Tag: Ricky Kej

  • ರಿಕ್ಕಿಕೇಜ್ ಸಂಗೀತ ನಿರ್ದೇಶನದ ಚಿತ್ರ ಆಸ್ಕರ್‌ಗೆ ಎಂಟ್ರಿ

    ರಿಕ್ಕಿಕೇಜ್ ಸಂಗೀತ ನಿರ್ದೇಶನದ ಚಿತ್ರ ಆಸ್ಕರ್‌ಗೆ ಎಂಟ್ರಿ

    ಮೂರು ಬಾರಿ ಪ್ರತಿಷ್ಟಿತ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ (Ricky Kej) ಅವರ ಸಂಗೀತ ನಿರ್ದೇಶನದ ಸಿನಿಮಾ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿ ಅಂಗಳಕ್ಕೆ ಪ್ರವೇಶ ಪಡೆದಿದೆ. ಈ ಖುಷಿಯನ್ನ ಖುದ್ದು ರಿಕ್ಕಿ ಕೇಜ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

    “ಪಾಪಾ ಬುಕಾ” ಇದು ಪಪುವಾ ನ್ಯೂಗಿನಿಯಾದ ಮೊದಲ ಅಧಿಕೃತ ಆಸ್ಕರ್ ಪ್ರವೇಶ ಪಡೆದ ಚಿತ್ರವಾಗಿದೆ. ಈ ಚಿತ್ರಕ್ಕೆ ರಿಕ್ಕಿ ಕೇಜ್ ಹಿನ್ನೆಲೆ ಸಂಗೀತ ಸಂಯೋಜಿಸಿದ್ದಾರೆ. ಮೂರು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ಡಾ.ಬಿಜು ನಿರ್ದೇಶಿಸಿದ `ಪಾಪಾ ಬುಕಾ’ ಚಿತ್ರವು ಅತ್ಯುತ್ತಮ ಅಂತಾರಾಷ್ಟ್ರೀಯ ಚಲನಚಿತ್ರ ವಿಭಾಗದಲ್ಲಿ ಆಸ್ಕರ್‌ಗೆ ಆಯ್ಕೆಯಾಗಿದೆ.ಇದನ್ನೂ ಓದಿ: ಸಿನಿಮಾ ಆಯ್ತು ವೈರಲ್ ಆಗಿದ್ದ `ಅಮೃತಾಂಜನ್’ ಶಾರ್ಟ್ ಫಿಲ್ಮ್

    ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಭಾರತ ಹಾಗೂ ಪಪುವಾ ನ್ಯೂಗಿನಿಯಾ ಮಧ್ಯದ ತ್ಯಾಗ ಮತ್ತು ಮಾನವೀಯತೆಯನ್ನು ವೃದ್ಧ ಯೋಧ ಪಾಪಾ ಬುಕಾ ಎಂಬ ಹೆಸರಿನ ವ್ಯಕ್ತಿ ಹೇಳುವ ಕಥೆ ಇದಾಗಿದೆ. ಇಬ್ಬರು ಭಾರತೀಯ ಇತಿಹಾಸಕಾರರಿಗೆ ಪಾಪಾ ಬುಕಾ ಮಾರ್ಗದರ್ಶನ ನೀಡುವ ಕಥೆಯನ್ನು ಹೊಂದಿದೆ. ಹೀಗಾಗಿ ಇದು ಭಾರತಕ್ಕೂ ಕನೆಕ್ಟ್ ಆಗುತ್ತದೆ. ಹಿಂದಿ, ಇಂಗ್ಲೀಷ್‌ನಲ್ಲಿ ಚಿತ್ರ ತಯಾರಾಗಿದೆ.

    ಕರ್ನಾಟಕದ ಮೂಲದ ರಿಕ್ಕಿ ಕೇಜ್ ತಮ್ಮ ಚಿತ್ರ ಅಧಿಕೃತವಾಗಿ ಆಸ್ಕರ್ ಪ್ರವೇಶ ಪಡೆದಿರುವ ವಿಚಾರ ಹಂಚಿಕೊಂಡು ಹೆಮ್ಮೆಪಟ್ಟಿದ್ದಾರೆ. “ಇದು ಆಸ್ಕರ್ ಸ್ಪರ್ಧೆಯಲ್ಲಿ ಮೊದಲ ಹೆಜ್ಜೆ, ಆದರೆ ನನಗೆ 3000 ವರ್ಷಗಳ ಹಿಂದಿನ ಇತಿಹಾಸದಲ್ಲಿ ಬೇರೂರಿರುವ ಸಂಗೀತವನ್ನು ರಚಿಸುವುದರಲ್ಲಿ ಸಂತೋಷವಿದೆ” ಎಂದು ತಮಗಾದ ಸಂತಸ ಹಂಚಿಕೊಂಡಿದ್ದಾರೆ ಪದ್ಮಶ್ರೀ ಪುರಸ್ಕೃತ ಸಂಗೀತ ನಿರ್ದೇಶಕ.ಇದನ್ನೂ ಓದಿ: ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್

  • ಪದ್ಮ ಪ್ರಶಸ್ತಿ; ಕನ್ನಡದ ಹಿರಿಯ ನಟ ಅನಂತ್‌ ನಾಗ್‌, ರಿಕಿ ಕೇಜ್‌ ಸೇರಿ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ

    ಪದ್ಮ ಪ್ರಶಸ್ತಿ; ಕನ್ನಡದ ಹಿರಿಯ ನಟ ಅನಂತ್‌ ನಾಗ್‌, ರಿಕಿ ಕೇಜ್‌ ಸೇರಿ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ

    – ಪ್ರಶಸ್ತಿ ಪಡೆದ ಕನ್ನಡದ ಸಾಧಕರಿವರು..

    ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದ ಹಿರಿಯ ನಟ ಅನಂತ್‌ ನಾಗ್‌‌ (Anant Nag), ರಿಕಿ ಕೇಜ್‌ (Ricky Kej), ಪ್ರಶಾಂತ್‌ ಪ್ರಕಾಶ್‌, ವೆಂಕಪ್ಪ ಅಂಬಾಜಿ ಸುಗಟೇಕರ್‌ ಸೇರಿದಂತೆ ದೇಶಾದ್ಯಂತ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ ಮಾಡಿದರು.

    ಕನ್ನಡದ ಹಿರಿಯ ನಟ ಅನಂತ ನಾಗ್‌, ಖ್ಯಾತ ಸಂಗೀತ ನಿರ್ದೇಶಕ ರಿಕಿ ಕೇಜ್‌, ಉದ್ಯಮಿ ಪ್ರಶಾಂತ್‌ ಪ್ರಕಾಶ್‌, ವೆಂಕಪ್ಪ ಅಂಬಾಜಿ ಸುಗಟೇಕರ್‌ ಪ್ರಶಸ್ತಿ ಸ್ವೀಕರಿಸಿದರು. ಇದನ್ನೂ ಓದಿ: ಹಿರಿಯ ನಟ ಅನಂತ್ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ

    ಅನಂತ್ ನಾಗ್
    ಕನ್ನಡ ಚಲನಚಿತ್ರ ರಂಗದ ಹಿರಿಯ ನಟರಾಗಿ ಅನಂತ್‌ ನಾಗ್‌ ಖ್ಯಾತಿ ಗಳಿಸಿದ್ದಾರೆ. ಕಳೆದ 5 ದಶಕಗಳಲ್ಲಿ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗೆ ಮತ್ತು ತಮ್ಮ ಬಹುಮುಖ ಪ್ರತಿಭೆಗೆ ಹೆಸರುವಾಸಿಯಾಗಿದ್ದಾರೆ. ಸಿನಿಮಾ ರಂಗದಲ್ಲಿ ಸಾಧನೆಗೆ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿತು.

    ರಿಕಿ ಕೇಜ್‌
    ಡಾ. ರಿಕಿ ಗ್ಯಾನ್‌ ಕೇಜ್ ಜಾಗತಿಕ ಸಂಗೀತ ಕ್ಷೇತ್ರದಲ್ಲಿ ಪ್ರಮುಖ ವ್ಯಕ್ತಿ. ಅವರು ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತರು ಮತ್ತು ನಾಲ್ಕು ಬಾರಿ ಗ್ರ್ಯಾಮಿ ನಾಮನಿರ್ದೇಶಿತರು.

    ಪ್ರಶಾಂತ್‌ ಪ್ರಕಾಶ್‌
    90ರ ದಶಕದ ಮಧ್ಯಭಾಗದಿಂದ ಭಾರತದ ಉದ್ಯಮಶೀಲತೆ ಮತ್ತು ಲೋಕೋಪಕಾರಿ ಭೂದೃಶ್ಯವನ್ನು ವ್ಯಾಖ್ಯಾನಿಸುವಲ್ಲಿ ಪ್ರಶಾಂತ್ ಪ್ರಕಾಶ್ ಪ್ರಮುಖ ಪಾತ್ರ ವಹಿಸಿದ್ದಾರೆ. ವಿಶೇಷವಾಗಿ ನವೋದ್ಯಮ ಕ್ಷೇತ್ರದಲ್ಲಿನ ಕಾರ್ಯತಂತ್ರದ ಮಧ್ಯಪ್ರವೇಶಗಳಿಗೆ ಹೆಸರುವಾಸಿಯಾಗಿದ್ದಾರೆ. ಇಂದು ಶತಕೋಟಿ ಮೌಲ್ಯದ ಸ್ವದೇಶಿ, ಉನ್ನತ-ಬೆಳವಣಿಗೆಯ ಉದ್ಯಮಗಳನ್ನು ಬೆಂಬಲಿಸುತ್ತಿದ್ದಾರೆ.

    ಡಾ. ವೆಂಕಪ್ಪ ಅಂಬಾಜಿ ಸುಗಟೇಕರ್
    ಡಾ.ವೆಂಕಪ್ಪ ಅಂಬಾಜಿ ಸುಗಟೇಕರ್ ಅವರು ಕರ್ನಾಟಕದ ವಿಶಿಷ್ಟ ಗೋಂಧಳಿ ಜಾನಪದ ಕಲಾವಿದರು. ಅವರು ಏಳು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದಲ್ಲಿ ಗೊಂಧಳಿ ಜಾನಪದ ಸಂಗೀತ ಸಂಪ್ರದಾಯವನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ನೀಡಿದ ಅಪಾರ ಕೊಡುಗೆಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರು ಅಸಾಧಾರಣ ಸ್ಮರಣ ಶಕ್ತಿಯನ್ನು ಹೊಂದಿದ್ದಾರೆ. ದಾಸರ ಪದ, ಸಂತ ಶಿಶುನಾಳ ಶರೀಫರ ಪದ, ವಚನ ಸಾಹಿತ್ಯ, ದೇವಿ ಪದ ಸೇರಿದಂತೆ ಸಾವಿರಾರು ಜಾನಪದ ಹಾಡುಗಳನ್ನು ಕರಗತ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಉರ್ದುಗೆ 100 ಕೋಟಿ – ಕನ್ನಡಕ್ಕೆ ಬರೀ 32 ಕೋಟಿನಾ..? – ಬಿಜೆಪಿ ಪೋಸ್ಟರ್ ತಂತ್ರಕ್ಕೆ ಸಿಎಂ ಕೆಂಡ

  • ಹೊಸ ಇತಿಹಾಸ ಸೃಷ್ಟಿಸಿದ ರಿಕ್ಕಿ ಕೇಜ್- ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ‍್ಯಾಮಿ ಪ್ರಶಸ್ತಿ ವಿಜೇತ

    ಹೊಸ ಇತಿಹಾಸ ಸೃಷ್ಟಿಸಿದ ರಿಕ್ಕಿ ಕೇಜ್- ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ‍್ಯಾಮಿ ಪ್ರಶಸ್ತಿ ವಿಜೇತ

    ಮೂರು ಬಾರಿ ಗ್ರ‍್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ಮತ್ತು ಪರಿಸರವಾದಿ ರಿಕ್ಕಿ ಕೇಜ್ (Ricky Kej) ಹೊಸ ಇತಿಹಾಸವೊಂದನ್ನು ಸೃಷ್ಟಿಸಿದ್ದಾರೆ. ರಾಷ್ಟ್ರಗೀತೆ ಜನಗಣಮನಕ್ಕೆ(National Anthem) ಹೊಸ ಬಗೆಯ ಟ್ಯೂನ್ ಟಚ್ ಕೊಟ್ಟಿದ್ದಾರೆ. ಸ್ವಾತಂತ್ರ‍್ಯ ದಿನಕ್ಕೂ ಮುನ್ನ ದಿನ ಅಂದ್ರೆ ಇಂದು (ಆಗಸ್ಟ್ 14)ರಂದು ರಿಕ್ಕಿ ಕೇಜ್ ಸಾರಥ್ಯದ ವಿಭಿನ್ನ ಬಗೆಯ ರಾಷ್ಟ್ರಗೀತೆ ಬಿಡುಗಡೆಯಾಗಿದೆ. ಅಭಿಮಾನಿಗಳಿಂದ ರಿಕ್ಕಿ ಟ್ಯೂನ್‌ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಇದನ್ನೂ ಓದಿ:ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್‌- ಉಪೇಂದ್ರ

    ವಿಶೇಷ ಅಂದರೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ ಅಂದರೆ ಲಂಡನ್ ಅಬ್ಬೆ ರೋಡ್ ಸ್ಟುಡಿಯೋಸ್ ನಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಕೇವಲ 3 ಗಂಟೆ ಸಮಯದಲ್ಲಿಯೇ, 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಸಹಯೋಗದಲ್ಲಿ ಜನಗಣಮನ ಸಿದ್ಧವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ರಿಕ್ಕಿ ಕೇಜ್ ಮಾಹಿತಿ ಹಂಚಿಕೊಂಡಿದ್ದರು.

    ರಿಕ್ಕಿ ಕೇಜ್ ಮಾತನಾಡಿ, ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಡಲಾಗಿದೆ. ಈ ರಾಷ್ಟ್ರಗೀತೆ ಪ್ರೆಸೆಂಟ್ ಮಾಡಲು ನಾನು ಕಾತುರನಾಗಿದ್ದೇನೆ. ಲಂಡನ್ ಮೂಲದ ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾದ ಸಹಯೋಗದಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಈ ಹಿಂದೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಕೈಚಳಕದಿಂದ ಭಾರತದ ರಾಷ್ಟ್ರಗೀತೆ ಸಿದ್ಧವಾಗಿದೆ ಎಂದು ಸಂತಸ ಹಂಚಿಕೊಂಡರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ

    ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ

    ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ಮತ್ತು ಪರಿಸರವಾದಿ ರಿಕ್ಕಿ ಕೇಜ್ (Ricky Kej) ಹೊಸ ಇತಿಹಾಸವೊಂದನ್ನು ಸೃಷ್ಟಿಸಿದ್ದಾರೆ. ರಾಷ್ಟ್ರಗೀತೆ (National Anthem) ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಟ್ಟಿದ್ದಾರೆ. ಸ್ವಾತಂತ್ರ್ಯ ದಿನಕ್ಕೂ (Independence Day) ಮುನ್ನ ದಿನ  ಅಂದ್ರೆ ಇದೇ 14ರಂದು 5 ಗಂಟೆ ರಿಕ್ಕಿ ಕೇಜ್ ಸಾರಥ್ಯದ ವಿಭಿನ್ನ ಬಗೆಯ ರಾಷ್ಟ್ರಗೀತೆ ಬಿಡುಗಡೆಯಾಗಲಿದೆ.

    ವಿಶೇಷ ಅಂದರೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ ಅಂದರೆ ಲಂಡನ್ ಅಬ್ಬೆ ರೋಡ್ ಸ್ಟುಡಿಯೋಸ್ ನಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಕೇವಲ 3 ಗಂಟೆ ಸಮಯದಲ್ಲಿಯೇ, 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಸಹಯೋಗದಲ್ಲಿ ಜನಗಣಮನ ಸಿದ್ಧವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ರಿಕ್ಕಿ ಕೇಜ್ ಮಾಹಿತಿ ಹಂಚಿಕೊಂಡಿದ್ದಾರೆ.

    ರಿಕ್ಕಿ ಕೇಜ್ ಮಾತನಾಡಿ, ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಡಲಾಗಿದೆ. ಈ ರಾಷ್ಟ್ರಗೀತೆ ಪ್ರೆಸೆಂಟ್ ಮಾಡಲು ನಾನು ಕಾತುರನಾಗಿದ್ದೇನೆ. ಲಂಡನ್ ಮೂಲದ ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾದ ಸಹಯೋಗದಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಈ ಹಿಂದೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಕೈಚಳಕದಿಂದ ಭಾರತದ ರಾಷ್ಟ್ರಗೀತೆ ಸಿದ್ಧವಾಗಿದೆ ಎಂದು ಸಂತಸ ಹಂಚಿಕೊಂಡರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಿಕ್ಕಿ ಕೇಜ್ ಗೆ ಮೂರನೇ ಬಾರಿ ಗ್ರ್ಯಾಮಿ ಅವಾರ್ಡ್ : ಅಭಿನಂದನೆಯ ಮಹಾಪುರ

    ರಿಕ್ಕಿ ಕೇಜ್ ಗೆ ಮೂರನೇ ಬಾರಿ ಗ್ರ್ಯಾಮಿ ಅವಾರ್ಡ್ : ಅಭಿನಂದನೆಯ ಮಹಾಪುರ

    ಅಮೆರಿಕಾದಲ್ಲಿ ಹುಟ್ಟಿ, ಬೆಂಗಳೂರಿನಲ್ಲಿ ವಾಸವಿರುವ ರಿಕ್ಕಿ ಕೇಜ್ ಮೂರನೇ ಬಾರಿ ಗ್ರ್ಯಾಮಿ ಅವಾರ್ಡ್ ಪಡೆದಿದ್ದಾರೆ. ಗ್ರ್ಯಾಮಿ ಅವಾರ್ಡ್ ಘೋಷಣೆ ಆಗುತ್ತಿದ್ದಂತೆಯೇ ರಿಕ್ಕಿ ಅಭಿಮಾನಿಗಳು ಅಭಿನಂದನೆಗಳ ಮಹಾಪುರವನ್ನೇ ಹರಿಸಿದ್ದಾರೆ. 2015ರಲ್ಲಿ ಇವರ ‘ವಿಂಡ್ಸ್ ಆಫ್ ಸಂಸಾರ’ ಹೆಸರಿನ ಆಲ್ಬಂಗೆ ಮೊದಲ ಬಾರಿಗೆ ಗ್ರ್ಯಾಮಿ ಅವಾರ್ಡ್ ದೊರೆತಿತ್ತು.  ಅಲ್ಲದೇ, ಕಳೆದ ವರ್ಷವಷ್ಟೇ ಎರಡನೇ ಬಾರಿ ಅವರು ಈ ಗೌರವಕ್ಕೆ ಪಾತ್ರರಾಗಿದ್ದರು.

    ಈ ಬಾರಿ ಅವರ ‘ಡಿವೈನ್ ಟೈಡ್ಸ್’ ಹೆಸರಿನ ಆಲ್ಬಂಗೆ ಮೂರನೇ ಬಾರಿ ಗ್ರ್ಯಾಮಿ ಪ್ರಶಸ್ತಿ ಘೋಷಣೆಯಾಗಿದ್ದು, ಸ್ವೀವರ್ಟ್ ಕೋಪ್ ಲ್ಯಾಂಡ್ ಜೊತೆ ಈ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ ರಿಕ್ಕಿ ಕೇಜ್. ಡಿವೈನ್ ಟೈಡ್ಸ್ ಎರಡನೇ ಬಾರಿಗೆ ನಾಮಿನೇಟ್ ಆಗಿರೋದನ್ನು ಅವರು ಖುಷಿಯನ್ನು ಹಂಚಿಕೊಂಡಿದ್ದರು. ಅಲ್ಲದೇ, ಪ್ರಶಸ್ತಿ ಬಂದಷ್ಟೇ ಖುಷಿಯಾಗಿದೆ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಪ್ರಶಸ್ತಿಯೂ ಬಂದಿದೆ.

    ಒಟ್ಟು ಮೂರು ಬಾರಿ, ಸತತ ಎರಡು ಬಾರಿ ಪ್ರಶಸ್ತಿ ಪಡೆದ ಭಾರತೀಯ ಎನ್ನುವ ಹೆಗ್ಗಳಿಕೆ ರಿಕಿ ಕೇಸ್ ಅವರದ್ದು. ಕಳೆದ ವರ್ಷವೂ ಅವರಿಗೆ ಗ್ರ್ಯಾಮಿ ಅವಾರ್ಡ್ ದೊರೆತಿತ್ತು. ಈ ಬಾರಿಯೂ ಅವರಿಗೆ ಗೌರವ ದೊರೆತಿದೆ. ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ನೂರಕ್ಕೂ ಹೆಚ್ಚು ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ ಎನ್ನುವುದು ವಿಶೇಷ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಿಕಿ ಕೇಜ್ ಒಂದೇ ಟ್ವೀಟ್‌ಗೆ ಕೈ ಸೇರಿದ ಗ್ರ್ಯಾಮಿ ಪದಕ : ಎರಡು ತಿಂಗಳಿಂದ ಕಸ್ಟಮ್ ಗೂಡಿನಲ್ಲಿತ್ತು ಗ್ರ್ಯಾಮಿ

    ರಿಕಿ ಕೇಜ್ ಒಂದೇ ಟ್ವೀಟ್‌ಗೆ ಕೈ ಸೇರಿದ ಗ್ರ್ಯಾಮಿ ಪದಕ : ಎರಡು ತಿಂಗಳಿಂದ ಕಸ್ಟಮ್ ಗೂಡಿನಲ್ಲಿತ್ತು ಗ್ರ್ಯಾಮಿ

    ನಿನ್ನೆಯಷ್ಟೇ ತಮ್ಮ ಗ್ರ್ಯಾಮಿ ಪ್ರಶಸ್ತಿ ಪದಕವು ಎರಡು ತಿಂಗಳಿಂದ ಕಸ್ಟಮ್‌ನಲ್ಲಿದೆ. ಕೊರಿಯರ್ ಮತ್ತು ಕಸ್ಟಮ್ ಅಧಿಕಾರಿಗಳ ಅಸಹಕಾರದಿಂದಾಗಿ ಇನ್ನೂ ನನ್ನ ಕೈಗೆ ಪದಕ ಸಿಕ್ಕಿಲ್ಲವೆಂದು ರಿಕಿ ಟ್ವೀಟ್‌ ಮಾಡಿದ್ದರು. ಟ್ವೀಟ್ ಮಾಡುತ್ತಿದ್ದಂತೆಯೇ ರಿಕಿ ಅಭಿಮಾನಿಗಳು ಕಸ್ಟಮ್ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡಿದ್ದರು. ರಿಕಿ ಟ್ವೀಟ್ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಕಸ್ಟಮ್ ಅಧಿಕಾರಿಗಳು, ಆಗಿರುವ ಸಮಸ್ಯೆಯನ್ನು ಬೇಗ ಸರಿಪಡಿಸಿ ಪದಕ ತಲುಪಿಸಲಾಗುವುದು ಎಂದಿದ್ದರು.

    ಕಸ್ಟಮ್ಸ್ ಅಧಿಕಾರಿಗಳಿಗೆ ಅದರಲ್ಲಿ ಗ್ರ್ಯಾಮಿ ಅವಾರ್ಡ್ ಇರುವುದು ಗೊತ್ತಿರದೇ ಇರುವ ಕಾರಣಕ್ಕಾಗಿ ತಮ್ಮ ನಿಯಮಗಳನ್ನು ಅನುಸರಿಸಿದ್ದಾರೆ. ಈಗ ಪ್ರಕ್ರಿಯೆ ಎಲ್ಲ ಮುಗಿದಿದೆ. ಹಾಗಾಗಿ ಶೀಘ್ರದಲ್ಲೇ ಪದಕಗಳು ಕೈ ಸೇರಲಿವೆ ಎಂದು ಸಂಜೆ ಮತ್ತೆ ರಿಕಿ ಟ್ವಿಟ್ಟರ್‌ ಮೂಲಕ ಸ್ಪಷ್ಟನೆ ನೀಡಿದ್ದರು. ಕಸ್ಟಮ್ ಅಧಿಕಾರಿಗಳು ಅಂದುಕೊಂಡಂತೆ ನಡೆದುಕೊಂಡಿದ್ದಾರೆ. ಆಗಿದ್ದ ಸಮಸ್ಯೆಯನ್ನು ಸರಿಪಡಿಸಿ ಇಂದು ಗ್ರ್ಯಾಮಿ ಪದಕವನ್ನು ರಿಕಿ ಕೇಜ್ ಅವರಿಗೆ ಮುಟ್ಟಿಸಿದ್ದಾರೆ. ಈ ಕುರಿತು ಅವರು ಟ್ವೀಟ್‌ ಮಾಡಿ, ಧನ್ಯವಾದಗಳನ್ನು ಕೂಡ ಹೇಳಿದ್ದಾರೆ.  ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪರ್ ಶರ್ಮಾ ಪರ ಧ್ವನಿ ಎತ್ತಿದ ಕಂಗನಾ ರಣಾವತ್

    ರಿಕಿ ಕೇಜ್ ಅವರಿಗೆ ಎರಡನೇ ಬಾರಿಗೆ ಗ್ರ್ಯಾಮಿ ಪ್ರಶಸ್ತಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ನಾಡಿನ ಸಾಕಷ್ಟು ದಿಗ್ಗಜರು ರಿಕಿ ಕೇಜ್‌ಗೆ ಅಭಿನಂದಿಸಿದ್ದಾರೆ. ಅದರಲ್ಲೂ ಕನ್ನಡದ ನೆಲೆ ರಿಕಿ ಕೇಜ್ ಬಗ್ಗೆ ಗುಣಗಾನ ಕೂಡ ಮಾಡಿದೆ. ಗ್ರ್ಯಾಮಿ ಪ್ರಶಸ್ತಿ ಬಂದಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕರ್ನಾಟಕದ ಸಾಕಷ್ಟು ಗಣ್ಯರು ರಿಕಿಯನ್ನು ಅಭಿನಂದಿಸಿದ್ದಾರೆ.

  • ಬೆಂಗಳೂರು ಕಸ್ಟಮ್ಸ್‌ನಲ್ಲಿ ಸಿಲುಕಿ, ರಿಕಿ ಕೇಜ್ ಕೈಗೆ ಸಿಕ್ಕಿರಲಿಲ್ಲ ಗ್ರ್ಯಾಮಿ ಪದಕ : 2 ತಿಂಗಳ ನಿರಂತರ ಪರದಾಟ

    ಬೆಂಗಳೂರು ಕಸ್ಟಮ್ಸ್‌ನಲ್ಲಿ ಸಿಲುಕಿ, ರಿಕಿ ಕೇಜ್ ಕೈಗೆ ಸಿಕ್ಕಿರಲಿಲ್ಲ ಗ್ರ್ಯಾಮಿ ಪದಕ : 2 ತಿಂಗಳ ನಿರಂತರ ಪರದಾಟ

    ಖ್ಯಾತ ಸಂಗೀತ ನಿರ್ದೇಶಕ ರಿಕಿ ಕೇಜ್ ಎರಡನೇ ಬಾರಿಗೆ ಗ್ರ್ಯಾಮಿ ಪ್ರಶಸ್ತಿ ಪಡೆದು ಬೀಗುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ನಾಡಿನ ಸಾಕಷ್ಟು ದಿಗ್ಗಜರು ರಿಕಿ ಕೇಜ್‌ಗೆ ಅಭಿನಂದಿಸಿದ್ದರು. ಅದರಲ್ಲೂ ಕನ್ನಡದ ನೆಲೆ ರಿಕಿ ಕೇಜ್ ಬಗ್ಗೆ ಗುಣಗಾನ ಕೂಡ ಮಾಡಿತ್ತು. ಆದರೆ ಎರಡು ತಿಂಗಳಿಂದ ಗ್ರ್ಯಾಮಿ ಅವಾರ್ಡ್ ಅವರ ಕೈಗೆ ಬಂದಿರಲಿಲ್ಲ ಎನ್ನುವುದು ಅಚ್ಚರಿ ಸಂಗತಿ.  ಇದನ್ನೂ ಓದಿ: ಡೊಳ್ಳು ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆ : ದಾಖಲೆಯ ರೀತಿಯಲ್ಲಿ ಪ್ರಶಸ್ತಿ ಪಡೆದ ಪವನ್ ಒಡೆಯರ್

    ಗ್ರ್ಯಾಮಿ ಪ್ರಶಸ್ತಿ ಬಂದಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕರ್ನಾಟಕದ ಸಾಕಷ್ಟು ಗಣ್ಯರು ರಿಕಿಯನ್ನು ಅಭಿನಂದಿಸಿದ್ದರು. ಆದರೆ ಎರಡು ತಿಂಗಳುಗಳ ಕಾಲ ಗ್ರ್ಯಾಮಿ ಪದಕವು ಬೆಂಗಳೂರಿನ ಕಸ್ಟಮ್ಸ್ ಇಲಾಖೆಯಲ್ಲಿ ಸಿಲುಕಿಕೊಂಡಿತ್ತು ಎನ್ನುವುದು ನೋವಿನ ಸಂಗತಿಯಾಗಿತ್ತು. ಹಾಗಾಗಿ ಅವರು ಇಂದು ಈ ಕುರಿತು ಟ್ವೀಟ್ ಮಾಡಿದ್ದರು. ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲೇ ಆಗಿರುವ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದು ಅವರು ಮತ್ತೆ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ : Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?

    ಮುಂಜಾನೆ ಟ್ವೀಟ್‌ ಮಾಡಿದ್ದ ರಿಕಿ, ‘ನನಗೆ ಗ್ರ್ಯಾಮಿ ಪ್ರಶಸ್ತಿ ಬಂದಿದೆ. ಆದರೆ, ಮೆಡಲ್ 2 ತಿಂಗಳ ಕಾಲದಿಂದ ಬೆಂಗಳೂರು ಕಸ್ಟಮ್ಸ್‌ನಲ್ಲಿದೆ. ಸಂಬಂಧಪಟ್ಟವರು ಸರಿಯಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿಲ್ಲ’ ಎಂದು ಬರೆದು, ಸಂಬಂಧಪಟ್ಟ ಸಂಸ್ಥೆಗಳಿಗೆ ಟ್ಯಾಗ್ ಮಾಡಿದ್ದರು. ಟ್ವೀಟ್ ಮಾಡುತ್ತಿದ್ದಂತೆಯೇ ಕಸ್ಟಮ್ಸ್‌ ಅಧಿಕಾರಿಗಳನ್ನು ನೆಟ್ಟಿಗರು ತರಾಟೆಗೆ ತಗೆದುಕೊಂಡರು. ಆನಂತರ ಸಮಸ್ಯೆ ಸರಿ ಹೋಗಿದೆ ಎಂದು ರಿಕಿ ಮರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಚಿರು ಮಗನನ್ನು ನಾನೇ ಲಾಂಚ್ ಮಾಡುತ್ತೇನೆ : ಅರ್ಜುನ್ ಸರ್ಜಾ

    ಕಸ್ಟಮ್ಸ್ ಅಧಿಕಾರಿಗಳಿಗೆ ಅದರಲ್ಲಿ ಗ್ರ್ಯಾಮಿ ಅವಾರ್ಡ್ ಇರುವುದು ಗೊತ್ತಿರದೇ ಇರುವ ಕಾರಣಕ್ಕಾಗಿ ತಮ್ಮ ನಿಯಮಗಳನ್ನು ಅನುಸರಿಸಿದ್ದಾರೆ. ಈಗ ಪ್ರಕ್ರಿಯೆ ಎಲ್ಲ ಮುಗಿದಿದೆ. ಹಾಗಾಗಿ ಶೀಘ್ರದಲ್ಲೇ ಪದಕಗಳು ಕೈ ಸೇರಲಿವೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

  • ಗ್ರ್ಯಾಮಿ ಅವಾರ್ಡ್ ಸ್ವೀಕರಿಸುವಾಗ ಹಾಕಿದ್ದ ಬಟ್ಟೆಯನ್ನೇ ಕಾನ್ ಫೆಸ್ಟಿವಲ್‌ನಲ್ಲೂ ಧರಿಸಿದ ರಿಕ್ಕಿ – ಹೇಳಿದ್ದೇನು ಗೊತ್ತಾ?

    ಗ್ರ್ಯಾಮಿ ಅವಾರ್ಡ್ ಸ್ವೀಕರಿಸುವಾಗ ಹಾಕಿದ್ದ ಬಟ್ಟೆಯನ್ನೇ ಕಾನ್ ಫೆಸ್ಟಿವಲ್‌ನಲ್ಲೂ ಧರಿಸಿದ ರಿಕ್ಕಿ – ಹೇಳಿದ್ದೇನು ಗೊತ್ತಾ?

    ವಿಶ್ವದ ಅತ್ಯಂತ ಪ್ರಸಿದ್ಧ ಸಿನಿಮೋತ್ಸವ ಕಾನ್ ಫೆಸ್ಟಿವಲ್ ಈಗಾಗಲೇ ಶುರುವಾಗಿದೆ. ಈ ಕಾನ್ ಫೆಸ್ಟಿವಲ್‌ನಲ್ಲಿ ಭಾರತೀಯ ಸಿನಿಮಾ ರಂಗದ ಖ್ಯಾತ ತಾರೆಯರು ಭಾಗಿಯಾಗಿದ್ದಾರೆ. ಇದೀಗ ಕಾನ್ ಫೆಸ್ಟಿವಲ್‌ನ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ ಕೂಡ ಭಾಗಿಯಾಗಿದ್ದು, ಗ್ರ್ಯಾಮಿ ಪ್ರಶಸ್ತಿ ಸಮಾರಂಭಕ್ಕೆ ಧರಿಸಿದ್ದ ಬಟ್ಟೆಯನ್ನೇ ಕಾನ್ ಫೆಸ್ಟಿವಲ್‌ಗೆ ಧರಿಸಿರುವ ಕುರಿತು ವಿಶೇಷ ಪೋಸ್ಟ್‌ವೊಂದನ್ನು ರಿಕ್ಕಿ ಕೇಜ್ ಶೇರ್ ಮಾಡಿದ್ದಾರೆ.

    ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕಾನ್ ಸಿನಿಮೋತ್ಸವಕ್ಕೆ ಭರ್ಜರಿ ಚಾಲನೆ ನೀಡಿದ್ದು, ಎಲ್ಲಾ ಚಿತ್ರರಂಗದ ಖ್ಯಾತ ಕಲಾವಿದರು ಈ ಸಿನಿಮೋತ್ಸವಕ್ಕೆ ಸಾಥ್ ನೀಡಿದ್ದಾರೆ. ಜತೆಗೆ ಕಾನ್ ಫೆಸ್ಟಿವಲ್‌ನಲ್ಲಿ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ ಭಾಗಿಯಾಗಿದ್ದಾರೆ. ಕಾನ್‌ ಸಿನಿಮೋತ್ಸವದಲ್ಲಿ ವಿಭಿನ್ನ ಧ್ವನಿ ಎತ್ತಿದ ರಿಕ್ಕಿ ಕೇಜ್.‌ ಭೂಮಿ ಉಳಿಸುವುದಕ್ಕಾಗಿ ಗ್ರ್ಯಾಮಿ ಮತ್ತು ಕಾನ್‌ ಚಿತ್ರೋತ್ಸವಕ್ಕೆ ಒಂದೇ ಬಟ್ಟೆ ಹಾಕಿದ್ದೀನಿ ಎಂದು ರಿಕ್ಕಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಶೇರ್‌ ಮಾಡಿದ್ದಾರೆ.

    ಗ್ರ್ಯಾಮಿ ಮತ್ತು ಕಾನ್ ಫೆಸ್ಟಿವಲ್ ಎರಡು ಸಮಾರಂಭಕ್ಕೆ ಒಂದೇ ಬಟ್ಟೆ ಧರಿಸಿರುವ ಫೋಟೊ ಶೇರ್ ಮಾಡಿ, ಈ ವರ್ಷ ನಾನು ವಿಶ್ವದ ದೊಡ್ಡ ವೇದಿಕೆಯಲ್ಲಿ ಗ್ರ್ಯಾಮಿ ಮತ್ತು ಕಾನ್ ಸಿನಿಮೋತ್ಸವದಲ್ಲಿ ಎರಡು ಕಡೆ ಒಂದೇ ಬಟ್ಟೆ ಧರಿಸಿದ್ದೆ, ವೇಗದ ಫ್ಯಾಶನ್ ಯಾವಗಲೂ ಫ್ಯಾಶನ್ ಅಲ್ಲ. ಫ್ಯಾಶನ್ ಕ್ಷೇತ್ರವು ಗ್ರಹದ ಮೇಲೆ ಅತ್ಯಂತ ಮಾಲಿನ್ಯ ಮಾಡುತ್ತದೆ. ನೀವು ಧರಿಸಿದ್ದನ್ನು ಭೂಮಿ ನೆನಪಿಸಿಕೊಳ್ಳುವುದಿಲ್ಲ ಎಂದು ಫ್ಯಾಶನ್ ಮತ್ತು ಮಾಲಿನ್ಯ ಕುರಿತು ರಿಕ್ಕಿ ಸಂದೇಶ ನೀಡಿದ್ದಾರೆ. ಇದನ್ನೂ ಓದಿ: ನಟಿ ಚೇತನಾ ರಾಜ್ ಸಾವು ಪ್ರಕರಣ – ಆಸ್ಪತ್ರೆಗೆ ಬೀಗ, ವೈದ್ಯರಿಗೆ ನೋಟಿಸ್

    ಭೂಮಿ ಉಳಿಸುವುದಕ್ಕಾಗಿ ಗ್ರ್ಯಾಮಿ ಮತ್ತು ಕಾನ್‌ ಚಿತ್ರೋತ್ಸವಕ್ಕೆ ಒಂದೇ ಬಟ್ಟೆ ಹಾಕಿದ್ದೀನಿ ಮಾಲಿನ್ಯದ ಕುರಿತು  ಅರ್ಥಪೂರ್ಣ ಸಂದೇಶ ನೀಡಿದ್ದಾರೆ. ಇದೀಗ ಈ ಪೋಸ್ಟ್ ವೈರಲ್ ಆಗಿದೆ.

  • ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ಬೆಂಗಳೂರು: ಏಪ್ರಿಲ್ 4 ರಂದು ಗ್ರ್ಯಾಮಿ ಪ್ರಶಸ್ತಿ ಗೆದ್ದ ಸಂಗೀತ ನಿರ್ದೇಶಕ ರಿಕ್ಕಿ ಕೇಜ್‍ರನ್ನು ಲಹರಿ ಸಂಸ್ಥೆ ವತಿಯಿಂದ ಸನ್ಮಾನಿಸಲಾಯ್ತು. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಲಹರಿ ಸಂಸ್ಥೆ ಮುಖ್ಯಸ್ಥ ಮನೋಹರ್ ನಾಯ್ಡು, ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್.ರಂಗನಾಥ್, ಸಿಇಓ ಅರುಣ್ ಸಿಂಗ್, ನಟರಾದ ಶಿವಣ್ಣ, ರವಿಚಂದ್ರನ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಮನೋಹರ್ ಅವರು ನಾವು ಒಟ್ಟಿಗೆ ಬೆಳೆದವರು. ಅಕ್ಕ ಪಕ್ಕದ ಮನೆಯವರು. ಮನೋಹರ್ ಹಾರ್ಡ್ ವರ್ಕ್ ಮಾಡ್ತಾರೆ. ಓನ್ಲಿ ಹಾರ್ಡ್ ವರ್ಕ್ ಮಾಡ್ತಾರೆ. ಬಟ್ ವೇಲು ಹಾರ್ಡ್ ವರ್ಕಿಂಗ್ & ಫನ್ ಲೀವಿಂಗ್ ಮನುಷ್ಯ ಎಂದರು. ಹೀಗೆ ಇಂಗ್ಲೀಷ್‍ನಲ್ಲಿ ಮಾತು ಶುರು ಮಾಡಿದ ಸಿಎಂಗೆ ಮುಂದೆ ಕುಳಿತಿರುವ ಒಬ್ಬರು ಕನ್ನಡ ಸರ್ ಅಂದ್ರು. ಕೂಡಲೇ ಉತ್ತರಿಸಿದ ಸಿಎಂ, ತಡಿಯಪ್ಪ ನಮ್ಮದು ಉತ್ತರ ಕರ್ನಾಟಕದ ಕನ್ನಡ. ನಿಮ್ಮದೆಲ್ಲಾ ಅರ್ಧಂಬಂರ್ಧ ಕನ್ನಡ ನಮ್ಮದು ಅಪ್ಪಟ ಕನ್ನಡ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಲಹರಿ ಸಂಸ್ಥೆ ಹೊರ ತಂದ ರಿಕ್ಕಿ ಕೇಜ್‌ ಆಲ್ಬಂ ಗ್ರ್ಯಾಮಿ ಪ್ರಶಸ್ತಿಗೆ ನಾಮ ನಿರ್ದೇಶನ

    ನನಗೆ ಗ್ರ್ಯಾಮಿ ಅವಾರ್ಡ್ ಅಂದ್ರೆ ಗೊತ್ತಿರಲಿಲ್ಲ. ನಾನು ಗ್ರ್ಯಾಮಿ ಅವಾರ್ಡ್ ಅಂದ್ರೆ ಜಿಂಗ್ ಚಾಂಗ್ ಇರುತ್ತೆ ಅನ್ಕೊಂಡು ಬಂದಿದ್ದೆ. ಇಲ್ಲಿ ಬಂದು ಆ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಖುಷಿ ಆಯ್ತು. ಸಾರ್ಥಕ ಅನ್ನಿಸ್ತು ಎಂದರು. ಇದನ್ನೂ ಓದಿ: ಬಾಲಿವುಡ್ ಬಾಕ್ಸಾಫೀಸ್‌ನಲ್ಲಿ ನಿಲ್ಲದ ರಾಕಿಭಾಯ್ ಆರ್ಭಟ: 400 ಕೋಟಿಯತ್ತ `ಕೆಜಿಎಫ್ 2′

    ಇದೇ ವೇಳೆ ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್.ರಂಗನಾಥ್ ಮಾತನಾಡಿ, ರಿಕ್ಕಿ ಕೇಜ್‍ರನ್ನು 12-13 ವರ್ಷದ ಹಿಂದೆ ನಮ್ಮದೊಂದು ಸಣ್ಣ ಕೆಲಸಕ್ಕೆ ಸಂಪರ್ಕಿಸಿದ್ದೆ. ಅವರ ಪ್ಯಾಶನ್ ನೋಡಿ ಅನ್ನಿಸ್ತು. ಇವರು ನಮಗೆ ವರ್ಕೌಟ್ ಆಗಲ್ಲ ಎಂದು. ಹಾಗಿತ್ತು ಅವರ ಕೆಲಸ. ಕನ್ನಡಿಗರು ಎದ್ದು ನಿಂತ್ರೆ ಹೀಗೆ ಗ್ರ್ಯಾಮಿ ಅವಾರ್ಡ್ ಬರುತ್ತೆ. ಕೆಜಿಎಫ್ ನಂತಹ ಸಿನಿಮಾವೂ ಬರುತ್ತೆ ಎಂದು ಹಾಡಿ ಹೊಗಳಿದರು.

    ಈ ಮೊದಲು ವೇದಿಕೆಯಲ್ಲಿ ಮಾತು ಪ್ರಾರಂಭಿಸೋದಕ್ಕೂ ಮುನ್ನ ಸಿಎಂ ಜೊತೆ ರಂಗನಾಥ್ ಮಾತಿನ ಕೌಂಟರ್ ನೀಡಿದರು. ರಂಗನಾಥ್ ವೇದಿಕೆ ಏರುತ್ತಿದ್ದಂತೆ ತಾವು ಕುಳಿತಲ್ಲಿಯೇ ಪ್ರೈಮ್ ಟೈಂ ಆಯ್ತು ಎಂದು ಸಿಎಂ ಕಾಲೆಳೆದರು. ಈ ವೇಳೆ ರಂಗನಾಥ್, ನಾನು ಇಲ್ಲಿರೋದು ಬಿಟ್ಟು ಅಲ್ಲಿದ್ರೆ ನಿಮಗೇ ಡೇಂಜರ್ ಎಂದು ನಗುತ್ತಾ ಉತ್ತರಿಸಿದ್ರು.

    ಈ ಮೊದಲು ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಸಂಗೀತ ನಿರ್ದೇಶಕ ರಿಕ್ಕಿ ಕೇಜ್‍ರನ್ನು ಸನ್ಮಾನಿಸಿದ್ರು. ಗ್ರ್ಯಾಮಿ ಪ್ರಶಸ್ತಿ ಪಡೆದ ಡಿವೈನ್ ಟೈಡ್ಸ್ ಆಲ್ಬಂ ಅನ್ನು ಲಹರಿ ಸಂಸ್ಥೆಯೇ ನಿರ್ಮಿಸಿತ್ತು.

  • ಸದ್ಯವೇ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರ: ಲಹರಿ ವೇಲು

    ಸದ್ಯವೇ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರ: ಲಹರಿ ವೇಲು

    ಹರಿ ಮ್ಯೂಸಿಕ್ ಮೂಲಕ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದ ಡಿವೈನ್ ಟೈಡ್ಸ್ ಆಲ್ಬಂಗೆ ಸಂಗೀತ ಕ್ಷೇತ್ರದ ಮೇರು ಪ್ರಶಸ್ತಿಯಾದ ಗ್ರ್ಯಾಮಿ ಸಹ ಬಂದಿದೆ. ರಿಕ್ಕಿ ಕೇಜ್ ಅವರಿಗೆ ಈ ಪ್ರಶಸ್ತಿ ಸಂದಿದೆ. ಈ ಎರಡು ಸಂತಸವನ್ನು ಹಂಚಿಕೊಳ್ಳಲು ಲಹರಿ ವೇಲು ಪತ್ರಿಕಾಗೋಷ್ಠಿ ಆಯೋಜಿಸಿದ್ದರು.

    ಕೇವಲ ಐನ್ನೂರು ರೂಪಾಯಿ ಬಂಡವಾಳದಿಂದ ನಮ್ಮ ಅಣ್ಣ ಮನೋಹರ ನಾಯ್ಡು ಅವರು ಈ ಸಂಸ್ಥೆಯನ್ನು ಆರಂಭಿಸಿದರು. ಈಗ ನಮ್ಮ ಸಂಸ್ಥೆ ಈ ಮಟ್ಟಕ್ಕೆ ಬರಲು ನಿಮ್ಮೆಲ್ಲರ ಹಾರೈಕೆ ಕಾರಣ. ಇದೇ ಮೊದಲ ಬಾರಿಗೆ ನಮ್ಮ ಸಂಸ್ಥೆ ಮೂಲಕ ಬಿಡುಗಡೆಯಾದ ‘ಡಿವೈನ್ ಟೈಡ್ಸ್’ ಆಲ್ಬಂಗೆ ಸಂಗೀತ ನೀಡಿದ್ದಕ್ಕಾಗಿ ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಪ್ರಶಸ್ತಿ ಬಂದಿದೆ. ಈ ಗೌರವಕ್ಕೆ ಪಾತ್ರರಾದ ರಿಕ್ಕಿಕೇಜ್ ಅವರನ್ನು ಅಭಿನಂದಿಸುತ್ತೇನೆ. ಈ ಪ್ರಶಸ್ತಿ ಸಮಾರಂಭಕ್ಕೆ ನಾನು ವೀಸಾ ಸಿಗದ ಕಾರಣದಿಂದ ಹೋಗಿರಲಿಲ್ಲ. ನನ್ನ ಅಣ್ಣನ ಮಗ ಚಂದ್ರು, ರಿಕ್ಕಿಕೇಜ್ ಅವರ ಜೊತೆಗೆ ಹೋಗಿದ್ದರು. ನಾವೆಲ್ಲರೂ ಮನೆಯಿಂದಲೇ ನೋಡಿ ಸಂತಸಪಟ್ಟೆವು. ಸದ್ಯದಲ್ಲೇ ರಿಕ್ಕಿಕೇಜ್ ಅವರ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರವೊಂದನ್ನು ನಮ್ಮ ಸಂಸ್ಥೆ ಮೂಲಕ ನಿರ್ಮಿಸುವ ತಯಾರಿ ನಡೆಯುತ್ತಿದೆ ಎಂದು ಲಹರಿ ವೇಲು ತಿಳಿಸಿದರು.

    ನನಗೆ ಎರಡನೇ ಬಾರಿ ಈ ಪ್ರಶಸ್ತಿ ಬಂದಿರುವುದು ಸಂತೋಷ ತಂದಿದೆ. ಪ್ಯಾಂಡಮಿಕ್ ಸಮಯದಲ್ಲಿ ಈ ಆಲ್ಬಂ ನಿರ್ಮಾಣವಾಯಿತು. ಅನೇಕ ಕಲಾವಿದರನ್ನು ಜೂಮ್ ಕಾಲ್ ಹಾಗೂ ಮೆಸೇಜ್‍ಗಳ ಮೂಲಕ ಸಂಪರ್ಕ ಮಾಡಿದ್ದೆ. ನೂರೈವತ್ತಕ್ಕೂ ಅಧಿಕ ಕಲಾವಿದರು ಹಾಗೂ ತಂತ್ರಜ್ಞರು ಈ ಹಾಡಿಗೆ ಕೆಲಸ ಮಾಡಿದ್ದಾರೆ. ಅದರಲ್ಲಿ ಅರವತ್ತಕ್ಕೂ ಅಧಿಕರು ಭಾರತದವರು. ಮಿಕ್ಕವರು ಹೊರ ದೇಶದವರು. ಇಲ್ಲಿನ ವಾರಿಜಾಶ್ರೀ, ಅರುಣ್ ಕುಮಾರ್, ಸುಮಾ ರಾಣಿ, ಚೈತ್ರ ಮುಂತಾದ ಕಲಾವಿದರು ಈ ಆಲ್ಬಂ ನಲ್ಲಿದ್ದಾರೆ. ನಾನು ಕನ್ನಡದಲ್ಲಿ ಆಕ್ಸಿಡೆಂಟ್, ವೆಂಕಟ ಇನ್ ಸಂಕಟ ಹಾಗೂ ಕ್ರೇಜಿ ಕುಟುಂಬ ಚಿತ್ರಗಳಿಗೆ ಸಂಗೀತ ನೀಡಿದ್ದೇನೆ. ಆ ಮೂರು ಸಿನಿಮಾಗಳ ನಾಯಕ ರಮೇಶ್ ಅರವಿಂದ್ ಅವರೆ. ರಮೇಶ್ ನನ್ನ ಆತ್ಮೀಯ ಸ್ನೇಹಿತರು. ನನಗೆ ಸಿನಿಮಾಗಿಂತ ವಿಭಿನ್ನ ಆಲ್ಬಂಗಳನ್ನು ಮಾಡುವುದರಲ್ಲೇ ಆಸಕ್ತಿ ಹೆಚ್ಚು ಎಂದು ರಿಕ್ಕಿಕೇಜ್ ತಿಳಿಸಿದ್ದಾರೆ.

    ಪ್ರಶಸ್ತಿ ಪಡೆಯಲು ಲಹರಿ ಸಂಸ್ಥೆಯ ಚಂದ್ರು ಅವರೊಂದಿಗೆ ಹೋದ ಸಂದರ್ಭವನ್ನು ನೆನಪಿಸಿಕೊಂಡರು. ಹಾಗೂ ಮುಂದೆ ಸಹ ಲಹರಿ ಸಂಸ್ಥೆಯವರೊಂದಿಗೆ ಇರುವುದಾಗಿ ಹೇಳಿದರು.

    ಇಷ್ಟು ಎತ್ತರಕ್ಕೆ ಬೆಳೆದಿದ್ದರೂ ರಿಕ್ಕಿಕೇಜ್, ನಮ್ಮ ಸಂಸ್ಥೆಯ ಕಾರ್ಯಗಳಿಗೆ ಕೈ ಜೋಡಿಸಿರುವುದು ನಿಜಕ್ಕೂ ಹೆಮ್ಮೆ. ಅವರು ನಮ್ಮೊಂದಿಗೆ ಯಾವುದೇ ಅಗ್ರಿಮೆಂಟ್ ಸಹ ಮಾಡಿಕೊಂಡಿಲ್ಲ. ಲಹರಿ ಸಂಸ್ಥೆಯ ಚಂದ್ರು ಅವರು ಮಾತನಾಡಿ, ಇದೇ ಅವರ ಪ್ರೀತಿಗೆ ಸಾಕ್ಷಿ ಎಂದರು. ರಿಕ್ಕಿಕೇಜ್ ಅವರೊಂದಿಗೆ ಹದಿನೈದು ವರ್ಷಗಳಿಂದ ಜೊತೆಗಿರುವ ವಾಡಿಯಲ್ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.