Tag: Republic Tv

  • ಎಲ್ಲರ ಚಿತ್ತ ಉಪಚುನಾವಣೆ ಫಲಿತಾಂಶದತ್ತ – ಮತ ಎಣಿಕೆಗೆ ಸರ್ವ ಸಿದ್ಧತೆ

    ಎಲ್ಲರ ಚಿತ್ತ ಉಪಚುನಾವಣೆ ಫಲಿತಾಂಶದತ್ತ – ಮತ ಎಣಿಕೆಗೆ ಸರ್ವ ಸಿದ್ಧತೆ

    ವಿಜಯಪುರ: ರಾಜ್ಯದಲ್ಲಿ ನಡೆದ ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದೆ. ವಿಜಯಪುರ ನಗರದ ಸೈನಿಕ ಶಾಲೆ ಯಲ್ಲಿ ಮತ ಎಣಿಕೆಗೆ ಜಿಲ್ಲಾಡಳಿತ ಇಂದಿನಿಂದಲೇ ಸಕಲ ವ್ಯವಸ್ಥೆ ಮಾಡಿಕೊಂಡಿದೆ.

    ಸೈನಿಕ್ ಶಾಲೆಯ ಒಡೆಯರ ಸದನದಲ್ಲಿ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ. ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪಿ ಸುನೀಲ್ ಕುಮಾರ್, ಎಸ್‍ಪಿ ಆನಂದ್‍ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಎರಡು ಪ್ರತ್ಯೇಕ ಕೋಣೆಗಳಲ್ಲಿ ಮತಎಣಿಕೆ ಕಾರ್ಯ ನಡೆಯಲಿದ್ದು, 16 ಟೇಬಲ್‍ನಲ್ಲಿ 22 ಸುತ್ತು ಮತ ಎಣಿಕೆ ಕಾರ್ಯ ನಡೆಯಲಿದೆ. ಮತ ಎಣಿಕೆ ಕೇಂದ್ರದ ಸುತ್ತ 100 ಮೀ. ಅಂತರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಶಾಂತಿಯುತವಾಗಿ ನಡೆಯಿತು ಉಪಚುನಾವಣೆ – ನ.2ಕ್ಕೆ ಫಲಿತಾಂಶ

    ಅಕ್ಟೋಬರ್ 30 ರಂದು ಎರಡು ಕ್ಷೇತ್ರದಲ್ಲಿ ಉಪಚುನಾವಣೆ ಶಾಂತಿಯುತವಾಗಿ ನಡೆದಿತ್ತು. ಹಾನಗಲ್‍ನಲ್ಲಿ ಶೇಕಡಾ 80 ರಷ್ಟು ಮತ್ತು ಸಿಂದಗಿಯಲ್ಲಿ ಶೇಕಡಾ 70 ರಷ್ಟು ಮತದಾನವಾಗಿತ್ತು. ಇದೀಗ ನಾಳೆ ಫಲಿತಾಂಶ ಹೊರಬೀಳಲಿದ್ದು, ಎಲ್ಲರ ಚಿತ್ತ ಉಪಚುನಾವಣೆಯ ಫಲಿತಾಂಶದತ್ತ ನೆಟ್ಟಿದೆ. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

  • RSS ಹುಟ್ಟಿದಾಗಿಂದ್ಲೂ ಏನೆಲ್ಲ ಮಾಡ್ಕೊಂಡು ಬಂದಿದೆ ಅನ್ನೋದು ಜಗತ್ತಿಗೆ ಗೊತ್ತಿದೆ: ಎಚ್‍ಡಿಕೆ

    RSS ಹುಟ್ಟಿದಾಗಿಂದ್ಲೂ ಏನೆಲ್ಲ ಮಾಡ್ಕೊಂಡು ಬಂದಿದೆ ಅನ್ನೋದು ಜಗತ್ತಿಗೆ ಗೊತ್ತಿದೆ: ಎಚ್‍ಡಿಕೆ

    ಬೆಂಗಳೂರು: ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಅದಕ್ಕೆ ಕೊಳ್ಳಿ ಇಡಬಾರದು. ಆರ್‌ಎಸ್‌ಎಸ್‌ ಹುಟ್ಟಿದಾಗಿನಿಂದಲೂ ಏನೆಲ್ಲ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೇ ಗೊತ್ತಿರುವ ಸಂಗತಿ ಎಂದು ಎಚ್.ಡಿ ಕುಮಾರಸ್ವಾಮಿ ಆರ್‌ಎಸ್‌ಎಸ್‌ ವಿರುದ್ಧ ಟ್ವಿಟ್ಟರ್‍ ನಲ್ಲಿ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?

    ಜನ ಪ್ರತಿನಿಧಿಗಳನ್ನು, ಸರ್ಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿ ರವಿಯರೇ. ನಾನು ಸತ್ಯದ ಪರ. ಸಿ.ಟಿ ರವಿಯವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. ಆರ್‌ಎಸ್‌ಎಸ್‌ ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ. ನಿಮ್ಮ ಸಂಘದೊಳಗಿನ ವಾಸ್ತಾವಾಂಶಗಳನ್ನು ಪ್ರತ್ಯಕ್ಷವಾಗಿ ನೋಡಿದವರೇ ಬರೆದ ಪುಸ್ತಕ ಓದಿ ನನಗೆ ಅಲ್ಲಿನ ವ್ಯವಹಾರಗಳ ವಿರಾಟ್ ದರ್ಶನ ಆಗಿದೆ. ಇನ್ನು ಶಾಖೆಯನ್ನೇ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು. ನೀವೇ ಒಮ್ಮೆ ಊಹಿಸಿ. ಇದನ್ನೂ ಓದಿ: RSS ಜಾತಿ, ಧರ್ಮ ಮೀರಿದ ಮಾತೃಹೃದಯಿ ಸಂಘಟನೆ: ಜಗ್ಗೇಶ್

    ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ ಆರ್‌ಎಸ್‌ಎಸ್‌ ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ? ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದೀರಿ. ನಿಮ್ಮ ಪಕ್ಷ ಮತ್ತು ನಿಮ್ಮ ಸರ್ಕಾರದಲ್ಲಿ ತಾಂಡವವಾಡುತ್ತಿರುವ ಅಪರಿಮಿತ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತದ ಬಗ್ಗೆಯೂ ನೀವು ಹೇಳಬೇಕು. ಅದಕ್ಕೂ RSS ಶಾಖೆಯಲ್ಲೇ ತರಬೇತಿ ನೀಡಲಾಯಿತಾ? ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ ‘ಆಪರೇಷನ್ ಕಮಲ’ದಂಥ ‘ಅನೈತಿಕ’, ‘ನಿರ್ಲಜ್ಜ’, ‘ನೀಚ’ ರಾಜಕಾರಣವನ್ನು ಆರ್‌ಎಸ್‌ಎಸ್‌ ಶಾಖೆಯಲ್ಲೇ ಕಲಿಸಲಾಯಿತಾ ಎಂಬುದನ್ನೂ ನೀವು ಜನರಿಗೆ ಹೇಳಬೇಕು ಸಿ.ಟಿ.ರವಿಯವರೇ?. ಇದನ್ನೂ ಓದಿ: ಗ್ರಾಹಕರಿಗೆ ಇನ್ನಷ್ಟು ಹೊರೆ- ಸಿಲಿಂಡರ್ ದರದಲ್ಲಿ 15 ರೂ. ಏರಿಕೆ

  • ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಅರೆಸ್ಟ್

    ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಅರೆಸ್ಟ್

    ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ನನ್ನು ಎನ್‍ಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

    ಐಷಾರಾಮಿ ಹಡಗಿನಲ್ಲಿ ಡ್ರಕ್ಸ್ ಪಾರ್ಟಿ ಮಾಡುತ್ತಿದ್ದಾಗ ಆರ್ಯನ್ ಖಾನ್ ಸಹಿತ 8 ಜನ ಎನ್‍ಸಿಬಿ ಬಲೆಗೆ ಬಿದ್ದಿದ್ದರು. ಇದೀಗ ಆರ್ಯನ್ ಖಾನ್ ಸಹಿತ 8 ಮಂದಿ ಆರೋಪಿಗಳನ್ನು ಎನ್‍ಸಿಬಿ ಅರೆಸ್ಟ್ ಮಾಡಿದೆ. ಆರ್ಯನ್ ಮಾದಕ ವಸ್ತು ಸೇವೆ ಮಾಡಿರೋದು ದೃಢಪಟ್ಟಿದ್ದು, ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ವಶಕ್ಕೆ ಪಡೆದಿದ್ದೇವೆ: ಎನ್‍ಸಿಬಿ ಮುಖ್ಯಸ್ಥ ಪ್ರಧಾನ್

    ಈ ಕುರಿತು ಮಾಹಿತಿ ನೀಡಿರುವ ಎನ್‍ಸಿಬಿ ಮುಖ್ಯಸ್ಥ ಎಸ್.ಎನ್.ಪ್ರಧಾನ್, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಪ್ರಯಾಣಿಕರ ಸೋಗಿನಲ್ಲಿ ಟಿಕೆಟ್ ಬುಕ್, ಎನ್‍ಸಿಬಿ ರೋಚಕ ಕಾರ್ಯಾಚರಣೆ

    ಸಮುದ್ರದಲ್ಲಿ ಹಡಗಿನಲ್ಲಿ ತೇಲುತ್ತ ಬಾಲಿವುಡ್ ನಟರು, ಉದ್ಯಮಿಗಳ ಮಕ್ಕಳು ಡ್ರಗ್ಸ್ ಪಾರ್ಟಿ ಮಾಡಿದ್ದರು. ಐಷಾರಾಮಿ ಹಡಗಿನಲ್ಲಿ ಎನ್‍ಸಿಬಿ ಕಾರ್ಯಾಚರಣೆಯೇ ರೋಚಕವಾಗಿತ್ತು. ಎನ್‍ಸಿಬಿ ಸಮೀರ್ ವಾಂಖೆಡೆ ಟೀಮ್ ಮಾರುವೇಷದಲ್ಲಿ ಹಡಗಿನಲ್ಲಿ ಪ್ರಯಾಣಿಸಿ ಆಪರೇಷನ್ ನಡೆಸಿತ್ತು. ಕಾರ್ಯಾಚರಣೆಯಲ್ಲಿ ಯಶಸ್ವಿ ಸಹ ಆಗಿದ್ದು, ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಸೇರಿದಂತೆ ಹಲವು ಪ್ರತಿಷ್ಟಿತರ ಮಕ್ಕಳನ್ನು ವಶಕ್ಕೆ ಪಡೆಯಲಾಗಿತ್ತು.

    ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಐಷಾರಾಮಿ ಹಡಗಿನಲ್ಲಿ ಸಮುದ್ರದ ಮಧ್ಯದಲ್ಲಿ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಎನ್‍ಸಿಬಿ ಅಧಿಕಾರಿಗಳು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕೊಕೇನ್, ಎನ್‍ಡಿಎಂ, ಹಾಶಿಶ್ ಮಾದಕ ದ್ರವ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಹೈ ಪ್ರೊಫೈಲ್ ಡ್ರಗ್ಸ್ ಕೇಸ್- ಶಾರುಖ್ ಖಾನ್ ಪುತ್ರನಿಗೆ ಬಂಧನ ಭೀತಿ

  • ನಾನು ಸಾಮಾನ್ಯ ಮುನುಷ್ಯ, ನನಗೆ ಸೆಕ್ಯೂರಿಟಿ ಬೇಡ: ಪಂಜಾಬ್ ಸಿಎಂ

    ನಾನು ಸಾಮಾನ್ಯ ಮುನುಷ್ಯ, ನನಗೆ ಸೆಕ್ಯೂರಿಟಿ ಬೇಡ: ಪಂಜಾಬ್ ಸಿಎಂ

    ಚಂಡೀಗಢ: ಪಂಜಾಬ್‍ನಲ್ಲಿ ಆಡಳಿತ ನಡೆಸುತ್ತಿರುವ ನೂತನ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಛನ್ನಿ ನಾನೊಬ್ಬ ಎಲ್ಲರಂತೆ ಸಾಮಾನ್ಯ ಮನುಷ್ಯ ನನಗೆ ಸೆಕ್ಯೂರಿಟಿ ಬೇಡವೆಂದು ಭದ್ರತಾ ವ್ಯವಸ್ಥೆಯನ್ನು ನಿರಾಕರಿಸಿದ್ದಾರೆ.

    ಈ ಬಗ್ಗೆ ಘೋಷಣೆ ಹೊರಡಿಸಿರುವ ಚರಣ್‍ಜಿತ್ ಸಿಂಗ್, ನಾನೊಬ್ಬ ನಿಮ್ಮಂತೆ ಸಾಮಾನ್ಯ ಮನುಷ್ಯ ಹಾಗಾಗಿ ನನಗೆ 1000 ಭದ್ರತಾ ಸಿಬ್ಬಂದಿ ಮತ್ತು 300 ಕಾರ್‍ ಗಳ ರಕ್ಷಣಾ ವ್ಯವಸ್ಥೆ ಬೇಡವೆಂದು ನಯವಾಗಿಯೇ ತಿರಸ್ಕರಿಸಿದ್ದಾರೆ. ದೊಡ್ಡದಾದ ಭದ್ರತಾ ಪಡೆಯನ್ನು ಇಟ್ಟುಕೊಂಡು ಆಡಳಿತ ನಡೆಸುವುದು ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ. ಇದಲ್ಲದೆ ನನ್ನೊಂದಿಗೆ ಬರುವ ವಾಹನಗಳ ಸಂಖ್ಯೆ ಕೂಡ ಕಡಿತಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಚರಣ್‍ಜಿತ್ ಸಿಂಗ್ ಛನ್ನಿ ಮೇಲೆ 2018ರಲ್ಲಿ ಬಂದಿತ್ತು #MeToo ಆರೋಪ!

    ಪಂಜಾಬ್‍ನ ಮುಖ್ಯಮಂತ್ರಿಯಾಗಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ ಬಳಿಕ ಚರಣ್‍ಜಿತ್ ಸಿಂಗ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೂತನ ಸಿಎಂ ಆಗಿ ಆಯ್ಕೆಮಾಡಿತ್ತು. ಚರಣ್‍ಜಿತ್ ಸಿಂಗ್ ದಲಿತಸಮುದಾಯದವರಾಗಿದ್ದು, ಸಿಖ್ಖರಲ್ಲಿ ಅತ್ಯಂತ ಕೆಳ ವರ್ಗ ಚಮ್ಮಾರ ಸಮುದಾಯಕ್ಕೆ ಸೇರಿದವರು. 2007ರಿಂದ ಸತತವಾಗಿ ಚಾಮ್‍ಕೌರ್ ಸಾಹೀಬ್ ಕ್ಷೇತ್ರದಿಂದ ವಿಧಾನಸಭೆಗೆ ಆರಿಸಿ ಹೋಗಿದ್ದರು. 2015ರಲ್ಲಿ ವಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದರು. ಅಮರೀಂದರ್ ಸಿಂಗ್ ಸರ್ಕಾರದಲ್ಲಿ ತಾಂತ್ರಿಕಶಿಕ್ಷಣ ಸಚಿವರಾಗಿದ್ದ ಚರಣ್‍ಜಿತ್ ಸಿಂಗ್ ಇದೀಗ ಪಂಜಾಬ್ ಸಿಎಂ ಆಗಿ ಅಧಿಕಾರ ನಿರ್ವಹಿಸುತ್ತಿದ್ದಾರೆ.

    https://twitter.com/CMOPb/status/1441079286387990537

    ನಾನು ಸಾಮಾನ್ಯ ಮನುಷ್ಯ ಎಂದು ಹೇಳಿಕೊಂಡಿರುವ ಚರಣ್‍ಜಿತ್ ಸಿಂಗ್ ಸಿಎಂ ಆದ ಬಳಿಕ ಕೇವಲ 240 ಕಿ.ಮೀ ದೂರವಿರುವ ದೆಹಲಿಗೆ ಪ್ರೈವೇಟ್ ಜೆಟ್‍ನಲ್ಲಿ ಪ್ರಮಾಣ ಬೆಳೆಸಿದ್ದರು ಈ ಬಗ್ಗೆ ಇದೀಗ ವಿಪಕ್ಷಗಳು ವ್ಯಂಗ್ಯವಾಡುತ್ತಿವೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 8 ತಿಂಗಳಿಂದ ಸಾಮೂಹಿಕ ಅತ್ಯಾಚಾರ – 26 ಆರೋಪಿಗಳ ಬಂಧನ!

  • ಬೋವಿ ಸ್ವಾಮೀಜಿ, ನಾರಾಯಣಸ್ವಾಮಿ ನಡುವೆ ತಾರಕಕ್ಕೇರಿದ ಒಳಮೀಸಲಾತಿ ಸಮರ

    ಬೋವಿ ಸ್ವಾಮೀಜಿ, ನಾರಾಯಣಸ್ವಾಮಿ ನಡುವೆ ತಾರಕಕ್ಕೇರಿದ ಒಳಮೀಸಲಾತಿ ಸಮರ

    ಚಿತ್ರದುರ್ಗ: ಸಮುದಾಯದ ವಿಚಾರದಲ್ಲಿ ಏಕಪಕ್ಷೀಯ ತೀರ್ಮಾನ ಸರಿಯಲ್ಲವೆಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ವಿರುದ್ಧ ಬೋವಿ ಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ ಗುಡುಗಿದ್ದಾರೆ.

    ನೂತನ ಕೇಂದ್ರಸಚಿವರಾದ ಬೆನ್ನಲ್ಲೇ ನಾರಾಯಣಸ್ವಾಮಿ ಅವರಿಗೆ ಸದಾಶಿವ ವರದಿಯ ಒಳಮೀಸಲಾತಿ ವಿಚಾರ ಬಾರಿ ತಲೆನೋವಾಗಿ ಪರಿಣಮಿಸಿದೆ. ಸ್ವಜಾತಿ ಪ್ರೇಮದ ಭರಾಟೆಯಲ್ಲಿ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಸದಾಶಿವ ವರದಿ ಜಾರಿ ವಿಚಾರವಾಗಿ ಬೋವಿ ಸ್ವಾಮೀಜಿ ಜೊತೆ ಚರ್ಚಸಿರುವುದಾಗಿ ಹೇಳಿಕೆ ನೀಡಿದ್ದ ಸಚಿವರ ವಿರುದ್ಧ ಬೋವಿ ಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ನಾರಾಯಣಸ್ವಾಮಿ ನಮ್ಮೊಂದಿಗೆ ಒಳಮೀಸಲಾತಿ ವಿಚಾರವಾಗಿ ಯಾವುದೇ ಚರ್ಚೆಯನ್ನು ಮಾಡಿಲ್ಲ. ಅನಾವಶ್ಯಕವಾಗಿ ಗೊಂದಲ ಸೃಷ್ಠಿಸಬಾರದು. ಅವರು ನಿನ್ನೆ ನೀಡಿರುವ ಹೇಳಿಕೆಯಲ್ಲಿ ಸ್ಪಷ್ಟನೆ ಇಲ್ಲ. ಅಲ್ಲದೆ ಈಗಾಗಲೇ ಸೋರಿಕೆಯಾಗಿರುವ ವರದಿಯನ್ನು ಸರ್ಕಾರ ಗೌಪ್ಯವಾಗಿಡದೇ 101 ಜಾತಿಗಳ ಕೈಗೆ ಸಾರ್ವಜನಿಕವಾಗಿ ನೀಡಲಿ. ಅದರಲ್ಲಿರುವ ಸತ್ಯಾಂಶವನ್ನು ಬಹಿರಂಗಪಡಿಸಲಿ ಎಂದು ಒತ್ತಾಯಿಸಿದ್ದಾರೆ.

    ಒಳಮೀಸಲಾತಿ ವಿಚಾರದಲ್ಲಿ ಎರಡು ಸಮುದಾಯಗಳ ನಡುವೇ ರಾಜಕೀಯ ಸಮರ ನಡೆಯುವುದು ಬೇಡವೆನ್ನುವ ಉದ್ದೇಶದಿಂದ ಎಲ್ಲರು ಒಟ್ಟಾಗಿ ಚರ್ಚಿಸಿ, ಈ ಗೊಂದಲಕ್ಕೊಂದು ತಾರ್ಕಿಕ ಅಂತ್ಯ ಆಡೋಣವೆಂದು ಮುನಿಯಪ್ಪ, ಗೋವಿಂದ ಕಾರಜೋಳ ಹಾಗೂ ನಾರಾಯಣಸ್ವಾಮಿ ಅವರಿಗೆ ನಾವೇ ಸಲಹೆ ನೀಡಿದ್ದೆವು. ಆದರೆ ನಾರಾಯಣಸ್ವಾಮಿ ಅವರು ಈ ರೀತಿ ನಮ್ಮೊಂದಿಗೆ ಹಾಗೂ ನಮ್ಮ ಸಮುದಾಯದ ಶಾಸಕರೊಂದಿಗೆ ಚರ್ಚಿಸಿದ್ದೇನೆಂದು ಹೇಳಿರುವುದು ಸರಿಯಲ್ಲ. ಆ ಬಗ್ಗೆ ಚರ್ಚಿಸೋಣ ಎಂದು ಹೇಳಿದ್ದರಷ್ಟೇ ಆದರೆ ಯಾವುದೇ ಚರ್ಚೆ ಬೈಠಕ್ ಆಗಿಲ್ಲ. ಹೀಗಾಗಿ ಈ ಬಗ್ಗೆ ಚರ್ಚಿಸಲು ಒಂದೇ ವೇದಿಕೆಗೆ ನಮ್ಮೊಂದಿಗೆ ಸಚಿವರು ಧಾವಿಸಲಿ ಎಂದು ಆಹ್ವಾನಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ನಾರಾಯಣಸ್ವಾಮಿ ಕಾರ್ಯಕ್ರಮಲ್ಲಿ ಮೂವರ ಜೇಬಿಗೆ ಕತ್ತರಿ, 20 ಸಾವಿರ ಕಳ್ಳತನ

    ಸಮುದಾಯವನ್ನು ಸ್ವಾಮೀಜಿ ದಿಕ್ಕುತಪ್ಪಿಸಬಾರದು- ನಾರಾಯಣಸ್ವಾಮಿ
    ಶ್ರೀಗಳ ಹೇಳಿಕೆಗೆ ತಿರುಗೇಟು ನೀಡಿರುವ ನಾರಾಯಣಸ್ವಾಮಿ, ಸಮುದಾಯವನ್ನು ಸ್ವಾಮೀಜಿ ದಿಕ್ಕು ತಪ್ಪಿಸಬಾರದು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೆ ಬಂದಾಗಿಂದ ನಾನು ತಪ್ಪು ಮಾಡಿಲ್ಲ. ಸದಾಶಿವ ಆಯೋಗದ ವರದಿ ವಿಚಾರದಲ್ಲಿ ಮಿಸ್ ಗೈಡ್ ಸಹ ಮಾಡಿಲ್ಲ. ಸದಾಶಿವ ಆಯೋಗದಲ್ಲಿ ಲಂಬಾಣಿ, ಬೋವಿ ಸಮಾಜಗಳನ್ನು ಕೈಬಿಡಬೇಕು ಎಂಬ ಯಾವುದೇ ಪದವಿಲ್ಲ. ಆದರೂ ಅಲ್ಲಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂಬುದು ನನಗೂ ನಿನ್ನೆ ಅನುಭವವಾಗಿದೆ. ನಾನು ಆ ಸಮಾಜವನ್ನು ವಿರೋಧ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ. ನಾನ್ಯಾಕೆ ವಿರೋಧ ಮಾಡಲಿ, ನಾನೇನು ಜಸ್ಟಿಸ್ಸಾ? ನಾನೊಬ್ಬ ಕ್ಯಾಬಿನೆಟ್ ಮಂತ್ರಿಯಾಗಿ ಯಾವುದೇ ವರದಿ ತೆಗೆದುಕೊಳ್ಳುವುದು ನನ್ನ ಜವಾಬ್ದಾರಿಯಾಗಿತ್ತು. ಹೀಗಾಗಿ ಅಂದು ಸಮಾಜ ಕಲ್ಯಾಣ ಮಂತ್ರಿ ಆಗಿದ್ದಾಗ ವರದಿ ಸ್ವೀಕರಿಸಿದ್ದೆನೆ. ನಮ್ಮಲ್ಲಿ ಯಾವುದೇ ಕಾಲಘಟ್ಟದಲ್ಲಿ ಸ್ವತಃ ನಾನೇ ಬೋವಿ ಸಮಾಜ ಹಾಗೂ ಲಂಬಾಣಿ ಶಾಸಕರ ಜೊತೆ ಚರ್ಚಿಸಿದ್ದೇನೆ. ಕಡಿಮೆ ಮಾಡಿಕೊಳ್ಳಲು ನಾವು ಸಿದ್ದರಿದ್ದೇವೆ. ಆದ್ದರಿಂದ ಎಲ್ಲರೂ ಒಂದಾಗೋಣ ಎಂದು ಹೇಳಿದ್ದೇನೆ.

    ಇಡೀ ಸಮಾಜವನ್ನು ಒಟ್ಟಾಗಿ ತೆಗೆದುಕೊಂಡು ಹೋಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಒಳ್ಳೆಯದು ಮಾಡಬೇಕೆಂಬ ಉದ್ದೇಶ ನನ್ನಲ್ಲಿದೆ. ನಾವ್ಯಾಕೆ ಗುಂಪುಗಾರಿಕೆಮಾಡಲಿ, ನಮ್ಮಲ್ಲಿ ಯಾಕೆ ಈ ಮನಸ್ಥಿತಿ ಬರುತ್ತದೆ? ಈ ವಿಚಾರವಾಗಿ ನಾನೇ ನೇರವಾಗಿ ಸ್ವಾಮೀಜಿ ಜೊತೆ ಮಾತನಾಡಿದ್ದೇನೆ, ಸುಮ್ಮನೆ ಯಾಕೆ ಚರ್ಚೆ ಮಾಡುತ್ತೀರಿ ಸ್ವಾಮೀಜಿಗಳ ಮೇಲೆ ನನಗೆ ಗೌರವ ಇದೆ. ಆದರೆ ನಾನು ಶ್ರೀಗಳ ಜೊತೆ ಮಾತನಾಡಿಲ್ಲ ಎಂದರೆ ಏನರ್ಥ? ಈ ಸ್ವಾಮೀಜಿಯವರು ಬೋವಿ ಗುರುಪೀಠದ ಸ್ವಾಮೀಜಿಗಳಾಗಿ ದಿಕ್ಕು ತಪ್ಪಿಸಬಾರದು. ಇದನ್ನೂ ಓದಿ: ಡಬಲ್ ಮರ್ಡರ್‌ಗೆ ಬೆಚ್ಚಿಬಿತ್ತು ಮೆಟ್ರೋ ಸಿಟಿ – ಲಕ್ಷ್ಮಿ ಹಬ್ಬದ ದಿನವೇ ಹೆಣವಾದ್ರು ವೃದ್ಧ ದಂಪತಿ

    ಸದಾಶಿವ ಆಯೋಗದಲ್ಲಿ ಈ ಎರಡು ಸಮಾಜಗಳನ್ನು ಮೀಸಲಾತಿಯಿಂದ ಕೈ ಬಿಡುವ ಚರ್ಚೆಗಳು ಹಿಂದೆಯೇ ನಡೆದಿದ್ದವು. ನಾನು ಅನೇಕ ಸಭೆಗಳಲ್ಲಿ ಹೇಳಿದ್ದೇನೆ. ಈ ಎರಡು ಸಮಾಜಗಳನ್ನು ಆಯೋಗದಿಂದ ತೆಗೆಯುವುದು ಯಾರ ಮನಸ್ಸಿನಲ್ಲಿ ಇಲ್ಲ. ನೀವ್ಯಾಕೆ ಈ ಕುರಿತು ಚರ್ಚೆ ಮಾಡುತ್ತೀರಾ? ಯಾಕೆ ಗೊಂದಲ ಸೃಷ್ಠಿ ಮಾಡುತ್ತೀರ ಎಂದು ಸ್ವಾಮೀಜಿಯನ್ನು ನಾರಾಯಣ ಸ್ವಾಮಿ ಪ್ರಶ್ನಿಸಿದ್ದಾರೆ.

  • ಬಿಬಿಎಂಪಿ ಗೋಲ್‍ಮಾಲ್- ಲಾಕ್‍ಡೌನ್‍ನಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಸ್ವೆಟರ್ ಬಿಲ್

    ಬಿಬಿಎಂಪಿ ಗೋಲ್‍ಮಾಲ್- ಲಾಕ್‍ಡೌನ್‍ನಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಸ್ವೆಟರ್ ಬಿಲ್

    – ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ದೂರು

    ಬೆಂಗಳೂರು: 2020-21ನೇ ಸಾಲಿನಲ್ಲಿ ಪಾಲಿಕೆ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಬೆಲ್ಟ್, ಸ್ವೆಟರ್‍ ಗಳನ್ನು ನೀಡದೇ ಬೋಗಸ್ ಬಿಲ್ ಮಾಡಿ ಬಿಬಿಎಂಪಿಗೆ ಆರ್ಥಿಕ ನಷ್ಟ ಉಂಟುಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ರಾಜ್ಯಾಧ್ಯಕ್ಷ ಡಾ.ಸಿ.ಎಸ್ ರಘು ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರಿಗೆ ದೂರು ನೀಡಿದ್ದಾರೆ.

    ಆಯುಕ್ತರನ್ನು ಶನಿವಾರ ಭೇಟಿಯಾದ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಾ.ಸಿ.ಎಸ್. ರಘು ಅವರು, ಈ ಅಕ್ರಮದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪೋಲಾಗಿರುವ ಸಾರ್ವಜನಿಕರ ತೆರಿಗೆ ಹಣವನ್ನು ತಪ್ಪಿತಸ್ಥರಿಂದ ವಸೂಲಿ ಮಾಡಬೇಕು, “2020-21ನೇ ಸಾಲಿನ ಪಾಲಿಕೆ ಆಯವ್ಯಯದಲ್ಲಿ ಶಾಲಾ ಕಾಲೇಜುಗಳಿಗೆ ಅವಶ್ಯವಿರುವ ಮೂಲ ಸೌಕರ್ಯ ಹಾಗೂ ಇತರ ಸೌಲಭ್ಯಗಳನ್ನು ತುರ್ತಾಗಿ ಒದಗಿಸಲು ಕೆಹೆಚ್‍ಡಿಸಿ ಹಾಗೂ ಎಂಎಸ್‍ಐಎಲ್ ಸಂಸ್ಥೆ ವತಿಯಿಂದ ಅಗತ್ಯ ಸಲಕರಣೆಗಳನ್ನು ಖರೀದಿಸಿರುವುದಾಗಿ ಹೇಳಲಾಗಿದೆ. 2021ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳೀಗೆ ಶೂ, ಸಾಕ್ಸ್, ಬೆಲ್ಟ್ ವಿತರಿಸಲು ಪಾಲಿಕೆಯಿಂದ 1.72 ಕೋಟಿ ರೂ.ಪಾವತಿ ಆಗಿದೆ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಿರುವುದರಿಂದ ವಿದ್ಯಾರ್ಥಿಗಳಿಗೆ ಇವುಗಳನ್ನು ವಿತರಿಸುವ ಪ್ರಮೇಯವೇ ಬರುವುದಿಲ್ಲ. ಹೀಗಾಗಿ ಇದರಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗುತ್ತದೆ,” ಎಂದು ರಘು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

    ಅದೇ ರೀತಿ 400 ರೂಪಾಯಿ ಬೆಲೆಯ ಸ್ವೆಟರ್ ಅನ್ನು 1,400 ರೂಪಾಯಿ ಎಂದು ನಮೂದಿಸಿ ಬಿಲ್ ಮಾಡಲಾಗಿದೆ. ಈ ಕುರಿತು ಆರ್‍ಟಿಐ ಮೂಲಕ ಮಾಹಿತಿ ಪಡೆದಿದ್ದೇವೆ. ಬಿಬಿಎಂಪಿಯಲ್ಲಿ ಬಿಲ್ ಕ್ಲಿಯರ್ ಆಗುವುದೇ ಕಷ್ಟ. ಆದರೆ ಈ ಖರೀದಿ ಪ್ರಕರಣಗಳಲ್ಲಿ ದಿಢೀರ್ ಬಿಲ್ ಪಾವತಿಯಾಗಿದ್ದು, ಇದು ಕೂಡ ಅನುಮಾನಕ್ಕೆ ಕಾರಣವಾಗಿದೆ. ಆದ್ದರಿಂದ ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ದಲಿತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಸೌಲಭ್ಯಗಳನ್ನು ಒದಗಿಸಿ,” ಎಂದು ಅವರು ಮನವಿ ಮಾಡಿದರು. ಇದನ್ನೂ ಓದಿ: SSLC ಪರೀಕ್ಷೆಗೆ ಸಿದ್ಧತೆ ಪೂರ್ಣ: ಸುರೇಶ್ ಕುಮಾರ್

    ಈ ಪ್ರಕರಣದಲ್ಲಿ ಪ್ರಮುಖವಾಗಿ ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತಾ ಹಾಗೂ ವಿಶೇಷ ಹಣಕಾಸು ಆಯುಕ್ತೆ ತುಳಸಿ ಮೇದಿನೇನಿ ತಪ್ಪಿತಸ್ಥರಾಗಿದ್ದಾರೆ. 6-3-21 ರಲ್ಲಿ ಕಾರ್ಯಾದೇಶ ನೀಡಿದ್ದು ನಂತರ ಶಾಲಾ ಕಾಲೇಜುಗಳು ಪ್ರಾರಂಭವೇ ಆಗಿಲ್ಲ. ಕಾರ್ಯಾದೇಶದಲ್ಲಿ ಒಂದು ಕಡೆ ಸ್ವೆಟರ್ ಮತ್ತಿತರ ವಸ್ತುಗಳು ಎಂದು ಉಲ್ಲೇಖ ಆಗಿದ್ದರೆ, ಡಿ.ಸಿ.ಬಿಲ್ ನಲ್ಲಿ ಪುಸ್ತಕ ಎಂದು ನಮುದಾಗಿದೆ. ಮಕ್ಕಳಿಗೆ ಯಾವುದೇ ವಸ್ತುಗಳನ್ನು ಕೊಟ್ಟಿರುವ ಛಾಯಾಚಿತ್ರ ವರದಿಯಲ್ಲಿ ಉಲ್ಲೇಖಿಸಲಾಗಿಲ್ಲ. ಅಲ್ಲದೆ ಕೇವಲ ಶಾಲೆಗಳಿಗೆ ನೀಡಿದ್ದೇವೆ ಎಂದು ಮುಚ್ಚಳಿಕೆ ಮೇಲೇ ಹಣ ಪಾವತಿ ಮಾಡಲಾಗಿದೆ. ಕೆಲಸ ಮಾಡಿ ನಾಲ್ಕಾರು ವರ್ಷದ ಕಾಲ ಚಪ್ಪಲಿ ಸವೇದರು ಹಣ ನೀಡದೆ ಸತಾಯಿಸುವ ಬಿಬಿಎಂಪಿ ಅಧಿಕಾರಿಗಳು ಇಷ್ಟು ಬೇಗ ಹಣ ನೀಡಿದ್ದು ಹೇಗೆ ಎಂದು ಅವರು ಪ್ರಶ್ನಿಸಿದರು.

    ತಾವು ನೀಡಿದ ದೂರಿನ ಕುರಿತಂತೆ ಆಯುಕ್ತರಾದ ಗೌರವ್ ಗುಪ್ತಾ ಅವರು ಪೂರಕವಾಗಿ ಸ್ಪಂದಿಸಿದ್ದು, ಪ್ರಕರಣದ ಕುರಿತು ಮಾಹಿತಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ಡಾ.ಸಿ.ಎಸ್. ರಘು ತಿಳಿಸಿದ್ದಾರೆ.