Tag: Reserve Forest

  • ಮೀಸಲು ಅರಣ್ಯದಲ್ಲಿ 60ಕ್ಕೂ ಹೆಚ್ಚು ಫೈರಿಂಗ್ ಕಾಟ್ರೇಜ್ ಪತ್ತೆ, ತನಿಖೆಗೆ ಇಳಿದ ಅರಣ್ಯ ಇಲಾಖೆ

    ಮೀಸಲು ಅರಣ್ಯದಲ್ಲಿ 60ಕ್ಕೂ ಹೆಚ್ಚು ಫೈರಿಂಗ್ ಕಾಟ್ರೇಜ್ ಪತ್ತೆ, ತನಿಖೆಗೆ ಇಳಿದ ಅರಣ್ಯ ಇಲಾಖೆ

    ಚಿಕ್ಕಮಗಳೂರು: ಸುಮಾರು 60ಕ್ಕೂ ಹೆಚ್ಚು ಬಂದೂಕಿನ (Gun) ಖಾಲಿ ಕಾಟ್ರೇಜ್‍ಗಳು ಮೂಡಿಗೆರೆ (Mudigere) ತಾಲೂಕಿನ ಸಾರಗೋಡು-ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ (Reserve Forest) ಪತ್ತೆಯಾಗಿವೆ.

    ವಗೇರ್‌ನಿಂದ ಕನ್ನಹಳ್ಳಿಗೆ ಸಂಪರ್ಕ ಕಲ್ಪಿಸುವ ಅರಣ್ಯ ಪ್ರದೇಶದ ರಸ್ತೆಯಲ್ಲಿ ಕಾಟ್ರೇಜ್‍ಗಳು ಕಂಡು ಬಂದಿವೆ. ಮಲೆನಾಡಿನ ಕಾಫಿ ಬೆಳೆಗಾರರು ಕಾಡುಪ್ರಾಣಿಗಳು ಹಾಗೂ ಕಳ್ಳರಿಂದ ಬೆಳೆ ಹಾಗೂ ಆತ್ಮರಕ್ಷಣೆಗೆ ಅಕ್ರಮ-ಸಕ್ರಮವಾಗಿ ಬಂದೂಕಗಳನ್ನ ಮನೆಯಲ್ಲಿ ಇಟ್ಟುಕೊಂಡಿರುತ್ತಾರೆ. ಬಂದೂಕುಗಳನ್ನ ಪ್ರಾಣಿ ಬೇಟೆಗೂ ಬಳಸುತ್ತಾರೆ. ಆದರೆ ಮೀಸಲು ಅರಣ್ಯ ಪ್ರದೇಶದಲ್ಲಿ ಈ ಪ್ರಮಾಣದ ಕಾಟ್ರೇಜ್‍ಗಳು (Cartridge) ಪತ್ತೆಯಾಗಿದ್ದು, ಬೇಟೆಗೆ ಬಳಕೆಯಾಗಿರುವ ಶಂಕೆ ಮೂಡಿದೆ. ಇದನ್ನೂ ಓದಿ:  ಮಾ.9ರ ಕರ್ನಾಟಕ ಬಂದ್‌ ವಾಪಸ್ ಪಡೆದ ಕಾಂಗ್ರೆಸ್

    CRIME 2

    ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯ ಇಲಾಖೆ ಅಧಿಕಾರಿಗಳು (Forest Department) ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಇಷ್ಟೊಂದು ಪ್ರಮಾಣದ ಕಾಟ್ರೇಜ್‍ಗಳು ಇಲ್ಲಿಗೆ ಹೇಗೆ ಬಂತು. ಯಾರು ತಂದು ಹಾಕಿದ್ದು. ಬೇರೆ ಕಡೆ ಬಳಸಿ ಇಲ್ಲಿಗೆ ತಂದು ಎಸೆದಿದ್ದಾರಾ ಅಥವಾ ಇಲ್ಲಿಯೇ ಬಳಕೆ ಮಾಡಿದ್ದಾ? ಏಕೆ ಬಳಸಿದ್ದಾರೆ ಎಂಬೆಲ್ಲಾ ದೃಷ್ಠಿಕೋನದಲ್ಲಿ ತನಿಖೆ ಕೈಗೊಂಡಿದ್ದಾರೆ.

    ಮಲೆನಾಡಲ್ಲಿ 12 ಸಾವಿರಕ್ಕೂ ಅಧಿಕ ಸಕ್ರಮ ಬಂದೂಕಗಳಿದ್ರೆ, ಅದರ ಅರ್ಧದಷ್ಟು ಅಕ್ರಮ ಬಂದೂಕುಗಳು ಇವೆ ಎಂಬ ಮಾಹಿತಿ ಇದೆ. ಆದ್ರೆ ಬಂದೂಕುಗಳು ಬೆಳೆ-ಪ್ರಾಣ ಉಳಿಸಿಕೊಳ್ಳುವುದರ ಜೊತೆ ಶಿಕಾರಿ ಹಾಗೂ ಸಮಾಜದಲ್ಲಿ ವೈಯಕ್ತಿಕ ದ್ವೇಷ ತೀರಿಸಿಕೊಳ್ಳಲು ಬಳಕೆಯಾಗಿದ್ದೂ ಇದೆ. ಆದರೆ ಅರಣ್ಯ ಪ್ರದೇಶದಲ್ಲಿ ಇಷ್ಟೊಂದು ಕಾಟ್ರೇಜ್‍ಗಳು ಪತ್ತೆಯಾಗಿರೋದು ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಸಿಂಗಾಪುರದಲ್ಲಿ ಮಹಿಳೆಯರಿಗೆ ಕಿರುಕುಳ ಆರೋಪ- ಭಾರತ ಮೂಲದ ಯೋಗಾ ಶಿಕ್ಷಕನ ವಿಚಾರಣೆ

  • ಮೀಸಲು ಅರಣ್ಯದಲ್ಲಿನ ಮಂಗಗಳಿಗೆ ಆಹಾರ ಹಾಕಿದ್ರೆ ಬೀಳುತ್ತೆ ಕೇಸ್

    ಮೀಸಲು ಅರಣ್ಯದಲ್ಲಿನ ಮಂಗಗಳಿಗೆ ಆಹಾರ ಹಾಕಿದ್ರೆ ಬೀಳುತ್ತೆ ಕೇಸ್

    ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಕೊಂಚಾವರಂ ಅರಣ್ಯ ಪ್ರದೇಶಕ್ಕೆ ಭೇಟಿ ಕೊಟ್ಟರೆ ಅಲ್ಲಿನ ಮಂಗಗಳಿಗೆ ಎಲ್ಲರು ಹಣ್ಣುಗಳನ್ನು ಹಾಕುತ್ತಾರೆ. ಆದರೆ ಇನ್ಮುಂದೆ ಹೀಗೆ ಮಂಗಗಳಿಗೆ ಹಣ್ಣು ಹಾಕಿದರೆ ಅರಣ್ಯ ಇಲಾಖೆ ಅಧಿಕಾರಿಗಳು ಕೇಸ್ ಹಾಕಲು ಮುಂದಾಗಿದ್ದಾರೆ.

    ಇತ್ತೀಚೆಗೆ ಹಸಿದ ಮಂಗಗಳಿಗೆ ಆರ್.ಟಿ.ಐ ಕಾರ್ಯಕರ್ತ ಸಿದ್ದರಾಮಯ್ಯ ಹೀರೆಮಠ ಬಾಳೆಹಣ್ಣು ನೀಡಿದ ವಿಡಿಯೋ ವಿವಾದಕ್ಕೆ ಕಾರಣವಾಗಿತ್ತು. ವನ್ಯಜೀವು ಕಾಯ್ದೆ ಪ್ರಕಾರ ಕೊಂಚಾವರಂ ಮೀಸಲು ಅರಣ್ಯ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ನುಗ್ಗಿ, ಪ್ರಾಣಿಗಳಿಗೆ ಆಹಾರ ನೀಡುವ ಮೂಲಕ ಅವುಗಳ ಸಾವಿಗೆ ಕಾರಣವಾಗಿದ್ದಾರೆ ಎಂದು ತಿಪ್ಪಣ್ಣಪ್ಪ ಹಾಗೂ ಪ್ರವೀಣ ಜಿಲ್ಲೆಯ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

    ಈ ದೂರಿನ ಆಧಾರದ ಮೇಲೆ ವನ್ಯಜೀವು ಸಂರಕ್ಷಣಾ ಕಾಯ್ದೆ 1972, ಸೆಕ್ಷನ್ 27 ಮತ್ತು 51ರ ಅಡಿ ಚಿಂಚೋಳಿ ತಾಲೂಕಿನ ಶಾದಿಪುರ ಶಾಖೆಯ ವನ್ಯಜೀವಿ ವಲಯದ ಚಿಂಚೋಳಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ತಮ್ಮ ಫೇಸ್ ಬುಕ್‍ನಲ್ಲಿ ಸ್ಪಷ್ಟನೆ ನೀಡಿರುವ ಆರ್.ಟಿ.ಐ ಕಾರ್ಯಕರ್ತ ಸಿದ್ದರಾಮಯ್ಯ, ಇದು ದುರುದ್ದೇಶದಿಂದ ನನ್ನ ಮೇಲೆ ಹಾಕಲಾಗಿರುವ ಪ್ರಕರಣವಾಗಿದೆ. ಒಂದು ವೇಳೆ ಅರಣ್ಯಾಧಿಕಾರಿಗಳು ಇದರ ಬಗ್ಗೆ ನೋಟಿಸ್ ನೀಡಿದರೆ ಹಾಜರಾಗಿ ಸ್ಪಷ್ಟನೆ ನೀಡುವುದಾಗಿ ಹೇಳಿದ್ದಾರೆ.

  • ಹೆಸರಿಗಷ್ಟೇ ‘ರಿಸರ್ವ್ ಫಾರೆಸ್ಟ್’-ಒಳಗಡೆ ಲವರ್ಸ್ ಗಳ ಆಟ ತುಂಟಾಟ, ಪುಂಡರ ಪಾರ್ಟಿ ಬಲು ಜೋರು

    ಹೆಸರಿಗಷ್ಟೇ ‘ರಿಸರ್ವ್ ಫಾರೆಸ್ಟ್’-ಒಳಗಡೆ ಲವರ್ಸ್ ಗಳ ಆಟ ತುಂಟಾಟ, ಪುಂಡರ ಪಾರ್ಟಿ ಬಲು ಜೋರು

    ಬೆಂಗಳೂರು: ‘ರಿಸರ್ವ್ ಫಾರೆಸ್ಟ್’ (ರಕ್ಷಿತ ಅರಣ್ಯ ಪ್ರದೇಶ) ಅಂದರೆ ಕಾಡಿನೊಳಗೆ ಯಾರೂ ಪ್ರವೇಶಿಸುವಂತಿಲ್ಲ. ಆದರೆ ಇದು ಹೆಸರಿಗಷ್ಟೇ ರಿಸರ್ವ್ ಫಾರೆಸ್ಟ್. ಇಲ್ಲಿ ಎಲ್ಲಿ ಬೇಕಾದ್ರೂ ರಾಜಾರೋಷವಾಗಿ ಓಡಾಡಬಹುದು. ಕೆರೆ ಹಾಳು ಮಾಡಿದ ಬೆಂಗಳೂರು ಮಂದಿ, ಈಗ ಕಾಡು ಹಾಳು ಮಾಡಲು ಹೊರಟಿದ್ದಾರೆ.

    ಇದು ಬೆಂಗಳೂರಿನ ಹೆಸರಘಟ್ಟ ರಕ್ಷಿತಾರಣ್ಯ ಪ್ರದೇಶ. ಆದ್ರೆ ಈ ಕಾಡಿನೊಳಕ್ಕೆ ನೀವು ಆರಾಮಾಗಿ ಎಂಟ್ರಿ ಕೊಟ್ಟು ಎಲ್ಲಿ ಬೇಕಾದ್ರು ಓಡಾಡಿ ಬರಬಹುದು. ಅಷ್ಟೇ ಯಾಕೆ ಇಲ್ಲೇ ನೈಟ್ ಕ್ಯಾಂಪ್ ಹಾಕಿ ಪಾರ್ಟಿ ಕೂಡ ಮಾಡಬಹುದು. ಇಲ್ಲಿ ಯಾರೂ ಹೇಳೋರು ಇಲ್ಲ ಕೇಳೋರು ಇಲ್ಲ. ಅದಕ್ಕೆ ಸಾಕ್ಷಿ ಎಂಬಂತೆ ಯಾರ ಭಯವಿಲ್ಲದೇ ಪ್ರೇಮಿಗಳು ಓಡಾಡುತ್ತಾರೆ. ಎಲ್ಲೆಂದರಲ್ಲಿ ಪಾರ್ಟಿ ಮಾಡಿ ಎಣ್ಣೆ ಬಾಟಲ್ ಗಳನ್ನ ಎಸೆದು ಹೋಗಿದ್ದಾರೆ. ನವಿಲುಗಳು ಹೆಚ್ಚಾಗಿರುವ ಈ ಪ್ರದೇಶವನ್ನ ನವಿಲು ರಕ್ಷಿತಾರಣ್ಯ ಪ್ರದೇಶ ಅಂತ ಘೋಷಿಸಲಾಗಿದೆ. ಇಲ್ಲಿ ನಡೆಯುತ್ತೀರುವ ಈ ಅಕ್ರಮ ಚಟುವಟಿಕೆಗಳಿಂದಾಗಿ ನವಿಲುಗಳ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಿದೆ. ಇಷ್ಟೆಲ್ಲಾ ಆಗ್ತಿದ್ರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ.

    ಹೆಸರಘಟ್ಟ ರಕ್ಷಿತಾರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಹೆಸರಘಟ್ಟ ಕೆರೆ ಇದೆ. ಹಾಗೆ ಪಕ್ಕಕ್ಕೆ ಕಣ್ಣುಹಾಯಿಸಿದ್ರೆ ಇಲ್ಲಿ ಪ್ರವೇಶ ಮಾಡುವುದು, ಕೆರೆಯಲ್ಲಿ ಬಟ್ಟೆ ಒಗೆಯುವುದು, ಮೀನು ಹಿಡಿಯುವುದು ನಿಷೇಧಿಸಲಾಗಿದೆ, ನಿಯಮ ಮೀರಿದ್ರೆ ಶಿಕ್ಷೆಗೆ ಗುರಿ ಪಡಿಸಲಾಗುತ್ತೆ ಅಂತ ಬರೆದಿರುವ ಬೋರ್ಡ್ ಹಾಕಲಾಗಿದೆ. ಎಲ್ಲ ನಿಬಂಧನೆಗಳು ಕೇವಲ ಬೋರ್ಡ್ ಗಷ್ಟೇ ಸೀಮಿತವಾಗಿದ್ದು ಇಲ್ಲಿ ರಾಜಾರೋಷವಾಗಿ ಮೀನು ಹಿಡಿಯುತ್ತಾರೆ, ಜಲಮಂಡಳಿಯಾಗಲೀ, ಅರಣ್ಯ ಇಲಾಖೆಯವರಾಗಲೀ ತಡೆಯೋ ಗೋಜಿಗೇ ಹೋಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಕೆರೆಯಲ್ಲಿ ಇಷ್ಟೆಲ್ಲಾ ಅಕ್ರಮ ಚಟುವಟಿಗೆಗಳು ನಡೆಯುತ್ತಿರುವುದರಿಂದ ವಿದೇಶದಿಂದ ಈ ಕೆರೆಗೆ ಬರುತ್ತಿದ್ದ ಪಕ್ಷಿಗಳ ಸಂಖ್ಯೆ ಸಹ ಕಡಿಮೆಯಾಗುತ್ತಿದೆ. ಬೆಂಗಳೂರು ಮಂದಿಯ ಮೂಜು ಮಸ್ತಿಯಿಂದಾಗಿ ನವಿಲುಗಳ ಅಸ್ತಿತ್ವಕ್ಕೂ ಧಕ್ಕೆಯಾಗ್ತಿದೆ. ಈಗಲೂ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳದಿದ್ರೆ ಮುಂದಿನ ದಿನ ರಕ್ಷಿತಾರಣ್ಯದ ಜೊತೆ ಕೆರೆಯೂ ನಾಶವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv