Tag: Rhea chakrabort

  • ರಿಯಾ, ಶೌವಿಕ್ ನ್ಯಾಯಾಂಗ ಬಂಧನ ಅಕ್ಟೋಬರ್ 20ರವರೆಗೆ ವಿಸ್ತರಣೆ

    ರಿಯಾ, ಶೌವಿಕ್ ನ್ಯಾಯಾಂಗ ಬಂಧನ ಅಕ್ಟೋಬರ್ 20ರವರೆಗೆ ವಿಸ್ತರಣೆ

    ಮುಂಬೈ: ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಸೋದರ ಶೌವಿಕ್ ಚಕ್ರವರ್ತಿ ಇಬ್ಬರ ನ್ಯಾಯಾಂಗ ಬಂಧನವನ್ನ ಅಕ್ಟೋಬರ್ 20ರವರೆಗೆ ವಿಸ್ತರಿಸಿ ಮುಂವೈ ವಿಶೇಷ ನ್ಯಾಯಾಲಯ ಆದೇಶಿಸಿದೆ.

    ಇಂದು ಇಬ್ಬರ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಪ್ರಕರಣದ ವಿಚಾರಣೆ ನ್ಯಾಯಾಲಯದ ಮುಂದೆ ಬಂದಿತ್ತು. ಮತ್ತೆ ಇಬ್ಬರನ್ನು ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣದಲ್ಲಿ ಎನ್‍ಸಿಬಿ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ)ಯಿಂದ ಬಂಧನಕ್ಕೊಳಗಾಗಿರುವ ರಿಯಾ ಮತ್ತು ಶೌವಿಕ್ ಜೈಲಿನಲ್ಲಿದ್ದಾರೆ. ರಿಯಾ ಹಲವು ಬಾರಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ರೂ ಬೇಲ್ ಸಿಕ್ಕಿಲ್ಲ.

    ಸೆಪ್ಟೆಂಬರ್ 8ರಂದು ವಿಚಾರಣೆಗೆ ಹಾಜರಾಗಿದ್ದ ನಟಿ ರಿಯಾ ಚಕ್ರವರ್ತಿಯನ್ನು ಎನ್‍ಸಿಬಿ ಬಂಧಿಸಿತ್ತು. ಡ್ರಗ್ಸ್ ಪ್ರಕರಣದಲ್ಲಿ ಎನ್‍ಸಿಬಿ ಇದುವವರೆಗೂ 20 ಆರೋಪಿಗಳನ್ನ ಬಂಧಿಸಿದೆ. ರಿಯಾ ಮತ್ತು ಶೌವಿಕ್ ಇಬ್ಬರು ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕದಲ್ಲಿರೋ ವಿಷಯ ಸಿಬಿಐ ತನಿಖೆ ವೇಳೆ ತಿಳಿದು ಬಂದಿತ್ತು. ಸಿಬಿಐ ಶಿಫಾರಸ್ಸಿನ ಮೇರೆಗೆ ಎನ್‍ಸಿಬಿ ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿತ್ತು. ದನ್ನೂ ಓದಿ: ಸುಶಾಂತ್ ರೀತಿಯಲ್ಲಿ ಮತ್ತೋರ್ವ ನಟನ ಅನುಮಾನಾಸ್ಪದ ಸಾವು

    ಡ್ರಗ್ಸ್ ಪೆಡ್ಲರ್ ಜೊತೆ ರಿಯಾ ನಡೆಸಿದ್ದ ವಾಟ್ಸಪ್ ಸಂಭಾಷಣೆಯನ್ನ ಖಾಸಗಿ ಮಾಧ್ಯಮ ವರದಿ ಮಾಡಿತ್ತು. ಅಕ್ಕ ರಿಯಾ ಸೂಚನೆಯ ಮೇರೆಗೆ ಡ್ರಗ್ಸ್ ಖರೀದಿಸುತ್ತಿದ್ದೆ ಎಂದು ಶೌವಿಕ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿಯರಾದ ರಕುಲ್ ಪ್ರೀತ್ ಸಿಂಗ್, ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಎನ್‍ಸಿಬಿಯ ವಿಚಾರಣೆ ಎದುರಿಸಿದ್ದಾರೆ.  ಇದನ್ನೂ ಓದಿ: ನಟಿಗೆ ಸುಶಾಂತ್ ಕಿಸ್- ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್

    ಸುಶಾಂತ್ ಪ್ರಕರಣದಲ್ಲಿ ಕೇಳಿ ಬಂದಿರುವ ಕೊಲೆ ಆರೋಪಗಳನ್ನು ಏಮ್ಸ್ ವೈದ್ಯ ಸುಧೀರ್ ಗುಪ್ತಾ ಸಂಪೂರ್ಣವಾಗಿ ತಳ್ಳಿ ಹಾಕಿದ್ದಾರೆ. ಸುಶಾಂತ್ ದೇಹದಲ್ಲಿ ಯಾವುದೇ ವಿಷ ಪದಾರ್ಥ ಅಥವಾ ಕೆಮಿಕಲ್ ಇರಲಿಲ್ಲ. ಹಾಗಾಗಿ ಇದು ಕೊಲೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾವು ಬನಮ್ಮ ವರದಿಯನ್ನು ಸೆಪ್ಟೆಂಬರ್ 28ರಂದು ಸಿಬಿಐಗೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸುಶಾಂತ್ ಸಿಂಗ್ ಕುರಿತು ಸಲ್ಮಾನ್ ಟ್ವೀಟ್- ನೆಟ್ಟಿಗರಿಂದ ಆಕ್ರೋಶ

    ಮೊದಲಿಗೆ ಸುಶಾಂತ್ ಸಿಂಗ್ ಮೃತದೇಹದ ಮರಣೋತ್ತರ ಶವ ಪರೀಕ್ಷೆ ನಡೆಸಿ ಮುಂಬೈನ ಕೂಪರ್ ಆಸ್ಪತ್ರೆ ವೈದ್ಯರು ನೀಡಿದ ವರದಿಯ ಮೇಲೆ ಅನುಮಾನಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆ ಸಿಬಿಐ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ವೈದ್ಯಕೀಯ ವರದಿ ನೀಡುವಂತೆ ಡಾ.ಸುಧೀರ್ ಗುಪ್ತಾ ನೇತೃತ್ವದ ಐವರು ಏಮ್ಸ್ ವೈದ್ಯರ ತಂಡಕ್ಕೆ ನೀಡಲಾಗಿತ್ತು. ಏಮ್ಸ್ ವೈದ್ಯರ ತಂಡಕ್ಕೆ ಸೆಪ್ಟೆಂಬರ್ 20ಕ್ಕೆ ವರದಿ ಸೂಚಿಸುವಂತೆ ಸಿಬಿಐ ಸೂಚಿಸಿತ್ತು. ಆದ್ರೆ ವೈದ್ಯರು ಸೆಪ್ಟೆಂಬರ್ 28ರಂದು ವರದಿ ನೀಡಿದ್ದರು.

  • ಸುಶಾಂತ್ ಕೇಸ್- ಅದು ಕೊಲೆಯಲ್ಲ, ಆತ್ಮಹತ್ಯೆ: ಏಮ್ಸ್ ವೈದ್ಯ

    ಸುಶಾಂತ್ ಕೇಸ್- ಅದು ಕೊಲೆಯಲ್ಲ, ಆತ್ಮಹತ್ಯೆ: ಏಮ್ಸ್ ವೈದ್ಯ

    – ಸತ್ಯಮೇವ ಜಯತೇ ಎಂದ ರಿಯಾ ಪರ ವಕೀಲ
    – ಎಲ್ಲರ ಚಿತ್ತ ಸಿಬಿಐ ನತ್ತ

    ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ 110 ದಿನಗಳ ಬಳಿಕ ಸ್ಫೋಟಕ ಸತ್ಯ ರಿವೀಲ್ ಆಗಿದೆ. ಸುಶಾಂತ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಹೊರತು ಅದು ಕೊಲೆಯಲ್ಲ ಎಂದು ಏಮ್ಸ್ ವೈದ್ಯ ಡಾ. ಸುಧೀರ್ ಗುಪ್ತಾ ಹೇಳಿದ್ದಾರೆ.

    ಖಾಸಗಿ ಮಾಧ್ಯಮದ ಜೊತೆ ಮಾತನಾಡಿರುವ ಡಾ.ಸುಧೀರ್ ಗುಪ್ತಾ, ಸುಶಾಂತ್ ಪ್ರಕರಣದಲ್ಲಿ ಕೇಳಿ ಬಂದಿರುವ ಕೊಲೆ ಆರೋಪಗಳನ್ನು ಸಂಪೂರ್ಣ ತಳ್ಳಿ ಹಾಕಿದ್ದಾರೆ. ಸುಶಾಂತ್ ದೇಹದಲ್ಲಿ ಯಾವುದೇ ವಿಷ ಪದಾರ್ಥ ಅಥವಾ ಕೆಮಿಕಲ್ ಇರಲಿಲ್ಲ. ಹಾಗಾಗಿ ಇದು ಕೊಲೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾವು ಬನಮ್ಮ ವರದಿಯನ್ನು ಸೆಪ್ಟೆಂಬರ್ 28ರಂದು ಸಿಬಿಐಗೆ ನೀಡಿದ್ದೇವೆ ಎಂದು ತಿಳಿಸಿದರು.

    ಮೊದಲಿಗೆ ಸುಶಾಂತ್ ಸಿಂಗ್ ಮೃತದೇಹದ ಮರಣೋತ್ತರ ಶವ ಪರೀಕ್ಷೆ ನಡೆಸಿ ಮುಂಬೈನ ಕೂಪರ್ ಆಸ್ಪತ್ರೆ ವೈದ್ಯರು ನೀಡಿದ ವರದಿಯ ಮೇಲೆ ಅನುಮಾನಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆ ಸಿಬಿಐ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ವೈದ್ಯಕೀಯ ವರದಿ ನೀಡುವಂತೆ ಡಾ.ಸುಧೀರ್ ಗುಪ್ತಾ ನೇತೃತ್ವದ ಐವರು ಏಮ್ಸ್ ವೈದ್ಯರ ತಂಡಕ್ಕೆ ನೀಡಲಾಗಿತ್ತು. ಏಮ್ಸ್ ವೈದ್ಯರ ತಂಡಕ್ಕೆ ಸೆಪ್ಟೆಂಬರ್ 20ಕ್ಕೆ ವರದಿ ಸೂಚಿಸುವಂತೆ ಸಿಬಿಐ ಸೂಚಿಸಿತ್ತು. ಆದ್ರೆ ವೈದ್ಯರು ಸೆಪ್ಟೆಂಬರ್ 28ರಂದು ವರದಿ ನೀಡಿದ್ದರು. ದನ್ನೂ ಓದಿ: ಸುಶಾಂತ್ ರೀತಿಯಲ್ಲಿ ಮತ್ತೋರ್ವ ನಟನ ಅನುಮಾನಾಸ್ಪದ ಸಾವು

    ಮುಂಬೈ ಆಸ್ಪತ್ರೆಗೆ ಕ್ಲೀನ್ ಚಿಟ್ ಇಲ್ಲ: ಮೊದಲು ಮರಣೋತ್ತರ ಶವ ಪರೀಕ್ಷೆ ನಡೆಸಿದ ಮುಂಬೈನ ಕೂಪರ್ ಆಸ್ಪತ್ರೆಗೂ ಏಮ್ಸ್ ಸಂಪೂರ್ಣ ಕ್ಲೀನ್ ಚಿಟ್ ನೀಡಿಲ್ಲ. ಸುಶಾಂತ್ ಮೃತದೇಹವನ್ನು ಬಾಂದ್ರಾ ನಿವಾಸದಿಂದ ನೇರವಾಗಿ ಕೂಪರ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿತ್ತು. ಆದ್ರೆ ಮರಣೋತ್ತರ ಶವ ಪರೀಕ್ಷೆ ನಡೆಸಿದ್ದ ವೈದ್ಯರ ತಂಡ ಸುಶಾಂತ್ ದೇಹದ ಮೇಲಾದ ಗಾಯದ ಗುರುತು ಮತ್ತು ಕುತ್ತಿಗೆ ಭಾಗದಲ್ಲಿ ಕಂಡು ಬಂದಿದ್ದ ರಕ್ತದ ಕಲೆಗಳನ್ನು ಉಲ್ಲೇಖಿಸಿರಲಿಲ್ಲ. ಪ್ರಾಥಮಿಕವಾಗಿ ಉಲ್ಲೇಖಿಸುವ ಪ್ರಾಣ ಹೋದ ಅಂದಾಜು ಸಮಯವನ್ನು ವೈದ್ಯರು ದಾಖಲಿಸಿರಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.  ಇದನ್ನೂ ಓದಿ: ಎಲ್ಲ ಆಯಾಮಗಳಲ್ಲಿ ಸುಶಾಂತ್ ಕೇಸ್ ತನಿಖೆ: ಸಿಬಿಐ

    ಸೆಪ್ಟೆಂಬರ್ 28ರಂದು ಸಿಬಿಐ ವರದಿ ಸಲ್ಲಿಸಿದ ಬಳಿಕ ಮಾತನಾಡಿದ್ದ ಡಾ.ಸುಧೀರ್ ಗುಪ್ತಾ, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ತನಿಖೆಯ ಅಗತ್ಯವಿದೆ. ನಾವು ನಮ್ಮ ವರದಿಯನ್ನು ಸಲ್ಲಿಸಿದ್ದೇವೆ. ನಮ್ಮ ವರದಿಯ ವಿಶ್ಲೇಷಣೆಯನ್ನ ಸಿಬಿಐ ಮಾಡುತ್ತದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ್ರಾ ಅಥವಾ ಕೊಲೆ ಮಾಡಲಾಯ್ತಾ ಅನ್ನೋದನ್ನು ಸಹ ತನಿಖಾಧಿಕಾರಿಗಳು ನಿರ್ಧರಿಸುತ್ತಾರೆ ಎಂದು ಹೇಳಿದ್ದರು. ಇದನ್ನೂ ಓದಿ: ನಟಿಗೆ ಸುಶಾಂತ್ ಕಿಸ್- ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್

    ಸತ್ಯಮೇವ ಜಯತೆ: ಡಾ.ಸುಧೀರ್ ಗುಪ್ತಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಟಿ ರಿಯಾ ಚಕ್ರವರ್ತಿ ಪರ ವಕೀಲ ಸತೀಶ್ ಮನೋಶಿಂಧೆ, ನಾವು ಸಿಬಿಐ ತಂಡ ನೀಡುವ ಅಧಿಕಾರಿಗಳ ಹೇಳಿಕೆಯ ನಿರೀಕ್ಷೆಯಲ್ಲಿದ್ದೇವೆ. ಪ್ರಕರಣದ ತನಿಖೆ ಯಾವುದೇ ಏಜೆನ್ಸಿ ನಡೆಸಿದ್ರೂ ಸತ್ಯ ಮಾತ್ರ ಬದಲಾಗಲ್ಲ ಎಂದು ನಾವು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆ. ನಾವು ಸತ್ಯದ ಮೇಲೆ ನಂಬಿಕೆ ಹೊಂದಿದ್ದು, ಸತ್ಯಮೇವ ಜಯತೆ ಎಂದಿದ್ದಾರೆ. ಇದನ್ನೂ ಓದಿ: ಹೌದು, ಸುಶಾಂತ್ ಶವದ ಮುಂದೆ ಕ್ಷಮೆ ಕೇಳಿದ್ದೆ: ರಿಯಾ ಚಕ್ರವರ್ತಿ

  • ಸುಶಾಂತ್ ಶವದ ಮುಂದೆ ಕಣ್ಣೀರಿಟ್ಟು ರಿಯಾ ಕ್ಷಮೆ ಕೇಳಿದ್ಯಾಕೆ?

    ಸುಶಾಂತ್ ಶವದ ಮುಂದೆ ಕಣ್ಣೀರಿಟ್ಟು ರಿಯಾ ಕ್ಷಮೆ ಕೇಳಿದ್ಯಾಕೆ?

    -ಕಣ್ಣೀರಿಡುತ್ತಲೇ ರಿಯಾ ಹೇಳಿದ್ದು ಎರಡು ಮಾತು

    ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸುಶಾಂತ್ ಶವ ಇರಿಸಲಾಗಿದ್ದ ಕೂಪರ್ ಆಸ್ಪತ್ರೆಗೆ ಭೇಟಿ ನೀಡಿದ್ದ ನಟಿ ರಿಯಾ ಚಕ್ರವರ್ತಿ ಕಣ್ಣೀರಿಡುತ್ತಲೇ ‘ನನ್ನ ಕ್ಷಮಿಸು ಬಾಬು’ ಎಂದು ಹಲವು ಬಾರಿ ಹೇಳಿದ್ದರು ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಈ ವೇಳೆ ಅಲ್ಲಿದ್ದ ಸುರ್ಜಿತ್ ಸಿಂಗ್ ರಾಥೋಢ ಎಂಬವರ ಸಂದರ್ಶನವನ್ನು ಮಾಧ್ಯಮ ಮಾಡಿದೆ.

    ಅಸಹಜ ಸಾವು ಪ್ರಕರಣದಿಂದ ಕೂಪರ್ ಆಸ್ಪತ್ರೆಗೆ ತರಲಾಗುವ ಶವಗಳನ್ನು ನೋಡಲು ಕುಟುಂಬಸ್ಥರಿಗೆ ಅನುಮತಿ ನೀಡಲಾಗುವುದಿಲ್ಲ. ಮರಣೋತ್ತರ ಶವ ಪರೀಕ್ಷೆಯ ಬಳಿಕವೇ ಪೊಲೀಸರ ಸಮ್ಮುಖದಲ್ಲಿ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗುತ್ತದೆ. ಆದ್ರೆ ರಿಯಾಗೆ ಮಾತ್ರ ಆಸ್ಪತ್ರೆಯಲ್ಲಿ ಅನುಮತಿ ಹೇಗೆ ನೀಡಲಾಯ್ತು ಎಂಬುದರ ಬಗ್ಗೆ ಪ್ರಶ್ನೆಗಳು ಸಹ ಹುಟ್ಟಿಕೊಂಡಿವೆ. ಇದನ್ನೂ ಓದಿ: ಸುಶಾಂತ್ ಕೇಸ್‌, ರಿಯಾಗೆ ಹಿನ್ನಡೆ – ಸಿಬಿಐ ತನಿಖೆಗೆ ಅಸ್ತು

    ಕೂಪರ್ ಆಸ್ಪತ್ರೆಗೆ ಧೋನಿ ಸಿನಿಮಾದ ಸಹ ನಿರ್ಮಾಪಕ, ರಿಯಾ ಮತ್ತು ರಿಯಾ ಗೆಳೆಯ ಸೂರಜ್ ಸಿಂಗ್ ಬಂದು ಸುಶಾಂತ್ ಅಂತಿಮ ದರ್ಶನ ಪಡೆದುಕೊಂಡಿದ್ದರು. ಅಂತಿಮ ವಿಧಿವಿಧಾನದ ವೇಳೆ ಸುಶಾಂತ್ ಕುಟುಂಬಸ್ಥರು ರಿಯಾರಿಗೆ ದರ್ಶನ ಪಡೆಯಲು ಅವಕಾಶ ನೀಡಲ್ಲ. ಹಾಗಾಗಿ ಶವಗಾರಕ್ಕೆ ಬಂದಿದ್ದು, ಕೊನೆಯ ಬಾರಿ ಒಮ್ಮೆ ನೋಡಿ ಹೋಗುತ್ತಾರೆ ಎಂದು ನನಗೆ ಹೇಳಲಾಗಿತ್ತು. ಶವಾಗರದೊಳಗೆ ಬಂದ ರಿಯಾ ತಾವೇ ದೇಹದ ಮೇಲಿದ್ದ ಬಟ್ಟೆ ಸರಿಸಿ ಮುಖ ನೋಡಿದ್ದರು. ಸುಶಾಂತ್ ಮುಖ ನೋಡುತ್ತಲೇ ಭಾವುಕರಾದ ರಿಯಾ ಕಣ್ಣೀರಿಡುತ್ತ ಸಾರಿ ಬಾಬು ಎಂದು ಹೇಳತೊಡಗಿದರು. ಏನಾದ್ರೂ ತಪ್ಪು ಮಾಡಿದ್ದರಿಂದ ರಿಯಾ ಕ್ಷಮೆ ಕೇಳಿ ಅಳುತ್ತಿರಬೇಕೆಂದು ನನಗೆ ಅನ್ನಿಸ್ತು ಎಂದು ಸುರ್ಜಿತ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ದೇವರಿಗೆ ಧನ್ಯವಾದಗಳು, ಸತ್ಯದ ಕಡೆ ಮೊದಲ ಹೆಜ್ಜೆ – ಸುಶಾಂತ್ ಸಿಂಗ್ ಸೋದರಿ

    ಅಂದು ರಿಯಾ ಜೊತೆಗೆ ಓರ್ವ ವಯಸ್ಸಾದ ವ್ಯಕ್ತಿ, ಸೋದರ ಶೌವಿಕ್ ಆಸ್ಪತ್ರೆಗೆ ಬಂದಿದ್ದರು. ರಿಯಾ ಹೋದ ನಂತರ ಸುಶಾಂತ್ ಕುಟುಂಬಸ್ಥರು ಸಹ ಆಸ್ಪತ್ರೆಗೆ ಬಂದಿದ್ದರು. ಆದ್ರೆ ಸೆಕ್ಯೂರಿಟಿ ಗಾರ್ಡ್ ಕುಟುಂಬಸ್ಥರಿಗೆ ಶವಾಗರದೊಳಗೆ ಬಿಡಲಿಲ್ಲ ಎಂದರು. ಇದನ್ನೂ ಓದಿ: ತನಿಖೆ ಯಾರೇ ನಡೆಸಲಿ, ಸತ್ಯ ಬದಲಾಗಲ್ಲ: ರಿಯಾ ಚಕ್ರವರ್ತಿ ಪರ ವಕೀಲ

    ಸುಶಾಂತ್ ಕತ್ತಿನ ಭಾಗದಲ್ಲಿ ಕಪ್ಪು ಗುರುತು ಇತ್ತು. ಕತ್ತು ಒಳಭಾಗದಲ್ಲಿ ಮುರಿದ ಪರಿಣಾಮ ಸಾವು ಆಗಿರಬಹುದು ಎಂದು ಮೇಲ್ನೋಟಕ್ಕೆ ಕಾಣಿಸುತ್ತಿತ್ತು. ಮೃತದೇಹ ಆತ್ಮಹತ್ಯೆಯಾದ ಶವದ ರೀತಿ ಇರಲಿಲ್ಲ. ಕಣ್ಣುಗಳು ಹೊರಗೆ ಬಂದಿರಲಿಲ್ಲ. ನಾಲಿಗೆ ಸಹ ಹೊರಗೆ ಬಂದಿರಲಿಲ್ಲ. ಮರಣದ ಸುಶಾಂತ್ ಮುಖ ಒಂದು ರೀತಿಯಲ್ಲಿ ಬದಲಾಗಿತ್ತು ಎಂದು ಸುರ್ಜಿತ್ ಹಲವು ಸ್ಫೋಟಕ ವಿಷಯಗಳನ್ನು ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ:  ಮಾನವೀಯತೆಯ ಗೆಲುವು, ನನ್ನ ಧ್ವನಿ ಅಡಗಿಸೋ ಪ್ರಯತ್ನ ನಡೆದಿತ್ತು-ಕಂಗನಾ ರಣಾವತ್ ಮೊದಲ ಪ್ರತಿಕ್ರಿಯೆ

    ಸುರ್ಜಿತ್ ಸಿಂಗ್ ತಾವು ರಾಜಪೂತ ಕರ್ಣಿ ಸೇನೆಯ ಸದಸ್ಯ ಎಂದು ಹೇಳಿಕೊಂಡಿದ್ದಾರೆ. ಸುಶಾಂತ್ ಸೋದರ ಸಂಬಂಧಿ ಬಿಜೆಪಿ ಶಾಸಕ ನೀರಜ್ ಬಬಲೂ ಜೊತೆ ಸಾವಿನ ಬಗ್ಗೆ ಮಾತನಾಡಿದ್ದರು. ದೆಹಲಿಯ ಕರ್ಣಿ ಸೇನೆಯ ಅಧ್ಯಕ್ಷ ಅವರ ಸೂಚನೆಯಂತೆ ತಾವು ಮುಂಬೈನ ಕೂಪರ್ ಆಸ್ಪತ್ರೆಯಲ್ಲಿದ್ದೆ ಎಂದು ಸುರ್ಜಿತ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಸುಶಾಂತ್ ಪ್ರಕರಣದ ತನಿಖೆ ಸಿಬಿಐಗೆ ವರ್ಗಾವಣೆ- ಅಂಕಿತಾ ಲೋಖಂಡೆ ಪ್ರತಿಕ್ರಿಯೆ