Tag: Reporters

  • ಹಗಲು, ರಾತ್ರಿ ಶ್ರಮಪಟ್ಟು ಸುದ್ದಿ ಕೊಡುವ ಪತ್ರಕರ್ತರಿಗೂ ಕೊರೊನಾ ಕಾಟ – 53 ಮಂದಿಗೆ ಸೋಂಕು

    ಹಗಲು, ರಾತ್ರಿ ಶ್ರಮಪಟ್ಟು ಸುದ್ದಿ ಕೊಡುವ ಪತ್ರಕರ್ತರಿಗೂ ಕೊರೊನಾ ಕಾಟ – 53 ಮಂದಿಗೆ ಸೋಂಕು

    -ದೇಶದಲ್ಲಿ 18 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು

    ಮುಂಬೈ: ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಿದ್ದು, ದೇಶದಲ್ಲಿ ಈವರಗೆ 18,032 ಮಂದಿಗೆ ಸೋಂಕು ತಗುಲಿರುವುದು ವರದಿಯಾಗಿದ್ದು, ವರದಿಗಾರಿಕೆಗೆ ತೆರೆಳಿದ್ದ 53 ಮಂದಿ ಪತ್ರಕರ್ತರಿಗೂ ಕೊರೊನಾ ತಗುಲಿರುವುದು ದೃಢಪಟ್ಟಿದೆ.

    ಭಾರತದಲ್ಲಿ ಅತೀ ವೇಗವಾಗಿ ಕೊರೊನಾ ಹರಡುತ್ತಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ 223 ಮಂದಿ ಸಾವನ್ನಪ್ಪಿದ್ದು, ಕೊರೊನಾ ಸೋಂಕಿತರ ಸಂಖ್ಯೆ 4,483ಕ್ಕೆ ಏರಿಕೆಯಾಗಿದೆ. ಈ ಮಧ್ಯೆ ಮುಂಬೈವೊಂದರಲ್ಲೇ ವಿವಿಧ ಮಾಧ್ಯಮ ಸಂಸ್ಥೆಗಳ 53 ಪತ್ರಕರ್ತರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದರಲ್ಲೂ ಮುಂಬೈನ ಧಾರಾವಿ ಸ್ಲಾಮ್‍ಗೆ ತೆರೆಳಿ ವರದಿಗಾರಿಕೆ ಮಾಡಿದ್ದ ಪತ್ರಕರ್ತರಿಗೆ ಹೆಚ್ಚು ಸೋಂಕು ತಗುಲಿದೆ.

    ಹಗಲು ರಾತ್ರಿ ಶ್ರಮಪಟ್ಟು ಜನರಿಗೆ ಕೊರೊನಾ ಬಗ್ಗೆ ಮಾಹಿತಿ ಮುಟ್ಟಿಸುವ ಪತ್ರಕರ್ತರಿಗೆಂದೇ ಮಹಾರಾಷ್ಟ್ರ ಸರ್ಕಾರ ವಿಶೇಷ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಿತ್ತು. ಈವೆಲೆ 167ಕ್ಕೂ ಅಧಿಕ ಮಂದಿ ಪತ್ರಕರ್ತರನ್ನು ತಪಾಸಣೆಗೆ ಒಳಪಡಿಸಿ, ಅವರ ರಕ್ತ ಹಾಗೂ ಗಂಟಲು ದ್ರವದ ಮಾದರಿಯನ್ನು ಲ್ಯಾಬ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪೈಕಿ 53 ಮಂದಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ ಎಂದು ಮುಂಬೈ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಮಾಹಿತಿ ನೀಡಿದೆ.

    ಅಲ್ಲದೇ ಮತ್ತಷ್ಟು ಪತ್ರಕರ್ತರಿಗೂ ಸೋಂಕು ತಗುಲುವ ಸಾಧ್ಯತೆಗಳಿದೆ ಎಂದು ಪಾಲಿಕೆ ಎಚ್ಚರಿಸಿದೆ. ಸೋಂಕಿತರಲ್ಲಿ ಹೆಚ್ಚಿನವರು ಎಲೆಕ್ಟ್ರಾನಿಕ್ ಮಾಧ್ಯಮಗಳ ವರದಿಗಾರರು, ಕ್ಯಾಮೆರಾಮನ್‍ಗಳು ಹಾಗೂ ಫೋಟೋಗ್ರಾಫರ್ ಗಳು ಸೇರಿದ್ದಾರೆ ಎಂದು ಪಾಲಿಕೆ ತಿಳಿಸಿದೆ.

    ಈ ಬಗ್ಗೆ ಆರೋಗ್ಯ ಇಲಾಕೆಯ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಪ್ರತಿಕ್ರಿಯಿಸಿ, ಯಾವಾಗಲೂ ಕೆಲಸದಲ್ಲಿ ನಿರತರಾಗಿರುವ ಪತ್ರಕರ್ತರು ದಯವಿಟ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಫಿಲ್ಡ್ ಗೆ ಇಳಿಯಿರಿ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೆಲಸ ಮಾಡಿ. ನಿಮ್ಮ ಬಗ್ಗೆಯೂ ಕಾಲಜಿ ವಹಿಸಿ ಎಂದು ಹೇಳಿದ್ದಾರೆ.

  • ಮೆಡಿಸಿನ್ ಕಂಪನಿಯಿಂದ ತೊಂದರೆ – ವರದಿಗೆ ತೆರಳಿದ್ದ ಮಾಧ್ಯಮಗಳ ಮೇಲೆ ಹಲ್ಲೆ

    ಮೆಡಿಸಿನ್ ಕಂಪನಿಯಿಂದ ತೊಂದರೆ – ವರದಿಗೆ ತೆರಳಿದ್ದ ಮಾಧ್ಯಮಗಳ ಮೇಲೆ ಹಲ್ಲೆ

    ತುಮಕೂರು: ಕೈಗಾರಿಕಾ ಪ್ರದೇಶಗಳಿಂದ ಸ್ಥಳೀಯರಿಗೆ ಉಂಟಾಗುವ ತೊಂದರೆ ಕುರಿತು ವರದಿ ಮಾಡಲು ಹೋಗಿದ್ದ ಮಾಧ್ಯಮದವರ ಮೇಲೆ ಹಲ್ಲೆ ನಡೆದಿದೆ.

    ತುಮಕೂರು ಸತ್ಯಮಂಗಲದ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೇಳೂರು ಬಾಯರ್ ಮೆಡಿಸಿನ್ ಕಂಪನಿಯ ಸಿಬ್ಬಂದಿ ಮಾಧ್ಯಮದವರ ಮೇಲೆ ದರ್ಪ ತೋರಿದ್ದಾರೆ. ಪರಿಣಾಮ ಪಬ್ಲಿಕ್ ಟಿವಿ ವರದಿಗಾರ ಸೇರಿದಂತೆ ಇತರ ಮೂರು ಖಾಸಗಿ ವಾಹಿನಿಯ ವರದಿಗಾರರು ಹಾಗೂ ಕ್ಯಾಮೆರಾಮೆನ್‍ಗಳು ಗಾಯಗೊಂಡಿದ್ದಾರೆ.

    ಕ್ಯಾಮೆರಾಮೆನ್‍ಗಳಾದ ಚಂದನ್ ಮತ್ತು ದೇವರಾಜ್‍ಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ಕ್ಯಾಮರಾ ಮತ್ತು ಟ್ರೈಪಾಡ್ ಸೇರಿದಂತೆ ಇತರ ಪರಿಕರಗಳನ್ನು ಜಖಂಗೊಳಿಸಿದ್ದಾರೆ. ಬೇಳೂರು ಬಾಯರ್ ಮಾಲೀಕರ ಸೂಚನೆಗೆ ಮೇರೆಗೆ ವೆಂಕಟರಮಣ ಅವರ ಕುಮ್ಮಕ್ಕಿನಿಂದ ಪ್ರಚೋದನೆಗೊಂಡ ಸಿಬ್ಬಂದಿ ಏಕಾಏಕಿ ದಾಳಿ ನಡೆಸಿ, ರೂಮಿನಲ್ಲಿ ಕೂಡಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೇಳೂರು ಬಾಯರ್ ನ ಎಚ್.ಆರ್ ಮ್ಯಾನೇಜರ್ ವೆಂಕಟರಮಣ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಜೂನ್ 08ರಂದು ಬೇಳೂರು ಬಾಯರ್ ಮೆಡಿಸಿನ್ ಕಂಪನಿಯ ರಿಯಾಕ್ಟರ್ ಸ್ಫೋಟಗೊಂಡು ಸ್ಥಳೀಯರ ಮನೆಗಳಿಗೆ ಹಾನಿಯುಂಟಾಗಿ ಹಲವರಿಗೆ ಗಾಯವಾಗಿತ್ತು.

    ಈ ಹಿನ್ನೆಲೆಯಲ್ಲಿ ಇಲ್ಲಿಯ ಕೈಗಾರಿಕಾ ಪ್ರದೇಶದಿಂದ ಸ್ಥಳೀಯರಿಗೆ ಉಂಟಾಗುತಿದ್ದ ತೊಂದರೆ ಕುರಿತು ಮಾಧ್ಯಮದವರು ವರದಿ ಮಾಡಲು ತೆರಳಿದ್ದರು. ಯಾರು ಕೂಡ ಫ್ಯಾಕ್ಟರಿಗಳ ಒಳಪ್ರವೇಶ ಮಾಡದೇ ಸಾರ್ವಜನಿಕ ರಸ್ತೆಯಲ್ಲೇ ನಿಂತು ಕಾರ್ಖಾನೆಯ ಚಿತ್ರೀಕರಣ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ದಾಳಿ ನಡೆಸಿ ಹಲ್ಲೆ ನಡೆಸಿ ದರ್ಪ ಮೆರೆದಿದ್ದಾರೆ.

  • ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ದೌರ್ಜನ್ಯ

    ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ದೌರ್ಜನ್ಯ

    ಚಿಕ್ಕಬಳ್ಳಾಪುರ: ಪುರಸಭೆ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಎಸಿಪಿ ದರ್ಪ ತೋರಿದ್ದಾರೆ.

    ದೇವನಹಳ್ಳಿ ಎಸಿಪಿ ಮುರುಳಿಧರ್ ದರ್ಪ ತೋರಿದವರಾಗಿದ್ದು, ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮುರುಳಿಧರ್ ಅವರು ದೇವನಹಳ್ಳಿ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ದೌರ್ಜನ್ಯ ನಡೆಸಿದ್ದಾರೆ.

    ಮಾಧ್ಯಮ ಮಾಹಿತಿ ಕೇಂದ್ರದಲ್ಲಿ ಫಲಿತಾಂಶಕ್ಕಾಗಿ ಕಾದು ಕುಳಿತಿದ್ದ ವರದಿಗಾರರನ್ನು ತಳ್ಳಿ ಎಸಿಪಿ ದರ್ಪ ಮೆರೆದಿದ್ದಾರೆ. ವರದಿ ಮಾಡಲು ಬಂದಿದ್ದ ಮಾಧ್ಯಮ ವರದಿಗಾರರನ್ನು ಬಂಧಿಸಿ ಜೈಲುಗಟ್ಟಿಸುತ್ತೇನೆ ಎಂದು ಅವಾಜ್ ಹಾಕಿದ್ದಾರೆ.

    ಅಲ್ಲದೆ ಚುನಾವಣಾಧಿಕಾರಿಗಳೇ ಮಾಧ್ಯಮ ಮಾಹಿತಿ ಕೇಂದ್ರ ತೆರೆದಿದ್ದರೂ ಎಣಿಕೆ ಕೇಂದ್ರದಿಂದ ಹೊರಹೋಗಿ ಎಂದು ದೌರ್ಜನ್ಯ ನಡೆಸಿದ್ದಾರೆ. ಜನ ಪ್ರತಿನಿಧಿಗಳು ಮತ್ತು ಮುಖಂಡರನ್ನು ತಡೆಯಲಾಗದೆ ಎಸಿಪಿ ಮಾಧ್ಯಮಗಳ ಮೇಲೆ ದರ್ಪ ತೋರಿದ್ದಾರೆ.

  • ಹಾಸ್ಟೆಲ್‍ಗೆ ನುಗ್ಗಿ ಸಿಬ್ಬಂದಿ, ವಿದ್ಯಾರ್ಥಿನಿಯರಿಗೆ ನಕಲಿ ಪತ್ರಕರ್ತರಿಂದ ಬೆದರಿಕೆ

    ಹಾಸ್ಟೆಲ್‍ಗೆ ನುಗ್ಗಿ ಸಿಬ್ಬಂದಿ, ವಿದ್ಯಾರ್ಥಿನಿಯರಿಗೆ ನಕಲಿ ಪತ್ರಕರ್ತರಿಂದ ಬೆದರಿಕೆ

    – 6 ಮಂದಿಯನ್ನು ಇಬ್ಬರು ಪೊಲೀಸ್ ವಶಕ್ಕೆ

    ಬಾಗಲಕೋಟೆ: ಪಬ್ಲಿಕ್ ಟವಿಯ ಹೆಸರು ಹೇಳಿಕೊಂಡು ಲೇಡಿಸ್ ಹಾಸ್ಟೆಲ್‍ಗೆ ನುಗ್ಗಿ ಅಲ್ಲಿನ ಸಿಬ್ಬಂದಿಯನ್ನು ಬೆದರಿಸಿ, ಅವಾಂತರ ಸೃಷ್ಟಿಸಿದ್ದ 6 ಜನ ನಕಲಿ ಪತ್ರಕರ್ತರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

    ಈ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ. ಓರ್ವ ಮಹಿಳೆ ಹಾಗೂ 5 ಜನ ಪುರುಷರು ತಾವು ಪಬ್ಲಿಕ್ ಟಿವಿಯವರು ಅಂತಾ ಹೇಳಿ ನವನಗರದ 45ನೇ ಸೆಕ್ಟರ್ ನಲ್ಲಿರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವೃತ್ತಿಪರ ಮಹಿಳಾ ವಸತಿ ನಿಲಯಕ್ಕೆ ಶನಿವಾರ ಭೇಟಿ ನೀಡಿ, ಹಾಸ್ಟಲ್ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರಿಗೆ ಬೆದರಿಸಿ ಹಣ ವಸೂಲಿ ಮಾಡಲು ಮುಂದಾಗಿದ್ದರು.

    ಸದ್ಯ ಈ ವಿಷಯ ತಿಳಿಯುತ್ತಿದ್ದಂತೆಯೇ ಪಬ್ಲಿಕ್ ಟಿವಿಯ ಪ್ರತಿನಿಧಿಗಳು ವಸತಿ ನಿಲಯಕ್ಕೆ ಭೇಟಿ ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಘಟನೆಯಿಂದ ಗಾಬರಿಗೊಂಡಿದ್ದ ಹಾಸ್ಟೆಲ್ ಸಿಬ್ಬಂದಿಗೆ ಧೈರ್ಯ ಹೇಳಿ, ಹಾಸ್ಟೆಲ್ ಸಿಬ್ಬಂದಿಯಿಂದ ನವನಗರ ಠಾಣೆಯಲ್ಲಿ ದೂರು ಕೊಡಿಸಲಾಗಿದೆ.

    ಸೆಕ್ಷನ್ 353 ಅಡಿ ಪ್ರಕರಣ ದಾಖಲಿಸಿಕೊಂಡಿರುವ ನವನಗರದ ಮಹಿಳಾ ಠಾಣೆ ಪೊಲೀಸರು, 6 ಮಂದಿ ನಕಲಿ ಪತ್ರಕರ್ತರ ಪೈಕಿ ಕಿಂಗ್‍ಪಿನ್ ಆಗಿದ್ದ ಶಶಿಕಲಾ, ವಿಜಯ್‍ಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವೀರೇಶ್ ಲಮಾಣಿ, ಸಿದ್ದು ಕಳ್ಳಿಮನಿ, ರಾಮನಗೌಡ ನ್ಯಾಮಗೌಡರ್ ಸೇರಿದಂತೆ 5 ಜನ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

    ಈ ನಕಲಿ ಪತ್ರಕರ್ತರು 10 ಜನರ ಒಂದು ತಂಡವನ್ನು ಮಾಡಿಕೊಂಡು ಸುಮಾರು 15 ದಿನಗಳಿಂದ ಪಬ್ಲಿಕ್ ಟಿವಿ ಹೆಸರು ಹೇಳಿಕೊಂಡು ಬಾಗಲಕೋಟೆ ಜಿಲ್ಲೆಯಲ್ಲಿ ಓಡಾಡುತ್ತಿದ್ದರು. ಆದರೆ ಶನಿವಾರ ಮಹಿಳಾ ವಸತಿನಿಲಯಕ್ಕೆ ಪರವಾಣಿಗೆ ಇಲ್ಲದೇ ನುಗ್ಗಿ ಅಲ್ಲಿದ್ದ ವಿದ್ಯಾರ್ಥಿನಿಯರಿಗೆ ಬೆದರಿಸಿರುವುದು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv