Tag: Reporter Hanumanthu

  • ವರದಿಗಾರ ಹನುಮಂತು ಪತ್ನಿಗೆ ಕೆಎಂಎಫ್‍ನಲ್ಲಿ ಉದ್ಯೋಗ: ಅಶ್ವಥ್ ನಾರಾಯಣ್

    ವರದಿಗಾರ ಹನುಮಂತು ಪತ್ನಿಗೆ ಕೆಎಂಎಫ್‍ನಲ್ಲಿ ಉದ್ಯೋಗ: ಅಶ್ವಥ್ ನಾರಾಯಣ್

    ಬೆಂಗಳೂರು: ಅಕಾಲಿಕ ಮರಣವೊಂದಿದ ಪಬ್ಲಿಕ್ ಟಿವಿ ರಾಮನಗರದ ವರದಿಗಾರ ಹನುಮಂತು ಅವರ ಪತ್ನಿಗೆ ಕೆಎಂಎಫ್‍ನಲ್ಲಿ ಉದ್ಯೋಗ ನೀಡಲಾಗುವುದು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಅವರು ಹೇಳಿದ್ದಾರೆ.

    ರಾಮನಗರ ಜಿಲ್ಲಾ ಕಾರಾಗೃಹದ ಬಳಿ ವರದಿ ಮಾಡಿ ಮರಳುತ್ತಿದ್ದಾಗ ಪತ್ರಕರ್ತ ಹನುಮಂತು ಅವರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಮನೆಗೆ ಮೂಲ ಅಧಾರವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡ ಕುಟುಂಬ ನೋವಿನಲ್ಲಿತ್ತು. ಹೀಗಾಗಿ ಅವರಿಗೆ ನೆರವಾಗಲಿ ಎಂದು 5 ಲಕ್ಷ ನೀಡಿರುವ ಅಶ್ವಥ್ ನಾರಾಯಣ್ ಅವರು, ಹನುಮಂತು ಪತ್ನಿಗೆ ಕೆಎಂಎಫ್‍ನಲ್ಲಿ ಉದ್ಯೋಗ ಕೊಡಿಸುವುದಾಗಿ ತಿಳಿಸಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಅಶ್ವಥ್ ನಾರಾಯಣ್ ಅವರು, ಅಕಾಲಿಕ ನಿಧನ ಹೊಂದಿದ್ದ ರಾಮನಗರದ ಪಬ್ಲಿಕ್ ಟಿವಿಯ ವರದಿಗಾರ ಹನುಮಂತು ಅವರ ಮನೆಗೆ ತೆರಳಿ ಅವರ ಧರ್ಮಪತ್ನಿ ಶಶಿಕಲಾ ಅವರಿಗೆ ಡಾ|ಅಶ್ವಥ್ ನಾರಾಯಣ್ ಫೌಂಡೇಶನ್ ವತಿಯಿಂದ 5 ಲಕ್ಷ ರೂ. ಗಳನ್ನು ನೀಡಿದೆ. ಇವರಿಗೆ ಕೆಎಂಎಫ್‍ನಲ್ಲಿ ಉದ್ಯೋಗ ಕೊಡಿಸಲಾಗುವುದು. ಕುಟುಂಬದ ಈ ಸಂಕಷ್ಟದ ದಿನಗಳಲ್ಲಿ ನಮ್ಮ ಪ್ರಾರ್ಥನೆ ನಿಮ್ಮೊಂದಿಗಿದೆ ಎಂದು ಬೆರೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯ ಅರಂಭದ ದಿನದಿಂದಲೂ ಕೆಲಸ ಮಾಡುತ್ತಿದ್ದ ಹುನುಮಂತು ಅವರಿಗೆ, ಕಚೇರಿ ಕಡೆಯಿಂದ ಅವರ ಕುಟುಂಬಕ್ಕೆ 10 ಲಕ್ಷ ರೂ. ಹಣವನ್ನು ನೀಡಲಾಗಿದೆ. ಇದರ ಜೊತೆಗೆ ಪಬ್ಲಿಕ್ ಟಿವಿ ಸಿಬ್ಬಂದಿಯ ಒಂದು ದಿನದ ವೇತನವನ್ನು ಹನುಮಂತು ಕುಟುಂಬಕ್ಕೆ ನೀಡಲಾಗಿದೆ. ಇದರ ಜೊತೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಹನುಮಂತು ಅವರು ಮನೆಗೆ ಹೋಗಿ ಅವರ ಪತ್ನಿಗೆ 5 ಲಕ್ಷ ರೂ. ಗಳ ಚೆಕ್ ನೀಡಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ್ದರು.

    ಏಪ್ರಿಲ್ 21ರಂದು ರಾಮನಗರದ ಜಿಲ್ಲಾ ಕಾರಾಗೃಹದ ಬಳಿ ವರದಿ ಮಾಡಿ ಹಿಂದಿರುಗುತ್ತಿದ್ದ ವೇಳೆ ಹನುಮಂತು ಅವರಿಗೆ ಅಪಘಾತವಾಗಿತ್ತು. ಬೈಕಿನಲ್ಲಿ ತೆರೆಳುತ್ತಿದ್ದ ಹನುಮಂತು ಅವರಿಗೆ ಹಿಂದಿನಿಂದ ಬಂದ ಎಟಿಎಂಗೆ ಹಣ ತುಂಬುವ ವಾಹನ ಡಿಕ್ಕಿ ಹೊಡೆದಿತ್ತು. ಪರಿಣಾಮ ಹನುಮಂತು ಅವರು ಸಾವನ್ನಪ್ಪಿದ್ದರು.

  • ವರದಿಗಾರ ಹನುಮಂತು ಕುಟುಂಬಕ್ಕೆ ವೆಬಿನಾರ್ ಹಣ – ಸುರಾನಾ ಕಾಲೇಜು ತೀರ್ಮಾನ

    ವರದಿಗಾರ ಹನುಮಂತು ಕುಟುಂಬಕ್ಕೆ ವೆಬಿನಾರ್ ಹಣ – ಸುರಾನಾ ಕಾಲೇಜು ತೀರ್ಮಾನ

    ಬೆಂಗಳೂರು: ಸುರಾನಾ ಪೀಣ್ಯಾ ಕ್ಯಾಂಪಸ್ ಅಲ್ಲಿ ವೆಬಿನಾರ್ ಅನ್ನು ಆಯೋಜನೆ ಮಾಡಲಾಗಿದೆ. ಕಾಲೇಜಿನ ವಿದ್ಯಾರ್ಥಿಗಳಿಗೆ ಅನ್‍ಲೈನ್ ಕ್ಲಾಸ್ ಮಾಡಲು ತೀರ್ಮಾನಿಸಿ ಇದನ್ನು ಶುರು ಮಾಡಿದ್ದೇವೆ ಎಂದು ಕಾಲೇಜಿನ ಪ್ರಾಂಶುಪಾಲೆ ರಮ್ಯಾ ಅವರು ಹೇಳಿದ್ದಾರೆ.

    ಕೇವಲ ಉಪನ್ಯಾಸಕರಿಂದ ಕ್ಲಾಸ್ ಮಾಡುವುದಕ್ಕಿಂತ ಅತಿಥಿ ಉಪನ್ಯಾಸಕರಿಂದ ಆನ್‍ಲೈನ್ ಕ್ಲಾಸ್ ಮಾಡಿಸಲು ಶುರು ಮಾಡಿದ್ದೇವೆ. ವಿದ್ಯಾರ್ಥಿಗಳಿಗೆ ಕ್ಲಾಸಿನ ಬಗ್ಗೆ ಗಂಭೀರತೆ ಇರಲಿ ಎಂದು 100, 200 ರೂಪಾಯಿ ಎಂದು ಫೀಸ್ ಕೂಡ ಮಾಡಿದ್ದೇವೆ. ಈ ಹಣವನ್ನು ಈ ಕೊರೊನಾ ಲಾಕ್‍ಡೌನ್ ಇದರೂ ತಮ್ಮ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಿರುವ ಹೇಲ್ತ್ ವಾರಿಯರ್ಸ್, ಮೀಡಿಯಾ, ಸಿಎಂ ರಿಲೀಫ್ ಫಂಡಿಗೆ ಕೊಡಲು ಕಾಲೇಜಿನ ಆಡಳಿತ ಮಂಡಳಿ ತೀರ್ಮಾನಿಸಿದೆ.

    ಇಂದಿನ ವೆಬಿನಾರ್ ಕ್ಲಾಸ್ ಮಾಧ್ಯಮಕ್ಕೆ ಸಂಬಂಧಪಟ್ಟಿತ್ತು, ಹೀಗಾಗಿ ಕೊರೊನಾ ಲಾಕ್‍ಡೌನ್‍ನಲ್ಲಿ ವರದಿ ಮಾಡುತ್ತಿದ್ದ ಸಂದರ್ಭದಲ್ಲೇ ಪಬ್ಲಿಕ್ ಟಿವಿ ರಾಮನಗರ ವರದಿಗಾರ ಹನುಮಂತು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಅವರ ಕುಟುಂಬಕ್ಕೆ ಇಂದಿನ ಹಣವನ್ನು ನೇರವಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ರಮ್ಯಾ ಅವರು ತಿಳಿಸಿದ್ದಾರೆ.