Tag: Republican

  • ಅಮೆರಿಕ ಶಟ್‌ಡೌನ್‌ -7.50 ಲಕ್ಷ ನೌಕರರಿಗೆ ವೇತನರಹಿತ ಕಡ್ಡಾಯ ರಜೆ!

    ಅಮೆರಿಕ ಶಟ್‌ಡೌನ್‌ -7.50 ಲಕ್ಷ ನೌಕರರಿಗೆ ವೇತನರಹಿತ ಕಡ್ಡಾಯ ರಜೆ!

    – ರಿಪಬ್ಲಿಕನ್, ಡೆಮಾಕ್ರೆಟಿಕ್ ನಡುವಿನ ಹಗ್ಗಜಗ್ಗಾಟ ತಾರಕಕ್ಕೆ
    – ದೇಶದ ಸುರಕ್ಷತೆ ಸೇರಿ ಕೆಲ ಅಗತ್ಯ ಸೇವೆಗಳಿಗೆ ಸಮಸ್ಯೆಯಿಲ್ಲ

    ವಾಷಿಂಗ್ಟನ್‌: ವಿಶ್ವದ ದೊಡ್ಡಣ್ಣ ಅಂತ ಹೇಳಿಕೊಳ್ಳುವ ಅಮೆರಿಕ (USA) ಇದೀಗ ಹಿಂದೆಂದೂ ಕಾಣದ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿಗೆ ಸಿಲುಕಿದೆ.

    ಆಡಳಿತಾರೂಢ ಡೊನಾಲ್ಡ್‌ ಟ್ರಂಪ್‌ (Donald Trump) ರಿಪಬ್ಲಿಕನ್ ಪಕ್ಷ (Republican Party) ಮತ್ತು ವಿರೋಧ ಪಕ್ಷವಾದ ಡೆಮಾಕ್ರೆಟಿಕ್ ನಡುವಿನ ಹಗ್ಗಜಗ್ಗಾಟ ತಾರಕಕ್ಕೇರಿದೆ. ಆರೋಗ್ಯ ಸೇವಾ ಅನುದಾನದ ಭಿನ್ನಾಭಿಪ್ರಾಯದಿಂದ ಮಧ್ಯಂತರ ಅನುದಾನದ ಮಸೂದೆಗೆ ಬಹುಮತ ಸಿಗದೇ ಬಿಲ್ ಪಾಸ್ ಆಗಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಶಟ್‌ಡೌನ್ ಆಗಿದ್ದು 7.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರ ಭವಿಷ್ಯ ಅತಂತ್ರವಾಗಿದೆ.

    ರಿಪಬ್ಲಿಕನ್ ಪಕ್ಷವು ಮಂಡಿಸಿದ ಮಧ್ಯಂತರ ಅನುದಾನ ಮಸೂದೆಯನ್ನು ಡೆಮಾಕ್ರೆಟಿಕ್ (Democartic) ಸದಸ್ಯರು ಸೆನೆಟ್‌ನಲ್ಲಿ ವಿರೋಧಿಸಿದರು. ತಮ್ಮ ಪ್ರಮುಖ ಬೇಡಿಕೆಗಳನ್ನು ಈ ಮಸೂದೆಯಲ್ಲಿ ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ.  ಇದನ್ನೂ ಓದಿಬಾಗ್ರಾಮ್‌ ವಾಯುನೆಲೆ | ಅಮೆರಿಕ ವಿರುದ್ಧ ಯುದ್ಧಕ್ಕೂ ಸೈ ಎಂದ ತಾಲಿಬಾನ್‌ – ಏನಿದು ವಿವಾದ?

    ಅಫೋರ್ಡಬಲ್ ಕೇರ್ ಆಕ್ಟ್ ಅಂದರೆ ಒಬಾಮಾಕೇರ್ ಅಡಿಯಲ್ಲಿ ಲಕ್ಷಾಂತರ ಜನರಿಗೆ ನೀಡಲಾಗುತ್ತಿರುವ ಹೆಲ್ತ್ ಇನ್ಸೂರೆನ್ಸ್ ಸಬ್ಸಿಡಿಗಳನ್ನು ಮುಂದುವರಿಸಬೇಕು ಎನ್ನುವುದು ಡೆಮಾಕ್ರೆಟಿಕ್‌ಗಳ ಪ್ರಮುಖ ಬೇಡಿಕೆಯಾಗಿದೆ. ಇದಕ್ಕೆ ರಿಪಬ್ಲಿಕನ್ನರು ಒಪ್ಪದ ಕಾರಣ ಸೆನೆಟ್‌ನಲ್ಲಿ 55-45 ಮತಗಳ ಅಂತರದಿಂದ ಬಿಲ್ ಬಿದ್ದು ಹೋಯಿತು. ಇದರ ಪರಿಣಾಮವಾಗಿ ಆಡಳಿತ ಕಾರ್ಯನಿರ್ವಹಣೆಗೆ ಸರ್ಕಾರದ ಬಳಿ ಹಣವಿಲ್ಲದೇ ಬುಧವಾರ ಮಧ್ಯರಾತ್ರಿ 12:01ಕ್ಕೆ ಅಧಿಕೃತವಾಗಿ ಶಟ್‌ಡೌನ್ (US Shutdown) ಘೋಷಿಸಲಾಗಿದೆ.

    ಕಳೆದ ಏಳು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅಮೆರಿಕ ಇಂತಹ ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಈ ಹಿಂದೆ ಈ ಹಿಂದೆ 2018ರಲ್ಲಿ ಡೊನಾಲ್ಡ್ ಟ್ರಂಪ್ ಅವರ ಅಧಿಕಾರಾವಧಿಯಲ್ಲಿಯೇ 35 ದಿನಗಳ ಕಾಲ ಕೊನೆಯ ಬಾರಿ ಶಟ್‌ಡೌನ್ ಸಂಭವಿಸಿತ್ತು. ಈಗ ಎಷ್ಟು ದಿನ ಈ ಶಟ್‌ಡೌನ್ ಇರಲಿದೆಯೋ ಎಂಬುದು ಯಾರಿಗೂ ಗೊತ್ತಿಲ್ಲ.

    ಅಮೆರಿಕ ಶಟ್‌ಡೌನ್ ಏನೆಲ್ಲಾ ಎಫೆಕ್ಟ್?
    ದೇಶದ ಸುರಕ್ಷತೆ ಸೇರಿ ಕೆಲ ಅಗತ್ಯ ಸೇವೆಗಳು ಮುಂದುವರಿಯಲಿದ್ದು ಕಾನೂನಿನ ಪ್ರಕಾರ, ಅಗತ್ಯ ಸೇವೆಗಳ ನೌಕರರು ಕೆಲಸ ಮಾಡಲೇಬೇಕು. ಆದರೆ ಅವರಿಗೆ ಶಟ್‌ಡೌನ್ ಮುಗಿಯುವವರೆಗೂ ವೇತನ ಸಿಗುವುದಿಲ್ಲ. ಸೇನಾ ಸಿಬ್ಬಂದಿ, ಗಡಿ ಭದ್ರತಾ ಪಡೆ, ಮತ್ತು ಕಾನೂನು ಜಾರಿ ಸಂಸ್ಥೆಗಳು ಕರ್ತವ್ಯದಲ್ಲಿರುತ್ತವೆ.

    ಆಸ್ಪತ್ರೆಗಳಲ್ಲಿನ ವೈದ್ಯಕೀಯ ಆರೈಕೆ ಮತ್ತು ಏರ್ ಟ್ರಾಫಿಕ್ ಕಂಟ್ರೋಲ್ ಮುಂದುವರಿಯುತ್ತದೆ. ಸಾಮಾಜಿಕ ಭದ್ರತೆ ಮತ್ತು ಮೆಡಿಕೇರ್ ಚೆಕ್‌ಗಳನ್ನು ಫಲಾನುಭವಿಗಳಿಗೆ ಕಳುಹಿಸಲಾಗುತ್ತದೆ. ನಾಸಾದ ಬಾಹ್ಯಾಕಾಶ ಯೋಜನೆಗಳು ಮತ್ತು ಅಧ್ಯಕ್ಷ ಟ್ರಂಪ್‌ರ ವಲಸೆ ನೀತಿಗೆ ಸಂಬಂಧಿಸಿದ ಕಾರ್ಯಗಳು ಮುಂದುವರಿಯಲಿವೆ. ಇದನ್ನೂ ಓದಿ:  ವಿದೇಶಿ ಸಿನಿಮಾಗಳ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌

    ಅಗತ್ಯವಲ್ಲದ ಎಂದು ಪರಿಗಣಿಸಲಾದ ಸುಮಾರು 7.50 ಲಕ್ಷ ನೌಕರರನ್ನು ವೇತನರಹಿತ ಕಡ್ಡಾಯ ರಜೆ ಮೇಲೆ ಕಳಿಸಲಾಗುತ್ತದೆ. ಶಿಕ್ಷಣ ಇಲಾಖೆಯ ಶೇ. 90ರಷ್ಟು ಸಿಬ್ಬಂದಿ ರಜೆಯಲ್ಲಿರುತ್ತಾರೆ. ರಾಷ್ಟ್ರೀಯ ಉದ್ಯಾನವನಗಳು, ವಸ್ತುಸಂಗ್ರಹಾಲಯಗಳು ಸಂಪೂರ್ಣವಾಗಿ ಮುಚ್ಚಲ್ಪಡುತ್ತವೆ.

    ಸಣ್ಣ ಉದ್ಯಮಗಳಿಗೆ ನೀಡುವ ಸಾಲ ಸ್ಥಗಿತಗೊಳ್ಳಲಿದೆ. ಆಹಾರ ನೆರವು ಕಾರ್ಯಕ್ರಮಗಳು, ವಿದ್ಯಾರ್ಥಿ ವೇತನ ವಿತರಣೆ, ಮತ್ತು ಆಹಾರ ತಪಾಸಣಾ ಕಾರ್ಯಗಳಿಗೆ ಅಡ್ಡಿಯಾಗಲಿದೆ. ದೇಶದ ಆರ್ಥಿಕತೆಯ ಪ್ರಮುಖ ಸೂಚಕವಾದ ಕಾರ್ಮಿಕ ಇಲಾಖೆಯ ಮಾಸಿಕ ನಿರುದ್ಯೋಗ ವರದಿ ಕೂಡ ಪ್ರಕಟವಾಗುವುದಿಲ್ಲ.

  • ಡೆಮಾಕ್ರಟಿಕ್ ಬೆಂಬಲಿಸಲ್ಲ, ಇನ್ನು ಮುಂದೆ ರಿಪಬ್ಲಿಕ್‌ಗೆ ಮತ ಹಾಕ್ತೀನಿ: ಮಸ್ಕ್

    ಡೆಮಾಕ್ರಟಿಕ್ ಬೆಂಬಲಿಸಲ್ಲ, ಇನ್ನು ಮುಂದೆ ರಿಪಬ್ಲಿಕ್‌ಗೆ ಮತ ಹಾಕ್ತೀನಿ: ಮಸ್ಕ್

    ವಾಷಿಂಗ್ಟನ್: ಇಲ್ಲಿಯವರೆಗೆ ನಾನು ಡೆಮಾಕ್ರಟಿಕ್ ಪರವಾಗಿ ಮತ ಹಾಕುತ್ತಿದ್ದೆ. ಇನ್ನು ಮುಂದೆ ರಿಪಬ್ಲಿಕ್ ಪರವಾಗಿ ಮತ ಹಾಕುತ್ತೇನೆ ಎಂದು ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಹೇಳಿದ್ದಾರೆ.

    ನಾನು ಇನ್ನು ರಿಪಬ್ಲಿಕ್ ಪಕ್ಷಕ್ಕೆ ಮತ ಹಾಕುತ್ತೇನೆ. ಏಕೆಂದರೆ ಅದು ತುಂಬಾ ದಯೆಯುಳ್ಳ ಪಕ್ಷ ಎಂದಿದ್ದಾರೆ. ಮಸ್ಕ್ ಅವರ ಈ ಹೇಳಿಕೆಯಿಂದ ಟೆಸ್ಲಾ ಕಂಪನಿ ಷೇರು ಮೌಲ್ಯ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಶೇ.7.51 ರಷ್ಟು ಇಳಿಕೆಯಾಗಿದೆ. ಇದನ್ನೂ ಓದಿ: ಕೊರೊನಾ ಲಸಿಕೆಯಂತೆ ಗೋಧಿ ರಫ್ತು ಮಾಡಲಾಗುದಿಲ್ಲ: ಭಾರತ

    ಈ ಕುರಿತು ಟ್ವೀಟ್ ಮಾಡಿರುವ ಎಲಾನ್ ಮಸ್ಕ್, ಈ ಹಿಂದೆ ನಾನು ಡೆಮಾಕ್ರಟಿಕ್ ಪಕ್ಷಕ್ಕೆ ಮತ ಹಾಕಿದ್ದೇನೆ. ಆಗ ಅವರು ದಯೆಯುಳ್ಳ ಪಕ್ಷವಾಗಿತ್ತು. ಈಗ ದ್ವೇಷದ ಪಕ್ಷವಾಗಿ ವಿಭಜನೆಯಾಗುತ್ತಿದೆ. ಅವರನ್ನು ಬೆಂಬಲಿಸಲು ಸಾಧ್ಯವಿಲ್ಲ. ಆದ್ದರಿಂದ ರಿಪಬ್ಲಿಕ್‌ಗೆ ಮತ ಹಾಕುತ್ತೇನೆ. ಇನ್ನು ಮುಂದೆ ನನ್ನ ವಿರುದ್ಧ ನಡೆಸುವ ಕ್ಯಾಂಪೇನ್ ತಂತ್ರಗಳು ಹಾಗೂ ರಾಜಕೀಯ ದಾಳಿಗಳನ್ನು ನೋಡಬಹುದು. ಬರುವ ಚುನಾವಣೆಯಲ್ಲಿ ನಾನು ರಿಪಬ್ಲಿಕನ್ನರಿಗೆ ಮತ ಹಾಕುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಫ್ತಿಗೆ ನಿಷೇಧ ಹೇರಿದ ಭಾರತ- ಗೋಧಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ

    ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಟ್ವಿಟ್ಟರ್ ಹೇರಿದ ನಿಷೇಧವನ್ನು ರದ್ದು ಮಾಡುತ್ತೇನೆ. ನಾನು ಮುಕ್ತ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದರು.

  • ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?

    ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?

    ನವದೆಹಲಿ: ದೇಶದ ಹಬ್ಬ ಗಣರಾಜೋತ್ಸವ ಆಚರಣೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ದೆಹಲಿಯ ರಾಜಪಥ್ ರಸ್ತೆ ಶನಿವಾರದ ಕಾರ್ಯಕ್ರಮಕ್ಕೆ ನವವಧುವಿನಂತೆ ಸಿಂಗಾರಗೊಂಡಿದೆ.

    ಬೆಳಗ್ಗೆ ಹತ್ತು ಗಂಟೆಯಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದ್ದು ಅಂತಿಮ ಹಂತದ ಕೆಲಸಗಳು, ಭದ್ರತಾ ತಪಾಸಣೆ ಕಾರ್ಯ ನಡೆಯುತ್ತಿದೆ. ಬೆಳಗ್ಗೆ ಹತ್ತು ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಈ ಬಾರಿಯ ಅತಿಥಿ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸೈರಿಲ್ ರಾಮ್ಫೂಸಾ ಸಮ್ಮುಖದಲ್ಲಿ ಇಂಡಿಯಾ ಗೇಟ್ ನಲ್ಲಿರುವ ಅಮರ್ ಜವಾನ್ ಜ್ಯೋತಿ ಬಳಿ ಹುತ್ಮಾತ ಯೋಧರಿಗೆ ಗೌರವ ವಂದನೆ ಸಲ್ಲಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಧ್ವಜಾರೋಹಣ ಮಾಡಲಿದ್ದಾರೆ.

    ಬೆಳಗ್ಗೆ 10.30ರಿಂದ ಪರೇಡ್ ಗೆ ಅಧಿಕೃತ ಚಾಲನೆ ಸಿಗಲಿದ್ದು, ಮಹಾತ್ಮ ಗಾಂಧಿ 150ನೇ ಜನ್ಮ ದಿನ ಹಿನ್ನೆಲೆಯಲ್ಲಿ ಸ್ತಬ್ಧ ಚಿತ್ರಗಳ ಮೂಲಕ ವಿಶೇಷ ಗೌರವ ಸಲ್ಲಿಸಲು ತಯಾರಿ ನಡೆದಿದೆ. 17 ರಾಜ್ಯಗಳು 6 ಕೇಂದ್ರಾಡಳಿತ ಪ್ರದೇಶಗಳು ಹಾಗೂ ಕೇಂದ್ರ ಸರ್ಕಾರದ ಹಲವು ಸಚಿವಾಲಯದಿಂದ ಗಾಂಧಿಗೆ ಗೌರವ ಸಲ್ಲಿಸಲಾಗುತ್ತಿದೆ. ಇದನ್ನು ಓದಿ: ಫಸ್ಟ್ ಟೈಂ ಆರ್‌ಡಿಯಲ್ಲಿ ಪುರುಷ ದಳವನ್ನು ಮುನ್ನಡೆಸಲಿದ್ದಾರೆ ಮಹಿಳಾ ಅಧಿಕಾರಿ

    ಪ್ರತಿ ವರ್ಷದಂತೆ ಈ ಬಾರಿಯೂ ಗಣರಾಜೋತ್ಸವದ ಮೇಲೆ ಉಗ್ರರ ಕರಿನೆರಳಿದ್ದು ಜೈಶ್ ಈ ಮೊಹ್ಮದ್ ಉಗ್ರ ಸಂಘಟನೆಯ ಶಂಕಿತ ಇಬ್ಬರು ಉಗ್ರರನ್ನು ದೆಹಲಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ರಾಜಪಥ್ ನಿಂದ ಐದು ಕಿಮೀ ವರೆಗೂ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದ್ದು ಪಾಸ್ ಇದ್ದವರು ಮಾತ್ರ ಜನಪಥ್ ರಸ್ತೆ ಪ್ರವೇಶಿಸಬಹುದಾಗಿದೆ. ವೇದಿಕೆ ಸುತ್ತಲೂ ಮೂರು ಬಗೆಯ ಭದ್ರತೆ ಒದಗಿಲಾಗಿದ್ದು ಎಸ್ಪಿಜಿ, ಬ್ಲಾಕ್ ಕ್ಯಾಟ್ ಹಾಗೂ ಕಾರ್ಯಕ್ರಮದಲ್ಲಿ ಭಾಗಿಯಾಗುವ ಗಣ್ಯರಿಗೆ ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ನಿಂದ ಭದ್ರತೆ ನೀಡಲಾಗಿದೆ.

    ಹೇಗೆ ಪರೇಡ್ ಆರಂಭಗೊಳ್ಳುತ್ತದೆ?
    ಶನಿವಾರ ಬೆಳಗ್ಗೆ 9.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿ ಬಳಿ ಆಗಮಿಸಲಿದ್ದಾರೆ. ಬಳಿಕ 9.55ಕ್ಕೆ ಕುದುರೆ ಸಾರೋಟಿನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಆಗಮಿಸಿ ಅಮರ್ ಜವಾನ್ ಜ್ಯೋತಿ ಬಳಿ ಆಗಮಿಸಿ ಯುದ್ಧದಲ್ಲಿ ಹುತ್ಮಾತರಾದ ಸೈನಿಕರಿಗೆ ಗೌರವ ವಂದನೆ ಸಲ್ಲಿಸಲಿದ್ದಾರೆ. ಇದನ್ನು ಓದಿ: ರಾಜಪಥ್ ರಸ್ತೆಯಲ್ಲಿ ಮೊದಲ ಬಾರಿ ಪ್ರತಿಧ್ವನಿಸಲಿದೆ ಕನ್ನಡದ ಹಾಡು

    ರಾಷ್ಟ್ರಪತಿಗಳು 10 ಗಂಟೆಗೆ ಪ್ರಧಾನಿ ಸಮ್ಮುಖದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಈ ವೇಳೆ ದೇಶದ ಭೂ, ವಾಯು ಮತ್ತು ನೌಕದಳದ ಮುಖ್ಯಸ್ಥರು ಉಪಸ್ಥಿತರಿರಲಿದ್ದಾರೆ. 10.30ಕ್ಕೆ ಅಧಿಕೃತವಾಗಿ ಪರೇಡ್‍ಗೆ ಆರಂಭವಾಗುವ ಸಾಧ್ಯತೆಯಿದೆ. ರಾಷ್ಟ್ರಪತಿ ಭವನದಿಂದ ಇಂಡಿಯಾಗೇಟ್ ವರೆಗೆ ಒಟ್ಟು ನಾಲ್ಕು ಕಿಮೀ ದೂರ ಹಾಗೂ ಮೂರು ಗಂಟೆಗಳ ಕಾಲ ಪರೇಡ್ ನಡೆಯಲಿದೆ.

    ವಿಶೇಷವಾಗಿ ಮಹಾತ್ಮ ಗಾಂಧೀಜಿ ಭೇಟಿ ಕೊಟ್ಟ ನೆನಪುಗಳನ್ನು ತೋರಿಸಲು 17 ರಾಜ್ಯಗಳು ಮತ್ತು 6 ಕೇಂದ್ರಾಡಳಿತ ಪ್ರದೇಶ ಗಾಂಧೀಜಿಗೆ ಸಂಬಂಧಿಸಿದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಿದೆ.

    ಪರೇಡ್ ವಿಶೇಷತೆಗಳು: ಭಾರತೀಯ ಸೇನೆಗೆ ಅವಳವಡಿಸಿಕೊಂಡಿರುವ ಅಮೇರಿಕಾದ ಎಂ777 ಎ2 ಆರ್ಟಿಲರಿ ಗನ್ ಈ ಬಾರಿ ಪರೇಡ್ ವಿಶೇಷ ಪ್ರದರ್ಶನವಾಗಿದೆ. ಅಲ್ಲದೇ ದಕ್ಷಿಣ ಕೊರಿಯಾದಿಂದ ಆಮದು ಮಾಡಿಕೊಂಡಿರುವ ಕೆ9 ವಜ್ರಾ ಆರ್ಟಿಲರಿ ಗನ್ ಕೂಡ ಪ್ರದರ್ಶನವಾಗಲಿದೆ. ಇದನ್ನು ಓದಿ: ಮೋದಿ ಜೊತೆ ಗಣರಾಜ್ಯೋತ್ಸವ ವೀಕ್ಷಿಸಲು ಬೆಂಗ್ಳೂರು ವಿದ್ಯಾರ್ಥಿನಿಗೆ ಬಂತು ಆಹ್ವಾನ

    ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆ ಸಿದ್ಧಪಡಿಸಿರುವ ಮಧ್ಯಮ ಶ್ರೇಣಿಯ ಏರ್ ಮಿಸೈಲ್, ಅರ್ಜುನಾ ಟ್ಯಾಂಕ್ ಗಳ ರಕ್ಷಣೆಗೆಂದು ನಿರ್ಮಾಣಗೊಂಡಿರುವ ಅರ್ಮರ್ಡ್ ರಿಕವರಿ ವೆಹಿಕಲ್ (ಶಸ್ತ್ರಸಜ್ಜಿತ ರಕ್ಷಣಾ ವಾಹನ) ಕೂಡಾ ಮೊದಲ ಬಾರಿಗೆ ಪ್ರದರ್ಶನ ಮಾಡಲಾಗುತ್ತಿದೆ. ಬಯೋ ಇಂಧನ ಸಾಮರ್ಥ್ಯದಿಂದ ಮೊದಲ ಬಾರಿಗೆ ಹಾರಾಟ ನಡೆಸಲಿರುವ ಎಎನ್ – 32 ವಿಮಾನ ಪರೇಡಿನ ಮತ್ತೊಂದು ವಿಶೇಷವಾಗಿದೆ.

    ನೇತಾಜಿ ಸುಭಾಸ್ ಚಂದ್ರಬೋಸ್ ಅವರ ಐಎನ್‍ಎ ದಳದಲ್ಲಿದ್ದ ನಾಲ್ವರು ಯೋಧರು ಇದೆ ಮೊದಲ ಬಾರಿಗೆ ಪರೇಡ್ ನಲ್ಲಿ ಭಾಗಿಯಾಗುತ್ತಿದ್ದು, ಭಾರತೀಯ ಸೇನೆಯ ಮೂರು ದಳಗಳಿಗಾಗಿ ಸಿದ್ಧಪಡಿಸಲಾಗಿರುವ ಶಂಖನಾದ ಹೆಸರಿನ ವಿಶೇಷ ಟ್ಯೂನ್ ಈ ವೇಳೆ ಬಳಕೆ ಮಾಡಲಾಗುತ್ತದೆ. ಮೊದಲ ಬಾರಿಗೆ ಮಹಿಳಾ ಶಕ್ತಿಯ ಪ್ರದರ್ಶನ ನಡೆಯಲಿದ್ದು, ಮೇಜರ್ ಕುಸುಬು ಕನ್ವಾಲ್ ನೇತೃತ್ವದಲ್ಲಿ ದೇಶದ ಅತಿ ಪುರಾತನ ಪ್ಯಾರಾಮಿಲಿಟರಿ ಫೋರ್ಸ್ ಅಸ್ಸಾಂ ರೈಫಲ್ಸ್ ಅನ್ನು ಮುನ್ನಡೆಸಲಿದ್ದಾರೆ. ಮೊದಲ ಬಾರಿಗೆ ಮಹಿಳಾ ಅಧಿಕಾರಿಯಾದ ಕ್ಯಾಪ್ಟನ್ ಶಿಖಾ ಸುರಭಿ ಅವರು ಸೇನೆಯ ಡೇರ್ ಡೇವಿಲ್ಸ್ ಮೋಟಾರ್ ಸೈಕಲ್ ತಂಡದಲ್ಲಿ ಪುರುಷ ಸದಸ್ಯರ ಜೊತೆ ಸೇರಿ ಪ್ರದರ್ಶನ ನೀಡಲಿದ್ದಾರೆ. ಇದನ್ನು ಓದಿ: ಪ್ರಧಾನಿ ಮೋದಿ ಆಹ್ವಾನ ಸ್ವೀಕರಿಸಿದ ದಕ್ಷಿಣ ಆಫ್ರಿಕಾ ಅಧ್ಯಕ್ಷ

    ಗಣರಾಜೋತ್ಸವದ ಮುಖ್ಯ ಅತಿಥಿಯಾಗಿ ದಕ್ಷಿಣಾ ಆಫ್ರಿಕಾ ಅಧ್ಯಕ್ಷ ಸೈರಿಲ್ ರಾಮ್ಪೂಸಾ ಆಗಮಿಸಲಿದ್ದು, ನಲ್ಸೇನ್ ಮಂಡೇಲಾ ಬಳಿಕ ದಕ್ಷಿಣ ಆಫ್ರಿಕಾದಿಂದ ಗಣರಾಜೋತ್ಸದಲ್ಲಿ ಭಾಗಿಯಾಗಿರುತ್ತಿರುವ ಎರಡನೇ ಅಧ್ಯಕ್ಷರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv