Tag: Revenue Department

  • ರೈತನ ಪರಿಹಾರ ನೀಡದ ಎಸಿ ಕಚೇರಿ ಪೀಠೋಪಕರಣ ಜಪ್ತಿಗೆ ನ್ಯಾಯಾಲಯ ಆದೇಶ

    ರೈತನ ಪರಿಹಾರ ನೀಡದ ಎಸಿ ಕಚೇರಿ ಪೀಠೋಪಕರಣ ಜಪ್ತಿಗೆ ನ್ಯಾಯಾಲಯ ಆದೇಶ

    ಚಿತ್ರದುರ್ಗ: ನಾಲೆ ಕಾಮಗಾರಿಗೆ ರೈತನ ಜಮೀನು ವಶಪಡಿಸಿಕೊಂಡು ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ್ದಕ್ಕೆ ಕಂದಾಯ ಇಲಾಖೆ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡುವಂತೆ ಚಿತ್ರದುರ್ಗ ಜಿಲ್ಲಾ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದೆ.

    ಚೆಳ್ಳಕೆರೆ ತಾಲೂಕಿನ ಮೀರಾಸಾಬಿಹಳ್ಳಿ ಗ್ರಾಮದ ರೈತ ಪಾಲಣ್ಣ ಅವರ ಎರಡೂವರೇ ಎಕರೆ ಜಮೀನಿನಲ್ಲಿ ನಾಲೆ ನಿರ್ಮಾಣ ಮಾಡಲಾಗಿತ್ತು. ಆದರೆ ಕಳೆದ 30 ವರ್ಷಗಳಿಂದ 40 ಸಾವಿರ ರೂ. ಪರಿಹಾರದ ಹಣ ನೀಡದೆ ಕಂದಾಯ ಇಲಾಖೆ ಅಧಿಕಾರಿಗಳು ಸತಾಯಿಸುತ್ತಿದ್ರು.

    ಅಧಿಕಾರಿಗಳ ವರ್ತನೆಗೆ ಬೇಸತ್ತ ರೈತ ಪಾಲಣ್ಣ ನ್ಯಾಯಾಲಯದ ಮೊರೆ ಹೋಗಿದ್ದರು. ಹೀಗಾಗಿ 30 ವರ್ಷದಿಂದ ವಿಳಂಬ ಮಾಡುತ್ತ ಬಂದಿದ್ದರಿಂದ ಬಡ್ಡಿ, ಅಸಲು ಸೇರಿ 2.29 ಲಕ್ಷ ರೂ. ನೀಡುವಂತೆ ಜಿಲ್ಲಾ ಸಿವಿಲ್ ನ್ಯಾಯಾಲಯ ಆದೇಶ ನೀಡಿತ್ತು. ಆದರೆ ಇದನ್ನು ಲೆಕ್ಕಿಸದ ಅಧಿಕಾರಿಗಳು ಪಾಲಣ್ಣ ಅವರಿಗೆ ಹಣ ನೀಡದೇ ಕಾಲ ದೂಡುತ್ತಿದ್ದರು. ಕೋರ್ಟ್ ಆದೇಶವನ್ನು ಪರಿಗಣಿಸದ ಕಂದಾಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವನ್ನು ಎತ್ತಿ ಹಿಡಿದ ಜಿಲ್ಲಾ ಸಿವಿಲ್ ನ್ಯಾಯಾಲಯ ಚಿತ್ರದುರ್ಗ ಉಪವಿಭಾಗಧಿಕಾರಿ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡುವಂತೆ ಆದೇಶಿಸಿದೆ.

  • ಸ್ಮಶಾನ ಜಾಗಕ್ಕಾಗಿ ಹೊಡೆದಾಟ: 50ಕ್ಕೂ ಹೆಚ್ಚು ಜನರಿಗೆ ಗಾಯ

    ಸ್ಮಶಾನ ಜಾಗಕ್ಕಾಗಿ ಹೊಡೆದಾಟ: 50ಕ್ಕೂ ಹೆಚ್ಚು ಜನರಿಗೆ ಗಾಯ

    ಕೋಲಾರ: ಸ್ಮಶಾನ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳು ಹೊಡೆದಾಡಿಕೊಂಡು, 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಜಿಲ್ಲೆಯ ವೇಮಗಲ್ ಹೋಬಳಿಯ ಹೊಲೇರಹಳ್ಳಿಯಲ್ಲಿ ನಡೆದಿದೆ.

    ಇಂದು ಕಂದಾಯ ಇಲಾಖೆ ಅಧಿಕಾರಿಗಳು ಸ್ಮಶಾನದ ಸರ್ವೇ ನಡೆಸುತ್ತಿದ್ದರು. ಸ್ಥಳದಲ್ಲಿ ಸುಮಾರು 80ಕ್ಕೂ ಹೆಚ್ಚು ಜನರು ಸೇರಿದ್ದರು. ಸಶ್ಮಾನ ಜಾಗ ಒತ್ತುವರಿ ಆಗಿಲ್ಲ ಎಂದು ಒಂದು ಗುಂಪು ವಾದಕ್ಕೀಳಿದಾಗ ಮಾತಿನ ಚಕಮಕಿ ಪ್ರಾರಂಭವಾಗಿದ್ದು, ಪರಿಸ್ಥಿತಿ ಕೈ ಮೀರಿದ ಪರಿಣಾಮ ಹೊಡೆದಾಡಿಕೊಂಡಿದ್ದು, ಮಹಿಳೆಯರು ಸೇರಿದಂತೆ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

    ಗುಂಪು ಘರ್ಷಣೆ ಏಕೆ?
    ಸ್ಮಶಾನದ ಒತ್ತುವರಿ ಮಾಡಲಾಗಿದೆ ಎಂದು ಹೊಲೇರಹಳ್ಳಿಯ ಗ್ರಾಮದ ಒಂದು ಗುಂಪು ಕಂದಾಯ ಇಲಾಖೆಗೆ ದೂರು ನೀಡಿತ್ತು. ಆದರೆ ಯಾವುದೇ ಒತ್ತುವರಿ ಆಗಿಲ್ಲವೆಂದು ಮತ್ತೊಂದು ಗುಂಪಿನ ಸದಸ್ಯರು ಪಟ್ಟು ಹಿಡಿದಿದ್ದರು. ದೂರು ದಾಖಲಿಸಿಕೊಂಡಿದ್ದ ಕಂದಾಯ ಇಲಾಖೆ ಅಧಿಕಾರಿಗಳು ಇಂದು ಸ್ಮಶಾನ ಸರ್ವೇಗೆ ಗ್ರಾಮಕ್ಕೆ ಬಂದಿದ್ದಾಗ ಗುಂಪುಗಳು ಹೊಡೆದಾಡಿಕೊಂಡಿವೆ.

    ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ವೇಮಗಲ್ ಠಾಣೆ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಗಾಯಾಳುಗಳನ್ನು ಕೋಲಾರ ಜಿಲ್ಲಾಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ವೇಮಗಲ್ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಾಂಟ್ರ್ಯಾಕ್ಟರ್ ಕಂಪೆನಿ ಮೇಲೆ ಐಟಿ ದಾಳಿ – 160 ಕೋಟಿ ನಗದು, 100 ಕೆಜಿ ಚಿನ್ನ ಪತ್ತೆ

    ಕಾಂಟ್ರ್ಯಾಕ್ಟರ್ ಕಂಪೆನಿ ಮೇಲೆ ಐಟಿ ದಾಳಿ – 160 ಕೋಟಿ ನಗದು, 100 ಕೆಜಿ ಚಿನ್ನ ಪತ್ತೆ

    ಚೆನ್ನೈ: ತಮಿಳುನಾಡಿನ ರಸ್ತೆ ಗುತ್ತಿಗೆದಾರರೊಬ್ಬರ ಕಂಪೆನಿ ಸೇರಿದಂತೆ ಅನೇಕ ಭಾಗಗಳಲ್ಲಿ ಆದಾಯ ತೆರಿಗೆ ಇಲಾಖೆ ರೇಡ್ ಮಾಡಿದ್ದು, ಬರೋಬ್ಬರಿ 160 ಕೋಟಿ ರೂ. ನಗದು ಹಾಗೂ 100 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ.

    ಈ ಮೊತ್ತ ಆದಾಯ ತೆರಿಗೆ ಇಲಾಖೆ ಇದುವರೆಗೂ ನಡೆಸಲಾಗಿದ್ದ ದಾಳಿಯಲ್ಲಿ ಅತ್ಯಂತ ದೊಡ್ಡ ಮೊತ್ತವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸರ್ಕಾರದ ಒಪ್ಪಂದ ಮೇರೆಗೆ ರಸ್ತೆಗಳ ಮತ್ತು ಹೆದ್ದಾರಿಯ ನಿರ್ಮಾಣ ಮಾಡುತ್ತಿದ್ದ ಪಾಲುದಾರಿಕೆಯ ಸಂಸ್ಥೆ ಎಸ್‍ಪಿಕೆ ಮತ್ತು ಕಂಪೆನಿಗೆ ಸೇರಿದ ವಿವಿಧ ಭಾಗಗಳಲ್ಲಿ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.

    ದಾಳಿಯಲ್ಲಿ ಸುಮಾರು 160 ಕೋಟಿ ರೂ. ನಗದು ಮತ್ತು ಯಾವುದೇ ದಾಖಲೆಗಳಿಲ್ಲದ 100 ಕೆಜಿ ಚಿನ್ನದ ಗಟ್ಟಿ ಪತ್ತೆಯಾಗಿದೆ. ಸದ್ಯಕ್ಕೆ ಸೋಮವಾರ ಆರಂಭವಾದ ದಾಳಿ ಇದೂವರೆಗೂ ನಡೆಯುತ್ತಿದೆ. ವಶಪಡಿಸಿಕೊಂಡಿದ್ದ ಹಣ ಮತ್ತು ಚಿನ್ನಕ್ಕೆ ಯಾವುದೇ ಸೂಕ್ತ ದಾಖಲೆ ಇಲ್ಲ ಎಂದು ಹೇಳಲಾಗುತ್ತಿದೆ.

    2016ರಲ್ಲಿ ಚೆನ್ನೈನಲ್ಲಿ ಗಣಿಗಾರಿಕೆ ಬ್ಯಾರನ್ ಇಲಾಖೆ ದಾಳಿ ನಡೆಸಿತ್ತು. ಆಗ 110 ಕೋಟಿ ಹಣವನ್ನು ವಶಪಡಿಕೊಳ್ಳಲಾಗಿತ್ತು. ಆದ್ದರಿಂದ ಇದು ಅತಿದೊಡ್ಡ ಮೊತ್ತದ ದಾಳಿಯಾಗಿದೆ. ಚೆನ್ನೈನ ಆದಾಯ ಇಲಾಖೆಯ ತನಿಖೆ ವಿಭಾಗವು ಕಾರ್ಯಾಚರಣೆಯನ್ನು ನಡೆಸುತ್ತಿದೆ. ಎಸ್‍ಪಿಕೆ ಸಂಸ್ಥೆ ಮತ್ತು ಅದರ ಇತರೆ ಕಂಪೆನಿಗಳ ಮೇಲೆ ದಾಳಿ ನಡೆಸಲಾಗುತ್ತಿದೆ.

    ಒಟ್ಟಾರೆ ಕಂಪೆನಿಯ 22 ಜಾಗಗಳಲ್ಲಿ ದಾಳಿ ನಡೆಸಲಾಗಿದೆ. ಇವುಗಳಲ್ಲಿ 17 ಚೆನ್ನೈ, 4 ಅರುಪ್ಪುಕೊಟ್ಟಾಯ್(ವಿರುಧುನಗರ) ಮತ್ತು 1 ವೆಲ್ಲೂರಿನ ಕಟಪಾಡಿಯಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪಾರ್ಕ್ ಮಾಡಿದ್ದ ಕಾರುಗಳಲ್ಲಿ ಟ್ರ್ಯಾವೆಲ್ ಬ್ಯಾಗ್ ಗಳಲ್ಲಿ ಹಣ ಪತ್ತೆಯಾಗಿದೆ. ಜೊತೆಗೆ ಚಿನ್ನದ ಬಿಸ್ಕತ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯಕ್ಕೆ ಇನ್ನು ಆದಾಯ ಇಲಾಖೆ ಶೋಧ ಕಾರ್ಯವನ್ನು ಮುಂದುವರೆಸಿದೆ.

  • ವಿಡಿಯೋ: ಬೊಂಬೆ ಹೇಳುತೈತೆ ಹಾಡಿಗೆ ಬಳ್ಳಾರಿ ಡಿಸಿಯಿಂದ ಸಖತ್ ಸ್ಟೆಪ್!

    ವಿಡಿಯೋ: ಬೊಂಬೆ ಹೇಳುತೈತೆ ಹಾಡಿಗೆ ಬಳ್ಳಾರಿ ಡಿಸಿಯಿಂದ ಸಖತ್ ಸ್ಟೆಪ್!

    ಬಳ್ಳಾರಿ: ಕಂದಾಯ ಇಲಾಖೆಯ ಸಿಬ್ಬಂದಿ ಹಾಡಿದ ಹಾಡಿಗೆ ಬಳ್ಳಾರಿ ಜಿಲ್ಲಾಧಿಕಾರಿ ಕುಣಿದು ಕುಪ್ಪಳಿಸಿ ಎಂಜಾಯ್ ಮಾಡಿದ್ದಾರೆ.

    ಜಿಲ್ಲಾ ಮಟ್ಟದ ಕಂದಾಯ ದಿನಾಚರಣೆಯ ನಿಮಿತ್ತ ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಇಲಾಖೆಯ ಸಿಬ್ಬಂದಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ’ ಎಂಬ ಹಾಡನ್ನು ಹಾಡಿದ್ದಾರೆ.

    ಈ ಹಾಡು ಹಾಡುತ್ತಿದ್ದಂತೆಯೇ ಕಾರ್ಯಕ್ರಮ ವೀಕ್ಷಣೆ ಮಾಡುತ್ತಿದ್ದ ಜಿಲ್ಲಾಧಿಕಾರಿ ರಾಮಪ್ರಸಾತ್ ಮನೋಹರ್ ವೇದಿಕೆಯ ಮೇಲೆ ಹತ್ತಿ ಕುಣಿಯುವ ಮೂಲಕ ತಾವು ಕೂಡ ಪವರ್ ಸ್ಟಾರ್ ಅಭಿಮಾನಿ ಎಂದು ತೋರಿಸಿಕೊಟ್ಟರು.

    ಇಲಾಖೆಯ ಸಿಬ್ಬಂದಿಗಳಿಗಾಗಿ ದಿನವಿಡೀ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿಯಾದ ಬಳ್ಳಾರಿ ಜಿಲ್ಲಾಧಿಕಾರಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ಸಿಬ್ಬಂದಿ ಜೊತೆ ಬೆರೆತು ಸಂಭ್ರಮಿಸಿದ್ದು ವಿಶೇಷವಾಗಿತ್ತು.

    https://www.youtube.com/watch?v=3KBS4_WzRzA

  • ಭೂಮಿ ಖರೀದಿ ಮಾಡೋ ಮಂದಿಗೆ ಗುಡ್ ನ್ಯೂಸ್- ನಿಮ್ಮ ನೆರವಿಗೆ ಬರಲಿದೆ `ದಿಶಾಂಕ್’ ಆ್ಯಪ್

    ಭೂಮಿ ಖರೀದಿ ಮಾಡೋ ಮಂದಿಗೆ ಗುಡ್ ನ್ಯೂಸ್- ನಿಮ್ಮ ನೆರವಿಗೆ ಬರಲಿದೆ `ದಿಶಾಂಕ್’ ಆ್ಯಪ್

    ಬೆಂಗಳೂರು: ಹೊಸ ಜಾಗ ಖರೀದಿ ಮಾಡಲು ನೀವು ಪ್ರಯತ್ನ ಮಾಡುತ್ತಿದ್ದೀರಾ? ನೀವು ಖರೀದಿ ಮಾಡಿದ ಜಾಗದಲ್ಲಿ ರಾಜಕಾಲುವೆ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳಬೇಕೇ? ಹಾಗಾದ್ರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ಎಲ್ಲ ಸಂಶಯ, ಗೊಂದಲಗಳನ್ನು ಪರಿಹಾರ ಮಾಡುತ್ತೆ `ದಿಶಾಂಕ್’ ಆ್ಯಪ್. ಹೇಗೆ ಈ ಅಪ್ಲಿಕೇಶನ್ ಪರಿಹಾರ ಮಾಡುತ್ತೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ.

    ಏನಿದು ಆ್ಯಪ್, ಯಾವ ಮಾಹಿತಿ ಸಿಗುತ್ತೆ?
    ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್‍ನಲ್ಲಿರುವ ನಕಾಶೆಯನ್ನು ನೋಡಿ ಆಸ್ತಿಯ ಕುರಿತ ಮೂಲ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ. ದಿಶಾಂಕ್ ಆ್ಯಪ್ ಬೆಂಗಳೂರು ಮಾತ್ರವಲ್ಲದೇ ರಾಜ್ಯದ 30 ಜಿಲ್ಲೆಯಗಳ ಪ್ರತಿ ಭೂ ಭಾಗದ ಮಾಹಿತಿಯನ್ನು ಹೊಂದಿದೆ.

    ಯಾವುದಾದರೂ ಆಸ್ತಿಯ ನಿಖರವಾದ ಸರ್ವೆ ನಂಬರ್ ಹುಡುಕಲು ಹಾಗೂ ಆ ಭೂಮಿಯ ಬಗ್ಗೆ ವಿವರಗಳನ್ನು ಪಡೆಯಲು ದಿಶಾಂಕ್ ಆ್ಯಪ್ ಸಹಕಾರಿಯಾಗಲಿದೆ. ಭೂ ಭಾಗದ ವಿವರ, ರಾಜಕಾಲುವೆ, ಕೆರೆ ಕುಂಟೆ ಸುತ್ತಲಿನ ಪ್ರದೇಶ ಹಾಗೂ ಆಸ್ತಿಯ ಆಸುಪಾಸಿನಲ್ಲಿರುವ ಇತರೇ ಭೂ ಭಾಗದ ಮಾಹಿತಿಯನ್ನು ನೀಡಲಿದೆ. ಇದರಿಂದ ಭೂ ಒತ್ತುವರಿಯನ್ನೂ ಸುಲಭವಾಗಿ ಪತ್ತೆಹಚ್ಚಬಹುದುದಾಗಿದೆ.

    ಬಳಕೆ ಹೇಗೆ?
    ಮೊಬೈಲ್ ಫೋನ್‍ಗಳಲ್ಲಿ ಈ ಆ್ಯಪ್ ಡೌನ್‍ಲೋಡ್ ಮಾಡಿ, ಲೊಕೇಷನ್ ವಿವರವನ್ನು ಅಪ್‍ಡೇಟ್ ಮಾಡಿಕೊಳ್ಳಬೇಕು. ಈ ವೇಳೆ ವ್ಯಕ್ತಿ ಯಾವ ಪ್ರದೇಶದಲ್ಲಿ ಇರುತ್ತಾರೆ ಆ ಸ್ಥಳದ ಯಾವ ಸರ್ವೆ ನಂಬರ್ ನಲ್ಲಿದೆ ಎಂಬುದನ್ನು ತಿಳಿಸುತ್ತದೆ. ಇದರೊಂದಿಗ ಯಾವುದೇ ಆಸ್ತಿಯ ಸರ್ವೆ ನಂಬರ್ ನಮೂದಿದರೆ ಆ ನಿರ್ದಿಷ್ಟ ಜಾಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಬಹುದು. ಆ ಜಾಗದಕ್ಕೆ ರಸ್ತೆ ಮಾರ್ಗ ಇದೆಯೇ ಎಂಬುದನ್ನೂ ತಿಳಿದುಕೊಳ್ಳಬಹುದಾಗಿದೆ.

    ಕಾನೂನು ಬದ್ಧ ದಾಖಲೆ ಅಲ್ಲ:
    ದಿಶಾಂಕ್ ಆ್ಯಪ್ ನೀಡುವ ಭೂಮಿಯ ವಿವರ ಕೇವಲ ಮಾಹಿತಿ ಆಗಿದೆ. ಇದನ್ನು ಕಾನೂನು ಬದ್ಧ ದಾಖಲೆ ಎಂದು ಪರಿಗಣಿಸಲಾಗುವುದಿಲ್ಲ.

    ಯಾರಿಗೆ ಉಪಯುಕ್ತ?
    ರಾಜ್ಯದ ಎಲ್ಲಾ ಸಾರ್ವಜನಿಕರು, ರಿಯಲ್ ಎಸ್ಟೇಟ್ ಉದ್ಯಮಿಗಳು ಸೇರಿಂತೆ ಎಲ್ಲರೂ ಭೂಮಿಯ ವಿವರ ಪಡೆಯಲು ಆ್ಯಪ್ ಉಪಯುಕ್ತವಾಗಿದೆ. ಆಸ್ತಿ ವ್ಯವಹಾರ, ಹೊಸ ಭೂಮಿ ಖರೀದಿ ಹಾಗೂ ಮಾರಾಟ ವೇಳೆ ಮಾಹಿತಿಗಾಗಿ ಆ್ಯಪ್ ಬಳಕೆ ಮಾಡಬಹುದು. ಭೂಮಿಯ ಖಾತೆ ವಿವರದಲ್ಲಿ ನಮೂದಿಸಿರುವ ಸರ್ವೆ ನಂಬರ್ ಸರಿಯಾಗಿದೆಯೇ ಎಂಬುದನ್ನೂ ಪರಿಶೀಲಿಸಬಹುದಾಗಿದೆ. ಆದರೆ ಇದರಲ್ಲಿ ಆಸ್ತಿಗಳ ಆಥವಾ ನಿವೇಶನಗಳ ಮೂಲ ಭೌಗೋಳಿಕ ವಿವರಗಳನ್ನು ಲಭಿಸುವುದಿಲ್ಲ.

    ಆ್ಯಪ್ ಸಿದ್ಧಪಡಿಸಿದ್ದು ಯಾರು?
    ದಿಶಾಂಕ್ ಆ್ಯಪ್ ಅನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಸತತ ಮೂರು ವರ್ಷಗಳಿಂದ ಪರಿಶ್ರಮವಹಿಸಿ ಸಿದ್ಧಪಡಿಸಿದೆ. ಇಲಾಖೆಯು 70 ಲಕ್ಷದಷ್ಟು ಸರ್ವೆನಂಬರ್‍ಗಳಿಗೆ ಸಂಬಂಧಿಸಿದ ವಿವರಗಳು ಇದರಲ್ಲಿ ಲಭ್ಯವಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಭಾಗದಲ್ಲಿಯಾದರೂ ಭೂ ಮಾಹಿತಿ ಪಡೆಯುವವರ ನೆರವಿಗೆ ಬರಲು ಕಂದಾಯ ಇಲಾಖೆ `ದಿಶಾಂಕ್ ಆ್ಯಪ್’ ಬಿಡುಗಡೆಗೊಳಿಸಿದೆ.

    ಆ್ಯಪ್ ಉದ್ದೇಶ ಏನು?
    ಒಂದೇ ಆ್ಯಪ್‍ನಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದ ಎಲ್ಲ ಸೇವೆ ಸಿಗುವಂತೆ ಮಾಡುವುದು ಇಲಾಖೆಯ ಉದ್ದೇಶವಾಗಿದೆ. ದಿಶಾಂಕ್ ಆ್ಯಪ್ ತಯಾರಿಸಲು ಕಂದಾಯ ಇಲಾಖೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬಿಎಂಆರ್‍ಡಿಎ, ಬಿಬಿಎಂಪಿ ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವವನನ್ನು ಪಡೆದುಕೊಂಡಿದೆ. ಆ್ಯಪ್ ಮತ್ತಷ್ಟು ಜನ ಸ್ನೇಹಿಯಾಗಿ ಮಾಡಲು ಕಂದಾಯ ಇಲಾಖೆ ಚಿಂತನೆ ನಡೆಸಿದೆ. ಮುಂದಿನ ಹಂತದಲ್ಲಿ ಆ್ಯಪ್‍ನಲ್ಲಿ ಆಸ್ತಿ ಮಾಲೀಕರಿಗೆ ಸಂಬಂಧಿಸಿದ ವಿವರಗಳನ್ನೂ ಜೋಡಿಸುವ ಮೂಲಕ ಮತ್ತಷ್ಟು ಉಪಯುಕ್ತ ಮಹಿತಿ ಕೇಂದ್ರವಾಗಿ ರೂಪಿಸಲು ಇಲಾಖೆ ಚಿತಿಂಸಿದೆ.

    ಎಲ್ಲಿ ಸಿಗುತ್ತೆ?
    ಗೂಗಲ್ ಆಂಡ್ರಾಯ್ಡ್ ಪ್ಲೇ ಸ್ಟೋರ್ ನಲ್ಲಿ ಈ ಆ್ಯಪ್ ಲಭ್ಯವಿದ್ದು 10 ಸಾವಿರಕ್ಕೂ ಹೆಚ್ಚು ಮಂದಿ ಡೌನ್‍ಲೋಡ್ ಮಾಡಿದ್ದಾರೆ. ಪ್ಲೇ ಸ್ಟೋರ್ ನಲ್ಲಿ ಲಭ್ಯವಿದ್ದರೂ, ಮಾಹಿತಿ ಕೊರತೆಯಿಂದ ಹೆಚ್ಚಿನ ಜನರು ಇದನ್ನು ಬಳಕೆ ಮಾಡಿಕೊಳ್ಳುತ್ತಿಲ್ಲ. ಆ್ಯಪ್ ಡೌನ್ ಲೋಡ್ ಮಾಡಲು ಕ್ಲಿಕ್ ಮಾಡಿ – ದಿಶಾಂಕ್ 

  • ಶ್ರವಣಬೆಳಗೋಳದ ಮಹಾಮಸ್ತಾಕಾಭೀಷೆಕ ಉತ್ಸವಕ್ಕೆ 175 ಕೋಟಿ ರೂ.: ಕಂದಾಯ ಇಲಾಖೆಗೆ ಸಿದ್ದು ಬಜೆಟ್‍ನಲ್ಲಿ ಸಿಕ್ಕಿದ್ದೇನು?

    ಶ್ರವಣಬೆಳಗೋಳದ ಮಹಾಮಸ್ತಾಕಾಭೀಷೆಕ ಉತ್ಸವಕ್ಕೆ 175 ಕೋಟಿ ರೂ.: ಕಂದಾಯ ಇಲಾಖೆಗೆ ಸಿದ್ದು ಬಜೆಟ್‍ನಲ್ಲಿ ಸಿಕ್ಕಿದ್ದೇನು?

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ 5ನೇ ಬಜೆಟ್ ಇಂದು ಮಂಡನೆಯಾಗಿದೆ. ಬಜೆಟ್‍ನಲ್ಲಿ ಕಂದಾಯ ಇಲಾಖೆಗೆ ಸಿಕ್ಕಿದ್ದೇನು? ಇಲ್ಲಿದೆ ವಿವರ

    ಒಟ್ಟು ಅನುದಾನ- 5900 ಕೋಟಿ ರೂ.

    – ಬನವಾಸಿ ಅಭಿವೃದ್ಧಿ ಪ್ರಾಧಿಕಾರ, ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರಗಳಿಗೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನ ಕೈಗೊಳ್ಳಲು- 5 ಕೋಟಿ
    – ಶಬರಿಮಲೆಗೆ ಭೇಟಿ ಕೊಡುವ ಕರ್ನಾಟಕದ 50 ಲಕ್ಷಕ್ಕೂ ಹೆಚ್ಚು ಭಕ್ತರ ಅನುಕೂಲಕ್ಕಾಗಿ ವೈದ್ಯಕೀಯ ಸೌಲಭ್ಯ, ಸಹಾಯವಾಣಿ, ರಕ್ಷಣೆಗಾಗಿ ಉಪಕಚೇರಿ ಸ್ಥಾಪನೆ
    – ಶ್ರವಣಬೆಳಗೋಳದಲ್ಲಿ 12 ವರ್ಷಕ್ಕೆ ನಡೆಯುವ ಮಹಾಮಸ್ತಾಕಾಭೀಷೆಕ ಉತ್ಸವಕ್ಕೆ 175 ಕೋಟಿ ರೂ. ಅನುದಾನ.
    – ಮೈಲಾರಲಿಂಗೇಶ್ವರ, ದೇವರಗುಡ್ಡದ ಅಭಿವೃದ್ಧಿ ಪ್ರಾಧಿಕಾರ ರಚನೆ- 5 ಕೋಟಿ ರೂ. ವೆಚ್ಚ.
    – 10 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾವಾರು ಕಾರ್ಯಪಡೆಗಳನ್ನು ರಚಿಸಿ ರಾಜ್ಯದ ಎಲ್ಲಾ ಕೆರೆಗಳನ್ನು ಅಳತೆ ಮಾಡಲು ಕ್ರಮ.
    – 2018 ಮಾರ್ಚ್ ಅಂತ್ಯಕ್ಕೆ ಸುಮಾರು 1100 ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆ.
    – 60 ರಿಂದ 64ರ ವಯೋಮಾನದವರಿಗೆ ನೀಡಲಾಗುತ್ತಿರುವ ವೃದ್ಧಾಪ್ಯ ವೇತನ 200 ರೂ. ನಿಂದ 500 ರೂ.ಗೆ ಹೆಚ್ಚಳ.
    – ಡಿಜಿಟಲ್ ಭೂ ದಾಖಲೆಗಳ ನಿರ್ವಹಣಾ ಯೋಜನೆಯಡಿ ಎಲ್ಲಾ ತಾಲೂಕುಗಳ ಹಳೆ ಕಂದಾಯ ದಾಖಲೆಗಳ ಕೊಠಡಿಯ ಆಧುನೀಕರಣ.
    – ರಾಜ್ಯದ ಎಲ್ಲಾ ತಾಲೂಕುಗಳ ಟಿಪ್ಪಣಿ(ಪಾರ್ಸೆಲ್ ಮ್ಯಾಪ್ಸ್)ಗಳನ್ನ ಭೂನಕ್ಷೆ ಅಥವಾ ಕೊಲ್ಯಾಬ್ ಲ್ಯಂಡ್ ಸಾಫ್ಟ್‍ವೇರ್ ಬಳಸಿ ಡಿಜಿಟಲೀಕರಣ ಮಾಡುವುದು.
    – ಪ್ರಮುಖ ದಖಲೆಯಾದ ಆಕಾರ್ ಬಂದ್ ಡಿಜಿಟಲೀಕರಣ ಮಾಡುವುದು.