Tag: Reservoir

  • ಕಾವೇರಿ ನದಿ ಸಮೀಪದಲ್ಲಿರೋ ಜನರೇ ಎಚ್ಚರ ಎಚ್ಚರ!

    ಬೆಂಗಳೂರು: ಡ್ಯಾಂ ಮತ್ತು ನದಿಗಳ ಸನಿಹದಲ್ಲಿರುವ ಜನರೆ ಎಚ್ಚರವಾಗಿರಿ. ನಿರಂತರ ಭಾರೀ ಮಳೆಯಿಂದಾಗಿ ಕಾವೇರಿ ನದಿಯ ಹರಿಯುವ ಡ್ಯಾಂಗಳು ಭರ್ತಿಯಾಗಿವೆ. ಶನಿವಾರ ಅಥವಾ ಭಾನುವಾರ ಜಲಾಶಯಗಳ ನೀರನ್ನು ನದಿಗೆ ಬಿಡುವ ಸಾಧ್ಯತೆ ಇದೆ.

    ಈಗಾಗಲೇ ಕೆಆರ್‌ಎಸ್‌, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ಯಾವುದೇ ಸಮಯದಲ್ಲಿ ಡ್ಯಾಂ ನಿಂದ ನೀರನ್ನು ನದಿಗೆ ಬಿಡುವ ಸಾಧ್ಯತೆಯಿದೆ.

    ನದಿಪಾತ್ರದಲ್ಲಿ ಪ್ರವಾಹ ಉಂಟಾಗಲಿದ್ದು, ವಿಶೇಷವಾಗಿ ರಾಮನಗರ, ಮಂಡ್ಯ, ಹಾಸನ ಹಾಗೂ ಮೈಸೂರಿನ ಕೆಲ ಪ್ರದೇಶಗಳಲ್ಲಿ ಪ್ರವಾಹ ಭೀತಿ ಉಂಟಾಗಲಿದೆ. ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಜಲ ಆಯೋಗದ ಅಧಿಕೃತ ಪ್ರವಾಹ ಮುನ್ಸೂಚನಾ ಟ್ವಿಟ್ಟರ್ ಹ್ಯಾಂಡಲ್ ಟ್ವೀಟ್ ಮಾಡಿದೆ.

     

  • ಭಾರೀ ಮಳೆಗೆ ಚಿಕ್ಕಬಳ್ಳಾಪುರ ಶ್ರೀನಿವಾಸ ಜಲಾಶಯ ಭರ್ತಿ

    ಭಾರೀ ಮಳೆಗೆ ಚಿಕ್ಕಬಳ್ಳಾಪುರ ಶ್ರೀನಿವಾಸ ಜಲಾಶಯ ಭರ್ತಿ

    ಚಿಕ್ಕಬಳ್ಳಾಪುರ: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯ ಭರ್ತಿಯಾಗಿದೆ.

    ಜಕ್ಕಲಮಡುಗು ಜಲಾಶಯ ಕೋಡಿ ಹರಿದ ಬೆನ್ನಲ್ಲೇ, ಶುಕ್ರವಾರ ಶ್ರೀನಿವಾಸ ಜಲಾಶಯ ಕೋಡಿ ಹರಿಯಲು ಆರಂಭಿಸಿದ್ದು ಕೋಡಿ ಹರಿಯೋದನ್ನ ನೋಡಲು ಜನಸಾಗರವೇ ಜಲಾಶಯದತ್ತ ಭೇಟಿ ನೀಡುತ್ತಿದ್ದಾರೆ.

    ಕೋಡಿ ಹರಿಯುತ್ತಿರುವ ಜಲಾಶಯದ ಕೆಳ ಭಾಗದಲ್ಲಿ ಮೀನು ಕ್ಯಾಚ್ ಹಿಡಿದುಕೊಳ್ಳೋಕೆ ಜನ ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ. ಕೋಡಿ ಹರಿಯುವ ನೀರಿನ ಜೊತೆ ಮೀನುಗಳು ಸಹ ಹರಿದುಬರುತ್ತಿದ್ದು ಕೈಗೆ ಸಿಗದ ಮೀನುಗಳಿಗಾಗಿ ಜನ ಒಂದಲ್ಲ ಒಂದು ರೀತಿಯ ಪಡಿಪಾಟಲು ಪಡ್ತಾ ಮೀನುಗಳನ್ನ ಸೆರೆ ಹಿಡಿದುಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಇನ್ನೂ ಮೀನು ಸಿಕ್ಕವರಿಗೆ ಅಂತೂ ಖುಷಿಯೋ ಖುಷಿಯಾಗಿದೆ.

    ಇನ್ನೂ ಚಿಂತಾಮಣಿ ತಾಲೂಕಿನಾದ್ಯಾಂತ ಕಳೆದ ರಾತ್ರಿ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿ ಚೊಕ್ಕಹಳ್ಳಿ, ಕಾಗತಿ ಗ್ರಾಮಗಳಲ್ಲಿ ಮಳೆಯ ನೀರು ಮನೆಗಳಿಗೆ ನುಗ್ಗಿದೆ.

    ಮತ್ತೊಂದೆಡೆ ಚಿಂತಾಮಣಿಯ ಕರಿಯಪ್ಪಲ್ಲಿ ಬಳಿಯ ಅಗ್ನಿಶಾಮಕ ದಳ ಕಚೇರಿಗೂ ಮಳೆಯ ನೀರು ನುಗ್ಗಿ ನಿಂತಿದ್ದ ಅಗ್ನಿಶಾಮಕ ದಳ ಲಾರಿ ಮಣ್ಣಿನಲ್ಲಿ ಕುಸಿದು ಹೋಗಿದೆ. ಇನ್ನೂ ಮುರಗಮಲ್ಲ ಹೊರ ಪೊಲೀಸ್ ಠಾಣೆಯ ಕಟ್ಟಡ ಕುಸಿದುಬಿದ್ದಿದೆ. ಮುರಗಮಲ್ಲ-ಚಿಂತಾಮಣಿ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ರಸ್ತೆ ಬದಿ ಮಣ್ಣಿನಲ್ಲಿ ಕುಸಿದಿದೆ.

     


  • ಕೆಆರ್‍ಎಸ್ ಒಳ ಹರಿವು ಹೆಚ್ಚಳ: ಡ್ಯಾಂನಲ್ಲಿ ನೀರು ಎಷ್ಟಿದೆ?

    ಕೆಆರ್‍ಎಸ್ ಒಳ ಹರಿವು ಹೆಚ್ಚಳ: ಡ್ಯಾಂನಲ್ಲಿ ನೀರು ಎಷ್ಟಿದೆ?

    ಮಂಡ್ಯ: ಕಾವೇರಿ ಕೊಳ್ಳದ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಶ್ರೀರಂಗ ಪಟ್ಟಣದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾಗುತ್ತಿದೆ.

    ಈಗ 1262 ಕ್ಯೂಸೆಕ್ ಒಳಹರಿವು ಇದ್ದು, 1076 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. 124.80 ಅಡಿ ನೀರಿನ ಸಂಗ್ರಹ ಸಾಮರ್ಥ್ಯ ಇರುವ ಜಲಾಶಯದಲ್ಲಿ ಈಗ 67.90 ಅಡಿಗಳಷ್ಟು ನೀರು ಸಂಗ್ರಹವಾಗಿದೆ.

    ಕ್ಯೂಸೆಕ್ ಟಿಎಂಸಿ ಎಂದರೆ ಎಷ್ಟು?
    ಕ್ಯೂಸೆಕ್ ಎಂಬುದು cubic foot per second ಹೃಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

     

  • ಕೆಆರ್‍ಎಸ್ ಡ್ಯಾಂಗೆ ಒಳಹರಿವು ಹೆಚ್ಚಳ: ನಿನ್ನೆ ಎಷ್ಟು ಇತ್ತು ,ಈಗ ಎಷ್ಟಾಗಿದೆ?

    ಕೆಆರ್‍ಎಸ್ ಡ್ಯಾಂಗೆ ಒಳಹರಿವು ಹೆಚ್ಚಳ: ನಿನ್ನೆ ಎಷ್ಟು ಇತ್ತು ,ಈಗ ಎಷ್ಟಾಗಿದೆ?

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗುತ್ತಿದ್ದು, ಮಂಡ್ಯ ಜಿಲ್ಲೆಯ ವಿಶ್ವವಿಖ್ಯಾತ ಕೆಆರ್‍ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ,

    ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‍ಎಸ್ ಡ್ಯಾಂಗೆ ಒಳಹರಿವು ಹೆಚ್ಚಳವಾಗಿದೆ. ಬುಧವಾರ 601 ಕ್ಯೂಸೆಕ್ ಇದ್ದ ಒಳಹರಿವು, ಗುರುವಾರ 1135 ಕ್ಯೂಸೆಕ್‍ಗೆ ಹೆಚ್ಚಳವಾಗಿದೆ. ಅಣೆಕಟ್ಟೆಯ ನೀರು ಸಂಗ್ರಹ ಗರಿಷ್ಠ ಮಟ್ಟ 124.80 ಅಡಿ ಇದೆ. ಪ್ರಸ್ತುತ ಡ್ಯಾಂನಲ್ಲಿರುವ ನೀರು ಸಂಗ್ರಹ ಪ್ರಮಾಣ 67.60 ಅಡಿಗೆ ಏರಿಕೆಯಾಗಿದೆ.

    ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
    ಕ್ಯೂಸೆಕ್ ಎಂಬುದು cubic foot per second ಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.