Tag: Reservoir

  • ಜಲಾಶಯ ನೋಡಲು ಗೆಳೆಯನೊಂದಿಗೆ ಬಂದಿದ್ದ ವಿದ್ಯಾರ್ಥಿನಿ ಅಪಘಾತಕ್ಕೆ ಬಲಿ

    ಜಲಾಶಯ ನೋಡಲು ಗೆಳೆಯನೊಂದಿಗೆ ಬಂದಿದ್ದ ವಿದ್ಯಾರ್ಥಿನಿ ಅಪಘಾತಕ್ಕೆ ಬಲಿ

    ಚಿಕ್ಕಬಳ್ಳಾಪುರ: ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯ ನೋಡಲು ಬೆಂಗಳೂರಿನಿಂದ ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬಳು (Student) ಅಪಘಾತಕ್ಕೆ (Accident) ಬಲಿಯಾಗಿರುವ ರ್ದುಘಟನೆ ಚಿಕ್ಕಬಳ್ಳಾಪುರ (Chikkaballapura) ನಗರದ ವಾಪಸಂದ್ರ ಸೇತುವೆಯ ಕೆಳ ಭಾಗದಲ್ಲಿ ನಡೆದಿದೆ.

    ಬೆಂಗಳೂರಿನ ಶೇಷಾದ್ರಿಪುರಂ ಕಾಂಪೋಸಿಟ್ ಕಾಲೇಜಿನ (Seshadripuram College) ಪ್ರಥಮ ವರ್ಷದ ಬಿಕಾಂ (B’com Student) ವಿದ್ಯಾರ್ಥಿನಿ ಚೈತ್ರಾ (18) (Chitra) ಮೃತ ದುರ್ದೈವಿ. ಅಂದಹಾಗೆ ಎಂಇಎಸ್ ಕಾಲೇಜಿನ(MES Collage) ತನ್ನ ಸ್ನೇಹಿತ ಲಿಖಿತ್ ಗೌಡನೊಂದಿಗೆ ಹೊಂಡಾ ಆಕ್ಸೆಸ್ ಗಾಡಿಯೊಂದಿಗೆ ಆಗಮಿಸಿದ್ದ ಚೈತ್ರಾ, ಶ್ರೀನಿವಾಸ ಸಾಗರ ಜಲಾಶಯ (Srinivasa Sagara Dam) ನೋಡಿಕೊಂಡು ಬೆಂಗಳೂರಿನತ್ತ ವಾಪಾಸ್ಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ತಿಂಗಳಾದ್ರೂ ಶಾಲಾ ಆವರಣದ ನೀರು ಹೊರಹಾಕದೇ ನಿರ್ಲಕ್ಷ್ಯ- ಇದು ಹೆಚ್‍ಡಿಕೆ ಸ್ವಕ್ಷೇತ್ರದ ದುಸ್ಥಿತಿ

     

    ಚಿಕ್ಕಬಳ್ಳಾಪುರ ನಗರದ ಮೂಲಕ ವಾಪಸಂದ್ರದ ಸೇತುವೆ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ (National Highway) ಕಡೆ ಬರುವಾಗ ಬಾಗೇಪಲ್ಲಿ (Bagepalli) ಕಡೆಯಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ (Tipper Lorry) ಆಕ್ಸೆಸ್ ಗಾಡಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಕ್ಸೆಸ್ ಚಾಲನೆ ಮಾಡುತ್ತಿದ್ದ ಲಿಖಿತ್ ಗೌಡನ ಕಾಲಿಗೆ ಗಾಯವಾಗಿ ಕೆಳಗೆ ಬಿದ್ದಿದ್ದಾನೆ. ಮತ್ತೊಂದೆಡೆ ರಸ್ತೆಯಲ್ಲಿ ಬಿದ್ದ ಚೈತ್ರಾ ಮೇಲೆ ಟಿಪ್ಪರ್ ಲಾರಿ ಹರಿದಿದೆ. ಟಿಪ್ಪರ್ ಹರಿದ ಪರಿಣಾಮ ಚೈತ್ರಾ ದೇಹ ನಜ್ಜುಗುಜ್ಜಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

    ಕಾಲಿಗೆ ಗಾಯವಾಗಿರುವ ಕಾರಣ ಲಿಖಿತ್ ಗೌಡನನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚೈತ್ರಾ ಬೆಂಗಳೂರಿನ ಕೆ.ಆರ್. ಪುರಂ (K.R. Puram) ನಿವಾಸಿ ಅಂತ ತಿಳಿದುಬಂದಿದ್ದು, ಲಿಖಿತ್ ಗೌಡ ಮಲ್ಲೇಶ್ವರಂನ(Malleshwaram) ಎಂಇಎಸ್ ಕಾಲೇಜು ವಿದ್ಯಾರ್ಥಿಯಾಗಿದ್ದು, ಪ್ಯಾಲೇಸ್ ಗುಟ್ಟಹಳ್ಳಿಯ ನಿವಾಸಿಯಾಗಿದ್ದಾನೆ. ಘಟನೆ ನಂತರ ಟಿಪ್ಪರ್ ಸ್ಥಳದಲ್ಲೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಯೋಗಿ ಮಾದರಿ ಆಡಳಿತ ಬೇಕು ಎಂದು ಪ್ರತಿಪಾದಿಸುವವರು ಅತ್ಯಾಚಾರಿಗಳ ಸಮರ್ಥಕರಿದ್ದಂತೆ: ದಿನೇಶ್ ಗುಂಡೂರಾವ್

    Live Tv
    [brid partner=56869869 player=32851 video=960834 autoplay=true]

  • ಶ್ರೀನಿವಾಸ ಸಾಗರ ಜಲಾಶಯದ ಬಳಿ ನೀರಿನಲ್ಲಿ ಮುಳುಗಿ ಇಬ್ಬರ ಸಾವು

    ಶ್ರೀನಿವಾಸ ಸಾಗರ ಜಲಾಶಯದ ಬಳಿ ನೀರಿನಲ್ಲಿ ಮುಳುಗಿ ಇಬ್ಬರ ಸಾವು

    ಚಿಕ್ಕಬಳ್ಳಾಪುರ: ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದ ಬಳಿ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ.

    ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜಿನ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಚ್ಚಿದಾನಂದ ಹಾಗೂ ಗೌರಿಬಿದನೂರು ತಾಲೂಕು ರಾಮಚಂದ್ರಪುರ ಗ್ರಾಮದ ನರೇಶ್ ಬಾಬು ಮೃತ ಯುವಕರು. ಇದನ್ನೂ ಓದಿ: ಜನಸ್ಪಂದನಕ್ಕೆ ಕರಾಳೋತ್ಸವದ ಬಿಸಿ – ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

    2ನೇ ಶನಿವಾರದ ಹಿನ್ನೆಲೆ ಮೆಡಿಕಲ್ ಕಾಲೇಜಿಗೆ ರಜೆ ಇದ್ದುದರಿಂದ ಸಚ್ಚಿದಾನಂದ ತನ್ನ 4 ಮಂದಿ ಸ್ನೇಹಿತರೊಂದಿಗೆ ಆಟೋ ಮೂಲಕ ಶ್ರೀನಿವಾಸ ಸಾಗರ ಜಲಾಶಯಕ್ಕೆ ತೆರಳಿದ್ದ. ಈ ವೇಳೆ ಸಚ್ಚಿದಾನಂದ ಜಲಾಶಯದ ಮುಂಭಾಗದ ಬಳಿ ಇರುವ ಹೊಂಡದಲ್ಲಿ ಈಜಲು ಹೋಗಿ, ನೀರಿನಲ್ಲಿ ಮುಳುಗಿದ್ದಾನೆ. ಸಚ್ಚಿದಾನಂದನ ರಕ್ಷಣೆಗೆ ಹೋಗಿದ್ದ ನರೇಶ್ ಬಾಬು ಕೂಡಾ ಸಚ್ಚಿದಾನಂದನ ಜೊತೆಯಲ್ಲೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದ ವೃದ್ಧ ಹೃದಯಾಘಾತದಿಂದ ಸಾವು

    ಜನ ನೋಡ ನೋಡುತ್ತಿದ್ದಂತೆಯೇ ಇಬ್ಬರು ನೀರಿನಲ್ಲಿ ಮುಳುಗಿ ಹೋಗಿದ್ದಾರೆ. ವಿಷಯ ತಿಳಿದು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಇಬ್ಬರ ಮೃತ ದೇಹಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಸ್ಕಿ ಮಾರಲದಿನ್ನಿ ಜಲಾಶಯಕ್ಕೆ ವಲಸೆ ಬಂದ ವಿದೇಶಿ ಪಕ್ಷಿಗಳು

    ಮಸ್ಕಿ ಮಾರಲದಿನ್ನಿ ಜಲಾಶಯಕ್ಕೆ ವಲಸೆ ಬಂದ ವಿದೇಶಿ ಪಕ್ಷಿಗಳು

    ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಮಾರಲದಿನ್ನಿ ಜಲಾಶಯಕ್ಕೆ ಆಹಾರ ಅರಸಿ ವಿದೇಶಿ ಪಕ್ಷಿಗಳು ಸಾವಿರಾರು ಸಂಖ್ಯೆಯಲ್ಲಿ ವಲಸೆ ಬಂದಿವೆ.

    20 ರಿಂದ 25 ಜಾತಿಯ ಪಕ್ಷಿಗಳು ಜಲಾಶಯದ ಹಿನ್ನಿರಿನಲ್ಲಿ ಕಲರವ ಸೃಷ್ಟಿಸಿವೆ. ಪ್ರತಿವರ್ಷ ಈ ವೇಳೆಯಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಗಡಿ ಕೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಈ ಪಕ್ಷಿಗಳು ಈ ವರ್ಷ ರಾಯಚೂರಿನಲ್ಲಿ ಪ್ರತ್ಯಕ್ಷವಾಗಿವೆ.

    Foreign Birds

    ಏಷಿಯನ್ ಓಪನ್ ಬಿಲ್, ಶೆಲ್‍ಡಕ್, ಬ್ಲಾಕ್ ವಿಂಗೆಡ್, ಸ್ತಿಲ್ಟ್ ಬ್ಲಾಕ್, ಸ್ಟಾರ್ಟ್ ಜಾತಿಯ ಪಕ್ಷಿಗಳು ಇಲ್ಲಿ ಕಾಣಸಿಗುತ್ತವೆ. ಮುಂಗೋಲಿಯಾ, ಟಿಬೆಟ್, ಚೀನಾ ಮೂಲದ ಪಕ್ಷಿಗಳು ಬೇಸಿಗೆ ಸಮಯದಲ್ಲಿ ಭಾರತಕ್ಕೆ ವಲಸೆ ಬರುತ್ತವೆ. ಇದರಲ್ಲಿ ಬಾರ್ ಹೆಡೆಡ್ ಗೂಸ್ ಪಕ್ಷಿ 20 ಸಾವಿರ ಅಡಿ ಎತ್ತರದಲ್ಲಿ ಹಾರಬಲ್ಲ ವಿಶಿಷ್ಟ ಜಾತಿಯ ಪಕ್ಷಿಯಾಗಿದೆ. ಇದನ್ನೂ ಓದಿ: ಬೈಕ್ ಅಪಘಾತ – ಟಿಎಂಸಿ ನಾಯಕ ಮದನ್ ಮಿತ್ರಾಗೆ ಗಾಯ

    ಮಾರ್ಚ್ ಅಂತ್ಯದವರೆಗೆ ಇಲ್ಲೇ ಇರುವ ಈ ಪಕ್ಷಿಗಳು ಆಹಾರಕ್ಕಾಗಿ 20 ಕಿ.ಮೀವರೆಗೆ ಹಾರಿ ಶೇಂಗಾ, ಕಡಲೆ, ಅಲಸಂದೆ ಹಾಗೂ ಕೆರೆ ಕುಂಟೆಗಳಲ್ಲಿ ಹುಲ್ಲಿನ ಚಿಗುರು ತಿನ್ನುತ್ತವೆ. ಸಾವಿರಾರು ಸಂಖ್ಯೆಯಲ್ಲಿ ಪಕ್ಷಿಗಳು ವಲಸೆ ಬಂದಿರುವುದು ನೋಡುಗರ ಕಣ್ಮನ ಸೆಳೆಯುತ್ತಿವೆ. ಇದನ್ನೂ ಓದಿ: IPS ರವಿ ಚೆನ್ನಣ್ಣವರ್ ವರ್ಗ ಆದೇಶಕ್ಕೆ ಬ್ರೇಕ್

  • ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ಜಲಾಶಯದ ನೀರು- ಆತಂಕದಲ್ಲಿ ಜನ

    ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ಜಲಾಶಯದ ನೀರು- ಆತಂಕದಲ್ಲಿ ಜನ

    ವಿಜಯನಗರ: ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಕಳೆದ ಮೂರು ವರ್ಷಗಳಿಂದ ಉತ್ತಮ ಮಳೆಯಾಗಿದ್ದು, ಈ ವರ್ಷವೂ ತುಂಗಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದೆ. ಜಲಾಶಯ ಭರ್ತಿಯಾದ ಕೇವಲ ಒಂದೇ ತಿಂಗಳಲ್ಲಿ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

    ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಗುಂಡಾ ಸಸ್ಯಧಾಮದ ಬಳಿ ನೀರು ಹಸಿರು ಬಣ್ಣಕ್ಕೆ ತಿರುಗಿದೆ. ಸದ್ಯ ಜಲಾಶಯದಲ್ಲಿ ಒಟ್ಟು ನೀರಿನ ಸಂಗ್ರಹ ಸಾಮಥ್ರ್ಯ 100.86 ಟಿಎಂಸಿಯಷ್ಟಿದ್ದು, ಸದ್ಯ 100.06 ಟಿಎಂಸಿಯಷ್ಟು ನೀರು ಸಂಗ್ರಹವಿದೆ. ಇದನ್ನೂ ಓದಿ: ಈ ಬಾರಿಯೂ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸಬೇಕು: ಬಿಎಸ್‍ವೈ

    ನೀರಿನ ಸಂಗ್ರಹ ಕಡಿಮೆ ಇರುವಾಗ ಹಸಿರು ಬಣ್ಣಕ್ಕೆ ತಿರುಗುವುದು ಸಾಮಾನ್ಯ. ಆದರೆ ಈಗ ಜಲಾಶಯ ಸಂಪೂರ್ಣವಾಗಿ ಭರ್ತಿ ಇದ್ದರೂ ನೀರಿನ ಬಣ್ಣ ಬದಲಾವಣೆ ಆಗಿರುವುದು ಜನರಲ್ಲಿ ಆತಂಕ ಮೂಡಿದೆ. ನದಿ ನೀರಿಗೆ ಕಾರ್ಖಾನೆಗಳ ತ್ಯಾಜ್ಯ ನೇರವಾಗಿ ಸಂಗ್ರಹವಾಗುತ್ತಿರುವುದು ಡ್ಯಾಂ ನೀರು ಬಣ್ಣ ಬದಲಾವಣೆಗೆ ಪ್ರಮುಖ ಕಾರಣ ಎಂಬುದು ಪರಿಸರವಾದಿಗಳ ಅಭಿಪ್ರಾಯ. ಕೂಡಲೇ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

  • ತುಂಗಾ ಜಲಾಶಯ ಭರ್ತಿ- ಬಾಗಿನ ಅರ್ಪಿಸಿದ ಈಶ್ವರಪ್ಪ

    ತುಂಗಾ ಜಲಾಶಯ ಭರ್ತಿ- ಬಾಗಿನ ಅರ್ಪಿಸಿದ ಈಶ್ವರಪ್ಪ

    ಶಿವಮೊಗ್ಗ: ಕಳೆದೊಂದು ವಾರದಿಂದ ಮಲೆನಾಡಿನ ತವರು ಶಿವಮೊಗ್ಗದಲ್ಲಿ ಒಂದೇ ಸಮನೆ ವರುಣ ಅಬ್ಬರಿಸಿದ್ದು, ಆಗಾಗ್ಗೆ ಮಳೆ ಸುರಿಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ತುಂಗಾ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ ನೀರು ಹೊರಕ್ಕೆ ಬಿಡಲಾಗುತ್ತಿದೆ. ನಿರಂತರವಾಗಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗುತ್ತಿದ್ದು, ಜಿಲ್ಲೆಯ ಜನರಲ್ಲಿ ಹರ್ಷ ಮನೆ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತುಂಬಿದ ತುಂಗೆಗೆ ಬಾಗಿನ ಸಮರ್ಪಿಸಿದ್ದಾರೆ.

    ಜಿಲ್ಲೆಯ ಗಾಜನೂರು ತುಂಗಾ ಜಲಾಶಯ ಪ್ರತಿ ವರ್ಷ ಬೇಗ ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಳೆದ ಒಂದು ವಾರದಿಂದ ಮಲೆನಾಡು ಭಾಗದಲ್ಲಿ ಬಿಟ್ಟು ಬಿಡದೆ ಮಳೆಯಾಗುತ್ತಿದೆ. ಹೀಗಾಗಿ ಹಳ್ಳ-ಕೊಳ್ಳ, ನದಿಗಳು ಮೈದುಂಬಿ ಹರಿಯುತ್ತಿವೆ. ಅಂತೆಯೇ ತುಂಗಾ ನದಿ ಕೂಡ ತುಂಬಿ ಹರಿಯುತ್ತಿದ್ದು, ಗಾಜನೂರು ಜಲಾಶಯ ಭರ್ತಿಯಾಗಿದೆ. ಹೀಗಾಗಿ ಅಣೆಕಟ್ಟಿನಿಂದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಇದನ್ನೂ ಓದಿ: ಮಲೆನಾಡಲ್ಲಿ ಮುಂಗಾರು ಚುರುಕು- ಜೋಗಕ್ಕೆ ಜೀವದ ಕಳೆ

    588.24 ಮೀಟರ್ ಎತ್ತರ ಇರುವ ಗಾಜನೂರು ಜಲಾಶಯದಲ್ಲಿ ನೀರಿನ ಮಟ್ಟ 587.69 ಮೀಟರ್ ತಲುಪಿದ ಕಾರಣ ಎಲ್ಲ ಗೇಟ್ ಗಳಿಂದ ನೀರು ಹೊರ ಬಿಡಲಾಗಿದೆ. ಈ ತುಂಗಾ ಜಲಾಶಯ 3.25 ಟಿಎಂಸಿ ಸಾಮಥ್ರ್ಯದ್ದಾಗಿದೆ. ಶೃಂಗೇರಿ, ತೀರ್ಥಹಳ್ಳಿ ಭಾಗಗಳಲ್ಲಿ ಮಳೆ ಬೀಳುತ್ತಿರುವ ಕಾರಣ ಜಲಾಶಯಕ್ಕೆ ನಿರಂತರವಾಗಿ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ, ಡ್ಯಾಂ ಭರ್ತಿಯಾಗಿ ನಳನಳಿಸುತ್ತಿದ್ದು, ಸಚಿವ ಕೆ.ಎಸ್.ಈಶ್ವರಪ್ಪ ಕುಟುಂಬ ಸಮೇತ ತುಂಗಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ್ದಾರೆ.

    ಮಲೆನಾಡಿನ ತವರು ಎಂದೆನಿಸಿಕೊಳ್ಳುವ ಶಿವಮೊಗ್ಗದ ಕೇಂದ್ರ ಬಿಂದುವಾಗಿರುವ ಗಾಜನೂರು ಜಲಾಶಯ ಇದೀಗ ಸುಂದರವಾಗಿ ಕಂಗೊಳಿಸುತ್ತಿದ್ದು, ನಿರಂತರ ಮಳೆ ಹಿನ್ನೆಲೆಯಲ್ಲಿ ಡ್ಯಾಂ ನಿಂದ ನೀರು ಹೊರಕ್ಕೆ ಬಿಡುತ್ತಿರುವ ಪರಿಣಾಮ ಡ್ಯಾಂ ಗೆ ಮತ್ತಷ್ಟು ಜೀವ ಕಳೆ ಬಂದಂತಾಗಿದೆ. ತುಂಗೆಯ ಮೂಲ ಸೆಲೆಯಾಗಿರುವ ಶೃಂಗೇರಿ, ಕೊಪ್ಪ ಭಾಗದ ಪ್ರದೇಶದಲ್ಲಿ ಯಥೇಚ್ಛ ಮಳೆಯಾಗುತ್ತಿರುವ ಕಾರಣ ರಾಜ್ಯದಲ್ಲಿಯೇ ಭರ್ತಿಯಾಗಿರುವ ಪ್ರಥಮ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಒಟ್ಟು 22 ಕ್ರಸ್ಟ್ ಗೇಟ್ ಗಳಿದ್ದು, ಎಲ್ಲ ಗೇಟುಗಳಿಂದ ನದಿಗೆ ನೀರು ಹರಿಬಿಡಲಾಗಿದೆ. ಕೊರೊನಾ ಕಾಟದಿಂದ ಪ್ರವಾಸಿಗರಿಗೆ ಪ್ರವೇಶ ನಿಷಿದ್ಧವಾಗಿದ್ದು, ಇದರಿಂದ ಪ್ರವಾಸಿಗರಿಗೆ ನಿರಾಸೆಯಾಗಿದೆ.

    ಜಿಲ್ಲೆಯ ಮಲೆನಾಡು ಪ್ರದೇಶಗಳಾದ ಸಾಗರ, ತೀರ್ಥಹಳ್ಳಿ, ಹೊಸನಗರ, ಸೊರಬ ತಾಲೂಕಿನಾದ್ಯಂತ ಮಳೆ ಬಿರುಸಾಗಿದ್ದು, ಹಳ್ಳ-ಕೊಳ್ಳ ನದಿಗಳಿಗೆ ನೀರು ಹರಿದು ಬಂದಿದೆ. ತುಂಗಾ, ಭದ್ರಾ, ಮಾಲತಿ, ಶರಾವತಿ, ವರದಾ, ಕುಮುದ್ವತಿ ನದಿಗಳು ಸೇರಿದಂತೆ, ದೊಡ್ಡ, ದೊಡ್ಡ ಹಳ್ಳಗಳು ನೀರಿನಿಂದ ತುಂಬಿವೆ. ಹೀಗಾಗಿ ಜಿಲ್ಲೆಯ ರೈತರು ಹಾಗೂ ನಾಗರೀಕರಲ್ಲಿ ಹರ್ಷ ಮನೆ ಮಾಡಿದೆ.

  • ಕೊಡಗಿನಲ್ಲಿ ಭಾರೀ ಮಳೆ- ಕೆಆರ್‍ಎಸ್ ಡ್ಯಾಂ ಒಳ ಹರಿವು ಹೆಚ್ಚಳ

    ಕೊಡಗಿನಲ್ಲಿ ಭಾರೀ ಮಳೆ- ಕೆಆರ್‍ಎಸ್ ಡ್ಯಾಂ ಒಳ ಹರಿವು ಹೆಚ್ಚಳ

    – ಕಾವೇರಿ ನದಿಗೆ 15 ಸಾವಿರ ಕ್ಯೂಸೆಕ್ ನೀರು

    ಮಂಡ್ಯ: ಕೊಡಗು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‍ಎಸ್ ಜಲಾಶಯಕ್ಕೆ 10 ಸಾವಿರ ಕ್ಯೂಸೆಕ್‍ಗೂ ಅಧಿಕ ನೀರು ಹರಿದು ಬರುತ್ತಿದೆ.

    ಕಳೆದ ತಿಂಗಳು ಸುರಿದ ಧಾರಾಕಾರ ಮಳೆಯಿಂದಾಗಿ ಕೆಆರ್‍ಎಸ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿತ್ತು. ಹೀಗಾಗಿ ಸಿಎಂ ಯಡಿಯೂರಪ್ಪನವರು ಜಲಾಶಯಕ್ಕೆ ಬಾಗೀನವನ್ನು ಅರ್ಪಿಸಿದರು. ಇದಾದ ಬಳಿಕ ಕೊಡಗು ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಕಳೆದ ಎರಡ್ಮೂರು ದಿನಗಳಿಂದ ಮತ್ತೆ ಮಳೆ ಸುರಿಯಲು ಆರಂಭವಾಗಿದೆ. ಹೀಗಾಗಿ ಸದ್ಯ ಕೆಆರ್‍ಎಸ್ ಜಲಾಶಯಕ್ಕೆ 10,035 ಕ್ಯೂಸೆಕ್ ನೀರು ಹರಿದು ಬರುತ್ತಿದೆ.

    ಇಂದು ಹಾಗೂ ನಾಳೆ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಹೀಗಾಗಿ ಪ್ರಸ್ತುತ ಕೆಆರ್‍ಎಸ್ ಜಲಾಶಯದಿಂದ ಕಾವೇರಿ ನದಿಗೆ 15 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದೆ. ಕೆಆರ್‍ಎಸ್ ಜಲಾಶಯದ ಇಂದಿನ ಮಟ್ಟ 124.65 ಅಡಿ ಇದ್ದು, ಒಳ ಹರಿವು 10,035 ಕ್ಯೂಸೆಕ್ ಇದೆ. ಹೊರ ಹರಿವು 15,681 ಕ್ಯೂಸೆಕ್ ಇದೆ. ಕೆಆರ್‍ಎಸ್ ಜಲಾಶಯದಲ್ಲಿ ಪ್ರಸ್ತುತ 49.243 ಟಿಎಂಸಿ ನೀರು ಸಂಗ್ರಹವಾಗಿದೆ.

  • ಮತ್ತೆ ವರುಣನ ಅಬ್ಬರ – ದಶಕದ ನಂತ್ರ ನಾರಿಹಳ್ಳ ಜಲಾಶಯ ಭರ್ತಿ

    ಮತ್ತೆ ವರುಣನ ಅಬ್ಬರ – ದಶಕದ ನಂತ್ರ ನಾರಿಹಳ್ಳ ಜಲಾಶಯ ಭರ್ತಿ

    – ಹಳ್ಳಕೊಳ್ಳಗಳು ಭರ್ತಿ, ಅಪಾರ ಪ್ರಮಾಣದ ಬೆಳೆ ನಾಶ
    – ಕೊಡಗಿನಲ್ಲಿ ಮತ್ತೆ ಪ್ರವಾಹ ಭೀತಿ

    ಮಡಿಕೇರಿ/ಧಾರವಾಡ: ರಾಜ್ಯದ ಅನೇಕ ಕಡೆ ಮತ್ತೆ ವರುಣದೇವ ಅಬ್ಬರಿಸಲು ಶುರುಮಾಡಿದ್ದು, ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವುದರಿಂದ ಕಾವೇರಿ ನದಿ ಭೋರ್ಗರೆದು ಹರಿಯುತ್ತಿದೆ. ಇದರಿಂದ ಜನರಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಇತ್ತ ಬರೋಬ್ಬರಿ ಒಂದು ದಶಕದ ಬಳಿಕ ಸಂಡೂರಿನ ನಾರಿಹಳ್ಳ ಜಲಾಶಯ ಭರ್ತಿಯಾಗಿದೆ.

    ಕೊಡಗಿನ ಕಾವೇರಿ ಉಗಮ ಸ್ಥಾನ ತಲಕಾವೇರಿ, ಭಾಗಮಂಡಲ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿ ನೀರಿನ ಹರಿಯುವಿಕೆಯಲ್ಲಿ ಭಾರೀ ಏರಿಕೆಯಾಗಿದ್ದು, ಸಂಗಮ ಭರ್ತಿಯಾಗಲು ಇನ್ನೆರಡು ಅಡಿಗಳು ಮಾತ್ರವೇ ಬಾಕಿ ಇದೆ. ಒಂದು ಮಳೆ ಹೀಗೆ ಮುಂದುವರಿದಲ್ಲಿ ತ್ರಿವೇಣಿ ಸಂಗಮ ಭರ್ತಿಯಾಗುವ ಸಾಧ್ಯತೆ ಇದೆ.

    ಮಡಿಕೇರಿ, ನಾಪೋಕ್ಲು, ಸುಂಟಿಕೊಪ್ಪ, ಮಾದಾಪುರ, ಗಾಳಿಬೀಡು ಸೇರಿದಂತೆ ಬಹುತೇಕ ಕಡೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ. ಹೀಗಾಗಿ ಕೊಡಗಿನ ಜನರಲ್ಲಿ ಮತ್ತೆ ಪ್ರವಾಹ ಮತ್ತು ಭೂಕುಸಿತದ ಭೀತಿ ಎದುರಾಗಿದೆ. ವಿರಾಜಪೇಟೆ ತಾಲೂಕಿನ ಕರಡಿಗೋಡು ಗುಹ್ಯ ಬೆಟ್ಟದ ಕಾಡು ಭಾಗಗಳಲ್ಲಿ ಕಾವೇರಿ ನದಿಯ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಲ್ಲಿ ಆತಂಕ ಮನೆ ಮಾಡಿದೆ.

    ಕಳೆದ ರಾತ್ರಿಯಿಂದ ಬಳ್ಳಾರಿಯಲ್ಲಿ ಧಾರಾಕಾರ ಮಳೆ ಆರಂಭವಾಗಿದ್ದು, ಜಿಲ್ಲೆಯ ಬಳ್ಳಾರಿ ಸಂಡೂರು ಸೇರಿದಂತೆ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದೆ. ಇತ್ತ ಮಳೆಯಿಂದಾಗಿ ಬರೋಬ್ಬರಿ ಒಂದು ದಶಕದ ಬಳಿಕ ಸಂಡೂರಿನ ನಾರಿಹಳ್ಳ ಜಲಾಶಯ ಭರ್ತಿಯಾಗಿದ್ದು, ಸಂಡೂರಿನ ಸೊಬಗು ಇಮ್ಮಡಿಯಾಗಿದೆ. ಸಂಡೂರು ಉತ್ತರ ಕರ್ನಾಟಕದ ಮಲೆನಾಡು ಅಂತಲೇ ಖ್ಯಾತಿ ಪಡೆದಿದ್ದು, ಗಿರಿಶೃಂಗಗಳ ಮಧ್ಯದಲ್ಲಿ ತುಂಬಿನಿಂತಿರುವ ನಾರಿಹಳ್ಳದ ದೃಶ್ಯ ಮನಮೋಹಕವಾಗಿದೆ.

    ಬಳ್ಳಾರಿ ಜಿಲ್ಲೆಯ ಬಹುತೇಕ ಹಳ್ಳಕೊಳ್ಳಗಳು ಭರ್ತಿಯಾಗಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದ ಸಿರುಗುಪ್ಪ ತಾಲೂಕಿನ ಹೆಚ್.ಹೊಸಹಳ್ಳಿ ಮತ್ತು ಹಾಗಲೂರು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಹಳ್ಳದ ನೀರು ಹೊಲಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಹಳ್ಳದ ನೀರು ರಸ್ತೆಯ ಮೇಲೆ ಹರಿಯುತ್ತಿರುವ ಹಿನ್ನೆಲೆ ಗ್ರಾಮದ ಸಂಪರ್ಕ ಕಡಿತವಾಗಿದೆ.

    ಧಾರವಾಡದಲ್ಲಿ ರಾತ್ರಿ ಸುರಿದ ಮಳೆಗೆ ನಗರದ ಹಾಶ್ಮಿನಗರ ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ರಸ್ತೆಗಳೆಲ್ಲ ಹಳ್ಳದಂತೆ ಆಗಿವೆ. ಬಡಾವಣೆಯ ನಿವಾಸಿಗಳು ಮನೆಯಿಂದ ಹೊರಬರಲು ಸಾಧ್ಯವಾಗದೆ ಪರದಾಡಿದ್ದಾರೆ. ರಸ್ತೆಯಲ್ಲಿ ನಿಂತ ನೀರು ಹರಿದು ಹೋಗಲು ಚರಂಡಿ ಕೂಡ ನಿರ್ಮಾಣ ಮಾಡಿಲ್ಲ. ಹೀಗಾಗಿ ಸ್ಥಳೀಯರು ರಸ್ತೆಯಲ್ಲಿ ನಿಂತ ನೀರನ್ನ ಬಕೆಟ್‍ಗಳಲ್ಲಿ ತುಂಬಿ ಹೊರ ಹಾಕಿದ್ದಾರೆ. ಪ್ರತಿ ವರ್ಷ ಮಳೆ ಬಂದಾಗ ರಸ್ತೆಗಳು ಇದೇ ಸ್ಥಿತಿಯಲ್ಲಿ ಇರುತ್ತವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

  • ನನಗಾಗಿ ಕಾಯ್ತಿರು ಅಂತ ಹೋದ ಪ್ರೇಮಿ – ನಿಶ್ಚಿತಾರ್ಥ ಆದ ಕೆಲ ಕ್ಷಣಗಳಲ್ಲೇ ಯುವಕ ಸಾವು

    ನನಗಾಗಿ ಕಾಯ್ತಿರು ಅಂತ ಹೋದ ಪ್ರೇಮಿ – ನಿಶ್ಚಿತಾರ್ಥ ಆದ ಕೆಲ ಕ್ಷಣಗಳಲ್ಲೇ ಯುವಕ ಸಾವು

    – ಭಾವಿ ಪತ್ನಿಗೆ ಕಿಸ್ ಕೊಟ್ಟು ಹೋಗಿದ್ದ

    ಬ್ರೆಸಿಲಿಯಾ: ನಿಶ್ಚಿತಾರ್ಥವಾದ ಕೇವಲ ಐದು ನಿಮಿಷಗಳಲ್ಲೇ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬ್ರೆಜಿಲ್‍ನಲ್ಲಿ ನಡೆದಿದೆ.

    ಬ್ರೆಜಿಲ್‍ನ ಉದ್ಯಮಿ ಜೊವಾವೊ ಗಿಲ್ಹೆರ್ಮ್ ಟೊರೆಸ್ ಫಡಿನಿ (24) ಮೃತ ಯುವಕ. ಈ ಘಟನೆ ಕೆಲ ದಿನಗಳ ಹಿಂದೆ ನಡೆದಿದೆ. ಮೃತ ಫಡಿನಿ ಮತ್ತು ಭಾವಿ ಪತ್ನಿ ಲಾರಿಸ್ಸಾ ಕ್ಯಾಂಪೋಸ್ ಬ್ರೆಜಿಲ್‍ನ ಸೊರೊಕಬಾ ಪ್ರದೇಶದಲ್ಲಿರುವ ಪ್ರಖ್ಯಾತ ಇಟುಪರಾರಂಗ ಜಲಾಶಯದ ಬಳಿ ತಮ್ಮ ಸ್ನೇಹಿತರೊಂದಿಗೆ ನಿಶ್ಚಿತಾರ್ಥವನ್ನು ಆಚರಿಸಿಕೊಂಡಿದ್ದರು. ನಂತರ ಎಲ್ಲರೂ ನಿಶ್ಚಿತಾರ್ಥದ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

    ಫೋಟೋ ತೆಗೆದ ಕೆಲವೇ ಕ್ಷಣಗಳಲ್ಲಿ ಫಡಿನಿ ತನ್ನ ಸ್ನೇಹಿತರೊಂದಿಗೆ ಸ್ವಿಮ್ಮಿಂಗ್ ರೇಸ್‍ಗೆಂದು ಡ್ಯಾಮ್‍ಗೆ ಧುಮುಕಿದನು. ಆದರೆ ಸ್ವಿಮ್ ಮಾಡುತ್ತಲೇ ಫಡಿನಿ ನೀರಿನಲ್ಲಿ ಕಣ್ಮರೆಯಾಗಿದ್ದಾನೆ. ಫಡಿನಿ ಉತ್ತಮ ಈಜುಗಾರನಾಗಿದ್ದು, ಆತ ಜಲಾಶಯಕ್ಕೆ ಧುಮುಕುವ ಮೊದಲು ಭಾವಿ ಪತ್ನಿ ಲಾರಿಸ್ಸಾ ಹಣೆಗೆ ಮುತ್ತಿಟ್ಟಿದ್ದನು.

    ಫಡಿನಿ ಕಿಸ್ ಮಾಡಿದ ನಂತರ ತನ್ನ ಶರ್ಟ್ ಬಿಚ್ಚಿ ನಮ್ಮ ಸ್ನೇಹಿತರೊಂದಿಗೆ ನೀರಿಗೆ ಜಿಗಿದನು. ನಾನು ಬೇಗ ಬರುತ್ತೇನೆ ಕಾಯುತ್ತಿರು, ನಾನು ನಿನ್ನನ್ನು ತುಂಬಾ ಪ್ರೀತಿಸುತ್ತಿದ್ದೇನೆ ಎಂದು ಹೇಳಿ ಹೋಗಿದ್ದ. ಸ್ನೇಹಿತರು ಈ ತಡದಿಂದ ಮುಂದಿನ ದಡಕ್ಕೆ ಈಜು ಸ್ಪರ್ಧೆಯನ್ನು ಪ್ರಾರಂಭಿಸಿದರು. ಆದರೆ ಫಡಿನಿ ಇದ್ದಕ್ಕಿದ್ದಂತೆ ನೀರಿನ ಕೆಳಗೆ ಕಣ್ಮರೆಯಾದನು ಎಂದು ಲಾರಿಸ್ಸಾ ಹೇಳಿದ್ದಾಳೆ.

    ಕೂಡಲೇ ಸ್ನೇಹಿತರು ಆತನಿಗಾಗಿ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿಲ್ಲ. ನಂತರ ತುರ್ತು ಸೇವೆಗಳು ಸ್ಥಳಕ್ಕೆ ಆಗಮಿಸಿದ್ದು, ಮುಳುಗು ತಜ್ಞರು ದೋಣಿಗಳೊಂದಿಗೆ ಹುಡುಕಾಡಿದರು. ಆದರೂ ಫಡಿನಿ ಎಲ್ಲೂ ಪತ್ತೆಯಾಗಿಲ್ಲ. ಕೊನೆಗೆ ಅಗ್ನಿಶಾಮಕ ಸಿಬ್ಬಂದಿ ಬಂದ ಸುಮಾರು ಒಂದೂವರೆ ಗಂಟೆಯ ನಂತರ ಅವನ ದೇಹವನ್ನು ಪತ್ತೆಯಾಗಿದೆ.

    ಈಗಾಗಲೇ ಮದುವೆ ದಿನಾಂಕ ನಿಗದಿಯಾಗಿತ್ತು. ಆದರೆ ನಿಶ್ಚಿತಾರ್ಥದಲ್ಲಿಯೇ ಈ ದುರಂತ ಸಂಭವಿಸಿದೆ. ನಾನು ಯೋಚಿಸುವುದು ಮತ್ತು ಕನಸು ಕಾಣುವುದು ಅವನ ಬಗ್ಗೆ ಮಾತ್ರ. ಈಗ ನಾವು ಒಟ್ಟಿಗೆ ಕಳೆದ ಸುಂದರ ಕ್ಷಣಗಳ ನೆನಪು ಮಾತ್ರ ಉಳಿದುಕೊಂಡಿದೆ ಎಂದು ಲಾರಿಸ್ಸಾ ಕಣ್ಣೀರು ಹಾಕಿದ್ದಾಳೆ.

  • ಕೆಆರ್‌ಎಸ್‌ಗೆ ಐದನೇ ಬಾರಿಗೆ ಬಾಗಿನ ಅರ್ಪಣೆ ಮಾಡಲಿರುವ ಸಿಎಂ ಬಿಎಸ್‍ವೈ

    ಕೆಆರ್‌ಎಸ್‌ಗೆ ಐದನೇ ಬಾರಿಗೆ ಬಾಗಿನ ಅರ್ಪಣೆ ಮಾಡಲಿರುವ ಸಿಎಂ ಬಿಎಸ್‍ವೈ

    – ಅತೀ ಹೆಚ್ಚು ಬಾರಿ ಕಾವೇರಿ ತಾಯಿಗೆ ಬಾಗಿನ ನೀಡಿದ ಕೀರ್ತಿ ಸಿಎಂಗೆ

    ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ಜಲಾಶಯಕ್ಕೆ ಅತೀ ಹೆಚ್ಚು ಬಾರಿ ಬಾಗಿನ ಅರ್ಪಣೆ ಮಾಡಿರುವ ಕೀರ್ತಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಲಿದೆ.

    ಹೀಗಾಗಲೇ ಕೆಆರ್‌ಎಸ್ ಜಲಾಶಯಕ್ಕೆ ನಾಲ್ಕು ಬಾರಿ ಬಾಗಿನ ಅರ್ಪಣೆ ಮಾಡಿರುವ ಯಡಿಯೂರಪ್ಪ ಅವರು, ಈ ಬಾರಿ ಕೆಆರ್‌ಎಸ್ ಜಲಾಶಯ ಭರ್ತಿಯಾಗಿರುವ ಹಿನ್ನೆಯಲ್ಲಿ ಇದೇ ತಿಂಗಳ 21ರಂದು ಕಾವೇರಿ ಮಾತೇಗೆ ಬಾಗಿನ ನೀಡಲಿದ್ದಾರೆ. ಈ ಮೂಲಕ ಯಡಿಯೂರಪ್ಪ ಅವರು ಕೆಆರ್‍ಎಸ್‍ಗೆ ಐದು ಬಾರಿ ಬಾಗಿನ ಅರ್ಪಣೆ ಮಾಡಿದ ರಾಜ್ಯದ ಏಕೈಕ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

    ತಾವು ಸಿಎಂ ಆಗಿದ್ದ ಅವಧಿಯಲ್ಲಿ ಗುಂಡುರಾವ್, ಬಂಗಾರಪ್ಪ ಹಾಗೂ ಕುಮಾರಸ್ವಾಮಿ ಅವರು ತಲಾ ಮೂರು ಬಾರಿ ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ್ದರು. 2019 ಆಗಸ್ಟ್ ತಿಂಗಳಿನಲ್ಲಿ ಯಡಿಯೂರಪ್ಪ ಅವರು ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡುವ ಮೂಲಕ ಹೆಚ್ಚು ಬಾರಿ ಕಾವೇರಿ ಮಾತೇಗೆ ಬಾಗಿನ ಅರ್ಪಣೆ ಮಾಡಿದ ಸಿಎಂ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು. ಇದೀಗ ಇದೇ ತಿಂಗಳ 21 ರಂದು ಕೆಆರ್‌ಎಸ್‌ಗೆ ಬಾಗಿನ ಅರ್ಪಣೆ ಮಾಡುವ ಮೂಲಕ ಐದನೇ ಬಾರಿಗೆ ಬಾಗಿನ ಅರ್ಪಿಸಿದ ಸಿಎಂ ಎಂಬ ಮೆಚ್ಚುಗೆಗೆ ಪಾತ್ರರಾಗಲಿದ್ದಾರೆ.

    124.80 ಅಡಿ ಗರಿಷ್ಠ ಮಟ್ಟ ಇರುವ ಕೆಆರ್‍ಎಸ್ ಜಲಾಶಯ ಸದ್ಯ 124.60 ಅಡಿಗಳಷ್ಟು ಭರ್ತಿಯಾಗಿದೆ. ಜಲಾಶಯಕ್ಕೆ 9,404 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 5,318 ಕ್ಯೂಸೆಕ್ ನೀರು ಹೊರ ಹೋಗುತ್ತಿದೆ.

  • ಕೊಡಗಿನಲ್ಲಿ ಮುಂದುವರಿದ ಮಳೆ ಅಬ್ಬರ – ತುಂಬಿ ಹರಿಯುತ್ತಿರೋ ನದಿಗಳು

    ಕೊಡಗಿನಲ್ಲಿ ಮುಂದುವರಿದ ಮಳೆ ಅಬ್ಬರ – ತುಂಬಿ ಹರಿಯುತ್ತಿರೋ ನದಿಗಳು

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮುಂಗಾರು ಮಳೆ ಬಿರುಸು ಪಡೆದಿದೆ. ಅದರಲ್ಲೂ ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ, ಕುಟ್ಟ, ಬಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ.

    ಬಿರುನಾಣಿ ಗ್ರಾ.ಪಂ.ವ್ಯಾಪ್ತಿಯ ಬಿರುನಾಣಿ-ನಾಟ್ ಕುಂದ್ ರಸ್ತೆ ಮೇಲೆ ನದಿ ತುಂಬಿ ಹರಿಯುತ್ತಿದ್ದು, ಗ್ರಾಮಕ್ಕೆ ಸಂಪರ್ಕ ಮಾಡುವ ಸೇತುವೆ ಮೇಲೆ 3 ಅಡಿ ಎತ್ತರ ನೀರು ಹರಿಯುತ್ತಿದೆ. ಇದರಿಂದ ಗ್ರಾಮಕ್ಕೆ ಸಂಪರ್ಕ ಕಟ್ ಆಗಿದೆ.

    ನಾಟ್ ಕುಂದ್ ಸುತ್ತ ಬ್ರಹ್ಮಗಿರಿ ಅರಣ್ಯ ಸುತ್ತುವರಿದಿದ್ದು, ಈಗ ಏಕೈಕ ರಸ್ತೆ ಮಾರ್ಗ ಕಡಿತವಾಗಿದೆ. ಕಳೆದ ವರ್ಷ ಇದೇ ಪ್ರದೇಶಕ್ಕೆ ಸಂಪರ್ಕ ಕಲ್ಪಿಸಲು ನಿರ್ಮಿಸಿದ್ದ ಕಬ್ಬಿಣದ ತೂಗು ಸೇತುವೆ ಪ್ರವಾಹಕ್ಕೆ ಕೊಚ್ಚಿ ಹೋಗಿತ್ತು. ಈ ಪ್ರದೇಶದಲ್ಲಿ ಸುಮಾರು 12 ಕುಟುಂಬವಿದ್ದು, ಸಂಪರ್ಕ ಕಡಿತದಿಂದ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈಗ ಇರುವ ಸೇತುವೆಯನ್ನು 10 ಅಡಿ ಎತ್ತರವಾಗಿ ನಿರ್ಮಿಸಿದರೆ, ಮಳೆಗೆ ಸೇತುವೆ ಮುಳುಗುವುದನ್ನು ತಡೆಯಬಹುದಾಗಿದೆ.

    ನಿರಂತರ ಮಳೆಯಿಂದ ಸಂಪರ್ಕ ಕಡಿತ ಹಲವು ದಿನ ಮುಂದುವರಿದರೆ, ಈ ಪ್ರದೇಶದ ವಾಸಿಸುವ ಜನರಿಗೆ ಅಗತ್ಯ ವಸ್ತುಗಳನ್ನು ಒದಗಿಸಬೇಕಾಗಿ ಗ್ರಾಮದ ನಿವಾಸಿಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತವಾಗಿ ಭಾರಿ ಮಳೆಯಾಗುತ್ತಿರುವುದರಿಂದ ಈ ವ್ಯಾಪ್ತಿಯ ಕಕ್ಕಟ್ ಪೆÇಳೆ ನದಿ ತುಂಬಿ ಹರಿಯುತ್ತಿದೆ. ಅಲ್ಲದೇ ಲಕ್ಷ್ಮಣ ತೀರ್ಥ, ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿದೆ.

    ಇತ್ತ ಮಡಿಕೇರಿಯಲ್ಲಿ ಕಳೆದ ರಾತ್ರಿಯಿಂದ ಮಳೆಯ ಅರ್ಭಟ ಕೊಂಚ ಕಡಿಮೆಯಾಗಿದ್ದು, ಗುಡ್ಡಗಾಡು ಪ್ರದೇಶದ ಜನರು ನಿಟ್ಟುಸಿರು ಬೀಡುವಂತೆ ಅಗಿದೆ. ಕಾವೇರಿ ನದಿ ಪಾತ್ರದ ಜನರಲ್ಲಿ ನೀರಿನ ಪ್ರಮಾಣದ ಏರಿಕೆ ಅಗುತ್ತಿರುವುದರಿಂದ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಅತಂಕ ಹೆಚ್ಚುವಂತೆ ಅಗಿದೆ.

    ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇತ್ತ ಸೋಮವಾರಪೇಟೆ ತಾಲೂಕಿನ ಹಾರಂಗಿ ಜಲಾಶಯದ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು ಅಗಿದ್ದು, ಇಂದಿನ ನೀರಿನ ಮಟ್ಟ 2853.53 ಅಡಿಗಳು ಇದೆ. ಇಂದಿನ ನೀರಿನ ಒಳಹರಿವು 5,056 ಕ್ಯೂಸೆಕ್ ಹಾಗೂ ಹೊರ ಹರಿವು ನದಿಗೆ 4,104 ಕ್ಯೂಸೆಕ್ ಬೀಡಲಾಗುತ್ತಿದೆ. ಪಕ್ಕದ ಮೈಸೂರಿನ ಕೆಆರ್‍ಎಸ್‍ಗೆ ಇದು ವರದಾನವಾಗಲಿದೆ.