Tag: Resorts

  • ಕಾಶ್ಮೀರದಲ್ಲಿ 48 ಪ್ರವಾಸಿ ತಾಣಗಳು ಬಂದ್‌ – ಉಗ್ರರ ಸಂಭಾವ್ಯ ದಾಳಿಯ ಎಚ್ಚರಿಕೆ ಕೊಟ್ಟ ಗುಪ್ತಚರ

    ಕಾಶ್ಮೀರದಲ್ಲಿ 48 ಪ್ರವಾಸಿ ತಾಣಗಳು ಬಂದ್‌ – ಉಗ್ರರ ಸಂಭಾವ್ಯ ದಾಳಿಯ ಎಚ್ಚರಿಕೆ ಕೊಟ್ಟ ಗುಪ್ತಚರ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu & Kashmir) ಸರ್ಕಾರವು ಭದ್ರತಾ ದೃಷ್ಟಿಯಿಂದ 48 ಪ್ರವಾಸಿ ತಾಣಗಳನ್ನು ಬಂದ್‌ ಮಾಡಿದೆ.

    ಕೇಂದ್ರಾಡಳಿತ ಪ್ರದೇಶದ ರೆಸಾರ್ಟ್‌ಗಳು, ಪ್ರವಾಸಿ ತಾಣಗಳನ್ನು ಮುಚ್ಚಲಾಗಿದೆ. ಪಹಲ್ಗಾಮ್‌ನ ಸುಂದರವಾದ ಹುಲ್ಲುಗಾವಲುಗಳಲ್ಲಿ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ಕೆಲವು ದಿನಗಳ ನಂತರ ಭದ್ರತಾ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ. ಇದನ್ನೂ ಓದಿ: ಪಹಲ್ಗಾಮ್ ಅಟ್ಟಹಾಸದ ಬಳಿಕ ಪಾಕ್ ಪ್ರಜೆಗಳ ಗಡೀಪಾರು – 55,000 ಮಂದಿಗಿಲ್ಲ ಗಡೀಪಾರಿನ ಆತಂಕ!

    ನೈಸರ್ಗಿಕ ಸೊಬಗಿನ ತಾಣ ಸುಂದರ ಭೂದೃಶ್ಯಗಳ ಗುರೆಜ್ ಕಣಿವೆ ಸೇರಿದಂತೆ ಒಟ್ಟು 48 ತಾಣಗಳು ಪ್ರವಾಸಿಗರಿಗೆ ತಾತ್ಕಾಲಿಕ ಬಂದ್ ಮಾಡಲಾಗಿದೆ. ಪ್ರಶಾಂತ ಕಣಿವೆಗಳು ಮತ್ತು ಸುಂದರವಾದ ಪರ್ವತಗಳಿಗೆ ಹೆಸರುವಾಸಿಯಾದ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಬುಡ್ಗಾಮ್‌ನ ದೂಧ್‌ಪತ್ರಿ ಮತ್ತು ಅನಂತ್‌ನಾಗ್‌ನ ವೆರಿನಾಗ್‌ನಂತಹ ಹಲವಾರು ಪ್ರವಾಸಿ ತಾಣಗಳನ್ನು ಪ್ರವಾಸಿಗರಿಗೆ ನಿಷೇಧಿಸಲಾಗಿದೆ.

    ಸ್ಥಳೀಯರಿಗೆ ಪ್ರಮುಖ ಆದಾಯದ ಮೂಲವಾದ ಕಾಶ್ಮೀರ ಪ್ರವಾಸೋದ್ಯಮದ ಬಗ್ಗೆ ಅನಿಶ್ಚಿತತೆಯ ಮಧ್ಯೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹತ್ಯಾಕಾಂಡದ ನಂತರ ಭಯಭೀತರಾದ ಪ್ರವಾಸಿಗರು ಕೇಂದ್ರಾಡಳಿತ ಪ್ರದೇಶದಿಂದ ಪಲಾಯನ ಮಾಡುತ್ತಿದ್ದಾರೆ, ಆದರೆ ಅನೇಕ ಪ್ರಯಾಣಿಕರು ತಮ್ಮ ಮುಂಬರುವ ಪ್ರವಾಸಗಳನ್ನು ರದ್ದುಗೊಳಿಸಿದ್ದಾರೆ. ಇದನ್ನೂ ಓದಿ: ಉಗ್ರರು ಗುಂಡು ಹಾರಿಸುವ ಹೊತ್ತಲ್ಲಿ 3 ಬಾರಿ ‘ಅಲ್ಲಾಹು ಅಕ್ಬರ್‌’ ಅಂತ ಕೂಗಿದ ಜಿಪ್‌ಲೈನ್‌ ಆಪರೇಟರ್‌

    ಕೇವಲ ಒಂದು ವಾರದ ಹಿಂದೆ, ಪಹಲ್ಗಾಮ್ ಪಟ್ಟಣವು ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಮಾರುಕಟ್ಟೆಯಾಗಿತ್ತು. ಆದರೆ, ಈಗ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ.

  • ನ್ಯೂಇಯರ್‌ಗೆ ಪೊಲೀಸರು ಅಲರ್ಟ್; ರೆಸಾರ್ಟ್‌, ಏರ್ಪೋರ್ಟ್‌, ರೈಲ್ವೆ ನಿಲ್ದಾಣಗಳ ಮೇಲೆ ಹದ್ದಿನ ಕಣ್ಣು

    ನ್ಯೂಇಯರ್‌ಗೆ ಪೊಲೀಸರು ಅಲರ್ಟ್; ರೆಸಾರ್ಟ್‌, ಏರ್ಪೋರ್ಟ್‌, ರೈಲ್ವೆ ನಿಲ್ದಾಣಗಳ ಮೇಲೆ ಹದ್ದಿನ ಕಣ್ಣು

    ಬೆಂಗಳೂರು: ಹೊಸ ವರ್ಷಕ್ಕೆ (New Year 2025) ಇನ್ನೇನು ಒಂದು ತಿಂಗಳಷ್ಟೇ ಬಾಕಿ ಇದೆ. ಆದ್ರೆ ಸಿಸಿಬಿ ಪೊಲೀಸರು ಈಗಾಗಲೇ ಅಲರ್ಟ್ ಆಗಿದ್ದಾರೆ. ಮಹಾನಗರಿ ಬೆಂಗಳೂರಿಗೆ ದೊಡ್ಡ ಮಟ್ಟದಲ್ಲಿ ಮಾದಕ ವಸ್ತುಗಳು ಬರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿದೆ.

    ಈ ಮಾಹಿತಿ ಆಧರಿಸಿ ಬೆಂಗಳೂರು ಸಿಸಿಬಿ ಪೊಲೀಸರು (Bengaluru CCB Police), ನಗರದ ಪ್ರತಿಷ್ಟಿತ ಹೋಟೆಲ್‌ಗಳು, ಹೊರವಲಯದ ಫಾರಂ ಹೌಸ್‌ಗಳು, ರೆಸಾರ್ಟ್‌ಗಳ ಮೇಲೆ ತೀವ್ರ ನಿಗಾವಹಿಸಿದ್ದಾರೆ. ಇದನ್ನೂ ಓದಿ: QR ಕೋಡ್‌ ಇಲ್ಲದ ಪಾನ್‌ ಕಾರ್ಡ್‌ ಮಾನ್ಯವೇ? ಪಾನ್‌ 2.0 ಯೋಜನೆ ಏನು? ಹೊಸ ಪಾನ್‌ ಪಡೆಯುವುದು ಹೇಗೆ?

    ಅಷ್ಟೇ ಅಲ್ಲದೇ, ಏರ್‌ಪೋರ್ಟ್‌ಗಳು, ರೈಲ್ವೇ ನಿಲ್ದಾಣಗಳು, ಬಸ್ ನಿಲ್ದಾಣಗಳು, ಬೇರೆ ರಾಜ್ಯಗಳಿಂದ ನಗರಕ್ಕೆ ಬರುವ ರಾಷ್ಟೀಯ ಹೆದ್ದಾರಿಗಳಲ್ಲಿ ಗಮನ ಹರಿಸುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿಗೆ ಬೆದರಿಕೆ ಕೇಸ್‌ – 9 ಕೈದಿಗಳ ವಿರುದ್ಧ ಎಫ್‌ಐಆರ್‌

    ಇದರ ಜೊತೆಗೆ ಹೊಸ ವರ್ಷಾಚರಣೆಗೆ ಈಗಾಗಲೇ ಬುಕ್ಕಿಂಗ್ ಕೂಡ ಓಪನ್ ಆಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ನ್ಯೂ ಇಯರ್ ವೇಳೆ ಯಾವುದೇ ನಿಯಮ ಉಲ್ಲಂಘನೆ ಆಗದಂತೆ ಗೈಡ್‌ಲೈನ್ಸ್‌ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ

  • ಮಾಲ್ಡಿವ್ಸ್‌ನಲ್ಲಿ ನಟಿ ಮಣಿಯರು ಮಸ್ತ್ ಮಜಾ- ಹೋಟೆಲ್ ದರ ಎಷ್ಟು ಗೊತ್ತಾ!

    ಮಾಲ್ಡಿವ್ಸ್‌ನಲ್ಲಿ ನಟಿ ಮಣಿಯರು ಮಸ್ತ್ ಮಜಾ- ಹೋಟೆಲ್ ದರ ಎಷ್ಟು ಗೊತ್ತಾ!

    ಬೆಂಗಳೂರು: ಕೊರೊನಾ ಬಳಿಕ ನಟಿಮಣಿಯರಿಗೆ ಮಾಲ್ಡಿವ್ಸ್ ಫೇವರಿಟ್ ಪ್ಲೇಸ್ ಎನ್ನುವಂತಾಗಿದ್ದು, ಸ್ಯಾಂಡಲ್‍ವುಡ್, ಬಾಲಿವುಡ್ ಮಾತ್ರವಲ್ಲದೆ ಇದೀಗ ಟಾಲಿವುಡ್‍ನ ಸಮಂತಾ ಸಹ ಮಾಲ್ಡಿವ್ಸ್‌ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಹತ್ತಾರು ನಟಿಯರು ಐಲ್ಯಾಂಡ್‍ಗಳಲ್ಲಿ ಮೊಕ್ಕಾಂ ಹೂಡಿದ್ದು, ಕಡಲ ಕಿನಾರೆಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಹೀಗೆ ತಂಡೋಪತಂಡವಾಗಿ ನಟಿಮಣಿಯರು ಮಾಲ್ಡಿವ್ಸ್ ಗೆ ಭೇಟಿ ನೀಡಲು ಕಾರಣವೇನು, ಇದ್ದಕ್ಕಿದ್ದಂತೆ ಹೋಗಿದ್ದೇಕೆ, ಅಲ್ಲಿನ ಹೋಟೆಲ್ ಹೇಗಿವೆ, ಒಂದು ರಾತ್ರಿ ಹೋಟೆಲ್‍ಗಳಲ್ಲಿ ಕಾಲ ಕಳೆಯಲು ದರ ಎಷ್ಟು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

     

    View this post on Instagram

     

    A post shared by Shanvi sri (@shanvisri)

    ಕೊರೊನಾ ಲಾಕ್‍ಡೌನ್‍ನಿಂದಾಗಿ ಮನೆಯಲ್ಲೇ ಕಾಲ ಕಳೆಯುತ್ತಿದ್ದ ಸೆಲೆಬ್ರಿಟಿಗಳು ಇದೀಗ ಗೂಡಿನಿಂದ ಹಾರಿದ ಹಕ್ಕಿಗಳಂತಾಗಿದ್ದು, ತನಮ್ಮ ನೆಚ್ಚಿನ ಸ್ಥಳಗಳಿಗೆ ತೆರಳಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ನಟಿಮಣಿಯರಿಗೆ ಬೀಚ್, ನೀರು ಎಂದರೆ ಎಲ್ಲಿಲ್ಲದ ಪ್ರೀತಿ ಹೀಗಾಗಿ ಸ್ಯಾಂಡಲ್‍ವುಡ್, ಬಾಲಿವುಡ್ ಹಾಗೂ ಟಾಲಿವುಡ್‍ನ ಬೆಡಗಿಯರು ಮಾಲ್ಡಿವ್ಸ್‍ನ್ನು ತಮ್ಮ ಪ್ರವಾಸದ ಡೆಸ್ಟಿನೇಶನ್ ಮಾಡಿಕೊಂಡಿದ್ದಾರೆ. ಹತ್ತಾರು ನಟಿಯರು ಮತ್ಸ್ಯ ಕನ್ಯೆಯರಂತೆ ಸಮುದ್ರ ವಿಹಾರಿಗಳಾಗಿದ್ದಾರೆ.

    ಕನ್ನಡದ ಪ್ರಣೀತಾ, ಅವನೇ ಶ್ರೀಮನ್ನಾರಾಯಣ ಬೆಡಗಿ ಶಾನ್ವಿ ಶ್ರೀವಾಸ್ತವ್, ತೆಲುಗಿನ ಸಮಂತಾ ಅಕ್ಕಿನೇನಿ, ಕಾಜಲ್ ಅಗರ್ವಾಲ್ ದಂಪತಿ, ಬಾಲಿವುಡ್‍ನ ರಕುಲ್ ಪ್ರೀತ್ ಸಿಂಗ್, ದಿಶಾ ಪಟಾಣಿ, ಕತ್ರಿನಾ ಕೈಫ್, ಸೋನಾಕ್ಷಿ ಸಿನ್ಹಾ, ವರುಣ್ ಧವನ್, ಟೈಗರ್ ಶ್ರಫ್, ಮೌನಿ ರಾಯ್, ನೇಹಾ ಧುಪಿಯಾ ಸೇರಿದಂತೆ ಹತ್ತು ಹಲವು ನಟಿಯರು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಹೀಗೆ ತಂಡೋಪತಂಡವಾಗಿ ಒಮ್ಮೆಲೆ ನಟಿಮಣಿಯರು ಮಾಲ್ಡಿವ್ಸ್ ಗೆ ತೆರಳಿದ್ದಾರೆ.

     

    View this post on Instagram

     

    A post shared by Tiger Shroff (@tigerjackieshroff)

    ಸಮುದ್ರ ಪ್ರಿಯರಿಗೆ ಮಾಲ್ಡಿವ್ಸ್ ಹೇಳಿ ಮಾಡಿಸಿದ ಸ್ಥಳ. ತುಂಬಾ ಜನ ಮಾಲ್ಡಿವ್ಸ್ ಭೇಟಿ ನೀಡಲು ಪ್ರಮುಖ ಕಾರಣ ಅಲ್ಲಿನ ಹವಾಮಾನ. ಅದರಲ್ಲೂ ನವೆಂಬರ್ ನಿಂದ ಏಪ್ರಿಲ್ ವರೆಗೆ ಈ ದ್ವೀಪ ದೇಶಕ್ಕೆ ಭೇಟಿ ನೀಡಲು ಸೂಕ್ತ ಸಮಯವಾಗಿದೆ. ಈ ವೇಳೆ ಅಲ್ಲಿನ ತಾಪಮಾನ ಸರಾಸರಿ 29 ಡಿಗ್ರಿ ಸೆಲ್ಸಿಯಸ್‍ನಿಂದ 31 ಡಿಗ್ರಿ ಸೆಲ್ಸಿಯಸ್‍ವರೆಗೆ ಇರುತ್ತದೆ. ಈ ಸಮಯದಲ್ಲಿ ಮಳೆ ಹಾಗೂ ಬಿಸಿಲು ತುಂಬಾ ಕಡಿಮೆ ಹೀಗಾಗಿ ಹೆಚ್ಚು ಜನ ಭೇಟಿ ನೀಡುತ್ತಾರೆ.

    ಮಾಲ್ಡಿವ್ಸ್ ಯಾಕೆ ಇಷ್ಟ?
    ಮಾಲ್ಡಿವ್ಸ್ ದ್ವೀಪಗಳ ಸಮೂಹವಾಗಿದ್ದು, ಬರೋಬ್ಬರಿ 1,190ಕ್ಕೂ ಹೆಚ್ಚು ಹವಳ ದ್ವೀಪಗಳನ್ನು ಹೊಂದಿದೆ. ಇನ್ನೂ ವಿಶೇಷ ಎಂಬಂತೆ ಈ ದೇಶಕ್ಕೆ ಪ್ರಯಾಣಿಸುವವರಿಗಾಗಿ ನೈಸರ್ಗಿಕ ಪ್ರತ್ಯೇಕತೆಯನ್ನು ನೀಡಲಾಗುತ್ತದೆ. ಇಲ್ಲಿನ ರೆಸಾರ್ಟ್ ಹಾಗೂ ಪ್ರವಾಸೋದ್ಯಮ ಸಂಸ್ಥೆಗಳು ಪ್ರವಾಸೋದ್ಯಮ ಸಚಿವಾಲಯದ ಮಾರ್ಗಸೂಚಿಗಳನ್ನು ಚಾಚೂತಪ್ಪದೇ ಪಾಲಿಸುತ್ತವೆ. ಇದರಿಂದಾಗಿ ಸುರಕ್ಷತೆ ಹಾಗೂ ನೈರ್ಮಲ್ಯದ ಗುಣಮಟ್ಟವನ್ನು ಕಾಪಾಡಿಕೊಳ್ಳುತ್ತವೆ.

     

    View this post on Instagram

     

    A post shared by Rakul Singh (@rakulpreet)

    ಇಲ್ಲಿ ‘ಒಂದು ದ್ವೀಪ ಒಂದು ರೆಸಾರ್ಟ್’ ಪರಿಕಲ್ಪನೆಯನ್ನು ಅನುಸರಿಸಲಾಗುತ್ತದೆ. ಇದರಿಂದ ಮಾಲ್ಡಿವ್ಸ್ ಗೆ ಭೇಟಿ ನೀಡುವ ಪ್ರಯಾಣಿಕರು ತಾವು ಉಳಿದುಕೊಂಡ ರೆಸಾರ್ಟ್‍ಗೆ ಸೀಮಿತವಾಗುತ್ತಾರೆ. ಹೀಗಾಗಿ ಇತರ ಸ್ಥಳಗಳಿಗೆ ಹೋಲಿಸಿದರೆ ಇದು ಸುರಕ್ಷಿತ ಎನ್ನಿಸುತ್ತದೆ. ಅಲ್ಲದೆ ಮಾಲ್ಡಿವ್ಸ್ ಗೆ ಭೇಟಿ ನೀಡದ ಬಳಿಕ ಕ್ವಾರಂಟೈನ್ ಆಗುವ ಅಗತ್ಯವಿಲ್ಲ. ಮಾತ್ರವಲ್ಲದೆ ಪಾಸ್‍ಪೋರ್ಟ್ ಹೊಂದಿದ ಭಾರತೀಯರಿಗೆ 30 ದಿನಗಳ ಉಚಿತ ವೀಸಾವನ್ನು ಸಹ ನೀಡಲಾಗುತ್ತದೆ. ಹೀಗಾಗಿ ಯಾವುದೇ ಸಮಸ್ಯೆ ಇಲ್ಲದೆ ಆರಾಮವಾಗಿ ಮಾಲ್ಡಿವ್ಸ್ ಗೆ ಭೇಟಿ ನೀಡಬಹುದಾಗಿದೆ.

     

    View this post on Instagram

     

    A post shared by Shanvi sri (@shanvisri)

    ರೆಸಾರ್ಟ್ ದರವೆಷ್ಟು?
    ಮಾಲ್ಡಿವ್ಸ್ ನಲ್ಲಿ ಪ್ರತಿ ದ್ವೀಪಕ್ಕೊಂದು ರೆಸಾರ್ಟ್ ಇದ್ದು, ಸಾವಿರಕ್ಕೂ ಅಧಿಕ ರೆಸಾರ್ಟ್‍ಗಳಿವೆ. ಸಾವಿರದಿಂದ ಲಕ್ಷಾಂತರ ರೂ. ದರದ ರೆಸಾರ್ಟ್‍ಗಳಿದ್ದು, ಸಾಮರ್ಥ್ಯಕ್ಕನುಸಾರ ಬುಕ್ ಮಾಡಿಕೊಳ್ಳಬಹುದು. ಅಲ್ಲದೆ ಟ್ರಾವೆಲ್ ಏಜೆನ್ಸಿಗಳ ಮೂಲಕ ಸಹ ತೆರಳಬಹುದಾಗಿದೆ. ಸದ್ಯ ಟಾಲಿವುಡ್ ನಟಿ ಸಮಂತಾ ಅವರು ತಂಗಿರುವ ಜೋಲಿ ಮಾಲ್ಡಿವ್ಸ್ ರೆಸಾರ್ಟ್ ನಲ್ಲಿ ಒಂದು ದಿನಕ್ಕೆ ರೂಂ ಬಾಡಿಗೆ ಬರೋಬ್ಬರಿ 1.5 ಲಕ್ಷ ರೂ.ಗಳಾಗಿವೆ.

     

    View this post on Instagram

     

    A post shared by Sonakshi Sinha (@aslisona)

    ಇತ್ತೀಚೆಗೆ ನಟಿ ಕಾಜಲ್ ಅಗರ್ವಾಲ್ ಹಾಗೂ ಗೌತಮ್ ಕಿಚ್ಲು ಜೋಡಿ ಸಹ ಹನಿಮೂನ್‍ಗಾಗಿ ಮಾಲ್ಡಿವ್ಸ್ ಗೆ ತೆರಳಿದ್ದರು. ಇವರು ಅಂಡರ್ ವಾಟರ್ ಹೋಟೆಲ್‍ನಲ್ಲಿ ತಂಗಿದ್ದರು. ಇದು ವಿಶ್ವದ ಮೊದಲ ಸಬ್‍ಮರ್ಜಡ್ ಹೋಟೆಲ್ ಆಗಿದ್ದು, ಹಿಂದೂ ಮಹಾಸಾಗರದ ಮೇಲ್ಮೈಗಿಂತ 16 ಅಡಿ ಆಳದಲ್ಲಿರುವ ವಿಶ್ವದ ಮೊದಲ ಹೋಟೆಲ್ ಆಗಿದೆ. ಕಾಜಲ್ ದಂಪತಿ ಮುರಾಕಾ ಹೋಟೆಲ್‍ನಲ್ಲಿ ತಂಗಿದ್ದು, ಇದರ ಒಂದು ದಿನದ ಬಾಡಿಗೆ ಅಂದಾಜು 37.33 ಲಕ್ಷ ರೂ.ಗಳಾಗಿವೆ. ಇತ್ತೀಚೆಗೆ ಕಾಜಲ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಂಚಿಕೊಂಡಿದ್ದು, ಸಮುದ್ರದ ಆಳದಲ್ಲಿರುವ ಗಾಜಿನ ರೂಮ್‍ನಲ್ಲಿ ಕುಳಿತಿರುವ ಚಿತ್ರವನ್ನು ಅವರು ಪೋಸ್ಟ್ ಮಾಡಿದ್ದರು. ಈ ಮೂಲಕ ಅಂಡರ್ ವಾಟರ್ ವೇವ್ ತೋರಿಸಿದ್ದರು.

    ರೆಸಾರ್ಟ್‍ಗಳಲ್ಲಿ ಪ್ರೈವೆಸಿ ಹಾಗೂ ಉತ್ತಮ ವಾತಾವರಣ, ಯಾವುದೇ ಕಿರಿಕಿರಿ ಇಲ್ಲದ್ದರಿಂದ ಬಹುತೇಕ ನಟ, ನಟಿಯರು ಮಾಲ್ಡಿವ್ಸ್ ಗೆ ತೆರಳಲು ಇಷ್ಟಪಡುತ್ತಾರೆ. ಹೀಗಾಗಿಯೇ ಇದೀಗ ತಂಡೋಪ ತಂಡವಾಗಿ ತೆರಳಿದ್ದಾರೆ.

  • ಲಾಕ್‍ಡೌನ್ ಉಲ್ಲಂಘಿಸಿ ಪ್ರವಾಸ- ರೆಸಾರ್ಟಿನಲ್ಲಿ ಮೋಜು, ಮಸ್ತಿ

    ಲಾಕ್‍ಡೌನ್ ಉಲ್ಲಂಘಿಸಿ ಪ್ರವಾಸ- ರೆಸಾರ್ಟಿನಲ್ಲಿ ಮೋಜು, ಮಸ್ತಿ

    ಮಡಿಕೇರಿ: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಕೆಲ ವ್ಯಕ್ತಿಗಳು ಪ್ರವಾಸ ಕೈಗೊಂಡಿದ್ದು, ರೆಸಾರ್ಟಿನಲ್ಲಿ ಮೋಜು ಮಸ್ತಿ ನಡೆಸಿದ್ದಾರೆ.

    ಹೆಮ್ಮಾರಿ ಕೊರೊನಾ ವೈರಸ್ ನಿಯಂತ್ರಿಸಲು ದೇಶವನ್ನು ಲಾಕ್‍ಡೌನ್ ಮಾಡಿ ಜನರು ಮನೆಯಲ್ಲಿರುವಂತೆ ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ. ವೈದ್ಯರು, ಪೊಲೀಸರು ಹಗಲು ರಾತ್ರಿ ಎನ್ನದೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಬೆಂಗಳೂರಿನ ಜನರಿಗೆ ಮಾತ್ರ ಇದೆಲ್ಲಕ್ಕಿಂತ ಮೋಜು ಮಸ್ತಿ ಪ್ರವಾಸವೇ ಮುಖ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಕೆಲ ರೆಸಾರ್ಟ್ ಗಳಿಗೆ ದುಡಿಮೆಯೇ ಮುಖ್ಯವಾಗಿದೆ.

    ಸೋಮವಾರಪೇಟೆ ತಾಲೂಕಿನ 7ನೇ ಹೊಸಕೋಟೆ ಸಮೀಪದ ತೊಡೂರಿನಲ್ಲಿರುವ ಪ್ಯಾಡಿಂಗ್ಟನ್ ರೆಸಾರ್ಟ್ ನಲ್ಲಿ ಬೆಂಗಳೂರಿನ ಪ್ರವಾಸಿಗರು ಕಳೆದ ಕೆಲವು ದಿನಗಳಿಂದಲೂ ಮೋಜು ಮಸ್ತಿ ಮಾಡುತ್ತಿದ್ದಾರೆ. ಜೊತೆಗೆ ಪಕ್ಕದಲ್ಲೇ ಇರುವ ಚಿಕ್ಲಿಹೊಳೆ ಜಲಾಶಯಕ್ಕೆ ಸೈಕಲ್, ಜೀಪ್ ಮೂಲಕ ವಿಹಾರಕ್ಕೆ ತೆರಳಿ ಎಂಜಾಯ್ ಮಾಡುತ್ತಿದ್ದಾರೆ. ಕದ್ದು ಮುಚ್ಚಿ ಹೀಗೆ ಓಡಾಡಿಕೊಂಡಿದ್ದ ವೇಳೆ ಇಂದು ಗ್ರಾಮಸ್ಥರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ.

    ಜಿಲ್ಲೆಯಲ್ಲಿ ಓರ್ವರಿಗೆ ಕೊರೊನಾ ತಗುಲಿದ್ದರಿಂದ ಜಿಲ್ಲೆಯ ಎಲ್ಲಾ ಗಡಿಗಳನ್ನು ಬಂದ್ ಮಾಡಲಾಗಿತ್ತು. ಜಿಲ್ಲೆಯಿಂದ ಯಾರು ಹೊರ ಹೋಗದಂತೆ ಮತ್ತು ಒಳ ಬರದಂತೆ ಕಟ್ಟೆಚ್ಚರ ವಹಿಸಲಾಗಿದೆ. ಇಷ್ಟೆಲ್ಲಾ ಆದರೂ ಬೆಂಗಳೂರಿನಿಂದ ಕೆಲವರು ಕೊಡಗಿನ ರೆಸಾರ್ಟಿಗೆ ಬಂದಿದ್ದು ಹೇಗೆ ಎನ್ನುವ ಪ್ರಶ್ನೆ ಉದ್ಭವಿಸಿದೆ. ಅಷ್ಟೇ ಅಲ್ಲದೆ ಪ್ರವಾಸಿಗರಿಗೆ ಆತಿಥ್ಯ ನೀಡಿರುವ ಪ್ಯಾಡಿಂಗ್ಟನ್ ರೆಸಾರ್ಟ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.