Tag: Reva University

  • ವರ್ಚುವಲ್ ಫೇರ್ ವೆಲ್ ಪ್ರೋಗ್ರಾಂಗೆ ಸಾಕ್ಷಿಯಾದ ರೇವಾ ಯುನಿವರ್ಸಿಟಿ

    ವರ್ಚುವಲ್ ಫೇರ್ ವೆಲ್ ಪ್ರೋಗ್ರಾಂಗೆ ಸಾಕ್ಷಿಯಾದ ರೇವಾ ಯುನಿವರ್ಸಿಟಿ

    ಬೆಂಗಳೂರು: ದೇಶದಲ್ಲೇ ಅತ್ಯುತ್ತಮ ಯೂನಿವರ್ಸಿಟಿಗಳಲ್ಲಿ ಒಂದಾಗಿರೋ ನಮ್ಮ ರಾಜ್ಯದ ರೇವಾ ಯೂನಿವರ್ಸಿಟಿಯಲ್ಲಿ ಇಂದು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನ ಆಯೋಜನೆ ಮಾಡಿತ್ತು.

    ಕೊರೊನಾ ಕಳೆದ ಒಂದೂವರೆ ವರ್ಷದಿಂದ ಇಡೀ ವಿಶ್ವವನ್ನ ಕಾಡುತ್ತಿದೆ. ವಿದ್ಯಾರ್ಥಿಗಳು ತರಗತಿಯಲ್ಲಿ ಕುಳಿತು ಪಾಠ ಕೇಳುವ ಅವಕಾಶವನ್ನ ಈ ಮಹಾಮಾರಿ ಮೊಟಕುಗೊಳಿಸಿದೆ. ಕಾಲೇಜ್ ಡೇಸ್ ಗೋಲ್ಡನ್ ಡೇಸ್ ಅಂತಾ ಕರೆಯುತ್ತಾರೆ. ಕೊರೊನಾದಿಂದ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ.

    ಫೈನಲ್ ಇಯರ್ ಮುಗಿಸಿ ಕಾಲೇಜಿನಿಂದ ಹೊರ ಹೋಗುವ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಕಾರ್ಯಕ್ರಮ ಮಾಡೋದು ವಾಡಿಕೆ ಮತ್ತು ಸಂಪ್ರದಾಯ. ಆದರೆ ಕೊರೊನಾ ಅದಕ್ಕೆಲ್ಲಾ ಅವಕಾಶ ನೀಡ್ತಿಲ್ಲ. ಹಾಗಾಗಿ ರೇವಾ ಯುನಿವರ್ಸಿಟಿಯವರು ಇಂದು ಡಿಜಿಟಲ್ ಪ್ಲಾಟ್ ಫಾರಂ ಮೂಲಕ ಫೇರ್ ವೆಲ್ ಪ್ರೋಗ್ರಾಂ ಮಾಡಿದ್ದಾರೆ. ವರ್ಚುವಲ್ ಫೇರ್ ವಾಲ್ ಪ್ರೋಗ್ರಾಂಗೆ ಯುನಿವರ್ಸಿಟಿಯ ಕುಲಪತಿ ಡಾ.ಪಿ ಶ್ಯಾಮರಾಜು ಚಾಲನೆ ನೀಡಿದ್ದಾರೆ.

    ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಮುಗಿಸಿ ಕಾಲೇಜಿನಿಂದ ಹೊರ ಹೋಗ್ತಿರೋ ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ಬೀಳ್ಕೊಡುಗೆ ನೀಡಿದ್ದಾರೆ. ಇದೇ ಸಮಯದಲ್ಲಿ ವ್ಯಾಸಂಗದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿದ 45 ವಿದ್ಯಾರ್ಥಿಗಳ ಅತ್ಯುತ್ತಮ ವಿದ್ಯಾರ್ಥಿ ಎಂದು ಪ್ರಮಾಣ ಪತ್ರ ನೀಡಿ ಅಭಿನಂದಸಿದ್ದಾರೆ. ಇದನ್ನೂ ಓದಿ: ರಾಮ, ಆಂಜನೇಯ ವಿಗ್ರಹಕ್ಕೆ ಪೇಜಾವರಶ್ರೀ ಅಭಿಷೇಕ- ಅರ್ಜುನ್ ಸರ್ಜಾ ಹರ್ಷ

    ಕೊರೊನಾದಿಂದ ಕ್ಯಾಂಪಸ್ ಲೈವ್ ಮೀಸ್ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕವೇ ಸೆಂಡ್ ಆಫ್ ನೀಡಿ ಎಲ್ಲ ಕಾಲೇಜುಗಳಿಗೆ ರೇವಾ ಯುನಿವರ್ಸಿಟಿ ಮಾದರಿಯಾಗಿದ್ದಾರೆ.

  • ರೇವಾ ವಿಶ್ವವಿದ್ಯಾಲಯದಲ್ಲಿ ಸಂಸ್ಥಾಪಕರ ದಿನಾಚರಣೆ

    ರೇವಾ ವಿಶ್ವವಿದ್ಯಾಲಯದಲ್ಲಿ ಸಂಸ್ಥಾಪಕರ ದಿನಾಚರಣೆ

    ಬೆಂಗಳೂರು: ರೇವಾ ವಿಶ್ವವಿದ್ಯಾಲಯದ ಸಂಸ್ಥಾಪಕರ ದಿನಾಚರಣೆಯನ್ನು ಜ.6 ರಂದು ರೇವಾ ಕ್ಯಾಂಪಸ್‍ನಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಪಿ.ಶ್ಯಾಮರಾಜುರವರ ಹುಟ್ಟುಹಬ್ಬದ ದಿನವೂ ಆಗಿರುತ್ತದೆ. ಇದೇ ಸಂದರ್ಭದಲ್ಲಿ ರೇವಾ ವಿಶ್ವವಿದ್ಯಾಲಯದ ಪ್ರಗತಿಯ ಬಗ್ಗೆ ಒಂದು ಕಿರುಚಿತ್ರವನ್ನೂ ತೋರಿಸಲಾಯಿತು.

    ಪ್ರತಿವರ್ಷದಂತೆ ಈ ವರ್ಷವೂ ರೇವಾ ಜೀವಮಾನ ಶ್ರೇಷ್ಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವರ್ಷ ಇಸ್ರೋದ ಮಾಜಿ ಅಧ್ಯಕ್ಷ ರಾಜಸ್ಥಾನದಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಕಸ್ತೂರಿ ರಂಗನ್ ಮತ್ತು ಪ್ರಖ್ಯಾತ ಭಾರತೀಯ ಸಿನಿಮಾ ನಿರ್ದೇಶಕ, ಕಥಾಸಂಕಲನಕಾರ ನಿರ್ಮಾಪಕರಾಗಿರುವ ಕೆ. ರಾಘವೇಂದ್ರರಾವ್ ಅವರಿಗೆ ರೇವಾ ಜೀವಮಾನ ಶ್ರೇಷ್ಠ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ರಕ್ಷಣಾ ಸಚಿವಾಲಯ ವೈಜ್ಞಾನಿಕ ಸಲಹೆಗಾರರಾಗಿರುವ ಸತೀಶ್ ರೆಡ್ಡಿ ಅವರಿಗೆ ರೇವಾ ಎಕ್ಸಲೆನ್ಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

    ಜೀವಮಾನ ಶ್ರೇಷ್ಠ ಪ್ರಶಸ್ತಿಯನ್ನು ಪಡೆದ ಮಾತನಾಡಿದ ಕಸ್ತೂರಿ ರಂಗನ್, ವಿಶ್ವವಿದ್ಯಾಲಯದ ಪ್ರಗತಿಯ ಬಗ್ಗೆ ಬಹಳ ಸಂತೋಷ ವ್ಯಕ್ತಪಡಿಸಿದರು. ಇಲ್ಲಿರುವ ವ್ಯವಸ್ಥಾಪಕರು, ಬೋಧಕ, ಬೋಧಕೇತರ ಹಾಗೂ ವಿದ್ಯಾರ್ಥಿಗಳ ಕೊಡುಗೆಯನ್ನು ಪ್ರಶಂಸಿಸಿ ಸಂಶೋಧನೆ ಬಗ್ಗೆ ಬಹಳ ಒತ್ತು ಕೊಡಬೇಕು. ನಮ್ಮ ರಾಷ್ಟ್ರದ ಆರ್ಥಿಕ ಅಭಿವೃದ್ಧಿಗೆ ಶ್ರಮಿಸಬೇಕೆಂದು ಹೇಳಿದರು.

    ರಾಘವೇಂದ್ರ ರಾವ್ ಅವರು ತಮ್ಮ 50 ವರ್ಷದ ಸಿನಿಮಾ ರಂಗದ ಪಯಣದ ಅನುಭವವನ್ನು ಹಂಚಿಕೊಂಡರು. ಯುವಕರು ನಮ್ಮ ದೇಶದ ಪ್ರಗತಿಗಾಗಿ ತಮ್ಮನ್ನು ತಾವು ಸಮರ್ಪಣಾಭಾವದಿಂದ ತೊಡಗಿಸಿಕೊಳ್ಳಬೇಕು. ತಮ್ಮ ತಾಯ್ನಾಡಿನ ಬಗ್ಗೆ ಹೆಮ್ಮ ಮತ್ತು ಗರ್ವ ಇರಬೇಕೆಂದು ತಿಳಿಸಿದರು.

    ಡಾ. ಸತೀಶ್‍ರೆಡ್ಡಿ ಅವರ ಪರವಾಗಿ ಡಾ.ಸುಧೀರ್ ಕಾಮತ್ ರೇವಾ ಎಕ್ಸಲೆನ್ಸ್ ಪ್ರಶಸ್ತಿಯನ್ನು ಸ್ವೀಕರಿಸಿ, ರೇವಾ ವಿಶ್ವವಿದ್ಯಾಲಯಕ್ಕೆ ಶುಭಕೋರಿ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ರೇವಾ ಮಾಡುತ್ತಿರುವ ಸಂಶೋಧನೆಯನ್ನು ಪ್ರಶಂಸಿದರು.

    ಸಂಸ್ಥಾಪಕರ ದಿನಾಚರಣೆ ಅಧ್ಯಕ್ಷತೆ ವಹಿಸಿದ್ದ ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಪಿ. ಶ್ಯಾಮರಾಜುರವರು ಮಾತನಾಡುತ್ತಾ, ಕಲಿಕೆ ನಿರಂತರವಾದದ್ದು, ನಾವು ಕಲಿಯುವುದು ಬಹಳವಿದೆ. ರೇವಾ ಈ ಹಂತಕ್ಕೆ ಬರುವುದಕ್ಕೆ ವ್ಯವಸ್ಥಾಪಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳೇ ಕಾರಣ ಎಂದು ಶ್ಲಾಘಿಸಿದರು. ಸಂಸ್ಥಾಪಕರ ದಿನಾಚರಣೆಯ ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

  • ಪ್ರಾಮಾಣಿಕವಾಗಿ ಮತಚಲಾಯಿಸಿ, ಇದು ನಿಮ್ಮ ಹಕ್ಕು – ರೇವಾ ವಿವಿಯಲ್ಲಿ ಮತ ಜಾಗೃತಿ ಅಭಿಯಾನ

    ಪ್ರಾಮಾಣಿಕವಾಗಿ ಮತಚಲಾಯಿಸಿ, ಇದು ನಿಮ್ಮ ಹಕ್ಕು – ರೇವಾ ವಿವಿಯಲ್ಲಿ ಮತ ಜಾಗೃತಿ ಅಭಿಯಾನ

    – 15 ದಿನಗಳ ಕಾಲ ಮನೆ ಮನೆ ತೆರಳಿ ಜಾಗೃತಿ ಮೂಡಿಸಲಿರುವ ವಿದ್ಯಾರ್ಥಿಗಳು

    ಬೆಂಗಳೂರು: ಮತದಾನದ ಸಮಯದಲ್ಲಿ ಒತ್ತಡ ಹಾಗೂ ಯಾವುದೇ ಆಮಿಷಗಳಿಗೆ ಒಳಗಾಗದೇ ಪ್ರಮಾಣಿಕವಾಗಿ ಮತ್ತು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ನಿಮ್ಮ ಹಕ್ಕು ಚಲಾಯಿಸಿ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಡಾ.ಪಿ. ಸಂಜೀವ್ ಕುಮಾರ್ ಹೇಳಿದ್ದಾರೆ.

    ರೇವಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ರೇವಾ ವಿವಿಯ ಮತದಾನ ಸಾಕ್ಷರತಾ ಸಂಘಟನೆ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಸುಮಾರು 200 ಕೋಟಿ ರೂ. ಮೌಲ್ಯದ ಸೀರೆ, ಮದ್ಯ ಸೇರಿದಂತೆ ಇನ್ನಿತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಧುನಿಕತೆಯಲ್ಲಿ ಮುಂದುವರಿಯುತ್ತಿರುವ ದೇಶದಲ್ಲಿ ಇಂತಹ ಆಮಿಷಗಳಿಗೆ ಯಾರು ಒಳಗಾಗಿ ನಿಮ್ಮ ಅಮೂಲ್ಯ ಮತವನ್ನು ಮಾರಾಟ ಮಾಡಬೇಡಿ ಎಂದು ಮನವಿ ಮಾಡಿದರು.

    ಇದೇ ವೇಳೆ ಸಾರ್ವಜನಿಕರು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ಪ್ರೋತ್ಸಾಹಿಸಲು ಹಾಗೂ ಪ್ರತಿ ಚುನಾವಣೆಯಲ್ಲಿ ನೈತಿಕವಾಗಿ ಮತದಾನ ಮಾಡಲು ಜಾಗೃತಿ ಮೂಡಿಸುವ ಸಲುವಾಗಿ ದೇಶದಲ್ಲಿಯೇ ಇದೇ ಮೊದಲ ಬಾರಿಗೆ ರೇವಾ ವಿವಿ ಹೊಸ ಸಾಹಸಕ್ಕೆ ಹೆಜ್ಜೆ ಇಟ್ಟಿರುವುದು ಸಂತಸ ತಂದಿದೆ ಎಂದು ಸಂಜೀವ್ ಕುಮಾರ್ ಪ್ರಶಂಸೆ ವ್ಯಕ್ತಪಡಿಸಿದರು.

    18 ವರ್ಷ ಪೂರ್ಣಗೊಂಡ ಯುವಕ, ಯುವತಿಯರು ಮತದಾನ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಅಲ್ಲದೇ ತಮ್ಮ ಹಕ್ಕನ್ನು ಕಡ್ಡಾಯವಾಗಿ ತಮ್ಮ ಮತದಾನದ ಚಲಾಯಿಸಿಸಬೇಕು. ದೇಶದಲ್ಲಿ ಸುಮಾರು 75 ಸಾವಿರ ಕೋಟಿಗೂ ಹೆಚ್ಚು ಮತದಾರರಿದ್ದು, ಮತದಾನದ ಪ್ರಮಾಣ ಹೆಚ್ಚಾಗಬೇಕಿದೆ. ಇಂದು ನಗರ ಪ್ರದೇಶಗಳಲ್ಲಿ ಶೇ.50, ಗ್ರಾಮೀಣ ಭಾಗದಲ್ಲಿ ಶೇ.85 ರಷ್ಟು ಮತದಾನ ನಡೆಯುತ್ತಿದೆ. ಆದರೆ ವಿದ್ಯಾವಂತರು ಇಂದು ಮತದಾನ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶಾಮರಾಜು ಮಾತನಾಡಿ, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ 800 ವಿದ್ಯಾರ್ಥಿಗಳಿಂದ ಪ್ರಾಯೋಗಿಕವಾಗಿ ಮತದಾನ ಜಾಗೃತಿ ಆರಂಭಿಸಲಾಗಿದೆ. ಇಲ್ಲಿ ಶೇ.85 ರಷ್ಟು ಮತದಾನವಾಗುತ್ತಿದೆ. ಈ ಅಭಿಯಾನದಿಂದ ಶೇ.100 ರಷ್ಟು ಮತದಾನ ಆಗುವಂತೆ ಮಾಡುವುದು ನಮ್ಮ ಗುರಿಯಾಗಿದೆ. ಇಂದಿನಿಂದ ಸುಮಾರು 15
    ದಿನಗಳವರೆಗೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಸಾರ್ವಜನಿರಲ್ಲಿ ಅರಿವು ಮೂಡಿಸಿ ಮತ ಪಟ್ಟಿಗೆ ಹೆಸರು ಸೇರಿಸುವಂತೆ ಮನವಿ ಮಾಡಲಾಗುವುದು ಎಂದು ವಿವರಿಸಿದರು.

    ಕಾರ್ಯಕ್ರಮದಲ್ಲಿ ನಿವೃತ್ತ ರಾಜ್ಯ ಮುಖ್ಯ ಚುನಾವಣಾಧಿಕಾರಿ ಶ್ರೀನಿವಾಸಾಚಾರಿ, ರೇವಾ ವಿವಿ ಕುಲಪತಿ ಡಾ.ಎಸ್.ವೈ.ಕುಲಕರ್ಣಿ, ಕುಲಸಚಿವ ಡಾ.ಎಂ.ಧನಂಜಯ, ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ ಮತ್ತಿತರರು ಹಾಜರಿದ್ದರು.

    ಯಾವ ರೀತಿ ಜಾಗೃತಿ ಕಾರ್ಯಕ್ರಮ?
    ಮನೆಮನೆಗೆ ತೆರಳಿ ಪ್ರಜೆಗಳೊಂದಿಗೆ ಸಂವಾದ ನಡೆಸಿವುದು, ಜನರ ಮತದಾನದ ವಿಧಾನವನ್ನು ವಿಶ್ಲೇಷಿಸುವ ಸಮೀಕ್ಷೆ, ಬಿಬಿಎಂಪಿ ಜೊತೆ ಸೇರಿ ಬೀದಿ ನಾಟಕ, ಅಣಕು ಪ್ರದರ್ಶನ, ರೋಡ್ ಶೋ ಮೂಲಕ ಸ್ಫೂರ್ತಿ ಭಾಷಣ, ಕಲಾ ಪ್ರದರ್ಶನಗಳ ಮೂಲಕ ಜಾಗೃತಿ ಹಾಗೂ ಯುವ ಮತದಾರರ ಉತ್ಸವ ನಡೆಸಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರೇವಾ ವಿಶ್ವವಿದ್ಯಾಲಯದಲ್ಲಿ ನ.12ರಂದು ಮತದಾನ ಜಾಗೃತಿ ಕಾರ್ಯಕ್ರಮ

    ರೇವಾ ವಿಶ್ವವಿದ್ಯಾಲಯದಲ್ಲಿ ನ.12ರಂದು ಮತದಾನ ಜಾಗೃತಿ ಕಾರ್ಯಕ್ರಮ

    ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಮತದಾನ ಮಹತ್ವ ತಿಳಿಸುವ ಉದ್ದೇಶದಿಂದ ರೇವಾ ವಿಶ್ವವಿದ್ಯಾಲಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ನವೆಂಬರ್ 12ರಂದು ಹಮ್ಮಿಕೊಳ್ಳಲಾಗಿದೆ.

    ಈ ಮತದಾನ ಜಾಗೃತಿ ಕಾರ್ಯಕ್ರಮವನ್ನು ರೇವಾ ಚುನಾವಣಾ ಸಾಕ್ಷರತಾ ಸಂಘವು ಆಯೋಜಿಸಿದೆ. ವಿಶ್ವವಿದ್ಯಾಲಯ ಕ್ಯಾಂಪಸ್‍ನ ಕುವೆಂಪು ಸಭಾಭವನದಲ್ಲಿ ನವೆಂಬರ್ 12ರಂದು ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗಲಿದೆ.

    ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಗೌರವ ಅತಿಥಿಗಳಾಗಿ ರಾಜ್ಯ ಚುನಾವಣಾ ಆಯೋಗದ ಅಧಿಕಾರಿ ಶ್ರೀನಿವಾಸಾಚಾರ್ಯ ಆಗಮಿಸಲಿದ್ದಾರೆ. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪಿ ಶ್ಯಾಮರಾಜು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.

    ಉತ್ತಮ ನಾಯಕರ ಆಯ್ಕೆಯಲ್ಲಿ ಪ್ರತಿಯೊಂದು ಮತಕ್ಕೂ ಪ್ರಾಮುಖ್ಯತೆ ಇರುತ್ತದೆ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆ, ಮತದಾನ ಎಷ್ಟು ಅಗತ್ಯ ಎನ್ನುವ ಕುರಿತು ತಿಳಿಸಲಾಗುತ್ತದೆ. ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ರೇವಾ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ.ಎಂ.ಧನಂಜಯ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/

  • ಸ್ವಚ್ಛ ಕ್ಯಾಂಪಸ್ ವಿಭಾಗದಲ್ಲಿ ರೇವಾ ವಿವಿಗೆ ದೇಶದಲ್ಲೇ 6ನೇ ರ‍್ಯಾಂಕ್

    ಸ್ವಚ್ಛ ಕ್ಯಾಂಪಸ್ ವಿಭಾಗದಲ್ಲಿ ರೇವಾ ವಿವಿಗೆ ದೇಶದಲ್ಲೇ 6ನೇ ರ‍್ಯಾಂಕ್

    ಬೆಂಗಳೂರು: ವಿಶಾಲ ಕ್ಯಾಂಪಸ್ ಹೊಂದಿರುವ ರೇವಾ ವಿಶ್ವವಿದ್ಯಾಲಯಕ್ಕೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಎಚ್‌ಆರ್‌ಡಿ) `ಸ್ವಚ್ಛ ಕ್ಯಾಂಪಸ್’ಗಾಗಿ 6ನೇ ರ‍್ಯಾಂಕ್ ನೀಡಿ ಪುರಸ್ಕರಿಸಿದೆ.

    ಎಂಎಚ್‌ಆರ್‌ಡಿ ರಾಷ್ಟ್ರೀಯ ಮಟ್ಟದಲ್ಲಿ ವಿಶ್ವವಿದ್ಯಾಲಯಗಳ ಸಮೀಕ್ಷೆ ನಡೆಸಿದ್ದು, ರೇವಾ ವಿಶ್ವವಿದ್ಯಾಲಯವೂ ಸ್ಥಾನ ಗಿಟ್ಟಿಸಿಕೊಂಡಿದೆ. ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಸಚಿವ ಪ್ರಕಾಶ್ ಜಾವಡೇಕರ್ ಅವರು ರ‍್ಯಾಂಕಿಂಗ್ ಪ್ರಮಾಣ ಪತ್ರವನ್ನು ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು ಅವರಿಗೆ ನೀಡಿ ಗೌರವಿಸಿದ್ದಾರೆ.

    ಈ ಕುರಿತು ಮಾತನಾಡಿದ ಡಾ.ಪಿ.ಶ್ಯಾಮರಾಜು ಅವರು, ನಮ್ಮ ವಿಶ್ವವಿದ್ಯಾಲಯ ಪರಿಸರ ಸ್ನೇಹಿಯಾಗಿದ್ದು, ಪ್ಲಾಸ್ಟಿಕ್ ಬ್ಯಾನರ್ ಗಳನ್ನು ಬಳಕೆ ನಿಷೇಧಿಸಿದ್ದೇವೆ. ವಿದ್ಯಾರ್ಥಿಗಳ ಸಂಖ್ಯೆ ಅನುಗುಣವಾಗಿ ನಿರ್ಮಿಸಿರುವ ಶೌಚಾಲಯ, ನೀರಿನ ವ್ಯವಸ್ಥೆ, ಮಳೆ ನೀರಿನ ಕೊಯ್ಲು, ಸೌರಶಕ್ತಿ ಬಳಕೆ, ಉದ್ಯಾನ ಪರಿಗಣಿಸಿ ಎಂಎಚ್‌ಆರ್‌ಡಿಯು ರ‍್ಯಾಂಕಿಂಗ್ ನೀಡಿದೆ ಎಂದು ತಿಳಿಸಿದ್ದಾರೆ.

    ದೇಶದಲ್ಲಿ ಒಟ್ಟು 6,029 ವಿದ್ಯಾಲಯಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದವು. ಹಲವಾರು ಹಂತಗಳ ಮೂಲಕ 205 ಶಿಕ್ಷಣ ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿತ್ತು. ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ), ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಅಧಿಕಾರಿಗಳ ತಂಡ ಕಾಲೇಜುಗಳಿಗೆ ಭೇಟಿ ನೀಡಿ ಕ್ಯಾಂಪಸ್ ಪರಿಶೀಲಿಸಿತ್ತು. ಆ ತಂಡ ಅಂತಿಮವಾಗಿ 51 ಶಿಕ್ಷಣ ಸಂಸ್ಥೆಗಳಿಗೆ ವಿವಿಧ ರೀತಿಯ ಪ್ರಶಸ್ತಿ ನೀಡಿ ಗೌರವಿಸಿದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕಡೆ ಗಮನ ನೀಡಬೇಕು- ರಾಜ್ಯಪಾಲ ವಿ.ಆರ್.ವಾಲಾ

    ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕಡೆ ಗಮನ ನೀಡಬೇಕು- ರಾಜ್ಯಪಾಲ ವಿ.ಆರ್.ವಾಲಾ

    – ರೇವಾ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವ
    – ಸಾವಿರಾರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

    ಬೆಂಗಳೂರು: ವಿದ್ಯಾರ್ಥಿಗಳು ಫ್ಯಾಷನ್ ವ್ಯಾಮೋಹ ಮತ್ತು ವ್ಯಸನ ಮುಕ್ತರಾಗಿ ಮುಂದಿನ ಭವಿಷ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ರಾಜ್ಯಪಾಲ ಶ್ರೀ ವಿ.ಆರ್.ವಾಲಾ ಹೇಳಿದರು.

    ಯಲಹಂಕದಲ್ಲಿರುವ ರೇವಾ ವಿಶ್ವವಿದ್ಯಾಲಯ 3ನೇ ಘಟಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ಕೇವಲ ಫ್ಯಾಷನ್ ಕಡೆಗೆ ಹೆಚ್ಚಿನ ಕಾಳಜಿವಹಿಸುತ್ತಾರೆ. ಮುಂದೆ ಮದ್ಯಪಾನ, ಡ್ರಗ್ಸ್‍ಗಳಿಗೆ ವ್ಯಸನಿಗಳಾಗಿ ತಮ್ಮ ಉಜ್ವಲ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ಹಾಳುಮಾಡುಕೊಳ್ಳುವುದು ಬಿಟ್ಟು ವ್ಯಾಸಂಗದ ಕಡೆಗೆ ಹೆಚ್ಚಿನ ಗಮಹನರಿಸಬೇಕೆಂದು ಕರೆ ನೀಡಿದರು.

    ಅಮೆರಿಕ, ಯುರೋಪ್ ದೇಶಗಳು ಮಾತ್ರ ಅವಿಷ್ಕಾರಗಳನ್ನು ಮಾಡಲು ಸಾಧ್ಯ ಎಂದು ನಾವು ಸುಮ್ಮನೆ ಕುಳಿತುಕೊಳ್ಳುವುದು ಮೂರ್ಖತನ. ನಮ್ಮಲ್ಲಿ ಆಪಾರ ಮಾನವ ಸಂಪನ್ಮೂಲವಿದೆ. ಯುವಶಕ್ತಿಯನ್ನೇ ಅಸವಾಗಿ ಬಳಕೆ ಮಾಡಿಕೊಂಡು ನೂತನ ಕ್ಷೇತ್ರಗಳಲ್ಲಿ ಅವಿಷ್ಕಾರ ಮಾಡಬೇಕು. ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದರು.

    ರೇವಾ ವಿಶ್ವವಿದ್ಯಾಲಯ ವಿಶಾಲ ಕ್ಯಾಂಪಸ್ ಹೊಂದಿದ್ದು, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶಿಕ್ಷಣ ನೀಡುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

    ಇಂಡಿಯನ್ ನ್ಯಾಷನಲ್ ಅಕಾಡೆಮಿ ಆಫ್ ಇಂಜಿನಿಯರಿಂಗ್ ಅಧ್ಯಕ್ಷ ಶ್ರೀ ಪದ್ಮಭೂಷಣ ಡಾ.ಆರ್.ಎನ್.ಸುರೇಶ್ ಮಾತನಾಡಿ, ಪದವಿ ಸ್ವೀಕರಿಸಿದ ಬಹುತೇಕ ವಿದ್ಯಾರ್ಥಿಗಳು ವ್ಯಾಸಂಗದ ವಾತಾವರಣದಿಂದ ವೃತ್ತಿ ಜೀವನಕ್ಕೆ ಹೆಜ್ಞೆ ಹಾಕುತ್ತಿದ್ದೀರಿ. ನಿಮ್ಮ ಮುಂದೆ ಸ್ಪಧಾತ್ಮಕ ಜಗತ್ತು ಇದೆ. ಇಲ್ಲಿ ನೀವು ಸ್ಪರ್ಧಿಸಬೇಕಾಗುತ್ತದೆ. ಶಿಕ್ಷಣದ ಜತೆಗೆ ಕೌಶಲ್ಯ ಆಧಾರಿತ ಶಿಕ್ಷಣ ಇದ್ದರೆ, ನೀವು ಉದ್ಯೋಗಗಿಟ್ಟಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

    ನಾವು ಚಂದ್ರಯಾನ ಉಪಗ್ರಹ ಉಡಾವಣೆಯಲ್ಲಿ ಯಶಸ್ವಿಯಾಗಿದ್ದೇವೆ. ಕಡಿಮೆ ವೆಚ್ಚದಲ್ಲಿ ಗುಣಮಟ್ಟ ಅಭಿವೃದ್ಧಿಯನ್ನು ಸಾಧಿಸುವ ಸಾಮಥ್ರ್ಯಗನಲ್ಲಿದೆ. ಇತ್ತೀಚಿಗೆ ಹಿಮಾಲಯನ್ ಎಂಬ ಅತಿ ಉದ್ದದ ಸೇತುವೇ ನಿರ್ಮಾಣ ಮಾಡಿದ್ದೇವೆ. ಮಾಹಿತಿ ತಂತ್ರಜ್ಞಾನದಲ್ಲಿ ವಿಶ್ವದಲ್ಲೇ ಗುರುತಿಸಿಕೊಂಡಿತ್ತೆವೆ. ಹೀಗಾಗಿ ನಮ್ಮಲ್ಲಿ ಸಾಧಿಸುವ ಛಲ ಇಟ್ಟುಕೊಂಡರೆ ಎಲ್ಲವೂ ಸಾಧ್ಯವಿದೆ. ರೇವಾ ವಿವಿ ನೋಡಿ ನನಗೆ ಖುಷಿಯಾಗುತ್ತಿದೆ. ಇಲ್ಲಿನ ಶಿಸ್ತು, ಸ್ವಚ್ಛ ಮತ್ತು ಸುಂದರ ಕ್ಯಾಂಪಸ್ ಎಲ್ಲರನ್ನು ಮೆಚ್ಚಿಸುತ್ತದೆ ಎಂದರು.

    ನಮ್ಮ ಅನುಭವವೇ ನಮ್ಮ ಭವಿಷ್ಯವನ್ನು ಉತ್ತಮಗೊಳಿಸುತ್ತದೆ. ಭಾರತದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನೇ ನಾವು ಅವಕಾಶಗಳಾಗಿ ಪರಿವರ್ತಿಸಿಕೊಂಡು ಅವುಗಳಿಗೆ ಪರಿಹಾರ ಕಂಡುಹಿಡಿಯುವ ಮೂಲಕ ನಾವು ಮುಂದೆ ಹೋಗಬೇಕಿದೆ ಎಂದರು.

    ಇದು ನಮ್ಮ ಮೂರನೇ ವರ್ಷದ ಘಟಿಕೋತ್ಸವಾಗಿದೆ. ನಾವು ವಿದ್ಯಾರ್ಥಿಗಳ ಸರ್ವೋತಮುಖ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬಾಳಬೇಕು ಎಂದು ರೇವಾ ವಿಶ್ವವಿದ್ಯಾಲಯ ಕುಲಾಧಿಪತಿ ಡಾ.ಪಿ.ಶ್ಯಾಮರಾಜು ಹೇಳಿದರು.

    ಈ ಘಟಿಕೋತ್ಸವದಲ್ಲಿ 7 ಪಿಎಚ್.ಡಿ, 1201 ಪದವಿ ಮತ್ತು 525 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ರೇವಾ ವಿಶ್ವವಿದ್ಯಾಲಯ ಕುಲಾಧಿಪತಿ ಡಾ.ಪಿ.ಶ್ಯಾಮರಾಜು, ಕುಲಪತಿ ಡಾ.ಎಸ್.ವೈ.ಕುಲಕರ್ಣಿ, ಕುಲಸಚಿವ ಡಾ.ಎಂ.ಧನಂಜಯ ಮತ್ತಿತರರು ಇದ್ದರು. 27 ರ್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಅಭಿನಂದಿಸಲಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಸಮಾಜ ಮೆಚ್ಚಿಸುವ ಕೆಲಸ ಬೇಡ: ರಮೇಶ್‍ಕುಮಾರ್

    ಸಮಾಜ ಮೆಚ್ಚಿಸುವ ಕೆಲಸ ಬೇಡ: ರಮೇಶ್‍ಕುಮಾರ್

    – ರೇವಾ ವಿಶ್ವವಿದ್ಯಾನಿಲಯದಲ್ಲಿ ಕುವೆಂಪು ಸಭಾಂಗಣ ಲೋಕಾರ್ಪಣೆ

    ಬೆಂಗಳೂರು: ಸಮಾಜವನ್ನು ಮೆಚ್ಚಿಸುವ ಕೆಲಸ ಮಾಡುವುದಕ್ಕಿಂತ, ಸಮಾಜಕ್ಕೆ ಏನಾದರೂ ಕೊಡುಗೆ ನೀಡುವುದು ಇಂದಿನ ಅವಶ್ಯವಾಗಿದೆ. ನಮ್ಮ ನಂತರವೂ ನಾವು ಬದುಕಲು ಬಯಸಿದರೆ, ಅದು, ನಾವು ಸಮಾಜಕ್ಕೇನು ಕೊಡುಗೆ ನೀಡಿದ್ದೇವೆ ಎನ್ನುವುದನ್ನು ಅವಲಂಬಿಸಿರುತ್ತದೆ ಎಂದು ವಿಧಾನಸಭಾ ಸಭಾಪತಿ ಕೆ.ಆರ್. ರಮೇಶ್‍ಕುಮಾರ್ ಮಾರ್ಮಿಕವಾಗಿ ನುಡಿದರು.

    ರೇವಾ ವಿಶ್ವವಿಶ್ವವಿದ್ಯಾನಿಲಯದ ಆವರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕುವೆಂಪು ಸಭಾಂಗಣ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಬುದ್ಧ, ಅಶೋಕ, ಕಾರ್ಲ್ ಮಾರ್ಕ್ಸ್, ನೆಲ್ಸನ್‍ಮಂಡೆಲಾ, ಮಹಾತ್ಮ ಗಾಂಧಿ, ಅಬ್ದುಲ್ ಕಲಾಂ, ಬೋಸ್. ಮುಂತಾದವರು ಕೇವಲ ಒಂದು ಸಮುದಾಯ, ಪ್ರದೇಶ, ದೇಶಕ್ಕೆ ಸೀಮಿತರಾದವರಲ್ಲ. ಇವರೆಲ್ಲ ವಿಶ್ವಚೇತನಗಳು, ಇವರು ಸಮಾಜಕ್ಕಾಗಿ ಸ್ವಾರ್ಥವನ್ನು ತ್ಯಜಿಸಿದ್ದಾರೆ. ಆದ್ದರಿಂದಲೇ ಇಂದಿಗೂ ಅವರು ಜೀವಂತವಾಗಿದ್ದಾರೆ ಎಂದರು.

    ದುರದೃಷ್ಟವಶಾತ್ ಇಂದು ಜನರು ಚಲಚಿತ್ರ ನಟರ ಬಗ್ಗೆ ತಿಳಿದುಕೊಂಡ ಈ ಮಹಾನ್ ವ್ಯಕ್ತಿಗಳ ಬಗ್ಗೆ ತಿಳಿದುಕೊಂಡಿಲ್ಲ ಎಂದು ಹಾಸ್ಯ ಮಿಶ್ರಿತ ಖೇದ ವ್ಯಕ್ತಪಡಿಸಿದರು. ಇತ್ತೀಚೆಗೆ ನಮ್ಮಲ್ಲಿ ಬದಲಾಗುತ್ತಿರುವ ನಡತೆಗಳಿಂದಾಗಿ ನಮ್ಮ ಸಾಂಸ್ಕೃತಿಕ ಮೌಲ್ಯಗಳು ನಾಶವಾಗುತ್ತಿವೆ. ಯಾವುದೇ ಕಾರಣಕ್ಕೂ ಸಾಂಸ್ಕೃತಿಕ ಮೌಲ್ಯಗಳು ಮಾತ್ರ ನಾಶವಾಗಬಾರದು. ನಾವು ಹಿಂದೆ ಹೇಗಿದ್ದೆವು, ನಮ್ಮ ಸುತ್ತಮುತ್ತಲಿನವರೊಂದಿಗೆ ನಮ್ಮ ವರ್ತನೆ ಹೇಗಿದೆ ಎನ್ನುವುದನ್ನು ಅರಿತುಕೊಳ್ಳುವುದು ಅವಶ್ಯವಾಗಿದೆ ಎಂದ ಅವರು ಸಾಂಸ್ಕೃತಿಕ ಮೌಲ್ಯಗಳು ಒಬ್ಬ ವ್ಯಕ್ತಿಯನ್ನು ಉನ್ನತ ಸ್ಥಾನಕ್ಕೆ ಕೊಂಡ್ಯೊಯುತ್ತವೆ ಎನ್ನುವುದಕ್ಕೆ ನಿದರ್ಶನವಾಗಿ ಡಾ. ಶ್ಯಾಮರಾಜು ನಿಲ್ಲುತ್ತಾರೆ ಎಂದು ಹೇಳಿದರು.

    ಕುವೆಂಪು ಸಭಾಂಗಣ ಕುರಿತು ಮಾತನಾಡಿದ ಅವರು, ಕುವೆಂಪು ಅವರ ಹೆಸರಿನಿಂದ ಲೋಕಾರ್ಪಣೆಗೊಂಡ ಈ ಸಭಾಂಗಣ ಸಾಂಸ್ಕೃತಿಕ ಮೌಲ್ಯಗಳು ಮತ್ತು ಆಧುನಿಕ ಸಾಧನಗಳ ಸಂಯೋಜನೆ. ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಒಳಗೊಂಡಿದ್ದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಚಾರಸಂಕಿರಣಗಳನ್ನು ನಡೆಸುವುದಕ್ಕೆ ಸೂಕ್ತವಾಗಿದೆ ಎಂದರು.

    ರೇವಾ ವಿಶ್ವವಿದ್ಯಾನಿಲಯವು ಸಮಾಜ ಸೇವೆಯ ಆಧಾರದ ಮೇಲೆ ಮಾನವೀಯ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಒಳಗೊಂಡ ಶಿಕ್ಷಣ ನೀಡುತ್ತಿರುವುದು ಸಂತೋಷ ವಿಷಯ. ಮುಂದಿನ ದಿನಗಳಲ್ಲಿ ರೇವಾ ವಿವಿ ಈ ಸಮಾಜಕ್ಕೆ ಕುವೆಂಪು, ಕಲಾಂರಂಥ ಅನೇಕ ಮಹನೀಯರ ಕೊಡುಗೆ ನೀಡಲಿ ಎಂದು ಹಾರೈಸಿದರು.

    ಉಪ ಸಭಾಪತಿ ಎಂ. ಕೃಷ್ಣಾ ರೆಡ್ಡಿ ಮಾತನಾಡಿ, ಒಬ್ಬ ವ್ಯಕ್ತಿಯ ಆಯುಷ್ಯದಲ್ಲಿ ದಲ್ಲಿ 25 ವರ್ಷ ಕಲಿಕೆಗೆ ಮೀಸಲಾಗಿರುತ್ತವೆ. ಈ ಅವಧಿಯಲ್ಲಿ ಏನನ್ನು ಕಲಿತ್ತಿದ್ದೇವೆ ಎನ್ನುವುದರ ಆಧಾರದ ಮೇಲೆ ಮುಂದಿನ 75 ವರ್ಷಗಳು ಸಾಗುತ್ತವೆ. ಬೋಧಕರ ಕೈಯಲ್ಲಿ ವಿದ್ಯಾರ್ಥಿಗಳ ಭವಿಷ್ಯವಿರುವುದರಿಂದ ಅವರು, ದೇಶಪ್ರೇಮ, ಮಾನವೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮಾಡಬೇಕಾಗಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಉತ್ತಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದ ಅವರು, ಕುವೆಂಪು ಅವರು ಒಂದು ವಿಶ್ವವಿದ್ಯಾನಿಲಯಕ್ಕೆ ಸಮವಾಗಿದ್ದಾರೆ. ಅವರ ಹೆಸರಿನಲ್ಲಿ ಸಭಾಂಗಣ ನಿರ್ಮಿಸಿರುವುದು ರೇವಾ ವಿವಿಯು ಮಾನವೀಯ ಮೌಲ್ಯಗಳಿಗೆ ನೀಡುವ ಮಹತ್ವದ ಸೂಚಕವಾಗಿದೆ ಎಂದು ಹೊಗಳಿದರು.

    ರೇವಾ ವಿವಿ ಕುಲಪತಿ ಡಾ. ಪಿ. ಶ್ಯಾಮರಾಜು ಮಾತನಾಡಿ, ರೇವಾ ವಿವಿಯ ಘನತೆ ಹೆಚ್ಚುತ್ತಿದೆ. ಇದಕ್ಕೆಲ್ಲ ನಿಮ್ಮ ಪರಿಶ್ರಮ ಕಾರಣವಾಗಿದೆ. ಜೊತೆಗೆ ಇದನ್ನು ಕಾಪಾಡಿಕೊಂಡುವ ಹೋಗುವ ಹೊಣೆಯು ನಿಮ್ಮ ಮೇಲಿದೆ ಎಂದು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ತಿಳಿಸಿದರು.

    ಕಾರ್ಯಕ್ರಮದಲ್ಲಿ ರೇವಾ ವಿವಿಯ ವಿಶ್ರಾಂತ ಕುಲಪತಿ ಡಾ. ವಿ.ಜಿ. ತಳವಾರ್, ರಿಜಿಸ್ಟ್ರಾರ್ ಡಾ. ಎಂ. ಧನಂಜಯ, ಡಾ. ಎನ್. ರಮೇಶ್, ಡಾ. ಬೀನಾ ಜಿ, ಡಾ. ಶುಭಾ ಎ. ವೇದಿಕೆ ಮೇಲಿದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ರೇವಾ ವಿವಿಯ ಪ್ರದರ್ಶನ ಕಲಾ ವಿಭಾಗದ ಮಾಯಾ ಮತ್ತು ಮುದ್ರಾ ಅವರಿಂದ ಕತಕ್, ಸ್ವಾತಿ ತಿರುನಾಳ ಸಂಗಡಿಗರಿಂದ ಮೋಹಿನಿ ಆಟ್ಟಂ ಮತ್ತು ಭರತನಾಟ್ಯದಲ್ಲಿ ಅರ್ಧನಾರೀಶ್ವರ ರೂಪಕವನ್ನು ಪ್ರದರ್ಶಿಸಲಾಯಿತು.

  • ರೇವಾ ವಿಶ್ವ ವಿದ್ಯಾಲಯದಲ್ಲಿ ಆಧುನಿಕ ಭದ್ರತಾ ವ್ಯವಸ್ಥೆ

    ರೇವಾ ವಿಶ್ವ ವಿದ್ಯಾಲಯದಲ್ಲಿ ಆಧುನಿಕ ಭದ್ರತಾ ವ್ಯವಸ್ಥೆ

    ಬೆಂಗಳೂರು: ವಿದ್ಯಾರ್ಥಿಗಳಿಗೆ ಸೂಕ್ತ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಇದೇ ಪ್ರಥಮ ಬಾರಿಗೆ ನಗರದ ಯಲಹಂಕದಲ್ಲಿರುವ ರೇವಾ ವಿಶ್ವವಿದ್ಯಾನಿಲಯದಲ್ಲಿ ಸ್ಟೇಟ್ ಆಫ್ ದಿ ಆರ್ಟ್ ಸೆಕ್ಯೂರಿಟಿ ಸರ್ವೀಸ್ ಸಿಸ್ಟಂ ನೂತನವಾಗಿ ನಿರ್ಮಿಸಿದ್ದು, ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಪಿ.ಶ್ಯಾಮರಾಜು ಇಂದು ಚಾಲನೆ ನೀಡಿದರು.

    ಅಲರ್ಟ್ ಐ ಪ್ರೀಕ್ವೆನ್ಸಿ ಡಿಟೆಕ್ಟರ್ ಎಂದು ಕರೆಯಲ್ಪಡುವ ಈ ರಕ್ಷಣೆ ವ್ಯವಸ್ಥೆಯಲ್ಲಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವವರ ಮಾಹಿತಿಯನ್ನು ವಿಡಿಯೋ ಸಮೇತ ಸಹಿತ ಸ್ವಯಂ ಚಾಲಿತವಾಗಿ ಸಂಪೂರ್ಣ ಮಾಹಿತಿಯನ್ನು ಸಂಗ್ರಹ ಮಾಡುತ್ತದೆ. ಇನ್ನುಳಿದಂತೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ನೌಕರರು ಬಾರ್ ಕೋಡ್ ನೀಡಿದ್ದು, ಕಾಲೇಜಿಗೆ ಭೇಟಿ ನೀಡಿದ್ದ ಸಮಯ ಹಾಗೂ ಸಮಗ್ರ ಮಾಹಿತಿ ಕೂಡ ದಾಖಲಾಗುತ್ತದೆ. ಇನ್ನುಳಿದಂತೆ ವಾಹನಗಳ ಮಾಹಿತಿಗಳು ಸಂಗ್ರಹವಾಗುತ್ತದೆ.

    ಉದ್ಘಾಟಣೆ ನಂತರ ಮಾತನಾಡಿದ ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಪಿ.ಶ್ಯಾಮರಾಜು, ನಮ್ಮ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ 4,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಅವರಿಗೆ ಸೂಕ್ತಭದ್ರತೆ ಹಾಗೂ ಅವರ ಚಲನವಲನಗಳ ಮೇಲೆ ನಿಗಾ ಇಡುವ ಸಲುವಾಗಿಯು ಎಚ್ಎಫ್‍ಡಿ ರಕ್ಷಣಾ ವ್ಯವಸ್ಥೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಗೂ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿರುವ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದ್ದು, ಕಾಲೇಜು ವಿದ್ಯಾರ್ಥಿಗಳ ಚಲನ – ವಲನಗಳನ್ನು ವೀಕ್ಷಿಸುವುದರ ಜೊತೆಗೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ತಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

    ಇದೇ ವೇಳೆ ರೇವಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಸ್.ವೈ.ಕುಲಕರ್ಣಿ ಸೇರಿದಂತೆ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

  • ಹಂಸಲೇಖಾರಿಂದ ರೇವಾ ವಿವಿ ಮಾಧ್ಯಮ ಕೇಂದ್ರ ಉದ್ಘಾಟನೆ

    ಹಂಸಲೇಖಾರಿಂದ ರೇವಾ ವಿವಿ ಮಾಧ್ಯಮ ಕೇಂದ್ರ ಉದ್ಘಾಟನೆ

    ಬೆಂಗಳೂರು: ರೇವಾ ವಿಶ್ವವಿದ್ಯಾಲಯ ಹಚ್ಚ ಹಸಿರಿನ ನಿತ್ಯ ತೋರಣದ ವಿದ್ಯಾ ದೇವಾಲಯ ಎಂದು ನಾದಬ್ರಹ್ಮರೆಂದು ಪ್ರಖ್ಯಾತಿ ಹೊಂದಿರುವ ಸಂಗೀತ ನಿರ್ದೇಶಕ ಹಂಸಲೇಖ ಅವರು ಬಣ್ಣಿಸಿದ್ದಾರೆ.

    ರೇವಾ ವಿಶ್ವವಿದ್ಯಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಮಾಧ್ಯಮಕೇಂದ್ರ(ಮೀಡಿಯಾ ಸೆಂಟರ್)ವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ನಗರ ಒತ್ತಡದ ಮತ್ತು ಸಂಚಾರ ದಟ್ಟಣೆಯ ಕಿಷ್ಕಿಂದೆ ಎಂದು ಹೆಸರಾಗುತ್ತಿದೆ. ಅಂತಹ ಆಲೋಚನೆಗಳಿಂದ ಹೊರ ಬರಲು ಬೆಂಗಳೂರಿನಿಂದ ಕೊಂಚ ಹೊರವಲಯದಲ್ಲಿ ರೇವಾ ವಿದ್ಯಾದೇವಾಲಯವಿದೆ. ಇದರ ಮಾಧ್ಯಮಕೇಂದ್ರದ ಉದ್ಘಾಟನೆಗೆ ನನ್ನನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ. ಇದು ನನ್ನ ಪುಣ್ಯ. ಈ ವಿಶ್ವವಿದ್ಯಾಲಯದ ಬಗ್ಗೆ ಕೇಳಿದ್ದೆ ಆದರೆ ಇವತ್ತು ನೋಡುವಂತಹ ಭಾಗ್ಯ ಲಭಿಸಿದೆ. ಒಳಗೆ ಬಂದು ನೋಡಿದಾಗ ಇದೊಂದು ಹಚ್ಚ ಹಸಿರಿನ ನಿತ್ಯ ತೋರಣವೆಂದು ಭಾಸವಾಯಿತು ಎಂದರು.

    ಈ ರೇವಾ ವಿಶ್ವವಿದ್ಯಾಲಯದಲ್ಲಿ ಮಾಧ್ಯಮಕೇಂದ್ರವನ್ನು ವೃತ್ತಿಪರವಾಗಿ ನಿರ್ಮಾಣ ಮಾಡಲಾಗಿದೆ. ಈ ಕೇಂದ್ರ ಉದ್ಘಾಟನೆಗೊಳ್ಳುವ ಮೂಲಕ ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಪಿ. ಶ್ಯಾಮರಾಜು ಅವರ ಕನಸು ನನಸಾಗಿದೆ.

    ವಿದ್ಯಾರ್ಥಿಗಳು ಕೊಡುಗೆ ನೀಡಲಿ
    ಇವತ್ತು ಸುದ್ದಿಯಿಂದ ಜೀವನ. ಆದರೆ ಶಿಕ್ಷಕರಾದ ನಾವು ಸುದ್ದಿ ಒಳಗಿನ ವೈಬ್ರೆಂಟ್‍ನಿಂದ ಜೀವನ ಎನ್ನುತ್ತೇವೆ. ಪ್ರತಿಯೊಂದು ವೈಬ್ರೆಷನ್ ಒಂದು ಮೆಸೇಜ್ ಇದ್ದಂತೆ. ಇವತ್ತಿನಿಂದ ಮೀಡಿಯಾ ಸೆಂಟರ್ ನಲ್ಲಿ ಪಾಸಿಟಿವ್ ವೈಬ್ರೆಷನ್ ಪ್ರಾರಂಭವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಪ್ರತಿವರ್ಷ ಐದು ಸಾವಿರ ವಿದ್ಯಾರ್ಥಿಗಳು ತೇರ್ಗಡೆಯಾಗಿ ಹೊರ ಹೋಗುತ್ತಿದ್ದಾರೆ. ಅವರೆಲ್ಲ ಈ ನಾಡಿಗೆ ಕೊಡುಗೆಯನ್ನು ನೀಡಲಿ ಎಂದು ಹಾರೈಸಿದರು.

    ಈ ಸ್ಟುಡಿಯೋದಲ್ಲಿ ಪ್ರದರ್ಶನ ಕಲೆಗೆ ಒಂದು ಪ್ರತ್ಯೇಕ ವಿಭಾಗ ತೆರೆಯಲಾಗಿದೆ. ಜೊತೆಗೆ ಇದಕ್ಕೆ ಪ್ರತಿಭಾನ್ವಿತ ಸಿಬ್ಬಂಧಿಯನ್ನು ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಜಾನಪದಕ್ಕೆ ಸಂಬಂಧಿಸಿದಂತೆ ಕೆಲಸ ಮಾಡುವಾಗ ನಾನು ಇವರ ಜೊತೆ ಕೈಜೋಡಿಸುತ್ತೇನೆ ಎಂದರು.

    ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪಿ. ಶ್ಯಾಮರಾಜುರವರು ಮಾತನಾಡಿ, ನಮ್ಮ ವಿಶ್ವವಿದ್ಯಾಲಯದಲ್ಲಿ 15 ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇವತ್ತು ಉದ್ಘಾಟನೆಗೊಂಡಿರುವ ಸ್ಟುಡಿಯೋದಿಂದ ಪತ್ರಿಕೋದ್ಯಮ ಮತ್ತು ಇತರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ತರಗತಿಯಲ್ಲಿ ಒತ್ತಡದಲ್ಲಿರುವ ವಿದ್ಯಾರ್ಥಿಗಳು ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಕಲೆ ಮತ್ತು ತಂತ್ರಜ್ಞಾನದ ಬಗ್ಗೆ ತಿಳಿದುಕೊಂಡು ತಮ್ಮ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ಪದವಿಯ ಜತೆಗೆ ತಂತ್ರಜ್ಞಾನಗಳ ಬಗ್ಗೆಯೂ ತಿಳಿದು ಹೊರಜಗತ್ತಿಗೆ ಕಾಲಿಡಲಿ ಎಂಬ ಉದ್ದೇಶದಿಂದ ಈ ಮಾಧ್ಯಮ ಕೇಂದ್ರವನ್ನು ತೆರೆಯಲಾಗಿದೆ ಎಂದು ತಿಳಿಸಿದರು.

    1 ಕೋಟಿ ವೆಚ್ಚದಲ್ಲಿ ಮಾಧ್ಯಮ ಕೇಂದ್ರ:
    ಮಲ್ಟಿ ಮೀಡಿಯಾ, ಮೀಡಿಯಾ ಎಡಿಟಿಂಗ್, ಅನಿಮೇಶನ್ ತಂತ್ರಜ್ಞಾನ, ಕಂಪ್ಯೂಟರ್ ಗ್ರಾಫಿಕ್ಸ್, ಆನ್‍ಲೈನ್ ವಿಡಿಯೋ ಎಡಿಟಿಂಗ್, ಕ್ಯಾಂಪಸ್ ಟಿ.ವಿ., ಕ್ಯಾಂಪಸ್ ರೇಡಿಯೋ, ವೆಬ್ ರೇಡಿಯೋ ಹಾಗೂ ವಾರ್ತಾ ನಿರೂಪಣೆ, ಚರ್ಚೆಗೆ ಸಂಬಂಧಿಸಿದ ಸ್ಟುಡಿಯೋಗಳು ಮಾಧ್ಯಮ ಕೇಂದ್ರದಲ್ಲಿದ್ದು, ಒಂದು ಕೋಟಿ ವೆಚ್ಚದಲ್ಲಿ ಈ ಕೇಂದ್ರವನ್ನು ನಿರ್ಮಿಸಲಾಗಿದೆ.

    ಕಾರ್ಯಕ್ರಮದಲ್ಲಿ ಉಪಕುಲಪತಿಗಳಾದ ಡಾ. ಎಸ್. ವೈ ಕುಲಕರ್ಣಿ, ಕುಲಸಚಿವರಾದ ಡಾ. ಧನಂಜಯ್, ವಿಭಾಗದ ಮುಖ್ಯಸ್ಥರಾದ ಡಾ. ಬೀನಾ ಜಿ., ಡಾ. ಪಾಯಲ್ ದತ್ತ ಚೌದರಿ ಮತ್ತು ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

  • ರೇವಾ ಪ್ರೊಜೆಕ್ಟ್ ಎಕ್ಸ್ ಪೋಗೆ ಚಾಲನೆ

    ರೇವಾ ಪ್ರೊಜೆಕ್ಟ್ ಎಕ್ಸ್ ಪೋಗೆ ಚಾಲನೆ

    ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರೊಜೆಕ್ಟ್ ಅನಾವರಣಕ್ಕೆ ಅವಕಾಶ ಇರುವ ರೇವಾ ಪ್ರೊಜೆಕ್ಟ್ ಎಕ್ಸ್ ಪೋ 2018ಕ್ಕೆ ಚಾಲನೆ ಸಿಕ್ಕಿದೆ.

    ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅಥಿತಿಯಾಗಿ ಆಗಮಿಸಿದ್ದ ಡಿಆರ್ ಡಿಓ ದ ನಿವೃತ್ತ ಜನರಲ್ ನಿರ್ದೇಶಕ ಡಾ.ಕೆ.ಡಿ.ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ರೇವಾ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ. ಶ್ಯಾಮ ರಾಜು ಅಧ್ಯಕ್ಷತೆಯನ್ನು ವಹಿಸಿದ್ದರೆ, ರೇವಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಸ್.ವೈ ಕುಲಕರ್ಣಿ ಉಪಸ್ಥಿತರಿದ್ದರು.

    ಬೆಳಗ್ಗೆ 9 ಗಂಟೆಗೆ ಕಾರ್ಯಕ್ರಮ ಆರಂಭವಾಗಿದ್ದು, ವಿವಿಧ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಪ್ರೊಜೆಕ್ಟ್ ಗಳನ್ನು ಪ್ರದರ್ಶಿಸುತ್ತಿದ್ದಾರೆ.

    ಕಾರ್ಯಕ್ರಮ ನಡೆಯುವ ಸ್ಥಳ: ರೇವಾ ವಿಶ್ವವಿದ್ಯಾಲಯ, ರುಕ್ಮಿಣಿ ನಾಲೆಡ್ಜ್ ಪಾರ್ಕ್, ಕಟ್ಟಿಗೆನಹಳ್ಳಿ, ಯಲಹಂಕ, ಬೆಂಗಳೂರು.