Tag: Republic day Parade

  • 76ನೇ ಗಣರಾಜ್ಯೋತ್ಸವ – ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ, ಸೇನಾ ಶಕ್ತಿ ಪ್ರದರ್ಶನ

    76ನೇ ಗಣರಾಜ್ಯೋತ್ಸವ – ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ, ಸೇನಾ ಶಕ್ತಿ ಪ್ರದರ್ಶನ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ಥವ್ಯ ಪಥದಲ್ಲಿ ನಡೆದ ಪಥಸಂಚಲನ (Republic Day Parade) ಗಮನ ಸೆಳೆಯಿತು.

    ಭಾರತೀಯ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಿಮಿತ್ತ ಈ ಬಾರಿ ʻಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿʼ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಯಿತು. ಸೇನಾ ಪರೇಡ್ ನಲ್ಲಿ ಇಬ್ಬರು ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರು, ಕಾರ್ಗಿಲ್‌ ಯುದ್ಧ ವೀರರು ಹಾಗೂ ಓರ್ವ ಅಶೋಕ ಚಕ್ರ ಪುರಸ್ಕೃತರು ಪರೇಡ್ ನಲ್ಲಿ ಭಾಗಿಯಾಗಿರುವುದು ವಿಶೇಷವಾಗಿತ್ತು. ಇದೇ ವೇಳೆ ಎಲ್ಲಾ ರಾಜ್ಯಗಳ ಸ್ತಬ್ಧ ಚಿತ್ರಗಳು ಆಯಾ ರಾಜ್ಯಗಳ ಹೆಮ್ಮೆಯ ಪ್ರತೀಕವಾಗಿದ್ದವು.

    ಅದರಲ್ಲೂ ಈ ಬಾರಿ ಮಧ್ಯಪ್ರದೇಶದ ಚೀತಾ ಯೋಜನೆ, ಉತ್ತರ ಪ್ರದೇಶದ ಮಹಾ ಕುಂಭಮೇಳ, ಗ್ರಾಮೀಣಾಭಿವೃದ್ಧಿ ಸಚಿವಾಲಯದ ಲಕ್ಪತಿ ದೀದಿ ಯೋಜನೆ ಬಿಂಬಿಸುವ‌ ಟ್ಯಾಬ್ಲೊಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು.

    ಸೇನಾ ಶಕ್ತಿ ಪ್ರದರ್ಶನ:
    ಪರೇಡ್‌ನಲ್ಲಿ 22 ಯುದ್ಧ ವಿಮಾನಗಳು, 11 ಸಾರಿಗೆ ವಿಮಾನಗಳು ಹಾಗೂ 7 ಹೆಲಿಕಾಪ್ಟರ್‌ಗಳು ಸೇರಿದಂತೆ ಒಟ್ಟು 40 ವಿಮಾನಗಳು ಹತ್ತು ವಿಭಿನ್ನ ನೆಲೆಗಳಿಂದ ಹಾರಾಟ ನಡೆಸಿದವು. 130ಜೆ ಸೂಪರ್ ಹರ್ಕ’ಯುಲಸ್, ಸಿ-275, ಸಿ-17 ಗ್ರೋಬ್ ಮಾಸ್ಟರ್, ಪಿ-8ಐ, ಮಿಗ್-29 ಮತ್ತು ಸುಖೋಯ್-30, ಇತರ ವಿಮಾನಗಳು ದೇಶದ ಗರಿಮೆಗೆ ಸಾಕ್ಷಿಯಾದವು.

    ಸಾಂಸ್ಕೃತಿಕ ಕಲಾ ಪ್ರದರ್ಶನ:
    ಇದೇ ಮೊದಲಬಾರಿಗೆ ಕರ್ತವ್ಯ ಪಥದಲ್ಲಿ 5,000 ಜನಪದ ಮತ್ತು ಬುಡಕಟ್ಟು ಕಲಾವಿದರು ತಮ್ಮದೇ ಆದ ಮೂಲ ಮತ್ತು ಅಧಿಕೃತ ವೇಷಭೂಷಣಗಳು, ಆಭರಣಗಳು, ಶಿರಸ್ತ್ರಾಣಗಳು ಮತ್ತು ಈಟಿಗಳು, ಕತ್ತಿಗಳು ಮತ್ತು ಡ್ರಮ್‌ಗಳಂತಹ ಸಾಂಪ್ರದಾಯಿಕ ಪರಿಕರಗಳೊಂದಿಗೆ ನೃತ್ಯ ಪ್ರದರ್ಶನ ಮಾಡಿದರು. ವಿಭಿನ್ನ ಸಂಸ್ಕೃತಿಗಳನ್ನು ಕಲೆಯಲ್ಲಿ ಪ್ರದರ್ಶಿಸಿದ್ದು ಆಕರ್ಷಕವಾಗಿತ್ತು.

    ಬೈಕ್ ಸಿಗ್ನಲ್ ಕಾರ್ಪ್ಸ್ ತಂಡದಿಂದ ವಿಶಿಷ್ಟ ಸಾಹಸ:
    ಬೈಕ್ ಸಿಗ್ನಲ್ ಕಾರ್ಪ್ಸ್ ತಂಡ ಚಲಿಸುವ ಮೋಟಾರ್‌ಬೈಕ್‌ ತಂಡ ವಿಶಿಷ್ಠ ಸಾಧನೆಗೆ ಸಾಕ್ಷಿಯಾಯಿತು. ಬೈಕ್‌ನಲ್ಲಿ ಅಳವಡಿಸಲಾದ 12 ಅಡಿ ಏಣಿಯ ಮೇಲೆ ರಾಷ್ಟ್ರಪತಿಗಳಿಗೆ ಸೆಲ್ಯೂಟ್ ಸಲ್ಲಿಸಿದ ಮೊದಲ ಮಹಿಳಾ ಭಾರತೀಯ ಸೇನಾಧಿಕಾರಿ ಎಂಬ ವಿಶ್ವ ದಾಖಲೆಯನ್ನೂ ಬರೆಯಿತು. ಇದೇ ವೇಳೆ ʻತ್ರೀ ಪೀಕ್ ಡೆವಿಲ್ ರಚನೆʼ ಮೂಲಕ ಪ್ರೇಕ್ಷಕರ ಮನಗೆದ್ದಿತು.

  • ಗಣರಾಜ್ಯೋತ್ಸವಕ್ಕೆ ಕೆಂಪುಕೋಟೆ ಸಜ್ಜು – 10,000 ಗಣ್ಯರಿಗೆ ಆಹ್ವಾನ, ಮಿಲಿಟರಿ ಶಕ್ತಿ ಅನಾವರಣ

    ಗಣರಾಜ್ಯೋತ್ಸವಕ್ಕೆ ಕೆಂಪುಕೋಟೆ ಸಜ್ಜು – 10,000 ಗಣ್ಯರಿಗೆ ಆಹ್ವಾನ, ಮಿಲಿಟರಿ ಶಕ್ತಿ ಅನಾವರಣ

    – 139 ಸಾಧಕರಿಗೆ ಪದ್ಮ ಪ್ರಶಸ್ತಿ
    – 5,000 ಕಲಾವಿದರಿಂದ ಸಾಂಸ್ಕೃತಿಕ ಮೆರವಣಿಗೆ

    ನವದೆಹಲಿ: ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲೂ ಸಂಭ್ರಮ, ಸಡಗರದಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ. ಇಂದು ದೆಹಲಿಯ ಕರ್ಥವ್ಯ ಪಥದಲ್ಲಿ ಆಕರ್ಷಕ ಪಥ ಸಂಚಲನ ನಡೆಯಲಿದೆ.

    76ನೇ ಗಣರಾಜೋತ್ಸವ ಆಚರಣೆಗೆ ದೆಹಲಿಯ ಕೆಂಪುಕೋಟೆ ಸಜ್ಜಾಗಿದ್ದು, ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ದೇಶದ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣ ಆಗಲಿದೆ. ಕರ್ನಾಟಕದ ಲಕ್ಕುಂಡಿ ಶಿಲ್ಪಕಲೆಯ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಕಾಣಿಸಿಕೊಳ್ಳಲಿದೆ.

    ಈ ಬಾರಿ ಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸಮ್ಮುಖದಲ್ಲಿ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರು ಭಾಗಿಯಾಗಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಈ ಬಾರಿಯ ವಿಶೇಷ ಅತಿಥಿ ಇಂಡೋನೇಷ್ಯಾ ಅಧ್ಯಕ್ಷರು ಸೇರಿ ಇತರ ಗಣ್ಯರು ಸಾಕ್ಷಿಯಾಗಲಿದ್ದಾರೆ. 10,000 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಜೊತೆಗೆ ಇದೇ ಮೊದಲಬಾರಿಗೆ 5,000 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಲಾಗುತ್ತಿದೆ.

    ಹೇಗಿದೆ ಭದ್ರತೆ?
    ಪರೇಡ್‌ನಲ್ಲಿ 15 ರಾಜ್ಯಗಳು, ಕೇಂದ್ರಾಳಿತ ಪ್ರದೇಶಗಳು ಹಾಗೂ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಂದ ಸ್ತಬ್ಧಚಿತ್ರ ಪ್ರದರ್ಶನ, ಹತ್ತು ಸಾವಿರಕ್ಕೂ ಅಧಿಕ ವಿಶೇಷ ಅತಿಥಿಗಳು, ಒಂದು ಲಕ್ಷಕ್ಕೂ ಅಧಿಕ ಮಂದಿ ಸಾಕ್ಷಿಯಾಗಲಿದ್ದಾರೆ. ಹಾಗಾಗಿ ಕರ್ತವ್ಯ ಪಥದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, 15,000ಕ್ಕೂ ಅಧಿಕ ಪೊಲೀಸರು, 70 ಪ್ಯಾರಾ ಮಿಲಿಟರಿ ಕಂಪನಿಗಳ ನಿಯೋಜನೆ ಮಾಡಲಾಗಿದೆ.

    ಒಟ್ಟು 6 ಹಂತಗಳಲ್ಲಿ ಭದ್ರತೆಯನ್ನು ಮಾಡಿಕೊಳ್ಳಲಾಗಿದ್ದು, ಎಲ್ಲ ಕಡೆಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾ, 500 ಎಐ ಕ್ಯಾಮೆರಾಗಳ ಅಳವಡಿಸಲಾಗಿದೆ. 40 ಅಧಿಕ ಕಂಟ್ರೋಲ್ ರೂಂಗಳಿಂದ ಇಡೀ ಕಾರ್ಯಕ್ರಮದ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ.

    139 ಸಾಧಕರಿಗೆ ಪದ್ಮ ಪ್ರಶಸ್ತಿ:
    ಗಣರಾಜ್ಯೋತ್ಸವದ ಮುನ್ನಾದಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಯಿತು. ಇದರ ಅಡಿಯಲ್ಲಿ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗೆ ಪಾತ್ರರಾಗುವ ವ್ಯಕ್ತಿಗಳ ಹೆಸರನ್ನು ಘೋಷಿಸಲಾಯಿತು. ಈ ಬಾರಿ ರಾಷ್ಟ್ರಪತಿಗಳು 139 ಪದ್ಮ ಪ್ರಶಸ್ತಿಗಳನ್ನು ಅನುಮೋದಿಸಿದ್ದಾರೆ.

    ಪಟ್ಟಿಯಲ್ಲಿ ಏಳು ಪದ್ಮವಿಭೂಷಣ ಮತ್ತು 19 ಪದ್ಮಭೂಷಣ ಪ್ರಶಸ್ತಿಗಳು ಸೇರಿವೆ. ಇದಲ್ಲದೇ, 113 ಪದ್ಮಶ್ರೀ ಪ್ರಶಸ್ತಿಗಳನ್ನು ಸಹ ಘೋಷಿಸಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 23 ಮಹಿಳೆಯರು ಸೇರಿದ್ದಾರೆ. ಈ ಪಟ್ಟಿಯಲ್ಲಿ 10 ವಿದೇಶಿಯರು, NRIಗಳು, ಪಿಐಒಗಳು, ಒಸಿಐ ವರ್ಗದ ವ್ಯಕ್ತಿಗಳು ಸೇರಿದ್ದಾರೆ. ಅದೇ ಸಮಯದಲ್ಲಿ, 13 ಮರಣೋತ್ತರ ಪ್ರಶಸ್ತಿಗಳನ್ನು ಸಹ ಘೋಷಿಸಲಾಗಿದೆ. ಇದರಲ್ಲಿ ಭೋಜ್‌ಪುರಿ ಗಾಯಕಿ ಶಾರದಾ ಸಿನ್ಹಾ (ಮರಣೋತ್ತರ), ನ್ಯಾಯಮೂರ್ತಿ (ನಿವೃತ್ತ) ಜಗದೀಶ್ ಸಿಂಗ್ ಖೇಹರ್ ಮತ್ತು ಸುಜುಕಿ ಕಂಪನಿಯ ಒಸಾಮು ಸುಜುಕಿ (ಮರಣೋತ್ತರ), ಬಿಬೇಕ್ ಡೆಬ್ರಾಯ್, ಸುಶೀಲ್ ಮೋದಿ ಮತ್ತು ಮನೋಹರ್ ಜೋಶಿ (ಮರಣೋತ್ತರ) ಅವರ ಹೆಸರುಗಳು ಸೇರಿವೆ. ಪ್ರಮುಖವಾಗಿ ತಮಿಳು ನಟ ಅಜಿತ್‌ ಕುಮಾರ್‌ ಹಾಗೂ ತೆಲುಗು ನಟ ನಂದಮೂರಿ ಬಾಲಕೃಷ್ಣ ಅವರಿಗೆ ಪದ್ಬಭೂಷಣ, ಟೀಂ ಇಂಡಿಯಾದ ನಿರ್ಗಮಿತ ಸ್ಟಾರ್‌ ಆಟಗಾರ ಆರ್‌. ಅಶ್ವಿನ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ.

  • ಕರ್ತವ್ಯ ಪಥದಲ್ಲಿ ಮಿಂಚಿದ ʻರಾಕೆಟ್‌ ಗರ್ಲ್‌ʼ – ಚಂದ್ರಯಾನ-3 ಸಕ್ಸಸ್‌ನಲ್ಲಿ ಮಹಿಳಾ ವಿಜ್ಞಾನಿಗಳ ಕೊಡುಗೆ ನೆನಪಿಸಿದ ಟ್ಯಾಬ್ಲೊ

    ಕರ್ತವ್ಯ ಪಥದಲ್ಲಿ ಮಿಂಚಿದ ʻರಾಕೆಟ್‌ ಗರ್ಲ್‌ʼ – ಚಂದ್ರಯಾನ-3 ಸಕ್ಸಸ್‌ನಲ್ಲಿ ಮಹಿಳಾ ವಿಜ್ಞಾನಿಗಳ ಕೊಡುಗೆ ನೆನಪಿಸಿದ ಟ್ಯಾಬ್ಲೊ

    ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಚಂದ್ರಯಾನ-3 ಕಳೆದ ವರ್ಷ ಸಕ್ಸಸ್‌ ಕಂಡಿತು. ಇಸ್ರೋ ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ (Moon SouthPole) ನಿಗದಿ ಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 (Chandrayaan-3) ವಿಕ್ರಮ್‌ ಲ್ಯಾಂಡರ್‌ (Vikram Lander) ಯಶಸ್ವಿಯಾಗಿ ಕಾಲಿಟ್ಟಿತು.

    ಇಸ್ರೋದ ಈ ಸಾಧನೆಯನ್ನು ಇಡೀ ದೇಶವೇ ಕೊಂಡಾಡಿತು. ವಿಶ್ವದ ಘಟಾನುಘಟಿ ದೇಶಗಳು ಭಾರತದ ತಾಂತ್ರಿಕತೆಗೆ ಹಾಗೂ ವಿಜ್ಞಾನಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದವು. ಇದೀಗ 2024ರ ಗಣರಾಜ್ಯೋತ್ಸವದಲ್ಲಿಯೂ ಇಸ್ರೋ ಸಾಧನೆಯನ್ನು ನೆನಪಿಸುವ ಕೆಲಸ ಮಾಡಲಾಯಿತು. ವಿಶೇಷವೆಂದರೆ ಈ ಬಾರಿ ʻನಾರಿ ಶಕ್ತಿʼಯನ್ನೇ ಕೇಂದ್ರೀಕರಿಸಿದ್ದರಿಂದ, ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಮಹಿಳಾ ವಿಜ್ಞಾನಿಗಳ ಸಾಧನೆಯನ್ನು ನೆನಪಿಸಿರುವುದು ವಿಶೇಷವಾಗಿತ್ತು. ಇದನ್ನೂ ಓದಿ: ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ – ಮೇಳೈಸಿದ ಸಾಂಸ್ಕೃತಿಕ ವೈಭವ, ಸೇನಾ ಶಕ್ತಿಪ್ರದರ್ಶನವೇ ರೋಚಕ!

    ʻರಾಕೆಟ್‌ ಗರ್ಲ್‌ʼಎಂಬ ಪರಿಕಲ್ಪನೆಯೊಂದಿಗೆ ಇಸ್ರೋ ಸಂಸ್ಥೆ ನಿರ್ಮಿಸಲಾಗಿದ್ದ‌ ಸ್ತಬ್ಧಚಿತ್ರದಲ್ಲಿ ಚಂದ್ರಯಾನ-3ರ ಸಂಪೂರ್ಣ ಚಿತ್ರಣ ನಿರ್ಮಿಸಲಾಗಿತ್ತು. ಪ್ರಧಾನಿ ಅವರಿಂದ ನಾಮಾಂಕಿತವಾದ ʻಶಿವ ಶಕ್ತಿʼಕೇಂದ್ರಬಿಂದುವಿನ (ವಿಕ್ರಮ್‌ ಲ್ಯಾಂಡರ್‌ ಲ್ಯಾಂಡ್‌ ಆಗಿದ್ದ ಚಂದ್ರನ ಮೇಲ್ಮೈ ಸ್ಥಳ) ಮೇಲೆ ವಿಕ್ರಮ್‌ ಲ್ಯಾಂಡರ್‌, ಪ್ರಗ್ಯಾನ್‌ ರೋವರ್‌ ಕಾಲಿಟ್ಟ ಆ ಕ್ಷಣವನ್ನು ಮರುಸೃಷ್ಟಿಸಲಾಗಿತ್ತು. ಈ ಮೂಲಕ ಚಂದ್ರಯಾನ-3 ಸಕ್ಸಸ್‌ನಲ್ಲಿ ಮಹಿಳೆಯರ ಪಾತ್ರವೂ ಅಪಾರವಾಗಿದೆ ಎಂಬುದನ್ನು ಸಾಬೀತುಪಡಿಸಲಾಯಿತು.

    ಆದಿತ್ಯ ಎಲ್‌-1 ಸಾಧನೆ ಸ್ಮರಣೆ:
    110 ದಿನಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೋ ಆದಿತ್ಯ ಎಲ್1 ನೌಕೆಯು ಭೂಮಿಯಿಂದ 15 ಲಕ್ಷ ಕಿಮೀ ಕ್ರಮಿಸಿ ಇದೇ ತಿಂಗಳಲ್ಲಿ ಅಂತಿಮ ಕಕ್ಷೆ ತಲುಪಿತು. ಇದರೊಂದಿಗೆ ಸೂರ್ಯನ ಅಧ್ಯಯನಕ್ಕೆ ಮುಂದಾಗಿರುವ ಇಸ್ರೋದ ಮತ್ತೊಂದು ಸಾಧನೆಯನ್ನು ಸ್ತಬ್ಧಚಿತ್ರದಲ್ಲಿ ನೆನಪಿಸಲಾಯಿತು. ಇದನ್ನೂ ಓದಿ: Republic Day: ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ಗೌರವ

    ಮಿಂಚಿದ ಬಾಲಕರಾಮ, ವಂದೇ ಭಾರತ್‌:
    ವಿಶ್ವದ ಗಮನ ಸೆಳೆದಿದ್ದ ಅಯೋಧ್ಯೆ ಬಾಲಕರಾಮ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ನಡೆದ ಸ್ತಬ್ಧಚಿತ್ರಗಳ ಮೆರವಣಿಗೆ ವೇಳೆಯೂ ಮಿಂಚಿದ್ದಾನೆ. ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನದ ವೇಳೆ ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಕಲ್ಪನೆಯಲ್ಲಿ ಚಿತ್ರಿಸಿದ ಸ್ತಬ್ಧಚಿತ್ರ ಮೆರವಣಿಗೆಯು ಗಮನ ಸೆಳೆಯಿತು. ಹಾಗೆಯೇ, ತಮಿಳುನಾಡು, ಆಂಧ್ರಪ್ರದೇಶ ಸೇರಿ ದೇಶದ ಹಲವು ರಾಜ್ಯಗಳ ಸ್ತಬ್ಧಚಿತ್ರಗಳು ದೇಶದ ವೈವಿಧ್ಯತೆಯನ್ನು, ನಾರಿಶಕ್ತಿ, ದೇಶದ ರಕ್ಷಣಾ ಬಲ, ಕಲೆ, ಸಂಸ್ಕೃತಿಯನ್ನು ಸಾರಿದವು. ಇದನ್ನೂ ಓದಿ: 75ನೇ ಗಣರಾಜ್ಯೋತ್ಸವದ ಸಂಭ್ರಮ – ಕರ್ತವ್ಯ ಪಥದಲ್ಲಿ ಗಮನ ಸೆಳೆಯಲಿದೆ ʻನಾರಿ ಶಕ್ತಿʼ 

  • ಕರ್ತವ್ಯ ಪಥದ ಪರೇಡ್‍ನಲ್ಲಿ ಮಿಂಚಿದ ಬಾಲಕರಾಮ!

    ಕರ್ತವ್ಯ ಪಥದ ಪರೇಡ್‍ನಲ್ಲಿ ಮಿಂಚಿದ ಬಾಲಕರಾಮ!

    ನವದೆಹಲಿ: ಇತ್ತೀಚೆಗಷ್ಟೇ ವಿಶ್ವದ ಗಮನ ಸೆಳೆದಿದ್ದ ಬಾಲಕ ರಾಮ, ದೆಹಲಿಯ ಕರ್ತವ್ಯ ಪಥದ (Kartavya Path) ಗಣರಾಜ್ಯೋತ್ಸವ (Republic Day) ಪರೇಡ್‍ನಲ್ಲೂ ದೇಶದ ಗಮನ ಸೆಳೆದಿದ್ದಾರೆ.

    ಉತ್ತರ ಪ್ರದೇಶದದಿಂದ ಬಾಲಕ ರಾಮನ (Balak Ram) ಮೂರ್ತಿಯ ಸ್ತಬ್ಧಚಿತ್ರ ಕರ್ತವ್ಯ ಪಥದಲ್ಲಿ ಸೇರಿದ್ದ ಜನರ ಗಮನ ಸೆಳೆದಿದೆ. ಕೈಯಲ್ಲಿ ಬಿಲ್ಲು ಬಾಣ ಹಿಡಿದ ಬಾಲಕ ರಾಮ, ಸ್ತಬ್ಧಚಿತ್ರ ನೋಡಲು ಸೇರಿದ್ದ ಜನರನ್ನು ಮಂತ್ರಮುಗ್ಧಗೊಳಿಸಿದ್ದ. ಈ ಮೂಲಕ ಜನ ರಾಮನ ಮೇಲಿರಿಸಿದ ಭಕ್ತಿ ಕರ್ತವ್ಯ ಪಥದಲ್ಲೂ ಅನಾವರಣಗೊಂಡಿದೆ. ಇದನ್ನೂ ಓದಿ: 75th Republic Day: ಗಮನಸೆಳೆದ ಪ್ರಧಾನಿ ಮೋದಿ ಪೇಟ

    ಬಾಲಕ ರಾಮನೊಂದಿಗೆ ಉತ್ತರ ಪ್ರದೇಶದ ಮೆಟ್ರೋ ಕಾಮಗಾರಿ ಕುರಿತಾಗಿಯೂ ಅದೇ ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ. ಅಲ್ಲದೇ ಸೇನೆಯ ವಿಮಾನವನ್ನೂ ಸಹ ಇರಿಸಲಾಗಿದೆ. ಸ್ತಬ್ಧಚಿತ್ರದ ಸುತ್ತ ಕಲಾವಿದರ ಆಕರ್ಷಕ ನೃತ್ಯ ಪ್ರದರ್ಶನ ಸಹ ಮನಮೋಹಕವಾಗಿತ್ತು.

    ಇನ್ನೂ ಪರೇಡ್‍ನಲ್ಲಿ ಡಿಆರ್‍ಡಿಓ ಸ್ತಬ್ಧಚಿತ್ರ ಸೇರಿದಂತೆ ಚಂದ್ರಯಾನ-3, ಲಡಾಕ್‍ನಲ್ಲಿ ಭಾರತೀಯ ಸೇನೆ, ಮಹಾರಾಷ್ಟ್ರದ ಛತ್ರಪತಿ ಶಿವಾಜಿ ಬಾಲ್ಯದ ಸ್ತಬ್ಧಚಿತ್ರ, ರಾಜಸ್ಥಾನದ ಮಹಿಳೆಯ ಕಲಾತ್ಮಕ ನೃತ್ಯ, ಛತ್ತೀಸ್‍ಗಢದ ಬಸ್ತಾರ್ ಮುರಿಯಾ ದರ್ಬಾರ್, ಒಡಿಶಾದ ವಿಕಾಸ್ ಭಾರತದ ಅಡಿ ಮಹಿಳಾ ಸಬಲೀಕರಣದ ಸ್ತಬ್ಧಚಿತ್ರ, ಹರಿಯಾಣದ ಬಾಲಕಿಯರ ಶಿಕ್ಷಣಕ್ಕೆ ಬೆಂಬಲ ಸೂಚಿಸುವ ಸ್ತಬ್ಧಚಿತ್ರ, ಸೇರಿದಂತೆ ಆಕರ್ಷಕ ಪಥಸಂಚಲನದಲ್ಲಿ ಭಾರತೀಯ ಸೇನಾಪಡೆಯ ಮೂರು ದಳಗಳ ಶಕ್ತಿ ಸಾಮಥ್ರ್ಯ ಪ್ರದರ್ಶಿಸುವ ಕೆಲಸ ನಡೆಯಿತು.

    ಪಥ ಸಂಚಲನದಲ್ಲಿ ಪಿನಾಕಾ ರಾಕೆಟ್ ಲಾಂಚರ್, ಶಸ್ತ್ರಾಸ್ತ್ರ ಪತ್ತೆಹಚ್ಚುವ ರಾಡರ್ ಸಿಸ್ಟಮ್, ಸರ್ವತ್ರ ಮೊಬೈಲ್ ಬ್ರಿಡ್ಜಿಂಗ್ ಸಿಸ್ಟಮ್, ಡ್ರೋನ್ ಜಾಮರ್ ಸಿಸ್ಟಮ್, ಪ್ರಚಂಡ, ರುದ್ರ ಹೆಲಿಕಾಪ್ಟರ್, ಸ್ವದೇಶಿ ನಿರ್ಮಿತ ಸೇನಾ ಶಸ್ತ್ರಾಸ್ತ್ರಗಳ ಪ್ರದರ್ಶನ, ಸಿಆರ್‍ಪಿಎಫ್ ಬ್ಯಾಂಡ್ ಪಥಸಂಚಲನ, ಬಿಎಸ್‍ಎಫ್ ಒಂಟೆ ರೆಜಿಮೆಂಟ್ ಪರೇಡ್ ನಡೆಸಿಕೊಡಲಾಯಿತು. ಜೊತೆಗೆ ಭಾರತೀಯ ವಾಯುಪಡೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹಾಗೂ ಕೇಂದ್ರ ಸಶಸ್ತ್ರ ಪೆÇಲೀಸ್ ಪಡೆ ಸೇರಿದಂತೆ ವಿವಿಧ ಭದ್ರತಾ ಪಡೆಗಳು ಪರೇಡ್‍ನಲ್ಲಿ ಸೇನಾ ಸಾಮಥ್ರ್ಯ ಪ್ರದರ್ಶಿಸಿ ಗಮನ ಸೆಳೆದವು. ಇದನ್ನೂ ಓದಿ: ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ – ಮೇಳೈಸಿದ ಸಾಂಸ್ಕೃತಿಕ ವೈಭವ, ಸೇನಾ ಶಕ್ತಿಪ್ರದರ್ಶನವೇ ರೋಚಕ!

  • ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ – ಮೇಳೈಸಿದ ಸಾಂಸ್ಕೃತಿಕ ವೈಭವ, ಸೇನಾ ಶಕ್ತಿಪ್ರದರ್ಶನವೇ ರೋಚಕ!

    ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ – ಮೇಳೈಸಿದ ಸಾಂಸ್ಕೃತಿಕ ವೈಭವ, ಸೇನಾ ಶಕ್ತಿಪ್ರದರ್ಶನವೇ ರೋಚಕ!

    ನವದೆಹಲಿ: ಭಾರತದಲ್ಲಿ 75ನೇ ವರ್ಷದ ಗಣರಾಜ್ಯೋತ್ಸವವನ್ನು (Republic Day) ಆಚರಿಸಲಾಗುತ್ತಿದೆ. ಭಾರತದಲ್ಲಿ ಸಂವಿಧಾನ ಅಳವಡಿಸಿಕೊಂಡ ದಿನವನ್ನು ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತದೆ. 75ನೇ ವರ್ಷದ ಆಚರಣೆಯನ್ನು ಮಹಿಳಾ ಕೇಂದ್ರಿತವಾಗಿ ರೂಪಿಸಲಾಗಿದ್ದು, ಈ ಬಾರಿಯ ಆಚರಣೆಯೂ ಹಲವು ವಿಶೇಷತೆಗಳಿಂದ ಕೂಡಿದೆ.

    ನಾರಿ ಶಕ್ತಿಯೇ (Nari Shakti) ಮೇಲುಗೈ: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಪೊಲೀಸರು ಕರ್ತವ್ಯ ಪಥದಲ್ಲಿ ಹೆಜ್ಜೆ ಹಾಕಿ ಗಮನ ಸೆಳೆದರು. ʻಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣʼ ವಸ್ತು ವಿಷಯ ಅಡಿಯಲ್ಲಿ 194 ಮಹಿಳಾ ಪೊಲೀಸರು ಪರೇಡ್ ನಡೆಸಿಕೊಟ್ಟರು. ಐಪಿಎಸ್ ಅಧಿಕಾರಿ ಶ್ವೇತಾ ಕೆ. ಸುಗತನ್ ಅವರು ಈ ಪಡೆಯನ್ನು ಮುನ್ನಡೆಸಿದರು. ಇದರೊಂದಿಗೆ 148 NCC ಬಾಲಕಿಯರು, 100 ಮಹಿಳಾ ಕಲಾವಿದರು ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸಿ ದೇಶದ ಸಾಂಸ್ಕೃತಿಕತೆಯನ್ನು ಕಣ್ಣಿಗೆ ಕಟ್ಟಿಕೊಡುವಂತೆ ಮಾಡಿದರು. ಇನ್ನೂ ಆತ್ಮನಿರ್ಭರ್‌ ಪರಿಕಲ್ಪನೆಯಲ್ಲಿ ಮೂಡಿಬಂದ ಸ್ತಬ್ಧಚಿತ್ರ ʻನಾರಿ ಶಕ್ತಿʼಗೆ ಹೆಸರುವಾಸಿಯಾಗಿತ್ತು. ಭಾರತೀಯ ಸೇನೆ, ನೌಕಾಪಡೆ, ವಾಯುಪಡೆ ಹಾಗೂ ಅಂತರಿಕ್ಷದಲ್ಲಿ ಮಹಿಳೆಯರ ಸಾಧನೆಗಳನ್ನು ತೋರಿಸಲಾಯಿತು. ಜೊತೆಗೆ ʻವಂದೇ ಭಾರತ್‌ʼ ನಾರಿಶಕ್ತಿ ತಂಡದ 1,500 ಮಹಿಳೆಯರು ಏಕಕಾಲಕ್ಕೆ ನೃತ್ಯಪ್ರದರ್ಶಿಸಿದರು.

    ನಂತರ 262 ಫೀಲ್ಡ್ ರೆಜಿಮೆಂಟ್‌ನ ಲೆಫ್ಟಿನೆಂಟ್ ಪ್ರಿಯಾಂಕಾ ಸೆವ್ದಾ ನೇತೃತ್ವದಲ್ಲಿ 1890 ರಾಕೆಟ್ ರೆಜಿಮೆಂಟ್‌ನಿಂದ ಫಿರಂಗಿ ರೆಜಿಮೆಂಟ್‌ನ ಪಿನಾಕಾ ತುಕಡಿ ಹಾಗೂ ಜೊತೆಗೆ 42 ಶಸ್ತ್ರಸಜ್ಜಿತ ರೆಜಿಮೆಂಟ್‌ನ ಲೆಫ್ಟಿನೆಂಟ್ ಫಯಾಜ್ ಸಿಂಗ್ ಧಿಲ್ಲೋನ್ ನೇತೃತ್ವದ ಟ್ಯಾಂಕ್ T-90 ಭೀಷ್ಮಾದ ತುಕಡಿ ಆಕರ್ಷಕ ಪಥಸಂಚಲನ ನಡೆಸಿಕೊಟ್ಟಿತು. ಇದನ್ನೂ ಓದಿ: 2030ರ ವೇಳೆಗೆ 30,000 ಭಾರತೀಯ ವಿದ್ಯಾರ್ಥಿಗಳನ್ನು ಫ್ರಾನ್ಸ್ ಸ್ವಾಗತಿಸಲಿದೆ: ಮ್ಯಾಕ್ರನ್

    ವಿಶೇಷತೆಗಳೇನು?
    ಆಕರ್ಷಕ ಪಥಸಂಚಲನದಲ್ಲಿ ಭಾರತೀಯ ಸೇನಾಪಡೆಯ ಮೂರು ದಳಗಳ ಶಕ್ತಿ ಸಾಮರ್ಥ್ಯ ಪ್ರದರ್ಶಿಸುವ ಕೆಲಸ ನಡೆಯಿತು. ಪಥ ಸಂಚಲನದಲ್ಲಿ ಪಿನಾಕಾ ರಾಕೆಟ್‌ ಲಾಂಚರ್‌, ಸ್ವಾತಿ – ಶಸ್ತ್ರಾಸ್ತ್ರ ಪತ್ತೆಹಚ್ಚುವ ರಾಡರ್‌ ಸಿಸ್ಟಮ್‌, ಸರ್ವತ್ರ ಮೊಬೈಲ್‌ ಬ್ರಿಡ್ಜಿಂಗ್‌ ಸಿಸ್ಟಮ್‌, ಡ್ರೋನ್‌ ಜಾಮರ್‌ ಸಿಸ್ಟಮ್‌, ಪ್ರಚಂಡ, ರುದ್ರ‌ ಹೆಲಿಕಾಪ್ಟರ್‌, ಸ್ವದೇಶಿ ನಿರ್ಮಿತ ಸೇನಾ ಶಸ್ತ್ರಾಸ್ತ್ರಗಳ ಪ್ರದರ್ಶನ, ಸಿಆರ್‌ಪಿಎಫ್‌ ಬ್ಯಾಂಡ್‌ ಪಥಸಂಚಲನ, ಬಿಎಸ್‌ಎಫ್‌ ಒಂಟೆ ರೆಜಿಮೆಂಟ್‌ ಪರೇಡ್‌ ನಡೆಸಿಕೊಡಲಾಯಿತು. ಜೊತೆಗೆ ಭಾರತೀಯ ವಾಯುಪಡೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಸೇರಿದಂತೆ ವಿವಿಧ ಭದ್ರತಾ ಪಡೆಗಳು ಪರೇಡ್‌ನಲ್ಲಿ ಸೇನಾ ಸಾಮರ್ಥ್ಯ ಪ್ರದರ್ಶಿಸಿ ಗಮನ ಸೆಳೆದವು.

    ಸ್ತಬ್ಧ ಚಿತ್ರಗಳ ಪ್ರದರ್ಶನ:
    16 ರಾಜ್ಯಗಳು ಮತ್ತು ವಿವಿಧ ಸಚಿವಾಲಯಗಳು ಮತ್ತು ಸಂಸ್ಥೆಗಳು ತಯಾರಿಸಿರುವ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯಿತು. ಇದರೊಂದಿಗೆ ವಿವಿಧ ರಾಜ್ಯಗಳ ಜಾನಪದ ಕಲಾತಂಡಗಳು ಜಾನಪದ ನೃತ್ಯವನ್ನು ಪ್ರದರ್ಶನ ನಡೆಸಿಕೊಟ್ಟವು. ಇದನ್ನೂ ಓದಿ: Republic Day: ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ಗೌರವ

  • 75ನೇ ಗಣರಾಜ್ಯೋತ್ಸವದ ಸಂಭ್ರಮ – ಕರ್ತವ್ಯ ಪಥದಲ್ಲಿ ಗಮನ ಸೆಳೆಯಲಿದೆ ʻನಾರಿ ಶಕ್ತಿʼ

    75ನೇ ಗಣರಾಜ್ಯೋತ್ಸವದ ಸಂಭ್ರಮ – ಕರ್ತವ್ಯ ಪಥದಲ್ಲಿ ಗಮನ ಸೆಳೆಯಲಿದೆ ʻನಾರಿ ಶಕ್ತಿʼ

    ನವದೆಹಲಿ: 75ನೇ ಗಣರಾಜ್ಯೋತ್ಸವದ (Republic Day) ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ದೆಹಲಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಗೀತೆಯೋಂದಿಗೆ ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ 21 ಸುತ್ತು ಕುಶಾಲ ತೋಪು ಸಿಡಿಸಿ ಗೌರವ ಸೂಚಿಸಲಾಯಿತು.

    ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರನ್‌ ಅವರ ಸಮ್ಮುಖದಲ್ಲಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಇದಾದ ಬಳಿಕ ಬೆಳಗ್ಗೆ 10.30ರಿಂದ ವಿಜಯ್‌ ಚೌಕ್‌ನಿಂದ ಕರ್ತವ್ಯ ಪಥದವರೆಗೆ ಪರೇಡ್‌ ನಡೆಯಲಿದೆ. ದೇಶದ ಹಲವು ರಾಜ್ಯಗಳಿಂದ ಆಗಮಿಸಿದ ಸ್ತಬ್ಧಚಿತ್ರಗಳ ಮೆರವಣಿಗೆ ಕೂಡ ನಡೆಯಲಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಹ ಪರೇಡ್‌ ಮೈದಾನಕ್ಕೆ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಪರೇಡ್‌ ಆರಂಭವಾಗಲಿದೆ.

    ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಪರೇಡ್‌ ವೀಕ್ಷಣೆಗೆ 77 ಸಾವಿರ ಜನರಿಗೆ ಅವಕಾಶ ನೀಡಲಾಗಿದೆ. ಪರೇಡ್‌ ವೀಕ್ಷಿಸುವ 70 ಸಾವಿರಕ್ಕೂ ಹೆಚ್ಚು ಜನರಲ್ಲಿ 13, ಸಾವಿರ ಅತಿಥಿಗಳೂ ಇದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ವೈಮಾನಿಕ ಪ್ರದರ್ಶನಗಳನ್ನು ಹಮ್ಮಿಕೊಂಡಿದ್ದು, ಹವಾಮಾನ ಅಡೆತಡೆಯಾಗಬಾರದು ಎಂಬ ಕಾರಣಕ್ಕೆ 10:30ರ ವೇಳೆಗೆ ಪರೇಡ್‌ ಹಮ್ಮಿಕೊಳ್ಳಲಾಗಿದೆ. ಶಿಸ್ತು, ಸಮಯ, ಪರಿಪಾಲನೆಯೊಂದಿಗೆ ನಡೆಯುವ ಈ ಪರೇಡ್‌ ಸರಿಸುಮಾರು 90 ನಿಮಿಷಗಳ ವರೆಗೆ ನಡೆಯಲಿದೆ. ಇದನ್ನೂ ಓದಿ: Republic Day: ನುಡಿದಂತೆ ನಡೆದಿರುವ ಸರ್ಕಾರ 5 ಗ್ಯಾರಂಟಿ ಯಶಸ್ವಿಯಾಗಿ ಜಾರಿ ಮಾಡಿದೆ: ಗೆಹ್ಲೋಟ್

    ನಾರಿ ಶಕ್ತಿಯೇ ವಿಶೇಷ:
    ಈ ಬಾರಿ ವಿಶೇಷವಾಗಿ ಕಂಡುಬರುತ್ತಿರುವುದು ʻನಾರಿ ಶಕ್ತಿ ಪ್ರದರ್ಶನʼ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಪೊಲೀಸರು ಕರ್ತವ್ಯ ಪಥದಲ್ಲಿ ಹೆಜ್ಜೆ ಹಾಕಲು ಸಜ್ಜಾಗಿದ್ದಾರೆ. ʻಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣʼ ವಸ್ತು ವಿಷಯ ಅಡಿಯಲ್ಲಿ 194 ಮಹಿಳಾ ಪೊಲೀಸರು ಪರೇಡ್‌ ನಡೆಸಿಕೊಡಲಿದ್ದಾರೆ. ಐಪಿಎಸ್‌ ಅಧಿಕಾರಿ ಶ್ವೇತಾ ಕೆ. ಸುಗತನ್‌ ಅವರು ಈ ಪಡೆಯನ್ನು ಮುನ್ನಡೆಸಲಿದ್ದಾರೆ.

    ಜೊತೆಗೆ 100 ಮಹಿಳಾ ಕಲಾವಿದರು ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುವ ಮೆರೆವಣಿಗೆಯನ್ನು ನಡೆಸಿಕೊಡಲಿದ್ದಾರೆ. ಸಂಖ್, ನಾದಸ್ವರ, ನಗದ ಇತ್ಯಾದಿ ಸಂಗೀತದೊಂದಿಗೆ ಮೆರವಣಿಗೆ ಆರಂಭವಾಗಲಿದೆ. ಇದರೊಂದಿಗೆ ಭಾರತೀಯ ವಾಯುಪಡೆಯು, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಸೇರಿದಂತೆ ವಿವಿಧ ಭದ್ರತಾ ಪಡೆಗಳು ಪರೇಡ್‌ನಲ್ಲಿ ಗಮನ ಸೆಳೆಯಲಿವೆ. ಇದನ್ನೂ ಓದಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ – ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಮೋದಿ ಅಭಿನಂದನೆ

  • ದೇಶಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ – ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಮೋದಿ ಅಭಿನಂದನೆ

    ದೇಶಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ – ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಮೋದಿ ಅಭಿನಂದನೆ

    ನವದೆಹಲಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ (75th Republic Day) ಸಂಭ್ರಮ ಮನೆ ಮಾಡಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ (Flag hoisting) ನೆರವೇರಿದ್ದು, ಪರೇಡ್‌ಗಳಲ್ಲಿ ವಿಶೇಷ ಪ್ರದರ್ಶನಗಳು ಕಂಡುಬಂದಿವೆ.

    ಈ ಸಂದರ್ಭದಲ್ಲಿ 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ (Padma Awards 2024) ಆಯ್ಕೆಯಾಗಿರುವ 132 ಸಾಧಕರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನೂ ತಿಳಿಸಿದ್ದಾರೆ. ಕರ್ನಾಟಕದ 9 ಮಂದಿ ಸೇರಿ ಒಟ್ಟು 132 ಮಂದಿಗೆ ಪ್ರಶಸ್ತಿ ಲಭಿಸಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: 75th Republic Day: ದೆಹಲಿಯಲ್ಲಿ ನಡೆಯುವ ಪಥಸಂಚಲನಕ್ಕೆ ಬೆಳಗಾವಿ ಮೂಲದ ಯೋಧ ಆಯ್ಕೆ

    ಈ ವ್ಯಕ್ತಿಗಳು ಅದ್ಭುತ ಉದಾಹರಣೆಗಳನ್ನ ಸೃಷ್ಟಿಸಿದ್ದಾರೆ. ಮಾತ್ರವಲ್ಲದೇ ತಮ್ಮ ಸೇವೆಯಿಂದ ರಾಷ್ಟ್ರದ ಘನತೆಯನ್ನ ಹೆಚ್ಚಿದ್ದಾರೆ. ವಿವಿಧ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಬದಲಾವಣೆ ತರುತ್ತಿರುವ ಸಾಧಕರಿಗೆ ನಾನು ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಡ್ರೋಣ್ ಔಟ್: ಬಚಾವ್ ಮಾಡಿದ ಸುದೀಪ್

    ‘ಪದ್ಮ’ ಪ್ರಶಸ್ತಿ ಭಾಜನರಾದ 9 ಕನ್ನಡಿಗರು
    ಪದ್ಮಭೂಷಣ ಪ್ರಶಸ್ತಿಗೆ ಕನ್ನಡಿಗರಾದ ಸೀತಾರಾಮ್‌ ಜಿಂದಾಲ್‌ (ವ್ಯಾಪಾರ ಮತ್ತು ಕೈಗಾರಿಕೆ) ಭಾಜನರಾಗಿದ್ದಾರೆ. ಪದ್ಮಶ್ರೀ ಪ್ರಶಸ್ತಿಗೆ ರೋಹನ್‌ ಮಾಚಂಡ ಬೋಪಣ್ಣ (ಕ್ರೀಡೆ), ಪ್ರೇಮಾ ಧನರಾಜ್‌ (ವೈದ್ಯಕೀಯ), ಅನುಪಮಾ ಹೊಸಕೆರೆ (ಕಲೆ), ಶ್ರೀಧರ್‌ ಮಕಮ್‌ ಕೃಷ್ಣಮೂರ್ತಿ (ಸಾಹಿತ್ಯ ಮತ್ತು ಶಿಕ್ಷಣ), ಕೆ.ಎಸ್‌.ರಾಜಣ್ಣ (ಸಾಮಾಜಿಕ ಕಾರ್ಯ), ಚಂದ್ರಶೇಖರ್‌ ಚನ್ನಪಟ್ಟಣ ರಾಜಣ್ಣಾಚಾರ್‌ (ವೈದ್ಯಕೀಯ), ಸೋಮಣ್ಣ (ಸಾಮಾಜಿಕ ಕಾರ್ಯ), ಶಶಿ ಸೋನಿ (ವ್ಯಾಪಾರ ಮತ್ತು ಕೈಗಾರಿಕೆ).

    ಪದ್ಮ ವಿಭೂಷಣ ಪುರಸ್ಕೃತರು

    ಪದ್ಮಭೂಷಣ ಪುರಸ್ಕೃತರು

    ಪದ್ಮಶ್ರೀ ಪುರಸ್ಕೃತರು

  • Republic Day 2024: ಈ ಬಾರಿಯ ವಿಶೇಷತೆ ಏನು ಗೊತ್ತಾ?

    Republic Day 2024: ಈ ಬಾರಿಯ ವಿಶೇಷತೆ ಏನು ಗೊತ್ತಾ?

    ನವದೆಹಲಿ: ಭಾರತದಲ್ಲಿ ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ ಸ್ಥಾಪನೆಗೋಸ್ಕರ ಅವಿರತವಾಗಿ ಶ್ರಮಿಸಬೇಕೆಂದು ಅಂದಿನ ರಾಷ್ಟ್ರೀಯ ಕಾಂಗ್ರೆಸ್ 1929ರ ಜನವರಿ 26ರಂದು ಪ್ರತಿಜ್ಞೆ ಮಾಡಿತ್ತು. 1950ರ ಜನವರಿ 26ರಂದು ಈ ಕನಸು ನನಸಾಯಿತು. ಈ ದಿನ ಭಾರತವು ಗಣರಾಜ್ಯವಾಗಿ ತನ್ನ ಆಡಳಿತಾತ್ಮಕ ವ್ಯವಸ್ಥೆಯನ್ನು ರೂಪಿಸಿಕೊಂಡಿತು.

    ಸಂವಿಧಾನದ ರಚನೆಗೆ 2 ವರ್ಷ, 11 ತಿಂಗಳು, 17 ದಿನಗಳು ಬೇಕಾಯಿತು. ಭಾರತದ ಸಂವಿಧಾನ ಸಂಪೂರ್ಣ ಲಿಖಿತವಾಗಿದ್ದು, ಅದರಲ್ಲಿ 22 ಅಧ್ಯಾಯಗಳು ಮತ್ತು 395 ಅನುಚ್ಛೇದಗಳಿವೆ. ಭಾರತದ ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನ ಪರಮೋಚ್ಛವಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂತೆಯೇ ಜನವರಿ 26ರ ದಿನವನ್ನು ಗಣರಾಜ್ಯ ದಿನವನ್ನಾಗಿ ದೇಶಾದ್ಯಂತ ಆಚರಿಸಲಾಗುತ್ತದೆ. ಭಾರತವು ತನ್ನ 75ನೇ ಗಣರಾಜ್ಯೋತ್ಸವವನ್ನು ಇಂದು ಆಚರಿಸಿಕೊಳ್ಳುತ್ತಿದೆ. ಗಣರಾಜ್ಯೋತ್ಸವ ಒಟ್ಟು ಮೂರು ದಿನಗಳ ಕಾಲ ನಡೆಯಲಿದ್ದು, ಜನವರಿ 29ರಂದು ಬೀಟಿಂಗ್ ರಿಟ್ರೀಟ್ ಸಮಾರಂಭದೊಂದಿಗೆ ಕೊನೆಗೊಳ್ಳುತ್ತದೆ.

    ಜ.26 ಅನ್ನು ಗಣರಾಜ್ಯ ದಿನ ಎಂದು ಏಕೆ ಗುರುತಿಸಲಾಗಿದೆ?
    ಭಾರತವು ಆಗಸ್ಟ್ 15, 1947 ರಂದು ಸ್ವಾತಂತ್ರ‍್ಯ ಗಳಿಸಿತು. ಸಂವಿಧಾನವನ್ನು ನವೆಂಬರ್ 26, 1949 ರಂದು ಸಂವಿಧಾನ ಸಭೆಯು ಅಂಗೀಕರಿಸಿತು ಮತ್ತು ಜನವರಿ 26, 1950 ರಂದು ಜಾರಿಗೆ ಬಂದಿತು. ಭಾರತದ ಮೊದಲ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್ ಈ ದಿನದಂದು ರಾಷ್ಟ್ರಧ್ವಜವನ್ನು ಹಾರಿಸಿದರು. ಭಾರತದ ಗಣರಾಜ್ಯೋತ್ಸವ ಎಂದು ಗುರುತಿಸಲ್ಪಟ್ಟ ನಂತರ ಈ ದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಲಾಯಿತು.

    ಗಣರಾಜ್ಯೋತ್ಸವ ಪರೇಡ್‌ನಲ್ಲಿ ಏನಾಗುತ್ತದೆ?
    ಪ್ರತಿ ವರ್ಷ, ದಿನವನ್ನು ಗುರುತಿಸುವ ಆಚರಣೆಗಳು ಅದ್ಭುತವಾದ ಮಿಲಿಟರಿ ಮತ್ತು ಸಾಂಸ್ಕೃತಿಕ ಪ್ರದರ್ಶನವನ್ನು ಒಳಗೊಂಡಿರುತ್ತವೆ. ನಮ್ಮ ಶ್ರೀಮಂತ ಸಾಂಸ್ಕೃತಿಕ ಮತ್ತು ಮಿಲಿಟರಿ ಪರಂಪರೆಯನ್ನು ಪ್ರದರ್ಶಿಸುವ ಭವ್ಯ ಮೆರವಣಿಗೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಪ್ರದರ್ಶಿಸಲಾಗುತ್ತದೆ. ಇದರಲ್ಲಿ ಇತರ ದೇಶಗಳ ಗೌರವಾನ್ವಿತ ಗಣ್ಯರು, ಭಾರತೀಯ ರಾಜಕಾರಣಿಗಳು ಮತ್ತು ಸಾರ್ವಜನಿಕರು ಭಾಗವಹಿಸುತ್ತಾರೆ. ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವರ್ಣರಂಜಿತ ಕೋಷ್ಟಕಗಳ ಮೂಲಕ ಇತರ ವಿಷಯಗಳ ಜೊತೆಗೆ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರದರ್ಶಿಸುತ್ತವೆ. ಅಲ್ಲದೇ ವಿವಿಧ ರಾಜ್ಯಗಳ ಟ್ಯಾಬ್ಲೋ ಪ್ರದರ್ಶನ ನಡೆಯುತ್ತದೆ. ಕರ್ತವ್ಯ ಪಥದಲ್ಲಿ ಪಥ ಸಂಚಲನ ನಡೆಯಲಿದೆ.

    ಗಣರಾಜ್ಯೋತ್ಸವ 2024ರ ಮುಖ್ಯ ಅತಿಥಿ ಯಾರು?
    ಭಾರತದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಆಹ್ವಾನಿಸಲಾಗಿದ್ದು, ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಮ್ಯಾಕ್ರನ್ ಆಗಮಿಸಿದ್ದಾರೆ. ಕಳೆದ ವರ್ಷ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಮುಖ್ಯ ಅತಿಥಿಯಾಗಿದ್ದರು.

    ಈ ವರ್ಷದ ಮೆರವಣಿಗೆಯ ವಿಶೇಷತೆ ಏನು?
    ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಕ್ಷಣಾ ಪಡೆಗಳ ಮಹಿಳಾ ತುಕಡಿಗಳು ಪಥಸಂಚಲನ ನಡೆಸಿಕೊಡಲಿದ್ದಾರೆ.

    ಗಣರಾಜ್ಯೋತ್ಸವ 2024ರ ಥೀಮ್ ಏನು?
    2024ರ ಗಣರಾಜ್ಯೋತ್ಸವದ ಥೀಮ್ ‘ಭಾರತ – ಪ್ರಜಾಪ್ರಭುತ್ವದ ತಾಯಿ’ ಮತ್ತು “ವಿಕಸಿತ ಭಾರತ” (ಅಭಿವೃದ್ಧಿ ಹೊಂದಿದ ಭಾರತ) ಆಗಿದೆ.

    ಮೊದಲ ಗಣರಾಜ್ಯೋತ್ಸವದಲ್ಲಿ ಅತಿಥಿಯಾಗಿದ್ದವರು ಯಾರು?
    ಜನವರಿ 26, 1950 ರಂದು ನಡೆದ ಭಾರತದ ಮೊದಲ ಗಣರಾಜ್ಯೋತ್ಸವದ ಪರೇಡ್‌ನ ಮೊದಲ ಮುಖ್ಯ ಅತಿಥಿ ಇಂಡೋನೇಷಿಯಾದ ಅಧ್ಯಕ್ಷ ಸುಕರ್ನೊ ಆಗಿದ್ದರು.

    2024ರ ಗಣರಾಜ್ಯ ಪರೇಡ್ ಅನ್ನು ಆನ್‌ಲೈನ್ ಮತ್ತು ಟಿವಿಯಲ್ಲಿ ನೋಡುವುದು ಹೇಗೆ?
    ದೂರದರ್ಶನದ ಎಲ್ಲಾ ಚಾನೆಲ್‌ಗಳಲ್ಲಿ ಗಣರಾಜ್ಯೋತ್ಸವ ಪರೇಡ್ ಕಾಮೆಂಟರಿಯೊಂದಿಗೆ ಪ್ರಸಾರವಾಗಲಿದೆ. ನಿಮ್ಮ ಮೊಬೈಲ್, ಪಿಸಿ ಅಥವಾ ಸ್ಮಾರ್ಟ್ ಟಿವಿಯಲ್ಲಿ ಈವೆಂಟ್ ಅನ್ನು ಲೈವ್‌ಸ್ಟ್ರೀಮ್ ಮಾಡಲು ನೀವು ದೂರದರ್ಶನದ ಅಧಿಕೃತ ಯೂಟ್ಯೂಬ್ ಚಾನೆಲ್ ಅಥವಾ ಪ್ರೆಸ್ ಬ್ಯೂರೋ ಆಫ್ ಇಂಡಿಯಾವನ್ನು ಸಹ ಪರಿಶೀಲಿಸಬಹುದು.

  • 74th Republic Day: ದೆಹಲಿಯ ಕರ್ತವ್ಯ ಪಥ್‌ನಲ್ಲಿ‌ ಹಲವು ಪ್ರಥಮಗಳಿಗೆ ಸಾಕ್ಷಿಯಾದ ಪರೇಡ್‌

    74th Republic Day: ದೆಹಲಿಯ ಕರ್ತವ್ಯ ಪಥ್‌ನಲ್ಲಿ‌ ಹಲವು ಪ್ರಥಮಗಳಿಗೆ ಸಾಕ್ಷಿಯಾದ ಪರೇಡ್‌

    – ಗಮನ ಸೆಳೆದ ಸಿಆರ್‌ಪಿಎಫ್‌ ಮಹಿಳಾ ತುಕಡಿ, ಅಗ್ನಿವೀರರು
    – ಈಜಿಪ್ಟ್‌ ಸೇನಾ ತುಕಡಿ ಭಾಗಿ
    – ಆಕಾಶದಲ್ಲಿ ಚಮತ್ಕಾರ ಮಾಡಿ ಯುದ್ಧ ವಿಮಾನ, ಹೆಲಿಕಾಪ್ಟರ್‌ಗಳು

    ನವದೆಹಲಿ: ದೇಶಾದ್ಯಂತ 74ನೇ ಗಣರಾಜ್ಯೋತ್ಸವ (74th Republic Day) ಆಚರಣೆ ಮಾಡಲಾಗುತ್ತಿದೆ. ದೆಹಲಿಯ (New Delhi) ಬ್ರಿಟಿಷರ ಕಾಲದ ರಾಜಪಥ್‌ ಹೆಸರು ಕರ್ತವ್ಯ ಪಥ್ (Kartavya Path) ಎಂದು ಬದಲಾದ ನಂತರ ಈ ಬಾರಿ ಗಣರಾಜ್ಯೋತ್ಸವ ಹೊಸತನ ಹಾಗೂ ಹಲವು ಪ್ರಥಮಗಳಿಗೆ ಸಾಕ್ಷಿಯಾಯಿತು. ದೆಹಲಿಯ ಕರ್ತವ್ಯ ಪಥದಲ್ಲಿ ಹಲವು ವಿಶೇಷತೆಗಳೊಂದಿಗೆ ಅದ್ದೂರಿ ಪರೇಡ್ ನಡೆಯಿತು. ಕಣ್ಮಮನ ಸೆಳೆಯುವ ಟ್ಯಾಬ್ಲೊಗಳು, ಅತ್ಯಾಕರ್ಷಕ ಪಥ ಸಂಚಲನ ಎಲ್ಲರ ಗಮನ ಸೆಳೆಯಿತು.

     

    ರಾಷ್ಟ್ರಪತಿ ದ್ರೌಪದಿ ಮುರ್ಮು, ಈಜಿಪ್ಟ್‌ನಿಂದ ಬಂದಿದ್ದ ಅತಿಥಿ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಪ್ರಧಾನಿ, ನರೇಂದ್ರ ಮೋದಿ ಸಮ್ಮುಖದಲ್ಲಿ ರಾಷ್ಟ್ರ ಧ್ವಜ ಹಾರಿಸುವ ಮೂಲಕ ಪರೇಡ್‌ಗೆ ಚಾಲನೆ ನೀಡಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪರೇಡ್‌ ವೀಕ್ಷಿಸಿದರು.

    ಹಲವು ಪ್ರಥಮಗಳ ವಿಶೇಷತೆ
    ಪರೇಡ್ ಹಲವು ಹೊಸತನಕ ಸಾಕ್ಷಿಯಾಗಿತ್ತು‌. ಅಗ್ನಿವೀರರು ಪಥ್ ಸಂಕಲನದಲ್ಲಿ ಭಾಗಿಯಾಗದರೆ, ಇದೇ ಮೊದಲ ಬಾರಿಗೆ ಈಜಿಪ್ಟ್ ಸೇನಾ ತುಕಡಿ ಕೂಡಾ ಭಾಗಿಯಾಗಿತ್ತು. ಗುಲಾಮಿ ಮಾನಸಿಕತೆಯಿಂದ ಹೊರ ಬರುವ ಭಾಗವಾಗಿ 25 ಪೌಂಡರ್ ಗನ್‌ಗಳ ಬದಲು ಭಾರತದಲ್ಲಿ ನಿರ್ಮಿತವಾದ 105 ಎಂಎಂ ಇಂಡಿಯನ್ ಫಿಲ್ಡ್ ಗನ್‌ಗಳಿಂದ 21 ಗನ್ ಸೆಲ್ಯೂಟ್ ನೀಡಲಾಯಿತು. ಒಟ್ನಲ್ಲಿ ಈ ಬಾರಿಯ ಪರೇಡ್ ಭಾರತದ ನಾರಿ ಶಕ್ತಿ ಮತ್ತು ಆತ್ಮ ನಿರ್ಭರ್ ಭಾರತ್ ಶಕ್ತಿ ಸಂದೇಶ ಸಾರಿದರೆ, ವಿವಿಧತೆಯಲ್ಲಿ ಏಕತೆಗೊಂಡಿರುವ ಭಾರತದ ಸಂಸ್ಕೃತಿಯನ್ನು ಅನಾವರಣಗೊಳಿಸಿತು.

    ಪರೇಡ್ ಗೆ ಚಾಲನೆ ನೀಡುತ್ತಿದ್ದಂತೆ ಪರೇಡ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇತೃತ್ವದಲ್ಲಿ ಭವ್ಯ ಪರೇಡ್ ಆರಂಭವಾಯಿತು. 75 ಶಸ್ತ್ರಸಜ್ಜಿತ ರೆಜಿಮೆಂಟ್‌ನ ಮುಖ್ಯ ಯುದ್ಧ ಟ್ಯಾಂಕ್ ಅರ್ಜುನ್‌ನ ತುಕಡಿಯು ಪರೇಡ್ ಹಾದಿಯಲ್ಲಿ ಸಾಗಿ ಬಂತು. ಇದಾದ ಬಳಿಕ 61 ಅಶ್ವಸೈನ್ಯದ ಸಮವಸ್ತ್ರದಲ್ಲಿ ಮೊದಲ ತಂಡವನ್ನು ಕ್ಯಾಪ್ಟನ್ ರೈಜಾದಾ ಶೌರ್ಯ ಬಾಲಿ ಮುನ್ನಡೆಸಿದರು.

    ಬಳಿಕ 17 ಯಾಂತ್ರೀಕೃತ ಪದಾತಿ ದಳದ NAG ಕ್ಷಿಪಣಿ ವ್ಯವಸ್ಥೆಯನ್ನು ಮುನ್ನಡೆಸಿದ ಲೆಫ್ಟಿನೆಂಟ್ ಸಿದ್ಧಾರ್ಥ ತ್ಯಾಗಿ ಅವರಿಂದ ರಾಷ್ಟ್ರಪತಿ ಮುರ್ಮು ಗೌರವ ವಂದನೆ ಸ್ವೀಕರಿಸಿದರು. ಇದಾದ ಬಳಿಕ ಹಂತ ಹಂತವಾಗಿ ಬೇರೆ ಬೇರೆ ಸೇನಾ ತುಕಡಿಗಳು ಪಥ ಸಂಚಲನ ಮಾಡಿದವು. ಲಡಾಖ್ ಸ್ಕೌಟ್ಸ್ ರೆಜಿಮೆಂಟ್‌ನ ಕ್ಯಾಪ್ಟನ್ ನವೀನ್ ಧತ್ತೇರ್ವಾಲ್ ನೇತೃತ್ವದಲ್ಲಿ ಕ್ವಿಕ್ ರಿಯಾಕ್ಷನ್ ಫೈಟಿಂಗ್ ವೆಹಿಕಲ್‌ನ ತುಕಡಿ, ಲೆಫ್ಟಿನೆಂಟ್ ಪ್ರಜ್ವಲ್ ಕಲಾ ನೇತೃತ್ವದ 861 ಮಿಸೈಲ್ ರೆಜಿಮೆಂಟ್‌ನ ಬ್ರಹ್ಮೋಸ್‌ನ ತುಕಡಿ, 27 ಏರ್ ಡಿಫೆನ್ಸ್ ಮಿಸೈಲ್ ರೆಜಿಮೆಂಟ್‌ನ ಆಕಾಶ್ ವೆಪನ್ ಸಿಸ್ಟಮ್, ಕ್ಯಾಪ್ಟನ್ ಸುನಿಲ್ ದಶರಥೆ ನೇತೃತ್ವದ ‘ಅಮೃತಸರ ಏರ್‌ಫೀಲ್ಡ್’ ಮತ್ತು 512 ಲೈಟ್ ಎಡಿ ಮಿಸೈಲ್ ರೆಜಿಮೆಂಟ್, ಭಾರತೀಯ ನೌಕಾಪಡೆಯ 80 ಸಂಗೀತಗಾರರನ್ನು ಒಳಗೊಂಡಿರುವ ಭಾರತೀಯ ನೌಕಾಪಡೆಯ ಬ್ರಾಸ್ ಬ್ಯಾಂಡ್ ಕರ್ತವ್ಯ ಪಥ್ ನಲ್ಲಿ ಪರೇಡ್‌ ನಡೆಸಿದವು.

    ಕಣ್ಮಮನ ಸೆಳೆದ ಟ್ಯಾಬ್ಲೊಗಳು
    ಈ ಬಾರಿಯ ಪರೇಡ್‌ನಲ್ಲಿ 17 ರಾಜ್ಯದ ಹಾಗೂ ಕೇಂದ್ರ ಸರ್ಕಾರದ ವಿವಿಧ ಇಲಾಖೆ ಮತ್ತು ಸಚಿವಾಲಯದ ಆರು ಟ್ಯಾಬ್ಲೊಗಳು ಸೇರಿ ಒಟ್ಟು 23 ಟ್ಯಾಬ್ಲೊಗಳು ಭಾಗಿಯಾಗಿದ್ದವು. ಜಾರ್ಖಂಡ್‌ನ ಟ್ಯಾಬ್ಲೊ ದಿಯೋಘರ್‌ನಲ್ಲಿರುವ ಪ್ರಸಿದ್ಧ ಬೈದ್ಯನಾಥ ದೇವಾಲಯ, ಗುಜರಾತ್ ʼಸ್ವಚ್ಛ-ಹಸಿರು ಶಕ್ತಿ ಸಮರ್ಥ’ ಎಂಬ ಸಂದೇಶ ಮೇಲೆ ನವೀಕರಿಸಬಹುದಾದ ಇಂಧನದ ಬಗ್ಗೆ, ಕೇರಳವು ‘ನಾರಿ ಶಕ್ತಿ’ ಮತ್ತು ಮಹಿಳಾ ಸಬಲೀಕರಣದ ಜಾನಪದ ಸಂಪ್ರದಾಯಗಳ ಟ್ಯಾಬ್ಲೊವನ್ನು ಪ್ರದರ್ಶಿಸಿದವು.

    ಪಶ್ಚಿಮ ಬಂಗಾಳದ ದುರ್ಗಾ ಪೂಜಾ, ಮಹಾರಾಷ್ಟ್ರದ ಶಕ್ತಿ ಪೀಠಗಳ ಮತ್ತು ತಮಿಳುನಾಡಿನ ಟ್ಯಾಬ್ಲೋ ಜನ ಮೆಚ್ಚುಗೆ ಪಾತ್ರವಾದರೆ, ಅಯೋಧ್ಯೆಯಲ್ಲಿ ಆಚರಿಸಲಾದ ಮೂರು ದಿನಗಳ ದೀಪೋತ್ಸವವನ್ನು ಉತ್ತರ ಪ್ರದೇಶ ಸರ್ಕಾರ ಈ ಬಾರಿ ಪ್ರದರ್ಶಿಸಿತು‌.

    ಕರ್ತವ್ಯ ಪಥ್‌ನಲ್ಲಿ ಕರ್ನಾಟಕದ ನಾರಿಶಕ್ತಿ
    ಟ್ಯಾಬ್ಲೊಗಳ ಸರಣಿಯಲ್ಲಿ ಕರ್ನಾಟಕವೂ ಈ ಬಾರಿ ತನ್ನ ಟ್ಯಾಬ್ಲೊವನ್ನು ಪ್ರದರ್ಶಿಸಿತು. ಈ ಬಾರಿ ಕರ್ನಾಟಕ ನಾರಿ ಶಕ್ತಿ ಪರಿಕಲ್ಪನೆಯಲ್ಲಿ ಟ್ಯಾಬ್ಲೊ ಪ್ರದರ್ಶಿಸಿದ್ದು, ಟ್ಯಾಬ್ಲೊದಲ್ಲಿ 2,000 ಅಧಿಕ ಹೆರಿಗೆ ಮಾಡಿಸಿದ್ದ ಸೂಲಗಿತ್ತಿ ನರಸಮ್ಮ, 30,000ಕ್ಕೂ ಅಧಿಕ ಸಸಿಗಳನ್ನು ನೆಟ್ಟ ಹಾಲಕ್ಕಿ ತುಳಸಿ ಗೌಡ ಮತ್ತು 8,000 ಮರಗಳನ್ನು ಪೋಷಿಸಿದ ಸಾಲುಮರದ ತಿಮ್ಮಕ್ಕ ಅವರ ಸಾಧನೆಯನ್ನು ಒಳಗೊಂಡಿತ್ತು. ರಾಜ್ಯದ ಟ್ಯಾಬ್ಲೊ ಜೊತೆಗೆ ಉತ್ತರ ಕನ್ನಡದ ಹಾಲಕ್ಕಿ ಸುಗ್ಗಿ ಕುಣಿತ ಕಲಾವಿದರು ಹೆಜ್ಜೆ ಹಾಕಿದರು.

    ಟ್ಯಾಬ್ಲೊಗಳ ಪ್ರದರ್ಶನದ ಬಳಿಕ ಆಕಾಶದಲ್ಲಿ ಯುದ್ದ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳು ಭಾರತದ ಶಕ್ತಿಯನ್ನು ವಿಶ್ವಕ್ಕೆ ತೋರಿದವು. ರಫೇಲ್ ಕಸರತ್ತು ಎಲ್ಲರ ಆಕರ್ಷಣೆಯ ಕೇಂದ್ರವಾಗಿತ್ತು. ಮೇಡ್ ಇನ್ ಇಂಡಿಯಾದ ಲಘು ಯುದ್ದ ವಿಮಾನ ಮತ್ತು ಹೆಲಿಕಾಪ್ಟರ್‌ಗಳು ಪ್ರದರ್ಶನ ನೀಡಿದವು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜಪಥ್‍ನಲ್ಲಿ ಗಣರಾಜ್ಯೋತ್ಸವ ಪರೇಡ್‍ಗೆ ಭರ್ಜರಿ ಸಿದ್ಧತೆ

    ರಾಜಪಥ್‍ನಲ್ಲಿ ಗಣರಾಜ್ಯೋತ್ಸವ ಪರೇಡ್‍ಗೆ ಭರ್ಜರಿ ಸಿದ್ಧತೆ

    ನವದೆಹಲಿ: ಗಣರಾಜ್ಯೋತ್ಸವಕ್ಕೆ ಇನ್ನು ಒಂದೇ ವಾರ ಬಾಕಿ ಇದೆ. ದೆಹಲಿಯ ರಾಜಪಥ್‍ನಲ್ಲಿ ನಡೆಯುತ್ತಿದೆ ಪರೇಡ್ ಪೂರ್ವಾಭ್ಯಾಸ ನಡೆಯುತ್ತಿದೆ.

    ಗಣರಾಜ್ಯೋತ್ಸವ ಕಾರ್ಯಕ್ರಮ, ಪರೇಡ್, ಸ್ಥಬ್ಧ ಚಿತ್ರಗಳ ಮೆರವಣಿಗೆ ಇಡೀ ದೇಶದ ಕೇಂದ್ರಬಿಂದು. ದೆಹಲಿಯ ಗಣರಾಜ್ಯೋತ್ಸವ ಪರೇಡ್ ಭಾರತದಲ್ಲಿ ಗಣರಾಜ್ಯೋತ್ಸವವನ್ನು ಗುರುತಿಸುವ ಪರೇಡ್‍ಗಳಲ್ಲಿ ಅತಿ ದೊಡ್ಡದು.  ಮೂರು ದಿನಗಳ ಕಾಲ ನಡೆಯುವ ಭಾರತದ ಗಣರಾಜ್ಯೋತ್ಸವದ ಪ್ರಮುಖ ಆಕರ್ಷಣೆಯಾಗಿದೆ.

    ಇಂದು ದೆಹಲಿಯ ರಾಜಪಥ್‌ನಲ್ಲಿ ಕೊರೆಯುವ ಚಳಿ, ಹಿಮಪಾತದ ನಡುವೆ ಸೇನಾಪಡೆ ಯೋಧರು ಪರೇಡ್‍ಗೆ ಪೂರ್ವ ತಯಾರಿ ನಡೆಸುತ್ತಿರುವ ದೃಶ್ಯ ಮನಮೋಹಕವಾಗಿದೆ. ಸೇನೆಯಲ್ಲಿ ಶಿಸ್ತು, ಸಂಯಮ ಎಷ್ಟು ಇರುತ್ತದೆ, ಇರಬೇಕಾಗುತ್ತದೆ ಎಂಬುದನ್ನು ಇದು ಸೂಚಿಸುತ್ತದೆ. ಪ್ರತಿವರ್ಷ ಹೊರದೇಶಗಳ ಗಣ್ಯರನ್ನು ಅತಿಥಿಗಳಾಗಿ ಆಹ್ವಾನಿಸಲಾಗುತ್ತದೆ. ಆದರೆ ಈ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿ ಸಾಂಕೇತಿಕವಾಗಿ ಸರಳವಾಗಿ ಕೊರೊನಾ ಮಾರ್ಗಸೂಚಿಗಳೊಂದಿಗೆ ಆಚರಿಸಲಾಗುತ್ತಿದೆ.

    ಮೆರವಣಿಗೆಯು ರಾಷ್ಟ್ರಪತಿ ಭವನದಿಂದ ರಾಜಪಥದ ಉದ್ದಕ್ಕೂ, ಇಂಡಿಯಾ ಗೇಟ್‍ಗೆ ಮತ್ತು ಅಲ್ಲಿಂದ ಕೆಂಪು ಕೋಟೆಗೆ ಮೆರವಣಿಗೆ ಸಾಗುತ್ತದೆ. ಭಾರತದ ರಾಷ್ಟ್ರಪತಿಗಳು ರಾಷ್ಟ್ರಧ್ವಜವನ್ನು ಹಾರಿಸುವುದರೊಂದಿಗೆ ಆರಂಭವಾಗುತ್ತದೆ. ಇದರ ನಂತರ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಹಲವಾರು ರೆಜಿಮೆಂಟ್‍ಗಳಿಂದ ಬ್ಯಾಂಡ್‍ಗಳೊಂದಿಗೆ ಮೆರವಣಿಗೆ ಮಾಡಲಾಗುತ್ತದೆ. ವಿವಿಧ ರಾಜ್ಯಗಳು ಅಲ್ಲಿನ ಸಂಸ್ಕೃತಿಗಳನ್ನು ಸೂಚಿಸುವ ಸ್ಥಬ್ಧ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಬೀಟಿಂಗ್ ರಿಟ್ರೀಟ್ ಸಮಾರಂಭದೊಂದಿಗೆ ಮೆರವಣಿಗೆ ಕೊನೆಗೊಳ್ಳುತ್ತದೆ.