Tag: Renukacharya

  • ಎಸ್‍ಪಿ ಕಣ್ಣೀರು-ಸ್ಥಳದಲ್ಲಿದ್ದ ರೇಣುಕಾಚಾರ್ಯ ಪ್ರತಿಕ್ರಿಯೆ

    ಎಸ್‍ಪಿ ಕಣ್ಣೀರು-ಸ್ಥಳದಲ್ಲಿದ್ದ ರೇಣುಕಾಚಾರ್ಯ ಪ್ರತಿಕ್ರಿಯೆ

    ತುಮಕೂರು: ಸಿದ್ದಗಂಗಾ ಮಠದ ಶ್ರೀಗಳ ಕ್ರಿಯಾ ಸಮಾಧಿ ಬಳಿ ಕರ್ತವ್ಯನಿರತ ಎಸ್‍ಪಿ ದಿವ್ಯಾ ಗೋಪಿನಾಥ್ ಕಣ್ಣೀರು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.

    ಕ್ರಿಯಾ ಸಮಾಧಿ ಬಳಿ ತೆರಳುವಾಗ ಭದ್ರತಾ ಸಿಬ್ಬಂದಿ ಸಚಿವರಾದ ಸಾ.ರಾ.ಮಹೇಶ್, ವೆಂಕಟರಾವ್ ನಾಡಗೌಡ, ಶ್ರೀನಿವಾಸ್ ಮತ್ತು ನನ್ನನ್ನು ಸೇರಿ ತಡೆದರು. ನಾವೆಲ್ಲರೂ ಭಕ್ತರಾಗಿ ಶ್ರೀಗಳ ಅಂತಿಮ ದರ್ಶನ ಪಡೆಯಲು ಹೋದಾಗ ಸಿಬ್ಬಂದಿ ನಮ್ಮನ್ನು ತಡೆದಾಗ ಬಿಡಿ ಎಂದು ಮನವಿ ಮಾಡಿಕೊಂಡರು ಬಿಡಲಿಲ್ಲ. ಈ ವೇಳೆ ಸಣ್ಣ ಮಾತಿನ ಚಕಮಕಿ ನಡೆಯಿತು ಅಷ್ಟೇ. ಈ ವಿಷಯವನ್ನು ದೊಡ್ಡದು ಮಾಡೋದು ಬೇಡ. ಇಲ್ಲಿಗೆ ಮುಗಿಸಿಬಿಡೋಣ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

    ಇದೇ ಪೊಲೀಸ್ ಅಧಿಕಾರಿಗಳು ಸಾರ್ವಜನಿಕವಾಗಿ ಹೇಗೆಲ್ಲ ಮಾತನಾಡ್ತಾರೆ ಎಂಬುವುದು ಗೊತ್ತಿದೆ. ತಮ್ಮ ಕೆಲಸ ಏನು ಎನ್ನುವುದನ್ನು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಸ್ಥಳದಲ್ಲಿ ನಾನಿದ್ದರೂ, ಸಂಪುಟ ಸಚಿವರ ಮೇಲೆ ವಿಪಕ್ಷ ಶಾಸಕನಾಗಿ ಯಾವುದೇ ಆರೋಪಗಳನ್ನು ಮಾಡಲ್ಲ. ಸಾ.ರಾ.ಮಹೇಶ್ ಮತ್ತು ಎಸ್‍ಪಿ ನಡುವೆ ನಡೆದ ಮಾತುಗಳು ನನಗೆ ಸರಿಯಾಗಿ ಕೇಳಿಸಿಲ್ಲ ಎಂದು ಅಡ್ಡ ಗೋಡೆಯ ಮೇಲೆ ದೀಪವಿಟ್ಟವಂತೆ ಶಾಸಕರು ತಿಳಿಸಿದರು.

    ಸಾ.ರಾ.ಮಹೇಶ್ ಗದ್ದುಗೆಯ ಒಳಗಡೆ ಹೋದ ಮೇಲೆ ಶ್ರೀನಿವಾಸ್ ಅಧಿಕಾರಿಯನ್ನು ಸಮಾಧಾನ ಮಾಡೋದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ಎಸ್‍ಪಿ ಕಣ್ಣೀರು ಹಾಕಿರುವ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ, ಅದೊಂದು ಸಣ್ಣ ಘಟನೆ, ಅಲ್ಲಿಯೇ ಅದನ್ನು ಬಗೆಹರಿಸಲಾಗಿದ್ದು, ಸಾ.ರಾ.ಮಹೇಶ್ ಅವರದ್ದು ಯಾವುದೇ ತಪ್ಪಿಲ್ಲ ಎಂದು ಸಚಿವರನ್ನು ಸಮರ್ಥಿಸಿಕೊಂಡಿದ್ದಾರೆ.

    https://www.youtube.com/watch?v=zvG1bIidF1M

    https://www.youtube.com/watch?v=kDXi0aOuEpg

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಾಸಕ ಎಂ.ಪಿ.ರೇಣುಕಾಚಾರ್ಯ ಬಂಧನ

    ಶಾಸಕ ಎಂ.ಪಿ.ರೇಣುಕಾಚಾರ್ಯ ಬಂಧನ

    ದಾವಣಗೆರೆ: ಬಂದ್ ವೇಳೆ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ರನ್ನು ಪೊಲೀಸರು ಬಂಧಿಸಿದ್ದಾರೆ.

    ಸಮರ್ಪಕ ಮರಳು ಪೂರೈಕೆ ಹಾಗೂ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳನ್ನು ಬರ ಪೀಡಿತವನ್ನಾಗಿ ಘೋಷಣೆ ಮಾಡುವಂತೆ ರೇಣುಕಾಚಾರ್ಯರವರು ನ್ಯಾಮತಿ ಹಾಗೂ ಹೊನ್ನಾಳಿ ಬಂದ್ ಗೆ ಕರೆ ನೀಡಿದ್ದರು. ಅಲ್ಲದೇ ಶನಿವಾರ ನ್ಯಾಮತಿ ತಾಲೂಕಿನಲ್ಲಿ ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿತ್ತು. ಹೀಗಾಗಿ ಸೋಮವಾರ ಹೊನ್ನಾಳಿ ಬಂದ್‍ಗೆ ಕರೆ ಕೊಟ್ಟಿದ್ದರು.

    ಬಂದ್ ವೇಳೆ ಶಾಸಕರು ರಸ್ತೆ ತಡೆ ನಡೆಸಿ, ಸಾರ್ವಜನಿಕರಿಗೆ ಕಿರುಕುಳ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರ ಜೊತೆಗೂ ವಾಗ್ವಾದ ನಡೆಸಿದ್ದರು. ರೇಣುಕಾಚಾರ್ಯರ ವರ್ತನೆಗೆ ಬೇಸತ್ತ ಪೋಲಿಸರು. ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಶಾಸಕರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲದೇ 10 ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv