Tag: Republicday

  • ಕೊಡಗಿನ ಯೋಧ ಅಜ್ಜಮಾಡ ದೇವಯ್ಯ ಸಾಹಸಗಾಥೆಯ ʻಸ್ಕೈ ಫೋರ್ಸ್ʼ ಬಾಲಿವುಡ್ ಸಿನಿಮಾ‌ ಜ.24 ರಂದು ತೆರೆಗೆ

    ಕೊಡಗಿನ ಯೋಧ ಅಜ್ಜಮಾಡ ದೇವಯ್ಯ ಸಾಹಸಗಾಥೆಯ ʻಸ್ಕೈ ಫೋರ್ಸ್ʼ ಬಾಲಿವುಡ್ ಸಿನಿಮಾ‌ ಜ.24 ರಂದು ತೆರೆಗೆ

    ಮಡಿಕೇರಿ: 1965ರಲ್ಲಿ ಭಾರತ-ಪಾಕ್ (Indo – Pak war 1965) ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಪ್ರಾಣತೆತ್ತ ಕೊಡಗಿನ ಯೋಧ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆ ತೆರೆಯಮೇಲೆ ಬರಲು ಸಜ್ಜಾಗಿದೆ. ನೈಜ ಘಟನೆಯನ್ನಾಧರಿಸಿದ ʻಸ್ಕೈ ಫೋರ್ಸ್ʼ (Sky Force) ಬಾಲಿವುಡ್ ಸಿನಿಮಾ ಇದೇ ಜ.24 ರಂದು ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸೈನಿಕರ ತವರು ಜಿಲ್ಲೆ ಕೊಡಗಿನಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

    ಕೊಡಗು ಯೋಧರ (Kodagu Soldier) ಪರಂಪರೆಯ ನಾಡು. ಪ್ರತೀ ಕುಟುಂಬದಲ್ಲಿ ಒಬ್ಬನಾದ್ರೂ ಯೋಧನಾಗಿ ದೇಶ ಸೇವೆ ಮಾಡಬೇಕು ಅನ್ನೋದು ಇಲ್ಲಿನ ಜನರ ಮನೋಭಾವ. ಈ ಪುಣ್ಯ ಭೂಮಿಯಲ್ಲಿ ಹುಟ್ಟಿ ದೇಶಕ್ಕಾಗಿ ಪ್ರಾಣಕೋಡುವ ಯೋಧರು ಕೊಡಗು ಜಿಲ್ಲೆಯಲ್ಲಿ ಇಂದಿಗೂ ಇದ್ದಾರೆ. ಈ ನಡುವೆ 1965ರಲ್ಲಿ ಭಾರತ-ಪಾಕ್ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಬಲಿದಾನಗೈದ ಕೊಡಗಿನ ಯೋಧ ಸ್ಕ್ವಾಡ್ರನ್‌ ಲೀಡರ್‌ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆ ಸಿನಿಮಾ ರೂಪದಲ್ಲಿ ತೆರೆಮೇಲೆ ಬರುತ್ತಿದೆ. ದೇಶಾದ್ಯಂತ ಚಿತ್ರ ಜ.24ರಂದು ರಿಲೀಸ್‌ ಆಗಲಿದೆ.

    ಈ ಚಿತ್ರದಲ್ಲಿ ಪಾಕಿಸ್ತಾನದ ಸರ್ಗೋಧಾ ವಾಯುನೆಲೆ ಮೇಲೆ ಭಾರತೀಯ ವಾಯುಸೇನೆ ವೈಮಾನಿಕ ದಾಳಿ ನಡೆಸಿತು. ಇದು ಭಾರತೀಯ ವಾಯುಪಡೆಯ ಮೊದಲ ಮತ್ತು ಅತ್ಯಂತ ಮಾರಣಾಂತಿಕ ದಾಳಿ ಎಂದು ಪರಿಗಣಿಸಲಾಗಿದೆ. ಚಿತ್ರದಲ್ಲಿ ದೇಶಪ್ರೇಮದ ಜೊತೆಗೆ ಸಾಹಸ ದೃಶ್ಯಗಳಿಗೆ ಆದ್ಯತೆ ನೀಡಲಾಗಿದ್ದು, ಭಾರತೀಯ ವಾಯುಪಡೆಯ ಧೈರ್ಯದ ಪ್ರತೀಕ ಎಂಬಂತೆ ಚಿತ್ರಿಸಲಾಗಿದೆ. 1965ರ ಭಾರತ-ಪಾಕ್ ಯುದ್ಧದಲ್ಲಿ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ ಅವರು ಬದುಕಿ ಹಿಂದಕ್ಕೆ ಬರುವ ಅವಕಾಶಗಳಿತ್ತು. ಆದರೂ ಜೀವದಮೇಲಿನ ಹಂಗು ತೊರೆದು, ಶತ್ರು ರಾಷ್ಟ್ರ ಪಾಕ್‌ನ ಅತ್ಯಾಧುನಿಕ ಯುದ್ಧವಿಮಾನವನ್ನು ಹೊಡೆದುರುಳಿಸಿ ಹುತಾತ್ಮರಾದರು.

    ಈ ಘಟನೆಯು ಹಲವು ವರ್ಷಗಳ ಬಳಿಕ ಪಾಕ್ ಸೇನೆಯ ಅಧಿಕಾರಿಯೊಬ್ಬರನ್ನ ಬಿಬಿಸಿ ಸಂದರ್ಶನ ಮಾಡಿದಾಗ ಬೆಳಕಿಗೆ ಬಂದಿತು. ಶೌರ್ಯ ಮೆರೆದು ಹುತಾತ್ಮರಾದ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ ಅವರಿಗೆ ಮರಣೋತ್ತರವಾಗಿ ಮಹಾವೀರ ಚಕ್ರ ಪುರಸ್ಕಾರ ನೀಡಲಾಯಿತು. ಇವರ ಸಾಹಸಗಾಥೆಯ ನೈಜ ಘಟನೆಯ ಚಿತ್ರವಾಗಿರುವುದರಿಂದ ಜಿಲ್ಲೆಯ ಜನರು ಹರ್ಷ ವ್ಯಕ್ತ ಪಡಿಸುತ್ತಿದ್ದಾರೆ.

    ಅಜ್ಜಮಾಡ ಬಿ.ದೇವಯ್ಯ ಅವರ ಜೀವನಾಧರಿತ ಪುಸ್ತಕ ʻ1965ರ ಯುದ್ಧ ಹಾಗೂ ಮಹಾವೀರʼ ಆಧರಿಸಿ ʻಸ್ಕೈ ಫೋರ್ಸ್‌ʼ ಚಿತ್ರ ನಿರ್ಮಿಸಲಾಗಿದೆ. ಮ್ಯಾಡಾಕ್ ಫಿಲ್ಕ್ ಮತ್ತು ಜಿಯೋ ಸ್ಟುಡಿಯೋಸ್ ಬ್ಯಾನ‌ರ್ ಅಡಿಯಲ್ಲಿ ದಿನೇಶ್ ವಿಜನ್, ಅಮರ್ ಕೌಶಿಕ್ ಹಾಗೂ ಜ್ಯೋತಿ ದೇಶಪಾಂಡೆ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ಸಂದೀಪ್‌ ಕೇವಾಲಾನಿ ಹಾಗೂ ಅಭಿಷೇಕ್ ಅನಿಲ್ ಕಪೂರ್ ಜಂಟಿಯಾಗಿ ಸಿನಿಮಾ ನಿರ್ದೇಶಿಸಿದ್ದಾರೆ. ಅಕ್ಷಯ್ ಕುಮಾರ್ (Akshay Kumar) ಹಾಗೂ ವೀರ್ ಪಹಾಡಿಯಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸಾರಾ ಅಲಿ ಖಾನ್, ನಿಮ್ರತ್‌ ಕೌರ್ ಮತ್ತು ಶರದ್ ಕೇಳ್ಳ‌ರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಕನ್ನಡದ ಸೂಪರ್ ಹಿಟ್‌ ಚಿತ್ರ ʻಮುತ್ತಿನಹಾರʼ ನೋಡಿ ರಾಜ್ಯದ ನಾನಾ ಭಾಗದ ನೂರಾರು ಯುವಕರು ಸೈನ್ಯಕ್ಕೆ ಸೇರಲು ಮುಂದಾಗಿದ್ರು.

  • ನಾನು ಯಾರ ಸಂಪರ್ಕದಲ್ಲೂ ಇಲ್ಲ, ಬಿಜೆಪಿ ಸಂಪರ್ಕದಲ್ಲಿದ್ದೇನೆ: ಎಂಟಿಬಿ ನಾಗರಾಜ್

    ನಾನು ಯಾರ ಸಂಪರ್ಕದಲ್ಲೂ ಇಲ್ಲ, ಬಿಜೆಪಿ ಸಂಪರ್ಕದಲ್ಲಿದ್ದೇನೆ: ಎಂಟಿಬಿ ನಾಗರಾಜ್

    ಚಿಕ್ಕಬಳ್ಳಾಪುರ: ನಾನು ಯಾರ ಸಂಪರ್ಕದಲ್ಲೂ ಇಲ್ಲ. ನಾನು ಬಿಜೆಪಿಯವರ ಸಂಪರ್ಕದಲ್ಲಿದ್ದೇನೆ ಎಂದು ಬಿಜೆಪಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

    73 ನೇ ಗಣರಾಜೋತ್ಸವದ ಅಂಗವಾಗಿ ಚಿಕ್ಕಬಳ್ಳಾಪುರ ನಗರದ ಸರ್ ಎಂ.ವಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಂಭ್ರಮದಲ್ಲಿ ನೂತನ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಧ್ವಜಾರೋಹಣ ನೇವೇರಿಸಿದರು. ಇದನ್ನೂ ಓದಿ: ಕೊರೊನಾ ನಿಯಂತ್ರಣದಲ್ಲಿ ಸರ್ಕಾರದಿಂದ ಅತ್ಯುತ್ತಮ ಸಾಧನೆ: ಗೆಹ್ಲೋಟ್

    MTB Nagaraj

    ತದನಂತರ ಮಾತನಾಡಿದ ಅವರು, ಸಿಎಂ ಹಾಗೂ ಕೇಂದ್ರದ ವರಿಷ್ಠರ ಸೂಚನೆಯಂತೆ ಜಿಲ್ಲಾ ಉಸ್ತುವಾರಿಗಳ ಬದಲಾವಣೆ ಮಾಡಲಾಗಿದೆ. ತವರು ಜಿಲ್ಲೆಯ ಸಚಿವರಿಗೆ ಆಯಾ ಜಿಲ್ಲೆಯ ಉಸ್ತುವಾರಿ ಕೊಟ್ಟಿಲ್ಲ. ನಾನು ಸಹ ಸಂತೋಷದಿಂದಲೇ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸ್ಥಾನ ಒಪ್ಪಿಕೊಂಡಿದ್ದೇನೆ. ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯ ಹೇಳುವ ಹಾಗೆ ನಾನು ಯಾರ ಸಂಪರ್ಕದಲ್ಲೂ ಇಲ್ಲ. ನಾನು ಬಿಜೆಪಿಯವರ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.

    MTB Nagaraj

    ಡಿ.ಕೆ. ಶಿವಕುಮಾರ್ ಎದುರಿಗೆ ಸಿಕ್ಕಾಗ ಕೈ ಕುಲುಕತ್ತೇವೆ. ಸಿದ್ದರಾಮಯ್ಯ ವರ್ಗಾವಣೆ ಇದ್ದಾಗ ಕೆರೆ ಮಾಡಿ ಮಾತನಾಡುತ್ತಾರೆ. ರಾಜಕಾರಣವೇ ಬೇರೆ ಸ್ನೇಹ ಸಂಬಂಧವೇ ಬೇರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಜೈ ಹಿಂದ್ – ಗಣರಾಜ್ಯೋತ್ಸವಕ್ಕೆ ಶುಭಕೋರಿದ ಪ್ರಧಾನಿ ಮೋದಿ