Tag: Residential Building

  • Maharashtra | ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ – ನಾಲ್ವರು ಸಾವು, 10 ಮಂದಿಗೆ ಗಾಯ

    Maharashtra | ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ – ನಾಲ್ವರು ಸಾವು, 10 ಮಂದಿಗೆ ಗಾಯ

    ಮುಂಬೈ: ಮಹಾರಾಷ್ಟ್ರದ (Maharshtra) ನವಿ ಮುಂಬೈ (Navi Mumbai) ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ವಾಶಿ ಪ್ರದೇಶದ ಸೆಕ್ಟರ್ 14ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ ಕಾಂಪ್ಲೆಕ್ಸ್‌ನ 10ನೇ ಫ್ಲೋರ್‌ನಲ್ಲಿರುವ ಫ್ಲಾಟ್‌ನಲ್ಲಿ ಸೋಮವಾರ ಮಧ್ಯರಾತ್ರಿ 12:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ 11 ಮತ್ತು 12ನೇ ಮಹಡಿಗೂ ಹರಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಡ್ರೆಸ್ಸಿಂಗ್‌ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ್ಕೆ ಕ್ಯಾಪ್ಟನ್ಸಿಯಿಂದ ರಿಜ್ವಾನ್‌ ಔಟ್‌!

    ಬೆಂಕಿ ಅವಘಡದಲ್ಲಿ ಇಬ್ಬರು ಮಹಿಳೆಯರು, ಒಬ್ಬ ಪುರುಷ ಮತ್ತು 6 ವರ್ಷದ ಬಾಲಕಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವಾಶಿಯ ಎರಡು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಇದನ್ನೂ ಓದಿ: ಇಂದಿನಿಂದ ನಾಲ್ಕು ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ

    ಬೆಂಕಿ ಅವಘಡದ ಕುರಿತು ಮಾಹಿತಿ ದೊರೆಯುತ್ತಿದ್ದಂತೆ 40 ಅಗ್ನಿಶಾಮಕ ದಳದ ಸಿಬ್ಬಂದಿ, 8 ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಮಂಗಳವಾರ ಬೆಳಗ್ಗೆ 4 ಗಂಟೆಯ ಸುಮಾರಿಗೆ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಇದನ್ನೂ ಓದಿ: ಪಟಾಕಿ ಸಿಡಿಸಲು ಹೋಗಿ ಅನಾಹುತ – ನಾರಾಯಣ ನೇತ್ರಾಲಯದಲ್ಲಿ 20 ಕೇಸ್ ದಾಖಲು

  • ಕಳಪೆ ಕಾಮಗಾರಿ – KRIDL ವಿರುದ್ಧ ಬಿಸಿಎಂನಿಂದ ಕ್ರಿಮಿನಲ್ ಕೇಸ್ ದಾಖಲು

    ಕಳಪೆ ಕಾಮಗಾರಿ – KRIDL ವಿರುದ್ಧ ಬಿಸಿಎಂನಿಂದ ಕ್ರಿಮಿನಲ್ ಕೇಸ್ ದಾಖಲು

    ಕಲಬುರಗಿ: ಬಿಸಿಎಂ ವಸತಿ ನಿಲಯದ ಕಟ್ಟಡದ ಕಳಪೆ ಕಾಮಗಾರಿ ಮಾಡಿದ್ದಕ್ಕೆ ಕೆಆರ್‌ಐಡಿಎಲ್‌(ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿ.) ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ.

    2016ರಲ್ಲಿ ಬಿಸಿಎಂ ಇಲಾಖೆಯಿಂದ ವಸತಿ ನಿಲಯದ ಕಾಮಗಾರಿ ಪಡೆದ ಕೆಆರ್‌ಐಡಿಎಲ್‌ ಅವಧಿ ಮುಗಿದಿದ್ದರೂ ಸಹ ಕಟ್ಟಡ ಕಾಮಗಾರಿ ಮುಗಿಸಿರಲಿಲ್ಲ. ಹೀಗಾಗಿ ಬಿಸಿಎಂ ಇಲಾಖೆ ಜಿಲ್ಲಾ ಅಧಿಕಾರಿ ರಮೇಶ್ ಸಂಗಾ ಅವರು ಸ್ಥಳ ಪರಿಶೀಲನೆಗೆ ತೆರಳಿದ್ದರು. ಮದರಸಹಳ್ಳಿಯ ಜಿಡಿಎ ಲೇಔಟ್ ಬಳಿ 3 ಕೋಟಿ 25 ಲಕ್ಷ ವೆಚ್ಚದಲ್ಲಿ ಇಂದಿರಾಗಾಂಧಿ ನರ್ಸಿಂಗ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿ ಸೇರಿದಂತೆ ಕೆಆರ್‌ಐಡಿಎಲ್‌ ನಿರ್ಮಿಸುತ್ತಿರುವ ಜಿಲ್ಲೆಯ ಒಟ್ಟು 11 ವಸತಿ ನಿಲಯಗಳಿಗೆ ರಮೇಶ್ ಸಂಗಾ ಅವರು ಭೇಟಿ ನೀಡಿದರು.

    ಕಟ್ಟಡಗಳ ಕಾಮಗಾರಿ ಕಂಡ ರಮೇಶ್ ಸಂಗಾ ಅವರಿಗೆ ಆಶ್ಚರ್ಯವಾಗಿದೆ. ಒಂದೆಡೆ ಬಹುತೇಕ ಕಟ್ಟದ ಗೋಡೆಗಳು ಸಂಪೂರ್ಣ ಬಿರುಕು ಬಿಟ್ಟಿವೆ. ಇನ್ನೊಂದೆಡೆ ಕಟ್ಟಡ ಛಾವಣಿ ಸಹ ಹಲವೆಡೆ ಸೋರುತ್ತಿವೆ. ಅಷ್ಟೇ ಅಲ್ಲದೆ ಇಡೀ ಕಟ್ಟಡಕ್ಕೆ ಬಳಸಿದ ಎಲೆಕ್ಟ್ರಿಕಲ್ ವೈರಿಂಗ್ ಮತ್ತು ಡ್ರೈನೇಜ್ ಪೈಪ್‍ಗಳು ಐಎಸ್‍ಐ ಮಾರ್ಕ್ ಹೊಂದಿಲ್ಲ. ವಸತಿ ನಿಲಯದ ಬಹುತೇಕ ಬಾಗಿಲುಗಳು ಕಳಪೆ ಗುಣಮಟ್ಟದ್ದಾಗಿದ್ದು, ಈಗಾಗಲೇ ಅವುಗಳು ಮುರಿಯುವ ಹಂತಕ್ಕೆ ಬಂದಿವೆ.

    ಕೈ ಮುಟ್ಟಿದರೆ ಸಾಕು ಕಟ್ಟಡದ ಗೋಡೆಯ ಸಿಮೆಂಟ್ ಕುಸಿದು ಬಿಳುತ್ತಿದೆ. ಹೀಗಿರುವಾಗ ಇದು ವಸತಿಗೆ ಯೋಗ್ಯವಲ್ಲ, ಅವರ ಪ್ರಾಣದ ಜೊತೆ ಚೆಲ್ಲಾಟವಾಡಿ ಬಿಸಿಎಂ ಇಲಾಖೆಗೆ ಕೆಆರ್‌ಐಡಿಎಲ್‌ ಅಧಿಕಾರಿಗಳು ವಂಚಿಸಿದ ಹಿನ್ನೆಲೆಯಲ್ಲಿ ಕೆಆರ್‌ಐಡಿಎಲ್‌ ಕಾರ್ಯನಿರ್ವಾಹಕ ಅಭಿಯಂತರಾದ ಧನ್ಯಕುಮಾರ್ ಹಾಗೂ ಕಾರ್ಯನಿರ್ವಾಹಕ ಅಭಿಯಂತರ ಎಲ್.ಜೆ ಪಾಟೀಲ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ ಈ ಮೂಲಕ ಕಳಪೆ ಕಾಮಗಾರಿಗೆ ಹೆಸರಾದ ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ ರಾಜ್ಯದಲ್ಲಿ ಬೇರೆ ಇಲಾಖೆಯಿಂದ ಮೊದಲ ಬಾರಿಗೆ ಕ್ರಿಮಿನಲ್ ಕೇಸ್ ದಾಖಲಾಗಿದೆ.