Tag: Resistance

  • ಧಾರವಾಡ ಕೃಷಿ ವಿವಿ ಗುತ್ತಿಗೆ ನೌಕರರ ಅಪಘಾತ ಕೇಸ್‍ಗೆ ಟ್ವಿಸ್ಟ್ – ಸಿಐಡಿ ತನಿಖೆಗೆ ಆಗ್ರಹ

    ಧಾರವಾಡ ಕೃಷಿ ವಿವಿ ಗುತ್ತಿಗೆ ನೌಕರರ ಅಪಘಾತ ಕೇಸ್‍ಗೆ ಟ್ವಿಸ್ಟ್ – ಸಿಐಡಿ ತನಿಖೆಗೆ ಆಗ್ರಹ

    ಧಾರವಾಡ: ಕೃಷಿ ವಿವಿಯ ಗುತ್ತಿಗೆ ನೌಕರರ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣವನ್ನು ಸಿಐಡಿ ತನಿಖೆಗೆ ನಡೆಸಬೇಕೆಂದು ಕುಟುಂಬ ಸದಸ್ಯರು ಆಗ್ರಹಿಸಿದ್ದಾರೆ.

    ಜನವರಿ 31 ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲ ನಡೆದ ಅಪಘಾತದಲ್ಲಿ, ಗುತ್ತಿಗೆ ಆಧಾರದ ಕೆಲಸ ಮಾಡುವ ಮಹಿಳಾ ನೌಕರರಿಬ್ಬರು ಮೃತ ಪಟ್ಟಿದ್ದರು. ರೇಖಾ ಕೊಕಟನೂರ ಹಾಗೂ ಮೇಘಾ ಸಿಂಗನಾಥ ಮೃತಪಟ್ಟಿರುವ ಹಿಂದೆ ಶಂಕೆ ಇದೆ ಎಂದು ಆರೋಪಿಸಿ ಮೃತರ ಕುಟುಂಬದವರು ಹಾಗೂ ಬಜರಂಗ ದಳದ ಕಾರ್ಯಕರ್ತರು ಧಾರವಾಡ ಕೃಷಿ ವಿವಿಯಲ್ಲಿ ಪ್ರತಿಭಟನೆ ನಡೆಸಿದರು.

    ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ ಇವರು, ರಜೆ ದಿನ ಇದ್ದಾಗ ವಿವಿ ಕುಲಪತಿ ಆಪ್ತ ಸಹಾಯಕ ಮನ್ಸೂರ ಮುಲ್ಲಾ ಹಾಗೂ ಯು ಬಿ ಮೇಸ್ತ್ರಿ ಎನ್ನುವವರು, ರೇಖಾ ಹಾಗೂ ಮೇಘಾಗೆ ಪುಸಲಾಯಿಸಿ ಉತ್ತರ ಕನ್ನಡ ಜಿಲ್ಲೆಗೆ ಕರೆದುದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

    ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು. ಈ ಸಾವಿಗೆ ಕಾರಣರಾದ ಮುಲ್ಲಾ ಅವರಿಗೆ ವಜಾ ಮಾಡಬೇಕು ಎಂದು ಮನವಿ ಮಾಡಿದರು. ಬಾಗಲಕೋಟೆಗೆ ಹೋಗುವುದಾಗಿ ಮೃತ ಯುವತಿಯರು ಮನೆಯಲ್ಲಿ ಹೇಳಿದ್ದರು ಎಂದು ಮೃತ ರೇಖಾ ಸಹೋದರ ಹೇಳಿದ್ದಾರೆ.

    ವಿವಿಯಿಂದ ಯಾವುದೇ ಕೆಲಸದಿಂದ ಅವರು ಹೋಗಿರಲಿಲ್ಲ, ಆ ದಿನ ರಜೆ ಇದ್ದ ಕಾರಣ, ವಿವಿಯ ವಾಹನ ಸಹ ಬಳಕೆಯಾಗಿಲ್ಲ, ಕುಟುಂಬಸ್ಥರ ಪರಿಹಾರ ಬೇಡಿಕೆ ಬಗ್ಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳುವದಾಗಿ ಕೃಷಿ ವಿವಿಯ ಕುಲಪತಿ ಎಂ ಬಿ ಚೇಟ್ಟಿ ಹೇಳಿದ್ದಾರೆ.

  • ಕಾಯಂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ

    ಕಾಯಂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ

    ಧಾರವಾಡ: ತಾಲೂಕಿನ ಲಕಮಾಪುರ ಗ್ರಾಮಸ್ಥರಿಗೆ ಕಾಯಂ ರುದ್ರಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಲಕಮಾಪುರ ಗ್ರಾಮದ ಅಲ್ಪಸಂಖ್ಯಾತರು, ಕುರುಬರು, ಉಪ್ಪಾರರು, ವಿಶ್ವಕರ್ಮರು, ಹಡಪದ ಜನಾಂಗದವರು ಹಾಗೂ ಮರಾಠಾ ಸಮುದಾಯದ ಜನ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಧಾರವಾಡದ ಉಳವಿ ಚನ್ನಬಸವೇಶ್ವರ ದೇವಸ್ಥಾನದಿಂದ ವಾದ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ ಬಂದ ಗ್ರಾಮಸ್ಥರು, ಜಿಲ್ಲಾಧಿಕಾರಿ ಕಚೇರಿ ಎದುರು ಕುಳಿತು ಬೊಬ್ಬೆ ಹೊಡೆದು ಪ್ರತಿಭಟನೆ ನಡೆಸಿದರು.

    ಲಕಮಾಪುರ ಗ್ರಾಮದ ಸರ್ವೆ ನಂಬರ್ 5 ರಲ್ಲಿ ಅನಾದಿ ಕಾಲದಿಂದಲೂ ಶವ ಸಂಸ್ಕಾರ ಮಾಡುತ್ತ ಬರಲಾಗಿದೆ.  ಈ ಜಾಗವನ್ನು ವಿಜಯಲಕ್ಷ್ಮೀ ತಾನಾಜಿ ಪಾಟೀಲ ಎನ್ನುವವರು ಪರಬಾರೆ ಮಾಡಲು ತಯಾರಿ ನಡೆಸಿದ್ದು, ಗಮನಕ್ಕೆ ಬಂದಿದೆ. ಹೀಗೆ ಪರಬಾರೆ ಮಾಡಿದರೆ, ನಮ್ಮ ಸಮುದಾಯದ ಜನರು ಮೃತಪಟ್ಟರೆ ಶವ ಸಂಸ್ಕಾರ ಮಾಡಲು ಅಡ್ಡಿಪಡಿಸಬಹುದು. ಹೀಗಾಗಿ ವಿಜಯಲಕ್ಷ್ಮೀ ಅವರಿಗೆ ಈ ಜಮೀನು ಪರಬಾರೆ ಮಾಡಲು ಅನುಮತಿ ನೀಡಬಾರದು. ಒಂದು ವೇಳೆ ಅವರಿಗೆ ಅನುಮತಿ ನೀಡಿದ್ದೇ ಆದಲ್ಲಿ ನಾವುಗಳು ರಸ್ತೆ ಬದಿ ಶವ ಸಂಸ್ಕಾರ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    15 ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು, ಲಕಮಾಪುರ ಗ್ರಾಮಕ್ಕೆ ಕಾಯಂ ರುದ್ರಭೂಮಿ ನೀಡಲು 1994 ರಿಂದ ಮನವಿ ನೀಡುತ್ತ ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಸಂಬಂಧ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದರೆ ಡಿಸಿ ಕಚೇರಿ ಎದುರೇ ಅನಿರ್ಧಿಷ್ಟಾವಧಿ ಧರಣಿ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

  • ಎರಡೂವರೆ ತಿಂಗಳಲ್ಲಿ 29 ಜಾನುವಾರು ಬಲಿ- ಕೊಡಗಿನಲ್ಲಿ ನಿಲ್ಲದ ಹುಲಿ ಹಾವಳಿ

    ಎರಡೂವರೆ ತಿಂಗಳಲ್ಲಿ 29 ಜಾನುವಾರು ಬಲಿ- ಕೊಡಗಿನಲ್ಲಿ ನಿಲ್ಲದ ಹುಲಿ ಹಾವಳಿ

    – ಅರಣ್ಯ ಇಲಾಖೆಯ ಬೋನಿಗೆ ಬೀಳದ ಹುಲಿರಾಯ
    – ನಿದ್ದೆ ಇಲ್ಲದೆ ಟಾರ್ಚ್ ಹಿಡಿದು ಹಸುಗಳನ್ನು ಕಾಯುವ ಕೆಲಸ

    ಮಡಿಕೇರಿ: ವರ್ಷದ ಎಲ್ಲ ದಿನಗಳಲ್ಲೂ ಕಾಡಾನೆ ಹಾವಳಿಯಿಂದ ಕಂಗೆಡುತ್ತಿದ್ದ ಕೊಡಗು ಜಿಲ್ಲೆಯ ಜನರು ಇದೀಗ ಹುಲಿಯ ಹಾವಳಿಯಿಂದ ಭಯಗೊಂಡಿದ್ದಾರೆ. ವಿರಾಜಪೇಟೆ ತಾಲೂಕಿನ ಸುತ್ತ ಕಳೆದ ಎರಡೂವರೆ ತಿಂಗಳಲ್ಲಿ ಹುಲಿ ದಾಳಿಗೆ ಸುಮಾರು 29 ಜಾನುವಾರುಗಳು ಬಲಿಯಾಗಿವೆ. ಇದು ಜನರನ್ನು ಆತಂಕಕ್ಕೆ ಉಂಟು ಮಾಡಿದ್ದು, ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಬೋನ್ ಇಟ್ಟು ಕಾಯುತ್ತಿದೆ.

    ಕಳೆದ ಒಂದೇ ತಿಂಗಳಲ್ಲಿ 15ಕ್ಕೂ ಹೆಚ್ಚು ಜಾನುವಾರುಗಳನ್ನು ಹುಲಿ ಕೊಂದು ತಿಂದಿದೆ. ವಿರಾಜಪೇಟೆ ತಾಲೂಕಿನ ಬಾಳೆಲೆ, ನಿಟ್ಟೂರು, ಹುದಿಕೇರಿ, ಬೆಳ್ಳೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜಾನುವಾರುಗಳನ್ನು ಟಾರ್ಗೆಟ್ ಮಾಡಿ ಹುಲಿ ದಾಳಿ ನಡೆಸುತ್ತಿದೆ. ಈ ವ್ಯಾಪ್ತಿಯಲ್ಲಿ ಕೇವಲ ಒಂದೇ ಹುಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ಅಂದಾಜಿಸಲಾಗಿದೆ. ಅರಣ್ಯ ಇಲಾಖೆ ಹುಲಿ ಸೆರೆಗಾಗಿ ಬೋನ್ ಇಟ್ಟಿದೆ. ಆದರೆ ಹುಲಿ ಬೋನ್ ಕಡೆ ಸುಳಿಯುತ್ತಲೇ ಇಲ್ಲ.

    ಜನರು ಹುಲಿಯ ಆತಂಕದಿಂದ ರಾತ್ರಿ ಇಡೀ ಟಾರ್ಚ್ ಹಾಕಿ ಜಾರುವಾರುಗಳಿಗೆ ರಕ್ಷಣೆ ನೀಡುತ್ತಿದ್ದಾರೆ. ಹುಲಿ ದಾಳಿಯಿಂದಾಗಿ ಜಾರುವಾರುಗಳು ಸಾವನ್ನಪ್ಪಿದರೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಕೇವಲ 2-3 ಸಾವಿರ ರೂ. ಪರಿಹಾರ ನೀಡುತ್ತಾರೆ. ಆದರೆ ಒಂದು ಜರ್ಸಿ ತಳಿಯ ಹಸುಗೆ ಕನಿಷ್ಠ 40 ರಿಂದ 50 ಸಾವಿರ ರೂ ಬೆಲೆ ಇದೆ. ಹೀಗಾಗಿ ಜಾನುವಾರುಗಳನ್ನು ಸಾಕಿಕೊಂಡು ಬದುಕು ದೂಡುತ್ತಿರುವ ಬಡ ರೈತರು ಹುಲಿ ದಾಳಿಯಿಂದ ಕಂಗಾಲಾಗಿದ್ದಾರೆ.

    ಶನಿವಾರ ಸಂಜೆ ಬೆಳ್ಳೂರು ಗ್ರಾಮದ ಗೋಪಾಲ್ ಎಂಬವರಿಗೆ ಸೇರಿದ ಹಸುವನ್ನು ಹುಲಿ ಕೊಂದು ಹಾಕಿದೆ. ಈ ಹಿನ್ನೆಲೆ ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಹುದಿಕೇರಿ ಹೋಬಳಿ ಸಂಚಾಲಕ ಸೂರಜ್ ಅವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳು ಬರುವಂತೆ ಒತ್ತಾಯಿಸಿ ಸ್ಥಳೀಯ ಸಿಬ್ಬಂದಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ದಿನ ನಿತ್ಯ ಹುಲಿ ಹಾವಳಿಯಿಂದ ಗ್ರಾಮದಲ್ಲಿ ಜೀವನ ಮಾಡುವುದೇ ಕಷ್ಟವಾಗಿ ಸೂಕ್ತ ಪರಿಹಾರ ನೀಡಬೇಕು ಮತ್ತು ಅದಷ್ಟು ಬೇಗ ಹುಲಿ ಸೆರೆ ಹಿಡಿಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.