಧಿಕಾರದ ಬಲದಿಂದ ಕಾಂಗ್ರೆಸ್ ಗೆದ್ದಿದೆ. ಲೋಕಸಭೆ ಚುನಾವಣೆಯಲ್ಲಿ 19 ಸ್ಥಾನ ಗೆದ್ವಿ. ಯಾಕೆ ಕಾಂಗ್ರೆಸ್ ಗೆಲ್ಲಲು ಆಗಲಿಲ್ಲ? ಇದು ಮಾನದಂಡವಲ್ಲ. ಕಾರ್ಯಕರ್ತರು, ಮುಖಂಡರಿಗೆ ಆತ್ಮವಿಶ್ವಾಸ ತುಂಬಬೇಕು. ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ ಮಾಡುತ್ತೇವೆ. ನೇರವಾಗಿ ಅನಗತ್ಯವಾಗಿ ಬಿಜೆಪಿಯಲ್ಲಿ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ. ಇದು ಅಂತ್ಯ ಆಗಬೇಕು. ಯಡಿಯೂರಪ್ಪ ಅವರು ಪ್ರವಾಸ ಮಾಡಿ ಪಕ್ಷ ಕಟ್ಟಿದ್ರು. ಯಡಿಯೂರಪ್ಪ, ಅನಂತ್ ಕುಮಾರ್, ಬಿಬಿ ಶಿವಪ್ಪ ಸೇರಿ ಅನೇಕರು ಪಕ್ಷ ಕಟ್ಟಿದ್ರು. ಪಕ್ಷಕ್ಕೆ ಮೊನ್ನೆ ಮೊನ್ನೆ ಬಂದವರು ಅನಗತ್ಯವಾಗಿ ಗೊಂದಲ ಮಾಡ್ತಿದ್ದಾರೆ. ಸ್ವಯಂ ಘೋಷಿತ ಹಿಂದೂ ನಾಯಕ ಅಂತ ಹೇಳಿಕೊಳ್ತಿದ್ದಾರೆ. ಅವರು ಗೋಮುಖ ವ್ಯಾಘ್ರ. ಸ್ವಾಮೀಜಿಗಳು, ಸದಾನಂದಗೌಡ ಎಲ್ಲರ ವಿರುದ್ಧ ಅವರು ಮಾತಾಡ್ತಾರೆ. ಹೀಗೆ ಮಾತಾಡಿದ್ರೆ ಅವರ ವಿರುದ್ಧ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಮಾಡ್ತೀವಿ. ನಾಳೆ ದಾವಣಗೆರೆಯ ಸಮಾವೇಶಕ್ಕೆ ದಿನಾಂಕ ಘೋಷಣೆ ಮಾಡ್ತೀವಿ ಎಂದು ತಿಳಿಸಿದರು. ಇದನ್ನೂ ಓದಿ: ಕೂಡಿ ಬಾಳಿದರೆ ಸ್ವರ್ಗ ಸುಖ – ಬಿಜೆಪಿ ಭಿನ್ನಮತಕ್ಕೆ ಛಲವಾದಿ ನಾರಾಯಣಸ್ವಾಮಿ ಅಸಮಾಧಾನ
ನಾವು ಹಾಲಿ ಶಾಸಕರನ್ನ ಕರೆದಿಲ್ಲ. ಮಾಜಿ ಶಾಸಕರನ್ನ ಮಾತ್ರ ಕರೆದಿದ್ದೇವೆ. ಸ್ವಯಂ ಘೋಷಣೆಯ ನಾಯಕ ಅವರು. ಹೈಕಮಾಂಡ್ ನಾಯಕರ ವಿರುದ್ಧ ಮಾತಾಡ್ತಾರೆ. ನಿಮ್ಮದು ಹರಕು ಬಾಯಿ. ನೀವೇನು ಮೊಹಮದ್ ಬಿನ್ ತೊಘಲಕಾ? 2023 ರಲ್ಲಿ ಬಿಜೆಪಿ ಸೋಲಿಗೆ ಯತ್ನಾಳ್ ಕಾರಣ. ಕಾಂಗ್ರೆಸ್ ಏಜೆಂಟ್ ತರಹ ಮಾತಾಡಿ ಬಿಜೆಪಿ ಸೋಲಿಗೆ ಕಾರಣ ಆಯ್ತು. ಹರಕು ಬಾಯಿ ಮಾತಾಡಿ ಪಕ್ಷಕ್ಕೆ ಸೋಲಾಯ್ತು ಎಂದು ಕಿಡಿಕಾರಿದರು.
ವಕ್ಫ್ ಹೋರಾಟಕ್ಕೆ ಶೋಭಾ ಕರಂದ್ಲಾಜೆ, ಜೋಷಿ ಬಂದಿದ್ದರು. ಹಾಗಂತ ಪರ್ಯಾಯ ನಾಯಕತ್ವ ಸೃಷ್ಟಿ ಮಾಡಿ ಅಂತಾ ಹೇಳಿದ್ದಾರಾ? ನಿಮಗೆ ಪ್ರವಾಸ ಮಾಡಲು ಪಕ್ಷದ ಚಿಹ್ನೆ ಕೊಡಲಾಗಿದೆಯಾ? ವಿನಾಕಾರಣ ಸಂಘರ್ಷ ಮಾಡ್ತಿದ್ದಾರೆ. ಕಾಂಗ್ರೆಸ್ನಲ್ಲಿ ದೊಡ್ಡ ಒಡಕು ಇದೆ. ಸಿದ್ದರಾಮಯ್ಯ, ಡಿಕೆಶಿ ನಡುವೆ ಎಷ್ಟೇ ಭಿನ್ನಾಭಿಪ್ರಾಯ ಇದ್ದರೂ ಹೊರಗೆ ತೋರಿಸುತ್ತಿಲ್ಲ. ನೀವು ಯಾಕೆ ಹೀಗೆ ಮಾತಾಡ್ತಿದ್ದೀರಾ? ನಿಮ್ಮ ನಡವಳಿಕೆ ಬದಲಾವಣೆ ಆಗಬೇಕು. ರಾಷ್ಟ್ರೀಯ ಅಧ್ಯಕ್ಷರ ಭೇಟಿ ಮಾಡ್ತೀವಿ. ದಾವಣಗೆರೆಯಲ್ಲಿ ಸಮಾವೇಶ ಮಾಡ್ತೀವಿ. ಯತ್ನಾಳ್ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಸರ್ಕಾರದಿಂದ ಬಿಎಸ್ವೈ ವಿರುದ್ಧ ರಾಜಕೀಯ ದ್ವೇಷ: ಅಶ್ವಥ್ ನಾರಾಯಣ್
ಸದಾನಂದಗೌಡರು ಹೇಳಿದ್ದಾರೆ. ಅದನ್ನ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಬೀದಿಯಲ್ಲಿ ತಮಟೆ ಹೊಡೆಯುತ್ತಿರೋರು ಯತ್ನಾಳ್ ಟೀಂ. ಸದಾನಂದಗೌಡರ ಬಗ್ಗೆಯೇ ಅವರು ಮಾತಾಡಿದ್ದಾರೆ. ಇದಕ್ಕಾಗಿ ನಾವು ಇವತ್ತು ಸೇರಿದ್ದೇವೆ. ಯತ್ನಾಳ್ ಹರಕು, ಹೊಲಸು ಬಾಯಿ. ಮೋದಿ ಅವರಿಗೇ ಸಲಹೆ ಕೊಡುವಷ್ಟು ದೊಡ್ಡವನಾ ನೀನು. ನಿನ್ನ ಕೊಡುಗೆ ಎನು? ಉಂಡು ಹೋದಾ, ಕೊಂಡು ಹೋದಾ ರೀತಿ ಯತ್ನಾಳ್. ಆತ ಕಾಂಗ್ರೆಸ್ ಏಜೆಂಟ್. ಯಾರು ಕೇಂದ್ರದ ನಾಯಕರು ನಿಮಗೆ ಸಪೋರ್ಟ್ ಮಾಡಿದ್ರು ಮೊದಲು ಹೇಳಿ. ನೀನೇನು ಹಿಟ್ಲರ್ ಹಾ? ಸದ್ದಾಂ ಹುಸೇನಾ? ಸದಾನಂದಗೌಡರದ್ದು ಏನು ಬಿಚ್ಚಿ ಇಡುತ್ತೀರಾ ಇಡು ನೋಡೋಣ. ನಾವು ನಿನ್ನದು ಬಿಚ್ಚಿಡುತ್ತೇವೆ. ಕಾಂಗ್ರೆಸ್ ಅವರು ಯತ್ನಾಳ್ಗೂ ಸುಪಾರಿ ಕೊಟ್ಟಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಿಜೆಪಿ ಪಕ್ಷ ಗೊಂದಲ ಮೂಡಿಸೋಕೆ ಸುಪಾರಿ ಕೊಟ್ಟಿದ್ದಾರೆ. ಹೀಗಾಗಿ ಯತ್ನಾಳ್ ಕಾಂಗ್ರೆಸ್ ಏಜೆಂಟ್ ರೀತಿ ವರ್ತನೆ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಯತ್ನಾಳ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
ಬೆಂಗಳೂರು: ರದ್ದಾಗಿರುವ ರೇಷನ್ ಕಾರ್ಡ್ಗಳನ್ನು ಸರ್ಕಾರ ವಾಪಸ್ ಕೊಡದೇ ಹೋದರೆ ಹಳ್ಳಿಹಳ್ಳಿಗಳಲ್ಲಿ ಹೋರಾಟದ ಮೂಲಕ ಬಿಜೆಪಿ ಜಾಗೃತಿ ಮೂಡಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಮಾಜಿ ಸಚಿವ ರೇಣುಕಾಚಾರ್ಯ (Renukacharya) ಎಚ್ಚರಿಕೆ ಕೊಟ್ಟಿದ್ದಾರೆ.
ರೇಷನ್ ಕಾರ್ಡ್ (Ration Card) ರದ್ದಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಚುನಾವಣೆ ಪೂರ್ವದಲ್ಲಿ ಯಾವುದೇ ಷರತ್ತು ವಿಧಿಸದೇ ಎಲ್ಲರಿಗೂ ಉಚಿತ ಎಂದು ಗ್ಯಾರಂಟಿ ಘೋಷಿಸಿದ್ದೀರಿ. ಈಗ ಬಿಪಿಎಲ್ ರದ್ದುಪಡಿಸಿದ್ದೀರಿ. ಸಿಎಂ, ಆಹಾರ ಸಚಿವರು ಈಗ ಉತ್ತರ ಕೊಡಿ ಎಂದು ಆಗ್ರಹಿಸಿದರು.ಇದನ್ನೂ ಓದಿ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿಕೆ
ಜನರು ಕೇಂದ್ರದ, ರಾಜ್ಯದ ಸವಲತ್ತು ಪಡೆಯಲು ಬಿಪಿಎಲ್ ಕಾರ್ಡ್ ಬೇಕೇಬೇಕು. ಒಬ್ಬ ಬಡವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಆಯುಷ್ಮಾನ್ ಕಾರ್ಡ್ ನೀಡಲಾಗಿದೆ. ಗೃಹಲಕ್ಷ್ಮೀ ಯೋಜನೆಯಲ್ಲಿ ಬಿಪಿಎಲ್ ಕಾರ್ಡ್ ಇಲ್ಲದಿದ್ದರೂ 2 ಸಾವಿರ ರೂ. ಕೊಡುತ್ತೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ. ಇವತ್ತಿಗೂ ಯುವನಿಧಿ ಸಿಕ್ಕಿಲ್ಲ. ಅನ್ನಭಾಗ್ಯ 10 ಕೆ.ಜಿ. ಎಂದು ಬೊಬ್ಬೆ ಹೊಡೆದರು. ಆದರೆ ಕೊಟ್ಟಿದ್ದು ಐದು ಕೆ.ಜಿ. ಮಾತ್ರ. ಚುನಾವಣೆ ಮುನ್ನ ಬೊಬ್ಬೆ ಹೊಡೆಯುವುದು ಅಷ್ಟೇ. ಮಹಾರಾಷ್ಟ್ರ ಚುನಾವಣೆ ಮುಗಿಯುತ್ತಿದ್ದಂತೆ ಬಿಪಿಎಲ್ ರದ್ದು ಮಾಡಲು ಹೊರಟಿದ್ದೀರಿ. ಒಂದೇ ಒಂದು ಬಿಪಿಎಲ್ ಕಾರ್ಡ್ ಕೂಡಾ ರದ್ದು ಮಾಡಬಾರದು. ಮಾಡಿದರೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದರು.
ವಕ್ಫ್ ವಿಚಾರವಾಗಿ ಮಾತನಾಡಿದ ಅವರು, ವಕ್ಫ್ ಅಲ್ಲೋಲಕಲ್ಲೋಲ ಲಾಗಿದೆ. ಬಿಜೆಪಿ (BJP) ಹೋರಾಟದ ನಂತರ ವಾಪಸ್ ಮಾಡುವುದಾಗಿ ಹೇಳಿದ್ದೀರಿ. ಆದರೆ ಕಲಂ 11ರಲ್ಲಿ ಬದಲಾವಣೆ ಆಯ್ತಾ? ಎಸ್ಸಿ, ಎಸ್ಟಿಗಳ 27 ಸಾವಿರ ಕೋಟಿ ರೂ. ಹಣ ವಾಪಸ್ ಪಡೆದಿದ್ದೀರಿ ಯಾಕೆ? ಸುಳ್ಳಿಗೆ, ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್. ಒಬ್ಬ ಬಡವ ಆಸ್ಪತ್ರೆಗೆ ಹೋದರೆ ಬಿಪಿಎಲ್ ಕಾರ್ಡ್ ಕೇಳುತ್ತಾರೆ. ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ. ಹಳ್ಳಿಹಳ್ಳಿಯಲ್ಲೂ ಜಾಗೃತಿ ಮೂಡಿಸುತ್ತೇವೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಪ್ರಧಾನಿ ಮೋದಿಗೆ ಗಯಾನಾದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ
ಬೆಂಗಳೂರು: ಬಿಜೆಪಿ ಮೇಲೆ ಆಪರೇಷನ್ ಕಮಲದ ಆರೋಪ ಮಾಡ್ತಿರೋ ಕಾಂಗ್ರೆಸ್ ಶಾಸಕರ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಮಾಜಿ ಸಚಿವ ರೇಣುಕಾಚಾರ್ಯ (Renukacharya), ಶಾಸಕ ರವಿ ಗಣಿಗಗೆ (Ravi Ganiga) ಸವಾಲ್ ಹಾಕಿದ್ದಾರೆ.
ಕಾಂಗ್ರೆಸ್ ಶಾಸಕರ ಆಪರೇಷನ್ಗೆ ಬಿಜೆಪಿ 100 ಕೋಟಿ ಅಫರ್ ಮಾಡ್ತಿದೆ ಎಂಬ ರವಿ ಗಣಿಗ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೊದಲು 50 ಕೋಟಿ ಅಂದ್ರು. ಆನಂತರ 100 ಕೋಟಿ ಅಂದ್ರು. ಎಲ್ಲೋ ಒಂದು ಕಡೆ ಕಾಂಗ್ರೆಸ್ ಶಾಸಕರು ಡಿಮ್ಯಾಂಡ್ ಕ್ರಿಯೇಟ್ ಮಾಡ್ಕೋತಿದಾರೆ. ಆರೋಪ ಮಾಡೋ ರವಿ ಗಣಿಗ ದಾಖಲೆ ಬಿಡುಗಡೆಗೆ ಆಗ್ರಹಿಸಿದ್ದೇವೆ. ನಿವೃತ್ತ ನ್ಯಾಯಮೂರ್ತಿ ಅವರಿಂದ ತನಿಖೆ ಮಾಡಿಸಬಹುದಿತ್ತು. ಆದ್ರೆ ಸುಳ್ಳು ಸುದ್ದಿ ಹಬ್ಬಿಸಿದ್ದೀರಿ. ರವಿ ಗಣಿಗ ಅವರೇ ಧರ್ಮಸ್ಥಳಕ್ಕೆ ಬರುತ್ತೀರಾ ಆಣೆ ಮಾಡಲು? ಈ ರಾಜ್ಯದ ಜನರ ಕ್ಷಮೆ ಕೇಳಿ ಅಂತಾ ಸಿಎಂ ಮತ್ತು ಕೈ ಸಚಿವರಿಗೆ ಆಗ್ರಹಿಸುತ್ತೇನೆ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅನ್ನಭಾಗ್ಯ ಎಂದು ಹೇಳಿ ಜನರ ಅನ್ನ ಕಸಿದುಕೊಳ್ಳುತ್ತಿದೆ ಕಾಂಗ್ರೆಸ್ ಸರ್ಕಾರ – ಬಸವರಾಜ ಬೊಮ್ಮಾಯಿ
ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದಿದ್ದಕ್ಕೆ ವಿದ್ಯಾರ್ಥಿ ವಿರುದ್ಧ ಕ್ರಮಕ್ಕೆ ಮಧು ಬಂಗಾರಪ್ಪ ಸೂಚನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಒಬ್ಬ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಮಗನಾಗಿ ಸಮಾಧಾನದಿಂದ ಉತ್ತರಿಸಬೇಕಿತ್ತು. ಬದಲಾಗಿ ವಿದ್ಯಾರ್ಥಿ ಮೇಲೆ ದೌರ್ಜನ್ಯದ ಮಾತಾಡಿದ್ದಾರೆ. ಇದೊಂದು ತೊಘಲಕ್ ದರ್ಬಾರ್. ಹುಷಾರ್.. ವಿದ್ಯಾರ್ಥಿಗಳ ಮೇಲೆ ಕೇಸ್ ಹಾಕಿದ್ರೆ ನಾವೇನು ಕಡ್ಲೇಕಾಯಿ ತಿನ್ನುತ್ತಾ ಇರ್ತೇವಾ. ಹುಷಾರ್ ಎಂದು ಮಧು ಬಂಗಾರಪ್ಪಗೆ ಎಚ್ಚರಿಕೆ ಕೊಟ್ಟರು.
ಬೆಂಗಳೂರು: ರಾಜ್ಯಾಧ್ಯಕ್ಷ ವಿಜಯೇಂದ್ರರನ್ನ ಇಳಿಸಲು ಸಾಧ್ಯವಿಲ್ಲ ಅಂತ ಮಾಜಿ ಸಚಿವ ರೇಣುಕಾಚಾರ್ಯ (MP Renukacharya) ಬಿಜೆಪಿ ರೆಬಲ್ ಯತ್ನಾಳ್ (Basanagouda Patil Yatnal) ಟೀಂಗೆ ಸವಾಲ್ ಹಾಕಿದ್ದಾರೆ. ನಿನ್ನೆ ವಿಜಯೇಂದ್ರ ವಿರುದ್ಧ ಗೌಪ್ಯ ಸಭೆ ಮಾಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಂ ವಿರುದ್ಧ ಶುಕ್ರವಾರ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ನಿವಾಸದಲ್ಲಿ ಸಭೆ ಮಾಡಿ ಯತ್ನಾಳ್ ಟೀಂಗೆ ಎಚ್ಚರಿಕೆ ಕೊಟ್ರು.
ಸಭೆ ಬಳಿಕ ಮಾತನಾಡಿದ ರೇಣುಕಾಚಾರ್ಯ, ರಾಜ್ಯದ ಜನ ಮಾತಾಡ್ತಿದ್ದಾರೆ. ಮುಂದೆ ಬಿಜೆಪಿ (BJP) ಅಧಿಕಾರಕ್ಕೆ ಬರುತ್ತೆ ಅಂತ. ಆದರೆ ನಮ್ಮ ಪಕ್ಷದಲ್ಲಿ ವಿನಾಕಾರಣ ಗೊಂದಲ ಸೃಷ್ಟಿ ಮಾಡ್ತಿದ್ದಾರೆ. ವಿಜಯೇಂದ್ರರನ್ನ ಅಧ್ಯಕ್ಷರಾಗಿ ಮಾಡಿದ್ದು ವರಷ್ಠರು. ಯಾಕೆ ವಿಜಯೇಂದ್ರರನ್ನ ವಿರೋಧ ಮಾಡ್ತಿರೋದು. ರಾಜ್ಯದಲ್ಲಿ ಯಡಿಯೂರಪ್ಪ (BS Yediyurappa) ಪಕ್ಷ ಕಟ್ಟಿಬೆಳೆಸಿದರು. ಅಂತಹ ನಾಯಕರ ಬಗ್ಗೆ ಹಗುರವಾಗಿ ಮಾತಾಡೋದು ಸರಿಯಲ್ಲ ಅಂತ ಯತ್ನಾಳ್ ಟೀಂಗೆ ಎಚ್ಚರಿಕೆ ಕೊಟ್ರು. ಇದನ್ನೂ ಓದಿ: ಮಹಾಲಕ್ಷ್ಮಿ ಕೊಲೆ ಬಳಿಕ ಬೆಂಗಳೂರಿನಿಂದ ಒಡಿಶಾಗೆ ಬೈಕ್ನಲ್ಲೇ ಪ್ರಯಾಣ – ಮೂರು ದಿನ 1,550 ಕಿಮೀ ಬೈಕ್ ಓಡಿಸಿದ್ದ ಹಂತಕ!
ವಿಜಯೇಂದ್ರ (BY Vijayendra) ಅನುಭವ, ಸಂಘಟನೆ, ಅವರ ಉಪ ಚುನಾವಣೆ ಗೆಲುವು ಎಲ್ಲಾ ನೋಡಿದ ಮೇಲೆ ಹೈಕಮಾಂಡ್ ರಾಜ್ಯಾಧ್ಯಕ್ಷರಾಗಿ ಮಾಡ್ತು. ಯಾಕೆ ಅವರ ವಿರುದ್ಧ ಮಾತಾಡ್ತೀರಾ. ವಿಜಯೇಂದ್ರರನ್ನ ಯಾವುದೇ ಕಾರಣಕ್ಕೂ ಕೆಳಗೆ ಇಳಿಸಲು ಸಾಧ್ಯವಿಲ್ಲ. ವಿಜಯೇಂದ್ರ ರೆಡಿಮೇಡ್ ಫುಡ್ ಅಲ್ಲ. ರಾಜ್ಯದ ಅಧ್ಯಕ್ಷ ಆದ ಮೇಲೆ ಕಾಲಿಗೆ ಚಕ್ರಕಟ್ಟಿಕೊಂಡು ಪಕ್ಷ ಸಂಘಟನೆ ಮಾಡ್ತಿದ್ದೇವೆ. ಅವರು ಅಧ್ಯಕ್ಷ ಆದ ಮೇಲೆ ಪಕ್ಷಕ್ಕೆ ಬೂಸ್ಟ್ ಸಿಕ್ಕಿದೆ. ಇಷ್ಟು ದಿನ ಮಾತಾಡಬಾರದು ಅಂತ ಸುಮ್ಮನೆ ಇದ್ವಿ. ಇನ್ನು ಮುಂದೆ ಸುಮ್ಮನೆ ಇರೊಲ್ಲ ಅಂತ ರೆಬಲ್ ಟೀಂಗೆ ಎಚ್ಚರಿಕೆ ಕೊಟ್ರು. ಇದನ್ನೂ ಓದಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರಿಸಿ: ಫ್ರಾನ್ಸ್ ಅಧ್ಯಕ್ಷ ಒತ್ತಾಯ
ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ:
ವಿಜಯೇಂದ್ರ ಏನು ತಪ್ಪು ಮಾಡಿದ್ದಾರೆ ಹೇಳಿ? ಮುಡಾ ಪಾದಯಾತ್ರೆ ಯಶಸ್ವಿಯಾಗಿದೆ. ಪಾದಯಾತ್ರೆ ವಿಫಲವಾಗಬೇಕು ಅಂತ ಕೆಲವರು ಇದ್ದರು. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಎಲ್ಲರು ಒಟ್ಟಾಗಿ ನಾವು ಹೋಗಬೇಕು. ಏನೇ ಇದ್ದರೂ ನಾಲ್ಕು ಗೋಡೆ ಮಧ್ಯೆ ಮಾತಾಡಿ. ನಾವು ಮೌನವಾಗಿ ಇರೋರು ನಮ್ಮ ದೌರ್ಬಲ್ಯವಲ್ಲ. ಹಿಂದೆಯೇ ನಾವೆಲ್ಲ ಸೇರುತ್ತೇವೆ ಅಂತ ಹೇಳಿದ್ವಿ. ಆದರೆ ಯಡಿಯೂರಪ್ಪ, ವಿಜಯೇಂದ್ರ ಬೇಡ ಅಂದಿದ್ದರು. ಈಗಲೂ ನಮಗೂ ಅವರು ಹೇಳಿಲ್ಲ. ಯತ್ನಾಳ್ ಇದನ್ನ ಬೇಕಾದ್ರೆ ಆರೋಪ ಮಾಡ್ತಾರೆ. ವಿಜಯೇಂದ್ರ ಅಧ್ಯಕ್ಷ ಆದ ಮೇಲೆ ಪಕ್ಷಕ್ಕೆ ಹಬ್ಬದ ವಾತಾವರಣ ಬಂದಿದೆ. ವಿಜಯೇಂದ್ರ ಯಾರ ಜೊತೆಗೂ ಮ್ಯಾಚ್ ಫಿಕ್ಸಿಂಗ್ ಇಲ್ಲ. ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು. ಮುಂದೆ 130-140 ಸ್ಥಾನದ ಗುರಿ ಇಟ್ಟುಕೊಂಡು ಕೆಲಸ ಮಾಡ್ತಿದ್ದಾರೆ. ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯವಿಲ್ಲ. ರಾಜ್ಯದ ಅಧ್ಯಕ್ಷರ ಜೊತೆ ನಾವು ಇರಬೇಕು ಅಂತ ತಿಳಿಸಿದರು.
ಮುಂದಿನ ಚುನಾವಣೆಯೂ ವಿಜಯೇಂದ್ರ ನಾಯಕತ್ವದಲ್ಲೇ:
ಒಂದು ವೇಳೆ ಯತ್ನಾಳ್ ಅಧ್ಯಕ್ಷ ಆಗಿದ್ದರೆ ನಾವು ಒಪ್ಪುತ್ತಿರಲಿಲ್ಲವಾ? ಮುಂದಿನ ಚುನಾವಣೆ ಕೂಡಾ ವಿಜಯೇಂದ್ರ ನಾಯಕತ್ವ ನಡೆಯಲಿದೆ. ಪಕ್ಷರ ಉಳಿವಿಗಾಗಿ ಮುಂದೆ ನಾವು ಸಭೆ ಮಾಡ್ತೀವಿ.ಪಕ್ಷದ ಪರವಾಗಿ ಮುಂದೆ ನಾವು ಸಭೆ ಸೇರುತ್ತೇವೆ.ಸಂಘ ಪರಿವಾರ, ಹೈಕಮಾಂಡ್ ಒಟ್ಟಾಗಿ ಹೋಗಿ ಅಂತ ಹೇಳಿದ್ದಾರೆ. ಆದರು ಇವರು ಹೀಗೆ ಮಾಡ್ತಿದ್ದಾರೆ. ನಾವು ಹೈಕಮಾಂಡ್ ಬಳಿ ಹೋಗ್ತೀವಿ ಅಂತ ತಿಳಿಸಿದರು. ಇದನ್ನೂ ಓದಿ: ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿತ- ಮಣ್ಣಿನಡಿ ಸಿಲುಕಿ ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ
ದಾವಣಗೆರೆ, ಚಿಕ್ಕೋಡಿ ಸೋಲಿಗೆ ಯಾರು ಕಾರಣ? ಮೈಸೂರಿನಲ್ಲಿ ಟಿಕೆಟ್ ಸಿಗದಕ್ಕೆ ವಿಜಯೇಂದ್ರ ಕಾರಣನಾ? ಯಡಿಯೂರಪ್ಪ ಅಧಿಕಾರ ಇದ್ದಾಗ ಇಂದ್ರ ಚಂದ್ರ ಅಂದರು. ಈಗ ಅವರ ವಿರುದ್ದ ಮಾತಾಡ್ತೀರಾ? ಶಾಸಕ ಬಿಪಿ ಹರೀಶ್ ರಾಜಕೀಯಗೆ ಜನ್ಮ ಕೊಟ್ಟಿದ್ದು ಯಡಿಯೂರಪ್ಪ. ಇದನ್ನ ಮರೆಯಬಾರದು ಅಂತ ಯತ್ನಾಳ್ ಟೀಂ ವಿರುದ್ದ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.
ಎಷ್ಟು ಜನ ಇದ್ದೇವೆ, ಸಂಖ್ಯೆ ಎಷ್ಟು ಆದಷ್ಟು ಬೇಗ, ದಿನಾಂಕ ನಿಗದಿ ಮಾಡ್ತೀವಿ. ಹಾಲಿ, ಮಾಜಿ ಶಾಸಕರು ಸೇರುತ್ತೇವೆ. ವಿಜಯೇಂದ್ರ ಪಕ್ಷ ಸಂಘಟನೆ ಮಾಡ್ತಿದ್ದಾರೆ. ಕೆಲವರು ಪಾದಯಾತ್ರೆ ಯಶಸ್ವಿಯಾಗಬಾರದು, ಪಾದಯಾತ್ರೆಗೆ ಅಡತಡೆ ಮಾಡಿದ್ರು. ಸದಸ್ಯ ಅಭಿಯಾನ ಕಡಿಮೆ ಅಗಬೇಕು ಅಂತ ಮಾಡ್ತಿದ್ದಾರೆ. ಯಾರು ಭ್ರಷ್ಟಾಚಾರಿಗಳು ಅಂತ ಆತ್ಮಾವಲೋಕನ ಮಾಡಿ. ಬೇರೆ ಪಕ್ಷದಿಂದ ಬಂದವರು ಯಡಿಯೂರಪ್ಪ,ವಿಜಯೇಂದ್ರ ಬಗ್ಗೆ ಮಾತಾಡೋದಾ? ಅಂತ ಯತ್ನಾಳ್ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಮಹಿಷ ದಸರಾದಿಂದ ಮೈಸೂರು ಹೆಸರೇ ಚೇಂಜ್ – ಮೈಸೂರು ಅಲ್ಲ, ‘ಮಹಿಷೂರು’ ಅಂತಾ ಬದಲಾವಣೆ
ವಿಜಯೇಂದ್ರ ಪರವಾಗಿ ನಾವು ನಿಲ್ಲುತ್ತೇವೆ:
ನಾವು ಸಭೆ ಸೇರುತ್ತೇವೆ. ವಿಜಯೇಂದ್ರ ಪರವಾಗಿ ನಾವು ನಿಲ್ಲುತ್ತೇವೆ. ಯಡಿಯೂರಪ್ಪ ಬಿಜೆಪಿ ಕಟ್ಟಿ ಬೆಳೆಸಿದ್ದು.ಈಗ ದಾರಿಯಲ್ಲಿ ಮಾತಾಡೋರು ಯಾರು ಪಕ್ಷ ಕಟ್ಟಿಲ್ಲ. ಯಡಿಯೂರಪ್ಪರನ್ನ ಇಳಿಸಿ ಏನ್ ಆಯ್ತು ಗೊತ್ತು ತಾನೆ, ವಿಜಯೇಂದ್ರರನ್ನ ಇಳಿಸಿ ನೋಡಿ ನಾನು ಸವಾಲ್ ಹಾಕ್ತೀನಿ ಅಂತ ರೇಣುಕಾಚಾರ್ಯ ಸವಾಲ್ ಹಾಕಿದ್ರು. ಇಷ್ಟು ದಿನ ಮೌನವಾಗಿ ಇದ್ದೇವು. ಇನ್ನು ಮುಂದೆ ಸುಮ್ಮನೆ ಇರೊಲ್ಲ. ಯಡಿಯೂರಪ್ಪ, ವಿಜಯೇಂದ್ರ ಅವರ ಬಗ್ಗೆ ಮಾತಾಡಿರೋದು ನೋವಾಗಿದೆ. ಅದರ ವಿರುದ್ದ ನಾವು ಮಾತಾಡ್ತೀವಿ. ನಾವು ಮಾಜಿ ಆಗಿರಬಹುದು. ಮುಂದೆ ಹಾಲಿ ಆಗ್ತೀವಿ. ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ನಾವು ರಾಷ್ಟ್ರೀಯ ನಾಯಕರನ್ನು ಭೇಟಿ ಆಗ್ತೀವಿ. ನಾನು ಯಡಿಯೂರಪ್ಪ, ವಿಜಯೇಂದ್ರ ಪರ ಅಲ್ಲ. ನಾವು ಪಕ್ಷದ ಪರ. ರಾಜ್ಯದಲ್ಲಿ ಎರಡು ಬಾರಿ ಅಧಿಕಾರಕ್ಕೆ ತಂದಿದ್ದು ಯಡಿಯೂರಪ್ಪ. ಇದನ್ನ ಯಾರು ಮರೆಯಬಾರದು. ವಿಜಯೇಂದ್ರ ಅಧ್ಯಕ್ಷ ಆದ ಮೇಲೆ ಪಕ್ಷಕ್ಕೆ ಬೂಸ್ಟ್ ಬಂದಿದೆ. ಯಾವುದೇ ಕಾರಣಕ್ಕೂ ವಿಜಯೇಂದ್ರ ಇಳಿಸಲು ಸಾಧ್ಯವಿಲ್ಲ ಅಂತ ತಿಳಿಸಿದರು.