Tag: Rice Mill

  • ಯಾದಗಿರಿ | ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ – 1.17 ಕೋಟಿ ಮೌಲ್ಯದ 4,108 ಕ್ವಿಂಟಾಲ್ ಸೀಜ್

    ಯಾದಗಿರಿ | ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ – 1.17 ಕೋಟಿ ಮೌಲ್ಯದ 4,108 ಕ್ವಿಂಟಾಲ್ ಸೀಜ್

    -ನಕಲಿ ಬ್ರ್ಯಾಂಡ್‌ ಹೆಸರಿನಲ್ಲಿ ವಿದೇಶಕ್ಕೂ ರಫ್ತು ಮಾಡಿರುವ ಶಂಕೆ

    ಯಾದಗಿರಿ: ಜಿಲ್ಲೆಯ ಎರಡು ರೈಸ್ ಮಿಲ್‌ಗಳ (Rice Mill) ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಒಟ್ಟು 1.17 ಕೋಟಿ ಮೌಲ್ಯದ 4,108 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿದ್ದಾರೆ.

    ಆಹಾರ ಇಲಾಖೆ ಉಪನಿರ್ದೇಶಕ ಅನೀಲಕುಮಾರ್ ಅವರು ಗುರಮಠಕಲ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅನ್ನಭಾಗ್ಯ ಅಕ್ಕಿಯನ್ನು ಪಾಲಿಶ್‌ ಮಾಡಿಸಿ, ವಿವಿಧ ಬ್ರ್ಯಾಂಡ್‌ ಹೆಸರಿನಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ನೀಡಿದ್ದ ದೂರಿನ ಆಧಾರದ ಪೊಲೀಸರು ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದರು.

    ಆಹಾರ ಪೊರೈಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಹಾಯ ಇಲಾಖೆಯ ಖಚಿತ ಮಾಹಿತಿ ಮೇರೆಗೆ ಯಾದಗಿರಿ ಜಿಲ್ಲೆಯ ಗುರಮಠಕಲ್ ಪಟ್ಟಣದ ಹೊರವಲಯದ ಉದ್ಯಮಿ ನರೇಂದ್ರ ರಾಠೋಡ ಹಾಗೂ ಅವರ ಪುತ್ರ ಅಯ್ಯಪ್ಪ ರಾಠೋಡಗೆ ಸೇರಿದ ಲಕ್ಷ್ಮೀ ವೆಂಕಟೇಶ್ವರ ಹಾಗೂ ಲಕ್ಷ್ಮೀ ಬಾಲಾಜಿ ರೈಸ್ ಮಿಲ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಗೋದಾಮಿನಲ್ಲಿ ಸಾವಿರಾರು ಅಕ್ಕಿ ಚೀಲಗಳ ಸಂಗ್ರಹ ಪತ್ತೆಯಾಗಿದೆ. ಸತತ ಮೂರು ದಿನಗಳ ಬಳಿಕ ಲೆಕ್ಕ ಕಾರ್ಯ ಮುಕ್ತಾಯವಾಗಿದ್ದು, ಸುಮಾರು 1.17 ಕೋಟಿ ರೂ.ಗೂ ಅಧಿಕ ಮೌಲ್ಯದ 4,108 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ:ಈದ್‌ಮಿಲಾದ್ ವೇಳೆ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ ಹಾಡು ಪ್ರಸಾರ – ಮೂವರ ವಿರುದ್ಧ ಕೇಸ್  ದಾಖಲು

    ಸದ್ಯ ರೈಸ್ ಮಿಲ್‌ಗೆ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ನಕಲಿ ಬ್ರ್ಯಾಂಡ್‌ನಡಿ ರೈಸ್ ಪಾಲಿಶ್‌ ಮಾಡಿ ಮಾರಾಟ ಮಾಡಿರುವುದು ತಿಳಿದುಬಂದಿದೆ. ಡೈನೆಸ್ಟಿ, ದಾರಾ ಡಬಲ್, ವೋಲ್ಗಾ ಸೇರಿದಂತೆ ವಿವಿಧ ಬ್ರ್ಯಾಂಡ್‌ ಚೀಲದಲ್ಲಿ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ ಕಡಿಮೆ ದರಕ್ಕೆ ಅಕ್ಕಿ ಖರೀದಿ ಮಾಡಿ, ದುಬಾರಿ ಬೆಲೆಗೆ ಅಕ್ಕಿ ಮಾರಾಟ ಮಾಡಿ ಅಕ್ರಮ ದಂಧೆ ನಡೆಸಿರುವುದಲ್ಲದೇ ಸಿಂಗಾಪುರ, ದುಬೈ ಸೇರಿದಂತೆ ವಿವಿಧ ದೇಶದ ಬ್ರ್ಯಾಂಡ್‌ನಲ್ಲಿ ರಫ್ತು ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನೂ ಪಂಜಾಬ್, ಹರಿಯಾಣ, ತೆಲಂಗಾಣ ಸರ್ಕಾರದ ಹೆಸರಿನಲ್ಲಿಯೂ ಪಡಿತರ ಅಕ್ಕಿ ಚೀಲಗಳು ಪತ್ತೆಯಾಗಿದೆ.

    ಈ ಬಗ್ಗೆ ತನಿಖೆಯಾದರೆ ಮತ್ತಷ್ಟು ಅಕ್ಕಿ ಮಾರಾಟ ಜಾಲ ಪತ್ತೆಯಾಗುವ ಸಾಧ್ಯತೆಯಿದೆ. ಸದ್ಯ ಇಬ್ಬರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪೊಲೀಸರು ಅರೆಸ್ಟ್‌ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

  • ರೈಸ್ ಮಿಲ್ ಕಟ್ಟಡ ಕುಸಿತ – ನಾಲ್ವರು ಸಾವು, 20 ಮಂದಿಗೆ ಗಾಯ

    ರೈಸ್ ಮಿಲ್ ಕಟ್ಟಡ ಕುಸಿತ – ನಾಲ್ವರು ಸಾವು, 20 ಮಂದಿಗೆ ಗಾಯ

    ಚಂಡೀಗಢ: ಮೂರು ಅಂತಸ್ತಿನ ರೈಸ್ ಮಿಲ್ (Rice Mill) ಕಟ್ಟಡ ಕುಸಿದು (Collapse) ನಾಲ್ವರು ಸಾವನ್ನಪ್ಪಿ, 20 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹರಿಯಾಣದ (Haryana) ಕರ್ನಾಲ್‌ನಲ್ಲಿ ನಡೆದಿದೆ.

    ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಕಟ್ಟಡ ಕುಸಿದ ಸಂದರ್ಭದಲ್ಲಿ ಕಟ್ಟಡದೊಳಗೆ ಸುಮಾರು 150 ಜನ ಕಾರ್ಮಿಕರಿದ್ದರು ಎಂದು ವರದಿಗಳು ತಿಳಿಸಿವೆ. ಕಟ್ಟಡ ಕುಸಿದ ವೇಳೆ 24 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ತಕ್ಷಣವೇ ಅಗ್ನಿಶಾಮಕ ದಳ (Fire Brigade), ಪೊಲೀಸ್ ಹಾಗೂ ಆಂಬುಲೆನ್ಸ್ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಈ ವೇಳೆ ನಾಲ್ವರು ಮೃತಪಟ್ಟಿದ್ದು, ಉಳಿದ 20 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಅಕ್ರಮ ಮರಳು ಗಣಿಗಾರಿಕೆ ತಡೆಯಲು ಬಂದಿದ್ದ ಅಧಿಕಾರಿಗಳ ಮೇಲೆ ಕಲ್ಲು, ದೊಣ್ಣೆಯಿಂದ ಹಲ್ಲೆ 

    ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದ್ದು, ಘಟನೆ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗುವುದು. ಅಲ್ಲದೇ ರೈಸ್ ಮಿಲ್ ಮಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಶ್ ಯಾದವ್ ತಿಳಿಸಿದ್ದಾರೆ. ಇದನ್ನೂ ಓದಿ: BWSSB ಅರೆಬರೆ ಕಾಮಗಾರಿ – ಗುಂಡಿಗೆ ಬಿದ್ದ ಬಾಲಕ ಬಲಿ

  • ಸಂಕಷ್ಟದಲ್ಲಿರೋ ಜನರಿಗೊಂದು ಆಶಾಕಿರಣ- ಕೊರೊನಾ ನಿಯಂತ್ರಣಕ್ಕೂ ರೈಸ್ ಸಹಕಾರಿ

    ಸಂಕಷ್ಟದಲ್ಲಿರೋ ಜನರಿಗೊಂದು ಆಶಾಕಿರಣ- ಕೊರೊನಾ ನಿಯಂತ್ರಣಕ್ಕೂ ರೈಸ್ ಸಹಕಾರಿ

    ತುಮಕೂರು: ಇಡೀ ದೇಶವೇ ಮಹಾಮಾರಿ ಕೊರೊನಾ ವೈರಸ್‍ನಿಂದ ತತ್ತರಗೊಂಡಿದೆ. ಇದುವರೆಗೂ ಕೊರೊನಾ ವೈರಸ್‍ಗೆ ಸೂಕ್ತವಾದ ಔಷಧಿ ಸಿಗಲಿಲ್ಲ. ಸದ್ಯಕ್ಕೆ ತುಮಕೂರು ಜಿಲ್ಲೆಯ ರೈಸ್ ಮಿಲ್ ಒಂದರಲ್ಲಿ ವಿಶೇಷವಾದಂತಹ ಅಕ್ಕಿಯೊಂದು ತಯಾರಾಗುತ್ತಿದೆ. ಈ ಅಕ್ಕಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತಿದೆ.

    ಆಯುರ್ವೇದಿಕ್ ರೈಸ್ ಎಂದು ಇದರ ಹೆಸರು. ನೈಸರ್ಗಿಕವಾದಂತಹ ವಸ್ತುಗಳನ್ನು ಈ ಅಕ್ಕಿಯಲ್ಲಿ ಬೆರೆಸಿ ತಯಾರು ಮಾಡಲಾಗುತ್ತದೆ. ಈ ರೈಸ್ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಳವಾಗಲಿದೆ ಎನ್ನಲಾಗಿದೆ. ಪ್ರಮುಖವಾಗಿ ಈ ಅಕ್ಕಿ ಸೇವಿಸಿದರೆ ಕ್ಯಾನ್ಸರ್ ಗುಣಮುಳವಾಗುವುದರ ಜೊತೆಗೆ ಕೊರೊನಾ ನಿಯಂತ್ರಣಕ್ಕೂ ಸಹಕಾರಿಯಾಗಲಿದೆ ಎಂದು ರೈಸ್ ಮಿಲ್ ಮಾಲೀಕ ಶ್ರೀಧರ್ ಬಾಬು ಅಭಿಪ್ರಾಯಪಟ್ಟಿದ್ದಾರೆ.

    ಆಯುರ್ವೇದಿಕ್ ರೈಸ್ ಮಾರುಕಟ್ಟೆಗೆ ಬಿಡುಗಡೆಯಾದರೆ ಉಳಿದೆಲ್ಲಾ ರೈಸ್‍ಗಿಂತ ಕೇವಲ 50 ಪೈಸೆ ಹೆಚ್ಚು ಬೆಲೆ ಕೊಡಬೇಕಾಗುತ್ತದೆ. ಕೇವಲ ಕ್ಯಾನ್ಸರ್‌ಗೆ ಅಷ್ಟೇ ಅಲ್ಲಾ ಸಕ್ಕರೆ ಖಾಯಿಲೆಗೂ ಮದ್ದಾಗಿದೆ. ಪೈಬರ್ ಅಂಶ ಸೇರಿರುವ ರೈಸ್ ಈ ಮಿಲ್‍ನಲ್ಲಿ ರೆಡೆಯಾಗಿ ಕಳೆದ ಮೂರು ವರ್ಷದಿಂದ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿದೆ ಎಂದು ಶ್ರೀಧರ್ ಬಾಬು ಹೇಳಿದರು.

    ಮಲೇಷಿಯಾ, ಆಸ್ಟ್ರೇಲಿಯಾ ಸರ್ಕಾರಗಳು ಸಪ್ತಗಿರಿ ಮಿಲ್‍ನ ಔಷಧಿ ಗುಣವುಳ್ಳ ರೈಸ್‍ಗಳಿಗೆ ಬೇಡಿಕೆ ಇಟ್ಟಿವೆ. ಜೊತೆಗೆ ವಿದೇಶದಲ್ಲೂ ಫ್ಯಾಕ್ಟರಿ ಮಾಡಲು ಆಹ್ವಾನಿಸಿವೆ. ಈ ನಡುವೆ ಸಚಿವ ಗೋಪಾಲಯ್ಯ ಸಪ್ತಗಿರಿ ಫ್ಯಾಕ್ಟರಿಗೆ ಭೇಟಿ ಕೊಟ್ಟು ವಿಶೇಷತೆಗಳನ್ನು ತಿಳಿದುಕೊಂಡಿದ್ದಾರೆ.

    ಜಪಾನ್ ಟೆಕ್ನಾಲಜಿ ಉಳ್ಳಂತಹ ವಿಶ್ವದ ಮೊದಲ ವಿಟಿಎ20 ಸಟಾಕಿ ರೈಸ್ ಪ್ಲಾಂಟ್ ಇದಾಗಿದ್ದು, ಹಲವು ವಿಶೇಷ ರೈಸ್ ತಯಾರಿಸಬಲ್ಲ ಸಾಮರ್ಥ್ಯ ಇದೆ. ಹಾಗಾಗಿ ರೋಗ ನಿರೋಧ ಶಕ್ತಿ ಹೆಚ್ಚಿಸುವಂತಹ ರೈಸ್ ರೆಡಿ ಮಾಡಿ ಕೊರೊನಾದಂತಹ ರೋಗ ನಿಯಂತ್ರಣಕ್ಕೆ ಸಪ್ತಗಿರಿ ರೈಸ್ ಮಿಲ್ ಟಿಂ ಅಣಿಯಾಗಿದೆ. ಈಗಾಗಲೇ ಪ್ರಾಯೋಗಿಕವಾಗಿ ರೈಸ್ ತಯಾರು ಮಾಡಿ ಮೈಸೂರಿನ ಸಿಎಫ್‌ಟಿಆರ್‌ಐ ಲ್ಯಾಬ್‍ಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಲ್ಯಾಬ್‍ನಿಂದ ಅನುಮೋದನೆಗೊಂಡರೆ ಈ ರೈಸ್ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ.

  • ರಾಜ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ಕಿ ಮಾಫಿಯಾ

    ರಾಜ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ಕಿ ಮಾಫಿಯಾ

    ಕೊಪ್ಪಳ: ರಾಜ್ಯದಲ್ಲಿ ಈಗಾಗಲೇ ಮರಳು ಮಾಫಿಯಾ, ಆಕ್ರಮ ಗಣಿಗಾರಿಕೆ ಮಾಫಿಯಾ, ಸುದ್ದಿಗಳನ್ನು ನೀವು ಕೇಳಿದ್ದಿರಿ. ಈಗ ರಾಜ್ಯದಲ್ಲಿ ಎಗ್ಗಿಲ್ಲದೇ ಅಕ್ಕಿ ಮಾಫಿಯಾ ನಡೆಯುತ್ತಿದೆ.

    ಕೊಪ್ಪಳದ ಗಂಗಾವತಿ ಎಂದರೆ ಭತ್ತದ ನಾಡು ಎಂದೇ ಪ್ರಸಿದ್ಧಿ. ದೇಶದ ನಾನಾ ರಾಜ್ಯಗಳಿಗೆ ಇಲ್ಲಿ ಬೆಳೆಯುವ ಅಕ್ಕಿ ರಪ್ತು ಮಾಡಲಾಗುತ್ತದೆ. ಆದರೆ ಅಂತಹ ಭತ್ತದ ಕಣಜದಲ್ಲೆ ಇದೀಗ ಡುಪ್ಲಿಕೇಟ್ ಬ್ರಾಂಡ್ ಅಕ್ಕಿ ಮಾಫಿಯಾ ಎಗ್ಗಿಲ್ಲದೆ ನೆಡೆಯುತ್ತಿದೆ. ಜಿಲ್ಲೆಯ ಕೆಲ ರೈಸ್ ಮಿಲ್‍ಗಳಲ್ಲಿ ಈ ಡುಪ್ಲಿಕೇಟ್ ದಂಧೆ ನಡೆಯುತ್ತಿದೆ.

    ಮಾರ್ಕೆಟ್ ಅಲ್ಲಿ ಸೋನಾ ಮಸೂರಿ ಅಕ್ಕಿ ಪಾಕೆಟ್‍ಗಳಿಗೆ ಬಾರೀ ಬೇಡಿಕೆ ಇದ್ದು ಇದನ್ನೇ ಬಂಡವಾಳವಾಗಿಸಿಕೊಂಡ ಕೆಲ ದಂಧೆಕೋರರು ಜನರಿಗೆ ಕಳಪೆ ಮಟ್ಟದ ಅಕ್ಕಿ ನೀಡಿ ಮೋಸ ಮಾಡುತ್ತಿದ್ದಾರೆ. ಉಚಿತವಾಗಿ ಸಿಗುವ ಈ ಅನ್ನಭಾಗ್ಯ ಅಕ್ಕಿ ಪಾಲಿಷ್ ಮಾಡಿ ಅದನ್ನು ಪ್ಯಾಕ್ 50 ರಿಂದ 60 ರೂ. ಬೆಲೆಗೆ ಮಾರಾಟವಾಗುತ್ತಿದೆ. ಈ ಅಕ್ಕಿಯನ್ನು ಪಾಲಿಷ್ ಮಾಡಲು ಉಪಯೋಗಿಸುವ ರಾಸಾಯನಿಕದಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಂಭವವೂ ಇದೆ ಎನ್ನಲಾಗಿದೆ.

    ಈ ವಿಚಾರದ ಬಗ್ಗೆ ಕೊಪ್ಪಳ ಡಿಸಿ ಅವರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ 16 ಕ್ಕೂ ಹೆಚ್ಚು ಬ್ರಾಂಡೆಂಡ್ ಕಂಪನಿಗಳ ನಕಲಿ ಪ್ಯಾಕೆಟ್‍ಗಳು ಪತ್ತೆಯಾಗಿವೆ. ಕೂಡಲೇ ರೈಸ್ ಮಿಲ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.