Tag: rhea charaborty

  • ಸುಶಾಂತ್ ಸಿಂಗ್ ಕೇಸ್- ಮತ್ತಿಬ್ಬರನ್ನ ಬಂಧಿಸಿದ ಎನ್‍ಸಿಬಿ

    ಸುಶಾಂತ್ ಸಿಂಗ್ ಕೇಸ್- ಮತ್ತಿಬ್ಬರನ್ನ ಬಂಧಿಸಿದ ಎನ್‍ಸಿಬಿ

    -ಸಾರಾ, ರಕುಲ್‍ಗೆ ಸಮನ್ಸ್ ನೀಡಿಲ್ಲ

    ಮುಂಬೈ: ಧೋನಿ ಸಿನ್ಮಾ ಖ್ಯಾತಿಯ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ಇಂದು ಇಬ್ಬರನ್ನ ಬಂಧಿಸಿದೆ. ಇಬ್ಬರು ಸೇರಿದಂತೆ ಇದುವರೆಗೂ 18 ಜನರ ಬಂಧನವಾಗಿದೆ.

    ನಟಿ ರಿಯಾ ಚಕ್ರವರ್ತಿ ಸೋದರ ಶೌವಿಕ್ ಬಾಲ್ಯದ ಗೆಳೆಯ ಸೂರ್ಯದೀಪ್ ಮಲ್ಹೋತ್ರನನ್ನು ಮುಂಬೈನಲ್ಲಿ ಬಂಧಿಸಲಾಗಿದೆ. ಗೋವಾದ ಕ್ರಿಸ್ಟ್ ಕೊಸ್ಟಾನ್‍ನನ್ನು ಬಂಧಿಸಿದ್ದು, ವಿಚಾರಣೆಗಾಗಿ ಮುಂಬೈಗೆ ಕರೆತರುವ ಸಾಧ್ಯತೆಗಳಿವೆ. ಜೂನ್ 14ರಂದು ನಿಧನಹೊಂದಿದ ಸುಶಾಂತ್ ಸಿಂಗ್ ಪ್ರಕರಣ ಡ್ರಗ್ಸ್ ಆಯಾಮವನ್ನ ಪಡೆದುಕೊಂಡಿದೆ.

    ಇತ್ತ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ ಸಿಂಗ್‍ಗೆ ಎನ್‍ಸಿಬಿ ಸಮನ್ಸ್ ನೀಡಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದವು. ಆದ್ರೆ ನಟಿಯರಿಗೆ ಯಾವುದೇ ಸಮನ್ಸ್ ನೀಡಿಲ್ಲ. ಪ್ರಕರಣದಲ್ಲಿ ಇಬ್ಬರ ಭಾಗಿಯಾಗಿದ್ದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಎನ್‍ಸಿಬಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.

    ಶುಕ್ರವಾರವಷ್ಟೇ ರಿಯಾ ಚಕ್ರವರ್ತಿ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಸೋಮವಾರ ನ್ಯಾಯಾಲಯ ವಿವರವಾದ ಆದೇಶ ಪ್ರತಿಯನ್ನು ನೀಡಿದೆ. ಈ ವೇಳೆ ಆರೋಪಿಯು ಈ ಅಪರಾಧ ಪ್ರಕರಣದಲ್ಲಿ ತಪ್ಪಿತಸ್ಥಳಲ್ಲ ಎಂಬುದನ್ನು ನಂಬಲು ಸಮಂಜಸವಾದ ಆಧಾರಗಳಿರುವುದನ್ನು ದಾಖಲಿಸಬೇಕಿದೆ. ಆದರೆ ನ್ಯಾಯಾಲಯವು ಈ ಪ್ರಕರಣವನ್ನು ಖುಲಾಸೆಗೊಳಿಸುವ ತೀರ್ಪನ್ನು ಉಚ್ಚರಿಸುತ್ತಿದೆ ಅಥವಾ ತಪ್ಪಿತಸ್ಥಳಲ್ಲ ಎಂದು ದಾಖಲಿಸುವಂತೆ ಪರಿಗಣಿಸುವ ಉದ್ದೇಶವನ್ನು ಹೊಂದಿಲ್ಲ ಎಂಬುದನ್ನು ಸಹ ನೆನಪಿನಲ್ಲಿಡಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

    ಜಾಮೀನು ಅರ್ಜಿಯಲ್ಲಿ ರಿಯಾ, ತನಿಖೆ ವೇಳೆ ಒಪ್ಪಿಕೊಂಡಿದ್ದನ್ನು ತಳ್ಳಿಹಾಕಿದ್ದು, ತನಿಖೆ ವೇಳೆ ನನ್ನನ್ನು ಹೆದರಿಸಿ ತಪ್ಪೊಪ್ಪಿಕೊಳ್ಳುವಂತೆ ಒತ್ತಾಯಿಸಲಾಯಿತು ಎಂದು ತಿಳಿಸಿದ್ದಾರೆ. ಜೊತೆಗೆ ನಾನು ಏನೂ ತಪ್ಪು ಮಾಡಿಲ್ಲ. ಸುಮ್ಮನೆ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸುತ್ತಿದ್ದಾರೆ. ಈ ವೇಳೆ ಹೊರಗಿನಿಂದ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ. ಈ ಸಂದರ್ಭದಲ್ಲಿ ತನಿಖೆ ಮಾಡುತ್ತಿರುವುದು ನನ್ನ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಜಾಮೀನಿಗೆ ಅರ್ಜಿ ಹಾಕಿದ್ದರು.

  • ಫ್ಯಾನ್, ಬೆಡ್ ಇಲ್ಲ- ಇಂದ್ರಾಣಿ ಪಕ್ಕದಲ್ಲೇ ರಿಯಾ ಜೈಲುವಾಸ

    ಫ್ಯಾನ್, ಬೆಡ್ ಇಲ್ಲ- ಇಂದ್ರಾಣಿ ಪಕ್ಕದಲ್ಲೇ ರಿಯಾ ಜೈಲುವಾಸ

    ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ವಜಾಗೊಳಿಸಿದ್ದು, ಹೀಗಾಗಿ ಆಕೆಗೆ ಜೈಲೇ ಗತಿಯಾಗಿದೆ.

    ರಿಯಾ ಇರುವ ಬೈಕುಲ್ಲಾ ಜೈಲಿನಲ್ಲಿ ಫ್ಯಾನ್ ಇಲ್ಲ, ಬೆಡ್ ಕೂಡ ಇಲ್ಲ. ಮಗಳು ಶೀನಾ ಬೋರಾ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ಇಂದ್ರಾಣಿ ಮುಖರ್ಜಿ ಪಕ್ಕದಲ್ಲೇ ರಿಯಾ ಸೆಲ್ ಇದೆ.

    ಭದ್ರತೆಯ ಕಾರಣಗಳಿಂದ ರಿಯಾ ಚಕ್ರವರ್ತಿ ಪ್ರತ್ಯೇಕವಾಗಿ ಒಂದೇ ಕೋಣೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆತಂಕಕಾರಿ ವಿಚಾರವೆಂದರೆ ಈಕೆ ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜಪೂತ್ ತನಿಖೆಯಿಂದ ಈಗಾಗಲೇ ಗಮನಸೆಳೆದಿದ್ದು, ಈ ಹಿನ್ನೆಲೆಯಲ್ಲಿ ರಿಯಾ ಮೇಲೆ ಸಹ ಕೈದಿಗಳು ಹಲ್ಲೆ ಮಾಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ನಟಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಮೂರು ಶಿಫ್ಟ್ ನಲ್ಲಿ ಇಬ್ಬರು ಕಾನ್‍ಸ್ಟೇಬಲ್ ಗಳು ನಟಿಗೆ ರಕ್ಷಣೆ ನೀಡುತ್ತಿದ್ದಾರೆ.

    ಸದ್ಯ ಜೈಲಿನಲ್ಲಿ ರಿಯಾಗೆ ಮಲಗಲು ಚಾಪೆ ನೀಡಲಾಗಿದೆ. ಆದರೆ ಹಾಸಿಗೆ ಮತ್ತು ದಿಂಬು ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಸೆಲ್ ನಲ್ಲಿ ಫ್ಯಾನ್ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಕೋರ್ಟ್ ಒಪ್ಪಿದರೆ ಟೇಬಲ್ ಫ್ಯಾನ್ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಚಾರಣೆ ವೇಳೆ ತಮ್ಮನನ್ನ ನೋಡಿ ಕಣ್ಣೀರಿಟ್ಟ ರಿಯಾ ಚಕ್ರವರ್ತಿ-25 ಬಿಟೌನ್ ಸ್ಟಾರ್ ಗಳಿಗೆ ಢವಢವ ಶುರು

    ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಜೈಲಿನ ಕೈದಿಗಳಲ್ಲಿ ರೋಗ ನಿರೋಧಕ ಹೆಚ್ಚಿಸುವ ಸಲುವಾಗಿ ಹಾಲು ಮತ್ತು ಅರಶಿನ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾಕಂದರೆ ಮಹಿಳೆಯ ಏಕೈಕ ಜೈಲಾಗಿರುವ ಬೈಕುಲ್ಲಾದಲ್ಲಿ ಕಳೆದ ಕೆಲ ತಿಂಗಳಿನಲ್ಲಿ ಕೆಲವು ಕೋವಿಡ್ 19 ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಜಾಮೀನು ಅರ್ಜಿ ವಜಾ – ರಿಯಾ ಚಕ್ರವರ್ತಿಗೆ ಜೈಲೇ ಗತಿ

    ಜೂನ್ 14 ರಂದು ಮೃತಪಟ್ಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಗೆ ಸಂಬಂಧಿಸಿದ ಡ್ರಗ್ಸ್ ಆರೋಪದ ಮೇಲೆ ನಟಿ ರಿಯಾ ಚಕ್ರವರ್ತಿಯನ್ನು ಮಂಗಳವಾರ ಬಂಧಿಸಿ 14 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ. ಸಾವನ್ನಪ್ಪಿದ ನಟ ಸುಶಾಂತ್‍ಗೆ ರಿಯಾ ಚಕ್ರವರ್ತಿ ಗಾಂಜಾ ಸೇವನೆ ಮಾಡಲು ಗಾಂಜಾ ಖರೀದಿಸುತ್ತಿದ್ದಳು ಎಂಬ ಆರೋಪದ ಮೇಲೆ ಎನ್‍ಸಿಬಿ ರಿಯಾಳನ್ನು ಅರೆಸ್ಟ್ ಮಾಡಿತ್ತು. ನಂತರ ಆಕೆ ಸ್ಥಳೀಯ ಕೋರ್ಟಿನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಳು ಅದು ಕೂಡ ವಜಾಗೊಂಡಿತ್ತು. ಮತ್ತೆ ಮುಂಬೈ ಕೋರ್ಟಿಗೆ ಆಕೆ ಅರ್ಜಿ ಸಲ್ಲಿಸಿದ್ದಳು. ಇದನ್ನೂ ಓದಿ: ಡ್ರಗ್ಸ್ ಅಡಿಕ್ಟ್ ಸುಶಾಂತ್‍ನನ್ನು ಪ್ರೀತಿಸಿದ್ದಕ್ಕೆ ಈ ಶಿಕ್ಷೆ: ರಿಯಾ ಪರ ವಕೀಲ

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ವಾದವನ್ನು ಆಲಿಸಿದ್ದ ಕೋರ್ಟ್, ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಈ ತೀರ್ಪು ಬಂದಿದ್ದು, ರಿಯಾ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಸೇರಿದಂತೆ ಎಂಟು ಮಂದಿ ಆರೋಪಿಗಳ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಈ ಮೂಲಕ ಮತ್ತೆ ಸೆಪ್ಟೆಂಬರ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈಗ ಆಕೆ ಬಾಂಬೆ ಹೈಕೋರ್ಟಿಗೆ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಸುಶಾಂತ್ ಸಾವಿಗೆ ಭೂಗತ ಲೋಕದ ಲಿಂಕ್: ಸುಬ್ರಮಣಿಯನ್ ಸ್ವಾಮಿ