Tag: RG Kar Medical College

  • ಕೋಲ್ಕತ್ತಾ ಆರ್‌ಜಿ ಕರ್ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ಸಿಬಿಐ ವರದಿ

    ಕೋಲ್ಕತ್ತಾ ಆರ್‌ಜಿ ಕರ್ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ಸಿಬಿಐ ವರದಿ

    ಕೋಲ್ಕತ್ತಾ: ಇಲ್ಲಿನ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು (RG Kar Medical College) ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಕೇಂದ್ರ ತನಿಖಾ ದಳವು (CBI) ಕೋಲ್ಕತ್ತಾ ಹೈಕೋರ್ಟ್‌ಗೆ (Calcutta High Court) ವರದಿ ಸಲ್ಲಿಸಿದೆ.

    ಕೋಲ್ಕತ್ತಾದ ಹೈಕೋರ್ಟ್‌ನ ಏಕಸದಸ್ಯ ಪೀಠವು ಹಿಂದಿನ ವಿಚಾರಣೆಯ ಸಮಯದಲ್ಲಿ ಟ್ರೈನಿ ವೈದ್ಯೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆಯೇ ಎಂದು ಸ್ಪಷ್ಟಪಡಿಸಲು ಸಿಬಿಐಗೆ ತಿಳಿಸಿತ್ತು. ಈ ಪ್ರಕರಣದ ಆರೋಪಿ ಸಂಜಯ್ ರಾಯ್‌ಗೆ ಕೋರ್ಟ್ ಈ ಹಿಂದೆಯೇ ಜೀವಾವಧಿ ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: Myanmar Earthquake: ಮ್ಯಾನ್ಮಾರ್‌ನಲ್ಲಿ ಪ್ರಬಲ ಭೂಕಂಪಕ್ಕೆ 60 ಸಾವು, 250 ಮಂದಿಗೆ ಗಾಯ

    ನ್ಯಾ. ತೀರ್ಥಂಕರ ಘೋಷ್ ಅವರು, ಅತ್ಯಾಚಾರ ಪ್ರಕರಣದಲ್ಲಿ ಒಬ್ಬರು ಅಥವಾ ಹೆಚ್ಚಿನವರು ಭಾಗಿಯಾಗಿದ್ದಾರೆಯೇ ಎಂದು ತನಿಖೆ ಮಾಡಲು ಸಿಬಿಐಗೆ ಸೂಚಿಸಿದ್ದರು. ಇದೀಗ ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸಿಬಿಐಯು, ಟ್ರೈನಿ ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: Photo Gallary: ಮ್ಯಾನ್ಮಾರ್‌, ಥೈಲ್ಯಾಂಡ್‌ನಲ್ಲಿ ಡೆಡ್ಲಿ ಭೂಕಂಪ – ಭೀಕರ ದೃಶ್ಯಗಳನ್ನು ಫೋಟೊಗಳಲ್ಲಿ ನೋಡಿ..

    ಮೃತ ವೈದ್ಯೆಯ ಪೋಷಕರು, ಸಿಬಿಐಯು ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಿಲ್ಲ. ಸರಿಯಾಗಿ ತನಿಖೆ ಮಾಡಿದ್ದರೆ, ಇನ್ನೂ ಹಲವರ ಬಂಧನವಾಗಿ ಶಿಕ್ಷೆಯಾಗುತ್ತಿತ್ತು ಎಂದು ಆರೋಪಿಸಿದ್ದರು. ಇದನ್ನೂ ಓದಿ: ವಿಜಯಲಕ್ಷ್ಮಿ ಅಕ್ಕ ಹೋರಾಟ ನೋಡಿ ಅವರೊಂದಿಗೆ ನಿಲ್ಲಬೇಕು ಅನ್ನಿಸಿತು: ದರ್ಶನ್‌ ಕೇಸ್‌ ಬಗ್ಗೆ ಧನ್ವೀರ್ ಮಾತು

    2024 ಆಗಸ್ಟ್ 9ರಂದು ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ಸೆಮಿನಾರ್ ಹಾಲ್‌ನ ನಾಲ್ಕನೇ ಮಹಡಿಯಲ್ಲಿ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆ ಅರೆಬೆತ್ತಲೆ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಸಂತ್ರಸ್ತೆ ಲೈಂಗಿಕ ದೌರ್ಜನ್ಯದಿಂದಾಗಿ ಬಾಹ್ಯ ಮತ್ತು ಆಂತರಿಕ ಗಾಯ ಮಾಡಿ ಕೊಲೆ ಮಾಡಲಾಗಿದೆ ಎಂದು ತಿಳಿದಿತ್ತು.

  • ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆ

    ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆ

    – ಕಳೆದ ವರ್ಷ ಟ್ರೈನಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಸುದ್ದಿಯಾಗಿತ್ತು ಕಾಲೇಜು

    ಕೋಲ್ಕತ್ತಾ: ಟ್ರೈನಿ ವೈದ್ಯಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ದೇಶಾದ್ಯಂತ ಸುದ್ದಿಯಾಗಿತ್ತು. ಈಗ ಅದೇ ಕಾಲೇಜು ಮತ್ತೊಂದು ವಿಷಯಕ್ಕೆ ಸುದ್ದಿಯಲ್ಲಿದೆ.

    ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಕಮರ್ಹಟಿಯಲ್ಲಿರುವ ಇಎಸ್‌ಐ ಆಸ್ಪತ್ರೆ ಕ್ವಾರ್ಟರ್ಸ್‌ನಲ್ಲಿ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವುದು ಪತ್ತೆಯಾಗಿದೆ.

    ವಿದ್ಯಾರ್ಥಿನಿಯ ತಾಯಿ ತನ್ನ ಮಗಳಿಗೆ ಕರೆ ಮಾಡಿದರೂ ಉತ್ತರಿಸದ ಕಾರಣ ಭಯಭೀತರಾಗಿದ್ದರು. ವಿದ್ಯಾರ್ಥಿನಿ ಇವಿ ಪ್ರಸಾದ್ ತನ್ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

    ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಮೃತ ವಿದ್ಯಾರ್ಥಿಯ ತಂದೆ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದು, ಮುಂಬೈನಲ್ಲಿ ವಾಸಿಸುತ್ತಿದ್ದಾರೆ.

    ಕಳೆದ ವರ್ಷ ಆ. ರಂದು ಆರ್‌ಜಿ ಕಾರ್ ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯರೊಬ್ಬರ ಶವ ಪತ್ತೆಯಾಗಿತ್ತು.

  • ನ್ಯಾಯ ಸಿಕ್ಕರೆ ಚಹಾ ಸ್ವೀಕಾರ: ಟ್ರೈನಿ ವೈದ್ಯೆ ಸಾವಿಗೆ ನ್ಯಾಯಕ್ಕಾಗಿ ಒತ್ತಾಯ

    ನ್ಯಾಯ ಸಿಕ್ಕರೆ ಚಹಾ ಸ್ವೀಕಾರ: ಟ್ರೈನಿ ವೈದ್ಯೆ ಸಾವಿಗೆ ನ್ಯಾಯಕ್ಕಾಗಿ ಒತ್ತಾಯ

    ಕೋಲ್ಕತ್ತಾ: ಮೊದಲು ನ್ಯಾಯ ದೊರಕಿಸಿಕೊಡಿ, ಬಳಿಕ ಇದೆಲ್ಲವನ್ನು ಕೊಡಿ ಎಂದು ಆರ್‌ಜಿ ಕರ್ ಕಾಲೇಜಿನ (RG Kar College) ವೈದ್ಯರು ಪ್ರತಿಭಟನೆಯಲ್ಲಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಚಹಾ ಆಹ್ವಾನ ನಿರಾಕರಿಸಿ ಹೇಳಿದರು.

    ಶನಿವಾರ ಕಾಳಿಘಾಟ್‌ನಲ್ಲಿ ನಡೆದ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಆರ್‌ಜಿ ಕರ್ ಕಾಲೇಜಿನ ಟ್ರೈನಿ ವೈದ್ಯೆ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆಯಲ್ಲಿದ್ದ ವೈದ್ಯರು ಪಾಲ್ಗೊಂಡಿದ್ದರು. ಇದನ್ನೂ ಓದಿ: ನಾಗಮಂಗಲದಲ್ಲಿ ಹಿಂದೂಗಳಿಗೆ ಒಂದು ರೀತಿ, ಮುಸಲ್ಮಾನರಿಗೆ ಇನ್ನೊಂದು ನೀತಿ: ಎನ್ ರವಿಕುಮಾರ್

    ಸಿಎಂ ಮಮತಾ ಬ್ಯಾನರ್ಜಿ ಚಹಾ ಕುಡಿಯಲು ಪ್ರತಿಭಟನಾನಿರತ ವೈದ್ಯರನ್ನು ಆಹ್ವಾನಿಸಿದ್ದರು. ಮೊದಲು ನ್ಯಾಯ ದೊರಕಿಸಿಕೊಡಿ, ಬಳಿಕ ಇದನ್ನೆಲ್ಲಾ ಕೊಡಿ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬರ್ಬರವಾಗಿ ಅತ್ಯಾಚಾರ, ಹತ್ಯೆಗೀಡಾದ 31 ವರ್ಷದ ಸ್ನಾತಕೋತ್ತರ ಟ್ರೈನಿ ವೈದ್ಯೆ ಸಾವಿಗೆ ನ್ಯಾಯ ಬೇಕು. ನ್ಯಾಯ ಸಿಕ್ಕರೆ ಮಾತ್ರ ಚಹಾವನ್ನು ಸ್ವೀಕರಿಸಲಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದರು.

    ಕೋಲ್ಕತ್ತಾದಲ್ಲಿ ಮಳೆಯ ನಡುವೆಯೂ ತಮ್ಮ ಮನೆಯ ಹೊರಗೆ ಪ್ರತಿಭಟನೆ ನಡೆಸುತ್ತಿರುವ ವೈದ್ಯರೊಂದಿಗೆ ಮಮತಾ ಬ್ಯಾನರ್ಜಿ ಮಾತನಾಡಿದರು.ಇದನ್ನೂ ಓದಿ: ಮಾನವ ಸರಪಳಿ: ಗಡಿ ಜಿಲ್ಲೆಯಲ್ಲಿ 1 ಕಿಮೀ ಧ್ವಜ, ವಿವಿಧತೆಯಲ್ಲಿ ಏಕತೆಯ ಪ್ರತಿಬಿಂಬ ಅನಾವರಣ

    ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮತ್ತು ಸಾಕ್ಷ್ಯವನ್ನು ತಿರುಚಿದ್ದಕ್ಕಾಗಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಕೇಂದ್ರೀಯ ತನಿಖಾ ದಳ ಬಂಧಿಸಿದೆ.

  • ರೋಟಿ-ಸಬ್ಜಿಯಿಂದ ತೃಪ್ತಿಯಾಗ್ತಿಲ್ಲ, ಮೊಟ್ಟೆ ಊಟ ಕೊಡಿ; ಕೋಲ್ಕತ್ತಾ ವೈದ್ಯೆ ರೇಪ್‌ ಆರೋಪಿ ಡಿಮ್ಯಾಂಡ್‌

    ರೋಟಿ-ಸಬ್ಜಿಯಿಂದ ತೃಪ್ತಿಯಾಗ್ತಿಲ್ಲ, ಮೊಟ್ಟೆ ಊಟ ಕೊಡಿ; ಕೋಲ್ಕತ್ತಾ ವೈದ್ಯೆ ರೇಪ್‌ ಆರೋಪಿ ಡಿಮ್ಯಾಂಡ್‌

    ಕೋಲ್ಕತ್ತಾ: ಸದ್ಯ ಜೈಲು ವಾಸಿಯಾಗಿರುವ ಕೋಲ್ಕತ್ತಾ ಅತ್ಯಾಚಾರ ಪ್ರಕರಣದ (Kolkata Horror) ರೇಪ್‌ ಆರೋಪಿ ಜೈಲಿನಲ್ಲಿ ನೀಡುತ್ತಿರುವ ಊಟದ ಬಗ್ಗೆ ಅಸಮಾಧಾನ ಹೊರಹಾಕಿದ್ದಾನೆ. ಅಲ್ಲದೇ ರೋಟಿ-ಸಬ್ಜಿಯಿಂದ ನನಗೆ ತೃಪ್ತಿಯಾಗ್ತಿಲ್ಲ. ಮೊಟ್ಟೆ ಚೌಮೆನ್‌ (ಮೊಟ್ಟೆ ಮಿಶ್ರಿತ ನೂಡಲ್ಸ್‌) (Egg Chowmein) ತಿನ್ನಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾನೆ.

    ಹೌದು. ಪ್ರೆಸಿಡೆನ್ಸಿ ಜೈಲಿನಲ್ಲಿರುವ ಅತ್ಯಾಚಾರ ಆರೋಪಿ ಸಂಜಯ್‌ ರಾಯ್‌ಗೆ (Sanjay Roy) ಸದ್ಯ ಸಾಮಾನ್ಯ ಕೈದಿಗಳಂತೆ ಜೈಲಿನಲ್ಲಿ ತಯಾರಿಸಿದ ಆಹಾರವನ್ನೇ ನೀಡಲಾಗುತ್ತಿದೆ. ಶನಿವಾರವೂ ಸಹ ಎಂದಿನಂತೆ ರೋಟಿ ಮತ್ತು ಸಬ್ಜಿಯನ್ನು ನೀಡಿದಾಗ ರಾಯ್‌ ಅಸಮಾಧಾನಗೊಂಡಿದ್ದಾನೆ. ಇದರಿಂದ ಜೈಲು ಸಿಬ್ಬಂದಿಯೇ ಆತನಿಗೆ ಬಿಸಿಮುಟ್ಟಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Kolkata Horror | ಕಿರಿಯ ವೈದ್ಯರಿಗೆ ನಾನು ಎಂದಿಗೂ ಬೆದರಿಕೆ ಹಾಕಿಲ್ಲ: ಮಮತಾ ಬ್ಯಾನರ್ಜಿ

    ಆಗಾಗ್ಗೆ ಗೊಣಗುತ್ತಿದ್ದ:
    ಈ ಮೊದಲು ಸಂಜಯ್‌ ರಾಜ್‌ನನ್ನು ಸಿಬಿಐ ಕಸ್ಟಡಿಯಿಂದ ಪ್ರೆಸಿಡೆನ್ಸಿ ಕರೆಕ್ಷನಲ್ ಹೋಮ್‌ಗೆ (ಜೈಲು) ಕರೆ ತಂದಾಗ ಮಲಗಲು ಸ್ವಲ್ಪ ಜಾಗ ಕೊಡುವಂತೆ ಕೇಳಿದ್ದ. ನಂತರ ಆಗಾಗ್ಗೆ ಗೊಣಗುವುದನ್ನು ಶುರು ಮಾಡಿದ್ದ. ಕೆಲ ದಿನಗಳ ನಂತರ ರಾಯ್‌ ಸಹಜ ಸ್ಥಿತಿಗೆ ಮರಳಿದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವೇಶ್ಯೆ ಗೃಹಕ್ಕೆ ಹೋಗಿದ್ದ, ಗರ್ಲ್‌ಫ್ರೆಂಡ್‌ಗೆ ಬೆತ್ತಲೆ ಫೋಟೋ ಕಳಿಸುವಂತೆ ಕೇಳಿದ್ದ – ರೇಪ್‌ ಆರೋಪಿಯ ಕರಾಳ ಮುಖ ಬಯಲು

    ಸದ್ಯ ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ. ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನ ಸಿಬಿಐ ತಂಡ ಮತ್ತೆ ವಿಚಾರಣೆಗೊಳಪಡಿಸಿದೆ. ಬಳಿಕ ಕೋರ್ಟ್‌ಗೆ ಒಪ್ಪಿಸಿ 14 ದಿನ ತನ್ನ ಕಸ್ಟಡಿಗೆ ತೆಗೆದುಕೊಂಡಿದೆ. ಈಗಾಗಲೇ 140 ಗಂಟೆಗಳಿಗೂ ಹೆಚ್ಚು ಕಾಲ ಅವರನ್ನ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್‌ & ಮರ್ಡರ್‌ ಪ್ರಕರಣವನ್ನು ಕಳೆದ ಆಗಸ್ಟ್‌ 13ರಂದು ಹೈಕೋರ್ಟ್ ಕೋಲ್ಕತ್ತಾ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಲು ಆದೇಶಿಸಿತು. ಆಗಸ್ಟ್‌ 14 ರಿಂದ ಸಿಬಿಐ ತನಿಖೆ ಆರಂಭಿಸಿದೆ. ಇದನ್ನೂ ಓದಿ: Kolkata Horror | ಕ್ರಿಮಿನಲ್‌ ಮನಸ್ಥಿತಿ ಬರೋದು ಏಕೆ? ಮನೋವಿಜ್ಞಾನಿಗಳು ಏನ್‌ ಹೇಳ್ತಾರೆ?

  • ಕೋಲ್ಕತ್ತಾದಲ್ಲಿ ರೊಚ್ಚಿಗೆದ್ದ ಪ್ರತಿಭಟನಾಕಾರರು: ಪ್ರತಿಭಟನೆ ಹತ್ತಿಕ್ಕಲು ಪೊಲೀಸರ ಅಶ್ರುವಾಯು, ಲಾಠಿಚಾರ್ಜ್ ಅಸ್ತ್ರ ಪ್ರಯೋಗ

    ಕೋಲ್ಕತ್ತಾದಲ್ಲಿ ರೊಚ್ಚಿಗೆದ್ದ ಪ್ರತಿಭಟನಾಕಾರರು: ಪ್ರತಿಭಟನೆ ಹತ್ತಿಕ್ಕಲು ಪೊಲೀಸರ ಅಶ್ರುವಾಯು, ಲಾಠಿಚಾರ್ಜ್ ಅಸ್ತ್ರ ಪ್ರಯೋಗ

    ಕೋಲ್ಕತ್ತಾ: ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ (RG Kar Medical College) ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ವಿರುದ್ಧ ಪ್ರತಿಭಟನಾಕಾರರಿಂದ ಆಕ್ರೋಶದ ಕಟ್ಟೆಯೊಡೆದಿದೆ. ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಆಕ್ರೋಶ ಹೆಚ್ಚಾಗಿದ್ದು, ನಬನ್ನ ರ‍್ಯಾಲಿಯಲ್ಲಿ (Nabanna Rally) ಪ್ರತಿಭಟನಾಕಾರರು ಘರ್ಷಣೆ ನಡೆಸುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿಚಾರ್ಜ್ ನಡೆಸಿದ್ದಾರೆ.

    ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಆವರಣದಲ್ಲಿ ಮಹಿಳಾ ಟ್ರೈನಿ ವೈದ್ಯೆಯ ಮೇಲೆ ಅಮಾನುಷ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯು ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಅಂದಿನಿಂದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಹಲವಾರು ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ.ಇದನ್ನೂ ಓದಿ: ‘ಈಗ 2’ ಬರುವ ಬಗ್ಗೆ ನಾನಿ ಕೊಟ್ರು ಇಂಟರೆಸ್ಟಿಂಗ್ ಅಪ್‌ಡೇಟ್

    ಈ ಹಿನ್ನೆಲೆಯಲ್ಲಿ ನಬನ್ನ ರ‍್ಯಾಲಿ ನಡೆಯುತ್ತಿದೆ. ಕೋಲ್ಕತ್ತಾದಿಂದ ಹೌರಾಕ್ಕೆ ಎರಡು ಮಾರ್ಗಗಳ ಮೂಲಕ ರ‍್ಯಾಲಿ ನಡೆಯುತ್ತಿದೆ. ಮೊದಲ ಮೆರವಣಿಗೆ ಸಂತ್ರಗಚಿಯಿಂದ ನಬನ್ನಗೆ ಮತ್ತು ಎರಡನೇ ರ‍್ಯಾಲಿ ಕಾಲೇಜು ಆವರಣದಿಂದ ಮುಂದುವರೆದಿದೆ.

    ಸಂತ್ರಗಚಿ ಪ್ರದೇಶದಲ್ಲಿ ಪ್ರಾರಂಭವಾದ ರ‍್ಯಾಲಿ ಕೋಲ್ಕತ್ತಾದ ರಾಜ್ಯ ಸಚಿವಾಲಯದ ಕಡೆಗೆ ಹೊರಟಿತು. ಹಲವಾರು ವಿದ್ಯಾರ್ಥಿಗಳು ಮತ್ತು ನಾಗರಿಕರು ತಮ್ಮ ಕೈಯಲ್ಲಿ ತ್ರಿವರ್ಣ ಧ್ವಜವನ್ನು ಪ್ರದರ್ಶಿಸುವ ಮೂಲಕ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು.

    ಹೌರಾ ಸೇತುವೆಯ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಹತ್ತಿ, ಪೊಲೀಸ್ ಸಿಬ್ಬಂದಿಯೊಂದಿಗೆ ತ್ರೀವ ಘರ್ಷಣೆಗೆ ಇಳಿದಿದ್ದಾರೆ. ಪ್ರತಿಭಟನೆಯ ಕಾವನ್ನು ಕಡಿಮೆಗೊಳಿಸಲು ಭದ್ರತಾ ಸಿಬ್ಬಂದಿ ಜಲಫಿರಂಗಿ ಹಾಗೂ ಲಾಠಿಚಾರ್ಜ್ ಮಾಡಿದ್ದಾರೆ.

    ರ‍್ಯಾಲಿಯಲ್ಲಿ ಸಂತ್ರಗಚಿ ಬಳಿ ಇರಿಸಲಾಗಿದ್ದ ಬ್ಯಾರಿಕೇಡ್‌ಗಳನ್ನು ಪ್ರತಿಭಟನಾಕಾರರು ಮುರಿದು ಎಳೆದುಕೊಂಡು ಹೋಗುತ್ತಿದ್ದಾರೆ. ಜೊತೆಗೆ ಪಶ್ಚಿಮ ಬಂಗಾಳ ರಾಜ್ಯ ಸಚಿವಾಲಯದ ಸುತ್ತಲೂ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ.ಇದನ್ನೂ ಓದಿ: ಕೇರಳ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ವಿವಾದ; ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್‌ ಲಾಲ್‌ ರಾಜೀನಾಮೆ

    “ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ತಡೆಯಲು ನಿಮ್ಮ ಅಧಿಕಾರವನ್ನು ಬಳಸಬೇಡಿ ಎಂದು ರಾಜ್ಯಪಾಲ ಸಿವಿ ಆನಂದ ಬೋಸ್ (C. V. Ananda Bose) ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪಶ್ಚಿಮ ಬಂಗಾಳದ ಅಧಿಕಾರವನ್ನು ಹೇರಬೇಡಿ ಎಂದು ವೀಡಿಯೋ ಸಂದೇಶ ಕಳುಹಿಸುವ ಮೂಲಕ ತಿಳಿಸಿದ್ದಾರೆ.

  • ವೇಶ್ಯೆ ಗೃಹಕ್ಕೆ ಹೋಗಿದ್ದ, ಗರ್ಲ್‌ಫ್ರೆಂಡ್‌ಗೆ ಬೆತ್ತಲೆ ಫೋಟೋ ಕಳಿಸುವಂತೆ ಕೇಳಿದ್ದ – ರೇಪ್‌ ಆರೋಪಿಯ ಕರಾಳ ಮುಖ ಬಯಲು

    ವೇಶ್ಯೆ ಗೃಹಕ್ಕೆ ಹೋಗಿದ್ದ, ಗರ್ಲ್‌ಫ್ರೆಂಡ್‌ಗೆ ಬೆತ್ತಲೆ ಫೋಟೋ ಕಳಿಸುವಂತೆ ಕೇಳಿದ್ದ – ರೇಪ್‌ ಆರೋಪಿಯ ಕರಾಳ ಮುಖ ಬಯಲು

    – ಮೃತ ವೈದ್ಯೆ ದೇಹದಲ್ಲಿ 25ಕ್ಕೂ ಹೆಚ್ಚು ಗಾಯಗಳು ಪತ್ತೆ
    – ಕೊಲೆ ಮಾಡುವ ಮುನ್ನ ಕ್ರೂರವಾಗಿ ಹಿಂಸೆ

    ಬೆಂಗಳೂರು: ಕೋಲ್ಕತ್ತಾ ಅತ್ಯಾಚಾರ ಪ್ರಕರಣಕ್ಕೆ (Kolkata Horror) ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್‌ಗೆ ಮಾಡಿದ ಪಾಲಿಗ್ರಾಫ್ ಪರೀಕ್ಷೆಯ ವರದಿ ಹೊರಬಿದ್ದಿದೆ. ಕೃತ್ಯ ನಡೆದ ದಿನ ತಾನು ರೆಡ್‌ಲೈಟ್ ಏರಿಯಾಗೆ ಹೋಗಿದ್ದೆ. ಆಸ್ಪತ್ರೆಗೆ ಬರುವ ಹೊತ್ತಿಗೆ ಯುವ ವೈದ್ಯೆ ಸಾವನ್ನಪ್ಪಿದ್ರು ಎಂದು ಸಂಜಯ್ ರಾಯ್ (Sanjay Roy) ಹೇಳಿದ್ದಾನೆ ಎಂದು ವರದಿಯಾಗಿದೆ. ಇದರೊಂದಿಗೆ ಆರೋಪಿ ವಿಕೃತ ಮನಸ್ಥಿತಿಗೆ ಕನ್ನಡಿ ಹಿಡಿದಂತೆ ಇನ್ನಷ್ಟು ವಿಚಾರಗಳು ಬಯಲಾಗಿದೆ.

    ಸುಳ್ಳು ಪತ್ತೆ ಪರೀಕ್ಷೆ ವೇಳೆ ಸಂಜಯ್‌ ರಾಯ್‌ ಸಿಬಿಐ (CBI) ಅಧಿಕಾರಿಗಳ ಮುಂದೆ ವೈದ್ಯೆಯ ಕೊಲೆಯ ಮುನ್ನ ನಗರದ ಎರಡು ವೇಶ್ಯಾಗೃಹಗಳಿಗೆ (Red light area) ಭೇಟಿ ನೀಡಿರುವುದಾಗಿ ತಿಳಿಸಿದ್ದಾನೆ. ಆದರೆ ಈ ವೇಳೆ ಲೈಂಗಿಕ ಕ್ರಿಯೆ ನಡೆಸಿಲ್ಲ ಎಂದು ಹೇಳಿದ್ದಾನೆ. ಇದೇ ವೇಳೆ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಕಿರುಕುಳ ನೀಡಿರುವುದನ್ನೂ ಒಪ್ಪಿಕೊಂಡಿದ್ದಾನೆ. ಜೊತೆಗೆ ತನ್ನ ಗೆಳತಿಗೆ ಕರೆ ಮಾಡಿ ಆಕೆಯ ಗ್ನ ಫೋಟೊ ಕಳಿಸುವಂತೆ ಕೇಳಿದ್ದ ಎಂದು ಒಪ್ಪಿಕೊಂಡಿರುವುದಾಗಿ ವರದಿಗಳಲ್ಲಿ ಉಲ್ಲೇಖವಾಗಿದೆ.

    ಕರಾಳ ಮುಖ ಬಯಲು:
    ಅತ್ಯಾಚಾರ ಘಟನೆ ನಡೆದ ರಾತ್ರಿ ಸಂಜಯ್ ರಾಯ್ ತನ್ನ ಸ್ನೇಹಿತನೊಂದಿಗೆ ಮದ್ಯಪಾನ ಮಾಡಿದ್ದ. ನಂತರ ವೇಶ್ಯಾಗೃಹಕ್ಕೆ ತೆರಳಿದ್ದ. ಅಲ್ಲಿಂದ ಹೊರಬಂದ ಆತ ದಕ್ಷಿಣ ಕೋಲ್ಕತ್ತಾದ ಮತ್ತೊಂದು ರೆಡ್‌ಲೈಟ್‌ ಏರಿಯಾ ಚೆಟ್ಲಾಕ್ಕೆ ಭೇಟಿ ನೀಡಿದ್ದ. ಚೆಟ್ಲಾಕ್ಕೆ ತೆರಳುವ ಮಾರ್ಗಮಧ್ಯೆ ಆತ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಿದ್ದ. ಬಳಿಕ ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಬಂದಿದ್ದ. ಮುಂಜಾನೆ 4 ಗಂಟೆ ಸುಮಾರಿಗೆ ಆತ ವೈದ್ಯೆ ಮೃತಪಟ್ಟ ಸೆಮಿನಾರ್‌ ಹಾಲ್‌ಗೆ ಪ್ರವೇಶಿಸುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇದನ್ನೂ ಓದಿ: ಉಕ್ರೇನ್‌ ಮೇಲೆ ಮತ್ತೆ ರಷ್ಯಾ ವಾರ್‌ – 100 ಕ್ಷಿಪಣಿ, 100 ಅಟ್ಯಾಕಿಂಗ್‌ ಡ್ರೋನ್‌ಗಳಿಂದ ದಾಳಿ

    ಟ್ರೈನಿ ವೈದ್ಯೆಯ ಹತ್ಯೆಯ ಬಳಿಕ ಆತ ತನ್ನ ಸ್ನೇಹಿತ ಅನುಪಮ್‌ ದತ್ತ ಎಂಬಾತನ ಮನೆಗೆ ತೆರಳಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅದಾಗ್ಯೂ ಸುಳ್ಳು ಪತ್ತೆ ಪರೀಕ್ಷೆ ವೇಳೆ ಸಂಜಯ್‌ ರಾಯ್‌ ಅಧಿಕಾರಿಗಳ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾನೆ ಎಂದು ವರದಿಯೊಂದು ತಿಳಿಸಿದೆ.

    ಇದೇ ವೇಳೆ ಸಿಬಿಐ ಅಧಿಕಾರಿಗಳು ಆತನ ಹಿನ್ನೆಲೆ ಪರೀಶೀಲಿಸಿದ್ದು ಈ ವೇಳೆ ಆತ ಅಶ್ಲೀಲ ಚಿತ್ರಗಳ ವೀಕ್ಷಿಸುವ ಚಟ ಹೊಂದಿದ್ದ ಎನ್ನುವುದನ್ನು ಕಂಡುಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಆತನ ಮೊಬೈಲ್‌ ಫೋನ್‌ನಲ್ಲಿ ಹಲವು ಅಶ್ಲೀಲ ಚಿತ್ರಗಳ ತುಣಕುಗಳು ಸಿಕ್ಕಿವೆ. ಮೃತ ತರಬೇತಿ ವೈದ್ಯೆಯ ದೇಹದಲ್ಲಿ 25ಕ್ಕೂ ಹೆಚ್ಚು ಗಾಯಗಳು ಪತ್ತೆಯಾಗಿದ್ದು, ಕೊಲೆ ಮಾಡುವ ಮುನ್ನ ಕ್ರೂರವಾಗಿ ಹಿಂಸಸಲಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಜೊತೆ ಜೈಲಲ್ಲಿ ಪೋಸ್ ಕೊಟ್ಟ ರೌಡಿಶೀಟರ್ ನಾಗ ಧರಿಸಿದ್ದ ಟಿ-ಶರ್ಟ್ ಬೆಲೆ ಕೇಳಿದ್ರೆ ಬೆಚ್ಚಿಬೀಳ್ತೀರಾ!

    ಆಗಸ್ಟ್‌ 9ರಂದು ಮುಂಜಾನೆ 4 ಗಂಟೆ ಸುಮಾರಿಗೆ ಟ್ರೈನಿ ವೈದ್ಯೆಯ ಮೃತದೇಹ ಪತ್ತೆಯಾಗಿತ್ತು. ಅಂದು ಕರ್ತವ್ಯದಲ್ಲಿದ್ದ ವೈದ್ಯರು ಮತ್ತು ಇಂಟರ್ನ್‌ಗಳೊಂದಿಗೆ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಉತ್ತರಗಳನ್ನು ಸಿಬಿಐ ಪರಿಶೀಲಿಸುತ್ತಿದೆ. ಸಂದೀಪ್ ಘೋಷ್ ಅವರನ್ನೂ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: J&K Election | ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಒಪ್ಪಂದ ಸುಖಾಂತ್ಯ – ಎನ್‌ಸಿ 51, ಕಾಂಗ್ರೆಸ್‌ 32 ಸ್ಥಾನಗಳಲ್ಲಿ ಸ್ಪರ್ಧೆ

  • ಪ್ರತಿಭಟನೆ ನಿಲ್ಲಿಸಲು ಮಮತಾ ಬ್ಯಾನರ್ಜಿ ಪ್ರಯತ್ನ – ಸಂತ್ರಸ್ತೆ ತಂದೆ ಆರೋಪ

    ಪ್ರತಿಭಟನೆ ನಿಲ್ಲಿಸಲು ಮಮತಾ ಬ್ಯಾನರ್ಜಿ ಪ್ರಯತ್ನ – ಸಂತ್ರಸ್ತೆ ತಂದೆ ಆರೋಪ

    ಕೋಲ್ಕತ್ತಾ: ಕೋಲ್ಕತ್ತಾದ (Kolkatta) ಆರ್‌ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ (RG Kar Medical College) ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಸಂತ್ರಸ್ತೆ ತಂದೆ ಮಾತನಾಡಿ, ಈ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ (Mamata Banerjee) ಹಾಗೂ ಕೋಲ್ಕತ್ತಾ ಪೊಲೀಸರ ಪಾತ್ರದ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ತಮ್ಮ ಮಗಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ದೇಶವ್ಯಾಪಿಯಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಆದ್ರೆ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಿಲ್ಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜೊತೆಗೆ ಸಾಧ್ಯವಾದಷ್ಟು ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.ಇದನ್ನೂ ಓದಿ : ಯುಎಸ್ ಕಾರು ಅಪಘಾತ; ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಾವು

    ಸಿಎಂ ಮಾಡುತ್ತಿರುವುದರ ಕುರಿತು ತೃಪ್ತಿಯಿಲ್ಲ ಹಾಗೂ ನಮಗೆ ಇದು ಅಸಂತೋಷವನ್ನುಂಟು ಮಾಡಿದೆ. ಆದ ಕಾರಣ ನಾವು ಯಾವುದೇ ಪರಿಹಾರ ಸ್ವೀಕರಿಸುವುದನ್ನು ನಿರಾಕರಿಸಿದ್ದೇವೆ ಎಂದು ಸಂತ್ರಸ್ತೆಯ ತಂದೆ ಮಾಧ್ಯಮದ ಬಳಿ ಹೇಳಿಕೊಂಡಿದ್ದಾರೆ.

    ಪ್ರಕರಣದ ತನಿಖೆ ನಡೆಯುತ್ತಿದೆ. ಆದಷ್ಟು ಬೇಗ ಪ್ರಕರಣದ ಹಿಂದಿರುವ ಆರೋಪಿಗಳನ್ನು ಬಂಧಿಸುತ್ತಾರೆ ಎಂದು ನಾವು ನಂಬಿದ್ದೆವು. ಆದ್ರೆ ಈವರೆಗೆ ಏನೂ ನಡೆದಿಲ್ಲ. ಈ ಅಪರಾಧದಲ್ಲಿ ಆಸ್ಪತ್ರೆಯ ಎದೆ ಔಷಧ ವಿಭಾಗವು ಇದರಲ್ಲಿ ಭಾಗಿಯಾಗಿರುವ ಅನುಮಾನವಿದೆ. ಈ ಪ್ರಕರಣದಲ್ಲಿ ಇಲಾಖೆಯಾಗಲಿ, ಕಾಲೇಜಾಗಲಿ ನಮಗೆ ಸಹಕರಿಸಿಲ್ಲ. ಒಬ್ಬ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ ಇದರಲ್ಲಿ ಇನ್ನೂ ಕೆಲವರ ಪಾತ್ರವಿದೆ. ಈ ಪ್ರಕರಣಕ್ಕೆ ಸಂಪೂರ್ಣ ತನಿಖೆಯ ಜವಾಬ್ದಾರಿಯನ್ನು ಇಲಾಖೆಯೆ ನಿರ್ವಹಿಸಬೇಕು ಎಂದು ಸಂತ್ರಸ್ತೆಯ ಪೋಷಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ : ಸಾರಿಗೆ ಬಸ್‍ನಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‍ರೇಪ್ – ಐವರು ಕಾಮುಕರು ಅರೆಸ್ಟ್

    ಸದ್ಯ ಟ್ರೈನಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಬಿಐನ (CBI) ತನಿಖಾಧಿಕಾರಿಗಳು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಿಬ್ಬಂದಿಗಳನ್ನ ವಿಚಾರಣೆ ನಡೆಸುತ್ತಿದ್ದಾರೆ.

  • ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ; ಟ್ರೈನಿ ವೈದ್ಯೆ ಕೇಸ್‌ ಬಗ್ಗೆ ಪೂನಂ ಪಾಂಡೆ ಪ್ರತಿಕ್ರಿಯೆ

    ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ; ಟ್ರೈನಿ ವೈದ್ಯೆ ಕೇಸ್‌ ಬಗ್ಗೆ ಪೂನಂ ಪಾಂಡೆ ಪ್ರತಿಕ್ರಿಯೆ

    – ನಾವು ಹೇಗೆ ಬಟ್ಟೆ ಹಾಕ್ತೀವಿ? ನಡೆಯುತ್ತೇವೆ? ಮಾತಾಡ್ತೇವೆ? ಎಲ್ಲವನ್ನೂ ಕೇಳೋದೇಕೆ?

    ಮುಂಬೈ: ದಯವಿಟ್ಟು ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ ಎಂದು ಮಾದಕ ನಟಿ ಪೂನಂ ಪಾಂಡೆ (Poonam Pandey) ಭಾವುಕ ಸಂದೇಶವೊಂದನ್ನ ಹಂಚಿಕೊಂಡಿದ್ದಾರೆ.

    ಕೋಲ್ಕತ್ತಾದಲ್ಲಿ ಇತ್ತೀಚೆಗೆ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ (Kolkata Rape Murder Case) ಕುರಿತು ತಮ್ಮ ಸೋಷಿಯಲ್‌ ಮೀಡಿಯಾ ಇನ್‌ಸ್ಟಾಗ್ರಾಮ್‌ (Instagram) ಖಾತೆಯಲ್ಲಿ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಯ ಹೊಡೆತಕ್ಕೆ ಕನ್ನಡಕ ಒಡೆದು ಬಿದ್ದ ಗಾಜಿನಿಂದ ಕಣ್ಣಲ್ಲಿ ರಕ್ತ!

     

    View this post on Instagram

     

    A post shared by Poonam Pandey (@poonampandeyreal)

    ಪೂನಂ ಪಾಂಡೆ ಇನ್‌ಸ್ಟಾದಲ್ಲಿ ಏನಿದೆ?
    ನಾಚಿಕೆಯಾಗಬೇಕು ನಮಗೆ?…
    ಅತ್ಯಾಚಾರಿಗಳು ಮುಕ್ತವಾಗಿ ನಡೆಯುವ, ಹಿಂಬಾಲಕರು ಕತ್ತಲಲ್ಲಿ ಅಡಗಿರುವ ಹಾಗೂ ಮಹಿಳೆಯರು ನಿರಂತರವಾಗಿ ಅಸುರಕ್ಷಿತರಾಗಿರುವ ಈ ಜಗತ್ತಿನಲ್ಲಿ ನಾವು ಏಕೆ ವಾಸಿಸುತ್ತಿದ್ದೇವೆ? ನಾವು ಇದನ್ನ ಪ್ರತಿದಿನ ಸಹಿಸಿಕೊಳ್ಳಲು ಏಕೆ ಒತ್ತಾಯಿಸಲ್ಪಡುತ್ತೇವೆ? ಅಸುರಕ್ಷತೆ ನಮಗೆ ಸಂಭವಿಸುತ್ತಿದೆ ಅದಕ್ಕೆ ನಾವು ದೂಷಿಸುತ್ತೇವೆ? ಇದನ್ನೂ ಓದಿ: ದೇಶ ಮೊದಲು.. ಭಾರತವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ: ಪ್ರಧಾನಿ ಮೋದಿ ಪ್ರತಿಜ್ಞೆ

    ನಾವು ಹೇಗೆ ಬಟ್ಟೆ ಧರಿಸುತ್ತೇವೆ? ಹೇಗೆ ನಡೆಯುತ್ತೇವೆ? ಹೇಗೆ ಮಾತನಾಡುತ್ತೇವೆ ಎಂಬುದನ್ನು ಕೇಳುತ್ತಾರೆ? ಏನು ಮಾಡಬೇಕು ಎಂಬುದನ್ನು ಹೇಳುತ್ತಾರೆ? ಆದ್ರೆ ನಾವು ಭಯವಿಲ್ಲದೇ ಬದುಕುವುದಕ್ಕೆ ಏಕೆ ಸಾಧ್ಯವಿಲ್ಲ? ಕಿರುಕುಳ ಅನುಭವಿಸದೇ ಏಕೆ ಅಸ್ತಿತ್ವದಲ್ಲಿರಲು ಧ್ಯವಿಲ್ಲ? ನಾವು ಸುರಕ್ಷತೆ, ಘನತೆ ಮತ್ತು ಗೌರವ ಬಯಸಿದಾಗ ನಮ್ಮ ಧ್ವನಿಯನ್ನು ಏಕೆ ಮೌನಗೊಳಿಸುತ್ತಾರೆ? ಇದನ್ನೂ ಓದಿ: Independence Day: ಕೆಂಪುಕೋಟೆಯಲ್ಲಿ ಸ್ವಾತಂತ್ರೋತ್ಸವದ ಸಂಭ್ರಮ – ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

    ನಾವು ಬೇಡುವುದು ಒಂದೇ.. ದಯವಿಟ್ಟು ಇನ್ನಾದರೂ ನಮ್ಮ ಮೇಲೆ ಅತ್ಯಾಚಾರ ಮಾಡುವುದನ್ನು ನಿಲ್ಲಿಸಬಹುದೇ? ನಮ್ಮನ್ನು ಹಿಂಬಾಲಿಸುವುದನ್ನ ನಿಲ್ಲಿಸಬಹುದೇ? ದಯವಿಟ್ಟು ನಮಗೆ ಕಿರುಕುಳ ನೀಡೋದನ್ನ ನಿಲ್ಲಿಸಬಹುದೇ? ನಾವು ಭಯದಿಂದ ಬದುಕಲು ಬೇಸತ್ತಿದ್ದೇವೆ, ನಮ್ಮ ವಿರುದ್ಧ ಹಿಂಸಾಚಾರ ನಡೆದರೂ ಅಂತ್ಯವಿಲ್ಲದ ಸಮರ್ಥನೆಗಳಿಂದ ಬೇಸತ್ತಿದ್ದೇವೆ. ಇದೆಲ್ಲವೂ ನಿಲ್ಲಬೇಕಾದ ಅಗತ್ಯವಿದೆ. ಏಕೆಂದರೆ ನಾವು ಸಹ ಎಲ್ಲರಂತೆ ಯಾವುದೇ ಬೆದರಿಕೆಯಿಲ್ಲದೇ ಸರಳವಾಗಿ ಬದುಕಲು ಅರ್ಹರಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.

    ಕೋಲ್ಕತ್ತಾ ಪ್ರಕರಣ ಏನು?
    ಕಳೆದ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿಂದೆ ಪೊಲೀಸ್ ಸ್ವಯಂಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ.

  • ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಯ ಹೊಡೆತಕ್ಕೆ ಕನ್ನಡಕ ಒಡೆದು ಬಿದ್ದ ಗಾಜಿನಿಂದ ಕಣ್ಣಲ್ಲಿ ರಕ್ತ!

    ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಯ ಹೊಡೆತಕ್ಕೆ ಕನ್ನಡಕ ಒಡೆದು ಬಿದ್ದ ಗಾಜಿನಿಂದ ಕಣ್ಣಲ್ಲಿ ರಕ್ತ!

    ಕೋಲ್ಕತ್ತಾ: ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ (Kolkata doctor rape and murder Case) ಮರಣೋತ್ತರ ಪರೀಕ್ಷೆಯ ವರದಿ ಬಂದಿದೆ. ಇದರಲ್ಲಿ ಆರೋಪಿಯ ಅಮಾನುಷ ಕೃತ್ಯಗಳು ಬಹಿರಂಗವಾಗಿದೆ. ಆರೋಪಿ ಸಂಜಯ್ ರಾಯ್ ವೈದ್ಯೆ ಮೇಲೆ ಅಮಾನುಷವಾಗಿ ಥಳಿಸಿದ್ದಾನೆ. ಅವನ ಹೊಡೆತಕ್ಕೆ ಟ್ರೈನಿ ವೈದ್ಯೆಯ ಕನ್ನಡಕ ಒಡೆದು ಕಣ್ಣಿಗೆ ಗಾಜು ಬಿದ್ದಿದೆ. ಇದರಿಂದಾಗಿ ಕಣ್ಣಿನಲ್ಲಿ ರಕ್ತ ಬಂದಿದೆ ವರದಿಯಲ್ಲಿದೆ.

    ಎಲ್ಲಿ ನೋಡಿದರೂ ರಕ್ತ..!
    ವೈದ್ಯೆಯ (Doctor) ಕಣ್ಣು ಮತ್ತು ಬಾಯಿ ಎರಡರಲ್ಲೂ ರಕ್ತ ಸುರಿಯುತ್ತಿತ್ತು. ವೈದ್ಯೆಯ ಮುಖವು ಗಾಯಗಳಿಂದ ತುಂಬಿದೆ. ಸಂತ್ರಸ್ತೆಯ ಖಾಸಗಿ ಅಂಗಗಳಲ್ಲಿಯೂ ತೀವ್ರ ರಕ್ತಸ್ರಾವವಾಗಿತ್ತು. ಹೊಟ್ಟೆ, ಎಡಗಾಲು, ಕುತ್ತಿಗೆ, ಬಲಗೈ, ಉಂಗುರ ಬೆರಳು ಮತ್ತು ತುಟಿಯ ಮೇಲೆ ಗಾಯಗಳಾಗಿವೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ದೇಶದ್ಯಾಂತ ಪ್ರತಿಭಟನೆ

    ಪ್ರಕರಣ ಏನು?
    ಕಳೆದ ಶುಕ್ರವಾರ ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು  ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿಂದೆ ಪೊಲೀಸ್ ಸ್ವಯಂಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.  ಇದನ್ನೂ ಓದಿ: ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ಅವಮಾನ ಸಹಿಸಲಾರದೇ ಪ್ರಾಂಶುಪಾಲ ರಾಜೀನಾಮೆ

  • ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ಅವಮಾನ ಸಹಿಸಲಾರದೇ ಪ್ರಾಂಶುಪಾಲ ರಾಜೀನಾಮೆ

    ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ಅವಮಾನ ಸಹಿಸಲಾರದೇ ಪ್ರಾಂಶುಪಾಲ ರಾಜೀನಾಮೆ

    ಕೋಲ್ಕತ್ತಾ: ತರಬೇತಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ವ್ಯಾಪಕ ಪ್ರತಿಭಟನೆ ನಡೆಸುತ್ತಿರುವ ಹೊತ್ತಿನಲ್ಲೇ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಪ್ರಾಂಶುಪಾಲ (RG Kar Medical College Principal) ಡಾ.ಸಂದೀಪ್ ಘೋಷ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

    ಅತ್ಯಾಚಾರ ಪ್ರಕರಣದ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ (Social Media) ನನ್ನ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ಈ ಅವಮಾನ ನನ್ನಿಂದ ಸಹಿಸಲಾಗುತ್ತಿಲ್ಲ ಎಂದು ಹೇಳಿ ಘೋಷ್‌ (Dr. Sandip Ghosh) ರಾಜೀನಾಮೆ ಘೋಷಿಸಿದ್ದಾರೆ. ಇದನ್ನೂ ಓದಿ: ಶ್ರಾವಣ ಸೋಮವಾರ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ – 7 ಭಕ್ತರು ಸಾವು

    ನನ್ನಿಂದ ರಾಜೀನಾಮೆ ಪಡೆಯಲು ವಿದ್ಯಾರ್ಥಿಗಳನ್ನ (Medical Student) ಎತ್ತಿಕಟ್ಟಿದ್ದಾರೆ. ಸುಮ್ಮನೆ ನನ್ನ ಮಾನಹಾನಿ ಮಾಡಲಾಗುತ್ತಿದೆ. ನಾನು ಸಂತ್ರಸ್ತರನ್ನ ನೋಯಿಸುವ ಯಾವುದೇ ಟೀಕೆ ಮಾಡಿಲ್ಲ. ಅತ್ಯಾಚಾರ ಮತ್ತು ಕೊಲೆ ಆರೋಪಿಗೆ ಶಿಕ್ಷೆ ಆಗಬೇಕೆಂದು ಈಗಲೂ ಬಯಸುತ್ತೇನೆ. ಮೃತ ಬಾಲಕಿ ನನ್ನ ಮಗಳಿದ್ದಂತೆ, ನನಗೂ ತಂದೆ-ತಾಯಿ ಇದ್ದಾರೆ. ಆದ್ರೆ ಸೋಷಿಯಲ್‌ ಮೀಡಿಯಾದಲ್ಲಿ ನನ್ನ ವಿರುದ್ಧ ನೀಡುತ್ತಿರುವ ಕೀಳು ಮಟ್ಟದ ಹೇಳಿಕೆಗಳಿಂದ ತುಂಬಾ ನೋವಾಗುತ್ತಿದೆ. ಆದ್ದರಿಂದ ನನ್ನ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಪತ್ರದಲ್ಲಿ ಬರೆದಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಪ್ರೀತಿಸಿ ಎಲ್ಲಾ ಮುಗಿದ್ಮೇಲೆ ಕೈಕೊಟ್ಟ ಪ್ರಿಯಕರ – ಮದುವೆ ದಿನವೇ ಆಸಿಡ್‌ ದಾಳಿಗೆ ಮುಂದಾದ ವಿಧವೆ ಪ್ರೇಯಸಿ!

    ಕೃತ್ಯದ ನಂತರ ಸಂದೀಪ್‌ ರಾಜೀನಾಮೆ ನೀಡಲ್ಲ ಅಂತ ಎಲ್ಲರೂ ಹೇಳ್ತಿದ್ದರು. ಆದ್ರೆ ನಾನು ಪ್ರಾಮಾಣಿಕನಾಗಿ ರಾಜೀನಾಮೆ ನೀಡಿದ್ದೇನೆ. ನಾನು ಅಧಿಕಾರ ವಹಿಸಿಕೊಂಡ ಬಳಿಕ ವೈದ್ಯಕೀಯ ಕಾಲೇಜಿನಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದೆ. ಆಸ್ಪತ್ರೆಯ ಅಭಿವೃದ್ಧಿ ಮತ್ತು ರೋಗಿಗಳ ಹಿತದೃಷ್ಟಿಯಿಂದ ಕೆಲಸ ಮಾಡಿಕೊಂಡು ಬಂದಿದ್ದೇನೆ. ಆದ್ರೆ ಈ ಘಟನೆಯನ್ನು ಕೆಲವರು ಲಾಭಕ್ಕಾಗಿ ಬಳಸಿಕೊಂಡಿದ್ದು, ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಏನಿದು ಪ್ರಕರಣ?
    ಕಳೆದ ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳಾ ಸ್ನಾತಕೋತ್ತರ ತರಬೇತಿ (ಪಿಜಿಟಿ) ವೈದ್ಯೆಯ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ ಮರಣೋತ್ತರ ಪರೀಕ್ಷೆ ನಡೆಸಿದಾಗ ತರಬೇತಿ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಂತರ ಕೊಲೆ ಮಾಡಿರುವುದು ವರದಿಯಲ್ಲಿ ಬಹಿರಂಗವಾಯಿತು. ಇದನ್ನೂ ಓದಿ: ಸರ್ಕಾರಿ ಕೆಲಸ ತಿರಸ್ಕರಿಸಿದ ಒಲಿಂಪಿಕ್ಸ್‌ ಶೂಟಿಂಗ್‌ನಲ್ಲಿ ಕಂಚು ಗೆದ್ದ ಸರಬ್ಜೋತ್‌ ಸಿಂಗ್‌

    ಆರೋಪಿಗೆ 14 ದಿನ ಪೊಲೀಸ್ ಕಸ್ಟಡಿ:
    ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಬಂಧಿತ ಆರೋಪಿಯನ್ನು 14 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ) ಮತ್ತು 103ರ (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ವಿಚಾರಣೆ ವೇಳೆ ಕಾಮುಕನ ಮೊಬೈಲ್‌ನಲ್ಲಿ ಸೆಕ್ಸ್‌ ವೀಡಿಯೋಗಳು ಪತ್ತೆ!