Tag: rider

  • ಬೈಕ್ ಸವಾರನ ಕಿವಿ ಕತ್ತರಿಸಿದ ದರೋಡೆಕೋರರು!

    ಬೈಕ್ ಸವಾರನ ಕಿವಿ ಕತ್ತರಿಸಿದ ದರೋಡೆಕೋರರು!

    ಬೆಂಗಳೂರು: ದರೋಡೆಕೋರರು ಬೈಕ್ ಸವಾರ ಕಿವಿ ಕತ್ತರಿಸಿದ ಘಟನೆ ಬೆಂಗಳೂರಿನ ಹಲಸೂರು ಬಳಿಯ ಜೋಗುಪಾಳ್ಯದಲ್ಲಿ ನಡೆದಿದೆ.

    ವಿನೋದ್ ಕುಮಾರ್ ಎಂಬ ಯುವಕ ತಡರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ರಾಬರ್ಸ್ ಗ್ಯಾಂಗ್ ವಿನೋದ್ ಅವರನ್ನು ರಸ್ತೆಯಲ್ಲಿ ಅಡ್ಡಗಟ್ಟಿದೆ. ಬಳಿಕ ವಿನೋದ್ ಬಳಿಯಿದ್ದ ಚಿನ್ನದ ಚೈನ್, ಉಂಗುರ ಕಿತ್ತುಕೊಂಡು, ಮೊಬೈಲ್ ಕೊಡುವಂತೆ ಒತ್ತಾಯ ಮಾಡಿದೆ.

    ಈ ವೇಳೆ ವಿನೋದ್ ಮೊಬೈಲ್ ಕೊಡಲು ನಿರಾಕರಿಸಿದರು. ಇದರಿಂದ ಸಿಟ್ಟಿಗೆದ್ದ ದರೋಡೆಕೋರರು ಮುಖ ಹಾಗೂ ಕಿವಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ. ಘಟನೆಯಿಂದ ಕಿವಿ ಕಟ್ ಆಗಿ ಗಂಭೀರ ಗಾಯಗೊಂಡಿರುವ ವಿನೋದ್‍ಗೆ ಕಿವಿ ಕೇಳಿಸದ ಹಾಗೇ ಆಗಿದೆ.

    ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಖಾಸಗಿ ಬಸ್‍ಗೆ ಬೈಕ್ ಡಿಕ್ಕಿ- ಸ್ಥಳದಲ್ಲೇ ಸುಟ್ಟು ಕರಕಲಾದ ಸವಾರ

    ಖಾಸಗಿ ಬಸ್‍ಗೆ ಬೈಕ್ ಡಿಕ್ಕಿ- ಸ್ಥಳದಲ್ಲೇ ಸುಟ್ಟು ಕರಕಲಾದ ಸವಾರ

    ಕೋಲಾರ: ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡಿದ ಪರಿಣಾಮ ಬೆಂಕಿ ಹೊತ್ತಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ಭೀಕರ ಘಟನೆ ಜಿಲ್ಲೆಯ ಬಂಗಾರಪೇಟೆ ಹೊರವಲಯದಲ್ಲಿ ನಡೆದಿದೆ.

    ಬಂಗಾರಪೇಟೆಯ ವಿವೇಕಾನಂದ ನಗರದ ಯುವಕ ನೀರಜ್(20) ಸ್ಥಳದಲ್ಲಿ ಸುಟ್ಟು ಕರಕಲಾದ ಬೈಕ್ ಸವಾರ. ಬೆಳ್ಳಂಬೆಳಗ್ಗೆ ನೀರಜ್ ಹಾಗೂ ಆತನ ಸ್ನೇಹಿತ ಬೈಕ್‍ನಲ್ಲಿ ತೆರೆಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಖಾಸಗಿ ಬಸ್‍ಗೆ ಬೈಕ್ ಡಿಕ್ಕಿ ಹೊಡಿದಿದೆ. ಈ ಭೀಕರ ಅಪಘಾತವಾದ ಪರಿಣಾಮ ಬೈಕ್‍ಗೆ ಬೆಂಕಿ ಹೊತ್ತಿಕೊಂಡು ನೀರಜ್ ಸ್ಥಳದಲ್ಲೇ ಸುಟ್ಟು ಕರಕಲಾಗಿ ಸಾವನ್ನಪ್ಪಿದ್ದಾನೆ.

    ಬೈಕ್‍ನಲ್ಲಿದ್ದ ಇನ್ನೋರ್ವ ಯುವಕ ಮಾತ್ರ ಅಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸುಮಾರು ಎರಡುವರೆ ಲಕ್ಷ ಮೌಲ್ಯದ ಯಮಹ ಆರ್1 ಬೈಕ್ ಅಪಘಾತದಲ್ಲಿ ಸುಟ್ಟು ಕರಕಲಾಗಿದೆ. ಘಟನೆ ಕುರಿತು ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅವೈಜ್ಞಾನಿಕ ಡೈವರ್ಷನ್‍ಗೆ ಸವಾರ ಬಲಿ..!

    ಅವೈಜ್ಞಾನಿಕ ಡೈವರ್ಷನ್‍ಗೆ ಸವಾರ ಬಲಿ..!

    ಕಾರವಾರ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮುಟಾದ ಕಡೇಕೋಡಿ ಗ್ರಾಮದ ಬಳಿ ನಡೆದಿದೆ.

    ತುಕಾರಾಂ ಪಟಗಾರ್ (30) ಮೃತಪಟ್ಟ ಬೈಕ್ ಸವಾರ. ಕಡೇಕೋಡಿ ಗ್ರಾಮದ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟಿಪ್ಪರ್ ಲಾರಿಗೆ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ತುಕರಾಂ ಗಂಭೀರವಾಗಿ ಗಾಯಗೊಂಡು ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಬೈಕ್ ಸವಾರನನ್ನು ಆಸ್ಪತೆಗೆ ದಾಖಲಿಸಿದ್ದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    ಟಿಪ್ಪರ್ ಲಾರಿ ಹೆದ್ದಾರಿ ಅಗಲೀಕರಣ ನಡೆಸುತ್ತಿರುವ ಐಆರ್‌ಬಿ ಕಂಪನಿಗೆ ಸೇರಿದ್ದಾಗಿದೆ. ಹೆದ್ದಾರಿ ಅಗಲೀಕರಣವನ್ನು ಪಡೆದಿದ್ದ ಐಆರ್‌ಬಿ ಕಂಪನಿ ಅವೈಜ್ಞಾನಿಕವಾಗಿ ಡೈವರ್ಷನ್ ಹಾಕಿದ್ದರಿಂದ ಅಪಘಾತ ಸಂಭವಿಸಿದೆ ಎಂದು ತಿಳಿಬಂದಿದೆ.

    ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕುಮುಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅರೆಬೆತ್ತಲೆಯಾಗಿ ನಡುರಸ್ತೆಯಲ್ಲಿ ವಿದೇಶಿ ಪ್ರಜೆಯ ಪುಂಡಾಟ

    ಅರೆಬೆತ್ತಲೆಯಾಗಿ ನಡುರಸ್ತೆಯಲ್ಲಿ ವಿದೇಶಿ ಪ್ರಜೆಯ ಪುಂಡಾಟ

    ಮೈಸೂರು: ನಗರದಲ್ಲಿ ವಿದೇಶಿ ಪ್ರಜೆಯೊಬ್ಬ ಕುಡಿದು ಮನಸೋ ಇಚ್ಚೆ ಬಂದಂತೆ ಪುಂಡಾಟ ಮಾಡಿರುವ ಘಟನೆ ಮೈಸೂರು ನಂಜನಗೂಡು ರಸ್ತೆಯ ಬಳಿಯ ಮೈದಾನದಲ್ಲಿ ನಡೆದಿದೆ.

    ಮೈದಾನದಲ್ಲಿ ಅರೆಬೆತ್ತೆಯಾಗಿ ದಾಂಧಲೆ ಮಾಡಿದ ವಿದೇಶಿಗ ಸಿಕ್ಕ ಸಿಕ್ಕ ದ್ವಿಚಕ್ರ ವಾಹನಗಳನ್ನ ಹಿಡಿದೆಳೆದು ಕೆಳಗೆ ಬೀಳಿಸಿದ್ದಾನೆ. ಕುಡಿದ ಮತ್ತಿನಲ್ಲಿ ಪುಂಡಾಟಿಕೆ ನಡೆಸುತ್ತಿದ್ದ ವಿದೇಶಿಗನ ನಿಯಂತ್ರಿಸಲು ಸ್ಥಳೀಯರು ಹರ ಸಾಹಸ ಪಟ್ಟಿದ್ದಾರೆ. ವಿದೇಶಿಗನ ಪುಂಡಾಟವನ್ನು ಸ್ಥಳದಲ್ಲಿದ್ದವರು ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದಾರೆ.

    ಸ್ಥಳೀಯರೊಬ್ಬರು ಮೈದಾನದಲ್ಲಿ ಬೈಕಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿ ಪುಂಡಾಟ ಮಾಡಿದ್ದಾನೆ. ಸವಾರನನ್ನು ಮುಂದಕ್ಕೆ ಹೋಗಲು ಬಿಡದೆ ಹಿಂಬದಿಯಿಂದ ಬೈಕ್ ಹಿಡಿದು ಎಳೆದಾಡಿದ್ದಾನೆ. ಬಳಿಕ ಅಷ್ಟು ದೂರ ಹೋದ ಬಳಿ ಬಿಡದೆ ಸವಾರನನ್ನು ಕೆಳಗೆ ಬೀಳಿಸಿದ್ದಾನೆ. ಅಷ್ಟೇ ಅಲ್ಲದೇ ಸವಾರನ ಹೆಲ್ಮೆಟ್ ಕಿತ್ತುಕೊಂಡು ಎಸೆದಾಡಿದ್ದಾನೆ. ಕೆಳಗೆ ಬಿದ್ದ ಸವಾರ ಹೇಗೋ ಎದ್ದಿದ್ದಾರೆ. ಆದರೂ ಮತ್ತೆ ಬಿಡದೇ ಹೋಗಿ ಕಾಟ ಕೊಟ್ಟಿದ್ದಾನೆ. ಈ ಎಲ್ಲ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ.

    ಕೊನೆಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ವಿದೇಶಿಗನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆಯಿಂದ ಕೆಲಕಾಲ ಆತಂಕದ ವಾತವರಣ ನಿರ್ಮಾಣವಾಗಿತ್ತು. ವಿದೇಶಿಗನ ವಶಕ್ಕೆ ಪಡೆದ ಪೊಲೀಸರು ಆತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಬೈಕಿಗೆ ಲಾರಿ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

    ಬೈಕಿಗೆ ಲಾರಿ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

    ಹಾಸನ: ಬೈಕಿಗೆ ಲಾರಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಕಳೆದ ರಾತ್ರಿ ನಡೆದಿದೆ.

    ಸೋಮಶೇಖರ್(38) ಮೃತ ದುರ್ದೈವಿ. ಸೋಮಶೇಖರ್ ಪಟ್ಟಣದ ಜೆಪಿ ನಗರದ ನಿವಾಸಿಯಾಗಿದ್ದು, ಧರ್ಮಸ್ಥಳ ಸ್ವಸಹಾಯ ಸಂಘದಲ್ಲಿ ಜೀಪ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸದ್ಯ ಸೋಮಶೇಖರ್ ಕೆಲಸ ಮುಗಿಸಿ ಬರುವಾಗ ಈ ಅಪಘಾತ ಸಂಭವಿಸಿದೆ.

    ಸೋಮಶೇಖರ್ ಕರ್ತವ್ಯ ಮುಗಿಸಿ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಸೋಮಶೇಖರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೂಡಲೇ ಸ್ಥಳೀಯರು ಲಾರಿಯನ್ನು ಹಿಡಿದು ಬೆನ್ನಟ್ಟಿದ್ದು, ಚಾಲಕ ಪರಾರಿಯಾಗಿದ್ದಾನೆ.

    ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರಿಂದ ರಸ್ತೆ ತಡೆದು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಪೆಟ್ರೋಲ್ ಬಂಕ್ ಬಳಿ ಹಂಪ್ಸ್ ಹಾಕದಿರುವುದೇ ಈ ಅಪಘಾತಕ್ಕೆ ಕಾರಣ ಎಂದು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಪ್ರತಿಭಟನೆಯಿಂದಾಗಿ ಕೆಲಕಾಲ ಸಂಚಾರಕ್ಕೆ ಅಡಚಣೆಯಾಯಿತು. ಸದ್ಯ ಈ ಬಗ್ಗೆ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಡ್ರಾಪ್ ಕೋಡೋ ನೆಪದಲ್ಲಿ 60 ಗ್ರಾಂ ಚಿನ್ನಾಭರಣ ದೋಚಿದ!

    ಡ್ರಾಪ್ ಕೋಡೋ ನೆಪದಲ್ಲಿ 60 ಗ್ರಾಂ ಚಿನ್ನಾಭರಣ ದೋಚಿದ!

    ಕಲಬುರಗಿ: ಮಹಿಳೆಯೊಬ್ಬರಿಗೆ ಬೈಕಿನಲ್ಲಿ ಡ್ರಾಪ್ ನೀಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿ 60 ಗ್ರಾಂ ಚಿನ್ನಾಭರಣ ದೋಚಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಸೊನ್ನಾ ಕ್ರಾಸ ಬಳಿ ನಡೆದಿದೆ.

    ಗುಂಡಮ್ಮ (55) ಹಲ್ಲೆಗೊಳಗಾಗಿ ಆಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಹೋಗುತ್ತಿದ್ದ ವೇಳೆ ಹಲ್ಲೆ ನಡೆಸಲಾಗಿದೆ.

    ನಡೆದಿದ್ದು ಏನು?
    ಗುಂಡಮ್ಮ ಅವರ ಸಂಬಂಧಿಯೊಬ್ಬರು ರೇವನೂರ್ ಗ್ರಾಮದಲ್ಲಿ ಸಾವನ್ನಪ್ಪಿದ್ದರು. ಅವರ ಅಂತ್ಯಕ್ರಿಯೆಗೆ ಹೋಗುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಡ್ರಾಪ್ ನೀಡುವ ನಾಟಕವಾಡಿದ್ದಾನೆ. ನಾನು ಕೂಡ ಆದೇ ಅಂತ್ಯಕ್ರಿಯೆಗೆ ಹೋಗುತ್ತಿದ್ದು, ನನ್ನೊಂದಿಗೆ ಬನ್ನಿ ಎಂದು ಬೈಕಿನಲ್ಲಿ ಕೂರಿಸಿ ಕರೆದುಕೊಂಡು ಹೋಗಿದ್ದಾನೆ. ಮಾರ್ಗ ರೇವನೂರ ಕ್ರಾಸ್ ಬಳಿಯ ಬ್ಯಾರೇಜ್ ನಿರ್ಜನ ಪ್ರದೇಶದಲ್ಲಿ ಬೈಕ್ ನಿಲ್ಲಿಸಿ ಆಭರಣ ಕೊಡುವಂತೆ ಹಲ್ಲೆ ನಡೆಸಿದ್ದಾನೆ. ಬಳಿಕ ಕೈನಲ್ಲಿದ್ದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.

    ಘಟನೆ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 225 ಕಿ.ಮೀ ವೇಗದಲ್ಲಿ ಹೋಗ್ತಿದ್ದಾಗ ಬೈಕಿನ ಬ್ರೇಕ್ ಹಾಕ್ದ ಪಕ್ಕದ ಸವಾರ: ವಿಡಿಯೋ ನೋಡಿ!

    225 ಕಿ.ಮೀ ವೇಗದಲ್ಲಿ ಹೋಗ್ತಿದ್ದಾಗ ಬೈಕಿನ ಬ್ರೇಕ್ ಹಾಕ್ದ ಪಕ್ಕದ ಸವಾರ: ವಿಡಿಯೋ ನೋಡಿ!

    ಸ್ಯಾನ್ ಮರಿನೋ: ಮೋಟರ್ ರೇಸಿಂಗ್ ವೇಳೆ 225 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಬೈಕಿನ ಮುಂಬದಿ ಬ್ರೇಕನ್ನು ಮತ್ತೊಂದು ಬೈಕಿನ ಸವಾರ ಹಾಕುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ.

    ಸ್ಯಾನ್ ಮರಿನೋ ಗ್ರ್ಯಾಂಡ್ ಪ್ರಿಕ್ಸ್ ನಲ್ಲಿ ನಡೆದ ಎಫ್‍ಐಎಂ ಮೋಟೋ2 ಗ್ಯಾಂಡ್ ಪ್ರಿಕ್ಸ್ ಅಂತರಾಷ್ಟ್ರೀಯ ಚಾಂಪಿಯನ್‍ಷಿಪ್‍ ಬೈಕ್ ರೇಸಿಂಗ್ ವೇಳೆ ಇಟಲಿಯ ರೈಡರ್ ರೊಮಾನೋ ಫೆನಾಟಿಯವರು 225 ಕಿ.ಮೀಗೂ ಅಧಿಕ ವೇಗದಲ್ಲಿ ಸಾಗುತ್ತಿರುವಾಗಲೇ, ತಮ್ಮ ಪಕ್ಕದಲ್ಲೇ ಅಷ್ಟೇ ವೇಗದಲ್ಲಿ ಸಾಗುತ್ತಿದ್ದ ಸ್ಟೈಫಾನೋ ಮಾನ್ಜಿಯ ಬೈಕಿನ ಮುಂಬಾಗದ ಬ್ರೇಕ್‍ನ್ನು ಒತ್ತಿದ್ದಾರೆ. ಬ್ರೇಕ್ ಒತ್ತುತ್ತಿದಂತೆ ಬೈಕ್ ಅಲುಗಾಡಿದ್ದು, ಕೂಡಲೇ ಬೈಕನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಸವಾರ ಸ್ಟೈಫಾನೋ ಆಗಬಹುದಾಗಿದ್ದ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.

    ಈ ರೇಸಿಂಗ್ ಕೂಟವು ಅಂತರಾಷ್ಟ್ರೀಯ ಮಟ್ಟದಲ್ಲಿ ನೇರಪ್ರಸಾರವಾಗುತ್ತಿದ್ದು, ಬೈಕ್ ಸವಾರ ಮತ್ತೊಂದು ಬೈಕಿನ ಬ್ರೇಕ್ ಹಾಕುತ್ತಿರುವ ದೃಶ್ಯ ನೋಡುಗರನ್ನು ತಲ್ಲಣಗೊಳಿಸಿದೆ. ಅಲ್ಲದೇ ರೈಡರ್ ವಿರುದ್ಧ ಸಾಕಷ್ಟು ಟೀಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿದ್ದವು.

    ಕೂಡಲೇ ಎಚ್ಚೆತ್ತ ಮೋಟೋ ಜಿಪಿ ಆಯೋಜಕರು ಫೆನಾಟಿಗೆ 2 ವರ್ಷಗಳ ಕಾಲ ರೇಸ್ ಮೇಲೆ ನಿಷೇಧ ಹೇರಿದ್ದಾರೆ. ಬಳಿಕ ತಮ್ಮ ತಪ್ಪಿನ ಅರಿವಾದ ಕೂಡಲೇ ಫೆನಾಟಿ ತಮ್ಮ ರೇಸಿಂಗ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ.

    https://twitter.com/2018MotoGP/status/1039597214648098816

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=P_WO9RtoBIk

  • ಬೈಕ್ ಎತ್ಕೊಂಡು ಹೋಗಿದ್ದಕ್ಕೆ ಪೊಲೀಸರ ವಾಹನದ ಚಕ್ರದ ಕೆಳಗೆ ಮಲಗಿದ ಸವಾರ!

    ಬೈಕ್ ಎತ್ಕೊಂಡು ಹೋಗಿದ್ದಕ್ಕೆ ಪೊಲೀಸರ ವಾಹನದ ಚಕ್ರದ ಕೆಳಗೆ ಮಲಗಿದ ಸವಾರ!

    ಮೈಸೂರು: ಬೈಕನ್ನು ಪೊಲೀಸರು ತಮ್ಮ ಟೈಗರ್ ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿದ್ದರಿಂದ ಸಿಟ್ಟುಗೊಂಡ ಸವಾರ ವಾಹನದಡಿ ಮಲಗಿ ತಡೆದ ವಿಚಿತ್ರ ಘಟನೆ ಮೈಸೂರಿನಲ್ಲಿ ನಡೆದಿದೆ.

    ಪೊಲೀಸರಿಗೆ ಧಿಕ್ಕಾರ ಕೂಗುತ್ತಲೇ ಟೈಗರ್ ವಾಹನದ ಚಕ್ರದ ಕೆಳಗೆ ಮಲಗಿದ ಬೈಕ್ ಸವಾರನ ವರ್ತನೆ ಕಂಡು ಪೊಲೀಸರು ಕೆಲ ಕಾಲ ಕಂಗಾಲಾದರು. ಕೊನೆಗೆ ಟೈಗರ್ ವಾಹನದಿಂದ ಬೈಕ್ ಅನ್ನು ಪೊಲೀಸರು ಕೆಳಗಿಳಿಸಿದರು.

    ನೋ ಪಾರ್ಕಿಂಗ್ ಬೋರ್ಡ್ ಹಾಕದ ಜಾಗದಲ್ಲಿ ನಾನು ಬೈಕ್ ನಿಲ್ಲಿಸಿದ್ದೆ. ನೀವು ಬೋರ್ಡ್ ಹಾಕಿದ್ದರೆ ನಾನು ಬೈಕ್ ನಿಲ್ಲಿಸುತ್ತಿರಲಿಲ್ಲ ಎಂದು ಬೈಕ್ ಸವಾರ ಹೇಳಿದ್ದಾರೆ. ಹೀಗಾಗಿ ಪೊಲೀಸರು ಬೈಕನ್ನು ತಮ್ಮ ವಾಹನದಿಂದ ಕೆಳಗೆ ಇಳಿಸಿದ್ದಾರೆ.

    ಪೊಲೀಸ್ ಮತ್ತು ಬೈಕ್ ಸವಾರನ ಹೈಡ್ರಾಮವನ್ನು ಸ್ಥಳದಲ್ಲಿದ್ದ ಸಾರ್ವಜನಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

  • ಬಸ್ಸಿನಡಿ ಸಿಲುಕಿದ್ರೂ ಹಿಂಬದಿಯಿಂದ ಹೊರ ಬಂದು ಎದ್ದು ನಿಂತ ಸವಾರ!

    ಬಸ್ಸಿನಡಿ ಸಿಲುಕಿದ್ರೂ ಹಿಂಬದಿಯಿಂದ ಹೊರ ಬಂದು ಎದ್ದು ನಿಂತ ಸವಾರ!

    ಮಂಗಳೂರು: ಅದೃಷ್ಟ ಇದ್ದರೆ ಸಾವನ್ನೂ ಗೆದ್ದು ಬರಬಹುದು ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಆಕ್ಟೀವಾ ಸವಾರನೊಬ್ಬ ಬಸ್ಸಿನ ಕೆಳಗೆ ಸಿಲುಕಿದರೂ ಎದ್ದು ಬಂದಿರುವ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ.

    ಜಿಲ್ಲೆಯ ವಿಟ್ಲ ಬಳಿಯ ಚಂದಳಿಕೆ ಎಂಬಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೊಂಡಾ ಆಕ್ಟೀವಾ ಸವಾರನೊಬ್ಬ ಮಾರುತಿ ಓಮ್ನಿಯನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಜಾರಿ ಬಿದ್ದಿದ್ದಾನೆ. ಪರಿಣಾಮ ಎದುರುಗಡೆಯಿಂದ ಬರುತ್ತಿದ್ದ ಬಸ್ ಅಡಿಗೆ ಸಿಲುಕಿದ್ದಾನೆ. ಬಳಿಕ ಸವಾರ ಪವಾಡಸದೃಶ ರೀತಿಯಲ್ಲಿ ಹಿಂಬದಿಯ ಟೈರ್ ಬಳಿಯಿಂದ ಎದ್ದು ಬಂದಿದ್ದಾನೆ.

    ಸದ್ಯ ಈ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೇವಲ ಅದೃಷ್ಟ ಬಲದಿಂದಲೇ ಸವಾರ ಬದುಕಿ ಬಂದಿದ್ದಾನೆ ಎನ್ನುವಂತಿತ್ತು.

  • ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ- ಚಕ್ರದಡಿ ಸಿಲುಕಿ ಸವಾರ ದುರ್ಮರಣ

    ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ- ಚಕ್ರದಡಿ ಸಿಲುಕಿ ಸವಾರ ದುರ್ಮರಣ

    ಬೆಂಗಳೂರು: ಬೈಕ್‍ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

    ಆನೇಕಲ್ ತಾಲೂಕಿನ ತಟ್ಟನಹಳ್ಳಿ ನಿವಾಸಿ ಮಂಜುನಾಥ್ (30) ಮೃತ ದುರ್ದೈವಿ. ಇವರು ಇಂದು ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.

    ಈ ಘಟನೆ ಹೊಸೂರು ಮುಖ್ಯರಸ್ತೆ ಹೊಸರೋಡ್ ಜಂಕ್ಷನ್ ನಲ್ಲಿ ನಡೆದಿದೆ. ತನ್ನ ಬೈಕಿಗೆ ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಮಂಜುನಾಥ್ ಕೆಳಗೆ ಬಿದ್ದಿದ್ದು, ಅವರ ಮೇಲೆ ಟಿಪ್ಪರ್ ಹರಿದಿದೆ. ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಟಿಪ್ಪರ್ ಚಾಲಕ ಗಣೇಶನನ್ನ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

    ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.