Tag: Retired IAS officer

  • ನಿವೃತ್ತ ಐಎಎಸ್ ಅಧಿಕಾರಿ ರತ್ನಾಪ್ರಭಾರಿಗೆ ಪಕ್ಷಕ್ಕೆ ಆಹ್ವಾನಿಸಿದ ಅನಂತಕುಮಾರ್ ಹೆಗಡೆ

    ನಿವೃತ್ತ ಐಎಎಸ್ ಅಧಿಕಾರಿ ರತ್ನಾಪ್ರಭಾರಿಗೆ ಪಕ್ಷಕ್ಕೆ ಆಹ್ವಾನಿಸಿದ ಅನಂತಕುಮಾರ್ ಹೆಗಡೆ

    ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾರವರಿಗೆ ಬಿಜೆಪಿಗೆ ಸೇರುವಂತೆ ಟ್ವಿಟ್ಟರ್ ಮೂಲಕ ಕೇಂದ್ರ ಕೌಶಾಲ್ಯಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಆಹ್ವಾನ ನೀಡಿದ್ದಾರೆ.

    ಈ ಕುರಿತು ತಮ್ಮ ಟ್ವಿಟ್ಟರಿನಲ್ಲಿ, ನಿವೃತ್ತ ಐಎಎಸ್ ಅಧಿಕಾರಿಯಾದ ರತ್ನಪ್ರಭಾವರವರು ಬಿಜೆಪಿಗೆ ಸೇರ್ಪಡೆಗೊಳ್ಳುವುದುನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಅಲ್ಲದೇ ಅವರು ಐಎಎಸ್ ಅಧಿಕಾರಿಯಾಗಿದ್ದಾಗ ಮಾಡಿದ ಹಲವು ಕಾರ್ಯಗಳ ಅನುಭವವನ್ನು ರಾಜಕೀಯದಲ್ಲಿ ಮುಂದುವರಿಸಿ, ಜನರ ಏಳಿಗೆಗೆ ದುಡಿಯುವಂತಾಗಬೇಕು ಎಂದು ಬರೆದುಕೊಂಡಿದ್ದಾರೆ.

    ಕಳೆದ ಎರಡು-ಮೂರು ದಿನಗಳಿಂದ ಬಿಜೆಪಿ ವಲಯದಲ್ಲಿ ರತ್ನಪ್ರಭಾ ಹೆಸರು ಭಾರೀ ಕೇಳಿಬರುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕಾಂಗ್ರೆಸ್ಸಿನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸುವ ಕುರಿತು ಊಹಾಪೋಹಗಳು ಕೇಳಿಬರುತ್ತಿವೆ. ಅಲ್ಲದೇ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರತ್ನಪ್ರಭಾರವರನ್ನು ಅಭ್ಯರ್ಥಿಯನ್ನಾಗಿ ಮಾಡಿದರೇ, ಎಡ ಸಮುದಾಯದ ಮತಗಳ ಜೊತೆಗೆ ಪ್ರಜ್ಞಾವಂತ ಮತದಾರರನ್ನು ಸೆಳೆಯಬಹುದು ಎಂಬುದು ಬಿಜೆಪಿಯ ಲೆಕ್ಕಚಾರವಾಗಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಖರ್ಗೆ ವಿರುದ್ಧ ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾ ಸ್ಪರ್ಧೆ?

    ಕೇಂದ್ರ ಸಚಿವರ ಟ್ವೀಟ್‍ಗೆ ಪ್ರತಿಕ್ರಿಯಿಸಿರುವ ಜಾಲತಾಣಿಗರು, ನೀವೊಬ್ಬ ಕೇಂದ್ರ ಸಚಿವರು, ಪಕ್ಷದೊಳಗೆ ಏನು ನಡೆಯುತ್ತಿದೆ ಎಂಬುದು ನಿಮಗಲ್ಲದೇ ಬೇರೆ ಇನ್ನಾರಿಗೆ ತಿಳಿಯುತ್ತದೆ ಎಂದು ಕಿಚಾಯಿಸಿದ್ದಾರೆ. ಅಲ್ಲದೇ ರತ್ನಾಪ್ರಭಾರವರನ್ನು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸುವ ಕುರಿತು ಹಲವರು ತಮ್ಮ ಅಭಿಪ್ರಾಯಗಳನ್ನು ಸಚಿವರಿಗೆ ರೀ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕಲಬುರಗಿ ಲೋಕಸಭಾ ಕ್ಷೇತ್ರದ ಟಿಕೆಟ್‍ಗಾಗಿ ಬಿಎಸ್‍ವೈ ಎದುರೇ ಕಿತ್ತಾಡಿಕೊಂಡ ಸ್ಥಳೀಯ ನಾಯಕರು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಳಗ್ಗೆ ಐಎಎಸ್ ಅಧಿಕಾರಿಯ ಕಾರ್ ಚಾಲಕ, ಸಂಜೆ ಕಳ್ಳರ ಜೊತೆ ಚೈನ್ ಸ್ನ್ಯಾಚಿಂಗ್

    ಬೆಳಗ್ಗೆ ಐಎಎಸ್ ಅಧಿಕಾರಿಯ ಕಾರ್ ಚಾಲಕ, ಸಂಜೆ ಕಳ್ಳರ ಜೊತೆ ಚೈನ್ ಸ್ನ್ಯಾಚಿಂಗ್

    ಬೆಂಗಳೂರು: ಆ ವ್ಯಕ್ತಿ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆ ಕೆಲಸದ ಜೊತೆಗೆ ಪಾರ್ಟ್ ಟೈಂ ಕೆಲಸ ಕೂಡ ಮಾಡುತ್ತಿದ. ಅಷ್ಟಕ್ಕೂ ಅವನು ಮಾಡುತ್ತಿದ ಕೆಲಸವಾದರು ಏನು ಅಂತ ಕೇಳಿದ್ರೆ ಅಚ್ಚರಿಯಾಗ್ತೀರ.

    ಬೆಂಗಳೂರಿನ ಕೆಂಗೇರಿ ಮೂಲದ ಆ ವ್ಯಕ್ತಿಯೇ ನೋಡಿ ಈ ಇಂಟರಸ್ಟಿಂಗ್ ಸ್ಟೋರಿಯ ಕಥಾನಾಯಕ. ಹೆಸರು ಪೊರೋಷತ್ತಮ್ ಅಂತ. ಈತ ನಿವೃತ್ತ ಅಧಿಕಾರಿಯೊಬ್ಬರ ಮನೆಯಲ್ಲಿ ಕಾರು ಚಾಲಕನಾಗಿದ್ದ. ಬೆಳಗ್ಗೆ ಎದ್ದು ಸಿರಿಯಸ್ ಆಗಿ ಆ ಅಧಿಕಾರಿಯ ಕಾರು ಚಾಲಕನಾಗಿದ್ದ ಪೊರುಷೋತ್ತಮ್ ಡ್ಯೂಟಿ ಮುಗಿಯುತ್ತಿದ್ದಂತೆ ಸ್ನೇಹಿತರಾದ ಪ್ರದೀಪ್, ಪ್ರಜ್ವಲ್ ಜೊತೆ ಸೇರಿ ಫೀಲ್ಡ್  ಗೆ ಇಳಿಯುತ್ತಿದ್ದ. ಒಂಟಿಯಾಗಿ ಓಡಾಡೋ ವೃದ್ಧರು, ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ ಈ ತಂಡ ಚೈನ್ ಸ್ನ್ಯಾಚಿಂಗ್ ಮಾಡಿ ಎಸ್ಕೇಪ್ ಆಗುತ್ತಿದ್ದರು.

    ಕೆಲ ದಿನಗಳ ಹಿಂದೆ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಈ ಮೂವರು ಸೇರಿ ಮಾರುತಿ ರಿಟ್ಜ್ ಕಾರಲ್ಲಿ ಬಂದು ಸರಗಳವು ಮಾಡಿ ಎಸ್ಕೇಪ್ ಆಗಿದ್ದರು. ಆ ವೇಳೆ ಘಟನಾ ಸ್ಥಳದ ಸಿಸಿಟಿವಿಯಲ್ಲಿ ಕಾರಿನ ನಂಬರ್ ಅಸ್ಪಸ್ಟವಾಗಿ ಕಾಣಿಸಿತ್ತು. ಕಾರಿನ ಬೆನ್ನು ಬಿದ್ದ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಆರೋಪಿಗಳಾದ ಪುರುಷೋತ್ತಮ್, ಪ್ರದೀಪ್ ಮತ್ತು ಪ್ರಜ್ವಲ್ ನನ್ನು ಅರೆಸ್ಟ್ ಮಾಡಿದ್ದಾರೆ.

    ಈ ಮೂವರ ಬಂಧನದಿಂದ ನಗರದ ದಕ್ಷಿಣ ಭಾಗದ 9 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳವು ಮಾಡಿದ್ದ 18 ಪ್ರಕರಣಗಳು ಪತ್ತೆಯಾಗಿವೆ. ಕೃತ್ಯಕ್ಕೆ ಬಳಸಿದ್ದ ಕಾರು, ಪಲ್ಸರ್ ಬೈಕ್ ಸೇರಿದಂತೆ 700 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಸದ್ಯ ಪುರುಷೋತ್ತಮನ ಪಾರ್ಟ್ ಟೈಂ ಕೆಲಸದ ಬಗ್ಗೆ ತಿಳಿದ ಆ ಐಎಎಸ್ ಅಧಿಕಾರಿ ಶಾಕ್ ಆಗಿದ್ದಾರೆ.